KPSC Recruitment 2023: ಗಮನಿಸಿ… 230 ಕಮರ್ಷಿಯಲ್ ಟ್ಯಾಕ್ಸ್ ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಆಹ್ವಾನ! ಅಪ್ಲೈಗೆ ಸೆ.30 ಕೊನೆ ದಿನ - Vistara News

ಉದ್ಯೋಗ

KPSC Recruitment 2023: ಗಮನಿಸಿ… 230 ಕಮರ್ಷಿಯಲ್ ಟ್ಯಾಕ್ಸ್ ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಆಹ್ವಾನ! ಅಪ್ಲೈಗೆ ಸೆ.30 ಕೊನೆ ದಿನ

KPSC Recruitment 2023: ವಾಣಿಜ್ಯೆ ತೆರಿಗೆಗಳ ಇಲಾಖೆಯಲ್ಲಿ ಖಾಲಿ ಇರುವ 230 ಟ್ಯಾಕ್ಸ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು, ಕರ್ನಾಟಕ: ಕರ್ನಾಟಕ ಲೋಕ ಸೇವಾ ಆಯೋಗವು (KPSC Recruitment 2023) ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ (Commercial Taxes Department) ಖಾಲಿ ಇರುವ 230 ವಾಣಿಜ್ಯ ತೆರಿಗೆ ಪರಿವೀಕ್ಷಕರ (Commercial Tax Officer Recruitment) ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್ (Apply through Online) ಮೂಲಕವೇ 2023 ಸೆಪ್ಟೆಂಬರ್ 30ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸೆಪ್ಟೆಂಬರ್ 1ರಿಂದ ಆರಂಭವಾಗಲಿದೆ. ಸ್ಪರ್ಧಾತ್ಮಕ ಪರೀಕ್ಷೆಯು 2023 ನವೆಂಬರ್ 4 ಮತ್ತು 5ರಂದು ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಕೆಪಿಎಸ್‌ಸಿ ಜಾಲತಾಣಕ್ಕೆ ಭೇಟಿ ನೀಡಿ.

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ. ಮತ್ತು ಪ್ರವರ್ಗ 2 ಎ, 3 ಎ, 3 ಬಿಗೆ ಸೇರಿದ ಅಭ್ಯರ್ಥಿಗಳಿಗೆ 300 ರೂ., ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಆದರೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯ್ತಿ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಇರುವ ವಯೋಮಿತಿ

ಅರ್ಜಿ ಸಲ್ಲಿಸು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು, ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗಿ ನಿಗದಿ ವಯೋಮಿತಿಯನ್ನು ಹೊಂದಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳು ಕನಿಷ್ಠ 18 ಮತ್ತು ಗರಿಷ್ಠ 35 ವರ್ಷಗಳಿರಬೇಕು. ಇನ್ನು ಪ್ರವರ್ಗ 2 ಎ, 2ಬಿ, 3ಎ, 3ಬಿ ವರ್ಗದ ವಿದ್ಯಾರ್ಥಿಗಳಿಗೆ 38 ವರ್ಷ ಮೀರಿರಬಾರದು. ಅದೇ ರೀತಿ, ಪರಿಶಿಷ್ಟ ಜಾತಿ ಮತ್ತು ಪಂಗಡ, ಪ್ರವರ್ಗ 1 ಅಭ್ಯರ್ಥಿಗಳು 40 ವರ್ಷ ಮೀರುವಂತಿಲ್ಲ.

ಈ ಸುದ್ದಿಯನ್ನೂ ಓದಿ: Guest Lecturers Appointment : ಅತಿಥಿ ಉಪನ್ಯಾಸಕರ ನೇಮಕಕ್ಕೆ ಗೆಜೆಟ್‌ ಅಧಿಸೂಚನೆ; ಆ. 28ರಿಂದ ಅರ್ಜಿ ಆಹ್ವಾನ

ಅರ್ಹತೆಗಳೇನು?

ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಸೂಚಿಸಲಾದ ಅರ್ಹತೆಯನ್ನು ಹೊಂದಿರಬೇಕು. ಭಾರತದಲ್ಲಿ ಕಾನೂನುಬದ್ಧವಾಗಿ ರಚಿತವಾಗಿರುವ ವಿಶ್ವವಿದ್ಯಾಲಯದಲ್ಲಿ ಅಭ್ಯರ್ಥಿಗಳ ತಮ್ಮ ಪದವಿಯನ್ನು ಗಣಿತ ಅಥವಾ ಅರ್ಥಶಾಸ್ತ್ರದೊಂದಿಗೆ ಪಡೆದುಕೊಂಡಿರಬೇಕು. ಅಥವಾ ವಾಣಿಜ್ಯ ಪದವಿ ಅಥವಾ ಸರ್ಕಾರ ಘೋಷಿಸಿರುವ ತತ್ಸಮಾನ ಪದವಿಯನ್ನು ಪಡೆದುಕೊಂಡಿರಬೇಕು. 33,450 ರೂ.ನಿಂದ 62,600 ರೂ.ವರೆಗೂ ವೇತನ ಶ್ರೇಣಿ ಇರಲಿದೆ.

ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ಖಾಲಿ ಇರುವ 230 ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ.

ಉದ್ಯೋಗದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Highest Salary Paying Companies: ಎಂಜಿನಿಯರ್‌ಗಳಿಗೆ ಅತೀ ಹೆಚ್ಚು ಸಂಬಳ ಕೊಡುವ ಕಂಪನಿಗಳ ಪಟ್ಟಿ ಇಲ್ಲಿದೆ

ಗೂಗಲ್ ನಲ್ಲಿ ಅತ್ಯಧಿಕ ಪಾವತಿ ಮಾಡಲಾಗುತ್ತಿದ್ದು, ಇಲ್ಲಿನ ಎಂಜಿನಿಯರ್ ಗಳು ವಾರ್ಷಿಕವಾಗಿ 66 ಲಕ್ಷ ರೂ. ಸಂಬಳ ಪಡೆಯುತ್ತಿದ್ದಾರೆ. ಇದು ಅತ್ಯಂತ ಜನಪ್ರಿಯವಾದ ಕಂಪನಿಗಳಲ್ಲಿ ಅತ್ಯಧಿಕವಾಗಿದೆ. ವಿಶ್ವ
ಇತರ ಪ್ರಸಿದ್ಧ ಕಂಪನಿಗಳು ಭಾರತದಲ್ಲಿ ಎಂಜಿನಿಯರ್ ಗಳಿಗೆ ಎಷ್ಟು ಸಂಬಳ ಪಾವತಿ (Highest Salary Paying Companies) ಮಾಡುತ್ತಿದೆ ಎನ್ನುವ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Highest Paying Companies
Koo

ಗೂಗಲ್ (Google), ಅಮೆಜಾನ್ (amazon), ಮೈಕ್ರೋ ಸಾಫ್ಟ್ (microsoft) ಸೇರಿದಂತೆ ವಿಶ್ವ ಪ್ರಸಿದ್ಧ ಕಂಪನಿಗಳ ಸ್ಯಾಲರಿ ಪ್ಯಾಕೇಜ್ (Highest Salary Paying Companies) ಎಷ್ಟಿರಬಹುದು ಎನ್ನುವ ಕುತೂಹಲ ಎಲ್ಲರಿಗೂ ಇದೆ. ಈ ಕುರಿತು ಇದೀಗ ಎಕ್ಸ್ ನಲ್ಲಿ (x) ಮಾಹಿತಿ ವೈರಲ್ (viral) ಆಗಿದ್ದು, ವಿಶ್ವ ಪ್ರಸಿದ್ಧ ಕಂಪನಿಗಳ ಎಂಜಿನಿಯರ್ ಗಳು ವಾರ್ಷಿಕ ಸರಾಸರಿ 26 ಸಾವಿರ ರೂ.ನಿಂದ 66 ಲಕ್ಷ ರೂ. ವರೆಗೆ ಸಂಬಳ ಪಡೆಯುತ್ತಿದ್ದಾರೆ ಎಂಬುದು ತಿಳಿದು ಬಂದಿದೆ.

ಗೂಗಲ್ ನಲ್ಲಿ ಅತ್ಯಧಿಕ ಪಾವತಿ ಮಾಡಲಾಗುತ್ತಿದ್ದು, ಇಲ್ಲಿನ ಎಂಜಿನಿಯರ್ ಗಳು ವಾರ್ಷಿಕವಾಗಿ 66 ಲಕ್ಷ ರೂ. ಸಂಬಳ ಪಡೆಯುತ್ತಿದ್ದಾರೆ. ಇದು ಅತ್ಯಂತ ಜನಪ್ರಿಯವಾದ ಕಂಪನಿಗಳಲ್ಲಿ ಅತ್ಯಧಿಕವಾಗಿದೆ. ಬಳಿಕ ಗೊಜೆಕ್, ಮೈಕ್ರೋಸಾಫ್ಟ್, ಝೀಟಾ, ಅಡೋಬ್ ಮತ್ತು ಸೇಲ್ಸ್‌ಫೋರ್ಸ್‌ನಲ್ಲಿ ಎಂಜಿನಿಯರ್‌ ಹೆಚ್ಚಿನ ಸಂಬಳ ಪಡೆಯುತ್ತಿದ್ದಾರೆ. ಇದರಲ್ಲಿ ಕ್ರಮವಾಗಿ 59.7 ಲಕ್ಷ, 58.5 ಲಕ್ಷ, 58 ಲಕ್ಷ, 56.3 ಲಕ್ಷ, ಮತ್ತು 56.1 ಲಕ್ಷ ಸಂಬಳ ಪಡೆಯುವ ಎಂಜಿನಿಯರ್ ಗಳು ಇದ್ದಾರೆ.

ಬಳಿಕದ ಸ್ಥಾನದಲ್ಲಿ ವಿಎಂ ವೇರ್, ಶೇರ್ ಚಾಟ್, ಗೋಲ್ಡ್ ಮನ್, ಪೇ ಪಾಲ್, ಮಿಂತ್ರಾ, ವಾಲ್ ಮಾರ್ಟ್, ಸರ್ವಿಸ್ ನೌ, ಫ್ಲಿಪ್ ಕಾರ್ಟ್, ರಝೋರ್ ಪೇ, ಒರಾಕಲ್, ಅಮೆಜಾನ್ ಕೂಡ ಸೇರಿದೆ. ಇದರಲ್ಲಿ ಬಹುತೇಕ ಎಂಜಿನಿಯರ್‌ಗಳ ಸಂಬಳ 51.4 ಲಕ್ಷ ರೂ. ವರೆಗೆ ಇದೆ. ಟೆಕೀವ್ನ್, ಸಿಸ್ಕೊ, ಪೇ ಟಿಎಂ, ಕ್ವ್ಯಾಲ್ ಕಾಮ್, ಸ್ಯಾಪ್, ಓಯೋ ಕಂಪೆನಿಗಳ ಎಂಜಿನಯರ್ ಗಳಿಗೆ 5೦ ಲಕ್ಷ ರೂ.ವರೆಗೆ ವಾರ್ಷಿಕ ಪಾವತಿ ಮಾಡಲಾಗುತ್ತದೆ.


ಉಳಿದಂತೆ ಐಬಿಎಂ, ಸ್ಯಾಮ್ ಸಂಗ್, ಅಕ್ವೆವೆಂಚರ್, ಕಾಗ್ನಿಜೆಂಟ್, ಇನ್ಫೋಸಿಸ್, ಕ್ಯಾಂಪ್ಗೆಮಿನಿ, ಟಿಸಿಎಸ್ ಕಂಪೆನಿಗಳಲ್ಲಿ ಎಂಜಿನಿಯರ್ ಗಳಿಗೆ ಗರಿಷ್ಠ ವಾರ್ಷಿಕ ಪಾವತಿ 30 ಲಕ್ಷ ರೂ.ವರೆಗೆ ನೀಡಲಾಗುತ್ತದೆ.

ಇದನ್ನೂ ಓದಿ: LinkedIn: ಉದ್ಯೋಗ ಹುಡುಕಾಟದಲ್ಲಿರುವ ಪದವೀಧರರಿಗೆ ಲಿಂಕ್ಡ್‌ಇನ್‌ ಸಲಹೆಗಳು ಪ್ರಕಟ; ಏನೇನಿವೆ ತಪ್ಪದೇ ಓದಿ

ಹೆಚ್ಚು ಮತ್ತು ಕಡಿಮೆ ಪಾವತಿಸುವ ಕಂಪನಿಗಳ ಮಾಹಿತಿ ಸಂಗ್ರಹಕ್ಕಾಗಿ ಒಟ್ಟು 25,000 ಮಂದಿಯ ಸಂಬಳವನ್ನು ವಿಶ್ಲೇಷಿಸಲಾಗಿದೆ ಎಂದು ಎಕ್ಸ್ ಬಳಕೆದಾರರು ಹೇಳಿಕೊಂಡಿದ್ದಾರೆ. ಭಾರತದಲ್ಲಿ ಸಂಬಳ ಪಾವತಿಯ ಬಗ್ಗೆ ಪಾರದರ್ಶಕತೆ ಬಹಳ ಮುಖ್ಯ ಎಂದಿರುವ ಅವರು ಇದರಲ್ಲಿ ಮೂಲ ವೇತನದಲ್ಲಿ ಕೊಂಚ ವ್ಯತ್ಯಾಸವಿರಬಹುದು ಎಂದು ತಿಳಿಸಿದ್ದಾರೆ.

Continue Reading

ಉದ್ಯೋಗ

Job Alert: ಗಮನಿಸಿ; 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ: ಇಲ್ಲಿದೆ ಹೊಸ ವೇಳಾಪಟ್ಟಿ

Job Alert: ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಜೂನ್‌ 30. ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ಲೋಕಸೇವಾ ಆಯೋಗ (Karnataka Public Service Commission) ಖಾಲಿ ಇರುವ ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ (Motor Vehicle Inspector)​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (KPSC Recruitment 2024). ಈ ಹಿಂದೆ ಅರ್ಜಿ ಸಲ್ಲಿಕೆಗೆ ಮೇ 21 ಕೊನೆಯ ದಿನಾಂಕ ಎಂದು ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ದಿನಾಂಕವನ್ನು ವಿಸ್ತರಿಸಿ ಕರ್ನಾಟಕ ಲೋಕಸೇವಾ ಆಯೋಗ ಪ್ರಕಟಣೆ ಹೊರಡಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜೂನ್‌ 30 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಳಿಕೆ ಮೂಲ ವೃಂದದಲ್ಲಿ 70 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 6 ಹುದ್ದೆಗಳಿವೆ. ಕೆಪಿಎಸ್‌ಸಿಯ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಅಂಗೀಕೃತ ಮಂಡಳಿ, ವಿಶ್ವವಿದ್ಯಾನಿಲಯದಿಂದ ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಆಟೋ ಮೊಬೈಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್‌ ಪಡೆದುಕೊಂಡಿರಬೇಕು. ಜತೆಗೆ ಲೈಸನ್ಸ್‌ ಹೊಂದಿರಬೇಕು.

ವಯೋಮಿತಿ ಮತ್ತು ಅರ್ಜಿ ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1ರ ಅಭ್ಯರ್ಥಿಗಳಿಗೆ 5 ವರ್ಷ, ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 3 ವರ್ಷ ಮತ್ತು ಪಿಡಬ್ಲ್ಯುಡಿ / ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ. ಎಸ್‌ಸಿ / ಎಸ್‌ಟಿ / ಕ್ಯಾಟಗರಿ-1/ ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಮಾಜಿ ಯೋಧರು ಅರ್ಜಿ ಶುಲ್ಕವಾಗಿ 50 ರೂ., ಕ್ಯಾಟಗರಿ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು 300 ರೂ., ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 33,450 ರೂ. – 62,600 ರೂ. ಮಾಸಿಕ ವೇತನ ನೀಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌: 080-30574957 / 30574901ಕ್ಕೆ ಕರೆ ಮಾಡಿ.

ದಿನಾಂಕ ವಿಸ್ತರಣೆಯ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನಿಮ್ಮ ಮೊಬೈಲ್‌ ನಂಬರ್‌ ಮತ್ತು ಇಮೇಲ್‌ ಐಡಿ ನಮೂದಿಸಿ ಹೆಸರು ನೋಂದಾಯಿಸಿ.
  • ಹೊಸ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ / ರಿಕ್ವೆಸ್ಟ್‌ ನಂಬರ್‌ ತೆಗೆದಿಡಿ.

ಇದನ್ನೂ ಓದಿ: Job Alert: ಯುಪಿಎಸ್‌ಸಿಯಿಂದ 312 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Continue Reading

ಉದ್ಯೋಗ

Job Alert: ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಗುಡ್‌ನ್ಯೂಸ್‌; ಪಶುಪಾಲನಾ ನಿಗಮದಿಂದ 5,250 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Job Alert: ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಬರೋಬ್ಬರಿ 5,250 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನ ಜೂನ್‌ 2.

VISTARANEWS.COM


on

Job Alert
Koo

ಬೆಂಗಳೂರು: ಒಂದೊಳ್ಳೆ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ (Bhartiya Pashupalan Nigam Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BPNL Recruitment 2024). ಬರೋಬ್ಬರಿ 5,250 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನ ಜೂನ್‌ 2 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕೃಷಿ ನಿರ್ವಹಣಾ ಅಧಿಕಾರಿ (Farming Management Officer) – 250, ಕೃಷಿ ಅಭಿವೃದ್ಧಿ ಅಧಿಕಾರಿ (Farming Development Officer) – 1,250 ಮತ್ತು ಕೃಷಿ ಸ್ಫೂರ್ತಿ (Farming Inspiration) – 3,750 ಹುದ್ದೆಗಳು ಖಾಲಿ ಇವೆ. ಅಂಗೀಕೃತ ವಿಶ್ವ ವಿದ್ಯನಿಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದವರು ಕೃಷಿ ನಿರ್ವಹಣಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಕೃಷಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾದ ವಿದ್ಯಾರ್ಹತೆ: ಯಾವುದೇ ವಿಷಯದಲ್ಲಿ ದ್ವಿತೀಯ ಪಿಯುಸಿ ತೇರ್ಗಡೆ. ಇನ್ನು ಕೃಷಿ ಸ್ಫೂರ್ತಿ ಹುದ್ದೆಗೆ ಅರ್ಜಿ ಸಲ್ಲಿಸುವವರು 10ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ

ಕೃಷಿ ನಿರ್ವಹಣಾ ಅಧಿಕಾರಿ – 25-45 ವರ್ಷ, ಕೃಷಿ ಅಭಿವೃದ್ಧಿ ಅಧಿಕಾರಿ – 21-40 ವರ್ಷ ಮತ್ತು ಕೃಷಿ ಸ್ಫೂರ್ತಿ – 18-40 ವರ್ಷ ವಯೋಮಿತಿಯವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವರ್ಗಕ್ಕೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ವರ್ಗಕ್ಕೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕದಲ್ಲಿ ವ್ಯತ್ಯಾಸವಿದೆ. ಕೃಷಿ ನಿರ್ವಹಣಾ ಅಧಿಕಾರಿ – 944 ರೂ., ಕೃಷಿ ಅಭಿವೃದ್ಧಿ ಅಧಿಕಾರಿ – 826 ರೂ. ಮತ್ತು ಕೃಷಿ ಸ್ಫೂರ್ತಿ – 708 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಎಲ್ಲ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಒಂದೇ ತೆರನಾಗಿದ್ದು, ಆನ್‌ಲೈನ್‌ ಮೂಲಕ ಪಾವತಿಸಬೇಕು. ಆನ್‌ಲೈನ್‌ ಪರೀಕ್ಷೆ, ಡಾಕ್ಯುಮೆಂಟ್‌ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಮಾಸಿಕ ವೇತನ

ಕೃಷಿ ನಿರ್ವಹಣಾ ಅಧಿಕಾರಿ – 50,000 ರೂ., ಕೃಷಿ ಅಭಿವೃದ್ಧಿ ಅಧಿಕಾರಿ – 40,000 ರೂ. ಮತ್ತು ಕೃಷಿ ಸ್ಫೂರ್ತಿ – 25,000 ರೂ. ಮಾಸಿಕ ವೇತನ ಲಭ್ಯ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಅಗತ್ಯ ಮಾಹಿತಿಗಳನ್ನು ತುಂಬಿ.
  • ಅಗತ್ಯವಾದ ಡಾಕ್ಯುಮೆಂಟ್‌, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಎಲ್ಲವೂ ಸರಿ ಇದೆ ಎಂದು ಖಚಿತಪಡಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌; ರೈಲ್ವೆ ಇಲಾಖೆಯಲ್ಲಿದೆ 1,202 ಹುದ್ದೆ: ಐಟಿಐ ಪಾಸಾದವರೂ ಅಪ್ಲೈ ಮಾಡಿ

Continue Reading

ಕರ್ನಾಟಕ

LinkedIn: ಉದ್ಯೋಗ ಹುಡುಕಾಟದಲ್ಲಿರುವ ಪದವೀಧರರಿಗೆ ಲಿಂಕ್ಡ್‌ಇನ್‌ ಸಲಹೆಗಳು ಪ್ರಕಟ; ಏನೇನಿವೆ ತಪ್ಪದೇ ಓದಿ

LinkedIn: ವಿಶ್ವದ ಅತಿದೊಡ್ಡ ಪ್ರೊಫೆಷನಲ್ ನೆಟ್‌ವರ್ಕ್ ಆಗಿರುವ ಲಿಂಕ್ಡ್‌ಇನ್ ಇಂದು ಉದ್ಯೋಗ ಹುಡುಕಾಟದಲ್ಲಿರುವ ಇತ್ತೀಚಿನ ಪದವೀಧರರಿಗಾಗಿ ಭಾರತದಲ್ಲಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಹುದ್ದೆಗಳು, ಕೈಗಾರಿಕೆಗಳು, ಕೆಲಸಗಳು ಮತ್ತು ಕೌಶಲ್ಯಗಳ ಕುರಿತು ಹೊಸ ಮಾಹಿತಿಯನ್ನು ಬಹಿರಂಗಪಡಿಸಿದೆ. ಪ್ರಸ್ತುತ ಸಂದರ್ಭದಲ್ಲಿ ಆರಂಭಿಕ ಹಂತದ ಹುದ್ದೆಗಳಿಗೆ ಡಿಸೈನ್ (ವಿನ್ಯಾಸ), ಅನಾಲಿಟಿಕ್ಸ್ (ವಿಶ್ಲೇಷಣೆ) ಮತ್ತು ಪ್ರೋಗ್ರಾಮಿಂಗ್‌ಗಳು ಅತ್ಯುನ್ನತ ಕೌಶಲ್ಯಗಳು ಎಂದು ಲಿಂಕ್ಡ್‌ಇನ್ ತಿಳಿಸಿದೆ.

VISTARANEWS.COM


on

LinkedIns Tips for Graduates in the Job Search
ಸಾಂದರ್ಭಿಕ ಚಿತ್ರ.
Koo

ಬೆಂಗಳೂರು: ವಿಶ್ವದ ಅತಿದೊಡ್ಡ ಪ್ರೊಫೆಷನಲ್ ನೆಟ್‌ವರ್ಕ್ ಆಗಿರುವ ಲಿಂಕ್ಡ್‌ಇನ್ (LinkedIn) ಇಂದು ಉದ್ಯೋಗ ಹುಡುಕಾಟದಲ್ಲಿರುವ ಇತ್ತೀಚಿನ ಪದವೀಧರರಿಗಾಗಿ ಭಾರತದಲ್ಲಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಹುದ್ದೆಗಳು, ಕೈಗಾರಿಕೆಗಳು, ಕೆಲಸಗಳು ಮತ್ತು ಕೌಶಲ್ಯಗಳ ಕುರಿತು ಹೊಸ ಮಾಹಿತಿಯನ್ನು ಬಹಿರಂಗಪಡಿಸಿದೆ. ಪ್ರಸ್ತುತ ಸಂದರ್ಭದಲ್ಲಿ ಆರಂಭಿಕ ಹಂತದ ಹುದ್ದೆಗಳಿಗೆ ಡಿಸೈನ್ (ವಿನ್ಯಾಸ), ಅನಾಲಿಟಿಕ್ಸ್ (ವಿಶ್ಲೇಷಣೆ) ಮತ್ತು ಪ್ರೋಗ್ರಾಮಿಂಗ್‌ಗಳು ಅತ್ಯುನ್ನತ ಕೌಶಲ್ಯಗಳು ಎಂದು ಲಿಂಕ್ಡ್‌ಇನ್ ತಿಳಿಸಿದೆ.

2024ರಲ್ಲಿ ಕಂಪನಿಗಳು ಹೊಂದಿಕೊಳ್ಳುವ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವುದನ್ನು ಮುಂದುವರೆಸುತ್ತಿವೆ. ಹೆಚ್ಚು ಹೊಂದಿಕೊಳ್ಳುವ ಕೆಲಸದ ವ್ಯವಸ್ಥೆಗಳ ಕಡೆಗೆ ಗಮನ ಕೊಡುವ ಟ್ರೆಂಡ್ ಈಗ ನಡೆಯುತ್ತಿದೆ. ಆನ್-ಸೈಟ್ ಹುದ್ದೆಗಳು 15% ರಷ್ಟು ಕಡಿಮೆಯಾಗುತ್ತಿವೆ ಮತ್ತು ವರ್ಷದಿಂದ ವರ್ಷಕ್ಕೆ ಆರಂಭಿಕ ಹಂತದ ಹುದ್ದೆಗಳಿಗೆ 52% ರಷ್ಟು ಹೈಬ್ರಿಡ್ ಸ್ಥಾನಗಳು ಹೆಚ್ಚಾಗುತ್ತಿವೆ. ಈ ಬದಲಾವಣೆಯು ಹೊಸ ಪದವೀಧರರಿಗೆ ಆಯ್ಕೆ ಮಾಡಲು ಮತ್ತು ವೃತ್ತಿ ಜೀವನ ಮುಂದುವರಿಸಲು ವಿಸ್ತಾರವಾದ ಕೆಲಸದ ಅವಕಾಶಗಳನ್ನು ಒದಗಿಸುತ್ತದೆ.

ಇದನ್ನೂ ಓದಿ: Money Guide: ಮೇ 31ರೊಳಗೆ ಪ್ಯಾನ್‌-ಆಧಾರ್‌ ಲಿಂಕ್‌ ಆಗದಿದ್ದರೆ ಟಿಡಿಎಸ್ ದುಪ್ಪಟ್ಟು ಕಡಿತ; ಹೀಗೆ ಲಿಂಕ್‌ ಮಾಡಿ

ಲಿಂಕ್ಡ್‌ಇನ್‌ನ ಕರಿಯರ್ ಸ್ಟಾರ್ಟರ್ 2024 ವರದಿಯ ಪ್ರಕಾರ, ಯುಟಿಲಿಟೀಸ್ ಕ್ಷೇತ್ರ ಬಹಳ ವೇಗವಾಗಿ ಬೆಳೆಯುತ್ತಿರುವ ಉದ್ಯಮವಾಗಿದ್ದು, ಬ್ಯಾಚುಲರ್ ಡಿಗ್ರಿ ಅಥವಾ ಪದವಿ ಹೊಂದಿರುವ ಯುವ ವೃತ್ತಿಪರರು ಆಯ್ಕೆಗೆ ಪರಿಗಣಿಸಬಹುದಾಗಿದೆ. ತೈಲ, ಅನಿಲ ಮತ್ತು ಗಣಿಗಾರಿಕೆ, ರಿಯಲ್ ಎಸ್ಟೇಟ್, ಸಲಕರಣೆ ಬಾಡಿಗೆ ಸೇವೆಗಳು ಮತ್ತು ಗ್ರಾಹಕ ಸೇವಾ ಕ್ಷೇತ್ರಗಳು ಹೊಸ ಪದವೀಧರರನ್ನು ಕೆಲಸಕ್ಕೆ ನೇಮಿಸಿಕೊಳ್ಳುವ ಇನ್ನಿತರ ಉನ್ನತ ಉದ್ಯಮಗಳಾಗಿವೆ. ಜತೆಗೆ ಬ್ಯಾಚುಲರ್ ಡಿಗ್ರಿ ಅಥವಾ ಪದವಿ ಹೊಂದಿಲ್ಲದವರು ಶಿಕ್ಷಣ, ಮಾಹಿತಿ ಹಾಗೂ ತಂತ್ರಜ್ಞಾನ ಮತ್ತು ಮಾಧ್ಯಮ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶ ಪಡೆಯಬಹುದಾಗಿದೆ ಎಂದು ತಿಳಿಸಿದೆ.

ವಿಭಿನ್ನ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರುವವರಿಗೆ ಉನ್ನತ ಉದ್ಯೋಗ

ಲಿಂಕ್ಡ್‌ಇನ್‌ನ ಮಾಹಿತಿಯು ವಿಭಿನ್ನ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರುವ ವೃತ್ತಿಪರರಿಗೆ ವಿವಿಧ ಶ್ರೇಣಿಯ ಉನ್ನತ ಉದ್ಯೋಗಗಳ ವಿವರಗಳನ್ನು ತಿಳಿಸುತ್ತದೆ. ಪದವೀಧರರು ಸಾಫ್ಟ್‌ವೇರ್ ಎಂಜಿನಿಯರ್, ಸಿಸ್ಟಮ್ ಎಂಜಿನಿಯರ್ ಮತ್ತು ಪ್ರೋಗ್ರಾಮಿಂಗ್ ಅನಾಲಿಸ್ಟ್ ನಂತಹ ಹುದ್ದೆಗಳಿಗೆ ಹುಡುಕಾಟ ನಡೆಸಬಹುದು. ಸಾಫ್ಟ್‌ವೇರ್ ಎಂಜಿನಿಯರ್ ಮತ್ತು ಡೇಟಾ ಅನಾಲಿಸ್ಟ್ ಹುದ್ದೆಗಳಿಗೆ ಹೆಚ್ಚಿನ ಸಂಖ್ಯೆಯ ಪದವೀಧರರನ್ನು ನೇಮಿಸಿಕೊಳ್ಳಲಾಗುತ್ತಿದೆ. ಪದವಿ ಇಲ್ಲದವರು ಕೂಡ ಸಾಫ್ಟ್‌ವೇರ್ ಎಂಜಿನಿಯರ್, ಸೆಕ್ರೆಟರಿ ಮತ್ತು ಡಿಸೈನ್ ಎಂಜಿನಿಯರ್‌ನಂತಹ ಹುದ್ದೆಗಳಲ್ಲಿ ಕೆಲಸ ಮಾಡಬಹುದು.

ಶೈಕ್ಷಣಿಕ ಹಿನ್ನೆಲೆ ಹೊರತಾಗಿಯೂ ಅನೇಕ ಕೆಲಸಗಳು

ಶೈಕ್ಷಣಿಕ ಹಿನ್ನೆಲೆ ಹೊರತಾಗಿಯೂ ಅನೇಕ ಕೆಲಸಗಳು ವೇಗದ ಬೆಳವಣಿಗೆ ಹೊಂದುವ ಅವಕಾಶ ನೀಡುತ್ತವೆ. ಸಮುದಾಯ ಮತ್ತು ಸಾಮಾಜಿಕ ಸೇವೆಗಳು, ಕಾನೂನು, ಮಾರ್ಕೆಟಿಂಗ್, ಮಾಧ್ಯಮ ಮತ್ತು ಸಂವಹನದಂತಹ ಕ್ಷೇತ್ರಗಳಲ್ಲಿ ಪದವೀಧರರಿಗೆ ಸಾಕಷ್ಟು ಅವಕಾಶಗಳು ಲಭ್ಯವಿದೆ. ಪದವಿ ಇಲ್ಲದವರು ಶಿಕ್ಷಣ, ಮಾನವ ಸಂಪನ್ಮೂಲ, ಮಾರ್ಕೆಟಿಂಗ್ ಹಾಗೂ ಮಾಧ್ಯಮ ಮತ್ತು ಸಂವಹನದಾದ್ಯಂತ ಸಾಕಷ್ಟು ಉದ್ಯೋಗಾವಕಾಶಗಳನ್ನು ಪಡೆಯುತ್ತಾರೆ.

ಇದನ್ನೂ ಓದಿ: TOP 5 Movies: ಒಟಿಟಿಯಲ್ಲಿ ನೋಡಲೇಬೇಕಾದ ಟಾಪ್‌ 5 ಬಿಗ್‌ ಬಜೆಟ್‌ ಸಿನಿಮಾಗಳು!

ಈ ಕುರಿತು ಲಿಂಕ್ಡ್‌ಇನ್ ಕರಿಯರ್ ಎಕ್ಸ್‌ಪರ್ಟ್ ಆಂಡ್ ಇಂಡಿಯಾ ಸೀನಿಯರ್ ಮ್ಯಾನೇಜಿಂಗ್ ಎಡಿಟರ್ ನಿರಾಜಿತಾ ಬ್ಯಾನರ್ಜಿ ಮಾತನಾಡಿ, “ಉದ್ಯೋಗ ಮಾರುಕಟ್ಟೆ ಸ್ವಲ್ಪ ಬಿಗುವಾಗಿದ್ದಾಗ ಆರಂಭಿಕ ಹಂತದಲ್ಲಿ ಉದ್ಯೋಗ ದೊರೆಯುವುದು ಕಷ್ಟವಾಗುತ್ತದೆ. ಉದ್ಯಮದ ಟ್ರೆಂಡ್‌ಗಳು ಮತ್ತು ಬೇಡಿಕೆಯ ಉದ್ಯೋಗಗಳ ಕುರಿತು ಅಪ್‌ಡೇಟ್ ಆಗಿರುವುದರಿಂದ ಮತ್ತು ಆರಂಭದಲ್ಲಿಯೇ ಸಿಗುವ ಹುದ್ದೆಗಳಲ್ಲಿ ಮುನ್ನಡೆಯುವುದರಿಂದ ಮುಂದೆ ಆಯ್ಕೆಗಳು ದೊಡ್ಡದಾಗುತ್ತಾ ಹೋಗುತ್ತದೆ. ಇಂದು ಅನೇಕ ಕೌಶಲ್ಯಗಳನ್ನು ಬೇರೆ ಬೇರೆ ಕೈಗಾರಿಕೆಗಳಲ್ಲಿ ಬಳಸಬಹುದಾಗಿದೆ, ಮತ್ತು ಎಐ ಬಳಕೆ ಹೆಚ್ಚುತ್ತಿರುವುದರಿಂದ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚು ಹೆಚ್ಚು ಟೆಕ್-ಸಂಬಂಧಿತ ಹುದ್ದೆಗಳು ಸೃಷ್ಟಿಯಾಗುತ್ತಿವೆ.

ಈ ನೇಮಕಾತಿ ಟ್ರೆಂಡ್‌ಗಳು ಇಂಧನ ವಲಯದಲ್ಲಿರುವಂತಹ ವಿಶಾಲವಾದ ಆರ್ಥಿಕ ಮಾದರಿಗಳನ್ನು ಪ್ರತಿಬಿಂಬಿಸುತ್ತವೆ. ವೈವಿಧ್ಯಮಯ ಶೈಕ್ಷಣಿಕ ಹಿನ್ನೆಲೆ ಹೊಂದಿರುವ ವೃತ್ತಿಪರರನ್ನು ಕಂಪನಿಗಳು ಹುಡುಕಲು ತೊಡಗಿವೆ. ತಮ್ಮ ದಿಗಂತವನ್ನು ವಿಸ್ತರಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳು ತಮ್ಮ ಕೌಶಲ್ಯಗಳನ್ನುಮತ್ತು ವೃತ್ತಿಪರರ ಜತೆಗಿನ ನೆಟ್‌ವರ್ಕಿಂಗ್ ಅನ್ನು ಬಲಪಡಿಸಿಕೊಳ್ಳಬೇಕು” ಎಂದು ತಿಳಿಸಿದ್ದಾರೆ.

ಉದ್ಯೋಗ ಹುಡುಕಾಟವನ್ನು ಪ್ರಾರಂಭಿಸುವವರಿಗೆ ಲಿಂಕ್ಡ್‌ಇನ್‌ನ ಸಲಹೆಗಳು

ನೇಮಕಾತಿದಾರರ ಗಮನ ಸೆಳೆಯಲು, ಹೆಚ್ಚಿಸಲು ನಿಮ್ಮ ಲಿಂಕ್ಡ್‌ಇನ್ ಪ್ರೊಫೈಲ್‌ನಲ್ಲಿ ನಿಮ್ಮ ಕೌಶಲ್ಯಗಳನ್ನು ಗಮನ ಸೆಳೆಯುವಂತೆ ನಮೂದಿಸಿ. ಲಿಂಕ್ಡ್‌ಇನ್ ನೀವು ತಿಳಿಸಿದ ಕೌಶಲ್ಯಗಳ ಆಧಾರದ ಮೇಲೆ ನಿಮಗೆ ಈ ಮೊದಲು ತಿಳಿದಿರದ, ಆದರೆ ನಿಮಗೆ ಹೊಂದುವ ಉದ್ಯೋಗಾವಕಾಶಗಳನ್ನು ತಿಳಿಸುತ್ತದೆ.

ಲಿಂಕ್ಡ್‌ಇನ್‌ನ ಓಪನ್ ಟು ವರ್ಕ್ ಫೀಚರ್ ಮೂಲಕ ನೀವು ಹೊಸ ಉದ್ಯೋಗದಲ್ಲಿ ಆಸಕ್ತಿಯನ್ನು ಹೊಂದಿದ್ದೀರಿ ಎಂಬುದನ್ನು ತಿಳಿಸಿ. ಜತಗೆ ಈ ಕಾಲದ ಟ್ರೆಂಡ್ ಅಥವಾ ವಿಚಾರಗಳಿಗೆ ತಕ್ಕಂತೆ ನಿಮ್ಮ ಸ್ವಂತ ವಿಚಾರಗಳನ್ನು ಪೋಸ್ಟ್ ಮಾಡುವ ಮೂಲಕ ಮತ್ತು ಸಂಭಾವ್ಯ ಉದ್ಯೋಗದಾತರಿಗೆ ಸಂಬಂಧಿಸಿದ ವಿಷಯಗಳ ಕುರಿತು ಅರ್ಥಪೂರ್ಣವಾಗಿ ಸಂವಹನ ನಡೆಸುವ ಮೂಲಕ ಗಮನ ಸೆಳೆಯಬಹುದಾಗಿದೆ. ನಿಮ್ಮ ಭವಿಷ್ಯದ ಉದ್ಯೋಗದಾತರು ನಿಮ್ಮಿಂದ ಕೇವಲ ಒಂದು ಕಾಮೆಂಟ್ ದೂರದಲ್ಲಿರಬಹುದು ಎಂಬುದು ನೆನಪಲ್ಲಿರಲಿ.

ಇದನ್ನೂ ಓದಿ: Gold Rate Today: ಇಂದು ಚಿನ್ನದ ಬೆಲೆಯಲ್ಲಿ ತುಸು ಏರಿಕೆ; ಖರೀದಿಗೆ ಮುನ್ನ ದರ ಗಮನಿಸಿ

ಔಟ್ ಆಫ್ ದಿ ಬಾಕ್ಸ್ ಯೋಚಿಸಿ. ಅಂದರೆ ವಿಭಿನ್ನವಾಗಿ ಯೋಚಿಸಿ. ಎಲ್ಲಾ ಕಡೆ ಎಐ ಆವರಿಸಿಕೊಳ್ಳುತ್ತಿರುವ ಈ ಸಮಯದಲ್ಲಿ ಪ್ರೋಗ್ರಾಮಿಂಗ್ ಕೌಶಲ್ಯಗಳನ್ನು ಹೊಂದಿರುವವರನ್ನು ತಂತ್ರಜ್ಞಾನ ಕ್ಷೇತ್ರಕ್ಕೆ ಹೊರತಾದ ಬೇರೆ ಅಭಿವೃದ್ಧಿ ಹೊಂದುತ್ತಿರುವ ಕೈಗಾರಿಕೆಗಳು ನೇಮಕಮಾಡಿಕೊಳ್ಳುತ್ತಿವೆ. ನಿಮ್ಮ ಮುಂದಿನ ಕೆಲಸ ಅಥವಾ ಹುದ್ದೆಗಾಗಿ ನೀವು ಹುಡುಕಾಟ ನಡೆಸುತ್ತಿರುವಾಗ ಈ ರೀತಿಯ ವೃತ್ತಿ ಪರಿವರ್ತನೆಯ (ಕರಿಯರ್ ಟ್ರಾನ್ಸಿಷನ್) ಟ್ರೆಂಡ್‌ಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಿ. ಏಕೆಂದರೆ ಅದರಿಂದ ನಿಮ್ಮ ಮುಂದೆ ಅವಕಾಶಗಳ ಸಂಖ್ಯೆ ಹೆಚ್ಚುತ್ತದೆ. ನಿಮ್ಮ ಕೌಶಲ್ಯಗಳಿಗೆ ಸಂಬಂಧಿಸಿದ ಲಿಂಕ್ಡ್‌ಇನ್ ಗುಂಪುಗಳಲ್ಲಿ ತೊಡಗಿಸಿಕೊಳ್ಳಿ. ಇದು ನೆಟ್‌ವರ್ಕ್‌ ಸಾಧಿಸಲು ಉತ್ತಮ ಮಾರ್ಗವಾಗಿದೆ ಮತ್ತು ಲಭ್ಯವಿರುವ ವಿಶಾಲವಾದ ಅವಕಾಶಗಳ ಕುರಿತು ಇನ್ನಷ್ಟು ತಿಳಿದುಕೊಳ್ಳಲು ಅನುವು ಮಾಡಿ ಕೊಡಲಿದೆ.

ಇದನ್ನೂ ಓದಿ: World Digestive Health Day: ಜೀರ್ಣಕ್ರಿಯೆಯಲ್ಲಿ ತೊಡಕು ಅನಾರೋಗ್ಯಕ್ಕೆ ದಾರಿ; ಈ ಸಲಹೆ ಪಾಲಿಸಿ

ಪದವೀಧರರು ತಮ್ಮ ಕೌಶಲ್ಯಗಳನ್ನು ಸುಧಾರಿಸಲು ಸಹಾಯ ಮಾಡಲು, ಲಿಂಕ್ಡ್‌ಇನ್ 30 ಜೂನ್ 2024ರವರೆಗೆ ಉಚಿತ ಲಿಂಕ್ಡ್‌ಇನ್ ಕಲಿಕಾ ಕೋರ್ಸ್‌ಗಳನ್ನು ಬಿಡುಗಡೆ ಮಾಡಿದೆ, ಆ ಕೋರ್ಸುಗಳು ಹೀಗಿವೆ.

● ಕಾಲೇಜು ಪದವೀಧರರಿಗೆ ಉದ್ಯೋಗ ಹುಡುಕಾಟ.
● ಇಂಟರ್ನ್‌ಶಿಪ್ ಅನ್ನು ಉದ್ಯೋಗವನ್ನಾಗಿ ಪರಿವರ್ತಿಸಿಕೊಳ್ಳುವುದು.
● ವೃತ್ತಿ ಆರಂಭಿಸುವವರಿಗೆ ಪ್ರೊಫೆಷನಲ್ ನೆಟ್‌ವರ್ಕಿಂಗ್.
● 30-ನಿಮಿಷದ ರೆಸ್ಯೂಮ್ ರಿಫ್ರೆಶ್.
● ಸಾಮಾನ್ಯ ಸಂದರ್ಶನ ಪ್ರಶ್ನೆಗಳಿಗೆ ಸಿದ್ಧರಾಗಿರುವುದು.
● ನಿಮ್ಮ ಕಾಂಪನ್ಸೇಷನ್ ಪ್ಯಾಕೇಜ್ ಮಾತುಕತೆ ನಡೆಸುವುದು.

Continue Reading
Advertisement
Odisha Assembly Election
ಅವಿಭಾಗೀಕೃತ25 mins ago

Odisha Assembly Election: ಒಡಿಶಾ ವಿಧಾನಸಭಾ ಚುನಾವಣೆ; ಬಿಜೆಡಿ-ಬಿಜೆಪಿ ನಡುವೆ ತೀವ್ರ ಹಣಾಹಣಿ

Mysore lok sabha constituency
ಪ್ರಮುಖ ಸುದ್ದಿ1 hour ago

Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

Haveri Lok Sabha Constituency
ಹಾವೇರಿ2 hours ago

Haveri Lok Sabha Constituency: ಹಾವೇರಿಯಲ್ಲಿ ಅನುಭವಿ vs ಉತ್ಸಾಹಿ; ಯಾರಿಗೆ ಜಯದ ಮಾಲೆ?

Hyderabad City : Hyderabad no longer joint capital of Andhra Pradesh, Telangana from today
ಪ್ರಮುಖ ಸುದ್ದಿ2 hours ago

Hyderabad City : ಹೈದರಾಬಾದ್​ ಇನ್ನು ತೆಲಂಗಾಣಕ್ಕಷ್ಟೇ ರಾಜಧಾನಿ; ಏನಿದು ವಿಂಗಡಣೆ?

Loksabha Election 2024
Lok Sabha Election 20242 hours ago

Lok Sabha Election 2024: ಮತ ಎಣಿಕೆಗೆ 1 ದಿನವಷ್ಟೇ ಬಾಕಿ; ಚುನಾವಣಾ ಆಯೋಗದ ಕದ ತಟ್ಟಿದ ಎನ್‌ಡಿಎ, ʼಇಂಡಿಯಾʼ ಮೈತ್ರಿಕೂಟ

Chikballapur lok sabha constituency
ಪ್ರಮುಖ ಸುದ್ದಿ2 hours ago

Chikballapur lok sabha constituency : ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗೆ ಇನ್ನಷ್ಟು ಬಲ ತರುವರೇ ಸುಧಾಕರ್​?

Bangalore Rain
ಕರ್ನಾಟಕ2 hours ago

Bangalore Rain: ಬೆಂಗಳೂರಲ್ಲಿ ವರುಣನ ಅಬ್ಬರ; ಅಂಡರ್ ಪಾಸ್‌ನಲ್ಲಿ ಸಿಲುಕಿದ ಬಸ್‌, 20 ಪ್ರಯಾಣಿಕರ ರಕ್ಷಣೆ

Kannada New Movie
ಸಿನಿಮಾ3 hours ago

Kannada New Movie: ಎಸ್. ನಾರಾಯಣ್ ನಿರ್ದೇಶನದ ಹೊಸ ಚಿತ್ರದಲ್ಲಿ ಒಂದಾದ ದುನಿಯಾ ವಿಜಯ್, ಶ್ರೇಯಸ್ ಮಂಜು

Koppal Lok Sabha Constituency
ಕೊಪ್ಪಳ3 hours ago

Koppal Lok Sabha Constituency: ಮಾಜಿ ಶಾಸಕರ ಪುತ್ರರ ನಡುವಿನ ಸ್ಪರ್ಧೆಯಲ್ಲಿ ಯಾರಾಗುವರು ಸಂಸದ?

kolar lok sabha constituency
ಪ್ರಮುಖ ಸುದ್ದಿ3 hours ago

Kolar lok sabha constituency : ಕೋಲಾರವನ್ನು ವಾಪಸ್​ ತನ್ನ ತೆಕ್ಕೆಗೆ ತೆಗೆದುಕೊಳ್ಳುವುದೇ ಕಾಂಗ್ರೆಸ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ13 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 day ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌