Indian Navy Recruitment: ಭಾರತೀಯ ನೌಕಾ ಪಡೆಯಲ್ಲಿದೆ 741 ಹುದ್ದೆ; 10ನೇ ತರಗತಿ ಪಾಸಾದವರಿಗೂ ಇದೆ ಅವಕಾಶ - Vistara News

ಉದ್ಯೋಗ

Indian Navy Recruitment: ಭಾರತೀಯ ನೌಕಾ ಪಡೆಯಲ್ಲಿದೆ 741 ಹುದ್ದೆ; 10ನೇ ತರಗತಿ ಪಾಸಾದವರಿಗೂ ಇದೆ ಅವಕಾಶ

Indian Navy Recruitment: ಭಾರತೀಯ ನೌಕಾ ಪಡೆ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಚಾರ್ಜ್‌ಮ್ಯಾನ್‌, ಟ್ರೇಡ್ಸ್‌ಮ್ಯಾನ್‌, ಕುಕ್‌, ಫೈರ್‌ ಮ್ಯಾನ್‌ ಸೇರಿದಂತೆ ಒಟ್ಟು 741 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 10, 12ನೇ ತರಗತಿ, ಡಿಪ್ಲೋಮಾ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಜುಲೈ 20ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಕೊನೆಯ ದಿನ ಆಗಸ್ಟ್‌ 2

VISTARANEWS.COM


on

Indian Navy Recruitment
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತೀಯ ನೌಕಾ ಪಡೆ (Indian Navy)ಯಲ್ಲಿ ಉದ್ಯೋಗ ನಿರ್ವಹಿಸಬೇಕು ಎನ್ನುವ ಕನಸು ಯಾರಿಗೆ ಇಲ್ಲ ಹೇಳಿ? ಇಂತಹ ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಭಾರತೀಯ ನೌಕಾ ಪಡೆ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Indian Navy Recruitment). ಚಾರ್ಜ್‌ಮ್ಯಾನ್‌, ಟ್ರೇಡ್ಸ್‌ಮ್ಯಾನ್‌, ಕುಕ್‌, ಫೈರ್‌ ಮ್ಯಾನ್‌ ಸೇರಿದಂತೆ ಒಟ್ಟು 741 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 10, 12ನೇ ತರಗತಿ, ಡಿಪ್ಲೋಮಾ ತೇರ್ಗಡೆಯಾದವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಜುಲೈ 20ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಕೊನೆಯ ದಿನ ಆಗಸ್ಟ್‌ 2 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಚಾರ್ಜ್‌ಮ್ಯಾನ್‌ (ಮದ್ದುಗುಂಡು ಕಾರ್ಯಾಗಾರ) 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ, ಬಿ.ಎಸ್‌ಸಿ
ಚಾರ್ಜ್‌ಮ್ಯಾನ್‌ (ಫ್ಯಾಕ್ಟರಿ) 10 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ, ಬಿ.ಎಸ್‌ಸಿ
ಟ್ರೇಡ್ಸ್‌ಮ್ಯಾನ್‌ ಮೇಟ್ 161 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಕೀಟ ನಿಯಂತ್ರಣ ಕಾರ್ಯಕರ್ತ (Pest Control Worker) 18 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಕುಕ್ 9 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಎಂಟಿಎಸ್) (ಮಿನಿಸ್ಟ್ರಿಯಲ್) 16 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಚಾರ್ಜ್‌ಮ್ಯಾನ್‌ (ಮೆಕ್ಯಾನಿಕ್) 18 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಸೈಂಟಿಫಿಕ್ ಅಸಿಸ್ಟೆಂಟ್ 4 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ
ಡ್ರಾಟ್ಸ್‌ಮ್ಯಾನ್‌ (Draughtsman) (ಕನ್ಟ್ರಕ್ಷನ್‌) 2 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ
ಫೈರ್ ಮ್ಯಾನ್ 444 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಅಗ್ನಿಶಾಮಕ ಎಂಜಿನ್ ಚಾಲಕ 58 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ

ವಯೋಮಿತಿ ಮತ್ತು ಅರ್ಜಿ ಸುಲ್ಕ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 18ರಿಂದ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಮಾಜಿ ಯೋಧರು / ಪಿಡಬ್ಲ್ಯುಬಿಡಿ / ಮಹಿಳಾ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಇತರ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 295 ರೂ. ಅನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

Indian Navy Recruitment ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (joinindiannavy.gov.in).
  • ಹೆಸರು ನಮೂದಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಪ್ಲೀಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: Job Alert: ಅಂಚೆ ಇಲಾಖೆಯಿಂದ ಗುಡ್‌ನ್ಯೂಸ್‌: 44,228 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

KPSC Recruitment 2024: ಕೆಪಿಎಸ್‌ಸಿ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

KPSC Recruitment 2024: 2024ನೇ ಸಾಲಿನ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಯುವ ದಿನಾಂಕವನ್ನು ಕೆಪಿಎಸ್‌ಸಿ ಬಿಡುಗಡೆ ಮಾಡಿದೆ. ಯಾವೆ ಇಲಾಖೆ ಪರೀಕ್ಷೆ ಯಾವಾಗ ನಡೆಯಲಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

KPSC Recruitment 2024
Koo

ಬೆಂಗಳೂರು: ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಕರ್ನಾಟಕ ಲೋಕಸೇವಾ ಆಯೋಗ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆ ಸೇರಿ ವಿವಿಧ ಇಲಾಖೆಗಳ ಹುದ್ದೆಗಳ ಭರ್ತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ವೇಳಾಪಟ್ಟಿಯನ್ನು (KPSC Recruitment 2024) ಬಿಡುಗಡೆ ಮಾಡಲಾಗಿದೆ.

ವಿವಿಧ ಪರೀಕ್ಷೆ ವೇಳಾಪಟ್ಟಿ

ಅಧಿಸೂಚನೆ ಸಂಖ್ಯೆ: ಪಿಎಸ್‌ಸಿ 1 ಆರ್‌ಟಿಬಿ- 1/2023 ದಿನಾಂಕ 13-03-2024 ರ ಹುದ್ದೆಗಳಿಗೆ ಪರೀಕ್ಷೆ

  • ಕನ್ನಡ ಭಾಷಾ ಪರೀಕ್ಷೆ (ಉಳಿಕೆ ಮೂಲ ವೃಂದ): 14-09-2024 (ಶನಿವಾರ ಮಧ್ಯಾಹ್ನ)
  • ಸಾಮಾನ್ಯ ಪತ್ರಿಕೆ-I (ಉಳಿಕೆ ಮೂಲ ವೃಂದ) : 15-09-2024 (ಭಾನುವಾರ ಬೆಳಗ್ಗೆ)
  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು / ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು (ಉಳಿಕೆ ಮೂಲ ವೃಂದ) : 15-09-2024 (ಭಾನುವಾರ ಮಧ್ಯಾಹ್ನ) (ನಿರ್ದಿಷ್ಟ ಪತ್ರಿಕೆ)

ಅಧಿಸೂಚನೆ ಸಂಖ್ಯೆ ಪಿಎಸ್‌ಸಿ 1 ಆರ್‌ಟಿಬಿ- 2/2023 ದಿನಾಂಕ 13-03-2024 ರಂದು ಅಧಿಸೂಚಿಸಿದ ಹುದ್ದೆಗಳಿಗೆ ಪರೀಕ್ಷೆ

  • ಕನ್ನಡ ಭಾಷಾ ಪರೀಕ್ಷೆ (ಹೈದರಾಬಾದ್ ಕರ್ನಾಟಕ ) : 19-10-2024 (ಶನಿವಾರ ಮಧ್ಯಾಹ್ನ)
  • ಸಾಮಾನ್ಯ ಪತ್ರಿಕೆ-I (ಹೈದರಾಬಾದ್ ಕರ್ನಾಟಕ ) : 20-10-2024 (ಭಾನುವಾರ ಬೆಳಗ್ಗೆ)
  • ಸಾಮಾನ್ಯ ಪತ್ರಿಕೆ-I (ಹೈದರಾಬಾದ್ ಕರ್ನಾಟಕ ) : 20-10-2024 (ಭಾನುವಾರ ಬೆಳಗ್ಗೆ)
  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು / ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು (ಹೈದರಾಬಾದ್ ಕರ್ನಾಟಕ ) : 19-10-2024 (ಭಾನುವಾರ ಮಧ್ಯಾಹ್ನ) (ನಿರ್ದಿಷ್ಟ ಪತ್ರಿಕೆ)

ಅಧಿಸೂಚನೆ: ಇ(2) 598/ 2023-24 ಪಿಎಸ್‌ಸಿ ದಿನಾಂಕ 15-03-2024 ರಂದು ಅಧಿಸೂಚಿಸಿದ ಹುದ್ದೆಗಳಿಗೆ ಪರೀಕ್ಷೆ

  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ – 97 ಹುದ್ದೆಗಳು (ಹೈದರಾಬಾದ್ ಕರ್ನಾಟಕ) : 16-11-2024 (ಶನಿವಾರ ಮಧ್ಯಾಹ್ನ) ಕನ್ನಡ ಭಾಷಾ ಪರೀಕ್ಷೆ. 17-11-2024 (ಭಾನುವಾರ) (ಸ್ಪರ್ಧಾತ್ಮಕ ಪರೀಕ್ಷೆ)

ಅಧಿಸೂಚನೆ: ಇ(2) 597/ 2023-24 ಪಿಎಸ್‌ಸಿ ದಿನಾಂಕ 15-03-2024 ರಂದು ಅಧಿಸೂಚಿಸಿದ ಹುದ್ದೆಗಳಿಗೆ ಪರೀಕ್ಷೆ ವೇಳಾಪಟ್ಟಿ

  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ – 150 ಹುದ್ದೆಗಳು (ಉಳಿಕೆ ಮೂಲ ವೃಂದ) : 07-12-2024 (ಶನಿವಾರ) (ಮಧ್ಯಾಹ್ನ) ಕನ್ನಡ ಭಾಷಾ ಪರೀಕ್ಷೆ. 08-12-2024 (ಭಾನುವಾರ) (ಸ್ಪರ್ಧಾತ್ಮಕ ಪರೀಕ್ಷೆ)

Job Alert: ಪದವೀಧರರಿಗೆ ಗುಡ್‌ನ್ಯೂಸ್‌; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Job Alert: HALನಲ್ಲಿದೆ ವಿವಿಧ ಹುದ್ದೆ; ಬೆಂಗಳೂರಿನಲ್ಲಿ ಉದ್ಯೋಗ ಹುಡುಕುವವರಿಗೆ ಉತ್ತಮ ಅವಕಾಶ

ಬೆಂಗಳೂರು: ಬೆಂಗಳೂರಿನಲ್ಲಿ ಒಂದೊಳ್ಳೆ ಉದ್ಯೋಗ ಹೊಂದಬೇಕು ಎಂದು ಬಯಸಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (Hindustan Aeronautics Limited)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (HAL India Recruitment 2024). ಟೆಕ್ನಿಷಿಯನ್, ಅಸಿಸ್ಟಂಟ್‌, ಫಿಟ್ಟರ್‌ ಸೇರಿ 28 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಡಿಪ್ಲೋಮಾ, ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜುಲೈ 18 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಡಿಪ್ಲೊಮಾ ಟೆಕ್ನಿಷಿಯನ್ (ಮೆಕ್ಯಾನಿಕಲ್) – 9 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಎಂಜಿನಿಯರಿಂಗ್
ಡಿಪ್ಲೊಮಾ ಟೆಕ್ನಿಷಿಯನ್ (ಎಲೆಕ್ಟ್ರಿಕಲ್)- 2 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್
ಅಸಿಸ್ಟೆಂಟ್ (ಸಿವಿಲ್)- 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಸಿವಿಲ್ ಎಂಜಿನಿಯರಿಂಗ್
ಟೆಕ್ನಿಷಿಯನ್ (ಫಿಟ್ಟರ್) – 7 ಹುದ್ದೆ, ವಿದ್ಯಾರ್ಹತೆ: ಐಟಿಐ
ಟೆಕ್ನಿಷಿಯನ್ (ಎಲೆಕ್ಟ್ರಿಕಲ್) – 5 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್ ಎಲೆಕ್ಟ್ರಿಷಿಯನ್
ಟೆಕ್ನಿಷಿಯನ್ (ಮೆಷಿನಿಸ್ಟ್) -2 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್ ಮೆಷಿನಿಸ್ಟ್
ಟರ್ನರ್‌ನಲ್ಲಿ ಟೆಕ್ನಿಷಿಯನ್ (ಫಿಟ್ಟರ್) -1 ಹುದ್ದೆ, ವಿದ್ಯಾರ್ಹತೆ: ಐಟಿಐ
ಟೆಕ್ನಿಷಿಯನ್ (ಎಲೆಕ್ಟ್ರಾನಿಕ್ಸ್-ಮೆಕ್ಯಾನಿಕ್ಸ್) -1 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್ ಎಲೆಕ್ಟ್ರಾನಿಕ್ಸ್-ಮೆಕ್ಯಾನಿಕ್ಸ್

ವಯೋಮಿತಿ

ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ-ಎನ್‌ಸಿಎಲ್‌ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ (ಸಾಮಾನ್ಯ)-10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ)-13 ವರ್ಷ, ಪಿಡಬ್ಲ್ಯುಬಿಡಿ (ಎಸ್‌ಸಿ/ಎಸ್‌ಟಿ)-15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ, ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ವಿವಿಧ ಹುದ್ದೆಗಳಿಗೆ ಅನುಗುಣವಾಗಿ 22,000 ರೂ.-46,511 ರೂ. ಮಾಸಿಕ ವೇತನವಿದೆ. ಆಯ್ಕೆಯಾದವರಿಗೆ 1 ವರ್ಷ ಅವಧಿಯ ತರಬೇತಿ ನೀಡಲಾಗುತ್ತದೆ. ಉದ್ಯೋಗದ ಸ್ಥಳ: ಬೆಂಗಳೂರು.

ಅರ್ಜಿ ಸಲ್ಲಿಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://halardc.formflix.com/apply-online)
  • ಅಗತ್ಯ ಮಾಹಿತಿ, ಇಮೇಲ್‌ ವಿಳಾಸ ನಮೂದಿಸಿ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಹೆಸರು, ವಿಳಾಸ, ಶೈಕ್ಷಣಿಕ ಮಾಹಿಸಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಫೋಟೊ ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.
  • ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ: https://www.hal-india.co.in/ಗೆ ಭೇಟಿ ನೀಡಿ.

HAL India Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಪದವೀಧರರಿಗೆ ಗುಡ್‌ನ್ಯೂಸ್‌; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Continue Reading

ವೈರಲ್ ನ್ಯೂಸ್

Viral Video: ತಿಂಗಳಲ್ಲಿ 35 ಲಕ್ಷ ರೂ. ಗಳಿಸಿದ ಬೆಂಗಳೂರಿನ 22 ವರ್ಷದ ಯುವಕ; ಹೇಗೆ?

ಗೋವಾದ ಪಿಲಾನಿಯ ಬಿರ್ಲಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಸೈನ್ಸ್ ನಿಂದ ಹೊರಬಂದ ಬೆಂಗಳೂರಿನ 22 ವರ್ಷದ ಯುವಕ ಇಶಾನ್ ಶರ್ಮಾ ಸಣ್ಣ ವಯಸ್ಸಿನಲ್ಲಿ ದೊಡ್ಡ ಮೊತ್ತದ ಆದಾಯ ಪಡೆಯಲು ಹೇಗೆ ಸಾಧ್ಯವಾಯಿತು ಎಂಬುದನ್ನು ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral Video) ಆಗಿದೆ.

VISTARANEWS.COM


on

By

Viral Video
Koo

ಶಿಕ್ಷಣವನ್ನು ಅರ್ಧದಲ್ಲಿ ಕೈಬಿಟ್ಟು ಕಳೆದ ತಿಂಗಳು ಯೂಟ್ಯೂಬ್ ವಿಡಿಯೊ ಮೂಲಕ 35 ಲಕ್ಷ ರೂ. ಗಳಿಸಿರುವುದಾಗಿ ಬೆಂಗಳೂರಿನ (bengaluru) 22 ವರ್ಷದ ಯುವಕ ಇಶಾನ್ ಶರ್ಮಾ (Ishan Sharma) ಇತ್ತೀಚೆಗೆ ಉದ್ಯಮಿಗಳಾದ ಅಶ್ನೀರ್ ಗ್ರೋವರ್ (Ashneer Grover), ಆಶಿಶ್ ಮೊಹಾಪಾತ್ರ (Asish Mohapatra), ಸಾರ್ಥಕ್ ಅಹುಜಾ (Sarthak Ahuja) ಮತ್ತು ಸಂಜೀವ್ ಬಿಖ್‌ಚಂದಾನಿ (Sanjeev Bikhchandani) ಅವರೊಂದಿಗೆ ಪಾಡ್‌ಕಾಸ್ಟ್ ನಲ್ಲಿ ತಿಳಿಸಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ (Viral Video) ಆಗಿದೆ.

ಗೋವಾ ಪಿಲಾನಿಯ ಬಿರ್ಲಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಸೈನ್ಸ್ ನಿಂದ ಹೊರಬಂದು ಸಣ್ಣ ವಯಸ್ಸಿನಲ್ಲಿ ಇಷ್ಟು ದೊಡ್ಡ ಮೊತ್ತದ ಆದಾಯ ಪಡೆಯಲು ಹೇಗೆ ಸಾಧ್ಯವಾಯಿತು ಎಂಬುದನ್ನು ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ಇಶಾನ್ ಅವರು ಕಳೆದ ತಿಂಗಳು 35 ಲಕ್ಷ ರೂ. ಗಳಿಸಿದ್ದಾರೆ. ಆದರೆ ಅವರು, ಇದು ಸಣ್ಣ ಮೊತ್ತ. ಹೊರಗೆ ಹೋಗಿ ಅಷ್ಟು ಸಣ್ಣ ಮೊತ್ತದಿಂದ ಬಿಸಿನೆಸ್ ಪ್ರಾರಂಭಿಸಲು ಸಾಧ್ಯವಿಲ್ಲ ಎಂದೂ ಹೇಳಿದ್ದಾರೆ.

ಆದರೆ ಅವರ ಈ ಹೇಳಿಕೆಗೆ ಅಶ್ನೀರ್ ಗ್ರೋವರ್, ಆಸಿಶ್ ಮೊಹಾಪಾತ್ರ, ಸಾರ್ಥಕ್ ಅಹುಜಾ ಮತ್ತು ಸಂಜೀವ್ ಬಿಖ್‌ಚಂದಾನಿ ಆಶ್ಚರ್ಯಕರ ಪ್ರತಿಕ್ರಿಯೆ ನೀಡಿದ್ದಾರೆ.

ಅವರು ಇಶಾನ್ ಶರ್ಮಾ ಅವರು ಇಷ್ಟೊಂದು ದೊಡ್ಡ ಮೊತ್ತವನ್ನು ಗಳಿಸಲು ಸಾಧ್ಯವೇ ಇಲ್ಲ ಎಂದು ಹೇಳಿದ್ದರು. ಆಗ ಅಶ್ನೀರ್ ಗ್ರೋವರ್, ನಾವು ನಿಮ್ಮ ಕಥೆಯನ್ನು ಕೇಳಬೇಕು ಎಂದು ಆಸಕ್ತಿ ತೋರುತ್ತಾರೆ. ಅಲ್ಲದೇ ತಾವು 22 ವರ್ಷದವರಾಗಿದ್ದಾಗ ಏನನ್ನೂ ಗಳಿಸುತ್ತಿರಲಿಲ್ಲ ಎಂದು ಬಹಿರಂಗಪಡಿಸಿದರು.

Viral Video


ಮತ್ತೊಂದೆಡೆ ಆಶಿಶ್ ಮೊಹಾಪಾತ್ರ ಅವರು ತಿಂಗಳಿಗೆ 35,000 ರೂ. ಪಡೆದಿದ್ದರು ಎಂದು ಹೇಳಿದರೆ ಸಾರ್ಥಕ್ ಅಹುಜಾ ಮತ್ತು ಸಂಜೀವ್ ಬಿಖ್‌ಚಂದಾನಿ ಅವರು ತಿಂಗಳಿಗೆ ಕ್ರಮವಾಗಿ 5,000 ರೂ. ಮತ್ತು 1,500 ರೂ. ಗಳಿಸುತ್ತಿರುವುದಾಗಿ ತಿಳಿಸಿದರು.

ಮಾರ್ಕೆಟಿಂಗ್ ಏಜೆನ್ಸಿ ಮಾರ್ಕಿಟ್‌ಅಪ್ ಅನ್ನು ತನ್ನ ಕಾಲೇಜ್ ಮೇಟ್ ಸರನ್ಶ್ ಆನಂದ್ ಅವರೊಂದಿಗೆ ಸ್ಥಾಪಿಸಿರುವ ಇಶಾನ್ ಶರ್ಮಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಸುಮಾರು 2 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ. ಈ ಮೂಲಕ ಅವರು ಭಾರೀ ಹಣ ಗಳಿಸಿದ್ದಾರೆ.

ಇವರ ಈ ವಿಡಿಯೋ ವೈರಲ್ ಆದ ಬಳಿಕ 80,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಇದು ಸಾಕಷ್ಟು ಲೈಕ್ ಗಳನ್ನು ಗಳಿಸಿದೆ.


ಇದಕ್ಕೆ ಹಲವು ಮಂದಿ ಪ್ರತಿಕ್ರಿಯಿಸಿದ್ದು, ನಾನು 23 ವರ್ಷ ವಯಸ್ಸಿನವನಾಗಿದ್ದರೂ ಒಂದು ಪೈಸೆಯನ್ನೂ ಗಳಿಸುತ್ತಿಲ್ಲ. ತಂದೆಯ ಮೇಲೆ ಅವಲಂಬಿತನಾಗಿದ್ದೇನೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Bike Stunt Video: ಪುಟ್ಟ ಮಗುವನ್ನು ಮುಂದೆ ಕೂರಿಸಿಕೊಂಡು ಬೈಕ್‌ ಸ್ಟಂಟ್‌! ಒದ್ದು ಒಳಗೆ ಹಾಕಿ ಅಂತಿದ್ದಾರೆ ನೆಟ್ಟಿಗರು

ಮತ್ತೊಬ್ಬರು ಕಾಮೆಂಟ್ ನಲ್ಲಿ ತಿಂಗಳಿಗೆ 35 ಲಕ್ಷ ರೂ. ಅನ್ನು ಒಂದು ಸಣ್ಣ ಮೊತ್ತ ಎಂದು ಹೇಳುತ್ತಿದ್ದಾರಲ್ಲ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ನನಗೆ ತಿಳಿದಿರುವ ಅತ್ಯಂತ ಶ್ರಮಜೀವಿಗಳಲ್ಲಿ ಅವರು ಒಬ್ಬರು ಎಂದು ಇನ್ನೊಬ್ಬರು ಕಾಮೆಂಟ್ ನಲ್ಲಿ ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

Karnataka Jobs Reservation: ಕನ್ನಡಿಗರಿಗೆ ಮೀಸಲು ಕಡ್ಡಾಯ ಮಾಡಲು ಕಾನೂನು ಸಮಸ್ಯೆ: ಖರ್ಗೆ

Karnataka jobs Reservation: ʼಕನ್ನಡಿಗರ ಹಿತಾಸಕ್ತಿ ಕಾಯಲು ಸರ್ಕಾರ ಬದ್ಧವಿದೆ. ನಮ್ಮ ಮಾನವ‌ ಸಂಪನ್ಮೂಲಕ್ಕೆ ಖಾಸಗಿ ವಲಯದಲ್ಲಿ ಸಾಕಷ್ಟು ಡಿಮ್ಯಾಂಡ್ ಇದೆ. ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕವನ್ನು ಕಾನೂನಾತ್ಮಕವಾಗಿ ನೋಡಬೇಕಾಗುತ್ತೆ. ಹರ್ಯಾಣ, ಆಂಧ್ರಪ್ರದೇಶದಲ್ಲಿ ಈ ಬಿಲ್‌ಗೆ ಹೈಕೋರ್ಟ್ ತಡೆಯಾಜ್ಞೆಯನ್ನು ನೀಡಿದೆ ಹೀಗಾಗಿ ಜಾರಿಗೆ ಮುನ್ನ ಸಾಕಷ್ಟು ಚರ್ಚೆ ಮಾಡಬೇಕಾಗಿದೆʼ ಎಂದು ಖರ್ಗೆ ತಿಳಿಸಿದರು.

VISTARANEWS.COM


on

Priyank Kharge karnataka jobs reservation
Koo

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಖಾಸಗಿ ಉದ್ಯಮಗಳಲ್ಲಿ ಮೀಸಲು (Karnataka Jobs Reservation) ಕಡ್ಡಾಯ ಮಾಡುವ ಕುರಿತು ರಾಜ್ಯ ಸರ್ಕಾರದ (Karnataka Government) ನಿಲುವಿನಿಂದಾಗಿ ಸೃಷ್ಟಿಯಾದ ಗೊಂದಲದ ನಡುವೆ, ನಾಲ್ವರು ಸಚಿವರು ಇಂದು ವಿಧಾನಸಭೆಯಲ್ಲಿ (Vidhan sabha) ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು. ಈ ವಿಚಾರದಲ್ಲಿ ಕಾನೂನಾತ್ಮಕ ಸಮಸ್ಯೆ ಇದ್ದು, ಇದರ ಬಗ್ಗೆ ಇನ್ನಷ್ಟು ಚರ್ಚೆ ನಡೆಯಬೇಕಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಹೇಳಿದ್ದಾರೆ.

ಖಾಸಗಿ ಕ್ಷೇತ್ರದ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಮಂಗಳವಾರ (ಜು.16) ಅನುಮೋದನೆ ನೀಡಿತ್ತು. ಇದಕ್ಕೆ ಉದ್ಯಮಿ ಕಿರಣ್‌ ಮಜುಂದಾರ್‌ ಶಾ, ಮೋಹನ್​ ದಾಸ್​ ಪೈ ಸೇರಿದಂತೆ ಇನ್ನೂ ಅನೇಕ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಮಸೂದೆಗೆ ಉದ್ಯಮಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ಮುಜುಗರಕ್ಕೆ ಒಳಗಾದ ಸರಕಾರ, ವಿಧೇಯಕ ಜಾರಿಗೆ ಹಿಂದೇಟು ಹಾಕಿದೆ. ಈ ಹಿನ್ನೆಲೆಯಲ್ಲಿ ಇಂದು (ಜು.18) ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಾಲ್ವರು ಸಚಿವರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಸಚಿವರಾದ ದಿನೇಶ್‌ ಗುಂಡೂರಾವ್​, ಕೃಷ್ಣ ಭೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್‌ ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡರು.

ʼಕನ್ನಡಿಗರ ಹಿತಾಸಕ್ತಿ ಕಾಯಲು ಸರ್ಕಾರ ಬದ್ಧವಿದೆ. ನಮ್ಮ ಮಾನವ‌ ಸಂಪನ್ಮೂಲಕ್ಕೆ ಖಾಸಗಿ ವಲಯದಲ್ಲಿ ಸಾಕಷ್ಟು ಡಿಮ್ಯಾಂಡ್ ಇದೆ. ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ವಿಧೇಯಕವನ್ನು ಕಾನೂನಾತ್ಮಕವಾಗಿ ನೋಡಬೇಕಾಗುತ್ತೆ. ಹರ್ಯಾಣ, ಆಂಧ್ರಪ್ರದೇಶದಲ್ಲಿ ಈ ಬಿಲ್‌ಗೆ ಹೈಕೋರ್ಟ್ ತಡೆಯಾಜ್ಞೆಯನ್ನು ನೀಡಿದೆ ಹೀಗಾಗಿ ಜಾರಿಗೆ ಮುನ್ನ ಸಾಕಷ್ಟು ಚರ್ಚೆ ಮಾಡಬೇಕಾಗಿದೆʼ ಎಂದು ಖರ್ಗೆ ತಿಳಿಸಿದರು.

ಕರಡು ವಿಧೇಯಕ ಸಚಿವ ಸಂಪುಟದ ಮುಂದೆ ಇದೆ. ವಿಧೇಯಕ ಅನುಷ್ಠಾನಕ್ಕೆ ಸಾಕಷ್ಟು ಪ್ರಕ್ರಿಯೆಗಳಿವೆ. ಈ ಬಿಲ್ ವಿಚಾರವಾಗಿ ಇನ್ನಷ್ಟು ಚರ್ಚೆ ಮಾಡಬೇಕಿದೆ. ಆಂಧ್ರಪ್ರದೇಶದವರೂ ಅದೇ ಬಿಲ್ ಮಾಡಿ ಕೈ ಸುಟ್ಟುಕೊಂಡರು. ಇದೀಗ ಅಲ್ಲಿನ ಸಚಿವ ನಾರಾ ಲೋಕೇಶ್ ಅವರು ಐಟಿ ಕಂಪನಿಗಳಿಗೆ ಆಹ್ವಾನ ನೀಡಿ ಟ್ವೀಟ್ ಮಾಡಿದ್ದಾರೆ. ಮಾಡಲಿ. ಆದರೆ ಇಲ್ಲಿ ಬಂಡವಾಳ ಸೃಷ್ಟಿ, ಉದ್ಯೋಗ ಸೃಷ್ಟಿ ಮಾಡುವ ಅವಕಾಶವನ್ನು ಕರ್ನಾಟಕ ಕಳೆದುಕೊಳ್ಳುವುದಿಲ್ಲ ಎಂದು ಪ್ರಿಯಾಂಕ್‌ ಖರ್ಗೆ ಸ್ಪಷ್ಟಪಡಿಸಿದರು.

ನಾರಾ ಲೋಕೇಶ್‌ ಟ್ವೀಟ್‌

ಈ ಗೊಂದಲದ ನಡುವೆ, ʼಉರಿಯುವ ಮನೆಯಲ್ಲಿ ಗಳ ಹಿರಿದರುʼ ಎಂಬಂತೆ ಲಾಭ ಮಾಡಿಕೊಳ್ಳಲು ಆಂಧ್ರಪ್ರದೇಶ (Andhra Pradesh) ಮುಂದಾಗಿದೆ. ಕರ್ನಾಟಕ ಸರಕಾರದ ನಿಲುವಿನ ಕುರಿತು ಆಕ್ರೋಶ ವ್ಯಕ್ತಪಡಿಸಿದ ನಾಸ್ಕಾಂ ಸಂಘಟನೆಯ ಟ್ವೀಟ್‌ ಅನ್ನು ಶೇರ್‌ ಮಾಡಿರುವ ಆಂಧ್ರಪ್ರದೇಶ ಮಾನವ ಸಂಪನ್ಮೂಲ ಇಲಾಖೆ ಸಚಿವ ಲೋಕೇಶ್‌ ನಾರಾ, ʼನಮ್ಮಲ್ಲಿಗೆ ಬನ್ನಿʼ ಎಂದು ಖಾಸಗಿ ಕಂಪನಿಗಳಿಗೆ ಕರೆ ನೀಡಿದ್ದಾರೆ.

“ನಿಮ್ಮ ನಿರಾಶೆಯನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ವೈಜಾಗ್‌ನಲ್ಲಿರುವ ನಮ್ಮ IT, IT ಸೇವೆಗಳು, AI ಮತ್ತು ಡೇಟಾ ಸೆಂಟರ್ ಕ್ಲಸ್ಟರ್‌ಗೆ ನಿಮ್ಮ ವ್ಯವಹಾರಗಳನ್ನು ವಿಸ್ತರಿಸಲು ಅಥವಾ ಸ್ಥಳಾಂತರಿಸಲು ನಾವು ನಿಮ್ಮನ್ನು ಸ್ವಾಗತಿಸುತ್ತೇವೆ. ನಾವು ನಿಮಗೆ ಅತ್ಯುತ್ತಮ ದರ್ಜೆಯ ಸೌಲಭ್ಯಗಳು, ತಡೆರಹಿತ ವಿದ್ಯುತ್, ಮೂಲಸೌಕರ್ಯ ಮತ್ತು ನಿಮ್ಮ ಐಟಿ ಉದ್ಯಮಕ್ಕೆ ಸರ್ಕಾರದಿಂದ ಯಾವುದೇ ನಿರ್ಬಂಧಗಳಿಲ್ಲದೆ ಅತ್ಯಂತ ಸೂಕ್ತವಾದ ಕೌಶಲ್ಯಭರಿತ ಪ್ರತಿಭೆಗಳನ್ನು ನೀಡುತ್ತೇವೆ. ಆಂಧ್ರಪ್ರದೇಶ ನಿಮ್ಮನ್ನು ಸ್ವಾಗತಿಸಲು ಸಿದ್ಧವಾಗಿದೆ. ದಯವಿಟ್ಟು ಸಂಪರ್ಕದಲ್ಲಿರಿ!” ಎಂದು ನಾರಾ ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿ: Karnataka Jobs Reservation: ಉದ್ಯೋಗ ವಿಚಾರದಲ್ಲಿ ಕನ್ನಡಿಗರೊಂದಿಗೆ ಸರ್ಕಾರ ಚೆಲ್ಲಾಟ: ವಿಜಯೇಂದ್ರ ಆಕ್ರೋಶ

Continue Reading

ಪ್ರಮುಖ ಸುದ್ದಿ

Karnataka Jobs Reservation: ಉರಿವ ಮನೆಯಿಂದ ಗಳ ಹಿರಿದ ಆಂಧ್ರಪ್ರದೇಶ; ʼನಮ್ಮಲ್ಲಿಗೇ ಬನ್ನಿʼ ಎಂದು ಖಾಸಗಿ ಉದ್ಯಮಗಳಿಗೆ ಭಿಕ್ಷಾಪಾತ್ರೆ ಒಡ್ಡಿದ ಸಚಿವ

Karnataka Jobs Reservation: ಕರ್ನಾಟಕ ಸರಕಾರದ ನಿಲುವಿನ ಕುರಿತು ಆಕ್ರೋಶ ವ್ಯಕ್ತಪಡಿಸಿದ ನಾಸ್ಕಾಂ ಸಂಘಟನೆಯ ಟ್ವೀಟ್‌ ಅನ್ನು ಶೇರ್‌ ಮಾಡಿರುವ ಆಂಧ್ರಪ್ರದೇಶ ಮಾನವ ಸಂಪನ್ಮೂಲ ಇಲಾಖೆ ಸಚಿವ ಲೋಕೇಶ್‌ ನಾರಾ, ʼನಮ್ಮಲ್ಲಿಗೆ ಬನ್ನಿʼ ಎಂದು ಖಾಸಗಿ ಕಂಪನಿಗಳಿಗೆ ಕರೆ ನೀಡಿದ್ದಾರೆ.

VISTARANEWS.COM


on

Karnataka Jobs Reservation
Koo

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಖಾಸಗಿ ಉದ್ಯಮಗಳಲ್ಲಿ ಮೀಸಲು (Karnataka Jobs Reservation) ಕಡ್ಡಾಯ ಮಾಡುವ ಕುರಿತು ರಾಜ್ಯ ಸರ್ಕಾರದ (Karnataka Government) ನಿಲುವಿನಿಂದಾಗಿ ಸೃಷ್ಟಿಯಾದ ಗೊಂದಲದ ನಡುವೆ, ʼಉರಿಯುವ ಮನೆಯಲ್ಲಿ ಗಳ ಹಿರಿದರುʼ ಎಂಬಂತೆ ಲಾಭ ಮಾಡಿಕೊಳ್ಳಲು ಆಂಧ್ರಪ್ರದೇಶ (Andhra Pradesh) ಮುಂದಾಗಿದೆ.

ಕರ್ನಾಟಕ ಸರಕಾರದ ನಿಲುವಿನ ಕುರಿತು ಆಕ್ರೋಶ ವ್ಯಕ್ತಪಡಿಸಿದ ನಾಸ್ಕಾಂ ಸಂಘಟನೆಯ ಟ್ವೀಟ್‌ ಅನ್ನು ಶೇರ್‌ ಮಾಡಿರುವ ಆಂಧ್ರಪ್ರದೇಶ ಮಾನವ ಸಂಪನ್ಮೂಲ ಇಲಾಖೆ ಸಚಿವ ಲೋಕೇಶ್‌ ನಾರಾ, ʼನಮ್ಮಲ್ಲಿಗೆ ಬನ್ನಿʼ ಎಂದು ಖಾಸಗಿ ಕಂಪನಿಗಳಿಗೆ ಕರೆ ನೀಡಿದ್ದಾರೆ.

“ನಿಮ್ಮ ನಿರಾಶೆಯನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ವೈಜಾಗ್‌ನಲ್ಲಿರುವ ನಮ್ಮ IT, IT ಸೇವೆಗಳು, AI ಮತ್ತು ಡೇಟಾ ಸೆಂಟರ್ ಕ್ಲಸ್ಟರ್‌ಗೆ ನಿಮ್ಮ ವ್ಯವಹಾರಗಳನ್ನು ವಿಸ್ತರಿಸಲು ಅಥವಾ ಸ್ಥಳಾಂತರಿಸಲು ನಾವು ನಿಮ್ಮನ್ನು ಸ್ವಾಗತಿಸುತ್ತೇವೆ. ನಾವು ನಿಮಗೆ ಅತ್ಯುತ್ತಮ ದರ್ಜೆಯ ಸೌಲಭ್ಯಗಳು, ತಡೆರಹಿತ ವಿದ್ಯುತ್, ಮೂಲಸೌಕರ್ಯ ಮತ್ತು ನಿಮ್ಮ ಐಟಿ ಉದ್ಯಮಕ್ಕೆ ಸರ್ಕಾರದಿಂದ ಯಾವುದೇ ನಿರ್ಬಂಧಗಳಿಲ್ಲದೆ ಅತ್ಯಂತ ಸೂಕ್ತವಾದ ಕೌಶಲ್ಯಭರಿತ ಪ್ರತಿಭೆಗಳನ್ನು ನೀಡುತ್ತೇವೆ. ಆಂಧ್ರಪ್ರದೇಶ ನಿಮ್ಮನ್ನು ಸ್ವಾಗತಿಸಲು ಸಿದ್ಧವಾಗಿದೆ. ದಯವಿಟ್ಟು ಸಂಪರ್ಕದಲ್ಲಿರಿ!” ಎಂದು ನಾರಾ ಟ್ವೀಟ್‌ ಮಾಡಿದ್ದಾರೆ.

“ಕರ್ನಾಟಕದ ಜಿಡಿಪಿಗೆ ಖಾಸಗಿ ಉದ್ಯಮ ವಲಯ 25% ಕೊಡುಗೆ ನೀಡುತ್ತಿದೆ. ಆದರೆ ಕೌಶಲ್ಯಭರಿತ ಉದ್ಯೋಗಿಗಳ ಕೊರತೆಯಿದೆ. ಇಂಥ ಕಾನೂನು ತಂದರೆ ಉದ್ಯಮ ನಡೆಸುವುದು ಕಷ್ಟವಾಗಲಿದ್ದು, ಉದ್ಯಮಿಗಳು ಬೇರೆ ಕಡೆ ಸ್ಥಳಾಂತರಿಸುವ ಬಗ್ಗೆ ಚಿಂತನೆ ನಡೆಸಬೇಕಾಗುತ್ತದೆ” ಎಂದು ಔದ್ಯಮಿಕ ಒಕ್ಕೂಟ ನಾಸ್ಕಾಮ್‌ (NASSCOM) ಎಚ್ಚರಿಕೆ ನೀಡಿತ್ತು.

ಸರ್ಕಾರದ ನಿಲುವಿಗೆ ಬಿವೈ ವಿಜಯೇಂದ್ರ ಖಂಡನೆ

ಖಾಸಗಿ ಉದ್ಯಮದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಒದಗಿಸುವ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಮೀಸಲು ಬಗ್ಗೆ ವಿಧೇಯಕ ತಡೆಹಿಡಿದ ಸರಕಾರದ ಕ್ರಮವನ್ನು ಅವರು ಟೀಕಿಸಿದ್ದಾರೆ. ಈ ಬಗ್ಗೆ ಅವರು ʼಎಕ್ಸ್‌ʼನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ?” ಎಂದು ಅವರು ಪ್ರಶ್ನಿಸಿದ್ದಾರೆ. “ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅಪಮಾನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah)ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುವೆ” ಎಂದಿದ್ದಾರೆ.

“ಈ ನೆಲದಲ್ಲಿ ಬದುಕು ಮಾಡುತ್ತ ಕನ್ನಡ ಕಲಿತವರೆಲ್ಲ ಕನ್ನಡಿಗರೇ ಎಂದು ಪರಿಗಣಿಸಿ ಈ ನೆಲದ ಮಕ್ಕಳ ಉದ್ಯೋಗದ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಕನ್ನಡಪರ ಹೋರಾಟಗಾರರ ಬಹುದಿನಗಳ ಹೋರಾಟದ ಬೇಡಿಕೆಗೆ ನಿನ್ನೆಯಷ್ಟೇ ‘ಅಸ್ತು ‘ಎಂದು ಹೆಜ್ಜೆ ಇಟ್ಟಿದ್ದ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’ ಹೊಡೆದಿರುವುದೇಕೆ? ಮುಖ್ಯಮಂತ್ರಿಗಳು ಈ ಕುರಿತು ತಮ್ಮ X ಖಾತೆಯಲ್ಲಿ ಮೂರು ಬಾರಿ ‘ಯೂ ಟರ್ನ್ ಹೊಡೆದು’ ಕೊನೆಗೂ ವಿಧೇಯಕ ಸದ್ಯಕ್ಕೆ ಮಂಡಿಸುತ್ತಿಲ್ಲ ಎನ್ನುವ ಅಂಜುಬುರುಕ ನಿರ್ಧಾರದ ಹಿಂದೆ ನಾಡಿನ ಆತ್ಮ ಗೌರವ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡತನವನ್ನು ಹಿಮ್ಮೆಟ್ಟಿಸುವ ಕರ್ನಾಟಕ ವಿರೋಧಿ ಶಕ್ತಿಗಳ ಲಾಬಿ ಮೇಲುಗೈ ಸಾಧಿಸಿರುವಂತಿದೆ”

“ಇಂಡಿ ಕೂಟದಲ್ಲಿ ಯಾವಾಗ ಬಿರುಕು ಮೂಡುತ್ತದೋ ಎಂಬ ಭೀತಿಯಲ್ಲಿರುವ ದೆಹಲಿಯ ದೊಡ್ಡ ‘ಕೈ’ ಮುಖ್ಯಮಂತ್ರಿಗಳ ಕೈ ಕಟ್ಟಿಹಾಕಿರಲೇಬೇಕು, ಇಲ್ಲದಿದ್ದರೇ ಕನ್ನಡಿಗರ ಬದುಕು ಹಸನಾಗಿಸುವ ವಿಧೇಯಕವನ್ನು ಬದಿಗೆ ಸರಿಸುವ ಪಲಾಯನವಾದಿ ನಿರ್ಧಾರ ಕೈಗೊಳ್ಳಲು ಹೇಗೆ ಸಾಧ್ಯ? ಸದ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳನ್ನು ಮುತ್ತಿರುವ ಮಹರ್ಷಿ ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣಗಳಿಂದ ತತ್ತರಿಸಿರುವ ಕಾಂಗ್ರೆಸ್ ತನ್ನ ಮುಖ ಮುಚ್ಚಿಕೊಳ್ಳಲು ಹಗರಣದ ಚರ್ಚೆ ಹಾಗೂ ತನಿಖೆಯನ್ನು ದಿಕ್ಕು ತಪ್ಪಿಸಲು ಹಾಗೂ ಜನರ ಗಮನ ವಿಚಲಿತಗೊಳಿಸುವ ಕುತಂತ್ರದಿಂದ ಕನ್ನಡ ಪರ ವಿಧೇಯಕವನ್ನು ತಡೆಹಿಡಿದು ಗುರಾಣಿ ಮಾಡಿಕೊಳ್ಳುವ ಹುನ್ನಾರ ನಡೆಸಿದ್ದರೆ ರಾಜ್ಯದ ಜನತೆ ಕಾಂಗ್ರೆಸ್ಸಿಗರನ್ನು ಎಂದಿಗೂ ಕ್ಷಮಿಸರು.”

“ವಿಧೇಯಕದ ಕುರಿತು ಮಾಧ್ಯಮಗಳಲ್ಲಿ ಹೆಮ್ಮೆಯಿಂದ ಬೀಗಿದ್ದ ಸಚಿವರುಗಳು ಹಾಗೂ ಕಾಂಗ್ರೆಸ್ ಮುಖಂಡರು ಕೆಲವೇ ಸಮಯದ ಅಂತರದಲ್ಲಿ ನಾಡ ಜನರ ಬಗೆಗಿನ ಐತಿಹಾಸಿಕ ವಿಧೇಯಕ ಹಿಂತೆಗೆದುಕೊಂಡ ಬಗ್ಗೆ ಸಮಸ್ತ ಕನ್ನಡ ಜನತೆಯ ಮುಂದೆ ತಲೆ ಎತ್ತಿ ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ. ಅರ್ಹತೆ ಇದ್ದರೂ ಉದ್ಯೋಗಾವಕಾಶಗಳಿಂದ ವಂಚಿತರಾಗಿ ಹತಾಶೆಗೊಳಗಾಗಿದ್ದ ಗ್ರಾಮೀಣ ಭಾಗದ ಲಕ್ಷಾಂತರ ನಿರುದ್ಯೋಗಿಗಳಿಗೆ ಭರವಸೆಯ ಬೆಳಕು ಮೂಡಿಸಿದ್ದ ಕನ್ನಡಿಗರ ಉದ್ಯೋಗ ಮೀಸಲಾತಿಯ ವಿಧೇಯಕ ಪ್ರಸಕ್ತ ಅಧಿವೇಶನದಲ್ಲೇ ಸರ್ಕಾರ ಮಂಡಿಸಲಿ, ಇಲ್ಲವೇ ಕನ್ನಡಿಗರ ಆಕ್ರೋಶ ಎದುರಿಸಲು ಸಿದ್ದವಾಗಲಿ” ಎಂದು ಅವರು ಬರೆದಿದ್ದಾರೆ.

ಇದನ್ನೂ ಓದಿ: Karnataka Jobs Reservation : ಕನ್ನಡಿಗರಿಗೆ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮೀಸಲಾತಿ ಮಸೂದೆಗೆ ತಾತ್ಕಾಲಿಕ ತಡೆ; ಉದ್ಯಮಿಗಳ ಒತ್ತಡ?

Continue Reading
Advertisement
Keshav Prasad Maurya
ದೇಶ2 mins ago

Keshav Prasad Maurya: ʼಮಾನ್ಸೂನ್‌ ಆಫರ್‌ʼ ಕೊಟ್ಟ ಅಖಿಲೇಶ್‌ ಯಾದವ್‌ಗೆ ಬಿಜೆಪಿ ಟಾಂಗ್‌

karnataka Weather Forecast
ಮಳೆ3 mins ago

Karnataka Weather : ವಾಯುಭಾರ ಕುಸಿತ ಎಫೆಕ್ಟ್‌; ವಾರಾಂತ್ಯದಲ್ಲಿ ಭಾರಿ ಮಳೆ ಎಚ್ಚರಿಕೆ, ಶಾಲೆಗಳಿಗೆ ರಜೆ ಘೋಷಣೆ

Salman Khan-Akshay Kumar
Latest5 mins ago

Salman Khan-Akshay Kumar: ಸಲ್ಮಾನ್ ಖಾನ್ – ಅಕ್ಷಯ್ ಕುಮಾರ್ ಜೋಡಿಯಾಗಿ ನಟಿಸಿದ 4 ಅತ್ಯುತ್ತಮ ಚಿತ್ರಗಳಿವು!

Bengaluru power cut July 20th power outage in many parts of Bengaluru
ಬೆಂಗಳೂರು9 mins ago

Bengaluru Power Cut: ಬೆಂಗಳೂರಿನ ಹಲವೆಡೆ ನಾಳೆ ಕರೆಂಟ್‌ ಇರಲ್ಲ!

Congress creates colorful stories only during elections Minister Pralhad Joshi alleges
ಕರ್ನಾಟಕ13 mins ago

Pralhad Joshi: ಚುನಾವಣೆ ವೇಳೆ ಮಾತ್ರ ಕಾಂಗ್ರೆಸ್ ಬಣ್ಣ ಬಣ್ಣದ ಕಥೆ ಕಟ್ಟುತ್ತದೆ: ಪ್ರಲ್ಹಾದ್‌ ಜೋಶಿ

Natasha ponawala jeweled kurta
ಫ್ಯಾಷನ್25 mins ago

Natasha ponawala jewelled kurta: ರಿಯಲ್‌ ಜ್ಯುವೆಲ್ಡ್ ಕುರ್ತಾ ಧರಿಸಿದ್ದ ಏಕೈಕ ಫ್ಯಾಷನ್‌ ಐಕಾನ್‌ ನತಾಶಾರ ‘ಮೊಗಲ್‌ ರಾಣಿ’ ಲುಕ್‌!

Kubusa Kannada film release on 26th July
ಕರ್ನಾಟಕ26 mins ago

Kannada New Movie: ಜು.26ರಂದು ’ಕುಬುಸʼ ಚಿತ್ರ ರಾಜ್ಯಾದ್ಯಂತ ಬಿಡುಗಡೆ

Paris Olympics 2024
ಪ್ರಮುಖ ಸುದ್ದಿ39 mins ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಲಿರುವ 117 ಭಾರತೀಯ ಕ್ರೀಡಾಪಟುಗಳ ಸಂಪೂರ್ಣ ವಿವರ ಇಲ್ಲಿದೆ

Karnataka Rain
ಮಳೆ53 mins ago

Karnataka Rain : ಉಕ್ಕಿ ಹರಿಯುತ್ತಿದ್ದ ಹೊಳೆಯಲ್ಲಿ ಕೊಚ್ಚಿ ಹೋದ ಕಾರ್ಮಿಕ; ಮನೆಯ ಗೋಡೆ ಕುಸಿದು ಗೃಹಿಣಿ ಸಾವು

Kiran Kumar
ಕರ್ನಾಟಕ1 hour ago

ವಿಸ್ತಾರ ನ್ಯೂಸ್‌ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಯಿಂದ ಕಿರಣ್‌ ಕುಮಾರ್‌ ಡಿ ಕೆ ಅಮಾನತು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ5 hours ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ6 hours ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ1 day ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ1 day ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ3 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ4 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ4 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ5 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ5 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

ಟ್ರೆಂಡಿಂಗ್‌