KPSC Recruitment 2022 | ಸಾಂಖ್ಯಿಕ ನಿರೀಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಇಂದು ಕಡೇ ದಿನ - Vistara News

ಉದ್ಯೋಗ

KPSC Recruitment 2022 | ಸಾಂಖ್ಯಿಕ ನಿರೀಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಇಂದು ಕಡೇ ದಿನ

ಕೆಪಿಎಸ್‌ಸಿಯು ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಸಾಂಖ್ಯಿಕ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ (KPSC Recruitment 2022 ) ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

KPSC Recruitment
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಸಾಂಖ್ಯಿಕ ನಿರೀಕ್ಷಕರ ಹುದ್ದೆಗಳ (KPSC Recruitment 2022) ನೇಮಕಕ್ಕೆ ಈಗಾಗಲೇ ಅಧಿಸೂಚನೆ ಪ್ರಕಟಿಸಿದ್ದು, ಕಲ್ಯಾಣ ಕರ್ನಾಟಕದ 17 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದು (ನ.15) ಕೊನೆಯ ದಿನವಾಗಿದೆ. ಅರ್ಜಿ ಶುಲ್ಕ ಪಾವತಿಸಲು ನ.16 ಕೊನೆಯ ದಿನವಾಗಿದೆ.

KPSC Recruitment 2022

ಒಟ್ಟು ೧೨೨ ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು, ಉಳಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನವೆಂಬರ್‌ 17ರ ವರೆಗೆ ಅವಕಾಶವಿರುತ್ತದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಆನ್‌ಲೈನ್‌ನಲ್ಲಿಯೇ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಲಿಂಕ್‌ ಇಲ್ಲಿದೆ: https://www.kpscrecruitment.in/RPS/Home.aspx

ಯಾರು ಅರ್ಜಿ ಸಲ್ಲಿಸಬಹುದು?
ಸಾಂಖ್ಯಿಕ ನಿರೀಕ್ಷಕರ ಹುದ್ದೆಗಳಿಗೆ 1. Economics 2. Statistics 3.Mathematics 4. Computer Science ಈ ಯಾವುದಾದರೂ ವಿಷಯದಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಈ ವಿದ್ಯಾರ್ಹತೆಯನ್ನು ಹೊರತು ಪಡಿಸಿ ಇತರೆ ಯಾವುದೇ ತತ್ಸಮಾನ ಎಂದು ಹೇಳಲಾಗುವ ವಿದ್ಯಾಹರ್ತೆಯನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ವಯೋಮಿತಿ ಎಷ್ಟು?
ಸಾಮಾನ್ಯ ಅಭ್ಯರ್ಥಿಗಳಿಗೆ ೧೮ ರಿಂದ ೩೫ ವರ್ಷಗಳು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 38ವರ್ಷಗಳು. ಪರಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.

ಇದನ್ನು ಗಮಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-11-2022
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 16-11-2022
ಸಹಾಯವಾಣಿ ಸಂಖ್ಯೆ: 18005728707
ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ : https://kpsc.kar.nic.in

ಅರ್ಜಿ ಶುಲ್ಕ ಎಷ್ಟು ಪಾವತಿಸಬೇಕು?
ಸಾಮಾನ್ಯ ಅಭ್ಯರ್ಥಿಗಳು ೬೦೦ ರೂ. ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ೩೦೦ ರೂ. ಹಾಗೂ ಮಾಜಿ ಸೈನಿಕರು ೫೦ ರೂ. ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ. ಪರಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿಯೇ ಪಾವತಿಸಲು ಅವಕಾಶ ನೀಡಲಾಗಿರುತ್ತದೆ.
ಪ್ರಕ್ರಿಯೆ ಶುಲ್ಕ (processing fees) ೩೫ ರೂ.ಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-೧, ಮಾಜಿ ಸೈನಿಕ ಹಾಗೂ ಅಂಗವಿಕಲ ಅಭ್ಯರ್ಥಿಗಳೂ ಸೇರಿದಂತೆ ಎಲ್ಲ ಅಭ್ಯರ್ಥಿಗಳು ಪಾವತಿಸಬೇಕಿರುತ್ತದೆ. ಈ ಶುಲ್ಕ ಪಾವತಿಸದಿದ್ದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ.

ಅಧಿಸೂಚನೆಗಳನ್ನು ಇಲ್ಲಿ ಓದಿ | https://kpsc.kar.nic.in/index.html

ನೇಮಕ ಹೇಗೆ?
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿಗಳಿಸಿದ ಶೇಕಡಾವಾರು ಅಂಕಗಳ ಆಧಾರದಲ್ಲಿ ನೇಮಕಮಾಡಿಕೊಳ್ಳಲಾಗುತ್ತದೆ. ಸಂದರ್ಶನ ಇರುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಪ್ರತಿಯೊಂದು ಪತ್ರಿಕೆಯು ಗರಿಷ್ಠ 100 ಅಂಕಗಳಿಗೆ ನಡೆಯಲಿದ್ದು, ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ನಡೆಯಲಿದೆ. ಪತ್ರಿಕೆ-1 ಸಾಮಾನ್ಯ ಜ್ಞಾನಕ್ಕೆ ಸಂಬಂಧ ಪಟ್ಟಿದ್ದರೆ ಪತ್ರಿಕೆ-2 ಮೂರು ವಿಭಾಗಗಳನ್ನು ಹೊಂದಿರುತ್ತದೆ. ಅವುಗಳೆಂದರೆ;
ಸಾಮಾನ್ಯ ಕನ್ನಡ-35 ಅಂಕ, ಸಾಮಾನ್ಯ ಇಂಗ್ಲಿಷ್‌-35 ಅಂಕ, ಕಂಪ್ಯೂಟರ್‌ ಜ್ಞಾನ-30 ಅಂಕ.

ಪತ್ರಿಕೆ-1 ಪರೀಕ್ಷೆ ಬರೆಯಲು ಒಂದೂವರೆ ಗಂಟೆ ಹಾಗೂ ಪತ್ರಿಕೆ-2 ರ ಪರೀಕ್ಷೆ ಬರೆಯಲು ಎರಡು ಗಂಟೆ ಕಾಲಾವಕಾಶ ನೀಡಲಾಗುತ್ತದೆ. ಈ ಪರೀಕ್ಷೆಯ ಪಠ್ಯ ಕ್ರಮವನ್ನು ಆಯೋಗದ ವೆಬ್‌ನಲ್ಲಿ ಒದಗಿಸಲಾಗಿದೆ. ಪ್ರಶ್ನೆ ಪತ್ರಿಕೆಯು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಇರಲಿದೆ. ಈ ಪರೀಕ್ಷೆಯಲ್ಲಿ ಶೇ.35 ರಷ್ಟು ಅಂಕ ಪಡೆದವರು ಮಾತ್ರ ನೇಮಕಕ್ಕೆ ಅರ್ಹರಾಗಿರುತ್ತಾರೆ. ಪರೀಕ್ಷೆಯಲ್ಲಿ ಋಣಾತ್ಮಕ ಮೌಲ್ಯಮಾಪನ (Negative) ನಡೆಸಲಾಗುತ್ತದೆ. ಆದರೆ ಪ್ರತಿ ತಪ್ಪು ಉತ್ತರಕ್ಕೆ ಪ್ರಶ್ನೆಗೆ ನಿಗದಿಪಡಿಸಿದ ಅಂಕಗಳ ನಾಲ್ಕನೇ ಒಂದು ಭಾಗದಷ್ಟು(1/4) ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಮಾಹಿತಿಯನ್ನು ಮುಂದೆ ನೀಡಲಾಗುತ್ತದೆ. ಅಗತ್ಯ ಇರುವ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನೂ ಬರೆದು ಅರ್ಹತೆ ಪಡೆಯಬೇಕಿರುತ್ತದೆ. ಪರೀಕ್ಷಾ ವೇಳಾಪಟ್ಟಿಯನ್ನು ಮುಂದೆ ಪ್ರಕಟಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವೇತನ ಶ್ರೇಣಿ ಎಷ್ಟು?
ಸಾಂಖ್ಯಿಕ ನಿರೀಕ್ಷಕರು: ರೂ. 27,650-52,650

ಇದನ್ನೂ ಓದಿ | KPSC Recruitment 2022 | ಸರ್ಕಾರ ಇಲಾಖೆಗಳಲ್ಲಿ 700 ಹುದ್ದೆ; ಸದ್ಯವೇ ಕೆಪಿಎಸ್‌ಸಿ ಅಧಿಸೂಚನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Highest Salary Paying Companies: ಎಂಜಿನಿಯರ್‌ಗಳಿಗೆ ಅತೀ ಹೆಚ್ಚು ಸಂಬಳ ಕೊಡುವ ಕಂಪನಿಗಳ ಪಟ್ಟಿ ಇಲ್ಲಿದೆ

ಗೂಗಲ್ ನಲ್ಲಿ ಅತ್ಯಧಿಕ ಪಾವತಿ ಮಾಡಲಾಗುತ್ತಿದ್ದು, ಇಲ್ಲಿನ ಎಂಜಿನಿಯರ್ ಗಳು ವಾರ್ಷಿಕವಾಗಿ 66 ಲಕ್ಷ ರೂ. ಸಂಬಳ ಪಡೆಯುತ್ತಿದ್ದಾರೆ. ಇದು ಅತ್ಯಂತ ಜನಪ್ರಿಯವಾದ ಕಂಪನಿಗಳಲ್ಲಿ ಅತ್ಯಧಿಕವಾಗಿದೆ. ವಿಶ್ವ
ಇತರ ಪ್ರಸಿದ್ಧ ಕಂಪನಿಗಳು ಭಾರತದಲ್ಲಿ ಎಂಜಿನಿಯರ್ ಗಳಿಗೆ ಎಷ್ಟು ಸಂಬಳ ಪಾವತಿ (Highest Salary Paying Companies) ಮಾಡುತ್ತಿದೆ ಎನ್ನುವ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Highest Paying Companies
Koo

ಗೂಗಲ್ (Google), ಅಮೆಜಾನ್ (amazon), ಮೈಕ್ರೋ ಸಾಫ್ಟ್ (microsoft) ಸೇರಿದಂತೆ ವಿಶ್ವ ಪ್ರಸಿದ್ಧ ಕಂಪನಿಗಳ ಸ್ಯಾಲರಿ ಪ್ಯಾಕೇಜ್ (Highest Salary Paying Companies) ಎಷ್ಟಿರಬಹುದು ಎನ್ನುವ ಕುತೂಹಲ ಎಲ್ಲರಿಗೂ ಇದೆ. ಈ ಕುರಿತು ಇದೀಗ ಎಕ್ಸ್ ನಲ್ಲಿ (x) ಮಾಹಿತಿ ವೈರಲ್ (viral) ಆಗಿದ್ದು, ವಿಶ್ವ ಪ್ರಸಿದ್ಧ ಕಂಪನಿಗಳ ಎಂಜಿನಿಯರ್ ಗಳು ವಾರ್ಷಿಕ ಸರಾಸರಿ 26 ಸಾವಿರ ರೂ.ನಿಂದ 66 ಲಕ್ಷ ರೂ. ವರೆಗೆ ಸಂಬಳ ಪಡೆಯುತ್ತಿದ್ದಾರೆ ಎಂಬುದು ತಿಳಿದು ಬಂದಿದೆ.

ಗೂಗಲ್ ನಲ್ಲಿ ಅತ್ಯಧಿಕ ಪಾವತಿ ಮಾಡಲಾಗುತ್ತಿದ್ದು, ಇಲ್ಲಿನ ಎಂಜಿನಿಯರ್ ಗಳು ವಾರ್ಷಿಕವಾಗಿ 66 ಲಕ್ಷ ರೂ. ಸಂಬಳ ಪಡೆಯುತ್ತಿದ್ದಾರೆ. ಇದು ಅತ್ಯಂತ ಜನಪ್ರಿಯವಾದ ಕಂಪನಿಗಳಲ್ಲಿ ಅತ್ಯಧಿಕವಾಗಿದೆ. ಬಳಿಕ ಗೊಜೆಕ್, ಮೈಕ್ರೋಸಾಫ್ಟ್, ಝೀಟಾ, ಅಡೋಬ್ ಮತ್ತು ಸೇಲ್ಸ್‌ಫೋರ್ಸ್‌ನಲ್ಲಿ ಎಂಜಿನಿಯರ್‌ ಹೆಚ್ಚಿನ ಸಂಬಳ ಪಡೆಯುತ್ತಿದ್ದಾರೆ. ಇದರಲ್ಲಿ ಕ್ರಮವಾಗಿ 59.7 ಲಕ್ಷ, 58.5 ಲಕ್ಷ, 58 ಲಕ್ಷ, 56.3 ಲಕ್ಷ, ಮತ್ತು 56.1 ಲಕ್ಷ ಸಂಬಳ ಪಡೆಯುವ ಎಂಜಿನಿಯರ್ ಗಳು ಇದ್ದಾರೆ.

ಬಳಿಕದ ಸ್ಥಾನದಲ್ಲಿ ವಿಎಂ ವೇರ್, ಶೇರ್ ಚಾಟ್, ಗೋಲ್ಡ್ ಮನ್, ಪೇ ಪಾಲ್, ಮಿಂತ್ರಾ, ವಾಲ್ ಮಾರ್ಟ್, ಸರ್ವಿಸ್ ನೌ, ಫ್ಲಿಪ್ ಕಾರ್ಟ್, ರಝೋರ್ ಪೇ, ಒರಾಕಲ್, ಅಮೆಜಾನ್ ಕೂಡ ಸೇರಿದೆ. ಇದರಲ್ಲಿ ಬಹುತೇಕ ಎಂಜಿನಿಯರ್‌ಗಳ ಸಂಬಳ 51.4 ಲಕ್ಷ ರೂ. ವರೆಗೆ ಇದೆ. ಟೆಕೀವ್ನ್, ಸಿಸ್ಕೊ, ಪೇ ಟಿಎಂ, ಕ್ವ್ಯಾಲ್ ಕಾಮ್, ಸ್ಯಾಪ್, ಓಯೋ ಕಂಪೆನಿಗಳ ಎಂಜಿನಯರ್ ಗಳಿಗೆ 5೦ ಲಕ್ಷ ರೂ.ವರೆಗೆ ವಾರ್ಷಿಕ ಪಾವತಿ ಮಾಡಲಾಗುತ್ತದೆ.


ಉಳಿದಂತೆ ಐಬಿಎಂ, ಸ್ಯಾಮ್ ಸಂಗ್, ಅಕ್ವೆವೆಂಚರ್, ಕಾಗ್ನಿಜೆಂಟ್, ಇನ್ಫೋಸಿಸ್, ಕ್ಯಾಂಪ್ಗೆಮಿನಿ, ಟಿಸಿಎಸ್ ಕಂಪೆನಿಗಳಲ್ಲಿ ಎಂಜಿನಿಯರ್ ಗಳಿಗೆ ಗರಿಷ್ಠ ವಾರ್ಷಿಕ ಪಾವತಿ 30 ಲಕ್ಷ ರೂ.ವರೆಗೆ ನೀಡಲಾಗುತ್ತದೆ.

ಇದನ್ನೂ ಓದಿ: LinkedIn: ಉದ್ಯೋಗ ಹುಡುಕಾಟದಲ್ಲಿರುವ ಪದವೀಧರರಿಗೆ ಲಿಂಕ್ಡ್‌ಇನ್‌ ಸಲಹೆಗಳು ಪ್ರಕಟ; ಏನೇನಿವೆ ತಪ್ಪದೇ ಓದಿ

ಹೆಚ್ಚು ಮತ್ತು ಕಡಿಮೆ ಪಾವತಿಸುವ ಕಂಪನಿಗಳ ಮಾಹಿತಿ ಸಂಗ್ರಹಕ್ಕಾಗಿ ಒಟ್ಟು 25,000 ಮಂದಿಯ ಸಂಬಳವನ್ನು ವಿಶ್ಲೇಷಿಸಲಾಗಿದೆ ಎಂದು ಎಕ್ಸ್ ಬಳಕೆದಾರರು ಹೇಳಿಕೊಂಡಿದ್ದಾರೆ. ಭಾರತದಲ್ಲಿ ಸಂಬಳ ಪಾವತಿಯ ಬಗ್ಗೆ ಪಾರದರ್ಶಕತೆ ಬಹಳ ಮುಖ್ಯ ಎಂದಿರುವ ಅವರು ಇದರಲ್ಲಿ ಮೂಲ ವೇತನದಲ್ಲಿ ಕೊಂಚ ವ್ಯತ್ಯಾಸವಿರಬಹುದು ಎಂದು ತಿಳಿಸಿದ್ದಾರೆ.

Continue Reading

ಉದ್ಯೋಗ

Job Alert: ಗಮನಿಸಿ; 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ: ಇಲ್ಲಿದೆ ಹೊಸ ವೇಳಾಪಟ್ಟಿ

Job Alert: ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಜೂನ್‌ 30. ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ (Motor Vehicle Inspector)​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (KPSC Recruitment 2024). ಈ ಹಿಂದೆ ಅರ್ಜಿ ಸಲ್ಲಿಕೆಗೆ ಮೇ 21 ಕೊನೆಯ ದಿನಾಂಕ ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 30 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

ವಯೋಮಿತಿ ಮತ್ತು ಅರ್ಜಿ ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1ರ ಅಭ್ಯರ್ಥಿಗಳಿಗೆ 5 ವರ್ಷ, ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 3 ವರ್ಷ ಮತ್ತು ಪಿಡಬ್ಲ್ಯುಡಿ / ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1/ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಮಾಜಿ ಯೋಧರು ಅರ್ಜಿ ಶುಲ್ಕವಾಗಿ 50 ರೂ., ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 300 ರೂ., ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 33,450 ರೂ. – 62,600 ರೂ. ಮಾಸಿಕ ವೇತನ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌: 080-30574957 / 30574901ಕ್ಕೆ ಕರೆ ಮಾಡಿ.

ದಿನಾಂಕ ವಿಸ್ತರಣೆಯ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನಿಮ್ಮ ಮೊಬೈಲ್‌ ನಂಬರ್‌ ಮತ್ತು ಇಮೇಲ್‌ ಐಡಿ ನಮೂದಿಸಿ ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ / ರಿಕ್ವೆಸ್ಟ್‌ ನಂಬರ್‌ ತೆಗೆದಿಡಿ.

ಇದನ್ನೂ ಓದಿ: Job Alert: ಯುಪಿಎಸ್‌ಸಿಯಿಂದ 312 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Continue Reading

ಉದ್ಯೋಗ

Job Alert: ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಗುಡ್‌ನ್ಯೂಸ್‌; ಪಶುಪಾಲನಾ ನಿಗಮದಿಂದ 5,250 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Job Alert: ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಬರೋಬ್ಬರಿ 5,250 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನ ಜೂನ್‌ 2.

VISTARANEWS.COM


on

Job Alert
Koo

ಬೆಂಗಳೂರು: ಒಂದೊಳ್ಳೆ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ (Bhartiya Pashupalan Nigam Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BPNL Recruitment 2024). ಬರೋಬ್ಬರಿ 5,250 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನ ಜೂನ್‌ 2 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕೃಷಿ ನಿರ್ವಹಣಾ ಅಧಿಕಾರಿ (Farming Management Officer) – 250, ಕೃಷಿ ಅಭಿವೃದ್ಧಿ ಅಧಿಕಾರಿ (Farming Development Officer) – 1,250 ಮತ್ತು ಕೃಷಿ ಸ್ಫೂರ್ತಿ (Farming Inspiration) – 3,750 ಹುದ್ದೆಗಳು ಖಾಲಿ ಇವೆ. ಅಂಗೀಕೃತ ವಿಶ್ವ ವಿದ್ಯನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಕೃಷಿ ನಿರ್ವಹಣಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಕೃಷಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ: ಯಾವುದೇ ವಿಷಯದಲ್ಲಿ ದ್ವಿತೀಯ ಪಿಯುಸಿ ತೇರ್ಗಡೆ. ಇನ್ನು ಕೃಷಿ ಸ್ಫೂರ್ತಿ ಹುದ್ದೆಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ

ಕೃಷಿ ನಿರ್ವಹಣಾ ಅಧಿಕಾರಿ – 25-45 ವರ್ಷ, ಕೃಷಿ ಅಭಿವೃದ್ಧಿ ಅಧಿಕಾರಿ – 21-40 ವರ್ಷ ಮತ್ತು ಕೃಷಿ ಸ್ಫೂರ್ತಿ – 18-40 ವರ್ಷ ವಯೋಮಿತಿಯವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವರ್ಗಕ್ಕೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ವರ್ಗಕ್ಕೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕದಲ್ಲಿ ವ್ಯತ್ಯಾಸವಿದೆ. ಕೃಷಿ ನಿರ್ವಹಣಾ ಅಧಿಕಾರಿ – 944 ರೂ., ಕೃಷಿ ಅಭಿವೃದ್ಧಿ ಅಧಿಕಾರಿ – 826 ರೂ. ಮತ್ತು ಕೃಷಿ ಸ್ಫೂರ್ತಿ – 708 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಎಲ್ಲ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಒಂದೇ ತೆರನಾಗಿದ್ದು, ಆನ್‌ಲೈನ್‌ ಮೂಲಕ ಪಾವತಿಸಬೇಕು. ಆನ್‌ಲೈನ್‌ ಪರೀಕ್ಷೆ, ಡಾಕ್ಯುಮೆಂಟ್‌ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಮಾಸಿಕ ವೇತನ

ಕೃಷಿ ನಿರ್ವಹಣಾ ಅಧಿಕಾರಿ – 50,000 ರೂ., ಕೃಷಿ ಅಭಿವೃದ್ಧಿ ಅಧಿಕಾರಿ – 40,000 ರೂ. ಮತ್ತು ಕೃಷಿ ಸ್ಫೂರ್ತಿ – 25,000 ರೂ. ಮಾಸಿಕ ವೇತನ ಲಭ್ಯ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಅಗತ್ಯ ಮಾಹಿತಿಗಳನ್ನು ತುಂಬಿ.
  • ಅಗತ್ಯವಾದ ಡಾಕ್ಯುಮೆಂಟ್‌, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಎಲ್ಲವೂ ಸರಿ ಇದೆ ಎಂದು ಖಚಿತಪಡಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌; ರೈಲ್ವೆ ಇಲಾಖೆಯಲ್ಲಿದೆ 1,202 ಹುದ್ದೆ: ಐಟಿಐ ಪಾಸಾದವರೂ ಅಪ್ಲೈ ಮಾಡಿ

Continue Reading

ಕರ್ನಾಟಕ

LinkedIn: ಉದ್ಯೋಗ ಹುಡುಕಾಟದಲ್ಲಿರುವ ಪದವೀಧರರಿಗೆ ಲಿಂಕ್ಡ್‌ಇನ್‌ ಸಲಹೆಗಳು ಪ್ರಕಟ; ಏನೇನಿವೆ ತಪ್ಪದೇ ಓದಿ

LinkedIn: ವಿಶ್ವದ ಅತಿದೊಡ್ಡ ಪ್ರೊಫೆಷನಲ್ ನೆಟ್‌ವರ್ಕ್ ಆಗಿರುವ ಲಿಂಕ್ಡ್‌ಇನ್ ಇಂದು ಉದ್ಯೋಗ ಹುಡುಕಾಟದಲ್ಲಿರುವ ಇತ್ತೀಚಿನ ಪದವೀಧರರಿಗಾಗಿ ಭಾರತದಲ್ಲಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಹುದ್ದೆಗಳು, ಕೈಗಾರಿಕೆಗಳು, ಕೆಲಸಗಳು ಮತ್ತು ಕೌಶಲ್ಯಗಳ ಕುರಿತು ಹೊಸ ಮಾಹಿತಿಯನ್ನು ಬಹಿರಂಗಪಡಿಸಿದೆ. ಪ್ರಸ್ತುತ ಸಂದರ್ಭದಲ್ಲಿ ಆರಂಭಿಕ ಹಂತದ ಹುದ್ದೆಗಳಿಗೆ ಡಿಸೈನ್ (ವಿನ್ಯಾಸ), ಅನಾಲಿಟಿಕ್ಸ್ (ವಿಶ್ಲೇಷಣೆ) ಮತ್ತು ಪ್ರೋಗ್ರಾಮಿಂಗ್‌ಗಳು ಅತ್ಯುನ್ನತ ಕೌಶಲ್ಯಗಳು ಎಂದು ಲಿಂಕ್ಡ್‌ಇನ್ ತಿಳಿಸಿದೆ.

VISTARANEWS.COM


on

LinkedIns Tips for Graduates in the Job Search
ಸಾಂದರ್ಭಿಕ ಚಿತ್ರ.
Koo

ಬೆಂಗಳೂರು: ವಿಶ್ವದ ಅತಿದೊಡ್ಡ ಪ್ರೊಫೆಷನಲ್ ನೆಟ್‌ವರ್ಕ್ ಆಗಿರುವ ಲಿಂಕ್ಡ್‌ಇನ್ (LinkedIn) ಇಂದು ಉದ್ಯೋಗ ಹುಡುಕಾಟದಲ್ಲಿರುವ ಇತ್ತೀಚಿನ ಪದವೀಧರರಿಗಾಗಿ ಭಾರತದಲ್ಲಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಹುದ್ದೆಗಳು, ಕೈಗಾರಿಕೆಗಳು, ಕೆಲಸಗಳು ಮತ್ತು ಕೌಶಲ್ಯಗಳ ಕುರಿತು ಹೊಸ ಮಾಹಿತಿಯನ್ನು ಬಹಿರಂಗಪಡಿಸಿದೆ. ಪ್ರಸ್ತುತ ಸಂದರ್ಭದಲ್ಲಿ ಆರಂಭಿಕ ಹಂತದ ಹುದ್ದೆಗಳಿಗೆ ಡಿಸೈನ್ (ವಿನ್ಯಾಸ), ಅನಾಲಿಟಿಕ್ಸ್ (ವಿಶ್ಲೇಷಣೆ) ಮತ್ತು ಪ್ರೋಗ್ರಾಮಿಂಗ್‌ಗಳು ಅತ್ಯುನ್ನತ ಕೌಶಲ್ಯಗಳು ಎಂದು ಲಿಂಕ್ಡ್‌ಇನ್ ತಿಳಿಸಿದೆ.

2024ರಲ್ಲಿ ಕಂಪನಿಗಳು ಹೊಂದಿಕೊಳ್ಳುವ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವುದನ್ನು ಮುಂದುವರೆಸುತ್ತಿವೆ. ಹೆಚ್ಚು ಹೊಂದಿಕೊಳ್ಳುವ ಕೆಲಸದ ವ್ಯವಸ್ಥೆಗಳ ಕಡೆಗೆ ಗಮನ ಕೊಡುವ ಟ್ರೆಂಡ್ ಈಗ ನಡೆಯುತ್ತಿದೆ. ಆನ್-ಸೈಟ್ ಹುದ್ದೆಗಳು 15% ರಷ್ಟು ಕಡಿಮೆಯಾಗುತ್ತಿವೆ ಮತ್ತು ವರ್ಷದಿಂದ ವರ್ಷಕ್ಕೆ ಆರಂಭಿಕ ಹಂತದ ಹುದ್ದೆಗಳಿಗೆ 52% ರಷ್ಟು ಹೈಬ್ರಿಡ್ ಸ್ಥಾನಗಳು ಹೆಚ್ಚಾಗುತ್ತಿವೆ. ಈ ಬದಲಾವಣೆಯು ಹೊಸ ಪದವೀಧರರಿಗೆ ಆಯ್ಕೆ ಮಾಡಲು ಮತ್ತು ವೃತ್ತಿ ಜೀವನ ಮುಂದುವರಿಸಲು ವಿಸ್ತಾರವಾದ ಕೆಲಸದ ಅವಕಾಶಗಳನ್ನು ಒದಗಿಸುತ್ತದೆ.

ಇದನ್ನೂ ಓದಿ: Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಹೀಗೆ ಲಿಂಕ್‌ ಮಾಡಿ

ಲಿಂಕ್ಡ್‌ಇನ್‌ನ ಕರಿಯರ್ ಸ್ಟಾರ್ಟರ್ 2024 ವರದಿಯ ಪ್ರಕಾರ, ಯುಟಿಲಿಟೀಸ್ ಕ್ಷೇತ್ರ ಬಹಳ ವೇಗವಾಗಿ ಬೆಳೆಯುತ್ತಿರುವ ಉದ್ಯಮವಾಗಿದ್ದು, ಬ್ಯಾಚುಲರ್ ಡಿಗ್ರಿ ಅಥವಾ ಪದವಿ ಹೊಂದಿರುವ ಯುವ ವೃತ್ತಿಪರರು ಆಯ್ಕೆಗೆ ಪರಿಗಣಿಸಬಹುದಾಗಿದೆ. ತೈಲ, ಅನಿಲ ಮತ್ತು ಗಣಿಗಾರಿಕೆ, ರಿಯಲ್ ಎಸ್ಟೇಟ್, ಸಲಕರಣೆ ಬಾಡಿಗೆ ಸೇವೆಗಳು ಮತ್ತು ಗ್ರಾಹಕ ಸೇವಾ ಕ್ಷೇತ್ರಗಳು ಹೊಸ ಪದವೀಧರರನ್ನು ಕೆಲಸಕ್ಕೆ ನೇಮಿಸಿಕೊಳ್ಳುವ ಇನ್ನಿತರ ಉನ್ನತ ಉದ್ಯಮಗಳಾಗಿವೆ. ಜತೆಗೆ ಬ್ಯಾಚುಲರ್ ಡಿಗ್ರಿ ಅಥವಾ ಪದವಿ ಹೊಂದಿಲ್ಲದವರು ಶಿಕ್ಷಣ, ಮಾಹಿತಿ ಹಾಗೂ ತಂತ್ರಜ್ಞಾನ ಮತ್ತು ಮಾಧ್ಯಮ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶ ಪಡೆಯಬಹುದಾಗಿದೆ ಎಂದು ತಿಳಿಸಿದೆ.

ವಿಭಿನ್ನ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರುವವರಿಗೆ ಉನ್ನತ ಉದ್ಯೋಗ

ಲಿಂಕ್ಡ್‌ಇನ್‌ನ ಮಾಹಿತಿಯು ವಿಭಿನ್ನ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರುವ ವೃತ್ತಿಪರರಿಗೆ ವಿವಿಧ ಶ್ರೇಣಿಯ ಉನ್ನತ ಉದ್ಯೋಗಗಳ ವಿವರಗಳನ್ನು ತಿಳಿಸುತ್ತದೆ. ಪದವೀಧರರು ಸಾಫ್ಟ್‌ವೇರ್ ಎಂಜಿನಿಯರ್, ಸಿಸ್ಟಮ್ ಎಂಜಿನಿಯರ್ ಮತ್ತು ಪ್ರೋಗ್ರಾಮಿಂಗ್ ಅನಾಲಿಸ್ಟ್ ನಂತಹ ಹುದ್ದೆಗಳಿಗೆ ಹುಡುಕಾಟ ನಡೆಸಬಹುದು. ಸಾಫ್ಟ್‌ವೇರ್ ಎಂಜಿನಿಯರ್ ಮತ್ತು ಡೇಟಾ ಅನಾಲಿಸ್ಟ್ ಹುದ್ದೆಗಳಿಗೆ ಹೆಚ್ಚಿನ ಸಂಖ್ಯೆಯ ಪದವೀಧರರನ್ನು ನೇಮಿಸಿಕೊಳ್ಳಲಾಗುತ್ತಿದೆ. ಪದವಿ ಇಲ್ಲದವರು ಕೂಡ ಸಾಫ್ಟ್‌ವೇರ್ ಎಂಜಿನಿಯರ್, ಸೆಕ್ರೆಟರಿ ಮತ್ತು ಡಿಸೈನ್ ಎಂಜಿನಿಯರ್‌ನಂತಹ ಹುದ್ದೆಗಳಲ್ಲಿ ಕೆಲಸ ಮಾಡಬಹುದು.

ಶೈಕ್ಷಣಿಕ ಹಿನ್ನೆಲೆ ಹೊರತಾಗಿಯೂ ಅನೇಕ ಕೆಲಸಗಳು

ಶೈಕ್ಷಣಿಕ ಹಿನ್ನೆಲೆ ಹೊರತಾಗಿಯೂ ಅನೇಕ ಕೆಲಸಗಳು ವೇಗದ ಬೆಳವಣಿಗೆ ಹೊಂದುವ ಅವಕಾಶ ನೀಡುತ್ತವೆ. ಸಮುದಾಯ ಮತ್ತು ಸಾಮಾಜಿಕ ಸೇವೆಗಳು, ಕಾನೂನು, ಮಾರ್ಕೆಟಿಂಗ್, ಮಾಧ್ಯಮ ಮತ್ತು ಸಂವಹನದಂತಹ ಕ್ಷೇತ್ರಗಳಲ್ಲಿ ಪದವೀಧರರಿಗೆ ಸಾಕಷ್ಟು ಅವಕಾಶಗಳು ಲಭ್ಯವಿದೆ. ಪದವಿ ಇಲ್ಲದವರು ಶಿಕ್ಷಣ, ಮಾನವ ಸಂಪನ್ಮೂಲ, ಮಾರ್ಕೆಟಿಂಗ್ ಹಾಗೂ ಮಾಧ್ಯಮ ಮತ್ತು ಸಂವಹನದಾದ್ಯಂತ ಸಾಕಷ್ಟು ಉದ್ಯೋಗಾವಕಾಶಗಳನ್ನು ಪಡೆಯುತ್ತಾರೆ.

ಇದನ್ನೂ ಓದಿ: TOP 5 Movies: ಒಟಿಟಿಯಲ್ಲಿ ನೋಡಲೇಬೇಕಾದ ಟಾಪ್‌ 5 ಬಿಗ್‌ ಬಜೆಟ್‌ ಸಿನಿಮಾಗಳು!

ಈ ಕುರಿತು ಲಿಂಕ್ಡ್‌ಇನ್ ಕರಿಯರ್ ಎಕ್ಸ್‌ಪರ್ಟ್ ಆಂಡ್ ಇಂಡಿಯಾ ಸೀನಿಯರ್ ಮ್ಯಾನೇಜಿಂಗ್ ಎಡಿಟರ್ ನಿರಾಜಿತಾ ಬ್ಯಾನರ್ಜಿ ಮಾತನಾಡಿ, “ಉದ್ಯೋಗ ಮಾರುಕಟ್ಟೆ ಸ್ವಲ್ಪ ಬಿಗುವಾಗಿದ್ದಾಗ ಆರಂಭಿಕ ಹಂತದಲ್ಲಿ ಉದ್ಯೋಗ ದೊರೆಯುವುದು ಕಷ್ಟವಾಗುತ್ತದೆ. ಉದ್ಯಮದ ಟ್ರೆಂಡ್‌ಗಳು ಮತ್ತು ಬೇಡಿಕೆಯ ಉದ್ಯೋಗಗಳ ಕುರಿತು ಅಪ್‌ಡೇಟ್ ಆಗಿರುವುದರಿಂದ ಮತ್ತು ಆರಂಭದಲ್ಲಿಯೇ ಸಿಗುವ ಹುದ್ದೆಗಳಲ್ಲಿ ಮುನ್ನಡೆಯುವುದರಿಂದ ಮುಂದೆ ಆಯ್ಕೆಗಳು ದೊಡ್ಡದಾಗುತ್ತಾ ಹೋಗುತ್ತದೆ. ಇಂದು ಅನೇಕ ಕೌಶಲ್ಯಗಳನ್ನು ಬೇರೆ ಬೇರೆ ಕೈಗಾರಿಕೆಗಳಲ್ಲಿ ಬಳಸಬಹುದಾಗಿದೆ, ಮತ್ತು ಎಐ ಬಳಕೆ ಹೆಚ್ಚುತ್ತಿರುವುದರಿಂದ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚು ಹೆಚ್ಚು ಟೆಕ್-ಸಂಬಂಧಿತ ಹುದ್ದೆಗಳು ಸೃಷ್ಟಿಯಾಗುತ್ತಿವೆ.

ಈ ನೇಮಕಾತಿ ಟ್ರೆಂಡ್‌ಗಳು ಇಂಧನ ವಲಯದಲ್ಲಿರುವಂತಹ ವಿಶಾಲವಾದ ಆರ್ಥಿಕ ಮಾದರಿಗಳನ್ನು ಪ್ರತಿಬಿಂಬಿಸುತ್ತವೆ. ವೈವಿಧ್ಯಮಯ ಶೈಕ್ಷಣಿಕ ಹಿನ್ನೆಲೆ ಹೊಂದಿರುವ ವೃತ್ತಿಪರರನ್ನು ಕಂಪನಿಗಳು ಹುಡುಕಲು ತೊಡಗಿವೆ. ತಮ್ಮ ದಿಗಂತವನ್ನು ವಿಸ್ತರಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳು ತಮ್ಮ ಕೌಶಲ್ಯಗಳನ್ನುಮತ್ತು ವೃತ್ತಿಪರರ ಜತೆಗಿನ ನೆಟ್‌ವರ್ಕಿಂಗ್ ಅನ್ನು ಬಲಪಡಿಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

ಉದ್ಯೋಗ ಹುಡುಕಾಟವನ್ನು ಪ್ರಾರಂಭಿಸುವವರಿಗೆ ಲಿಂಕ್ಡ್‌ಇನ್‌ನ ಸಲಹೆಗಳು

ನೇಮಕಾತಿದಾರರ ಗಮನ ಸೆಳೆಯಲು, ಹೆಚ್ಚಿಸಲು ನಿಮ್ಮ ಲಿಂಕ್ಡ್‌ಇನ್ ಪ್ರೊಫೈಲ್‌ನಲ್ಲಿ ನಿಮ್ಮ ಕೌಶಲ್ಯಗಳನ್ನು ಗಮನ ಸೆಳೆಯುವಂತೆ ನಮೂದಿಸಿ. ಲಿಂಕ್ಡ್‌ಇನ್ ನೀವು ತಿಳಿಸಿದ ಕೌಶಲ್ಯಗಳ ಆಧಾರದ ಮೇಲೆ ನಿಮಗೆ ಈ ಮೊದಲು ತಿಳಿದಿರದ, ಆದರೆ ನಿಮಗೆ ಹೊಂದುವ ಉದ್ಯೋಗಾವಕಾಶಗಳನ್ನು ತಿಳಿಸುತ್ತದೆ.

ಲಿಂಕ್ಡ್‌ಇನ್‌ನ ಓಪನ್ ಟು ವರ್ಕ್ ಫೀಚರ್ ಮೂಲಕ ನೀವು ಹೊಸ ಉದ್ಯೋಗದಲ್ಲಿ ಆಸಕ್ತಿಯನ್ನು ಹೊಂದಿದ್ದೀರಿ ಎಂಬುದನ್ನು ತಿಳಿಸಿ. ಜತಗೆ ಈ ಕಾಲದ ಟ್ರೆಂಡ್ ಅಥವಾ ವಿಚಾರಗಳಿಗೆ ತಕ್ಕಂತೆ ನಿಮ್ಮ ಸ್ವಂತ ವಿಚಾರಗಳನ್ನು ಪೋಸ್ಟ್ ಮಾಡುವ ಮೂಲಕ ಮತ್ತು ಸಂಭಾವ್ಯ ಉದ್ಯೋಗದಾತರಿಗೆ ಸಂಬಂಧಿಸಿದ ವಿಷಯಗಳ ಕುರಿತು ಅರ್ಥಪೂರ್ಣವಾಗಿ ಸಂವಹನ ನಡೆಸುವ ಮೂಲಕ ಗಮನ ಸೆಳೆಯಬಹುದಾಗಿದೆ. ನಿಮ್ಮ ಭವಿಷ್ಯದ ಉದ್ಯೋಗದಾತರು ನಿಮ್ಮಿಂದ ಕೇವಲ ಒಂದು ಕಾಮೆಂಟ್ ದೂರದಲ್ಲಿರಬಹುದು ಎಂಬುದು ನೆನಪಲ್ಲಿರಲಿ.

ಇದನ್ನೂ ಓದಿ: Gold Rate Today: ಇಂದು ಚಿನ್ನದ ಬೆಲೆಯಲ್ಲಿ ತುಸು ಏರಿಕೆ; ಖರೀದಿಗೆ ಮುನ್ನ ದರ ಗಮನಿಸಿ

ಔಟ್ ಆಫ್ ದಿ ಬಾಕ್ಸ್ ಯೋಚಿಸಿ. ಅಂದರೆ ವಿಭಿನ್ನವಾಗಿ ಯೋಚಿಸಿ. ಎಲ್ಲಾ ಕಡೆ ಎಐ ಆವರಿಸಿಕೊಳ್ಳುತ್ತಿರುವ ಈ ಸಮಯದಲ್ಲಿ ಪ್ರೋಗ್ರಾಮಿಂಗ್ ಕೌಶಲ್ಯಗಳನ್ನು ಹೊಂದಿರುವವರನ್ನು ತಂತ್ರಜ್ಞಾನ ಕ್ಷೇತ್ರಕ್ಕೆ ಹೊರತಾದ ಬೇರೆ ಅಭಿವೃದ್ಧಿ ಹೊಂದುತ್ತಿರುವ ಕೈಗಾರಿಕೆಗಳು ನೇಮಕಮಾಡಿಕೊಳ್ಳುತ್ತಿವೆ. ನಿಮ್ಮ ಮುಂದಿನ ಕೆಲಸ ಅಥವಾ ಹುದ್ದೆಗಾಗಿ ನೀವು ಹುಡುಕಾಟ ನಡೆಸುತ್ತಿರುವಾಗ ಈ ರೀತಿಯ ವೃತ್ತಿ ಪರಿವರ್ತನೆಯ (ಕರಿಯರ್ ಟ್ರಾನ್ಸಿಷನ್) ಟ್ರೆಂಡ್‌ಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಿ. ಏಕೆಂದರೆ ಅದರಿಂದ ನಿಮ್ಮ ಮುಂದೆ ಅವಕಾಶಗಳ ಸಂಖ್ಯೆ ಹೆಚ್ಚುತ್ತದೆ. ನಿಮ್ಮ ಕೌಶಲ್ಯಗಳಿಗೆ ಸಂಬಂಧಿಸಿದ ಲಿಂಕ್ಡ್‌ಇನ್ ಗುಂಪುಗಳಲ್ಲಿ ತೊಡಗಿಸಿಕೊಳ್ಳಿ. ಇದು ನೆಟ್‌ವರ್ಕ್‌ ಸಾಧಿಸಲು ಉತ್ತಮ ಮಾರ್ಗವಾಗಿದೆ ಮತ್ತು ಲಭ್ಯವಿರುವ ವಿಶಾಲವಾದ ಅವಕಾಶಗಳ ಕುರಿತು ಇನ್ನಷ್ಟು ತಿಳಿದುಕೊಳ್ಳಲು ಅನುವು ಮಾಡಿ ಕೊಡಲಿದೆ.

ಇದನ್ನೂ ಓದಿ: World Digestive Health Day: ಜೀರ್ಣಕ್ರಿಯೆಯಲ್ಲಿ ತೊಡಕು ಅನಾರೋಗ್ಯಕ್ಕೆ ದಾರಿ; ಈ ಸಲಹೆ ಪಾಲಿಸಿ

ಪದವೀಧರರು ತಮ್ಮ ಕೌಶಲ್ಯಗಳನ್ನು ಸುಧಾರಿಸಲು ಸಹಾಯ ಮಾಡಲು, ಲಿಂಕ್ಡ್‌ಇನ್ 30 ಜೂನ್ 2024ರವರೆಗೆ ಉಚಿತ ಲಿಂಕ್ಡ್‌ಇನ್ ಕಲಿಕಾ ಕೋರ್ಸ್‌ಗಳನ್ನು ಬಿಡುಗಡೆ ಮಾಡಿದೆ, ಆ ಕೋರ್ಸುಗಳು ಹೀಗಿವೆ.

● ಕಾಲೇಜು ಪದವೀಧರರಿಗೆ ಉದ್ಯೋಗ ಹುಡುಕಾಟ.
● ಇಂಟರ್ನ್‌ಶಿಪ್ ಅನ್ನು ಉದ್ಯೋಗವನ್ನಾಗಿ ಪರಿವರ್ತಿಸಿಕೊಳ್ಳುವುದು.
● ವೃತ್ತಿ ಆರಂಭಿಸುವವರಿಗೆ ಪ್ರೊಫೆಷನಲ್ ನೆಟ್‌ವರ್ಕಿಂಗ್.
● 30-ನಿಮಿಷದ ರೆಸ್ಯೂಮ್ ರಿಫ್ರೆಶ್.
● ಸಾಮಾನ್ಯ ಸಂದರ್ಶನ ಪ್ರಶ್ನೆಗಳಿಗೆ ಸಿದ್ಧರಾಗಿರುವುದು.
● ನಿಮ್ಮ ಕಾಂಪನ್ಸೇಷನ್ ಪ್ಯಾಕೇಜ್ ಮಾತುಕತೆ ನಡೆಸುವುದು.

Continue Reading
Advertisement
Anant Ambani Radhika Merchant Pre Wedding
ಫ್ಯಾಷನ್7 mins ago

Anant Ambani Radhika Merchant Pre Wedding: ಅಂಬಾನಿ ಫ್ಯಾಮಿಲಿಯ ಕ್ರ್ಯೂಸ್ ಟೂರ್‌ನಲ್ಲಿ ಸ್ಟಾರ್‌ಗಳ ಮಕ್ಕಳ ಲುಕ್‌ ಹೇಗಿದೆ ನೋಡಿ!

Vijaypur Lok Sabha Constituency
ವಿಜಯಪುರ13 mins ago

Vijaypur Lok Sabha Constituency: ವಿಜಯಪುರದಲ್ಲಿ ಅಧಿಕಾರದ ‘ಗೋಲ ಗುಮ್ಮಟ’ ಯಾರಿಗೆ?

IND vs PAK
ಕ್ರಿಕೆಟ್24 mins ago

IND vs PAK: ಸ್ನೈಪರ್ ಗನ್​ ಕಣ್ಗಾವಲಿನಲ್ಲಿ ಭಾರತ-ಪಾಕ್ ಟಿ20​ ವಿಶ್ವಕಪ್​ ಪಂದ್ಯ

Lok Sabha Election Result 2024
ದೇಶ35 mins ago

Lok Sabha Election Result 2024: ನಾಳೆ ಲೋಕಸಭೆ ಚುನಾವಣೆ ಫಲಿತಾಂಶ; ಯಾರಿಗೆ ಅಧಿಕಾರ? ನಿಮ್ಮ ಅಭಿಪ್ರಾಯ ತಿಳಿಸಿ

Maldives
ವಿದೇಶ37 mins ago

Maldives: ಇಸ್ರೇಲಿಗರ ಪ್ರವೇಶವನ್ನು ನಿಷೇಧಿಸಿದ ಮಾಲ್ಡೀವ್ಸ್‌; ಭಾರತದ ಬೀಚ್‌ಗೆ ತೆರಳಿ ಎಂದು ತಿರುಗೇಟು ನೀಡಿದ ಇಸ್ರೇಲ್‌

Cow including lineman dies of electric shock
ಉಡುಪಿ1 hour ago

Electric shock : ಪ್ರತ್ಯೇಕ ಕಡೆ‌ ಕರೆಂಟ್‌ ಶಾಕ್‌ಗೆ ಲೈನ್‌ಮ್ಯಾನ್‌ ಸೇರಿ ಹಸು ಬಲಿ

Rave Party
ಕರ್ನಾಟಕ1 hour ago

Rave Party: ರೇವ್ ಪಾರ್ಟಿ ಪ್ರಕರಣ; ವಿಚಾರಣೆಗೆ ಹಾಜರಾದ ತೆಲುಗು ನಟಿ ಹೇಮಾ ಅರೆಸ್ಟ್‌

Saree Fashion
ಫ್ಯಾಷನ್1 hour ago

Saree Fashion: ರಫಲ್‌ ಡಿಸೈನ್‌ನಲ್ಲಿ ಬಂದಿದೆ ಜಾರ್ಜೆಟ್ ಲೆಹೆಂಗಾ ಸೀರೆ!

Hornbill bird sighting in Gangavathi
ಕರ್ನಾಟಕ1 hour ago

Hornbill Bird: ಗಂಗಾವತಿಯಲ್ಲಿ ‘ಹಾರ್ನ್‌ಬಿಲ್’ ಪಕ್ಷಿ ಪ್ರತ್ಯಕ್ಷ

Samsung Big TV Days Sale Exciting offer on big TVs
ದೇಶ1 hour ago

Samsung: ಸ್ಯಾಮ್‌ಸಂಗ್‌ನ ʼಬಿಗ್‌ ಟಿವಿ ಡೇಸ್‌ʼ ಸೇಲ್‌; ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌