Assistant Professor Recruitment | ಅಂತಿಮ ಮೆರಿಟ್‌ ಪಟ್ಟಿ ಪ್ರಕಟಿಸಿದ ಕೆಇಎ - Vistara News

ಉದ್ಯೋಗ

Assistant Professor Recruitment | ಅಂತಿಮ ಮೆರಿಟ್‌ ಪಟ್ಟಿ ಪ್ರಕಟಿಸಿದ ಕೆಇಎ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಸಹಾಯಕ ಪ್ರಾಧ್ಯಾಪಕರ (Assistant Professor Recruitment) 1, 242 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ವಿಷಯವಾರು ಅಂತಿಮ ಮೆರಿಟ್‌ ಲಿಸ್ಟ್‌ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

VISTARANEWS.COM


on

Assistant Professor
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಸಹಾಯಕ ಪ್ರಾಧ್ಯಾಪಕರ (KEA Assistant Professor Recruitment 2021) 1, 242 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ವಿಷಯವಾರು ಅಂತಿಮ ಮೆರಿಟ್‌ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಪಟ್ಟಿಯಲ್ಲಿ ಅರ್ಜಿಯ ಸಂಖ್ಯೆ, ಅರ್ಹತೆ ಪಡೆದವರ ಹೆಸರು, ವಿಷಯಗಳಲ್ಲಿ ಪಡೆದ ಅಂಕ, ಐಚ್ಛಿಕ ವಿಷಯಗಳ ಅಂಕ, ಮೀಸಲಾತಿ ಕೆಟಗರಿ ಮತ್ತಿತರ ಮಾಹಿತಿ ಒದಗಿಸಲಾಗಿದೆ. ಇನ್ನು ದಾಖಲೆ ಪರಿಶೀಲನೆ ನಡೆಸಿ, ವೈದ್ಯಕೀಯ ಪರೀಕ್ಷೆ ನಡೆಸಿ ಈ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಒಟ್ಟಾರೆ ಒಂದು ವರ್ಷದ ಅವಧಿಯಲ್ಲಿ ಈ ನೇಮಕ ಪ್ರಕ್ರಿಯೆ ಪೂರ್ಣಗೊಂಡಂತಾಗಿದೆ.

ಮೆರಿಟ್‌ ಪಟ್ಟಿ ನೋಡಲು ಇಲ್ಲಿ ಕ್ಲಿಕ್‌ ಮಾಡಿ| https://cetonline.karnataka.gov.in/kea/gfgc2021

ಕಳೆದ ಮಾರ್ಚ್‌ ೧೪, ೧೫ ಮತ್ತು ೧೬ ರಂದು ಈ ನೇಮಕಕ್ಕೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ನಂತರ ತಾತ್ಕಾಲಿಕ ಕೀ ಉತ್ತರ ಪ್ರಕಟಿಸಿ, ಆಕ್ಷೇಪಣೆ ಪಡೆದು, ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಲಾಗಿತ್ತು. ಕಳೆದ ತಿಂಗಳು ತಾತ್ಕಾಲಿಕ ಮೆರಿಟ್‌ ಪಟ್ಟಿ ಪ್ರಕಟಿಸಲಾಗಿತ್ತು. 2021 ರ ಸೆಪ್ಟೆಂಬರ್‌ ೩೦ ರಂದು ಈ ನೇಮಕಾತಿಯ ಅಧಿಸೂಚನೆ ಪ್ರಕಟಗೊಂಡಿತ್ತು.

ಮತ್ತೊಂದು ನೇಮಕಕ್ಕೆ ಸದ್ಯವೇ ಅಧಿಸೂಚನೆ
ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಒಟ್ಟು 778 ಉಪನ್ಯಾಸಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರ ಈಗಾಗಲೇ ಅನುಮತಿ ನೀಡಿದ್ದು, ಸದ್ಯವೇ ಅಧಿಸೂಚನೆ ಪ್ರಕಟವಾಗಲಿದೆ.

ಈ ವಿಷಯವನ್ನು ಶಿಕ್ಷಣ ಸಚಿವರೇ ಸೆ.೧೦ರಂದು ಇತ್ತೀಚೆಗೆ ಟ್ವೀಟ್‌ ಮಾಡಿ ತಿಳಿಸಿದ್ದಾರೆ. ಕನ್ನಡ-100, ಇಂಗ್ಲಿಷ್-120, ಇತಿಹಾಸ-120, ಅರ್ಥಶಾಸ್ತ್ರ-180, ಭೂಗೋಳಶಾಸ್ತ್ರ-20, ವಾಣಿಜ್ಯಶಾಸ್ತ್ರ-80, ಸಮಾಜಶಾಸ್ತ್ರ-75 ಒಟ್ಟು 778 ಹುದ್ದೆಗಳಿಗೆ ನೇಮಕ ನಡೆಯಲಿದೆ.

ಇದನ್ನೂ ಓದಿ| KPSC Recruitment 2022 | ಅಸಿಸ್ಟೆಂಟ್‌ ಎಂಜಿನಿಯರ್‌ ಹುದ್ದೆಗಳಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಕೋರ್ಟ್‌ನಲ್ಲಿದೆ 41 ಹುದ್ದೆ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

Job Alert: ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ರಾಜ್ಯದಲ್ಲೇ ಕೆಲಸ ನಿರ್ವಹಿಸಬೇಕು ಎನ್ನುವ ಆಕಾಂಕ್ಷೆ ಹೊಂದಿದ್ದೀರಾ? ಹಾಗಾದರೆ ನಿಮಗಾಗಿ ಕಾದಿದೆ ಗುಡ್‌ನ್ಯೂಸ್‌. ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 41 ಜವಾನ (Peon) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ 3ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಕೊನೆಯ ದಿನ ಜೂನ್‌ 3. ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ರಾಜ್ಯದಲ್ಲೇ ಕೆಲಸ ನಿರ್ವಹಿಸಬೇಕು ಎನ್ನುವ ಆಕಾಂಕ್ಷೆ ಹೊಂದಿದ್ದೀರಾ? ಹಾಗಾದರೆ ನಿಮಗಾಗಿ ಕಾದಿದೆ ಗುಡ್‌ನ್ಯೂಸ್‌. ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 41 ಜವಾನ (Peon) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮೇ 3ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಿದ್ದು ಕೊನೆಯ ದಿನ ಜೂನ್‌ 3 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸಾಮಾನ್ಯ ಅಭ್ಯರ್ಥಿ – 18, ಪರಿಶಿಷ್ಟ ಜಾತಿ – 7, ಪರಿಶಿಷ್ಟ ಪಂಗಡ – 4, ಪ್ರವರ್ಗ – 1- 2, ಪ್ರವರ್ಗ-2 (ಎ) -6, ಪ್ರವರ್ಗ-2 (ಬಿ)-2, ಪ್ರವರ್ಗ-3 (ಎ)-1, ಪ್ರವರ್ಗ-3 (ಬಿ)-1 ಹುದ್ದೆಗಳಿವೆ. ಅರ್ಜಿ ಸಲ್ಲಿಸುವವರು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜತೆಗೆ ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು. ತತ್ಸಮಾನ ವಿದ್ಯಾರ್ಹತೆ: ಸಿಬಿಎಸ್‌ಸಿ ಮತ್ತು ಐಸಿಎಸ್‌ಇ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆ ಮತ್ತು ಇತರ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆ. ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಓಪನ್‌ ಸ್ಕೂಲಿಂಗ್‌ (ಎನ್‌.ಐ.ಒ.ಎಸ್‌.) ವತಿಯಿಂದ ನಡೆಸುವ ಪ್ರೌಢ ಶಿಕ್ಷಣ ಕೋರ್ಸ್‌. ಕರ್ನಾಟಕ ಪ್ರೌಢ ಶಿಕ್ಷಣ ಪ್ರೀಕ್ಷಾ ಮಂಡಳಿ ನಡೆಸುವ ಪ್ರೌಢ ಶಿಕ್ಷಣ ಮಟ್ಟದ ಕೋರ್ಸ್‌ (ಕೆ.ಒ.ಎಸ್‌.).

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ. ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. 2 ಎ, 2 ಬಿ, 3 ಎ, 3 ಬಿ ವಿಭಾಗದವರಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ ವರ್ಗದವರು ಅರ್ಜಿ ಶುಲ್ಕವಾಗಿ 300 ರೂ., ಪ್ರವರ್ಗ 2 ಎ, 2 ಬಿ, 3 ಎ, 3 ಬಿ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 150 ರೂ. ಪಾವತಿಸಬೇಕು. ಇದನ್ನು ಆನ್‌ಲೈನ್‌ ಮೂಲಕ ಪಾವತಿಸಬಹುದು. ಇದಕ್ಕಾಗಿ ಕ್ರೆಡಿಟ್‌ / ಡೆಬಿಟ್‌ ಕಾರ್ಡ್‌, ನೆಟ್‌ ಬ್ಯಾಂಕಿಂಗ್‌ ಸೌಲಭ್ಯ ಬಳಸಬಹುದು.

ಆಯ್ಕೆ ವಿಧಾನ

ಕರ್ನಾಟಕ ಅಧೀನ ನ್ಯಾಯಾಲಯಗಳ ನಿಯಮಗಳ ಅನ್ವಯ ನೇಮಕಾತಿ ನಡೆಯಲಿದೆ. ಅದರಂತೆ 10ನೇ ತರಗತಿಯ ಗರಿಷ್ಠ ಅಂಕಗಳನ್ನು ಆಧರಿಸಿ ಒಂದು ಹುದ್ದೆಗೆ 10 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಆ ಪೈಕಿ ಅರ್ಹರನ್ನು ನೇಮಿಸಿಕೊಳ್ಳಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳಿಗೆ ಇಂದೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: 313 ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಡಿಪ್ಲೋಮಾ ಓದಿದವರು ಇಂದೇ ಅಪ್ಲೈ ಮಾಡಿ

Job Alert: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಲೋಕಸೇವಾ ಆಯೋಗ ಜಲ ಸಂಪನ್ಮೂಲ ಇಲಾಖೆ & ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ 313 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಮೇ 28. ಡಿಪ್ಲೋಮಾ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಲೋಕಸೇವಾ ಆಯೋಗ (KPSC) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಜಲ ಸಂಪನ್ಮೂಲ ಇಲಾಖೆ & ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಈ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಿಸಿದೆ. ಕಿರಿಯ ಎಂಜಿನಿಯರ್‌, ಸಹಾಯಕ ಗ್ರಂಥ ಪಾಲಕ ಸೇರಿ ಒಟ್ಟು 313 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ಇನಾಂಕ ಮೇ 28 (Job Alert).

ಹುದ್ದೆಗಳ ವಿವರ

ಕಿರಿಯ ಎಂಜಿನಿಯರ್‌ (ಸಿವಿಲ್‌)-ಜಲ ಸಂಪನ್ಮೂಲ ಇಲಾಖೆ: 216 ಹುದ್ದೆ, ಕಿರಿಯ ಎಂಜಿನಿಯರ್‌ (ಸಿವಿಲ್‌)-ಜಲ ಸಂಪನ್ಮೂಲ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಾ ನಿರತ ಗ್ರೂಪ್‌ ಸಿ ಸಿಬ್ಬಂದಿಗೆ: 54 ಹುದ್ದೆ, ಕಿರಿಯ ಎಂಜಿನಿಯರ್‌ (ಮೆಕ್ಯಾನಿಕಲ್‌)- ಜಲ ಸಂಪನ್ಮೂಲ ಇಲಾಖೆ: 26 ಹುದ್ದೆ, ಕಿರಿಯ ಎಂಜಿನಿಯರ್‌ (ಮೆಕ್ಯಾನಿಕಲ್‌)-ಜಲ ಸಂಪನ್ಮೂಲ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಾ ನಿರತ ಗ್ರೂಪ್‌ ಸಿ ಸಿಬ್ಬಂದಿಗೆ: 4 ಹುದ್ದೆ, ಸಹಾಯಕ ಗ್ರಂಥಪಾಲಕ-ಸಾರ್ವಜನಿಕ ಗ್ರಂಥಾಲಯ: 13 ಹುದ್ದೆಗಳಿವೆ.

ವಿದ್ಯಾರ್ಹತೆ

ಕಿರಿಯ ಇಂಜಿನಿಯರ್ (JE): ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಮೂರು ವರ್ಷಗಳ ಸಿವಿಲ್‌ / ಮೆಕ್ಯಾನಿಕಲ್‌ ಡಿಪ್ಲೋಮಾ ಪದವಿ ಪಡೆದಿರಬೇಕು.

ಗ್ರಂಥಾಲಯ ಸಹಾಯಕ: ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಮೂರು ವರ್ಷಗಳ ಡಿಪ್ಲೋಮಾ ಇನ್‌ ಲೈಬ್ರರಿ ಸೈನ್ಸ್‌ (Diploma in Library Science) ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಇದೆ.

ಅರ್ಜಿ ಶುಲ್ಕ

ಸಾಮಾನ್ಯ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 600 ರೂ. ಪಾವತಿಸಬೇಕು. ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು 300 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕವಿಲ್ಲ. ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್ / ಯುಪಿಐ ಮೂಲಕ ಆನ್‌ಲೈನ್‌ನಲ್ಲೇ ಪಾವತಿ ಮಾಡಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯು ಸಾಮಾನ್ಯ ಪತ್ರಿಕೆ ಮತ್ತು ನಿರ್ದಿಷ್ಟ ವಿಷಯಗಳ ಪತ್ರಿಕೆಯನ್ನು ಹೊಂದಿದೆ. ಪ್ರತಿಯೊಂದು ಪತ್ರಿಕೆಯು 100 ಅಂಕಗಳ ಪ್ರಶ್ನೆಯನ್ನು ಒಳಗೊಂಡಿರುತ್ತದೆ. ಪರೀಕ್ಷೆಯ ಒಟ್ಟು ಅಂಕ 200. ಗಮನಿಸಿ, ಪರೀಕ್ಷೆಯಲ್ಲಿ ನೆಗೆಟಿವ್‌ ಅಂಕವಿದ್ದು, ಎಚ್ಚರಿಕೆಯಿಂದ ಉತ್ತರಿಸಬೇಕು. ಆಯ್ಕೆಯಾಗುವ ಕಿರಿಯ ಎಂಜಿನಿಯರ್‌ಗೆ 33,450 ರೂ. -62,600 ರೂ. ಮತ್ತು ಗ್ರಂಥಾಲಯ ಸಹಾಯಕರಿಗೆ 30,350 ರೂ. – 58,250 ರೂ. ಮಾಸಿಕ ವೇತನ ಲಭಿಸಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳಿಗೆ ಇಂದೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಜೂನ್‌ 1. ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ (Motor Vehicle Inspector)​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (KPSC Recruitment 2024). ಈ ಹಿಂದೆ ಅರ್ಜಿ ಸಲ್ಲಿಕೆಗೆ ಮೇ 21 ಕೊನೆಯ ದಿನಾಂಕ ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿದೆ. ಆಸಕ್ತರು ಮೇ 2ರಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಜೂನ್‌ 1 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

ವಯೋಮಿತಿ ಮತ್ತು ಅರ್ಜಿ ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1ರ ಅಭ್ಯರ್ಥಿಗಳಿಗೆ 5 ವರ್ಷ, ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 3 ವರ್ಷ ಮತ್ತು ಪಿಡಬ್ಲ್ಯುಡಿ / ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1/ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಮಾಜಿ ಯೋಧರು ಅರ್ಜಿ ಶುಲ್ಕವಾಗಿ 50 ರೂ., ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 300 ರೂ., ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 33,450 ರೂ. – 62,600 ರೂ. ಮಾಸಿಕ ವೇತನ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌: 080-30574957 / 30574901ಕ್ಕೆ ಕರೆ ಮಾಡಿ.

ಉಳಿಕೆ ವೃಂದದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಹೈದರಾಬಾದ್‌-ಕರ್ನಾಟಕ ವೃಂದದ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ದಿನಾಂಕ ವಿಸ್ತರಣೆಯ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನಿಮ್ಮ ಮೊಬೈಲ್‌ ನಂಬರ್‌ ಮತ್ತು ಇಮೇಲ್‌ ಐಡಿ ನಮೂದಿಸಿ ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ / ರಿಕ್ವೆಸ್ಟ್‌ ನಂಬರ್‌ ತೆಗೆದಿಡಿ.

ಇದನ್ನೂ ಓದಿ: Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಪದವಿ ಪಡೆದವರು ಅರ್ಜಿ ಸಲ್ಲಿಸಿ

Continue Reading

ವಿದೇಶ

Google Layoff: ಮತ್ತಷ್ಟು ಉದ್ಯೋಗ ಕಡಿತಗೊಳಿಸಿದ ಗೂಗಲ್‌; ಕಾರಣವೇನು?

Google Layoff: ವಿಶ್ವದ ಅತಿದೊಡ್ಡ ಟೆಕ್ ಕಂಪನಿ ಎನಿಸಿಕೊಂಡಿರುವ ಆಲ್ಫಾಬೆಟ್‌ ಇಂಕ್‌ ಒಡೆತನದ ಗೂಗಲ್‌ ಮತ್ತೆ ತನ್ನ ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡಿದೆ. ಗೂಗಲ್ ತನ್ನ ʼಕೋರ್ ತಂಡʼದಿಂದ ಸುಮಾರು 200 ಉದ್ಯೋಗಿಗಳನ್ನು ಕೈ ಬಿಟ್ಟಿದೆ. ಕ್ಯಾಲಿಫೋರ್ನಿಯಾದಲ್ಲಿ ಪ್ರಧಾನ ಕಚೇರಿ ಹೊಂದಿರುವ ಎಂಜಿನಿಯರಿಂಗ್ ತಂಡದಿಂದ ಕನಿಷ್ಠ 50 ಉದ್ಯೋಗಿಗಳನ್ನು ವಜಾಗೊಳಿಸಲಾಗಿದ್ದು, ಭಾರತ ಮತ್ತು ಮೆಕ್ಸಿಕೊದಲ್ಲಿನ ಈ ಸ್ಥಾನಗಳಿಗೆ ಬದಲಿ ಉದ್ಯೋಗಿಗಳನ್ನು ನೇಮಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಕಂಪನಿಯ ಮೂಲಗಳು ತಿಳಿಸಿವೆ. ಕೆಲಸದಿಂದ ವಜಾಗೊಳಿಸಲ್ಪಟ್ಟ ಕಾರ್ಮಿಕರು ಕಂಪನಿಯಲ್ಲಿ ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಅಧಿಕೃತರು ಮಾಹಿತಿ ನೀಡಿದ್ದಾರೆ.

VISTARANEWS.COM


on

Google Layoff
Koo

ನವದೆಹಲಿ: ವಿಶ್ವದ ಅತಿದೊಡ್ಡ ಟೆಕ್ ಕಂಪನಿ ಎನಿಸಿಕೊಂಡಿರುವ ಆಲ್ಫಾಬೆಟ್‌ ಇಂಕ್‌ ಒಡೆತನದ ಗೂಗಲ್‌ ಮತ್ತೆ ತನ್ನ ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡಿದೆ (Google Layoff). ಗೂಗಲ್ ತನ್ನ ʼಕೋರ್ ತಂಡʼದಿಂದ ಸುಮಾರು 200 ಉದ್ಯೋಗಿಗಳನ್ನು ಕೈ ಬಿಟ್ಟಿದೆ. ಮಾತ್ರವಲ್ಲ ಕಂಪನಿಯು ತನ್ನ ಪುನರ್‌ ರಚನೆ ಪ್ರಕ್ರಿಯೆಯನ್ನು ಮುಂದುವರಿಸುತ್ತಿರುವುದರಿಂದ ವೆಚ್ಚವನ್ನು ಕಡಿತಗೊಳಿಸುವ ಉದ್ದೇಶದಿಂದ ಕೆಲವು ಉದ್ಯೋಗಗಳನ್ನು ವಿದೇಶಕ್ಕೆ ಸ್ಥಳಾಂತರಿಸಿದೆ ಎಂದು ಮೂಲಗಳು ತಿಳಿಸಿವೆ.

ಕ್ಯಾಲಿಫೋರ್ನಿಯಾದಲ್ಲಿ ಪ್ರಧಾನ ಕಚೇರಿ ಹೊಂದಿರುವ ಎಂಜಿನಿಯರಿಂಗ್ ತಂಡದಿಂದ ಕನಿಷ್ಠ 50 ಉದ್ಯೋಗಿಗಳನ್ನು ವಜಾಗೊಳಿಸಲಾಗಿದ್ದು, ಭಾರತ ಮತ್ತು ಮೆಕ್ಸಿಕೊದಲ್ಲಿನ ಈ ಸ್ಥಾನಗಳಿಗೆ ಬದಲಿ ಉದ್ಯೋಗಿಗಳನ್ನು ನೇಮಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಕಂಪನಿಯ ಮೂಲಗಳು ತಿಳಿಸಿವೆ. ಗೂಗಲ್‌ನ ʼಕೋರ್ ತಂಡʼವು ಬಳಕೆದಾರರ ಸುರಕ್ಷತೆಗೆ ಕಾರ್ಯ ನಿರ್ವಹಿಸುತ್ತದೆ. ಜತೆಗೆ ತಾಂತ್ರಿಕ ಅಡಿಪಾಯವನ್ನು ಅಭಿವೃದ್ಧಿ ಪಡಿಸುತ್ತದೆ.

ಅಧಿಕೃತರು ಹೇಳಿದ್ದೇನು?

ಗೂಗಲ್ ಡೆವಲಪರ್ ಇಕೋಸಿಸ್ಟಮ್‌ನ ಉಪಾಧ್ಯಕ್ಷ ಅಸಿಮ್ ಹುಸೇನ್ ಕಳೆದ ವಾರ ಇಮೇಲ್‌ ಮೂಲಕ ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿದ್ದರು. ಇದು ತಮ್ಮ ತಂಡದ ಅತಿದೊಡ್ಡ ಉದ್ಯೋಗಿಗಳ ಕಡಿತ ಎಂದು ಮೂಲಗಳು ತಿಳಿಸಿವೆ. ಕೆಲಸದಿಂದ ವಜಾಗೊಳಿಸಲ್ಪಟ್ಟ ಕಾರ್ಮಿಕರು ಕಂಪನಿಯಲ್ಲಿ ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಅಧಿಕೃತರು ಹೇಳಿದ್ದಾರೆ. ಬೆಂಗಳೂರು, ಮೆಕ್ಸಿಕೊ ಮತ್ತು ಡಬ್ಲಿನ್‌ ನಗರಗಳಲ್ಲಿ ಕಂಪನಿಯ ಕಾರ್ಯಾಚರಣೆ ವಿಸ್ತರಿಸಲು ನಿರ್ಧರಿಸಿದೆ.

ಹಿಂದೆಯೂ ನಡೆದಿತ್ತು ಉದ್ಯೋಗ ಕಡಿತ

ಕೆಲವು ದಿನಗಳ ಹಿಂದೆಯೂ ಗೂಗಲ್‌ ಹಲವು ಉದ್ಯೋಗಿಗಳನ್ನು ಕಡಿತಗೊಳಿಸಿತ್ತು. ಕೃತಕ ಬುದ್ಧಿಮತ್ತೆ ಹಾಗೂ ಸ್ವಯಂಚಾಲಿತ ವ್ಯವಸ್ಥೆಯ ಅಳವಡಿಕೆಗೆ ಕಂಪನಿ ಮುಂದಾಗಿದೆ. ಹೀಗಾಗಿ ಈ ವರ್ಷದ ಜನವರಿಯಲ್ಲಿ ಎಂಜಿನಿಯರಿಂಗ್‌, ಹಾರ್ಡ್‌ವೇರ್‌ ಮತ್ತು ಅಸಿಸ್ಟಂಟ್‌ ಟೀಮ್‌ ವಿಭಾಗಗಳಿಂದ ಹಲವು ಉದ್ಯೋಗಿಗಳನ್ನು ವಜಾಗೊಳಿಸಿತ್ತು.

ಆ ವೇಳೆ ನೂರಾರು ಹಾರ್ಡ್‌ವೇರ್‌ ಸಿಬ್ಬಂದಿ ಕೆಲಸ ಕಳೆದುಕೊಂಡಿದ್ದರು. ಪಿಕ್ಸೆಲ್ (Pixel), ನೆಸ್ಟ್ (Nest) ಮತ್ತು ಫಿಟ್‌ಬಿಟ್‌ (Fitbit)ನಂತಹ ಉತ್ಪನ್ನಗಳನ್ನು ಮೇಲ್ವಿಚಾರಣೆ ಮಾಡುವ ಗೂಗಲ್ ತನ್ನ ತಂಡಗಳ ಪುನರ್‌ ವಿಂಗಡಣೆಗೆ ಮುಂದಾಗಿದ್ದು, ಅದರ ಭಾಗವಾಗಿ ಈ ಉದ್ಯೋಗ ಕಡಿತ ನಡೆದಿತ್ತು.

“1ಪಿ ಎಆರ್ (1P AR) ಹಾರ್ಡ್‌ವೇರ್‌ ತಂಡದ ಮೇಲೆ ಪರಿಣಾಮ ಬೀರುವ ಡಿಎಸ್‌ಪಿಎ(ಡಿವೈಸಸ್‌ & ಸರ್ವಿಸಸ್‌) ಯಲ್ಲಿನ ನೂರಾರು ಉದ್ಯೋಗಿಗಳನ್ನು ತೆಗೆದು ಹಾಕಲಾಗುತ್ತಿದೆ. ನಮ್ಮ 1ಪಿ ಎಆರ್ ಹಾರ್ಡ್‌ವೇರ್ ತಂಡದಲ್ಲಿ ಬದಲಾವಣೆಗಳನ್ನು ಕೈಗೊಳ್ಳಲಾಗುತ್ತಿದೆʼʼ ಎಂದು ಗೂಗಲ್ ವಕ್ತಾರರು ತಿಳಿಸಿದ್ದರು. “ಫಿಟ್‌ಬಿಟ್‌ ಬಳಕೆದಾರರಿಗೆ ಉತ್ತಮ ಸೇವೆ ಸಲ್ಲಿಸಲು ಕಂಪನಿ ಬದ್ಧವಾಗಿದೆ. ವೈಯಕ್ತಿಕ ಎಐನೊಂದಿಗೆ ಆರೋಗ್ಯ ಕ್ಷೇತ್ರದಲ್ಲಿ ಹೊಸತನವನ್ನು ತರಲು ಮತ್ತು ಪಿಕ್ಸೆಲ್ ವಾಚ್, ಮರುವಿನ್ಯಾಸಗೊಳಿಸಿದ ಫಿಟ್‌ಬಿಟ್‌ ಅಪ್ಲಿಕೇಶನ್, ಫಿಟ್‌ಬಿಟ್‌ ಪ್ರೀಮಿಯಂ ಸೇವೆ ಮತ್ತು ಫಿಟ್‌ಬಿಟ್‌ ಟ್ರ್ಯಾಕರ್ ಲೈನ್‌ನೊಂದಿಗೆ ಎಂದಿನೊಂದಿಗೆ ಕಾರ್ಯ ನಿರ್ವಹಿಸಲಿದೆʼʼ ಎಂದು ಕಂಪನಿ ಭರವಸೆ ನೀಡಿತ್ತು.

ಇದನ್ನೂ ಓದಿ: Tech Layoffs: 453 ಉದ್ಯೋಗಿಗಳನ್ನು ಮನೆಗೆ ಕಳುಹಿಸಿದ ಗೂಗಲ್ ಇಂಡಿಯಾ! ಇನ್ನಷ್ಟು ಜಾಬ್ ಕಡಿತ?

ಗೂಗಲ್ ಮಾತೃಸಂಸ್ಥೆಯಾಗಿರುವ ಆಲ್ಫಾಬೆಟ್ ಇಂಕ್ ಕೆಲವು ತಿಂಗಳ ಹಿಂದೆ ಒಟ್ಟು ಉದ್ಯೋಗಿಗಳ ಪೈಕಿ ಶೇ. 6 ಅಥವಾ 12000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದು ಹಾಕಿತ್ತು. ಅದಾಗಿ ಕೆಲವೆ ತಿಂಗಳಲ್ಲಿ ಮತ್ತೆ ಉದ್ಯೋಗ ಕಡಿತಕ್ಕೆ ಮುಂದಾಗಿದೆ. 2023ರ ಸೆಪ್ಟೆಂಬರ್‌ನಲ್ಲಿ ಬಂದ ವರದಿ ಪ್ರಕಾರ ಆಲ್ಫಾಬೆಟ್ ಕಂಪೆನಿಯಲ್ಲಿ ಸುಮಾರು 1,80,000 ಉದ್ಯೋಗಿಗಳಿದ್ದರು.

Continue Reading
Advertisement
Physical abuse
ಮೈಸೂರು41 seconds ago

Physical Abuse : ಮೊಬೈಲ್ ಕೊಡಿಸುವುದಾಗಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಸೋದರ ಮಾವ

Lok Sabha Election
ಪ್ರಮುಖ ಸುದ್ದಿ1 min ago

Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

Summer Tour
ಪ್ರವಾಸ9 mins ago

Summer Tour: ಬೇಸಿಗೆಯಲ್ಲಿ ಈ 8 ತಂಪು ಹಳ್ಳಿಗಳಿಗೆ ಪ್ರವಾಸ ಹೋಗಿ ಕೂಲ್ ಆಗಿ!

Prajwal Revanna Case
ಕರ್ನಾಟಕ11 mins ago

Prajwal Revanna Case: ಹೊಳೆನರಸೀಪುರ ರೇವಣ್ಣ ನಿವಾಸದಲ್ಲಿ ಎಸ್‌ಐಟಿ ಸ್ಥಳ ಮಹಜರು; ಸಂತ್ರಸ್ತೆ ಹೇಳಿಕೆ ದಾಖಲು

Lok Sabha Election
ಪ್ರಮುಖ ಸುದ್ದಿ21 mins ago

Lok Sabha Election : ರಾಹುಲ್ ಪ್ರಧಾನಿಯಾಗುವುದು ಪಾಕಿಸ್ತಾನದ ಆಸೆ ಎಂದ ಮೋದಿ, ತಿರುಗೇಟು ಕೊಟ್ಟ ಪ್ರಿಯಾಂಕಾ

Prajwal Revanna Case
ಕರ್ನಾಟಕ43 mins ago

Prajwal Revanna Case: ಪ್ರಜ್ವಲ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್;‌ ರೇವಣ್ಣ ಪಿಎ ಮನೆಯಲ್ಲಿ ಸಂತ್ರಸ್ತೆಯ ರಕ್ಷಣೆ!

Hardik Pandya
ಕ್ರಿಕೆಟ್45 mins ago

IPL 2024 : ಹಾರ್ದಿಕ್​ ಪಾಂಡ್ಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ಇರ್ಫಾನ್ ಪಠಾಣ್​​

karnataka weather Forecast
ಮಳೆ48 mins ago

Karnataka Weather: ಮೈಸೂರಲ್ಲಿ ಬಿರುಗಾಳಿಗೆ ಸಿಲುಕಿ ವೃದ್ಧೆ ಸಾವು; ಮತ್ತೆ ಗುಡುಗು ಸಹಿತ ಗಾಳಿ ಮಳೆಯ ಎಚ್ಚರಿಕೆ

Zameer Ahmed Khan
ಕರ್ನಾಟಕ58 mins ago

Zameer Ahmed Khan: 3ನೇ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಅಲ್ಪ ಸಂಖ್ಯಾತರನ್ನು ಮುಗಿಸ್ತಾರೆ ಎಂದ ಜಮೀರ್‌ ಅಹ್ಮದ್

Mobile Side Effect
ಆರೋಗ್ಯ1 hour ago

Mobile Side Effect: ಅತಿಯಾದ ಮೊಬೈಲ್ ಬಳಕೆ; ಮಕ್ಕಳು ಕಿವುಡರಾಗುತ್ತಿದ್ದಾರೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌