KEA Recruitment 2023 : ಕೆಇಎ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮಾಸ್ಕ್‌ ಧರಿಸುವಂತಿಲ್ಲ! Vistara News

ಉದ್ಯೋಗ

KEA Recruitment 2023 : ಕೆಇಎ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮಾಸ್ಕ್‌ ಧರಿಸುವಂತಿಲ್ಲ!

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ನಡೆಯುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA Recruitment 2023), ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಮಾಸ್ಕ್‌ ಧರಿಸಲು ಕೂಡ ಅವಕಾಶ ನೀಡಿಲ್ಲ.

VISTARANEWS.COM


on

KEA Recruitment 2023 ಮಾಸ್ಕ್‌ ಕಡ್ಡಾಯ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದೇಶದಲ್ಲಿ ಕೊರೊನಾ ಭೀತಿ ಇನ್ನೂ ದೂರವಾಗಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಸಾರ್ವಜನಿಕ ಸಾರಿಗೆ, ಒಳಾಂಗಣದಲ್ಲಿ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಶಾಲೆ-ಕಾಲೇಜುಗಳಲ್ಲಿಯೂ ಮಾಸ್ಕ್‌ ಧರಿಸಬೇಕೆಂದು ಸೂಚಿಸಿದೆ. ಆದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ವಿವಿಧ ನೇಮಕಗಳಿಗೆ (KEA Recruitment 2023) ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಮಾಸ್ಕ್‌ ಧರಿಸುವಂತಿಲ್ಲ ಎಂದು ಸೂಚಿಸಿದೆ!

ಹೌದು, ಕೆಇಎ ಹೀಗೆ ಮಾಸ್ಕ್‌ ಧರಿಸಬೇಡಿ ಎಂದು ಸೂಚಿಸಲು ಇತ್ತೀಚೆಗೆ ಹೈಟೆಕ್‌ ಆಗಿ ಪರೀಕ್ಷಾ ಅಕ್ರಮಗಳು ನಡೆಯುತ್ತಿರುವುದೇ ಕಾರಣ. ಕೆಇಎ ಜನವರಿ 29ರಿಂದ ವಿವಿಧ ನೇಮಕಾತಿ ಪರೀಕ್ಷೆ ನಡೆಸುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಡೆಸ್‌ಕೋಡ್‌ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ಮೊದಲಿಗೇ “ಅಭ್ಯರ್ಥಿಗಳು ಯಾವುದೇ ಮಾಸ್ಕ್‌ ಅನ್ನು ಧರಿಸುವಂತಿಲ್ಲʼʼ ಎಂದು ಸ್ಪಷ್ಟವಾಗಿ ಸೂಚಿಸಿದೆ.

ಪಿಎಸ್‌ಐ, ಕೆಪಿಟಿಸಿಎಲ್‌ ಸೇರಿದಂತೆ ಇತ್ತೀಚೆಗೆ ನಡೆದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೆಲ ಅಭ್ಯರ್ಥಿಗಳು ಬ್ಲೂಟೂತ್‌ ಇತ್ಯಾದಿ ಆಧುನಿಕ ಉಪಕರಣಗಳ್ನು ಬಳಸಿ ಅಕ್ರಮ ನಡೆಸಿರುವುದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಕೆಇಎ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದೆ. ಇದರ ಭಾಗವಾಗಿ ಮಾಸ್ಕ್‌ ಧರಿಸಲೂ ಅವಕಾಶ ನೀಡಿಲ್ಲ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಬೀಜ ನಿಗಮ ನಿಯಮಿತ (KSSCL)ದಲ್ಲಿನ ಸಹಾಯಕ ವ್ಯವಸ್ಥಾಪಕರ ಹಾಗೂ ಹಿರಿಯ/ ಕಿರಿಯ/ ಬೀಜ ಸಹಾಯಕರು ಹುದ್ದೆಗಳ ನೇಮಕಕ್ಕೆ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿನ ಪಶು ವೈದ್ಯಕೀಯ ಪರಿವೀಕ್ಷಕರ ಹುದ್ದೆಗಳಿಗೆ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿನ ದ್ವಿತೀಯ ದರ್ಜೆ ಸಹಾಯಕರ (SDA) ಹುದ್ದೆಗಳ ನೇಮಕಕ್ಕೆ ಮತ್ತು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿ ಖಾಲಿ ಇರುವ ಅಸಿಸ್ಟೆಂಟ್‌ ಎಂಜಿನಿಯರ್‌, ಜೂನಿಯರ್‌ ಎಂಜಿನಿಯರ್‌ ಎಸ್‌ಡಿಎ ಮತ್ತು ಎಫ್‌ಡಿಎ ಹುದ್ದೆಗಳಿಗೆ ಪರೀಕ್ಷೆ ನಡೆಸುತ್ತಿದೆ.

ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‌ಗಳು ಅಥವಾ ಬಟನ್‌ಗಳನ್ನು ಹೊಂದಿರುವ ಡ್ರೆಸ್‌ಗಳನ್ನು ಧರಿಸಬಾರದು ಎಂದು ಸೂಚಿಸಲಾಗಿದೆ. ಪೂರ್ಣತೋಳಿನ ಬಟ್ಟೆಗಳನ್ನು ಧರಿಸುವುದನ್ನೂ ನಿಷೇಧಿಸಲಾಗಿದೆ.

ಎತ್ತರದ ಹಿಮ್ಮಡಿಯ ಬೂಟುಗಳು ಮತ್ತು ಅಡಿಭಾಗ ಹೊಂದಿರುವ ಬೂಟುಗಳನ್ನು ಹಾಕಬಾರದು. ಸ್ಯಾಂಡಲ್, ಚಪ್ಪಲಿಗಳನ್ನೇ ಹಾಕಿಕೊಂಡು ಪರೀಕ್ಷೆಗೆ ಹಾಜರಾಗಬಹುದು ಎಂದು ತಿಳಿಸಲಾಗಿದೆ. ಕಿವಿಯೋಲೆಗಳು, ಉಂಗುರಗಳು, ಪೆಂಡೆಂಟ್‌ಗಳು, ನೆಕ್ಲೇಸ್‌ಗಳು, ಬಳೆಗಳು ಇಂತಹ ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ಕೂಡ ನಿಷೇಧಿಸಲಾಗಿದ್ದು, ಹಿಜಾಬ್‌, ಬುರ್ಖಾ ಧರಿಸಿ ಬರುವ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಕೆಇಎ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಪುರುಷ ಅಭ್ಯರ್ಥಿಗಳು ಕೂಡ ಅರ್ಧ ತೋಳಿನ ಶರ್ಟ್‌ಗಳನ್ನೇ ಧರಿಸಿ ಪರೀಕ್ಷೆಗೆ ಹಾಜರಾಗಬೇಕೆಂದು ಸೂಚಿಸಲಾಗಿದೆ. ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು. ಅಂದರೆ ಜಿಪ್ ಇರುವ ಪಾಕೆಟ್‌ಗಳು, ದೊಡ್ಡ ಬಟನ್‌ಗಳು, ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳನ್ನು ಧರಿಸುವಂತಿಲ್ಲ. ಕುರ್ತಾ ಪೈಜಾಮವನ್ನು ಹಾಕಿಕೊಂಡು ಬರುವಂತಿಲ್ಲ. ಯಾವುದೇ ಲೋಹದ ಆಭರಣಗಳನ್ನು ಧರಿಸಿಕೊಂಡು ಬರುವಂತಿಲ್ಲ. ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಕೆಇಎ ತಿಳಿಸಿದೆ.

ಡ್ರೆಸ್‌ಕೋಡ್‌ ಅನ್ನು ಅನುಸರಿಸುವುದರ ಜೊತೆಗೆ, ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್‌ಗಳು, ಪೆನ್‌ಡ್ರೈವ್‌ಗಳು, ಇಯರ್ ಫೋನ್‌ಗಳು, ಮೈಕ್ರೋಫೋನ್‌ಗಳು, ಬ್ಲೂಟೂತ್ ಸಾಧನಗಳು ಮತ್ತು ಕೈಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗುವಂತಿಲ್ಲ ಎಂದು ಸೂಚಿಸಲಾಗಿದೆ.

ಯಾವುದೇ ರೂಪದಲ್ಲಿ ಆಹಾರ ಪದಾರ್ಥಗಳು-ಪ್ಯಾಕ್ ಮಾಡಲಾದ ಅಥವಾ ಅನ್‌ಪ್ಯಾಕ್‌ ಆಹಾರ ಪದಾರ್ಥಗಳನ್ನು ಸಹ ಪರೀಕ್ಷಾ ಕೇಂದ್ರದೊಳಗೆ ತೆಗೆದುಕೊಂಡು ಹೋಗುವಂತಿಲ್ಲ. ಪರೀಕ್ಷಾ ಕೇಂದ್ರದ ಒಳಗೆ ನೀರಿನ ಬಾಟಲಿ ತೆಗೆದುಕೊಂಡು ಹೋಗಬಹುದಾದರೂ ಬಾಟಲಿ ಪಾರದರ್ಶಕವಾಗಿರಬೇಕು. ಅದಕ್ಕೆ ಯಾವುದೇ ಲೇಬಲ್‌ ಇರಬಾರದು ಎಂದು ಸೂಚಿಸಲಾಗಿದೆ.

ಪೆನ್ಸಿಲ್, ಪೇಪರ್, ಎರೇಸರ್, ಮಾಪಕಗಳು, ಜ್ಯಾಮಿಟ್ರಿ ಬಾಕ್ಸ್ ಮತ್ತು ಲಾಗ್ ಟೇಬಲ್‌ಗಳನ್ನು ಪರೀಕ್ಷಾ ಕೇಂದ್ರಗೊಳಗೆ ಒಯ್ಯುವುದನ್ನು ನಿಷೇಧಿಸಲಾಗಿದೆ. ವ್ಯಾಲೆಟ್‌ಗಳು, ಗಾಗಲ್ಸ್, ಬೆಲ್ಸ್‌ಗಳು, ಕ್ಯಾಪ್‌ಗಳು, ಪರಿಕರಗಳು, ಕ್ಯಾಮೆರಾ ಮತ್ತು ಆಭರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಒಯ್ಯಲು ಅನುಮತಿಸಲಾಗುವುದಿಲ್ಲ ಎಂದು ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ | KEA Recruitment 2023 : ಕೆಇಎನಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆ; ಪರಿಷ್ಕೃತ ವೇಳಾಪಟ್ಟಿ, ಪ್ರವೇಶ ಪತ್ರ ಬಿಡುಗಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉದ್ಯೋಗ

SSC Recruitment 2023 : ಅರೆಸೇನಾಪಡೆಗಳ 75 ಸಾವಿರವಲ್ಲ 26 ಸಾವಿರ ಹುದ್ದೆಗಳಿಗೆ ನೇಮಕ; ಕನ್ನಡದಲ್ಲಿಯೂ ನಡೆಯುತ್ತೆ ಪರೀಕ್ಷೆ!

ಅರೆಸೇನಾ ಪಡೆಗಳಲ್ಲಿನ 75,768 ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು (SSC recruitment 2023) ಎಂದು ಪ್ರಕಟಿಸಿದ್ದ ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು (ಎಸ್‌ಎಸ್‌ಸಿ) ಈಗ ಹುದ್ದೆಗಳ ಸಂಖ್ಯೆಯನ್ನು 26 ಸಾವಿರಕ್ಕೆ ಇಳಿಸಿದೆ. ಇದೇ ಮೊದಲ ಬಾರಿಗೆ ಕನ್ನಡದಲ್ಲಿಯೂ ನೇಮಕಾತಿ ಪರೀಕ್ಷೆ ನಡೆಯಲಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

SSC GD Constable Vacancy 2023 Notification out
Koo

ಬೆಂಗಳೂರು: ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು (ಎಸ್‌ಎಸ್‌ಸಿ) ಕಾನ್ಸ್‌ಟೇಬಲ್‌ ಹುದ್ದೆಗಳ (ಜನರಲ್‌ ಡ್ಯೂಟಿ) ನೇಮಕಕ್ಕೆ ಸಂಬಂಧಿಸಿದಂತೆ (SSC recruitment 2023) ಒಂದು ಗುಡ್‌ ಮತ್ತು ಬ್ಯಾಡ್‌ ನ್ಯೂಸ್‌ ನೀಡಿದೆ. ಗುಡ್‌ ನ್ಯೂಸ್‌ ಏನೆಂದರೆ ಈ ಹುದ್ದೆಗಳ ನೇಮಕಕ್ಕೆ ನಡೆಸಲಾಗುವ ಪರೀಕ್ಷೆಯನ್ನು ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುತ್ತದೆ. ಬ್ಯಾಡ್‌ ನ್ಯೂಸ್‌ ಏನೆಂದರೆ ಈ ಹಿಂದೆ ಪ್ರಕಟಿಸಿದಂತೆ 75,768 ಹುದ್ದೆಗಳಿಗೆ ನೇಮಕ ನಡೆಯುತ್ತಿಲ್ಲ. ಬದಲಾಗಿ, ಈ ಬಾರಿ ಕೇವಲ 26,146 ಹುದ್ದೆಗಳಿಗೆ ನೇಮಕ ನಡೆಯಲಿದೆ.

ಮೊದಲಿಗೆ ಬಿಡುಗಡೆಯಾಗಿದ್ದ ಅಧಿಸೂಚನೆಯಲ್ಲಿ 75,768 ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ನೇಮಕ ನಡೆಯಲಿದೆ. ಈ ನೇಮಕಕ್ಕೆ ನಡೆಸಲಾಗುವ ಕಂಪ್ಯೂಟರ್‌ ಆಧಾರಿತ ಪರೀಕ್ಷೆಯನ್ನು (CBE) ಇಂಗ್ಲಿಷ್‌ ಮತ್ತು ಹಿಂದಿಯಲ್ಲಿ ಮಾತ್ರ ನಡೆಸಲಾಗುತ್ತದೆ ಎಂದು ಪ್ರಕಟಿಸಲಾಗಿತ್ತು. ಭಾರಿ ಹುದ್ದೆಗಳಿಗೆ ನೇಮಕ ನಡೆಯುತ್ತಿರುವುದರಿಂದ ಅಭ್ಯರ್ಥಿಗಳು ಹರ್ಷ ವ್ಯಕ್ತಪಡಿಸಿದ್ದರು. ಅದೇ ಸಂದರ್ಭದಲ್ಲಿ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಯದೇ ಇರುವುದಕ್ಕೆ ಆಕ್ಷೇಪಣೆ ಕೂಡ ವ್ಯಕ್ತವಾಗಿತ್ತು.

ಈ ಹಿಂದೆ ಗೃಹ ಇಲಾಖೆ ನೀಡಿದ ಸೂಚನೆಯಂತೆ ಈ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಮೊದಲಿಗೆ ನಡೆಸಲಾಗುವ ಕಂಪ್ಯೂಟರ್‌ ಆಧಾರಿತ ಪರೀಕ್ಷೆಯನ್ನು (CBE) ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುತ್ತದೆ ಎಂದು ಪರಿಷ್ಕೃತ ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ಈ ಪರೀಕ್ಷೆಯು ಕನ್ನಡದಲ್ಲಿಯೂ ನಡೆಯುತ್ತಿದೆ. ಅಲ್ಲದೆ ಹುದ್ದೆಗಳ ಕಡಿತದ ಕುರಿತೂ ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗಿದೆ. ಸದ್ಯ 26,146 ಹುದ್ದೆಗಳಿಗೆ ನೇಮಕ ನಡೆಯಲಿದೆ ಎಂದು ತಿಳಿಸಲಾಗಿದ್ದರೂ, ಇದನ್ನು ಮತ್ತೆ ಮುಂದೆ ಪರಿಷ್ಕರಿಸುವ ಸಾಧ್ಯತೆಗಳಿವೆ ಎಂದು ತಿಳಿಸಲಾಗಿದೆ.

ಪರಿಷ್ಕೃತ ಅಧಿಸೂಚನೆ ನೋಡಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ಕಳೆದ ಏಪ್ರಿಲ್‌ನಲ್ಲಿ ಕೇಂದ್ರೀಯ ಮೀಸಲು ಪೊಲೀಸ್‌ ಪಡೆಯಲ್ಲಿನ (ಸಿಆರ್‌ಪಿಎಫ್‌) ಕಾನ್ಸ್‌ಟೇಬಲ್‌ ಹುದ್ದೆಗಳ (ಜನರಲ್‌ ಡ್ಯೂಟಿ) ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದಾಗ ನೇಮಕಾತಿ ಪರೀಕ್ಷೆಗಳನ್ನು ಇಂಗ್ಲಿಷ್‌ ಅಥವಾ ಹಿಂದಿಯಲ್ಲಿ ಮಾತ್ರ ನಡೆಸಲಾಗುವುದು ಎಂದು ಪ್ರಕಟಿಸಲಾಗಿತ್ತು. ಈ ಕುರಿತು ʻವಿಸ್ತಾರ ನ್ಯೂಸ್‌ʼ ಗಮನ ಸೆಳೆದಿದ್ದು, ಕನ್ನಡ ಹೋರಾಟಗಾರರು ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದರು. ಕನ್ನಡಿಗರ ಹೋರಟಕ್ಕೆ ಮಣಿದಿದ್ದ ಕೇಂದ್ರ ಗೃಹ ಸಚಿವಾಲಯ ಈ ನೇಮಕಾತಿ ಪರೀಕ್ಷೆಯನ್ನು ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವ ತೀರ್ಮಾನ ಪ್ರಕಟಿಸಿತ್ತು.

ಈ ವಿಷಯವನ್ನು ಆಗ X ನಲ್ಲಿ ಪ್ರಕಟಿಸಿದ್ದ ಗೃಹ ಸಚಿವ ಅಮಿತ್‌ ಶಾ, ಇನ್ನು ಮುಂದೆ ಸಿಎಪಿಎಫ್‌ ವ್ಯಾಪ್ತಿಗೆ ಬರುವ ಸಿಆರ್‌ಪಿಎಫ್‌, ಗಡಿ ಭದ್ರತಾ ಪಡೆ (BSF), ಸಶಸ್ತ್ರ ಸೀಮಾ ದಳ, ಇಂಡೋ-ಟಿಬೆಟಿಯನ್‌ ಗಡಿ ಪೊಲೀಸ್‌ (ITBP) ಸೇರಿ ಎಲ್ಲ ಪರೀಕ್ಷೆಗಳನ್ನು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಯಲ್ಲಿ ನಡೆಸಲಾಗುವುದು ಎಂದು ತಿಳಿಸಿದ್ದರು. ಈ ಸೂಚನೆಯನ್ನು ಎಸ್‌ಎಸ್‌ಸಿ ಕೂಡ ಈಗ ಪಾಲಿಸಿದೆ.

ಪರಿಷ್ಕೃತ ಹುದ್ದೆಗಳ ವಿವರ

SSC Constable GD Registration begins for 26146 posts

ಈ ನೇಮಕಾತಿಯಲ್ಲಿ ಮೊದಲಿಗೆ ಕಂಪ್ಯೂಟರ್‌ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ. 160 ಅಂಕಗಳಿಗೆ ನಡೆಯಲಿರುವ ಈ ಪರೀಕ್ಷೆಯಲ್ಲಿ 80 ಪ್ರಶ್ನೆಗಳನ್ನು ಕೇಳಲಾಗಿರುತ್ತದೆ. ಪರೀಕ್ಷೆ ಬರೆಯಲು ಒಂದು ಗಂಟೆ ಕಾಲಾವಕಾಶ ನೀಡಲಾಗಿರುತ್ತದೆ. ಈ ಪರೀಕ್ಷೆಯಲ್ಲಿ ಪ್ರಶ್ನೆಗಳು ಕೇವಲ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಇರಲಿವೆ. ಈ ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದವರಿಗೆ ದೈಹಿಕ ಸಾಮರ್ಥ್ಯ ಮತ್ತು ದೇಹದಾರ್ಢ್ಯತೆ ಪರೀಕ್ಷೆ (PET/ PST) ನಡೆಸಲಾಗುತ್ತದೆ. ಇದರಲ್ಲಿಯೂ ಅರ್ಹತೆ ಪಡೆದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ.

ರಾಜ್ಯದ ಒಟ್ಟು ಎಂಟು ಜಿಲ್ಲಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಸಲಾಗುತ್ತೆ. ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ ಪರೀಕ್ಷಾ ಕೇಂದ್ರ ಇರಲಿದೆ. ರಾಜ್ಯದ ಅಭ್ಯರ್ಥಿಗಳು ಈ ಪರೀಕ್ಷೆಯನ್ನು ಬರೆಯುವ ಮೂಲಕ ಅರೆಸೇನಾಪಡೆಗಳಲ್ಲಿನ ಈ ಹುದ್ದೆಗಳನ್ನು ಪಡೆದುಕೊಳ್ಳಬಹುದಾಗಿದೆ. ನೇಮಕಗೊಂಡ ಅಭ್ಯರ್ಥಿಗಳಿಗೆ ಮಾಸಿಕ ರೂ. 21,700-69,100 ವೇತನ ನೀಡಲಾಗುತ್ತದೆ.

ವಿದ್ಯಾರ್ಹತೆ ಏನು?

ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿಯಲ್ಲಿ ಅಥವಾ 10 ನೇ ತರಗತಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ದಾಖಲೆ ಪರಿಶೀಲನೆಯ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿರುವುದಕ್ಕೆ ದಾಖಲೆಗಳನ್ನು ಹಾಜರು ಪಡಿಸಬೇಕಿರುತ್ತದೆ.

ನೇಮಕಾತಿಯ ವೇಳಾಪಟ್ಟಿ

SSC Constable GD Registration begins for 26146 posts

ದೈಹಿಕ ಅರ್ಹತೆ ಏನೇನು?

ಅಭ್ಯರ್ಥಿಗಳಿಗೆ ಶಾರೀರಿಕ ಮಾನದಂಡಗಳನ್ನು ನಿಗದಿಪಡಿಸಲಾಗಿರುತ್ತದೆ. ಪುರುಷ ಅಭ್ಯರ್ಥಿಗಳು ಕನಿಷ್ಠ 170 ಸೆಂ.ಮೀ. ಎತ್ತರವಿರಬೇಕು, ಸಾಮಾನ್ಯ ಸ್ಥಿತಿಯಲ್ಲಿ ಕನಿಷ್ಠ 80 ಸೆಂ.ಮೀ. ಎದೆ ಸುತ್ತಳಗೆ ಹೊಂದಿರಬೇಕು. ಎದೆಯ ಕನಿಷ್ಠ ಹಿಗ್ಗುವಿಕೆ 5 ಸೆಂ.ಮೀ. ಇರಬೇಕು. ಮಹಿಳಾ ಅಭ್ಯರ್ಥಿಗಳು ಕನಿಷ್ಠ 157 ಸೆಂ.ಮೀ ಎತ್ತರವಿರಬೇಕು. ಎತ್ತರಕ್ಕೆ ತಕ್ಕ ತೂಕವನ್ನು ಪುರುಷ ಅಭ್ಯರ್ಥಿಗಳು ಹೊಂದಿರಬೇಕಾಗುತ್ತದೆ.

ನವೆಂಬರ್‌ 24 ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಡಿಸೆಂಬರ್‌ 28 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಕಂಪ್ಯೂಟರ್‌ ಆಧಾರಿತ ಪರೀಕ್ಷೆಯು ಫೆಬ್ರವರಿಯಲ್ಲಿ ನಡೆಯುವ ಸಾಧ್ಯತೆ ಇದೆ. 18-23 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ವೆಬ್‌ ವಿಳಾಸ: https://ssc.nic.in/

ಇದನ್ನೂ ಓದಿ : Job Alert: ನಮ್ಮ ಮೆಟ್ರೋದಲ್ಲಿದೆ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: ಉದ್ಯೋಗ ಹುಡುಕುತ್ತಿರುವವರಿಗೆ ಗುಡ್‌ನ್ಯೂಸ್‌; ಸಿಐಎಸ್‌ಎಫ್‌ನಲ್ಲಿದೆ 11,025 ಹುದ್ದೆ

Job Alert: ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಸಿಐಎಸ್‌ಎಫ್‌ನ 11,025 ಕಾನ್‌ಸ್ಟೇಬಲ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಡಿಸೆಂಬರ್‌ 31ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.

VISTARANEWS.COM


on

cisf
Koo

ಬೆಂಗಳೂರು: ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು (ಎಸ್‌ಎಸ್‌ಸಿ) ಬರೋಬ್ಬರಿ 11,025 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌)ಯ ಕಾನ್‌ಸ್ಟೇಬಲ್‌ (ಜನರಲ್‌ ಡ್ಯೂಟಿ) ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು (CISF GD Constable Recruitment 2023). ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್‌ 31 (Job Alert).

ಹುದೆಗಳ ವಿವರ ಮತ್ತು ವಿದ್ಯಾರ್ಹತೆ

ಈ ಹುದ್ದೆಗಳಿಗೆ ಮಹಿಳೆಯರು ಮತ್ತು ಪುರುಷರು ಅರ್ಜಿ ಸಲ್ಲಿಸಬಹುದು. ಪುರುಷರಿಗೆ 9,913 ಮತ್ತು ಮಹಿಳೆಯರಿಗೆ 1,112 ಹುದ್ದೆಗಳಿವೆ. ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ/ ವಿಶ್ವವಿದ್ಯಾನಿಲಯದಿಂದ ಮೆಟ್ರಿಕ್ಯುಲೇಷನ್‌ ಅಥವಾ 10ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ

ಅರ್ಜಿ ಸಲ್ಲಿಕೆಗೆ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 23 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ವರ್ಗಕ್ಕೆ ಸೇರಿದವರಿಗೆ 3 ವರ್ಷ, ಮೊದಲ ಬ್ಯಾಚ್‌ನ ಮಾಜಿ ಅಗ್ನಿವೀರರಿಗೆ 5 ವರ್ಷ ಮತ್ತು ಮಾಜಿ ಅಗ್ನಿವೀರರಿಗೆ 3 ವರ್ಷಗಳ ಸಡಿಲಿಕೆ ಇದೆ.

ಅರ್ಜಿ ಶುಲ್ಕ

ಎಸ್‌ಸಿ/ಎಸ್‌ಟಿ, ಮಾಜಿ ಸೈನಿಕರಿಗೆ ಅರ್ಜಿ ಶುಲ್ಕವಿಲ್ಲ. ಇತರ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಬೇಕು. ಆನ್‌ಲೈನ್‌ ಮೂಲಕವೇ ಅರ್ಜಿ ಶುಲ್ಕ ಪಾವತಿಸುವುದು ಕಡ್ಡಾಯ. ಇದಕ್ಕಾಗಿ ಯುಪಿಐ, ನೆಟ್‌ ಬ್ಯಾಂಕಿಂಗ್‌, ಕ್ರೆಡಿಟ್‌/ಡೆಬಿಟ್‌ ಕಾರ್ಡ್‌ ಇತ್ಯಾದಿ ಬಳಸಬಹುದು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕಂಪ್ಯೂಟರ್‌ ಆಧಾರಿತ ಪರೀಕ್ಷೆ(ಸಿಬಿಇ), ಫಿಸಿಕಲ್‌ ಸ್ಟ್ಯಾಂಡರ್ಡ್‌ ಟೆಸ್ಟ್‌(ಪಿಎಸ್‌ಟಿ), ಫಿಸಿಕಲ್‌ ಎಫಿಯ್ಶೆನ್ಸಿ ಟೆಸ್ಟ್‌ (ಪಿಇಟಿ), ವೂದ್ಯಕೀಯ ಪರೀಕ್ಷೆ ಮತ್ತು ಡಾಕ್ಯುಮೆಂಟ್‌ ಪರಿಶೀಲನೆಯ ಮೂಲಕ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 21,700 ರೂ.-69,100 ರೂ. ಮಾಸಿಕ ವೇತನವಿದೆ. ವೇತನದ ಜತೆಗೆ ಇತರ ಕೆಲವು ಅನುಕೂಲಗಳೂ ಲಭ್ಯ.

ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ: Job Alert: ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್‌ಮೆಂಟ್‌ ಬ್ಯಾಂಕ್ ಆಫ್ ಇಂಡಿಯಾದ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
  • ಹೋಮ್‌ ಪೇಜ್‌ನಲ್ಲಿ CISF GD Constable Recruitment 2023 ಆಯ್ಕೆ ಮೇಲೆ ಕ್ಲಿಕ್‌ ಮಾಡಿ
  • ನೀವು ಹೊಸ ಬಳಕೆದಾರರಾಗಿದ್ದರೆ ಒದಗಿಸಿದ ನೋಂದಣಿ ಪ್ರಕ್ರಿಯೆಯನ್ನು ಬಳಸಿಕೊಂಡು ಖಾತೆಯನ್ನು ರಚಿಸಿ ಮತ್ತು ನೀವು ಖಾತೆಯನ್ನು ಹೊಂದಿದ್ದರೆ ಅದರ ಮೂಲಕ ಲಾಗ್ ಇನ್ ಆಗಿ
  • ನಿಖರವಾದ ಮತ್ತು ನವೀಕೃತ ವೈಯಕ್ತಿಕ ಮಾಹಿತಿಯೊಂದಿಗೆ ಆನ್‌ಲೈನ್‌ ಅರ್ಜಿ ನಮೂನೆಯನ್ನು ಭರ್ತಿ ಮಾಡಿ
  • ಅಗತ್ಯವಾದ ಡಾಕ್ಯುಮೆಂಟ್‌ನ ಪ್ರತಿಗಳನ್ನು ಅಪ್‌ಲೋಡ್‌ ಮಾಡಿ
  • ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಿ (ಅಗತ್ಯವಿದ್ದವರು ಮಾತ್ರ)
  • ಮತ್ತೊಮ್ಮೆ ಅರ್ಜಿ ಫಾರಂ ಅನ್ನು ಗಮನಿಸಿದ ಎಲ್ಲ ಸರಿಯಾಗಿದೆ ಎನ್ನುವುದು ಖಚಿತವಾದ ಬಳಿಕ Submit ಬಟನ್‌ ಕ್ಲಿಕ್‌ ಮಾಡಿ
  • CISF GD Constable ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ ಔಟ್‌ ತೆಗೆದಿಡಿ
Continue Reading

ಉದ್ಯೋಗ

Job Alert: ನಮ್ಮ ಮೆಟ್ರೋದಲ್ಲಿದೆ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

Job Alert: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಒಟ್ಟು 6 ಹುದ್ದೆಗಳು ಖಾಲಿ ಇವೆ. ಆಸಕ್ತರು ಡಿಸೆಂಬರ್‌ 22ರೊಳಗೆ ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

VISTARANEWS.COM


on

metro
Koo

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (BMRCL Recruitment 2023). ಒಟ್ಟು 6 ಹುದ್ದೆಗಳು ಖಾಲಿ ಇವೆ. ಆಸಕ್ತರು ಡಿಸೆಂಬರ್‌ 22ರೊಳಗೆ ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಉದ್ಯೋಗದ ಸ್ಥಳ ಬೆಂಗಳೂರು (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮ್ಯಾನೇಜರ್ ಸಿವಿಲ್- 2 ಹುದ್ದೆ, ವಿದ್ಯಾರ್ಹತೆ: ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ
ಮ್ಯಾನೇಜರ್ (ಪಿ-ವೇ, ಕಾರ್ಯಾಚರಣೆಗಳು)- 4 ಹುದ್ದೆ, ವಿದ್ಯಾರ್ಹತೆ: ಎಲೆಕ್ಟ್ರಿಕಲ್/ಮೆಕ್ಯಾನಿಕಲ್/ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್/ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್‌ನಲ್ಲಿ ಪದವಿ.

ಅಭ್ಯರ್ಥಿಯ ಗರಿಷ್ಠ ವಯಸ್ಸು 40 ವರ್ಷ. ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅಭ್ಯರ್ಥಿಗಳು english.bmrc.co.in ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಬಳಿಕ ಅರ್ಜಿದಾರರು ಆನ್‌ಲೈನ್ ಅರ್ಜಿ ನಮೂನೆಯ ಹಾರ್ಡ್ ಪ್ರತಿಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಜನರಲ್ ಮ್ಯಾನೇಜರ್ (ಎಚ್‌ಆರ್), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, III ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಎಚ್. ರಸ್ತೆ, ಶಾಂತಿನಗರ, ಬೆಂಗಳೂರು-560027 ಇಲ್ಲಿಗೆ ಕಳುಹಿಸಬೇಕು.

ಇದನ್ನೂ ಓದಿ: Job Alert: ಐಡಿಬಿಐ ಬ್ಯಾಂಕ್‌ನಲ್ಲಿದೆ 2,100 ಉದ್ಯೋಗಾವಕಾಶ; ಇಂದಿನಿಂದಲೇ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

KARTET Result 2023: ಟಿಇಟಿ ಫಲಿತಾಂಶ; ಶಿಕ್ಷಕರಾಗಲು 64,830 ಅಭ್ಯರ್ಥಿಗಳು ಅರ್ಹ

KARTET Result 2023: ಕರ್ನಾಟಕ ಟಿಇಟಿ ಪತ್ರಿಕೆ 1 ಮತ್ತು 2 ಪರೀಕ್ಷೆಗೆ ಹಾಜರಾದ ಒಟ್ಟು 3.01 ಲಕ್ಷ ಅಭ್ಯರ್ಥಿಗಳ ಪೈಕಿ 64,830 ಅಭ್ಯರ್ಥಿಗಳು ಶಿಕ್ಷಕರಾಗಲು ಅರ್ಹತೆ ಪಡೆದಿದ್ದಾರೆ.

VISTARANEWS.COM


on

The teacher is teaching in the school
Koo

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2023ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶವನ್ನು ಪ್ರಕಟಿಸಿದ್ದು, ಟಿಇಟಿ ಪತ್ರಿಕೆ 1 ಮತ್ತು 2 (KARTET Result 2023) ಪರೀಕ್ಷೆಗೆ ಹಾಜರಾದ ಒಟ್ಟು 3.01 ಲಕ್ಷ ಅಭ್ಯರ್ಥಿಗಳ ಪೈಕಿ 64,830 ಅಭ್ಯರ್ಥಿಗಳು ಶಿಕ್ಷಕರಾಗಲು ಅರ್ಹತೆ ಪಡೆದಿದ್ದಾರೆ.

ಸೆಪ್ಟೆಂಬರ್‌ 3ರಂದು ಟಿಇಟಿ ನಡೆದಿತ್ತು. 1 ರಿಂದ 5ನೇ ತರಗತಿ ಬೋಧನಾ ಅರ್ಹತೆಗೆ ನಡೆದಿದ್ದ ಪತ್ರಿಕೆ-1ರಲ್ಲಿ 1,27,131 ಅಭ್ಯರ್ಥಿಗಳ ಪೈಕಿ 14,922 (ಶೇ. 11.74) ಹಾಗೂ 5ರಿಂದ 8ನೇ ತರಗತಿವರೆಗಿನ ಬೋಧನಾ ಅರ್ಹತೆಗೆ ನಡೆದಿದ್ದ ಪತ್ರಿಕೆ-2 ಪರೀಕ್ಷೆಯಲ್ಲಿ 1,74,831 ಮಂದಿ ಪೈಕಿ 49,908 ಮಂದಿ (ಶೇ.28.54) ಶಿಕ್ಷಕರಾಗಲು ಅರ್ಹತೆ ಪಡೆದಿದ್ದಾರೆ.

ಟಿಇಟಿ-2023 ಫಲಿತಾಂಶವನ್ನು ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ

ಮಹಿಳೆಯರ ಮೈಲುಗೈ

ಟಿಇಟಿ ಪತ್ರಿಕೆ-1 ರಲ್ಲಿ 4,139 ಪುರುಷರು, 10,783 ಮಹಿಳೆಯರು ಅರ್ಹತೆ ಪಡೆದಿದ್ದು, ಪತ್ರಿಕೆ-2 ರಲ್ಲಿ 16,268 ಪುರುಷರು, 33,634 ಮಹಿಳೆಯರು, 6 ಲಿಂಗತ್ವ ಅಲ್ಪಸಂಖ್ಯಾತರು ಅರ್ಹತೆ ಪಡೆದಿದ್ದಾರೆ.

ಪತ್ರಿಕೆ-2ರಲ್ಲಿ ಉತ್ತೀರ್ಣರಾದವರ ಪೈಕಿ ಸಮಾಜ ವಿಜ್ಞಾನ ವಿಷಯ ಬೋಧನೆಗೆ 35,349 ಮಂದಿ ಮತ್ತು ಗಣಿತ ಮತ್ತು ವಿಜ್ಞಾನ ವಿಷಯ ಬೋಧನೆಗೆ 14,559 ಮಂದಿ ಅರ್ಹರಾಗಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2023ರ (ಟಿಇಟಿ) (KARTET Result 2023) ಫಲಿತಾಂಶವನ್ನು ಪ್ರಕಟಿಸಿದೆ. ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳು ಫಲಿತಾಂಶ ವೀಕ್ಷಿಸಬಹುದು.

ಅಭ್ಯರ್ಥಿಗಳು ಅರ್ಜಿಸಂಖ್ಯೆ ಮತ್ತು ಅಭ್ಯರ್ಥಿಯ ಜನ್ಮದಿನಾಂಕ (ಆನ್‌ಲೈನ್‌ ಅರ್ಜಿಯಲ್ಲಿರುವಂತೆ) ನಮೂದಿಸಿ ಫಲಿತಾಂಶ ವೀಕ್ಷಿಸುವುದಷ್ಟೇ ಅಲ್ಲದೇ ಶಿಕ್ಷಣ ಇಲಾಖೆಯ ವೆವ್‌ಸೈಟ್‌ನಲ್ಲಿ (www.schooleducation.kar.nic.in) ಗಣಕೀಕೃತ ಪ್ರಮಾಣಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಈ ಪ್ರಮಾಣ ಪತ್ರವು ಜೀವಿತಾವಧಿಯವರೆಗೆ ಮಾನ್ಯತೆ ಹೊಂದಿರುತ್ತದೆ.

ಇದನ್ನೂ ಓದಿ | SSC recruitment 2023 : ಅರೆಸೇನಾ ಪಡೆಗಳಲ್ಲಿ 75,768 ಕಾನ್ಸ್‌ಟೇಬಲ್‌ ಹುದ್ದೆ; ಕನ್ನಡದಲ್ಲಿ ನಡೆಯೋಲ್ಲ ಪರೀಕ್ಷೆ

ಅರ್ಹತಾ ಅಂಕಗಳನ್ನು ಗಳಿಸಿದ ಅಭ್ಯರ್ಥಿಗಳಿಗೆ ಮುದ್ರಿತ ಅಂಕಪಟ್ಟಿ ಬದಲಿಗೆ QR Code ದತ್ತಾಂಶವನ್ನು ಹೊಂದಿರುವ ಗಣಕೀಕೃತ ಅಂಕಪಟ್ಟಿ ವಿತರಿಸಲಾಗುತ್ತದೆ. ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ನೀಡಲಾದ ಲಿಂಕ್‌ ಮೂಲಕ ಸುರಕ್ಷತಾ ಕೋಡ್‌ (QR Code) ಹೊಂದಿರುವ ಗಣಕೀಕೃತ ಪ್ರಮಾಣಪತ್ರವನ್ನು ಪಡೆದುಕೊಳ್ಳಬಹುದಾಗಿದೆ. ಈ ಪ್ರಮಾಣ ಪತ್ರವು ಸೀಮಿತ ದಿನಗಳವರೆಗೆ ಮಾತ್ರ ವೆಬ್‌ಸೈಟ್‌ನಲ್ಲಿ ಲಭ್ಯವಿರಲಿದ್ದು, ಅಭ್ಯರ್ಥಿಗಳು ಸಾಕಷ್ಟು. ಸಂಖ್ಯೆಯ ಪ್ರತಿಗಳನ್ನು ಡೌನ್‌ಲೋಡ್‌ ಮಾಡಿಕೊಂಡು ತಮ್ಮಲ್ಲಿ ಇಟ್ಟುಕೊಳ್ಳಬಹುದು.

Continue Reading
Advertisement
PM Narendra Modi phone call to workers, who rescued from collapsed tunnel
ದೇಶ36 mins ago

ಸುರಂಗದಿಂದ ರಕ್ಷಿಸಲಾದ ಕಾರ್ಮಿಕರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ!

mantralaya mutt
ಕರ್ನಾಟಕ1 hour ago

ಮಂತ್ರಾಲಯ ಮಠಕ್ಕೆ ಭಕ್ತರೊಬ್ಬರಿಂದ ಹೆಲಿಕಾಪ್ಟರ್‌ ಕೊಡುಗೆ

Uttarakhand CM announces rs 1 lakh rupees to trapped labourers Who rescued after 17 days
ದೇಶ2 hours ago

ಬದುಕುಳಿದು ಬಂದ ಕಾರ್ಮಿಕರಿಗೆ 1 ಲಕ್ಷ ಪರಿಹಾರ ಎಂದ ಉತ್ತರಾಖಂಡ ಸಿಎಂ ಧಾಮಿ

Maxwell
ಕ್ರಿಕೆಟ್2 hours ago

Ind vs Aus : ಮ್ಯಾಕ್ಸ್​ವೆಲ್​ ಸ್ಫೋಟಕ ಶತಕ; 3ನೇ ಪಂದ್ಯದಲ್ಲಿ ಭಾರತಕ್ಕೆ ಸೋಲು

Siddaramaiah
ಕರ್ನಾಟಕ2 hours ago

ಕಾರ್ಮಿಕರಿಗೆ ಮರುಹುಟ್ಟು ನೀಡಿದ ರಕ್ಷಣಾ ಸಿಬ್ಬಂದಿಗೆ ಸಿದ್ದರಾಮಯ್ಯ ಧನ್ಯವಾದ

Uttarkashi Tunnel Rescue and Makeshift hospital
ದೇಶ2 hours ago

ಸುರಂಗದಿಂದ 41 ಕಾರ್ಮಿಕರ ರಕ್ಷಣೆ; ಮುಂದೇನಾಗುತ್ತದೆ ಎಂಬುದರ ಕಂಪ್ಲೀಟ್‌ ಮಾಹಿತಿ ಇಲ್ಲಿದೆ

Top 10 news
ಕರ್ನಾಟಕ3 hours ago

VISTARA TOP 10 NEWS: ಸುರಂಗದಲ್ಲಿ ಸಿಲುಕಿದ್ದ ಎಲ್ಲ ಕಾರ್ಮಿಕರ ರಕ್ಷಣೆ, ಮಕ್ಕಳ ಮಾರಾಟ ಬೃಹತ್​ ಜಾಲ ಪತ್ತೆ ಮತ್ತಿತರ ದಿನದ ಪ್ರಮುಖ ಸುದ್ದಿಗಳು

Uttarakhand Tunnel Collapse
EXPLAINER3 hours ago

150 ಮೀಟರ್‌ ಸುರಂಗ ಕುಸಿತ, 57 ಮೀಟರ್‌ ಕೊರೆತ! 41 ಕಾರ್ಮಿಕರನ್ನು ರಕ್ಷಿಸಿದ್ದು ಹೇಗೆ?

Uttarkashi Tunnel rescue success makes us emotional says PM Narendra Modi
ದೇಶ4 hours ago

ಕಾರ್ಮಿಕರ ರಕ್ಷಣೆಯ ಯಶಸ್ಸು ನಮ್ಮನ್ನೆಲ್ಲ ಭಾವುಕರನ್ನಾಗಿಸಿದೆ ಎಂದ ಪ್ರಧಾನಿ ಮೋದಿ

Ruturaj Gaikwad
ಕ್ರಿಕೆಟ್4 hours ago

Ruturaj Gaikwad : ಆಸ್ಟ್ರೇಲಿಯಾ ವಿರುದ್ಧ ಶತಕ ಬಾರಿಸಿ ವಿಶೇಷ ಸಾಧನೆ ಮಾಡಿದ ಋತುರಾಜ್​

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ4 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ6 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Dina Bhavishya
ಪ್ರಮುಖ ಸುದ್ದಿ20 hours ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

Cm Siddaramaiah in Janatha Darshan
ಕರ್ನಾಟಕ1 day ago

Janatha Darshan : ಜನಸ್ಪಂದನದಲ್ಲಿ ಸ್ವೀಕಾರವಾಗಿದ್ದು 3812 ಅರ್ಜಿ; ಇವುಗಳ ಸ್ಟೇಟಸ್‌ ಈಗ ಹೇಗಿದೆ?

CM Siddaramaiah Janatha Darshan
ಕರ್ನಾಟಕ1 day ago

Janatha Darshan : ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನ ಗಡುವು ಕೊಟ್ಟ ಸಿಎಂ; ಕುಳಿತಲ್ಲೇ ಸಿದ್ದು ಊಟ!

Cm Siddaramaiah in Janatha Darshan
ಕರ್ನಾಟಕ1 day ago

Janatha Darshan : ಜಿಲ್ಲಾ ಮಟ್ಟದ ಸಮಸ್ಯೆ ಬೆಂಗಳೂರಿಗೆ ಬಂದರೆ ಸಹಿಸಲ್ಲ; ಸಿಎಂ ಖಡಕ್‌ ಎಚ್ಚರಿಕೆ

CM Janatha Darshana solved mysore citizens problem
ಕರ್ನಾಟಕ1 day ago

Janatha Darshan : ಮಾಲೀಕನ ಮನೆ ಹರಾಜು; ಲೀಸ್‌ ದುಡ್ಡಿಗೆ ಯಾರು ಗ್ಯಾರಂಟಿ? ಕಂಗೆಟ್ಟ ಕುಟುಂಬಕ್ಕೆ ಸಿಎಂ ರಕ್ಷಣೆ!

Shivajingar School building collapses The children escaped unhurt
ಕರ್ನಾಟಕ1 day ago

Building collapse : ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡ; ಪ್ರಾಣಾಪಾಯದಿಂದ ಚಿಣ್ಣರು ಪಾರು

CM Siddaramaiah Janatha Darshan
ಕರ್ನಾಟಕ1 day ago

Janatha Darshan : ಸಿಎಂಗೆ ದೂರು ನೀಡಬೇಕೇ? ಜನತಾ ದರ್ಶನಕ್ಕೆ ಹೋಗಬೇಕಿಲ್ಲ; ಈ ನಂಬರ್‌ಗೆ ಕರೆ ಮಾಡಿ!

read your daily horoscope predictions for november 27 2023
ಪ್ರಮುಖ ಸುದ್ದಿ2 days ago

Dina Bhavishya: ನಿಮ್ಮನ್ನು ಉರುಳಿಸಲು ಪಿತೂರಿ ಮಾಡ್ತಾರೆ ಹುಷಾರ್‌!

Danger Influenza People are suffering from the flu
ಆರೋಗ್ಯ2 days ago

Viral fever: ಡೆಡ್ಲಿ ಚೀನಾ ವೈರಸ್‌; ಮಕ್ಕಳಿಗೆ ಇದರಿಂದ ಅಪಾಯ ಇದೆಯಾ?

BY Vijayendra and HD Kumarswamy
ಕರ್ನಾಟಕ2 days ago

BJP JDS Alliance: ಎಚ್‌ಡಿಕೆ-ವಿಜಯೇಂದ್ರ ಭೇಟಿ; 28ಕ್ಕೆ 28 ಸ್ಥಾನ ಗೆಲ್ಲುವ ಪಣ!

ಟ್ರೆಂಡಿಂಗ್‌