KPSC Recruitment 2023 shortly Four notification from KPSC; Recruitment for 831 posts details here KPSC Recruitment 2023 : ಗುಡ್‌ ನ್ಯೂಸ್‌! ಕೆಪಿಎಸ್‌ಸಿಯಿಂದ ಸದ್ಯವೇ ನಾಲ್ಕು ಅಧಿಸೂಚನೆ; 831 ಹುದ್ದೆಗಳಿಗೆ ನೇಮಕ - Vistara News

ಉದ್ಯೋಗ

KPSC Recruitment 2023 : ಗುಡ್‌ ನ್ಯೂಸ್‌! ಕೆಪಿಎಸ್‌ಸಿಯಿಂದ ಸದ್ಯವೇ ನಾಲ್ಕು ಅಧಿಸೂಚನೆ; 831 ಹುದ್ದೆಗಳಿಗೆ ನೇಮಕ

ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ (KPSC Recruitment 2023) 831 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಿದೆ ಎಂದು ಕೆಪಿಎಸ್‌ಸಿಯ ಕಾರ್ಯದರ್ಶಿ ತಿಳಿಸಿದ್ದಾರೆ. ಯಾವ ಹುದ್ದೆಗಳಿಗೆ ನೇಮಕ ನಡೆಯಲಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

KPSC Recruitment 2023 shortly Four notification from KPSC; Recruitment for 831 posts details here
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ (KPSC Recruitment 2023) ಹುದ್ದೆಗಳ ನೇಮಕಕ್ಕೆ ಸಿದ್ಧತೆ ನಡೆಸಿದ್ದು, ಸದ್ಯವೇ ಅಧಿಸೂಚನೆ ಹೊರಡಿಸಲಿದೆ.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ (ಗ್ರೂಪ್‌ ಎ) 23 ಹುದ್ದೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ 40 ಹುದ್ದೆ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿನ ಪಶುವೈದ್ಯಾಧಿಕಾರಿಗಳ (ಗ್ರೂಪ್‌ ಎ)- 400 ಹಾಗೂ ಕೃಷಿ ಇಲಾಖೆಯಲ್ಲಿನ ಸಹಾಯಕ ಕೃಷಿ ಅಧಿಕಾರಿ (ಗ್ರೂಪ್‌ -ಬಿ) 368 ಹುದ್ದೆಗಳಿಗೆ ಸದ್ಯವೇ ಅಧಿಸೂಚನೆ ಹೊರಡಿಸಲಿದೆ.

ಈ ನೇಮಕಾತಿ ಪ್ರಸ್ತಾವನೆಗಳನ್ನು ಅಂತಿಮಗೊಳಿಸಲಾಗಿದ್ದು, ಆಯೋಗವು ಒಪ್ಪಿಗೆ ನೀಡುತ್ತಿದ್ದಂತೆಯೇ ಅಧಿಸೂಚನೆ ಹೊರಡಿಸಲಾಗುತ್ತದೆ. ಈ ವಿಷಯವನ್ನು ಕೆಪಿಎಸ್‌ಸಿಯ ಕಾರ್ಯದರ್ಶಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.

ಕೆಪಿಎಸ್‌ಸಿಯಲ್ಲಿ ನೇಮಕದ ಮಾಹಿತಿ

ಇದಲ್ಲದೆ, ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ ಇನ್ಸ್‌ಪೆಕ್ಟರ್‌, ಜಲಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಎಂಜಿನಿಯರ್‌ ಹಾಗೂ ಜೂನಿಯರ್‌ ಎಂಜಿನಿಯರ್ ಮತ್ತು ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳಿಗೂ ಕೆಪಿಎಸ್‌ಸಿಯ ಸದ್ಯವೇ ಅಧಿಸೂಚನೆ ಹೊರಡಿಸಲಿದ್ದು, ಸದ್ಯ ಹುದ್ದೆಗಳ ಮೀಸಲಾತಿ ಹಂಚಿಕೆ ಪ್ರಕ್ರಿಯೆ ನಡೆಯುತ್ತಿದೆ. ಇದು ಪೂರ್ಣಗೊಂಡ ನಂತರ ಆಯೋಗದ ಅನುಮತಿಗಾಗಿ ಕಳಿಸಲಾಗುತ್ತದೆ ಎಂದು ಕಾರ್ಯದರ್ಶಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಹೇಳಿದ್ದಾರೆ.

ಮುಂದೆ ನಡೆಯಲಿರುವ ನೇಮಕದ ಮಾಹಿತಿ

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ಸದ್ಯ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರ ಮತ್ತು ಕಿರಿಯ ಲೆಕ್ಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದಲ್ಲದೆ ಮಾ. 30 ರಿಂದ ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುತ್ತಿದೆ. ಚುನಾವಣೆಯ ಸಂದರ್ಭದಲ್ಲಿಯೂ ಕೆಪಿಎಸ್‌ಸಿಯು ನೇಮಕ ಪ್ರಕ್ರಿಯೆಯನ್ನು ನಡೆಸುವ ಸಾಧ್ಯತೆಗಳಿವೆ.

ನೇಮಕದ ಮಾಹಿತಿಗೆ ನೀವು ನೋಡುತ್ತಿರಬೇಕಾದ ವೆಬ್‌ಸೈಟ್‌ ವಿಳಾಸ : https://kpsc.kar.nic.in

ಇದನ್ನೂ ಓದಿ : KPSC Recruitment 2023 : ಕೆಪಿಎಸ್‌ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಿರಾ? ಹೊಸದಾಗಿ ಹೆಸರು ನೊಂದಾಯಿಸಿಕೊಳ್ಳಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Tech Mahindra: ಫ್ರೆಶರ್‌ಗಳಿಗೆ ಗುಡ್‌ ನ್ಯೂಸ್;‌ 6 ಸಾವಿರ ಜನರನ್ನು ನೇಮಕ ಮಾಡಲಿದೆ ಮಹೀಂದ್ರಾ!

Tech Mahindra: ಐಟಿ ಸೇವೆಗಳಿಗೆ ಹೆಸರುವಾಸಿಯಾಗಿರುವ ಟೆಕ್‌ ಮಹೀಂದ್ರಾ ಕಂಪನಿಯ ನಿವ್ವಳ ಲಾಭವು 2023-24ನೇ ಹಣಕಾಸು ವರ್ಷದದಲ್ಲಿ 661 ಕೋಟಿ ರೂ.ಗೆ ಇಳಿಕೆಯಾಗಿದೆ. ಇದರ ಮಧ್ಯೆಯೇ, 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಲು ಟೆಕ್‌ ಮಹೀಂದ್ರಾ ತೀರ್ಮಾನಿಸಿದೆ. ಇದು ಫ್ರೆಶರ್‌ಗಳಿಗೆ ಭಾರಿ ಅನುಕೂಲವಾಗಲಿದೆ.

VISTARANEWS.COM


on

Tech Mahindra
Koo

ನವದೆಹಲಿ: ಮಾಹಿತಿ ತಂತ್ರಜ್ಞಾನದ ಸೇವೆಗಳ (IT Service) ದೈತ್ಯ ಕಂಪನಿಯಾದ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 2023-24ನೇ ಹಣಕಾಸು ವರ್ಷದ ಕೊನೆಯ ಅಥವಾ ನಾಲ್ಕನೇ ತ್ರೈಮಾಸಿಕದಲ್ಲಿ ಶೇ.40.9ರಷ್ಟು ಕುಸಿದಿದೆ. ಅಂದರೆ ಟೆಕ್‌ ಮಹೀಂದ್ರಾದ ನಿವ್ವಳ ಲಾಭವು 661 ಕೋಟಿ ರೂ.ಗೆ ಇಳಿಕೆಯಾಗಿದೆ. ಆದರೂ, ಟೆಕ್‌ ಮಹೀಂದ್ರಾ ಕಂಪನಿಯು 2024-25ನೇ ವಿತ್ತೀಯ ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಿಕೊಳ್ಳಲು ತೀರ್ಮಾನಿಸಿದೆ. ಇದರಿಂದಾಗಿ, ಈಗಷ್ಟೇ ಪದವಿ ಮುಗಿಸಿದವರಿಗೆ ಉದ್ಯೋಗ ಸಿಗಲಿದೆ.

“ಟೆಲಿಕಾಮ್‌, ಕಮ್ಯುನಿಕೇಷನ್ಸ್‌, ಮೀಡಿಯಾ ಹಾಗೂ ಎಂಟರ್‌ಟೇನ್‌ಮೆಂಟ್‌ ವಿಭಾಗದ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಟೆಕ್‌ ಮಹೀಂದ್ರಾ ಕಂಪನಿಯ ನಿವ್ವಳ ಲಾಭದ ಪ್ರಮಾಣವು ಕುಸಿದೆ. ಆದರೆ, 2024-25ನೇ ಸಾಲಿನಲ್ಲಿ ಲಾಭದ ಪ್ರಮಾಣ ಜಾಸ್ತಿಯಾಗುವ ನಿರೀಕ್ಷೆ ಇದೆ” ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಮೋಹಿತ್‌ ಜೋಶಿ ಮಾಹಿತಿ ನೀಡಿದ್ದಾರೆ. ನಾಲ್ಕನೇ ತ್ರೈಮಾಸಿಕದಲ್ಲಿ ಟೆಕ್‌ ಮಹೀಂದ್ರಾ ನಿವ್ವಳ ಲಾಭದ ಪ್ರಮಾಣವು 709.47 ಕೋಟಿ ರೂ. ಇರಲಿದೆ ಎಂಬುದಾಗಿ ಮನಿಕಂಟ್ರೋಲ್‌ (Moneycontrol) ಅಂದಾಜಿಸಿತ್ತು.

6 ಸಾವಿರ ಫ್ರೆಶರ್‌ಗಳ ನೇಮಕ

“ಉದ್ಯಮದ ವಿಸ್ತರಣೆ, ಟ್ರೆಂಡ್‌ನಲ್ಲಿ ಬದಲಾವಣೆ, ಏಳಿಗೆಯನ್ನು ದೃಷ್ಟಿಯಲ್ಲಿಕೊಂಡು 2024-25ನೇ ಹಣಕಾಸು ವರ್ಷದಲ್ಲಿ 6 ಸಾವಿರ ಫ್ರೆಶರ್‌ಗಳನ್ನು ನೇಮಕ ಮಾಡಲು ಕಂಪನಿ ತೀರ್ಮಾನಿಸಿದೆ. ಪ್ರತಿಯೊಂದು ತ್ರೈಮಾಸಿಕದಲ್ಲೂ 1,500 ಪದವೀಧರರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸಾಂಸ್ಥಿಕ ಏಳಿಗೆ, ಕಾರ್ಯಾಚರಣೆ ಹಾಗೂ ಕಾರ್ಯನಿರ್ವಹಣೆಯಲ್ಲಿ ಬದಲಾವಣೆಯನ್ನು ಅಳವಡಿಸಿಕೊಳ್ಳುವ ಮೂಲಕ ಕಂಪನಿಯನ್ನು ಇನ್ನಷ್ಟು ಲಾಭದತ್ತ ಕೊಂಡೊಯ್ಯಲಾಗುವುದು” ಎಂಬುದಾಗಿ ಮಾಹಿತಿ ನೀಡಿದ್ದಾರೆ.

50 ಸಾವಿರ ನೌಕರರಿಗೆ ಎಐ ತರಬೇತಿ

“ಕಂಪನಿಯ 50 ಸಾವಿರ ಉದ್ಯೋಗಿಗಳಿಗೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ (ಕೃತಕ ಬುದ್ಧಿಮತ್ತೆ ಕುರಿತು ತರಬೇತಿ ನೀಡಲಾಗುವುದು. ಆಧುನಿಕ ತಂತ್ರಜ್ಞಾನದ ಮೂಲಕ ಉದ್ಯಮವನ್ನು ಏಳಿಗೆಯತ್ತ ಕೊಂಡೊಯ್ಯುವ ದಿಸೆಯಲ್ಲಿ ಈ ಉಪಕ್ರಮ ಅಳವಡಿಸಿಕೊಳ್ಳುತ್ತಿದ್ದೇವೆ” ಎಂದು ತಿಳಿಸಿದ್ದಾರೆ. ಇನ್ನು, ಟೆಕ್‌ ಟೆಕ್‌ ಮಹೀಂದ್ರಾ ಕಂಪನಿಯ ವಾರ್ಷಿಕ ಲಾಭವೂ ಶೇ.6.2ರಷ್ಟು ಅಂದರೆ, 12,871 ಕೋಟಿ ರೂ.ಗೆ ಇಳಿಕೆಯಾಗಿದೆ. ಇದರ ಮಧ್ಯೆಯೂ ಉದ್ಯೋಗ ಸೃಷ್ಟಿ ಸೇರಿ ಹಲವು ಯೋಜನೆಗಳಿಗೆ ಟೆಕ್‌ ಮಹೀಂದ್ರಾ ಚಾಲನೆ ನೀಡುತ್ತಿದೆ.

ಇದನ್ನೂ ಓದಿ: Job News: ಆಪಲ್ ನಿಂದ ಭಾರತದಲ್ಲಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ!

Continue Reading

ಉದ್ಯೋಗ

Job Alert: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿದೆ ಸುವರ್ಣಾವಕಾಶ; 168 ಹುದ್ದೆಗಳಿಗೆ ಐಟಿಐ, ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Job Alert: ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ನಿಮ್ಮನ್ನು ಹುಡುಕಿಕೊಂಡು ಬಂದಿದೆ ಸುವರ್ಣಾವಕಾಶ. ಭಾರತದ ಚಿನ್ನ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪೆನಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅಸಿಸ್ಟಂಟ್‌ ಫಾರ್‌ಮನ್‌, ಐಟಿಐ ಫಿಟ್ಟರ್‌, ಲ್ಯಾಬ್‌ ಅಸಿಸ್ಟಂಟ್‌ ಸೇರಿದಂತೆ ಸುಮಾರು 168 ಹುದ್ದೆಗಳಿವೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 3. ಐಟಿಐ, ಡಿಪ್ಲೋಮಾ, ಪದವಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಇನ್ಯಾಕೆ ತಡ? ಈಗಲೇ ಅಪ್ಲೈ ಮಾಡಿ.

VISTARANEWS.COM


on

Job Alert
Koo

ಬೆಂಗಳೂರು: ಭಾರತದ ಚಿನ್ನ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿರುವ ಹಟ್ಟಿ ಚಿನ್ನದ ಗಣಿ ಕಂಪೆನಿ (Hutti Gold Mines Company Limited)ಯು ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (HGML Recruitment 2024). ಅಸಿಸ್ಟಂಟ್‌ ಫಾರ್‌ಮನ್‌, ಐಟಿಐ ಫಿಟ್ಟರ್‌, ಲ್ಯಾಬ್‌ ಅಸಿಸ್ಟಂಟ್‌ ಸೇರಿದಂತೆ ಸುಮಾರು 168 ಹುದ್ದೆಗಳಿವೆ. ಐಟಿಐ, ಡಿಪ್ಲೋಮಾ, ಪದವಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 3 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಸಿಸ್ಟೆಂಟ್ ಫಾರ್‌ಮನ್‌ (ಗಣಿ)- 16 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಮೆಟಲರ್ಜಿ)- 7 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಲ್ಯಾಬ್ ಅಸಿಸ್ಟೆಂಟ್- 1 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ
ಅಸಿಸ್ಟೆಂಟ್ ಫಾರ್‌ಮನ್‌ (ಜಿಯಾಲಜಿ)- 3 ಹುದ್ದೆ, ವಿದ್ಯಾರ್ಹತೆ: ಬಿ.ಎಸ್‌ಸಿ
ಅಸಿಸ್ಟೆಂಟ್ ಫಾರ್‌ಮನ್‌ (ಡೈಮಂಡ್ ಡ್ರಿಲ್ಲಿಂಗ್ / ಅಂಡರ್ ಗ್ರೌಂಡ್)- 2 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಮೆಕ್ಯಾನಿಕಲ್)- 19 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಐಟಿಐ ಫಿಟ್ಟರ್ (ಗಣಿಗಾರಿಕೆ)- 56 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಐಟಿಐ ಫಿಟ್ಟರ್ (ಮೆಟಲ್)- 26 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಐಟಿಐ ಎಲೆಕ್ಟ್ರಿಕಲ್- 4 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಎಲೆಕ್ಟ್ರಿಕಲ್
ಅಸಿಸ್ಟೆಂಟ್ ಫಾರ್‌ಮನ್‌ (ಸಿವಿಲ್)- 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಅಸಿಸ್ಟೆಂಟ್ ಫಾರ್‌ಮನ್‌ (ಎಲೆಕ್ಟ್ರಿಕಲ್)- 1 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ
ಸೆಕ್ಯುರಿಟಿ ಇನ್ಸ್‌ಪೆಕ್ಟರ್‌- 6 ಹುದ್ದೆ, ವಿದ್ಯಾರ್ಹತೆ: ಪದವಿ
ಐಟಿಐ ಫಿಟ್ಟರ್ (ಸರ್ವೆ)- 2 ಹುದ್ದೆ, ವಿದ್ಯಾರ್ಹತೆ: ಐಟಿಐ ಇನ್‌ ಫಿಟ್ಟರ್‌
ಸೆಕ್ಯುರಿಟಿ ಗಾರ್ಡ್- 24 ಹುದ್ದೆ, ವಿದ್ಯಾರ್ಹತೆ: ದ್ವಿತೀಯ ಪಿಯುಸಿ

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ- 1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 600 ರೂ., ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 300 ರೂ. ಮತ್ತು ಎಸ್‌ಸಿ / ಎಸ್‌ಟಿ / ಮಾಜಿ ಸೈನಿಕರು / ಪಿಡಬ್ಲ್ಯುಡಿ ಅಭ್ಯರ್ಥಿಗಳು 100 ರೂ. ಅನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 20,920 ರೂ. – 48,020 ರೂ. ಮಾಸಿಕ ವೇತನ ಸಿಗಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ (ಉಳಿಕೆ ಮೂಲ / ಸ್ಥಳೀಯೇತರ ವೃಂದ).

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ (ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದ).

ಅರ್ಜಿ ಸಲ್ಲಿಸಲು ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಫೋನ್‌ ನಂಬರ್‌, ಇಮೇಲ್‌ ವಿಳಾಸ ನೀಡಿ ಹೆಸರು ನೋಂದಾಯಿಸಿ.
  • HGML Assistant Foreman, ITI Fitter Apply Online ಲಿಂಕ್‌ ಕ್ಲಿಕ್‌ ಮಾಡಿ
  • ಅಗತ್ಯ ಮಾಹಿತಿಗಳನ್ನು ಎಚ್ಚರಿಕೆಯಿಂದ ತುಂಬಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ಗಳನ್ನು ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಎಲ್ಲವೂ ಸರಿಯಾಗಿದೆ ಎನ್ನುವುದನ್ನು ಮತ್ತೊಮ್ಮೆ ಖಚಿತ ಪಡಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: Job Alert: ಎನ್‌ಬಿಸಿಸಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನ 3,712 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ದ್ವಿತೀಯ ಪಿಯು ಪಾಸಾದವರು ಅಪ್ಲೈ ಮಾಡಿ

Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೋವರ್‌ ಡಿವಿಷನ್‌ ಕ್ಲರ್ಕ್‌, ಡೇಟಾ ಎಂಟ್ರಿ ಆಪರೇಟರ್‌ ಸೇರಿ ಬರೋಬ್ಬರಿ 3,712 ಹುದ್ದೆಗಳಿವೆ. ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 7. ಕರ್ನಾಟಕದಲ್ಲಿ ಪರೀಕ್ಷೆ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಯಲ್ಲಿ ನಡೆಯಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಉತ್ತಮ ಉದ್ಯೋಗಕ್ಕಾಗಿ ಹುಡುಕಾಟ ನಡೆಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೋವರ್‌ ಡಿವಿಷನ್‌ ಕ್ಲರ್ಕ್‌, ಡೇಟಾ ಎಂಟ್ರಿ ಆಪರೇಟರ್‌ ಸೇರಿ ಬರೋಬ್ಬರಿ 3,712 ಹುದ್ದೆಗಳಿವೆ (SSC CHSL Recruitment 2024). ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 7 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಲೋವರ್‌ ಡಿವಿಷನ್‌ ಕ್ಲರ್ಕ್‌ (LDC) / ಜೂನಿಯರ್‌ ಸೆಕ್ರೆಟೆರಿಯೇಟ್‌ ಅಸಿಸ್ಟಂಟ್‌ (JSA), ಡೇಟಾ ಎಂಟ್ರಿ ಆಪರೇಟರ್‌ (DEO) ಮತ್ತು ಡೇಟಾ ಎಂಟ್ರಿ ಆಪರೇಟರ್‌ ಗ್ರೇಡ್‌ ʼA’ ಹುದ್ದೆಗಳಿವೆ. ಎಲ್‌ಡಿಸಿ ಹುದ್ದೆಗೆ ಅರ್ಜಿ ಸಲ್ಲಿಸುವವರು 12ನೇ ತರಗತಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. 12ನೇ ತರಗತಿಯಲ್ಲಿ ವಿಜ್ಞಾನ ಮತ್ತು ಗಣಿತ ವಿಷಯವನ್ನು ಓದಿದವರು ಡೇಟಾ ಎಂಟ್ರಿ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು. ತತ್ಸಮಾನ ವಿದ್ಯಾರ್ಹತೆ ಹೊಂದಿದವರೂ ಅಪ್ಲೈ ಮಾಡಬಹುದು.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 27 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ರಿಯಾಯಿತಿ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಿನಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಹಿಳೆ / ಮಾಜಿ ಯೋಧರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ / ಒಬಿಸಿ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಅನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು. ಎರಡು ಹಂತದ ಲಿಖಿತ ಪರೀಕ್ಷೆ, ಸ್ಕಿಲ್‌ ಟೆಸ್ಟ್‌ / ಟೈಪಿಂಗ್‌ ಟೆಸ್ಟ್‌, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಮೊದಲ ಹಂತದ ಪರೀಕ್ಷೆ ಜುಲೈ 1,2,3,4,5,8,9,10,11,12ರಂದು ನಡೆಯಲಿದೆ. ಕರ್ನಾಟಕದಲ್ಲಿ ಪರೀಕ್ಷೆ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಯಲ್ಲಿ ನಡೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ವೈಯಕ್ತಿಕ ಮಾಹಿತಿ ನೀಡುವ ಮೂಲಕ ಹೆಸರು ನೋಂದಾಯಿಸಿ.
  • ನಿಮಗೆ ಬಂದಿರುವ ರಿಜಿಸ್ಟ್ರೇಷನ್‌ ನಂಬರ್‌ ಮತ್ತು ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ಕಾಣಿಸುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಸೂಚಿಸಿರುವ ಅಳತೆಯಲ್ಲಿ ದಾಖಲೆಗಳನ್ನು ಮತ್ತು ಫೋಟೊ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾದ ಬಳಿಕ ಈ ಬಗ್ಗೆ ಇಮೇಲ್‌, ಎಸ್‌ಎಂಎಸ್‌ ಮೂಲಕ ಸಂದೇಶ ಬರಲಿದೆ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಎನ್‌ಬಿಸಿಸಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 4ರೊಳಗೆ ಅಪ್ಲೈ ಮಾಡಿ

Job Alert: ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿಯ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕಂದಾಯ ಇಲಾಖೆ ಗುಡ್‌ ನ್ಯೂಸ್‌ ನೀಡಿದೆ. ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ಅಧಿಸೂಚನೆ ಹೊರಡಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಮೇ 4. ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿಯ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕಂದಾಯ ಇಲಾಖೆ (Revenue Department) ಗುಡ್‌ ನ್ಯೂಸ್‌ ನೀಡಿದೆ. ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಅಧಿಸೂಚನೆ ಹೊರಡಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಮೇ 4 (Job Alert).

ವಿದ್ಯಾರ್ಹತೆ

  • ದ್ವಿತೀಯ ಪಿಯುಸಿ ಅಥವಾ ತತ್ಸಮಾನ (ಆದೇಶ ಸಂಖ್ಯೆ: ಇಡಿ 09 ಟಿವಿಇ 2019, ದಿನಾಂಕ 06.08.2021 ಮತ್ತು ಆದೇಶ ಸಂಖ್ಯೆ ಇಡಿ 33 ಟಿವಿಇ 2021 ದಿನಾಂಕ 30.09.2021ಗಳನ್ನು ಮತ್ತು ಉಳಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆ ಸಂಖ್ಯೆ ಸಿಆಸುಇ 81 ಸೇವನೆ 2017 ದಿನಾಂಕ 27.02.2018ರ ಅನ್ವಯ ಈ ಕೆಳಕಂಡ ವಿದ್ಯಾರ್ಹತೆಗಳನ್ನು ತತ್ಸಮಾನವೆಂದು ಆದೇಶಿದೆ.)
  • ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ.
  • ಇತರ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ.
  • ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್.ಐ.ಒ.ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಎಚ್.ಎಸ್.ಸಿ.
  • ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಒ.ಸಿ/ಜೆ.ಒ.ಡಿ.ಸಿ/ಜೆ.ಎಲ್.ಡಿ.ಸಿ)

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಪ್ರವರ್ಗ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ / ಪಂಗಡ, ಪ್ರವರ್ಗ -1, ಮಾಜಿ ಸೈನಿಕರು ಮತ್ತು ವಿಶೇಷ ಚೇತನ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ಹೇಗೆ?

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭರ್ತಿ ಮಾಡಲಿದೆ. ಕರ್ನಾಟಕ ಪರೀಕ್ಷಾ ಪ್ರಾದಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಪರೀಕ್ಷೆಯನ್ನು ಆಫ್‌ಲೈನ್‌-ಒಎಂಆರ್‌ ಮಾದರಿಯಲ್ಲಿ ನಡೆಸಲಾಗುತ್ತದೆ. ಪರೀಕ್ಷೆಗೆ 200 ಅಂಕಗಳನ್ನು ಒಳಗೊಂಡ 2 ಪತ್ರಿಕೆ ಇರುತ್ತದೆ. ಜತೆಗೆ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿದ್ದು, ಇದರಲ್ಲಿ ಕನಿಷ್ಠ 50 ಅಂಕ ಗಳಿಸಬೇಕು. ಪರೀಕ್ಷೆಗಳನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಹಿಂದೆ ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಅಂಕಗಳ ಆಧಾರದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮೆರಿಟ್‌ ಆಧಾರದಲ್ಲಿ ಹುದ್ದೆಗಳಿಗೆ ಆಯ್ಕೆ ನಡೆಯುತ್ತಿತ್ತು. ಆದರೆ ಈ ಸಲದಿಂದ ಆಯ್ಕೆ ವಿಧಾನವನ್ನು ಬದಲಾಯಿಸಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆ ಬಳಿಕ ಅಭ್ಯರ್ಥಿಗಳ ರ‍್ಯಾಂಕಿಂಗ್‌ ಪಟ್ಟಿ ಬಿಡುಗಡೆಯಾಗಲಿದೆ. ನಂತರ ಜಿಲ್ಲಾವಾರು ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದವರನ್ನು ಕೌನ್ಸೆಲಿಂಗ್‌ ಮೂಲಕ ಸ್ಥಳ ನಿಯೋಜನೆಗೊಳಿಸಲಾಗುತ್ತದೆ. ನಿಗದಿತ ಮೀಸಲಾತಿಯಂತೆ ಹುದ್ದೆಗಳನ್ನು ಗುರುತಿಸಿ, ಆ ಪ್ರಕಾರ ಹುದ್ದೆ ಭರ್ತಿಯಾಗಲಿವೆ. 

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 080-23460460.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನು ಗಮನಿಸಿ

  • ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.
  • ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಒಟ್ಟು ಅಂಕಗಳ ಪೈಕಿ ಕನಿಷ್ಠ ಶೇ. 35ರಷ್ಟು ಅಂಕ ಗಳಿಸುವುದು ಕಡ್ಡಾಯ.
  • ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶದಷ್ಟು ಅಂಕ ಕಳೆಯಲಾಗುತ್ತದೆ. ಹೀಗಾಗಿ ಉತ್ತರ ಬರೆಯುವಾಗ ಎಚ್ಚರಿಕೆ ವಹಿಸಿ.
  • ಪ್ರಶ್ನೆಪತ್ರಿಕೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿರುತ್ತದೆ.
  • ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು. ಈ ಅರ್ಜಿ ಫಾರಂನ ಒಂದು ಪ್ರತಿಯ ಪ್ರಿಂಟ್‌ ಔಟ್‌ ಮತ್ತು ಶುಲ್ಕ ಪಾವತಿಯ ಚಲನ್‌ ಅನ್ನು ತಮ್ಮ ಬಳಿ ಇರಿಸಿಕೊಳ್ಳಬೇಕು.

ಇದನ್ನೂ ಓದಿ: Job Alert: ಉದ್ಯೋಗ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಬಿಬಿಎಂಪಿಯಿಂದ ಬರೋಬ್ಬರಿ 11,307 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Continue Reading
Advertisement
anjali nimbalkar
ಉತ್ತರ ಕನ್ನಡ1 min ago

Anjali Nimbalkar: ಅಪಘಾತದಲ್ಲಿ ಗಾಯಗೊಂಡ ಯುವಕನಿಗೆ ನೆರವಾದ ಅಂಜಲಿ ನಿಂಬಾಳ್ಕರ್

ದೇಶ5 mins ago

Physical abuse: ಲೈಂಗಿಕ ಕಿರುಕುಳ ಕೇಸ್‌; ಅರ್ಜುನ ಪ್ರಶಸ್ತಿ ಪುರಸ್ಕೃತ ಅಧಿಕಾರಿ ವಜಾ

lok sabha election 2024 voting
Lok Sabha Election 202423 mins ago

Lok Sabha Election 2024: 2ನೇ ಹಂತದ ಮತದಾನ, ಎಲ್ಲಿ ಹೆಚ್ಚು, ಎಲ್ಲಿ ಕಡಿಮೆ?

Karnataka weather Forecast
ಮಳೆ1 hour ago

Karnataka Weather : ಒಳನಾಡಿನಲ್ಲಿ ವಿಪರೀತ ಬಿಸಿಲು; ಕರಾವಳಿಯಲ್ಲಿ ಬಿಸಿಗಾಳಿ, ಮಲೆನಾಡಿನಲ್ಲಿ ಗುಡುಗು ಮಳೆ

Baking Soda Benefits
ಆರೋಗ್ಯ2 hours ago

Baking Soda Benefits: ಅಡುಗೆ ಸೋಡಾದಿಂದ ಎಷ್ಟೊಂದು ಪ್ರಯೋಜನಗಳಿವೆ ನೋಡಿ!

Dina Bhavishya
ಭವಿಷ್ಯ3 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Implement the work without damaging the drinking water pipelines says ZP CEO Sadashiva Prabhu
ವಿಜಯನಗರ7 hours ago

Vijayanagara News: ಕುಡಿಯುವ ನೀರಿನ ಪೈಪ್‌ಲೈನ್‌ಗಳು ಹಾಳಾಗದಂತೆ ಕಾಮಗಾರಿ ಅನುಷ್ಠಾನಗೊಳಿಸಿ: ಜಿಪಂ ಸಿಇಒ

Congress leader Rahul Gandhi speech in Ballari
ಕರ್ನಾಟಕ7 hours ago

Lok Sabha Election 2024: ದೇಶ, ರಾಜ್ಯಕ್ಕೆ ಬಿಜೆಪಿಯಿಂದ ಖಾಲಿ ಚೊಂಬು ಕೊಟ್ಟಿದ್ದಾರೆ: ರಾಹುಲ್‌ ಗಾಂಧಿ

lok sabha election
ಪ್ರಮುಖ ಸುದ್ದಿ8 hours ago

ವಿಸ್ತಾರ ಸಂಪಾದಕೀಯ: ಗ್ರಾಮಾಂತರ ಜನರ ಮತೋತ್ಸಾಹ ನಗರದ ‘ಬುದ್ಧಿವಂತ’ ಮತದಾರರಲ್ಲಿ ಏಕಿಲ್ಲ?

Neha Murder Case
ಕರ್ನಾಟಕ8 hours ago

Neha Murder Case: ನೇಹಾ ತಂದೆಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆ ಏರ್ಪಡಿಸಿದ ರಾಜ್ಯ ಸರ್ಕಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ20 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202420 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 202421 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

ಟ್ರೆಂಡಿಂಗ್‌