Job Alert: ಅಂಚೆ ಇಲಾಖೆಯಿಂದ ಗುಡ್‌ನ್ಯೂಸ್‌: 44,228 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ; ಅಪ್ಲೈ ಮಾಡುವ ವಿಧಾನ ಇಲ್ಲಿದೆ - Vistara News

ಉದ್ಯೋಗ

Job Alert: ಅಂಚೆ ಇಲಾಖೆಯಿಂದ ಗುಡ್‌ನ್ಯೂಸ್‌: 44,228 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

Job Alert: ಭಾರತೀಯ ಅಂಚೆ ಇಲಾಖೆ ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 44,228 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಗ್ರಾಮೀಣ ಡಾಕ್ ಸೇವಕ್‌, ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ಅಸಿಸ್ಟಂಟ್‌ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್‌ 5. ಇಂದಿನಿಂದಲೇ (ಜುಲೈ 15) ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಒಂದೊಳ್ಳೆ ಉದ್ಯೋಗ ಹುಡುಕುತ್ತಿರುವವರಿಗೆ ಭಾರತೀಯ ಅಂಚೆ ಇಲಾಖೆ (India Post Office) ಗುಡ್‌ನ್ಯೂಸ್‌ ನೀಡಿದೆ. ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 44,228 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ (India Post GDS Recruitment 2024). ಗ್ರಾಮೀಣ ಡಾಕ್ ಸೇವಕ್‌, ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ಅಸಿಸ್ಟಂಟ್‌ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್‌ 5. ಇಂದಿನಿಂದಲೇ (ಜುಲೈ 15) ಅರ್ಜಿ ಸಲ್ಲಿಸಬಹುದು (Job Alert).

ಕರ್ನಾಟಕದಲ್ಲಿಯೂ ಇದೆ ಹುದ್ದೆ

ಕರ್ನಾಟಕದ ಜತೆಗೆ ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ದೆಹಲಿ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ಜಾರ್ಖಂಡ್, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಈಶಾನ್ಯ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಈ ನೇಮಕಾತಿ ನಡೆಯಲಿದೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಭಾರತದ ಯಾವುದೇ ಶಿಕ್ಷಣ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆಯಲ್ಲಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಇಂಗ್ಲಿಷ್‌ ಮತ್ತು ಗಣಿತ ವಿಷಯವನ್ನು ಒಳಗೊಂಡಿರುವುದು ಕಡ್ಡಾಯ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ ಎಂದು ಪ್ರಕಟಣೆ ತಿಳಿಸಿದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ / ಒಬಿಸಿ ವಿಭಾಗದ ಅಭ್ಯರ್ಥಿಗಳು 100 ರೂ. ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ಅಂಗವಿಕಲ ವಿಭಾಗದ ಮತ್ತು ಎಲ್ಲ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ.

ಆಯ್ಕೆ ವಿಧಾನ

10ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 10,000 ರೂ. – 29,380 ರೂ. ಮಾಸಿಕ ವೇತನವಿದೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

India Post GDS Recruitment 2024 ಅಧಿಕೃತ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://indiapostgdsonline.gov.in/Reg_validation.aspx)
  • ಇಮೇಲ್‌ ಐಡಿ, ಫೋನ್‌ ನಂಬರ್‌ ನೀಡಿ ಹೆಸರು ನಮೂದಿಸಿ.
  • ರಚಿಸಲಾದ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ಅಪ್ಲಿಕೇಷನ್‌ ಫಾರಂನಲ್ಲಿ ಕಂಡುಬರುತ್ತದೆ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ನಿಮ್ಮ ಇತ್ತೀಚಿನ ಫೋಟೊ ಮತ್ತು ಸಹಿಯನ್ನು ಸೂಕ್ತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ ವಿಳಾಸ: https://indiapostgdsonline.gov.in/ಕ್ಕೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಪದವೀಧರರಿಗೆ ಗುಡ್‌ನ್ಯೂಸ್‌; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: HALನಲ್ಲಿದೆ ವಿವಿಧ ಹುದ್ದೆ; ಬೆಂಗಳೂರಿನಲ್ಲಿ ಉದ್ಯೋಗ ಹುಡುಕುವವರಿಗೆ ಉತ್ತಮ ಅವಕಾಶ

Job Alert: ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಟೆಕ್ನಿಷಿಯನ್, ಅಸಿಸ್ಟಂಟ್‌, ಫಿಟ್ಟರ್‌ ಸೇರಿ 28 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಡಿಪ್ಲೋಮಾ, ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜುಲೈ 18.

VISTARANEWS.COM


on

Job Alert
Koo

ಬೆಂಗಳೂರು: ಬೆಂಗಳೂರಿನಲ್ಲಿ ಒಂದೊಳ್ಳೆ ಉದ್ಯೋಗ ಹೊಂದಬೇಕು ಎಂದು ಬಯಸಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (Hindustan Aeronautics Limited)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (HAL India Recruitment 2024). ಟೆಕ್ನಿಷಿಯನ್, ಅಸಿಸ್ಟಂಟ್‌, ಫಿಟ್ಟರ್‌ ಸೇರಿ 28 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಡಿಪ್ಲೋಮಾ, ಐಟಿಐ ಪಾಸಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಜುಲೈ 18 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಡಿಪ್ಲೊಮಾ ಟೆಕ್ನಿಷಿಯನ್ (ಮೆಕ್ಯಾನಿಕಲ್) – 9 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಎಂಜಿನಿಯರಿಂಗ್
ಡಿಪ್ಲೊಮಾ ಟೆಕ್ನಿಷಿಯನ್ (ಎಲೆಕ್ಟ್ರಿಕಲ್)- 2 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್
ಅಸಿಸ್ಟೆಂಟ್ (ಸಿವಿಲ್)- 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ ಇನ್ ಸಿವಿಲ್ ಎಂಜಿನಿಯರಿಂಗ್
ಟೆಕ್ನಿಷಿಯನ್ (ಫಿಟ್ಟರ್) – 7 ಹುದ್ದೆ, ವಿದ್ಯಾರ್ಹತೆ: ಐಟಿಐ
ಟೆಕ್ನಿಷಿಯನ್ (ಎಲೆಕ್ಟ್ರಿಕಲ್) – 5 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್ ಎಲೆಕ್ಟ್ರಿಷಿಯನ್
ಟೆಕ್ನಿಷಿಯನ್ (ಮೆಷಿನಿಸ್ಟ್) -2 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್ ಮೆಷಿನಿಸ್ಟ್
ಟರ್ನರ್‌ನಲ್ಲಿ ಟೆಕ್ನಿಷಿಯನ್ (ಫಿಟ್ಟರ್) -1 ಹುದ್ದೆ, ವಿದ್ಯಾರ್ಹತೆ: ಐಟಿಐ
ಟೆಕ್ನಿಷಿಯನ್ (ಎಲೆಕ್ಟ್ರಾನಿಕ್ಸ್-ಮೆಕ್ಯಾನಿಕ್ಸ್) -1 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್ ಎಲೆಕ್ಟ್ರಾನಿಕ್ಸ್-ಮೆಕ್ಯಾನಿಕ್ಸ್

ವಯೋಮಿತಿ

ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ-ಎನ್‌ಸಿಎಲ್‌ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ (ಸಾಮಾನ್ಯ)-10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ)-13 ವರ್ಷ, ಪಿಡಬ್ಲ್ಯುಬಿಡಿ (ಎಸ್‌ಸಿ/ಎಸ್‌ಟಿ)-15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ, ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ವಿವಿಧ ಹುದ್ದೆಗಳಿಗೆ ಅನುಗುಣವಾಗಿ 22,000 ರೂ.-46,511 ರೂ. ಮಾಸಿಕ ವೇತನವಿದೆ. ಆಯ್ಕೆಯಾದವರಿಗೆ 1 ವರ್ಷ ಅವಧಿಯ ತರಬೇತಿ ನೀಡಲಾಗುತ್ತದೆ. ಉದ್ಯೋಗದ ಸ್ಥಳ: ಬೆಂಗಳೂರು.

HAL India Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://halardc.formflix.com/apply-online)
  • ಅಗತ್ಯ ಮಾಹಿತಿ, ಇಮೇಲ್‌ ವಿಳಾಸ ನಮೂದಿಸಿ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಹೆಸರು, ವಿಳಾಸ, ಶೈಕ್ಷಣಿಕ ಮಾಹಿಸಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಫೋಟೊ ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ: https://www.hal-india.co.in/ಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಪದವೀಧರರಿಗೆ ಗುಡ್‌ನ್ಯೂಸ್‌; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Continue Reading

ಮನಿ-ಗೈಡ್

Employees’ Provident Fund: ಪಿಂಚಣಿ ಲಾಭ ಹೆಚ್ಚಳಕ್ಕಾಗಿ EPFOಗೆ ಸಂಬಂಧಿಸಿ ವೇತನ ಮಿತಿ ಏರಿಸಲು ಚಿಂತನೆ

ಕೇಂದ್ರ ಸರ್ಕಾರವು ನೌಕರರ ಭವಿಷ್ಯ ನಿಧಿ (Employees’ Provident Fund) ಸಂಸ್ಥೆ ಮತ್ತು ನೌಕರರ ರಾಜ್ಯ ವಿಮಾ ನಿಗಮ (ESIC) ಗಳಿಗೆ ವೇತನ ಮಿತಿಯನ್ನು ಹೆಚ್ಚಿಸಲು ಯೋಜನೆ ಮಾಡುತ್ತಿದೆ. ವೇತನ ಮಿತಿ ಕ್ರಮವಾಗಿ 15,000 ರೂ ಮತ್ತು 21,000 ರೂ ಆಗಿದ್ದು, ಇದನ್ನು 25,000 ರೂ. ಗೆ ಹೆಚ್ಚಿಸಲು ಸರ್ಕಾರ ಯೋಜನೆ ಮಾಡುತ್ತಿದೆ ಎನ್ನಲಾಗಿದೆ.

VISTARANEWS.COM


on

By

Employees' Provident Fund
Koo

ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು (Employees’ Provident Fund) ಭಾರತದ (India) ಸಾಮಾಜಿಕ ಭದ್ರತಾ ರಚನೆಯ ಮೇಲೆ ಪರಿಣಾಮ ಬೀರುವ ಬಹುದೊಡ್ಡ ಕ್ರಮಕ್ಕೆ ಮುಂದಾಗಿದೆ. ಕೇಂದ್ರ ಸರ್ಕಾರವು (central govt) ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ಮತ್ತು ನೌಕರರ ರಾಜ್ಯ ವಿಮಾ ನಿಗಮ (ESIC) ಗಳಿಗೆ ವೇತನ ಮಿತಿಯನ್ನು ಹೆಚ್ಚಿಸಲು ಯೋಜನೆ ಮಾಡುತ್ತಿದೆ ಎನ್ನಲಾಗಿದೆ.

ನೌಕರರ ಭವಿಷ್ಯ ನಿಧಿ ಸಂಸ್ಥೆ ಮತ್ತು ಉದ್ಯೋಗಿಗಳ ರಾಜ್ಯ ವಿಮಾ ನಿಗಮಗಳ (ಇಎಸ್‌‌ಐ) ವೇತನ ಮಿತಿ ಈಗ ಕ್ರಮವಾಗಿ 15,000 ರೂ ಮತ್ತು 21,000 ರೂ ಆಗಿದ್ದು, ಇದನ್ನು 25,000 ರೂ. ಗೆ ಹೆಚ್ಚಿಸಲು ಸರ್ಕಾರ ಚಿಂತನೆ ಮಾಡುತ್ತಿದೆ. ಔಪಚಾರಿಕ ವಲಯದ ಉದ್ಯೋಗಿಗಳೆಂದು ವರ್ಗೀಕರಿಸಲಾದ ಕಾರ್ಮಿಕರ ಸಾಮಾಜಿಕ ಭದ್ರತೆಗಾಗಿ ಈ ಕ್ರಮ ಕೈಗೊಳ್ಳಲಾಗುವುದು ಎನ್ನಲಾಗಿದೆ. ಈಗ 15 ಸಾವಿರ ಮಿತಿ ಇರುವುದರಿಂದ 1250 ರೂ. ಮಾತ್ರ ಪಿಂಚಣಿ ಪ್ರಯೋಜನಗಳ ಖಾತೆಗೆ ಜಮೆಯಾಗುತ್ತದೆ. ಇದನ್ನು 25 ಸಾವಿರ ರೂ.ಗೆ ಏರಿಸಿದರೆ ಉದ್ಯೋಗಿಗಳು ನಿವೃತ್ತರಾದಾಗ ಸಿಗುವ ಮೊತ್ತವೂ ಗಣನೀಯವಾಗಿ ಏರುತ್ತದೆ.

20 ಅಥವಾ ಅದಕ್ಕಿಂತ ಹೆಚ್ಚಿನ ಉದ್ಯೋಗಿಗಳನ್ನು ಹೊಂದಿರುವ ಕಂಪೆನಿಗಳಲ್ಲಿ ಉದ್ಯೋಗದಲ್ಲಿರುವ ವ್ಯಕ್ತಿಗಳ ಅರ್ಹತೆಯನ್ನು ನಿರ್ಧರಿಸುವ ಗರಿಷ್ಠ ಗಳಿಕೆಯ ಮಿತಿ ಮತ್ತು ವಯಸ್ಸಿನ ನವೀಕರಣ ಮಾಡಿಲ್ಲ. ಇಪಿಎಫ್ ಒ ಗಾಗಿ ಕೊನೆಯ ಪರಿಷ್ಕರಣೆಯು 2014ರಲ್ಲಿ ನಡೆದಿತ್ತು ಮತ್ತು ಇಎಸ್ ಇಸಿಗಾಗಿ 2017ರಲ್ಲಿ ನವೀಕರಣ ನಡೆಸಲಾಗಿತ್ತು.
ಈ ವರ್ಷದ ಏಪ್ರಿಲ್‌ನಲ್ಲಿ ಇಪಿಎಫ್‌ಒ ದಾಖಲೆಯ 18.92 ಲಕ್ಷ ಸದಸ್ಯರನ್ನು ಸೇರಿಸಿಕೊಂಡಿದೆ. ಏಪ್ರಿಲ್ 2018 ರಲ್ಲಿ ಮೊದಲ ವೇತನದಾರರ ಡೇಟಾವನ್ನು ಪ್ರಕಟಿಸಿದ ಅನಂತರ ಇದು ಗರಿಷ್ಠ ದಾಖಲೆಯಾಗಿದೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದ ಅಂಕಿಅಂಶಗಳು ತಿಳಿಸಿವೆ.

ನಿವ್ವಳ ಸದಸ್ಯರ ಸಂಖ್ಯೆಯು ಮಾರ್ಚ್ 2024 ರ ಅನುಗುಣವಾದ ಅಂಕಿ ಅಂಶಕ್ಕಿಂತ ಶೇ. 31.29ರಷ್ಟು ಹೆಚ್ಚಾಗಿದೆ ಎಂದು ತಾತ್ಕಾಲಿಕ ವೇತನದಾರರ ಡೇಟಾ ತೋರಿಸುತ್ತದೆ. ವರ್ಷದಿಂದ ವರ್ಷಕ್ಕೆ ಹೋಲಿಸಿದರೆ ನಿವ್ವಳ ಸದಸ್ಯರ ಸೇರ್ಪಡೆಯಲ್ಲಿ ಶೇ.10 ರಷ್ಟು ಬೆಳವಣಿಗೆಯಾಗಿದೆ. ಸದಸ್ಯತ್ವದಲ್ಲಿನ ಈ ಹೆಚ್ಚಳವು ಹೆಚ್ಚಿದ ಉದ್ಯೋಗಾವಕಾಶಗಳು, ಉದ್ಯೋಗಿಗಳ ಪ್ರಯೋಜನಗಳ ಬಗ್ಗೆ ಹೆಚ್ಚುತ್ತಿರುವ ಅರಿವು ಮತ್ತು ಇಪಿಎಫ್ ಓ ​​ನ ಕಾರ್ಯಕ್ರಮಗಳ ಪರಿಣಾಮಕಾರಿತ್ವಕ್ಕೆ ಉದಾಹರಣೆಯಾಗಿದೆ ಎಂದು ಕೇಂದ್ರ ಸಚಿವಾಲಯ ಹೇಳಿದೆ.


ಹೊಸ ಸದಸ್ಯರ ಸಂಖ್ಯೆಯಲ್ಲಿ ಹೆಚ್ಚಳ

ಏಪ್ರಿಲ್ 2024ರಲ್ಲಿ ಸುಮಾರು 8.87 ಲಕ್ಷ ಹೊಸ ಸದಸ್ಯರು ಸೇರಿಕೊಂಡಿದ್ದಾರೆ ಎಂದು ಡೇಟಾ ಸೂಚಿಸುತ್ತದೆ. ಡೇಟಾದ ಗಮನಾರ್ಹ ಅಂಶವೆಂದರೆ 18- 25 ವಯೋಮಾನದವರ ಪ್ರಾಬಲ್ಯ ಹೆಚ್ಚಾಗಿದೆ. 2024ರ ಏಪ್ರಿಲ್ ನಲ್ಲಿ ಸೇರಿಸಲಾದ ಸದಸ್ಯರ ಪೈಕಿ ಇವರ ಪ್ರಮಾಣ ಶೇ. 55.5ರಷ್ಟಿದೆ.

ಮರು ಸೇರ್ಪಡೆ

ವೇತನದಾರರ ಅಂಕಿಅಂಶಗಳ ಪ್ರಕಾರ ಸರಿಸುಮಾರು 14.53 ಲಕ್ಷ ಸದಸ್ಯರು ನಿರ್ಗಮಿಸಿದರು ಮತ್ತು ಅನಂತರ ಇಪಿಎಫ್‌ಒಗೆ ಮರುಸೇರ್ಪಡೆಯಾದರು. ಮಾರ್ಚ್ 2024 ರ ಹಿಂದಿನ ತಿಂಗಳಿಗೆ ಹೋಲಿಸಿದರೆ ಈ ಅಂಕಿ ಅಂಶವು ಶೇ. 23.15 ರಷ್ಟು ಹೆಚ್ಚಳವನ್ನು ತೋರಿಸಿದೆ. ಈ ಸದಸ್ಯರು ತಮ್ಮ ಉದ್ಯೋಗಗಳನ್ನು ಬದಲಾಯಿಸಿದರು ಮತ್ತು ಇಪಿಎಫ್ ಒ ​​ವ್ಯಾಪ್ತಿಗೆ ಒಳಪಡುವ ಸಂಸ್ಥೆಗಳಿಗೆ ಮರು ಸೇರ್ಪಡೆಗೊಂಡರು ಮತ್ತು ಅಂತಿಮ ಇತ್ಯರ್ಥಕ್ಕೆ ಅರ್ಜಿ ಸಲ್ಲಿಸುವ ಬದಲು ತಮ್ಮ ಸಂಗ್ರಹಣೆಯನ್ನು ವರ್ಗಾಯಿಸಲು ನಿರ್ಧರಿಸಿದರು. ಹೀಗಾಗಿ, ರಕ್ಷಣೆ ದೀರ್ಘಾವಧಿಯ ಆರ್ಥಿಕ ಯೋಗಕ್ಷೇಮ ಮತ್ತು ಅವರ ಸಾಮಾಜಿಕ ಭದ್ರತೆ ರಕ್ಷಣೆಯನ್ನು ವಿಸ್ತರಿಸುವುದು.

ಮಹಿಳಾ ಸದಸ್ಯರು

ವೇತನದಾರರ ದತ್ತಾಂಶದ ಲಿಂಗವಾರು ವಿಶ್ಲೇಷಣೆಯು 8.87 ಲಕ್ಷ ಹೊಸ ಸದಸ್ಯರಲ್ಲಿ ಸುಮಾರು 2.49 ಲಕ್ಷ ಹೊಸ ಮಹಿಳಾ ಸದಸ್ಯರನ್ನು ಹೊಂದಿದೆ.

ತಿಂಗಳಿನಲ್ಲಿ ನಿವ್ವಳ ಮಹಿಳಾ ಸದಸ್ಯರ ಸೇರ್ಪಡೆಯು ಸುಮಾರು 3.91 ಲಕ್ಷದಷ್ಟಿತ್ತು, ಇದು ಮಾರ್ಚ್ 2024 ರ ಹಿಂದಿನ ತಿಂಗಳಿಗೆ ಹೋಲಿಸಿದರೆ ಸರಿಸುಮಾರು ಶೇ. 35.06ರಷ್ಟು ಹೆಚ್ಚಳವನ್ನು ತೋರಿಸಿದೆ. ಮಹಿಳಾ ಸದಸ್ಯರ ಹೆಚ್ಚಳವು ಹೆಚ್ಚು ಅಂತರ್ಗತ ಮತ್ತು ವೈವಿಧ್ಯಮಯ ಕಡೆಗೆ ವ್ಯಾಪಕ ಬದಲಾವಣೆಯನ್ನು ಸೂಚಿಸುತ್ತದೆ.

ಮಹಾರಾಷ್ಟ್ರ ಮುಂಚೂಣಿಯಲ್ಲಿ

ವೇತನದಾರರ ದತ್ತಾಂಶದ ರಾಜ್ಯವಾರು ವಿಶ್ಲೇಷಣೆಯು ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ಗುಜರಾತ್ ಮತ್ತು ಹರಿಯಾಣದ ಐದು ರಾಜ್ಯಗಳಲ್ಲಿ ನಿವ್ವಳ ಸದಸ್ಯರ ಸೇರ್ಪಡೆ ಅತ್ಯಧಿಕವಾಗಿದೆ ಎಂದು ಸೂಚಿಸುತ್ತದೆ.

ಇದನ್ನೂ ಓದಿ: Forex Reserves: ವಿದೇಶಿ ವಿನಿಮಯ ಸಂಗ್ರಹದಲ್ಲಿ 43,081 ಕೋಟಿ ರೂ. ಏರಿಕೆ; ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ಒಟ್ಟು ಮೌಲ್ಯ

ಈ ರಾಜ್ಯಗಳು ನಿವ್ವಳ ಸದಸ್ಯರ ಸೇರ್ಪಡೆಯಲ್ಲಿ ಸುಮಾರು ಶೇ. 58.3ರಷ್ಟನ್ನು ಹೊಂದಿದ್ದು, ತಿಂಗಳಲ್ಲಿ ಒಟ್ಟು 11.03 ಲಕ್ಷ ನಿವ್ವಳ ಸದಸ್ಯರನ್ನು ಸೇರಿಸುತ್ತವೆ. ಎಲ್ಲಾ ರಾಜ್ಯಗಳಲ್ಲಿ, ಮಹಾರಾಷ್ಟ್ರವು ತಿಂಗಳಲ್ಲಿ ಶೇ. 20.42 ರಷ್ಟು ನಿವ್ವಳ ಸದಸ್ಯರನ್ನು ಸೇರಿಸುವ ಮೂಲಕ ಮುಂಚೂಣಿಯಲ್ಲಿದೆ.

ಒಟ್ಟು ನಿವ್ವಳ ಸದಸ್ಯತ್ವದಲ್ಲಿ ಸುಮಾರು ಶೇ. 41.41 ರಷ್ಟು ಸೇರ್ಪಡೆಯು ಪರಿಣಿತ ಸೇವೆಗಳಿಂದ ಅಂದರೆ ಮಾನವಶಕ್ತಿ ಪೂರೈಕೆದಾರರು, ಸಾಮಾನ್ಯ ಗುತ್ತಿಗೆದಾರರು, ಭದ್ರತಾ ಸೇವೆಗಳು, ವಿವಿಧ ಚಟುವಟಿಕೆಗಳನ್ನು ಒಳಗೊಂಡಿರುತ್ತದೆ.

Continue Reading

ನೌಕರರ ಕಾರ್ನರ್

KSET- 2024: ಕೆಸೆಟ್‌ 2024ಕ್ಕೆ ಅರ್ಜಿ ಆಹ್ವಾನ; ಪರೀಕ್ಷೆ ದಿನಾಂಕ, ಶುಲ್ಕ, ಅರ್ಹತೆಯ ಸಂಪೂರ್ಣ ಮಾಹಿತಿ ಇಲ್ಲಿದೆ

KSET- 2024: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್) – 2024ಕ್ಕೆ ಜುಲೈ 22ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್‌ 24ರಂದು ಕೆಸೆಟ್‌ ಪರೀಕ್ಷೆ ನಡೆಯಲಿದೆ.

VISTARANEWS.COM


on

KSET-2024
Koo

ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್) – 2024ಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ರಾಜ್ಯ ಸರ್ಕಾರದ ನಿರ್ದೇಶನದಂತೆ ನವೆಂಬರ್‌ 24ರಂದು ಕೆಸೆಟ್‌ ಪರೀಕ್ಷೆ (KSET- 2024) ನಡೆಸುವುದಾಗಿ ಕೆಇಎ ತಿಳಿಸಿದೆ.

ಅಭ್ಯರ್ಥಿಗಳು ಕೆಸೆಟ್-2024ಕ್ಕೆ ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದ ಅರ್ಹ ಅಭ್ಯರ್ಥಿಗಳು KEA ವೆಬ್ ಸೈಟ್ http://kea.kar.nic.in ಅನ್ನು ಪ್ರವೇಶಿಸುವ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದಾಗಿದೆ. ಕೆಸೆಟ್ (KSET) 2024ರ ಪರೀಕ್ಷೆಯನ್ನು 41 ವಿಷಯಗಳಲ್ಲಿ ನಡೆಸಲಾಗುತ್ತಿದ್ದು, ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು, ಕರ್ನಾಟಕ ರಾಜ್ಯದ ಯಾವುದೇ ವಿಶ್ವವಿದ್ಯಾನಿಲಯ, ಪ್ರಥಮ ದರ್ಜೆ ಪದವಿ ಕಾಲೇಜು, ಉನ್ನತ ಶಿಕ್ಷಣ ಸಂಸ್ಥೆ (ಸರ್ಕಾರಿ, ಅನುದಾನಿತ ಮತ್ತು ಖಾಸಗಿ) ಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹರಾಗಿರುತ್ತಾರೆ.

ಕೆಸೆಟ್-2024 ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ

1) ಅಧಿಸೂಚನೆ ಹೊರಡಿಸಿದ ದಿನಾಂಕ: ಜುಲೈ 13
2) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ: ಜುಲೈ 22
3) ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್‌ 22
4) ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಆಗಸ್ಟ್‌ 26
5) ಪರೀಕ್ಷಾ ದಿನಾಂಕ- ನವೆಂಬರ್‌ 24

ವಯೋಮಿತಿ:

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ತೆಗೆದುಕೊಳ್ಳಲು ಗರಿಷ್ಠ ವಯೋಮಿತಿ ಇರುವುದಿಲ್ಲ.

ಇದನ್ನೂ ಓದಿ | Job Alert: 2000 ಲೈನ್‌ಮೆನ್‌ಗಳ ನೇಮಕಕ್ಕೆ 15 ದಿನಗಳಲ್ಲಿ ಅಧಿಸೂಚನೆ; ಸಚಿವ ಕೆ.ಜೆ. ಜಾರ್ಜ್‌ ಘೋಷಣೆ

ಪರೀಕ್ಷಾ ಶುಲ್ಕ, ಪಾವತಿಸುವ ವಿಧಾನ

1) ಪರೀಕ್ಷಾ ಶುಲ್ಕ :
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಹಾಗೂ ಇತರೆ ರಾಜ್ಯದ ಅಭ್ಯರ್ಥಿಗಳಿಗೆ: 1,000 ರೂ.
ಪ್ರವರ್ಗ-I, ಎಸ್‌ಸಿ, ಎಸ್‌ಟಿ, ವಿಶೇಷಚೇತನರು, ಮತ್ತು ತೃತೀಯ ಲಿಂಗ ಅಭ್ಯರ್ಥಿಗಳಿಗೆ: 700 ರೂ.

2) ಶುಲ್ಕ ಪಾವತಿಸುವ ವಿಧಾನ:
ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಶುಲ್ಕ ವಿನಾಯಿತಿಯನ್ನು ವಿಶೇಷಚೇತನರಾದ ಪ್ರವರ್ಗ-I, ಎಸ್‌ಸಿ, ಎಸ್‌ಟಿ, ತೃತೀಯ ಲಿಂಗ ಅಭ್ಯರ್ಥಿಗಳಿಗೆ ನೀಡಲಾಗುತ್ತದೆ. (Medical Certificate with 40% or more disability )

ಪರೀಕ್ಷಾ ವಿಧಾನ, ಪರೀಕ್ಷಾ ದಿನಾಂಕ

ಕೆಸೆಟ್ (KSET) ಪರೀಕ್ಷೆಯಲ್ಲಿ ಎರಡು ಪ್ರಶ್ನೆಪತ್ರಿಕೆಗಳಿರುತ್ತವೆ. ಎರಡು ಪತ್ರಿಕೆಗಳು ಸಹ ಬಹು ಆಯ್ಕೆ ಪ್ರಶ್ನೆಗಳನ್ನು ಒಳಗೊಂಡಿರುತ್ತವೆ. ಪರೀಕ್ಷೆಯು ನವೆಂಬರ್ 24 ರಂದು ಒಂದು ಅವಧಿಯಲ್ಲಿ ಈ ಕೆಳಕಂಡಂತೆ ನಡೆಯುವುದು.

ಪತ್ರಿಕೆ-1: 50 ಪ್ರಶ್ನೆ (100 ಅಂಕ)
ಪತ್ರಿಕೆ-2: 100 ಪ್ರಶ್ನೆ (200 ಅಂಕ)
(ಸಮಯ-ಬೆಳಗ್ಗೆ 10ರಿಂದ ಮ.1 ಗಂಟೆವರೆಗೆ)

ಫಲಿತಾಂಶ ಪ್ರಕಟಣೆಯ ವಿಧಾನ

ಯುಜಿಸಿ ಮಾರ್ಗಸೂಚಿಗಳ ಪ್ರಕಾರ KSETನ ಮಾನದಂಡವು UGC-NETನ ಮಾನದಂಡದ ಪ್ರಕಾರವಾಗಿರುತ್ತದೆ. ಸಹಾಯಕ ಪ್ರಾಧ್ಯಾಪಕರ ಅರ್ಹತೆಗಾಗಿ ಅಭ್ಯರ್ಥಿಗಳು ಪೇಪರ್-I ಮತ್ತು ಪೇಪರ್-II ರ ಪತ್ರಿಕೆಗಳ ಒಟ್ಟು ಅಂಕಗಳಲ್ಲಿ ಕೆಳಗೆ ನಿರ್ದಿಷ್ಟಪಡಿಸಿದ ಕನಿಷ್ಠ ಅಂಕಗಳನ್ನು ಪಡೆಯಬೇಕು.

ಸಾಮಾನ್ಯ ವರ್ಗ(GM): ಎರಡೂ ಪತ್ರಿಕೆಗಳಲ್ಲೂ ಸೇರಿ ಒಟ್ಟು ಶೇ. 40 ಅಂಕಗಳು
ಎಸ್‌ಸಿ. ಎಸ್‌ಟಿ, ಪ್ರವರ್ಗ-1, 2ಎ, 2ಬಿ, 3ಎ, 3ಬಿ, ವಿಶೇಷಚೇತನರು, ತೃತೀಯ ಲಿಂಗಿಗಳು: ಎರಡೂ ಪತ್ರಿಕೆಗಳಲ್ಲೂ ಸೇರಿ ಶೇ.35 ಅಂಕಗಳು

ಅರ್ಹತಾ ನಿಬಂಧನೆಗಳು

1) ಅಭ್ಯರ್ಥಿಗಳು ಯುಜಿಸಿಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯ, ಉನ್ನತ ಶಿಕ್ಷಣ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಅಥವಾ ಸಮಾನವಾದ ಪರೀಕ್ಷೆಗಳಲ್ಲಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಶೇ.55% ರಷ್ಟು ಅಂಕಗಳನ್ನು (ಪೂರ್ಣಾಂಕಿತ ಗೊಳಿಸಿರಬಾರದು) ಪಡೆದಿರಬೇಕು. ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಇತರೆ ಹಿಂದುಳಿದ ಅಭ್ಯರ್ಥಿಗಳು (ಪ್ರವರ್ಗ-1, IIA, IIB, IIIA, IIIB), ವಿಕಲಚೇತನರು (PwD) ಮತ್ತು ತೃತೀಯ ಲಿಂಗ ಗುಂಪಿಗೆ ಸೇರಿದ ಅಭ್ಯರ್ಥಿಗಳು ಶೇ.50% ರಷ್ಟು (ಪೂರ್ಣಾಂಕಿತ ಗೊಳಿಸಿರಬಾರದು) ಅಂಕಗಳನ್ನು ಪಡೆದಿರಬೇಕು.

2) ಸ್ನಾತಕೋತ್ತರ ಪದವಿ ಪಡೆದವರು ಹಾಗೂ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ (ಪ್ರಥಮ ಮತ್ತು ದ್ವಿತೀಯ) ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಕೆಸೆಟ್ ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹರಾಗಿರುತ್ತಾರೆ. ಆದರೆ, ಪ್ರಸ್ತುತ ವ್ಯಾಸಾಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ಪರೀಕ್ಷೆ ತೆಗೆದುಕೊಳ್ಳಲು ತಾತ್ಕಾಲಿಕವಾಗಿ ಮಾತ್ರ ಪ್ರದೇಶ ನೀಡಲಾಗುವುದು. ಅವರು ಸ್ನಾತಕೋತ್ತರ ಪದವಿ ಅಥವಾ ಸಮಾನವಾದ ಪರೀಕ್ಷೆಯನ್ನು, ಸಾಮಾನ್ಯ ವರ್ಗದವರು ಶೇ.55% ರಷ್ಟು ಹಾಗೂ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST), ಪ್ರವರ್ಗ-I, IIA, IIB, IIIA, ಮತ್ತು IIIB, ವಿಕಲಚೇತನರು (PwD) ಮತ್ತು ತೃತೀಯ ಲಿಂಗದ ಅಭ್ಯರ್ಥಿಗಳು, ಶೇ. 50% ರಷ್ಟು ಅಂಕ ಪಡೆದು, ಅರ್ಹತೆ ಹೊಂದಿ ಕೆಸೆಟ್ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ ದಿನಾಂಕದಿಂದ ಎರಡು ವರ್ಷದೊಳಗಾಗಿ ಅವರ ಸ್ನಾತಕೋತ್ತರ ಪದವಿಯ ಅಂಕಪಟ್ಟಿಗಳನ್ನು ಸಲ್ಲಿಸಿದರೆ ಮಾತ್ರ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪ್ರಮಾಣ ಪತ್ರ ಪಡೆಯಬಹುದು. ಇಲ್ಲವಾದಲ್ಲಿ ಅಂತಹವರ ಅರ್ಹತೆ ರದ್ದಾಗುತ್ತದೆ.

3) ಸ್ನಾತಕೋತ್ತರ ಪದವಿಯಲ್ಲಿ ಅಧ್ಯಯನ ಮಾಡಿದ ವಿಷಯದಲ್ಲಿಯೇ ಅಭ್ಯರ್ಥಿಗಳು ಕೆಸೆಟ್ (KSET) ಪರೀಕ್ಷೆಯನ್ನು ತೆಗೆದುಕೊಳ್ಳಬೇಕು. ಪ್ರಸ್ತುತ ಕೆಸೆಟ್ ಪ್ರಕಟಣೆಯಲ್ಲಿ ಇಲ್ಲದಿರುವ ವಿಷಯಗಳಿಗೆ, ಅಭ್ಯರ್ಥಿಗಳು ವರ್ಷದಲ್ಲಿ ಎರಡು ಬಾರಿ ನಡೆಯುವ ಯು.ಜಿ.ಸಿ, ಎನ್.ಇ.ಟಿ. ಅಥವಾ ಯು.ಜಿ.ಸಿ-ಸಿ.ಎಸ್.ಐ.ಆರ್-ಎನ್.ಇ.ಟಿ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು.

4) 1991ರ ಸೆಪ್ಟೆಂಬರ್ 19ರೊಳಗೆ ಸ್ನಾತಕೋತ್ತರ ಪರೀಕ್ಷೆಯನ್ನು ಪೂರ್ಣಗೊಳಿಸಿ (ಫಲಿತಾಂಶ ಘೋಷಣೆಯ ದಿನಾಂಕವನ್ನು ಲೆಕ್ಕಿಸದೆ) ಹಾಗೂ ಪಿ.ಹೆಚ್.ಡಿ ಪದವಿ ಪಡೆದವರು ಕೆಸೆಟ್ ಪರೀಕ್ಷೆಯನ್ನು ತೆಗೆದುಕೊಳ್ಳಲು ಒಟ್ಟು ಅಂಕಗಳಲ್ಲಿ 5% ವಿನಾಯಿತಿ ಇರುತ್ತದೆ (55%ರ ಬದಲಾಗಿ 50%).

5) ಸಾಮಾನ್ಯ ವರ್ಗದ ಅಭ್ಯರ್ಥಿಗಳನ್ನು ಹೊರತುಪಡಿಸಿ, ಮೀಸಲಾತಿಯನ್ನು ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯಲ್ಲೇ ಸ್ಪಷ್ಟವಾಗಿ ನಮೂದಿಸಿರಬೇಕು. SC, ST, CAT-1, IIA, IIB, IIIA, IIIB ಅಭ್ಯರ್ತಿಗಳು ಸಕ್ಷಮ ಪ್ರಾಧಿಕಾರಗಳು ನೀಡುವ ಪ್ರವರ್ಗ ಪ್ರಮಾಣಪತ್ರಗಳನ್ನು ಲಗತ್ತಿಸಬೇಕು. ಈ ಅಭ್ಯರ್ಥಿಗಳ ಪ್ರಮಾಣ ಪತ್ರಗಳು ಯಾವುದೇ ಹಂತದಲ್ಲಾದರೂ, ಸುಳ್ಳು ಎಂದು ಸಾಬೀತಾದರೆ ಅವರ ಆಭ್ಯರ್ಥಿತ್ವವನ್ನು ಮುನ್ಸೂಚನೆ ಇಲ್ಲದೆ ರದ್ದುಗೊಳಿಸಲಾಗುತ್ತದೆ ಮತ್ತು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.

6) ಹೊರರಾಜ್ಯದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಮೀಸಲಾತಿ ಇರುವುದಿಲ್ಲ. ಅವರು ಸ್ನಾತಕೋತ್ತರ ಪರೀಕ್ಷೆಯಲ್ಲಿ ನಿಗಧಿತ ಕನಿಷ್ಟ 55% ಅಥವಾ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿದ್ದಲ್ಲಿ ಮಾತ್ರ ಸಾಮಾನ್ಯ ವರ್ಗದಡಿಯಲ್ಲಿ ಪ್ರವೇಶಾತಿಗೆ ನೊಂದಾಯಿಸಬಹುದು. SC/ ST/OBC ಅರ್ಹತೆಯ ನಿಯಮವು ಕೇವಲ ಕರ್ನಾಟಕದ SC/ST/OBC ಅಭ್ಯರ್ಥಿಗಳಿಗೆ ಮಾತ್ರ ಅನ್ವಯವಾಗುತ್ತದೆ.

7) ಅಭ್ಯರ್ಥಿಗಳು ಮುಖ್ಯವಾಗಿ ಗಮನಿಸಬೇಕಾದ ಅಂಶವೇನೆಂದರೆ ಅವರ ಅಭ್ಯರ್ಥಿತನವು ತಾತ್ಕಾಲಿಕವೆಂದು ಭಾವಿಸಿಕೊಳ್ಳತಕ್ಕದ್ದು. ಪ್ರವೇಶಾತಿ ಪಡೆದ ಕಾರಣಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅವರನ್ನು ಅರ್ಹ ಅಭ್ಯರ್ಥಿಯಾಗಿ ಪರಿಗಣಿಸಿದೆ ಎಂದು ತಿಳಿಯಬಾರದು. ಅಭ್ಯರ್ಥಿಗಳ ಅರ್ಹತಾ ನಿಬಂಧನೆಗಳನ್ನು ಪರಿಶೀಲಿಸಿದ ನಂತರ ಅವರ ಅಭ್ಯರ್ಥಿತನವನ್ನು ಪರಿಗಣಿಸಲಾಗುವುದು.

8) ಈಗಾಗಲೇ ಕೆಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಮುಂಬರುವ ಕೆಸೆಟ್ ಪರೀಕ್ಷೆಗೆ ಆದೇ ವಿಷಯದಲ್ಲಿ (Same Subject) ಅರ್ಜಿ ಸಲ್ಲಿಸುವಂತಿಲ್ಲ. ಕೆಸೆಟ್ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಪುನಃ ಅರ್ಜಿ ಸಲ್ಲಿಸಿದ್ದು ಕಂಡು ಬಂದ ಪಕ್ಷದಲ್ಲಿ ಅಂತಹ ಅಭ್ಯರ್ಥಿಗಳ ಅರ್ಹತೆಯನ್ನು ರದ್ದುಗೊಳಿಸಲಾಗುವುದು ಹಾಗೂ ಅವರು ಹಿಂದೆ ಪಡೆದಿರುವ ಕೆಸೆಟ್ ಪರೀಕ್ಷೆಯ ಅರ್ಹತೆಯನ್ನು ಕೂಡ ಡಿನೋಟಿಫಿಕೇಷನ್ ಮೂಲಕ ಹಿಂಪಡೆಯಲಾಗುವುದು.

9) ಭಾರತೀಯ ವಿಶ್ವವಿದ್ಯಾಲಯ / ಸಂಸ್ಥೆ ನೀಡುವ ಎರಡು ವರ್ಷದ ಸ್ನಾತಕೋತ್ತರ ಡಿಪ್ಲೊಮಾ / ಪ್ರಮಾಣಪತ್ರ ಅಥವಾ ವಿದೇಶಿ ವಿಶ್ವವಿದ್ಯಾಲಯ / ಸಂಸ್ಥೆ ನೀಡುವ ವಿದೇಶಿ ಪದವಿ / ಡಿಪ್ಲೊಮಾ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳು ತಮ್ಮ ಹಿತದೃಷ್ಟಿಯಿಂದ, ಮಾನ್ಯತೆ ಪಡೆದ ಭಾರತೀಯ ಸ್ನಾತಕೋತ್ತರ ಪದವಿಯೊಂದಿಗೆ ತಮ್ಮ ಡಿಪ್ಲೊಮಾ/ ಪದವಿ/ ಪ್ರಮಾಣಪತ್ರದ ಸಮಾನತೆಯನ್ನು (ಅಸೋಸಿಯೇಷನ್ ಆಫ್ ಇಂಡಿಯನ್ ಯೂನಿವರ್ಸಿಟೀಸ್ (ಎಐಯು) ನವದೆಹಲಿ) ಯಿಂದ ಖಚಿತಪಡಿಸಿಕೊಳ್ಳಬೇಕು.

ವಿನಾಯಿತಿ:

ಕರ್ನಾಟಕ ರಾಜ್ಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ, ವಿಶ್ವವಿದ್ಯಾನಿಲಯ / ಪ್ರಥಮ ದರ್ಜೆ ಕಾಲೇಜುಗಳು / ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ (ಸರ್ಕಾರಿ / ಅನುದಾನಿತ / ಖಾಸಗಿ) ನೇಮಕವಾಗಬೇಕಾದರೆ, ಆಭ್ಯರ್ಥಿಗಳು ಕಡ್ಡಾಯವಾಗಿ ಕೆಸೆಟ್ ಅಥವಾ ಎನ್.ಇ.ಟಿ ಪರೀಕ್ಷೆಯಲ್ಲಿ ಆರ್ಹತೆ ಪಡೆದಿರಬೇಕೆಂಬ ನಿಯಮವಿದೆ.

ಅ) ಯು.ಜಿ.ಸಿ ಕಾಲಕಾಲಕ್ಕೆ ಹೊರಡಿಸುವ ನಿಬಂಧನೆಗಳು, ಯು.ಜಿ.ಸಿ ಮಾರ್ಗಸೂಚಿಗಳು ಮತ್ತು ಅಧಿನಿಯಮಗಳ ಅನ್ವಯ ಕೆಸೆಟ್ ಅರ್ಹತೆ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುವುದು.

ಆ) ಅಭ್ಯರ್ಥಿಯು 1989 ಕ್ಕಿಂತ ಮುಂಚಿತವಾಗಿ ಯು.ಜಿ.ಸಿ-ನೆಟ್ / ಸಿ.ಎಸ್.ಐ.ಆರ್-ನೆಟ್, ಜೆ.ಆರ್.ಎಫ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಲ್ಲಿ ಅಂತಹವರಿಗೆ ಕೆಸೆಟ್ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ.

ಇದನ್ನೂ ಓದಿ | Job Alert: ಪದವೀಧರರಿಗೆ ಗುಡ್‌ನ್ಯೂಸ್‌; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಇ) ಕೆಸೆಟ್ ಅಭ್ಯರ್ಥಿಗಳಿಗೆ 1ನೇ ಜೂನ್ 2002ಕ್ಕಿಂತ ಮೊದಲೇ ನಡೆಸಲಾದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದ ಅಭ್ಯರ್ಥಿಗಳಿಗೂ ಕೆಸೆಟ್ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುತ್ತದೆ. ಅಂತಹ ಅಭ್ಯರ್ಥಿಗಳು ಭಾರತದಲ್ಲಿ ಎಲ್ಲಿಯಾದರೂ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹರಾಗುತ್ತಾರೆ. ಆದರೆ 1ನೇ ಜೂನ್ 2002ರ ನಂತರ ಕೆಸೆಟ್‌ನಲ್ಲಿ ಅರ್ಹರಾದ ಅಭ್ಯರ್ಥಿಗಳು ಆಯಾ ರಾಜ್ಯಗಳ ವಿಶ್ವವಿದ್ಯಾನಿಲಯಗಳು / ಪ್ರಥಮ ದರ್ಜೆ ಕಾಲೇಜುಗಳಲ್ಲಿ ಮಾತ್ರ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹರಾಗಿರುತ್ತಾರೆ.

Continue Reading

ಉದ್ಯೋಗ

Job Alert: ಪದವೀಧರರಿಗೆ ಗುಡ್‌ನ್ಯೂಸ್‌; SCDCC ಬ್ಯಾಂಕ್‌ನಲ್ಲಿದೆ 123 ಹುದ್ದೆ: ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

Job Alert: ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ ಖಾಲಿ ಇರುವ ವಿವಿದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 123 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 18.

VISTARANEWS.COM


on

Job Alert
Koo

ಬೆಂಗಳೂರು: ಪದವಿ ಶಿಕ್ಷಣ ಮುಗಿಸಿ ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ರಾಜ್ಯದಲ್ಲೇ ಉದ್ಯೋಗ ನಿರ್ವಹಿಸಬೇಕು ಎನ್ನುವ ಕನಸು ಕಂಡಿದ್ದೀರಾ? ಹೌದು ಎಂದಾದರೆ ಇಲ್ಲಿದೆ ಸುವರ್ಣಾವಕಾಶ. ಮಂಗಳೂರಿನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ (South Canara District Central Co-operative Bank Ltd.) ಖಾಲಿ ಇರುವ ವಿವಿದ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SCDCC Bank Recruitment Notification 2024). ಒಟ್ಟು 123 ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 18 (Job Alert).

ಹುದ್ದೆಗಳ ವಿವರ

ಸಾಮಾನ್ಯ ವರ್ಗ: 62, ಪರಿಶಿಷ್ಟ ಜಾತಿ: 18, ಪರಿಶಿಷ್ಟ ಪಂಗಡ: 4, ಪ್ರವರ್ಗ 1: 5, ಪ್ರವರ್ಗ 2 ಎ: 18, ಪ್ರವರ್ಗ 2 ಬಿ: 5, ಪ್ರವರ್ಗ 3 ಎ: 5, ಪ್ರವರ್ಗ 3 ಬಿ: 6 ಹುದ್ದೆಗಳಿವೆ.

ವಿದ್ಯಾರ್ಹತೆ ಮತ್ತು ಮಾಸಿಕ ವೇತನ

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಒಳಗಾಗಿ ಅಂಗೀಕೃತ ವಿಶ್ವವಿದ್ಯಾಲಯದಿಂದ ಕನಿಷ್ಠ 50% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಜತೆಗೆ ಕಂಪ್ಯೂಟರ್‌ ಆಪರೇಷನ್‌ ಮತ್ತು ಅಪ್ಲಿಕೇಷನ್‌ ಜ್ಞಾನದೊಂದಿಗೆ ಕನಿಷ್ಠ 6 ತಿಂಗಳ ಅವಧಿಯ ಕಂಪ್ಯೂಟರ್‌ ಡಿಪ್ಲೋಮಾ ಅಥವಾ 6 ತಿಂಗಳ ಅವಧಿಯ ಯಾವುದೇ ಕಂಪ್ಯೂಟರ್‌ ತರಬೇತಿ ಪಡೆದ ಸರ್ಟಿಫಿಕೆಟ್‌ ಹೊಂದಿರಬೇಕು. ಕಂಪ್ಯೂಟರ್‌ ಸೈನ್‌ ಪದವಿ ಪಡೆದ ಅಭ್ಯರ್ಥಿಗಳಿಗೆ ಈ ಷರತ್ತಿನಿಂದ ವಿನಾಯಿತಿ ನೀಡಲಾಗಿದೆ. ಆಯ್ಕೆಯಾದವರಿಗೆ 24,910 ರೂ. – 55,655 ರೂ. ಮಾಸಿಕ ವೇತನ ಜತೆಗೆ ಡಿಎ & ಎಚ್.ಆರ್.ಎ. ಮುಂತಾದ ಸೌಲಭ್ಯ ದೊರೆಯಲಿದೆ.

ಅರ್ಜಿ ಶುಲ್ಕ ಮತ್ತು ವಯೋಮಿತಿ

ಅರ್ಜಿ ಶುಲ್ಕವಾಗಿ ಸಾಮಾನ್ಯ ಮತ್ತು ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು 1,180 ರೂ. ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಕೆ1 ಸೇರಿದ ಅಭ್ಯರ್ಥಿಗಳು 590 ರೂ. ಪಾವತಿಸಬೇಕು. ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ

ಸ್ಪರ್ಧಾತ್ಮಕ ಪರೀಕ್ಷೆ / ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ. ಒಟ್ಟು 200 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಕನ್ನಡ ಭಾಷೆ, ಸಾಮಾನ್ಯ ಇಂಗ್ಲಿಷ್‌, ಸಾಮಾನ್ಯ ಜ್ಞಾನ, ಸಹಕಾರಿ ವಿಷಯ / ಬ್ಯಾಂಕಿಂಗ್‌ ಕ್ಷೇತ್ರದ ಬಗ್ಗೆ, ಭಾರತದ ಸಂವಿಧಾನ, ಸಮಾಜದ ಯುಕ್ತವಾದ ಚಟುವಟಿಕೆ ಮತ್ತು ವಸ್ತುನಿಷ್ಟ ವಿಷಯಗಳ ಪ್ರಶ್ನೆಗಳಿರುತ್ತವೆ.

SCDCC Bank Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ (https://scdccbank.com/recruitment/addi-notification.pdf)

ಅಲ್ಲಿ ಸಲ್ಲಿಸುವ ವಿಧಾನ

The Chief Executive Officer,
The South Canara District Central Cooperative Bank Ltd., Kodialbail,
Mangalore – 575 003

ಹೆಚ್ಚಿನ ಮಾಹಿತಿಗೆ: (0824) – 2440381, 2440882 ನಂಬರ್‌ಗೆ ಕರೆ ಮಾಡಿ.

ಇದನ್ನೂ ಓದಿ: Job News: 961 ಹುದ್ದೆಗಳ ಭರ್ತಿಗೆ ಕೃಷಿ ಇಲಾಖೆಯಿಂದ ಕೆಪಿಎಸ್‌ಸಿಗೆ ಪ್ರಸ್ತಾವನೆ; ಎಲ್ಲಿ ಎಷ್ಟು ಹುದ್ದೆ?

Continue Reading
Advertisement
Monkey Attack
Latest32 mins ago

Monkey Attack: ಹುಡುಗಿಯ ಮೇಲೆ ಏಕಾಏಕಿ ದಾಳಿ ಮಾಡಿದ ಕೋತಿ; ವಿಡಿಯೊ ಇದೆ

Actor Yash
ಸಿನಿಮಾ34 mins ago

Actor Yash: ಯಶ್‌ ಅಭಿನಯದ ಈ ಸೂಪರ್‌ ಹಿಟ್‌ ಚಿತ್ರ ರಿ-ರಿಲೀಸ್‌; ಎರಡೂವರೆ ವರ್ಷಗಳ ಬಳಿಕ ರಾಕಿಂಗ್‌ ಸ್ಟಾರ್‌ ಥಿಯೇಟರ್‌ಗೆ ಎಂಟ್ರಿ

assault case viral video
ವೈರಲ್ ನ್ಯೂಸ್42 mins ago

Viral Video: ಬೆಂಗಳೂರಲ್ಲಿ ಹಾಡಹಗಲೇ‌‌ ಪುಂಡಾಟ, 15 ಮಂದಿಯಿಂದ ಯುವಕನ ಮೇಲೆ ಹಲ್ಲೆ

Kashmir encounter
ದೇಶ48 mins ago

Kashmir Encounter: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ನಾಲ್ವರು ಯೋಧರು ಹುತಾತ್ಮ; ಮುಂದುವರಿದ ಕಾರ್ಯಾಚರಣೆ

BJP MLA
ಪ್ರಮುಖ ಸುದ್ದಿ1 hour ago

BJP MLA: ಡಿಗ್ರಿ ಉಪಯೋಗಕ್ಕೆ ಬರಲ್ಲ, ಪಂಕ್ಚರ್‌ ಅಂಗಡಿ ತೆರೆಯಿರಿ; ವಿದ್ಯಾರ್ಥಿಗಳಿಗೆ ಬಿಜೆಪಿ ಶಾಸಕ ಕರೆ!

Pani Puri Machine
Latest1 hour ago

Pani Puri Machine: ಬೆಂಗಳೂರಿಗೆ ಬಂದಿದೆ ಪಾನಿಪುರಿ ನೀಡುವ ಮೆಷಿನ್! ಇದು ಹೇಗಿದೆ ನೋಡಿ

Paris Olympics 2024
ಕ್ರೀಡೆ1 hour ago

Paris Olympics 2024: ಮೊಟ್ಟಮೊದಲ ಒಲಿಂಪಿಕ್ಸ್ ಕ್ರೀಡಾಕೂಟದ 10 ಕುತೂಹಲಕರ ಸಂಗತಿಗಳಿವು

goa ನನ್ನ ದೇಶ ನನ್ನ ದನಿ
ಅಂಕಣ1 hour ago

ನನ್ನ ದೇಶ ನನ್ನ ದನಿ ಅಂಕಣ: ಗೋವಾದಲ್ಲಿ ಹಿಂದೂಗಳ ಮೇಲಿತ್ತು ಜುಟ್ಟಿನ ತೆರಿಗೆ!

rain news kottigehara bus stand collapse
ಪ್ರಮುಖ ಸುದ್ದಿ2 hours ago

Rain News: ಮಳೆಯ ಅಬ್ಬರಕ್ಕೆ ಧಡಾರ್‌ ಎಂದು ನೆಲಕಚ್ಚಿದ ಕೊಟ್ಟಿಗೆಹಾರ ಬಸ್‌ ನಿಲ್ದಾಣ!

Char Dham Yatra 2024
ಪ್ರವಾಸ2 hours ago

Char Dham Yatra 2024: ಚಾರ್‌ಧಾಮ್‌, ಕೇದಾರನಾಥನ ದರ್ಶನ ಮಾಡುವ ಆಸೆ ಇದೆಯೆ? ಈ ಮಹತ್ವದ ಸಂಗತಿಗಳನ್ನು ತಿಳಿದುಕೊಂಡಿರಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ15 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ22 hours ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ3 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

ಟ್ರೆಂಡಿಂಗ್‌