Job Alert: ಗ್ರಾಮೀಣ ಬ್ಯಾಂಕ್ ಗಳಲ್ಲಿ 586 ಹುದ್ದೆ; ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ - Vistara News

ಉದ್ಯೋಗ

Job Alert: ಗ್ರಾಮೀಣ ಬ್ಯಾಂಕ್ ಗಳಲ್ಲಿ 586 ಹುದ್ದೆ; ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

Job Alert: ಬ್ಯಾಂಕ್‌ ಉದ್ಯೋಗ ಹೊಂದಬೇಕು ಎಂದುಕೊಂಡಿರುವವರ ಕನಸು ನನಸಾಗುವ ದಿನ ಹತ್ತಿರದಲ್ಲೇ ಇದೆ. ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ(ಐಬಿಪಿಎಸ್​) ದೇಶದಾದ್ಯಂತ 43 ಗ್ರಾಮೀಣ ಬ್ಯಾಂಕ್‌​ಗಳಲ್ಲಿ (ಆರ್​ಆರ್​ಬಿ) ಖಾಲಿಯಿರುವ 9,995 ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಜೂನ್ 27 ಅರ್ಜಿ ಸಲ್ಲಿಸಲು ಕೊನೆಯ ದಿನ. ಅರ್ಜಿ ಸಲ್ಲಿಕೆ ಹೇಗೆ, ಪರೀಕ್ಷೆ ಯಾವ ರೀತಿಯಲ್ಲಿ ಇರುತ್ತದೆ ಮುಂತಾದ ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Job News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

-ಆರ್.ಕೆ. ಬಾಲಚಂದ್ರ. ಲೇಖಕರು, ಬ್ಯಾಂಕಿಂಗ್ ಮತ್ತು ವ್ಯಕ್ತಿತ್ವ ವಿಕಸನ ಹಾಗೂ ಸಾಫ್ಟ್‌ ಸ್ಕಿಲ್ ತರಬೇತುದಾರರು ಹಾಗೂ ವೃತ್ತಿ ಮಾರ್ಗದರ್ಶಕರು, ಬೆಂಗಳೂರು.

ಬ್ಯಾಂಕ್ ಸಿಬ್ಬಂದಿ ನೇಮಕಾತಿ (Job Alert) ಸಂಸ್ಥೆ(ಐಬಿಪಿಎಸ್​) ದೇಶದಾದ್ಯಂತ 43 ಗ್ರಾಮೀಣ ಬ್ಯಾಂಕ್‌​ಗಳಲ್ಲಿ (ಆರ್​ಆರ್​ಬಿ) ಖಾಲಿಯಿರುವ 9,995 ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ.  ಜೂನ್ 27 ಅರ್ಜಿ ಸಲ್ಲಿಸಲು ಕೊನೆಯ ದಿನ. ರಾಜ್ಯದ ಅಭ್ಯರ್ಥಿಗಳಿಗೆ ಹಿಂದಿ ಅಥವಾ ಇಂಗ್ಲಿಷ್ ಜತೆಗೆ ಕಳೆದ ಬಾರಿಯಂತೆ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಸ್ಟೇಲ್-1 ಹುದ್ದೆಗಳಿಗೆ ಕನ್ನಡ ಮತ್ತು ಕೊಂಕಣಿ ಭಾಷೆಯಲ್ಲೂ ಪರೀಕ್ಷೆ ಬರೆಯುವ ಅವಕಾಶವನ್ನು ಐಬಿಪಿಎಸ್ ನೀಡಿದೆ.

ಕಳೆದ ಬಾರಿ 8,622 ಹುದ್ದೆಗಳಿಗೆ ನೇಮಕ ನಡೆಸಿದ ಐಬಿಪಿಎಸ್ ಈ ಬಾರಿ 9,995 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದೆ. ರಾಜ್ಯದಲ್ಲಿ ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಧಾರವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗಳಿಗೆ ಈ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕ ನಡೆಯಲಿದೆ. ರಾಜ್ಯದ ಎರಡು ಬ್ಯಾಂಕುಗಳಲ್ಲಿ 586 ಹುದ್ದೆಗಳು ಖಾಲಿ ಇವೆ. ಇದರಲ್ಲಿ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಒಟ್ಟು 200 ಹುದ್ದೆಗಳು ಮತ್ತು ಆಫೀಸರ್ ಸ್ಟೇಲ್-1-386 ಹುದ್ದೆಗಳಿವೆ. ಕಳೆದ ಬಾರಿ ರಾಜ್ಯದ ಈ ಎರಡೂ ಬ್ಯಾಂಕ್ಗಳಲ್ಲಿ 807 ಹುದ್ದೆಗಳಿಗೆ ನೇಮಕ ನಡೆದಿತ್ತು.

ಕರ್ನಾಟಕದ ಗ್ರಾಮೀಣ ಬ್ಯಾಂಕ್‌ಗಳಲ್ಲಿರುವ ಖಾಲಿ ಇರುವ ಹುದ್ದೆಗಳ ಮೀಸಲಾತಿ

ಆಫೀಸ್ ​ಅಸಿಸ್ಟೆಂಟ್ (ಮಲ್ಟಿಪರ್ಪಸ್)
ಬ್ಯಾಂಕ್ಎಸ್​ ಸಿ(SC)ಎಸ್​ಟಿ(ST)ಒಬಿಸಿ (NCL)*EWS*ಸಾಮಾನ್ಯTOTAL
ಕರ್ನಾಟಕ ಗ್ರಾಮೀಣ ಬ್ಯಾಂಕ್167271040100
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್167271040100
ಆಫೀಸರ್ ಸ್ಕೇಲ್-I
ಕರ್ನಾಟಕ ಗ್ರಾಮೀಣ ಬ್ಯಾಂಕ್43217729116286
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್157271041100
EWS-ಆರ್ಥಿಕ ವಾಗಿ ಹಿಂದುಳಿದ ವರ್ಗ   *NCL- ಕೆನೆ ಪದರ ಹೊರತಾದ

ಈಗ ನಿಗದಿಪಡಿಸಿರುವ ಹುದ್ದೆಗಳ ಸಂಖ್ಯೆಗಳು ಹೆಚ್ಚಾಗಲೂ ಬಹುದು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಮೀಸಲಿಟ್ಟ ಹುದ್ದೆಗಳ ಸಂಖ್ಯೆ ಏರಿಕೆಯಾಗಲೂಬಹುದು. ಆದ್ದರಿಂದ ಹುದ್ದೆಗಳ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ನಿರಾಶರಾಗಬೇಕಾಗಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?

ಜೂನ್ 7ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 27 ಅರ್ಜಿ ಸಲ್ಲಿಕೆಗೆ ಕೊನೆ ದಿನವಾಗಿದೆ. ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ವಯೋಮಿತಿ

ಆಫೀಸ್ ​ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗೆ 18 ರಿಂದ 28 ವರ್ಷಗಳು. ಆಫೀಸರ್ ಸ್ಕೇಲ್-I ಹುದ್ದೆಗೆ 18 ರಿಂದ 30 ವರ್ಷಗಳು.  ಎಸ್​.ಸಿ ಮತ್ತು ಎಸ್​.ಟಿ ಅಭ್ಯರ್ಥಿಗಳಿಗೆ 5 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯ ಸಡಿಲಿಕೆ ಇದೆ. 

ಶೈಕ್ಷಣಿಕ ಅರ್ಹತೆ ಮತ್ತು ಅನುಭವಗಳೇನಿರಬೇಕು?

Group“B”-ಆಫೀಸ್ ಅಸಿಸ್ಟೆಂಟ್​ ಹುದ್ದೆ: ಯಾವುದೇ ವಿಷಯದಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸ್ಥಳೀಯ ಭಾಷೆ ತಿಳಿದಿರುವುದು ಅವಶ್ಯಕ. ಕಂಪ್ಯೂಟರ್​ನಿರ್ವಹಣಾ ಜ್ಞಾನ ಹೊಂದಿರುವುದು ಕಡ್ಡಾಯ.

Group“A”-Officers-ಆಫೀಸರ್ ಸ್ಕೇಲ್-I (ಸಹಾಯಕ ವ್ಯವಸ್ಥಾಪಕ)

ಯಾವುದೇ ವಿಷಯದಲ್ಲಿ ಪದವಿ. ಕೃಷಿ, ತೋಟಗಾರಿಕೆ, ಅರಣ್ಯ, ಪಶುಸಂಗೋಪನೆ, ಪಶುವೈದ್ಯಕೀಯ ವಿಜ್ಞಾನ, ಕೃಷಿ ಎಂಜಿನಿಯರಿಂಗ್, ಮೀನುಗಾರಿಕೆ, ಕೃಷಿ ಮಾರುಕಟ್ಟೆ ಮತ್ತು ಸಹಕಾರ, ಮಾಹಿತಿ ತಂತ್ರಜ್ಞಾನ, ನಿರ್ವಹಣೆ, ಕಾನೂನು, ಅರ್ಥಶಾಸ್ತ್ರ ಅಥವಾ ಲೆಕ್ಕಶಾಸ್ತ್ರದಲ್ಲಿ ಪದವಿ ಹೊಂದಿರುವವರಿಗೆ ಆದ್ಯತೆ. ಆದರೆ ಸ್ಥಳೀಯ ಭಾಷೆ ತಿಳಿದಿರಬೇಕಾದುದು ಅವಶ್ಯಕ. ಕಂಪ್ಯೂಟರ್ ನಿರ್ವಹಣಾ ಜ್ಞಾನ ಕಡ್ಡಾಯ.

ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಸ್ಟೇಲ್-1ಕ್ಕೆ ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯ ಹೊಂದಿರುವುದು ಅವಶ್ಯ.8ನೇ ತರಗತಿಯವರೆಗೆ ಅಥವಾ ಅದಕ್ಕೂ ಮೇಲ್ಪಟ್ಟು ಸ್ಥಳೀಯ ಭಾಷೆಯ ಮಾಧ್ಯಮದಲ್ಲಿ ಓದಿದವವರನ್ನು ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯ ಪಡೆದ ಅಭ್ಯರ್ಥಿ ಎಂದು ಪರಿಗಣಿಸಲಾಗುತ್ತದೆ. ಒಂದು ವೇಳೆ ಅಭ್ಯರ್ಥಿಯು ಸ್ಥಳೀಯ ಭಾಷೆಯನ್ನು ಸರಿಯಾಗಿ ತಿಳಿದಿಲ್ಲ ಎಂಬುದು ಆಯ್ಕೆಯ ಸಂದರ್ಭದಲ್ಲಿ ಗಮನಕ್ಕೆ ಬಂದಲ್ಲಿ, ಅಂತಹ ಅಭ್ಯರ್ಥಿಗಳಿಗೆ ಭಾಷೆಯನ್ನು ಕಲಿತುಕೊಳ್ಳಲು 6 ತಿಂಗಳ ಕಾಲಾವಕಾಶ ನೀಡಲಾಗುತ್ತದೆ.

ಇತ್ತ ಗಮನಿಸಿ

ನಿಗದಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿ ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆ, ಎರಡಕ್ಕೂ ಅರ್ಜಿ ಸಲ್ಲಿಸಬಹುದು.

ಕ್ರೆಡಿಟ್ ಇತಿಹಾಸ

  • ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಬ್ಯಾಂಕ್ ​ಖಾತೆ ಹೊಂದಿದ್ದರೆ, ಅವರು ಆರೋಗ್ಯಕರ ಕ್ರೆಡಿಟ್ ಇತಿಹಾಸವನ್ನು ಹೊಂದಿರಬೇಕು ಮತ್ತು ಬ್ಯಾಂಕ್ ಹುದ್ದೆಗೆ ನೇಮಕವಾಗುವ ಸಮಯದಲ್ಲಿ ಕನಿಷ್ಠ CIBIL ಸ್ಕೋರ್  ಅಥವಾ ಅದಕ್ಕಿಂತ ಹೆಚ್ಚಿರುವುದನ್ನು ಖಚಿತಪಡಿಸಿ ಕೊಳ್ಳಬೇಕು.
  • ಸೇರುವ ದಿನಾಂಕದ ಮೊದಲು CIBIL ಸ್ಥಿತಿಯನ್ನು ನವೀಕರಿಸದಿದ್ದರೆ, ಮೊದಲು ನವೀಕರಿಸಬೇಕು ಅಥವಾ CIBIL ನಲ್ಲಿ ಪ್ರತಿಕೂಲವಾಗಿ ಪ್ರತಿಬಿಂಬಿತವಾಗಿರುವ ಖಾತೆಗಳಿಗೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿದಿಲ್ಲ ಎಂದು ಸಾಲದಾತರಿಂದ NOC ಗಳನ್ನು ಪಡೆಯಬೇಕು. ವಿಫಲವಾದರೆ ಆಫರ್ ಪತ್ರವನ್ನು ಹಿಂಪಡೆಯಲಾಗುತ್ತದೆ / ರದ್ದುಗೊಳಿಸಲಾಗುತ್ತದೆ.

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹850 ಹಾಗೂ ಎಸ್​ಸಿ/ಎಸ್​ಟಿ/ ಅಂಗವಿಕಲರು / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹175 ಶುಲ್ಕ ನಿಗದಿಪಡಿಸಲಾಗಿದೆ. ಆನ್​ಲೈನ್ ಮೋಡ್ ಮೂಲಕ ಅಗತ್ಯವಾದ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಪರೀಕ್ಷಾ ಪೂರ್ವ ತರಬೇತಿ(PRE-EXAMINATION TRAINING (PET):

ಎಸ್ಸಿ/ಎಸ್ಟಿ/ ಅಲ್ಪಸಂಖ್ಯಾತ ಅಭ್ಯರ್ಥಿಗಳು / ಮಾಜಿ ಸೈನಿಕರು / ವಿಶೇಷಚೇತನ ಅಭ್ಯರ್ಥಿಗಳಿಗೆ ಐಬಿಪಿಎಸ್ ಪರೀಕ್ಷಾ ಪೂರ್ವ ತರಬೇತಿ ನೀಡಲಿದೆ. ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಮತ್ತು ಆಫೀಸರ್ ಸ್ಟೇಲ್-1 ಹುದ್ದೆಗಳಿಗೆ ತರಬೇತಿ ಪಡೆಯಬಹುದು. ಈ ತರಬೇತಿ ಪಡೆಯುವ ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸುವಾಗಲೇ ತರಬೇತಿ ಪಡೆಯುವ ಬಗ್ಗೆ ಅದಕ್ಕಾಗಿ ಮೀಸಲಿಟ್ಟ ಕಾಲಂನಲ್ಲಿ ನಮೂದಿಸಬೇಕು. ಇದರ ಖರ್ಚು ಮೆಚ್ಚಗಳನ್ನು ಅಭ್ಯರ್ಥಿಗಳೇ ಭರಿಸಬೇಕಾಗುತ್ತದೆ. ರಾಜ್ಯದಲ್ಲಿ ಧಾರವಾಡದಲ್ಲಿ ಮಾತ್ರ ತರಬೇತಿ ನೀಡಲಾಗುತ್ತದೆ.

ಪೂರ್ವಭಾವಿ ಪರೀಕ್ಷೆ

ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು,ಮೈಸೂರು, ಶಿವಮೊಗ್ಗ ಮತ್ತು ಉಡುಪಿ

ಮುಖ್ಯ ಪರೀಕ್ಷೆ

ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ ಮತ್ತು ಉಡುಪಿ(ಮಂಗಳೂರು ಹೊರತು ಪಡಿಸಿ)

ಈ ಬಾರಿಯ ಬದಲಾವಣೆಗಳೇನು?

ಈ ಬಾರಿ ಅರ್ಜಿ ಸಲ್ಲಿಸುವಾಗ ಪರೀಕ್ಷೆಗೆ ಅಭ್ಯರ್ಥಿಗಳು ತರುವ ಗುರುತಿನ ಪತ್ರದ (ಐಡಿ ಪ್ರೂಫ್​) ಸಂಖ್ಯೆ ನೀಡುವುದು ಕಡ್ಡಾಯ. ಆ ಸಂಖ್ಯೆ ಅಭ್ಯರ್ಥಿ ಸಲ್ಲಿಸಿದ ಅರ್ಜಿಯಲ್ಲಿರುವ ಹೆಸರಿನೊಂದಿಗೆ ಹೊಂದಾಣಿಕೆಯಾಗಬೇಕು. ಈ ಬಾರಿ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪರೀಕ್ಷಾ ಸ್ಥಳದಲ್ಲಿ ಸಂಗ್ರಹಿಸಲಾಗುವುದಿಲ್ಲ. ಬದಲಿಗೆ, ಇದನ್ನು ಪರೀಕ್ಷಾ ಕೇಂದ್ರದ ಸಿಬ್ಬಂದಿಯಿಂದ ಧೃಡಪಡಿಸಿಕೊಳ್ಳಬೇಕು. ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಯ ಪ್ರವೇಶ ಪತ್ರದೊಂದಿಗೆ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ದೃಢೀಕರಣಗೊಂಡ ಪ್ರವೇಶ ಪತ್ರವನ್ನೂ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು

  • ನಿಗದಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆಎರಡಕ್ಕೂ ಅರ್ಜಿ ಸಲ್ಲಿಸಬಹುದು.ಆದರೆ ಆಫೀಸರ್ ಕೇಡರ್​ನಲ್ಲಿ ಯಾವುದಾದರೂ ಒಂದು ಹುದ್ದೆಯನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕು.
  • ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಯು ತನ್ನ ಕೈ ಬರಹದ ಪ್ರಮಾಣಪತ್ರವನ್ನು ಸ್ಕ್ಯಾನ್ ಮಾಡಿ   ಅರ್ಜಿಯೊಂದಿಗೆ ಅಪ್ ಲೋಡ್ ಮಾಡಬೇಕು. ಕ್ಯಾಪಿಟಲ್ ಲೆಟರ್ಸ್​ನಲ್ಲಿ ಬರೆದ ಡಿಕ್ಲರೇಷನ್ ಮತ್ತು ಸಹಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
  • ಅರ್ಜಿ ಸಲ್ಲಿಕೆ, ಅಧಿಸೂಚನೆ ಕುರಿತ ಹೆಚ್ಚಿನ ಮಾಹಿತಿಗಾಗಿ www.ibps.in/ಜಾಲತಾಣಕ್ಕೆ ಭೇಟಿ ನೀಡಿ.
  • ನೀವು ಈ ಪರೀಕ್ಷೆಗೆ ಅರ್ಜಿ ಸಲ್ಲಿಸಬೇಕೆಂದಿದ್ದರೆ ಇ-ಮೇಲ್ ವಿಳಾಸ ಹಾಗೂ ಮೊಬೈಲ್ ಸಂಖ್ಯೆ ಹೊಂದಿರಬೇಕಾಗಿರುವುದು ಕಡ್ಡಾಯ. ಆದ್ದರಿಂದ ಇ-ಮೇಲ್ ಅಕೌಂಟ್ ಇಲ್ಲದಿದ್ದರೆ ಅರ್ಜಿ ಸಲ್ಲಿಸುವ ಮುನ್ನವೇ ಕ್ರಿಯೇಟ್ ಮಾಡಿಕೊಳ್ಳಿ. ಹಾಗೆಯೇ ಅರ್ಜಿಯಲ್ಲಿ ನಮೂದಿಸಿದ ಇ-ಮೇಲ್ ಐ.ಡಿ.ಯನ್ನು ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಿ.
  • ಅರ್ಜಿ ಸಲ್ಲಿಸುವಾಗ ಒಂದೇ ಬಾರಿಗೆ ಎಲ್ಲ ಮಾಹಿತಿಯನ್ನು ತುಂಬಬೇಕೆಂಬ ನಿಯಮವೇನಿಲ್ಲ. ಡೇಟಾ ಸೇವ್ ಮಾಡಿ ಎಲ್ಲ ಮಾಹಿತಿಯನ್ನು ತುಂಬಿದ ನಂತರವೇ final submit ಬಟನ್ ಒತ್ತಿ.

ಇತ್ತ ಗಮನಿಸಿ

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 27, 2024
  • ಪೂರ್ವಭಾವಿ ಪರೀಕ್ಷೆ ತರಬೇತಿಗೆ ಪ್ರವೇಶಪತ್ರ ಡೌನ್ಲೋಡ್ ಮಾಡಿಕೊಳ್ಳುವುದು: ಜುಲೈ
  • ಪೂರ್ವಭಾವಿ ಪರೀಕ್ಷೆಗೆ ತರಬೇತಿ: ಜುಲೈ 22-27
  • ಪೂರ್ವಭಾವಿ ಪರೀಕ್ಷೆಗೆ ಪ್ರವೇಶಪತ್ರ ಲಭ್ಯ ಜುಲೈ/ಆಗಸ್ಟ್ 2024
  • ಪೂರ್ವಭಾವಿ ಪರೀಕ್ಷೆ: ಆಗಸ್ಟ್, 2024
  • ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಆಗಸ್ಟ್/ಸೆಪ್ಟೆಂಬರ್, 2024
  • ಮುಖ್ಯ ಪರೀಕ್ಷೆ ನಡೆಯುವುದು ಸೆಪ್ಟೆಂಬರ್ / ಅಕ್ಟೋಬರ್, 2024
  • ಮುಖ್ಯ ಪರೀಕ್ಷೆಯ ಫಲಿತಾಂಶ ಅಕ್ಟೋಬರ್, 2024
  • ಸಂದರ್ಶನ ನಡೆಯುವುದು: ನವೆಂಬರ್, 2024
  • ನೇಮಕ ಶಿಫಾರಸು: ಜನವರಿ, 2025

ಆಯ್ಕೆ ಹೇಗೆ?

ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ​ಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮೂರು ಹಂತಗಳಲ್ಲಿ ಪರೀಕ್ಷೆ(ಪೂರ್ವ ಭಾವಿ/ ಮುಖ್ಯ ಪರೀಕ್ಷೆ/ ಸಂದರ್ಶನ-ಅಧಿಕಾರಿಗಳ ಹುದ್ದೆಗೆ ಮಾತ್ರ ಇದು ಅನ್ವಯಿಸುತ್ತದೆ) ನಡೆಸಲಾಗುತ್ತದೆ. ಪರೀಕ್ಷೆಯ ಸ್ವರೂಪ ಹೇಗಿರುತ್ತದೆ ಎಂಬ ವಿವರಣೆ ಇಲ್ಲಿದೆ.

ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪ ಸ್ )/ ಸ್ಕೇಲ್–I ಅಧಿಕಾರಿ ಪೂರ್ವ ಭಾವಿ ಪರೀಕ್ಷೆ:

ಕ್ರ.ಸಂ.ಪರೀಕ್ಷೆಗಳ ಹೆಸರುಪರೀಕ್ಷೆಯ ಮಾಧ್ಯಮಪ್ರಶ್ನೆಗಳ ಸಂಖ್ಯೆಗರಿಷ್ಠ ಅಂಕಗಳುಅವಧಿ
1ತಾರ್ಕಿಕ  ಪರೀಕ್ಷೆ (Reasoning)    ಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ –ಇವುಗಳಲ್ಲಿ ಯಾವುದಾದರೊಂದು ಭಾಷೆಯ ಆಯ್ಕೆ4040      ಸಂಯೋಜಿತ ಸಮಯ;45 ನಿಮಿಷಗಳು
2ಸಂಖ್ಯಾತ್ಮಕ ಸಾಮರ್ಥ್ಯ  (Numerical Ability)/ ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ (Quantitative Aptitude)  40  40
 ಒಟ್ಟು 8080 

ಮುಖ್ಯ ಪರೀಕ್ಷೆ

(ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್ )/ಸ್ಕೇಲ್–I ಅಧಿಕಾರಿ):

ಕ್ರ .ಸಂಪರೀಕ್ಷೆಗಳ ಹೆಸರುಪರೀಕ್ಷೆಯ ಮಾಧ್ಯಮಪ್ರಶ್ನೆಗಳ ಸಂಖ್ಯೆಗರಿಷ್ಠ ಅಂಕಗಳುಅವಧಿ  
1ತಾರ್ಕಿಕ ಪರೀಕ್ಷೆಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ4050    2 ಗಂಟೆಗಳ ಸಂಯೋಜಿತ ಸಮಯ
2ಕಂಪ್ಯೂಟರ್ ಜ್ಞಾನ4020
3ಸಾಮಾನ್ಯ ಅರಿವು (General Awareness)4040
4a*ಆಂಗ್ಲ ಭಾಷೆಇಂಗ್ಲಿಷ್4040
5b*ಹಿಂದಿ ಭಾಷೆಹಿಂದಿ4040
6ಸಂಖ್ಯಾತ್ಮಕ ಸಾಮರ್ಥ್ಯ/ ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಟೆಸ್ಟ್ಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ4050
 ಒಟ್ಟು 200200 
(*ಅಭ್ಯರ್ಥಿಗಳು 4 a ಅಥವಾ 4 b ಆಯ್ಕೆ ಮಾಡಬಹುದು)

ಕರ್ನಾಟಕದ ಅಭ್ಯರ್ಥಿಗಳು ಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ –ಇವುಗಳಲ್ಲಿ ಯಾವುದಾದ ರೊಂದು ಭಾಷೆಯ ಆಯ್ಕೆ ಮಾಡಿಕೊಳ್ಳಬಹುದು. ಆನ್ಲೈ ನ್ ನಲ್ಲಿ ಅರ್ಜಿ ಸಲ್ಲಿಸುವಾಗ ಭಾಷೆಯನ್ನು ಆಯ್ಕೆ ಮಾಡಿಕೊಂಡಿರಬೇಕು. ಅದೇ ಭಾಷೆಯಲ್ಲೇ ಪರೀಕ್ಷೆ ಬರೆಯಬೇಕು (ಪರೀಕ್ಷಾ ಸಂದರ್ಭದಲ್ಲಿ ಬದಲಾವಣೆಗೆ ಅವಕಾಶವಿಲ್ಲ)

ಗಮನಿಸಿ

ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್ ) ಪರೀಕ್ಷೆ ಬರೆಯುವವರು ಗಣಿತಕ್ಕೆ ಸಂಬಂಧಿಸಿದಂತೆ ಸಂಖ್ಯಾತ್ಮಕ ಸಾಮರ್ಥ್ಯ ಪರೀಕ್ಷೆ ಬರೆಯಬೇಕು ಹಾಗೂ ಅಧಿಕಾರಿ ಸ್ಕೇಲ್-I ಹುದ್ದೆಗಾಗಿ ಪರೀಕ್ಷೆ ಬರೆಯುವವರು ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಪರೀಕ್ಷೆ ಬರೆಯಬೇಕು.

ಇದನ್ನೂ ಓದಿ: Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕ್ಲಿಷ್ಟತೆಯ ಮಟ್ಟ

ಸಂಖ್ಯಾತ್ಮಕ ಸಾಮರ್ಥ್ಯ ಪರೀಕ್ಷೆಯಲ್ಲಿ ಸರಳೀಕರಣ, ಸಂಖ್ಯಾ ಸರಣಿ, ಅಂಕಗಣಿತದ ಪ್ರಶ್ನೆಗಳು, ಬೀಜಗಣಿತದ ಪ್ರಶ್ನೆಗಳಿರುತ್ತವೆ. ಈ ಪರೀಕ್ಷೆ ಮೂಲಕ ಅಭ್ಯರ್ಥಿಗೆ ಸಂಖ್ಯೆಗಳೊಂದಿಗೆ ವ್ಯವಹರಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ. ಆ ಪ್ರಶ್ನೆಗಳಲ್ಲಿ ತಾರ್ಕಿಕ ಅಂಶವಿರುವುದಿಲ್ಲ.

ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ವಿಷಯದಲ್ಲಿ ತಾರ್ಕಿಕ ಅರ್ಹತೆ ಮತ್ತು ಸಂಖ್ಯೆಗಳೊಂದಿಗೆ ವ್ಯವಹರಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ. ಇದು ಎರಡೂ ವಿಷಯಗಳ ಸಂಯೋಜನೆ. ಇದರಲ್ಲಿ ಪ್ರಶ್ನೆಗಳು ತುಂಬಾ ಕಠಿಣವಾಗಿರುವುದಿಲ್ಲ, ಆದರೆ ಇವುಗಳನ್ನು ಬಿಡಿಸಲು ಹೆಚ್ಚು ಅಭ್ಯಾಸ ಮಾಡಿರಬೇಕು. ಆದ್ದರಿಂದ ನೀವು ಪ್ರಶ್ನೆಗಳನ್ನು ಅರ್ಥ ಮಾಡಿಕೊಳ್ಳುವುದರ ಮೂಲಕ ಸಮಯವನ್ನು ಹೇಗೆ ನಿರ್ವಹಿಸಬಹುದು ಎಂಬುದನ್ನು ಅರಿಯುವಿರಿ. ಆದರೆ ಚಕ್ರ ಬಡ್ಡಿ(compound interest) ಕುರಿತ ಪ್ರಶ್ನೆಗಳು ಬಿಡಿಸಲು ಸ್ವಲ್ಪ ಸಮಯ ತೆಗೆದುಕೊಳ್ಳುವುದರಿಂದ ಅವುಗಳನ್ನು ವಿಭಾಗದ ಕೊನೆಯಲ್ಲಿ ಬಿಡಿಸಬೇಕು.

ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ, ಸಂಭವನೀಯತೆ, ಕ್ರಮಪಲ್ಲಟನೆ ಮತ್ತು ಸಂಯೋಜನೆ, ಡೇಟಾ ಸಮರ್ಪಕತೆ ಸರಾಸರಿ, ಶೇಕಡಾವಾರು, ಗುಣಾಕಾರ, ಭಾಗಾಕಾರ, ವರ್ಗ ಮೂಲಗಳು, A.P, G.P ಸೇರಿದಂತೆ ಸಂಖ್ಯಾ ಲೆಕ್ಕಾಚಾರದ ಪ್ರಶ್ನೆಗಳ ವಿಷಯದ ಮೇಲೆ ಪ್ರಶ್ನೆಗಳಿರುತ್ತವೆ. ಸರಳ ಮತ್ತು ಚಕ್ರ ಬಡ್ಡಿ, ಲಾಭ/ನಷ್ಟ ಕುರಿತ ಪ್ರಶ್ನೆಗಳೂ ಇರುತ್ತವೆ. ಕೆಲಸದ ಸಮಯಕ್ಕೆ ಸಂಬಂಧಿಸಿದ ಪ್ರಶ್ನೆಗಳು ಉದಾ: 3 ಜನರು ಒಂದು ಕೆಲಸವನ್ನು 5 ದಿನಗಳಲ್ಲಿ ಮಾಡಿದರೆ 7 ಜನರು ಆ ಕೆಲಸವನ್ನು ಮಾಡಲು ಎಷ್ಟು ಸಮಯ ತೆಗೆದುಕೊಳ್ಳುತ್ತಾರೆ ಇಂಥವೂ ಇರುತ್ತವೆ.

ಋಣಾತ್ಮಕ ಮೌಲ್ಯಮಾಪನ ಇದೆ:

ವಸ್ತುನಿಷ್ಠ ಮಾದರಿಯ ಪರೀಕ್ಷೆಗಳಲ್ಲಿಋಣಾತ್ಮಕ ಮೌಲ್ಯಮಾಪನ ಇದೆ. ಒಂದು ತಪ್ಪು ಉತ್ತರಕ್ಕೆ, ಅದಕ್ಕೆ ನಿಗದಿಪಡಿಸಿದ ಅಂಕಗಳಲ್ಲಿ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಪ್ರಶ್ನೆ ಖಾಲಿ ಬಿಟ್ಟರೆ, ಯಾವುದೇ ಅಂಕ ಕಳೆಯುವುದಿಲ್ಲ.ಎಲ್ಲ ಹಂತದ ಋಣಾತ್ಮಕ ಮೌಲ್ಯಮಾಪನದಲ್ಲೂ ಇದೇ ನಿಯಮ ಅನ್ವಯಿಸುತ್ತದೆ.

ಇದನ್ನೂ ಓದಿ: Job News: ಕೇಂದ್ರ ಸರ್ಕಾರದಿಂದ ‘ಎಲೆಕ್ಟ್ರಾನಿಕ್’ ಯೋಜನೆ;‌ 5 ವರ್ಷಗಳಲ್ಲಿ 50 ಲಕ್ಷ ಉದ್ಯೋಗ ಸೃಷ್ಟಿ!

ಆಯ್ಕೆ ವಿಧಾನ

ಹುದ್ದೆಗಳಿಗೆ ಆಯ್ಕೆ ಮಾಡುವಾಗ ಮುಖ್ಯ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಪಡೆದಿರಬೇಕು. ಪ್ರತಿ ರಾಜ್ಯದಲ್ಲಿರುವ ಖಾಲಿ ಹುದ್ದೆಗಳನ್ನು ಆಧರಿಸಿ, ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ತಯಾರಿಸಲಾಗುತ್ತದೆ.

  • ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗೆ-ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕ ಗಳನ್ನು ಮಾತ್ರ  ಅಂತಿಮ ಮೆರಿಟ್ ಪಟ್ಟಿಗಾಗಿ ಪರಿಗಣಿಸಲಾಗುತ್ತದೆ. ಈ ಹುದ್ದೆಯ ನೇಮಕ ಪ್ರಕ್ರಿಯೆಯಲ್ಲಿ ಸಂದರ್ಶನ ಇರುವುದಿಲ್ಲ.
  • ಅಧಿಕಾರಿಗಳ ಹುದ್ದೆಗೆ ಸ್ಕೇಲ್-I ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕ ಹಾಗೂ ಸಂದರ್ಶನದಲ್ಲಿ ಪಡೆದ ಅಂಕವನ್ನು ಪರಿಗಣಿಸಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.

ಸಂದರ್ಶನ

ಅಧಿಕಾರಿಗಳ ಹುದ್ದೆಗೆ ಮಾತ್ರ ಇದು ಅನ್ವಯಿಸುತ್ತದೆ (ಸ್ಕೇಲ್ I) ಆಫೀಸರ್ಸ್ ಸ್ಕೇಲ್-I ಹುದ್ದೆಗೆ ಮುಖ್ಯ ಪರೀಕ್ಷೆಯಲ್ಲಿ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನಕ್ಕೆ ನಿಗದಿಪಡಿಸಲಾದ ಒಟ್ಟು ಅಂಕಗಳು 100. ಸಂದರ್ಶನದಲ್ಲಿ ಕನಿಷ್ಠ ಅರ್ಹತಾ ಅಂಕಗಳು ಸಾಮಾನ್ಯ ವರ್ಗಕ್ಕೆ ಶೇ40. ಎಸ್.ಸಿ/_ಎಸ್.ಟಿ/ಒಬಿಸಿ/ಅಂಗವಿಕಲ ಅಭ್ಯರ್ಥಿಗಳಿಗೆ ಶೇ 35.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ದೇಶ

Ratan Tata : ಕಾಯಿಲೆ ಬಿದ್ದ ನಾಯಿಗಳನ್ನು ನೋಡಿಕೊಳ್ಳಲು ಇಂಗ್ಲೆಂಡ್‌ನ ರಾಯಲ್‌ ಸನ್ಮಾನವನ್ನೇ ಮಿಸ್‌ ಮಾಡಿದ್ದರು ರತನ್‌ ಟಾಟಾ!

Ratan Tata : ಕಾಯಿಲೆ ಬಿದ್ದ ನಾಯಿಗಳನ್ನು ನೋಡಿಕೊಳ್ಳಲು ಇಂಗ್ಲೆಂಡ್‌ನ ರಾಯಲ್‌ ಸನ್ಮಾನವನ್ನೇ ರತನ್‌ ಟಾಟಾ ಮಿಸ್‌ ಮಾಡಿದ್ದರು. ಬೀದಿ ನಾಯಿಗಳ ಅವರ ಕಾಳಜಿಗೆ ಇಡೀ ಲಂಡನ್‌ ಜನತೆ ತಲೆಬಾಗಿತ್ತು.

VISTARANEWS.COM


on

By

Ratan Tata missed england's royal honour to take care of sick dogs
Koo

ಭಾರತದ ಅತಿ ಶ್ರೇಷ್ಠ ಉದ್ಯಮಿಯಾದ ರತನ್ ಟಾಟಾ (Ratan Tata) ಅವರ ಮಾನವೀಯ ಗುಣಗಳ ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ.. ತಮ್ಮ ಸಂಪತ್ತಿನ ಅರ್ಧ ಭಾಗವನ್ನು ದಾನ ಮಾಡಿದ್ದು, ಕೊರೊನಾ ಸಂಕಷ್ಟದ ಸಮಯದಲ್ಲಿ ಪ್ರಧಾನಿ ಪರಿಹಾರ ನಿಧಿಗೆ 500 ಕೋಟಿ ರೂ. ದಾನ ಮಾಡಿದ್ದು.. ಹೀಗೆ ನೂರಾರು ಉದಾಹರಣೆಗಳು ದೊರೆಯುತ್ತವೆ. ಅದಕ್ಕೆ ಇನ್ನೊಂದು ಪುರಾವೆಯು ಇಲ್ಲಿದೆ.

ರತನ್ ಟಾಟಾ ಅವರ ಜೀವಮಾನದ ಸಾಧನೆಗಳನ್ನು ಪರಿಗಣಿಸಿ 2018ರಲ್ಲಿ ಸನ್ಮಾನ ಮಾಡಲು ಇಂಗ್ಲೆಂಡಿನ ರಾಜಕುಮಾರ ಚಾರ್ಲ್ಸ್ ಅವರು ಇಂಗ್ಲೆಂಡಿಗೆ ಆಮಂತ್ರಿಸಿದ್ದರು. ಅದು ರಾಯಲ್ ಮನೆತನದ ಬಕಿಂಗ್ ಹ್ಯಾಮ್ ಅರಮನೆಯಲ್ಲಿ ಏರ್ಪಾಡಾಗಿದ್ದ ರಾಜಗೌರವದ ಸನ್ಮಾನ! ಪ್ರಿನ್ಸ್ ಚಾರ್ಲ್ಸ್ ಈ ಗೌರವದ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು ನೂರಾರು ಅತಿ ಗಣ್ಯ ವ್ಯಕ್ತಿಗಳನ್ನು ಕರೆದಿದ್ದರು. ರತನ್ ಟಾಟಾ ಅವರು ಕೂಡ ಈ ಆಮಂತ್ರಣವನ್ನು ಸ್ವೀಕರಿಸಿ ಲಂಡನ್ನಿಗೆ ಹೊರಡುವ ತಯಾರಿ ಮಾಡಿದ್ದರು.

ಅವರನ್ನು ಇಂಗ್ಲೆಂಡಿನಲ್ಲಿ ಸ್ವಾಗತ ಮಾಡಿ ಅವರ ಆತಿಥ್ಯದ ವ್ಯವಸ್ಥೆಯನ್ನು ಮಾಡಲು ಚಾರ್ಲ್ಸ್ ಅವರಿಂದ ನಿಯುಕ್ತ ಆದವರು ಖ್ಯಾತ ಉದ್ಯಮಿಗಳು ಮತ್ತು ಅಂಕಣಕಾರರಾದ ಸುಹೇಲ್ ಸೇಥ ಅವರು. ಸುಹೇಲ್ ಅವರು ನಾಲ್ಕು ದಿನ ಮೊದಲೇ ಲಂಡನ್ನಿಗೆ ಹೋಗಿ ಟಾಟಾ ಅವರನ್ನು ಸ್ವಾಗತ ಮಾಡಲು ಸಿದ್ಧತೆಯನ್ನೂ ಮಾಡಿದ್ದರು.

ಒಮ್ಮೆ ಸುಹೇಲ್ ಅವರು ಯಾವುದೋ ಒಂದು ಕೆಲಸದಲ್ಲಿ ಮುಳುಗಿದ್ದಾಗ ಅವರ ಮೊಬೈಲ್ ಫೋನ್ ಒಂದೇ ಸಮನೆ ಹೊಡೆದುಕೊಳ್ಳಲು ಆರಂಭ ಆಯಿತು. ಸುಹೇಲ್ ಸ್ವಲ್ಪ ಹೊತ್ತಿನ ನಂತರ ಮೊಬೈಲ್ ನೋಡಿದಾಗ ರತನ್ ಟಾಟಾ ಅವರ ಹನ್ನೊಂದು ಮಿಸ್ ಕಾಲ್ ಇತ್ತು! ಯಾಕೆಂದು ಸುಹೇಲ್ ಗಾಬರಿ ಬಿದ್ದು ಟಾಟಾ ಅವರಿಗೆ ಮರು ಕಾಲ್ ಮಾಡಿದರು. ಕಾಲ್ ಕನೆಕ್ಟ್ ಆಯಿತು. ಅಂದು ರತನ್ ಟಾಟಾ ಅವರ ಧ್ವನಿ ನಡುಗುತ್ತಿತ್ತು.

ಅವರು ಹೇಳುತ್ತಾ ಹೋದರು. “ಸುಹೇಲ್ ಸಾರಿ. ನಿಮಗೆ ತೊಂದರೆ ಕೊಡುತ್ತಾ ಇದ್ದೇನೆ. ನಿಮಗೆ ಹೇಗೆ ಹೇಳಬೇಕೋ ಗೊತ್ತಾಗುತ್ತಿಲ್ಲ. ನನ್ನ ಎರಡು ನಾಯಿಗಳಾದ ಟ್ಯಾಂಗೋ ಮತ್ತು ಟಿಟೋಗಳ ಪೈಕಿ ಒಂದು ಇಂದು ತೀವ್ರವಾಗಿ ಅಸ್ವಸ್ಥ ಆಗಿದೆ. ನಿಮಗೆ ಗೊತ್ತು ನಾನು ಎಷ್ಟು ಅವುಗಳನ್ನು ಪ್ರೀತಿ ಮಾಡುತ್ತೇನೆ ಎಂದು. ಇಂಥಹ ಸಂಕೀರ್ಣ ಸನ್ನಿವೇಶದಲ್ಲಿ ನಾನು ನಾಯಿಗಳನ್ನು ಬಿಟ್ಟು ಲಂಡನ್‌ಗೆ ಬರಲು ಸಾಧ್ಯ ಇಲ್ಲ. ನೀವಿದನ್ನು ದಯವಿಟ್ಟು ಪ್ರಿನ್ಸ್ ಚಾರ್ಲ್ಸ್ ಅವರಿಗೆ ತುರ್ತಾಗಿ ತಿಳಿಸಬೇಕು ಮತ್ತು ನಾನು ಅವರ ಕ್ಷಮೆಯನ್ನು ಕೇಳುತ್ತಿದ್ದೇನೆ ಎಂದು ಕೂಡ ತಿಳಿಸಬೇಕು” ಎಂದರು.

ಸುಹೇಲ್ ಅವರಿಗೆ ಏನು ಉತ್ತರ ಹೇಳಬೇಕು ಎಂದು ಗೊತ್ತಾಗಲಿಲ್ಲ. ಅವರು “ರತನ್ ಜಿ. ಇದು ಸಾಮಾನ್ಯ ಕಾರ್ಯಕ್ರಮ ಅಲ್ಲ. ಇಂಗ್ಲಿಷ್ ರಾಜಮನೆತನದ ಗೌರವದ ಕಾರ್ಯಕ್ರಮ. ಸ್ವತಃ ಪ್ರಿನ್ಸ್ ಚಾರ್ಲ್ಸ್ ಮುಂದೆ ನಿಂತು ಈ ಕಾರ್ಯಕ್ರಮ ಏರ್ಪಡಿಸುತ್ತಿದ್ದಾರೆ. ನೂರಕ್ಕೂ ಹೆಚ್ಚಿನ ವಿವಿಐಪಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿದ್ದಾರೆ. ಸ್ವತಃ ಇಂಗ್ಲೆಂಡ್ ರಾಣಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿದ್ದಾರೆ. ಆದ್ದರಿಂದ ನೀವು ನಾಯಿಗಳ ಬಗ್ಗೆ ಬೇರೇನಾದರೂ ವ್ಯವಸ್ಥೆಯನ್ನು ಮಾಡಿ ಲಂಡನ್ನಿಗೆ ಹೊರಡಬೇಕು ಎಂದು ವಿನಂತಿ ಮಾಡುತ್ತೇನೆ” ಎಂದರು.

ಆದರೆ ರತನ್ ಟಾಟಾ ತಮ್ಮ ನಿರ್ಧಾರವನ್ನು ಬದಲಾಯಿಸಲು ಒಪ್ಪಲಿಲ್ಲ. “ನಿಮಗೆ ಗೊತ್ತಿದೆ ನಾನು ನನ್ನ ನಾಯಿಗಳನ್ನು ಎಷ್ಟು ಪ್ರೀತಿ ಮಾಡುತ್ತೇನೆ ಎಂದು. ದಯವಿಟ್ಟು ನನಗೆ ಒತ್ತಾಯ ಮಾಡಬೇಡಿ. ನನ್ನ ಮಾತುಗಳನ್ನು ಪ್ರಿನ್ಸ್ ಚಾರ್ಲ್ಸ್ ಅವರಿಗೆ ವಿನೀತವಾಗಿ ತಲುಪಿಸಿ” ಅಂದು ಫೋನ್ ಇಟ್ಟರು. ಸುಹೇಲ್ ಅವರಿಗೆ ಈಗ ನಿಜವಾಗಿ ಉಭಯ ಸಂಕಟ ಆರಂಭ ಆಯಿತು. ಅವರು ಮರುದಿನವೇ ಮುಂಜಾನೆ ಬಕಿಂಗ್ ಹ್ಯಾಮ್ ಅರಮನೆಗೆ ಹೋದಾಗ ಅಲ್ಲಿ ಎಲ್ಲ ಸಿದ್ಧತೆಗಳೂ ಕೊನೆಯ ಹಂತದಲ್ಲಿ ಇದ್ದವು.

ಅವರು ಸಂಕೋಚದಿಂದ ಪ್ರಿನ್ಸ್ ಚಾರ್ಲ್ಸ್ ಮುಂದೆ ಹೋಗಿ ಟಾಟಾ ಹೇಳಿದ್ದನ್ನು ಪ್ರೀತಿಯಿಂದ ಹೇಳಿದರು. ಅದೇ ಕಾರಣವನ್ನು ಕೂಡ ನಿವೇದನೆ ಮಾಡಿಕೊಂಡರು. ಒಮ್ಮೆ ಚಾರ್ಲ್ಸ್ ಹಣೆಯ ಮೇಲೆ ನೆರಿಗೆಗಳು ಕಂಡುಬಂದವು. ತಕ್ಷಣ ಅವರ ಮೊದಲ ಉದ್ಗಾರ – That’s the man!

“ರತನ್ ಅವರಿಗೆ ಬರಲು ಆಗುವುದಿಲ್ಲ ಎಂದು ನೀವು ಹೇಳಿದಾಗ ನನಗೆ ಒಮ್ಮೆ ಬೇಜಾರು ಆಯಿತು. ಆದರೆ ಅವರು ನೀಡಿದ ಕಾರಣ ನೋಡಿ ನನಗೆ ಅವರ ಬಗ್ಗೆ ತುಂಬ ಹೆಮ್ಮೆ ಅನ್ನಿಸಿತು. ನನಗೆ ಅವರ ಬಗ್ಗೆ ಇರುವ ಗೌರವ, ಪ್ರೀತಿ ಇಮ್ಮಡಿ ಆಗಿದೆ. ನೋ ಪ್ರಾಬ್ಲಂ. ಈ ಕಾರ್ಯಕ್ರಮವನ್ನು ಮುಂದಕ್ಕೆ ಹಾಕೋಣ” ಎಂದು ಚಾರ್ಲ್ಸ್ ಹೇಳಿದರು. ಕೊನೆಗೂ ರತನ್ ಟಾಟಾ ಆ ಕಾರ್ಯಕ್ರಮಕ್ಕೆ ಹೋಗಲಿಲ್ಲ ಮತ್ತು ಆ ಕಾರ್ಯಕ್ರಮವು ಮುಂದೆ ನಡೆಯಲೇ ಇಲ್ಲ!

ಟಾಟಾ ಒಮ್ಮೆ ತಮ್ಮ ಎರಡು ನಾಯಿಗಳ ಬಗ್ಗೆ ಮಾಡಿದ ಟ್ವೀಟ್ ಹೀಗಿದೆ – Tito and Tango seek nothing in return for their affection other than a little love and attention. I miss them terribly when I am away!

ಯಾರೂ ಸುಖಾಸುಮ್ಮನೆ ದೊಡ್ಡವರು ಆಗುವುದಿಲ್ಲ! ಅವೆರಡೂ ರತನ್ ಟಾಟಾ ಸಾಕಿದ ಬೀದಿ ನಾಯಿಗಳು ಆಗಿದ್ದವು!

ಟಾಟಾ ಅವರಿಗೆ ತಮ್ಮ ಜೀವನದ ಆದ್ಯತೆಗಳನ್ನು ನಿರ್ಧಾರ ಮಾಡಲು ಗೊತ್ತಿದೆ ಮತ್ತು ಅವರು ತಮ್ಮ ಆದ್ಯತೆಗಳಿಂದ ಒಂದಿಷ್ಟೂ ವಿಚಲಿತ ಆಗುವುದಿಲ್ಲ. ತಮ್ಮ ಕಂಪೆನಿಯ ಪ್ರತಿ ಉದ್ಯೋಗಿಯನ್ನೂ ಅವರು ಅದೇ ಮಾನವೀಯ ಅಂತಃಕರಣದಿಂದ ನೋಡಿಕೊಳ್ಳುತ್ತಾರೆ ಎಂದು ಅನೇಕರು ಹೇಳಿದ್ದಾರೆ. ಅಂದ ಹಾಗೆ ರತನ್ ಟಾಟಾ ಈವರೆಗೆ ಮದುವೆ ಆಗಿಲ್ಲ! ನಾನು ನಾಲ್ಕು ಬಾರಿ ಮದುವೆಯ ಹೊಸ್ತಿಲಿನ ತನಕ ಬಂದು ಭಯದಿಂದ ಹಿಂದೆ ಹೋಗಿದ್ದೆ ಎಂದವರು ತಮಾಷೆಗೆ ಹೇಳಿದ್ದಾರೆ!

Continue Reading

ದೇಶ

Ratan Tata : ರತನ್‌ ಟಾಟಾ ಕಂಪನಿ ಸೇರಿದ್ದು ಸಾಮಾನ್ಯ ಉದ್ಯೋಗಿಯಾಗಿ! ಉದ್ಯಮ ರಂಗದ ಗುರು ಆಗಿದ್ದೇಗೆ?

Ratan Tata : ತಮ್ಮ ಸಂಪತ್ತಿನ ಬಹುಪಾಲನ್ನು ಆಗಲೇ ದಾನ ಮಾಡಿರುವ ರತನ್‌ ಟಾಟಾ ಅವರು ತಮ್ಮದೇ ಕಂಪನಿಯನ್ನು ಸೇರಿದ್ದು ಒಬ್ಬ ಸಾಮಾನ್ಯ ಉದ್ಯೋಗಿಯಾಗಿ ಎನ್ನುವುದು ಅವರ ದೊಡ್ಡಸ್ತಿಕೆ.

VISTARANEWS.COM


on

By

Ratan Tata joined the company as an ordinary employee but Why is he the guru of the industry
Koo

ಭಾರತದ ಮಹೋನ್ನತ ಬಿಸಿನೆಸ್ ಮ್ಯಾಗ್ನೆಟ್ ರತನ್ ಟಾಟಾ ಪ್ರಧಾನಮಂತ್ರಿಗಳ ಕೊರೊನಾ ತುರ್ತು ಪರಿಹಾರ ನಿಧಿಗೆ 1500 ಕೋಟಿ ರೂಪಾಯಿ ಕೊಡುಗೆ ನೀಡಿದಾಗ ಎಲ್ಲರೂ ಮೂಗಿನ ಮೇಲೆ ಬೆರಳು ಇಟ್ಟಿದ್ದರು! (ಇದು ಎಷ್ಟೋ ರಾಷ್ಟ್ರಗಳ ವಾರ್ಷಿಕ ಬಜೆಟ್‌ಗಿಂತಲೂ ಅಧಿಕ!). ಎಷ್ಟೋ ಸಿರಿವಂತರು ಹೃದಯವಂತರು ಆಗಿರುವುದಿಲ್ಲ. ಆದರೆ ರತನ್ ಟಾಟಾ ಅದಕ್ಕೊಂದು ಅಪವಾದ. ಅವರು ತಮ್ಮ ಸಂಪತ್ತಿನ 60-65% ಭಾಗವನ್ನು ಈಗಾಗಲೇ ದಾನ ಮಾಡಿಯಾಗಿದೆ! ಬೇರೆ ಕಾರ್ಪೊರೇಟ್ ಕಂಪೆನಿಗಳು ತಮ್ಮ ಸಿ ಎಸ್ ಆರ್ ಯೋಜನೆಗಳನ್ನು ರೂಪಿಸಲು ಕೂಡ ರತನ್ ಟಾಟಾ ಮಾದರಿಯಾಗಿ ನಿಂತಿದ್ದರು.

ಟಾಟಾ ಕಂಪೆನಿಗೆ ಒಬ್ಬ ಸಾಮಾನ್ಯ ಉದ್ಯೋಗಿಯಾಗಿ ಸೇರಿದರು!

1937 ರಲ್ಲಿ ಸೂರತ್ ನಗರದಲ್ಲಿ ಜನಿಸಿದ ರತನ್ ಟಾಟಾ ವಿದೇಶಗಳಲ್ಲೇ ಹೆಚ್ಚು ಶಿಕ್ಷಣ ಪಡೆದವರು. ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ಕಲಿಕೆ. 1961 ರಲ್ಲಿ ಟಾಟಾ ಕಂಪನಿಯನ್ನು ಒಬ್ಬ ಸಾಮಾನ್ಯವಾದ ಉದ್ಯೋಗಿಯಾಗಿ ಸೇರಿದ ಅವರು ತಮ್ಮ ಕಾರ್ಯಕ್ಷಮತೆ, ಶಿಸ್ತು ಮತ್ತು ದಕ್ಷತೆಯಿಂದ ಎಲ್ಲರ ಮನಗೆದ್ದರು. 1991 ರಲ್ಲಿ ಟಾಟಾ ಸಮೂಹ ಸಂಸ್ಥೆಗಳ ಭೀಷ್ಮ ಜೆ. ಆರ್. ಡಿ. ಟಾಟಾ ಅವರು ಅಧ್ಯಕ್ಷ ಹುದ್ದೆಯಿಂದ ನಿವೃತ್ತರಾಗುವಾಗ ತನ್ನ ಉತ್ತರಾಧಿಕಾರಿಯಾಗಿ ರತನ್ ಟಾಟಾ ಅವರನ್ನು ನೇಮಕ ಮಾಡಿದರು.

ಇದು ಟಾಟಾ ವಿವಿಧ ಕಂಪನಿಗಳ ಮುಖ್ಯಸ್ಥರ ಅಸಾಮಾಧಾನಕ್ಕೆ ಕಾರಣವಾಯಿತು. ಆದರೆ ರತನ್ ಟಾಟಾ ಇದಕ್ಕೆಲ್ಲ ಸೊಪ್ಪು ಹಾಕುವವರೇ ಅಲ್ಲ! ಎಲ್ಲ ಟಾಟಾ ಸಂಸ್ಥೆಗಳನ್ನು ಒಗ್ಗೂಡಿಸಿ ಟಾಟಾ ಸಮೂಹ ಸಂಸ್ಥೆಯಾಗಿ ರೂಪಿಸಿದ್ದು ಅವರ ಜಾಣ ನಡೆಯಾಗಿತ್ತು. ಹಿರಿಯ ತಲೆಗಳನ್ನು ನಿವೃತ್ತಿ ಮಾಡಿ ಹೊಸಬರಿಗೆ ಅವಕಾಶ ನೀಡಿದರು. ಹೊಸ ಆವಿಷ್ಕಾರ, ನಾವೀನ್ಯತೆ, ಜಾಗತಿಕ ದೃಷ್ಟಿಕೋನ, ಆರ್ಥಿಕ ಶಿಸ್ತು, ಪರಿಣಾಮಕಾರಿ ನಿರ್ಧಾರ, ಉತ್ತರದಾಯಿತ್ವ, ಜವಾಬ್ದಾರಿಗಳ ಹಂಚಿಕೆ ಇವುಗಳಿಗೆ ಆದ್ಯತೆ ನೀಡಿದರು. ಆರ್ಥಿಕ ಶಿಸ್ತು ಅವರಲ್ಲಿ ಎದ್ದುಕಾಣುವ ಗುಣ. ತನ್ನ ಉದ್ಯೋಗಿಗಳನ್ನು ತುಂಬಾ ಚೆನ್ನಾಗಿ ವಿಶ್ವಾಸಕ್ಕೆ ತೆಗೆದುಕೊಂಡರು. ಪರಿಣಾಮವಾಗಿ ಅವರ 21 ವರ್ಷಗಳ ಅಧಿಕಾರದ ಅವಧಿಯಲ್ಲಿ ಟಾಟಾ ಸಂಸ್ಥೆಯ ಆದಾಯವು 40 ಪಟ್ಟು ಅಧಿಕವಾಯಿತು! ಲಾಭವು 50 ಪಟ್ಟು ಅಧಿಕವಾಯಿತು! ರತನ್ ಟಾಟಾ ಅವರ ಅವಧಿಯನ್ನು ಭಾರತೀಯ ಉದ್ಯಮ ರಂಗದ ಸುವರ್ಣ ಯುಗ ಎಂದು ಕರೆಯಲಾಯಿತು.

ಟಾಟಾ ಜಗದಗಲ ಬೆಳೆಯಿತು!

ಟಾಟಾ ಸಂಸ್ಥೆಗಳು 100ಕ್ಕೂ ಅಧಿಕ ದೇಶಗಳಲ್ಲಿ ಸ್ಥಾಪನೆಯಾದವು. ಗುಂಡು ಪಿನ್‌ನಿಂದ ಆರಂಭಿಸಿ ಟ್ರಕ್‌ಗಳವರೆಗೆ, ಉಪ್ಪಿನಿಂದ ಆರಂಭಿಸಿ ವಿಮಾನದವರೆಗೆ, ಕೈ ಗಡಿಯಾರದಿಂದ ಆರಂಭಿಸಿ ಚಿನ್ನದ ಮಳಿಗೆಗಳವರೆಗೆ, ಹೋಟೆಲ್ ಉದ್ಯಮದಿಂದ ಆರಂಭ ಮಾಡಿ ನ್ಯಾನೋ ಕಾರುಗಳವರೆಗೆ ಉದ್ಯಮವನ್ನು ವಿಸ್ತಾರ ಮಾಡಿದ ಕೀರ್ತಿಯು ಅವರಿಗೆ ಸಲ್ಲುತ್ತದೆ! ನಷ್ಟದಲ್ಲಿ ಇದ್ದ ಏರ್ ಇಂಡಿಯಾ ಸಂಸ್ಥೆಯನ್ನು ವಹಿಸಿಕೊಂಡು ಭಾರಿ ಲಾಭಕ್ಕೆ ಪರಿವರ್ತನೆ ಮಾಡಿದ ಕೀರ್ತಿ ಟಾಟಾ ಅವರಿಗೆ ಸಲ್ಲುತ್ತದೆ. ಅದೇ ರೀತಿಯಲ್ಲಿ ಬೆಳೆಯುತ್ತಿರುವ ಹಲವು ಉದ್ಯಮಿಗಳಿಗೆ ಅವರು ತಮ್ಮ ಗೆಲುವಿನ ಗುಟ್ಟನ್ನು ಯಾವ ಮುಚ್ಚುಮರೆ ಮಾಡುವುದರಲ್ಲಿ ಟಾಟಾ ಇಂದು ಉದ್ಯಮರಂಗದ ಗುರು ಎಂದು ಕೂಡ ಕರೆಸಿಕೊಂಡಿದ್ದರು.

ಕೊಟ್ಟ ಮಾತಿನಂತೆ ನಡೆದುಕೊಂಡರು ರತನ್ ಟಾಟಾ

75ನೆಯ ವಯಸ್ಸಿನಲ್ಲಿ ಅವರು ತಾವು ಕೊಟ್ಟ ಮಾತಿನಂತೆ ಸೇವಾ ನಿವೃತ್ತಿಯನ್ನು ಘೋಷಿಸಿ ತನ್ನ ಉತ್ತರಾಧಿಕಾರಿಯನ್ನು ನೇಮಿಸಿದರು. ಆದರೆ ಆಡಳಿತ ಮಂಡಳಿ, ಶೇರ್ ಹೋಲ್ಡರ್ಸ್, ಸಹಯೋಗಿ ಸಂಸ್ಥೆಗಳು ಅವರ ಮೇಲೆ ಪೂರ್ತಿ ಭರವಸೆ ಇಟ್ಟು ಅವರನ್ನೇ ಟಾಟಾ ಸಂಸ್ಥೆಗಳು ಹಾಗೂ ಟ್ರಸ್ಟ್‌ಗಳ ‌ಹೆಡ್ ಆಗಿ ಮುಂದುವರಿಸಿಕೊಂಡು ಬಂದಿದ್ದರು. ಸಂಸ್ಥೆಗಳ ಲಾಭದ 51% ಗಿಂತ ಅಧಿಕ ಪಾಲನ್ನು ಅವರು ಟಾಟಾ ಸಮಾಜಸೇವಾ ಟ್ರಸ್ಟ್ ಗಳಿಗೆ ಹಂಚಿಕೆ ಮಾಡುತ್ತಿದ್ದರು. ಕೇವಲ 1% ಗಿಂತ ಕಡಿಮೆ ಲಾಭವನ್ನು ಪಡೆಯುತ್ತಿದ್ದರು. ಅವರಿಗೆ ಪದ್ಮಭೂಷಣ, ಪದ್ಮ ವಿಭೂಷಣ ಪ್ರಶಸ್ತಿಗಳು ಈಗಾಗಲೇ ದೊರೆತಿದ್ದು ಭಾರತರತ್ನ ಮಾತ್ರ ಬಾಕಿಯಿದೆ!

ನೊಂದವರ, ಬಡವರ ಬಗ್ಗೆ ಕಾಳಜಿ ಅವರಿಗೆ ರಕ್ತದಲ್ಲೇ ಬಂದಿದ್ದು ಜಗತ್ತಿನ ಅತೀ ಕಡಿಮೆ ಬೆಲೆಯ ಟಾಟಾ ನ್ಯಾನೋ ಬಡವರ ಕಾರು( ಬೆಲೆ ಕೇವಲ ಒಂದು ಲಕ್ಷ ರೂಪಾಯಿ) ರೂಪಿಸಿದ ಕೀರ್ತಿ ಅವರದ್ದು! ಬೀದಿ ನಾಯಿಗಳನ್ನು ಪೋಷಣೆ ಮಾಡುವುದರಲ್ಲಿ ಕೂಡ ಅವರು ಮಾದರಿ ಆಗಿದ್ದರು. ಒಮ್ಮೆ ತನ್ನ ಬೀದಿನಾಯಿಗಳ ಅನಾರೋಗ್ಯದ ಕಾರಣಕ್ಕೆ ಇಂಗ್ಲೆಂಡ್ ಅರಮನೆಯ ಅದ್ದೂರಿ ಸನ್ಮಾನ ನಿರಾಕರಿಸಿ ಅವರು ಭಾರೀ ಸುದ್ದಿಯಾಗಿದ್ದರು.

ರತನ್ ಟಾಟಾ ಎಲ್ಲರಂತಲ್ಲ!

ಸಂಪೂರ್ಣ ಸಸ್ಯಾಹಾರಿ ಆದ, ಮದ್ಯಪಾನದಿಂದ ಗಾವುದ ದೂರ ಇರುವ, ನಾಚಿಕೆ ಸ್ವಭಾವದ, ಹೆಚ್ಚು ಏಕಾಂತವನ್ನು ಬಯಸುವ, ಸಾಮಾಜಿಕ ಕಾರ್ಯಕ್ರಮಗಳಿಗೆ ಕಡಿಮೆ ಬರುವ, ಪ್ರಚಾರದಿಂದ ದೂರ ಇರುವ, ಪಿಯಾನೋ ನುಡಿಸುವ, ಹಳೆ ಹಿಂದಿ ಸಿನಿಮಾ ಗೀತೆಗಳನ್ನು ಗುನುಗುವ, ಸರಳವಾಗಿ ಬದುಕುತ್ತಿರುವ, ಬೀದಿ ನಾಯಿಗಳನ್ನು ಪೋಷಿಸುವ, ತುಂಬಾ ಓದುವ ಅಭ್ಯಾಸವಿರುವ ರತನ್ ಟಾಟಾ ತಮ್ಮ 86ನೇ ವಯಸ್ಸಿಗೆ ವಿದಾಯ ಹೇಳಿದ್ದಾರೆ. ಕೊರೊನಾ ಸಂದರ್ಭದಲ್ಲಿ ಬೇರೆಲ್ಲ ಕಂಪನಿಗಳು ತನ್ನ ಉದ್ಯೋಗಿಗಳಿಗೆ ವೇತನ ಕಡಿತ ಮಾಡಿದ್ದರೆ ಟಾಟಾ ಕಂಪೆನಿಯು ಪೂರ್ಣ ವೇತನ ಕೊಟ್ಟು ಮಾದರಿ ಆಗಿತ್ತು. ತನ್ನ ಜೀವನದಲ್ಲಿ 4 ಹುಡುಗಿಯರನ್ನು ಪ್ರೀತಿ ಮಾಡಿದ್ದೆ ಎಂದು ಹೇಳಿಕೊಳ್ಳುವ ಅವರಿನ್ನೂ ಮದುವೆಯಾಗದೇ ಏಕಾಂಗಿಯಾಗಿ ಜೀವಿಸಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Ratan Tata : ಕೈಗಾರಿಕೋದ್ಯಮದ ರತ್ನ ʻರತನ್‌ ಟಾಟಾʼ ಇನ್ನಿಲ್ಲ; ಖ್ಯಾತ ಉದ್ಯಮಿಯ ನಿಧನಕ್ಕೆ ಗಣ್ಯರ ಸಂತಾಪ

Ratan Tata : ಕೈಗಾರಿಕೋದ್ಯಮದ ರತ್ನ ʻರತನ್‌ ಟಾಟಾʼ ಅಸುನೀಗಿದ್ದಾರೆ. ಖ್ಯಾತ ಉದ್ಯಮಿಯ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

VISTARANEWS.COM


on

By

Ratan Tata
Koo

ಬೆಂಗಳೂರು: ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನದ ಸುದ್ದಿ ದುಃಖವುಂಟು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ, ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದ ದೂರದೃಷ್ಟಿಯ ವ್ಯಕ್ತಿ. ರತನ್ ಟಾಟಾ ಅವರು ತಮ್ಮ ಬದುಕು ಮತ್ತು ಸಾಧನೆಗಳ ಮೂಲಕ ಅಜರಾಮರ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ದೇಶದಲ್ಲಿ ಕೈಗಾರಿಕಾ ಸಂಸ್ಕೃತಿಯನ್ನು ಉನ್ನತ ಮೌಲ್ಯಗಳೊಂದಿಗೆ ಕಟ್ಟಿದ ಟಾಟಾ

ದೇಶದಲ್ಲಿ ಕೈಗಾರಿಕಾ ಸಂಸ್ಕೃತಿಯನ್ನು ಉನ್ನತ ಮೌಲ್ಯಗಳೊಂದಿಗೆ ಕಟ್ಟಿದ ಟಾಟಾ ಸಮೂಹದ ಆಧಾರಸ್ತಂಭಗಳಲ್ಲಿ ಒಬ್ಬರಾಗಿದ್ದ ರತನ್ ಟಾಟಾ ಅವರ ನಿಧನದಿಂದ ನಿರ್ವಾತ ಸೃಷ್ಟಿಯಾಗಿದೆ. ಅವರ ಭೌತಿಕ ಅನುಪಸ್ಥಿತಿಯು ಭಾರತಕ್ಕೂ ಕರ್ನಾಟಕಕ್ಕೂ ಬಹುದೊಡ್ಡ ನಷ್ಟ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಶೋಕ ವ್ಯಕ್ತಪಡಿಸಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ಎಂ.ಬಿ ಅಲ್ಲಿಂದಲೇ ತಮ್ಮ ಶೋಕ ಸಂದೇಶ ಕಳಿಸಿದ್ದು, ಉದ್ಯಮ ಲೋಕದ ದಿಗ್ಗಜನ‌ ಸಾವಿಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದರು.

ಜಮ್ಷೆಡ್ಜಿ ಟಾಟಾ ಮತ್ತು ಜೆ ಆರ್ ಡಿ ಟಾಟಾ ತಮ್ಮ ವೈವಿಧ್ಯಮಯ ಉದ್ಯಮಗಳ ಮೂಲಕ ಆಧುನಿಕ ಭಾರತವನ್ನು ಕಟ್ಟಿದರು. ಇವರ ಬಳಿಕ ಎರಡು ದಶಕಗಳ ಕಾಲ‌ ಟಾಟಾ ಸಮೂಹದ ಚುಕ್ಕಾಣಿ ಹಿಡಿದಿದ್ದ ರತನ್ ಟಾಟಾ ಅವರು, ತಮ್ಮ ಸಮೂಹವನ್ನು ಜಾಗತಿಕ ಸ್ತರದಲ್ಲಿ ವಿಸ್ತರಿಸಿದರು ಎಂದು ಸಚಿವ ಎಂ.ಬಿ ಪಾಟೀಲ್‌ ಸ್ಮರಿಸಿದ್ದರು.

ಟಾಟಾ ಸಮೂಹವು ಕರ್ನಾಟಕದಲ್ಲಿ ಕೂಡ ಭಾರೀ ಪ್ರಮಾಣದಲ್ಲಿ ಬಂಡವಾಳ ಹೂಡಿದ್ದು, ಅಪಾರ ಪ್ರಮಾಣದ ಉದ್ಯೋಗಗಳನ್ನು ಸೃಷ್ಟಿಸಿದೆ. ರತನ್ ಟಾಟಾ ಕೂಡ ಉದ್ಯಮಶೀಲತೆಯನ್ನು ಉನ್ನತ ಮಟ್ಟದ ಮೌಲ್ಯಗಳ ಜತೆ ಪ್ರತಿನಿಧಿಸುತ್ತಿದ್ದರು. ಅವರು ಸದಾ ದೇಶ ಮತ್ತು ಸಮಾಜದ ಹಿತವನ್ನು ಕೂಡ ಪರಿಗಣಿಸುತ್ತಿದ್ದರು. ಇದರೊಂದಿಗೆ ಅವರು ಟಾಟಾ ಪರಂಪರೆಯ ವಾರಸುದಾರರಾಗಿದ್ದರು ಎಂದು ಅವರು ಅಗಲಿದ ಉದ್ಯಮಿಯ ಗುಣಗಾನ ಮಾಡಿದ್ದಾರೆ.

ಉದ್ಯಮಿ ರತನ್ ಟಾಟಾ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಂತಾಪ ಸೂಚಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Ratan Tata: ರತನ್ ಟಾಟಾ ಯಾಕೆ ಮದ್ವೆ ಆಗಲಿಲ್ಲ! ತಮ್ಮ ಪ್ರೀತಿಯ ಕತೆ ಬಗ್ಗೆ ಹೇಳಿದ್ದೇನು?

Ratan Tata: ರತನ್ ಟಾಟಾ ಅವರು ಅವಿವಾಹಿತವಾಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಆದರೆ, ಅವರು ಆಲ್ಮೋಸ್ಟ್ ಮದುವೆಯಾಗಿರುವ ಕತೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ಹ್ಯೂಮನ್ಸ್ ಆಫ್ ಬಾಂಬೆಗೆ (Humans of Bombay) ನೀಡಿದ ಸಂದರ್ಶನದಲ್ಲಿ ತಮ್ಮ ಆಲ್ಮೋಸ್ಟ್ ಮದುವೆ (Marriage) ಹಾಗೂ ಪ್ರೀತಿಯ (Love) ಕತೆಯನ್ನು ರತನ್ ಟಾಟಾ ಬಿಚ್ಚಿಟ್ಟಿದ್ದರು.

VISTARANEWS.COM


on

By

Why Ratan Tata didn't get married
Koo

ನವದೆಹಲಿ/ಮುಂಬೈ: ಭಾರತದ ಪ್ರಖ್ಯಾತ ಉದ್ಯಮಿ ಹಾಗೂ ಟಾಟಾ ಸನ್ಸ್‌ನ (Tata Sons) ಮಾಜಿ ಚೇರ್ಮನ್ ರತನ್ ಟಾಟಾ (Ratan Tata) ಅವರು ತಮ್ಮ ಸರಳತೆ ಹಾಗೂ ಧರ್ಮದರ್ಶಿ ಕೆಲಸಗಳಿಂದಾಗಿ ಮನ್ನಣೆ ಗಳಿಸಿದ್ದರು. ತೀವ್ರ ಅನಾರೋಗ್ಯದಿಂದ ರತನ್‌ ಟಾಟಾ ಮುಂಬೈನಲ್ಲಿ ನಿಧನ (ಅ.9) ಹೊಂದಿದ್ದಾರೆ. ಕೈಗಾರಿಕ ಉದ್ಯಮದಲ್ಲಿ ರತ್ನದಂತಿದ್ದ ರತನ್‌ ಟಾಟಾ ಅಗಲಿಕೆಗೆ ಕೋಟ್ಯಂತರ ಹೃದಯಗಳು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ರತನ್‌ ಸರಳತೆಗೆ ಹೆಸರುವಾಸಿಯಾದವರು. ರತನ್ ಟಾಟಾ ಅವರು ಅವಿವಾಹಿತವಾಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಆದರೆ, ಅವರು ಆಲ್ಮೋಸ್ಟ್ ಮದುವೆಯಾಗಿರುವ ಕತೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ಹ್ಯೂಮನ್ಸ್ ಆಫ್ ಬಾಂಬೆಗೆ (Humans of Bombay) ನೀಡಿದ ಸಂದರ್ಶನದಲ್ಲಿ ತಮ್ಮ ಆಲ್ಮೋಸ್ಟ್ ಮದುವೆ (Marriage) ಹಾಗೂ ಪ್ರೀತಿಯ (Love) ಕತೆಯನ್ನು ರತನ್ ಟಾಟಾ ಬಿಚ್ಚಿಟ್ಟಿದ್ದರು.

ಲಾಸ್ ಏಂಜಲೀಸ್‌ನಲ್ಲಿ ನಾನು ಆಲ್ಮೋಸ್ಟ್ ಮದುವೆಯಾಗಿದ್ದೆ! ಆದರೆ ನನ್ನ ಅಜ್ಜಿಯೊಂದಿಗೆ ನಾನು ತಕ್ಷಣಕ್ಕೆ ಭಾರತಕ್ಕೆ ಹಿಂತಿರುಗಿದ್ದರಿಂದ ಆ ಮದುವೆಯು ಮುಂದುವರಿಯುವುದನ್ನು ಸಾಧ್ಯವಾಗಲಿಲ್ಲ. ನಾನು ಮದುವೆಯಾಗಲು ಇಚ್ಛಿಸಿದ ವ್ಯಕ್ತಿ ಸ್ವಲ್ಪ ಸಮಯದ ನಂತರ ನನ್ನೊಂದಿಗೆ ಭಾರತಕ್ಕೆ ಬರಬೇಕಾಗಿತ್ತು ಎಂದು ಅವರು ಸಂದರ್ಶನದಲ್ಲಿ ಹೇಳಿದರು.

1962ರಲ್ಲಿ ಭಾರತ-ಚೀನಾ ಯುದ್ಧವು ಪ್ರಾರಂಭವಾದ ನಂತರ ಅವರ ಸಂಗಾತಿಯು ಭಾರತಕ್ಕೆ ಭೇಟಿ ನೀಡಲು ಆಕೆಯ ಪೋಷಕರು ಅನುಮತಿಸದ ಕಾರಣ ಸಂಬಂಧವು ಮುರಿದುಬಿತ್ತು ಎಂದು ರತನ್ ಟಾಟ್ ಹೇಳಿಕೊಂಡಿದ್ದರು. ಹಾಗಾಗಿ, ನಮ್ಮೊಂದಿಗೆ ಆಲ್ಮೋಸ್ಟ್ ಮದುವೆ ಎಂಬುದಷ್ಟು ಉಳಿಯಿತು ಎಂದು ಹೇಳಿಕೊಂಡಿದ್ದರು.

ಆ ಸಂಬಂಧ ಬಳಿಕ ನಾನು, ನನ್ನ ಹೆಂಡತಿ ಎಂದು ಕರೆಯುವಂಥ ಯಾವುದೇ ವ್ಯಕ್ತಿ ನನಗೆ ದೊರೆಯಲಿಲ್ಲ. ಆ ಬಳಿಕ ನನ್ನ ಜೀವನವೇ ಒಂದು ಸಂಘರ್ಷಕ್ಕೆ ಸಿಲುಕಿಕೊಂಡಿತು. ನಾನು ನಿರಂತರವಾಗಿ ಕೆಲಸ ಮಾಡುತ್ತಾ, ಪ್ರಯಾಣ ಮಾಡುತ್ತಿದ್ದೆ. ಹಾಗಾಗಿ, ನನಗಾಗಿ ಅಂತ ಸಮಯ ತುಂಬಾ ಕಡಿಮೆ ಉಳಿಯುತ್ತಿತ್ತು. ಇಂದು, ನಾನು ನನ್ನ ಕಳೆದ ಹೋದ ದಿನಗಳ ಬಗ್ಗೆ ಯೋಚಿಸಿದರೆ, ನನಗೇನೂ ಆ ಬಗ್ಗೆ ಯಾವುದೇ ಪಶ್ಚಾತ್ತಾಪ ಇಲ್ಲ. ಒಂದು ಕ್ಷಣಕ್ಕೆ ಆ ರೀತಿ ನನಗೆ ಅನ್ನಿಸುವುದಿಲ್ಲ ಎಂದು ರತನ್ ಟಾಟಾ ಹೇಳಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Gosavi samaj lathicharged Sri Ram Sene calls for bandh in Lakshmeshwara town on October 19
ಗದಗ9 ಗಂಟೆಗಳು ago

Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

A man killed his wife and her lover then committed suicide
ಬೆಂಗಳೂರು12 ಗಂಟೆಗಳು ago

Murder Case: ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತ್ನಿ ಲಾಕ್‌; ಇಬ್ಬರನ್ನು ಕೊಂದು ಪತಿ ಸೂಸೈಡ್‌

Parvati Nair to play dual role in suspense thriller un Paravail Tamil film
ಸಿನಿಮಾ12 ಗಂಟೆಗಳು ago

Parvati Nair : ಸಸ್ಪೆನ್ಸ್ ಥ್ರಿಲ್ಲರ್‌ ʻಊಣ್‌ ಪರವೈಲ್‌ʼ ತಮಿಳು ಚಿತ್ರದಲ್ಲಿ ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಮಿಂಚಿಂಗ್‌

ಬೆಂಗಳೂರು14 ಗಂಟೆಗಳು ago

Bengaluru Airport : ಬೆಂಗಳೂರು ಏರ್‌ಪೋರ್ಟ್‌ನ 17.7 ಎಕರೆಗಳಲ್ಲಿ ತಲೆ ಎತ್ತಲಿದೆ ಬಿಸಿನೆಸ್‌ ಪಾರ್ಕ್‌

Jio Cloud PC to turn home TV into computer
ಹೊಸ ಸುದ್ದಿ15 ಗಂಟೆಗಳು ago

Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

Dina Bhavishya
ಭವಿಷ್ಯ15 ಗಂಟೆಗಳು ago

Dina Bhavishya : ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿಯೊಂದು ಈ ರಾಶಿಯವರಿಗೆ ಅಚ್ಚರಿ ತರಲಿದೆ

dina bhavishya
ಭವಿಷ್ಯ2 ದಿನಗಳು ago

Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಹೊಸ ಅವಕಾಶಗಳು ಗರಿಗೆದರಲಿವೆ

karnataka Rain
ಮಳೆ2 ದಿನಗಳು ago

Karnataka Rain : ನಿರಂತರ ಮಳೆಗೆ ಬೆಂಗಳೂರಿಗರು ಕಂಗಾಲು; ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Actor Darshan
ಬೆಂಗಳೂರು2 ದಿನಗಳು ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೇಲ್‌ ಕನಸು ನಚ್ಚು ನೂರು; ನಟ ದರ್ಶನ್‌ ಜಾಮೀನು ನಿರಾಕರಣೆಗೆ ಕೋರ್ಟ್‌ ಕೊಟ್ಟ 9 ಕಾರಣಗಳು

Karnataka Rain
ಮಳೆ3 ದಿನಗಳು ago

Karnataka Rain : ಬೆಂಗಳೂರಿನಲ್ಲಿ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆ; ಧರೆಗುರುಳಿದ ಬೃಹತ್‌ ಮರ, ಕಾರು ಜಖಂ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌