KPSC Recruitment 2023 : ಹೈಕದ ಗ್ರೂಪ್‌ ಸಿ ಹುದ್ದೆಗಳಿಗೆ ಪರೀಕ್ಷೆ; ಕೀ ಉತ್ತರ ಪ್ರಕಟ - Vistara News

ಉದ್ಯೋಗ

KPSC Recruitment 2023 : ಹೈಕದ ಗ್ರೂಪ್‌ ಸಿ ಹುದ್ದೆಗಳಿಗೆ ಪರೀಕ್ಷೆ; ಕೀ ಉತ್ತರ ಪ್ರಕಟ

ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ಹೈದರಾಬಾದ್‌ ಕರ್ನಾಟಕ ವೃಂದದ ಗ್ರೂಪ್‌ ʻಸಿʼ ಹುದ್ದೆಗಳಿಗೆ (KPSC Recruitment 2023) ಮಾ. 19 ರಂದು ನಡೆಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರವನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

VISTARANEWS.COM


on

KPSC Key answers
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ಒಟ್ಟು ಮೂರು ಅಧಿಸೂಚನೆಗಳಿಗೆ (KPSC Recruitment 2023) ಸಂಬಂಧಿಸಿದಂತೆ, ಹೈದರಾಬಾದ್‌ ಕರ್ನಾಟಕ ವೃಂದದ ಗ್ರೂಪ್‌ ʻಸಿʼ ಹುದ್ದೆಗಳಿಗೆ ಮಾ.19 ರಂದು ನಡೆಸಿದ್ದ ಪರೀಕ್ಷೆಯ ಕೀ ಉತ್ತರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಪ್ರತಿಯೊಂದು ಪ್ರಶ್ನೆಗೂ ಒಂದು ಅಂಕ ನಿಗದಿಯಾಗಿದ್ದು, ಅಭ್ಯರ್ಥಿಗಳು ತಪ್ಪು ಉತ್ತರ ಗುರುತಿಸಿದ್ದರೆ 1/4 (0.25) ಅಂಕ ಕಳೆಯಲಾಗುತ್ತದೆ ಎಂದು ಕೆಪಿಎಸ್‌ಸಿಯು ತಿಳಿಸಿದೆ. ಮಾ.19 ರಂದು ಪತ್ರಿಕೆ-1 ಮತ್ತು ಪತ್ರಿಕೆ-2 ರ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆ ನಡೆದ ಮಾರನೇ ದಿನವೇ ಅಂದರೆ ಮಾ.20 ರಂದೇ ಕೀ ಉತ್ತರ ಪ್ರಕಟಿಸಲಾಗಿದೆ. ಎರಡೂ ಪತ್ರಿಕೆಗಳ ಕೀ ಉತ್ತರಗಳನ್ನು ಪ್ರತ್ಯೇಕವಾಗಿ ನೀಡಲಾಗಿದೆ. ಈ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದ್ದು, ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿಯೇ ಆಕ್ಷೇಪಣೆ ಸಲ್ಲಿಸಬೇಕಿರುತ್ತದೆ. ಆಕ್ಷೇಪಣೆಯ ಮಾದರಿಯನ್ನು ಆಯೋಗದ ವೆಬ್‌ಸೈಟ್‌ನಲ್ಲಿ ನೀಡಲಾಗಿದೆ.

ಕೀ ಉತ್ತರವನ್ನು ನೋಡಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ಆಸಕ್ತರು ಪ್ರಮಾಣೀಕೃತ ಪುಸ್ತಕ, ದಾಖಲೆಗಳೊಂದಿಗೆ ತಮ್ಮ ಆಕ್ಷೇಪಣೆಯನ್ನು ಮಾರ್ಚ್‌ 27ರ ಒಳಗೆ ಆಯೋಗದ ಕಚೇರಿಗೆ ಸಲ್ಲಿಸಬೇಕೆಂದು ಸೂಚಿಸಲಾಗಿದೆ. ಒಂದು ಆಕ್ಷೇಪಣೆಗೆ 50 ರೂ. ಶುಲ್ಕವನ್ನು ಪಾವತಿಸಬೇಕಿರುತ್ತದೆ. ಡಿಡಿಯ ಮೂಲಕ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಹಾಯಕ ಸಾಂಖ್ಯಿಕ ಅಧಿಕಾರಿ -5, ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕ ನಿರೀಕ್ಷಕರು -6, ಆರ್ಥಿಕ ಮತ್ತು ಸಾಂಖ್ಯೆಕ ನಿರ್ದೇಶನಾಲಯದಲ್ಲಿನ ಸಾಂಖ್ಯಿಕ ನಿರೀಕ್ಷಕರ 17 ಹುದ್ದೆಗಳಿಗೆ ಈ ಪರೀಕ್ಷೆ ನಡೆಸಲಾಗಿತ್ತು.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ : https://kpsc.kar.nic.in

ಇದನ್ನೂ ಓದಿ : KMF TUMUL Recruitment 2023 : ಹಾಲು ಒಕ್ಕೂಟದಲ್ಲಿ 219 ಹುದ್ದೆ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Tata Consultancy Services: ಮನೆಯಿಂದಲೇ ಕೆಲಸ ಮಾಡುವವರಿಗೆ ಬೋನಸ್‌, ಟಿವಿಪಿ ಕಟ್‌ ಮಾಡಿದ ಟಿಸಿಎಸ್!

Tata Consultancy Services: ವರ್ಕ್ ಫ್ರಮ್ ಹೋಮ್ ಕಡಿತಗೊಳಿಸಿರುವ ಟಿಸಿಎಸ್ ಕಚೇರಿಯಲ್ಲಿ ಕೆಲಸ ಮಾಡುವುದನ್ನು ಕಡ್ಡಾಯಗೊಳಿಸಿದೆ. ಅಲ್ಲದೇ ಕಚೇರಿ ಹಾಜರಾತಿ ಕಡಿಮೆಯಾದರೆ ಅಂತವರಿಗೆ ಬೋನಸ್ ಕಡಿತಗೊಳಿಸುವುದಾಗಿ ಹೇಳಿದೆ.

VISTARANEWS.COM


on

By

Tata Consultancy Services
Koo

ಹೊಸದಿಲ್ಲಿ: ಮೂರು ತಿಂಗಳಲ್ಲಿ ಕಚೇರಿಯಲ್ಲಿ ಉದ್ಯೋಗಿಗಳ ಹಾಜರಾತಿ (attendance in office) ಶೇ. 60ಕ್ಕಿಂತ ಕಡಿಮೆ ಇರಬಾರದು. ಒಂದು ವೇಳೆ ಶೇ. 60ಕ್ಕಿಂತ ಯಾವುದೇ ಉದ್ಯೋಗಿಯ ಹಾಜರಾತಿ ಕಡಿಮೆಯಾದರೆ ಅಂಥವರು ಬೋನಸ್ ಗೆ (quarterly bonus) ಅರ್ಹರಾಗಿರುವುದಿಲ್ಲ ಎಂದು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (Tata Consultancy Services) ತಿಳಿಸಿದೆ.

ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ತನ್ನ ಉದ್ಯೋಗಿಗಳಿಗೆ ಕಚೇರಿಯಲ್ಲಿನ ಹಾಜರಾತಿಯೊಂದಿಗೆ ತ್ರೈಮಾಸಿಕ ವೇರಿಯಬಲ್ ಪಾವತಿಯನ್ನು ಲಿಂಕ್ ಮಾಡಿದೆ. ಈ ಹೊಸ ನೀತಿಯ ಅಡಿಯಲ್ಲಿ ಶೇ. 60ಕ್ಕಿಂತ ಕಡಿಮೆ ಕಚೇರಿಯ ಹಾಜರಾತಿ ಹೊಂದಿರುವ ಉದ್ಯೋಗಿಗಳು ಬೋನಸ್‌ಗೆ ಅರ್ಹರಾಗಿರುವುದಿಲ್ಲ. ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಅವರು ಪೂರ್ಣ ತ್ರೈಮಾಸಿಕ ವೇರಿಯಬಲ್ ವೇತನವನ್ನು ಪಡೆಯಲು ಉದ್ಯೋಗಿಗಳಿಂದ ಕಚೇರಿಯಲ್ಲಿ ಕನಿಷ್ಠ ಶೇ. 85ರಷ್ಟು ಹಾಜರಾತಿಯನ್ನು ನಿರೀಕ್ಷಿಸುತ್ತಿದೆ ಎಂದು ತಿಳಿಸಿದೆ.

ಇತ್ತೀಚಿನ ಅಪ್‌ಡೇಟ್‌ ಗಳ ಪ್ರಕಾರ, ಐಟಿ ಸೇವೆಗಳ ದೈತ್ಯ ಕಂಪನಿಗಳು ಉದ್ಯೋಗಿಗಳನ್ನು ವಾರದಲ್ಲಿ ಐದು ದಿನ ಕಚೇರಿಯಿಂದ ಕೆಲಸ ಮಾಡಲು ಕಡ್ಡಾಯಗೊಳಿಸಿದೆ. ಈ ಆದೇಶ ಬಂದ ಕೆಲವು ತಿಂಗಳುಗಳ ಅನಂತರ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ತನ್ನ ಉದ್ಯೋಗಿಗಳಿಗೆ ಅವರ ಕಚೇರಿಯಲ್ಲಿ ಹಾಜರಾತಿಯೊಂದಿಗೆ ತ್ರೈಮಾಸಿಕ ವೇರಿಯಬಲ್ ಪೇ ಔಟ್ ಅನ್ನು ಲಿಂಕ್ ಮಾಡಿದೆ.

ಇದನ್ನೂ ಓದಿ: Job News: ಆಪಲ್ ನಿಂದ ಭಾರತದಲ್ಲಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ!

ಈ ಬದಲಾವಣೆಗಳನ್ನು ಉದ್ಯೋಗಿಗಳಿಗೆ ತಿಳಿಸಲು ಆಂತರಿಕ ಮಾನವ ಸಂಪನ್ಮೂಲ ಪೋರ್ಟಲ್‌ನಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ತನ್ನ ನೀತಿಯನ್ನು ಇತ್ತೀಚೆಗೆ ನವೀಕರಿಸಿದೆ ಎಂದು ಮೂಲಗಳು ತಿಳಿಸಿವೆ.

ಕಂಪೆನಿಯ ಪೂರ್ಣ ತ್ರೈಮಾಸಿಕ ವೇರಿಯಬಲ್ ವೇತನವನ್ನು ಪಡೆಯಲು ಕಚೇರಿಯಲ್ಲಿ ಕನಿಷ್ಠ ಶೇ. 85ರಷ್ಟು ಉದ್ಯೋಗಿಗಳ ಹಾಜರಾತಿಯನ್ನು ನಿರೀಕ್ಷಿಸುತ್ತಿದೆ. ಅಲ್ಲದೆ, ಇದನ್ನು ನಿರಂತರವಾಗಿ ಅನುಸರಿಸದಿರುವುದು ಶಿಸ್ತು ಕ್ರಮಗಳನ್ನು ತೆಗೆದುಕೊಳ್ಳುವುದಕ್ಕೆ ಕಾರಣವಾಗಬಹುದು ಎನ್ನಲಾಗಿದೆ.


ಹೆಚ್ಚು ಹಾಜರಾತಿಗೆ ಪ್ರೋತ್ಸಾಹ

ಕಚೇರಿ ಹಾಜರಾತಿಯಿಂದ ಶೇ. 75- 85ರಷ್ಟು ಕೆಲಸ ಮಾಡುವ ನೌಕರರು ತಮ್ಮ ವೇರಿಯಬಲ್ ವೇತನದ ಶೇ. 75ರಷ್ಟನ್ನು ಪಡೆಯುತ್ತಾರೆ ಮತ್ತು ಶೇ. 60- 75 ರಷ್ಟು ಹಾಜರಾತಿ ಹೊಂದಿರುವವರು ತಮ್ಮ ವೇರಿಯಬಲ್ ವೇತನದ ಶೇ. 50ರಷ್ಟನ್ನು ಮಾತ್ರ ಪಡೆಯುತ್ತಾರೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ನ ಸಿಇಒ ಮತ್ತು ಎಂಡಿ ಕೆ. ಕೃತಿವಾಸನ್ ಅವರು ಮಾರ್ಚ್ 31ಕ್ಕೆ ಕೊನೆಗೊಂಡ ನಾಲ್ಕನೇ ತ್ರೈಮಾಸಿಕದಲ್ಲಿ ಹೆಚ್ಚಿನ ಉದ್ಯೋಗಿಗಳು ಕೆಲಸದ ಸ್ಥಳಕ್ಕೆ ಮರಳಿದ್ದಾರೆ. ಕೆಲಸ ಹಂಚಿಕೆಯ ಅನುಭವಗಳನ್ನು ಸೃಷ್ಟಿಸಿದ್ದಾರೆ. ಹೆಚ್ಚಿನ ಕಲಿಕೆ, ಸಹಯೋಗ ಮತ್ತು ಬೆಳವಣಿಗೆಯನ್ನು ಮಾಡಿದ್ದಾರೆ. ಕಂಪೆನಿಯಲ್ಲಿ ಸೌಹಾರ್ದತೆ ಹೆಚ್ಚಾಗಿದೆ . ನಾವು ವೇಗವನ್ನು ಹೆಚ್ಚಿಸಿದಾಗ ನಾವು ಒಟ್ಟಿಗೆ ಅನೇಕ ಹೊಸ ಅವಕಾಶಗಳನ್ನು ತೆರೆಯುತ್ತೇವೆ ಎಂಬುದರಲ್ಲಿ ನನಗೆ ಸಂದೇಹವಿಲ್ಲ ಎಂದು ಹೇಳಿದ್ದರು.

ಫೆಬ್ರವರಿಯಲ್ಲಿ ಆದೇಶ

ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಈ ಹಿಂದೆ ಹೈಬ್ರಿಡ್ ವರ್ಕ್ ಮಾಡೆಲ್ ಪೋಸ್ಟ್ ಸಾಂಕ್ರಾಮಿಕ ರೋಗವನ್ನು ಅನುಸರಿಸುತ್ತಿತ್ತು, ಇದು 2023ರ ಅಕ್ಟೋಬರ್ 1ರಿಂದ ಕೊನೆಗೊಂಡಿತು. ಉದ್ಯೋಗಿಗಳನ್ನು ವಾರದಲ್ಲಿ ಐದು ದಿನ ಕಚೇರಿಯಿಂದ ಕೆಲಸ ಮಾಡಲು ಕೇಳುತ್ತಿದೆ. ಫೆಬ್ರವರಿಯಲ್ಲಿ, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ನೌಕರರಿಗೆ ಇಮೇಲ್ ಕಳುಹಿಸಿದ್ದು, ಅವರ ವೇರಿಯಬಲ್ ವೇತನವನ್ನು ಶೀಘ್ರದಲ್ಲೇ ಅವರ ಕಚೇರಿ ಸೈಟ್‌ನಲ್ಲಿ ಅವರ ಹಾಜರಾತಿಗೆ ಲಿಂಕ್ ಮಾಡಲಾಗುತ್ತದೆ ಎಂದು ತಿಳಿಸಿತು.

Continue Reading

ಉದ್ಯೋಗ

Job Alert: ಎನ್‌ಬಿಸಿಸಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

Job Alert: ಒಂದೊಳ್ಳೆ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ನ್ಯಾಷನಲ್ ಬಿಲ್ಡಿಂಗ್ಸ್ ಕನ್​​ಸ್ಟ್ರಕ್ಷನ್​​ ಕಾರ್ಪೊರೇಷನ್ ಲಿಮಿಟೆಡ್‌ ತನ್ನಲ್ಲಿ ಖಾಲಿ ಇರುವ ವಿವಿಧ 92 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪದವಿ, ಡಿಪ್ಲೋಮಾ ಓದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 7.

VISTARANEWS.COM


on

Job Alert
Koo

ನವದೆಹಲಿ: ಒಂದೊಳ್ಳೆ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ನ್ಯಾಷನಲ್ ಬಿಲ್ಡಿಂಗ್ಸ್ ಕನ್​​ಸ್ಟ್ರಕ್ಷನ್​​ ಕಾರ್ಪೊರೇಷನ್ ಲಿಮಿಟೆಡ್‌ (National Buildings Construction Corporation Limited) ಸಂಸ್ಥೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (NBCC Recruitment 2024). ಜನರಲ್‌ ಮ್ಯಾನೇಜರ್‌, ಸೀನಿಯರ್‌ ಪ್ರಾಜೆಕ್ಟ್‌ ಎಕ್ಸಿಕ್ಯೂಟಿವ್‌ ಸೇರಿ 92 ಹುದ್ದೆಗಳಿವೆ. ಪದವಿ, ಡಿಪ್ಲೋಮಾ ಓದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 7 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಜನರಲ್ ಮ್ಯಾನೇಜರ್ – 3 ಹುದ್ದೆ, ವಿದ್ಯಾರ್ಹತೆ: ಬಿಇ/ ಬಿ.ಟೆಕ್‌ ಇನ್ ಸಿವಿಲ್ / ಇಇಇ / ಮೆಕ್ಯಾನಿಕಲ್
ಹೆಚ್ಚುವರಿ ಜನರಲ್ ಮ್ಯಾನೇಜರ್ – 1 ಹುದ್ದೆ, ವಿದ್ಯಾರ್ಹತೆ: ಸಿಎ, ಐಸಿಡಬ್ಲ್ಯುಎ, ಪದವಿ, ಎಂಬಿಎ, ಪಿಜಿಡಿಎಂ
ಡೆಪ್ಯುಟಿ ಜನರಲ್ ಮ್ಯಾನೇಜರ್ – 1 ಹುದ್ದೆ, ವಿದ್ಯಾರ್ಹತೆ: ಪದವಿ, ಸಿವಿಲ್‌ನಲ್ಲಿ ಬಿಇ/ ಬಿ.ಟೆಕ್‌
ಮ್ಯಾನೇಜರ್ – 2 ಹುದ್ದೆ, ವಿದ್ಯಾರ್ಹತೆ: ಪದವಿ
ಪ್ರಾಜೆಕ್ಟ್ ಮ್ಯಾನೇಜರ್ – 3 ಹುದ್ದೆ, ವಿದ್ಯಾರ್ಹತೆ: ಬಿಇ/ ಬಿ.ಟೆಕ್‌ ಇನ್ ಸಿವಿಲ್/ ಇಇಇ/ ಮೆಕ್ಯಾನಿಕಲ್
ಡೆಪ್ಯುಟಿ ಮ್ಯಾನೇಜರ್ – 6 ಹುದ್ದೆ, ವಿದ್ಯಾರ್ಹತೆ: ಎಂಬಿಎ, ಎಂಎಸ್‌ಡಬ್ಲ್ಯು, ಸ್ನಾತಕೋತ್ತರ ಪದವಿ
ಡೆಪ್ಯುಟಿ ಪ್ರಾಜೆಕ್ಟ್ ಮ್ಯಾನೇಜರ್ – 2 ಹುದ್ದೆ, ವಿದ್ಯಾರ್ಹತೆ: ಬಿಇ/ ಬಿ.ಟೆಕ್‌ ಇನ್ ಸಿವಿಲ್/ ಇಇಇ/ ಮೆಕ್ಯಾನಿಕಲ್
ಸೀನಿಯರ್ ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ – 30 ಹುದ್ದೆ, ವಿದ್ಯಾರ್ಹತೆ: ಬಿಇ/ ಬಿ.ಟೆಕ್‌ ಇನ್ ಸಿವಿಲ್
ಮ್ಯಾನೇಜ್‌ಮೆಂಟ್‌ ಟ್ರೈನಿ – 4 ಹುದ್ದೆ, ವಿದ್ಯಾರ್ಹತೆ: ಎಲ್‌ಎಲ್‌ಬಿ
ಕಿರಿಯ ಎಂಜಿನಿಯರ್ – 40 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 49 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಲಭ್ಯ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ, ಎಸ್‌ಟಿ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 1,000 ರೂ. ಪಾವತಿಸಬೇಕು. ಇದನ್ನು ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ. ಕಂಪ್ಯೂಟರ್‌ ಬೇಸ್ಡ್‌ ಟೆಸ್ಟ್‌ (CBT), ಡಾಕ್ಯುಮೆಂಟ್‌ ಪರಿಶೀಲನೆ, ಸಂದರ್ಶನ ಮುಂತಾದ ವಿಧಾನಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
  • ನಿಮ್ಮ ಫೋನ್‌ ನಂಬರ್‌, ಇ-ಮೇಲ್‌ ಐಡಿ ಮುಂತಾದ ಮಾಹಿತಿ ನೀಡುವ ಮೂಲಕ ಹೆಸರು ನೋಂದಾಯಿಸಿ.
  • ನಿಮ್ಮ ಫೋನ್‌ ನಂಬರ್‌ / ಇ-ಮೇಲ್‌ಗೆ ಕೋಡ್‌ ರವಾನೆಯಾಗುತ್ತದೆ.
  • ಇದನ್ನು ಬಳಿಸಿ ಅಪ್ಲಿಕೇಷನ್‌ ಫಾರಂ ಓಪನ್‌ ಮಾಡಿ.
  • ವೈಯಕ್ತಿಕ ಮಾಹಿತಿ, ಶೈಕ್ಷಣಿಕ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಪಾಸ್‌ಪೋರ್ಟ್‌ ಫೋಟೊ, ಸಹಿಯನ್ನು ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಉದ್ಯೋಗ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಬಿಬಿಎಂಪಿಯಿಂದ ಬರೋಬ್ಬರಿ 11,307 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Continue Reading

ಉದ್ಯೋಗ

Job News: ಆಪಲ್ ನಿಂದ ಭಾರತದಲ್ಲಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ!

Hiring to Apple: ವಿಶ್ವದ ಅತಿ ದೊಡ್ಡ ಐಫೋನ್ ತಯಾರಿಕಾ ಸಂಸ್ಥೆ ಭಾರತದಲ್ಲಿ ತನ್ನ ಮಾರಾಟವನ್ನು ಹೆಚ್ಚಿಸಲು ಯೋಜನೆ ರೂಪಿಸಿದ್ದು, ಇದಕ್ಕಾಗಿ ಮುಂದಿನ ಮೂರು ವರ್ಷಗಳಲ್ಲಿ ಹೆಚ್ಚಿನ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವ ಸಾಧ್ಯತೆ ಇದೆ. ಯುವ ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ ಇಲ್ಲಿದೆ.

VISTARANEWS.COM


on

By

Hiring to Apple
Koo

ನವದೆಹಲಿ: ವಿಶ್ವದ ಅತಿದೊಡ್ಡ ಐಫೋನ್ (iphone) ತಯಾರಕ(Job News) ಆಪಲ್ ಕಂಪನಿ (apple compeny) ಮುಂದಿನ ಮೂರು ವರ್ಷಗಳಲ್ಲಿ ಭಾರತದಲ್ಲಿ (india) 5,00,000 ಕ್ಕೂ ಹೆಚ್ಚು ಮಂದಿಗೆ ಉದ್ಯೋಗ (job) ನೀಡುವ ನಿರೀಕ್ಷೆಯಿದೆ. ಪ್ರಸ್ತುತ ಆಪಲ್‌ (Hiring to Apple) ಮಾರಾಟಗಾರರು ಮತ್ತು ಪೂರೈಕೆದಾರರಾಗಿ ಭಾರತದಲ್ಲಿ 1,50,000 ಮಂದಿಯನ್ನು ನೇಮಿಸಿಕೊಂಡಿದೆ.

ಕೋವಿಡ್ -19 (covid-19) ಸಾಂಕ್ರಾಮಿಕದ ಬಳಿಕ ಐಫೋನ್ ಮತ್ತು ಇತರ ಗ್ಯಾಜೆಟ್‌ಗಳ ಉತ್ಪಾದನೆಯ ಮೇಲೆ ತೀವ್ರ ಪರಿಣಾಮ ಬೀರಿದೆ. ಭಾರಿ ತೊಂದರೆಗಳನ್ನು ಎದುರಿಸಿದ ಬಳಿಕ ಆಪಲ್ ಈಗ ಚೀನಾದಿಂದ (china) ತನ್ನ ಉತ್ಪಾದನಾ ನೆಲೆಯನ್ನು ಬೇರೆಬೇರೆ ಕಡೆಗಳಲ್ಲಿ ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಇದರ ಭಾಗವಾಗಿ ಆಪಲ್ ಭಾರತದಲ್ಲಿ ಅತಿ ದೊಡ್ಡ ಘಟಕವನ್ನು ಸ್ಥಾಪಿಸುವ ಗುರಿ ಹೊಂದಿದೆ.

ಭಾರತದಲ್ಲಿ ಶಾಶ್ವತ ಘಟಕ ಸ್ಥಾಪನೆಗೆ ಐಫೋನ್ ತಯಾರಕ ಕಂಪೆನಿ ಆಪಲ್ ಮುಂದಾಗಿದ್ದು, ಇದಕ್ಕಾಗಿ ವೇಗವಾಗಿ ಕಾರ್ಯಾಚರಣೆ ನಡೆಸುತ್ತಿದೆ. ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ ಇದಕ್ಕೆ ಪೂರಕವಾಗಿ ಭಾರತದಲ್ಲಿ ಹೆಚ್ಚಿನ ಉದ್ಯೋಗಿಗಳ ನೇಮಕಕ್ಕೆ ಮುಂದಾಗಿದೆ. ಕಂಪೆನಿಯು ತನ್ನ ಸಿಬ್ಬಂದಿಗೆ ವಸತಿ ಯೋಜನೆಗಳನ್ನು ಮಾಡುತ್ತಿದೆ ಮತ್ತು ಹೆಚ್ಚು ಹೆಚ್ಚು ನೇಮಕ ಮಾಡುವತ್ತ ಗಮನ ಹರಿಸುತ್ತಿದೆ.

ಇದನ್ನೂ ಓದಿ: Job News: ಕೆಪಿಎಸ್‌ಸಿಯ 1 ಹುದ್ದೆಗೆ ಸರಾಸರಿ 508 ಅರ್ಜಿ ಸಲ್ಲಿಕೆ; ಒಟ್ಟು 1.95 ಲಕ್ಷ ಅಭ್ಯರ್ಥಿಗಳಿಂದ ಅಪ್ಲಿಕೇಷನ್‌

5 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ

ಆಪಲ್‌ನ ಅತಿದೊಡ್ಡ ಉದ್ಯೋಗ ಉತ್ಪಾದಕವೆಂದರೆ ಟಾಟಾ ಎಲೆಕ್ಟ್ರಾನಿಕ್ಸ್. ಅದಕ್ಕಾಗಿ ಎರಡು ಸ್ಥಾವರಗಳನ್ನು ಸ್ಥಾಪಿಸುತ್ತಿದ್ದು, ಮುಂದಿನ ಮುಂದಿನ ಮೂರು ವರ್ಷಗಳಲ್ಲಿ ಆಪಲ್ ತನ್ನ ಮಾರಾಟಗಾರರ ಮೂಲಕ ಭಾರತದಲ್ಲಿ 5,00,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುವ ಸಾಧ್ಯತೆ ಇದೆ ಎಂದು ಸುದ್ದಿ ಸಂಸ್ಥೆ ಪಿಟಿಐ ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಆಪಲ್ ಭಾರತದಲ್ಲಿ ನೇಮಕಾತಿಯನ್ನು ವೇಗಗೊಳಿಸುತ್ತಿದೆ. ಅಂದಾಜಿನ ಪ್ರಕಾರ ಅದರ ಮಾರಾಟಗಾರರು ಮತ್ತು ಘಟಕಗಳ ಪೂರೈಕೆದಾರರ ಮೂಲಕ ಮುಂದಿನ ಮೂರು ವರ್ಷಗಳಲ್ಲಿ ಐದು ಲಕ್ಷ ಜನರಿಗೆ ಉದ್ಯೋಗ ನೀಡಲಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉತ್ಪಾದನೆ ಹೆಚ್ಚಿಸಲು ಕ್ರಮ

ಭಾರತದಲ್ಲಿ ಆಪಲ್ ತನ್ನ ಉತ್ಪಾದನೆಯನ್ನು ಸುಮಾರು 5 ಪಟ್ಟು ಹೆಚ್ಚಿಸಲು ಬಯಸುತ್ತಿದೆ. ಮುಂದಿನ 4- 5 ವರ್ಷಗಳ ಯೋಜನೆಗೆ 40 ಶತಕೋಟಿ ಡಾಲರ್‌ ಅಂದರೆ ಸುಮಾರು 3.32 ಲಕ್ಷ ಕೋಟಿ ವಿನಿಯೋಗಿಸಲು ಸಜ್ಜಾಗಿದೆ.
ಮೂಲಸೌಕರ್ಯ ಮತ್ತು ಉದ್ಯೋಗಿಗಳಿಗಾಗಿ ಹೆಚ್ಚು ಖರ್ಚು ಮಾಡಲು ಮುಂದಾಗಿರುವ ಆಪಲ್ ಪ್ರತಿಸ್ಪರ್ಧಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದೆ.

ಅಗ್ರಸ್ಥಾನದಲ್ಲಿ ಸ್ಯಾಮ್‌ಸಂಗ್

ಮಾರುಕಟ್ಟೆ ಸಂಶೋಧನಾ ಸಂಸ್ಥೆ ಕೌಂಟರ್‌ಪಾಯಿಂಟ್ ರಿಸರ್ಚ್ ಆಪಲ್ ಹೇಳುವಂತೆ ಮೊದಲ ಬಾರಿಗೆ 2023 ರಲ್ಲಿ ಭಾರತದ ಮಾರುಕಟ್ಟೆಯನ್ನು ಅತ್ಯಧಿಕ ಆದಾಯದೊಂದಿಗೆ ಮುನ್ನಡೆಸಿದೆ. ಆದರೂ ಸ್ಯಾಮ್‌ಸಂಗ್ ಮಾರಾಟದ ವಿಷಯದಲ್ಲಿ ಇನ್ನೂ ಅಗ್ರಸ್ಥಾನದಲ್ಲಿದೆ. ಆಪಲ್ 10 ಮಿಲಿಯನ್ ಯೂನಿಟ್ ಮಾರ್ಕ್ ಅನ್ನು ಸಾಧಿಸಿದೆ.

ಐಫೋನ್ ರಫ್ತು ಏರಿಕೆ

ಭಾರತದಿಂದ ಆಪಲ್‌ನ ಐಫೋನ್ ರಫ್ತು 2022- 23 ರಲ್ಲಿ 6.27 ಶತಕೋಟಿ ಡಾಲರ್ ನಿಂದ 2023- 24 ರಲ್ಲಿ 12.1 ಶತಕೋಟಿ ಡಾಲರ್ ಗೆ ಏರಿದೆ. ಇದು ಸುಮಾರು 100 ಪ್ರತಿಶತದಷ್ಟು ದೊಡ್ಡ ಜಿಗಿತವಾಗಿತ್ತು ಎಂದು ಟ್ರೇಡ್ ಇಂಟೆಲಿಜೆನ್ಸ್ ಪ್ಲಾಟ್‌ಫಾರ್ಮ್ ದಿ ಟ್ರೇಡ್ ವಿಷನ್ ಅಂಕಿಅಂಶಗಳು ತಿಳಿಸಿದೆ.

Continue Reading

ಶಿಕ್ಷಣ

Which is best after SSLC: ಎಸ್‌ಎಸ್ಎಲ್‌ಸಿ ನಂತರ ಮುಂದೇನು? ಇಲ್ಲಿದೆ ಉಪಯುಕ್ತ ಮಾಹಿತಿ

Which is best after SSLC: ಅವಕಾಶಗಳು ಕೆಲವೊಮ್ಮೆ ನಮ್ಮ ಮನೆ ಬಾಗಿಲು ಬಡಿಯುತ್ತದೆ. ಆಗ ಅದನ್ನು ತೆರೆದು ಮುಕ್ತವಾಗಿ ಸ್ವಾಗತಿಸಬೇಕಾದರೆ ನಾವು ಚೆನ್ನಾಗಿ ಸಿದ್ಧರಾಗಿರುವುದು ಬಹು ಮುಖ್ಯ. ಇದಕ್ಕಾಗಿ ಸರಿಯಾದ ಯೋಜನೆ ಹಾಕಿಕೊಳ್ಳಲು ಮತ್ತು ನಮ್ಮ ಸುಂದರ ಭವಿಷ್ಯವನ್ನು ರೂಪಿಸಲು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಈಗ ಸರಿಯಾದ ಸಮಯ. ಎಸ್ ಎಸ್ ಎಲ್ ಸಿ ಬಳಿಕ ಮುಂದೇನು ಮತ್ತೆ ಯಾಕೆ, ಹೇಗೆ ಎಂಬುದನ್ನು ಮೊದಲು ನಿಮ್ಮನ್ನು ನೀವು ಕೇಳಿಕೊಳ್ಳಿ. ಈ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

By

After SSLC
Koo

ಎಸ್ ಎಸ್ ಎಲ್ ಸಿ ಫಲಿತಾಂಶದ (sslc result) ನಿರೀಕ್ಷೆಯಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳ (students) ಮನದಲ್ಲಿ ಈಗ ಮುಂದೇನು (Which is best After SSLC) ಎನ್ನುವ ಚಿಂತೆಯಂತೂ (tension) ಕಾಡುತ್ತಿದೆ. ಕೆಲವರು ಈಗಾಗಲೇ ತಮ್ಮ ಗುರಿಯನ್ನು (life goal) ನಿರ್ಧರಿಸಿದ್ದರೆ, ಇನ್ನು ಕೆಲವರು ಗೊಂದಲದಲ್ಲಿದ್ದಾರೆ. ಈ ಸಂದರ್ಭದಲ್ಲಿ ಮನೆ ಮಂದಿಯೂ ಚಿಂತಾಕ್ರಾಂತರಾಗಿರುತ್ತಾರೆ. ಮಕ್ಕಳ ಸುಭದ್ರ ಭವಿಷ್ಯಕ್ಕಾಗಿ ಅವರು ತಮ್ಮ ಅನುಭವದ ಆಧಾರದಲ್ಲಿ ಹಲವು ಸಲಹೆಗಳನ್ನು ನೀಡುತ್ತಾರೆ.

ಎಸ್ ಎಸ್ ಎಲ್ ಸಿ ಅನಂತರ ಮುಂದೇನು? ವಿಜ್ಞಾನ, ವಾಣಿಜ್ಯ ಅಥವಾ ಕಲೆ ಇವುಗಳಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳಬೇಕು ? ಎನ್ನುವ ಪ್ರಶ್ನೆಗಳು ಮನದಲ್ಲಿ ಉದ್ಭವಿಸುವುದು ಸಹಜ. ಯಾವುದೇ ವಿಷಯವನ್ನು ಬೇಕಾದರೂ ಆಯ್ದುಕೊಳ್ಳಿ. ಆದರೆ ಅದಕ್ಕೂ ಮೊದಲು ವೃತ್ತಿ ಜೀವನದ ಗುರಿ ಏನು ಎಂಬುದನ್ನು ನಿರ್ಧರಿಸಿ ಮತ್ತು ಅದಕ್ಕೆ ಸೂಕ್ತವಾದ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಿ.

ಎಸ್ ಎಸ್ ಎಲ್ ಸಿ ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದಲ್ಲಿ ಒಂದು ಪ್ರಮುಖ ಘಟ್ಟವಾಗಿದೆ. ಮುಂದೇನಾಗಬೇಕು ಎಂಬುದನ್ನು ಸ್ಪಷ್ಟವಾಗಿ ನಿರ್ಧರಿಸಲು ಸೂಕ್ತ ಸಮಯ. ವೃತ್ತಿಜೀವನಕ್ಕೆ ಸುಲಭವಾಗಿ ಪ್ರವೇಶಿಸಲು ನೂರಾರು ಅವಕಾಶಗಳು ಈ ಸಂದರ್ಭದಲ್ಲಿ ಕಾಣಿಸಿಕೊಳ್ಳುತ್ತದೆ. ಆಗ ಗೊಂದಲಗಳಾಗುವುದು ಸಹಜ. ಇದನ್ನು ನಿವಾರಿಸಲು ಇಲ್ಲಿರುವ ಪ್ರಮುಖ ಅಂಶಗಳು ನಿಮಗೆ ಸಹಾಯ ಮಾಡಬಹುದು ಮತ್ತು ಉತ್ತಮ ವೃತ್ತಿ ಮಾರ್ಗಕ್ಕೆ ಮಾರ್ಗದರ್ಶನ ನೀಡಬಹುದು.

ಇದನ್ನೂ ಓದಿ: JEE Main 2024: ವಿದ್ಯಾರ್ಥಿಗಳೇ ಗಮನಿಸಿ; ಏಪ್ರಿಲ್‌ 25ರಂದು ಜೆಇಇ ರಿಸಲ್ಟ್‌, ಹೀಗೆ ಚೆಕ್‌ ಮಾಡಿ

ಪ್ರತಿಯೊಂದು ಕ್ಷೇತ್ರದಲ್ಲೂ ಈಗ ಹೆಚ್ಚಿನ ಅವಕಾಶಗಳಿದೆ. ಆಸಕ್ತಿ, ಯೋಗ್ಯತೆ ಮತ್ತು ಎಸ್ ಎಸ್ ಎಲ್ ಸಿಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಸೂಕ್ತ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಯಾವುದೇ ಕೋರ್ಸ್ ಗಳನ್ನು ಆಯ್ದುಕೊಳ್ಳುವ ಮೊದಲು ನಿಮ್ಮ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ಮೌಲ್ಯಮಾಪನ ಮಾಡಿಕೊಂಡು ವಿಶ್ಲೇಷಣೆ ನಡೆಸಿ. ಜೊತೆಗೆ ವೃತ್ತಿಜೀವನದ ಅವಶ್ಯಕತೆಗಳ ಬಗ್ಗೆ ತಿಳಿದುಕೊಳ್ಳಿ.

ಆಸಕ್ತಿಗಳ ಆಧಾರದಲ್ಲಿ ಕೋರ್ಸ್ ಆಯ್ಕೆ ಮಾಡಿದ ಬಳಿಕ ಸರಿಯಾದ ಕೌಶಲ್ಯ ಮತ್ತು ಸಾಮರ್ಥ್ಯ ಇಲ್ಲದೇ ಇದ್ದರೆ ಭವಿಷ್ಯದಲ್ಲಿ ಅದು ಸಮಸ್ಯೆಯನ್ನು ಉಂಟುಮಾಡಬಹುದು. ಹೀಗಾಗಿ ಯಾವುದೇ ಕೋರ್ಸ್ ಆಯ್ಕೆ ಮಾಡುವ ಮೊದಲು ನಿಮ್ಮ ಸಾಮರ್ಥ್ಯ ಎಷ್ಟಿದೆ ಎಂಬುದನ್ನು ತಿಳಿದುಕೊಳ್ಳುವುದು ಬಹುಮುಖ್ಯವಾಗಿರುತ್ತದೆ. ಯಶಸ್ವಿ ವೃತ್ತಿಜೀವನಕ್ಕಾಗಿ ಉತ್ತಮ ಮಾರ್ಗ ಮತ್ತು ಸರಿಯಾದ ಎಚ್ಚರಿಕೆಯ ಯೋಜನೆ ಅತ್ಯಗತ್ಯ. ಇದಕ್ಕಾಗಿ ವೃತ್ತಿ ಮೌಲ್ಯಮಾಪನಗಳು ಮತ್ತು ವೃತ್ತಿಪರ ವೃತ್ತಿ ಸಲಹೆಗಾರರು ಸೂಕ್ತ ಮಾರ್ಗದರ್ಶನ ನೀಡುತ್ತಾರೆ.

ಆಯ್ಕೆಗಳು ಹಲವಾರು

ಎಸ್ ಎಸ್ ಎಲ್ ಸಿ ಬಳಿಕ ನೂರಾರು ಆಯ್ಕೆಗಳು ನಮ್ಮ ಮುಂದೆ ಇರುತ್ತದೆ. ಸರಿಯಾದ ನಿರ್ಧಾರ ಕೈಗೊಳ್ಳುವ ಮೂಲಕ ಉತ್ತಮ ಭವಿಷ್ಯವನ್ನು ನಾವು ರೂಪಿಸಿಕೊಳ್ಳಬಹುದು.


ವಿಜ್ಞಾನ (PCM/PCB)

ಇತ್ತೀಚಿನ ದಿನಗಳಲ್ಲಿ ವಿಜ್ಞಾನವು ಹೆಚ್ಚಿನವರ ಆಯ್ಕೆ ವಿಷಯವಾಗಿದೆ. ಇದು ವಿದ್ಯಾರ್ಥಿಗಳಿಗೆ ಸಾಕಷ್ಟು ದಾರಿಗಳನ್ನು ತೆರೆಯುತ್ತದೆ ಎನ್ನುವ ನಂಬಿಕೆ ಇದರ ಹಿಂದಿದೆ. ವಿಜ್ಞಾನವನ್ನು ಆಯ್ಕೆ ಮಾಡುವ ವಿದ್ಯಾರ್ಥಿಗಳಿಗೆ 10ನೇ ತರಗತಿಯ ಬಳಿಕ ಇರುವ ದಾರಿಗಳು ಹಲವು.
ಪಿಸಿಎಂ ಅನ್ನು ಅಧ್ಯಯನ ಮಾಡಿದರೆ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸಸ್, ರಕ್ಷಣಾ ಸೇವೆಗಳು, ಮರ್ಚೆಂಟ್ ನೇವಿ ಇತ್ಯಾದಿಗಳಂತಹ ವೃತ್ತಿಗಳಿಗೆ ಹೋಗಬಹುದು.
ಪಿಸಿಬಿ ಅನ್ನು ಅಧ್ಯಯನ ಮಾಡಿದರೆ ಔಷಧ, ಫಿಸಿಯೋಥೆರಪಿ, ಕೃಷಿ, ಪೋಷಣೆ ಮತ್ತು ಆಹಾರ ಪದ್ಧತಿ, ದಂತವೈದ್ಯಶಾಸ್ತ್ರ ಮೊದಲಾದವುಗಳನ್ನು ಆಯ್ಕೆ ಮಾಡಬಹುದು. .
ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಮತ್ತು ಗಣಿತದಂತಹ ಈ ಪ್ರಮುಖ ವಿಷಯಗಳ ಹೊರತಾಗಿ, ಇಂಗ್ಲಿಷ್‌ ಕಡ್ಡಾಯ ಭಾಷಾ ವಿಷಯವಿರುತ್ತದೆ. ಇಲ್ಲಿ ಐದು ಮುಖ್ಯ ವಿಷಯಗಳನ್ನು ಆಯ್ಕೆ ಮಾಡಬೇಕು. ಇವುಗಳ ಜೊತೆಗೆ ಪ್ರಯೋಗಾಲಯಗಳಲ್ಲಿ ಪ್ರಾಯೋಗಿಕ ತರಬೇತಿಯನ್ನೂ ಪಡೆಯಬೇಕಾಗುತ್ತದೆ.


ವಾಣಿಜ್ಯ

ಸ್ವಂತ ವ್ಯವಹಾರ ನಡೆಸಲು ಆಸಕ್ತಿ ಇರುವವರಿಗೆ, ಹಣಕಾಸು ವೃತ್ತಿಯಲ್ಲಿ ತೊಡಗಬೇಕು ಎನ್ನುವವರಿಗೆ ಅರ್ಥಶಾಸ್ತ್ರ ಮತ್ತು ಗಣಿತ ಉತ್ತಮ ಆಯ್ಕೆ. ವಾಣಿಜ್ಯ ಶಾಸ್ತ್ರದ ಪ್ರಮುಖ ವಿಷಯಗಳೆಂದರೆ ಅಕೌಂಟೆನ್ಸಿ, ಅರ್ಥಶಾಸ್ತ್ರ ಮತ್ತು ವ್ಯವಹಾರ ಅಧ್ಯಯನಗಳು. ಕಡ್ಡಾಯ ಭಾಷಾ ವಿಷಯವನ್ನು ಇದರೊಂದಿಗೆ ಅಧ್ಯಯನ ಮಾಡಬೇಕು. ವಾಣಿಜ್ಯ ವಿದ್ಯಾರ್ಥಿಗಳಿಗೆ 10ನೇ ತರಗತಿ ಅನಂತರ ಚಾರ್ಟರ್ಡ್ ಅಕೌಂಟೆನ್ಸಿ, ಬ್ಯಾಂಕಿಂಗ್, ವಿಮೆ, ಹಣಕಾಸು, ಸ್ಟಾಕ್ ಬ್ರೋಕಿಂಗ್, ಹಣಕಾಸು ಮೊದಲಾದ ವೃತ್ತಿ ಆಯ್ಕೆಗೆ ಅವಕಾಶಗಳಿರುತ್ತವೆ.


ಕಲೆ, ಮಾನವಶಾಸ್ತ್ರ

ಸೃಜನಶೀಲರಾಗಿದ್ದರೆ, ಬಲವಾದ ಸಂವಹನ ಕೌಶಲಗಳನ್ನು ಹೊಂದಿದ್ದರೆ ಮತ್ತು ಶೈಕ್ಷಣಿಕ ಸಂಶೋಧನೆಯನ್ನು ಮುಂದುವರಿಸಲು ಬಯಸಿದರೆ ಇದು ಸರಿಯಾದ ಆಯ್ಕೆಯಾಗಿದೆ.
ಕಲೆಯಲ್ಲಿ ನೀಡಲಾಗುವ ಪ್ರಮುಖ ವಿಷಯಗಳೆಂದರೆ ಸಮಾಜಶಾಸ್ತ್ರ, ಇತಿಹಾಸ, ಸಾಹಿತ್ಯ, ರಾಜ್ಯಶಾಸ್ತ್ರ, ಮನೋವಿಜ್ಞಾನ, ಅರ್ಥಶಾಸ್ತ್ರ, ತತ್ವಶಾಸ್ತ್ರ, ಲಲಿತಕಲೆ, ಇತ್ಯಾದಿ ಜೊತೆಗೆ ಒಂದು ಕಡ್ಡಾಯ ಭಾಷಾ ವಿಷಯ. ಹ್ಯುಮಾನಿಟೀಸ್ ವಿದ್ಯಾರ್ಥಿಗಳಿಗೆ 10 ನೇ ತರಗತಿಯ ಅನಂತರ ಮುಂದಿನದು ಮಾಧ್ಯಮ, ಪತ್ರಿಕೋದ್ಯಮ, ಸಾಹಿತ್ಯ, ಸಮಾಜಕಾರ್ಯ, ಉತ್ಪನ್ನ ವಿನ್ಯಾಸ, ಬರವಣಿಗೆ, ಬೋಧನೆ ಮತ್ತು ಇತರ ಹಲವು ವೃತ್ತಿ ಆಯ್ಕೆಗಳಿವೆ.


ವೃತ್ತಿಪರ ಕೋರ್ಸ್‌ಗಳು

ಎಸ್‌ಎಸ್‌ಎಲ್‌ಸಿ ಬಳಿಕ ವೃತ್ತಿಪರ ಕೋರ್ಸ್‌ಗಳನ್ನೂ ಸೇರಿಕೊಳ್ಳಬಹುದು. ಇದು 12ನೇ ತರಗತಿ ಪೂರ್ಣಗೊಳಿಸಿದ ತಕ್ಷಣ ನಿಮ್ಮನ್ನು ಕೆಲಸಕ್ಕೆ ಸಿದ್ಧಪಡಿಸುತ್ತವೆ. ಶಾಲೆಯು ನೀಡುವ ವಿಷಯಗಳ ಆಧಾರದ ಮೇಲೆ ವೃತ್ತಿಪರ ವಿಷಯದ ಆಯ್ಕೆಗಳಿರುತ್ತವೆ. ಇದರಲ್ಲಿ ಲೆಕ್ಕಪತ್ರ ನಿರ್ವಹಣೆ, ತೆರಿಗೆ, ಆಟೋ ಶಾಪ್, ದುರಸ್ತಿ, ವ್ಯಾಪಾರ ಕಾರ್ಯಾಚರಣೆಗಳು, ಆಡಳಿತ, ಬಂಡವಾಳ, ಮಾರುಕಟ್ಟೆ ಕಾರ್ಯಾಚರಣೆಗಳು, ನಾಗರಿಕ, ಎಂಜಿನಿಯರಿಂಗ್, ತಂತ್ರಜ್ಞ, ಆಹಾರ ಪೋಷಣೆ, ಆಹಾರ ಪದ್ಧತಿ, ಆಹಾರ ಉತ್ಪಾದನೆ, ಆತಿಥ್ಯ ನಿರ್ವಹಣೆ, ಸಂಗೀತ ಉತ್ಪಾದನೆ, ಜವಳಿ ವಿನ್ಯಾಸ, ವೆಬ್ ಅಪ್ಲಿಕೇಶನ್‌ಗಳು ಇತ್ಯಾದಿ ಹಲವಾರು ವಿಷಯಗಳಿದ್ದು, ಮುಂದೆ ಸಾಕಷ್ಟು ಅವಕಾಶಗಳನ್ನು ನಿಮ್ಮ ಮುಂದೆ ತೆರೆದಿಡುತ್ತದೆ.

ಕುಟುಂಬದ ಹಣಕಾಸಿನ ಜವಾಬ್ದಾರಿಯೊಂದಿಗೆ ತಮ್ಮ ಕಲಿಕೆಯನ್ನು ಮುಂದುವರಿಸಬೇಕು ಎಂದು ಬಯಸುವವರಿಗೂ ಎಸ್ ಎಸ್ ಎಲ್ ಸಿ ಮುಗಿದ ತಕ್ಷಣ ಹಲವು ಆಯ್ಕೆಗಳನ್ನು ನೀಡುತ್ತದೆ.
ಐಟಿಐ ಗಳು, ಪಾಲಿಟೆಕ್ನಿಕ್ ಡಿಪ್ಲೋಮಾಗಳು, ಪ್ಯಾರಾಮೆಡಿಕಲ್ ಮತ್ತು ವೃತ್ತಿಪರ ಕೋರ್ಸ್‌ಗಳು ಶೀಘ್ರದಲ್ಲೇ ನಿಮ್ಮನ್ನು ಉದ್ಯೋಗಕ್ಕೆ ಸಿದ್ಧರನ್ನಾಗಿ ಮಾಡುತ್ತದೆ. ಇದು 10 ನೇ ತರಗತಿಯನ್ನು ಪೂರ್ಣಗೊಳಿಸಿದ ತಕ್ಷಣ ಉದ್ಯೋಗವನ್ನು ಹುಡುಕಲು ಸಹಾಯ ಮಾಡುತ್ತದೆ.

ಐಟಿಐ (ಇಂಡಸ್ಟ್ರಿಯಲ್ ಟ್ರೈನಿಂಗ್ ಇನ್ಸ್ಟಿಟ್ಯೂಟ್)

ಐಟಿಐ ಪ್ರಮಾಣಪತ್ರಗಳನ್ನು ತಾಂತ್ರಿಕ ಮತ್ತು ಕೆಲವು ತಾಂತ್ರಿಕೇತರ ಕೋರ್ಸ್‌ಗಳಲ್ಲಿ 100ಕ್ಕೂ ಹೆಚ್ಚು ವಿಶೇಷತೆಗಳಲ್ಲಿ ನೀಡಲಾಗುತ್ತದೆ. ಇದು ಸರ್ಕಾರಿ ತರಬೇತಿ ಸಂಸ್ಥೆಯಾಗಿದ್ದು ಅದು ನಿಮಗೆ ತರಬೇತಿ ನೀಡುತ್ತದೆ ಮತ್ತು ವಿವಿಧ ಕೈಗಾರಿಕೆಗಳಿಗೆ ನಿಮ್ಮನ್ನು ನುರಿತರನ್ನಾಗಿ ಮಾಡುತ್ತದೆ. ಐಟಿಐ ಕೋರ್ಸ್‌ಗಳ ಅವಧಿಯು ಆರು ತಿಂಗಳಿಂದ ಎರಡು ವರ್ಷಗಳವರೆಗೆ ಇರುತ್ತದೆ.

ಉನ್ನತ ಐಟಿಐ ಕೋರ್ಸ್‌ಗಳು ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ನೆಟ್‌ವರ್ಕ್ ನಿರ್ವಹಣೆ, ಡ್ರಾಫ್ಟ್‌ಮನ್ (ಸಿವಿಲ್), ಮೆಕ್ಯಾನಿಕ್ (ಆಟೋ ಎಲೆಕ್ಟ್ರಿಕಲ್ಸ್ & ಎಲೆಕ್ಟ್ರಾನಿಕ್ಸ್), ಇಂಟೀರಿಯರ್ ಡೆಕೋರೇಶನ್ ಮತ್ತು ಡಿಸೈನಿಂಗ್, ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಬೇಕರ್ ಮತ್ತು ಮಿಠಾಯಿಗಾರ, ಶೀಟ್ ಮೆಟಲ್, ಪ್ಲಂಬಿಂಗ್ ಇತ್ಯಾದಿ.

ಇನ್ನು ಪಿಡಬ್ಲ್ಯೂ ಡಿಗಳಂತಹ ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿ ಉದ್ಯೋಗ ಮಾಡಲು ಬಯಸುವವರಿಗೆ ಪಾಲಿಟೆಕ್ನಿಕ್ ಕೋರ್ಸ್‌ಗಳು ಸಹಾಯ ಮಾಡುತ್ತದೆ.

ಕಡಿಮೆ ವೆಚ್ಚದ ಡಿಪ್ಲೊಮಾ ಕೋರ್ಸ್‌ಗಳಿದ್ದು, ಇದನ್ನು 10 ಅಥವಾ 12 ನೇ ತರಗತಿಯ ಬಳಿಕವೂ ಮಾಡಬಹುದು. ಇದರಲ್ಲಿ ಮೆಕ್ಯಾನಿಕಲ್, ಸಿವಿಲ್, ಕೆಮಿಕಲ್, ಕಂಪ್ಯೂಟರ್, ಮೆರೈನ್ ಟೆಕ್ನಾಲಜಿ, ಟೆಕ್ಸ್‌ಟೈಲ್ ಟೆಕ್ನಾಲಜಿ, ಆಟೋಮೊಬೈಲ್, ಇತ್ಯಾದಿ ಕೋರ್ಸ್‌ಗಳನ್ನು ಆಯ್ಕೆ ಮಾಡಬಹುದು.


ಪ್ಯಾರಾ ಮೆಡಿಕಲ್ ಕೋರ್ಸ್‌ಗಳು

ಪ್ಯಾರಾ ಮೆಡಿಕಲ್ ಶಾಖೆಯು ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ್ದು. ಉತ್ತಮ ಅವಕಾಶಗಳನ್ನು ನೀಡುತ್ತದೆ. ಪ್ಯಾರಾಮೆಡಿಕಲ್ ಕೋರ್ಸ್‌ಗಳನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ 10ನೇ ತರಗತಿ ಅನಂತರ ಎಕ್ಸ್-ರೇ ತಂತ್ರಜ್ಞ, ಡಯಾಲಿಸಿಸ್ ತಂತ್ರಜ್ಞ, ನರ್ಸಿಂಗ್ ಅಸಿಸ್ಟೆನ್ಸ್, ನೇತ್ರ ತಂತ್ರಜ್ಞನಾಗಿ ವೃತ್ತಿ ಜೀವನ ಪ್ರಾರಂಭಿಸಬಹುದು.

ವೃತ್ತಿಪರ ಕೋರ್ಸ್‌ಗಳು

ವೃತ್ತಿಪರ ತರಬೇತಿ ಕೋರ್ಸ್‌ಗಳಲ್ಲಿ 1 ರಿಂದ 2 ವರ್ಷಗಳವರೆಗಿನ ಅಲ್ಪಾವಧಿಯ ಕೋರ್ಸ್‌ಗಳಿರುತ್ತವೆ. ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (NSDC) ಮತ್ತು ರಾಷ್ಟ್ರೀಯ ಕೌಶಲ್ಯ ಅರ್ಹತಾ ಚೌಕಟ್ಟಿನ (NSFQ) ಅಡಿಯಲ್ಲಿ ಸರ್ಕಾರವು ನೀಡುವ ಉದ್ಯೋಗ ಕೇಂದ್ರಿತ ಕೋರ್ಸ್‌ಗಳಾಗಿವೆ. ಇದರಲ್ಲಿ ಲಭ್ಯವಿರುವ ವಿವಿಧ ಕೋರ್ಸ್‌ಗಳೆಂದರೆ ಸಾಫ್ಟ್‌ವೇರ್ ಡೆವಲಪ್‌ಮೆಂಟ್, ಫ್ಯಾಶನ್ ಡಿಸೈನಿಂಗ್, ಡೆಸ್ಕ್‌ಟಾಪ್ ಪಬ್ಲಿಷಿಂಗ್ (ಡಿಟಿಪಿ), ಆಭರಣ ವಿನ್ಯಾಸ, ಪ್ರಯಾಣ ಮತ್ತು ಪ್ರವಾಸೋದ್ಯಮ, ವೈದ್ಯಕೀಯ ಚಿತ್ರಣ ಇತ್ಯಾದಿ.

ನೆನಪಿರಲಿ

ಸರಿಯಾದ ಕೋರ್ಸ್ ಮತ್ತು ವಿಷಯಗಳ ಆಯ್ಕೆಯ ಮೇಲೆ ಗಮನ ಕೇಂದ್ರೀಕರಿಸಿ. ಇದರೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸುವುದು ಮತ್ತು ಉದ್ಯೋಗ ಮಾರುಕಟ್ಟೆಯಲ್ಲಿ ಅಪಾರ ಸ್ಪರ್ಧೆಗೆ ನಿಮ್ಮನ್ನು ಸಿದ್ಧಪಡಿಸುವ ಕೌಶಲ್ಯಗಳನ್ನು ಬೆಳೆಸುವುದು ಕೂಡಾ ಅತ್ಯಗತ್ಯ. ಪ್ರಪಂಚದಾದ್ಯಂತ ಏನು ನಡೆಯುತ್ತಿದೆ ಎಂಬುದರ ಮಾಹಿತಿಯೂ ಇರಲಿ. ಇದರಿಂದ ಉದ್ಯೋಗ ಕ್ಷೇತ್ರ ಪ್ರವೇಶಿಸುವುದು ಸುಲಭವಾಗುತ್ತದೆ.
ಇತರ ವಿಶಯಗಳನ್ನೂ ಕಲಿಯಿರಿ

ಉದ್ಯೋಗ ಕ್ಷೇತ್ರದಲ್ಲಿ ಈಗ ಸಾಕಷ್ಟು ಪೈಪೋಟಿ ಇದೆ. ಹೀಗಾಗಿ ನಿರಂತರ ಒಂದಲ್ಲ ಒಂದು ವಿಷಯಗಳನ್ನು ಕಲಿಯುವುದು ಒಳ್ಳೆಯದು. ಸಂವಹನ ಕೌಶಲ್ಯ ಬೆಳೆಸಿಕೊಳ್ಳುವುದು, ಹೊಸ ಭಾಷೆ ಕಲಿಕೆ ನಿಮ್ಮ ಭವಿಷ್ಯಕ್ಕೆ ಒಳ್ಳೆಯ ಅಡಿಪಾಯ ಹಾಕಿಕೊಡುತ್ತದೆ. ಅಲ್ಲದೇ ಓದುವ ಅಭ್ಯಾಸ ನಿರಂತರವಾಗಿರಲಿ.

Continue Reading
Advertisement
Mahesh Babu
ಕ್ರಿಕೆಟ್3 mins ago

IPL 2024: ಸನ್​ರೈಸರ್ಸ್​ ತಂಡದ ಆಟಗಾರರನ್ನು ಭೇಟಿ ಮಾಡಿದ ನಟ ಮಹೇಶ್‌ ಬಾಬು

arvind kejriwal in tihar jail
ದೇಶ16 mins ago

Arvind Kejriwal: ಕೇಜ್ರಿವಾಲ್‌, ಕವಿತಾ ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

jaishankar
Lok Sabha Election 202417 mins ago

S Jaishankar: ವಿದೇಶಾಂಗ ನೀತಿಯಲ್ಲೂ ಕಾಂಗ್ರೆಸ್‌ನಿಂದ ಮುಸ್ಲಿಂ ವೋಟ್‌ಬ್ಯಾಂಕ್‌ ರಾಜಕಾರಣ: ಸಚಿವ ಜೈಶಂಕರ್‌ ಆರೋಪ

Road Accident
ಉಡುಪಿ49 mins ago

Road Accident : ಮಿಡ್‌ನೈಟ್‌ನಲ್ಲಿ ರಸ್ತೆ ಕಾಣದೆ ಡಿವೈಡರ್‌ಗೆ ಬೈಕ್‌ ಡಿಕ್ಕಿ; ಹಾರಿ ಬಿದ್ದ ಸವಾರ ಸ್ಥಳದಲ್ಲೇ ಸಾವು

supreme court baba ramdev IMA
ಪ್ರಮುಖ ಸುದ್ದಿ50 mins ago

Patanjali Case: ಮೊದಲು ನಿಮ್ಮನ್ನು ಸರಿಪಡಿಸಿಕೊಳ್ಳಿ: ಪತಂಜಲಿ ಪ್ರಕರಣದಲ್ಲಿ ವೈದ್ಯಕೀಯ ಸಂಘಕ್ಕೂ ಸುಪ್ರೀಂ ಚಾಟಿ

Lok Sabha Election 2024 Are you planning to visit Mysore Palace on April 26 No entry if no vote
Lok Sabha Election 202455 mins ago

Lok Sabha Election 2024: ಏಪ್ರಿಲ್‌ 26ರಂದು ಮೈಸೂರು ಅರಮನೆ ವೀಕ್ಷಣೆಗೆ ಪ್ಲ್ಯಾನ್‌ ಮಾಡಿದ್ದೀರಾ? ಮತ ಹಾಕದೇ ಬಂದರೆ ನೋ ಎಂಟ್ರಿ!

Murder case in hublli
ಹುಬ್ಬಳ್ಳಿ1 hour ago

Kidnap Case : ಅಖಂಡೇಶ್ವರ ಜಾತ್ರೆಗೆ ಹೋದ ಅತಿಥಿ ಶಿಕ್ಷಕಿಯನ್ನು ಅಪಹರಿಸಿದ ಮುಸ್ಲಿಂ ಯುವಕ

Rafael Nadal
ಕ್ರೀಡೆ1 hour ago

Rafael Nadal: ಲೇವರ್‌ ಕಪ್‌ ಬಳಿಕ 22 ಬಾರಿಯ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್​ ನಡಾಲ್‌ ನಿವೃತ್ತಿ!

Modi in Karnataka PM Narendra Modi to visit from April 28 and 29
Lok Sabha Election 20242 hours ago

Modi in Karnataka: ಏಪ್ರಿಲ್‌ 28 – 29ಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ; ಯಾವ ಯಾವ ಕ್ಷೇತ್ರದಲ್ಲಿ ಮತ ಬೇಟೆ?

Murder Case In Bengaluru
ಬೆಂಗಳೂರು2 hours ago

Murder Case : ಒಂಟಿ ಮಹಿಳೆ ಕೊಲೆ ಕೇಸ್‌; ಅತಿಯಾದ ಸೆಕ್ಸ್‌ಗೆ ಒತ್ತಾಯಿಸಿದವಳನ್ನು ಬೆಡ್‌ ರೂಂನಲ್ಲೇ ಕೊಂದ ಯುವಕ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ10 hours ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು22 hours ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ23 hours ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು1 day ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು1 day ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ1 day ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ2 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20243 days ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

ಟ್ರೆಂಡಿಂಗ್‌