KARBWWB Recruitment 2023 Apply Online for 186 SDA Field Inspectors Posts details in kannadaKARBWWB Recruitment 2023 : ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 186 ಹುದ್ದೆ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ Vistara News
Connect with us

ಉದ್ಯೋಗ

KARBWWB Recruitment 2023 : ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 186 ಹುದ್ದೆ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

ವಿವಿಧ ನಿಗಮ, ಮಂಡಳಿಗಳಲ್ಲಿ ಖಾಲಿ ಇರುವ ಒಟ್ಟು670 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನೇಮಕ ಪ್ರಕ್ರಿಯೆ (KEA Recruitment 2023) ನಡೆಸುತ್ತಿದ್ದು, ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ (KARBWWB Recruitment 2023) ಹುದ್ದೆಗಳ ನೇಮಕದ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

KARBWWB Recruitment 2023
Koo

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ (KARBWWB Recruitment 2023) ಒಟ್ಟು 186 ಹುದ್ದೆಗಳು ಸೇರಿದಂತೆ ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿ ಇರುವ 670 ಹುದ್ದೆಗಳ ನೇಮಕ ಪ್ರಕ್ರಿಯೆ (KEA Recruitment 2023) ಆರಂಭಿಸಿದೆ. ಈಗಾಗಲೇ ವಿವರವಾದ ಅಧಿಸೂಚನೆ ಪ್ರಕಟಿಸಿ, ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 186 ಹುದ್ದೆಗಳಲ್ಲದೆ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತದ 386, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ 26, ಮೈಸೂರು ಸೇಲ್ಸ್‌ ಇಂಟರ್‌ನ್ಯಾಷನಲ್ ಲಿಮಿಟೆಡ್‌ನ 72 ಹುದ್ದೆಗಳಿಗೆ ಈ ನೇಮಕ ನಡೆಯುತ್ತಿದೆ.

ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿದೆ. ಅರ್ಜಿ ಶುಲ್ಕವನ್ನು ಆಫ್‌ಲೈನ್‌ನಲ್ಲಿ ಮಾತ್ರ ಪಾವತಿಸಲು (ಅಂಚೆಕಚೇರಿ ಮೂಲಕ) ಅವಕಾಶ ನೀಡಲಾಗಿದೆ. ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ ಮತ್ತು ಪ್ರತ್ಯೇಕವಾಗಿ ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ.

ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 23-06-2023 ಮಧ್ಯಾಹ್ನ 2 ಗಂಟೆಯಿಂದ
ಇ-ಅಂಚೆ ಕಚೇರಿಗಳಲ್ಲಿ ಶುಲ್ಕಪಾವತಿ (ಕಚೇರಿಯ ವೇಳೆಯಲ್ಲಿ) ಬೆಳಗ್ಗೆ11ಗಂಟೆಯಿಂದ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-07-2023 ಸಂಜೆ 5.30ರ ವರೆಗೆ
ಶುಲ್ಕ ಪಾವತಿಗೆ ಕೊನೆಯ ದಿನಾಂಕ: 25-07-2023

ಸಹಾಯವಾಣಿ ಸಂಖ್ಯೆ: 080-23460460
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ:
https://cetonline.karnataka.gov.in/kea/

ಯಾವೆಲ್ಲಾ ಹುದ್ದೆಗಳಿಗೆ ನೇಮಕ?

1. ಕಲ್ಯಾಣ ಅಧಿಕಾರಿ (ಗ್ರೂಪ್‌ ಸಿ) -12 (ಉಳಿಕೆ ಮೂಲ ವೃಂದ-9 ಕಲ್ಯಾಣ ಕರ್ನಾಟಕ-3)
2.ಕ್ಷೇತ್ರ ನಿರೀಕ್ಷಕರು (ಗ್ರೂಪ್‌ ಸಿ) – 60 (ಉಳಿಕೆ ಮೂಲ ವೃಂದ-45 ಕಲ್ಯಾಣ ಕರ್ನಾಟಕ-15)
3.ಪ್ರಥಮ ದರ್ಜೆ ಸಹಾಯಕರು (ಗ್ರೂಪ್‌ ಸಿ) -12 (ಉಳಿಕೆ ಮೂಲ ವೃಂದ-8 ಕಲ್ಯಾಣ ಕರ್ನಾಟಕ-4)
4.ಆಪ್ತ ಸಹಾಯಕರು(ಗ್ರೂಪ್‌ ಸಿ)- 02 (ಉಳಿಕೆ ಮೂಲ ವೃಂದ-2)
5.ದ್ವಿತೀಯ ದರ್ಜೆ ಸಹಾಯಕರು (ಗ್ರೂಪ್‌ ಸಿ) -100 (ಉಳಿಕೆ ಮೂಲ ವೃಂದ-64 ಕಲ್ಯಾಣ ಕರ್ನಾಟಕ-36)

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ (Click Here ) ಮಾಡಿ.

ಯಾವ ಹುದ್ದೆಗೆ ಏನು ವಿದ್ಯಾರ್ಹತೆ?

1. ಕಲ್ಯಾಣ ಅಧಿಕಾರಿ
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

2. ಕ್ಷೇತ್ರ ನಿರೀಕ್ಷಕರು
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

3. ಪ್ರಥಮ ದರ್ಜೆ ಸಹಾಯಕರು
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

4.ಆಪ್ತ ಸಹಾಯಕರು
ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಜೊತೆಗೆ ಡಿಪ್ಲೊಮ ಇನ್ ಕಂಪ್ಯೂಟರ್ ಅಪ್ಲಿಕೇಶನ್ಸ್ ಹೊಂದಿರಬೇಕು ಮತ್ತು ಟೈಪಿಂಗ್ ಜ್ಞಾನ ಇರಬೇಕು.

5. ದ್ವಿತೀಯ ದರ್ಜೆ ಸಹಾಯಕರು
ಅಭ್ಯರ್ಥಿಯು ಪಿಯುಸಿ ಅಥವಾ ತತ್ಸಮಾನ ಅರ್ಹತೆಯನ್ನು ಪಡೆದಿರಬೇಕು.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ಯಾವ ಹುದ್ದೆಗೆ ವೇತನ ಎಷ್ಟು?

1. ಕಲ್ಯಾಣ ಅಧಿಕಾರಿ (Welfare Officers) – ರೂ. 37,900-70,850
2. ಕ್ಷೇತ್ರ ನಿರೀಕ್ಷಕರು (Field Inspectors) – ರೂ. 33,450-62,600
3. ಪ್ರಥಮ ದರ್ಜೆ ಸಹಾಯಕರು (First Division Assistant ) – ರೂ. 27,650-52,650
4.ಆಪ್ತ ಸಹಾಯಕರು (Personal Assistant)- ರೂ.27,650-52,650
5. ದ್ವಿತೀಯ ದರ್ಜೆ ಸಹಾಯಕರು (Second Division Assistant) – ರೂ.21,400-42,000

ವಯೋಮಿತಿ ಎಷ್ಟು?

ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ಅಭ್ಯರ್ಥಿಗೆ ಗರಿಷ್ಠ ವಯೋಮಿತಿ 35 ವರ್ಷ. ಪ್ರವರ್ಗ- 2ಎ, 2ಬಿ, 3ಎ,3ಬಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 38 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗುತ್ತದೆ.

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 1,000 ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 750 ರೂ., ಅಂಗವಿಕಲ ಅಭ್ಯರ್ಥಿಗಳು ಮತ್ತು ಮಾಜಿ ಸೈನಿಕರು 250 ರೂ. ನಿಗದಿಪಡಿಸಲಾಗುತ್ತದೆ. ಅರ್ಜಿ ಸಲ್ಲಿಸುವಾಗ ಚಲನ್‌ ಪಡೆದು ಇ-ಅಂಚೆ ಕಚೇರಿ ಮೂಲಕ ಶುಲ್ಕವನ್ನು ಪಾವತಿಸಲು ಅವಕಾಶ ನೀಡಲಾಗುತ್ತದೆ.

ಅರ್ಜಿ ಶುಲ್ಕ ಪಾವತಿಸಲು ಇಲ್ಲಿ ಕ್ಲಿಕ್‌ (Click Here ) ಮಾಡಿ.

ನೇಮಕ ಹೇಗೆ?

ಆಹಾರ ಮತ್ತು ನಾಗರೀಕ ಸರಬರಾಜು ನಿಗಮ(ನಿ)ದಲ್ಲಿನ ಹುದ್ದೆಗಳನ್ನು ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ (ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಮತ್ತು ಆಯ್ಕೆ) (ಸಾಮಾನ್ಯ) ನಿಯಮಗಳು 2014ರಡಿ ನಿರ್ದಿಷ್ಟಪಡಿಸಲಾದ ಮತ್ತು ಕರ್ನಾಟಕ ನಾಗರೀಕ ಸೇವೆಗಳು (ಲಿಪಿಕ ಹುದ್ದೆಗಳ ನೇಮಕಾತಿ) ನಿಯಮಗಳು 1978ರಡಿ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಲಾಗುತ್ತದೆ.

ಇದನ್ನೂ ಓದಿ :KFCSC Recruitment 2023 : ಆಹಾರ ನಿಗಮದಲ್ಲಿ 386 ಹುದ್ದೆ; ನೇಮಕದ ಸಂಪೂರ್ಣ ಮಾಹಿತಿ ಪ್ರಕಟ

ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಮುಂದೆ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಪರೀಕ್ಷೆಯ ಪಠ್ಯಕ್ರಮವನ್ನೂ ಕೆಇಎ ವೆಬ್‌ಸೈಟ್‌ನಲ್ಲಿ ಒದಗಿಸಲಾಗುತ್ತದೆ. ಆಫ್‌ಲೈನ್‌ನಲ್ಲಿ- ಒಎಂಆರ್‌ ಮಾದರಿಯಲ್ಲಿ ಈ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಬೆಳಗಾವಿ, ಕಲಬುರಗಿ, ವಿಜಯಪುರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಪರೀಕ್ಷಾ ಕೇಂದ್ರಗಳಿರಲಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

SBI SO Recruitment 2023: ಎಸ್‌ಬಿಐಯಲ್ಲಿದೆ 439 ಹುದ್ದೆ; ಪದವಿ ಹೊಂದಿದವರು ಅರ್ಜಿ ಸಲ್ಲಿಸಿ

SBI SO Recruitment 2023: ಎಸ್‌ಬಿಐ (SBI) 439 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಕ್ಟೋಬರ್‌ 6, 2023ರ ಒಳಗೆ ಅರ್ಜಿ ಸಲ್ಲಿಸಬಹುದು.

VISTARANEWS.COM


on

Edited by

sbi
Koo

ನವ ದೆಹಲಿ: ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಉದ್ಯೋಗ ಹುಡುಕುವವರಿಗೆ ಎಸ್‌ಬಿಐ(SBI)ಉತ್ತಮ ಅವಕಾಶ ಒದಗಿಸುತ್ತಿದೆ. 439 ವಿಶೇಷ ಅಧಿಕಾರಿಗಳನ್ನು(Specialist Officer-SO) ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಇರುವ ಶಾಖೆಗಳಿಗೆ ನೇಮಕಾತಿ ನಡೆಯಲಿದೆ ಎಂದು ನೋಟಿಫಿಕೇಷನ್‌ನಲ್ಲಿ ತಿಳಿಸಲಾಗಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಅಕ್ಟೋಬರ್‌ 6, 2023.

ವಿದ್ಯಾರ್ಹತೆ

SBI SO 2023 ನೋಟಿಪಿಕೇಷನ್‌ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಂಪ್ಯೂಟರ್‌ ಸೈನ್ಸ್‌, ಇನ್ಫಾರ್ಮೇಶನ್‌ ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್‌ ಅಥವಾ ಸಾಫ್ಟ್‌ವೇರ್‌ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು. ಅಲ್ಲದೆ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಥವಾ ಸರ್ಕಾರಿ ನಿಯಂತ್ರಕ ಸಂಸ್ಥೆಗಳಿಂದ ಅನುಮೋದಿಸಲ್ಪಟ್ಟ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಇದೇ ಕ್ಷೇತ್ರಗಳಲ್ಲಿ ಸ್ನಾತಕೋತ್ತರ ಪದವಿ (MCA ಅಥವಾ M. Tech/M.Sc.) ಹೊಂದಿದವರೂ ಅರ್ಹರು.

ಅರ್ಜಿ ಶುಲ್ಕ

ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್‌ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಪಾವತಿಸಬೇಕು. ಎಸ್ಸಿ, ಎಸ್ಟಿ ಮತ್ತು ಪಿಡಬ್ಲ್ಯೂಡಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳ ಶುಲ್ಕವನ್ನು ಮನ್ನಾ ಮಾಡಲಾಗಿದೆ. ಸಾಮಾನ್ಯ ಅಭ್ಯರ್ಥಿಗಳ ಶುಲ್ಕವನ್ನು ಮರುಪಾವತಿಸಲಾಗುವುದಿಲ್ಲ.

ಆಯ್ಕೆ ವಿಧಾನ

ವಿವಿಧ ಹಂತಗಳ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಮೊದಲು ಅರು ಸಲ್ಲಿಸಿದವರ ಶಾರ್ಟ್‌ ಲಿಸ್ಟ್‌ ಮಾಡಲಾಗುತ್ತದೆ. ಬಳಿಕ ಆಯ್ದ ಹುದ್ದೆಗಳಿಗೆ ಪರೀಕ್ಷೆ ನಡೆಯುತ್ತದೆ. ಅದರಲ್ಲಿ ಆಯ್ಕೆಯಾದವರ ಸಂದರ್ಶನ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಜನರಲ್‌ ಆಪ್ಟಿಟ್ಯೂಡ್‌(General Aptitude) ಮತ್ತು ಪ್ರೊಫೆಷನಲ್‌ ನಾಲೆಡ್ಜ್‌ (Professional Knowledge) ಎನ್ನುವ ಎರಡು ಹಂತಗಳಿರುತ್ತವೆ.

ಇದನ್ನೂ ಓದಿ: Job Alert: ಸರ್ಕಾರಿ ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿವೆ ಭರಪೂರ ಅವಕಾಶಗಳು

ವಯೋಮಿತಿ

ಅಸಿಸ್ಟೆಂಟ್‌ ಮ್ಯಾನೇಜರ್- 32 ವರ್ಷ
ಅಸಿಸ್ಟೆಂಟ್‌ ಜನರಲ್ ಮ್ಯಾನೇಜರ್- 45 ವರ್ಷ
ಮ್ಯಾನೇಜರ್- 38 ವರ್ಷ
ಡೆಪ್ಯುಟಿ ಮ್ಯಾನೇಜರ್- 35 ವರ್ಷ
ಚೀಫ್‌ ಮ್ಯಾನೇಜರ್- 42 ವರ್ಷ
ಪ್ರೊಜೆಕ್ಟ್ ಮ್ಯಾನೇಜರ್- 35 ವರ್ಷ
ಸೀನಿಯರ್‌ ಪ್ರೊಜೆಕ್ಟ್ ಮ್ಯಾನೇಜರ್ 38 ವರ್ಷ

ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಸುವ ವಿಧಾನ

  • ಮೊದಲು ಅಧಿಕೃತ ವೆಬ್‌ಸೈಟ್ SBI sbi.co.in. ಕ್ಲಿಕ್‌ ಮಾಡಿ
  • ನೋಂದಣಿ ಮಾಡಿಕೊಳ್ಳಿ
  • ನೋಂದಣಿಯಾದ ಬಳಿಕ ಲಾಗಿನ್‌ ಪೇಜ್‌ಗೆ ಹೋಗಿ
  • ರುಜುವಾತುಗಳನ್ನು ನಮೂದಿಸಿ
  • ಲಾಗಿನ್‌ ಬಟನ್‌ ಕ್ಲಿಕ್‌ ಮಾಡಿ
  • ಪ್ರಾಥಮಿಕ ಮಾಹಿತಿಗಳಾದ ಹೆಸರು, ಜನ್ಮ ದಿನಾಂಕ, ವಿಳಾಸ, ಶೈಕ್ಷಣಿಕ ಅರ್ಹತೆ, ಪ್ರಸ್ತುತದ ಉದ್ಯೋಗ ಮುಂತಾದ ಮಾಹಿತಿ ಒದಗಿಸಿ
  • ಮಾಹಿತಿಯನ್ನು ಸೇವ್‌ ಮಾಡಿ Validate and Next ಬಟನ್‌ ಕ್ಲಿಕ್‌ ಮಾಡಿ
  • ನಿಮ್ಮ ಫೋಟೊ ಮತ್ತು ಸಹಿಯನ್ನು ಅಪ್‌ಲೋಡ್‌ ಮಾಡಿ
  • ಅಗತ್ಯವಾದ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ
  • ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಿ (ನೆಟ್‌ ಬ್ಯಾಂಕಿಂಗ್‌, ಕ್ರೆಡಿಟ್‌ ಕಾರ್ಡ್‌, ಡೆಬಿಟ್‌ ಕಾರ್ಡ್‌, ಯುಪಿಐ ಮೂಲಕ ಪಾವತಿಸುವ ಅವಕಾಶವಿದೆ.)
  • Submit ಬಟನ್‌ ಮೇಲೆ ಕ್ಲಿಕ್‌ ಮಾಡಿ
  • ಕೊನೆಯದಾಗಿ ಭವಿಷ್ಯದ ಅಗತ್ಯಗಳಿಗಾಗಿ ಅರ್ಜಿಯ ಪ್ರಿಂಟ್‌ ಔಟ್‌ ತೆಗೆದಿಡಿ

ಇನ್ನಷ್ಟು ಉದ್ಯೋಗದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

Continue Reading

ಉದ್ಯೋಗ

Indian Coast Guard: 290 ನಾವಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, ಅಪ್ಲೈ ದಿನಾಂಕ ವಿಸ್ತರಣೆ

Indian Coast Guard: ಇಂಡಿಯನ್‌ ಕೋಸ್ಟ್‌ ಗಾರ್ಡ್‌(Indian Coast Guard)ಖಾಲಿ ಇರುವ 290 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ ಲೈನ್‌ ಮೂಲಕ ಸೆಪ್ಟಂಬರ್‌ 27ರೊಳಗೆ ಆಸಕ್ತರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Edited by

coast guard
Koo

ದೇಶಕ್ಕಾಗಿ ಸೇವೆ ಸಲ್ಲಿಸಬೇಕು ಎಂದುಕೊಂಡಿರುವವರಿಗೆ ಇಲ್ಲಿದೆ ಗುಡ್‌ ನ್ಯೂಸ್‌. ಇಂಡಿಯನ್‌ ಕೋಸ್ಟ್‌ ಗಾರ್ಡ್‌(Indian Coast Guard) ಖಾಲಿ ಇರುವ 290 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ನಾವಿಕ(General Duty) 260 ಮತ್ತು ನಾವಿಕ(Domestic Branch) 30 ಹುದ್ದೆಗಳಿವೆ. ಕಡಲ ತೀರದ ರಕ್ಷಣೆಯ ಮೂಲಕ ತಾಯಿ ನಾಡಿಗಾಗಿ ಸೇವೆ ಸಲ್ಲಿಸಲಿರುವ ಅಪೂರ್ವ ಅವಕಾಶ ಇದಾಗಿದೆ. ಈ ಹಿಂದೆ ಆನ್‌ಲೈನ್ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 8 ಕೊನೆಯ ದಿನ ಎಂದು ಹೇಳಲಾಗಿತ್ತಾದರೂ ಇದೀಗ ಸಮಯಾವಕಾಶವನ್ನು ಸೆಪ್ಟಂಬರ್‌ 27ರವರೆಗೆ ವಿಸ್ತರಿಸಲಾಗಿದೆ.

ವಿದ್ಯಾರ್ಹತೆ

ನಾವಿಕ(Domestic Branch) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು Council of Boards of School Education (COBSE) ಮಾನ್ಯತೆ ಪಡೆದ ಮಂಡಳಿಯಿಂದ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು +2 ಕೋರ್ಸ್‌ನಲ್ಲಿ ಗಣಿತ ಮತ್ತು ಭೌತಶಾಸ್ತ್ರ ವನ್ನು ಓದಿದವರು ನಾವಿಕ(General Duty) ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು ಎಂದು ಪ್ರಕಟಣೆ ತಿಳಿಸಿದೆ. ತಮ್ಮ ಹುದ್ದೆಯ ಬಗ್ಗೆ ಪ್ರಾಥಮಿಕ ಜ್ಞಾನ ಹೊಂದಿರುವುದು ಕಡ್ಡಾಯ.

ವೇತನದ ವಿವರ

ನಾವಿಕ(General Duty)-21700-69,100 ರೂ., ನಾವಿಕ(Domestic Branch)-21700-69,100 ರೂ. ವೇತನ ನಿಗದಿ ಪಡಿಸಲಾಗಿದೆ. ಇದಲ್ಲದೆ ಕೋಸ್ಟ್‌ ಗಾರ್ಡ್‌ ತನ್ನ ಸದಸ್ಯರಿಗೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮತ್ತು ಸಾಹಸಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ಅವಕಾಶವನ್ನೂ ಒದಗಿಸಲಿದೆ.

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 22 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯಸ್ಸಿನಲ್ಲಿ ರಿಯಾಯಿತಿ ಇದೆ. ಎಸ್‌.ಸಿ. ಮತ್ತು ಎಸ್‌.ಟಿ. ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒ.ಬಿ.ಸಿ. ಅಭ್ಯರ್ಥಿಗಳಿಗೆ 3 ವರ್ಷಗಳ ರಿಯಾಯಿತಿ ಅನ್ವಯವಾಗಲಿದೆ.

ಆಯ್ಕೆ ವಿಧಾನ

ಅಭ್ಯರ್ಥಿಗಳನ್ನು ವಿವಿಧ ಹಂತಗಳ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು. ಆರಂಭದಲ್ಲಿ ಅಭ್ಯರ್ಥಿಗಳು ಪರೀಕ್ಷೆ ಬರೆಯಬೇಕು. ಅದರಲ್ಲಿ ಉತ್ತೀರ್ಣರಾದವರನ್ನು ಫಿಸಿಕಲ್‌ ಫಿಟ್ನೆಸ್‌ ಪರೀಕ್ಷೆಗೆ ಕರೆಯಲಾಗುತ್ತದೆ. ಇದರಲ್ಲಿ 1.6 ಕಿ.ಮೀ.ಯನ್ನು 7 ನಿಮಿಷಗಳಲ್ಲಿ ತಲುಪಬೇಕು ಮತ್ತು 20 ಸ್ಕ್ವಾಟ್‌ ಅಪ್ಸ್‌, 10 ಪುಶ್‌ ಅಪ್‌ ಮಾಡುವಂತಿರಬೇಕು. ಬಳಿಕ ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಕೊನೆಯ ಹಂತದಲ್ಲಿ ಭಾರತೀಯ ಕೋಸ್ಟ್ ಗಾರ್ಡ್ ಸಂಬಂಧಿತ ಮಂಡಳಿಗಳು, ವಿಶ್ವವಿದ್ಯಾಲಯಗಳು ಮತ್ತು ರಾಜ್ಯ ಸರ್ಕಾರಗಳ ಮೂಲಕ ಎಲ್ಲಾ ಮೂಲ ದಾಖಲೆಗಳ ಸಮಗ್ರ ಪರಿಶೀಲನೆಯನ್ನು ಕೈಗೊಳ್ಳುತ್ತದೆ.

ಅರ್ಜಿ ಶುಲ್ಕ

ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 300 ರೂ. ಪಾವತಿಸಬೇಕು. ಎಸ್‌.ಸಿ. ಮತ್ತು ಎಸ್‌.ಟಿ. ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಬೇಕು. ನೆಟ್‌ ಬ್ಯಾಂಕಿಂಗ್‌, ಕ್ರೆಡಿಟ್‌/ಡೆಬಿಟ್‌ ಕಾರ್ಡ್‌ ಅಥವಾ ಯುಪಿಐ ಮೂಲಕ ಹಣ ಪಾವತಿಸಬಹುದಾಗಿದೆ.

ಇದನ್ನೂ ಓದಿ: Job Alert: ಸರ್ಕಾರಿ ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿವೆ ಭರಪೂರ ಅವಕಾಶಗಳು

ಹೆಚ್ಚಿನ ಮಾಹಿತಿಗೆ ಇಂಡಿಯಾ ಕೋಸ್ಟ್‌ ಗಾರ್ಡ್ ವೆಬ್‌ ಸೈಟ್‌ ಕ್ಲಿಕ್‌ ಮಾಡಿ. ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

Continue Reading

ಉದ್ಯೋಗ

Job Alert: ಸರ್ಕಾರಿ ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿವೆ ಭರಪೂರ ಅವಕಾಶಗಳು

Job Alert : ಸರ್ಕಾರಿ ಉದ್ಯೋಗ (government job) ಹುಡುಕುವವರಿಗೆ ಗುಡ್‌ನ್ಯೂಸ್‌. ಬ್ಯಾಂಕ್‌‌ (bank) ಸೇರಿ ವಿವಿಧ ಕಡೆಗಳಲ್ಲಿ ಬಾಕಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ (online) ಮೂಲಕ ಅರ್ಜಿ ಸಲ್ಲಿಸಬಹುದು.

VISTARANEWS.COM


on

Edited by

job alert
Koo

ನವದೆಹಲಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲೂ ಸರ್ಕಾರಿ ಉದ್ಯೋಗಕ್ಕಿರುವ(Government job) ಬೇಡಿಕೆ ಕಡಿಮೆಯಾಗಿಲ್ಲ. ಅದಲ್ಲಿನ ಭದ್ರತೆ, ಇತರ ಸೌಲಭ್ಯಗಳ ಕಾರಣದಿಂದ ಇಂದಿಗೂ ಯುವ ಜನತೆ ಸರಕಾರಿ ಉದ್ಯೋಗದ ಕಡೆಗೆ ಗಮನ ಹರಿಸುತ್ತಿದೆ. ಅದಕ್ಕೆ ತಕ್ಕಂತೆ ಸದ್ಯ ವಿವಿಧ ಸರಕಾರಿ ಮೂಲಗಳು ಈ ವಾರ ಉದ್ಯೋಗ ಭರ್ತಿ ಮಾಡುವ ನಿಟ್ಟಿನಲ್ಲಿ ನೋಟಿಫಿಕೇಷನ್‌ ಹೊರಡಿಸಿದ್ದು ನೀವು ಅರ್ಜಿ ಸಲ್ಲಿಸಬಹುದಾಗಿದೆ. ಮಧ್ಯಪ್ರದೇಶ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (MPPSC), ಐಡಿಬಿಐ(IDBI) ಬ್ಯಾಂಕ್‌ ಸೇರಿದಂತೆ ವಿವಿಧ ಕಡೆಗಳಲ್ಲಿ ಲಭ್ಯವಿರುವ ಉದ್ಯೋಗವಕಾಶಗಳ ಮಾಹಿತಿ ಇಲ್ಲಿದೆ.

MPPSCನಲ್ಲಿ 227 ಹುದ್ದೆ ಖಾಲಿ

ಪಿಸಿಎಸ್‌ (PCS)ಹುದ್ದೆಗಳನ್ನು ಭರ್ತಿ ಮಾಡಲು ಮಧ್ಯ ಪ್ರದೇಶ ಪಬ್ಲಿಕ್‌ ಸರ್ವಿಸ್‌ ಕಮಿಷನ್‌-MPPSC ಈಗಾಗಲೇ ಕಾರ್ಯಾರಂಭಿಸಿದೆ. ಸೆಪ್ಟಂಬರ್‌ 22ರಂದು ನೋಟಿಫಿಕೇಷನ್‌ ಹೊರಡಿಸಿದ್ದು, ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ MPPSCನ ಅಧಿಕೃತ ವೆಬ್‌ ಸೈಟ್‌ mppsc.mp.gov.in. ಭೇಟಿ ನೀಡಿ. ಸೂಚನೆ ಪ್ರಕಾರ ಡಿಸೆಂಬರ್‌ 12ರಂದು ಪರೀಕ್ಷೆ ನಡೆಯಲಿದೆ. ಸುಮಾರು 227 PCS ಹುದ್ದೆಗಳನ್ನು ಭರ್ತಿ ಮಾಡುವುದಾಗಿ MPPSC ತಿಳಿಸಿದೆ. ಮಧ್ಯ ಪ್ರದೇಶದವರು ಮತ್ತು ಇತರ ಯಾವುದೇ ರಾಜ್ಯದವರು ಅರ್ಜಿ ಸಲ್ಲಿಸಬಹುದು. ಯಾವುದೇ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರು.

UPPSCಯಲ್ಲಿದೆ 2,240 ಹುದ್ದೆಗಳು

ಉತ್ತರ ಪ್ರದೇಶ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPPSC) ಸ್ಟಾಫ್‌ ನರ್ಸ್‌ ಹುದ್ದೆಗೆ ನೋಂದಣಿ ಮಾಡುವ ದಿನಾಂಕವನ್ನು ವಿಸ್ತರಿಸಿದೆ. ಅಭ್ಯರ್ಥಿಗಳು ಸೆಪ್ಟಂಬರ್‌ 29ರ ತನಕ ಪರೀಕ್ಷೆಗಾಗಿ ನೋಂದಣಿ ಮಾಡಬಹುದಾಗಿದೆ. ಒಟ್ಟು 2,240 ಸ್ಟಾಫ್‌ ನರ್ಸ್‌ ಹುದ್ದೆಗಳನ್ನು ಭರ್ತಿ ಮಾಡುವ ಯೋಜನೆ ಹಾಕಿಕೊಳ್ಳಲಾಗಿದ್ದು ಅದರಲ್ಲಿ 2,069 ಮಹಿಳೆಯರು ಮತ್ತು 171 ಪುರುಷ ನರ್ಸ್‌ಗಳು ಸೇರಿದ್ದಾರೆ. ಅಭ್ಯರ್ಥಿಗಳು uppsc.up.nic.in. ಮೂಲಕ ನೋಂದಣಿ ಮಾಡಿಕೊಳ್ಳಬೇಕು.

BTSCಯಲ್ಲಿ ಖಾಲಿ ಇದೆ 1,279 ಟ್ರೇಡ್‌ ಇನ್‌ಸ್ಟ್ರಕ್ಟರ್ ಹುದ್ದೆ

ಬಿಹಾರ ಟೆಕ್ನಿಕಲ್‌ ಸರ್ವಿಸ್‌ ಕಮಿಷನ್‌(BTSC) ಖಾಲಿ ಇರುವ ಒಟ್ಟು 1,279 ಟ್ರೇಡ್‌ ಇನ್ಟ್ರಕ್ಟರ್‌ ಹುದ್ದೆಗಳ ಭರ್ತಿಗೆ ನೋಟಿಫಿಕೇಷನ್‌ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ ಸೈಟ್‌ btsc.bih.nic.in. ಮೂಲಕ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಅಕ್ಟೋಬರ್‌ 18. ವಿವಿಧ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಬೋಧನೆ ಮಾಡಲು ಇವರನ್ನು ನೇಮಿಸಲಾಗುವುದು. ಅಭ್ಯರ್ಥಿಗಳು ಪದವಿ ಅಥವಾ ಡಿಪ್ಲೋಮಾ ಓದಿರಬೇಕು.

ಇದನ್ನೂ ಓದಿ: Border Roads Organisation : ಗಡಿ ರಸ್ತೆಗಳ ಕಾರ್ಮಿಕರು ಮೃತಪಟ್ಟರೆ ಸರ್ಕಾರಿ ಸೌಲಭ್ಯಗಳು, ಕೇಂದ್ರ ಸರ್ಕಾರದ ಯೋಜನೆ

IDBI ಬ್ಯಾಂಕ್‌ನಲ್ಲಿ 600 ಹುದ್ದೆಗಳು

IDBI ಬ್ಯಾಂಕ್‌ ಜ್ಯೂನಿಯರ್‌ ಅಸಿಸ್ಟೆಂಟ್‌ ಮ್ಯಾನೇಜರ್‌(Grade 0) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಒಟ್ಟು 600 ಹುದ್ದೆಗಳಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್‌ idbibank.in.ಗೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬೇಕು. ಸೆಪ್ಟಂಬರ್‌ 30 ಹೆಸರು ನೋಂದಾಯಿಸಲು ಕೊನೆಯ ದಿನ. ಪರೀಕ್ಷೆ ಅಕ್ಟೋಬರ್‌ 20ರಂದು ನಡೆಯುವ ಸಾಧ್ಯತೆ ಇದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವವರು ಕನಿಷ್ಠ 20 ವರ್ಷ ದಾಟಿರಬೇಕು ಮತ್ತು ಗರಿಷ್ಠ 25 ವರ್ಷದ ಒಳಗಿರಬೇಕು.

Continue Reading

ಉದ್ಯೋಗ

Great Learning Survey: ಭಾರತದ ಐಟಿಯೇತರ ಕ್ಷೇತ್ರದಲ್ಲಿ ಡೇಟಾ ಸೈನ್ಸ್, ಅನಾಲಿಟಿಕ್ಸ್ ಉದ್ಯೋಗ ಹೆಚ್ಚಳ!

Great Learning Survey: ಕಳೆದ ವರ್ಷಕ್ಕೆ ಹೋಲಿಸಿದರೆ ಸ್ವದೇಶೀ ಐಟಿಯೇತರ ಸಂಸ್ಥೆಗಳಲ್ಲಿ ಅನಾಲಿಟಿಕ್ಸ್ ಮತ್ತು ಡೇಟಾ ಸೈನ್ಸ್ ಉದ್ಯೋಗಾವಕಾಶ ಶೇಕಡಾ 20 ರಷ್ಟು ಹೆಚ್ಚಾಗಿದೆ.

VISTARANEWS.COM


on

Edited by

Data Science
Koo

ಬೆಂಗಳೂರು, ಕರ್ನಾಟಕ: ವೃತ್ತಿಪರ ಮತ್ತು ಉನ್ನತ ಶಿಕ್ಷಣ ವಿಭಾಗದಲ್ಲಿ ಪ್ರಮುಖ ಜಾಗತಿಕ ಮುಂದಾಳಾದ ಗ್ರೇಟ್ ಲರ್ನಿಂಗ್(Great Learning), ಭಾರತದಲ್ಲಿ ಅನಾಲಿಟಿಕ್ಸ್ (analytics) ಮತ್ತು ಡೇಟಾ ಸೈನ್ಸ್ (Data Science) ಉದ್ಯೋಗಗಳು 2023ರ ವರದಿಯನ್ನು ಪ್ರಕಟಿಸಿದೆ. ಡೇಟಾ-ಚಾಲಿತ ನಿರ್ಧಾರಗಳು ಸಂಸ್ಥೆಗಳಿಗೆ ಯಾವಾಗಲೂ ಪ್ರಮುಖವಾಗಿದ್ದರೂ, ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್ ನಲ್ಲಿರುವ ಒಟ್ಟಾರೆ ಉದ್ಯೋಗಗಳ ಸಂಖ್ಯೆ ಕಳೆದ 12 ತಿಂಗಳುಗಳಲ್ಲಿ ಕುಸಿತವನ್ನು ದಾಖಲಿಸಿದೆ. ಚಾಲ್ತಿಯಲ್ಲಿರುವ ಜಾಗತಿಕ ಸ್ಥೂಲ ಆರ್ಥಿಕ ಅನಿಶ್ಚಿತತೆಯನ್ನು ಒಳಗೊಂಡಂತೆ ಅಂಶಗಳ ಸಂಯೋಜನೆಯು, ವಿಶೇಷವಾಗಿ ಐಟಿ ಉದ್ಯಮದಲ್ಲಿ ಈ ಪಾತ್ರಗಳ ಮೇಲೆ ಪ್ರಭಾವ ಬೀರುತ್ತಿದೆ. ಈ ವಲಯದಲ್ಲಿ ಬದಲಾಗುತ್ತಿರುವ ಉದ್ಯೋಗಗಳ ಅವಕಾಶದ ಕುರಿತು ವರದಿಯು ದೃಷ್ಟಿಕೋನವನ್ನು ನೀಡುತ್ತದೆ ಮತ್ತು ಲಭ್ಯವಿರುವ ಅವಕಾಶಗಳನ್ನು ಉತ್ತಮವಾಗಿ ಬಳಸಿಕೊಳ್ಳಲು ವೃತ್ತಿಪರರಿಗೆ ಸಹಾಯ ಮಾಡುತ್ತದೆ. ಹಾಗಾಗಿ, ಕಳೆದ ವರ್ಷಕ್ಕೆ ಹೋಲಿಸಿದರೆ ಸ್ವದೇಶೀ ಐಟಿಯೇತರ ಸಂಸ್ಥೆಗಳಲ್ಲಿ ಅನಾಲಿಟಿಕ್ಸ್ ಮತ್ತು ಡೇಟಾ ಸೈನ್ಸ್‌ ಉದ್ಯೋಗಾವಕಾಶ ಶೇಕಡಾ 20 ರಷ್ಟು ಹೆಚ್ಚಾಗಿದೆ
.
ಈ ವರದಿಯನ್ನು ವಿವಿಧ ಉದ್ಯೋಗ ಸೈಟ್ ಗಳಿಂದ ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್ ಗೆ ಸಂಬಂಧಿಸಿದ ಡೇಟಾವನ್ನು ಒಗ್ಗೂಡಿಸುವ ಎಐಎಂ ರಿಸರ್ಚ್ ನಿಂದ ಅಭಿವೃದ್ಧಿಪಡಿಸಲಾಗಿದೆ. 2023 ರಲ್ಲಿ ಬಿ ಎಫ್ ಎಸ್ ಐ ವಲಯ ಅತ್ಯಧಿಕ ಡೇಟಾ ಅನಾಲಿಟಿಕ್ಸ್ ಉದ್ಯೋಗದ ಪಾಲಿನ ಕುರಿತು ವರದಿ ಮಾಡಿದೆ

2023ರಲ್ಲಿ ಬಿ ಎಫ್ ಎಸ್ ಐ ವಲಯ ಭಾರತದ ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್ ಉದ್ಯೋಗಗಳ ಏಕೈಕ-ಅತಿದೊಡ್ಡ ಪಾಲನ್ನು ಎಂದರೆ ಒಟ್ಟಾರೆಯಾಗಿ 1/3 ರಷ್ಟು ಉದ್ಯೋಗಗಳಿಗೆ ಸಾಕ್ಷಿಯಾಯಿತು. ಅಪಾಯ ನಿರ್ವಹಣೆ, ವಂಚನೆ ಪತ್ತೆ ಮತ್ತು ಗ್ರಾಹಕ ಸೇವೆಯಂತಹ ಕಾರ್ಯಾಚರಣೆಗಳನ್ನು ಹೆಚ್ಚಿಸಲು ಎಐ/ಎಂಎಲ್ ಮತ್ತು ದೊಡ್ಡ ಡೇಟಾ ಅನಾಲಿಟಿಕ್ಸ್ ನಂತಹ ಹೊಸ ತಂತ್ರಜ್ಞಾನಗಳ ಬಳಕೆಯಿಂದ ಈ ಬೆಳವಣಿಗೆ ದಾಖಲಿಸಲಾಗಿದೆ.

ಪ್ರತಿಯೊಂದು ಕಾರ್ಯದಲ್ಲಿ ಡೇಟಾ ಸೈನ್ಸ್ ಬಳಸುವುದರಿಂದ, ಹಣಕಾಸು ಸಂಸ್ಥೆಗಳು ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳಲು ಹೆಚ್ಚಿನ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಪ್ರಾರಂಭಿಸುತ್ತಿವೆ.

ಐಟಿ ಉದ್ಯೋಗಗಳ ಪಾಲು ಗಮನಾರ್ಹ ಇಳಿಕೆ

ಒಟ್ಟಾರೆ ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್ ಉದ್ಯೋಗಗಳಲ್ಲಿ ಐಟಿ ವಲಯದ ಉದ್ಯೋಗಗಳ ಪಾಲು ಕಳೆದ ವರ್ಷದಿಂದ ಗಮನಾರ್ಹ ಇಳಿಕೆ ಕಂಡಿದೆ. ವಿಶೇಷವಾಗಿ ಹೆಚ್ಚಿನ ಸಂಖ್ಯೆಯ ಐಟಿ ವಲಯದ ಕ್ಲಯಂಟ್ ಗಳಿರುವ ಯು ಎಸ್ ಎ ಮತ್ತು ಯುರೋಪ್‌ನಲ್ಲಿ, ಇದು ಜಾಗತಿಕ ಹಿಂಜರಿತದ ಪ್ರವೃತ್ತಿಗಳಿಗೆ ಕಾರಣವೆಂದು ಹೇಳಬಹುದು. ಹಾಗೆಯೇ, 2022 ಕ್ಕೆ ಹೋಲಿಸಿದರೆ ವಿದ್ಯುತ್ ಮತ್ತು ಗೃಹಬಳಕೆಯಲ್ಲಿನ ಉದ್ಯೋಗಗಳು ಒಟ್ಟಾರೆಯಾಗಿ ಶೇಕಡಾವಾರು ಕಡಿಮೆಯಾಗಿದೆ, ಆದರೆ ರೀಟೇಲ್ ಮತ್ತು ಸಿಪಿಜಿ ಹಾಗೂ ಫಾರ್ಮಾ ಮತ್ತು ಆರೋಗ್ಯ ಸೇವೆಗಳಲ್ಲಿ ಈ ವರ್ಷ ಏರಿಕೆಯಾಗಿದೆ.

ಎಂ ಎನ್ ಸಿ ಐಟಿ ಮತ್ತು ಕೆಪಿಓ ಗಳು ಈ ವರ್ಷದ ಉದ್ಯೋಗಗಳಲ್ಲಿ ಇನ್ನೂ ಹೆಚ್ಚಿನ ಪಾಲನ್ನು ಹೊಂದಿವೆ; 2022 ಕ್ಕೆ ಹೋಲಿಸಿದರೆ ದೇಶೀಯ ಐಟಿಯೇತರ ಸಂಸ್ಥೆಗಳು ಉದ್ಯೋಗಾವಕಾಶಗಳಲ್ಲಿ ಹೆಚ್ಚಿನ ಜಿಗಿತ ವರದಿ ಮಾಡಿದೆ

2023ರಲ್ಲಿ ಭಾರತದಲ್ಲಿ ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್ ಉದ್ಯೋಗಗಳಿಗೆ ಗರಿಷ್ಠ ಅವಕಾಶಗಳು ಎಂ ಎನ್ ಸಿ ಐಟಿ ಮತ್ತು ಕೆಪಿಓ ಗಳಲ್ಲಿವೆ, ಏಕೆಂದರೆ ಈ ಸಂಸ್ಥೆಗಳು ಸಾಮಾನ್ಯವಾಗಿ ದೊಡ್ಡ ಗ್ರಾಹಕರೊಂದಿಗೆ ಕೆಲಸ ಮಾಡುವುದರಿಂದ, ದೊಡ್ಡ ಪ್ರಮಾಣದ ಡೇಟಾ ನಿರ್ವಹಿಸುತ್ತವೆ. ಆದರೂ, ಮುಖ್ಯವಾಗಿ ಪಾಶ್ಚಿಮಾತ್ಯ ಜಗತ್ತಿನಲ್ಲಿ ಆರ್ಥಿಕ ಹಿಂಜರಿತದ ಕಠಿಣ ಆರ್ಥಿಕ ಸನ್ನಿವೇಶಗಳು ವಲಯದ ಮೇಲೆ ಪರಿಣಾಮ ಬೀರುವುದರಿಂದ ಡೇಟಾ ಉದ್ಯೋಗಗಳ ಪಾಲು ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದೆ. ಎಂ ಎನ್ ಸಿ ಐಟಿ ಮತ್ತು ಕೆಪಿಓ ಗಳಲ್ಲಿ ಡೇಟಾ ಮತ್ತು ಅನಾಲಿಟಿಕ್ಸ್ ಉದ್ಯೋಗಾವಕಾಶಗಳು ಹಿಂದಿನ ವರ್ಷ 2022 ಕ್ಕೆ ಹೋಲಿಸಿದರೆ ಶೇಕಡಾ 21 ಅಂಕಗಳಷ್ಟು (ಪಿಪಿ) ಕಡಿಮೆಯಾಗಿದೆ, ದೇಶೀಯ ಐಟಿ ಯೇತರ ಸಂಸ್ಥೆಗಳು ಮತ್ತು ದೇಶೀಯ ಐಟಿ ಮತ್ತು ಕೆಪಿಓ ಸಂಸ್ಥೆಗಳು ಕ್ರಮವಾಗಿ 20 ಪಿಪಿ ಮತ್ತು 8 ಪಿಪಿ ಯಷ್ಟು ಹೆಚ್ಚಾಗಿದೆ.

ಹಿರಿಯ ವೃತ್ತಿಪರರಿಗೆ ಉದ್ಯೋಗ ಕುಸಿತ

ಮಧ್ಯಮ ಹಂತದ ವೃತ್ತಿಪರರಿಗೆ ಲಭ್ಯವಿರುವ ಉದ್ಯೋಗಗಳು ಬೆಳೆಯುತ್ತಿರುವಾಗ, ಹಿರಿಯ ಹಂತದ ವೃತ್ತಿಪರರಿಗೆ ಮುಕ್ತ ಉದ್ಯೋಗಗಳಲ್ಲಿ ಕುಸಿತ ವರದಿಯಾಗಿದೆ. ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್ ಉದ್ಯೋಗಗಳ ಸಂಖ್ಯೆಯನ್ನು ಪ್ರಾಥಮಿಕವಾಗಿ 2–5 ವರ್ಷಗಳು ಮತ್ತು 5–7 ವರ್ಷಗಳ ಅನುಭವದ ಆವರಣದಲ್ಲಿ ವೃತ್ತಿಪರರತ್ತ ಕೇಂದ್ರೀಕರಿಸಲಾಗಿದೆ. ಈ ಎರಡು ಮಾಜಿ ಕೆಲಸದ ವರ್ಗಗಳು ಐತಿಹಾಸಿಕವಾಗಿ ಮೆಚ್ಚಿನದ್ದಾಗಿದೆ, ಏಕೆಂದರೆ ಅವುಗಳ ಹೊಂದಾಣಿಕೆ ಮತ್ತು ಹೆಚ್ಚು ಹಿರಿಯ ವಯಸ್ಸಿನ ಗುಂಪುಗಳಿಗೆ ಹೋಲಿಸಿದರೆ ಸಂಸ್ಥೆಗಳಿಗೆ ಕಡಿಮೆ ವೆಚ್ಚ ಉಂಟಾಗುತ್ತದೆ. ಇದಲ್ಲದೇ, ಈ ಆವರಣದಲ್ಲಿ ಬರುವ ವೃತ್ತಿಪರರು ಸಂಬಂಧಿತ ಕೌಶಲ್ಯ ಮತ್ತು ಪ್ರಾಯೋಗಿಕ ಅನುಭವವನ್ನು ಹೊಂದಿದ್ದಾರೆ, ಅವರಿಗೆ ಫ್ರೆಶರ್‌ಗಳ ಮೇಲೆ ಒಂದು ಹಂತ ಹೆಚ್ಚು ನೀಡುತ್ತದೆ. 2022 ರಲ್ಲಿ, 2–5 ವರ್ಷಗಳು ಮತ್ತು 5–7 ವರ್ಷಗಳ ಮಾಜಿ-ಕೆಲಸದ ಆವರಣಕ್ಕೆ ಉದ್ಯೋಗಗಳ ಪಾಲು ಒಂದೇ ಆಗಿತ್ತು. ಅಂದಿನಿಂದ ಎರಡೂ ಗುಂಪುಗಳಲ್ಲಿ ಸ್ಥಾನಗಳಲ್ಲಿ ಹೆಚ್ಚಳ ಕಂಡುಬಂದಿದೆ, 2-5 ವರ್ಷಗಳ ಅನುಭವದ ಆವರಣವು ಆರ್ಥಿಕ ಹಿಂಜರಿತದ ನಡುವೆ ವೆಚ್ಚ ಕಡಿತದ ಕ್ರಮಗಳ ಪರಿಣಾಮವಾಗಿ ಉದ್ಯೋಗಾವಕಾಶದಲ್ಲಿ ಹೆಚ್ಚಿನ ಏರಿಕೆ (13 ಪಿಪಿ) ದಾಖಲಿಸಿದೆ.

ಹೆಚ್ಚುತ್ತಿರುವ ಸಂಸ್ಥೆಗಳ ಆದ್ಯತೆ

ಹೆಚ್ಚು ಅನುಭವೀ ವ್ಯಕ್ತಿಗಳಿಗೆ (7+ ವರ್ಷಗಳು) ಅವಕಾಶಗಳು ಕಡಿಮೆಯಾಗಿದೆ-ಕಠಿಣ ಸ್ಥೂಲ ಆರ್ಥಿಕ ಪರಿಸ್ಥಿತಿಗಳು ಮತ್ತು ಹೊಸದಾಗಿ, ದುಬಾರಿ ನೇಮಕ ಮಾಡುವ ಬದಲು ಆಂತರಿಕವಾಗಿ ತಮ್ಮ ಉದ್ಯೋಗಿಗಳನ್ನು ಹೆಚ್ಚಿಸಲು ಸಂಸ್ಥೆಗಳು ಆದ್ಯತೆ ನೀಡಿವೆ.

ಅನಾಲಿಟಿಕ್ಸ್ ಮತ್ತು ಡೇಟಾ ಸೈನ್ಸ್ ತಜ್ಞರಿಗೆ 6-10 ಎಲ್ ಪಿ ಎ ವೇತನ ಶ್ರೇಣಿಯಲ್ಲಿ ಹೆಚ್ಚು ಸ್ಥಾನಗಳು ಲಭ್ಯವಿದೆ
6–10 ಎಲ್ ಪಿ ಎ ಮತ್ತು 10–15 ಎಲ್ ಪಿ ಎ ನಡುವಿನ ಆದಾಯ ವ್ಯಾಪ್ತಿಯಲ್ಲಿರುವ ಮುಕ್ತ ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್ ಉದ್ಯೋಗಗಳು 2023 ರಲ್ಲಿ ಎಲ್ಲಾ ಡೇಟಾ ಸಂಬಂಧಿತ ಉದ್ಯೋಗಗಳಲ್ಲಿ 60% ವರೆಗೆ ಇರುತ್ತವೆ. ಈ ಅಂಕಿಅಂಶವು 2-5 ಮತ್ತು 5-7 ವರ್ಷಗಳ ಅನುಭವ ಹೊಂದಿರುವವರಿಗೆ ಹೆಚ್ಚುತ್ತಿರುವ ಉದ್ಯೋಗಗಳ ಸಂಖ್ಯೆಗೆ ಅನುಗುಣವಾಗಿದೆ. ಈ ವರ್ಷ ಫ್ರೆಶರ್‌ಗಳು ಮತ್ತು ಹೆಚ್ಚು ಅನುಭವಿ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಸಂಸ್ಥೆಗಳು ಉತ್ಸುಕರಾಗಿಲ್ಲ ಎನ್ನುವ ಅಂಶವನ್ನು ಮಾಹಿತಿಯು ಪುನರುಚ್ಚರಿಸುತ್ತದೆ.

ದೇಶದ ಟೆಕ್ ರಾಜಧಾನಿಯಾಗಿರುವ ಬೆಂಗಳೂರು 2022 ರಿಂದ ಸ್ವಲ್ಪ ಕುಸಿತದ ಹೊರತಾಗಿಯೂ ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್ ಉದ್ಯೋಗಗಳಲ್ಲಿ ಅತಿದೊಡ್ಡ ಪಾಲನ್ನು ಹೊಂದಿದೆ. ದೆಹಲಿ ಎನ್ ಸಿ ಆರ್‍, ಹೈದರಾಬಾದ್ ಮತ್ತು ಚೆನ್ನೈನಂತಹ ಇತರ ಸ್ಥಳಗಳು ಇತರೆ ಪ್ರತಿಭಾ ಕೇಂದ್ರಗಳತ್ತ ವಲಸೆ ಹೋಗುವುದರಿಂದ ತಮ್ಮ ಪಾಲನ್ನು ಹೆಚ್ಚಿಸಿವೆ. ಬೆಂಗಳೂರು ನಿಧಾನವಾಗಿ ಸಂತೃಪ್ತ ಬಿಂದುವನ್ನು ತಲುಪುತ್ತಿದೆ. ನಿರ್ದಿಷ್ಟವಾಗಿ ಹೇಳುವುದಾದರೆ, ಚೆನ್ನೈನ ಆಟೋಮೋಟಿವ್ ಮತ್ತು ಉತ್ಪಾದನಾ ವಲಯಗಳು ಮತ್ತು ಹೈದರಾಬಾದ್‌ನ ಪ್ರವರ್ಧಮಾನಕ್ಕೆ ಬರುತ್ತಿರುವ ಔಷಧೀಯ ಮತ್ತು ಜೈವಿಕ ತಂತ್ರಜ್ಞಾನ ಉದ್ಯಮ ವಲಯಗಳು ಡೇಟಾ ಚಾಲಿತ ವಿಧಾನಗಳನ್ನು ಅಳವಡಿಸಿಕೊಂಡಿರುವುದರಿಂದ, ಹೆಚ್ಚುವರಿಯಾಗಿ ಡೇಟಾ ಸೈನ್ಸ್ ವೃತ್ತಿಪರರಿಗೆ ಹೆಚ್ಚಿನ ಬೇಡಿಕೆಯನ್ನು ಸೃಷ್ಟಿಸುತ್ತಿವೆ.

ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್

ಎಂಬಿಎ ಪದವಿ ಹೆಚ್ಚುತ್ತಿರುವ ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್ ಉದ್ಯೋಗಗಳಿಗೆ ಪೂರ್ವ ಅಗತ್ಯತೆಯಾಗಿದೆ, ಇದು ಕ್ಷೇತ್ರದ ಬಲವಾದ ವ್ಯಾಪಾರ ಏಕೀಕರಣವನ್ನು ಎತ್ತಿ ತೋರಿಸುತ್ತದೆ.

ಕಠಿಣ ಆರ್ಥಿಕ ಪರಿಸ್ಥಿತಿಗಳಿಂದಾಗಿ ಕೈಗಾರಿಕೆಗಳಾದ್ಯಂತ ಫ್ರೆಶರ್‌ಗಳ ನೇಮಕಾತಿಯಲ್ಲಿನ ಕುಸಿತದಿಂದ ಇಂಜಿನಿಯರಿಂಗ್ ಪದವಿ ಪಡೆದವರಿಗೆ ಡೇಟಾ ಸೈನ್ಸ್ ವಲಯದಲ್ಲಿ ಖಾಲಿ ಹುದ್ದೆಗಳಲ್ಲಿ ಇಳಿಕೆ ಕಂಡುಬಂದಿದೆ. ಫ್ರೆಶರ್‌ಗಳನ್ನು ನೇಮಿಸಿಕೊಳ್ಳುವುದು ಅತ್ಯಧಿಕ ವೆಚ್ಚದ ವ್ಯವಹಾರವಾಗಿದೆ ಏಕೆಂದರೆ ಸಂಸ್ಥೆಗಳು ಅವರನ್ನು ಯೋಜನೆಗಳಲ್ಲಿ ನಿಯೋಜಿಸುವ ಮೊದಲು ತರಬೇತಿ ನೀಡಬೇಕಾಗುತ್ತದೆ. ಆದರೂ, ಈ ವರ್ಷ ಎಂಬಿಎ ಪದವೀಧರರಿಗೆ ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್ ಉದ್ಯೋಗಗಳು ಹೆಚ್ಚಿವೆ ಏಕೆಂದರೆ ಸಂಸ್ಥೆಗಳು ಅಸ್ತಿತ್ವದಲ್ಲಿರುವ ತಂಡಗಳನ್ನು ನಿರ್ವಹಿಸಲು ಕೇವಲ ಡೇಟಾ ಸೈನ್ಸ್ ಕೌಶಲ್ಯಗಳನ್ನು ಮಾತ್ರವಲ್ಲದೇ ವ್ಯವಸ್ಥಾಪಕ ಕೌಶಲ್ಯಗಳನ್ನು ಹೊಂದಿರುವ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಹೆಚ್ಚು ಆಸಕ್ತಿ ವಹಿಸುತ್ತಿವೆ.

ಈ ಸುದ್ದಯನ್ನೂ ಓದಿ: Jio Institute: ಎಐ, ಡೇಟಾ ಸೈನ್ಸ್‌‌ನಲ್ಲಿ ಬೋಧಕರಿಗೆ ಕಾರ್ಯಕ್ರಮ; ಜಿಯೋ ಸಂಸ್ಥೆ ಜತೆ ಕೈಜೋಡಿಸಿದ ಎಐಸಿಟಿಇ

ಗ್ರೇಟ್ ಲರ್ನಿಂಗ್‌ನ ಸಹ-ಸಂಸ್ಥಾಪಕ ಹರಿ ಕೃಷ್ಣನ್ ನಾಯರ್ ಹೀಗೆ ಹೇಳಿದ್ದಾರೆ, “ಭಾರತವು ಜಾಗತಿಕವಾಗಿ ವ್ಯಾಪಾರ ಕಾರ್ಯಾಚರಣೆಗಳನ್ನು ಬೆಂಬಲಿಸುವ ಬೃಹತ್ ಡಿಜಿಟಲ್ ರೂಪಾಂತರದ ಮಧ್ಯದಲ್ಲಿದೆ ಮತ್ತು ಹೆಚ್ಚು ಪರಿಣಾಮಕಾರಿ ವ್ಯಾಪಾರ ಕಾರ್ಯಾಚರಣೆಗಳನ್ನು ಸಾಧಿಸಲು ಡೇಟಾ-ಚಾಲಿತ ನಿರ್ಧಾರಗಳನ್ನು ಅಳವಡಿಸಿಕೊಳ್ಳುವತ್ತ ಪ್ರಮುಖವಾಗಿ ಮುನ್ನಡೆದಿದೆ. ಈ ವರ್ಷದ ವರದಿಯು ಕೆಲವು ಅಚ್ಚರಿಗಳನ್ನು ಹುಟ್ಟುಹಾಕಿದೆ-ಆದರೆ ಒಮ್ಮೆ ಆರ್ಥಿಕತೆ ಮರುಕಳಿಸಿದರೆ, ಭಾರತದಲ್ಲಿ ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್ ಉದ್ಯೋಗಗಳು ಮತ್ತಷ್ಟು ಬೆಳೆಯುತ್ತವೆಶಾಗೂ ಹೆಚ್ಚು ವಿಶಿಷ್ಟವಾದ ಉದ್ಯೋಗ ಪ್ರೊಫೈಲ್‌ಗಳನ್ನು ತೆರೆಯುತ್ತವೆ ಎಂದು ನಾವು ನಿರೀಕ್ಷಿಸಬಹುದು. ‘ಭಾರತದಲ್ಲಿ ಅನಾಲಿಟಿಕ್ಸ್ ಮತ್ತು ಡೇಟಾ ಸೈನ್ಸ್ ಉದ್ಯೋಗಗಳು 2023’ ವರದಿಯು ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳಿಗೆ ದೇಶದಲ್ಲಿ ಚಾಲ್ತಿಯಲ್ಲಿರುವ ಉದ್ಯೋಗ ಪ್ರವೃತ್ತಿಗಳ ಬಗ್ಗೆ ಆಳವಾದ ನೋಟವನ್ನು ನೀಡುವ ಮೂಲಕ ತಮ್ಮ ವೃತ್ತಿ ಗುರಿಗಳನ್ನು ಅನುಸರಿಸಲು ಮಾರ್ಗದರ್ಶನ ನೀಡುತ್ತದೆ ಎಂದು ನಾವು ಭಾವಿಸುತ್ತೇವೆ.

Continue Reading
Advertisement
HD Kumaraswamy Press meet vs congress government
ಕರ್ನಾಟಕ5 mins ago

BJP JDS alliance : ಸೆಕ್ಯುಲರಿಸಂ ಅನ್ನು ನಾಶ ಮಾಡಿದ್ದೇ ಕಾಂಗ್ರೆಸ್‌: ಎಚ್.ಡಿ. ಕುಮಾರಸ್ವಾಮಿ ಕಿಡಿ

ODI AUS
Live News24 mins ago

ind vs Aus : ಮೂರನೇ ಏಕ ದಿನ ಪಂದ್ಯ; ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದಿಂದ ಬ್ಯಾಟಿಂಗ್ ಆಯ್ಕೆ

Madhya Pradesh Rape News
ಕ್ರೈಂ36 mins ago

ಲೈಂಗಿಕ ದೌರ್ಜನ್ಯ; ರಕ್ತಸಿಕ್ತ ಬಾಲಕಿ ಮನೆಮನೆಗೆ ತೆರಳಿ ಗೋಳಾಡಿದರೂ ಸಹಾಯ ಮಾಡದ ನಿರ್ದಯಿಗಳು!

CM siddaramaiah at Chamarajanagar
ಕರ್ನಾಟಕ47 mins ago

CM Siddaramaiah: CWRC ಆದೇಶಕ್ಕೆ ಆಕ್ಷೇಪಣೆ ಸಲ್ಲಿಸಲು ನಿರ್ಧಾರ ಎಂದ ಸಿದ್ದರಾಮಯ್ಯ

Google
EXPLAINER48 mins ago

ವಿಸ್ತಾರ Explainer: Google Birthday: ಗೂಗಲ್‌ನ 25 ವರ್ಷದ ಇತಿಹಾಸ ಹೇಗಿತ್ತು? ಒಂದು ನೋಟ ಇಲ್ಲಿದೆ

HD DeveGowda HD Kumaraswamy and PM Narendra Modi on BJP JDS alliance
ಕರ್ನಾಟಕ56 mins ago

BJP JDS alliance : ವಿಜಯದಶಮಿ ನಂತರ ಜೆಡಿಎಸ್‌ ಸೀಟು ಹಂಚಿಕೆ ಅಂತಿಮ ಮಾತುಕತೆ!

Nayanthara Vignesh Shivan twin
South Cinema1 hour ago

Actress Nayanthara: ನಯನತಾರಾ -ವಿಘ್ನೇಶ್ ಶಿವನ್ ಅವಳಿ ಮಕ್ಕಳ ಮೊದಲ ಬರ್ತ್‌ಡೇ; ಕ್ಯೂಟ್‌ ಫೋಟೊಸ್ ಔಟ್‌!

Murder case in Kolara
ಕರ್ನಾಟಕ1 hour ago

Murder Case : ಕುಡಿದ ಮತ್ತಿನಲ್ಲಿ ಮೂತ್ರ ಸಿಡಿಸಿದ; ಪ್ರಶ್ನೆ ಮಾಡಿದ ವ್ಯಾಪಾರಿಯ ಮನೆಗೆ ನುಗ್ಗಿ ಕೊಂದ ಕಿರಾತಕ!

Team India
ಕ್ರಿಕೆಟ್1 hour ago

World Cup 2023 : ಭಾರತ ವಿರುದ್ಧ ಗೆದ್ದವರು ವಿಶ್ವ ಕಪ್​ ಗೆಲ್ತಾರೆ; ಪಾಕ್​ ತಂಡ ಮಾಜಿ ಆಟಗಾರನ ಭವಿಷ್ಯ

ದೇಶ1 hour ago

Stadium row: ಕ್ರೀಡಾಂಗಣದಲ್ಲಿ ನಾಯಿ ಜತೆ ವಾಕಿಂಗ್‌ ಮಾಡಿದ್ದ ಅಧಿಕಾರಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ!

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

bangalore bandh
ಕರ್ನಾಟಕ1 day ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

dina bhavishya
ಪ್ರಮುಖ ಸುದ್ದಿ9 hours ago

Dina Bhavishya : ನಿಮಗೆ ಆಗದವರು ಪಿತೂರಿ ಮಾಡ್ಬಹುದು ಎಚ್ಚರ!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ2 days ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ2 days ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ2 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ2 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ3 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

ಟ್ರೆಂಡಿಂಗ್‌