Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಆ. 16 ಕೊನೆಯ ದಿನ - Vistara News

ಉದ್ಯೋಗ

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಆ. 16 ಕೊನೆಯ ದಿನ

Job Alert: ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌, ಡೆಪ್ಯುಟಿ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಮತ್ತು ಸೀನಿಯರ್‌ ಮೆಡಿಕಲ್‌ ಆಫೀಸರ್‌ ಸೇರಿ ಒಟ್ಟು 55 ಹುದ್ದೆಗಳಿವೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 16.

VISTARANEWS.COM


on

Job Alert
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ (Tehri Hydro Development Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌, ಡೆಪ್ಯುಟಿ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಮತ್ತು ಸೀನಿಯರ್‌ ಮೆಡಿಕಲ್‌ ಆಫೀಸರ್‌ ಸೇರಿ ಒಟ್ಟು 55 ಹುದ್ದೆಗಳಿವೆ (THDC Recruitment 2024). ಪದವಿ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 16 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮ್ಯಾನೇಜರ್ 25 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌, ಸ್ನಾತಕೋತ್ತರ ಪದವಿ
ಅಸಿಸ್ಟೆಂಟ್ ಮ್ಯಾನೇಜರ್ 19 ಹುದ್ದೆ, ವಿದ್ಯಾರ್ಹತೆ: ಪದವಿ, ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌
ಡೆಪ್ಯುಟಿ ಮ್ಯಾನೇಜರ್ 3 ಹುದ್ದೆ, ವಿದ್ಯಾರ್ಹತೆ: ಪದವಿ
ಸೀನಿಯರ್ ಮ್ಯಾನೇಜರ್ 3 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌
ಹಿರಿಯ ವೈದ್ಯಾಧಿಕಾರಿ 5 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್

ಗರಿಷ್ಠ ವಯೋಮಿತಿ

ಮ್ಯಾನೇಜರ್ 45 ವರ್ಷ
ಅಸಿಸ್ಟೆಂಟ್ ಮ್ಯಾನೇಜರ್ 32 ವರ್ಷ
ಡೆಪ್ಯುಟಿ ಮ್ಯಾನೇಜರ್ 40 ವರ್ಷ
ಸೀನಿಯರ್ ಮ್ಯಾನೇಜರ್ 48 ವರ್ಷ
ಹಿರಿಯ ವೈದ್ಯಾಧಿಕಾರಿ 34 ವರ್ಷ

ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ (ಸಾಮಾನ್ಯ / ಇಡಬ್ಲ್ಯುಎಸ್‌) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಬಿಡಿ (ಎಸ್‌ಸಿ / ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಾಜಿ ಸೈನಿಕರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್‌ ಅಭ್ಯರ್ಥಿಗಳು ಅರ್ಜಿ ಸುಲ್ಕವಾಗಿ ಆನ್‌ಲೈನ್‌ನಲ್ಲಿ 600 ರೂ. ಪಾವತಿಸಬೇಕು. ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

THDC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಇಮೇಲ್‌, ಮೊಬೈಲ್‌ ನಂಬರ್‌ ಬಳಸಿ ಹೆಸರು ನಮೂದಿಸಿ.
  • ಇಲ್ಲಿ ಕಂಡುಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ, ವೆಬ್‌ಸೈಟ್‌ ವಿಳಾಸ: thdc.co.inಕ್ಕೆ ಭೇಟಿ ನೀಡಿ ಅಥವಾ thdcrecruitment@thdc.co.in ಇಮೇಲ್‌ಗೆ ಸಂಪರ್ಕಿಸಿ.

ಇದನ್ನೂ ಓದಿ: Indian Bank Recruitment 2024: 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಂಡಿಯನ್‌ ಬ್ಯಾಂಕ್‌; ಕರ್ನಾಟಕದಲ್ಲಿಯೂ ಇದೆ ನೇಮಕಾತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Indian Bank Recruitment 2024: 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಇಂಡಿಯನ್‌ ಬ್ಯಾಂಕ್‌; ಕರ್ನಾಟಕದಲ್ಲಿಯೂ ಇದೆ ನೇಮಕಾತಿ

Indian Bank Recruitment 2024: ಬ್ಯಾಂಕ್‌ನಲ್ಲಿ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ. ತಮಿಳುನಾಡಿನ ಚೆನ್ನೈಯಲ್ಲಿ ಪ್ರಧಾನ ಕಚೇರಿ ಹೊಂದಿರುವ ದೇಶದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾದ ಇಂಡಿಯನ್‌ ಬ್ಯಾಂಕ್‌ 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೋಕಲ್‌ ಬ್ಯಾಂಕ್‌ ಆಫೀಸರ್‌ ಹುದ್ದೆ ಇದಾಗಿದ್ದು, ಕರ್ನಾಟಕದಲ್ಲಿಯೂ ನೇಮಕಾತಿ ನಡೆಯಲಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್‌ 2.

VISTARANEWS.COM


on

Indian Bank Recruitment 2024
Koo

ಬೆಂಗಳೂರು: ಬ್ಯಾಂಕ್‌ನಲ್ಲಿ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ (Bank Jobs). ತಮಿಳುನಾಡಿನ ಚೆನ್ನೈಯಲ್ಲಿ ಪ್ರಧಾನ ಕಚೇರಿ ಹೊಂದಿರುವ ದೇಶದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾದ ಇಂಡಿಯನ್‌ ಬ್ಯಾಂಕ್‌ (Indian Bank) 300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Indian Bank Recruitment 2024). ಲೋಕಲ್‌ ಬ್ಯಾಂಕ್‌ ಆಫೀಸರ್‌ (Local Bank Officer) ಹುದ್ದೆ ಇದಾಗಿದ್ದು, ಪದವಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ವಿಶೇಷ ಎಂದರೆ ಕರ್ನಾಟಕದಲ್ಲಿಯೂ ನೇಮಕಾತಿ ನಡೆಯಲಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್‌ 2 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕರ್ನಾಟಕ-35, ತಮಿಳುನಾಡು / ಪುದುಚೇರಿ-160, ಆಂಧ್ರ ಪ್ರದೇಶ & ತೆಲಂಗಾಣ-50, ಮಹಾರಾಷ್ಟ್ರ-40, ಗುಜರಾತ್‌-15 ಹುದ್ದೆಗಳಿವೆ. ದೇಶದ ಯಾವುದೇ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು.

ವಯೋಮಿತಿ

ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 20 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ವಿಶೇಷ ಚೇತನರಿಗೆ 10 ವರ್ಷ, ಮಾಜಿ ಯೋಧರಿಗೆ 5 ವರ್ಷಗಳ ರಿಯಾಯಿತಿ ಇದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 175 ರೂ. ಪಾವತಿಸಬೇಕು. ಉಳಿದ ಎಲ್ಲ ವಿಭಾಗದ ಅಭ್ಯರ್ಥಿಗಳು 1,000 ರೂ. ಅನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್‌. ಲಿಖಿತ / ಆನ್‌ಲೈನ್‌ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಮಾಸಿಕ ವೇತನ

ಆಯ್ಕೆಯಾದ ಅಭ್ಯರ್ಥಿಗಳಿಗೆ 48,480 ರೂ. – 85,920 ರೂ. ಮಾಸಿಕ ವೇತನ ದೊರೆಯಲಿದೆ.

Indian Bank Recruitment 2024 ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://ibpsonline.ibps.in/iblbojul24/).
  • ಮೊಬೈಲ್‌ ನಂಬರ್‌, ಇಮೇಲ್‌ ವಿಳಾಸ ನೀಡಿ ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಸೂಕ್ತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಇಂಡಿಯನ್‌ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ ವಿಳಾಸ: indianbank.inಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ 55 ಹುದ್ದೆ; ಹೀಗೆ ಅಪ್ಲೈ ಮಾಡಿ

Continue Reading

ಉದ್ಯೋಗ

Job Alert: ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾ ಲಿಮಿಟೆಡ್‌ನಲ್ಲಿದೆ 391 ಹುದ್ದೆ; ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಿ

Job Alert: ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜೂನಿಯರ್‌ ಎಂಜಿನಿಯರ್‌, ಫಾರ್‌ಮ್ಯಾನ್‌, ಜೂನಿಯರ್‌ ಸೂಪರಿಟೆಂಡೆಂಟ್‌ ಸೇರಿ ಒಟ್ಟು 391 ಹುದ್ದೆಗಳಿವೆ. ದ್ವಿತೀಯ ಪಿಯುಸಿ, ಡಿಪ್ಲೊಮಾ, ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್‌ 7.

VISTARANEWS.COM


on

Job Alert
Koo

ಬೆಂಗಳೂರು: ಗ್ಯಾಸ್‌ ಅಥಾರಟಿ ಆಫ್‌ ಇಂಡಿಯಾ ಲಿಮಿಟೆಡ್‌ (Gas Authority of India Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಜೂನಿಯರ್‌ ಎಂಜಿನಿಯರ್‌, ಫಾರ್‌ಮ್ಯಾನ್‌, ಜೂನಿಯರ್‌ ಸೂಪರಿಟೆಂಡೆಂಟ್‌ ಸೇರಿ ಒಟ್ಟು 391 ಹುದ್ದೆಗಳಿವೆ (GAIL Recruitment 2024). ದ್ವಿತೀಯ ಪಿಯುಸಿ, ಡಿಪ್ಲೊಮಾ, ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಲು ಅರ್ಹರು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಸೆಪ್ಟೆಂಬರ್‌ 7 (Job Alert).

ಹುದ್ದೆಗಳ ವಿವರ

ಜೂನಿಯರ್ ಎಂಜಿನಿಯರ್ (ಕೆಮಿಕಲ್)- 2 ಹುದ್ದೆ, ವಿದ್ಯಾರ್ಹತೆ: ಕೆಮಿಕಲ್ / ಪೆಟ್ರೋಕೆಮಿಕಲ್/ ಕೆಮಿಕಲ್ ಟೆಕ್ನಾಲಜಿ/ ಪೆಟ್ರೋಕೆಮಿಕಲ್ ಟೆಕ್ನಾಲಜಿ ಎಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ
ಜೂನಿಯರ್ ಇಂಜಿನಿಯರ್ (ಮೆಕ್ಯಾನಿಕಲ್)- 1 ಹುದ್ದೆ, ವಿದ್ಯಾರ್ಹತೆ: ಮೆಕ್ಯಾನಿಕಲ್/ ಪ್ರೊಡಕ್ಷನ್/ ಪ್ರೊಡಕ್ಷನ್ & ಇಂಡಸ್ಟ್ರಿಯಲ್/ ಮ್ಯಾನುಫ್ಯಾಕ್ಚರಿಂಗ್/ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ
ಫಾರ್‌ಮ್ಯಾನ್‌ (ಎಲೆಕ್ಟ್ರಿಕಲ್) 1 ಹುದ್ದೆ, ವಿದ್ಯಾರ್ಹತೆ: ಎಲೆಕ್ಟ್ರಿಕಲ್/ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
ಫಾರ್‌ಮ್ಯಾನ್‌ (ಇನ್‌ಸ್ಟ್ರುಮೆಂಟೇಶನ್) 14 ಹುದ್ದೆ, ವಿದ್ಯಾರ್ಹತೆ: ಇನ್‌ಸ್ಟ್ರುಮೆಂಟೇಶನ್ / ಇನ್‌ಸ್ಟ್ರುಮೆಂಟೇಶನ್ & ಕಂಟ್ರೋಲ್/ ಎಲೆಕ್ಟ್ರಾನಿಕ್ಸ್ & ಇನ್‌ಸ್ಟ್ರುಮೆಂಟೇಶನ್/ ಎಲೆಕ್ಟ್ರಿಕಲ್ & ಇನ್‌ಸ್ಟ್ರುಮೆಂಟೇಶನ್/ ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
ಫಾರ್‌ಮ್ಯಾನ್‌ (ಸಿವಿಲ್) 6 ಹುದ್ದೆ, ವಿದ್ಯಾರ್ಹತೆ: ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ
ಜೂನಿಯರ್‌ ಸೂಪರಿಟೆಂಡೆಂಟ್‌ 5 ಹುದ್ದೆ, ವಿದ್ಯಾರ್ಹತೆ: ಪದವಿ
ಜೂನಿಯರ್ ಕೆಮಿಸ್ಟ್ 8 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ, ಎಂ.ಎಸ್‌ಸಿ
ಜೂನಿಯರ್ ಅಕೌಂಟೆಂಟ್ 14 ಹುದ್ದೆ, ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ (ಇಂಟರ್), ಸ್ನಾತಕೋತ್ತರ ಪದವಿ, ಎಂ.ಕಾಂ
ಟೆಕ್ನಿಕಲ್ ಅಸಿಸ್ಟೆಂಟ್ (ಲ್ಯಾಬೊರೇಟರಿ) 3 ಹುದ್ದೆ, ವಿದ್ಯಾರ್ಹತೆ: ಪದವಿ, ಬಿ.ಎಸ್‌ಸಿ
ಆಪರೇಟರ್ (ಕೆಮಿಕಲ್) 73 ಹುದ್ದೆ, ವಿದ್ಯಾರ್ಹತೆ: ಪದವಿ, ಬಿ.ಎಸ್‌ಸಿ
ಟೆಕ್ನಿಷಿಯನ್ (ಎಲೆಕ್ಟ್ರಿಕಲ್) 44 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ
ಟೆಕ್ನಿಷಿಯನ್ (ಇನ್‌ಸ್ಟ್ರುಮೆಂಟೇಶನ್) 45 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ
ಟೆಕ್ನಿಷಿಯನ್ (ಮೆಕ್ಯಾನಿಕಲ್) 39 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ
ಟೆಕ್ನಿಷಿಯನ್ (ಟೆಲಿಕಾಂ ಮತ್ತು ಟೆಲಿಮೆಟ್ರಿ) 11 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ
ಆಪರೇಟರ್ (ಫೈರ್) 39 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಆಪರೇಟರ್ (ಬಾಯ್ಲರ್) 8 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ, ಐಟಿಐ
ಅಕೌಂಟ್ಸ್ ಅಸಿಸ್ಟೆಂಟ್ 13 ಹುದ್ದೆ, ವಿದ್ಯಾರ್ಹತೆ: ಕಾಮರ್ಸ್‌ನಲ್ಲಿ ಪದವಿ, ಬಿ.ಕಾಂ
ಬಿಸಿನೆಸ್ ಅಸಿಸ್ಟೆಂಟ್ 65 ಹುದ್ದೆ, ವಿದ್ಯಾರ್ಹತೆ: ಬಿಬಿಎ, ಬಿಬಿಎಸ್, ಬಿಬಿಎಂ, ಪದವಿ

ವಯೋಮಿತಿ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 26ರಿಂದ 45 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಸಾಮಾನ್ಯ, ಇಡಬ್ಲ್ಯುಎಸ್‌ ಮತ್ತು ಒಬಿಸಿ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 50 ರೂ. ಪಾವತಿಸಬೇಕು. ಉಳಿದ ವಿಭಾಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಲಿಖಿತ ಪರೀಕ್ಷೆ, ಕಂಪ್ಯೂಟರ್‌ ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://gailonline.com/CRApplyingGail.html)
  • ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಸೂಕ್ತ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ 55 ಹುದ್ದೆ; ಹೀಗೆ ಅಪ್ಲೈ ಮಾಡಿ

Continue Reading

ದೇಶ

Festive Season Hiring: 12.5 ಲಕ್ಷ ಜನಕ್ಕೆ ಜಾಬ್ ಕೊಡಲು ಮುಂದಾದ ಇ-ಕಾಮರ್ಸ್‌ ಸಂಸ್ಥೆಗಳು; ಹಬ್ಬಕ್ಕೆ ಇನ್ನೇನು ಖುಷಿ ಬೇಕು!

Festive Season Hiring: ಭಾರತದಲ್ಲಿ ಆನ್‌ಲೈನ್‌ ಮೂಲಕ ಕೋಟ್ಯಂತರ ಜನ ಆರ್ಡರ್‌ ಮಾಡುತ್ತಾರೆ. ಮನೆಗೆ ಬೇಕಾಗುವ ಅಗತ್ಯ ವಸ್ತುಗಳಿಂದ ಹಿಡಿದು, ಎಲೆಕ್ಟ್ರಾನಿಕ್ಸ್‌ ಉಪಕರಣಗಳು, ಸೌಂದರ್ಯ ವರ್ಧಕಗಳು, ಮನೆಯ ಸಿಂಗಾರ, ಬಟ್ಟೆ ಸೇರಿ ಹತ್ತಾರು ಉಪಕರಣಗಳನ್ನು ಆನ್‌ಲೈನ್‌ ಮೂಲಕವೇ ಆರ್ಡರ್‌ ಮಾಡುತ್ತಾರೆ. ಗ್ರಾಹಕರ ಬೇಡಿಕೆಗಳನ್ನು ಪೂರೈಸಲು ಇ-ಕಾಮರ್ಸ್‌ ಸಂಸ್ತೆಗಳು ಹೆಚ್ಚಿನ ಉದ್ಯೋಗಿಗಳನ್ನು ನೇಮಿಸಲು ತೀರ್ಮಾನಿಸಿವೆ.

VISTARANEWS.COM


on

Festive Season Hiring
Koo

ನವದೆಹಲಿ: ಕರ್ನಾಟಕ ಸೇರಿ ದೇಶಾದ್ಯಂತ ನಾಗರ ಪಂಚಮಿ ಹಬ್ಬದ ಖುಷಿ ಮನೆಮಾಡಿದೆ. ರಕ್ಷಾ ಬಂಧನ, ಗಣೇಶ ಚತುರ್ಥಿ, ದಸರಾ, ದೀಪಾವಳಿ ಸೇರಿ ಸಾಲು ಸಾಲು ಹಬ್ಬಗಳು (Festival Season) ಸಮೀಪಿಸುತ್ತಿವೆ. ಬಟ್ಟೆ, ಚಿನ್ನ, ಆಪ್ತರಿಗೆ ಉಡುಗೊರೆ ಸೇರಿ ಹತ್ತಾರು ವಸ್ತುಗಳನ್ನು ಖರೀದಿಸವು ಮೂಲಕ ದೇಶದ ಜನರು ಎಲ್ಲ ಹಬ್ಬಗಳನ್ನು ಸಡಗರ ಸಂಭ್ರಮದಿಂದ ಆಚರಿಸಲು ಸಜ್ಜಾಗಿದ್ದಾರೆ. ಇದರ ಬೆನ್ನಲ್ಲೇ, ಇ-ಕಾಮರ್ಸ್‌ ಸಂಸ್ಥೆಗಳು (E Commerce Companies) ಸುಮಾರು 12.5 ಲಕ್ಷ ಜನರಿಗೆ ಉದ್ಯೋಗ (Festive Season Hiring) ನೀಡಲು ಮುಂದಾಗಿವೆ ಎಂದು ತಿಳಿದುಬಂದಿದೆ.

ಹೌದು, ಇ-ಕಾಮರ್ಸ್‌ ಸಂಸ್ಥೆಗಳ ವಹಿವಾಟು ಹಬ್ಬದ ಸೀಸನ್‌ನಲ್ಲಿ ಶೇ.35ರಷ್ಟು ಏರಿಕೆಯಾಗುತ್ತದೆ. ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಿನ ವಹಿವಾಟು ಆಗಲಿದೆ ಎಂದು ಅಂದಾಜಿಸಲಾಗಿದೆ. ಹಾಗಾಗಿ, ಇ-ಕಾಮರ್ಸ್‌ ಸಂಸ್ಥೆಗಳು ಲಕ್ಷಾಂತರ ಜನರಿಗೆ ಉದ್ಯೋಗ ನೀಡಲು ಮುಂದಾಗಿವೆ. ಸುಮಾರು 10 ಲಕ್ಷ ಜನರಿಗೆ ತಾತ್ಕಾಲಿಕವಾಗಿ, ಇನ್ನೂ 2.5 ಲಕ್ಷ ಮಂದಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ತೀರ್ಮಾನಿಸಿವೆ. ಹಬ್ಬದ ಆಚರಣೆಯ ಖುಷಿಯ ಜತೆಗೆ ಉದ್ಯೋಗದ ಖುಷಿಯನ್ನೂ ನೀಡಲು ಕಂಪನಿಗಳು ಮುಂದಾಗಿವೆ.

ಭಾರತದಲ್ಲಿ ಆನ್‌ಲೈನ್‌ ಮೂಲಕ ಕೋಟ್ಯಂತರ ಜನ ಆರ್ಡರ್‌ ಮಾಡುತ್ತಾರೆ. ಮನೆಗೆ ಬೇಕಾಗುವ ಅಗತ್ಯ ವಸ್ತುಗಳಿಂದ ಹಿಡಿದು, ಎಲೆಕ್ಟ್ರಾನಿಕ್ಸ್‌ ಉಪಕರಣಗಳು, ಸೌಂದರ್ಯ ವರ್ಧಕಗಳು, ಮನೆಯ ಸಿಂಗಾರ, ಬಟ್ಟೆ ಸೇರಿ ಹತ್ತಾರು ಉಪಕರಣಗಳನ್ನು ಆನ್‌ಲೈನ್‌ ಮೂಲಕವೇ ಆರ್ಡರ್‌ ಮಾಡುತ್ತಾರೆ. ಇದನ್ನು ಅರಿತ ಇ-ಕಾಮರ್ಸ್‌ ಸಂಸ್ಥೆಗಳು ಗ್ರಾಹಕರಿಗೆ ಸಮಯಕ್ಕೆ ಸರಿಯಾಗಿ ಆರ್ಡರ್‌ಗಳನ್ನು ಮನೆಬಾಗಿಲಿಗೆ ತಲುಪಿಸಲು ಲಕ್ಷಾಂತರ ಜನರನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿವೆ ಎಂದು ತಿಳಿದುಬಂದಿದೆ.

ಕಳೆದ ವರ್ಷ ಹಬ್ಬದ ಸೀಸನ್‌ನಲ್ಲಿ ಪ್ರತಿ ದಿನ ಸರಾಸರಿ 20 ಲಕ್ಷ ಆನ್‌ಲೈನ್‌ ಆರ್ಡರ್‌ಗಳು ದಾಖಲಾಗಿದ್ದವು. ಗ್ರಾಹಕರ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ಇ-ಕಾಮರ್ಸ್‌ ಸಂಸ್ಥೆಗಳು ಪರದಾಡಿದವು. ಆದರೆ, ಈ ಬಾರಿ ಗ್ರಾಹಕರಿಗೆ ಯಾವುದೇ ವ್ಯತ್ಯಯ ಆಗದಂತೆ ನೋಡಿಕೊಳ್ಳಲು ಅಮೆಜಾನ್‌, ಫ್ಲಿಪ್‌ಕಾರ್ಟ್‌ ಸೇರಿ ಹತ್ತಾರು ಇ ಕಾಮರ್ಸ್‌ ಸಂಸ್ಥೆಗಳು ನೌಕರರನ್ನು ನೇಮಿಸಿಕೊಳ್ಳುತ್ತಿವೆ. ಇ-ಕಾಮರ್ಸ್‌ ಸಂಸ್ಥೆಗಳು ಮಾತ್ರವಲ್ಲ, ದೊಡ್ಡ ದೊಡ್ಡ ಶಾಪಿಂಗ್‌ ಮಾಲ್‌ಗಳು, ಚಿನ್ನಾಭರಣಗಳ ಮಳಿಗೆಗಳ್ಲಲೂ ಹೆಚ್ಚಿನ ನೇಮಕಾತಿ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Bangladesh Unrest: ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ನೇಮಕ

Continue Reading

ಉದ್ಯೋಗ

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ 55 ಹುದ್ದೆ; ಹೀಗೆ ಅಪ್ಲೈ ಮಾಡಿ

Job Alert: ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌, ಡೆಪ್ಯುಟಿ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಮತ್ತು ಸೀನಿಯರ್‌ ಮೆಡಿಕಲ್‌ ಆಫೀಸರ್‌ ಸೇರಿ ಒಟ್ಟು 55 ಹುದ್ದೆಗಳಿವೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 16.

VISTARANEWS.COM


on

Job Alert
Koo

ಬೆಂಗಳೂರು: ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ (Tehri Hydro Development Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌, ಡೆಪ್ಯುಟಿ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಮತ್ತು ಸೀನಿಯರ್‌ ಮೆಡಿಕಲ್‌ ಆಫೀಸರ್‌ ಸೇರಿ ಒಟ್ಟು 55 ಹುದ್ದೆಗಳಿವೆ (THDC Recruitment 2024). ಪದವಿ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 16 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮ್ಯಾನೇಜರ್ 25 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌, ಸ್ನಾತಕೋತ್ತರ ಪದವಿ
ಅಸಿಸ್ಟೆಂಟ್ ಮ್ಯಾನೇಜರ್ 19 ಹುದ್ದೆ, ವಿದ್ಯಾರ್ಹತೆ: ಪದವಿ, ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌
ಡೆಪ್ಯುಟಿ ಮ್ಯಾನೇಜರ್ 3 ಹುದ್ದೆ, ವಿದ್ಯಾರ್ಹತೆ: ಪದವಿ
ಸೀನಿಯರ್ ಮ್ಯಾನೇಜರ್ 3 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌
ಹಿರಿಯ ವೈದ್ಯಾಧಿಕಾರಿ 5 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್

ಗರಿಷ್ಠ ವಯೋಮಿತಿ

ಮ್ಯಾನೇಜರ್ 45 ವರ್ಷ
ಅಸಿಸ್ಟೆಂಟ್ ಮ್ಯಾನೇಜರ್ 32 ವರ್ಷ
ಡೆಪ್ಯುಟಿ ಮ್ಯಾನೇಜರ್ 40 ವರ್ಷ
ಸೀನಿಯರ್ ಮ್ಯಾನೇಜರ್ 48 ವರ್ಷ
ಹಿರಿಯ ವೈದ್ಯಾಧಿಕಾರಿ 34 ವರ್ಷ

ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ (ಸಾಮಾನ್ಯ / ಇಡಬ್ಲ್ಯುಎಸ್‌) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಬಿಡಿ (ಎಸ್‌ಸಿ / ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಾಜಿ ಸೈನಿಕರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್‌ ಅಭ್ಯರ್ಥಿಗಳು ಅರ್ಜಿ ಸುಲ್ಕವಾಗಿ ಆನ್‌ಲೈನ್‌ನಲ್ಲಿ 600 ರೂ. ಪಾವತಿಸಬೇಕು. ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

THDC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಇಮೇಲ್‌, ಮೊಬೈಲ್‌ ನಂಬರ್‌ ಬಳಸಿ ಹೆಸರು ನಮೂದಿಸಿ.
  • ಇಲ್ಲಿ ಕಂಡುಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ, ವೆಬ್‌ಸೈಟ್‌ ವಿಳಾಸ: thdc.co.inಕ್ಕೆ ಭೇಟಿ ನೀಡಿ ಅಥವಾ thdcrecruitment@thdc.co.in ಇಮೇಲ್‌ಗೆ ಸಂಪರ್ಕಿಸಿ.

ಇದನ್ನೂ ಓದಿ: Job Alert: CDACಯಲ್ಲಿದೆ 250 ಹುದ್ದೆ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

Continue Reading
Advertisement
Terror Attack
ದೇಶ27 mins ago

Terror Attack: ಕ್ಯಾಪ್ಟನ್‌ ಹುತಾತ್ಮರಾಗಿರುವ ಬೆನ್ನಲ್ಲೇ ಉಗ್ರನನ್ನು ಹೊಡೆದುರುಳಿಸಿದ ಸೇನೆ; ಮುಂದುವರಿದ ಕಾರ್ಯಾಚರಣೆ

Viral Video
Latest28 mins ago

Viral Video: ಶಾಲೆಯಲ್ಲಿ ಶಿಕ್ಷಕಿ, ಶಿಕ್ಷಕನ ನಡುವೆ ಭೀಕರ ಮಾರಾಮಾರಿ! ವಿಡಿಯೊ ನೋಡಿದವರಿಗೆ ಗಾಬರಿ!

Sexual Abuse
Latest56 mins ago

Sexual Abuse: ದಲಿತ ಬಾಲಕಿಯನ್ನು ಅಪಹರಿಸಿ ಇಸ್ಲಾಂಗೆ ಮತಾಂತರ; ಮುಸ್ಲಿಂ ಧರ್ಮಗುರು ಬಂಧನ

Government Employees
ಕರ್ನಾಟಕ1 hour ago

Government Employees: ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆ.17ಕ್ಕೆ ಅಭಿನಂದನಾ ಸಮಾರಂಭ, ಕಾರ್ಯಾಗಾರ: ಸಿ.ಎಸ್. ಷಡಾಕ್ಷರಿ

Viral News
Latest1 hour ago

Viral News: ಭರತನಾಟ್ಯ ರಂಗಪ್ರವೇಶ ಮಾಡಿ ಇತಿಹಾಸ ನಿರ್ಮಿಸಿದ 13 ವರ್ಷದ ಚೀನೀ ಬಾಲಕಿ

kolkata doctor murder case
ದೇಶ1 hour ago

Kolkata Doctor Murder Case: ದೇಹದಲ್ಲಿ 150 ಮಿಲಿ ಗ್ರಾಂ ವೀರ್ಯ ಪತ್ತೆ- ಟ್ರೈನಿ ವೈದ್ಯೆಯ ಮೇಲೆ ಗ್ಯಾಂಗ್‌ರೇಪ್‌ ಆಗಿತ್ತಾ?

Sexual Abuse
Latest1 hour ago

Sexual Abuse: ಹಿಂದೂ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ; ಬಲವಂತವಾಗಿ ಗೋಮಾಂಸ ತಿನ್ನಿಸಿ ದೌರ್ಜನ್ಯ

Independence Day 2024
ದೇಶ2 hours ago

Independence day 2024: ಆಗಸ್ಟ್ 15ರ ಕುರಿತ 8 ಪ್ರಶ್ನೆಗಳಿಗೆ ಇಲ್ಲಿದೆ ಕುತೂಹಲಕರ ಉತ್ತರ!

Disha Patani Goes Bold in Strapless Gown As She Flaunts Her Curves During Sexy Photoshoot
ಬಾಲಿವುಡ್2 hours ago

Disha Patani: ಬೋಲ್ಡ್‌ ಫೋಟೊಶೂಟ್‌ನಲ್ಲಿ ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ದಿಶಾ ಪಟಾನಿ!

Google AI Robot
ತಂತ್ರಜ್ಞಾನ2 hours ago

Google AI Robot: ಟೇಬಲ್ ಟೆನಿಸ್ ಅಂಗಳಕ್ಕೂ ಇಳಿದ ರೋಬೋಟ್!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ6 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ6 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ6 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌