Site icon Vistara News

KPSC Recruitment 2022 | ಸಾಂಖ್ಯಿಕ ನಿರೀಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಇಂದು ಕಡೇ ದಿನ

KPSC Recruitment

ಕೆಪಿಎಸ್‌ಸಿ

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಸಾಂಖ್ಯಿಕ ನಿರೀಕ್ಷಕರ ಹುದ್ದೆಗಳ (KPSC Recruitment 2022) ನೇಮಕಕ್ಕೆ ಈಗಾಗಲೇ ಅಧಿಸೂಚನೆ ಪ್ರಕಟಿಸಿದ್ದು, ಕಲ್ಯಾಣ ಕರ್ನಾಟಕದ 17 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು (ನ.15) ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ಪಾವತಿಸಲು ನ.16 ಕೊನೆಯ ದಿನವಾಗಿದೆ.

ಒಟ್ಟು ೧೨೨ ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು, ಉಳಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್‌ 17ರ ವರೆಗೆ ಅವಕಾಶವಿರುತ್ತದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಆನ್‌ಲೈನ್‌ನಲ್ಲಿಯೇ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಲಿಂಕ್‌ ಇಲ್ಲಿದೆ: https://www.kpscrecruitment.in/RPS/Home.aspx

ಯಾರು ಅರ್ಜಿ ಸಲ್ಲಿಸಬಹುದು?
ಸಾಂಖ್ಯಿಕ ನಿರೀಕ್ಷಕರ ಹುದ್ದೆಗಳಿಗೆ 1. Economics 2. Statistics 3.Mathematics 4. Computer Science ಈ ಯಾವುದಾದರೂ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಈ ವಿದ್ಯಾರ್ಹತೆಯನ್ನು ಹೊರತು ಪಡಿಸಿ ಇತರೆ ಯಾವುದೇ ತತ್ಸಮಾನ ಎಂದು ಹೇಳಲಾಗುವ ವಿದ್ಯಾಹರ್ತೆಯನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ವಯೋಮಿತಿ ಎಷ್ಟು?
ಸಾಮಾನ್ಯ ಅಭ್ಯರ್ಥಿಗಳಿಗೆ ೧೮ ರಿಂದ ೩೫ ವರ್ಷಗಳು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 38ವರ್ಷಗಳು. ಪರಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.

ಇದನ್ನು ಗಮಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-11-2022
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 16-11-2022
ಸಹಾಯವಾಣಿ ಸಂಖ್ಯೆ: 18005728707
ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ : https://kpsc.kar.nic.in

ಅರ್ಜಿ ಶುಲ್ಕ ಎಷ್ಟು ಪಾವತಿಸಬೇಕು?
ಸಾಮಾನ್ಯ ಅಭ್ಯರ್ಥಿಗಳು ೬೦೦ ರೂ. ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ೩೦೦ ರೂ. ಹಾಗೂ ಮಾಜಿ ಸೈನಿಕರು ೫೦ ರೂ. ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ. ಪರಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿಯೇ ಪಾವತಿಸಲು ಅವಕಾಶ ನೀಡಲಾಗಿರುತ್ತದೆ.
ಪ್ರಕ್ರಿಯೆ ಶುಲ್ಕ (processing fees) ೩೫ ರೂ.ಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-೧, ಮಾಜಿ ಸೈನಿಕ ಹಾಗೂ ಅಂಗವಿಕಲ ಅಭ್ಯರ್ಥಿಗಳೂ ಸೇರಿದಂತೆ ಎಲ್ಲ ಅಭ್ಯರ್ಥಿಗಳು ಪಾವತಿಸಬೇಕಿರುತ್ತದೆ. ಈ ಶುಲ್ಕ ಪಾವತಿಸದಿದ್ದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ.

ಅಧಿಸೂಚನೆಗಳನ್ನು ಇಲ್ಲಿ ಓದಿ | https://kpsc.kar.nic.in/index.html

ನೇಮಕ ಹೇಗೆ?
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿಗಳಿಸಿದ ಶೇಕಡಾವಾರು ಅಂಕಗಳ ಆಧಾರದಲ್ಲಿ ನೇಮಕಮಾಡಿಕೊಳ್ಳಲಾಗುತ್ತದೆ. ಸಂದರ್ಶನ ಇರುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಪ್ರತಿಯೊಂದು ಪತ್ರಿಕೆಯು ಗರಿಷ್ಠ 100 ಅಂಕಗಳಿಗೆ ನಡೆಯಲಿದ್ದು, ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ನಡೆಯಲಿದೆ. ಪತ್ರಿಕೆ-1 ಸಾಮಾನ್ಯ ಜ್ಞಾನಕ್ಕೆ ಸಂಬಂಧ ಪಟ್ಟಿದ್ದರೆ ಪತ್ರಿಕೆ-2 ಮೂರು ವಿಭಾಗಗಳನ್ನು ಹೊಂದಿರುತ್ತದೆ. ಅವುಗಳೆಂದರೆ;
ಸಾಮಾನ್ಯ ಕನ್ನಡ-35 ಅಂಕ, ಸಾಮಾನ್ಯ ಇಂಗ್ಲಿಷ್‌-35 ಅಂಕ, ಕಂಪ್ಯೂಟರ್‌ ಜ್ಞಾನ-30 ಅಂಕ.

ಪತ್ರಿಕೆ-1 ಪರೀಕ್ಷೆ ಬರೆಯಲು ಒಂದೂವರೆ ಗಂಟೆ ಹಾಗೂ ಪತ್ರಿಕೆ-2 ರ ಪರೀಕ್ಷೆ ಬರೆಯಲು ಎರಡು ಗಂಟೆ ಕಾಲಾವಕಾಶ ನೀಡಲಾಗುತ್ತದೆ. ಈ ಪರೀಕ್ಷೆಯ ಪಠ್ಯ ಕ್ರಮವನ್ನು ಆಯೋಗದ ವೆಬ್‌ನಲ್ಲಿ ಒದಗಿಸಲಾಗಿದೆ. ಪ್ರಶ್ನೆ ಪತ್ರಿಕೆಯು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಇರಲಿದೆ. ಈ ಪರೀಕ್ಷೆಯಲ್ಲಿ ಶೇ.35 ರಷ್ಟು ಅಂಕ ಪಡೆದವರು ಮಾತ್ರ ನೇಮಕಕ್ಕೆ ಅರ್ಹರಾಗಿರುತ್ತಾರೆ. ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನ (Negative) ನಡೆಸಲಾಗುತ್ತದೆ. ಆದರೆ ಪ್ರತಿ ತಪ್ಪು ಉತ್ತರಕ್ಕೆ ಪ್ರಶ್ನೆಗೆ ನಿಗದಿಪಡಿಸಿದ ಅಂಕಗಳ ನಾಲ್ಕನೇ ಒಂದು ಭಾಗದಷ್ಟು(1/4) ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಮಾಹಿತಿಯನ್ನು ಮುಂದೆ ನೀಡಲಾಗುತ್ತದೆ. ಅಗತ್ಯ ಇರುವ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನೂ ಬರೆದು ಅರ್ಹತೆ ಪಡೆಯಬೇಕಿರುತ್ತದೆ. ಪರೀಕ್ಷಾ ವೇಳಾಪಟ್ಟಿಯನ್ನು ಮುಂದೆ ಪ್ರಕಟಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವೇತನ ಶ್ರೇಣಿ ಎಷ್ಟು?
ಸಾಂಖ್ಯಿಕ ನಿರೀಕ್ಷಕರು: ರೂ. 27,650-52,650

ಇದನ್ನೂ ಓದಿ | KPSC Recruitment 2022 | ಸರ್ಕಾರ ಇಲಾಖೆಗಳಲ್ಲಿ 700 ಹುದ್ದೆ; ಸದ್ಯವೇ ಕೆಪಿಎಸ್‌ಸಿ ಅಧಿಸೂಚನೆ

Exit mobile version