Job Alert: KSRTCಯಿಂದ ಬೃಹತ್‌ ನೇಮಕಾತಿ; 13,000 ಚಾಲಕ ಹುದ್ದೆಗಳಿಗೆ 7ನೇ ತರಗತಿ ಪಾಸಾದವರು ಅಪ್ಲೈ ಮಾಡಿ - Vistara News

ಉದ್ಯೋಗ

Job Alert: KSRTCಯಿಂದ ಬೃಹತ್‌ ನೇಮಕಾತಿ; 13,000 ಚಾಲಕ ಹುದ್ದೆಗಳಿಗೆ 7ನೇ ತರಗತಿ ಪಾಸಾದವರು ಅಪ್ಲೈ ಮಾಡಿ

Job Alert: ಉತ್ತಮ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವವರಿಗೆ ಗುಡ್‌ನ್ಯೂಸ್‌ ಇಲ್ಲಿದೆ. ಕೆಎಸ್‌ಆರ್‌ಟಿಸಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಬರೋಬ್ಬರಿ 13,000 ಚಾಲಕ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. 7ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರು. ಚಾಮರಾಜನಗರ ಜಿಲ್ಲೆ ಕೆಎಸ್‌ಆರ್‌ಟಿಸಿ ಡಿಪೋ, ರಾಮನಗರ ಹಾಗೂ ಆನೇಕಲ್ ತಾಲೂಕು ಕೆಎಸ್‌ಆರ್‌ಟಿಸಿ ಬಸ್‌ ಡಿಪೋದಲ್ಲಿ ಈ ಹುದ್ದೆಗಳಿವೆ.

VISTARANEWS.COM


on

Job Alert
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಉತ್ತಮ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವವರಿಗೆ ಗುಡ್‌ನ್ಯೂಸ್‌ ಇಲ್ಲಿದೆ. ಕೆಎಸ್‌ಆರ್‌ಟಿಸಿ (Karnataka State Road Transport Corporation) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಬರೋಬ್ಬರಿ 13,000 ಚಾಲಕ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. 7ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಲು ಅರ್ಹರು (KSRTC Recruitment 2024). ಈ ಕುರಿತಾದ ವಿವರ ಇಲ್ಲಿದೆ (Job Alert).

ಎಲ್ಲೆಲ್ಲಿ?

ಚಾಮರಾಜನಗರ ಜಿಲ್ಲೆ ಕೆಎಸ್‌ಆರ್‌ಟಿಸಿ ಡಿಪೋ, ರಾಮನಗರ ಹಾಗೂ ಆನೇಕಲ್ ತಾಲೂಕು ಕೆಎಸ್‌ಆರ್‌ಟಿಸಿ ಬಸ್‌ ಡಿಪೋದಲ್ಲಿ ಈ ಹುದ್ದೆಗಳಿವೆ. ಆಯಾ ಬಸ್‌ ಡಿಪೋಗಳು ಹೊರ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಿವೆ.

ವಿದ್ಯಾರ್ಹತೆ ಮತ್ತು ಮಾಸಿಕ ವೇತನ

7ನೇ ತರಗತಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು. ಜತೆಗೆ ಹೆವಿ ಮೋಟಾರ್ ವಾಹನ ಚಾಲಕರಾಗಿ 2 ವರ್ಷಗಳ ಅನುಭವ ಹೊಂದಿರಬೇಕು. ಅಲ್ಲದೆ ಕರ್ನಾಟಕದ ಮಾನ್ಯತೆ ಪಡೆದಿರುವ ಸರಕು ವಾಹನ ಬ್ಯಾಡ್ಜ್‌ ಹೊಂದಿರುವುದು ಕಡ್ಡಾಯ. ಆಯ್ಕೆಯಾದವರಿಗೆ 23,000 ರೂ. ಮಾಸಿಕ ವೇತನ ನೀಡಲಾಗುತ್ತದೆ. ಜತೆಗೆ ಇಎಸ್‌ಐ, ಇಪಿಎಫ್‌ ಸೌಲಭ್ಯ ಇರಲಿದೆ.

ಇದನ್ನು ಗಮನಿಸಿ

ಹೊರಗುತ್ತಿಗೆ ನೇಮಕಾತಿ ಇದಾಗಿರುವುದರಿಂದ ಹುದ್ದೆಗಳ ಮೇಲೆ ಅಭ್ಯರ್ಥಿಗಳಿಗೆ ಯಾವುದೇ ರೀತಿ ಹಕ್ಕು ಇರುವುದಿಲ್ಲ. ಖಾಯಂ ನೇಮಕಾತಿ ವೇಳೆ ಇವರನ್ನು ತೆರವು ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ

ಅಭ್ಯರ್ಥಿಗಳಿಗೆ ಚಾಲನೆ ತರಬೇತಿಯನ್ನು ನೀಡಿ ಪರೀಕ್ಷೆಯನ್ನು ನಡೆಸಿ ಸಂದರ್ಶನ ಹಾಗೂ ದಾಖಲೆಗಳ ಪರಿಶೀಲನೆಯ ಬಳಿಕ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಕೆಎಸ್‌ಆರ್‌ಟಿಸಿಯ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ವಿವರಗಳಿಗೆ: ಚಾಮರಾಜನಗರ ಜಿಲ್ಲೆ ಕೆಎಸ್‌ಆರ್‌ಟಿಸಿ ಡಿಪೋ ದೂರವಾಣಿ ಸಂಖ್ಯೆಗಳು: 8050980889, 8618876846, ರಾಮನಗರ ಹಾಗೂ ಆನೇಕಲ್ ತಾಲೂಕು ಕೆಎಸ್‌ಆರ್‌ಟಿಸಿ ಬಸ್‌ ಡಿಪೋ ದೂರವಾಣಿ ಸಂಖ್ಯೆಗಳು: 8050980889, 8618876846ಕ್ಕೆ ಕರೆ ಮಾಡಿ.

ಇದನ್ನೂ ಓದಿ: Job Alert: ಬರೋಬ್ಬರಿ 17,727 ಹುದ್ದೆಗಳ ಭರ್ತಿಗೆ ಮುಂದಾದ SSC; ಇಂದೇ ಅಪ್ಲೈ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಧಾರವಾಡ ಕೃಷಿ ವಿಜ್ಞಾನ ವಿವಿಯಲ್ಲಿ 6 ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಒಟ್ಟು 6 ಪ್ರಾಜೆಕ್ಟ್​ ಅಸಿಸ್ಟೆಂಟ್, ಸೀನಿಯರ್​ ರಿಸರ್ಚ್​ ಫೆಲೋ (SRF) ಹುದ್ದೆಗಳಿಗೆ (Job Alert) ಅರ್ಜಿ ಆಹ್ವಾನಿಸಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು. ಲಿಖಿತ ಪರೀಕ್ಷೆ ಮತ್ತು ಕೌಶಲ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಧಾರವಾಡದ ಕೃಷಿ ನಗರ ಚೇಂಬರ್ ಆಫ್ ಅಸೋಸಿಯೇಟ್ ಡೈರೆಕ್ಟರ್ ಆಫ್ ರಿಸರ್ಚ್ (HQ) ನಲ್ಲಿ ಜುಲೈ 10ರಂದು ಸಂದರ್ಶನ ನಡೆಸಲಾಗುತ್ತದೆ.

VISTARANEWS.COM


on

By

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ (Job Alert) ಆಕಾಂಕ್ಷಿಗಳಿಗೆ ಒಂದು ಗುಡ್ ನ್ಯೂಸ್. ಧಾರವಾಡದ (Dharwad) ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯ (University of Agriculture Sciences) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಬೆಳಗಾವಿ (belagavi), ಧಾರವಾಡ, ಹಾವೇರಿಯಲ್ಲಿ (haveri) ಕೆಲಸ ಮಾಡಲು ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು.

ಹುದ್ದೆಯ ವಿವರ ಹೀಗಿದೆ:

ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು ಒಟ್ಟು 6 ಪ್ರಾಜೆಕ್ಟ್​ ಅಸಿಸ್ಟೆಂಟ್, ಸೀನಿಯರ್​ ರಿಸರ್ಚ್​ ಫೆಲೋ (SRF) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದರಲ್ಲಿ ಸೀನಿಯರ್ ರಿಸರ್ಚ್ ಫೆಲೋ(SRF)-3, ಪ್ರಾಜೆಕ್ಟ್ ಅಸಿಸ್ಟೆಂಟ್​- ಹೈಡ್ರಾಲಜಿ (ಫೀಲ್ಡ್​)-1, ಪ್ರಾಜೆಕ್ಟ್​ ಅಸಿಸ್ಟೆಂಟ್ (RS & GIS)- 2 ಹುದ್ದೆಗಳಿವೆ.

ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳಿಗೆ ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಪೋಸ್ಟಿಂಗ್ ಮಾಡಲಾಗುತ್ತದೆ. ಸೀನಿಯರ್ ರಿಸರ್ಚ್ ಫೆಲೋ (SRF) ಅಭ್ಯರ್ಥಿಗಳಿಗೆ ಮಾಸಿಕ 31,000 ರೂ., ಪ್ರಾಜೆಕ್ಟ್ ಅಸಿಸ್ಟೆಂಟ್​- ಹೈಡ್ರಾಲಜಿ (ಫೀಲ್ಡ್​) ಅಭ್ಯರ್ಥಿಗಳಿಗೆ ಮಾಸಿಕ 29,000 ರೂ., ಪ್ರಾಜೆಕ್ಟ್​ ಅಸಿಸ್ಟೆಂಟ್ (RS & GIS)ಗಳಿಗೆ ಮಾಸಿಕ 21,000- 25,000 ರೂ. ವೇತನ ನೀಡಲಾಗುತ್ತದೆ.

ಶೈಕ್ಷಣಿಕ, ವಯೋಮಿತಿ ಅರ್ಹತೆ ಏನು?

ಸೀನಿಯರ್ ರಿಸರ್ಚ್ ಫೆಲೋ(SRF) ಗೆ ಅರ್ಜಿ ಸಲ್ಲಿರುವ ಅಭ್ಯರ್ಥಿಗಳು ಎಂ.ಎಸ್ಸಿ, ಪಿಎಚ್​.ಡಿ ಪದವಿ ಪೂರ್ಣಗೊಳಿಸಿರಬೇಕು. ಪ್ರಾಜೆಕ್ಟ್ ಅಸಿಸ್ಟೆಂಟ್​- ಹೈಡ್ರಾಲಜಿ (ಫೀಲ್ಡ್​) ವಿಭಾಗಕ್ಕೆ ಅರ್ಜಿ ಸಲ್ಲಿಸುವವರು ಬಿ.ಎಸ್ಸಿ, ಬಿ.ಟೆಕ್​ ಹಾಗೂ ಪ್ರಾಜೆಕ್ಟ್​ ಅಸಿಸ್ಟೆಂಟ್ (RS & GIS) ಹುದ್ದೆಗೆ ಅರ್ಜಿ ಸಲ್ಲಿಸುವವರು ಪದವಿ, ಬಿ.ಎಸ್ಸಿ, ಬಿಇ/ಬಿ.ಟೆಕ್ ಪದವಿ ಪೂರ್ಣಗೊಳಿಸಿರಬೇಕು.

ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳಿಗೆ ಮೀಸಲಾತಿ ಅನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ: Job Alert: ಬ್ಯಾಂಕ್‌ ಆಫ್‌ ಬರೋಡಾದ 627 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಟೈಮ್‌ ಟೇಬಲ್‌

ಆಯ್ಕೆ ಪ್ರಕ್ರಿಯೆ ಹೀಗಿರುತ್ತದೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ ಮತ್ತು ಸಂದರ್ಶನದ ಬಳಿಕ ಅರ್ಹರಾದವರನ್ನು ಆಯ್ಕೆ ಮಾಡಲಾಗುತ್ತದೆ.

ಲಿಖಿತ ಪರೀಕ್ಷೆ ಮತ್ತು ಕೌಶಲ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಧಾರವಾಡದ ಕೃಷಿ ನಗರ ಚೇಂಬರ್ ಆಫ್ ಅಸೋಸಿಯೇಟ್ ಡೈರೆಕ್ಟರ್ ಆಫ್ ರಿಸರ್ಚ್ (HQ) ನಲ್ಲಿ ಜುಲೈ 10ರಂದು ಸಂದರ್ಶನ ನಡೆಸಲಾಗುತ್ತದೆ.

Continue Reading

ಉದ್ಯೋಗ

Job Alert: 6,128 ಬ್ಯಾಂಕ್ ಕ್ಲರ್ಕ್‌ ಹುದ್ದೆಯ ಅವಕಾಶ; ಬೇಗ ಅರ್ಜಿ ಸಲ್ಲಿಸಿ

ಐಬಿಪಿಎಸ್ ಕ್ಲರ್ಕ್ ಪರೀಕ್ಷೆಯನ್ನು (Job Alert) ಪ್ರತಿ ವರ್ಷ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು ರಾಷ್ಟ್ರಾದ್ಯಂತ 11 ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಕ್ಲೆರಿಕಲ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳುತ್ತದೆ. ಐಬಿಪಿಎಸ್ ಕ್ಲರ್ಕ್ 2024ರ ಕುರಿತು ಸಂಪೂರ್ಣ ಮಾಹಿತಿಯನ್ನು www.ibps.in ನಲ್ಲಿ ಪ್ರಕಟಿಸಲಾಗಿದೆ. 11 ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ 6,128 ಕ್ಲೆರಿಕಲ್ ಪೋಸ್ಟ್‌ಗಳ ಖಾಲಿ ಹುದ್ದೆಗಳೊಂದಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಬ್ಯಾಂಕ್‌ ಉದ್ಯೋಗದ ನಿರೀಕ್ಷೆಯಲ್ಲಿರುವ ಪದವೀಧರರಿಗೆ ಇದೊಂದು ಸುವರ್ಣ ಅವಕಾಶ. ಈ ಬಾರಿ ನಡೆಯಲಿರುವ ನೇಮಕಾತಿ ಪ್ರಕ್ರಿಯೆಯ ಕುರಿತು ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

By

Job Alert
Koo

ದೇಶಾದ್ಯಂತ ಖಾಲಿ ಇರುವ 11 ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ (public sector banks) 6128 ಕ್ಲೆರಿಕಲ್ ಹುದ್ದೆಗಳನ್ನು (clerical posts) ಭರ್ತಿ ಮಾಡಲು ಐಬಿಪಿಎಸ್ ಕ್ಲರ್ಕ್ ನೇಮಕಾತಿ 2024ರ (IBPS Clerk exam) ಅಧಿಸೂಚನೆಯನ್ನು (Job Alert) ಹೊರಡಿಸಲಾಗಿದೆ. ಇದಕ್ಕಾಗಿ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಜುಲೈ 1ರಿಂದ ಪ್ರಾರಂಭಿಸಲಾಗಿದೆ. ಇದರ ನೋಂದಣಿ ಪ್ರಕ್ರಿಯೆ, ಪರೀಕ್ಷೆಯ ಮಾದರಿ, ಖಾಲಿ ಹುದ್ದೆ, ಅರ್ಹತಾ ಮಾನದಂಡಗಳು, ಆಯ್ಕೆ ಪ್ರಕ್ರಿಯೆ, ಫಲಿತಾಂಶ, ಸಂಬಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ಐಬಿಪಿಎಸ್ ಕ್ಲರ್ಕ್ 2024ರ ಕುರಿತು ಸಂಪೂರ್ಣ ಮಾಹಿತಿಯನ್ನು www.ibps.in ನಲ್ಲಿ ಪ್ರಕಟಿಸಲಾಗಿದೆ. 11 ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ 6,128 ಕ್ಲೆರಿಕಲ್ ಪೋಸ್ಟ್‌ಗಳ ಖಾಲಿ ಹುದ್ದೆಗಳೊಂದಿಗೆ ಬಿಡುಗಡೆ ಮಾಡಲಾಗಿದೆ. ಬ್ಯಾಂಕ್‌ ಉದ್ಯೋಗದ ನಿರೀಕ್ಷೆಯಲ್ಲಿರುವ ಎಲ್ಲಾ ಪದವೀಧರರಿಗೆ ಇದೊಂದು ಸುವರ್ಣ ಅವಕಾಶ.

ಹುದ್ದೆಗಳ ವಿವರ

ಆರ್ಗನೈಸೇಶನ್ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) 11 ಸಾರ್ವಜನಿಕ ವಲಯದ ಬ್ಯಾಂಕ್‌ ಗಳಿಗೆ 6,128 ಕ್ಲೆರಿಕಲ್ ಪೋಸ್ಟ್‌ಗಳಿಗೆ ಪರೀಕ್ಷೆ ನಡೆಸಲಿದೆ.

ಐಬಿಪಿಎಸ್ ಕ್ಲರ್ಕ್ 2024 ಪರೀಕ್ಷೆಗೆ ರಾಜ್ಯವಾರು ಮತ್ತು ವರ್ಗವಾರು ಖಾಲಿ ಹುದ್ದೆಗಳ ಮಾಹಿತಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಈ ವರ್ಷ ಉತ್ತರ ಪ್ರದೇಶ ರಾಜ್ಯಕ್ಕೆ 1,246 ಒಟ್ಟು ಹುದ್ದೆಗಳೊಂದಿಗೆ ಗರಿಷ್ಠ ಹುದ್ದೆಗಳನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿ ಎಸ್ ಸಿ 75, ಎಸ್ ಟಿ 39, ಒಬಿಸಿ 108, ಇಡಬ್ಲ್ಯೂ ಸಿ 44, ಸಾಮಾನ್ಯ 191 ಹುದ್ದೆಗಳು ಸೇರಿ ಒಟ್ಟು 457 ಹುದ್ದೆಗಳಿವೆ. ದೇಶಾದ್ಯಂತ ಎಸ್ ಸಿ 1068, ಎಸ್ಟಿ 388, ಒಬಿಸಿ 1426, ಇಡಬ್ಲ್ಯೂ ಸಿ 562, ಸಾಮಾನ್ಯ 2684 ಸೇರಿ ಒಟ್ಟು 6,128 ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಸಂಬಳ ವಿವರ

ಐಬಿಪಿಎಸ್ ಕ್ಲರ್ಕ್‌ಗಳಿಗೆ ಮೂಲ ವೇತನವು ತಿಂಗಳಿಗೆ 19,900 ರೂ.ನಿಂದ 47,920 ರೂ. ಆಗಿದೆ. ಐಬಿಪಿಎಸ್ ಕ್ಲರ್ಕ್ ವೇತನದಲ್ಲಿ 19,900 ರೂ. ಮೂಲ ವೇತನವಾಗಿದ್ದು, ಉಳಿದ ವೇತನವು ತುಟ್ಟಿ ಭತ್ಯೆ, ಮನೆ ಬಾಡಿಗೆ ಭತ್ಯೆ, ವೈದ್ಯಕೀಯ ಭತ್ಯೆ ಮತ್ತು ಸಾರಿಗೆ ಭತ್ಯೆಯನ್ನು ಒಳಗೊಂಡಿದೆ. ಆರಂಭದಲ್ಲಿ ಸೇರುವವರಿಗೆ ಐಬಿಪಿಎಸ್ ಕ್ಲರ್ಕ್ ವೇತನಕ್ಕೆ ಸಂಬಂಧಿಸಿ ನಗದು 29,453 ರೂ. ಆಗಿದೆ.

ಪ್ರಮುಖ ದಿನಾಂಕಗಳು

ಐಬಿಪಿಎಸ್ ಕ್ಲರ್ಕ್ 2024ರ ನೇಮಕಾತಿಗೆ ಪ್ರಿಲಿಮ್ಸ್ ಪರೀಕ್ಷೆಯು 2024ರ ಆಗಸ್ಟ್ 24, 25 ಮತ್ತು 31 ರಂದು ನಡೆಯಲಿದೆ. ಐಬಿಪಿಎಸ್ ಕ್ಲರ್ಕ್ ಪರೀಕ್ಷೆಯು ಅಕ್ಟೋಬರ್ 13ರಂದು ನಡೆಯಲಿದೆ. ನೋಂದಣಿ ಪ್ರಕ್ರಿಯೆ ಜುಲೈ 1ರಿಂದ 21ರವರೆಗೆ ನಡೆಯಲಿದೆ.

ನೋಂದಣಿ ಪ್ರಕ್ರಿಯೆ

ನೋಂದಣಿ ಪ್ರಕ್ರಿಯೆ ಜುಲೈ 1 ರಿಂದ 21ರವರೆಗೆ ನಡೆಯಲಿದ್ದು, ಅಧಿಕೃತ ವೆಬ್‌ಸೈಟ್ www.ibps.in ಮೂಲಕ ಅರ್ಜಿ ಸಲ್ಲಿಸಬಹುದು. 20ರಿಂದ 28 ವರ್ಷಗಳ ಪದವೀಧರರು ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕ ಎಸ್ ಸಿ, ಎಸ್ ಟಿ, ಇಡಬ್ಲ್ಯೂ ಸಿ ಅಭ್ಯರ್ಥಿಗಳಿಗೆ 175 ರೂ., ಸಾಮಾನ್ಯ ಮತ್ತು ಇತರರ ಅಭ್ಯರ್ಥಿಗಳಿಗೆ 850 ನೋಂದಣಿ ಶುಲ್ಕ ವಿಧಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಇದರೊಂದಿಗೆ ಅಗತ್ಯ ದಾಖಲೆಗಳು, ಛಾಯಾಚಿತ್ರ, ಸಹಿ ಮತ್ತು ಐಬಿಪಿಎಸ್ ಕ್ಲರ್ಕ್ ಕೈಬರಹದ ಪತ್ರವನ್ನು ವೆಬ್ ಸೈಟ್ ನಲ್ಲಿ ಸಲ್ಲಿಸಬೇಕು. ಅರ್ಜಿಯನ್ನು ಆನ್‌ಲೈನ್‌ನಲ್ಲಿ ಭರ್ತಿ ,ಮಾಡುವಾಗ ತಾಂತ್ರಿಕ ದೋಷಗಳನ್ನು ತಪ್ಪಿಸಲು Internet Explorer 8, Mozilla FireFox 3.0, Google Chrome 3.0 ಮತ್ತು ಹೆಚ್ಚಿನದರಲ್ಲೇ ಮಾಡುವಂತೆ ಸೂಚಿಸಲಾಗಿದೆ.

ವಯೋಮಿತಿ ಅರ್ಹತೆ

ಐಬಿಪಿಎಸ್ ಕ್ಲರ್ಕ್ 2024 ಅರ್ಹತಾ ಮಾನದಂಡ ವನ್ನು ಪ್ರಕಟಿಸಲಾಗಿದೆ. ಅಭ್ಯರ್ಥಿಯು 20 ವರ್ಷದಿಂದ 28 ವರ್ಷ ವಯಸ್ಸಿನವರಾಗಿರಬೇಕು. ಅಭ್ಯರ್ಥಿಯು 02.07.1996 ಕ್ಕಿಂತ ಮೊದಲು ಮತ್ತು 01.07.2004 ಕ್ಕಿಂತ ಅನಂತರ ಹುಟ್ಟಿರಬಾರದು. ವಿಶೇಷ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸ್ವಲ್ಪ ಸಡಿಲಿಕೆ ಮಾಡಲಾಗಿದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದವರಿಗೆ 5 ವರ್ಷ, ಹಿಂದುಳಿದ ವರ್ಗಗಳಿಗೆ 3 ವರ್ಷ, ವಿಕಲಾಂಗ ವ್ಯಕ್ತಿಗಳಿಗೆ 10 ವರ್ಷ, ಮಾಜಿ ಸೈನಿಕರು / ಅಂಗವಿಕಲ ಮಾಜಿ ಸೈನಿಕರು ರಕ್ಷಣಾ ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೇವಾ ಅವಧಿ + 3 ವರ್ಷಗಳ ಸಡಿಲಿಕೆ ಇದೆ.

ಶೈಕ್ಷಣಿಕ ಅರ್ಹತೆ

ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ವಿಷಯದಲ್ಲಿ ಪದವಿಯ ಕನಿಷ್ಠ ಅರ್ಹತೆಯನ್ನು ಹೊಂದಿರಬೇಕು ಅಥವಾ ಕೇಂದ್ರ ಸರ್ಕಾರದಿಂದ ಗುರುತಿಸಲ್ಪಟ್ಟ ಯಾವುದೇ ಸಮಾನ ಅರ್ಹತೆಯನ್ನು ಹೊಂದಿರಬೇಕು. ಅಭ್ಯರ್ಥಿಯು ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುರಾವೆಯಾಗಿ ಪ್ರಮಾಣಪತ್ರವನ್ನು ಒದಗಿಸಬೇಕು. ಆನ್‌ಲೈನ್‌ನಲ್ಲಿ ನೋಂದಾಯಿಸುವಾಗ ಪದವಿಯಲ್ಲಿ ಪಡೆದ ಅಂಕಗಳ ಶೇಕಡಾವಾರು ಪ್ರಮಾಣವನ್ನು ಸೂಚಿಸಬೇಕು.

ಅಭ್ಯರ್ಥಿಗಳಿಗೆ ಕಂಪ್ಯೂಟರ್ ಸಿಸ್ಟಂಗಳಲ್ಲಿ ಆಪರೇಟಿಂಗ್ ಮತ್ತು ಕೆಲಸದ ಜ್ಞಾನ ಕಡ್ಡಾಯವಾಗಿದೆ. ಕೆಲಸ ಮಾಡಲು ಬಯಸುವ ರಾಜ್ಯದ ಅಧಿಕೃತ ಭಾಷೆಯಲ್ಲಿ ಪ್ರಾವೀಣ್ಯತೆ ಪಡೆದಿರಬೇಕು.

ಇದನ್ನೂ ಓದಿ: Job Alert: ಬರೋಬ್ಬರಿ 17,727 ಹುದ್ದೆಗಳ ಭರ್ತಿಗೆ ಮುಂದಾದ SSC; ಇಂದೇ ಅಪ್ಲೈ ಮಾಡಿ

ಆಯ್ಕೆ ಪ್ರಕ್ರಿಯೆ

ಐಬಿಪಿಎಸ್ ಕ್ಲರ್ಕ್ ನೇಮಕಾತಿಗೆ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆಯನ್ನು ಆನ್ ಲೈನ್ ಮೂಲಕ ನಡೆಸಲಾಗುತ್ತದೆ. ಪರೀಕ್ಷೆಯನ್ನು ಇಂಗ್ಲಿಷ್ ಮತ್ತು ಹಿಂದಿ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುತ್ತದೆ.

ಕರ್ನಾಟಕದ ಅಭ್ಯರ್ಥಿಗಳಿಗೆ ಇಂಗ್ಲಿಷ್, ಹಿಂದಿ, ಕನ್ನಡ ಮತ್ತು ಕೊಂಕಣಿ ಭಾಷೆಗಳಲ್ಲಿ ಪರೀಕ್ಷೆಯನ್ನು ನಡೆಸಲಾಗುವುದು. ಕ್ಲೆರಿಕಲ್ ಕೇಡರ್ ಹುದ್ದೆಗೆ ಆಯ್ಕೆಯಾಗುವವರು ಈ ಎರಡೂ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಬೇಕು. ಮುಖ್ಯ ಪರೀಕ್ಷೆಯ ಅನಂತರ ಅಭ್ಯರ್ಥಿಗಳ ಆಯ್ಕೆಗೆ ಯಾವುದೇ ಸಂದರ್ಶನ ಪ್ರಕ್ರಿಯೆ ಇರುವುದಿಲ್ಲ.

Continue Reading

ಉದ್ಯೋಗ

Job Alert: ಬ್ಯಾಂಕ್‌ ಆಫ್‌ ಬರೋಡಾದ 627 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಟೈಮ್‌ ಟೇಬಲ್‌

Job Alert: ದೇಶದ ಪ್ರತಿಷ್ಠಿತ ಬ್ಯಾಂಕ್‌ ಆಫ್‌ ಬರೋಡಾ ತನ್ನಲ್ಲಿ ಖಾಲಿ ಇರುವ 627 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ಪಡೆದ, ಕಂಪ್ಯೂಟರ್‌ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಹುದು. ಈ ಹಿಂದೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜುಲೈ 2 ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಆಸಕ್ತರು ಜುಲೈ 12ರ ತನಕ ಅಪ್ಲೈ ಮಾಡಬಹುದು. ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರ ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಬ್ಯಾಂಕ್‌ನಲ್ಲಿ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಭರ್ಜರಿ ಅವಕಾಶ. ದೇಶದ ಪ್ರತಿಷ್ಠಿತ ಬ್ಯಾಂಕ್‌ ಆಫ್‌ ಬರೋಡಾ (Bank of Baroda) ತನ್ನಲ್ಲಿ ಖಾಲಿ ಇರುವ 627 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ಪಡೆದ, ಕಂಪ್ಯೂಟರ್‌ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಹುದು (Bank of Baroda Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಈ ಹಿಂದೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜುಲೈ 2 ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಆಸಕ್ತರು ಜುಲೈ 12ರ ತನಕ ಅಪ್ಲೈ ಮಾಡಬಹುದು (Job Alert).

ಹುದ್ದೆಗಳ ವಿವರ

627 ಹುದ್ದೆಗಳ ಪೈಕಿ 459 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಮತ್ತು 168 ಹುದ್ದೆಗಳನ್ನು ನಿಯಮಿತ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಡೆಪ್ಯುಟಿ ವೈಸ್ ಪ್ರೆಸಿಡೆಂಟ್ – ಡಾಟಾ ಸೈಂಟಿಸ್ಟ್ & ಡಾಟಾ ಎಂಜಿನಿಯರ್: 4 ಹುದ್ದೆ
ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ – ಡಾಟಾ ಸೈಂಟಿಸ್ಟ್ & ಡಾಟಾ ಎಂಜಿನಿಯರ್: 9 ಹುದ್ದೆ
ಆರ್ಕಿಟೆಕ್ಟ್: 8 ಹುದ್ದೆ
ಜೋನಲ್ ಸೇಲ್ಸ್ ಮ್ಯಾನೇಜರ್: 3 ಹುದ್ದೆ
ಅಸಿಸ್ಟೆಂಟ್ ವೈಸ್ಪ್ರೆಸಿಡೆಂಟ್: 20 ಹುದ್ದೆ
ಸೀನಿಯರ್ ಮ್ಯಾನೇಜರ್: 22 ಹುದ್ದೆ
ಮ್ಯಾನೇಜರ್: 11 ಹುದ್ದೆ
ರೇಡಿಯನ್ಸ್ ಪ್ರೈವೇಟ್ ಸೇಲ್ಸ್ ಹೆಡ್: 1 ಹುದ್ದೆ
ಗ್ರೂಪ್ ಹೆಡ್: 4 ಹುದ್ದೆ
ಟೆರಿಟರಿ ಹೆಡ್: 8 ಹುದ್ದೆ
ಸೀನಿಯರ್ ರಿಲೇಶನ್‌ಶಿಪ್‌ ಮ್ಯಾನೇಜರ್: 234 ಹುದ್ದೆ
ಇ-ವೆಲ್ತ್ ರಿಲೇಶನ್‌ಶಿಪ್‌ ಮ್ಯಾನೇಜರ್: 26 ಹುದ್ದೆ
ಪ್ರೈವೇಟ್ ಬ್ಯಾಂಕರ್-ರೇಡಿಯನ್ಸ್ ಪ್ರೈವೇಟ್: 12 ಹುದ್ದೆ
ಗ್ರೂಪ್ ಸೇಲ್ಸ್ ಹೆಡ್ (ವರ್ಚುವಲ್ ಆರ್‌ಎಂ ಸೇಲ್ಸ್ ಹೆಡ್): 1 ಹುದ್ದೆ
ವೆಲ್ತ್ ಸ್ಟ್ರಾಟಜಿಸ್ಟ್ (ಇನ್ವೆಸ್‌ಮೆಂಟ್‌ & ಇನ್ಶೂರೆನ್ಸ್)/ ಪ್ರಾಡಕ್ಟ್ ಹೆಡ್: 10 ಹುದ್ದೆ
ಪೋರ್ಟ್ಫೋಲಿಯೊ ರಿಸರ್ಚ್ ಅನಾಲಿಸ್ಟ್: 1 ಹುದ್ದೆ
ಎವಿಪಿ- ಅಕ್ವಿಸಿಷನ್ & ರಿಲೇಶನ್‌ಶಿಪ್‌ ಮ್ಯಾನೇಜರ್: 19 ಹುದ್ದೆ
ಫಾರೆಕ್ಸ್ ಅಕ್ವಿಸಿಷನ್ & ರಿಲೇಶನ್‌ಶಿಪ್‌ ಮ್ಯಾನೇಜರ್: 15 ಹುದ್ದೆ
ಕ್ರೆಡಿಟ್ ಅನಾಲಿಸ್ಟ್: 80 ಹುದ್ದೆ
ರಿಲೇಶನ್‌ಶಿಪ್‌ ಮ್ಯಾನೇಜರ್: 66 ಹುದ್ದೆ
ಸೀನಿಯರ್ ಮ್ಯಾನೇಜರ್- ಬಿಸಿನೆಸ್ ಫೈನಾನ್ಸ್: 4 ಹುದ್ದೆ
ಚೀಫ್ ಮ್ಯಾನೇಜರ್- ಇಂಟರ್ನಲ್ ಕಂಟ್ರೋಲ್ಸ್‌ – 3 ಹುದ್ದೆಗಳಿವೆ.

ವಿದ್ಯಾರ್ಹತೆ

ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕೃಷಿ, ಪಶುವೈದ್ಯಕೀಯ ವಿಜ್ಞಾನ, ಸಮಾಜಶಾಸ್ತ್ರ, ಮನಃಶಾಸ್ತ್ರ ಮತ್ತು ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ. ಅಭ್ಯರ್ಥಿಗಳು ಸ್ಥಳೀಯ ಭಾಷೆ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಔದ್ಯೋಗಿಕ ಅನುಭವ ಕಡ್ಡಾಯ.

ಅರ್ಜಿ ಶುಲ್ಕ ಮತ್ತು ವಯೋಮಿತಿ

ಅರ್ಜಿ ಶುಲ್ಕವಾಗಿ ಸಾಮಾನ್ಯ, ಇಡಬ್ಲ್ಯುಎಸ್‌ ಮತ್ತು ಒಬಿಎಸ್ ವರ್ಗಗಳಿಗೆ ಸೇರಿದ ಅರ್ಜಿದಾರರು 600 ರೂ., ಎಸ್‌ಸಿ, ಎಸ್‌ಟಿ, ಅಂಗವಿಕಲ ಮತ್ತು ಮಹಿಳಾ ವರ್ಗಗಳಿಗೆ ಸೇರಿದ ಅರ್ಜಿದಾರರು 199 ರೂ. ಪಾವತಿಸಬೇಕಾಗುತ್ತದೆ. ಇದಕ್ಕೆ ತೆರಿಗೆ ಪ್ರತ್ಯೇಕ. ವಿವಿಧ ಹುದ್ದೆಗಳಿಗೆ ಅನುಗುಣವಾಗಿ 24 ವರ್ಷಗಳಿಂದ 60 ವರ್ಷದೊಳಗಿನವರು ಅರ್ಜಿ ಸಲ್ಲಿಬಹುದು.

ಆಯ್ಕೆ ವಿಧಾನ

ಆನ್‌ಲೈನ್‌ ಪರೀಕ್ಷೆ, ಗ್ರೂಪ್‌ ಡಿಸ್ಕಷನ್‌, ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ಪರೀಕ್ಷೆ ಆಯೋಜಿಸಲಾಗುತ್ತದೆ.

ದಿನಾಂಕ ವಿಸ್ತರಣೆಯ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ನಿಯಮಿತ ಆಧಾರದಲ್ಲಿನ ನೇಮಕಾತಿಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಗುತ್ತಿಗೆ ಆಧಾರದಲ್ಲಿನ ನೇಮಕಾತಿಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಗಮನಿಸಿ ಅರ್ಜಿ ಸಲ್ಲಿಕೆ ದಿನಾಂಕ ಬದಲಾಗಿದ್ದು, ಉಳಿದೆಲ್ಲ ವಿವರಗಳಲ್ಲಿ ಯಾವುದೇ ಬದಲಾವಣೆ ಇಲ್ಲ.

ಅರ್ಜಿ ಸಲ್ಲಿಸಲುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://www.bankofbaroda.in/career/current-opportunities)
  • ನೀವು ಅರ್ಜಿ ಸಲ್ಲಿಸಬೇಕಿರುವ ಹುದ್ದೆಯ ಮೇಲೆ ಕ್ಲಿಕ್‌ ಮಾಡಿ.
  • ಅಗತ್ಯ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: HCLನಲ್ಲಿ ಖಾಲಿ ಇರುವ 56 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ 1 ಲಕ್ಷ ರೂ.ವರೆಗೆ: ಇಂದೇ ಅಪ್ಲೈ ಮಾಡಿ

Continue Reading

ಪ್ರಮುಖ ಸುದ್ದಿ

UPSC 2024: ಯುಪಿಎಸ್ಸಿ ಸಿಎಸ್ಇ ಪ್ರಿಲಿಮ್ಸ್ ಫಲಿತಾಂಶ ಪ್ರಕಟ; ಪರಿಶೀಲಿಸುವುದು ಹೇಗೆ?

UPSC 2024 : ಪೂರ್ವಭಾವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಂದಿನ ಸುತ್ತಿಗೆ ಪ್ರವೇಶ ಪಡೆಯುತ್ತಾರೆ. ಯುಪಿಎಸ್ಸಿ ಸಿಎಸ್ಇ ಮೇನ್ಸ್ ಪರೀಕ್ಷೆ ಇದಾಗಿದೆ. ಇಲ್ಲಿ ಇದು ಎರಡು ಭಾಗಗಳಿವೆ . ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆ. ಲೋಕ ಸೇವಾ ಆಯೋಗದ ಪರೀಕ್ಷಾ ಕ್ಯಾಲೆಂಡರ್ ಪ್ರಕಾರ ಮೇನ್ಸ್​ (ಮುಖ್ಯ) ಪರೀಕ್ಷೆ ಸೆಪ್ಟೆಂಬರ್ 20 ರಂದು ಪ್ರಾರಂಭವಾಗಲಿದೆ.

VISTARANEWS.COM


on

UPSC 2024
Koo

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ 2024ನೇ( UPSC 2024) ಸಾಲಿನ ನಾಗರಿಕ ಸೇವೆಗಳ ಪೂರ್ವಭಾವಿ (ಪ್ರಿಲಿಮ್ಸ್​) ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಯುಪಿಎಸ್​ಸಿ ಸಿಎಸ್ಇ 2024 ರ ಪರೀಕ್ಷೆಗೆ ಹಾಜರಾಗಿವು ಅಭ್ಯರ್ಥಿಗಳು upsc.gov.in ಮತ್ತು upsconline.nic.in ವೆಬ್​ಸೈಟ್​ಗೆ ಪ್ರವೇಶ ಮಾಡಿ ಫಲಿತಾಂಶಗಳನ್ನು ಡೌನ್ಲೋಡ್ ಮಾಡಬಹದು. ಸಾಮಾನ್ಯ ಪರೀಕ್ಷೆಯನ್ನು ಜೂನ್ 16 ರಂದು ಸಾಮಾನ್ಯ ಅಧ್ಯಯನ ಪರೀಕ್ಷೆ 1 ಮತ್ತು ಪರೀಕ್ಷೆ 2 ಎಂದು ಎರಡು ಪಾಳಿಗಳಲ್ಲಿ ನಡೆಸಲಾಯಿತು. ಪರೀಕ್ಷೆಯು ಒಟ್ಟು 400 ಅಂಕಗಳನ್ನು ಹೊಂದಿತ್ತು. ಪ್ರಶ್ನೆ ಪತ್ರಿಕೆಯು ಆಬ್ಜೆಕ್ಟಿವ್​ ಮಾದರಿಯ ಪ್ರಶ್ನೆಗಳನ್ನು ಒಳಗೊಂಡಿದ್ದು, ತಲಾ 4 ಆಯ್ಕೆಗಳನ್ನು ಹೊಂದಿತ್ತು.

ಪೂರ್ವಭಾವಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಮುಂದಿನ ಸುತ್ತಿಗೆ ಪ್ರವೇಶ ಪಡೆಯುತ್ತಾರೆ. ಯುಪಿಎಸ್ಸಿ ಸಿಎಸ್ಇ ಮೇನ್ಸ್ ಪರೀಕ್ಷೆ ಇದಾಗಿದೆ. ಇಲ್ಲಿ ಇದು ಎರಡು ಭಾಗಗಳಿವೆ . ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆ. ಲೋಕ ಸೇವಾ ಆಯೋಗದ ಪರೀಕ್ಷಾ ಕ್ಯಾಲೆಂಡರ್ ಪ್ರಕಾರ ಮೇನ್ಸ್​ (ಮುಖ್ಯ) ಪರೀಕ್ಷೆ ಸೆಪ್ಟೆಂಬರ್ 20 ರಂದು ಪ್ರಾರಂಭವಾಗಲಿದೆ.

ಕಳೆದ ವರ್ಷದ ಟ್ರೆಂಡ್ ಪ್ರಕಾರ, ಪರೀಕ್ಷೆಯನ್ನು ಮೇ 26 ರಂದು ನಡೆಸಲಾಯಿತು ಮತ್ತು ಫಲಿತಾಂಶಗಳನ್ನು ಜೂನ್ 12 ರಂದು ಬಿಡುಗಡೆ ಮಾಡಲಾಗಿತ್ತು.

ಇದನ್ನೂ ಓದಿ: Reliance Jio: ಮೊಬೈಲ್‌ ಶುಲ್ಕ ಏರಿಕೆ; ಯಾವ ಕಂಪನಿಯ ಪ್ಲ್ಯಾನ್‌ ಸೂಕ್ತ?

ಭಾರತೀಯ ಆಡಳಿತ ಸೇವೆ, ಭಾರತೀಯ ಪೊಲೀಸ್ ಸೇವೆ, ಭಾರತೀಯ ವಿದೇಶಾಂಗ ಸೇವೆ ಮತ್ತು ಇತರ ಉನ್ನತ ಸೇವೆಗಳಲ್ಲಿ ಪ್ರಮುಖ ಹುದ್ದೆಗಳಿಗೆ ಸ್ಪರ್ಧಿಸುವ ಲಕ್ಷಾಂತರ ನಾಗರಿಕ ಸೇವಾ ಆಕಾಂಕ್ಷಿಗಳ ಭವಿಷ್ಯವನ್ನು ನಿರ್ಧರಿಸುವಲ್ಲಿ ಯುಪಿಎಸ್ಸಿ ಸಿಎಸ್ಇ ಕಟ್-ಆಫ್ ನಿರ್ಣಾಯಕವಾಗಿದೆ. 2023 ರಲ್ಲಿ ಸಾಮಾನ್ಯ ವರ್ಗಕ್ಕೆ ಯುಪಿಎಸ್ಸಿ ಪ್ರಿಲಿಮ್ಸ್ ಕಟ್-ಆಫ್ 75.41 ರಷ್ಟಿತ್ತು.

ಈ ಬಾರಿಯ ಫಲಿತಾಂಶಗಳನ್ನು ಈ ರೀತಿ ಡೌನ್​ಲೋಡ್ ಮಾಡಿಕೊಳ್ಳಿ


  • ಮೊದಲಿಗೆ, ಯುಪಿಎಸ್ಸಿಯ ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡಿ.
  • ಮುಖಪುಟದಲ್ಲಿ ಯುಪಿಎಸ್ಸಿ ಸಿವಿಲ್ ಸರ್ವೀಸಸ್ (ಪ್ರಿಲಿಮಿನರಿ) ಫಲಿತಾಂಶ 2024 ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿದಾಗ ಹೊಸ ಪುಟ ತೆರೆಯುತ್ತದೆ.
  • “ಸಲ್ಲಿಸು” ಆಯ್ಕೆಯನ್ನು ಆರಿಸಿದರೆ ಫಲಿತಾಂಶಗಳು ಕಾಣುತ್ತದೆ
  • ಡೌನ್ ಲೋಡ್ ಮಾಡಿ ಮತ್ತು ನಿಮ್ಮ ಭವಿಷ್ಯದ ಅಗತ್ಯಗಳಿಗಾಗಿ ಕಾಪಿಯನ್ನು ಸೇವ್ ಮಾಡಿಟ್ಟುಕೊಳ್ಳಿ.

2024 ರ ಸಿಎಸ್ (ಪಿ) ಪರೀಕ್ಷೆಯ ಅಂಕಗಳು, ಕಟ್-ಆಫ್ ಅಂಕಗಳು ಮತ್ತು ಉತ್ತರ ಕೀಗಳನ್ನು ನಾಗರಿಕ ಸೇವೆಗಳ ಪರೀಕ್ಷೆ ಪೂರ್ಣಗೊಂಡ ನಂತರ ಮತ್ತು ಅಂತಿಮ ಫಲಿತಾಂಶಗಳ ಪ್ರಕಟಣೆಯ ನಂತರ ವೆಬ್​ಸೈಟ್​ನಲ್ಲಿ ಪೋಸ್ಟ್​​ ಮಾಡಲಾಗುತ್ತದೆ.

Continue Reading
Advertisement
FIR Against Customer
ವಿದೇಶ5 mins ago

Viral News: 1 ಸಾವಿರ ರೂ. ಬಿಲ್‌ಗೆ 2.5 ಲಕ್ಷ ರೂ. ಟಿಪ್ಸ್‌ ಕೊಟ್ಟ ಗ್ರಾಹಕ; ಕೇಸು ದಾಖಲಿಸಿದ ಕೆಫೆ!

Rohit Sharma
ಪ್ರಮುಖ ಸುದ್ದಿ8 mins ago

Rohit Sharma : ನರೇಂದ್ರ ಮೋದಿ ರೋಹಿತ್​ ಶರ್ಮಾಗೆ ಗುಟ್ಟಾಗಿ ಹೇಳಿದ್ದೇನು? ಹೆಚ್ಚಿದ ಕುತೂಹಲ

Hemant Soren
ದೇಶ12 mins ago

Hemant Soren: 5 ತಿಂಗಳ ಜೈಲುವಾಸದ ಬಳಿಕ ಮತ್ತೆ ಜಾರ್ಖಂಡ್‌ ಸಿಎಂ ಆಗಿ ಹೇಮಂತ್‌ ಸೊರೆನ್‌ ಪ್ರಮಾಣವಚನ!

Opposition party leader R Ashok latest statement about muda scam
ಕರ್ನಾಟಕ19 mins ago

R Ashok: ಮುಡಾದಲ್ಲಿ ಎಲ್ಲರೂ ಗ್ಯಾಂಗ್‌ ಮಾಡಿಕೊಂಡು ಹಗರಣ ಮಾಡಿದ್ದಾರೆ; ಆರ್‌. ಅಶೋಕ್‌ ಆರೋಪ

Pregnancy Fashion
ಫ್ಯಾಷನ್22 mins ago

Pregnancy Fashion: ಪ್ರೆಗ್ನೆನ್ಸಿ ಸ್ಟೈಲಿಂಗ್‌ನಲ್ಲಿ ಮರೆಯದೇ ಗಮನದಲ್ಲಿಟ್ಟುಕೊಳ್ಳಬೇಕಾದ ಸಂಗತಿಗಳಿವು!

Viral Video
Latest25 mins ago

Viral Video: ಬುಲೆಟ್‌ ಮೇಲೆ ಬಂದ ಹುಡುಗಿ ಆಟೊ ಚಾಲಕನ ಬುರುಡೆ ಒಡೆದಳು!

PM Modi Russia Visit
ದೇಶ30 mins ago

PM Modi Russia Visit: ಜುಲೈ 8ರಿಂದ ಮೋದಿ ರಷ್ಯಾ ಪ್ರವಾಸ; ಉಕ್ರೇನ್‌ ಆಕ್ರಮಣದ ಬಳಿಕ ಮೊದಲ ಭೇಟಿ

Job Alert
ಉದ್ಯೋಗ41 mins ago

Job Alert: ಧಾರವಾಡ ಕೃಷಿ ವಿಜ್ಞಾನ ವಿವಿಯಲ್ಲಿ 6 ಹುದ್ದೆಗಳಿಗೆ ಅರ್ಜಿ ಆಹ್ವಾನ

Reels Obsession who gave dummy gun To Reels Obsession Sandalwood technician now trouble
ಕ್ರೈಂ48 mins ago

Reels Obsession : ಶೋಕಿಲಾಲನ ವಿರುದ್ಧ ಚಿತ್ರದುರ್ಗದಲ್ಲೂ ಕೇಸ್‌; ಡಮ್ಮಿ ಗನ್‌ ಕೊಟ್ಟ ಸ್ಯಾಂಡಲ್‌ವುಡ್‌ ಟೆಕ್ನಿಷಿಯನ್‌ಗೆ ಸಂಕಷ್ಟ

Viral News
Latest51 mins ago

Viral News: ಚಾಲಕನ ಹೆಸರು ʼಯಮರಾಜʼ ಎನ್ನುವುದು ಗೊತ್ತಾಗುತ್ತಲೇ ಕ್ಯಾಬ್ ಬುಕಿಂಗ್‌ ಕ್ಯಾನ್ಸಲ್‌ ಮಾಡಿದ ಗ್ರಾಹಕ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 hour ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ2 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ4 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ5 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ6 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ7 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

ಟ್ರೆಂಡಿಂಗ್‌