Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡುವ ವಿಧಾನ ಇಲ್ಲಿದೆ - Vistara News

ಉದ್ಯೋಗ

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

Job Alert: ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌, ಡೆಪ್ಯುಟಿ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಮತ್ತು ಸೀನಿಯರ್‌ ಮೆಡಿಕಲ್‌ ಆಫೀಸರ್‌ ಸೇರಿ ಒಟ್ಟು 55 ಹುದ್ದೆಗಳಿವೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 16.

VISTARANEWS.COM


on

Job Alert
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ (Tehri Hydro Development Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌, ಡೆಪ್ಯುಟಿ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಮತ್ತು ಸೀನಿಯರ್‌ ಮೆಡಿಕಲ್‌ ಆಫೀಸರ್‌ ಸೇರಿ ಒಟ್ಟು 55 ಹುದ್ದೆಗಳಿವೆ (THDC Recruitment 2024). ಪದವಿ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 16 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮ್ಯಾನೇಜರ್ 25 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌, ಸ್ನಾತಕೋತ್ತರ ಪದವಿ
ಅಸಿಸ್ಟೆಂಟ್ ಮ್ಯಾನೇಜರ್ 19 ಹುದ್ದೆ, ವಿದ್ಯಾರ್ಹತೆ: ಪದವಿ, ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌
ಡೆಪ್ಯುಟಿ ಮ್ಯಾನೇಜರ್ 3 ಹುದ್ದೆ, ವಿದ್ಯಾರ್ಹತೆ: ಪದವಿ
ಸೀನಿಯರ್ ಮ್ಯಾನೇಜರ್ 3 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌
ಹಿರಿಯ ವೈದ್ಯಾಧಿಕಾರಿ 5 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್

ಗರಿಷ್ಠ ವಯೋಮಿತಿ

ಮ್ಯಾನೇಜರ್ 45 ವರ್ಷ
ಅಸಿಸ್ಟೆಂಟ್ ಮ್ಯಾನೇಜರ್ 32 ವರ್ಷ
ಡೆಪ್ಯುಟಿ ಮ್ಯಾನೇಜರ್ 40 ವರ್ಷ
ಸೀನಿಯರ್ ಮ್ಯಾನೇಜರ್ 48 ವರ್ಷ
ಹಿರಿಯ ವೈದ್ಯಾಧಿಕಾರಿ 34 ವರ್ಷ

ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ (ಸಾಮಾನ್ಯ / ಇಡಬ್ಲ್ಯುಎಸ್‌) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಬಿಡಿ (ಎಸ್‌ಸಿ / ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಾಜಿ ಸೈನಿಕರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್‌ ಅಭ್ಯರ್ಥಿಗಳು ಅರ್ಜಿ ಸುಲ್ಕವಾಗಿ ಆನ್‌ಲೈನ್‌ನಲ್ಲಿ 600 ರೂ. ಪಾವತಿಸಬೇಕು. ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

THDC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಇಮೇಲ್‌, ಮೊಬೈಲ್‌ ನಂಬರ್‌ ಬಳಸಿ ಹೆಸರು ನಮೂದಿಸಿ.
  • ಇಲ್ಲಿ ಕಂಡುಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ, ವೆಬ್‌ಸೈಟ್‌ ವಿಳಾಸ: thdc.co.inಕ್ಕೆ ಭೇಟಿ ನೀಡಿ ಅಥವಾ thdcrecruitment@thdc.co.in ಇಮೇಲ್‌ಗೆ ಸಂಪರ್ಕಿಸಿ.

ಇದನ್ನೂ ಓದಿ: Sbi Recruitment: ಎಸ್‌ಬಿಐನಲ್ಲಿ 1,040 ಎಸ್‌ಸಿಒ ಹುದ್ದೆಗಳಿಗೆ ಅರ್ಜಿ ಅಹ್ವಾನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Sameer Nigam: ಕನ್ನಡಿಗರ ಕ್ಷಮೆಯಾಚಿಸಿದ PhonePe ಸಿಇಒ ಸಮೀರ್‌ ನಿಗಮ್‌; ಬಾಯ್ಕಾಟ್‌ ಪೆಟ್ಟಿಗೆ ಥಂಡಾ

Sameer Nigam: ಫೊನ್‌ ಪೇ ಅಪ್ಲಿಕೇಶನ್‌ ವಿರುದ್ಧ ಕರ್ನಾಟಕದಲ್ಲಿ ಅಭಿಯಾನ ಆರಂಭವಾದ ಬೆನ್ನಲ್ಲೇ ಸಿಇಒ ಸಮೀರ್‌ ನಿಗಮ್‌ ಎಚ್ಚೆತ್ತುಕೊಂಡಿದ್ದಾರೆ. ನಾನು ಸಮಸ್ತ ಕನ್ನಡಿಗರ ಕ್ಷಮೆಯಾಚಿಸುತ್ತೇನೆ ಎಂಬುದಾಗಿ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ, ಕನ್ನಡಿಗರ ಮೇಲೆ ವಿಶೇಷ ಪ್ರೀತಿ ಇದೆ ಎಂದೂ ಹೇಳಿದ್ದಾರೆ.

VISTARANEWS.COM


on

Sameer Nigam
Koo

ಬೆಂಗಳೂರು: ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದ ಫೋನ್ ಪೇ ಸಿಇಒ ಸಮೀರ್ ನಿಗಮ್ (Sameer Nigam) ಕೊನೆಗೂ ಕ್ಷಮೆಯಾಚಿಸಿದ್ದಾರೆ. ಮೀಸಲಾತಿ ತೀರ್ಮಾನವನ್ನು ವಿರೋಧಿಸಿದ ಕಾರಣ ಕರ್ನಾಟಕದಾದ್ಯಂತ ಬಾಯ್ಕಾಟ್‌ ಫೋನ್‌ ಪೇ (Boycott PhonePe) ಎಂಬ ಅಭಿಯಾನ ಆರಂಭವಾದ ಬೆನ್ನಲ್ಲೇ, ಸಮೀರ್‌ ನಿಗಮ್‌ ಅವರು ಎಕ್ಸ್‌ ಸಾಮಾಜಿಕ ಜಾಲತಾಣದ ಪೋಸ್ಟ್‌ ಮೂಲಕ ಕನ್ನಡಿಗರ ಕ್ಷಮೆಯಾಚಿಸಿದ್ದಾರೆ.

ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸಮೀರ್‌ ನಿಗಮ್‌ ಅವರು ಪೋಸ್ಟ್‌ ಮಾಡಿದ್ದಾರೆ. “ಕಳೆದ ವಾರ ನಾನು ಉದ್ಯೋಗ ಮೀಸಲಾತಿ ವಿಧೇಯಕದ ಕುರಿತು ನೀಡಿದ ಹೇಳಿಕೆ ಬಗ್ಗೆ ವಿರೋಧ ವ್ಯಕ್ತವಾಗುತ್ತಿರುವ ಕುರಿತು ಮಾಧ್ಯಮಗಳ ಲೇಖನಗಳನ್ನು ಓದಿದೆ. ನನ್ನ ಬಗ್ಗೆ ವೈಯಕ್ತಿಕವಾಗಿ ಟೀಕಿಸಿದ್ದನ್ನು ಗಮನಿಸಿದೆ. ಆದರೆ, ನಾನೊಂದು ವಿಷಯವನ್ನು ಹೇಳಲು ಇಷ್ಟಪಡುತ್ತೇನೆ. ನನಗೆ ಕರ್ನಾಟಕ ಹಾಗೂ ಕರ್ನಾಟಕದ ಜನರನ್ನು ಅವಮಾನಿಸುವುದು ಎಂದಿಗೂ ನನ್ನ ಉದ್ದೇಶ ಆಗಿಲ್ಲ. ಇಷ್ಟಾದರೂ, ನನ್ನ ಹೇಳಿಕೆಯಿಂದ ಯಾರಿಗಾದರೂ ನೋವುಂಟಾಗಿದ್ದರೆ, ಅದಕ್ಕೆ ನಾನು ಕ್ಷಮೆ ಕೇಳುತ್ತೇನೆ” ಎಂದಿದ್ದಾರೆ.

ಕನ್ನಡದ ಮೇಲೆ ನನಗೆ ಗೌರವ ಎಂದ ಸಮೀರ್‌

“ಕನ್ನಡ ಸೇರಿ ದೇಶದ ಎಲ್ಲ ಭಾಷೆಗಳ ಮೇಲೆ ನನಗೆ ಹೆಚ್ಚು ಗೌರವ ಇದೆ. ಭಾಷಾ ವೈವಿಧ್ಯತೆಯು ಭಾರತದ ಶ್ರೀಮಂತ ಪರಂಪರೆಯಾಗಿದೆ. ದೇಶದ ಪ್ರತಿಯೊಬ್ಬರೂ ಸ್ಥಳೀಯ ಸಂಸ್ಕೃತಿ ಹಾಗೂ ಸಂಪ್ರದಾಯಗಳನ್ನು ಪಾಲಿಸಬೇಕು ಎಂಬುದು ನನ್ನ ಅಭಿಪ್ರಾಯವಾಗಿದೆ. ಬೆಂಗಳೂರಿನಲ್ಲಿ ಸ್ಥಾಪನೆಯಾದ ದೇಶದ ಸ್ಟಾರ್ಟಪ್‌ಗಳು, ಗೂಗಲ್‌, ಆಪಲ್‌, ಅಮೆಜಾನ್‌, ಮೈಕ್ರೋಸಾಫ್ಟ್‌ನಂತಹ ಕಂಪನಿಗಳು ಲಕ್ಷ ಡಾಲರ್‌ ಸಂಸ್ಥೆಗಳಾಗಿ ಹೊರಹೊಮ್ಮಿವೆ. ಕರ್ನಾಟಕ ಹಾಗೂ ಬೆಂಗಳೂರಿನಲ್ಲಿ ಲಕ್ಷಾಂತರ ಉದ್ಯೋಗ ಸೃಷ್ಟಿಸುವುದು ನನ್ನ ಗುರಿಯಾಗಿದೆ. ಇದಕ್ಕೆ ಎಲ್ಲರ ಸಹಕಾರವಿರಲಿ” ಎಂಬುದಾಗಿ ಪೋಸ್ಟ್‌ ಮಾಡಿದ್ದಾರೆ.

ಫೋನ್‌ ಪೇ ಹುಟ್ಟಿದ್ದೇ ಬೆಂಗಳೂರಿನಲ್ಲಿ; ಸಿಇಒ

“ಬೆಂಗಳೂರು ದೇಶದ ಅದ್ಭುತ ನಗರವಾಗಿದ್ದು, ಜಾಗತಿಕ ದರ್ಜೆಯ ತಂತ್ರಜ್ಞಾನ ಹಾಗೂ ಅದ್ಭುತ ವೈವಿಧ್ಯತೆಯನ್ನು ಹೊಂದಿದೆ. ಅಷ್ಟೇ ಏಕೆ, ಫೋನ್‌ ಪೇ ಹುಟ್ಟಿದ್ದೇ ಬೆಂಗಳೂರಿನಲ್ಲಿ. ಫೋನ್‌ ಪೇಅನ್ನು ಕಳೆದ ಒಂದು ದಶಕದಲ್ಲಿ ಸುಮಾರು 55 ಕೋಟಿ ಭಾರತೀಯರು ಬಳಸಲು ಬೆಂಗಳೂರು ಕೂಡ ಕಾರಣವಾಗಿದೆ. ಬೆಂಗಳೂರನ್ನು ದೇಶದ ಸಿಲಿಕಾನ್‌ ವ್ಯಾಲಿ ಎಂದೇ ಕರೆಯುತ್ತಾರೆ. ಇಲ್ಲಿನ ಇನೋವೇಷನ್‌ ಸಂಸ್ಕೃತಿಯು ಅದ್ಭುತವಾಗಿದ್ದು, ಜಗತ್ತನ್ನೇ ಆಕರ್ಷಿಸುತ್ತಿದೆ. ಕರ್ನಾಟಕ ಸರ್ಕಾರ ಹಾಗೂ ಕನ್ನಡಿಗರ ಸಹಕಾರದಿಂದಲೇ ಬೆಂಗಳೂರು ಜಾಗತಿಕ ತಂತ್ರಜ್ಞಾನದ ಸೂಪರ್‌ ಪವರ್‌ ಎನಿಸಿದೆ” ಎಂದು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಕರ್ನಾಟಕದ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕುರಿತು ರಾಜ್ಯ ಸರ್ಕಾರ ವಿಧೇಯಕ ರಚಿಸುವ ಪ್ರಸ್ತಾಪ ಮುಂದಿಟ್ಟುಕೊಂಡಿದ್ದನ್ನು ಸಮೀರ್‌ ನಿಗಮ್‌ ವಿರೋಧಿಸಿದ್ದರು. ಹಾಗಾಗಿ, ಕರ್ನಾಟಕದಲ್ಲಿ ಕನ್ನಡಿಗರು ಫೋನ್‌ ಪೇ ವಿರುದ್ಧ ಅಭಿಯಾನ ಆರಂಭಿಸಿದ್ದರು. ಸಾವಿರಾರು ಜನ ಫೋನ್‌ಪೇ ಅಪ್ಲಿಕೇಶನ್‌ಅನ್ನು ಅನ್‌ ಇನ್‌ಸ್ಟಾಲ್‌ ಮಾಡಿಕೊಂಡು, ಆ ಫೋಟೊಗಳನ್ನು ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ರಾಜ್ಯದ ಕನ್ನಡ ಸಂಘಟನೆಗಳು ಕೂಡ ಫೋನ್‌ ಪೇ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದವು. ಇದರಿಂದಾಗಿ ಬೆಚ್ಚಿಬಿದ್ದ ಫೋನ್‌ ಪೇ ಸಿಇಒ ಈಗ ಕ್ಷಮೆಯಾಚಿಸಿದ್ದಾರೆ.

ಇದನ್ನೂ ಓದಿ: PhonePe : ಇ-ಕಾಮರ್ಸ್‌ಗೆ ಫೋನ್‌ಪೇ ಪ್ರವೇಶ, ಹೈಪರ್‌ಲೋಕಲ್‌ ಆ್ಯಪ್‌ ಪಿನ್‌ಕೋಡ್‌ ಬಿಡುಗಡೆ

Continue Reading

ಕರ್ನಾಟಕ

IT Employees: ಐಟಿ ನೌಕರರಿಗೆ ದಿನಕ್ಕೆ 14 ಗಂಟೆ ಕೆಲಸ; ಉದ್ಯೋಗಿಗಳ ಒಕ್ಕೂಟ ಆಕ್ರೋಶ, ಅದರ ವಾದ ಹೀಗಿದೆ

IT Employees: ಐಟಿ ಉದ್ಯೋಗಿಗಳ ಕೆಲಸದ ಅವಧಿ ವಿಸ್ತರಣೆಯ ಕುರಿತ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ಕರ್ನಾಟಕ ರಾಜ್ಯ ಐಟಿ, ಐಟಿ ಆಧಾರಿತ ಸೇವೆಗಳ ಉದ್ಯೋಗಿಗಳ ಒಕ್ಕೂಟವು (KITU) ವಿರೋಧ ವ್ಯಕ್ತಪಡಿಸಿದೆ. ಕೆಐಟಿಯು ಸದಸ್ಯರು ಈಗಾಗಲೇ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರನ್ನು ಭೇಟಿಯಾಗಿ, ಸರ್ಕಾರದ ಪ್ರಸ್ತಾಪದ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ. ಹಾಗಾದರೆ, ಒಕ್ಕೂಟ ಹೇಳಿದ್ದೇನು? ಅದರ ಅಭಿಪ್ರಾಯವೇನು ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

IT Employees
Koo

ಬೆಂಗಳೂರು: ರಾಜ್ಯದಲ್ಲಿ ಐಟಿ ಉದ್ಯೋಗಿಗಳ (IT Employees Working Hours) ಕೆಲಸ ಅವಧಿಯನ್ನು 12 ತಾಸಿಗಿಂತ ಹೆಚ್ಚು ಅಥವಾ 14 ತಾಸುಗಳಿಗೆ ವಿಸ್ತರಿಸುವ ಕುರಿತು ತಿದ್ದುಪಡಿ ತರಲು ಕರ್ನಾಟಕ ಸರ್ಕಾರವು‌ (Karnataka Government) ಚಿಂತನೆ ನಡೆಸಿದೆ. ಇದು ಈಗ ಭಾರಿ ಚರ್ಚೆಗೆ ಕಾರಣವಾಗಿದೆ. ಪರ-ವಿರೋಧ, ಸಕಾರಾತ್ಮಕ-ನಕಾರಾತ್ಮಕ ಅಂಶಗಳ ಕುರಿತು ಚರ್ಚಿಸಲಾಗುತ್ತಿದೆ. ಇದರ ಬೆನ್ನಲ್ಲೇ, ಸರ್ಕಾರದ ತೀರ್ಮಾನಕ್ಕೆ ಕರ್ನಾಟಕ ರಾಜ್ಯ ಐಟಿ, ಐಟಿ ಆಧಾರಿತ ಸೇವೆಗಳ ಉದ್ಯೋಗಿಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ.

ರಾಜ್ಯ ಸರ್ಕಾರದ ಪ್ರಸ್ತಾಪದಲ್ಲಿ ಏನಿದೆ?

ರಾಜ್ಯ ಸರ್ಕಾರವು ಕರ್ನಾಟಕ ಶಾಪ್ಸ್‌ ಆ್ಯಂಡ್‌ ಎಶ್ಟಾಬ್ಲಿಶ್‌ಮೆಂಟ್‌ ಆ್ಯಕ್ಟ್‌ಗೆ (Karnataka Shops and Commercial Establishment Act) ತಿದ್ದುಪಡಿ ತಂದು, ರಾಜ್ಯದಲ್ಲಿ ಐಟಿ, ಐಟಿ ಆಧಾರಿತ ಸೇವೆಗಳು ಹಾಗೂ ಬಿಪಿಒಗಳ ಕೆಲಸದ ಅವಧಿಯನ್ನು 12ರಿಂದ 14 ತಾಸುಗಳಿಗೆ ಹೆಚ್ಚಿಸುವ ಪ್ರಸ್ತಾಪ ಇಟ್ಟುಕೊಂಡಿದೆ. ಶೀಘ್ರದಲ್ಲೇ ಅಧಿವೇಶನದಲ್ಲಿ ಈ ಕುರಿತು ವಿಧೇಯಕ ಮಂಡಿಸಿ, ಕಾಯ್ದೆಗೆ ತಿದ್ದುಪಡಿ ತರುವ ಉದ್ದೇಶವಿದೆ ಎಂದು ಮೂಲಗಳು ತಿಳಿಸಿವೆ. ಐಟಿ ಕ್ಷೇತ್ರದ ಉತ್ತೇಜನಕ್ಕಾಗಿ ರಾಜ್ಯ ಸರ್ಕಾರ ಇಂತಹ ಪ್ರಸ್ತಾಪ ಹೊಂದಿದೆ ಎಂದೇ ಹೇಳಲಾಗುತ್ತಿದೆ. ಆದರೆ, ಇದು ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ.

IT Employees

ಒಕ್ಕೂಟದ ವಾದವೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಪ್ರಸ್ತಾಪಕ್ಕೆ ಕರ್ನಾಟಕ ರಾಜ್ಯ ಐಟಿ, ಐಟಿ ಆಧಾರಿತ ಸೇವೆಗಳ ಉದ್ಯೋಗಿಗಳ ಒಕ್ಕೂಟವು (KITU) ಭಾರಿ ವಿರೋಧ ವ್ಯಕ್ತಪಡಿಸಿದೆ. “ಐಟಿ ಉದ್ಯೋಗಿಗಳ ಕೆಲಸವನ್ನು ನಾಲ್ಕು ಗಂಟೆ ಹೆಚ್ಚಿಸುವುದರಿಂದ ನೌಕರರ ಖಾಸಗಿ ಹಾಗೂ ವೃತ್ತಿ ಜೀವನದ ಮೇಲೆ ಭಾರಿ ಪರಿಣಾಮ ಬೀರಲಿದೆ. ಉದ್ಯೋಗಿಗಳು ವೃತ್ತಿ ಮಾಡುವ ಬದಲು ಮಷೀನ್‌ಗಳಾಗಿ ಬದಲಾಗುತ್ತಾರೆ. ಅವರ ಆರೋಗ್ಯದ ಮೇಲೂ ನಕಾರಾತ್ಮಕ ಪರಿಣಾಮ ಬೀರಲಿದೆ. ಹಾಗಾಗಿ, ರಾಜ್ಯ ಸರ್ಕಾರವು ಪ್ರಸ್ತಾಪವನ್ನು ಪರಿಷ್ಕರಿಸಬೇಕು” ಎಂದು ಒಕ್ಕೂಟ ಆಗ್ರಹಿಸಿದೆ.

“ಐಟಿ ಕಂಪನಿಗಳಲ್ಲಿ ಈಗ ಮೂರು ಶಿಫ್ಟ್‌ಗಳಲ್ಲಿ ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ಉದ್ಯೋಗಿಗಳ ಕೆಲಸದ ಅವಧಿ ಹೆಚ್ಚಿಸುವುದರಿಂದ ಮೂರರ ಬದಲು ಎರಡೇ ಶಿಫ್ಟ್‌ಗಳನ್ನು ಮಾಡಬೇಕಾಗುತ್ತದೆ. ಆಗ, ಮೂವರ ಕೆಲಸವನ್ನು ಇಬ್ಬರು ಮಾಡುವ ಜತೆಗೆ, ಒಂದು ಶಿಫ್ಟ್‌ನಲ್ಲಿರುವ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವಂತಾಗುತ್ತದೆ. ಈಗಾಗಲೇ ಶೇ.45ರಷ್ಟು ಐಟಿ ಉದ್ಯೋಗಿಗಳು ಒತ್ತಡ, ಮಾನಸಿಕ ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಶೇ.55ರಷ್ಟು ಉದ್ಯೋಗಿಗಳು ದೈಹಿಕ ಆರೋಗ್ಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಈಗ ಕೆಲಸದ ಅವಧಿಯನ್ನು ವಿಸ್ತರಿಸಿದರೆ, ಅವರ ಮೇಲೆ ಭಾರಿ ಗಂಭೀರ ಪರಿಣಾಮ ಉಂಟಾಗುತ್ತದೆ” ಎಂದು ಎಚ್ಚರಿಸಿದೆ.

ಸಾಮಾಜಿಕ ಜಾಲತಾಣಗಳಲ್ಲೂ ಈ ಕುರಿತು ವಿರೋಧ ವ್ಯಕ್ತವಾಗುತ್ತಿದೆ. ಐಟಿ ಕ್ಷೇತ್ರಗಳಲ್ಲಿ ಕೆಲಸ ಮಾಡುವವರು ಈಗಾಗಲೇ ಒತ್ತಡ, ಬಿಪಿ, ಶುಗರ್‌ ಸೇರಿ ಹಲವು ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಈಗ 14 ಗಂಟೆಗೆ ನೌಕರರ ಕೆಲಸದ ಅವಧಿಯನ್ನು ಹೆಚ್ಚಿಸಿದರೆ ನೌಕರರು ಹಣಕ್ಕಿಂತ ಹೆಚ್ಚು ಕಾಯಿಲೆಗಳನ್ನು ಗಳಿಸುತ್ತಾರೆ ಎಂಬುದಾಗಿ ಜನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಯ್ದೆ ಪ್ರಕಾರ ಈಗ ಐಟಿ ಉದ್ಯೋಗಿಗಳ ಕೆಲಸದ ಅವಧಿಯು 10 ಗಂಟೆ ಆಗಿದೆ.

ಇದನ್ನೂ ಓದಿ: IT Employees: ಕರ್ನಾಟಕದ ಐಟಿ ಉದ್ಯೋಗಿಗಳೇ, ದಿನಕ್ಕೆ 14 ಗಂಟೆ ಕೆಲಸ ಮಾಡಲು ಸಜ್ಜಾಗಿ; ರಾಜ್ಯ ಸರ್ಕಾರದ ನಿರ್ಧಾರ ಹೀಗಿದೆ

Continue Reading

ಉದ್ಯೋಗ

IAS Trainees: ತರಬೇತಿ ಸಮಯದಲ್ಲಿ ಐಎಎಸ್ ಅಧಿಕಾರಿಗಳಿಗೆ ಏನೇನು ಸವಲತ್ತುಗಳಿರುತ್ತವೆ?

ನಾಗರಿಕ ಸೇವೆಗಳಿಗೆ ಸೇರಲು ದೇಶದ ಅತ್ಯಂತ ಕಠಿಣ ಪರೀಕ್ಷೆಯಾದ ಯುಪಿಎಸ್ ಸಿ ಸಿವಿಲ್ ಸರ್ವೀಸಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಅವಶ್ಯಕ. ಎರಡು ವರ್ಷಗಳ ಐಎಎಸ್ ತರಬೇತಿಯ ಅನಂತರ ಅಧಿಕಾರಿಗಳು (IAS Trainees) ನಿಗದಿತ ಕ್ಷೇತ್ರಗಳಿಗೆ ಪೋಸ್ಟಿಂಗ್ ಪಡೆಯುತ್ತಾರೆ. ತರಬೇತಿ ಅವಧಿಯಲ್ಲಿರುವ ಅಧಿಕಾರಿಗಳಿಗೆ ಕೆಲವು ನಿಯಮಗಳಿವೆ. ಅದರಲ್ಲಿ ಅವರ ಸಂಬಳ, ಅವರು ಪಡೆಯುವ ಸೌಲಭ್ಯಗಳು ಯಾವುದು ಎನ್ನುವ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

IAS Trainees
Koo

ದೇಶಾದ್ಯಂತ ಸುದ್ದಿಯಲ್ಲಿರುವ ಮಹಾರಾಷ್ಟ್ರ (maharastra) ಕೇಡರ್‌ನ ಐಎಎಸ್ ಪ್ರೊಬೇಷನರ್ (IAS Trainees) ಅಧಿಕಾರಿ ಪೂಜಾ ಖೇಡ್ಕರ್‌ (Pooja Khedkar) ವಿರುದ್ಧ ದರ್ಪ, ನಕಲಿ ದಾಖಲೆ ಸೃಷ್ಟಿ, ಪರೀಕ್ಷೆಯಲ್ಲಿರುವಾಗ ಸರ್ಕಾರಿ ವಸತಿ, ಕಾರು ಮತ್ತು ಸಿಬ್ಬಂದಿ ಬೇಕೆಂಬ ಬೇಡಿಕೆಗಳನ್ನು ಸಲ್ಲಿಸಿದ ಆರೋಪವಿದೆ. ಕೆಲವರು ಅವರ ಬೇಡಿಕೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಆದರೆ ಯುಪಿಎಸ್‌ಸಿ (UPSC) ತರಬೇತಿ ಅಧಿಕಾರಿಗಳಿಗೆ ಕೆಲವು ನಿಯಮಗಳಿವೆ. ಆದರೆ ಪೂಜಾ ಖೇಡ್ಕರ್ ಅವರ ಬೇಡಿಕೆಯು ಆ ನಿಯಮಗಳಿಗೆ ವಿರುದ್ಧವಾಗಿದೆ.

ಯುಪಿಎಸ್‌ಸಿ ತರಬೇತಿ ಅಧಿಕಾರಿಗಳಿಗೆ ಅನ್ವಯವಾಗುವ ನಿಯಮವೇನು? ಅವರ ಸಂಬಳ, ಅವರು ಪಡೆಯುವ ಸೌಲಭ್ಯಗಳು ಯಾವುದು ಎನ್ನುವ ಕುರಿತು ಮಾಹಿತಿ ಇಲ್ಲಿದೆ.

ನಾಗರಿಕ ಸೇವೆಗಳಿಗೆ ಸೇರಲು ದೇಶದ ಅತ್ಯಂತ ಕಠಿಣ ಪರೀಕ್ಷೆಯಾದ ಯುಪಿಎಸ್‌ಸಿ ಸಿವಿಲ್ ಸರ್ವೀಸಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಅವಶ್ಯಕ. ಎರಡು ವರ್ಷಗಳ ಐಎಎಸ್ ತರಬೇತಿಯ ಅನಂತರ ಅಧಿಕಾರಿಗಳು ತಮ್ಮ ಕ್ಷೇತ್ರಗಳಿಗೆ ಪೋಸ್ಟಿಂಗ್ ಪಡೆಯುತ್ತಾರೆ. ಈ ಎರಡು ವರ್ಷಗಳಲ್ಲಿ ಅವರಿಗೆ ಶಿಸ್ತು, ಕಷ್ಟಕರ ಸಂದರ್ಭಗಳಲ್ಲಿ ಹೋರಾಡುವ ವಿಧಾನಗಳು, ಆಡಳಿತ ಇತ್ಯಾದಿಗಳನ್ನು ಕಲಿಸಲಾಗುತ್ತದೆ.

ತರಬೇತಿಯ ಕೊನೆಯ ಹಂತದಲ್ಲಿ ಎಲ್ಲಾ ತರಬೇತಿ ಅಧಿಕಾರಿಗಳನ್ನು ವಿಶ್ಲೇಷಿಸಲಾಗುತ್ತದೆ. ಈ ಸಮಯದಲ್ಲಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಅವರ ವಸತಿ ಮತ್ತು ಆಹಾರದ ಜವಾಬ್ದಾರಿಯನ್ನು ನಿರ್ವಹಿಸುತ್ತದೆ.

IAS Trainees


ಟ್ರೈನಿಗಳಿಗೆ ವೇತನ

ನಾಗರಿಕ ಸೇವಾ ತರಬೇತಿಯ ಸಮಯದಲ್ಲಿ ಎಲ್ಲಾ ಐಎಎಸ್, ಐಪಿಎಸ್, ಐಆರ್‌ಎಸ್ ಮತ್ತು ಇಎಫ್‌ಎಸ್ ಅಧಿಕಾರಿಗಳು ಒಂದೇ ಸಂಬಳವನ್ನು ಪಡೆಯುತ್ತಾರೆ. ತರಬೇತಿಯ ವಿವಿಧ ಹಂತಗಳಲ್ಲಿ ಸಂಬಳವು ಹೆಚ್ಚುತ್ತದೆ ಮತ್ತು ವ್ಯತ್ಯಾಸ ಆಗುತ್ತದೆ. ತರಬೇತಿ ಪಡೆಯುವ ಐಎಎಸ್‌ ಟ್ರೇನಿಗಳಿಗೆ ತಿಂಗಳಿಗೆ 50- 60 ಸಾವಿರ ರೂ.ವರೆಗೆ ವೇತನವಿದೆ. ಕೆಲವೊಮ್ಮೆ 70,000 ರೂ.ವರೆಗೂ ಸಂಬಳ ಬರುತ್ತದೆ.

ಸೌಲಭ್ಯಗಳು

ತರಬೇತಿ ಸಮಯದಲ್ಲಿ ಯಾವುದೇ ಐಎಎಸ್ ಅಧಿಕಾರಿಗೆ ಸರ್ಕಾರಿ ವಸತಿ, ಕಾರು, ಚಾಲಕ, ಸಿಬ್ಬಂದಿ ಇತ್ಯಾದಿ ಸೌಲಭ್ಯಗಳನ್ನು ಒದಗಿಸಲಾಗುವುದಿಲ್ಲ. ಅವರು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್‌ನಿಂದ ವಸತಿ ಮತ್ತು ಆಹಾರ ಸೌಲಭ್ಯಗಳನ್ನು ಪಡೆಯುತ್ತಾರೆ.

ಕ್ಷೇತ್ರ ಪೋಸ್ಟಿಂಗ್ ಸಮಯದಲ್ಲಿ ಅವರು ದಿನಕ್ಕೆ 3,000 ರೂಪಾಯಿಗಳ ಪ್ರಯಾಣ ಭತ್ಯೆ ಮತ್ತು ತುಟ್ಟಿ ಭತ್ಯೆ ಪಡೆಯುತ್ತಾರೆ. ತರಬೇತಿ ಸಮಯದಲ್ಲಿ ಫೀಲ್ಡ್ ಪೋಸ್ಟಿಂಗ್ ಸಿಕ್ಕರೆ ಸರ್ಕಾರಿ ಅತಿಥಿ ಗೃಹದಲ್ಲಿ ಉಳಿದುಕೊಳ್ಳಬಹುದು ಅಥವಾ ಹೊಟೇಲ್ ನಲ್ಲಿ ರೂಂ ಕೂಡ ತೆಗೆದುಕೊಳ್ಳಬಹುದು.

ಇದನ್ನೂ ಓದಿ: Pooja Khedkar: ಅಂಗವೈಕಲ್ಯ ಪ್ರಮಾಣಪತ್ರಕ್ಕಾಗಿ ನಕಲಿ ವಿಳಾಸ ನೀಡಿದ್ದ ಪೂಜಾ ಖೇಡ್ಕರ್‌; ಮತ್ತೊಂದು ಕಳ್ಳಾಟ ಬಯಲು

ತರಬೇತಿ ಸಮಯ ಹೇಗಿರುತ್ತದೆ?

ಐಎಎಸ್ ತರಬೇತಿಯ ಸಮಯದಲ್ಲಿ ಅಧಿಕಾರಿಗಳು ಬಹಳಷ್ಟು ಕಲಿಯುತ್ತಾರೆ. ಕ್ಷೇತ್ರ ಮಾನ್ಯತೆ ಮತ್ತು ಪ್ರಯಾಣವು ನಾಗರಿಕ ಸೇವೆಯ ನಿಜವಾದ ಅರ್ಥವನ್ನು ಅರ್ಥಮಾಡಿಕೊಳ್ಳಲು ಅವರಿಗೆ ಸಹಾಯ ಮಾಡುತ್ತದೆ. ಇದರೊಂದಿಗೆ ಅವರು ಅನೇಕ ರೀತಿಯ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಅವಕಾಶವನ್ನೂ ಪಡೆಯುತ್ತಾರೆ. ಇದು ನಾಯಕತ್ವ, ಜೀವನ ಕಲೆ ಮತ್ತು ಟ್ರೆಕ್ಕಿಂಗ್‌ನಂತಹ ಚಟುವಟಿಕೆಗಳನ್ನು ಒಳಗೊಂಡಿದೆ. ಇದಲ್ಲದೆ ಐಎಎಸ್ ತರಬೇತಿ ಪಡೆದವರು ರಕ್ಷಣಾ ಸಚಿವರು, ರಾಷ್ಟ್ರಪತಿಗಳು ಮತ್ತು ಉಪರಾಷ್ಟ್ರಪತಿಗಳಂತಹ ಗಣ್ಯರಿಗೆ ಕರೆ ಮಾಡಲು ವಿಶೇಷ ಅವಕಾಶವನ್ನು ಪಡೆಯುತ್ತಾರೆ.

Continue Reading

ಕರ್ನಾಟಕ

Job Alert: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ 6128 ಹುದ್ದೆ; ಪರೀಕ್ಷೆಯ ದಿನಾಂಕ ಪ್ರಕಟ, ಅರ್ಜಿ ಸಲ್ಲಿಕೆಗೆ ಇಂದು ಕೊನೇ ದಿನ

Job Alert: ಈ ಬಾರಿ 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ 6128 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ನಮ್ಮ ರಾಜ್ಯದಲ್ಲಿ 457 ಹುದ್ದೆಗಳು ಖಾಲಿ ಇವೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನವಾಗಿರುತ್ತದೆ. ಎರಡು ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯಿದ್ದು, ಪೂರ್ವಭಾವಿ ಪರೀಕ್ಷೆ, ಹಾಗೂ ಮುಖ್ಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು ಅಕ್ಟೋಬರ್‌ನಲ್ಲಿ ಮುಖ್ಯ ಪರೀಕ್ಷೆ ನಡೆಯಲಿದೆ. ನಮ್ಮ ರಾಜ್ಯದವರಿಗೆ ಕನ್ನಡ ಮತ್ತು ಕೊಂಕಣಿ ಭಾಷೆಗಳಲ್ಲೂ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ, ಅಭ್ಯರ್ಥಿಗಳ ಆಯ್ಕೆ ಹಾಗೂ ನೇಮಕಾತಿ ಸ್ವರೂಪ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Job Alert
Koo
  • – ಆರ್‌ ಕೆ ಬಾಲಚಂದ್ರ
  • ಲೇಖಕರು, ಬ್ಯಾಂಕಿಂಗ್‌ ಮತ್ತು ವ್ಯಕ್ತಿತ್ವ ವಿಕಸನ , ಸಾಫ್ಟ್‌ ಸ್ಕಿಲ್‌ ತರಬೇತುದಾರರು, ವೃತ್ತಿ ಮಾರ್ಗದರ್ಶಕರು
  • ಬ್ಯಾಂಕ್‌ಗಳಲ್ಲಿ ಗುಮಾಸ್ತ (ಕ್ಲರ್ಕ್‌) ಹುದ್ದೆಗೆ ಸೇರಬೇಕು ಎಂಬ ಕನಸು ಹೊತ್ತವರಿಗೆ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್ ) ಸಿಹಿ ಸುದ್ದಿಯೊಂದನ್ನು ನೀಡಿದೆ. ದೇಶದ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ ಕ್ಲರಿಕಲ್ ಕೇಡರ್ ಹುದ್ದೆಗಳ ನೇಮಕಕ್ಕಾಗಿ ‘ಸಾಮಾನ್ಯ ಪ್ರವೇಶ ಪರೀಕ್ಷೆ’(CRP ಗುಮಾಸ್ತರು–XIV)ನಡೆಸುತ್ತಿದ್ದು, ಸೋಮವಾರ ಅಧಿಸೂಚನೆ ಹೊರಡಿಸಿದೆ. ಈ ಬಾರಿ 11 ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾಲಿಯಿರುವ 6128 ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ನಮ್ಮ ರಾಜ್ಯದಲ್ಲಿ 457 ಹುದ್ದೆಗಳು ಖಾಲಿ ಇವೆ. ಎಂದಿನಂತೆ, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನವಾಗಿರುತ್ತದೆ. ಎರಡು ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯಿದ್ದು ಪೂರ್ವಭಾವಿ ಪರೀಕ್ಷೆ, ಹಾಗೂ ಮುಖ್ಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿದೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು ಅಕ್ಟೋಬರ್‌ನಲ್ಲಿ ಮುಖ್ಯ ಪರೀಕ್ಷೆ ನಡೆಯಲಿದೆ. ನಮ್ಮ ರಾಜ್ಯದವರಿಗೆ ಕನ್ನಡ ಮತ್ತು ಕೊಂಕಣಿ ಭಾಷೆಗಳಲ್ಲೂ ಪರೀಕ್ಷೆ ಬರೆಯುವ ಅವಕಾಶ ನೀಡಲಾಗಿದೆ.  ರಾಜ್ಯದ 457 ಹುದ್ದೆಗಳಲ್ಲಿ ಪರಿಶಿಷ್ಟ ಜಾತಿಗೆ 75, ಪರಿಶಿಷ್ಟ ಪಂಗಡಕ್ಕೆ 39, ಹಿಂದುಳಿದ ವರ್ಗದವರಿಗೆ 108, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ 44 ಹಾಗೂ ಸಾಮಾನ್ಯ ವರ್ಗದವರಿಗೆ 191 ಹುದ್ದೆಗಳನ್ನು ಮೀಸಲಿಡಲಾಗಿದೆ.

ರಾಜ್ಯದ ಯಾವ ಬ್ಯಾಂಕ್, ಎಷ್ಟು ಹುದ್ದೆ?

ರಾಜ್ಯದ ಯಾವ ಬ್ಯಾಂಕಿನಲ್ಲಿ ಎಷ್ಟು ಹುದ್ದೆಗಳು?
ಕ್ರಮ ಸಂಖ್ಯೆಬ್ಯಾಂಕ್‌ನ ಹೆಸರುಹುದ್ದೆಗಳು
1ಬ್ಯಾಂಕ್ ಆಫ್ ಇಂಡಿಯಾ    5
2ಕೆನರಾ ಬ್ಯಾಂಕ್364
3ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ  49
4ಇಂಡಿಯನ್ ಓವರ್ಸೀಸ್ ಬ್ಯಾಂಕ್  14
5ಪಂಜಾಬ್ ನ್ಯಾಷನಲ್ ಬ್ಯಾಂಕ್  15
6ಪಂಜಾಬ್ ಆ್ಯಂಡ್ ಸಿಂಥ್ ಬ್ಯಾಂಕ್  10
 ಒಟ್ಟು457

ಜುಲೈ 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಜುಲೈ 21, 2024 ಕೊನೆ ದಿನ. IBPS ಕ್ಲರ್ಕ್ 2024ರ ಪ್ರಿಲಿಮ್ಸ್ ಮತ್ತು ಮುಖ್ಯ ಪರೀಕ್ಷೆಯ ದಿನಾಂಕಗಳನ್ನು ಪ್ರಕಟಿಸಲಾಗಿದೆ. IBPS ಕ್ಲರ್ಕ್ ಪ್ರಿಲಿಮ್ಸ್ ಪರೀಕ್ಷೆಯನ್ನು ಆಗಸ್ಟ್ 24, 25 ಮತ್ತು 31, 2024 ರಂದು ನಡೆಸಲಾಗುವುದು. ಮುಖ್ಯ ಪರೀಕ್ಷೆಯನ್ನು ಅಕ್ಟೋಬರ್ 13, 2024 ರಂದು ನಡೆಸಲಾಗುತ್ತದೆ.

ಅರ್ಜಿ ಸಲ್ಲಿಸಲು ಹಾಗೂ ನೋಂದಣಿಗೆ ಬಳಸಬೇಕಾದ ಲಿಂಕ್: www.ibps.in ಅಥವಾ https://ibpsonline.ibps.in/crpcl14jun24/

ಶೈಕ್ಷಣಿಕ ಅರ್ಹತೆ: (21.07.2024 ಕ್ಕೆ ಅನ್ವಯಿಸುವಂತೆ)

ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ಹೀಗಾಗಿ ಕಂಪ್ಯೂಟರ್ ಕಲಿಕೆಯ ಬಗ್ಗೆ ದೃಢೀಕರಣ ಪತ್ರವನ್ನೂ ಹೊಂದಿರಬೇಕು (ಕಂಪ್ಯೂಟರ್ ಗೆ ಸಂಬಂಧಿಸಿದ ವಿಷಯದಲ್ಲಿ ಸರ್ಟಿಫಿಕೇಟ್/ ಡಿಪ್ಲೊಮಾ ಅಥವಾ ಡಿಗ್ರಿ ಪಡೆದಿರುವುದು ಅಥವಾ ಶಾಲೆ ಅಥವಾ ಕಾಲೇಜಿನಲ್ಲಿ ಕಂಪ್ಯೂಟರ್ ಅಥವಾ ಐಟಿ (InformationTechnology) ಯನ್ನು ಒಂದು ವಿಷಯವಾಗಿ ಓದಿರಬೇಕು. ಅಲ್ಲದೆ, ರಾಜ್ಯದ ಅಧಿಕೃತ ಭಾಷೆಯಲ್ಲಿ ಮಾತನಾಡುವ, ಬರೆಯುವ ಸಾಮರ್ಥ್ಯ ಹೊಂದಿರಬೇಕು. ಪದವಿ ಪೂರ್ಣ ಗೊಳಿಸಿದವರು ಮಾತ್ರ ಅರ್ಜಿ ಸಲ್ಲಿಸಬಹುದು. ಪದವಿಯಲ್ಲಿ ಪಡೆದ ಶೇಕಡಾವಾರು ಅಂಕಗಳನ್ನು ಅರ್ಜಿಯಲ್ಲಿ ಭರ್ತಿ ಮಾಡಬೇಕಾಗಿರುತ್ತದೆ.

ಇದನ್ನೂ ಓದಿ: Job Alert: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ; 10, 12ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ

ವಯೋಮಿತಿ: ಕನಿಷ್ಠ 20 ವರ್ಷಗಳು ಗರಿಷ್ಠ 28 ವರ್ಷಗಳು. (01.07.2024 ಕ್ಕೆ ಅನ್ವಯಿಸುವಂತೆ). ಅಂದರೆ ಅಭ್ಯರ್ಥಿಗಳು 1996 ರ ಜುಲೈ 2 ಮತ್ತು 2004 ರ ಜುಲೈ 1 ರ ನಡುವೆ ಜನಿಸಿರಬೇಕು.ಸರ್ಕಾರದ ನಿಯಮದಂತೆ ಎಸ್ ಸಿ/ ಎಸ್ ಟಿ ಅಭ್ಯ ರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲರಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: GST ಒಳಗೊಂಡಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹850. ಎಸ್ ಸಿ/ಎಸ್ ಟಿ/ಅಂಗವಿಕಲ ಅಭ್ಯರ್ಥಿಗಳು/ಮಾಜಿ ಯೋಧರಿಗೆ ₹175.ಬ್ಯಾಂಕ್ ಸೇವಾ ಶುಲ್ಕ ಮತ್ತು ಇಂಟಿಮೇಷನ್ ಫೀ ಪ್ರತ್ಯೇಕವಾಗಿ ಪಾವತಿಸಬೇಕಾಗುತ್ತದೆ.

ಶುಲ್ಕಪಾವತಿ: ನೋಂದಣಿ ನಂತರ ಅಭ್ಯ ರ್ಥಿಗಳು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್  ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಆನ್ ಲೈನ್ ಮೂಲಕ ಮಾತ್ರ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.

ನೆನಪಿಡಿ: ಒಬಿಸಿ ವರ್ಗಕ್ಕೆ ಸೇರಿದ ಆದರೆ ಕೆನೆ ಪದರದ ಅಡಿಯಲ್ಲಿ ಬರುವ ಅಭ್ಯ ರ್ಥಿಗಳು ಒಬಿಸಿ ಮೀಸಲಾತಿಗೆ ಅರ್ಹರಾಗಿರುವುದಿಲ್ಲ. ಅವರು ಆನ್ ಲೈನ್ ಅರ್ಜಿ ನಮೂನೆಯಲ್ಲಿ ತಮ್ಮ ವರ್ಗ ವನ್ನು ಸಾಮಾನ್ಯ ಎಂದು ಸೂಚಿಸಬೇಕು. ಅಭ್ಯರ್ಥಿಯು ಕಾಲಕಾಲಕ್ಕೆ ಭಾರತ ಸರ್ಕಾರದ ಮಾರ್ಗ ಸೂಚಿಗಳ ಪ್ರಕಾರ ಕೆನೆರಹಿತ ಲೇಯರ್ (Non cremy layer) ಷರತ್ತಿನೊಂದಿಗೆ ಒಬಿಸಿ ಪ್ರಮಾಣಪತ್ರ ವನ್ನು ಹೊಂದಿರಬೇಕು.

ಪರೀಕ್ಷಾ ಪ್ರಕ್ರಿಯೆ: ಇದೇ ಆಗಸ್ಟ್ ನಲ್ಲಿ ಪೂರ್ವ ಭಾವಿ ಪರೀಕ್ಷೆ, ಅಕ್ಟೋಬರ್ ನಲ್ಲಿ ಮುಖ್ಯ ಪರೀಕ್ಷೆಗಳು ನಡೆಯಲಿದ್ದು ಎರಡೂ ಪರೀಕ್ಷೆಗಳು ಆನ್ ಲೈನ್ ನಲ್ಲಿ ನಡೆಯಲಿದೆ.

ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳು ಎಲ್ಲೆಲ್ಲಿ?: ರಾಜ್ಯದ 10 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು 5 ಜಿಲ್ಲಾ ಕೇಂದ್ರಗಳಲ್ಲಿ ಮುಖ್ಯ ಪರೀಕ್ಷೆಗಳು ಆನ್ ಲೈನ್ ನಲ್ಲಿ ನಡೆಯಲಿದೆ.

ಪೂರ್ವಭಾವಿ ಪರೀಕ್ಷೆ: ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ,ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ,ಉಡುಪಿ.

ಮುಖ್ಯ ಪರೀಕ್ಷೆ: ಬೆಂಗಳೂರು,ಧಾರವಾಡ, ಹುಬ್ಬಳ್ಳಿ, ಕಲಬುರಗಿ, ಮಂಗಳೂರು

ಪೂರ್ವಭಾವಿ ಪರೀಕ್ಷೆಗೆ ತರಬೇತಿ

ಐಬಿಪಿಎಸ್‌ನ ಎಲ್ಲ ನೇಮಕಾತಿ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ.ಕ್ಲರ್ಕ್‌ ಹುದ್ದೆಗಳ ನೇಮಕಾತಿಗೆ 2024 ರ ಅಗಸ್ಟ್ 12 ರಿಂದ  17 ರವರೆಗೆ ತರಬೇತಿಗೆಂದು ದಿನಾಂಕ ನಿಗದಿ ಮಾಡಲಾಗಿದೆ. ಪರಿಶಿಷ್ಟರು, ಅಂಗವಿಕಲರು, ಹಿಂದುಳಿದವರರು ಹಾಗೂ ಅಲ್ಪಸಂಖ್ಯಾತ, ಮಾಜಿ ಸೈನಿಕರಿಗೆ ಈ ಸೌಲಭ್ಯ ಒದಗಿಸಲಾಗುತ್ತದೆ. ಒಂದು ವೇಳೆ ಅಭ್ಯರ್ಥಿಗಳು ಪರೀಕ್ಷಾ ಪೂರ್ವ ತರಬೇತಿ ಬಯಸಿದಲ್ಲಿ ಅಂಥವರು ಆನ್‌ಲೈನ್ ಅರ್ಜಿ ಸಲ್ಲಿಸುವಾಗಲೇ ತರಬೇತಿ ಪಡೆಯುವ ಬಗ್ಗೆ ಅರ್ಜಿಯಲ್ಲಿ ನಮೂದಿಸಬೇಕು.

ರಾಜ್ಯದಲ್ಲಿ 4 ಪೂರ್ವಭಾವಿ ಪರೀಕ್ಷಾ ತರಬೇತಿ ಕೇಂದ್ರಗಳು:

ರಾಜ್ಯದ ಬೆಂಗಳೂರು, ಮೈಸೂರು ಹುಬ್ಬಳ್ಳಿ ಹಾಗೂ ಮಂಗಳೂರಿನಲ್ಲಿ ಈ ತರಬೇತಿಯನ್ನು ನೀಡಲಾಗುತ್ತದೆ. ತರಬೇತಿ ಸ್ಥಳದ ಖರ್ಚು ವೆಚ್ಚ ಹಾಗೂ ಪ್ರಯಾಣದ ಖರ್ಚು ವೆಚ್ಚವನ್ನು ಅಭ್ಯರ್ಥಿಗಳ ಭರಿಸಬೇಕಾಗುತ್ತದೆ.

ಕ್ರೆಡಿಟ್ ಇತಿಹಾಸ

(i) ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅವರು ಆರೋಗ್ಯಕರ ಕ್ರೆಡಿಟ್ ಇತಿಹಾಸ (Credit History) ಹೊಂದಿರಬೇಕು. ಬ್ಯಾಂಕ್‌ಗೆ ಸೇರುವ ಸಮಯದಲ್ಲಿ ಕನಿಷ್ಠ ಸಿಬಿಲ್ (CIBIL)ಸ್ಕೋರ್ ಅಥವಾ ಅದಕ್ಕಿಂತ ಹೆಚ್ಚಿರುವುದನ್ನು ಖಚಿತ ಪಡಿಸಿಕೊಳ್ಳಬೇಕು. ಕನಿಷ್ಠ ಕ್ರೆಡಿಟ್ ಸ್ಕೋರ್ ಭಾಗವಹಿಸುವ ಬ್ಯಾಂಕ್ ಗಳ ನೀತಿಯ ಪ್ರಕಾರ ಇರುತ್ತದೆ. ಕಾಲಕಾಲಕ್ಕೆ ಅವುಗಳನ್ನ ತಿದ್ದುಪಡಿ ಮಾಡಲಾಗುತ್ತದೆ.

(ii) ಹುದ್ದೆಗೆ ಸೇರ್ಪಡೆಗೊಳ್ಳುವ ದಿನಾಂಕದ ಮೊದಲು CIBIL ಸ್ಥಿತಿ ನವೀಕರಿಸಬೇಕು ಅಥವಾ CIBIL ನಲ್ಲಿ ಪ್ರತಿಕೂಲವಾಗಿ ಪ್ರತಿಬಿಂಬಿತವಾಗಿರುವ ಖಾತೆಗಳಿಗೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿದಿಲ್ಲ ಎಂದು ಸಾಲದಾತರಿಂದ ನಿರಾಪೇಕ್ಷಣಾ ಪತ್ರ (NOC)ಗಳನ್ನು ಪಡೆಯಬೇಕು. ವಿಫಲವಾದರೆ ಆಫರ್ ಪತ್ರವನ್ನು ಹಿಂಪಡೆಯಲಾಗುತ್ತದೆ /ರದ್ದುಗೊಳಿಸಲಾಗುತ್ತದೆ.

ಗಮನಿಸಿ: ಯಾವುದೇ ಬ್ಯಾಂಕ್ ಖಾತೆಯನ್ನು ಹೊಂದಿರದ ಅಭ್ಯರ್ಥಿಗಳು CIBIL ಸ್ಥಿತಿಯನ್ನು ಒದಗಿಸುವ ಅಗತ್ಯ ವಿಲ್ಲ.

ಈ ದಿನಗಳು ನೆನಪಿರಲಿ

  • ಪೂರ್ವಭಾವಿ ಪರೀಕ್ಷೆಯ ಪ್ರವೇಶಪತ್ರ ಬಿಡುಗಡೆ : ಆಗಸ್ಟ್ 2024
  • ಪೂರ್ವಭಾವಿ ಆನ್‌ಲೈನ್ ಪರೀಕ್ಷೆ :ಆಗಸ್ಟ್ 2024
  • ಪೂರ್ವಭಾವಿ ಪರೀಕ್ಷೆಯ ಫಲಿತಾಂಶ :ಸೆಪ್ಟೆಂಬರ್, 2024
  • ಮುಖ್ಯ ಪರೀಕ್ಷೆಯ ಪ್ರವೇಶಪತ್ರ ಬಿಡುಗಡೆ: ಸೆಪ್ಟೆಂಬರ್/ಅಕ್ಟೋಬರ್, 2024
  • ಮುಖ್ಯ ಪರೀಕ್ಷೆಯ ಆಯೋಜನೆ: ಅಕ್ಟೋಬರ್, 2024
  • ಪ್ರಾತಿನಿಧಿಕ ಹುದ್ದೆ ಹಂಚಿಕೆ : ಎಪ್ರಿಲ್ 2025
  • ಅರ್ಜಿ ಸಲ್ಲಿಕೆ, ಹಾಗೂ ಶುಲ್ಕ ಪಾವತಿಗೆ ಕೊನೆಯ ದಿನಾಂಕ: 21.07.2024

ಅರ್ಜಿ ಸಲ್ಲಿಸಲು ಹಾಗೂ ನೋಂದಣಿಗೆ ಬಳಸಬೇಕಾದ ಲಿಂಕ್: www.ibps.in ಅಥವಾ https://ibpsonline.ibps.in/crpcl14jun24/

ಶೈಕ್ಷಣಿಕ ಅರ್ಹತೆ: (21.07.2024 ಕ್ಕೆ ಅನ್ವಯಿಸುವಂತೆ)

ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ಹೀಗಾಗಿ ಕಂಪ್ಯೂಟರ್ ಕಲಿಕೆಯ ಬಗ್ಗೆ ದೃಢೀಕರಣ ಪತ್ರವನ್ನೂ ಹೊಂದಿರಬೇಕು (ಕಂಪ್ಯೂಟರ್ ಗೆ ಸಂಬಂಧಿಸಿದ ವಿಷಯದಲ್ಲಿ ಸರ್ಟಿಫಿಕೇಟ್/ ಡಿಪ್ಲೊಮಾ ಅಥವಾ ಡಿಗ್ರಿ ಪಡೆದಿರುವುದು ಅಥವಾ ಶಾಲೆ ಅಥವಾ ಕಾಲೇಜಿನಲ್ಲಿ ಕಂಪ್ಯೂಟರ್ ಅಥವಾ ಐಟಿ (InformationTechnology) ಯನ್ನು ಒಂದು ವಿಷಯವಾಗಿ ಓದಿರಬೇಕು. ಅಲ್ಲದೆ, ರಾಜ್ಯದ ಅಧಿಕೃತ ಭಾಷೆಯಲ್ಲಿ ಮಾತನಾಡುವ, ಬರೆಯುವ ಸಾಮರ್ಥ್ಯ ಹೊಂದಿರಬೇಕು. ಪದವಿ ಪೂರ್ಣ ಗೊಳಿಸಿದವರು ಮಾತ್ರ ಅರ್ಜಿ ಸಲ್ಲಿಸಬಹುದು. ಪದವಿಯಲ್ಲಿ ಪಡೆದ ಶೇಕಡಾವಾರು ಅಂಕಗಳನ್ನು ಅರ್ಜಿಯಲ್ಲಿ ಭರ್ತಿ ಮಾಡಬೇಕಾಗಿರುತ್ತದೆ.

ಇದನ್ನೂ ಓದಿ: Job Alert: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ; 10, 12ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ

ವಯೋಮಿತಿ: ಕನಿಷ್ಠ 20 ವರ್ಷಗಳು ಗರಿಷ್ಠ 28 ವರ್ಷಗಳು. (01.07.2024 ಕ್ಕೆ ಅನ್ವಯಿಸುವಂತೆ). ಅಂದರೆ ಅಭ್ಯರ್ಥಿಗಳು 1996 ರ ಜುಲೈ 2 ಮತ್ತು 2004 ರ ಜುಲೈ 1 ರ ನಡುವೆ ಜನಿಸಿರಬೇಕು.ಸರ್ಕಾರದ ನಿಯಮದಂತೆ ಎಸ್ ಸಿ/ ಎಸ್ ಟಿ ಅಭ್ಯ ರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲರಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: GST ಒಳಗೊಂಡಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹850. ಎಸ್ ಸಿ/ಎಸ್ ಟಿ/ಅಂಗವಿಕಲ ಅಭ್ಯರ್ಥಿಗಳು/ಮಾಜಿ ಯೋಧರಿಗೆ ₹175.ಬ್ಯಾಂಕ್ ಸೇವಾ ಶುಲ್ಕ ಮತ್ತು ಇಂಟಿಮೇಷನ್ ಫೀ ಪ್ರತ್ಯೇಕವಾಗಿ ಪಾವತಿಸಬೇಕಾಗುತ್ತದೆ.

ಶುಲ್ಕಪಾವತಿ: ನೋಂದಣಿ ನಂತರ ಅಭ್ಯ ರ್ಥಿಗಳು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್  ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಆನ್ ಲೈನ್ ಮೂಲಕ ಮಾತ್ರ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.

ನೆನಪಿಡಿ: ಒಬಿಸಿ ವರ್ಗಕ್ಕೆ ಸೇರಿದ ಆದರೆ ಕೆನೆ ಪದರದ ಅಡಿಯಲ್ಲಿ ಬರುವ ಅಭ್ಯ ರ್ಥಿಗಳು ಒಬಿಸಿ ಮೀಸಲಾತಿಗೆ ಅರ್ಹರಾಗಿರುವುದಿಲ್ಲ. ಅವರು ಆನ್ ಲೈನ್ ಅರ್ಜಿ ನಮೂನೆಯಲ್ಲಿ ತಮ್ಮ ವರ್ಗ ವನ್ನು ಸಾಮಾನ್ಯ ಎಂದು ಸೂಚಿಸಬೇಕು. ಅಭ್ಯರ್ಥಿಯು ಕಾಲಕಾಲಕ್ಕೆ ಭಾರತ ಸರ್ಕಾರದ ಮಾರ್ಗ ಸೂಚಿಗಳ ಪ್ರಕಾರ ಕೆನೆರಹಿತ ಲೇಯರ್ (Non cremy layer) ಷರತ್ತಿನೊಂದಿಗೆ ಒಬಿಸಿ ಪ್ರಮಾಣಪತ್ರ ವನ್ನು ಹೊಂದಿರಬೇಕು.

ಪರೀಕ್ಷಾ ಪ್ರಕ್ರಿಯೆ: ಇದೇ ಆಗಸ್ಟ್ ನಲ್ಲಿ ಪೂರ್ವ ಭಾವಿ ಪರೀಕ್ಷೆ, ಅಕ್ಟೋಬರ್ ನಲ್ಲಿ ಮುಖ್ಯ ಪರೀಕ್ಷೆಗಳು ನಡೆಯಲಿದ್ದು ಎರಡೂ ಪರೀಕ್ಷೆಗಳು ಆನ್ ಲೈನ್ ನಲ್ಲಿ ನಡೆಯಲಿದೆ.

ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳು ಎಲ್ಲೆಲ್ಲಿ?: ರಾಜ್ಯದ 10 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು 5 ಜಿಲ್ಲಾ ಕೇಂದ್ರಗಳಲ್ಲಿ ಮುಖ್ಯ ಪರೀಕ್ಷೆಗಳು ಆನ್ ಲೈನ್ ನಲ್ಲಿ ನಡೆಯಲಿದೆ.

ಪೂರ್ವಭಾವಿ ಪರೀಕ್ಷೆ: ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ,ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ,ಉಡುಪಿ.

ಮುಖ್ಯ ಪರೀಕ್ಷೆ: ಬೆಂಗಳೂರು,ಧಾರವಾಡ, ಹುಬ್ಬಳ್ಳಿ, ಕಲಬುರಗಿ, ಮಂಗಳೂರು

ಪೂರ್ವಭಾವಿ ಪರೀಕ್ಷೆಗೆ ತರಬೇತಿ

ಐಬಿಪಿಎಸ್‌ನ ಎಲ್ಲ ನೇಮಕಾತಿ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ.ಕ್ಲರ್ಕ್‌ ಹುದ್ದೆಗಳ ನೇಮಕಾತಿಗೆ 2024 ರ ಅಗಸ್ಟ್ 12 ರಿಂದ  17 ರವರೆಗೆ ತರಬೇತಿಗೆಂದು ದಿನಾಂಕ ನಿಗದಿ ಮಾಡಲಾಗಿದೆ. ಪರಿಶಿಷ್ಟರು, ಅಂಗವಿಕಲರು, ಹಿಂದುಳಿದವರರು ಹಾಗೂ ಅಲ್ಪಸಂಖ್ಯಾತ, ಮಾಜಿ ಸೈನಿಕರಿಗೆ ಈ ಸೌಲಭ್ಯ ಒದಗಿಸಲಾಗುತ್ತದೆ. ಒಂದು ವೇಳೆ ಅಭ್ಯರ್ಥಿಗಳು ಪರೀಕ್ಷಾ ಪೂರ್ವ ತರಬೇತಿ ಬಯಸಿದಲ್ಲಿ ಅಂಥವರು ಆನ್‌ಲೈನ್ ಅರ್ಜಿ ಸಲ್ಲಿಸುವಾಗಲೇ ತರಬೇತಿ ಪಡೆಯುವ ಬಗ್ಗೆ ಅರ್ಜಿಯಲ್ಲಿ ನಮೂದಿಸಬೇಕು.

ರಾಜ್ಯದಲ್ಲಿ 4 ಪೂರ್ವಭಾವಿ ಪರೀಕ್ಷಾ ತರಬೇತಿ ಕೇಂದ್ರಗಳು:

ರಾಜ್ಯದ ಬೆಂಗಳೂರು, ಮೈಸೂರು ಹುಬ್ಬಳ್ಳಿ ಹಾಗೂ ಮಂಗಳೂರಿನಲ್ಲಿ ಈ ತರಬೇತಿಯನ್ನು ನೀಡಲಾಗುತ್ತದೆ. ತರಬೇತಿ ಸ್ಥಳದ ಖರ್ಚು ವೆಚ್ಚ ಹಾಗೂ ಪ್ರಯಾಣದ ಖರ್ಚು ವೆಚ್ಚವನ್ನು ಅಭ್ಯರ್ಥಿಗಳ ಭರಿಸಬೇಕಾಗುತ್ತದೆ.

ಕ್ರೆಡಿಟ್ ಇತಿಹಾಸ

(i) ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅವರು ಆರೋಗ್ಯಕರ ಕ್ರೆಡಿಟ್ ಇತಿಹಾಸ (Credit History) ಹೊಂದಿರಬೇಕು. ಬ್ಯಾಂಕ್‌ಗೆ ಸೇರುವ ಸಮಯದಲ್ಲಿ ಕನಿಷ್ಠ ಸಿಬಿಲ್ (CIBIL)ಸ್ಕೋರ್ ಅಥವಾ ಅದಕ್ಕಿಂತ ಹೆಚ್ಚಿರುವುದನ್ನು ಖಚಿತ ಪಡಿಸಿಕೊಳ್ಳಬೇಕು. ಕನಿಷ್ಠ ಕ್ರೆಡಿಟ್ ಸ್ಕೋರ್ ಭಾಗವಹಿಸುವ ಬ್ಯಾಂಕ್ ಗಳ ನೀತಿಯ ಪ್ರಕಾರ ಇರುತ್ತದೆ. ಕಾಲಕಾಲಕ್ಕೆ ಅವುಗಳನ್ನ ತಿದ್ದುಪಡಿ ಮಾಡಲಾಗುತ್ತದೆ.

(ii) ಹುದ್ದೆಗೆ ಸೇರ್ಪಡೆಗೊಳ್ಳುವ ದಿನಾಂಕದ ಮೊದಲು CIBIL ಸ್ಥಿತಿ ನವೀಕರಿಸಬೇಕು ಅಥವಾ CIBIL ನಲ್ಲಿ ಪ್ರತಿಕೂಲವಾಗಿ ಪ್ರತಿಬಿಂಬಿತವಾಗಿರುವ ಖಾತೆಗಳಿಗೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿದಿಲ್ಲ ಎಂದು ಸಾಲದಾತರಿಂದ ನಿರಾಪೇಕ್ಷಣಾ ಪತ್ರ (NOC)ಗಳನ್ನು ಪಡೆಯಬೇಕು. ವಿಫಲವಾದರೆ ಆಫರ್ ಪತ್ರವನ್ನು ಹಿಂಪಡೆಯಲಾಗುತ್ತದೆ /ರದ್ದುಗೊಳಿಸಲಾಗುತ್ತದೆ.

ಗಮನಿಸಿ: ಯಾವುದೇ ಬ್ಯಾಂಕ್ ಖಾತೆಯನ್ನು ಹೊಂದಿರದ ಅಭ್ಯರ್ಥಿಗಳು CIBIL ಸ್ಥಿತಿಯನ್ನು ಒದಗಿಸುವ ಅಗತ್ಯ ವಿಲ್ಲ.

ಈ ದಿನಗಳು ನೆನಪಿರಲಿ

  • ಪೂರ್ವಭಾವಿ ಪರೀಕ್ಷೆಯ ಪ್ರವೇಶಪತ್ರ ಬಿಡುಗಡೆ : ಆಗಸ್ಟ್ 2024
  • ಪೂರ್ವಭಾವಿ ಆನ್‌ಲೈನ್ ಪರೀಕ್ಷೆ :ಆಗಸ್ಟ್ 2024
  • ಪೂರ್ವಭಾವಿ ಪರೀಕ್ಷೆಯ ಫಲಿತಾಂಶ :ಸೆಪ್ಟೆಂಬರ್, 2024
  • ಮುಖ್ಯ ಪರೀಕ್ಷೆಯ ಪ್ರವೇಶಪತ್ರ ಬಿಡುಗಡೆ: ಸೆಪ್ಟೆಂಬರ್/ಅಕ್ಟೋಬರ್, 2024
  • ಮುಖ್ಯ ಪರೀಕ್ಷೆಯ ಆಯೋಜನೆ: ಅಕ್ಟೋಬರ್, 2024
  • ಪ್ರಾತಿನಿಧಿಕ ಹುದ್ದೆ ಹಂಚಿಕೆ : ಎಪ್ರಿಲ್ 2025
  • ಅರ್ಜಿ ಸಲ್ಲಿಕೆ, ಹಾಗೂ ಶುಲ್ಕ ಪಾವತಿಗೆ ಕೊನೆಯ ದಿನಾಂಕ: 21.07.2024

ಅರ್ಜಿ ಸಲ್ಲಿಸಲು ಹಾಗೂ ನೋಂದಣಿಗೆ ಬಳಸಬೇಕಾದ ಲಿಂಕ್: www.ibps.in ಅಥವಾ https://ibpsonline.ibps.in/crpcl14jun24/

ಶೈಕ್ಷಣಿಕ ಅರ್ಹತೆ: (21.07.2024 ಕ್ಕೆ ಅನ್ವಯಿಸುವಂತೆ)

ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ. ಹೀಗಾಗಿ ಕಂಪ್ಯೂಟರ್ ಕಲಿಕೆಯ ಬಗ್ಗೆ ದೃಢೀಕರಣ ಪತ್ರವನ್ನೂ ಹೊಂದಿರಬೇಕು (ಕಂಪ್ಯೂಟರ್ ಗೆ ಸಂಬಂಧಿಸಿದ ವಿಷಯದಲ್ಲಿ ಸರ್ಟಿಫಿಕೇಟ್/ ಡಿಪ್ಲೊಮಾ ಅಥವಾ ಡಿಗ್ರಿ ಪಡೆದಿರುವುದು ಅಥವಾ ಶಾಲೆ ಅಥವಾ ಕಾಲೇಜಿನಲ್ಲಿ ಕಂಪ್ಯೂಟರ್ ಅಥವಾ ಐಟಿ (InformationTechnology) ಯನ್ನು ಒಂದು ವಿಷಯವಾಗಿ ಓದಿರಬೇಕು. ಅಲ್ಲದೆ, ರಾಜ್ಯದ ಅಧಿಕೃತ ಭಾಷೆಯಲ್ಲಿ ಮಾತನಾಡುವ, ಬರೆಯುವ ಸಾಮರ್ಥ್ಯ ಹೊಂದಿರಬೇಕು. ಪದವಿ ಪೂರ್ಣ ಗೊಳಿಸಿದವರು ಮಾತ್ರ ಅರ್ಜಿ ಸಲ್ಲಿಸಬಹುದು. ಪದವಿಯಲ್ಲಿ ಪಡೆದ ಶೇಕಡಾವಾರು ಅಂಕಗಳನ್ನು ಅರ್ಜಿಯಲ್ಲಿ ಭರ್ತಿ ಮಾಡಬೇಕಾಗಿರುತ್ತದೆ.

ಇದನ್ನೂ ಓದಿ: Job Alert: ಬೆಂಗಳೂರಿನಲ್ಲಿದೆ ಉದ್ಯೋಗಾವಕಾಶ; 10, 12ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ

ವಯೋಮಿತಿ: ಕನಿಷ್ಠ 20 ವರ್ಷಗಳು ಗರಿಷ್ಠ 28 ವರ್ಷಗಳು. (01.07.2024 ಕ್ಕೆ ಅನ್ವಯಿಸುವಂತೆ). ಅಂದರೆ ಅಭ್ಯರ್ಥಿಗಳು 1996 ರ ಜುಲೈ 2 ಮತ್ತು 2004 ರ ಜುಲೈ 1 ರ ನಡುವೆ ಜನಿಸಿರಬೇಕು.ಸರ್ಕಾರದ ನಿಯಮದಂತೆ ಎಸ್ ಸಿ/ ಎಸ್ ಟಿ ಅಭ್ಯ ರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲರಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ: GST ಒಳಗೊಂಡಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ₹850. ಎಸ್ ಸಿ/ಎಸ್ ಟಿ/ಅಂಗವಿಕಲ ಅಭ್ಯರ್ಥಿಗಳು/ಮಾಜಿ ಯೋಧರಿಗೆ ₹175.ಬ್ಯಾಂಕ್ ಸೇವಾ ಶುಲ್ಕ ಮತ್ತು ಇಂಟಿಮೇಷನ್ ಫೀ ಪ್ರತ್ಯೇಕವಾಗಿ ಪಾವತಿಸಬೇಕಾಗುತ್ತದೆ.

ಶುಲ್ಕಪಾವತಿ: ನೋಂದಣಿ ನಂತರ ಅಭ್ಯ ರ್ಥಿಗಳು ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/ ಇಂಟರ್ನೆಟ್  ಬ್ಯಾಂಕಿಂಗ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಆನ್ ಲೈನ್ ಮೂಲಕ ಮಾತ್ರ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.

ನೆನಪಿಡಿ: ಒಬಿಸಿ ವರ್ಗಕ್ಕೆ ಸೇರಿದ ಆದರೆ ಕೆನೆ ಪದರದ ಅಡಿಯಲ್ಲಿ ಬರುವ ಅಭ್ಯ ರ್ಥಿಗಳು ಒಬಿಸಿ ಮೀಸಲಾತಿಗೆ ಅರ್ಹರಾಗಿರುವುದಿಲ್ಲ. ಅವರು ಆನ್ ಲೈನ್ ಅರ್ಜಿ ನಮೂನೆಯಲ್ಲಿ ತಮ್ಮ ವರ್ಗ ವನ್ನು ಸಾಮಾನ್ಯ ಎಂದು ಸೂಚಿಸಬೇಕು. ಅಭ್ಯರ್ಥಿಯು ಕಾಲಕಾಲಕ್ಕೆ ಭಾರತ ಸರ್ಕಾರದ ಮಾರ್ಗ ಸೂಚಿಗಳ ಪ್ರಕಾರ ಕೆನೆರಹಿತ ಲೇಯರ್ (Non cremy layer) ಷರತ್ತಿನೊಂದಿಗೆ ಒಬಿಸಿ ಪ್ರಮಾಣಪತ್ರ ವನ್ನು ಹೊಂದಿರಬೇಕು.

ಪರೀಕ್ಷಾ ಪ್ರಕ್ರಿಯೆ: ಇದೇ ಆಗಸ್ಟ್ ನಲ್ಲಿ ಪೂರ್ವ ಭಾವಿ ಪರೀಕ್ಷೆ, ಅಕ್ಟೋಬರ್ ನಲ್ಲಿ ಮುಖ್ಯ ಪರೀಕ್ಷೆಗಳು ನಡೆಯಲಿದ್ದು ಎರಡೂ ಪರೀಕ್ಷೆಗಳು ಆನ್ ಲೈನ್ ನಲ್ಲಿ ನಡೆಯಲಿದೆ.

ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳು ಎಲ್ಲೆಲ್ಲಿ?: ರಾಜ್ಯದ 10 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ ಮತ್ತು 5 ಜಿಲ್ಲಾ ಕೇಂದ್ರಗಳಲ್ಲಿ ಮುಖ್ಯ ಪರೀಕ್ಷೆಗಳು ಆನ್ ಲೈನ್ ನಲ್ಲಿ ನಡೆಯಲಿದೆ.

ಪೂರ್ವಭಾವಿ ಪರೀಕ್ಷೆ: ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ,ಹುಬ್ಬಳ್ಳಿ, ಮಂಗಳೂರು, ಮೈಸೂರು, ಶಿವಮೊಗ್ಗ,ಉಡುಪಿ.

ಮುಖ್ಯ ಪರೀಕ್ಷೆ: ಬೆಂಗಳೂರು,ಧಾರವಾಡ, ಹುಬ್ಬಳ್ಳಿ, ಕಲಬುರಗಿ, ಮಂಗಳೂರು

ಪೂರ್ವಭಾವಿ ಪರೀಕ್ಷೆಗೆ ತರಬೇತಿ

ಐಬಿಪಿಎಸ್‌ನ ಎಲ್ಲ ನೇಮಕಾತಿ ಪರೀಕ್ಷೆಗಳಿಗೆ ಪರೀಕ್ಷಾ ಪೂರ್ವ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ.ಕ್ಲರ್ಕ್‌ ಹುದ್ದೆಗಳ ನೇಮಕಾತಿಗೆ 2024 ರ ಅಗಸ್ಟ್ 12 ರಿಂದ  17 ರವರೆಗೆ ತರಬೇತಿಗೆಂದು ದಿನಾಂಕ ನಿಗದಿ ಮಾಡಲಾಗಿದೆ. ಪರಿಶಿಷ್ಟರು, ಅಂಗವಿಕಲರು, ಹಿಂದುಳಿದವರರು ಹಾಗೂ ಅಲ್ಪಸಂಖ್ಯಾತ, ಮಾಜಿ ಸೈನಿಕರಿಗೆ ಈ ಸೌಲಭ್ಯ ಒದಗಿಸಲಾಗುತ್ತದೆ. ಒಂದು ವೇಳೆ ಅಭ್ಯರ್ಥಿಗಳು ಪರೀಕ್ಷಾ ಪೂರ್ವ ತರಬೇತಿ ಬಯಸಿದಲ್ಲಿ ಅಂಥವರು ಆನ್‌ಲೈನ್ ಅರ್ಜಿ ಸಲ್ಲಿಸುವಾಗಲೇ ತರಬೇತಿ ಪಡೆಯುವ ಬಗ್ಗೆ ಅರ್ಜಿಯಲ್ಲಿ ನಮೂದಿಸಬೇಕು.

ರಾಜ್ಯದಲ್ಲಿ 4 ಪೂರ್ವಭಾವಿ ಪರೀಕ್ಷಾ ತರಬೇತಿ ಕೇಂದ್ರಗಳು:

ರಾಜ್ಯದ ಬೆಂಗಳೂರು, ಮೈಸೂರು ಹುಬ್ಬಳ್ಳಿ ಹಾಗೂ ಮಂಗಳೂರಿನಲ್ಲಿ ಈ ತರಬೇತಿಯನ್ನು ನೀಡಲಾಗುತ್ತದೆ. ತರಬೇತಿ ಸ್ಥಳದ ಖರ್ಚು ವೆಚ್ಚ ಹಾಗೂ ಪ್ರಯಾಣದ ಖರ್ಚು ವೆಚ್ಚವನ್ನು ಅಭ್ಯರ್ಥಿಗಳ ಭರಿಸಬೇಕಾಗುತ್ತದೆ.

ಕ್ರೆಡಿಟ್ ಇತಿಹಾಸ

(i) ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅವರು ಆರೋಗ್ಯಕರ ಕ್ರೆಡಿಟ್ ಇತಿಹಾಸ (Credit History) ಹೊಂದಿರಬೇಕು. ಬ್ಯಾಂಕ್‌ಗೆ ಸೇರುವ ಸಮಯದಲ್ಲಿ ಕನಿಷ್ಠ ಸಿಬಿಲ್ (CIBIL)ಸ್ಕೋರ್ ಅಥವಾ ಅದಕ್ಕಿಂತ ಹೆಚ್ಚಿರುವುದನ್ನು ಖಚಿತ ಪಡಿಸಿಕೊಳ್ಳಬೇಕು. ಕನಿಷ್ಠ ಕ್ರೆಡಿಟ್ ಸ್ಕೋರ್ ಭಾಗವಹಿಸುವ ಬ್ಯಾಂಕ್ ಗಳ ನೀತಿಯ ಪ್ರಕಾರ ಇರುತ್ತದೆ. ಕಾಲಕಾಲಕ್ಕೆ ಅವುಗಳನ್ನ ತಿದ್ದುಪಡಿ ಮಾಡಲಾಗುತ್ತದೆ.

(ii) ಹುದ್ದೆಗೆ ಸೇರ್ಪಡೆಗೊಳ್ಳುವ ದಿನಾಂಕದ ಮೊದಲು CIBIL ಸ್ಥಿತಿ ನವೀಕರಿಸಬೇಕು ಅಥವಾ CIBIL ನಲ್ಲಿ ಪ್ರತಿಕೂಲವಾಗಿ ಪ್ರತಿಬಿಂಬಿತವಾಗಿರುವ ಖಾತೆಗಳಿಗೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿದಿಲ್ಲ ಎಂದು ಸಾಲದಾತರಿಂದ ನಿರಾಪೇಕ್ಷಣಾ ಪತ್ರ (NOC)ಗಳನ್ನು ಪಡೆಯಬೇಕು. ವಿಫಲವಾದರೆ ಆಫರ್ ಪತ್ರವನ್ನು ಹಿಂಪಡೆಯಲಾಗುತ್ತದೆ /ರದ್ದುಗೊಳಿಸಲಾಗುತ್ತದೆ.

ಗಮನಿಸಿ: ಯಾವುದೇ ಬ್ಯಾಂಕ್ ಖಾತೆಯನ್ನು ಹೊಂದಿರದ ಅಭ್ಯರ್ಥಿಗಳು CIBIL ಸ್ಥಿತಿಯನ್ನು ಒದಗಿಸುವ ಅಗತ್ಯ ವಿಲ್ಲ.

ಈ ದಿನಗಳು ನೆನಪಿರಲಿ

  • ಪೂರ್ವಭಾವಿ ಪರೀಕ್ಷೆಯ ಪ್ರವೇಶಪತ್ರ ಬಿಡುಗಡೆ : ಆಗಸ್ಟ್ 2024
  • ಪೂರ್ವಭಾವಿ ಆನ್‌ಲೈನ್ ಪರೀಕ್ಷೆ :ಆಗಸ್ಟ್ 2024
  • ಪೂರ್ವಭಾವಿ ಪರೀಕ್ಷೆಯ ಫಲಿತಾಂಶ :ಸೆಪ್ಟೆಂಬರ್, 2024
  • ಮುಖ್ಯ ಪರೀಕ್ಷೆಯ ಪ್ರವೇಶಪತ್ರ ಬಿಡುಗಡೆ: ಸೆಪ್ಟೆಂಬರ್/ಅಕ್ಟೋಬರ್, 2024
  • ಮುಖ್ಯ ಪರೀಕ್ಷೆಯ ಆಯೋಜನೆ: ಅಕ್ಟೋಬರ್, 2024
  • ಪ್ರಾತಿನಿಧಿಕ ಹುದ್ದೆ ಹಂಚಿಕೆ : ಎಪ್ರಿಲ್ 2025
  • ಅರ್ಜಿ ಸಲ್ಲಿಕೆ, ಹಾಗೂ ಶುಲ್ಕ ಪಾವತಿಗೆ ಕೊನೆಯ ದಿನಾಂಕ: 21.07.2024

ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ, ಪ್ರಶ್ನೆ ಅರ್ಥಮಾಡಿಕೊಳ್ಳುವುದರ ಜೊತೆಗೆ ಅದನ್ನ ಬಿಡಿಸಲು ಜ್ಞಾನದ ಮೂಲವನ್ನು (Basic concept) ಅನ್ವಯಿಸುವುದು ಮುಖ್ಯ ಉದ್ದೇಶವಾಗಿದೆ. ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್, ಬೀಜಗಣಿತ ಮತ್ತು ಅಭಿವ್ಯಕ್ತಿಗಳನ್ನು ಒಳಗೊಂಡಿರುವ ಪ್ರಶ್ನೆಗಳನ್ನು ಹೊಂದಿದೆ. ಇದರಲ್ಲಿ ಪ್ರಶ್ನೆಗಳನ್ನು ಬಿಡಿಸಲು ಅಭ್ಯರ್ಥಿಗಳು ತರ್ಕ ಮತ್ತು ಜ್ಞಾನವನ್ನು ಅನ್ವಯಿಸುವ ಅಗತ್ಯವಿದೆ.

ಕ್ಲಿಷ್ಟತೆಯ ಮಟ್ಟ

ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ವಿಷಯದಲ್ಲಿ ತಾರ್ಕಿಕ ಅರ್ಹತೆ ಮತ್ತು ಸಂಖ್ಯೆಗಳೊಂದಿಗೆ ವ್ಯವಹರಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ. ಇದು ಎರಡೂ ವಿಷಯಗಳ ಸಂಯೋಜನೆ. ಇದರಲ್ಲಿ ಪ್ರಶ್ನೆಗಳು ತುಂಬಾ ಕಠಿಣವಾಗಿರುವುದಿಲ್ಲ, ಆದರೆ ಇವುಗಳನ್ನು ಬಿಡಿಸಲು ಹೆಚ್ಚು ಅಭ್ಯಾಸ ಮಾಡಿರಬೇಕು. ಆದ್ದರಿಂದ ನೀವು ಪ್ರಶ್ನೆಗಳನ್ನು ಅರ್ಥ ಮಾಡಿಕೊಳ್ಳುವುದರ ಮೂಲಕ ಸಮಯವನ್ನು ಹೇಗೆ ನಿರ್ವಹಿಸಬಹುದು ಎಂಬುದನ್ನು ಅರಿಯುವಿರಿ. ಆದರೆ ಚಕ್ರ ಬಡ್ಡಿ(compound interest) ಕುರಿತ ಪ್ರಶ್ನೆಗಳು ಬಿಡಿಸಲು ಸ್ವಲ್ಪ ಸಮಯ ತೆಗೆದುಕೊಳ್ಳುವುದರಿಂದ ಅವುಗಳನ್ನು ವಿಭಾಗದ ಕೊನೆಯಲ್ಲಿ ಬಿಡಿಸಬೇಕು.

ಋಣಾತ್ಮಕ ಮೌಲ್ಯಮಾಪನ ಇದೆ

ಪೂರ್ವ ಭಾವಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ ಎರಡೂ ವಸ್ತುನಿಷ್ಠ ಮಾದರಿಯ ಪರೀಕ್ಷೆಗಳಾಗಿದ್ದು ಋಣಾತ್ಮಕ ಮೌಲ್ಯಮಾಪನ ಇದೆ. ಒಂದು ತಪ್ಪು ಉತ್ತರಕ್ಕೆ, ಅದಕ್ಕೆ ನಿಗದಿಪಡಿಸಿದ ಅಂಕಗಳಲ್ಲಿ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಪ್ರಶ್ನೆ ಖಾಲಿ ಬಿಟ್ಟರೆ, ಯಾವುದೇ ಅಂಕ ಕಳೆಯುವುದಿಲ್ಲ.

ಪ್ರತಿ ಅಭ್ಯರ್ಥಿಯು ಆನ್‌ಲೈನ್ ಮುಖ್ಯ ಪರೀಕ್ಷೆಯ ಪ್ರತಿ ಪರೀಕ್ಷೆಯಲ್ಲಿ ಕನಿಷ್ಠ ಸ್ಕೋರ್ ಪಡೆಯಬೇಕಾಗುತ್ತದೆ. ಹಾಗೂ ಒಟ್ಟಾರೆ ಕನಿಷ್ಟ ಅಂಕ  ಕೂಡ ಪಡೆಯಬೇಕಾದ ಅನಿವಾರ್ಯತೆ ಇದೆ. ಪ್ರತಿ ರಾಜ್ಯದಲ್ಲಿರುವ ಖಾಲಿ ಹುದ್ದೆಗಳನ್ನು ಆಧರಿಸಿ, ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ತಯಾರಿಸಲಾಗುತ್ತದೆ. ಅದರ ವಿವರಗಳನ್ನು ಅಧಿಕೃತ ಐಬಿಪಿಎಸ್ ವೆಬ್‌ಸೈಟ್‌ನಲ್ಲಿ ನಂತರ ಲಭ್ಯವಾಗುವಂತೆ ಮಾಡಲಾಗುತ್ತದೆ.

ಪೂರ್ವಭಾವಿ ಪರೀಕ್ಷೆ ಅರ್ಹತಾ ಸ್ವರೂಪದ್ದಾಗಿದ್ದು, ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನಷ್ಟೇ ಮೆರಿಟ್ ಪಟ್ಟಿಗೆ ಪರಿಗಣಿಸಲಾಗುತ್ತದೆ.ಮುಖ್ಯ ಪರೀಕ್ಷೆಯ 200 ಅಂಕಗಳನ್ನು ನೂರಕ್ಕೆ ಇಳಿಸಿ ಮೆರಿಟ್ ಪಟ್ಟಿ ರಚಿಸಲಾಗುತ್ತದೆ. ಈ ಕಾರಣಕ್ಕಾಗಿ ಹೆಚ್ಚಿನ ಅಂಕಗಳಿಸುವತ್ತ ಅಭ್ಯರ್ಥಿಗಳು ಗಮನ ನೀಡಬೇಕಾಗುತ್ತದೆ.ಹುದ್ದೆಗಳಿಗೆ ಆಯ್ಕೆ ಮಾಡುವಾಗ ಮುಖ್ಯ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಪಡೆದಿರಬೇಕು.

ಇದನ್ನೂ ಓದಿ: Job Alert: ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 2,700 ಅಪ್ರೆಂಟಿಸ್ ಶಿಪ್ ಹುದ್ದೆ; ಆಯ್ಕೆಯಾಗಲು ಏನು ಮಾಡಬೇಕು? ವಿಸ್ತೃತ ಮಾಹಿತಿ

ಇನ್ನೊಂದಿಷ್ಟು ಮಾಹಿತಿ…

ಲಿಖಿತ ದೃಢೀಕರಣ:

ಅರ್ಜಿ ಸಲ್ಲಿಕೆಯ ವೇಳೆ ಕೈಬರಹದ ಘೋಷಣೆಯ ಪಠ್ಯ ಈ ರೀತಿಯಲ್ಲಿ ಬರೆದು ಅಪ್‌ಲೋಡ್‌ ಮಾಡಬೇಕು:

(ಅಭ್ಯ ರ್ಥಿಯ ಹೆಸರು),. …….. ಆದ ನಾನು ಈ ಮೂಲಕ ಅರ್ಜಿಯಲ್ಲಿ ಸಲ್ಲಿಸಿದ ಎಲ್ಲಾ ಮಾಹಿತಿಯು ಸರಿಯಾಗಿದೆ ಮತ್ತು ನಿಜ ಮಾನ್ಯವಾಗಿದೆ ಎಂದು ಘೋಷಿಸುತ್ತೇನೆ. ಅಗತ್ಯವಿದ್ದಾಗ ನಾನು ಪೂರಕ ದಾಖಲೆಗಳನ್ನು ಪ್ರಸ್ತುತಪಡಿಸುತ್ತೇನೆ. ಲಿಖಿತ ಘೋಷಣೆಯು ಇಂಗ್ಲಿಷ್ ನಲ್ಲಿ ಮಾತ್ರ ಇರಬೇಕು. ಕ್ಯಾಪಿಟಲ್ ಲೆಟರ್ಸ್‌ನಲ್ಲಿ ಇರಬಾರದು. ಕ್ಯಾಪಿಟಲ್ ಲೆಟರ್ ಗಳಲ್ಲಿ ಹಾಕಿದ ಸಹಿಯನ್ನು ಸ್ವೀಕರಿಸಲಾಗುವುದಿಲ್ಲ. ಎಡ ಹೆಬ್ಬೆರಳಿನ ಗುರುತು ಸರಿಯಾಗಿ ಸ್ಕ್ಯಾನ್ ಮಾಡಬೇಕು ಮತ್ತು ಮಸುಕಾಗಿರಬಾರದು. ಆಯ್ಕೆ ಪ್ರಕ್ರಿಯೆಯ ಹಂತದಲ್ಲಿ ಅಥವಾ ಅಪಾಯಿಂಟ್ ಮೆಂಟ್ ನ ನಂತರ ನಿಮ್ಮ ಕೈಬರಹದ ಘೋಷಣೆ ಹಾಗೂ ನಿಮ್ಮ ಕೈಬರಹದಲ್ಲಿ ಭಿನ್ನವಾಗಿರುವುದು ತಜ್ಞರ ವಿಶ್ಲೇಷಣೆಯಲ್ಲಿ ಕಂಡುಬಂದರೆ, ಅಭ್ಯರ್ಥಿಯ ಉಮೇದುವಾರಿಕೆಯನ್ನು ರದ್ದುಗೊಳಿಸಲಾಗುವುದು. ಹೀಗಾಗಿ ಅರ್ಜಿ ಸಲ್ಲಿಸುವ ಹಂತದಲ್ಲಿಯೇ ಬಹಳ ಎಚ್ಚರಿಕೆಯಿಂದ ಅರ್ಜಿ ಸಲ್ಲಿಸುವುದು ಒಳಿತು.

ಸಂದರ್ಶನವಿಲ್ಲ:

ಪೂರ್ವಭಾವಿ ಪರೀಕ್ಷೆ ಯಲ್ಲಿ ಅರ್ಹತೆ ಪಡೆಯುವ ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ. ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳು ಆಧಾರದ ಮೇಲೆ ಆಯ್ಕೆಯಾದವರಿಗೆ ತಾತ್ಕಾಲಿಕವಾಗಿ ನೇಮಕಾತಿ ಪತ್ರ ವಿತರಿಸಲಾಗುತ್ತದೆ.

ಇದನ್ನೂ ಓದಿ: Karnataka Jobs Reservation: ಉದ್ಯೋಗ ವಿಚಾರದಲ್ಲಿ ಕನ್ನಡಿಗರೊಂದಿಗೆ ಸರ್ಕಾರ ಚೆಲ್ಲಾಟ: ವಿಜಯೇಂದ್ರ ಆಕ್ರೋಶ

Continue Reading
Advertisement
Viral News
Latest1 min ago

Viral News: ಮಕ್ಕಳ ಹಸಿವು ನೀಗಿಸಲು ಸೈನಿಕರೆದುರು ಬೆತ್ತಲಾಗುತ್ತಿರುವ ಮಹಿಳೆಯರು!

Suraj Revanna Case
ಕರ್ನಾಟಕ24 mins ago

Suraj Revanna Case: ಸೂರಜ್‌ ರೇವಣ್ಣಗೆ ಬಿಗ್‌ ರಿಲೀಫ್‌; 2ನೇ ಕೇಸ್‌ನಲ್ಲೂ ಜಾಮೀನು, ನಾಳೆ ರಿಲೀಸ್‌!

Gautam Gambhir
ಕ್ರೀಡೆ33 mins ago

Gautam Gambhir : ನನ್ನ ಮತ್ತು ಕೊಹ್ಲಿಯ ನಡುವೆ ಗೌರವಯುತ ಸಂಬಂಧವಿದೆ; ಗೌತಮ್ ಗಂಭೀರ್​

Nipah Virus
ಆರೋಗ್ಯ35 mins ago

Nipah Virus: ಡೇಂಜರಸ್‌ ನಿಫಾ ವೈರಸ್‌; ಇದರ ಲಕ್ಷಣಗಳೇನು? ನಮಗೆ ಅಪಾಯ ಇದೆಯೆ?

Nitish Kumar
ದೇಶ35 mins ago

Nitish Kumar: ಬಿಹಾರಕ್ಕೆ ವಿಶೇಷ ಸ್ಥಾನಮಾನ ಕೊಡಲ್ಲ ಎಂದ ಮೋದಿ ಸರ್ಕಾರ; ನಿತೀಶ್‌ ಕುಮಾರ್‌ ಬಂಡಾಯ ನಿಶ್ಚಿತ?

Shoe Theft
ಕ್ರೈಂ40 mins ago

Shoe Theft: ಬೆಂಗಳೂರಿನಲ್ಲಿ 10,000 ಶೂ, ಚಪ್ಪಲಿ ಕದ್ದ ಖತರ್‌ನಾಕ್‌ ಕಳ್ಳರ ಬಂಧನ!

Actor Darshan
ಕರ್ನಾಟಕ48 mins ago

Actor Darshan: ನಟ ದರ್ಶನ್‌ಗೆ ಇನ್ನೂ 3 ದಿನ ಜೈಲೂಟವೇ ಗತಿ; ಜು.25ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌

Beautician and Basic Fashion Designing Training Programme inauguration in Yallapura
ಉತ್ತರ ಕನ್ನಡ50 mins ago

Uttara Kannada News: ನಮ್ಮಲ್ಲಿರುವ ಕೌಶಲ್ಯಗಳನ್ನು ಅರಿತುಕೊಳ್ಳಬೇಕು; ಡಾ. ಆರ್.ಡಿ. ಜನಾರ್ಧನ

Rowdy reels
ಬೆಂಗಳೂರು1 hour ago

Rowdy Reels : 500 ರೂ. ಕೊಟ್ಟರೆ ರೌಡಿಗಳ ರೀಲ್ಸ್‌ ಅಪ್ಲೋಡ್‌; ಅಪ್ರಾಪ್ತರಿಗೆ ಬಿಸಿ ಮುಟ್ಟಿಸಿದ ಸಿಸಿಬಿ ಪೊಲೀಸರು

YouTube
ದೇಶ1 hour ago

You Tube : ಮೈಕ್ರೋಸಾಫ್ಟ್​ ಸಮಸ್ಯೆ ಬಳಿಕ ಇದೀಗ ಯೂಟ್ಯೂಬ್​​ನಲ್ಲೂ ತಾಂತ್ರಿಕ ದೋಷ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ2 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ3 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ3 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ4 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ6 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 week ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 week ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌