Karnataka Budget 2023 : ಒಂದು ಲಕ್ಷ ಸರ್ಕಾರಿ ಹುದ್ದೆಗಳಿಗೆ ನೇಮಕ; ಬಜೆಟ್‌ನಲ್ಲಿ ಬೊಮ್ಮಾಯಿ ಘೋಷಣೆ Vistara News

ಉದ್ಯೋಗ

Karnataka Budget 2023 : ಒಂದು ಲಕ್ಷ ಸರ್ಕಾರಿ ಹುದ್ದೆಗಳಿಗೆ ನೇಮಕ; ಬಜೆಟ್‌ನಲ್ಲಿ ಬೊಮ್ಮಾಯಿ ಘೋಷಣೆ

ರಾಜ್ಯ ಸರ್ಕಾರವು ಖಾಲಿ ಇರುವ ಒಂದು ಲಕ್ಷ ಸರ್ಕಾರಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಿದೆ ಎಂದು ಶುಕ್ರವಾರ ಮಂಡಿಸಲಾದ ಬಜೆಟ್‌ನಲ್ಲಿ (Karnataka Budget 2023) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

VISTARANEWS.COM


on

Job news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸರ್ಕಾರಿ ನೌಕರರಿಯ ನಿರೀಕ್ಷೆಯಲ್ಲಿದ್ದ ರಾಜ್ಯದ ಯುವ ಜನತೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಒಂದು ಲಕ್ಷ ಸರ್ಕಾರಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಬಜೆಟ್‌ನಲ್ಲಿ (Karnataka Budget 2023) ಪ್ರಕಟಿಸಲಾಗಿದೆ.

ʻʻರಾಜ್ಯದ ಆಡಳಿತ ವ್ಯವಸ್ಥೆಯನ್ನು ಬಲಪಡಿಸಿ, ನಾಗರಿಕರಿಗೆ ಅತ್ಯುತ್ತಮ ಸೇವೆಯನ್ನು ಒದಗಿಸಲು ಹಾಗೂ ಯುವ ಜನತೆಗೆ ಹೆಚ್ಚಿನ ಉದ್ಯೋಗವಕಾಶವನ್ನು ಒದಗಿಸಲು ನಮ್ಮ ಸರ್ಕಾರವು ಒಂದು ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಐತಿಹಾಸಿಕ ನಿರ್ಣಯವನ್ನು ಕೈಗೊಂಡಿದೆʼʼ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ವಿಧಾನ ಸಭೆಯಲ್ಲಿ ಮಂಡಿಸಲಾದ ಬಜೆಟ್‌ನಲ್ಲಿ ಘೋಷಿಸಿದ್ದಾರೆ.

ಕಲ್ಯಾಣ ಕರ್ನಾಟಕ (ಹೈಕ) ಭಾಗದ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ನಮ್ಮ ಸರ್ಕಾರವು ನಿರ್ಧರಿಸಿದೆ. ಈ ಎಲ್ಲಾ ಹುದ್ದೆಗಳ ಆಯ್ಕೆ ಪ್ರಕ್ರಿಯೆಯನ್ನು 2023-24ನೇ ಸಾಲಿನಲ್ಲಿಯೇ ಪೂರ್ಣಗೊಳಿಸಿ ನೇಮಕಾತಿ ಆದೇಶವನ್ನು ನೀಡಲಾಗುವುದು ಎಂದು ಅವರು ಬಜೆಟ್‌ನಲ್ಲಿ ಪ್ರಕಟಿಸಿದ್ದಾರೆ.

ಬದುಕುವ ದಾರಿ ಘೋಷಣೆ

ವಿವಿಧ ಕಾರಣಗಳಿಂದ ವಿದ್ಯಾಭ್ಯಾಸವನ್ನು ಮುಂದುವರಿಸಲು ಸಾಧ್ಯವಾಗದೇ ಇರುವ ಯುವಜನರಿಗೆ ಐಟಿಐಗಳಲ್ಲಿ 3 ತಿಂಗಳ ಅವಧಿಯ ವೃತ್ತಿಪರ ಸರ್ಟಿಫಿಕೇಟ್ ತರಬೇತಿ ನೀಡುವ ʻಬದುಕುವ ದಾರಿ’ ಎಂಬ ಹೊಸ ಯೋಜನೆಯನ್ನು ಶುಕ್ರವಾರ ಮಂಡಿಸಲಾಗಿರುವ ರಾಜ್ಯ ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ.

ಈ ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ 1,500 ರೂ. ಗಳ ಶಿಷ್ಯವೇತನವನ್ನು ನೀಡಲಾಗುತ್ತದೆ. ಈ ತರಬೇತಿಯನ್ನು ಪೂರ್ಣಗೊಳಿಸಿರುವವರಿಗೆ Apprenticeship ಕಾರ್ಯಕ್ರಮದಡಿಯಲ್ಲಿ 3 ತಿಂಗಳಿಗೆ ಮಾಸಿಕ 1,500 ರೂ. ಗಳ ಶಿಶಿಕ್ಷು ಭತ್ಯೆಯನ್ನು ಸಹ ನೀಡಲಾಗುವುದು ಎಂದು ತಿಳಿಸಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ನಿರುದ್ಯೋಗಿಗಳಿಗೆ 2 ಸಾವಿರ ನೆರವು

ಪದವಿ ಶಿಕ್ಷಣವನ್ನು ಮುಗಿಸಿ, ಮೂರು ವರ್ಷಗಳ ನಂತರವೂ ಯಾವುದೇ ಉದ್ಯೋಗ ದೊರೆಯದ ಯುವಕರಿಗೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೆಗೆದುಕೊಳ್ಳಲು ಪ್ರೋತ್ಸಾಹ ನೀಡಲು ʻಯುವಸ್ನೇಹಿ’ ಎಂಬ ಹೊಸ ಯೋಜನೆಯಡಿ ತಲಾ 2,000 ರೂ. ಗಳ ಒಂದು ಬಾರಿಯ ಆರ್ಥಿಕ ನೆರವು ನೀಡಲಾಗತ್ತದೆ ಎಂದೂ ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ.

ಯುವಜನರ ಸರ್ವತೋಮುಖ ಅಭಿವೃದ್ಧಿಯ ನಿಟ್ಟಿನಲ್ಲಿ ಯುವ ನೀತಿ 2022 ಅನ್ನು ರೂಪಿಸಲಾಗಿದೆ. ಗ್ರಾಮೀಣ ಯುವಕರ ಸ್ವಯಂ ಉದ್ಯೋಗವನ್ನು ಪ್ರೋತ್ಸಾಹಿಸಲು 2022-23ನೇ ಸಾಲಿನಲ್ಲಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಚನೆಯಾದ ಸ್ವಾಮಿ ವಿವೇಕಾನಂದ ಯುವಕರ ಜಂಟಿ ಬಾಧ್ಯತಾ ಗುಂಪುಗಳಿಗೆ ತಲಾ 10,000 ರೂ. ನಂತೆ ಸುತ್ತುನಿಧಿ ಹಾಗೂ ಸ್ವಯಂ ಉದ್ಯೋಗ ಚಟುವಟಿಕೆಗಳನ್ನು ಕೈಗೊಳ್ಳಲು ಒಂದು ಲಕ್ಷ ರೂ. ಒಳಗೊಂಡಂತೆ ಬ್ಯಾಂಕ್‌ಗಳ ಸಹಾಯದೊಂದಿಗೆ 5 ಲಕ್ಷ ರೂ. ವರೆಗೆ ಸಹಾಯಧನ ನೀಡಲಾಗುವುದು ಎಂದೂ ತಿಳಿಸಲಾಗಿದೆ.

ಜವಳಿ ಪಾರ್ಕ್‌ ಮೂಲಕ ಉದ್ಯೋಗ

ರಾಯಚೂರು, ಕಲಬುರಗಿ, ವಿಜಯಪುರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನೂತನ ಮೆಗಾ ಜವಳಿ ಪಾರ್ಕ್ ಮತ್ತು ರಾಜ್ಯದ 25 ಸ್ಥಳಗಳಲ್ಲಿ ಮಿನಿ ಜವಳಿ ಪಾರ್ಕ್ ಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸುವ ಮೂಲಕ ಸರ್ಕಾರ ಉದ್ಯೋಗಾವಕಾಶ ಕಲ್ಪಿಸಲಿದೆ.

ಒಟ್ಟಾರೆಯಾಗಿ ಇದರಿಂದಾಗಿ ಸುಮಾರು 25,000 ಜನರಿಗೆ ಉದ್ಯೋಗ ಸೃಜನೆಯಾಗಲಿದೆ ಎಂದು ಬಜೆಟ್‌ನಲ್ಲಿ ಹೇಳಲಾಗಿದೆ.

ರಾಜ್ಯದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ಹಾಗೂ ವಿವಿಧ ವಲಯಗಳಲ್ಲಿ ಹೂಡಿಕೆಗಳನ್ನು ಆಕರ್ಷಿಸಲು ಕರ್ನಾಟಕ ಉದ್ಯೋಗ ನೀತಿ 2022-25, ‘ಕರ್ನಾಟಕ ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-27’ ಹಾಗೂ ‘ವಿಶೇಷ ಹೂಡಿಕೆ ಪ್ರದೇಶ ಕಾಯಿದೆ, 2022’ ಅನ್ನು ಜಾರಿಗೊಳಿಸಲಾಗಿದೆ ಎಂದೂ ಬಜೆಟ್‌ನಲ್ಲಿ ತಿಳಿಸಲಾಗಿದೆ.

ಪ್ರಸ್ತುತ ವರ್ಷದಲ್ಲಿ ರಾಜ್ಯ ಸರ್ಕಾರವು ಅನುಮೋದಿಸಿದ 393 ಕೈಗಾರಿಕಾ ಯೋಜನೆಗಳಿಂದ 2.37 ಲಕ್ಷ ಕೋಟಿ ರೂ. ಗಳ ಬಂಡವಾಳ ಹೂಡಿಕೆಯೊಂದಿಗೆ ಸುಮಾರು 2 ಲಕ್ಷ ಜನರಿಗೆ ಉದ್ಯೋಗಾವಕಾಶ ದೊರೆಯುವ ನಿರೀಕ್ಷೆ ಇದೆ ಎಂದು ಬಜೆಟ್‌ನಲ್ಲಿ ಹೇಳಲಾಗಿದೆ.

ವಿದೇಶದಲ್ಲಿ ಉದ್ಯೋಗ ಪಡೆಯಲು ತರಬೇತಿ

ವಿದೇಶಿ ಉದ್ಯೋಗಾಕಾಂಕ್ಷಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಲು ಅಂತಾರಾಷ್ಟ್ರೀಯ ವಲಸೆ ಕೇಂದ್ರದ ವತಿಯಿಂದ 8 ಜಿಲ್ಲೆಗಳಲ್ಲಿ ಸಂಪನ್ಮೂಲ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯವು 4 ಜಿಲ್ಲೆಗಳಲ್ಲಿ ಪೂರ್ವ ನಿರ್ಗಮನದ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದೆ ಎಂದು ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ.

ಇದನ್ನೂ ಓದಿ : Karnataka Budget 2023: 8 ಲಕ್ಷ ಪಿಯು, ಡಿಗ್ರಿ ವಿದ್ಯಾರ್ಥಿಗಳಿಗೆ ಶುಲ್ಕರಹಿತ ಶಿಕ್ಷಣ, 1000 ‘ಮಕ್ಕಳ ಬಸ್ಸು’

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉದ್ಯೋಗ

Job alert: ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್ ವೈರಾಲಜಿಯಲ್ಲಿ 80 ಹುದ್ದೆ; ಡಿಪ್ಲೋಮಾ ಓದಿದವರು ಅರ್ಜಿ ಸಲ್ಲಿಸಿ

Job alert: ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್ ವೈರಾಲಜಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಡಿಸೆಂಬರ್‌ 10 ಕೊನೆಯ ದಿನ.

VISTARANEWS.COM


on

pune
Koo

ಬೆಂಗಳೂರು: ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್ ವೈರಾಲಜಿ (National Institute of Virology-NIV) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸುಮಾರು 80 ಹುದ್ದೆಗಳು ಖಾಲಿ ಇದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಟೆಕ್ನಿಕಲ್ ಅಸಿಸ್ಟೆಂಟ್ ಮತ್ತು ಟೆಕ್ನಿಶಿಯನ್ ಹುದ್ದೆಗಳು ಇವಾಗಿದ್ದು, ತಾತ್ಕಾಲಿಕ ಆಧಾರದ ಮೇಲೆ ಭರ್ತಿ ಮಾಡಲಾಗುವುದು ಎಂದು ಅಧಿಸೂಚನೆ ತಿಳಿಸಿದೆ. ಅರ್ಜಿ ಸಲ್ಲಿಕೆಗೆ ಡಿಸೆಂಬರ್‌ 10 ಕೊನೆಯ ದಿನ (Job alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಟೆಕ್ನಿಕಲ್‌ ಅಸಿಸ್ಟೆಂಟ್‌ (ಗ್ರೂಪ್‌ ಬಿ)- 49 ಹುದ್ದೆಗಳು ಖಾಲಿ ಇದ್ದು, ಡಿಪ್ಲೋಮಾ (ಎಂಜಿನಿಯರಿಂಗ್‌)/ಪದವಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಟೆಕ್ನೀಶಿಯನ್‌ (ಗ್ರೂಪ್‌ ಸಿ)-31 ಹುದ್ದೆಗಳಿದ್ದು, 12ನೇ ತರಗತಿ/ಡಿಪ್ಲೋಮಾ (ಎಂಜಿನಿಯರಿಂಗ್‌) ಓದಿದವರು ಅರ್ಜಿ ಸಲ್ಲಿಸಬಹುದು. ಟೆಕ್ನಿಕಲ್‌ ಅಸಿಸ್ಟೆಂಟ್‌ ಹುದ್ದೆಗೆ ಅರ್ಜಿ ಸಲ್ಲಿಸುವವರ ಗರಿಷ್ಠ ವಯೋಮಿತಿ 30 ವರ್ಷ ಮತ್ತು ಟೆಕ್ನೀಶಿಯನ್‌ ಹುದ್ದೆಗೆ ಗರಿಷ್ಠ ವಯೋಮಿತಿ 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ/ಎಸ್‌ಟಿ 5 ವರ್ಷ, ಒಬಿಸಿ 3 ವರ್ಷ, ಪಿಡಬ್ಲ್ಯುಬಿಡಿ 10 ವರ್ಷ, ಪಿಡಬ್ಲ್ಯುಬಿಡಿ + ಒಬಿಸಿ 13 ವರ್ಷ, ಪಿಡಬ್ಲ್ಯುಬಿಡಿ + ಎಸ್‌ಸಿ/ಎಸ್‌ಟಿ 15 ವರ್ಷಗಳ ಸಡಿಲಿಕೆ ಇದೆ.

ಅರ್ಜಿ ಶುಲ್ಕ

ಎಸ್‌ಸಿ/ಎಸ್‌ಟಿ/ವಿಶೇಷ ಚೇತನರು/ಎಲ್ಲ ವರ್ಗದ ಮಹಿಳೆಯರಿಗೆ ಶುಲ್ಕವಿಲ್ಲ. ಜನರಲ್‌/ಒಬಿಸಿ/ಇಡಬ್ಲ್ಯುಎಸ್‌ ಅಭ್ಯರ್ಥಿಗಳು 300 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕವೇ ಪಾವತಿಸಬೇಕು. ಇದಕ್ಕಾಗಿ ಡೆಬಿಟ್‌, ಕ್ರೆಡಿಟ್‌ ಕಾರ್ಡ್‌, ನೆಟ್‌ ಬ್ಯಾಂಕಿಂಗ್‌ ಬಳಸಬಹುದು.

ಆಯ್ಕೆ ವಿಧಾನ

ಆನ್‌ಲೈನ್‌ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಡಿಸೆಂಬರ್‌ 16 ಮತ್ತು 17ರಂದು ಪರೀಕ್ಷೆ ನಡೆಯಲಿದೆ. ಗಮನಿಸಿ ಪ್ರಶ್ನೆ ಪತ್ರಿಕೆ ಇಂಗ್ಲಿಷ್‌ ಮತ್ತು ಹಿಂದಿಯಲ್ಲಿ ಮಾತ್ರ ಲಭ್ಯ. ತಪ್ಪಾದ ಉತ್ತರಕ್ಕೆ ನೆಗೆಟಿವ್‌ ಅಂಕಗಳಿದ್ದು ಎಚ್ಚರಿಕೆಯಿಂದ ಉತ್ತರ ಬರೆಯಬೇಕು ಎಂದು ಪ್ರಕಟಣೆ ತಿಳಿಸಿದೆ. ಆಯ್ಕೆಯಾದವರಿಗೆ 35,400 ರೂ.-1,12,400 ರೂ. (ಟೆಕ್ನಿಕಲ್‌ ಅಸಿಸ್ಟೆಂಟ್‌ ), 19,900 ರೂ.-63,200 ರೂ. (ಟೆಕ್ನಿಶಿಯನ್) ಮಾಸಿಕ ವೇತನ ಸಿಗಲಿದೆ.

ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸುವ ಮುನ್ನ ನಿಮ್ಮ ವೆಬ್‌ ಕ್ಯಾಮ್‌ ಆನ್‌ ಮಾಡಿಡಿ.
  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
  • ಸೂಕ್ತ ಇಮೇಲ್‌ ಐಡಿ, ಫೋನ್‌ ನಂಬರ್‌ ನಮೂದಿಸಿ
  • ನೋಂದಣಿಯಾದ ಬಳಿಕ ಇಮೇಲ್‌/ಮೊಬೈಲ್‌ ನಂಬರ್‌ಗೆ ಯೂಸರ್‌ ನೇಮ್‌/ಅಪ್ಲಿಕೇಷನ್‌ ನಂಬರ್‌ ಬರಲಿದೆ
  • ಬಳಿಕ ಅಪ್ಲಿಕೇಷನ್‌ ಭರ್ತಿ ಮಾಡಿ. ಗಮನಿಸಿ ಒಮ್ಮೆ ನಮೂದಿಸಿದ ವಿವರಗಳನ್ನು ಎಡಿಟ್‌ ಮಾಡುವ ಆಯ್ಕೆಗಳಿಲ್ಲ. ಹೀಗಾಗಿ ಎಚ್ಚರಿಕೆಯಿಂದ ಅಪ್ಲಿಕೇಷನ್‌ ತುಂಬಿ
  • ಅಗತ್ಯವಾದ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ
  • ಅರ್ಜಿ ಶುಲ್ಕ ಪಾವತಿಸಿ
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ, ಸಂಶಯ ನಿವಾರಣೆಗೆ ಅಧಿಕೃತ ವೆಬ್‌ಸೈಟ್‌ https://niv.icmr.org.in/ಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಪದವೀಧರರಿಗೆ ಗುಡ್‌ನ್ಯೂಸ್‌; ಗೃಹ ಸಚಿವಾಲಯದ 995 ಹುದ್ದೆಗಳಿಗೆ ಅರ್ಜಿ ಆಹ್ವಾನ

Continue Reading

ಉದ್ಯೋಗ

Government employee : ಸರ್ಕಾರಿ ನೌಕರರ ದಶಕಗಳ ಬೇಡಿಕೆ ಈಡೇರಿಕೆ; ಆಸ್ತಿ ಖರೀದಿ ಮತ್ತಷ್ಟು ಸರಳ!

Government employee : ಈಗ ಸರ್ಕಾರಿ ಉದ್ಯೋಗಿಗಳು ಚರ/ ಸ್ಥಿರ ಆಸ್ತಿ ಖರೀದಿಗೆ ಮುಂಚೆ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯಬೇಕಿದೆ. ಈಗ ಈ ನಿಯಮವನ್ನು ಸಡಿಲಿಸಲು ಮುಂದಾಗಿದ್ದು, ಕಾಲಮಿತಿಯಲ್ಲಿ ಸಂಬಂಧಿಸಿದ ಪ್ರಾಧಿಕಾರಕ್ಕೆ ವರದಿ ಮಾಡುವಂತೆ ನಿಯಮ ತರಲು ಮುಂದಾಗಲಾಗಿದೆ.

VISTARANEWS.COM


on

Property Purchase by Government Employee
Koo

ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರಿ ನೌಕರಿಯಲ್ಲಿರುವವರು (Government Job) ಆಸ್ತಿ ಖರೀದಿ (Property Purchase) ಮಾಡಲು ಹರಸಾಹಸವನ್ನೇ ಪಡಬೇಕಿತ್ತು. ಆದರೆ, ರಾಜ್ಯ ಸರ್ಕಾರ ಈ ಸಮಸ್ಯೆಯನ್ನು ನಿವಾರಿಸಲು ಮುಂದಾಗಿದ್ದು, ಶೀಘ್ರದಲ್ಲಿಯೇ ಸರ್ಕಾರಿ ನೌಕರರ (Government employee) ಆಸ್ತಿ ಖರೀದಿ ಪ್ರಕ್ರಿಯೆಯನ್ನು ಸರಳೀಕರಿಸುವತ್ತ ಹೆಜ್ಜೆಯನ್ನಿಟ್ಟಿದೆ. ಈ ನಿಟ್ಟಿನಲ್ಲಿ ಆದೇಶ ಹೊರಬಿದ್ದಲ್ಲಿ ನೌಕರರ ದಶಕಗಳ ಬೇಡಿಕೆ ಈಡೇರಿದಂತೆ ಆಗಲಿದೆ.

ರಾಜ್ಯ ಮಟ್ಟದ ಜಂಟಿ ಸಮಾಲೋಚನಾ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಹೀಗಾಗಿ ಸರ್ಕಾರಿ ನೌಕರರಿಗೆ ಆಸ್ತಿ ಖರೀದಿ ವಿಚಾರದಲ್ಲಿ ಇದ್ದ ತೊಡಕು ಶೀಘ್ರವೇ ಪರಿಹಾರವಾಗಲಿದೆ.

ನಿಯಮ ಸಡಿಲಿಕೆಗೆ ತೀರ್ಮಾನ

ಸರ್ಕಾರಿ ನೌಕರರು ತಮ್ಮ ಸೇವಾವಧಿಯಲ್ಲಿ ಚರ/ ಸ್ಥಿರ ಆಸ್ತಿ ಖರೀದಿ ಮಾಡುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯಬೇಕು ಎಂಬ ನಿಯಮವು ಈಗಾಗಲೇ ಚಾಲ್ತಿಯಲ್ಲಿದೆ. ಈಗ ಈ ನಿಯಮವನ್ನು ಸಡಿಲಿಸಲು ತೀರ್ಮಾನ ಮಾಡಲಾಗಿದೆ. ಇದರ ಅನುಸಾರ ಕಾಲಮಿತಿಯಲ್ಲಿ ಸಂಬಂಧಿಸಿದ ಪ್ರಾಧಿಕಾರಕ್ಕೆ ವರದಿ ಮಾಡುವಂತೆ ಸರಳೀಕೃತ ನಿಯಮದಲ್ಲಿ ಬದಲಾವಣೆ ತರಲಾಗುತ್ತಿದೆ. ಈ ರೀತಿಯಾದರೆ ಸರ್ಕಾರಿ ನೌಕರರು ಸಂಬಂಧಿಸಿದ ಪ್ರಾಧಿಕಾರಕ್ಕೆ ವರದಿ ನೀಡಬೇಕಾಗುತ್ತದೆ.

ಆಸ್ತಿ ಮತ್ತು ಹೊಣೆಗಾರಿಕೆಗಳ ವಿವರ ಪಟ್ಟಿ

ಸರ್ಕಾರಿ ನೌಕರರ ಆಸ್ತಿ ಮತ್ತು ಹೊಣೆಗಾರಿಕೆಗಳ ವಿವರ ಪಟ್ಟಿಯನ್ನು ನಿಗದಿತ ಸಮಯಕ್ಕೆ ಸಲ್ಲಿಸಬೇಕು. ಈ ಬಗ್ಗೆ ಈಗಾಗಲೇ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು, 1996ರ ನಿಯಮಗಳು, ಪರಿಷ್ಕೃತವಾಗಿ ಕರ್ನಾಟಕ ರಾಜ್ಯ ನಾಗರಿಕ ನಾಗರಿಕ ಸೇವಾ (ನಡತೆ) ನಿಯಮಗಳು, 2021 ದಿನಾಂಕ 07/01/2021ರಿಂದ ಜಾರಿಗೆ ಬಂದಿವೆ. ಸದರಿ ನಿಯಮಗಳ ನಿಯಮ 24ರಲ್ಲಿ ಸರ್ಕಾರಿ ನೌಕರರು ಚರ/ ಸ್ಥಿರ ಆಸ್ತಿ ಖರೀದಿ/ ವಿಲೇ ಮಾಡುವುದಕ್ಕೆ ಸಂಬಂಧಿಸಿದಂತೆ ಉಪಬಂಧಗಳನ್ನು ಕಲ್ಪಿಸಲಾಗಿದೆ.

ನೇಮಕಾತಿಗೆ ಮೊದಲು ಸ್ಥಿರ – ಚರಾಸ್ತಿ ವಿವರ ನೀಡಬೇಕು

ಯಾವುದೇ ಸರ್ಕಾರಿ ನೌಕರಿಗೆ ನೇಮಕವಾದಾಗ ಆರಂಭದಲ್ಲಿಯೇ ಅವರು ತಮ್ಮ ಹೆಸರಿನಲ್ಲಿ ಇಲ್ಲವೇ ಕುಟುಂಬ ಸದಸ್ಯರ ಹೆಸರಿನಲ್ಲಾಗಲಿ ಅಥವಾ ತಮಗೆ ಸಂಬಂಧಪಟ್ಟ ಇತರ ವ್ಯಕ್ತಿಯ ಹೆಸರಿನಲ್ಲಿ ಪಿತ್ರಾರ್ಜಿತವಾಗಿ ಬಂದ ಸ್ವಯಂ ಅರ್ಜಿಸಿದ ಅಥವಾ ಗುತ್ತಿಗೆ ಅಥವಾ ಅಡಮಾನದ ಮೇಲೆ ಹೊಂದಿರುವ ಸ್ಥಿರಾಸ್ತಿಯ ಸಂಪೂರ್ಣ ವಿವರಗಳನ್ನು ನೀಡಬೇಕು. ಈ ವಿವರಗಳನ್ನು ನಿಗದಿತ ನಮೂನೆಯಲ್ಲಿ ಪೂರಕ ದಾಖಲೆಗಳೊಂದಿಗೆ ನೇಮಕವಾದ ಮೂರು ತಿಂಗಳೊಳಗೆ ಸಲ್ಲಿಸಬೇಕು.

ವರ್ಷವೂ ನೀಡಬೇಕು ದಾಖಲೆ

ಇದರ ಹೊರತಾಗಿಯೂ ಸರ್ಕಾರಿ ನೌಕರರು ಪ್ರತಿ ವರ್ಷ ಡಿಸೆಂಬರ್ 31ಕ್ಕೆ ತಮ್ಮ ಹಾಗೂ ಕುಟುಂಬದ ಎಲ್ಲ ಸದಸ್ಯರ ಆಸ್ತಿ ವಿವರ ಮತ್ತು ಹೊಣೆಗಾರಿಕೆಗಳ ವಾರ್ಷಿಕ ವಿವರ ಪಟ್ಟಿಯನ್ನು ನೀಡಬೇಕು. ಜತೆಗೆ ನಿಯಮ 24 ರಲ್ಲಿನ ಉಪಬಂಧಗಳಂತೆ ಪ್ರತಿಯೊಬ್ಬ ಸರ್ಕಾರಿ ನೌಕರರು ಚರ ಮತ್ತು ಸ್ಥಿರಾಸ್ತಿಗೆ ಸಂಬಂಧಿಸಿದಂತೆ ನಿಯಮಗಳಲ್ಲಿ ತಿಳಿಸಿರುವ ಸಂದರ್ಭಗಳಲ್ಲಿ ಅನುಮತಿ ಪಡೆಯುವುದು ಹಾಗೂ ವರದಿ ನೀಡುವುದು ಕಡ್ಡಾಯವಾಗಿದೆ. ಒಂದು ವೇಳೆ ಇದರಲ್ಲಿ ವಿಫಲರಾದರೆ, ನಡತೆ ನಿಯಮಗಳಿಗೆ ವ್ಯತಿರಿಕ್ತ ನಡವಳಿಕೆ ಪ್ರದರ್ಶಿಸಿದ ಕಾರಣ ನೀಡಿ ಅಂಥವರ ವಿರುದ್ಧ ಶಿಸ್ತು ಕ್ರಮ ಜರುಗಿಸಬಹುದಾಗಿದೆ.

ಇದನ್ನೂ ಓದಿ: Panic button : ಇಂದಿನಿಂದ ವಾಹನಗಳಿಗೆ ಪ್ಯಾನಿಕ್ ಬಟನ್ ಕಡ್ಡಾಯ; ಅಳವಡಿಸಲು ಆಗುವ ಖರ್ಚೆಷ್ಟು?

ಸಭೆಯ ಇತರ ಪ್ರಮುಖ ನಿರ್ಧಾರಗಳು

  • ಎಲ್ಲ ಇಲಾಖೆಗಳಲ್ಲಿ ಪ್ರತಿ ವರ್ಷ ಮೊದಲ ತಿಂಗಳಿಲ್ಲಿ ಜ್ಯೇಷ್ಠತಾ ಪಟ್ಟಿಯನ್ನು ತಯಾರಿಸಿ ಪ್ರತಿ ಆರು ತಿಂಗಳಿಗೊಮ್ಮೆ ಮುಂಬಡ್ತಿ ಕೋಟಾದಡಿ ಹುದ್ದೆಗಳನ್ನು ಗುರುತಿಸಿ ಪದೋನ್ನತಿ ನೀಡುವುದು.
  • ಲೋಕ ಅದಾಲತ್ ಮಾದರಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ಕಾಲಮಿತಿಯಲ್ಲಿ ನೌಕರರ ಇಲಾಖಾ ವಿಚಾರಣೆಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ನಿರ್ಧರಿಸಲಾಗಿದೆ.
  • ಸರ್ಕಾರಿ ನೌಕರರು ಪಾಸ್‌ಪೋರ್ಟ್‌ಗಳ ನಿರಾಕ್ಷೇಪಣಾ ಪ್ರಮಾಣ ಪತ್ರವನ್ನು ಸಂಬಂಧಿಸಿದ ಕಛೇರಿಯ ಮುಖ್ಯಸ್ಥರಿಂದ ಪಡೆಯುವ ಅವಕಾಶವನ್ನು ಜಾರಿಗೆ ತರುವುದು.
  • ಜಿಪಿಎಫ್ ಉಳಿತಾಯ ಖಾತೆಗಳಿಂದ ಮುಂಗಡ/ ಭಾಗಶಃ ವಾಪಸಾತಿ ಪಡೆಯುವ ಸಂದರ್ಭದಲ್ಲಿ ಇದ್ದ ಕಠಿಣ ನಿಯಮವನ್ನು ಸರಳೀಕರಣಗೊಳಿಸುವುದು.
Continue Reading

ಉದ್ಯೋಗ

PLI Scheme: ನಿರುದ್ಯೋಗಿಗಳಿಗೆ ಗುಡ್‌ನ್ಯೂಸ್‌; ಮೊಬೈಲ್ ಉತ್ಪಾದನಾ ಉದ್ಯಮದಲ್ಲಿ 5 ಲಕ್ಷ ಉದ್ಯೋಗ ಸೃಷ್ಟಿ

PLI Scheme: ಪ್ರೊಡಕ್ಷನ್‌ ಲಿಂಕ್ಡ್‌ ಇನ್‌ಸೆಂಟಿವ್‌ (Production-linked incentive) ಯೋಜನೆಯು (PLI Scheme) ಮೊಬೈಲ್ ಫೋನ್ ಉತ್ಪಾದನಾ ಉದ್ಯಮದಲ್ಲಿ 5,00,000 ಉದ್ಯೋಗಗಳ ಸೃಷ್ಟಿಗೆ ಕಾರಣವಾಗಲಿದೆ ಎಂದು ಕೇಂದ್ರ ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

VISTARANEWS.COM


on

ashwin
Koo

ನೋಯ್ಡಾ: ಪ್ರೊಡಕ್ಷನ್‌ ಲಿಂಕ್ಡ್‌ ಇನ್‌ಸೆಂಟಿವ್‌ (Production-linked incentive) ಯೋಜನೆಯು (PLI Scheme) ಮೊಬೈಲ್ ಫೋನ್ ಉತ್ಪಾದನಾ ಉದ್ಯಮದಲ್ಲಿ 5,00,000 ಉದ್ಯೋಗಗಳ ಸೃಷ್ಟಿಗೆ ಕಾರಣವಾಗಲಿದೆ ಎಂದು ಕೇಂದ್ರ ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ (Union communications, electronics, and information technology minister Ashwini Vaishnaw) ಭರವಸೆ ವ್ಯಕ್ತಪಡಿಸಿದ್ದಾರೆ. ಉತ್ಪಾದನಾ ವಲಯವನ್ನು ಉತ್ತೇಜಿಸುವ ಮತ್ತು ಆಮದನ್ನು ಕಡಿಮೆ ಮಾಡುವ ಗುರಿಯನ್ನು ಭಾರತ ಸರ್ಕಾರದ ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ ಯೋಜನೆ ಹೊಂದಿದೆ.

ನೋಯ್ಡಾದ ಡಿಕ್ಸನ್ ಟೆಕ್ನಾಲಜೀಸ್ (Dixon Technologies’) ಉತ್ಪಾದನಾ ಘಟಕಕ್ಕೆ ಭೇಟಿ ನೀಡಿದ ಅವರು, ʼʼಭಾರತದಲ್ಲಿ ಬಳಸಲಾಗುವ ಮೊಬೈಲ್ ಫೋನ್‌ಗಳ ಪೈಕಿ ಶೇ. 99.2ರಷ್ಟು ಇಲ್ಲೇ ತಯಾರಾಗಿವೆʼʼ ಎಂದು ಹೇಳಿದ್ದಾರೆ. ಡಿಕ್ಸನ್ ಟೆಕ್ನಾಲಜೀಸ್‌ನ ಅಂಗಸಂಸ್ಥೆ ಪ್ಯಾಡ್ಜೆಟ್ ಎಲೆಕ್ಟ್ರಾನಿಕ್ಸ್ ಶಿಯೋಮಿಗಾಗಿ ಸ್ಮಾರ್ಟ್‌ಫೋನ್‌ ಮತ್ತು ಇತರ ಸಂಬಂಧಿತ ಉತ್ಪನ್ನಗಳನ್ನು ತಯಾರಿಸಲಿದೆ. ನೋಯ್ಡಾದ 2.7 ಲಕ್ಷ ಚದರ ಅಡಿ ಉತ್ಪಾದನಾ ಸ್ಥಳದಲ್ಲಿ 256 ಕೋಟಿ ರೂ. ವೆಚ್ಚದಲ್ಲಿ ಈ ಘಟಕ ಕಾರ್ಯ ನಿರ್ವಹಿಸಲಿದೆ. ಇಲ್ಲಿ ವಾರ್ಷಿಕವಾಗಿ 2,5,000,000 ಮೊಬೈಲ್‌ ಫೋನ್‌ ಉತ್ಪಾದನೆಯಾಗಲಿದೆ.

ಮುಂದಿನ 10-12 ತಿಂಗಳಲ್ಲಿ ಈ ಘಟಕ ಸಂಪೂರ್ಣವಾಗಿ ಕಾರ್ಯನಿರ್ವಹಿಸಿದ ನಂತರ ಕಂಪನಿಯು ವಾರ್ಷಿಕ 5,0,000,000 ಯುನಿಟ್ ಉತ್ಪಾದನಾ ಸಾಮರ್ಥ್ಯದ ಮತ್ತೊಂದು ಘಟಕ ಸ್ಥಾಪಿಸಲಿದೆ ಎಂದು ಎಂದು ಡಿಕ್ಸನ್ ಕಾರ್ಯನಿರ್ವಾಹಕ ಅಧ್ಯಕ್ಷ ಸುನಿಲ್ ವಚಾನಿ ಹೇಳಿದ್ದಾರೆ. “ಅಲ್ಲಿ ನಾವು ಕಂಪ್ಯೂಟರ್ ಹಾರ್ಡ್‌ವೇರ್‌ನಂತಹ ಇತರ ಉತ್ಪನ್ನಗಳನ್ನು ತಯಾರಿಸಲಿದ್ದೇವೆʼʼ ಎಂದು ಅವರು ತಿಳಿಸಿದ್ದಾರೆ.

ಕಂಪ್ಯೂಟರ್ ಹಾರ್ಡ್‌ವೇರ್‌ ತಯಾರಿಸಲು ಮತ್ತು ಜೋಡಿಸಲು ಅನುಮತಿ ನೀಡುವಂತೆ ಪ್ಯಾಡ್ಜೆಟ್ ಸಲ್ಲಿಸಿದ್ದ ಅರ್ಜಿಯನ್ನು ಕಳೆದ ತಿಂಗಳು ಪಿಎಲ್ಐ 2.0 ಅಡಿಯಲ್ಲಿ ಅನುಮೋದಿಸಲಾಗಿತ್ತು. ಇದು ಚೀನಾದ ಕಂಪ್ಯೂಟರ್ ದೈತ್ಯ ಲೆನೊವೊಗೆ ಬಿಡಿಭಾಗಗಳನ್ನು ತಯಾರಿಸಿ ಕೊಡಲಿದೆ.

ʼʼಮೊಬೈಲ್ ಬಿಡಿಭಾಗಗಳ ಉತ್ಪಾದನೆಯಲ್ಲಿ ದೇಶೀಯ ಮೌಲ್ಯವರ್ಧನೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆʼʼ ಎಂದು ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. “ಇದೀಗ 12 ಬಿಲಿಯನ್ ಯುಎಸ್ ಡಾಲರ್ ಮೌಲ್ಯದ ಸರಕುಗಳನ್ನು ರಫ್ತು ಮಾಡಲಾಗುತ್ತಿದೆ. ಇದು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. 2022ರಲ್ಲಿ ಇದರ ಮೌಲ್ಯ 11.1 ಬಿಲಿಯನ್ ಅಮೆರಿಕನ್ ಡಾಲರ್ ಆಗಿತ್ತುʼʼ ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ಸಿಬಿಎಸ್‌ಇ 10, 12 ತರಗತಿ ಪರೀಕ್ಷೆಗೆ ಡಿವಿಷನ್, ಡಿಸ್ಟಿಂಕ್ಷನ್ ಘೋಷಣೆ ಇಲ್ಲ!

ಸೈಬರ್‌ ಕ್ರೈಮ್‌ ವಿರುದ್ಧ ಕ್ರಮ

ಇದೇ ವೇಳೆ ಸೈಬರ್‌ ಕ್ರೈಮ್‌ ಬಗ್ಗೆ ಮಾತನಾಡಿದ ಸಚಿವರು, ʼʼಸೈಬರ್‌ ಕ್ರೈಮ್‌ಗೆ ಸಂಬಂಧಿಸಿದಂತೆ ಇತ್ತೀಚೆಗೆ 350ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ. ನಾವು ಆರ್‌ಬಿಐ (ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ) ಜತೆಗೆ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ. ಹೀಗಾಗಿ ಸೈಬರ್ ಅಪರಾಧಗಳ ಸಂಖ್ಯೆ ಕುಸಿದಿದೆ. ಮುಂದಿನ ಕೆಲವು ತಿಂಗಳಲ್ಲಿ ಇನ್ನೂ ಗಣನೀಯವಾಗಿ ಕಡಿಮೆಯಾಗಲಿವೆʼʼ ಎಂದು ಅಶ್ವಿನಿ ವೈಷ್ಣವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಡಿಜಿಟಲ್ ಗುಪ್ತಚರ ಪ್ಲಾಟ್‌ಫಾರ್ಮ್‌ ಮೂಲಕ ವರದಿಯಾದ ಸೈಬರ್ ಅಪರಾಧ ಮತ್ತು ಹಣಕಾಸು ವಂಚನೆಗಳಲ್ಲಿ ಭಾಗಿಯಾಗಿರುವ ಏಳು ಮಿಲಿಯನ್ (70,00000) ಮೊಬೈಲ್ ಸಂಪರ್ಕಗಳನ್ನು ಕಡಿತಗೊಳಿಸಲಾಗಿದೆ ಎಂದು ಹಣಕಾಸು ಸಚಿವಾಲಯ ಇತ್ತೀಚೆಗೆ ತಿಳಿಸಿತ್ತು

Continue Reading

ಉದ್ಯೋಗ

Job Alert: ದ್ವಿತೀಯ ಪಿಯುಸಿ ಪಾಸಾದವರಿಗೆ ಗೋಲ್ಡನ್‌ ಚಾನ್ಸ್‌; 540 ಫಾರೆಸ್ಟ್‌ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

Job Alert: ದ್ವಿತೀಯ ಪಿಯುಸಿ ಪಾಸಾದವರಿಗೆ ಗುಡ್‌ನ್ಯೂಸ್‌. ಖಾಲಿ ಇರುವ ಸುಮಾರು 540 ಫಾರೆಸ್ಟ್‌ ಗಾರ್ಡ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್‌ 30ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.

VISTARANEWS.COM


on

forest guard
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಉತ್ತಮ ಅವಕಾಶವನ್ನು ಕರ್ನಾಟಕ ಅರಣ್ಯ ಇಲಾಖೆ (Karnataka Forest Department-KFD) ಒದಗಿಸುತ್ತಿದೆ. ಖಾಲಿ ಇರುವ ಸುಮಾರು 540 ಫಾರೆಸ್ಟ್‌ ಗಾರ್ಡ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (KFD Recruitment 2023). ಆಸಕ್ತರು ಡಿಸೆಂಬರ್‌ 30ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. 12ನೇ ತರಗತಿ ಅಥವಾ ದ್ವಿತೀಯ ಪಿಯುಸಿ ತೇರ್ಗಡೆಯಾದವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು (Job Alert).

ಹುದ್ದೆಗಳ ವಿವರ

ವಿವಿಧ ವೃತ್ತಗಳು ಮತ್ತು ಅಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆಯ ವಿವರ ಇಲ್ಲಿದೆ. ಬೆಂಗಳೂರು-49, ಬೆಳಗಾವಿ-12, ಬಳ್ಳಾರಿ-29, ಚಾಮರಾಜನಗರ-83, ಚಿಕ್ಕಮಗಳೂರು-52, ಧಾರವಾಡ-5, ಹಾಸನ-18, ಕಲಬುರ್ಗಿ-58, ಕೆನರಾ-33, ಕೊಡಗು-26, ಮಂಗಳೂರು-62, ಮೈಸೂರು-47, ಶಿವಮೊಗ್ಗ-66 ಹುದ್ದೆಗಳಿವೆ.

ವಯೋಮಿತಿ

ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 30, 2023ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿಗೆ ಅನುಗುಣವಾಗಿ ಸಡಿಲಿಕೆ ಲಭ್ಯ. 2ಎ, 2ಬಿ, 3ಎ, 3ಬಿ, ಒಬಿಸಿ ಅಭ್ಯರ್ಥಿಗಳಿಗೆ 2 ವರ್ಷ ಮತ್ತು ಎಸ್‌ಸಿ/ಎಸ್‌ಟಿ/ಪ್ರವರ್ಗ-1 ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ಇದೆ.

ಅರ್ಜಿ ಶುಲ್ಕ ಮತ್ತು ಮಾಸಿಕ ವೇತನ

ಸಾಮಾನ್ಯ ಅಭ್ಯರ್ಥಿಗಳು 200 ರೂ. ಮತ್ತು ಎಸ್‌ಸಿ/ಎಸ್‌ಟಿ/ಪ್ರವರ್ಗ-1 ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ಮೆಡಿಕಲ್ ಫಿಟ್​​ನೆಸ್​ ಟೆಸ್ಟ್​ ಮೂಲಕ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆ ಆಪ್ಟಿಟ್ಯೂಡ್‌ ಮಾದರಿಯದ್ದಾಗಿದ್ದು, 100 ಅಂಕಗಳನ್ನು ಹೊಂದಿದೆ. ಗಣಿತದ 40 ಅಂಕದ ಪ್ರಶ್ನೆ ಮತ್ತು ಸಾಮಾನ್ಯ ಜ್ಞಾನದ 60 ಅಂಕಗಳ ಪ್ರಶ್ನೆಗಳನ್ನು ಇದು ಒಳಗೊಂಡಿದೆ. ಪ್ರಶ್ನೆ ಪತ್ರಿಕೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿರುತ್ತದೆ. ತಪ್ಪು ಉತ್ತರಕ್ಕೆ ನೆಗೆಟಿವ್‌ ಅಂಕವಿದ್ದು, ಎಚ್ಚರಿಕೆಯಿಂದ ಉತ್ತರ ಬರೆಯಬೇಕು ಎಂದು ಪ್ರಕಟಣೆ ತಿಳಿಸಿದೆ. ಆಯ್ಕೆಯಾದವರಿಗೆ ಮಾಸಿಕ ವೇತನ 18,600 ರೂ.-32,600 ರೂ. ನೀಡಲಾಗುತ್ತದೆ. ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿ ಶುಲ್ಕ ಪಾವತಿಸಬೇಕು. ಇದನ್ನು ಹೊರತುಪಡಿಸಿ ನೇರವಾಗಿ/ಕೊರಿಯರ್‌/ನೋಂದಾಯಿತ ಅಂಚೆ/ಸಾಧಾರಣ ಅಂಚೆ/ಇಮೇಲ್ ಇತ್ಯಾದಿ ವಿಧಾನಗಳ ಮೂಲಕ ಅರ್ಜಿ ಶುಲ್ಕ ಪಾವತಿಸುವಂತಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓಇ: Job Alert: ಉದ್ಯೋಗ ಹುಡುಕುತ್ತಿರುವವರಿಗೆ ಗುಡ್‌ನ್ಯೂಸ್‌; ಸಿಐಎಸ್‌ಎಫ್‌ನಲ್ಲಿದೆ 11,025 ಹುದ್ದೆ

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
  • ಆಗ ತೆರೆದುಕೊಳ್ಳುವ ಮುಖಪುಟದಲ್ಲಿನ ನೇಮಕಾತಿ ಎನ್ನುವ ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಸೂಚನೆಗಳನ್ನು ಸರಿಯಾಗಿ ಓದಿ ಅರ್ಜಿಯನ್ನು ಭರ್ತಿ ಮಾಡಿ.
  • ಗಮನಿಸಿ; ಅಭ್ಯರ್ಥಿಗಳು ಸ್ವಂತ ಆಧಾರ್‌ ಕಾರ್ಡ್‌ ನಂಬರ್‌ ಮಾತ್ರ ಒದಗಿಸಬೇಕು. ಬೇರೆಯವರ ಆಧಾರ್‌ ನಂಬರ್‌ ಒದಗಿಸಿರುವುದು ಕಂಡುಬಂದರೆ ಅಂತಹವರ ಅರ್ಜಿ ತಿರಸ್ಕೃತಗೊಳ್ಳಲಿದೆ.
  • ಅಗತ್ಯವಾದ ಡಾಕ್ಯಮೆಂಟ್‌ ಅಪ್‌ಲೋಡ್‌ ಮಾಡಿ
  • ಅರ್ಜಿ ಶುಲ್ಕ ಪಾವತಿಸಿ
  • ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದನ್ನು ಖಚಿತಪಡಿಸಿ ಅರ್ಜಿ ಸಲ್ಲಿಸಿ
  • ಭರ್ತಿ ಮಾಡಿದ ಆನ್‌ಲೈನ್‌ ಅರ್ಜಿಯ ಪ್ರಿಂಟ್‌ ಔಟ್‌ ತೆಗೆದಿಡಿ

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ https://aranya.gov.inಗೆ ಭೇಟಿ ನೀಡಿ.

Continue Reading
Advertisement
Girl Child
ಕರ್ನಾಟಕ13 mins ago

ವಿಸ್ತಾರ ಸಂಪಾದಕೀಯ: ಭ್ರೂಣ ಹತ್ಯೆ ಜಾಲ ಆಘಾತಕಾರಿ

Dina Bhavihsya
ಪ್ರಮುಖ ಸುದ್ದಿ43 mins ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Sphoorti Salu
ಸುವಚನ1 hour ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Assembly Election Results 2023
Live News6 hours ago

Election Results 2023 Live: ಕೆಲವೇ ಕ್ಷಣಗಳಲ್ಲಿ 4 ರಾಜ್ಯಗಳ ಚುನಾವಣೆ ಫಲಿತಾಂಶ; ಇಲ್ಲಿದೆ ಕ್ಷಣಕ್ಷಣದ ಅಪ್‌ಡೇಟ್ಸ್

Kapil Sharma And Sunil Grover
ಕಿರುತೆರೆ/ಒಟಿಟಿ6 hours ago

Kapil Sharma: 6 ವರ್ಷದ ಮುನಿಸು ಮರೆತು ಒಂದಾದ ಕಪಿಲ್‌ ಶರ್ಮಾ, ಸುನಿಲ್‌ ಗ್ರೋವರ್;‌ ಬರ್ತಿದೆ ಶೋ!

women seriously injured
ಕರ್ನಾಟಕ6 hours ago

Kalaburagi News: ಕೆಂಡ ಹಾಯುವಾಗ ಆಯತಪ್ಪಿ ಬಿದ್ದು ಮೂವರು ಮಹಿಳೆಯರಿಗೆ ಗಂಭೀರ ಗಾಯ

Bangalore Bulls
ಕ್ರೀಡೆ7 hours ago

Pro Kabaddi : ಗುಜರಾತ್​ ತಂಡಕ್ಕೆ ಸೆಡ್ಡು ಹೊಡೆಯುವುದೇ ಬುಲ್ಸ್​

Heart Attack
ಆರೋಗ್ಯ7 hours ago

Heart Attack: ಹೃದಯಾಘಾತಕ್ಕೆ 6 ತಿಂಗಳಲ್ಲಿ 1,052 ಜನ ಬಲಿ; 80% ಮಂದಿ 11-25 ವರ್ಷದವರೇ!

Pro Kabaddi Day 1
ಕ್ರೀಡೆ7 hours ago

Pro Kabaddi: ಮೊದಲ ದಿನ ಗುಜರಾತ್​, ಮುಂಬಾ ತಂಡಕ್ಕೆ ಗೆಲುವು

States economy
ಕರ್ನಾಟಕ7 hours ago

ರಾಜ್ಯದ ಆರ್ಥಿಕತೆ ವೃದ್ಧಿಸಲು ವಾರ್ಷಿಕ 1.4 ಲಕ್ಷ ಕೋಟಿ ಹೂಡಿಕೆಯ ಗುರಿ ನಿಗದಿ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Dina Bhavihsya
ಪ್ರಮುಖ ಸುದ್ದಿ43 mins ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ13 hours ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ2 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ2 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ3 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ3 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ5 days ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

ಟ್ರೆಂಡಿಂಗ್‌