KPTCL Recruitment 2022 | ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ; ಡ್ರೆಸ್‌ಕೋಡ್‌ ನಿಗದಿಪಡಿಸಿದ ಕೆಇಎ - Vistara News

ಉದ್ಯೋಗ

KPTCL Recruitment 2022 | ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ; ಡ್ರೆಸ್‌ಕೋಡ್‌ ನಿಗದಿಪಡಿಸಿದ ಕೆಇಎ

ಕೆಪಿಟಿಸಿಎಲ್‌ನಲ್ಲಿನ ಸಹಾಯಕ ಎಂಜಿನಿಯರ್‌, ಕಿರಿಯ ಎಂಜಿನಿಯರ್‌ ಮತ್ತು ಕಿರಿಯ ಸಹಾಯಕ ಹುದ್ದೆಗಳ ನೇಮಕಕ್ಕೆ (KPTCL Recruitment 2022) ಜು.23 ರಿಂದ ಪರೀಕ್ಷೆನಡೆಯಲಿದ್ದು, ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.

VISTARANEWS.COM


on

KPTCL Recruitment 2022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್‌) ನಿಗಮದಲ್ಲಿ ಹಾಗೂ ವಿವಿಧ ವಿದ್ಯುತ್‌ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಸಹಾಯಕ ಎಂಜಿನಿಯರ್‌, ಕಿರಿಯ ಎಂಜಿನಿಯರ್‌ ಮತ್ತು ಕಿರಿಯ ಸಹಾಯಕ ಹುದ್ದೆಗಳ ನೇಮಕಕ್ಕೆ (KPTCL Recruitment 2022) ಸಂಬಂಧಿಸಿದಂತೆ ಜುಲೈ ೨೩ ರಿಂದ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ.

ಒಟ್ಟು ೧,೪೯೨ ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕೆಪಿಟಿಸಿಎಲ್‌ ಪರವಾಗಿ ಈ ಪರೀಕ್ಷೆ ನಡೆಸುತ್ತಿದೆ. ಪರೀಕ್ಷೇಯ ಪ್ರವೇಶ ಪತ್ರವನ್ನು ಕೆಇಎ ತನ್ನ ವೆಬ್‌ಸೈಟ್‌ನಲ್ಲಿ ಒದಗಿಸಿದೆ. ಪರೀಕ್ಷೆ ಬರೆಯಬೇಕಿರುವ ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಲಿಂಕ್‌ನಲ್ಲಿ ಅರ್ಜಿ ಸಂಖ್ಯೆ ಮತ್ತು ಜನ್ಮದಿನಾಂಕವನ್ನು ನಮೂದಿಸಿ ತಮ್ಮ ಪ್ರವೇಶ ಪತ್ರ ಪಡೆದುಕೊಳ್ಳಬಹುದಾಗಿದೆ.

ಪ್ರವೇಶ ಪತ್ರ ಪಡೆಯಲು ಇಲ್ಲಿ ಕ್ಲಿಕ್‌ ಮಾಡಿ.

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಪ್ರಿಂಟ್‌ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕು. ಜತೆಗೆ ಸರ್ಕಾರ ನೀಡಿದ ಯಾವುದಾದರೂ ಗುರುತಿನ ಚೀಟಿಯನ್ನು ತಂದಿರಬೇಕು. ಪ್ರವೇಶ ಪತ್ರ ಮತ್ತು ಗುರುತಿನ ಚೀಟಿ ಇಲ್ಲದೇ ಬರುವ ಯಾವುದೇ ಅಭ್ಯರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ.

ಮಹಿಳೆಯರು ಆಭರಣ, ಹಿಜಾಬ್‌ ಧರಿಸುವಂತಿಲ್ಲ!
ಈ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಡ್ರೆಸ್‌ಕೋಡ್‌ ಅನ್ನೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಡ್ರೆಸ್‌ಕೋಡ್‌ಗೆ ಸಂಬಂಧಿಸಿದಂತೆ ಸೂಚನೆಗಳನ್ನು ನೀಡಲಾಗಿದ್ದು, ಈ ಮಾಹಿತಿ ಕೆಇಎ ವೆಬ್‌ಸೈಟ್‌ನಲ್ಲಿ ಲಭ್ಯವಿದೆ.

ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‌ಗಳು ಅಥವಾ ಬಟನ್‌ಗಳನ್ನು ಹೊಂದಿರುವ ಡ್ರೆಸ್‌ಗಳನ್ನು ಧರಿಸಬಾರದು ಎಂದು ಸೂಚಿಸಲಾಗಿದೆ. ಪೂರ್ಣತೋಳಿನ ಬಟ್ಟೆಗಳನ್ನು ಧರಿಸುವುದನ್ನೂ ನಿಷೇಧಿಸಲಾಗಿದೆ.

ಎತ್ತರದ ಹಿಮ್ಮಡಿಯ ಬೂಟುಗಳು ಮತ್ತು ಅಡಿಭಾಗ ಹೊಂದಿರುವ ಬೂಟುಗಳನ್ನು ಹಾಕಬಾರದು. ಸ್ಯಾಂಡಲ್, ಚಪ್ಪಲಿಗಳನ್ನೇ ಹಾಕಿಕೊಂಡು ಪರೀಕ್ಷೆಗೆ ಹಾಜರಾಗಬಹುದು ಎಂದು ತಿಳಿಸಲಾಗಿದೆ.
ಕಿವಿಯೋಲೆಗಳು, ಉಂಗುರಗಳು, ಪೆಂಡೆಂಟ್‌ಗಳು, ನೆಕ್ಲೇಸ್‌ಗಳು, ಬಳೆಗಳು ಇಂತಹ ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ಕೂಡ ನಿಷೇಧಿಸಲಾಗಿದ್ದು, ಹಿಜಾಬ್‌, ಬುರ್ಖಾ ಧರಿಸಿ ಬರುವ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಕೆಇಎ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಪುರುಷ ಅಭ್ಯರ್ಥಿಗಳು ಕೂಡ ಅರ್ಧ ತೋಳಿನ ಶರ್ಟ್‌ಗಳನ್ನೇ ಧರಿಸಿ ಪರೀಕ್ಷೆಗೆ ಹಾಜರಾಗಬೇಕೆಂದು ಸೂಚಿಸಲಾಗಿದೆ. ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು. ಅಂದರೆ ಜಿಪ್ ಇರುವ ಪಾಕೆಟ್‌ಗಳು, ದೊಡ್ಡ ಬಟನ್‌ಗಳು, ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳನ್ನು ಧರಿಸುವಂತಿಲ್ಲ. ಕುರ್ತಾ ಪೈಜಾಮವನ್ನು ಹಾಕಿಕೊಂಡು ಬರುವಂತಿಲ್ಲ. ಯಾವುದೇ ಲೋಹದ ಆಭರಣಗಳನ್ನು ಧರಿಸಿಕೊಂಡು ಬರುವಂತಿಲ್ಲ. ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಕೆಇಎ ಬಿಡುಗಡೆ ಮಾಡಿದ ಡ್ರೆಸ್‌ಕೋಡ್‌ಗೆ ಸಂಬಂಧಿಸಿದ ಪ್ರಕಟಣೆ

ಪರೀಕ್ಷಾ ಕೇಂದ್ರದ ಒಳಗೆ ನೀರಿನ ಬಾಟಲಿ ತೆಗೆದುಕೊಂಡು ಹೋಗಬಹುದಾದರೂ ಬಾಟಲಿ ಪಾರದರ್ಶಕವಾಗಿರಬೇಕು. ಅದಕ್ಕೆ ಯಾವುದೇ ಲೇಬಲ್‌ ಇರಬಾರದು ಎಂದು ಸೂಚಿಸಲಾಗಿದೆ.
ಇತ್ತೀಚೆಗೆ ರಾಜ್ಯದಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಾಕಷ್ಟು ಅಕ್ರಮ ನಡೆದ ಪ್ರಕರಣಗಳು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಪ್ರಾಧಿಕಾರವು ಈ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಂಡಿದೆ.

ಇದನ್ನೂ ಓದಿ| KPTCL Recruitment 2022 | ಜು.23 ರಿಂದ ಎಕ್ಸಾಮ್‌; ಹೇಗಿರುತ್ತದೆ ಪರೀಕ್ಷೆ ಗೊತ್ತಾ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್‌ನಲ್ಲಿದೆ 164 ಹುದ್ದೆ; ಆನ್‌ಲೈನ್‌ ಮೂಲಕ ಅಪ್ಲೈ ಮಾಡಿ

Job Alert: ಭಾರತ ಸರ್ಕಾರದ ನಿಯಂತ್ರಣದಲ್ಲಿರುವ ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ವಿವಿಧ ವಿಷಯಗಳಲ್ಲಿನ ಮ್ಯಾನೇಜ್‌ಮೆಂಟ್‌ ಟ್ರೈನಿ ಹುದ್ದೆ ಇದಾಗಿದೆ. ಒಟ್ಟು 164 ಹುದ್ದೆ ಖಾಲಿ ಇದೆ. ಬಿಇ, ಬಿಎಸ್‌ಸಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜುಲೈ 2. ದೇಶದ ಎಲ್ಲಿಯಾದರೂ ಉದ್ಯೋಗ ನಿರ್ವಹಿಸಲು ತಯಾರಿರುವವರು ಅರ್ಜಿ ಸಲ್ಲಿಸಿ.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ನಿಯಂತ್ರಣದಲ್ಲಿರುವ ನ್ಯಾಷನಲ್ ಫರ್ಟಿಲೈಸರ್ಸ್ ಲಿಮಿಟೆಡ್ (National Fertilizers Limited) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ವಿವಿಧ ವಿಷಯಗಳಲ್ಲಿನ ಮ್ಯಾನೇಜ್‌ಮೆಂಟ್‌ ಟ್ರೈನಿ ಹುದ್ದೆ ಇದಾಗಿದೆ. ಒಟ್ಟು 164 ಹುದ್ದೆ ಖಾಲಿ ಇದೆ (NFL Recruitment 2024). ಬಿಇ, ಬಿಎಸ್‌ಸಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜುಲೈ 2 (Job Alert).

ಹುದ್ದೆಗಳ ವಿವರ

ಮ್ಯಾನೇಜ್‌ಮೆಂಟ್‌ ಟ್ರೈನಿ (ಕೆಮಿಕಲ್)- 56
ಮ್ಯಾನೇಜ್‌ಮೆಂಟ್‌ ಟ್ರೈನಿ (ಮೆಕ್ಯಾನಿಕಲ್)- 18
ಮ್ಯಾನೇಜ್‌ಮೆಂಟ್‌ ಟ್ರೈನಿ (ಎಲೆಕ್ಟ್ರಿಕಲ್)- 21
ಮ್ಯಾನೇಜ್‌ಮೆಂಟ್‌ ಟ್ರೈನಿ (ಇನ್ಸ್ಟ್ರುಮೆಂಟೇಶನ್)- 17
ಮ್ಯಾನೇಜ್‌ಮೆಂಟ್‌ ಟ್ರೈನಿ (ಕೆಮಿಕಲ್ ಲ್ಯಾಬ್)- 12
ಮ್ಯಾನೇಜ್‌ಮೆಂಟ್‌ ಟ್ರೈನಿ (ಸಿವಿಲ್)- 3
ಮ್ಯಾನೇಜ್‌ಮೆಂಟ್‌ ಟ್ರೈನಿ (ಫೈರ್ & ಸೇಫ್ಟಿ)- 5
ಮ್ಯಾನೇಜ್‌ಮೆಂಟ್‌ ಟ್ರೈನಿ (ಮಾಹಿತಿ ತಂತ್ರಜ್ಞಾನ)- 5
ಮ್ಯಾನೇಜ್‌ಮೆಂಟ್‌ ಟ್ರೈನಿ (ಮೆಟೀರಿಯಲ್ಸ್) -11
ಮ್ಯಾನೇಜ್‌ಮೆಂಟ್‌ ಟ್ರೈನಿ (ಎಚ್ಆರ್)- 16

ವಿದ್ಯಾರ್ಹತೆ ಮತ್ತು ವಯೋಮಿತಿ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಬಿಇ / ಬಿ.ಟೆಕ್ / ಬಿಎಸ್‌ಸಿ / ಎಂಬಿಎ / ಎಂಎಸ್‌ಸಿ / ಪಿಜಿ ಡಿಪ್ಲೋಮಾ / ಪಿಜಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 27 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು / ಮಾಜಿ ಯೋಧರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಉಳಿದ ಎಲ್ಲ ವರ್ಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 700 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು. ಲಿಖಿತ ಪರೀಕ್ಷೆ, ಸಂದರ್ಶನ, ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ನಡೆಯಲಿದೆ.

ಮಾಸಿಕ ವೇತನ

ಆಯ್ಕೆಯಾದವರಿಗೆ 1 ವರ್ಷ ತರಬೇತಿ ನೀಡಲಾಗುತ್ತದೆ. ಬಳಿಕ 3 ವರ್ಷಗಳ ಒಪ್ಪಂದದ ಮೇರೆಗೆ ನೇಮ ಮಾಡಿಕೊಳ್ಳಲಾಗುತ್ತದೆ. ದೇಶದ ಎಲ್ಲಿಯಾದರೂ ಉದ್ಯೋಗ ನಿರ್ವಹಿಸಲು ತಯಾರಿರುವವರು ಮಾತ್ರ ಅರ್ಜಿ ಸಲ್ಲಿಸಿ. ಆಯ್ಕೆಯಾದವರಿಗೆ 40,000 ರೂ.-1,40,000 ರೂ. ಮಾಸಿಕ ವೇತನ ಲಭಿಸಲಿದೆ.

NFL Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ (https://careers.nfl.co.in/).

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://careers.nfl.co.in/).
  • ಅಗತ್ಯ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಬಳಿಕ ಲಾಗಿನ್‌ ಆಗಿ ಸೂಕ್ತ ಮಾಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ +91-8660511568 ನಂಬರ್‌ಗೆ ಕರೆ ಮಾಡಿ.

ಇದನ್ನೂ ಓದಿ: Job Alert: ಕಾಟನ್‌ ಕಾರ್ಪೋರೇಷನ್‌ನಲ್ಲಿದೆ 214 ಹುದ್ದೆ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

Continue Reading

ದೇಶ

Amazon India: ನೀರು ಕುಡಿಯುವಂತಿಲ್ಲ, ವಾಶ್ ರೂಮ್ ಗೆ ಹೋಗುವಂತಿಲ್ಲ; ಸಿಬ್ಬಂದಿಗೆ ಅಮೆಜಾನ್ ಕಂಪನಿ ತಾಕೀತು!

ಹರಿಯಾಣದ ಅಮೆಜಾನ್ ನ (Amazon India) ಗೋದಾಮುಗಳಲ್ಲಿ ಕೆಲಸ ಮಾಡುವವರಿಗೆ ಶಿಫ್ಟ್ ಸಮಯದಲ್ಲಿ ನೀರು ಕುಡಿಯುವುದಿಲ್ಲ, ವಾಶ್ ರೂಮ್ ಗೆ ಹೋಗುವುದಿಲ್ಲ ಎಂದು ಪ್ರತಿಜ್ಞೆ ಮಾಡಲು ಒತ್ತಾಯಿಸಲಾಗಿದೆ. ವಿಶ್ರಾಂತಿ ಕೊಠಡಿ ಇದ್ದರೂ ಹತ್ತು ನಿಮಿಷಕ್ಕಿಂತ ಹೆಚ್ಚು ಹೊತ್ತು ಕಳೆಯುವಂತಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ. ಈ ಸಂಗತಿ ಈಗ ಭಾರಿ ಚರ್ಚೆಗೆ ಕಾರಣವಾಗಿದೆ.

VISTARANEWS.COM


on

By

Amazon India
Koo

ಅಮೆಜಾನ್ ನ (Amazon India) ಗೋದಾಮುಗಳಲ್ಲಿ (warehouse) ಕೆಲಸ ಮಾಡುವವರು ನೀರು ಕುಡಿಯಬಾರದು, ವಾಶ್ ರೂಮ್ ಗೆ ಹೋಗಬಾರದು (no toilet, water breaks) ಎಂದು ಒತ್ತಾಯಿಸಿರುವುದು ಬೆಳಕಿಗೆ ಬಂದಿದೆ. ಹರಿಯಾಣದ (Haryana) ಮಾನೇಸರ್‌ನಲ್ಲಿರುವ (Manesar) ಅಮೆಜಾನ್‌ನ ಐದು ಗೋದಾಮುಗಳ ಕೆಲಸ ಮಾಡುವವರಿಗೆ ಈ ಕಠಿಣ ಪ್ರತಿಜ್ಞೆ ಮಾಡಲು ಒತ್ತಾಯಿಸಲಾಗಿದೆ.

ಆರು ಟ್ರಕ್‌ಗಳಿಂದ ಪ್ಯಾಕೇಜ್‌ಗಳನ್ನು ಇಳಿಸುವ ಕಾರ್ಯ ಪೂರ್ಣಗೊಳ್ಳುವವರೆಗೆ ನೀರು ಕುಡಿಯುವುದಿಲ್ಲ, ವಾಶ್ ರೂಮ್ ಗೆ ಹೋಗುವುದಿಲ್ಲ ಎಂದು ಪ್ರತಿಜ್ಞೆ ಮಾಡುವಂತೆ ಒತ್ತಾಯಿಸಲಾಯಿತು.

ಶಿಫ್ಟ್ ಸಮಯದಲ್ಲಿ ಕಾರ್ಮಿಕರು ಸಮಯ ವ್ಯರ್ಥ ಮಾಡುತ್ತಿಲ್ಲವೇ ಎಂದು ಪರಿಶೀಲಿಸಲು ಹಿರಿಯರು ವಾಶ್‌ರೂಮ್‌ಗಳನ್ನು ಪರಿಶೀಲಿಸುತ್ತಾರೆ. ಹರಿಯಾಣದ ಮನೇಸರ್‌ನಲ್ಲಿರುವ ಅಮೆಜಾನ್ ಇಂಡಿಯಾದ ಐದು ಗೋದಾಮುಗಳಲ್ಲಿ ತಿಂಗಳಿಗೆ 10,088 ರೂ ಆದಾಯ ಪಡೆಯುವ 24 ವರ್ಷ ವಯಸ್ಸಿನವರು ವಾರದಲ್ಲಿ ಐದು ದಿನಗಳಲ್ಲಿ ದಿನಕ್ಕೆ ಹತ್ತು ಗಂಟೆ ಕೆಲಸ ಮಾಡುತ್ತಾರೆ.

ತಲಾ 30 ನಿಮಿಷಗಳ ಊಟ ಮತ್ತು ಚಹಾ ವಿರಾಮಗಳು ಸೇರಿ ಉಳಿದ ಯಾವುದೇ ವಿರಾಮವಿಲ್ಲದೆ ಕೆಲಸ ಮಾಡುತ್ತಿದ್ದರೂ ದಿನಕ್ಕೆ ನಾಲ್ಕು ಟ್ರಕ್‌ಗಳಿಗಿಂತ ಹೆಚ್ಚು ಇಳಿಸಲು ಸಾಧ್ಯವಿಲ್ಲ. ಎರಡು ದಿನಗಳ ಹಿಂದೆ, ಕಾರ್ಯಕ್ಷಮತೆಯನ್ನು ಸುಧಾರಿಸಲು ಮತ್ತು ಗುರಿಯನ್ನು ಸಾಧಿಸಲು ನಾವು ನೀರು ಮತ್ತು ವಾಶ್‌ರೂಮ್ ವಿರಾಮಗಳನ್ನು ತ್ಯಜಿಸುವುದಾಗಿ ಪ್ರತಿಜ್ಞೆ ಮಾಡಿಸಿದ್ದಾರೆ ಎಂದು ಕಾರ್ಮಿಕರು ದೂರಿದ್ದಾರೆ.


ಹರಿಯಾಣದ ಕೈಗಾರಿಕಾ ಕೇಂದ್ರವಾದ ಮನೇಸರ್‌ನಲ್ಲಿರುವ ಗೋದಾಮುಗಳಲ್ಲಿ ಕಾರ್ಮಿಕರಿಂದ ಆರೋಪ ಕೇಳಿ ಬಂದ ಬಳಿಕ ಅಮೆಜಾನ್ ಇಂಡಿಯಾದ ವಕ್ತಾರರು ಪರಿಶೀಲನೆ ನಡೆಸಿದರು.

ಕಾರ್ಮಿಕರ ಆರೋಪಗಳಿಗೆ ಪ್ರತಿಕ್ರಿಯಿಸಿದ ಅಮೆಜಾನ್ ಇಂಡಿಯಾದ ವಕ್ತಾರರು, ನಾವು ಈ ಬಗ್ಗೆ ತನಿಖೆ ನಡೆಸಿದ್ದೇವೆ. ಸ್ಪಷ್ಟವಾಗಿ ಹೇಳಬೇಕೆಂದರೆ ನಾವು ನಮ್ಮ ಉದ್ಯೋಗಿಗಳ ಮೇಲೆ ಈ ರೀತಿಯ ವಿನಂತಿಗಳನ್ನು ಎಂದಿಗೂ ಮಾಡುವುದಿಲ್ಲ. ಇಂತಹ ಘಟನೆ ಕಂಡುಬಂದರೆ ತಕ್ಷಣವೇ ಅದನ್ನು ನಿಲ್ಲಿಸುತ್ತೇವೆ. ತಂಡದ ಬೆಂಬಲ, ಆರೋಗ್ಯ ಮತ್ತು ಸುರಕ್ಷತೆಯ ಕುರಿತು ನಮ್ಮ ನಿರೀಕ್ಷೆಗಳು ಒಳಗೊಂಡಿರುತ್ತವೆ ಎಂದು ಹೇಳಿದ್ದಾರೆ.

ಕಂಪೆನಿಯು ತನ್ನ ಉದ್ಯೋಗಿಗಳ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಗಂಭೀರವಾಗಿ ಪರಿಗಣಿಸುತ್ತದೆ. ನಮ್ಮ ಎಲ್ಲಾ ಕಟ್ಟಡಗಳು ಶಾಖ ಸೂಚ್ಯಂಕ ಮಾನಿಟರಿಂಗ್ ಸಾಧನಗಳನ್ನು ಹೊಂದಿವೆ. ವಿಶೇಷವಾಗಿ ಬೇಸಿಗೆಯ ತಿಂಗಳುಗಳಲ್ಲಿ ತಾಪಮಾನದಲ್ಲಿನ ಬದಲಾವಣೆಗಳನ್ನು ನಾವು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತೇವೆ. ರೆಸ್ಟ್ ರೂಂ ಅನ್ನು ಬಳಸಲು, ನೀರು ಪಡೆಯಲು ಅಥವಾ ಮ್ಯಾನೇಜರ್ ಅಥವಾ ಹೆಚ್ ಆರ್ ನೊಂದಿಗೆ ಮಾತನಾಡಲು ಉದ್ಯೋಗಿಗಳು ತಮ್ಮ ಪಾಳಿಗಳ ಉದ್ದಕ್ಕೂ ಅನೌಪಚಾರಿಕ ವಿರಾಮಗಳನ್ನು ತೆಗೆದುಕೊಳ್ಳಲು ಮುಕ್ತರಾಗಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.

ಅಮೆಜಾನ್ ವಿದೇಶದಲ್ಲಿ ಇಂತಹ ಆರೋಪಗಳನ್ನು ಎದುರಿಸಿದೆ. ಯುಎಸ್ ನಲ್ಲಿನ ಔದ್ಯೋಗಿಕ ಸುರಕ್ಷತೆ ಮತ್ತು ಆರೋಗ್ಯ ಆಡಳಿತವು 2022 ಮತ್ತು 2023 ರಲ್ಲಿ ಕಂಪೆನಿಯ ಅಸುರಕ್ಷಿತ ಕೆಲಸದ ಪರಿಸ್ಥಿತಿಗಳು ಮತ್ತು ಆರು ಗೋದಾಮುಗಳಲ್ಲಿ ಕಾರ್ಮಿಕರಿಗೆ ಆದ ಗಾಯಗಳ ಕುರಿತು ಸರಿಯಾದ ವರದಿ ಮಾಡಲು ವಿಫಲವಾಗಿದೆ ಎನ್ನುವ ದೂರು ಕೇಳಿ ಬಂದಿತ್ತು.

ಇದನ್ನೂ ಓದಿ: Windfall Tax: ಕಚ್ಚಾ ತೈಲದ ಲಾಭ ತೆರಿಗೆಯನ್ನು ಪ್ರತಿ ಟನ್‌ಗೆ 3,250 ರೂ.ಗೆ ಇಳಿಸಿದ ಸರ್ಕಾರ

ಟ್ರಕ್‌ಗಳು ಹೊರಗೆ ನಿಲ್ಲಿಸುವುದರಿಂದ ಹೆಚ್ಚು ಬಿಸಿಯಾಗಿರುತ್ತವೆ. ಕಾರ್ಮಿಕರು ಅದರಿಂದ ವಸ್ತುಗಳನ್ನು ಇಳಿಸುವಾಗ ಬಹು ಬೇಗನೆ ದಣಿಯುತ್ತಾರೆ. ಇದು ಮಹಿಳೆಯರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಹರಿಯಾಣದ ಗೋದಾಮಿನಲ್ಲಿ ಕೆಲಸ ಮಾಡುವ ಮಹಿಳೆಯೊಬ್ಬರು ಹೇಳಿದ್ದಾರೆ.

ಗೋದಾಮಿನಲ್ಲಿ ಕೆಲಸ ಮಾಡುವ ಮಹಿಳೆಯರು ಸಾಕಷ್ಟಿದ್ದಾರೆ. ಆದರೆ ಈ ಆವರಣದಲ್ಲಿ ವಿಶ್ರಾಂತಿ ಕೊಠಡಿ ಇಲ್ಲ. ನಾವು ಅಸ್ವಸ್ಥರಾಗಿದ್ದರೆ ವಾಶ್‌ರೂಮ್ ಅಥವಾ ಲಾಕರ್ ಕೋಣೆಗೆ ಹೋಗುವುದು ಒಂದೇ ಆಯ್ಕೆಯಾಗಿದೆ. ಹಾಸಿಗೆ ಇರುವ ಒಂದು ಕೋಣೆ ಇದೆ. ಆದರೆ ಇಲ್ಲಿ ಕಾರ್ಮಿಕರನ್ನು 10 ನಿಮಿಷಗಳ ಅನಂತರ ಹೊರಡಲು ಕೇಳಲಾಗುತ್ತದೆ. ನಾನು ದಿನಕ್ಕೆ ಒಂಬತ್ತು ಗಂಟೆಗಳ ಕಾಲ ನಿಲ್ಲುತ್ತೇನೆ ಮತ್ತು ಪ್ರತಿ ಗಂಟೆಗೆ 60 ಸಣ್ಣ ಉತ್ಪನ್ನ ಅಥವಾ 40 ಮಧ್ಯಮ ಗಾತ್ರದ ಉತ್ಪನ್ನಗಳನ್ನು ತೆಗೆದುಕೊಂಡು ಹೋಗಬೇಕು ಎಂದು ದೂರಿದ್ದಾರೆ.

Continue Reading

ಉದ್ಯೋಗ

Job Alert: ಗುಡ್‌ನ್ಯೂಸ್‌: ಬ್ಯಾಂಕ್‌ ಆಫ್‌ ಬರೋಡಾದಲ್ಲಿದೆ 627 ಹುದ್ದೆ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ಬ್ಯಾಂಕ್‌ನಲ್ಲಿ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಭರ್ಜರಿ ಅವಕಾಶ. ದೇಶದ ಪ್ರತಿಷ್ಠಿತ ಬ್ಯಾಂಕ್‌ ಆಫ್‌ ಬರೋಡಾ ತನ್ನಲ್ಲಿ ಖಾಲಿ ಇರುವ 627 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ಪಡೆದ, ಕಂಪ್ಯೂಟರ್‌ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜುಲೈ 2. 627 ಹುದ್ದೆಗಳ ಪೈಕಿ 459 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಮತ್ತು 168 ಹುದ್ದೆಗಳನ್ನು ನಿಯಮಿತ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.

VISTARANEWS.COM


on

Job Alert
Koo

ಬೆಂಗಳೂರು: ಬ್ಯಾಂಕ್‌ನಲ್ಲಿ ಉದ್ಯೋಗ ನಿರ್ವಹಿಸಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಭರ್ಜರಿ ಅವಕಾಶ. ದೇಶದ ಪ್ರತಿಷ್ಠಿತ ಬ್ಯಾಂಕ್‌ ಆಫ್‌ ಬರೋಡಾ (Bank of Baroda) ತನ್ನಲ್ಲಿ ಖಾಲಿ ಇರುವ 627 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ಪಡೆದ, ಕಂಪ್ಯೂಟರ್‌ ಜ್ಞಾನ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಹುದು (Bank of Baroda Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಜುಲೈ 2 (Job Alert).

ಹುದ್ದೆಗಳ ವಿವರ

627 ಹುದ್ದೆಗಳ ಪೈಕಿ 459 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಮತ್ತು 168 ಹುದ್ದೆಗಳನ್ನು ನಿಯಮಿತ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಡೆಪ್ಯುಟಿ ವೈಸ್ ಪ್ರೆಸಿಡೆಂಟ್ – ಡಾಟಾ ಸೈಂಟಿಸ್ಟ್ & ಡಾಟಾ ಎಂಜಿನಿಯರ್: 4 ಹುದ್ದೆ
ಅಸಿಸ್ಟೆಂಟ್ ವೈಸ್ ಪ್ರೆಸಿಡೆಂಟ್ – ಡಾಟಾ ಸೈಂಟಿಸ್ಟ್ & ಡಾಟಾ ಎಂಜಿನಿಯರ್: 9 ಹುದ್ದೆ
ಆರ್ಕಿಟೆಕ್ಟ್: 8 ಹುದ್ದೆ
ಜೋನಲ್ ಸೇಲ್ಸ್ ಮ್ಯಾನೇಜರ್: 3 ಹುದ್ದೆ
ಅಸಿಸ್ಟೆಂಟ್ ವೈಸ್ಪ್ರೆಸಿಡೆಂಟ್: 20 ಹುದ್ದೆ
ಸೀನಿಯರ್ ಮ್ಯಾನೇಜರ್: 22 ಹುದ್ದೆ
ಮ್ಯಾನೇಜರ್: 11 ಹುದ್ದೆ
ರೇಡಿಯನ್ಸ್ ಪ್ರೈವೇಟ್ ಸೇಲ್ಸ್ ಹೆಡ್: 1 ಹುದ್ದೆ
ಗ್ರೂಪ್ ಹೆಡ್: 4 ಹುದ್ದೆ
ಟೆರಿಟರಿ ಹೆಡ್: 8 ಹುದ್ದೆ
ಸೀನಿಯರ್ ರಿಲೇಶನ್‌ಶಿಪ್‌ ಮ್ಯಾನೇಜರ್: 234 ಹುದ್ದೆ
ಇ-ವೆಲ್ತ್ ರಿಲೇಶನ್‌ಶಿಪ್‌ ಮ್ಯಾನೇಜರ್: 26 ಹುದ್ದೆ
ಪ್ರೈವೇಟ್ ಬ್ಯಾಂಕರ್-ರೇಡಿಯನ್ಸ್ ಪ್ರೈವೇಟ್: 12 ಹುದ್ದೆ
ಗ್ರೂಪ್ ಸೇಲ್ಸ್ ಹೆಡ್ (ವರ್ಚುವಲ್ ಆರ್‌ಎಂ ಸೇಲ್ಸ್ ಹೆಡ್): 1 ಹುದ್ದೆ
ವೆಲ್ತ್ ಸ್ಟ್ರಾಟಜಿಸ್ಟ್ (ಇನ್ವೆಸ್‌ಮೆಂಟ್‌ & ಇನ್ಶೂರೆನ್ಸ್)/ ಪ್ರಾಡಕ್ಟ್ ಹೆಡ್: 10 ಹುದ್ದೆ
ಪೋರ್ಟ್ಫೋಲಿಯೊ ರಿಸರ್ಚ್ ಅನಾಲಿಸ್ಟ್: 1 ಹುದ್ದೆ
ಎವಿಪಿ- ಅಕ್ವಿಸಿಷನ್ & ರಿಲೇಶನ್‌ಶಿಪ್‌ ಮ್ಯಾನೇಜರ್: 19 ಹುದ್ದೆ
ಫಾರೆಕ್ಸ್ ಅಕ್ವಿಸಿಷನ್ & ರಿಲೇಶನ್‌ಶಿಪ್‌ ಮ್ಯಾನೇಜರ್: 15 ಹುದ್ದೆ
ಕ್ರೆಡಿಟ್ ಅನಾಲಿಸ್ಟ್: 80 ಹುದ್ದೆ
ರಿಲೇಶನ್‌ಶಿಪ್‌ ಮ್ಯಾನೇಜರ್: 66 ಹುದ್ದೆ
ಸೀನಿಯರ್ ಮ್ಯಾನೇಜರ್- ಬಿಸಿನೆಸ್ ಫೈನಾನ್ಸ್: 4 ಹುದ್ದೆ
ಚೀಫ್ ಮ್ಯಾನೇಜರ್- ಇಂಟರ್ನಲ್ ಕಂಟ್ರೋಲ್ಸ್‌ – 3 ಹುದ್ದೆಗಳಿವೆ.

ವಿದ್ಯಾರ್ಹತೆ

ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಕೃಷಿ, ಪಶುವೈದ್ಯಕೀಯ ವಿಜ್ಞಾನ, ಸಮಾಜಶಾಸ್ತ್ರ, ಮನಃಶಾಸ್ತ್ರ ಮತ್ತು ಸಮಾಜ ಕಾರ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ. ಅಭ್ಯರ್ಥಿಗಳು ಸ್ಥಳೀಯ ಭಾಷೆ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಔದ್ಯೋಗಿಕ ಅನುಭವ ಕಡ್ಡಾಯ.

ಅರ್ಜಿ ಶುಲ್ಕ ಮತ್ತು ವಯೋಮಿತಿ

ಅರ್ಜಿ ಶುಲ್ಕವಾಗಿ ಸಾಮಾನ್ಯ, ಇಡಬ್ಲ್ಯುಎಸ್‌ ಮತ್ತು ಒಬಿಎಸ್ ವರ್ಗಗಳಿಗೆ ಸೇರಿದ ಅರ್ಜಿದಾರರು 600 ರೂ., ಎಸ್‌ಸಿ, ಎಸ್‌ಟಿ, ಅಂಗವಿಕಲ ಮತ್ತು ಮಹಿಳಾ ವರ್ಗಗಳಿಗೆ ಸೇರಿದ ಅರ್ಜಿದಾರರು 199 ರೂ. ಪಾವತಿಸಬೇಕಾಗುತ್ತದೆ. ಇದಕ್ಕೆ ತೆರಿಗೆ ಪ್ರತ್ಯೇಕ. ವಿವಿಧ ಹುದ್ದೆಗಳಿಗೆ ಅನುಗುಣವಾಗಿ 24 ವರ್ಷಗಳಿಂದ 60 ವರ್ಷದೊಳಗಿನವರು ಅರ್ಜಿ ಸಲ್ಲಿಬಹುದು.

ಆಯ್ಕೆ ವಿಧಾನ

ಆನ್‌ಲೈನ್‌ ಪರೀಕ್ಷೆ, ಗ್ರೂಪ್‌ ಡಿಸ್ಕಷನ್‌, ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರಿನಲ್ಲಿ ಪರೀಕ್ಷೆ ಆಯೋಜಿಸಲಾಗುತ್ತದೆ.

ನಿಯಮಿತ ಆಧಾರದಲ್ಲಿನ ನೇಮಕಾತಿಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಗುತ್ತಿಗೆ ಆಧಾರದಲ್ಲಿನ ನೇಮಕಾತಿಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲುವ ವಿಧಾನ

ಇದನ್ನೂ ಓದಿ: Job Alert: ಬರೋಬ್ಬರಿ 9,923 ಬ್ಯಾಂಕ್‌ ಹುದ್ದೆಗಳ ಭರ್ತಿಗೆ ಮುಂದಾದ ಐಬಿಪಿಎಸ್‌; ಇಂದೇ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: ಕಾಟನ್‌ ಕಾರ್ಪೋರೇಷನ್‌ನಲ್ಲಿದೆ 214 ಹುದ್ದೆ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

Job Alert: ಭಾರತ ಸರ್ಕಾರದ ಜವಳಿ ಸಚಿವಾಲಯದ ಮಾಲೀಕತ್ವದ ಅಡಿಯಲ್ಲಿ ಬರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆಯಾದ ಕಾಟನ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ 214 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 2.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ಜವಳಿ ಸಚಿವಾಲಯದ ಮಾಲೀಕತ್ವದ ಅಡಿಯಲ್ಲಿ ಬರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆಯಾದ ಕಾಟನ್‌ ಕಾರ್ಪೋರೇಷನ್‌ ಆಫ್‌ ಇಂಡಿಯಾ (Cotton Corporation of India Limited) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜ್‌ಮೆಂಟ್‌ ಟ್ರೈನಿ, ಅಸಿಸ್ಟೆಂಟ್‌ ಮ್ಯಾನೇಜರ್‌ ಸೇರಿ ಸುಮಾರು 214 ಹುದ್ದೆಗಳಿವೆ (Cotton Corporation of India Recruitment 2024). ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 2 (Job Alert).

ಹುದ್ದೆಗಳ ವಿವರ

ಅಸಿಸ್ಟೆಂಟ್ ಮ್ಯಾನೇಜರ್ (ಲೀಗಲ್) 1 ಹುದ್ದೆ, ವಿದ್ಯಾರ್ಹತೆ: ಕಾನೂನಿನಲ್ಲಿ ಪದವಿ, ಎಲ್‌ಎಲ್‌ಬಿ
ಅಸಿಸ್ಟೆಂಟ್ ಮ್ಯಾನೇಜರ್ (ಅಧಿಕೃತ ಭಾಷೆ) 1 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ
ಮ್ಯಾನೇಜ್‌ಮೆಂಟ್‌ ಟ್ರೈನಿ (ಮಾರ್ಕೆಟಿಂಗ್) 11 ಹುದ್ದೆ, ವಿದ್ಯಾರ್ಹತೆ: ಕೃಷಿ ಕ್ಷೇತ್ರದಲ್ಲಿ ಎಂಬಿಎ
ಮ್ಯಾನೇಜ್‌ಮೆಂಟ್‌ ಟ್ರೈನಿ (ಅಕೌಂಟ್ಸ್) 20 ಹುದ್ದೆ, ವಿದ್ಯಾರ್ಹತೆ: ಸಿಎ, ಸಿಎಂಎ, ಎಂಬಿಎ, ಎಂ.ಕಾಂ., ಎಂಎಂಎಸ್, ಸ್ನಾತಕೋತ್ತರ ಪದವಿ
ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್ 120 ಹುದ್ದೆ, ವಿದ್ಯಾರ್ಹತೆ: ಬಿಎಸ್‌ಸಿ ಅಗ್ರಿಕಲ್ಚರ್
ಜೂನಿಯರ್ ಅಸಿಸ್ಟೆಂಟ್ (ಸಾಮಾನ್ಯ) 20 ಹುದ್ದೆ, ವಿದ್ಯಾರ್ಹತೆ: ಬಿಎಸ್‌ಸಿ ಅಗ್ರಿಕಲ್ಚರ್
ಜೂನಿಯರ್ ಅಸಿಸ್ಟೆಂಟ್ (ಅಕೌಂಟ್ಸ್) 40 ಹುದ್ದೆ, ವಿದ್ಯಾರ್ಹತೆ: ಬಿ.ಕಾಂ.
ಜೂನಿಯರ್ ಅಸಿಸ್ಟೆಂಟ್ (ಹಿಂದಿ ಭಾಷಾಂತರಕಾರ) 1 ಹುದ್ದೆ, ವಿದ್ಯಾರ್ಹತೆ: ಹಿಂದಿಯಲ್ಲಿ ಪದವಿ

ವಯೋಮಿತಿ ಮತ್ತು ಅರ್ಜಿ ಶುಲ್ಕ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ 27 ವರ್ಷದಿಂದ 32 ವರ್ಷ ವಯೋಮಾನದವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗಕ್ಕೆ 3 ವರ್ಷ, ಎಸ್‌ಸಿ / ಎಸ್‌ಟಿ ವಿಭಾಗಕ್ಕೆ 5 ವರ್ಷ, ಪಿಡಬ್ಲ್ಯುಬಿಡಿ ವಿಭಾಗಕ್ಕೆ 10 ವರ್ಷಗಳ ರಿಯಾಯಿತಿ ಇದೆ. ಅರ್ಜಿ ಶುಲ್ಕವಾಗಿ ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್‌ ವಿಭಾಗದ ಅಭ್ಯರ್ಥಿಗಳು 1,000 ರೂ., ಎಸ್‌ಸಿ / ಎಸ್‌ಟಿ / ಇಎಸ್‌ಎಂ / ಪಿಡಬ್ಲ್ಯುಡಿ ಅಭ್ಯರ್ಥಿಗಳು 250 ರೂ. ಅನ್ನು ಆನ್‌ಲೈನ್‌ ಮೂಲಕ ಸಲ್ಲಿಸಬೇಕು.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಆಧಾರದಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Cotton Corporation of India Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಸೂಚನೆಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (cdn.digialm.com).
  • ಅಗತ್ಯ ಮಾಹಿತಿಗಳನ್ನು ನೀಡಿ ಹೆಸರು ನೋಂದಾಯಿಸಿ.
  • ಲಾಗಿನ್‌ ಆಗಿ ಅಗತ್ಯ ಮಾಹಿತಿಗಳ ಮೂಲಕ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ.
  • ಅಪ್ಲಿಕೇಷನ್‌ ಫಾರಂ ಅನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: Job Alert: ಎಚ್‌ಎಎಲ್‌ನಲ್ಲಿದೆ ಉದ್ಯೋಗಾವಕಾಶ; ಡಿಪ್ಲೋಮಾ ಪಾಸಾದವರು ಅಪ್ಲೈ ಮಾಡಿ

Continue Reading
Advertisement
Drowns in Lake
ಕರ್ನಾಟಕ23 mins ago

Drowns in lake: ಸ್ನೇಹಿತರ ಜತೆ ಕೆರೆಗೆ ಈಜಲು ಹೋದ ಬಾಲಕ ನೀರುಪಾಲು

Petrol Diesel Price
ಕರ್ನಾಟಕ59 mins ago

Petrol Diesel Price: ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ ಎಂದ ಸಿಎಂ

Amit Shah
ದೇಶ60 mins ago

Amit Shah: ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು; ಖಡಕ್‌ ಆದೇಶ ಕೊಟ್ಟ ಅಮಿತ್‌ ಶಾ

Karnataka Weather Forecast
ಮಳೆ2 hours ago

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Actor Darshan
ಪ್ರಮುಖ ಸುದ್ದಿ2 hours ago

Actor Darshan: ರೇಣುಕಾಸ್ವಾಮಿ ಕುಟುಂಬಕ್ಕಷ್ಟೇ ಅಲ್ಲ, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್‌

Lok Sabha Speaker
ದೇಶ2 hours ago

Lok Sabha Speaker: ಸ್ಪೀಕರ್‌ ಆಯ್ಕೆ ವಿಚಾರದಲ್ಲಿ ಟಿಡಿಪಿಗೆ ಬೆಂಬಲ ಎಂದ ಇಂಡಿಯಾ ಒಕ್ಕೂಟ; ಯಾರಾಗ್ತಾರೆ ಸ್ಪೀಕರ್?

Renukaswamy murder case The location of the accused is complete
ಸಿನಿಮಾ2 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Petrol Diesel Price
ಕರ್ನಾಟಕ3 hours ago

Petrol Diesel Price: ಚುನಾವಣೆ ಸೋಲಿನ ಸೇಡು ತೀರಿಸಿಕೊಳ್ಳಲು ತೈಲ ದರ ಏರಿಸಿದ ಕಾಂಗ್ರೆಸ್ ಸರ್ಕಾರ: ಆರ್‌. ಅಶೋಕ್‌ ಕಿಡಿ

Renuka swamy murder
ಚಿತ್ರದುರ್ಗ3 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Road Accident
ಕರ್ನಾಟಕ3 hours ago

Road Accident: ಸುಂಟಿಕೊಪ್ಪ‌ ಬಳಿ ಖಾಸಗಿ ಬಸ್- ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ2 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ3 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ8 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌