Job Alert: ಸರ್ಕಾರಿ ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿವೆ ಭರಪೂರ ಅವಕಾಶಗಳು Vistara News

ಉದ್ಯೋಗ

Job Alert: ಸರ್ಕಾರಿ ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿವೆ ಭರಪೂರ ಅವಕಾಶಗಳು

Job Alert : ಸರ್ಕಾರಿ ಉದ್ಯೋಗ (government job) ಹುಡುಕುವವರಿಗೆ ಗುಡ್‌ನ್ಯೂಸ್‌. ಬ್ಯಾಂಕ್‌‌ (bank) ಸೇರಿ ವಿವಿಧ ಕಡೆಗಳಲ್ಲಿ ಬಾಕಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ (online) ಮೂಲಕ ಅರ್ಜಿ ಸಲ್ಲಿಸಬಹುದು.

VISTARANEWS.COM


on

job alert
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲೂ ಸರ್ಕಾರಿ ಉದ್ಯೋಗಕ್ಕಿರುವ(Government job) ಬೇಡಿಕೆ ಕಡಿಮೆಯಾಗಿಲ್ಲ. ಅದಲ್ಲಿನ ಭದ್ರತೆ, ಇತರ ಸೌಲಭ್ಯಗಳ ಕಾರಣದಿಂದ ಇಂದಿಗೂ ಯುವ ಜನತೆ ಸರಕಾರಿ ಉದ್ಯೋಗದ ಕಡೆಗೆ ಗಮನ ಹರಿಸುತ್ತಿದೆ. ಅದಕ್ಕೆ ತಕ್ಕಂತೆ ಸದ್ಯ ವಿವಿಧ ಸರಕಾರಿ ಮೂಲಗಳು ಈ ವಾರ ಉದ್ಯೋಗ ಭರ್ತಿ ಮಾಡುವ ನಿಟ್ಟಿನಲ್ಲಿ ನೋಟಿಫಿಕೇಷನ್‌ ಹೊರಡಿಸಿದ್ದು ನೀವು ಅರ್ಜಿ ಸಲ್ಲಿಸಬಹುದಾಗಿದೆ. ಮಧ್ಯಪ್ರದೇಶ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (MPPSC), ಐಡಿಬಿಐ(IDBI) ಬ್ಯಾಂಕ್‌ ಸೇರಿದಂತೆ ವಿವಿಧ ಕಡೆಗಳಲ್ಲಿ ಲಭ್ಯವಿರುವ ಉದ್ಯೋಗವಕಾಶಗಳ ಮಾಹಿತಿ ಇಲ್ಲಿದೆ.

MPPSCನಲ್ಲಿ 227 ಹುದ್ದೆ ಖಾಲಿ

ಪಿಸಿಎಸ್‌ (PCS)ಹುದ್ದೆಗಳನ್ನು ಭರ್ತಿ ಮಾಡಲು ಮಧ್ಯ ಪ್ರದೇಶ ಪಬ್ಲಿಕ್‌ ಸರ್ವಿಸ್‌ ಕಮಿಷನ್‌-MPPSC ಈಗಾಗಲೇ ಕಾರ್ಯಾರಂಭಿಸಿದೆ. ಸೆಪ್ಟಂಬರ್‌ 22ರಂದು ನೋಟಿಫಿಕೇಷನ್‌ ಹೊರಡಿಸಿದ್ದು, ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ MPPSCನ ಅಧಿಕೃತ ವೆಬ್‌ ಸೈಟ್‌ mppsc.mp.gov.in. ಭೇಟಿ ನೀಡಿ. ಸೂಚನೆ ಪ್ರಕಾರ ಡಿಸೆಂಬರ್‌ 12ರಂದು ಪರೀಕ್ಷೆ ನಡೆಯಲಿದೆ. ಸುಮಾರು 227 PCS ಹುದ್ದೆಗಳನ್ನು ಭರ್ತಿ ಮಾಡುವುದಾಗಿ MPPSC ತಿಳಿಸಿದೆ. ಮಧ್ಯ ಪ್ರದೇಶದವರು ಮತ್ತು ಇತರ ಯಾವುದೇ ರಾಜ್ಯದವರು ಅರ್ಜಿ ಸಲ್ಲಿಸಬಹುದು. ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು.

UPPSCಯಲ್ಲಿದೆ 2,240 ಹುದ್ದೆಗಳು

ಉತ್ತರ ಪ್ರದೇಶ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPPSC) ಸ್ಟಾಫ್‌ ನರ್ಸ್‌ ಹುದ್ದೆಗೆ ನೋಂದಣಿ ಮಾಡುವ ದಿನಾಂಕವನ್ನು ವಿಸ್ತರಿಸಿದೆ. ಅಭ್ಯರ್ಥಿಗಳು ಸೆಪ್ಟಂಬರ್‌ 29ರ ತನಕ ಪರೀಕ್ಷೆಗಾಗಿ ನೋಂದಣಿ ಮಾಡಬಹುದಾಗಿದೆ. ಒಟ್ಟು 2,240 ಸ್ಟಾಫ್‌ ನರ್ಸ್‌ ಹುದ್ದೆಗಳನ್ನು ಭರ್ತಿ ಮಾಡುವ ಯೋಜನೆ ಹಾಕಿಕೊಳ್ಳಲಾಗಿದ್ದು ಅದರಲ್ಲಿ 2,069 ಮಹಿಳೆಯರು ಮತ್ತು 171 ಪುರುಷ ನರ್ಸ್‌ಗಳು ಸೇರಿದ್ದಾರೆ. ಅಭ್ಯರ್ಥಿಗಳು uppsc.up.nic.in. ಮೂಲಕ ನೋಂದಣಿ ಮಾಡಿಕೊಳ್ಳಬೇಕು.

BTSCಯಲ್ಲಿ ಖಾಲಿ ಇದೆ 1,279 ಟ್ರೇಡ್‌ ಇನ್‌ಸ್ಟ್ರಕ್ಟರ್ ಹುದ್ದೆ

ಬಿಹಾರ ಟೆಕ್ನಿಕಲ್‌ ಸರ್ವಿಸ್‌ ಕಮಿಷನ್‌(BTSC) ಖಾಲಿ ಇರುವ ಒಟ್ಟು 1,279 ಟ್ರೇಡ್‌ ಇನ್ಟ್ರಕ್ಟರ್‌ ಹುದ್ದೆಗಳ ಭರ್ತಿಗೆ ನೋಟಿಫಿಕೇಷನ್‌ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ ಸೈಟ್‌ btsc.bih.nic.in. ಮೂಲಕ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಅಕ್ಟೋಬರ್‌ 18. ವಿವಿಧ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಬೋಧನೆ ಮಾಡಲು ಇವರನ್ನು ನೇಮಿಸಲಾಗುವುದು. ಅಭ್ಯರ್ಥಿಗಳು ಪದವಿ ಅಥವಾ ಡಿಪ್ಲೋಮಾ ಓದಿರಬೇಕು.

ಇದನ್ನೂ ಓದಿ: Border Roads Organisation : ಗಡಿ ರಸ್ತೆಗಳ ಕಾರ್ಮಿಕರು ಮೃತಪಟ್ಟರೆ ಸರ್ಕಾರಿ ಸೌಲಭ್ಯಗಳು, ಕೇಂದ್ರ ಸರ್ಕಾರದ ಯೋಜನೆ

IDBI ಬ್ಯಾಂಕ್‌ನಲ್ಲಿ 600 ಹುದ್ದೆಗಳು

IDBI ಬ್ಯಾಂಕ್‌ ಜ್ಯೂನಿಯರ್‌ ಅಸಿಸ್ಟೆಂಟ್‌ ಮ್ಯಾನೇಜರ್‌(Grade 0) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಒಟ್ಟು 600 ಹುದ್ದೆಗಳಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ idbibank.in.ಗೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬೇಕು. ಸೆಪ್ಟಂಬರ್‌ 30 ಹೆಸರು ನೋಂದಾಯಿಸಲು ಕೊನೆಯ ದಿನ. ಪರೀಕ್ಷೆ ಅಕ್ಟೋಬರ್‌ 20ರಂದು ನಡೆಯುವ ಸಾಧ್ಯತೆ ಇದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 20 ವರ್ಷ ದಾಟಿರಬೇಕು ಮತ್ತು ಗರಿಷ್ಠ 25 ವರ್ಷದ ಒಳಗಿರಬೇಕು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job: ಸರ್ಕಾರಿ ಇಲಾಖೆಯಲ್ಲಿ 7 ಲಕ್ಷ ಜನ ಮಾಡಬೇಕಾದ ಕೆಲಸವನ್ನು ಈಗ 4 ಲಕ್ಷ ಜನರು ಮಾಡುತ್ತಲಿದ್ದಾರೆ. ಇದರ ಬಗ್ಗೆ ವಿಸ್ತಾರ ನ್ಯೂಸ್‌ನಲ್ಲಿ (Vistara News) ಪ್ರಸಾರ ಮಾಡಲಾಗಿದೆ. ಸರ್ಕಾರ ಹುದ್ದೆಗಳ ಬಗ್ಗೆ ಕೊಟ್ಟ ಉತ್ತರ ಅಸಮರ್ಪಕವಾಗಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರೇ ಉತ್ತರ ಕೊಡಬೇಕು ಎಂದು ಪಟ್ಟು ಹಿಡಿದಿದ್ದು, ಗದ್ದಲಕ್ಕೆ ಕಾರಣವಾಗಿದೆ.

VISTARANEWS.COM


on

Government Job Vistara Exclusive and CM Siddaramaiah
Koo

ಬೆಳಗಾವಿ: ರಾಜ್ಯದಲ್ಲಿ ಎರಡೂವರೆ ಲಕ್ಷ ಸರ್ಕಾರಿ ಹುದ್ದೆಗಳು (Government Job) ಖಾಲಿ ಇರುವ ಬಗ್ಗೆ ವಿಸ್ತಾರ ನ್ಯೂಸ್‌ ಬಿತ್ತರಿಸಿದ ಎಕ್ಸ್‌ಕ್ಲೂಸಿವ್‌ ವರದಿಯು ಬೆಳಗಾವಿ ಚಳಿಗಾಳದ ಅಧಿವೇಶನದಲ್ಲಿ (Belagavi Winter Session) ಚರ್ಚೆಗೆ ಬಂದಿದ್ದು, ಆಡಳಿತ ಮತ್ತು ವಿಪಕ್ಷಗಳ ವಾಗ್ವಾದಕ್ಕೆ ಕಾರಣವಾಗಿದೆ. ಪರಿಷತ್‌ ಕಲಾಪದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಬಿಜೆಪಿ ಸದಸ್ಯೆ ತೇಜಸ್ವಿನಿ ರಮೇಶ್‌, ಸರ್ಕಾರಿ ಇಲಾಖೆಯಲ್ಲಿ (Government Department) 7 ಲಕ್ಷ ಜನ ಮಾಡಬೇಕಾದ ಕೆಲಸವನ್ನು ಈಗ 4 ಲಕ್ಷ ಜನರು ಮಾಡುತ್ತಲಿದ್ದಾರೆ. ಇದರ ಬಗ್ಗೆ ವಿಸ್ತಾರ ನ್ಯೂಸ್‌ನಲ್ಲಿ (Vistara News) ಪ್ರಸಾರ ಮಾಡಲಾಗಿದೆ. ಸರ್ಕಾರ ಹುದ್ದೆಗಳ ಬಗ್ಗೆ ಕೊಟ್ಟ ಉತ್ತರ ಅಸಮರ್ಪಕವಾಗಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರೇ ಉತ್ತರ ಕೊಡಬೇಕು ಎಂದು ಪಟ್ಟು ಹಿಡಿದಿದ್ದು, ಗದ್ದಲಕ್ಕೆ ಕಾರಣವಾಗಿದೆ.

ಖಾಲಿ ಹುದ್ದೆ ಬಗ್ಗೆ ಸರ್ಕಾರ ಕೊಟ್ಟ ಉತ್ತರ ಅಸಮರ್ಪಕವಾಗಿದೆ ಎಂದು ತೇಜಸ್ವಿನಿ ರಮೇಶ್‌ ಹೇಳಿಕೆ ನೀಡುತ್ತಿದ್ದಂತೆ ಮಧ್ಯ ಪ್ರವೇಶ ಮಾಡಿದ ಸಲೀಂ ಅಹಮದ್‌, ಸರ್ಕಾರ ಈಗಾಗಲೇ ಉತ್ತರ ಕೊಟ್ಟಿದೆ ಎಂದು ಹೇಳಿದರು. ಆಗ ಕಾಂಗ್ರೆಸ್ ಸದಸ್ಯ ಯು.ಬಿ. ವೆಂಕಟೇಶ್ ಮಾತನಾಡಿ, ಈ ಹಿಂದೆ ನಿಮ್ಮ ಸರ್ಕಾರದ ಇತ್ತಲ್ಲವೇ? ಆಗ ಏನು ಕತ್ತೆ ಕಾಯ್ತಾ ಇದ್ರಾ? ಕೇಂದ್ರ ಸರ್ಕಾರದಲ್ಲಿ ಒಂದು ಕೋಟಿ ಹುದ್ದೆ ಖಾಲಿ ಇದೆ ಎಂದು ಹೇಳಿದರು. ಇದು ಬಿಜೆಪಿ ಸದಸ್ಯರನ್ನು ಮತ್ತಷ್ಟು ಕೆರಳಿಸಿತು.

ಸಿಎಂ ಕಲಾಪಕ್ಕೆ ಬಂದು ಉತ್ತರಿಸಲಿ

ಈ ಹೇಳಿಕೆಯಿಂದ ಆಕ್ರೋಶಗೊಂಡ ಪ್ರತಿಪಕ್ಷ ಬಿಜೆಪಿ ಸದಸ್ಯರು, ಕತ್ತೆ ಅನ್ನೋ ಪದವನ್ನು ಕಡಿತದಿಂದ ತೆಗೆಯಲು ಒತ್ತಾಯ ಮಾಡಿದರು. ಬಳಿಕ ಮಾತನಾಡಿದ ತೇಜಸ್ವಿನಿ ರಮೇಶ್‌, ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ನಮಗೆ ಆರೋಪಿಸುತ್ತಾರೆ. ಆದರೆ, ನಾವು ಬ್ಲಾಕ್‌ಮೇಲ್ ಮಾಡುತ್ತಿಲ್ಲ. ಜ್ವಲಂತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ್ದೇವೆ. ಖಾಲಿ ಹುದ್ದೆ ಬಗ್ಗೆ ವಿಸ್ತಾರ ನ್ಯೂಸ್‌ನಲ್ಲಿ ಪ್ರಸಾರ ಆಗುತ್ತಾ ಇದೆ. ಯಾವ ಯಾವ ಇಲಾಖೆಗಳಲ್ಲಿ ಎಷ್ಟೆಷ್ಟು ಸರ್ಕಾರಿ ಹುದ್ದೆಗಳು ಖಾಲಿ ಇವೆ ಅಂತ ತೋರಿಸುತ್ತಿದ್ದಾರೆ. ಮುಖ್ಯಮಂತ್ರಿಗಳು ಕಲಾಪಕ್ಕೆ ಆಗಮಿಸಿ ಉತ್ತರಿಸಬೇಕು ಎಂದು ಆಗ್ರಹಿಸಿದರು.

ಸಿಎಂ ಉತ್ತರಕ್ಕಾಗಿ ಪಟ್ಟು

ಆಗ ಮಾತನಾಡಿದ ಯು.ಬಿ. ವೆಂಕಟೇಶ್, ಈಗಾಗಲೇ ಮುಖ್ಯಮಂತ್ರಿಗಳಿಂದಲೇ ಉತ್ತರ ಕೊಡಿಸಿಯಾಗಿದೆ. ಇವರು ಕಳೆದ ಐದು ವರ್ಷದಿಂದ ಏನ್ ಕತ್ತೆ ಕಾಯುತ್ತಿದ್ದರಾ? ಯಾಕೆ ಏಳನೇ ವೇತನ ಆಯೋಗ ಜಾರಿ ಮಾಡಲಿಲ್ಲ? ಎಂದು ಪ್ರಶ್ನೆ ಮಾಡಿದರು. ಇದರಿಂದ ಅಸಮಾಧಾನಗೊಂಡ ತೇಜಸ್ವಿನಿ ರಮೇಶ್, ಕತ್ತೆ ಕಾಯುವ ಕೆಲಸ ಸದನದಲ್ಲಿ ಮಾಡಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸದನಕ್ಕೆ ಬಂದು ಉತ್ತರ ಕೊಡಬೇಕು. ಅಲ್ಲಿಯವರೆಗೂ ಧರಣಿ ವಾಪಸ್ ಪಡೆಯಲ್ಲ ಎಂದು ಪಟ್ಟುಹಿಡಿದು ಕುಳಿತರು.

ಕತ್ತೆಯ ಗುಣವನ್ನು ಬೆಳೆಸಿಕೊಳ್ಳಬೇಕು

ಆಗ ಬೋಜೇಗೌಡ ಮಾತನಾಡಿ, ಕತ್ತೆಗಿರುವ ಗೌರವವನ್ನು ಸಹ ಕಾಂಗ್ರೆಸ್‌ನವರು ಹಾಳು ಮಾಡಿದ್ದಾರೆ. ಕತ್ತೆಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಹೇಳಿದರು. ಆಗ ಸಚಿವ ಕೃಷ್ಣ ಬೈರೆಗೌಡ ಮಾತನಾಡಿ, ಸುಗಮ ಕಲಾಪಕ್ಕೆ ಅನುವು ಮಾಡಿಕೊಡಿ. ಸಿಎಂ ಬೆಂಗಳೂರಿನ ಕಾರ್ಯಕ್ರಮದಲ್ಲಿದ್ದಾರೆ. ಅವರು ಬಂದ ಕೂಡಲೇ ಗಮನಕ್ಕೆ ತರುತ್ತೇವೆ ಎಂದು ಹೇಳಿದರು.

ಸಿಎಂರಿಂದ ಉತ್ತರ ಕೊಡಿಸುವ ಭರವಸೆ

ಇಷ್ಟಾದರೂ ಗದ್ದಲ ನಿಲ್ಲದೇ ಇದ್ದಾಗ ಸಭಾಪತಿ ಬಸವರಾಜ ಹೊರಟ್ಟಿ ಮಧ್ಯಪ್ರವೇಶಿಸಿ, ಸದನದ ಕಲಾಪವನ್ನು ನಡೆಸಲು ಬಿಡಿ. ಇದೇ ರೀತಿಯಾದರೆ ಸದನವನ್ನು ಮುಂದೂಡುತ್ತೇನೆ. ಏನ್ ಹುಡುಗಾಟಿಕೆ ಮಾಡಿಕೊಂಡಿದ್ದೀರಿ? ಎಂದು ಗರಂ ಆದರು. ಸಿಎಂ ಸಿದ್ದರಾಮಯ್ಯ ಅವರಿಂದ ಉತ್ತರ ಕೊಡಿಸುವ ಭರವಸೆ ಸಿಕ್ಕ ಮೇಲೆ ಪ್ರತಿಪಕ್ಷಗಳು ಧರಣಿಯನ್ನು ವಾಪಸ್‌ ಪಡೆದವು.

‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

VISTARA-EXCLUSIVE

ವಿಸ್ತಾರ ನ್ಯೂಸ್‌ನಲ್ಲಿ ಮೆಗಾ EXCLUSIVE ಸ್ಟೋರಿ ಇದಾಗಿದ್ದು, ರಾಜ್ಯ ಸರ್ಕಾರಿ ಇಲಾಖೆಯಲ್ಲಿ ಲಕ್ಷ, ಲಕ್ಷ ಖಾಲಿ ಹುದ್ದೆ (Government Job) ಇರುವುದು ಗೊತ್ತಾಗಿದೆ. ಗ್ಯಾರಂಟಿ ಯೋಜನೆಯನ್ನು ಕೊಟ್ಟಿರುವ ಕಾಂಗ್ರೆಸ್‌ ಸರ್ಕಾರದಲ್ಲಿ (Congress Government) ಉದ್ಯೋಗ ಸೃಷ್ಟಿಗೆ ‘ಗ್ಯಾರಂಟಿ’ಯೇ ಇಲ್ಲ ಎನ್ನುವಂತೆ ಆಗಿದೆ. ಸರ್ಕಾರ ಬಂದು 6 ತಿಂಗಳು ಕಳೆದರೂ ಉದ್ಯೋಗ ಭರ್ತಿಗೆ ಹೊಸ ನೋಟಿಫಿಕೇಷನ್ ಮಾಡಲಾಗಿಲ್ಲ. ಖಾಲಿ ಹುದ್ದೆ ಭರ್ತಿ ಹೇಳಿಕೆಯು ಕೇವಲ ಬಜೆಟ್‌ಗೆ ಸೀಮಿತವಾಗಿದೆ. ಯಾವ್ಯಾವ ಸರ್ಕಾರಿ ಇಲಾಖೆಯಲ್ಲಿ ಎಷ್ಟೆಷ್ಟು ಹುದ್ದೆಗಳು ಖಾಲಿ ಇವೆ? ಎಂಬ ಬಗ್ಗೆ ಇಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದೆ.

ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಆರೋಗ್ಯ – ವೈದ್ಯಕೀಯ ಇಲಾಖೆ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರ್ಥಿಕ ಇಲಾಖೆ, ಕೃಷಿ ಇಲಾಖೆ, ಪಶು ಸಂಗೋಪನಾ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ನೀರಾವರಿ ಇಲಾಖೆಗಳಲ್ಲಿ ಒಟ್ಟು 2,47,558 ಹುದ್ದೆಗಳು ಖಾಲಿ ಇವೆ.

ಇಲ್ಲಿ ದಾಖಲೆಗಳ ಸಮೇತ ಖಾಲಿ ಹುದ್ದೆಗಳ ವಿವರ; ಇಲ್ಲಿದೆ ವಿಡಿಯೊ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ

  • ಮಂಜೂರಾದ ಹುದ್ದೆಗಳು – 2,82,862
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 2,16,803
  • ಖಾಲಿ ಹುದ್ದೆಗಳು- 66,059

ಒಳಾಡಳಿತ ಇಲಾಖೆ

  • ಮಂಜೂರಾದ ಹುದ್ದೆಗಳು – 1,26,913
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -1,03,356
  • ಖಾಲಿ ಹುದ್ದೆಗಳು – 23,557

ಉನ್ನತ ಶಿಕ್ಷಣ ಇಲಾಖೆ

  • ಮಂಜೂರಾದ ಹುದ್ದೆಗಳು – 24,785
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -12,111
  • ಖಾಲಿ ಹುದ್ದೆಗಳು- 12,674

ಆರೋಗ್ಯ ಮತ್ತು ವೈದ್ಯಕೀಯ

  • ಮಂಜೂರಾದ ಹುದ್ದೆಗಳು – 74,857
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -40,213
  • ಖಾಲಿ ಹುದ್ದೆಗಳು- 34,644

ಕಂದಾಯ ಇಲಾಖೆ

  • ಮಂಜೂರಾದ ಹುದ್ದೆಗಳು – 32,309
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -21,688
  • ಖಾಲಿ ಹುದ್ದೆಗಳು – 10,621

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

  • ಮಂಜೂರಾದ ಹುದ್ದೆಗಳು – 6,940
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -3,710
  • ಖಾಲಿ ಹುದ್ದೆಗಳು – 3,230

ಆರ್ಥಿಕ ಇಲಾಖೆ

  • ಮಂಜೂರಾದ ಹುದ್ದೆಗಳು – 18,892
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 10,113
  • ಖಾಲಿ ಹುದ್ದೆಗಳು – 8,779

ಕೃಷಿ ಇಲಾಖೆ

  • ಮಂಜೂರಾದ ಹುದ್ದೆಗಳು – 10,324
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 4,008
  • ಖಾಲಿ ಹುದ್ದೆಗಳು – 6,316

ಪಶುಸಂಗೋಪನೆ ಇಲಾಖೆ

  • ಮಂಜೂರಾದ ಹುದ್ದೆಗಳು – 19,610
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 8,581
  • ಖಾಲಿ ಹುದ್ದೆಗಳು – 11,029

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ

  • ಮಂಜೂರಾದ ಹುದ್ದೆಗಳು – 10,986
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 5,248
  • ಖಾಲಿ ಹುದ್ದೆಗಳು – 5,738

ಗ್ರಾಮೀಣಾಭಿವೃದ್ಧಿ ಇಲಾಖೆ

  • ಮಂಜೂರಾದ ಹುದ್ದೆಗಳು – 28,223
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 17,814
  • ಖಾಲಿ ಹುದ್ದೆಗಳು – 10,409

ಸಮಾಜ ಕಲ್ಯಾಣ ಇಲಾಖೆ

  • ಮಂಜೂರಾದ ಹುದ್ದೆಗಳು – 15,177
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 5,585
  • ಖಾಲಿ ಹುದ್ದೆಗಳು – 9,592

ಲೋಕೋಪಯೋಗಿ ಇಲಾಖೆ

  • ಮಂಜೂರಾದ ಹುದ್ದೆಗಳು – 16,635
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 10,602
  • ಖಾಲಿ ಹುದ್ದೆಗಳು – 6,033

ನೀರಾವರಿ ಇಲಾಖೆ

  • ಮಂಜೂರಾದ ಹುದ್ದೆಗಳು – 10,623
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 6,401
  • ಖಾಲಿ ಹುದ್ದೆಗಳು – 4,222

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಅಡಿಕೆ ಬೆಳೆಯ ಸಂಕಷ್ಟಗಳನ್ನು ನಿವಾರಿಸಿ

ಒಟ್ಟು 2,47,558 ಹುದ್ದೆಗಳು ಖಾಲಿ ಇದ್ದು, ಇದರ ಭರ್ತಿಗೆ ರಾಜ್ಯ ಸರ್ಕಾರ ಚಿಂತನೆಯನ್ನೇ ನಡೆಸಿಲ್ಲ. ಸರ್ಕಾರ ಅಸ್ತಿತ್ವಕ್ಕೆ ಬಂದು ಆರು ತಿಂಗಳು ಕಳೆದರೂ ಸಹ ಯಾವುದೇ ನೋಟಿಫಿಕೇಶನ್‌ ಆಗಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಡಬೇಕು ಎಂಬ ಆಗ್ರಹಗಳು ಕೇಳಿ ಬಂದಿವೆ.

Continue Reading

ಉದ್ಯೋಗ

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

Government Job : ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಆರೋಗ್ಯ – ವೈದ್ಯಕೀಯ ಇಲಾಖೆ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರ್ಥಿಕ ಇಲಾಖೆ, ಕೃಷಿ ಇಲಾಖೆ, ಪಶು ಸಂಗೋಪನಾ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ನೀರಾವರಿ ಇಲಾಖೆಗಳಲ್ಲಿ ಒಟ್ಟು 2,47,558 ಹುದ್ದೆಗಳು ಖಾಲಿ ಇವೆ.

VISTARANEWS.COM


on

Government Job Vistara Exclusive
Koo
VISTARA-EXCLUSIVE

ಬೆಂಗಳೂರು: ವಿಸ್ತಾರ ನ್ಯೂಸ್‌ನಲ್ಲಿ ಮೆಗಾ EXCLUSIVE ಸ್ಟೋರಿ ಇದಾಗಿದ್ದು, ರಾಜ್ಯ ಸರ್ಕಾರಿ ಇಲಾಖೆಯಲ್ಲಿ ಲಕ್ಷ, ಲಕ್ಷ ಖಾಲಿ ಹುದ್ದೆ (Government Job) ಇರುವುದು ಗೊತ್ತಾಗಿದೆ. ಗ್ಯಾರಂಟಿ ಯೋಜನೆಯನ್ನು ಕೊಟ್ಟಿರುವ ಕಾಂಗ್ರೆಸ್‌ ಸರ್ಕಾರದಲ್ಲಿ (Congress Government) ಉದ್ಯೋಗ ಸೃಷ್ಟಿಗೆ ‘ಗ್ಯಾರಂಟಿ’ಯೇ ಇಲ್ಲ ಎನ್ನುವಂತೆ ಆಗಿದೆ. ಸರ್ಕಾರ ಬಂದು 6 ತಿಂಗಳು ಕಳೆದರೂ ಉದ್ಯೋಗ ಭರ್ತಿಗೆ ಹೊಸ ನೋಟಿಫಿಕೇಷನ್ ಮಾಡಲಾಗಿಲ್ಲ. ಖಾಲಿ ಹುದ್ದೆ ಭರ್ತಿ ಹೇಳಿಕೆಯು ಕೇವಲ ಬಜೆಟ್‌ಗೆ ಸೀಮಿತವಾಗಿದೆ. ಯಾವ್ಯಾವ ಸರ್ಕಾರಿ ಇಲಾಖೆಯಲ್ಲಿ ಎಷ್ಟೆಷ್ಟು ಹುದ್ದೆಗಳು ಖಾಲಿ ಇವೆ? ಎಂಬ ಬಗ್ಗೆ ಇಲ್ಲಿ ಸಂಪೂರ್ಣ ಮಾಹಿತಿ ನೀಡಲಾಗಿದೆ.

ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಆರೋಗ್ಯ – ವೈದ್ಯಕೀಯ ಇಲಾಖೆ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರ್ಥಿಕ ಇಲಾಖೆ, ಕೃಷಿ ಇಲಾಖೆ, ಪಶು ಸಂಗೋಪನಾ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ ಹಾಗೂ ನೀರಾವರಿ ಇಲಾಖೆಗಳಲ್ಲಿ ಒಟ್ಟು 2,47,558 ಹುದ್ದೆಗಳು ಖಾಲಿ ಇವೆ.

ಇಲ್ಲಿ ದಾಖಲೆಗಳ ಸಮೇತ ಖಾಲಿ ಹುದ್ದೆಗಳ ವಿವರ; ಇಲ್ಲಿದೆ ವಿಡಿಯೊ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ

  • ಮಂಜೂರಾದ ಹುದ್ದೆಗಳು – 2,82,862
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 2,16,803
  • ಖಾಲಿ ಹುದ್ದೆಗಳು- 66,059

ಒಳಾಡಳಿತ ಇಲಾಖೆ

  • ಮಂಜೂರಾದ ಹುದ್ದೆಗಳು – 1,26,913
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -1,03,356
  • ಖಾಲಿ ಹುದ್ದೆಗಳು – 23,557

ಉನ್ನತ ಶಿಕ್ಷಣ ಇಲಾಖೆ

  • ಮಂಜೂರಾದ ಹುದ್ದೆಗಳು – 24,785
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -12,111
  • ಖಾಲಿ ಹುದ್ದೆಗಳು- 12,674

ಆರೋಗ್ಯ ಮತ್ತು ವೈದ್ಯಕೀಯ

  • ಮಂಜೂರಾದ ಹುದ್ದೆಗಳು – 74,857
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -40,213
  • ಖಾಲಿ ಹುದ್ದೆಗಳು- 34,644

ಕಂದಾಯ ಇಲಾಖೆ

  • ಮಂಜೂರಾದ ಹುದ್ದೆಗಳು – 32,309
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -21,688
  • ಖಾಲಿ ಹುದ್ದೆಗಳು – 10,621

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

  • ಮಂಜೂರಾದ ಹುದ್ದೆಗಳು – 6,940
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು -3,710
  • ಖಾಲಿ ಹುದ್ದೆಗಳು – 3,230

ಆರ್ಥಿಕ ಇಲಾಖೆ

  • ಮಂಜೂರಾದ ಹುದ್ದೆಗಳು – 18,892
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 10,113
  • ಖಾಲಿ ಹುದ್ದೆಗಳು – 8,779

ಕೃಷಿ ಇಲಾಖೆ

  • ಮಂಜೂರಾದ ಹುದ್ದೆಗಳು – 10,324
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 4,008
  • ಖಾಲಿ ಹುದ್ದೆಗಳು – 6,316

ಪಶುಸಂಗೋಪನೆ ಇಲಾಖೆ

  • ಮಂಜೂರಾದ ಹುದ್ದೆಗಳು – 19,610
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 8,581
  • ಖಾಲಿ ಹುದ್ದೆಗಳು – 11,029

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ

  • ಮಂಜೂರಾದ ಹುದ್ದೆಗಳು – 10,986
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 5,248
  • ಖಾಲಿ ಹುದ್ದೆಗಳು – 5,738

ಗ್ರಾಮೀಣಾಭಿವೃದ್ಧಿ ಇಲಾಖೆ

  • ಮಂಜೂರಾದ ಹುದ್ದೆಗಳು – 28,223
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 17,814
  • ಖಾಲಿ ಹುದ್ದೆಗಳು – 10,409

ಸಮಾಜ ಕಲ್ಯಾಣ ಇಲಾಖೆ

  • ಮಂಜೂರಾದ ಹುದ್ದೆಗಳು – 15,177
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 5,585
  • ಖಾಲಿ ಹುದ್ದೆಗಳು – 9,592

ಲೋಕೋಪಯೋಗಿ ಇಲಾಖೆ

  • ಮಂಜೂರಾದ ಹುದ್ದೆಗಳು – 16,635
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 10,602
  • ಖಾಲಿ ಹುದ್ದೆಗಳು – 6,033

ನೀರಾವರಿ ಇಲಾಖೆ

  • ಮಂಜೂರಾದ ಹುದ್ದೆಗಳು – 10,623
  • ಕಾರ್ಯ ನಿರ್ವಹಿಸುತ್ತಿರುವ ಹುದ್ದೆಗಳು – 6,401
  • ಖಾಲಿ ಹುದ್ದೆಗಳು – 4,222

ಒಟ್ಟು 2,47,558 ಹುದ್ದೆಗಳು ಖಾಲಿ ಇದ್ದು, ಇದರ ಭರ್ತಿಗೆ ರಾಜ್ಯ ಸರ್ಕಾರ ಚಿಂತನೆಯನ್ನೇ ನಡೆಸಿಲ್ಲ. ಸರ್ಕಾರ ಅಸ್ತಿತ್ವಕ್ಕೆ ಬಂದು ಆರು ತಿಂಗಳು ಕಳೆದರೂ ಸಹ ಯಾವುದೇ ನೋಟಿಫಿಕೇಶನ್‌ ಆಗಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ಕೊಡಬೇಕು ಎಂಬ ಆಗ್ರಹಗಳು ಕೇಳಿ ಬಂದಿವೆ.

Continue Reading

ಉದ್ಯೋಗ

Job news: ಖರಗ್ಪುರ ಐಐಟಿ ಕ್ಯಾಂಪಸ್‌ನಲ್ಲಿ 6 ವಿದ್ಯಾರ್ಥಿಗಳಿಗೆ ಸಿಕ್ತು ಕೋಟಿ ರೂ. ಸಂಬಳದ ಆಫರ್‌!

Job news: 2023ರ ಪ್ಲೇಸ್‌ಮೆಂಟ್‌ ಅಧಿವೇಶನದ ಮೊದಲ ದಿನದಂದು ಖರಗ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ ದಾಖಲೆ ಬರೆದಿದೆ. ಪ್ರಿ-ಪ್ಲೇಸ್‌ಮೆಂಟ್‌ ಆಫರ್‌ಗಳು ಸೇರಿದಂತೆ 700ಕ್ಕೂ ಹೆಚ್ಚು ಉದ್ಯೋಗಾವಕಾಶ ಪಡೆದುಕೊಂಡಿದೆ.

VISTARANEWS.COM


on

iit
Koo

ಲಕ್ನೋ: 2023ರ ಪ್ಲೇಸ್‌ಮೆಂಟ್‌ ಅಧಿವೇಶನದ ಮೊದಲ ದಿನದಂದು ಖರಗ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ (Indian Institute of Technology-IIT) ದಾಖಲೆ ಬರೆದಿದೆ. ಪ್ರಿ-ಪ್ಲೇಸ್‌ಮೆಂಟ್‌ ಆಫರ್‌ಗಳು (PPOs) ಸೇರಿದಂತೆ 700ಕ್ಕೂ ಹೆಚ್ಚು ಉದ್ಯೋಗಾವಕಾಶ ಪಡೆದುಕೊಂಡಿದೆ ಎಂದು ಸಂಸ್ಥೆ ತಿಳಿಸಿದೆ. 19ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಆಫರ್‌ಗಳನ್ನು ವಿದ್ಯಾರ್ಥಿಗಳು ಸ್ವೀಕರಿಸಿದ್ದಾರೆ. ಆ ಪೈಕಿ ಆರು ವಿದ್ಯಾರ್ಥಿಗಳಿಗೆ ಮೊದಲ ದಿನದಂದು 1 ಕೋಟಿ ರೂ.ಗಿಂತ ಹೆಚ್ಚಿನ ಪ್ಯಾಕೇಜ್‌ ಲಭಿಸಿದೆ ಎಂದು ಮೂಲಗಳು ತಿಳಿಸಿವೆ (Job news).

61ಕ್ಕೂ ಹೆಚ್ಚು ಕಂಪನಿಗಳು ಭಾಗಿ

“61ಕ್ಕೂ ಹೆಚ್ಚು ಕಂಪನಿಗಳು ನಮ್ಮ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಕೊಡುಗೆಗಳನ್ನು ನೀಡಿವೆ. ಮುಖ್ಯವಾಗಿ ಸಾಫ್ಟ್‌ವೇರ್‌, ಅನಾಲಿಟಿಕ್ಸ್, ಫೈನಾನ್ಸ್-ಬ್ಯಾಂಕಿಂಗ್, ಕನ್ಸಲ್ಟಿಂಗ್ ಮತ್ತು ಕೋರ್ ಎಂಜಿನಿಯರಿಂಗ್ ವಿಭಾಗಗಳಲ್ಲಿ ಉದ್ಯೋಗ ಲಭಿಸಿದೆ. ಆ್ಯಪಲ್, ಆರ್ಥರ್ ಡಿ ಲಿಟಲ್, ಡಾ ವಿನ್ಸಿ, ಕ್ಯಾಪಿಟಲ್ ಒನ್, ಡಿಇ ಶಾ, ಎಕ್ಸ್ಎಲ್ ಸರ್ವೀಸಸ್, ಗ್ಲೀನ್, ಗೂಗಲ್, ಗ್ರಾವಿಟನ್, ಮೈಕ್ರೋಸಾಫ್ಟ್, ಮೆಕಿನ್ಸೆ, ಕ್ವಾಂಟ್ಬಾಕ್ಸ್, ಡಾಟಾ ಬ್ರಿಕ್ಸ್, ಸ್ಕ್ವೇರ್ ಪಾಯಿಂಟ್, ಟಿಎಸ್ಎಂ, ಪಾಲೊ ಆಲ್ಟೊ ಮತ್ತಿತರ ಕ್ಷೇತ್ರಗಳ ಕಂಪೆನಿಗಳು ಆಫರ್‌ ನೀಡಿವೆ. ಹೈಬ್ರಿಡ್ ಮೋಡ್‌ ವಿಧಾನದಲ್ಲಿ ಸಂಸ್ಥೆಗಳು ಸಂದರ್ಶನಗಳನ್ನು ನಡೆಸುತ್ತಿವೆʼʼ ಎಂದು ಸಂಸ್ಥೆ ತಿಳಿಸಿದೆ.

ವೃತ್ತಿ ಅಭಿವೃದ್ಧಿ ಕೇಂದ್ರ(ಸಿಡಿಸಿ)ದ ಅಧ್ಯಕ್ಷ ಪ್ರೊಫೆಸರ್ ರಾಜೀಬ್ ಮೈಟಿ ಮಾತನಾಡಿ, “ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯ ಮತ್ತು ಸಾಧನೆಗಳನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುವುದಕ್ಕೆ ಆದ್ಯತೆ ನೀಡುತ್ತಿದ್ದೇವೆ. ಲಭಿಸುವ ಅವಕಾಶಗಳ ಸದುಪಯೋಗಪಡಿಸಿಕೊಳ್ಳಲು ವಿದ್ಯಾರ್ಥಿಗಳನ್ನು ತಯಾರು ಮಾಡಲಾಗುತ್ತದೆʼʼ ಎಂದು ಹೇಳಿದ್ದಾರೆ.

ಸಿಡಿಸಿ ಈ ವರ್ಷ ಮೊದಲ ಬಾರಿಗೆ “ಅಕಾಡೆಮಿಯಾ ಇಂಡಸ್ಟ್ರಿ ಕಾನ್‌ಕ್ಲೇವ್‌ (Academia Industry Conclave (AIC) 2023” ಅನ್ನು ಆಯೋಜಿಸಿ ವಿದ್ಯಾರ್ಥಿಗಳು ಮತ್ತು ಕಂಪನಿ ನಡುವಿನ ಅಂತರವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ.

ಖರಗ್ಪುರ ಐಐಟಿ ನಿರ್ದೇಶಕ ಪ್ರೊಫೆಸರ್ ವಿ.ಕೆ.ತಿವಾರಿ ಮಾತನಾಡಿ, “ಹೆಚ್ಚಿನ ಪ್ರಮುಖ ಕಂಪನಿಗಳು ಆಗಸ್ಟ್‌ನಲ್ಲಿ ಇಂಟರ್ನ್‌ಶಿಪ್‌ಗಾಗಿ ಕ್ಯಾಂಪಸ್‌ಗೆ ಭೇಟಿ ನೀಡಿದ್ದವು. 2023-24ರ ಪದವಿ ಬ್ಯಾಚ್‌ನ ವಿದ್ಯಾರ್ಥಿಗಳು ಈ ಪ್ಲೇಸ್‌ಮೆಂಟ್‌ ಡ್ರೈವ್ ಬಗ್ಗೆ ಹೆಚ್ಚಿನ ಉತ್ಸಾಹ ತೋರಿದ್ದಾರೆ. ಜತೆಗೆ ಕಂಪೆನಿಗಳು ಈ ಸಂಸ್ಥೆಯ ಪ್ರತಿಭೆಯನ್ನು ಬಳಸಿಕೊಳ್ಳಲು ಮುಂದಾಗಿರುವುದು ಉತ್ತಮ ಬೆಳವಣಿಗೆʼʼ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

“ಜಾಗತಿಕ ಆರ್ಥಿಕ ಹಿಂಜರಿತದ ಪರಿಣಾಮ ನೇಮಕಾತಿ ಪ್ರತಿಕ್ರಿಯೆ ಮೇಲೆ ಪ್ರಭಾವ ಬೀರಿದೆ. ಅದಾಗ್ಯೂ ನಮ್ಮಲ್ಲಿನ ವಿದ್ಯಾರ್ಥಿಗಳು ಮೊದಲ ದಿನವೇ 700ಕ್ಕೂ ಹೆಚ್ಚು ಉದ್ಯೋಗಾವಕಾಶ ಪಡೆದುಕೊಂಡಿದ್ದಾರೆ. ಅದರಲ್ಲೂ ಆರು ವಿದ್ಯಾರ್ಥಿಗಳಿಗೆ 1 ಕೋಟಿ ರೂ.ಗಿಂತ ಹೆಚ್ಚಿನ ಪ್ಯಾಕೇಜ್‌ ಲಭಿಸಿದೆ. 19ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಆಫರ್‌ಗಳನ್ನು ವಿದ್ಯಾರ್ಥಿಗಳು ಸ್ವೀಕರಿಸಿದ್ದಾರೆʼʼ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Job Alert: ದ್ವಿತೀಯ ಪಿಯುಸಿ ಪಾಸಾದವರಿಗೆ ಗೋಲ್ಡನ್‌ ಚಾನ್ಸ್‌; 540 ಫಾರೆಸ್ಟ್‌ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ದೇಶಾದ್ಯಂತದ ಐಐಟಿಗಳು ತಮ್ಮ ಪ್ಲೇಸ್‌ಮೆಂಟ್‌ ಡ್ರೈವ್ ಅನ್ನು ಈಗಾಗಲೇ ಪ್ರಾರಂಭಿಸಿವೆ. ದೆಹಲಿ ಐಐಟಿಯ ಸುಮಾರು 480 ವಿದ್ಯಾರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ಲಭಿಸಿದೆ. ಗುವಾಹಟಿ ಐಐಟಿ ತನ್ನ ಪ್ಲೇಸ್‌ಮೆಂಟ್‌ ಡ್ರೈವ್‌ನ ಮೊದಲ ದಿನದಂದು 59 ಕಂಪನಿಗಳಿಂದ 164 ಆಫರ್‌ಗಳನ್ನು ಸ್ವೀಕರಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

Continue Reading

ಉದ್ಯೋಗ

Teachers Recruitment : ಪ್ರಾಥಮಿಕ ಶಾಲೆಯಲ್ಲಿ 2120 ದೈಹಿಕ ಶಿಕ್ಷಕರ ಹುದ್ದೆ ಭರ್ತಿಗೆ ತೀರ್ಮಾನ

Teachers Recruitment : ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಪ್ರಸ್ತುತ ಖಾಲಿ ಇರುವ ಪೈಕಿ 2120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿದ್ದು, ಆ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

VISTARANEWS.COM


on

Physical Education Teacher
Koo

ಬೆಂಗಳೂರು: ಸತತ 15 ವರ್ಷದಿಂದ ನೇಮಕಾತಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರಿಗೆ (Recruitment of Physical Education Teachers) ಈ ಸರ್ಕಾರದ ಅವಧಿಯಲ್ಲಿ ಗುಡ್‌ ನ್ಯೂಸ್‌ ಸಿಗಲಿದೆಯೇ? ಹೌದು ಎನ್ನುತ್ತದೆ ಶಿಕ್ಷಣ ಸಚಿವರ ಉತ್ತರ! ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಪ್ರಸ್ತುತ ಖಾಲಿ ಇರುವ ಪೈಕಿ 2120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು (Teachers Recruitment) ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿದ್ದು, ಆ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Education Minister Madhu Bangarappa) ಹೇಳಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಪದವೀಧರ ಕ್ಷೇತ್ರದ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಅವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಕೇಳಲಾದ ಚುಕ್ಕೆ ಗುರುತಿನ ಪ್ರಶ್ನೆಗೆ ಶಿಕ್ಷಣ ಸಚಿವರು ಈ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: Karnataka Live News : ಪಿಎಸ್‌ಐ ಪರೀಕ್ಷೆ ಮುಂದೂಡಿಕೆ; ಜ. 23ಕ್ಕೆ ಎಕ್ಸಾಂ ಎಂದ ಗೃಹ ಸಚಿವ ಪರಮೇಶ್ವರ್‌

ರಾಜ್ಯದಲ್ಲಿ ಸುಮಾರು 17 ವರ್ಷಗಳಿಂದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕಾತಿ ಮಾಡಿಲ್ಲ ಎಂದು ದೈಹಿಕ ಶಿಕ್ಷಣ ಶಿಕ್ಷಕರ ಸಂಘಟನೆಯವರು ಆರೋಪ ಮಾಡುತ್ತಿದ್ದಾರೆ. ಇದು ನಿಜವೇ ಎಂದು ಎಸ್‌.ವಿ. ಸಂಕನೂರ ಪ್ರಶ್ನೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ದ ಸರ್ಕಾರಿ ಪ್ರಾಥಮಿಕ ಶಾಲೆಗೆ ಸಂಬಂಧಿಸಿದಂತೆ 2008ನೇ ಸಾಲಿನಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಪ್ರೌಢಶಾಲಾ ವಿಭಾಗಕ್ಕೆ ಸಂಬಂಧಿಸಿದಂತೆ 2014-15ನೇ ಸಾಲಿಗೆ 148 ಹುದ್ದೆಗಳಿಗೆ ನೇಮಿಸಿಕೊಳ್ಳಲಾಗಿದೆ ಎಂದು ಉತ್ತರಿಸಿದ್ದಾರೆ.

ರಾಜ್ಯದಲ್ಲಿ ಒಟ್ಟು 41913 ಪ್ರಾಥಮಿಕ ಶಾಲೆಗಳಿದ್ದು, ಅವುಗಳಲ್ಲಿ ಮಂಜೂರಾದ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು 6772 ಆಗಿದೆ. ಆದರೆ, ಕಾರ್ಯನಿರತ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು 4127 ಆಗಿದೆ. ಹೀಗಾಗಿ ಇದರಲ್ಲಿ 2120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿದ್ದು, ಆ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಪ್ರೌಢಶಾಲೆಯಲ್ಲಿ ನೇಮಕಕ್ಕೆ ಸಚಿವರು ಹೇಳಿದ್ದೇನು?

ಇನ್ನು ಪ್ರೌಢಶಾಲಾ ವಿಭಾಗಕ್ಕೆ ಸಂಬಂಧಪಟ್ಟಂತೆ ರಾಜ್ಯದಲ್ಲಿ 4844 ಸರ್ಕಾರಿ ಪ್ರೌಢ ಶಾಲೆಗಳು ಇವೆ. ಇದರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಮಂಜೂರಾದ ಹುದ್ದೆ 5210 ಆಗಿದೆ. ರಾಜ್ಯ ಸರ್ಕಾರಿ ಪ್ರೌಢಶಾಲೆಗಳಲ್ಲಿರುವ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್‌ 1 ಶಿಕ್ಷಕರ ಕಾರ್ಯನಿರತ ಹುದ್ದೆಗಳ ಸಂಖ್ಯೆ 3589 ಆಗಿದೆ.

ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ವಿವಿಧ ವೃಂದದ ದೈಹಿಕ ಶಿಕ್ಷಣ ಶಿಕ್ಷಕರ 200 ಹುದ್ದೆಗಳು ಸೇರಿ ಒಟ್ಟು 2500 ಶಿಕ್ಷಕರುಗಳ ಹುದ್ದೆಗಳನ್ನು 15000 ಪದವೀಧರ ಪ್ರಾಥಮಿಕ ಶಾಲಾ ನೇಮಕಾತಿಯಲ್ಲಿ ಭರ್ತಿಯಾಗದೇ ಖಾಲಿ ಉಳಿದ ಹುದ್ದೆಗಳಿಗೆ ಹೊಂದಾಣಿಕೆ ಮಾಡಿಕೊಳ್ಳುವ ಷರತ್ತಿಗೆ ಒಳಪಟ್ಟು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರವು ಅನುಮತಿ ನೀಡಿರುತ್ತದೆ.

ಆದರೆ, ಸದರಿ 15000 ಹುದ್ದೆಗಳಲ್ಲಿ ಪ್ರೌಢಶಾಲಾ ಶಿಕ್ಷಕರುಗಳ ನೇಮಕಾತಿಗೆ 1648 ಹುದ್ದೆಗಳು ಮಾತ್ರ ಉಳಿದಿರುವ ಪ್ರಯುಕ್ತ ಪ್ರಸ್ತುತ ಸಾಲಿನಲ್ಲಿ 200 ದೈಹಿಕ ಶಿಕ್ಷಕರ ಹುದ್ದೆಯು ಸೇರಿದ್ದು ಒಟ್ಟು 2500 ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಪ್ರಸ್ತಾವನೆಯ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ನಿವೃತ್ತಿಯಿಂದ ತೆರವಾಗಿರುವ ದೈಹಿಕ ಶಿಕ್ಷಣ ಉಪನ್ಯಾಸಕರನ್ನು ಮಾಡಿಕೊಳ್ಳದಂತೆ ನೇಮಕಾತಿ ಆರ್ಥಿಕ ಇಲಾಖೆಯಿಂದ ಟಿಪ್ಪಣಿ ರೂಪದಲ್ಲಿ ಆದೇಶ ಬಂದಿದೆಯೇ? ಹಾಗಿದ್ದಲ್ಲಿ, ಈ ಕುರಿತು ಸರ್ಕಾರ ಕೈಗೊಂಡ ಕ್ರಮವೇನು? ಎಂದು ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ: Belagavi Winter Session: ಸದನದಲ್ಲಿ ಮುಟ್ಟಿನ ಶುಚಿತ್ವ ಚರ್ಚೆ; ಜನವರಿಯಿಂದ ಶಾಲೆಗಳಿಗೆ ನ್ಯಾಪ್‌ಕಿನ್‌

ಇಲ್ಲಿ ಪಿಡಿಎಫ್‌ ಪ್ರತಿಯನ್ನು ಲಗತ್ತಿಸಿದ್ದು, ಡೌನ್‌ಲೋಡ್‌ ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಪಡೆದುಕೊಳ್ಳಬಹುದು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ದೈಹಿಕ ಶಿಕ್ಷಣ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳದಂತೆ ಆರ್ಥಿಕ ಇಲಾಖೆಯು ಯಾವುದೇ ನಿರ್ಬಂಧವನ್ನು ವಿಧಿಸಿರುವುದಿಲ್ಲ. ಆದರೆ, ಆರ್ಥಿಕ ಇಲಾಖೆಯು ದಿನಾಂಕ:14/06/2023ರಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರ ಹುದ್ದೆಗೆ ಪ್ರಸ್ತುತ ಇರುವ 120 ವಿದ್ಯಾರ್ಥಿಗಳ ಕಾರ್ಯಭಾರದ ಮಾನದಂಡವನ್ನು 500 ವಿದ್ಯಾರ್ಥಿಗಳಿಗೆ ಹೆಚ್ಚಿಸಲು ನಿರ್ಣಯಿಸುವಂತೆ ಆರ್ಥಿಕ ಇಲಾಖೆಯು ಸಲಹೆ ನೀಡಿದ್ದು, ಈ ಬಗ್ಗೆ ಸರ್ಕಾರದಲ್ಲಿ ಪರಿಶೀಲನೆಯಲ್ಲಿರುತ್ತದೆ ಎಂದು ಹೇಳಿದ್ದಾರೆ.

Continue Reading
Advertisement
cleaning
ದೇಶ37 mins ago

ಒಳ ಚರಂಡಿ ಸ್ವಚ್ಛಗೊಳಿಸುವಾಗ 5 ವರ್ಷಗಳಲ್ಲಿ 443 ಕಾರ್ಮಿಕರ ಸಾವು!

Ajitabh Bachchan, Younger Brother Of Amitabh At The Archies Film Screening
ಬಾಲಿವುಡ್38 mins ago

The Archies Film: ನಿಮಗೆ ಅಮಿತಾಭ್‌ ತಮ್ಮ ಅಜಿತಾಭ್‌ ಗೊತ್ತಾ? ಅವರೇ ಇವರು!

MLA Basanagouda Patil Yatnal and CM Siddaramaiah
ಕರ್ನಾಟಕ41 mins ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ54 mins ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Khalistani Terrorist Pannun
ದೇಶ1 hour ago

ಸಂಸತ್ತಿನ ಮೇಲೆ ಡಿ.13ರಂದು ಉಗ್ರ ದಾಳಿ: ಬೆದರಿಕೆ ವಿಡಿಯೋ ಹರಿಬಿಟ್ಟ ಖಲಿಸ್ತಾನಿ ಉಗ್ರ ಪನ್ನುನ್‌

lidkar ambassador dolly dhananjay Officially
South Cinema1 hour ago

Dolly Dhananjay: ಸಂಭಾವನೆ ಪಡೆಯದೆ ಲಿಡ್ಕರ್‌ ರಾಯಭಾರಿಯಾದ ಡಾಲಿ ಧನಂಜಯ್‌!

Government Job Vistara Exclusive and CM Siddaramaiah
ಉದ್ಯೋಗ2 hours ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

kim
ವಿದೇಶ2 hours ago

Viral Video: ತುಂಬಿದ ಸಭೆಯಲ್ಲಿ ಕಣ್ಣೀರಿಟ್ಟ ಉತ್ತರ ಕೊರಿಯಾ ಸರ್ವಾಧಿಕಾರಿ!

narendra modi amit shah jp nadda
ದೇಶ2 hours ago

Assembly Election 2023: 3 ರಾಜ್ಯಗಳಲ್ಲೂ ಮುಖ್ಯಮಂತ್ರಿಯಾಗಿ ಬಿಜೆಪಿಯಿಂದ ಹೊಸ ಮುಖ

Vinay Gowda and sangeetha Bigg boss
ಬಿಗ್ ಬಾಸ್2 hours ago

BBK SEASON 10: ಪಾತ್ರದಿಂದ ಹೊರಗೆ ಬಂದ್ರೆ ಸಂಗೀತಾ ಟೀಮ್‌ಗೆ ʻಹುಚ್ಚೇಟುʼ ಕೊಡ್ತೀನಿ ಎಂದ ವಿನಯ್‌!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

MLA Basanagouda Patil Yatnal and CM Siddaramaiah
ಕರ್ನಾಟಕ41 mins ago

CM Siddaramaiah: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಪಕ್ಕ ಕುಳಿತಿದ್ದ ಐಸಿಸ್‌ ಸಂಪರ್ಕಿತ; ಸಾಕ್ಷಿ ಕೊಡುವೆನೆಂದ ಯತ್ನಾಳ್‌

We will catch the wild elephant that killed Arjuna
ಕರ್ನಾಟಕ54 mins ago

ಕಾರ್ಯಾಚರಣೆ ಸ್ಥಗಿತ; ಅರ್ಜುನನ ಕೊಂದ ಕಾಡಾನೆಯನ್ನು ಹಿಡಿದೇ ತೀರುವೆ-ಮಾವುತನ ಶಪಥ!

Government Job Vistara Exclusive and CM Siddaramaiah
ಉದ್ಯೋಗ2 hours ago

Government Job: 2.47 ಲಕ್ಷ ಹುದ್ದೆ ಖಾಲಿ: ಸದನದಲ್ಲಿ ಸದ್ದು ಮಾಡಿದ ವಿಸ್ತಾರ EXCLUSIVE ಸ್ಟೋರಿ

Government Job Vistara Exclusive
ಉದ್ಯೋಗ3 hours ago

Government Job : ‘ಖಾಲಿ’ ಸರ್ಕಾರದಲ್ಲಿ ಉದ್ಯೋಗಕ್ಕಿಲ್ಲ ಗ್ಯಾರಂಟಿ; ಭರ್ತಿಯಾಗದ 2.47 ಲಕ್ಷ ಹುದ್ದೆ!

read your daily horoscope predictions for december 6 2023
ಪ್ರಮುಖ ಸುದ್ದಿ10 hours ago

Dina Bhavishya : ಈ ರಾಶಿಯವರು ಸುಮ್ಮನಿದ್ದರೂ ನಡೆಯುತ್ತೆ ಕಲಹ!

CM Siddaramaiah and Black magic
ಕರ್ನಾಟಕ18 hours ago

Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

R Ashok in assembly session
ಕರ್ನಾಟಕ18 hours ago

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

R Ashok
ಕರ್ನಾಟಕ18 hours ago

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

ಟ್ರೆಂಡಿಂಗ್‌