Job News: 10 ಸಾವಿರ ಮಂದಿಗೆ ಉದ್ಯೋಗದ ಆಫರ್ ನೀಡಿದ ಟಿಸಿಎಸ್! - Vistara News

ಉದ್ಯೋಗ

Job News: 10 ಸಾವಿರ ಮಂದಿಗೆ ಉದ್ಯೋಗದ ಆಫರ್ ನೀಡಿದ ಟಿಸಿಎಸ್!

Tata Consultancy Services: ಉನ್ನತ ಎಂಜಿನಿಯರಿಂಗ್ ಕಾಲೇಜುಗಳಿಂದ 10,000 ಮಂದಿಯ ನೇಮಕಕ್ಕೆ ಭಾರತದ ಅತೀ ದೊಡ್ಡ ಐಟಿ ಸಂಸ್ಥೆಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ನಿರ್ಧರಿಸಿದೆ. ಈ ಬಗ್ಗೆ ಅನೇಕ ಸುಪ್ರಸಿದ್ಧ ಕಾಲೇಜುಗಳು ಸಂತಸ ವ್ಯಕ್ತ ಪಡಿಸಿದೆ.

VISTARANEWS.COM


on

Tata Consultancy Services
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತದ (india) ಅತೀ ದೊಡ್ಡ ಐಟಿ ಸಂಸ್ಥೆಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (Tata Consultancy Services-TCS) ನೇಮಕಾತಿ ಡ್ರೈವ್ ನಲ್ಲಿ (recruitment drive) ಈ ಬಾರಿ ಸುಪ್ರಸಿದ್ದ ಎಂಜಿನಿಯರಿಂಗ್ (engineering) ಕಾಲೇಜುಗಳಿಂದ (colleges) ಅತೀ ಹೆಚ್ಚಿನ ಸಂಖ್ಯೆಯಲ್ಲಿ (Job News) ಹೊಸಬರನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿರುವುದಾಗಿ ಅನೇಕ ಕಾಲೇಜುಗಳು ದೃಢಪಡಿಸಿವೆ.

ಕಳೆದ ತಿಂಗಳು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಅಭ್ಯರ್ಥಿಗಳ ಅರಿವಿನ ಸಾಮರ್ಥ್ಯ ಮತ್ತು ಕೌಶಲ್ಯ ಪರಿಣತಿಯನ್ನು ಪರೀಕ್ಷಿಸಲು ಟಿಸಿಎಸ್ ಅಯಾನ್ ವಿನ್ಯಾಸಗೊಳಿಸಿದ ಮೌಲ್ಯಮಾಪನ ವೇದಿಕೆಯಾದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (NQT) ಮೂಲಕ ಹೊಸದಾಗಿ ನೇಮಕಾತಿಯನ್ನು ಪ್ರಾರಂಭಿಸಿತ್ತು. TCS ಮತ್ತು ಟೈಟಾನ್‌ನಂತಹ ಟಾಟಾ ಗ್ರೂಪ್ ಕಂಪೆನಿಗಳನ್ನು ಹೊರತುಪಡಿಸಿ, ಹ್ಯಾಪಿಯೆಸ್ಟ್ ಮೈಂಡ್ಸ್‌ನಂತಹ ಸಂಸ್ಥೆಗಳು ನೇಮಕಾತಿಗಾಗಿ NQT ಅನ್ನು ಬಳಸುತ್ತವೆ.

ಏಪ್ರಿಲ್ 26ರಂದು ಪರೀಕ್ಷೆ

ನೇಮಕಾತಿ ಅಭಿಯಾನಕ್ಕೆ ಏಪ್ರಿಲ್ 10ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಏಪ್ರಿಲ್ 26 ರಂದು ಪರೀಕ್ಷೆಗಳು ನಡೆಯಲಿದೆ ಎಂದು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಈಗಾಗಲೇ ಘೋಷಿಸಿದೆ.

ಇದನ್ನೂ ಓದಿ: Job Alert: ವಿವಿಧ ಇಲಾಖಾ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟಿಸಿದ ಕರ್ನಾಟಕ ಲೋಕಸೇವಾ ಆಯೋಗ; ಟೈಮ್‌ ಟೇಬಲ್‌ ಇಲ್ಲಿ ವೀಕ್ಷಿಸಿ

ಏಪ್ರಿಲ್ 26ರಂದು ಮೊದಲ ಹಂತದ ನೇಮಕಾತಿ ಆದ್ಯತಾ ಕಾಲೇಜುಗಳಾಗಿದ್ದರೆ, ಎರಡನೇ ಹಂತದಲ್ಲಿ ಉಳಿದವುಗಳಿಗೆ ನಡೆಯಲಿದೆ. NQT ಮತ್ತು ಕ್ಯಾಂಪಸ್ ಪ್ಲೇಸ್‌ಮೆಂಟ್‌ಗಳು ಒಂದೇ ಎಂದು ಪ್ಲೇಸ್‌ಮೆಂಟ್ ಅಧಿಕಾರಿಗಳು ತಿಳಿಸಿದ್ದಾರೆ.

Tata Consultancy Services

ಮುಂಬಯಿ ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಸಂಸ್ಥೆಯು ನಿಂಜಾ, ಡಿಜಿಟಲ್, ಪ್ರೈಮ್ ಎಂಬ ಮೂರು ವರ್ಗಗಳಿಗೆ ನೇಮಕ ಮಾಡಿಕೊಳ್ಳುತ್ತಿದೆ. ನಿಂಜಾ ವರ್ಗವು ವರ್ಷಕ್ಕೆ 3.36 ಲಕ್ಷ ರೂಪಾಯಿಗಳ ಪ್ಯಾಕೇಜ್ ಅನ್ನು ನೀಡುತ್ತದೆ. ಡಿಜಿಟಲ್ ಮತ್ತು ಪ್ರೈಮ್ ವಿಭಾಗಗಳು 7 ರಿಂದ 9- 11.5 ಲಕ್ಷ ರೂಪಾಯಿಗಳ ವಾರ್ಷಿಕ ಪ್ಯಾಕೇಜ್ ಅನ್ನು ನೀಡುತ್ತವೆ.

ಡಿಜಿಟಲ್ ಮತ್ತು ಪ್ರೈಮ್ ಪ್ರೊಫೈಲ್‌ಗಳನ್ನು ಸ್ವೀಕರಿಸುವ ವಿದ್ಯಾರ್ಥಿಗಳನ್ನು ಅಭಿವೃದ್ಧಿ ಹುದ್ದೆಗಳಿಗಾಗಿ ಹಾಗೂ ನಿಂಜಾ ಪ್ರೊಫೈಲ್‌ನಲ್ಲಿರುವ ವಿದ್ಯಾರ್ಥಿಗಳನ್ನು ಸಹಕಾರ ಹುದ್ದೆಗಳಿಗಾಗಿ ಪರಿಗಣಿಸಲಾಗುತ್ತದೆ.

ಹಲವು ವಿದ್ಯಾರ್ಥಿಗಳಿಗೆ ಆಫರ್

ವಿಐಟಿ ವಿದ್ಯಾರ್ಥಿಗಳು ಒಟ್ಟು 963 ಆಫರ್ ಲೆಟರ್‌ಗಳನ್ನು ಸ್ವೀಕರಿಸಿದ್ದು, ಅದರಲ್ಲಿ 103 ಪ್ರಧಾನ ವರ್ಗಕ್ಕೆ ಸೇರಿದ್ದವು ಎಂದು ವೆಲ್ಲೂರ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವೃತ್ತಿ ಅಭಿವೃದ್ಧಿ ಕೇಂದ್ರದ ನಿರ್ದೇಶಕ ವಿ ಸ್ಯಾಮ್ಯುಯೆಲ್ ರಾಜ್‌ಕುಮಾರ್ ತಿಳಿಸಿದ್ದಾರೆ.

ಶಾಸ್ತ್ರ ವಿಶ್ವವಿದ್ಯಾಲಯದ ಉಪಕುಲಪತಿ ಎಸ್. ವೈದ್ಯಸುಬ್ರಮಣ್ಯಂ ಮಾತನಾಡಿ, ಕಾಲೇಜಿನ 1,300 ವಿದ್ಯಾರ್ಥಿಗಳಿಗೆ 2,000 ಆಫರ್ ಲೆಟರ್‌ಗಳನ್ನು ಹಸ್ತಾಂತರಿಸಲಾಗಿದೆ. ಒಬ್ಬ ವಿದ್ಯಾರ್ಥಿಯು ಸರಾಸರಿ ಒಂದಕ್ಕಿಂತ ಹೆಚ್ಚು ಆಫರ್‌ಗಳನ್ನು ಪಡೆದಿರುವುದನ್ನು ಇದು ಸೂಚಿಸುತ್ತದೆ. ಆದರೂ TCS ನಿಂದ ನೇಮಕಗೊಂಡ ವಿದ್ಯಾರ್ಥಿಗಳಿಗೆ ಕಾಲೇಜುಗಳಿಂದ ಬ್ರೇಕಪ್ ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.

Tata Consultancy Services


ಟಿಸಿಎಸ್ ನೇಮಕಾತಿಯು ದೊಡ್ಡ ರೀತಿಯಲ್ಲಿ ಬಂದಿದೆ ಎಂದು ಎಸ್‌ಆರ್‌ಎಂ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಅಂಡ್ ಟೆಕ್ನಾಲಜಿಯ ಕೆರಿಯರ್ ಸೆಂಟರ್‌ನ ನಿರ್ದೇಶಕ ವೆಂಕಟ ನರಸಿಂಹದೇವರ ತಿಳಿಸಿದ್ದಾರೆ.

ಅನೇಕ ಸವಾಲು

ಕಾಲೇಜು ಕ್ಯಾಂಪಸ್‌ಗಳ ಬದಲಿಗೆ ಪರೀಕ್ಷೆಗಳನ್ನು ನಡೆಸಲು TCS ದೇಶಾದ್ಯಂತ ಹರಡಿರುವ ತನ್ನ iON ಕೇಂದ್ರಗಳನ್ನು ಬಳಸುತ್ತಿದೆ. ಆದರೂ ವಿಶ್ವಾಸಾರ್ಹ ಪಾಲುದಾರ ಕಾಲೇಜುಗಳ ವಿದ್ಯಾರ್ಥಿಗಳನ್ನು ಕ್ಯಾಂಪಸ್‌ಗಳಲ್ಲಿ ಪರೀಕ್ಷೆಯನ್ನು ತೆಗೆದುಕೊಳ್ಳಲು ಕೇಳಲಾಗಿದೆ. TCS ಸಾಮಾನ್ಯವಾಗಿ ಪ್ರತೀ ವರ್ಷ ಆಗಸ್ಟ್- ಸೆಪ್ಟೆಂಬರ್‌ನಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನು ನಡೆಸುತ್ತದೆ. ಈ ವರ್ಷ ನೇಮಕಾತಿಯಲ್ಲಿನ ವಿಳಂಬದಿಂದಾಗಿ ಅನೇಕ ಸವಾಲು ಮತ್ತು ಅವಕಾಶಗಳನ್ನು ಎದುರಿಸುತ್ತಿದೆ ಎಂದು ಪ್ಲೇಸ್‌ಮೆಂಟ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

TCS ಕೋಡಿಂಗ್‌ನಲ್ಲಿ ಉತ್ತಮ ಸಾಧನೆ ಮಾಡುವ ಅಭ್ಯರ್ಥಿಗಳನ್ನು ಹುಡುಕುತ್ತಿದೆ. ಆದರೆ ವ್ಯಾಪಾರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸೃಜನಶೀಲತೆ ಮತ್ತು ಪ್ರಾವೀಣ್ಯತೆಯನ್ನು ತೋರುವವರೂ ಬೇಕಾಗಿದೆ. ಹೆಚ್ಚಿನ ತರಬೇತಿಯ ಅಗತ್ಯವಿಲ್ಲದ ಅಭ್ಯರ್ಥಿಗಳನ್ನು ನೇಮಿಸಿಕೊಲ್ಲಲಾಗುತ್ತಿದೆ ಎಂದು ನೇಮಕಾತಿ ಅಧಿಕಾರಿಯೊಬ್ಬರು ಹೇಳಿದರು.

ನೇಮಕ ಪ್ರಕ್ರಿಯೆ ಹಿಂದೆ ಎಷ್ಟಿತ್ತು ?

TCS 2024 ರಲ್ಲಿ 40,000 ಹೊಸಬರ ನೇಮಕಾತಿಗೆ ಯೋಜನೆ ರೂಪಿಸಿದೆ ಎಂದು ಹೇಳಿತ್ತು. 2023ರಲ್ಲಿ ಕಂಪೆನಿಯು 22,600 ಮಂದಿಯ ನೇಮಕ ಮಾಡಿತ್ತು. 2022ರಲ್ಲಿ 1.03 ಲಕ್ಷ ಉದ್ಯೋಗಿಗಳ ನೇಮಕ ಮಾಡಿದೆ. ಅದಕ್ಕೆ ಹೋಲಿಸಿದರೆ ಈ ಬಾರಿ ನೇಮಕಾತಿಯಲ್ಲಿ ಗಮನಾರ್ಹ ಇಳಿಕೆಯಾಗಿದೆ.

ಪ್ರಸ್ತುತ ಐಟಿ ಕಂಪೆನಿಗಳು ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಹಂತಕ್ಕೆ ತಲುಪಿದೆ. ಇದೊಂದು ಉತ್ತಮ ಅವಕಾಶ. ಮುಂಬರುವ ದಿನಗಳಲ್ಲಿ ಇದು ಮತ್ತಷ್ಟು ಹೆಚ್ಚಾಗಬಹುದು ಎಂದು ಕ್ವೆಸ್ ಕಾರ್ಪ್‌ನ ಐಟಿ ಸಿಬ್ಬಂದಿ ವ್ಯವಹಾರದ ಡೆಪ್ಯೂಟಿ ಸಿಇಒ ಕಪಿಲ್ ಜೋಶಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳಿಗೆ ಇಂದೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಜೂನ್‌ 1. ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ (Motor Vehicle Inspector)​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (KPSC Recruitment 2024). ಈ ಹಿಂದೆ ಅರ್ಜಿ ಸಲ್ಲಿಕೆಗೆ ಮೇ 21 ಕೊನೆಯ ದಿನಾಂಕ ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿದೆ. ಆಸಕ್ತರು ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಜೂನ್‌ 1 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

ವಯೋಮಿತಿ ಮತ್ತು ಅರ್ಜಿ ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1ರ ಅಭ್ಯರ್ಥಿಗಳಿಗೆ 5 ವರ್ಷ, ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 3 ವರ್ಷ ಮತ್ತು ಪಿಡಬ್ಲ್ಯುಡಿ / ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1/ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಮಾಜಿ ಯೋಧರು ಅರ್ಜಿ ಶುಲ್ಕವಾಗಿ 50 ರೂ., ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 300 ರೂ., ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 33,450 ರೂ. – 62,600 ರೂ. ಮಾಸಿಕ ವೇತನ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌: 080-30574957 / 30574901ಕ್ಕೆ ಕರೆ ಮಾಡಿ.

ಉಳಿಕೆ ವೃಂದದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಹೈದರಾಬಾದ್‌-ಕರ್ನಾಟಕ ವೃಂದದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ದಿನಾಂಕ ವಿಸ್ತರಣೆಯ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನಿಮ್ಮ ಮೊಬೈಲ್‌ ನಂಬರ್‌ ಮತ್ತು ಇಮೇಲ್‌ ಐಡಿ ನಮೂದಿಸಿ ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ / ರಿಕ್ವೆಸ್ಟ್‌ ನಂಬರ್‌ ತೆಗೆದಿಡಿ.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

Continue Reading

ವಿದೇಶ

Google Layoff: ಮತ್ತಷ್ಟು ಉದ್ಯೋಗ ಕಡಿತಗೊಳಿಸಿದ ಗೂಗಲ್‌; ಕಾರಣವೇನು?

Google Layoff: ವಿಶ್ವದ ಅತಿದೊಡ್ಡ ಟೆಕ್ ಕಂಪನಿ ಎನಿಸಿಕೊಂಡಿರುವ ಆಲ್ಫಾಬೆಟ್‌ ಇಂಕ್‌ ಒಡೆತನದ ಗೂಗಲ್‌ ಮತ್ತೆ ತನ್ನ ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡಿದೆ. ಗೂಗಲ್ ತನ್ನ ʼಕೋರ್ ತಂಡʼದಿಂದ ಸುಮಾರು 200 ಉದ್ಯೋಗಿಗಳನ್ನು ಕೈ ಬಿಟ್ಟಿದೆ. ಕ್ಯಾಲಿಫೋರ್ನಿಯಾದಲ್ಲಿ ಪ್ರಧಾನ ಕಚೇರಿ ಹೊಂದಿರುವ ಎಂಜಿನಿಯರಿಂಗ್ ತಂಡದಿಂದ ಕನಿಷ್ಠ 50 ಉದ್ಯೋಗಿಗಳನ್ನು ವಜಾಗೊಳಿಸಲಾಗಿದ್ದು, ಭಾರತ ಮತ್ತು ಮೆಕ್ಸಿಕೊದಲ್ಲಿನ ಈ ಸ್ಥಾನಗಳಿಗೆ ಬದಲಿ ಉದ್ಯೋಗಿಗಳನ್ನು ನೇಮಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಕಂಪನಿಯ ಮೂಲಗಳು ತಿಳಿಸಿವೆ. ಕೆಲಸದಿಂದ ವಜಾಗೊಳಿಸಲ್ಪಟ್ಟ ಕಾರ್ಮಿಕರು ಕಂಪನಿಯಲ್ಲಿ ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಅಧಿಕೃತರು ಮಾಹಿತಿ ನೀಡಿದ್ದಾರೆ.

VISTARANEWS.COM


on

Google Layoff
Koo

ನವದೆಹಲಿ: ವಿಶ್ವದ ಅತಿದೊಡ್ಡ ಟೆಕ್ ಕಂಪನಿ ಎನಿಸಿಕೊಂಡಿರುವ ಆಲ್ಫಾಬೆಟ್‌ ಇಂಕ್‌ ಒಡೆತನದ ಗೂಗಲ್‌ ಮತ್ತೆ ತನ್ನ ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡಿದೆ (Google Layoff). ಗೂಗಲ್ ತನ್ನ ʼಕೋರ್ ತಂಡʼದಿಂದ ಸುಮಾರು 200 ಉದ್ಯೋಗಿಗಳನ್ನು ಕೈ ಬಿಟ್ಟಿದೆ. ಮಾತ್ರವಲ್ಲ ಕಂಪನಿಯು ತನ್ನ ಪುನರ್‌ ರಚನೆ ಪ್ರಕ್ರಿಯೆಯನ್ನು ಮುಂದುವರಿಸುತ್ತಿರುವುದರಿಂದ ವೆಚ್ಚವನ್ನು ಕಡಿತಗೊಳಿಸುವ ಉದ್ದೇಶದಿಂದ ಕೆಲವು ಉದ್ಯೋಗಗಳನ್ನು ವಿದೇಶಕ್ಕೆ ಸ್ಥಳಾಂತರಿಸಿದೆ ಎಂದು ಮೂಲಗಳು ತಿಳಿಸಿವೆ.

ಕ್ಯಾಲಿಫೋರ್ನಿಯಾದಲ್ಲಿ ಪ್ರಧಾನ ಕಚೇರಿ ಹೊಂದಿರುವ ಎಂಜಿನಿಯರಿಂಗ್ ತಂಡದಿಂದ ಕನಿಷ್ಠ 50 ಉದ್ಯೋಗಿಗಳನ್ನು ವಜಾಗೊಳಿಸಲಾಗಿದ್ದು, ಭಾರತ ಮತ್ತು ಮೆಕ್ಸಿಕೊದಲ್ಲಿನ ಈ ಸ್ಥಾನಗಳಿಗೆ ಬದಲಿ ಉದ್ಯೋಗಿಗಳನ್ನು ನೇಮಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಕಂಪನಿಯ ಮೂಲಗಳು ತಿಳಿಸಿವೆ. ಗೂಗಲ್‌ನ ʼಕೋರ್ ತಂಡʼವು ಬಳಕೆದಾರರ ಸುರಕ್ಷತೆಗೆ ಕಾರ್ಯ ನಿರ್ವಹಿಸುತ್ತದೆ. ಜತೆಗೆ ತಾಂತ್ರಿಕ ಅಡಿಪಾಯವನ್ನು ಅಭಿವೃದ್ಧಿ ಪಡಿಸುತ್ತದೆ.

ಅಧಿಕೃತರು ಹೇಳಿದ್ದೇನು?

ಗೂಗಲ್ ಡೆವಲಪರ್ ಇಕೋಸಿಸ್ಟಮ್‌ನ ಉಪಾಧ್ಯಕ್ಷ ಅಸಿಮ್ ಹುಸೇನ್ ಕಳೆದ ವಾರ ಇಮೇಲ್‌ ಮೂಲಕ ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿದ್ದರು. ಇದು ತಮ್ಮ ತಂಡದ ಅತಿದೊಡ್ಡ ಉದ್ಯೋಗಿಗಳ ಕಡಿತ ಎಂದು ಮೂಲಗಳು ತಿಳಿಸಿವೆ. ಕೆಲಸದಿಂದ ವಜಾಗೊಳಿಸಲ್ಪಟ್ಟ ಕಾರ್ಮಿಕರು ಕಂಪನಿಯಲ್ಲಿ ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಅಧಿಕೃತರು ಹೇಳಿದ್ದಾರೆ. ಬೆಂಗಳೂರು, ಮೆಕ್ಸಿಕೊ ಮತ್ತು ಡಬ್ಲಿನ್‌ ನಗರಗಳಲ್ಲಿ ಕಂಪನಿಯ ಕಾರ್ಯಾಚರಣೆ ವಿಸ್ತರಿಸಲು ನಿರ್ಧರಿಸಿದೆ.

ಹಿಂದೆಯೂ ನಡೆದಿತ್ತು ಉದ್ಯೋಗ ಕಡಿತ

ಕೆಲವು ದಿನಗಳ ಹಿಂದೆಯೂ ಗೂಗಲ್‌ ಹಲವು ಉದ್ಯೋಗಿಗಳನ್ನು ಕಡಿತಗೊಳಿಸಿತ್ತು. ಕೃತಕ ಬುದ್ಧಿಮತ್ತೆ ಹಾಗೂ ಸ್ವಯಂಚಾಲಿತ ವ್ಯವಸ್ಥೆಯ ಅಳವಡಿಕೆಗೆ ಕಂಪನಿ ಮುಂದಾಗಿದೆ. ಹೀಗಾಗಿ ಈ ವರ್ಷದ ಜನವರಿಯಲ್ಲಿ ಎಂಜಿನಿಯರಿಂಗ್‌, ಹಾರ್ಡ್‌ವೇರ್‌ ಮತ್ತು ಅಸಿಸ್ಟಂಟ್‌ ಟೀಮ್‌ ವಿಭಾಗಗಳಿಂದ ಹಲವು ಉದ್ಯೋಗಿಗಳನ್ನು ವಜಾಗೊಳಿಸಿತ್ತು.

ಆ ವೇಳೆ ನೂರಾರು ಹಾರ್ಡ್‌ವೇರ್‌ ಸಿಬ್ಬಂದಿ ಕೆಲಸ ಕಳೆದುಕೊಂಡಿದ್ದರು. ಪಿಕ್ಸೆಲ್ (Pixel), ನೆಸ್ಟ್ (Nest) ಮತ್ತು ಫಿಟ್‌ಬಿಟ್‌ (Fitbit)ನಂತಹ ಉತ್ಪನ್ನಗಳನ್ನು ಮೇಲ್ವಿಚಾರಣೆ ಮಾಡುವ ಗೂಗಲ್ ತನ್ನ ತಂಡಗಳ ಪುನರ್‌ ವಿಂಗಡಣೆಗೆ ಮುಂದಾಗಿದ್ದು, ಅದರ ಭಾಗವಾಗಿ ಈ ಉದ್ಯೋಗ ಕಡಿತ ನಡೆದಿತ್ತು.

“1ಪಿ ಎಆರ್ (1P AR) ಹಾರ್ಡ್‌ವೇರ್‌ ತಂಡದ ಮೇಲೆ ಪರಿಣಾಮ ಬೀರುವ ಡಿಎಸ್‌ಪಿಎ(ಡಿವೈಸಸ್‌ & ಸರ್ವಿಸಸ್‌) ಯಲ್ಲಿನ ನೂರಾರು ಉದ್ಯೋಗಿಗಳನ್ನು ತೆಗೆದು ಹಾಕಲಾಗುತ್ತಿದೆ. ನಮ್ಮ 1ಪಿ ಎಆರ್ ಹಾರ್ಡ್‌ವೇರ್ ತಂಡದಲ್ಲಿ ಬದಲಾವಣೆಗಳನ್ನು ಕೈಗೊಳ್ಳಲಾಗುತ್ತಿದೆʼʼ ಎಂದು ಗೂಗಲ್ ವಕ್ತಾರರು ತಿಳಿಸಿದ್ದರು. “ಫಿಟ್‌ಬಿಟ್‌ ಬಳಕೆದಾರರಿಗೆ ಉತ್ತಮ ಸೇವೆ ಸಲ್ಲಿಸಲು ಕಂಪನಿ ಬದ್ಧವಾಗಿದೆ. ವೈಯಕ್ತಿಕ ಎಐನೊಂದಿಗೆ ಆರೋಗ್ಯ ಕ್ಷೇತ್ರದಲ್ಲಿ ಹೊಸತನವನ್ನು ತರಲು ಮತ್ತು ಪಿಕ್ಸೆಲ್ ವಾಚ್, ಮರುವಿನ್ಯಾಸಗೊಳಿಸಿದ ಫಿಟ್‌ಬಿಟ್‌ ಅಪ್ಲಿಕೇಶನ್, ಫಿಟ್‌ಬಿಟ್‌ ಪ್ರೀಮಿಯಂ ಸೇವೆ ಮತ್ತು ಫಿಟ್‌ಬಿಟ್‌ ಟ್ರ್ಯಾಕರ್ ಲೈನ್‌ನೊಂದಿಗೆ ಎಂದಿನೊಂದಿಗೆ ಕಾರ್ಯ ನಿರ್ವಹಿಸಲಿದೆʼʼ ಎಂದು ಕಂಪನಿ ಭರವಸೆ ನೀಡಿತ್ತು.

ಇದನ್ನೂ ಓದಿ: Tech Layoffs: 453 ಉದ್ಯೋಗಿಗಳನ್ನು ಮನೆಗೆ ಕಳುಹಿಸಿದ ಗೂಗಲ್ ಇಂಡಿಯಾ! ಇನ್ನಷ್ಟು ಜಾಬ್ ಕಡಿತ?

ಗೂಗಲ್ ಮಾತೃಸಂಸ್ಥೆಯಾಗಿರುವ ಆಲ್ಫಾಬೆಟ್ ಇಂಕ್ ಕೆಲವು ತಿಂಗಳ ಹಿಂದೆ ಒಟ್ಟು ಉದ್ಯೋಗಿಗಳ ಪೈಕಿ ಶೇ. 6 ಅಥವಾ 12000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿತ್ತು. ಅದಾಗಿ ಕೆಲವೆ ತಿಂಗಳಲ್ಲಿ ಮತ್ತೆ ಉದ್ಯೋಗ ಕಡಿತಕ್ಕೆ ಮುಂದಾಗಿದೆ. 2023ರ ಸೆಪ್ಟೆಂಬರ್‌ನಲ್ಲಿ ಬಂದ ವರದಿ ಪ್ರಕಾರ ಆಲ್ಫಾಬೆಟ್ ಕಂಪೆನಿಯಲ್ಲಿ ಸುಮಾರು 1,80,000 ಉದ್ಯೋಗಿಗಳಿದ್ದರು.

Continue Reading

ಉದ್ಯೋಗ

Job Alert: ಗಮನಿಸಿ; ಹಟ್ಟಿ ಚಿನ್ನದ ಗಣಿ ಕಂಪನಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

Job Alert: ಭಾರತದ ಚಿನ್ನ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪೆನಿ ಅಸಿಸ್ಟಂಟ್‌ ಫಾರ್‌ಮನ್‌, ಐಟಿಐ ಫಿಟ್ಟರ್‌, ಲ್ಯಾಬ್‌ ಅಸಿಸ್ಟಂಟ್‌ ಸೇರಿದಂತೆ ಸುಮಾರು 168 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ನಾಳೆ (ಮೇ 3) ಕೊನೆಯ ದಿನ. ಐಟಿಐ, ಡಿಪ್ಲೋಮಾ, ಪದವಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ಭಾರತದ ಚಿನ್ನ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪೆನಿ (Hutti Gold Mines Company Limited)ಯು ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (HGML Recruitment 2024). ಅಸಿಸ್ಟಂಟ್‌ ಫಾರ್‌ಮನ್‌, ಐಟಿಐ ಫಿಟ್ಟರ್‌, ಲ್ಯಾಬ್‌ ಅಸಿಸ್ಟಂಟ್‌ ಸೇರಿದಂತೆ ಸುಮಾರು 168 ಹುದ್ದೆಗಳಿವೆ. ಐಟಿಐ, ಡಿಪ್ಲೋಮಾ, ಪದವಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ನಾಳೆ (ಮೇ 3). ಹೀಗಾಗಿ ಬೇಗ ಅಪ್ಲೈ ಮಾಡಿ (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಸಿಸ್ಟೆಂಟ್ ಫಾರ್‌ಮನ್‌ (ಗಣಿ)- 16 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಮೆಟಲರ್ಜಿ)- 7 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಲ್ಯಾಬ್ ಅಸಿಸ್ಟೆಂಟ್- 1 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ
ಅಸಿಸ್ಟೆಂಟ್ ಫಾರ್‌ಮನ್‌ (ಜಿಯಾಲಜಿ)- 3 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ
ಅಸಿಸ್ಟೆಂಟ್ ಫಾರ್‌ಮನ್‌ (ಡೈಮಂಡ್ ಡ್ರಿಲ್ಲಿಂಗ್ / ಅಂಡರ್ ಗ್ರೌಂಡ್)- 2 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಮೆಕ್ಯಾನಿಕಲ್)- 19 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಐಟಿಐ ಫಿಟ್ಟರ್ (ಗಣಿಗಾರಿಕೆ)- 56 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಐಟಿಐ ಫಿಟ್ಟರ್ (ಮೆಟಲ್)- 26 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಐಟಿಐ ಎಲೆಕ್ಟ್ರಿಕಲ್- 4 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಎಲೆಕ್ಟ್ರಿಕಲ್
ಅಸಿಸ್ಟೆಂಟ್ ಫಾರ್‌ಮನ್‌ (ಸಿವಿಲ್)- 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಎಲೆಕ್ಟ್ರಿಕಲ್)- 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಸೆಕ್ಯುರಿಟಿ ಇನ್ಸ್‌ಪೆಕ್ಟರ್‌- 6 ಹುದ್ದೆ, ವಿದ್ಯಾರ್ಹತೆ: ಪದವಿ
ಐಟಿಐ ಫಿಟ್ಟರ್ (ಸರ್ವೆ)- 2 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಸೆಕ್ಯುರಿಟಿ ಗಾರ್ಡ್- 24 ಹುದ್ದೆ, ವಿದ್ಯಾರ್ಹತೆ: ದ್ವಿತೀಯ ಪಿಯುಸಿ

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ- 1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ., ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 300 ರೂ. ಮತ್ತು ಎಸ್‌ಸಿ / ಎಸ್‌ಟಿ / ಮಾಜಿ ಸೈನಿಕರು / ಪಿಡಬ್ಲ್ಯುಡಿ ಅಭ್ಯರ್ಥಿಗಳು 100 ರೂ. ಅನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 20,920 ರೂ. – 48,020 ರೂ. ಮಾಸಿಕ ವೇತನ ಸಿಗಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ (ಉಳಿಕೆ ಮೂಲ / ಸ್ಥಳೀಯೇತರ ವೃಂದ).

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ (ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದ).

ಅರ್ಜಿ ಸಲ್ಲಿಸಲು ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಫೋನ್‌ ನಂಬರ್‌, ಇಮೇಲ್‌ ವಿಳಾಸ ನೀಡಿ ಹೆಸರು ನೋಂದಾಯಿಸಿ.
  • HGML Assistant Foreman, ITI Fitter Apply Online ಲಿಂಕ್‌ ಕ್ಲಿಕ್‌ ಮಾಡಿ
  • ಅಗತ್ಯ ಮಾಹಿತಿಗಳನ್ನು ಎಚ್ಚರಿಕೆಯಿಂದ ತುಂಬಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ಗಳನ್ನು ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಎಲ್ಲವೂ ಸರಿಯಾಗಿದೆ ಎನ್ನುವುದನ್ನು ಮತ್ತೊಮ್ಮೆ ಖಚಿತ ಪಡಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆ ಖಾಲಿ ಇದೆ; ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

Job Alert: ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆ ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಲಿಮಿಟೆಡ್‌ 36 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 20. ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 70,000-1,00,000 ರೂ. ಮಾಸಿಕ ವೇತನ ದೊರೆಯಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆ ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಲಿಮಿಟೆಡ್‌ (Neyveli Lignite Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (NLC Recruitment 2024). ಸುಮಾರು 36 ಎಕ್ಸಿಕ್ಯೂಟಿವ್‌ ಹುದ್ದೆಗಳಿದ್ದು, ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 20 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಕ್ಸಿಕ್ಯೂಟಿವ್‌-ಆಪರೇಷನ್‌: 24 ಮತ್ತು ಎಕ್ಸಿಕ್ಯೂಟಿವ್‌-ಮೈಂಟೆನೆನ್ಸ್‌: 12 ಹುದ್ದೆಗಳಿವೆ.
ಎಕ್ಸಿಕ್ಯೂಟಿವ್‌-ಆಪರೇಷನ್‌ ಹುದ್ದೆಗೆ ಕೆಮಿಕಲ್/ ಸಿ&ಐ/ ಇ&ಐ/ ಇಸಿಇ/ ಎಲೆಕ್ಟ್ರಿಕಲ್/ ಇಇಇ/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ಎಕ್ಸಿಕ್ಯೂಟಿವ್‌-ಮೈಂಟೆನೆನ್ಸ್‌ ಹುದ್ದೆಗೆ ಸಿವಿಲ್/ ಕೆಮಿಕಲ್/ ಸಿ&ಐ/ ಇ&ಐ/ ಇಸಿಇ/ ಎಲೆಕ್ಟ್ರಿಕಲ್/ ಇಇಇ/ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಅರ್ಹರು.

ವಯೋಮಿತಿ ಮತ್ತು ಅರ್ಜಿ ಶುಲ್ಕ

Neyveli Lignite Corporation Limited recruitment ಅಧಿಸೂಚನೆ ಪ್ರಕಾರ ಗರಿಷ್ಠ ವಯೋಮಿತಿ 63 ವರ್ಷ. ಅರ್ಜಿ ಶುಲ್ಕವಾಗಿ ಮಾಜಿ ಯೋಧರು / ಎಸ್‌ಸಿ / ಎಸ್‌ಟಿ ವರ್ಗಕ್ಕೆ ಸೇರಿದವರು 354 ರೂ. ಮತ್ತು ಸಾಮಾನ್ಯ / ಇಡಬ್ಲ್ಯುಎಸ್‌ / ಒಬಿಸಿ ವಿಭಾಗದವರು 854 ರೂ. ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ಪಾವತಿ ಮಾರ್ಗ ಅನುಸರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 70,000-1,00,000 ರೂ. ಮಾಸಿಕ ವೇತನ ದೊರೆಯಲಿದೆ. ಒಂದು ವರ್ಷದ ಅವಧಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಆಯ್ಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಹೆಸರು ನೊಂದಾಯಿಸಿ.
  • NLC Executive Apply Online ಆಯ್ಕೆ ಕ್ಲಿಕ್‌ ಮಾಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಫೋಟೊಗಳನ್ನು ಸೂಚಿಸಿದ ಗಾತ್ರದಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಎಲ್ಲ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ. ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಅಪ್‌ಲೋಡ್‌ ಮಾಡಬೇಕಾದ ದಾಖಲೆಗಳು

  • ಫೋಟೊ ಹೈ ಕ್ವಾಲಿಟಿಯಲ್ಲಿದ್ದು, 2023ರ ಅಕ್ಟೋಬರ್‌ 1ರ ಬಳಿಕ ತೆಗೆದಿರಬೇಕು.
  • ಅತ್ಯುತ್ತಮ ಕ್ಲಾಲಿಟಿಯ ಅಭ್ಯರ್ಥಿಯ ಸಹಿಯ ಫೋಟೊ.
  • ಹುಟ್ಟಿದ ದಿನಾಂಕವನ್ನು ಖಾತರಿಪಡಿಸುವ ದಾಖಲೆ.
  • ಎಸ್ಸೆಸ್ಸೆಲ್ಸಿ / ಶೈಕ್ಷಣಿಕ ಪ್ರಮಾಣ ಪತ್ರ.
  • ಆಧಾರ್‌ ಕಾರ್ಡ್‌ನ ಪ್ರತಿ.
  • ಜಾತಿ ಸರ್ಟಿಫಿಕೆಟ್‌.
  • ಮಾಜಿ ಯೋಧರಾಗಿದ್ದರೆ ಅದರ ದಾಖಲೆ.
  • ಫೋಟೊ ಮತ್ತು ಸಹಿಯ ಫೋಟೊ JPEG ಫಾರ್ಮಾಟ್‌ನಲ್ಲಿರಬೇಕು.
  • ದಾಖಲೆಗಳು, ಡಾಕ್ಯುಮೆಂಟ್‌ JPEG ಅಥವಾ PDF ಫಾರ್ಮಾಟ್‌ನಲ್ಲಿರುವುದು ಕಡ್ಡಾಯ.

ಅಪೂರ್ಣ ಅಪ್ಲಿಕೇಷನ್‌ ತಿರಸ್ಕೃರಿಸಲಾಗುತ್ತದೆ. ಹೀಗಾಗಿ ಎಚ್ಚರಿಕೆಯಿಂದ ಭರ್ತಿ ಮಾಡಬೇಕು ಎಂದು ಪ್ರಕಟಣೆಯಲ್ಲಿ ಎಚ್ಚರಿಸಲಾಗಿದೆ.

ಇದನ್ನೂ ಓದಿ: Job Alert: 506 ಹುದ್ದೆಗಳ ಭರ್ತಿಗೆ ಯುಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಮೇ 14ರೊಳಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಿ

Continue Reading
Advertisement
cm siddaramaiah
ಕ್ರೈಂ11 mins ago

CM Siddaramaiah: ಸಿಎಂ ಸಿದ್ದರಾಮಯ್ಯ ಬಗ್ಗೆ ಪೋಸ್ಟ್:‌ ಮಹೇಶ್‌ ವಿಕ್ರಂ ಹೆಗ್ಡೆ, ವಸಂತ್‌ ಗಿಳಿಯಾರ್ ಬಂಧನವಿಲ್ಲ

Urfi Javed magical butterflies dress Samantha reacts
ಬಾಲಿವುಡ್13 mins ago

Urfi Javed: ಉರ್ಫಿ ʻಮ್ಯಾಜಿಕ್ʼ ಡ್ರೆಸ್‌ಗೆ ಸಮಂತಾ ಮೆಚ್ಚುಗೆ; ಗೌನ್‌ನಿಂದ ಹಾರಿತು ಬಣ್ಣದ ಚಿಟ್ಟೆ!

IPL 2024
ಕ್ರೀಡೆ23 mins ago

IPL 2024: ಬರೋಬ್ಬರಿ 12 ವರ್ಷಗಳ ಬಳಿಕ ವಾಂಖೆಡೆಯಲ್ಲಿ ಗೆಲುವು ಸಾಧಿಸಿದ ಕೆಕೆಆರ್​

Drama Artist
ಕರ್ನಾಟಕ24 mins ago

Drama Artist: ಶಕುನಿಯಾಗಿ ಗರ್ಜಿಸುತ್ತಿರುವಾಗಲೇ ಹೃದಯಾಘಾತ; ಮೊಬೈಲ್‌ನಲ್ಲಿ ಸೆರೆಯಾಯ್ತು ಕಲಾವಿದನ ಕೊನೆಯ ಕ್ಷಣ

Amith Shah
ದೇಶ34 mins ago

Amit Shah: ತೆಲಂಗಾಣದಲ್ಲಿ ಗೃಹಸಚಿವ ಅಮಿತ್ ಶಾ ವಿರುದ್ಧ FIR ದಾಖಲು

Porbandar Tour
ಪ್ರವಾಸ39 mins ago

Porbandar Tour: ಪೋರ್ ಬಂದರಿನಲ್ಲಿ ನೋಡಲೇಬೇಕಾದ ಅದ್ಭುತ ಸ್ಥಳಗಳಿವು

hd revanna prajwal revanna case
ಪ್ರಮುಖ ಸುದ್ದಿ59 mins ago

Prajwal Revanna Case: ಕಾಣದಂತೆ ಮಾಯವಾದ ಎಚ್‌ಡಿ ರೇವಣ್ಣ ! ಇಂದು ಜಾಮೀನು ಸಿಗದೇ ಹೋದರೆ….

Cocoa Price
ಕೃಷಿ1 hour ago

Cocoa Price: ಅಡಿಕೆ ಮರದೆತ್ತರಕ್ಕೆ ಕೋಕೋ ಬೆಳೆಯ ಧಾರಣೆ! 800% ಏರಿಕೆ!

IPL 2024 POINTS TABLE
ಕ್ರೀಡೆ1 hour ago

IPL 2024 POINTS TABLE: ಕೆಕೆಆರ್​ ಗೆಲುವಿನ ಬಳಿಕ ಅಂಕಪಟ್ಟಿ ಹೇಗಿದೆ?

prajwal revanna case hassan MP home
ಕ್ರೈಂ1 hour ago

Prajwal Revanna Case: ಹಾಸನ ಸಂಸದರ ನಿವಾಸದ ಗೇಟಿಗೆ ಬೀಗ; ನಿವಾಸದ ಕೀ ನಾಪತ್ತೆ! ಎಚ್‌ಡಿ ರೇವಣ್ಣ ಕೂಡ ಗಾಯಬ್!‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ6 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ19 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌