KKRTC Recruitment 2023 : ಸಾರಿಗೆ ಸಂಸ್ಥೆಯಲ್ಲಿ 249 ಶಿಶಿಕ್ಷುಗಳ ನೇಮಕ; ಐಟಿಐ ಮಾಡಿದವರಿಗೆ ಅವಕಾಶ - Vistara News

ಉದ್ಯೋಗ

KKRTC Recruitment 2023 : ಸಾರಿಗೆ ಸಂಸ್ಥೆಯಲ್ಲಿ 249 ಶಿಶಿಕ್ಷುಗಳ ನೇಮಕ; ಐಟಿಐ ಮಾಡಿದವರಿಗೆ ಅವಕಾಶ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು 249 ಶಿಶಿಕ್ಷುಗಳಿಗೆ ತರಬೇತಿ ನೀಡಲಿದ್ದು(KKRTC Recruitment 2023), ಅರ್ಹ ಅಭ್ಯರ್ಥಿಗಳಿಗೆ ಮಾ.23 ರಂದು ಮೌಖಿಕ ಸಂದರ್ಶನ ನಡೆಸಲಿದೆ. ಈ ನೇಮಕದ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

KKRTC Recruitment 2023-apply-for-249 apprentice-posts
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಲಬುರಗಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ವಿವಿಧ ಘಟಕಗಳಲ್ಲಿನ ಶಿಶಿಕ್ಷು ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ (KKRTC Recruitment 2023) ಅರ್ಜಿ ಆಹ್ವಾನಿಸಿದೆ. ಒಟ್ಟು 249 ಶಿಶಿಕ್ಷುಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.

ನಿಗದಿತ ಟ್ರೇಡ್‌ನಲ್ಲಿ ಐಟಿಐ ಮಾಡಿದ ಅಭ್ಯರ್ಥಿಗಳು ಈ ತರಬೇತಿಗೆ ಅರ್ಹರಾಗಿರುತ್ತಾರೆ. ಶಿಶಿಕ್ಷು ಕಾಯ್ದೆಯನ್ವಯ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ 1:8 ಅನುಪಾತದಲ್ಲಿ ಹಾಗೂ ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ 1:20 ಮೀಸಲಾತಿ ನೀಡಲಾಗುತ್ತದೆ.

ಯಾವ ಘಟಕಗಳಲ್ಲಿ ನೇಮಕ?

KSRTC Recruitment 2023
KSRTC Recruitment 2023

ವಯೋಮಿತಿ ಎಷ್ಟು?

ದಿನಾಂಕ 23-03-2023ಕ್ಕೆ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ತುಂಬಿರಬೇಕು ಮತ್ತು 40 ವರ್ಷ ಪೂರ್ತಿಗೊಂಡಿರಬಾರದು.

ನೇಮಕ ಹೇಗೆ?

ಮೌಖಿಕ ಸಂದರ್ಶನದ ಮೂಲಕ ನೇಮಕ ನಡೆಯಲಿದೆ. ಶಿಶಿಕ್ಷು ತರಬೇತಿ ಪಡೆಯಲು ಇಚ್ಛೆಯುಳ್ಳ ಅಭ್ಯರ್ಥಿಗಳು http://www.apprenticeship.gov.in ಪೋರ್ಟಲ್‌ನಲ್ಲಿ apprenticeship ನಲ್ಲಿ ಎನ್‌ಎಪಿಸ್‌ ಅಡಿ ತಮ್ಮ ಹೆಸರು, ವಿದ್ಯಾರ್ಹತೆ, ಆಧಾರ್‌ ಸಂಖ್ಯೆ ಸೇರಿದಂತೆ ಇನ್ನಿತರೆ ಅಗತ್ಯ ಮಾಹಿತಿಯನ್ನು ನಮೂದಿಸುವ ಮೂಲಕ ಕಡ್ಡಾಯವಾಗಿ ನೊಂದಣಿ ಮಾಡಿಕೊಂಡು, ನೊಂದಣಿ ಸಂಖ್ಯೆಯನ್ನು ಹೊಂದಿರಬೇಕು. ನೇರವಾಗಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಆನ್‌ಲೈನ್‌ನಲ್ಲಿ ನೊಂದಣಿ ಮಾಡಿಕೊಳ್ಳದ ಅಭ್ಯರ್ಥಿಗಳು ಕೂಡಾ ಅಗತ್ಯ ಮಾಹಿತಿ/ ದಾಖಲೆಗಳೊಂದಿಗೆ ಮೌಖಿಕ ಸಂದರ್ಶನಕ್ಕೆ ಹಾಜರಾಗಬಹುದು. ಅವರಿಗೆ ನೊಂದಣಿ ಮಾಡಿಕೊಳ್ಳಲು ಸಮಯ ಒದಗಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅರ್ಹ ಅಭ್ಯರ್ಥಿಗಳು ದಿನಾಂಕ: 23-03-20023 ರಂದು ಮೂಲ ದಾಖಲೆಗಳು ಹಾಗೂ ಒಂದು ಸೆಟ್‌ ಝೆರಾಕ್ಸ್‌ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕೆಂದು ಸೂಚಿಸಲಾಗಿದೆ.

ಶಿಶಿಕ್ಷ ಭತ್ಯೆ ಎಷ್ಟು?

ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಭತ್ಯೆ ನೀಡಲಾಗುತ್ತದೆ. ಭತ್ಯೆಯನ್ನು ಅಭ್ಯರ್ಥಿಗಳ ಬ್ಯಾಂಕ್‌ ಖಾತೆಗೆ ಪಾವತಿಸಲಾಗುತ್ತದೆ.

ಯಾರಿಗೆ ಎಷ್ಟು ಭತ್ಯೆ ಎಂಬ ಮಾಹಿತಿ ಇಲ್ಲಿದೆ;

KSRTC Recruitment 2023

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ತಾಂತ್ರಿಕ ಶಿಶಿಕ್ಷು ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಉತ್ತಮ ದೇಹದಾರ್ಡ್ಯತೆ ಹೊಂದಿರಬೇಕು. ಕನ್ನಡ ಓದಲು, ಬರೆಯಲು ಮತ್ತು ಮಾತನಾಡಲು ಕಡ್ಡಾಯವಾಗಿ ತಿಳಿದಿರಬೇಕು ಹಾಗೂ ಶಿಶಿಕ್ಷು ತರಬೇತಿಗೆ ದೈಹಿಕವಾಗಿ ಸಮರ್ಥರಿರಬೇಕು ಎಂದು ತಿಳಿಸಲಾಗಿದೆ.

ಇದನ್ನೂ ಓದಿ : KMF SHIMUL Recruitment 2023 : ಹಾಲು ಒಕ್ಕೂಟದಲ್ಲಿ 194 ಹುದ್ದೆ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: 247 ಪಿಡಿಒ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ; ಇಲ್ಲಿದೆ ಡೈರೆಕ್ಟ್‌ ಲಿಂಕ್‌

Job Alert: ಕರ್ನಾಟಕ ಲೋಕಸೇವಾ ಆಯೋಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್‌ ಸಿ ವೃಂದದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಭರ್ತಿಗೆ ಡೈರಕ್ಟ್‌ ಲಿಂಕ್‌ ಬಿಡುಗಡೆ ಮಾಡಿದೆ. ಒಟ್ಟು 247 ಹುದ್ದೆಗಳಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮೇ 15.

VISTARANEWS.COM


on

Job Alert
Koo

ಬೆಂಗಳೂರು: ಉದ್ಯೋಗ ಹುಡುಕುತ್ತಿರುವವರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ಕರ್ನಾಟಕ ಲೋಕಸೇವಾ ಆಯೋಗ (KPSC) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್‌ ಸಿ ವೃಂದದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ಭರ್ತಿಗೆ ಈ ಹಿಂದೆಯೇ ಅಧಿಸೂಚನೆ ಬಿಡುಗಡೆ ಮಾಡಿತ್ತು (Panchayat Development Officer Recruitment 2024).‌ ಉಳಿಕೆ ಮೂಲ ವೃಂದ ಹಾಗೂ ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ ಒಟ್ಟು 247 ಹುದ್ದೆಗಳಿವೆ. ಹೀಗಾಗಿ ಎರಡು ವೃಂದಗಳಿಗೆ ಪ್ರತ್ಯೇಕ ಅಧಿಸೂಚನೆ ಬಿಡುಗಡೆ ಮಾಡಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ಲಿಂಕ್‌ ಅನ್ನೂ ಬಿಡುಗಡೆ ಮಾಡಲಾಗಿದೆ. ಆಸಕ್ತರು ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 15 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಳಿಕೆ ಮೂಲ ವೃಂದದಲ್ಲಿ 150 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 97 ಹುದ್ದೆಗಳಿವೆ. ಅಭ್ಯರ್ಥಿಗಳು ಭಾರತದ ಕಾನೂನಿನ್ವಯ ಸ್ಥಾಪಿತವಾದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ. ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ವಿನಾಯಿತಿ ಇದೆ. ಅರ್ಜಿ ಶುಲ್ಕವಾಗಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು 600 ರೂ., ಇತರ ಹಿಂದುಳಿದ ಎಲ್ಲ ವರ್ಗದ ಅಭ್ಯರ್ಥಿಗಳು 300 ರೂ., ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಇನ್ನು ಅರ್ಜಿ ಶುಲ್ಕ ಸಲ್ಲಿಸುವವರು ಆನ್‌ಲೈನ್‌ ಮೂಲಕ ಪಾವತಿಸಬೇಕು. ಇದಕ್ಕಾಗಿ ನೆಟ್‌ ಬ್ಯಾಂಕಿಂಗ್‌, ಡೆಬಿಡ್‌, ಕ್ರೆಡಿಟ್‌ ಕಾರ್ಡ್‌ ಅಥವಾ ಯುಪಿಐ ವಿಧಾನವನ್ನು ಬಳಬಹುದು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 37,900 ರೂ. – 70,850 ರೂ. ಮಾಸಿಕ ವೇತನವಿದೆ.

ಸ್ಪರ್ಧಾತ್ಮಕ ಪರೀಕ್ಷೆಯ ವಿಧಾನ

ಎರಡು ಪತ್ರಿಕೆಗಳ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಪತ್ರಿಕೆ-1ರಲ್ಲಿ ಸಾಮಾನ್ಯ ಜ್ಞಾನ, ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್ ಕುರಿತ ವಸ್ತುನಿಷ್ಠ ಬಹು ಆಯ್ಕೆ ಪ್ರಶ್ನೆಗಳು ಇರುತ್ತವೆ. ಪತ್ರಿಕೆ-2ರಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ವಿಷಯಕ್ಕೆ ಸಂಬಂಧಿಸಿದ 100 ಪ್ರಶ್ನೆಗಳು ಇರುತ್ತವೆ. ಇದು ಕೂಡ ವಸ್ತುನಿಷ್ಠ ಬಹು ಆಯ್ಕೆ ಪ್ರಶ್ನೆಗಳಾಗಿರುತ್ತವೆ. ತಪ್ಪು ಉತ್ತರಕ್ಕೆ ನೆಗೆಟಿವ್‌ ಅಂಕಗಳಿದ್ದು ಗಮನಿಸಿ ಉತ್ತರಿಸುವುದು ಮುಖ್ಯ. ಪ್ರಶ್ನೆ ಪತ್ರಿಕೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿರುತ್ತದೆ. ಪರೀಕ್ಷೆಗಳನ್ನು ಆಯೋಗ ನಿಗದಿಪಡಿಸಿದ ಯಾವುದೇ ಕೇಂದ್ರದಲ್ಲಿ ನಡೆಸಲಾಗುವುದು.

ಪಿಡಿಒ ಉಳಿಕೆ ಮೂಲವೃಂದದ ನೇಮಕಾತಿಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.
ಪಿಡಿಒ ಉಳಿಕೆ ಹೈದರಾಬಾದ್‌ ಕರ್ನಾಟಕ ನೇಮಕಾತಿಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಬಳಿಕ ತೆರೆದುಕೊಳ್ಳುವ ಪುಟದ ಕೆಳಭಾಗದಲ್ಲಿರುವ Apply Online for various notifications ಆಯ್ಕೆಯನ್ನು ಕ್ಲಿಕ್‌ ಮಾಡಿ. ಬಳಿಕ Panchayat Development Officer ಆಪ್ಶನ್‌ ಸೆಲೆಕ್ಟ್‌ ಮಾಡಿ. ಹೆಸರು ನೋಂದಾಯಿಸಿದ ಬಳಿಕ ಅರ್ಜಿ ಭರ್ತಿ ಮಾಡಿ.

ಹೆಚ್ಚಿನ ವಿವರಗಳಿಗೆ: 080-30574957 / 30574901 ನಂಬರ್‌ ಸಂಪರ್ಕಿಸಿ.

ಇದನ್ನೂ ಓದಿ: Job Alert: ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಗುಡ್‌ನ್ಯೂಸ್‌; ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸ್ ಹುದ್ದೆಯ ಸಂದರ್ಶನಕ್ಕೆ ನೇರ ಹಾಜರಾಗಿ

Continue Reading

ಉದ್ಯೋಗ

Job Alert: ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನಲ್ಲಿದೆ 4,660 ಹುದ್ದೆ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ಉದ್ಯೋಗಕ್ಕಾಗಿ ಹುಡುಕಾಟ ನಡೆಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ರೈಲ್ವೆ ನೇಮಕಾತಿ ಮಂಡಳಿ 4,660 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮೇ 14. ಕಾನ್‌ಸ್ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳು ಇದಾಗಿದೆ. ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದವರು ಕಾನ್‌ಸ್ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಇನ್ನು ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದಿರಬೇಕು.

VISTARANEWS.COM


on

Job Alert
Koo

ಬೆಂಗಳೂರು: ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಇಲ್ಲಿದೆ ಭರಪೂರ ಅವಕಾಶ. ಭಾರತೀಯ ರೈಲ್ವೆ ಇಲಾಖೆಯಲ್ಲಿ ಭಾರೀ ಉದ್ಯೋಗಾವಕಾಶಗಳಿವೆ. ರೈಲ್ವೆ ನೇಮಕಾತಿ ಮಂಡಳಿ (Railway Recruitment Board) ಈ ನೇಮಕಾತಿ ನಡೆಸುತ್ತಿದೆ (RPF Recruitment 2024). ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ (Railway Protection Force)ನಲ್ಲಿ ಬರೋಬ್ಬರಿ 4,660 ಹುದ್ದೆಗಳಿವೆ. ಕಾನ್‌ಸ್ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳು ಇದಾಗಿದ್ದು, ಎಸ್ಸೆಸ್ಸೆಲ್ಸಿ ತೆರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 14 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕಾನ್‌ಸ್ಟೇಬಲ್‌ – 4,208, ಸಬ್‌ ಇನ್ಸ್‌ಪೆಕ್ಟರ್‌ – 452 ಹುದ್ದೆಗಳಿವೆ. ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದವರು ಕಾನ್‌ಸ್ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಇನ್ನು ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದಿರಬೇಕು.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಕಾನ್‌ಸ್ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ, ಗರಿಷ್ಠ ವಯಸ್ಸು 25 ವರ್ಷ. ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 28 ವರ್ಷ. ಅರ್ಜಿ ಶುಲ್ಕವಾಗಿ ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳು 500 ರೂ. ಮತ್ತು ಎಸ್‌ಸಿ, ಎಸ್‌ಟಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳು 250 ರೂ. ಪಾವತಿಸಬೇಕು.

ವೇತನ ಮತ್ತು ಆಯ್ಕೆ ವಿಧಾನ

ಕಾನ್ಸ್‌ಟೇಬಲ್‌ ಹುದ್ದೆಗಳಿಗೆ 21,700 ರೂ. ಮತ್ತು ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ 35,400 ರೂ. ಮಾಸಿಕ ವೇತನ ಲಭ್ಯ. ಕಂಪ್ಯೂಟರ್‌ ಆಧಾರಿತ ಪರೀಕ್ಷೆ (CBT), ದೈಹಿಕ ಸಾಮರ್ಥ್ಯ ಪರೀಕ್ಷೆ (PET, PMT), ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಆಯ್ಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನಿಮ್ಮ ಹೆಸರು, ವೈಯಕ್ತಿಕ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಈಗ ರಿಜಿಸ್ಟ್ರೇಷನ್‌ ಐಡಿ ಮತ್ತು ಪಾಸವರ್ಡ್‌ ದೊರೆಯುತ್ತದೆ. ಅದನ್ನು ಬಳಿಸಿ ಲಾಗಿನ್‌ ಆಗಿ.
  • ಈಗ ಕಂಡು ಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ. ವೈಯಕ್ತಿಕ, ಶೈಕ್ಷಣಿಕ ಮಾಹಿತಿ ನೀಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿದ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಗಮನಿಸಿ

ಲಿಖಿತ ಪರೀಕ್ಷೆಯಲ್ಲಿ ನೆಗೆಟಿವ್‌ ಅಂಕಗಳಿದ್ದು, ಎಚ್ಚರಿಕೆಯಿಂದ ಉತ್ತರ ಬರೆಯಬೇಕು ಎಂದು ಪ್ರಕಟಣೆ ತಿಳಿಸಿದೆ. ಲಿಖಿತ ಪರೀಕ್ಷೆಯ ಅವಧಿ 90 ನಿಮಿಷದ ಅವಧಿಯದ್ದಾಗಿದ್ದು, ಪ್ರಶ್ನೆಗಳು ಬಹು ಆಯ್ಕೆಯ ಉತ್ತರವನ್ನು ಒಳಗೊಂಡಿದೆ. ಕಾನ್‌ಸ್ಟೇಬಲ್‌ ಹುದ್ದೆಯ ಪರೀಕ್ಷೆ ಎಸ್ಸೆಸ್ಸೆಲ್ಸಿ ಹಂತದ ಪ್ರಶ್ನೆಗಳನ್ನು ಒಳಗೊಂಡಿದ್ದು, ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಯ ಪರೀಕ್ಷೆ ಪದವಿ ಹಂತದ ಪ್ರಶ್ನೆಗಳನ್ನು ಒಳಗೊಂಡಿದೆ.

ಇದನ್ನೂ ಓದಿ: Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ

Continue Reading

ಉದ್ಯೋಗ

Job Alert: ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಗುಡ್‌ನ್ಯೂಸ್‌; ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸ್ ಹುದ್ದೆಯ ಸಂದರ್ಶನಕ್ಕೆ ನೇರ ಹಾಜರಾಗಿ

Job Alert: ಏರ್‌ ಇಂಡಿಯಾ ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸ್ ಲಿಮಿಟೆಡ್‌ ಖಾಲಿ ಇರುವ 422 ಹುದ್ದೆಗಳನ್ನು ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಹ್ಯಾಂಡಿ ಮ್ಯಾನ್‌, ಹ್ಯಾಂಡಿ ವುಮೆನ್, ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್ ಹುದ್ದೆ ಇದಾಗಿದ್ದು, ಎಸ್ಸೆಸ್ಸೆಲ್ಸಿ ಪಾಸಾದವರು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಉದ್ಯೋಗ ಸ್ಥಳ: ಚೆನ್ನೈ. ಮೇ 2 ಮತ್ತು ಮೇ 4ರಂದು ಆಸಕ್ತರು ಸಂದರ್ಶನಕ್ಕೆ ಹಾಜರಾಗಬಹುದು.

VISTARANEWS.COM


on

Job Alert
Koo

ನವದೆಹಲಿ: ಉತ್ತಮ ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಏರ್‌ ಇಂಡಿಯಾ ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸ್ ಲಿಮಿಟೆಡ್‌ (Air India Air Transport Services Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಹ್ಯಾಂಡಿ ಮ್ಯಾನ್‌, ಹ್ಯಾಂಡಿ ವುಮೆನ್, ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್ ಸೇರಿ 422 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ (AIATSL Recruitment 2024) ಎಂದು ಪ್ರಕಟಣೆ ತಿಳಿಸಿದೆ. ಉದ್ಯೋಗದ ಸ್ಥಳ: ಚೆನ್ನೈ ಇಂಟರ್‌ ನ್ಯಾಷನಲ್‌ ಏರ್‌ಪೋರ್ಟ್‌. ಆಸಕ್ತರು ಅರ್ಜಿ ಸಲ್ಲಿಸಬೇಕಾಗಿಲ್ಲ, ಪರೀಕ್ಷೆ ಬರೆಯಬೇಕಾಗಿಲ್ಲ. ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್: 130, ಹ್ಯಾಂಡಿ ಮ್ಯಾನ್ / ಹ್ಯಾಂಡಿ ವುಮೆನ್: 292 ಹುದ್ದೆಗಳಿವೆ. ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್ಸೆಸ್ಸೆಲ್ಸಿ ಪಾಸ್ ಜತೆಗೆ, ಹೆವಿ ಮೋಟಾರ್ ವೆಹಿಕಲ್ ಚಾಲನ ಪರವಾನಗಿ ಹೊಂದಿರಬೇಕು. ಹ್ಯಾಂಡಿ ಮ್ಯಾನ್ / ಹ್ಯಾಂಡಿ ವುಮೆನ್ ಹುದ್ದೆಗೆ ಬೇಕಾದ ಅರ್ಹತೆ ಎಂದರೆ ಎಸ್ಸೆಸ್ಸೆಲ್ಸಿ ಪಾಸ್ ಜತೆಗೆ ಇಂಗ್ಲಿಷ್ ಭಾಷೆ ಓದಲು, ಬರೆಯಲು ಬರಬೇಕು. ಸ್ಥಳೀಯ ಭಾಷೆ ಮತ್ತು ಹಿಂದಿ ಮಾತನಾಡಲು ಗೊತ್ತಿರಬೇಕು.

ವಯೋಮಿತಿ ಮತ್ತು ಆಯ್ಕೆ ವಿಧಾನ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವರಿಷ್ಠ ವಯೋಮಿತಿ 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಆಸಕ್ತರು ನೇರ ಸಂದರ್ಶನಕ್ಕೆ ಈ ಕೆಳಗಿನ ವಿಳಾಸಕ್ಕೆ ಹಾಜರಾಗಬೇಕು.

Office of the HRD Department,
AI Unity Complex, Pallavaram Cantonment, Chennai – 600 043.
Land Mark: Near Taj Catering.

ದಿನಾಂಕ: ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್: ಮೇ 2 (ಬೆಳಿಗ್ಗೆ 9-12).

ಹ್ಯಾಂಡಿ ಮ್ಯಾನ್ / ಹ್ಯಾಂಡಿ ವುಮೆನ್: ಮೇ 4 (ಬೆಳಿಗ್ಗೆ 9-12).

ಆಯ್ಕೆಯಾದವರನ್ನು 3 ವರ್ಷಗಳ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಾಗುತ್ತದೆ. ಬಳಿಕ ಅವರ ಕಾರ್ಯ ಕ್ಷಮತೆಯ ಆಧಾರದಲ್ಲಿ ಉದ್ಯೋಗದ ಅವಧಿಯನ್ನು ಮುಂದುವರಿಸಲಾಗುತ್ತದೆ. ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್ ಹುದ್ದೆಗೆ ಆಯ್ಕೆಯಾಗುವವರು ಟ್ರ್ಯಾಕ್ಟರ್, ಬಸ್ ಮತ್ತು ಗ್ರೌಂಡ್ ಸರ್ವಿಸ್ ಉಪಕರಣಗಳಂತಹ ಭಾರೀ ವಾಹನಗಳನ್ನು ಚಲಾಯಿಸಬೇಕಾಗುತ್ತದೆ. ಹ್ಯಾಂಡಿ ಮ್ಯಾನ್ / ಹ್ಯಾಂಡಿ ವುಮೆನ್ ಹುದ್ದೆಗೆ ಆಯ್ಕೆಯಾಗುವವರು ವಿಮಾನ ನಿಲ್ದಾಣದಲ್ಲಿ ಬ್ಯಾಗೇಜ್ / ಸರಕು ಲೋಡ್ ಮಾಡುವುದು ಮತ್ತು ಕ್ಯಾಬಿನ್‌ನಿಂದ ಅನ್‌ಲೋಡ್‌ ಮಾಡುವುದು, ವಿಮಾನವನ್ನು ಸ್ವಚ್ಛಗೊಳಿಸುವುದು, ಕಾರ್ಯಾಗಾರದಲ್ಲಿ ತಂತ್ರಜ್ಞರಿಗೆ ನೆರವಾಗುವುದು, ವ್ಹೀಲ್ ಚೇರ್ ಶುಚಿಗೊಳಿಸುವುದು ಮುಂತಾದ ಕಾರ್ಯಗಳು ನಿರ್ವಹಿಸಬೇಕಾಗುತ್ತದೆ.

ಸಂದರ್ಶನಕ್ಕೆ ಹಾಜರಾಗುವುದು ಹೇಗೆ?

ಅರ್ಹತಾ ಮಾನದಂಡಗಳನ್ನು ಪೂರೈಸುವ ಅರ್ಜಿದಾರರು ಅಧಿಸೂಚನೆಯೊಂದಿಗೆ ನೀಡಲಾದ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿದ ಅಗತ್ಯ ಪ್ರಮಾಣ ಪತ್ರಗಳು / ಪ್ರಮಾಣಪತ್ರಗಳ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಜತೆಗೆ ಸಾಮಾನ್ಯ, ಒಬಿಸಿ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂಪಾಯಿಯನ್ನು “AI AIRPORT SERVICES LIMITEDʼʼ ಈ ಹೆಸರಿಗೆ ಡಿಮ್ಯಾಂಡ್‌ ಡ್ರಾಫ್ಟ್‌ ಮಾಡಬೇಕು. ಡಿಮ್ಯಾಂಡ್‌ ಡ್ರಾಫ್ಟ್‌ ಹಿಂಭಾಗದಲ್ಲಿ ನಿಮ್ಮ ಪೂರ್ತಿ ಹೆಸರು, ಮೊಬೈಲ್‌ ನಂಬರ್‌ ಬರೆಯುವುದನ್ನು ಮರೆಯಬೇಡಿ. ಗಮನಿಸಿ, ಮಾಜಿ ಯೋಧರು, ಎಸ್‌ಸಿ / ಎಸ್‌ಟಿ ವಿಭಾಗದವರಿಗೆ ಅರ್ಜಿ ಶುಲ್ಕವಿಲ್ಲ.

ವೇತನ

ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್: 24,960 ರೂ., ಹ್ಯಾಂಡಿಮ್ಯಾನ್ / ಹ್ಯಾಂಡಿ ವುಮೆನ್: 22,530 ರೂ. ಮಾಸಿಕ ವೇತನ ಲಭ್ಯ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ

Continue Reading

ಶಿಕ್ಷಣ

UPSC Result 2024: 12 ಪ್ರಯತ್ನದ ಹೊರತಾಗಿಯೂ ಸಿಗದ ಯಶಸ್ಸು; ಯುಪಿಎಸ್‌ಸಿ ಆಕಾಂಕ್ಷಿಯ ಪೋಸ್ಟ್‌ ವೈರಲ್‌

UPSC Result 2024: ಬಹು ನಿರೀಕ್ಷಿತ ಕೇಂದ್ರ ಲೋಕ ಸೇವಾ ಆಯೋಗದ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಉತ್ತರ ಪ್ರದೇಶದ ಆದಿತ್ಯ ಶ್ರೀವಾಸ್ತವ್‌ ಮೊದಲ ಸ್ಥಾನ ಪಡೆದಿದ್ದಾರೆ. ಓ ಮಧ್ಯೆ ತಮ್ಮ 12ನೇ ಪ್ರಯತ್ನದ ಹೊರತಾಗಿಯೂ ಆಯ್ಕೆಯಾಗದ ಕುನಾಲ್ ಆರ್. ವಿರುಲ್ಕರ್ ಎನ್ನುವವರು ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಸದ್ಯ ಈ ಪೋಸ್ಟ್‌ ವೈರಲ್‌ ಆಗಿದೆ.

VISTARANEWS.COM


on

UPSC Result 2024
Koo

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC) ನಡೆಸಿದ ನಾಗರಿಕ ಸೇವೆಗಳ ಪರೀಕ್ಷೆಯ (UPSC Results 2023) ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಪ್ರದೇಶದ ಆದಿತ್ಯ ಶ್ರೀವಾಸ್ತವ್‌ (Aditya Srivastava) ಅವರು ದೇಶದಲ್ಲೇ ಮೊದಲ ರ‍್ಯಾಂಕ್‌ ಗಳಿಸಿದ್ದಾರೆ. ಆ ಮೂಲಕ ಅಪರೂಪದ ಸಾಧನೆ ಮಾಡಿದ್ದಾರೆ. ಇನ್ನು ಅನಿಮೇಶ್ ಪ್ರಧಾನ್ ಮತ್ತು ಡೊನೂರು ಅನನ್ಯಾ ರೆಡ್ಡಿ ಕ್ರಮವಾಗಿ ಎರಡು ಮತ್ತು ಮೂರನೇ ರ‍್ಯಾಂಕ್‌ ಪಡೆದಿದ್ದಾರೆ. ಈ ಮಧ್ಯೆ ಯುಪಿಎಸ್‌ಸಿ ಆಕಾಂಕ್ಷಿ ಕುನಾಲ್ ಆರ್. ವಿರುಲ್ಕರ್ (Kunal R Virulkar) ಎನ್ನುವವರು ತಮ್ಮ 12ನೇ ಪ್ರಯತ್ನದಲ್ಲಿಯೂ ಆಯ್ಕೆಯಾಗದ ವಿಚಾರವನ್ನು ತಿಳಿಸಿದ್ದಾರೆ. ತಮ್ಮ ಹೋರಾಟವನ್ನು ಅವರು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ವೈರಲ್‌ ಆಗಿದೆ (Viral News).

“12 ಪ್ರಯತ್ನಗಳು, 7 ಮುಖ್ಯ ಪರೀಕ್ಷೆ, 5 ಸಂದರ್ಶನ. ಆದರೂ ಆಯ್ಕೆಯಾಗಲಿಲ್ಲ” ಎಂದು ಬರೆದುಕೊಂಡಿರುವ ವಿರುಲ್ಕರ್ ದೆಹಲಿಯ ಯುಪಿಎಸ್‌ಸಿ ಪ್ರಧಾನ ಕಚೇರಿಯ ಹೊರಗೆ ನಿಂತುಕೊಂಡಿರುವ ತಮ್ಮ ಚಿತ್ರವನ್ನು ಪೋಸ್ಟ್‌ ಮಾಡಿದ್ದಾರೆ.

ಪೋಸ್ಟ್‌ ವೈರಲ್‌

ಸದ್ಯ ವಿರುಲ್ಕರ್ ಅವರ ಪೋಸ್ಟ್‌ ಅನ್ನು 5 ಲಕ್ಷಕ್ಕಿಂತ ಅದಿಕ ಮಂದಿ ವೀಕ್ಷಿಸಿದ್ದಾರೆ. ನೂರಾರು ಮಂದಿ ಪ್ರತಿಕ್ರಿಯಿಸಿ ಸಾಂತ್ವನ ಹೇಳಿದ್ದಾರೆ. ಹಲವು ಮಂದಿ ಇತರರ ಉದಾಹರಣೆ ನೀಡಿ ಸಮಾಧಾನ ಪಡಿಸಿದರೆ, ಇನ್ನು ಕೆಲವರು ಸ್ಫೂರ್ತಿದಾಯಕ ಕಥೆ ಹೇಳಿದ್ದಾರೆ. ಐಎಎಸ್ ಅಧಿಕಾರಿ ಅವನೀಶ್ ಶರಣ್ ಕಮೆಂಟ್‌ ಮಾಡಿ, ʼʼನಿಮ್ಮ ಬೆಂಬಲಕ್ಕೆ ನಾವೆಲ್ಲ ಇದ್ದೇವೆ. ನಿಮ್ಮ ಬಗ್ಗೆ ಹೆಮ್ಮೆ ಪಡುತ್ತೇವೆ. ಒಂದಲ್ಲ ಒಂದು ದಿನ ನಿಮ್ಮ ಪ್ರಯತ್ನದಲ್ಲಿ ಜಯ ಗಳಿಸುತ್ತೀರಿʼʼ ಎಂದು ಹೇಳಿದ್ದಾರೆ. “ಚಿಂತಿಸಬೇಡಿ. ಪ್ರಯತ್ನಿಸುತ್ತಲೇ ಇರಿ. ಮುಂದೊಂದು ದಿನ ನೀವು ನಿಮ್ಮ ಪ್ರಯತ್ನದಲ್ಲಿ ಯಶಸ್ವಿಯಾಗುತ್ತೀರಿ” ಎಂದು ಮತ್ತೊಬ್ಬರು ಹೇಳಿದ್ದಾರೆ. “ಇದು ನಿಮ್ಮ ಪ್ರಯತ್ನವನ್ನು, ಕಠಿಣ ಪ್ರರಿಶ್ರಮವನ್ನು ಎತ್ತಿ ಹಿಡಿಯುತ್ತದೆ. ನಿಮ್ಮ ವೃತ್ತಿ ಜೀವನಕ್ಕೆ ಶುಭ ಹಾರೈಕೆಗಳು” ಎಂದು ಇನ್ನೊಬ್ಬರು ತಿಳಿಸಿದ್ದಾರೆ. ಒಟ್ಟಿನಲ್ಲಿ ಬಹುತೇಕರು ವಿರುಲ್ಕರ್ ಅವರ ಬೆಂಬಲಕ್ಕೆ ಧಾವಿಸಿದ್ದಾರೆ.

ಏತನ್ಮಧ್ಯೆ ಒಟ್ಟು 1,016 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಮತ್ತು ಅವರನ್ನು ವಿವಿಧ ಕೇಂದ್ರ ಸರ್ಕಾರಿ ಸೇವೆಗಳಿಗೆ ಶಿಫಾರಸು ಮಾಡಲಾಗಿದೆ ಎಂದು ಯುಪಿಎಸ್‌ಸಿ ತಿಳಿಸಿದೆ. ಆದಾಗ್ಯೂ, ಶಿಫಾರಸು ಮಾಡಲಾದ 355 ಅಭ್ಯರ್ಥಿಗಳ ಉಮೇದುವಾರಿಕೆ ಹೆಚ್ಚಿನ ಪರಿಶೀಲನೆಗೆ ಬಾಕಿ ಉಳಿದಿದೆ. ಪ್ರತಿಷ್ಠಿತ ಪರೀಕ್ಷೆಯನ್ನು 2023ರ ಸೆಪ್ಟೆಂಬರ್ 15ರಿಂದ ಸೆಪ್ಟೆಂಬರ್ 24ರವರೆಗೆ ಎರಡು ಪಾಳಿಗಳಲ್ಲಿ ನಡೆಸಲಾಗಿತ್ತು. ಅಭ್ಯರ್ಥಿಗಳು ತಮ್ಮ ಪರೀಕ್ಷೆಗಳು/ನೇಮಕಾತಿಗಳ ಕುರಿತು ಯಾವುದೇ ಮಾಹಿತಿ/ಸ್ಪಷ್ಟೀಕರಣವನ್ನು ಕೆಲಸದ ದಿನಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಖುದ್ದಾಗಿ ಭೇಟಿ ನೀಡಿ ಪಡೆಯಬಹುದು ಅಥವಾ ದೂರವಾಣಿ ಸಂಖ್ಯೆ 23385271/23381125/23098543ಕ್ಕೆ ಕರೆ ಮಾಡಬಹುದು.

ಇದನ್ನೂ ಓದಿ: UPSC Results 2023: ಎಂಎನ್‌ಸಿ ಕೆಲಸ ಬಿಟ್ಟ ಆದಿತ್ಯಗೆ ಯುಪಿಎಸ್‌ಸಿ ಫಸ್ಟ್‌ ರ‍್ಯಾಂಕ್;‌ ಯಾರಿವರು?

ಫಲಿತಾಂಶವನ್ನು ಹೀಗೆ ಪರಿಶೀಲಿಸಿ

  • ನಿಮ್ಮ ಬ್ರೌಸರ್‌ನಲ್ಲಿ upsc.gov.in ತೆರೆಯಿರಿ
  • What’s New ಸೆಕ್ಷನ್‌ನ ಅಡಿಯಲ್ಲಿ ‘UPSC Civil Services Examination 2023 Final Results’ ಎಂಬುದರ ಮೇಲೆ ಕ್ಲಿಕ್ ಮಾಡಿ.
  • ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ಹೆಸರನ್ನು ಪಿಡಿಎಫ್ ಮೂಲಕ ನೀಡಲಾಗಿದೆ. ಅದನ್ನು ಕ್ಲಿಕ್‌ ಮಾಡಿ.
Continue Reading
Advertisement
Impact Player Rule
ಕ್ರೀಡೆ7 mins ago

Impact Player Rule : ಇಂಪ್ಯಾಕ್ಟ್​ ಪ್ಲೇಯರ್​​ ಸಿಕ್ಕಾಪಟ್ಟೆ ವಿರೋಧ; ಇದೀಗ ಋತುರಾಜ್​ ಸರದಿ

Tillu Square anupama parameswaran movie tillu square release date
ಒಟಿಟಿ24 mins ago

Tillu Square: ಅನುಪಮಾ ಪರಮೇಶ್ವರನ್‌‌ ಸಿನಿಮಾ ಒಟಿಟಿ ಬಿಡುಗಡೆ ದಿನಾಂಕ ಬಹಿರಂಗ

rowdy sheeters attack bangalore
ಕ್ರೈಂ34 mins ago

Rowdy Sheeters: ಬೆಂಗಳೂರಲ್ಲಿ ಮತ್ತೆ ಝಳಪಿಸಿದ ಮಚ್ಚು ಲಾಂಗ್, ಬೀದಿಯಲ್ಲೇ ಅಟ್ಟಾಡಿಸಿದರು!

KL Rahul
ಪ್ರಮುಖ ಸುದ್ದಿ34 mins ago

KL Rahul : ಐಪಿಎಲ್​ನಲ್ಲಿ ಧೋನಿಯ ದಾಖಲೆಯೊಂದನ್ನು ಮುರಿದ ಕೆ. ಎಲ್ ರಾಹುಲ್​

Neha Murder Case dhruva sarja priya savadi and kavya shastry condemn
ಸಿನಿಮಾ49 mins ago

Neha Murder Case: ನೇಹಾ ಹತ್ಯೆ: ಅಪರಾಧಿಗೆ ಶಿಕ್ಷೆ ನೀಡಬೇಕು ಎಂದು ಸಿನಿಮಾ ತಾರೆಯರ ಆಗ್ರಹ

IPL 2024
ಕ್ರೀಡೆ60 mins ago

IPL 2024 : ಸೋಲಿನ ಬಳಿಕ ಚೆನ್ನೈ ತಂಡದ ಅಂಕಪಟ್ಟಿಯಲ್ಲಿನ ಸ್ಥಾನವೆಷ್ಟು? ಇಲ್ಲಿದೆ ಎಲ್ಲ ವಿವರ

cet exam karnataka exam authority
ಪ್ರಮುಖ ಸುದ್ದಿ1 hour ago

CET Exam: ಸಿಇಟಿ ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಭಾರೀ ಗೊಂದಲ, ದೂರು ನೀಡಲು ಏ.27ರವರೆಗೆ ಕಾಲಾವಕಾಶ

Ancient snake vasuki indicus
ವೈರಲ್ ನ್ಯೂಸ್2 hours ago

Ancient snake: ಭಾರತದಲ್ಲಿತ್ತು 1000 ಕಿಲೋ ತೂಕ, 50 ಅಡಿ ಉದ್ದದ ʼವಾಸುಕಿʼ ಹಾವು!

charlie chaplin rajamarga
ಪ್ರಮುಖ ಸುದ್ದಿ2 hours ago

ರಾಜಮಾರ್ಗ ಅಂಕಣ: ಸಿನೆಮಾ ಜಗತ್ತಿನ ಮೊದಲ ಸೂಪರ್ ಸ್ಟಾರ್ ಚಾರ್ಲಿ ಚಾಪ್ಲಿನ್!

Karnataka Weather Forecast
ಮಳೆ3 hours ago

Karnataka Weather : ವೀಕೆಂಡ್‌ನಲ್ಲಿ ಬೆಂಗಳೂರಲ್ಲಿ ಮಳೆ ಗ್ಯಾರಂಟಿ; ಹಲವೆಡೆ ಗುಡುಗು, ಸಿಡಿಲು ಮುನ್ನೆಚ್ಚರಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ18 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20246 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ1 week ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

ಟ್ರೆಂಡಿಂಗ್‌