KPSC Recruitment 2023 apply for cooperative society inspector posts get details hereKPSC Recruitment 2023 : ಸಹಕಾರ ಸಂಘಗಳ ನಿರೀಕ್ಷಕರ 100 ಹುದ್ದೆ; ಅರ್ಜಿ ಸಲ್ಲಿಸಲು ಲಿಂಕ್‌ ಒದಗಿಸಿದ ಕೆಪಿಎಸ್‌ಸಿ - Vistara News

ಉದ್ಯೋಗ

KPSC Recruitment 2023 : ಸಹಕಾರ ಸಂಘಗಳ ನಿರೀಕ್ಷಕರ 100 ಹುದ್ದೆ; ಅರ್ಜಿ ಸಲ್ಲಿಸಲು ಲಿಂಕ್‌ ಒದಗಿಸಿದ ಕೆಪಿಎಸ್‌ಸಿ

ಕೆಪಿಎಸ್‌ಸಿಯು ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ (KPSC Recruitment 2023) ನೀಡಿದೆ. ಒಟ್ಟು 100 ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು, ಈ ನೇಮಕದ ಮಾಹಿತಿ ಇಲ್ಲಿದೆ.

VISTARANEWS.COM


on

kpsc departmental examination ii session examinations postponed again
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ಕಲ್ಯಾಣ ಕರ್ನಾಟಕ ವೃಂದದ ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಲಿಂಕ್‌ (KPSC Recruitment 2023) ಒದಗಿಸಿದೆ.‌ ಇವು ಗ್ರೂಪ್‌ ʻಸಿʼಯ ಹುದ್ದೆಗಳಾಗಿವೆ.

ಈಗಾಗಲೇ ಅಂದರೆ ಮಾ.30ರಿಂದ ಉಳಿಕೆ ಮೂಲ ವೃಂದದ 47 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಈಗ ಕಲ್ಯಾಣ ಕರ್ನಾಟಕದ 53 ಹುದ್ದೆಗಳ ನೇಮಕಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು, ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್‌ 30 ಕೊನೆಯ ದಿನವಾದರೆ, ಕಲ್ಯಾಣ ಕರ್ನಾಟಕದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೇ 02 ಕೊನೆಯ ದಿನವಾಗಿದೆ.

ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ಮೇ 2 ರವರೆಗೆ ಅರ್ಜಿ ಶುಲ್ಕ ಪಾವತಿಸಲು ಅವಕಾಶವಿದ್ದರೆ, ಕಲ್ಯಾಣ ಕರ್ನಾಟಕದ ಹುದ್ದೆಗಳಿಗೆ ಮೇ 03ರ ವರೆಗೆ ಕಾಲಾವಕಾಶವಿರುತ್ತದೆ. ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅದರಲ್ಲಿ ಮಾರ್ಪಾಡು ಅಥವಾ ತಿದ್ದುಪಡಿ ಮಾಡಲು ಅವಕಾಶ ನೀಡಲಾಗುವುದಿಲ್ಲ ಎಂದು ಕೆಪಿಎಸ್‌ಸಿಯು ಸ್ಪಷ್ಟಪಡಿಸಿದೆ.

ಹುದ್ದೆಗಳ ಮೀಲಸಾತಿ ಹಂಚಿಕೆ ಇಂತಿದೆ;

 KPSC Recruitment 2023 apply for cooperative society inspector posts get details here
 KPSC Recruitment 2023 apply for cooperative society inspector posts get details here

ಯಾರು ಅರ್ಜಿ ಸಲ್ಲಿಸಬಹುದು?

ಕೃಷಿ ವಿಜ್ಞಾನ, ಮಾರುಕಟ್ಟೆ ಮತ್ತು ಕೋ ಆಪರೇಷನ್‌, ವಾಣಿಜ್ಯ ಮತ್ತು ಬಿಸ್ನೆಸ್‌ ಮ್ಯಾನೇಜ್‌ಮೆಂಟ್‌ನಲ್ಲಿ ಪದವಿ ಪಡೆದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. (A pass in Bachelor’s Degree in Agricultural Science, Marketing and Co-operation, Commerce and Business Management.) ಬಿಬಿಎ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ ಎಂದು ಈಗಾಗಲೇ ಕೆಪಿಎಸ್‌ಸಿಯು ಸ್ಪಷ್ಟಪಡಿಸಿದೆ.

ಇತ್ತ ಗಮನಿಸಿ
ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-04-2023
ಕಲ್ಯಾಣ ಕರ್ನಾಟಕದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02-05-2023
ಆರ್‌ಪಿಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 02-05-2023
ಎಚ್‌ಕೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ :03-05-2023
ಸಹಾಯವಾಣಿ ಸಂಖ್ಯೆ: 18005728707

ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ : https://kpsc.kar.nic.in

ವಯೋಮಿತಿ ಎಷ್ಟು?

ಸಾಮಾನ್ಯ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷಗಳು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 38ವರ್ಷಗಳು. ಪರಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ (Click Here ) ಮಾಡಿ.

ಅರ್ಜಿ ಶುಲ್ಕ ಎಷ್ಟು ಪಾವತಿಸಬೇಕು?

ಸಾಮಾನ್ಯ ಅಭ್ಯರ್ಥಿಗಳು 600 ರೂ. ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 300 ರೂ. ಹಾಗೂ ಮಾಜಿ ಸೈನಿಕರು 50ರೂ. ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ. ಪರಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿಯೇ ಪಾವತಿಸಲು ಅವಕಾಶ ನೀಡಲಾಗಿರುತ್ತದೆ.

ಪ್ರಕ್ರಿಯೆ ಶುಲ್ಕ (processing fees)35 ರೂ.ಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಹಾಗೂ ಅಂಗವಿಕಲ ಅಭ್ಯರ್ಥಿಗಳೂ ಸೇರಿದಂತೆ ಎಲ್ಲ ಅಭ್ಯರ್ಥಿಗಳು ಪಾವತಿಸಬೇಕಿರುತ್ತದೆ. ಈ ಶುಲ್ಕ ಪಾವತಿಸದಿದ್ದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ.

ಅಧಿಸೂಚನೆ ನೋಡಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ವೇತನ ಶ್ರೇಣಿ ಎಷ್ಟು?

ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆ: ರೂ. 27,650-52,650

ನೇಮಕ ಹೇಗೆ?

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿಗಳಿಸಿದ ಶೇಕಡಾವಾರು ಅಂಕಗಳ ಆಧಾರದಲ್ಲಿ ನೇಮಕಮಾಡಿಕೊಳ್ಳಲಾಗುತ್ತದೆ. ಸಂದರ್ಶನ ಇರುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಪ್ರತಿಯೊಂದು ಪತ್ರಿಕೆಯು ಗರಿಷ್ಠ 100 ಅಂಕಗಳಿಗೆ ನಡೆಯಲಿದ್ದು, ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ನಡೆಯಲಿದೆ. ಪತ್ರಿಕೆ-1 ಸಾಮಾನ್ಯ ಜ್ಞಾನಕ್ಕೆ ಸಂಬಂಧ ಪಟ್ಟಿದ್ದರೆ ಪತ್ರಿಕೆ-2 ಮೂರು ವಿಭಾಗಗಳನ್ನು ಹೊಂದಿರುತ್ತದೆ. ಅವುಗಳೆಂದರೆ;
ಸಾಮಾನ್ಯ ಕನ್ನಡ-35 ಅಂಕ, ಸಾಮಾನ್ಯ ಇಂಗ್ಲಿಷ್‌-35 ಅಂಕ, ಕಂಪ್ಯೂಟರ್‌ ಜ್ಞಾನ-30 ಅಂಕ.

ಪತ್ರಿಕೆ-1 ಪರೀಕ್ಷೆ ಬರೆಯಲು ಒಂದೂವರೆ ಗಂಟೆ ಹಾಗೂ ಪತ್ರಿಕೆ-2 ರ ಪರೀಕ್ಷೆ ಬರೆಯಲು ಎರಡು ಗಂಟೆ ಕಾಲಾವಕಾಶ ನೀಡಲಾಗುತ್ತದೆ. ಈ ಪರೀಕ್ಷೆಯ ಪಠ್ಯ ಕ್ರಮವನ್ನು ಆಯೋಗದ ವೆಬ್‌ನಲ್ಲಿ ಒದಗಿಸಲಾಗಿದೆ. ಪ್ರಶ್ನೆ ಪತ್ರಿಕೆಯು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಇರಲಿದೆ. ಈ ಪರೀಕ್ಷೆಯಲ್ಲಿ ಶೇ.35 ರಷ್ಟು ಅಂಕ ಪಡೆದವರು ಮಾತ್ರ ನೇಮಕಕ್ಕೆ ಅರ್ಹರಾಗಿರುತ್ತಾರೆ. ಋಣಾತ್ಮಕ ಮೌಲ್ಯಮಾಪನ (Negative) ನಡೆಸಲಾಗುತ್ತದೆ. ಅಂದರೆ ಪ್ರತಿ ತಪ್ಪು ಉತ್ತರಕ್ಕೆ ಪ್ರಶ್ನೆಗೆ ನಿಗದಿಪಡಿಸಿದ ಅಂಕಗಳ ನಾಲ್ಕನೇ ಒಂದು ಭಾಗದಷ್ಟು(1/4) ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಕನ್ನಡ ಮತ್ತು ಇಂಗ್ಲಿಷ್‌ ಭಾಷೆಯಲ್ಲಿ ಪ್ರಶ್ನೆ ಪತ್ರಿಕೆ ನೀಡಲಾಗುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ರಾಜ್ಯದ ವಿವಿಧ ಭಾಗಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಮಾಹಿತಿಯನ್ನು ಮುಂದೆ ನೀಡಲಾಗುತ್ತದೆ. ಅಗತ್ಯ ಇರುವ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನೂ ಬರೆದು ಅರ್ಹತೆ ಪಡೆಯಬೇಕಿರುತ್ತದೆ. ಪರೀಕ್ಷಾ ವೇಳಾಪಟ್ಟಿಯನ್ನು ಮುಂದೆ ಪ್ರಕಟಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : KEA Recruitment 2023 : ಕೆಇಎಯಿಂದ 757 ಹುದ್ದೆಗಳಿಗೆ ನೇಮಕ ಖಚಿತ; ಏಪ್ರಿಲ್‌ 17 ರಿಂದ ಅರ್ಜಿ ಸಲ್ಲಿಕೆ ಶುರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನಲ್ಲಿದೆ 4,660 ಹುದ್ದೆ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ಉದ್ಯೋಗಕ್ಕಾಗಿ ಹುಡುಕಾಟ ನಡೆಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ರೈಲ್ವೆ ನೇಮಕಾತಿ ಮಂಡಳಿ 4,660 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮೇ 14. ಕಾನ್‌ಸ್ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳು ಇದಾಗಿದೆ. ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದವರು ಕಾನ್‌ಸ್ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಇನ್ನು ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದಿರಬೇಕು.

VISTARANEWS.COM


on

Job Alert
Koo

ಬೆಂಗಳೂರು: ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಇಲ್ಲಿದೆ ಭರಪೂರ ಅವಕಾಶ. ಭಾರತೀಯ ರೈಲ್ವೆ ಇಲಾಖೆಯಲ್ಲಿ ಭಾರೀ ಉದ್ಯೋಗಾವಕಾಶಗಳಿವೆ. ರೈಲ್ವೆ ನೇಮಕಾತಿ ಮಂಡಳಿ (Railway Recruitment Board) ಈ ನೇಮಕಾತಿ ನಡೆಸುತ್ತಿದೆ (RPF Recruitment 2024). ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ (Railway Protection Force)ನಲ್ಲಿ ಬರೋಬ್ಬರಿ 4,660 ಹುದ್ದೆಗಳಿವೆ. ಕಾನ್‌ಸ್ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳು ಇದಾಗಿದ್ದು, ಎಸ್ಸೆಸ್ಸೆಲ್ಸಿ ತೆರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 14 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕಾನ್‌ಸ್ಟೇಬಲ್‌ – 4,208, ಸಬ್‌ ಇನ್ಸ್‌ಪೆಕ್ಟರ್‌ – 452 ಹುದ್ದೆಗಳಿವೆ. ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದವರು ಕಾನ್‌ಸ್ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಇನ್ನು ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದಿರಬೇಕು.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಕಾನ್‌ಸ್ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ, ಗರಿಷ್ಠ ವಯಸ್ಸು 25 ವರ್ಷ. ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 28 ವರ್ಷ. ಅರ್ಜಿ ಶುಲ್ಕವಾಗಿ ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳು 500 ರೂ. ಮತ್ತು ಎಸ್‌ಸಿ, ಎಸ್‌ಟಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳು 250 ರೂ. ಪಾವತಿಸಬೇಕು.

ವೇತನ ಮತ್ತು ಆಯ್ಕೆ ವಿಧಾನ

ಕಾನ್ಸ್‌ಟೇಬಲ್‌ ಹುದ್ದೆಗಳಿಗೆ 21,700 ರೂ. ಮತ್ತು ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ 35,400 ರೂ. ಮಾಸಿಕ ವೇತನ ಲಭ್ಯ. ಕಂಪ್ಯೂಟರ್‌ ಆಧಾರಿತ ಪರೀಕ್ಷೆ (CBT), ದೈಹಿಕ ಸಾಮರ್ಥ್ಯ ಪರೀಕ್ಷೆ (PET, PMT), ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಆಯ್ಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನಿಮ್ಮ ಹೆಸರು, ವೈಯಕ್ತಿಕ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಈಗ ರಿಜಿಸ್ಟ್ರೇಷನ್‌ ಐಡಿ ಮತ್ತು ಪಾಸವರ್ಡ್‌ ದೊರೆಯುತ್ತದೆ. ಅದನ್ನು ಬಳಿಸಿ ಲಾಗಿನ್‌ ಆಗಿ.
  • ಈಗ ಕಂಡು ಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ. ವೈಯಕ್ತಿಕ, ಶೈಕ್ಷಣಿಕ ಮಾಹಿತಿ ನೀಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿದ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಗಮನಿಸಿ

ಲಿಖಿತ ಪರೀಕ್ಷೆಯಲ್ಲಿ ನೆಗೆಟಿವ್‌ ಅಂಕಗಳಿದ್ದು, ಎಚ್ಚರಿಕೆಯಿಂದ ಉತ್ತರ ಬರೆಯಬೇಕು ಎಂದು ಪ್ರಕಟಣೆ ತಿಳಿಸಿದೆ. ಲಿಖಿತ ಪರೀಕ್ಷೆಯ ಅವಧಿ 90 ನಿಮಿಷದ ಅವಧಿಯದ್ದಾಗಿದ್ದು, ಪ್ರಶ್ನೆಗಳು ಬಹು ಆಯ್ಕೆಯ ಉತ್ತರವನ್ನು ಒಳಗೊಂಡಿದೆ. ಕಾನ್‌ಸ್ಟೇಬಲ್‌ ಹುದ್ದೆಯ ಪರೀಕ್ಷೆ ಎಸ್ಸೆಸ್ಸೆಲ್ಸಿ ಹಂತದ ಪ್ರಶ್ನೆಗಳನ್ನು ಒಳಗೊಂಡಿದ್ದು, ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಯ ಪರೀಕ್ಷೆ ಪದವಿ ಹಂತದ ಪ್ರಶ್ನೆಗಳನ್ನು ಒಳಗೊಂಡಿದೆ.

ಇದನ್ನೂ ಓದಿ: Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ

Continue Reading

ಉದ್ಯೋಗ

Job Alert: ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಗುಡ್‌ನ್ಯೂಸ್‌; ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸ್ ಹುದ್ದೆಯ ಸಂದರ್ಶನಕ್ಕೆ ನೇರ ಹಾಜರಾಗಿ

Job Alert: ಏರ್‌ ಇಂಡಿಯಾ ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸ್ ಲಿಮಿಟೆಡ್‌ ಖಾಲಿ ಇರುವ 422 ಹುದ್ದೆಗಳನ್ನು ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಹ್ಯಾಂಡಿ ಮ್ಯಾನ್‌, ಹ್ಯಾಂಡಿ ವುಮೆನ್, ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್ ಹುದ್ದೆ ಇದಾಗಿದ್ದು, ಎಸ್ಸೆಸ್ಸೆಲ್ಸಿ ಪಾಸಾದವರು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಉದ್ಯೋಗ ಸ್ಥಳ: ಚೆನ್ನೈ. ಮೇ 2 ಮತ್ತು ಮೇ 4ರಂದು ಆಸಕ್ತರು ಸಂದರ್ಶನಕ್ಕೆ ಹಾಜರಾಗಬಹುದು.

VISTARANEWS.COM


on

Job Alert
Koo

ನವದೆಹಲಿ: ಉತ್ತಮ ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಏರ್‌ ಇಂಡಿಯಾ ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸ್ ಲಿಮಿಟೆಡ್‌ (Air India Air Transport Services Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಹ್ಯಾಂಡಿ ಮ್ಯಾನ್‌, ಹ್ಯಾಂಡಿ ವುಮೆನ್, ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್ ಸೇರಿ 422 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ (AIATSL Recruitment 2024) ಎಂದು ಪ್ರಕಟಣೆ ತಿಳಿಸಿದೆ. ಉದ್ಯೋಗದ ಸ್ಥಳ: ಚೆನ್ನೈ ಇಂಟರ್‌ ನ್ಯಾಷನಲ್‌ ಏರ್‌ಪೋರ್ಟ್‌. ಆಸಕ್ತರು ಅರ್ಜಿ ಸಲ್ಲಿಸಬೇಕಾಗಿಲ್ಲ, ಪರೀಕ್ಷೆ ಬರೆಯಬೇಕಾಗಿಲ್ಲ. ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್: 130, ಹ್ಯಾಂಡಿ ಮ್ಯಾನ್ / ಹ್ಯಾಂಡಿ ವುಮೆನ್: 292 ಹುದ್ದೆಗಳಿವೆ. ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್ಸೆಸ್ಸೆಲ್ಸಿ ಪಾಸ್ ಜತೆಗೆ, ಹೆವಿ ಮೋಟಾರ್ ವೆಹಿಕಲ್ ಚಾಲನ ಪರವಾನಗಿ ಹೊಂದಿರಬೇಕು. ಹ್ಯಾಂಡಿ ಮ್ಯಾನ್ / ಹ್ಯಾಂಡಿ ವುಮೆನ್ ಹುದ್ದೆಗೆ ಬೇಕಾದ ಅರ್ಹತೆ ಎಂದರೆ ಎಸ್ಸೆಸ್ಸೆಲ್ಸಿ ಪಾಸ್ ಜತೆಗೆ ಇಂಗ್ಲಿಷ್ ಭಾಷೆ ಓದಲು, ಬರೆಯಲು ಬರಬೇಕು. ಸ್ಥಳೀಯ ಭಾಷೆ ಮತ್ತು ಹಿಂದಿ ಮಾತನಾಡಲು ಗೊತ್ತಿರಬೇಕು.

ವಯೋಮಿತಿ ಮತ್ತು ಆಯ್ಕೆ ವಿಧಾನ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವರಿಷ್ಠ ವಯೋಮಿತಿ 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಆಸಕ್ತರು ನೇರ ಸಂದರ್ಶನಕ್ಕೆ ಈ ಕೆಳಗಿನ ವಿಳಾಸಕ್ಕೆ ಹಾಜರಾಗಬೇಕು.

Office of the HRD Department,
AI Unity Complex, Pallavaram Cantonment, Chennai – 600 043.
Land Mark: Near Taj Catering.

ದಿನಾಂಕ: ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್: ಮೇ 2 (ಬೆಳಿಗ್ಗೆ 9-12).

ಹ್ಯಾಂಡಿ ಮ್ಯಾನ್ / ಹ್ಯಾಂಡಿ ವುಮೆನ್: ಮೇ 4 (ಬೆಳಿಗ್ಗೆ 9-12).

ಆಯ್ಕೆಯಾದವರನ್ನು 3 ವರ್ಷಗಳ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಾಗುತ್ತದೆ. ಬಳಿಕ ಅವರ ಕಾರ್ಯ ಕ್ಷಮತೆಯ ಆಧಾರದಲ್ಲಿ ಉದ್ಯೋಗದ ಅವಧಿಯನ್ನು ಮುಂದುವರಿಸಲಾಗುತ್ತದೆ. ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್ ಹುದ್ದೆಗೆ ಆಯ್ಕೆಯಾಗುವವರು ಟ್ರ್ಯಾಕ್ಟರ್, ಬಸ್ ಮತ್ತು ಗ್ರೌಂಡ್ ಸರ್ವಿಸ್ ಉಪಕರಣಗಳಂತಹ ಭಾರೀ ವಾಹನಗಳನ್ನು ಚಲಾಯಿಸಬೇಕಾಗುತ್ತದೆ. ಹ್ಯಾಂಡಿ ಮ್ಯಾನ್ / ಹ್ಯಾಂಡಿ ವುಮೆನ್ ಹುದ್ದೆಗೆ ಆಯ್ಕೆಯಾಗುವವರು ವಿಮಾನ ನಿಲ್ದಾಣದಲ್ಲಿ ಬ್ಯಾಗೇಜ್ / ಸರಕು ಲೋಡ್ ಮಾಡುವುದು ಮತ್ತು ಕ್ಯಾಬಿನ್‌ನಿಂದ ಅನ್‌ಲೋಡ್‌ ಮಾಡುವುದು, ವಿಮಾನವನ್ನು ಸ್ವಚ್ಛಗೊಳಿಸುವುದು, ಕಾರ್ಯಾಗಾರದಲ್ಲಿ ತಂತ್ರಜ್ಞರಿಗೆ ನೆರವಾಗುವುದು, ವ್ಹೀಲ್ ಚೇರ್ ಶುಚಿಗೊಳಿಸುವುದು ಮುಂತಾದ ಕಾರ್ಯಗಳು ನಿರ್ವಹಿಸಬೇಕಾಗುತ್ತದೆ.

ಸಂದರ್ಶನಕ್ಕೆ ಹಾಜರಾಗುವುದು ಹೇಗೆ?

ಅರ್ಹತಾ ಮಾನದಂಡಗಳನ್ನು ಪೂರೈಸುವ ಅರ್ಜಿದಾರರು ಅಧಿಸೂಚನೆಯೊಂದಿಗೆ ನೀಡಲಾದ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿದ ಅಗತ್ಯ ಪ್ರಮಾಣ ಪತ್ರಗಳು / ಪ್ರಮಾಣಪತ್ರಗಳ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಜತೆಗೆ ಸಾಮಾನ್ಯ, ಒಬಿಸಿ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂಪಾಯಿಯನ್ನು “AI AIRPORT SERVICES LIMITEDʼʼ ಈ ಹೆಸರಿಗೆ ಡಿಮ್ಯಾಂಡ್‌ ಡ್ರಾಫ್ಟ್‌ ಮಾಡಬೇಕು. ಡಿಮ್ಯಾಂಡ್‌ ಡ್ರಾಫ್ಟ್‌ ಹಿಂಭಾಗದಲ್ಲಿ ನಿಮ್ಮ ಪೂರ್ತಿ ಹೆಸರು, ಮೊಬೈಲ್‌ ನಂಬರ್‌ ಬರೆಯುವುದನ್ನು ಮರೆಯಬೇಡಿ. ಗಮನಿಸಿ, ಮಾಜಿ ಯೋಧರು, ಎಸ್‌ಸಿ / ಎಸ್‌ಟಿ ವಿಭಾಗದವರಿಗೆ ಅರ್ಜಿ ಶುಲ್ಕವಿಲ್ಲ.

ವೇತನ

ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್: 24,960 ರೂ., ಹ್ಯಾಂಡಿಮ್ಯಾನ್ / ಹ್ಯಾಂಡಿ ವುಮೆನ್: 22,530 ರೂ. ಮಾಸಿಕ ವೇತನ ಲಭ್ಯ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ

Continue Reading

ಶಿಕ್ಷಣ

UPSC Result 2024: 12 ಪ್ರಯತ್ನದ ಹೊರತಾಗಿಯೂ ಸಿಗದ ಯಶಸ್ಸು; ಯುಪಿಎಸ್‌ಸಿ ಆಕಾಂಕ್ಷಿಯ ಪೋಸ್ಟ್‌ ವೈರಲ್‌

UPSC Result 2024: ಬಹು ನಿರೀಕ್ಷಿತ ಕೇಂದ್ರ ಲೋಕ ಸೇವಾ ಆಯೋಗದ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಉತ್ತರ ಪ್ರದೇಶದ ಆದಿತ್ಯ ಶ್ರೀವಾಸ್ತವ್‌ ಮೊದಲ ಸ್ಥಾನ ಪಡೆದಿದ್ದಾರೆ. ಓ ಮಧ್ಯೆ ತಮ್ಮ 12ನೇ ಪ್ರಯತ್ನದ ಹೊರತಾಗಿಯೂ ಆಯ್ಕೆಯಾಗದ ಕುನಾಲ್ ಆರ್. ವಿರುಲ್ಕರ್ ಎನ್ನುವವರು ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಸದ್ಯ ಈ ಪೋಸ್ಟ್‌ ವೈರಲ್‌ ಆಗಿದೆ.

VISTARANEWS.COM


on

UPSC Result 2024
Koo

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC) ನಡೆಸಿದ ನಾಗರಿಕ ಸೇವೆಗಳ ಪರೀಕ್ಷೆಯ (UPSC Results 2023) ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಪ್ರದೇಶದ ಆದಿತ್ಯ ಶ್ರೀವಾಸ್ತವ್‌ (Aditya Srivastava) ಅವರು ದೇಶದಲ್ಲೇ ಮೊದಲ ರ‍್ಯಾಂಕ್‌ ಗಳಿಸಿದ್ದಾರೆ. ಆ ಮೂಲಕ ಅಪರೂಪದ ಸಾಧನೆ ಮಾಡಿದ್ದಾರೆ. ಇನ್ನು ಅನಿಮೇಶ್ ಪ್ರಧಾನ್ ಮತ್ತು ಡೊನೂರು ಅನನ್ಯಾ ರೆಡ್ಡಿ ಕ್ರಮವಾಗಿ ಎರಡು ಮತ್ತು ಮೂರನೇ ರ‍್ಯಾಂಕ್‌ ಪಡೆದಿದ್ದಾರೆ. ಈ ಮಧ್ಯೆ ಯುಪಿಎಸ್‌ಸಿ ಆಕಾಂಕ್ಷಿ ಕುನಾಲ್ ಆರ್. ವಿರುಲ್ಕರ್ (Kunal R Virulkar) ಎನ್ನುವವರು ತಮ್ಮ 12ನೇ ಪ್ರಯತ್ನದಲ್ಲಿಯೂ ಆಯ್ಕೆಯಾಗದ ವಿಚಾರವನ್ನು ತಿಳಿಸಿದ್ದಾರೆ. ತಮ್ಮ ಹೋರಾಟವನ್ನು ಅವರು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ವೈರಲ್‌ ಆಗಿದೆ (Viral News).

“12 ಪ್ರಯತ್ನಗಳು, 7 ಮುಖ್ಯ ಪರೀಕ್ಷೆ, 5 ಸಂದರ್ಶನ. ಆದರೂ ಆಯ್ಕೆಯಾಗಲಿಲ್ಲ” ಎಂದು ಬರೆದುಕೊಂಡಿರುವ ವಿರುಲ್ಕರ್ ದೆಹಲಿಯ ಯುಪಿಎಸ್‌ಸಿ ಪ್ರಧಾನ ಕಚೇರಿಯ ಹೊರಗೆ ನಿಂತುಕೊಂಡಿರುವ ತಮ್ಮ ಚಿತ್ರವನ್ನು ಪೋಸ್ಟ್‌ ಮಾಡಿದ್ದಾರೆ.

ಪೋಸ್ಟ್‌ ವೈರಲ್‌

ಸದ್ಯ ವಿರುಲ್ಕರ್ ಅವರ ಪೋಸ್ಟ್‌ ಅನ್ನು 5 ಲಕ್ಷಕ್ಕಿಂತ ಅದಿಕ ಮಂದಿ ವೀಕ್ಷಿಸಿದ್ದಾರೆ. ನೂರಾರು ಮಂದಿ ಪ್ರತಿಕ್ರಿಯಿಸಿ ಸಾಂತ್ವನ ಹೇಳಿದ್ದಾರೆ. ಹಲವು ಮಂದಿ ಇತರರ ಉದಾಹರಣೆ ನೀಡಿ ಸಮಾಧಾನ ಪಡಿಸಿದರೆ, ಇನ್ನು ಕೆಲವರು ಸ್ಫೂರ್ತಿದಾಯಕ ಕಥೆ ಹೇಳಿದ್ದಾರೆ. ಐಎಎಸ್ ಅಧಿಕಾರಿ ಅವನೀಶ್ ಶರಣ್ ಕಮೆಂಟ್‌ ಮಾಡಿ, ʼʼನಿಮ್ಮ ಬೆಂಬಲಕ್ಕೆ ನಾವೆಲ್ಲ ಇದ್ದೇವೆ. ನಿಮ್ಮ ಬಗ್ಗೆ ಹೆಮ್ಮೆ ಪಡುತ್ತೇವೆ. ಒಂದಲ್ಲ ಒಂದು ದಿನ ನಿಮ್ಮ ಪ್ರಯತ್ನದಲ್ಲಿ ಜಯ ಗಳಿಸುತ್ತೀರಿʼʼ ಎಂದು ಹೇಳಿದ್ದಾರೆ. “ಚಿಂತಿಸಬೇಡಿ. ಪ್ರಯತ್ನಿಸುತ್ತಲೇ ಇರಿ. ಮುಂದೊಂದು ದಿನ ನೀವು ನಿಮ್ಮ ಪ್ರಯತ್ನದಲ್ಲಿ ಯಶಸ್ವಿಯಾಗುತ್ತೀರಿ” ಎಂದು ಮತ್ತೊಬ್ಬರು ಹೇಳಿದ್ದಾರೆ. “ಇದು ನಿಮ್ಮ ಪ್ರಯತ್ನವನ್ನು, ಕಠಿಣ ಪ್ರರಿಶ್ರಮವನ್ನು ಎತ್ತಿ ಹಿಡಿಯುತ್ತದೆ. ನಿಮ್ಮ ವೃತ್ತಿ ಜೀವನಕ್ಕೆ ಶುಭ ಹಾರೈಕೆಗಳು” ಎಂದು ಇನ್ನೊಬ್ಬರು ತಿಳಿಸಿದ್ದಾರೆ. ಒಟ್ಟಿನಲ್ಲಿ ಬಹುತೇಕರು ವಿರುಲ್ಕರ್ ಅವರ ಬೆಂಬಲಕ್ಕೆ ಧಾವಿಸಿದ್ದಾರೆ.

ಏತನ್ಮಧ್ಯೆ ಒಟ್ಟು 1,016 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಮತ್ತು ಅವರನ್ನು ವಿವಿಧ ಕೇಂದ್ರ ಸರ್ಕಾರಿ ಸೇವೆಗಳಿಗೆ ಶಿಫಾರಸು ಮಾಡಲಾಗಿದೆ ಎಂದು ಯುಪಿಎಸ್‌ಸಿ ತಿಳಿಸಿದೆ. ಆದಾಗ್ಯೂ, ಶಿಫಾರಸು ಮಾಡಲಾದ 355 ಅಭ್ಯರ್ಥಿಗಳ ಉಮೇದುವಾರಿಕೆ ಹೆಚ್ಚಿನ ಪರಿಶೀಲನೆಗೆ ಬಾಕಿ ಉಳಿದಿದೆ. ಪ್ರತಿಷ್ಠಿತ ಪರೀಕ್ಷೆಯನ್ನು 2023ರ ಸೆಪ್ಟೆಂಬರ್ 15ರಿಂದ ಸೆಪ್ಟೆಂಬರ್ 24ರವರೆಗೆ ಎರಡು ಪಾಳಿಗಳಲ್ಲಿ ನಡೆಸಲಾಗಿತ್ತು. ಅಭ್ಯರ್ಥಿಗಳು ತಮ್ಮ ಪರೀಕ್ಷೆಗಳು/ನೇಮಕಾತಿಗಳ ಕುರಿತು ಯಾವುದೇ ಮಾಹಿತಿ/ಸ್ಪಷ್ಟೀಕರಣವನ್ನು ಕೆಲಸದ ದಿನಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಖುದ್ದಾಗಿ ಭೇಟಿ ನೀಡಿ ಪಡೆಯಬಹುದು ಅಥವಾ ದೂರವಾಣಿ ಸಂಖ್ಯೆ 23385271/23381125/23098543ಕ್ಕೆ ಕರೆ ಮಾಡಬಹುದು.

ಇದನ್ನೂ ಓದಿ: UPSC Results 2023: ಎಂಎನ್‌ಸಿ ಕೆಲಸ ಬಿಟ್ಟ ಆದಿತ್ಯಗೆ ಯುಪಿಎಸ್‌ಸಿ ಫಸ್ಟ್‌ ರ‍್ಯಾಂಕ್;‌ ಯಾರಿವರು?

ಫಲಿತಾಂಶವನ್ನು ಹೀಗೆ ಪರಿಶೀಲಿಸಿ

  • ನಿಮ್ಮ ಬ್ರೌಸರ್‌ನಲ್ಲಿ upsc.gov.in ತೆರೆಯಿರಿ
  • What’s New ಸೆಕ್ಷನ್‌ನ ಅಡಿಯಲ್ಲಿ ‘UPSC Civil Services Examination 2023 Final Results’ ಎಂಬುದರ ಮೇಲೆ ಕ್ಲಿಕ್ ಮಾಡಿ.
  • ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ಹೆಸರನ್ನು ಪಿಡಿಎಫ್ ಮೂಲಕ ನೀಡಲಾಗಿದೆ. ಅದನ್ನು ಕ್ಲಿಕ್‌ ಮಾಡಿ.
Continue Reading

ಉದ್ಯೋಗ

Job Alert: ಅಂಗನವಾಡಿಯಲ್ಲಿದೆ 513 ಹುದ್ದೆ: 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ; ಏ. 19 ಕೊನೆಯ ದಿನ

Job Alert: ಒಂದೊಳ್ಳೆ ಉದ್ಯೋಗ ಬೇಕು ಎಂದು ಹುಡುಕಾಡುತ್ತಿರುವವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗುಡ್‌ನ್ಯೂಸ್‌ ನೀಡಿದೆ. ಕೋಲಾರ ಜಿಲ್ಲೆಯ ಅಂಗನವಾಡಿಗಳಲ್ಲಿ ಖಾಲಿ ಇರುವ ಬರೋಬ್ಬರಿ 513 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಏಪ್ರಿಲ್‌ 19. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೋಲಾರ ಜಿಲ್ಲೆಯ ಅಂಗನವಾಡಿಗಳಲ್ಲಿ ಖಾಲಿ ಇರುವ ಬರೋಬ್ಬರಿ 513 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ (Anganwadi Worker And Helper Recruitment 2024). ಇದು ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಾಗಿದ್ದು, ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಏಪ್ರಿಲ್‌ 19 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಂಗನವಾಡಿ ಕಾರ್ಯಕರ್ತೆ- 120, ಅಂಗನವಾಡಿ ಸಹಾಯಕಿ- 393 ಹುದ್ದೆಗಳಿವೆ.

ಅಂಗನವಾಡಿ ಕಾರ್ಯಕರ್ತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಪಿಯುಸಿ ತೇರ್ಗಡೆಯಾಗಿರಬೇಕು. ಎಸ್ಸೆಸ್ಸೆಲ್ಸಿಯಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಧ್ಯಯನ ಮಾಡಿರಬೇಕು. ಜತೆಗೆ ಡಿ.ಎಸ್‌.ಇ.ಆರ್‌.ಟಿ.ಯಿಂದ ಇ.ಸಿ.ಸಿ.ಇ. ಡಿಪ್ಲೋಮಾ ಕೋರ್ಸ್‌, ಜೆ.ಒ.ಸಿ. ಕೋರ್ಸ್‌, ಎನ್‌.ಟಿ.ಟಿ. ಕೋರ್ಸ್‌ ಮತ್ತು ಅಂಗನವಾಡಿ ಚಟುವಟಿಕೆಗಳಿಗೆ ಸಂಬಂಧಿಸಿದ ಡಿಪ್ಲೋಮಾ ನ್ಯೂಟ್ರಿಶಿಯನ್‌, ಹೋಂ ಸೈನ್ಸ್‌ ಸರ್ಟಿಫಿಕೆಟ್‌ ಕೋರ್ಸ್‌, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿರುವವರಿಗೆ ಆದ್ಯತೆ ಲಭಿಸಲಿದೆ.

ಅಂಗನವಾಡಿ ಸಹಾಯಕಿ: ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಶಿಕ್ಷಣ ಹೊಂದಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಮುಕ್ತ ಶಾಲೆ / ಮುಕ್ತ ವಿದ್ಯಾಲಯಗಳಲ್ಲಿ ಎಸ್ಸೆಸ್ಸೆಲ್ಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಲು ಅರ್ಹರು. ಇವರು ಪ್ರಥಮ / ದ್ವಿತೀಯ ಭಾಷೆಯಾಗಿ ಕನ್ನಡ ಮತ್ತು ಸಾಮಾನ್ಯ ಗಣಿತ, ಸಮಾಜ ಶಾಸ್ತ್ರ / ಸಮಾಜ ವಿಜ್ಞಾನಗಳನ್ನು ಕಡ್ಡಾಯವಾಗಿ ಓದಿರಬೇಕು. ಬೇರೆ ರಾಜ್ಯದಲ್ಲಿ ವ್ಯಾಸಂಗ ಮಾಡಿದ್ದು, ಕನ್ನಡವನ್ನು ಪ್ರಥಮ / ದ್ವಿತೀಯ ಭಾಷೆಯಾಗಿ ಓದಿದವರೂ ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ತುಂಬಿರಬೇಕು. 35 ವರ್ಷ ವಯಸ್ಸು ಮೀರಿರಬಾರದು. ವಿಶೇಷ ಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು

ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ / ಪಿಯುಸಿ ಅಂಕಪಟ್ಟಿ, ವಾಸಸ್ಥಳ ದೃಢೀಕರಣ ಪತ್ರ, ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ, ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ, ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ, ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ, ಯೋಜನಾ ನಿರಾಶ್ರಿತರಾಗಿದ್ದಲ್ಲಿ ಅದರ ಪ್ರಮಾಣ ಪತ್ರ, ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಅಲ್ಲಿ ಕೇಳಲಾಗುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿ.
  • ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರಿ ಎನ್ನುವುದನ್ನು ಆಯ್ಕೆ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ; ವಿವಿಧ ಹುದ್ದೆಗಳಿಗೆ ಏ. 25ರೊಳಗೆ ಅರ್ಜಿ ಸಲ್ಲಿಸಿ

Continue Reading
Advertisement
Murder Case
ಬೆಂಗಳೂರು5 mins ago

Murder case : ಬೆಂಗಳೂರಲ್ಲಿ ರಕ್ತದೋಕುಳಿ; ಪ್ರತ್ಯೇಕ ಕಡೆಗಳಲ್ಲಿ ಯುವಕರಿಬ್ಬರ ಬರ್ಬರ ಹತ್ಯೆ

IPL 2024
ಕ್ರೀಡೆ12 mins ago

IPL 2024: ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ರೋಹಿತ್​ ಶರ್ಮ

Lok Sabha Election 2024 Rajinikanth Kamal Haasan Dhanush Vijay Sethupathi vote in Chennai
ಕಾಲಿವುಡ್14 mins ago

Lok Sabha Election 2024: ಚೆನ್ನೈನಲ್ಲಿ ಮತ ಚಲಾಯಿಸಿದ ರಜನಿಕಾಂತ್​, ಧನುಷ್, ಕಮಲ್ ಹಾಸನ್, ವಿಜಯ್‌!

summer trip
ಪ್ರವಾಸ49 mins ago

Summer Tour: ಹಚ್ಚ ಹಸುರಿನ ಪ್ರಶಾಂತ ನಗರ ಶಿಲ್ಲಾಂಗ್; ಬೇಸಿಗೆ ಪ್ರವಾಸಕ್ಕೆ ಸೂಕ್ತ

Viral Video
ವೈರಲ್ ನ್ಯೂಸ್52 mins ago

Viral Video: ಲ್ಯಾಂಬೋರ್ಗಿನಿ ಕಾರಿನ ಮೇಲೆ ಕುಣಿದು ಕುಪ್ಪಳಿಸಿದ ಮಹಿಳೆ; ಕಾರಿನ ಸ್ಥಿತಿ ನೋಡಿ ಮರುಗಿದ ನೆಟ್ಟಿಗರು!

Harshika Poonacha Bhuvan! for speak Kannada
ಸ್ಯಾಂಡಲ್ ವುಡ್1 hour ago

Harshika Poonacha: ಹರ್ಷಿಕಾ ಪೂಣಚ್ಚ-ಭುವನ್‌ ಮೇಲೆ ಅಟ್ಯಾಕ್! ಕನ್ನಡ ಮಾತನಾಡಿದ್ದೇ ತಪ್ಪಾಯ್ತಾ?

murali sreeshankar
ಕ್ರೀಡೆ1 hour ago

Murali Sreeshankar: ಒಲಿಂಪಿಕ್ಸ್‌ ಆರಂಭಕ್ಕೂ ಮುನ್ನವೇ ಭಾರತಕ್ಕೆ ಆಘಾತ; ಟೂರ್ನಿಯಿಂದ ಹೊರಬಿದ್ದ ಪದಕ ಭರವಸೆಯ ಕ್ರೀಡಾಪಟು

virat kohli
ಕ್ರೀಡೆ2 hours ago

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ ನೋಡಲು ಮುಗಿಬಿದ್ದ ಅಭಿಮಾನಿಗಳು

Pruthvi Ambaar new movie direction by Rathaavara Director
ಸಿನಿಮಾ2 hours ago

Pruthvi Ambaar: ʻದಿಯಾʼ ಹೀರೊಗೆ `ರಥಾವರʼ ಡೈರೆಕ್ಟರ್ ಆ್ಯಕ್ಷನ್ ಕಟ್!

Kantara Movie Rishab Shetty And Pragathi Shetty Met Mohanlal
ಸಿನಿಮಾ2 hours ago

Kantara Movie: ‘ಕಾಂತಾರ 2’ ಸಿನಿಮಾದಲ್ಲಿ ಇರಲಿದ್ದಾರಾ ಮೋಹನ್​ಲಾಲ್?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ6 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ7 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ1 week ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

ಟ್ರೆಂಡಿಂಗ್‌