KPSC Recruitment 2022 | ಕೆಪಿಎಸ್‌ಸಿಯಿಂದ ಈ ವರ್ಷ ನೇಮಕಾತಿಯ ಹೊಸ ಅಧಿಸೂಚನೆಗಳಿಲ್ಲ - Vistara News

ಉದ್ಯೋಗ

KPSC Recruitment 2022 | ಕೆಪಿಎಸ್‌ಸಿಯಿಂದ ಈ ವರ್ಷ ನೇಮಕಾತಿಯ ಹೊಸ ಅಧಿಸೂಚನೆಗಳಿಲ್ಲ

ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳವಾಗಿರುವುದರಿಂದ ಅದನ್ನು ಜಾರಿಗೆ ತರಲು ಕರ್ನಾಟಕ ಲೋಕಸೇವಾ ಆಯೋಗವು ಮುಂದಾಗಿದ್ದು, ಇದರಿಂದ ಹೊಸ ನೇಮಕಾತಿ ಅಧಿಸೂಚನೆಗಳು (KPSC Recruitment 2022) ಪ್ರಕಟವಾಗುವುದು ಇನ್ನೂ ಒಂದು ತಿಂಗಳು ವಿಳಂಬವಾಗಲಿದೆ.

VISTARANEWS.COM


on

KPSC Recruitment 2022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ಈ ವರ್ಷ ಅಂದರೆ 2022 ರ ಅಂತ್ಯದವರೆಗೂ ನೇಮಕಾತಿಗೆ (KPSC Recruitment 2022) ಸಂಬಂಧಿಸಿದಂತೆ ಯಾವುದೇ ಹೊಸ ಅಧಿಸೂಚನೆಯನ್ನು ಹೊರಡಿಸುವುದಿಲ್ಲ. ಈ ವಿಷಯವನ್ನು ಕೆಪಿಎಸ್‌ಸಿಯ ಕಾರ್ಯದರ್ಶಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ತಿಳಿಸಿದ್ದಾರೆ.

ಮಂಗಳವಾರ ಯೂಟೂಬ್‌ ಲೈವ್‌ ಕಾರ್ಯಕ್ರಮದಲ್ಲಿ ಅಭ್ಯರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸರ್ಕಾರ ಅಕ್ಟೋಬರ್‌ 22 ರಂದು ಸುಗ್ರೀವಾಜ್ಞೆಯನ್ನು ಹೊರಡಿಸಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.17 ಮತ್ತು ಶೇ.7 ಕ್ಕೆ ಏರಿಸಿರುವುದರಿಂದ ಇದನ್ನು ಜಾರಿಗೆ ತರುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ದಿನಾಂಕ:18-11-022ರಂದು ಸುತ್ತೋಲೆಯನ್ನು ಹೊರಡಿಸಿದೆ. ಹೀಗಾಗಿ ಈಗಾಗಲೇ ಪ್ರಸ್ತಾವನೆ ಸಲ್ಲಿಸಿರುವ ಇಲಾಖೆಗಳಿಗೆ ಈ ಹೊಸ ಮೀಸಲಾತಿಯ ಅನ್ವಯ, ಹುದ್ದೆಗಳನ್ನು ಹಂಚಿ, ಹೊಸ ಪ್ರಸ್ತಾವನೆ ಸಲ್ಲಿಸುವಂತೆ ಕೋರಲಾಗಿದೆ.

ಈ ಪ್ರಕ್ರಿಯೆ ಮುಗಿಯಲು ಕನಿಷ್ಠ ಒಂದು ತಿಂಗಳು ಕಾಲಾವಕಾಶ ಬೇಕಾಗುತ್ತದೆ. ಆದ್ದರಿಂದ ಡಿಸೆಂಬರ್‌ ಅಂತ್ಯದವರೆಗೆ ಹೊಸ ನೇಮಕಾತಿಗೆ ಅಧಿಸೂಚನೆ ಹೊರಡಿಸುವುದು ಕಷ್ಟ ಎಂದು ಅವರು ಹೇಳಿದ್ದಾರೆ. ಈಗಾಗಲೇ ಕೆಪಿಎಸ್‌ಸಿಯು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 700 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸುವುದಾಗಿ ಪ್ರಕಟಿತ್ತು. ಈ ಹೊಸ ಮೀಸಲಾತಿ ನಿಯಮದಿಂದಾಗಿ ಈ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಬೀಳುವುದು ತಡವಾಗುವುದು ಈಗ ಖಚಿತವಾದಂತಾಗಿದೆ.

ಗೊಂದಲ ಬೇಡ
ಹೊಸ ಮೀಸಲಾತಿ ನಿಯಮವು ಈಗಾಗಲೇ ಪ್ರಕಟವಾಗಿರುವ ಅಧಿಸೂಚನೆಗಳಿಗೆ ಅನ್ವಯವಾಗುವುದಿಲ್ಲ. “ದಿನಾಂಕ: 01-11-2022ರ ಮುಂಚಿತವಾಗಿ ಅಧಿಸೂಚನೆ ಹೊರಡಿಸಿರುವ ಹುದ್ದೆಗಳ ನೇಮಕಾತಿಗಳನ್ನು ಆ ಸಮಯದಲ್ಲಿ ಚಾಲ್ತಿಯಲ್ಲಿದ್ದ ನಿಯಮಗಳನ್ವಯವೇ ನೇಮಕಾತಿ ಪ್ರಕ್ರಿಯೆಗಳನ್ನು ಮುಂದುವರೆಸಲಾಗುವುದುʼʼ ಎಂದು ವಿಕಾಸ್‌ ಕಿಶೋರ್‌ ಸುರಳ್ಕರ್‌ ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ಕೆಪಿಎಸ್‌ಸಿಯು ಈ ಬಗ್ಗೆ ಹಲವಾರು ಬಾರಿ ಸ್ಪಷ್ಟನೆ ನೀಡಿದೆ. ಅದರೂ ಅಭ್ಯರ್ಥಿಗಳು ಗೊಂದಲ ಮಾಡಿಕೊಂಡು ಈ ಬಗ್ಗೆ ಪ್ರಶ್ನಿಸುತ್ತಿದ್ದಾರೆ. ಹೊಸದಾಗಿ ಹೊರಡಿಸಲಾಗುವ ಹುದ್ದೆಗಳಿಗೆ ಈ ಮೀಸಲಾತಿ ನಿಯಮ ಅನ್ವಯವಾಗುವುದರಿಂದ ಕೆಪಿಎಸ್‌ಸಿಯು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ, ಹೊಸ ನಿಯಮದಂತೆ ಹುದ್ದೆಗಳನ್ನು ವಿಂಗಡಿಸಿ, ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದೆ. ಹೀಗಾಗಿ ಇನ್ನು ಮುಂದೆ ನಡೆಯುವ ನೇಮಕಾತಿಗಳಲ್ಲಿ ಮಾತ್ರ ಹೊಸ ಮೀಸಲಾತಿ ನಿಯಮಗಳು ಅನ್ವಯವಾಗಲಿವೆ ಎಂದು ವಿವರಿಸಿದ್ದಾರೆ.

ಎಂಜಿನಿಯರ್‌ಗಳಿಗೂ ಅವಕಾಶ
ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ ನಿರೀಕ್ಷಕರ ಹುದ್ದೆಗಳಿಗೆ ಮುಂದೆ ಅಧಿಸೂಚನೆ ಹೊರಡಿಸಲಾಗುತ್ತದೆ. ಈ ಹುದ್ದೆಗಳಿಗೆ ಬಹುತೇಕವಾಗಿ ಎಂಜಿನಿಯರ್‌ ಪದವೀಧರರಿಗೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ ಎಂದು ವಿಕಾಸ್‌ ಕಿಶೋರ್‌ ಸುರಳ್ಕರ್‌ ತಿಳಿಸಿದ್ದಾರೆ. ಈ ಕುರಿತ ಅಭ್ಯರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು ಈಗಾಗಲೇ ಇಲಾಖೆಯು ಈ ನಿರ್ಧಾರಕ್ಕೆ ಒಪ್ಪಿಗೆ ನೀಡಿದೆ. ನಿಗದಿತ ವಿದ್ಯಾರ್ಹತೆಯಂತೆಯೇ, ಗಣಿತವನ್ನು ಅಭ್ಯಾಸ ಮಾಡಿರುವ ಇತರ ಪದವೀಧರರನ್ನೂ ಈ ಬಾರಿ ನೇಮಕದ ಸಂದರ್ಭದಲ್ಲಿ ಪರಿಗಣಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ | KPSC Recruitment 2022 | ಸರ್ಕಾರ ಇಲಾಖೆಗಳಲ್ಲಿ 700 ಹುದ್ದೆ; ಸದ್ಯವೇ ಕೆಪಿಎಸ್‌ಸಿ ಅಧಿಸೂಚನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 54 ಸ್ಥಾನಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಕೊನೆಯ ದಿನ ಮೇ 24. ಬಿಸಿಎ, ಬಿ.ಎಸ್‌ಸಿ, ಬಿ.ಇ. ಅಥವಾ ಬಿ.ಟೆಕ್‌, ಎಂಸಿಎ ಪದವಿ ಪಡೆದವರು ಈ ಸುವರ್ಣಾವಕಾಶ ಬಳಸಿಕೊಳ್ಳಿ.

VISTARANEWS.COM


on

Job Alert
Koo

ಬೆಂಗಳೂರು: ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ (India Post Payments Bank) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IPPB Recruitment 2024). ಇನ್ಫರ್ಮೇಷನ್‌ ಟೆಕ್ನಾಲಜಿ ಎಕ್ಸಿಕ್ಯೂಟಿವ್‌ ಹುದ್ದೆ ಇದಾಗಿದ್ದು, ಒಟ್ಟು 54 ಸ್ಥಾನಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಉದ್ಯೋಗದ ಸ್ಥಳ: ಚೆನ್ನೈ, ಮುಂಬೈ, ದೆಹಲಿ. ಬಿಸಿಎ, ಬಿಎಸ್‌ಸಿ ಓದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 24 (Job Alert)

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಕ್ಸಿಕ್ಯೂಟಿವ್‌ (ಅಸೋಸಿಯೇಟ್‌ ಕನ್ಸಲ್‍ಟೆಂಟ್‍) (Executive (Associate Consultant)- 28, ಎಕ್ಸಿಕ್ಯೂಟಿವ್‌ (ಕನ್ಸಲ್‍ಟೆಂಟ್‍) (Executive (Consultant) – 21 ಮತ್ತು ಎಕ್ಸಿಕ್ಯೂಟಿವ್‌ (ಸೀನಿಯರ್ ಕನ್ಸಲ್‍ಟೆಂಟ್‍)‌ (Executive (Senior Consultant) – 5 ಹುದ್ದೆಗಳಿವೆ. IPPB official notification ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಬಿಸಿಎ, ಬಿ.ಎಸ್‌ಸಿ, ಬಿ.ಇ. ಅಥವಾ ಬಿ.ಟೆಕ್‌, ಎಂಸಿಎ ಪದವಿ ಪಡೆದಿರಬೇಕು. ಜತೆಗೆ 1ರಿಂದ 6 ವರ್ಷದವರೆಗೆ ಅನುಭವ ಹೊಂದಿರುವುದು ಕಡ್ಡಾಯ.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅಭ್ಯರ್ಥಿಗಳ ಕನಿಷ್ಠ ವಯಸ್ಸು 22 ವರ್ಷ ಮತ್ತು ಗರಿಷ್ಠ ವಯಸ್ಸು 45 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ. ಅರ್ಜಿ ಶುಲ್ಕವಾಗಿ ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳು 150 ರೂ. ಮತ್ತು ಉಳಿದೆಲ್ಲ ವರ್ಗಗಳ ಅಭ್ಯರ್ಥಿಗಳು 750 ರೂ. ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ವಿಧಾನ ಬಳಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಆನ್‌ಲೈನ್‌ ಪರೀಕ್ಷೆ, ಗ್ರೂಪ್‌ ಡಿಸ್ಕಷನ್‌ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಗುತ್ತಿಗೆ ಆಧಾರದಲ್ಲಿ ಈ ನೇಮಕಾತಿ ನಡೆಯಲಿದ್ದು, ಆಯ್ಕೆಯಾದವರಿಗೆ 10,00,000 ರೂ.-25,00,000 ರೂ. ವಾರ್ಷಿಕ ವೇತನ ದೊರೆಯಲಿದೆ.

IPPB Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಮೊದಲು ನಿಮ್ಮ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ತೆರೆದುಕೊಳ್ಳುವ IPPB Online Application Form ಅನ್ನು ಸರಿಯಾದ ಮಾಹಿತಿ ನೀಡಿ ಭರ್ತಿ ಮಾಡಿ.
  • ಅಗತ್ಯವಾದ ಡಾಕ್ಯುಮೆಂಟ್‌, ಫೋಟೊ, ಸಹಿ ಇತ್ಯಾದಿಯನ್ನು ಸರಿಯಾದ ಗಾತ್ರದಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ನೀಡಿದ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಕೋರ್ಟ್‌ನಲ್ಲಿದೆ 41 ಹುದ್ದೆ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

Continue Reading

Latest

Press Freedom: ಚೀನಾ ಸೇರಿದಂತೆ ಈ ದೇಶಗಳು ಪತ್ರಕರ್ತರಿಗೆ ಸುರಕ್ಷಿತವಲ್ಲ

ಏಷ್ಯಾದ 31 ದೇಶಗಳ ಪೈಕಿ 26 ದೇಶಗಳಲ್ಲಿ ಪತ್ರಿಕಾ ಸ್ವಾತಂತ್ರ್ಯವು (Press Freedom) ಅವನತಿಯಲ್ಲಿದೆ ಎಂದು ಆರ್‌ಎಸ್‌ಎಫ್ ವರದಿ ಮಾಡಿದ್ದು, ಪತ್ರಕರ್ತರಿಗೆ ಸುರಕ್ಷಿತವಲ್ಲದ ದೇಶಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

VISTARANEWS.COM


on

By

Press Freedom
Koo

ಬೀಜಿಂಗ್: ಪತ್ರಕರ್ತರಿಗೆ (journalists) ವಿಶ್ವದ ಅತ್ಯಂತ ಅಪಾಯಕಾರಿ ರಾಷ್ಟ್ರಗಳಲ್ಲಿ (dangerous countries) ಚೀನಾ (china) ಕೂಡ ಒಂದಾಗಿದೆ ಎಂದು ವಾಯ್ಸ್ ಆಫ್ ಅಮೆರಿಕ (VOA) ವರದಿ ಮಾಡಿದೆ. 2024ರ ಶ್ರೇಯಾಂಕ ಪ್ರಕಟಿಸಿರುವ ಗ್ಲೋಬಲ್ ಮೀಡಿಯಾ ವಾಚ್‌ಡಾಗ್ ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (RSF) ಏಷ್ಯಾದಲ್ಲಿ ಪತ್ರಿಕಾ ಸ್ವಾತಂತ್ರ್ಯವು ಅವನತಿಯಾಗುತ್ತಿದೆ. ಇದರಲ್ಲಿ ಒಟ್ಟು 31 ದೇಶಗಳಲ್ಲಿ 26 ವಾರ್ಷಿಕ ಸೂಚ್ಯಂಕದಲ್ಲಿದೆ ಎಂದು ಹೇಳಿದೆ.

ಪತ್ರಿಕಾ ಸ್ವಾತಂತ್ರ್ಯ (Press Freedom) ಸೂಚ್ಯಂಕದ ಪ್ರಕಾರ, ಏಷ್ಯಾವು ಪತ್ರಿಕೋದ್ಯಮ ವೃತ್ತಿ ನಡೆಸಲು ಎರಡನೇ ಅತ್ಯಂತ ಕಷ್ಟಕರವಾದ ಪ್ರದೇಶವಾಗಿದೆ. ಈ ಪ್ರದೇಶದ ಐದು ದೇಶಗಳಾದ ಮ್ಯಾನ್ಮಾರ್ ( Myanmar), ಚೀನಾ (China), ಉತ್ತರ ಕೊರಿಯಾ (North Korea) ಮತ್ತು ವಿಯೆಟ್ನಾಂ (Vietnam) ಸೇರಿದೆ. 2024ರ ಶ್ರೇಯಾಂಕದಲ್ಲಿ ಮಾಧ್ಯಮ ವೃತ್ತಿಪರರಿಗೆ ವಿಶ್ವದ 10 ಅತ್ಯಂತ ಅಪಾಯಕಾರಿ ದೇಶಗಳಲ್ಲಿ ಮ್ಯಾನ್ಮಾರ್, ಚೀನಾ, ಉತ್ತರ ಕೊರಿಯಾ ಮತ್ತು ವಿಯೆಟ್ನಾಂ ಕೂಡ ಸೇರಿದೆ.


ಏಷ್ಯಾ-ಪೆಸಿಫಿಕ್ ಪ್ರದೇಶದ ಯಾವುದೇ ದೇಶಗಳು ಪತ್ರಿಕಾ ಸ್ವಾತಂತ್ರ್ಯದ ಟಾಪ್ 15 ರಾಂಕ್‌ನಲ್ಲಿ ಇಲ್ಲ. ವಿಶ್ವದ ಮೂರು ಕಮ್ಯುನಿಸ್ಟ್ ಸರ್ಕಾರಗಳು ಚೀನಾ, ಉತ್ತರ ಕೊರಿಯಾ ಮತ್ತು ವಿಯೆಟ್ನಾಂ 180 ದೇಶಗಳ ಆರ್ ಎಸ್ ಎಫ್ ನ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ ಶ್ರೇಯಾಂಕದ ಕೆಳಭಾಗದಲ್ಲಿ ಬಹಳ ಹಿಂದಿನಿಂದಲೂ ಇವೆ. ಈ ವರ್ಷ ಚೀನಾ 172, ವಿಯೆಟ್ನಾಂ 174 ಮತ್ತು ಉತ್ತರ ಕೊರಿಯಾ 177ನೇ ಸ್ಥಾನದಲ್ಲಿದೆ.

ಈ ದೇಶಗಳು ಮತ್ತು ಪ್ರಾಂತ್ಯಗಳು ಇತ್ತೀಚಿನ ವರ್ಷಗಳಲ್ಲಿ ಪತ್ರಿಕಾ ಸ್ವಾತಂತ್ರ್ಯದಲ್ಲಿ ಕುಸಿತವನ್ನು ತೋರಿಸಿವೆ. ಪೂರ್ವ ಏಷ್ಯಾದಲ್ಲಿ ಮಾಧ್ಯಮವು ಕಾರ್ಯನಿರ್ವಹಿಸಲು ಕಷ್ಟಕರವಾದ ಸ್ಥಳವಾಗಿದೆ. ಹೆಚ್ಚುವರಿಯಾಗಿ, ಹಾಂಗ್ ಕಾಂಗ್ ಒಮ್ಮೆ ಏಷ್ಯಾ ಪ್ರದೇಶದಲ್ಲಿ ಪತ್ರಿಕಾ ಸ್ವಾತಂತ್ರ್ಯಕ್ಕೆ ಮಾದರಿಯಾಗಿತ್ತು. ಆದರೆ ರಾಜಕೀಯ ಅಶಾಂತಿ ಮತ್ತು ಮಾಧ್ಯಮ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುವ ಹೊಸ ಕಾನೂನುಗಳ ಅನಂತರ ನಗರದ ಶ್ರೇಯಾಂಕವು ಇತ್ತೀಚೆಗೆ 80 ರಿಂದ 148ಕ್ಕೆ ಇಳಿಯಿತು. ಅಂದಹಾಗೆ ಭಾರತ 162ನೇ ರ್ಯಾಂಕ್‌ನಲ್ಲಿದೆ.

2020ರಲ್ಲಿ ರಾಷ್ಟ್ರೀಯ ಭದ್ರತಾ ಕಾನೂನನ್ನು ಹೇರಲು ಬೀಜಿಂಗ್‌ನ ಕ್ರಮದಿಂದ ಕನಿಷ್ಠ 12ಕ್ಕೂ ಹೆಚ್ಚು ಮಾಧ್ಯಮಗಳು ಮುಚ್ಚಲ್ಪಟ್ಟಿವೆ. 2019ರಲ್ಲಿ ಸಾಮೂಹಿಕ ರಾಜಕೀಯ ಅಶಾಂತಿಯ ಅನಂತರ ನಗರವನ್ನು ಸ್ಥಿರಗೊಳಿಸಲು ಕಾನೂನು ಅಗತ್ಯವಾಗಿದೆ ಎಂದು ಬೀಜಿಂಗ್ ಹೇಳಿದೆ ಎಂದು VOA ವರದಿ ಮಾಡಿದೆ.

ಇದನ್ನೂ ಓದಿ: Al Jazeera: ಹಮಾಸ್‌ ಉಗ್ರರ ಪರ ನಿಲುವು; ಇಸ್ರೇಲ್‌ನಲ್ಲಿ ಅಲ್‌ಜಜೀರಾ ಚಾನೆಲ್‌ ಬಂದ್‌ ಮಾಡಿದ ನೆತನ್ಯಾಹು!

ಹಾಂಗ್ ಕಾಂಗ್‌ನ ಮಾಧ್ಯಮ ಸ್ವಾತಂತ್ರ್ಯಗಳು ಇನ್ನೂ ಸುಧಾರಿಸಿಲ್ಲ ಎಂದು ಆರ್‌ಎಸ್‌ಎಫ್‌ನ ವಕೀಲ ಅಲೆಕ್ಸಾಂಡ್ರಾ ಬಿಲಾಕೋವ್ಸ್ಕಾ ಹೇಳಿದ್ದಾರೆ. ಹಾಂಗ್ ಕಾಂಗ್‌ಗೆ ಕೆಟ್ಟದ್ದು ರಾಜಕೀಯ ಮತ್ತು ಕಾನೂನು ಅಂಶಗಳಾಗಿವೆ. ಹಾಂಗ್ ಕಾಂಗ್‌ನ ಸ್ಥಾನವು ತುಂಬಾ ಕಡಿಮೆಯಾಗಿದೆ. ಇಲ್ಲಿನ ಪರಿಸ್ಥಿತಿಯು ತುಂಬಾ ಕಷ್ಟಕರವಾಗಿದೆ ಎಂದು ಅವರು ತಿಳಿಸಿದ್ದಾರೆ.

Continue Reading

ಉದ್ಯೋಗ

Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನ 3,712 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ನಾಳೆಯೇ ಕೊನೆಯ ದಿನ

Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೋವರ್‌ ಡಿವಿಷನ್‌ ಕ್ಲರ್ಕ್‌, ಡೇಟಾ ಎಂಟ್ರಿ ಆಪರೇಟರ್‌ ಸೇರಿ ಬರೋಬ್ಬರಿ 3,712 ಹುದ್ದೆಗಳಿವೆ (SSC CHSL Recruitment 2024). ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ನಾಳೆ (ಮೇ 7)ಯೇ ಕೊನೆಯ ದಿನ. ಲೋವರ್‌ ಡಿವಿಷನ್‌ ಕ್ಲರ್ಕ್‌ (LDC) / ಜೂನಿಯರ್‌ ಸೆಕ್ರೆಟೆರಿಯೇಟ್‌ ಅಸಿಸ್ಟಂಟ್‌ (JSA), ಡೇಟಾ ಎಂಟ್ರಿ ಆಪರೇಟರ್‌ (DEO) ಮತ್ತು ಡೇಟಾ ಎಂಟ್ರಿ ಆಪರೇಟರ್‌ ಗ್ರೇಡ್‌ ʼA’ ಹುದ್ದೆಗಳಿವೆ. ಎಲ್‌ಡಿಸಿ ಹುದ್ದೆಗೆ ಅರ್ಜಿ ಸಲ್ಲಿಸುವವರು 12ನೇ ತರಗತಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. 12ನೇ ತರಗತಿಯಲ್ಲಿ ವಿಜ್ಞಾನ ಮತ್ತು ಗಣಿತ ವಿಷಯವನ್ನು ಓದಿದವರು ಡೇಟಾ ಎಂಟ್ರಿ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು. ತತ್ಸಮಾನ ವಿದ್ಯಾರ್ಹತೆ ಹೊಂದಿದವರೂ ಅಪ್ಲೈ ಮಾಡಬಹುದು.

VISTARANEWS.COM


on

Job Alert
Koo

ಬೆಂಗಳೂರು: ಉತ್ತಮ ಉದ್ಯೋಗಕ್ಕಾಗಿ ಹುಡುಕಾಟ ನಡೆಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೋವರ್‌ ಡಿವಿಷನ್‌ ಕ್ಲರ್ಕ್‌, ಡೇಟಾ ಎಂಟ್ರಿ ಆಪರೇಟರ್‌ ಸೇರಿ ಬರೋಬ್ಬರಿ 3,712 ಹುದ್ದೆಗಳಿವೆ (SSC CHSL Recruitment 2024). ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನಾಳೆ (ಮೇ 7) (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಲೋವರ್‌ ಡಿವಿಷನ್‌ ಕ್ಲರ್ಕ್‌ (LDC) / ಜೂನಿಯರ್‌ ಸೆಕ್ರೆಟೆರಿಯೇಟ್‌ ಅಸಿಸ್ಟಂಟ್‌ (JSA), ಡೇಟಾ ಎಂಟ್ರಿ ಆಪರೇಟರ್‌ (DEO) ಮತ್ತು ಡೇಟಾ ಎಂಟ್ರಿ ಆಪರೇಟರ್‌ ಗ್ರೇಡ್‌ ʼA’ ಹುದ್ದೆಗಳಿವೆ. ಎಲ್‌ಡಿಸಿ ಹುದ್ದೆಗೆ ಅರ್ಜಿ ಸಲ್ಲಿಸುವವರು 12ನೇ ತರಗತಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. 12ನೇ ತರಗತಿಯಲ್ಲಿ ವಿಜ್ಞಾನ ಮತ್ತು ಗಣಿತ ವಿಷಯವನ್ನು ಓದಿದವರು ಡೇಟಾ ಎಂಟ್ರಿ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು. ತತ್ಸಮಾನ ವಿದ್ಯಾರ್ಹತೆ ಹೊಂದಿದವರೂ ಅಪ್ಲೈ ಮಾಡಬಹುದು.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 27 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ರಿಯಾಯಿತಿ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಿನಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಹಿಳೆ / ಮಾಜಿ ಯೋಧರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ / ಒಬಿಸಿ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಅನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು. ಎರಡು ಹಂತದ ಲಿಖಿತ ಪರೀಕ್ಷೆ, ಸ್ಕಿಲ್‌ ಟೆಸ್ಟ್‌ / ಟೈಪಿಂಗ್‌ ಟೆಸ್ಟ್‌, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಮೊದಲ ಹಂತದ ಪರೀಕ್ಷೆ ಜುಲೈ 1,2,3,4,5,8,9,10,11,12ರಂದು ನಡೆಯಲಿದೆ. ಕರ್ನಾಟಕದಲ್ಲಿ ಪರೀಕ್ಷೆ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಯಲ್ಲಿ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ವೈಯಕ್ತಿಕ ಮಾಹಿತಿ ನೀಡುವ ಮೂಲಕ ಹೆಸರು ನೋಂದಾಯಿಸಿ.
  • ನಿಮಗೆ ಬಂದಿರುವ ರಿಜಿಸ್ಟ್ರೇಷನ್‌ ನಂಬರ್‌ ಮತ್ತು ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ಕಾಣಿಸುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಸೂಚಿಸಿರುವ ಅಳತೆಯಲ್ಲಿ ದಾಖಲೆಗಳನ್ನು ಮತ್ತು ಫೋಟೊ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾದ ಬಳಿಕ ಈ ಬಗ್ಗೆ ಇಮೇಲ್‌, ಎಸ್‌ಎಂಎಸ್‌ ಮೂಲಕ ಸಂದೇಶ ಬರಲಿದೆ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಕೋರ್ಟ್‌ನಲ್ಲಿದೆ 41 ಹುದ್ದೆ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 7ರೊಳಗೆ ಅಪ್ಲೈ ಮಾಡಿ

Job Alert: ನವೋದಯ ವಿದ್ಯಾಲಯ ಸಮಿತಿಯು ದೇಶದಾದ್ಯಂತ ತನ್ನ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಬರೋಬ್ಬರಿ 1,377 ಬೋಧಕೇತರ ಹುದ್ದೆಗಳು ಖಾಲಿ ಇದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ತೇರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಅರ್ಜಿ ಸಲ್ಲಿಕೆಗೆ ಏಪ್ರಿಲ್‌ 30 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ಕಾಲಾವಧಿಯನ್ನು ವಿಸ್ತರಿಸಲಾಗಿದ್ದು, ಕೊನೆಯ ದಿನ ಮೇ 7. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು

VISTARANEWS.COM


on

Job Alert
Koo

ಬೆಂಗಳೂರು: ನವೋದಯ ವಿದ್ಯಾಲಯ ಸಮಿತಿ (Navodaya Vidyalaya Samiti)ಯು ದೇಶದಾದ್ಯಂತ ತನ್ನ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (Navodaya Vidyalaya Samiti Recruitment 2024). ಬರೋಬ್ಬರಿ 1,377 ಬೋಧಕೇತರ ಹುದ್ದೆಗಳು ಖಾಲಿ ಇದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ತೇರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು. ಈ ಹಿಂದೆ ಅರ್ಜಿ ಸಲ್ಲಿಕೆಗೆ ಏಪ್ರಿಲ್‌ 30 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ಕಾಲಾವಧಿಯನ್ನು ವಿಸ್ತರಿಸಲಾಗಿದ್ದು, ಕೊನೆಯ ದಿನ ಮೇ 7. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸ್ಟಾಫ್‌ ನರ್ಸ್‌ 121 ಹುದ್ದೆ, ವಿದ್ಯಾರ್ಹತೆ: ಬಿಎಸ್ಸಿ ನರ್ಸಿಂಗ್ ಅಸಿಸ್ಟಂಟ್ ಸೆಕ್ಷನ್‌ ಆಫೀಸರ್ (ಎಎಸ್‌ಒ) 5 ಹುದ್ದೆ, ವಿದ್ಯಾರ್ಹತೆ: ಯಾವುದೇ ಪದವಿ
ಆಡಿಟ್ ಅಸಿಸ್ಟಂಟ್ 12 ಹುದ್ದೆ, ವಿದ್ಯಾರ್ಹತೆ: ಬಿ.ಕಾಂ
ಜೂನಿಯರ್ ಟ್ರಾನ್ಸ್‌ಲೇಷನ್ ಆಫೀಸರ್ 4 ಹುದ್ದೆ, ವಿದ್ಯಾರ್ಹತೆ: ಸ್ನಾತಕೊತ್ತರ ಪದವಿ
ಲೀಗಲ್ ಅಸಿಸ್ಟಂಟ್ 1 ಹುದ್ದೆ, ವಿದ್ಯಾರ್ಹತೆ: ಕಾನೂನು ಪದವಿ
ಸ್ಟೆನೋಗ್ರಾಫರ್ 23 ಹುದ್ದೆ, ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಜತೆಗೆ ಟೈಪಿಂಗ್ ಸ್ಕಿಲ್
ಕಂಪ್ಯೂಟರ್ ಆಪರೇಟರ್ 2 ಹುದ್ದೆ, ವಿದ್ಯಾರ್ಹತೆ: ಸಿಎಸ್‌, ಐಟಿ ವಿಷಯಗಳಲ್ಲಿ ಬಿಇ / ಬಿ.ಟೆಕ್ / ಬಿಸಿಎ/ ಬಿಎಸ್ಸಿ
ಕ್ಯಾಟರಿಂಗ್ ಸೂಪರ್‌ವೈಸರ್ 78 ಹುದ್ದೆ, ಹೋಟೆಲ್‌ ಮ್ಯಾನೇಜ್‌ಮೆಂಟ್‌ ಪದವಿ
ಜೂನಿಯರ್ ಸೆಕ್ರೇಟರಿಯಟ್ ಅಸಿಸ್ಟಂಟ್ 21 ಹುದ್ದೆ, ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಜತೆಗೆ ಟೈಪಿಂಗ್ ಸ್ಕಿಲ್
ಜೂನಿಯರ್ ಸೆಕ್ರೇಟರಿಯಟ್ ಅಸಿಸ್ಟಂಟ್ (ಜೆಎಸ್‌ಎ) 360
ಇಲೆಕ್ಟ್ರೀಷಿಯನ್ ಕಮ್ ಪ್ಲಂಬರ್ 128 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಇಲೆಕ್ಟ್ರೀಷಿಯನ್ ಅಂಡ್ ವೈರಿಂಗ್
ಲ್ಯಾಬ್‌ ಅಟೆಂಡಂಟ್ 161 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ / ಪಿಯುಸಿ ಜತೆಗೆ ಲ್ಯಾಬೋರೇಟರಿ ಟೆಕ್ನಿಕಲ್ ಸ್ಕಿಲ್‌
ಮೆಸ್‌ ಹೆಲ್ಪರ್ 442 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ
ಮಲ್ಟಿ ಟಾಸ್ಕಿಂಗ್ ಸ್ಟಾಫ್‌ (ಎಂಟಿಎಸ್) 19 ಹುದ್ದೆ, ವಿದ್ಯಾರ್ಹತೆ: ಎಸ್ಸೆಸ್ಸೆಲ್ಸಿ

ವಯೋಮಿತಿ

ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 37 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗಕ್ಕೆ 3 ವರ್ಷ, ಎಸ್‌ಸಿ / ಎಸ್‌ಟಿ ವಿಭಾಗಕ್ಕೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಸ್ಟಾಫ್‌ ನರ್ಸ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 1,500 ರೂ. ಮತ್ತು ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳು 500 ರೂ. ಪಾವತಿಸಬೇಕು. ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ / ಒಬಿಸಿ ವಿಭಾಗದವರು 1,000 ರೂ. ಮತ್ತು ಇತರ ವರ್ಗದವರು 500 ರೂ. ಅರ್ಜಿ ಶುಲ್ಕವಾಗಿ ಪಾವತಿಸಬೇಕು.

Navodaya Vidyalaya Samiti Recruitment 2024ರ ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ದಿನಾಂಕ ವಿಸ್ತರಿಸಿದ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: 313 ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿಯಿಂದ ಅರ್ಜಿ ಆಹ್ವಾನ; ಡಿಪ್ಲೋಮಾ ಓದಿದವರು ಇಂದೇ ಅಪ್ಲೈ ಮಾಡಿ

Continue Reading
Advertisement
Nirav modi
ದೇಶ7 mins ago

Nirav Modi: ನೀರವ್‌ ಮೋದಿಗೆ ಲಂಡನ್‌ ಜೈಲೇ ಗತಿ; 5ನೇ ಬಾರಿ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್

Yallapura MLA Shivaram Hebbar voting in Arabail village
ರಾಜಕೀಯ17 mins ago

Lok Sabha Election 2024: ಅಭಿವೃದ್ಧಿ ಕಾರ್ಯಕ್ಕಾಗಿ ನೀತಿ ಸಂಹಿತೆ ಸಡಿಲಿಸಲು ಶಿವರಾಮ ಹೆಬ್ಬಾರ್ ಮನವಿ

Haryana Government
ಪ್ರಮುಖ ಸುದ್ದಿ22 mins ago

Haryana Government : ಹರಿಯಾಣದ ಬಿಜೆಪಿ ಸರ್ಕಾರ ಪತನ ಸಾಧ್ಯತೆ; 3 ಪಕ್ಷೇತರರು ಕಾಂಗ್ರೆಸ್ ಕಡೆಗೆ

Prajwal Revanna Case HD Revanna refuses to face to face with 2nd accused in kidnapping case
ಕ್ರೈಂ24 mins ago

Prajwal Revanna Case: ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ ಜತೆ ಮುಖಾಮುಖಿ ವಿಚಾರಣೆಗೆ ಒಪ್ಪದ ರೇವಣ್ಣ!

Shrikhshetra Siddrabetta Balehonnur Khasa Shakha Math 18th year Anniversary on June 9 says sri veerabhadra shivacharya swamiji
ತುಮಕೂರು28 mins ago

Tumkur News: ಜೂ. 9ಕ್ಕೆ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ವಾರ್ಷಿಕೋತ್ಸವ

Bidar Lok Sabha constituency BJP candidate Bhagwanth Khooba voting in Aurad
ಬೀದರ್‌31 mins ago

Lok Sabha Election 2024: ಔರಾದ್‌ನಲ್ಲಿ ಬಿಜೆಪಿ ಅಭ್ಯರ್ಥಿ ಭಗವಂತ್ ಖೂಬಾ ಮತದಾನ

Lok Sabha Election
ದೇಶ33 mins ago

Lok Sabha Election: 3ನೇ ಹಂತದಲ್ಲಿ ಶೇ.60ರಷ್ಟು ಮತದಾನ, ಕಳೆದ ಬಾರಿಗಿಂತಲೂ ಕಡಿಮೆ

Prajwal Revanna Case HD Revanna suffers heartburn and gastric problems Shift to hospital
ರಾಜಕೀಯ59 mins ago

Prajwal Revanna Case: ಎಚ್.ಡಿ. ರೇವಣ್ಣಗೆ ಎದೆ ಉರಿ, ಗ್ಯಾಸ್ಟ್ರಿಕ್‌ ತೊಂದರೆ; ಆಸ್ಪತ್ರೆಗೆ ಶಿಫ್ಟ್

Lok Sabha Election 2024
Lok Sabha Election 20241 hour ago

Lok Sabha Election 2024: ಕೈಗಳಿಲ್ಲದಿದ್ದರೂ ಮತದಾನ ಮಾಡಿ ಮಾದರಿಯಾದ ಅಂಕಿತ್ ಸೋನಿ

Met Gala 2024
ಫ್ಯಾಷನ್1 hour ago

Met Gala 2024: ಮೆಟ್ ಗಾಲಾದಲ್ಲಿ 200 ಕ್ಯಾರಟ್ ವಜ್ರ ಧರಿಸಿ ಗಮನ ಸೆಳೆದ ಸುಧಾ ರೆಡ್ಡಿ! ಯಾರಿವರು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ4 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ1 day ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ1 day ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

ಟ್ರೆಂಡಿಂಗ್‌