KSP Recruitment : ಐದು ಸಾವಿರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಜುಲೈನಲ್ಲಿ ಲಿಖಿತ ಪರೀಕ್ಷೆ? - Vistara News

ಉದ್ಯೋಗ

KSP Recruitment : ಐದು ಸಾವಿರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಜುಲೈನಲ್ಲಿ ಲಿಖಿತ ಪರೀಕ್ಷೆ?

ಸಬ್‌ಇನ್ಸ್‌ ಪೆಕ್ಟರ್‌ ನೇಮಕಾತಿ ಹಗರಣದಿಂದಾಗಿ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ನೇಮಕ ಪ್ರಕ್ರಿಯೆ (KSP Recruitment) ಮಂದಗತಿಯಲ್ಲಿ ನಡೆಯುತ್ತಿದ್ದು, ಈಗ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಜುಲೈನಲ್ಲಿ ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಡಿಜಿಪಿ ಪ್ರಕಟಿಸಿದ್ದಾರೆ.

VISTARANEWS.COM


on

KSP Constable Exam Date 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿನ 1,591 ನಾಗರಿಕ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಹಾಗೂ 3,484 ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ (KSP Recruitment) ರಾಜ್ಯ ವಿಧಾನಸಭಾ ಚುನಾವಣೆ ಮುಗಿದ ನಂತರ ಅಂದರೆ ಮುಂದಿನ ಜುಲೈನಲ್ಲಿ ಲಿಖಿತ ಪರೀಕ್ಷೆ ನಡೆಯುವ ಸಾಧ್ಯತೆ ಇದೆ.

ಬಹುತೇಕವಾಗಿ ಜುಲೈನಲ್ಲಿ ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸ್‌ ಮಹಾ ನಿರ್ದೇಶಕರು ಟ್ವಿಟ್ಟರ್‌ನಲ್ಲಿ ತಿಳಿಸಿದ್ದು, ಜುಲೈ 2, 9, 16 ಮತ್ತು 23 ರಂದು ಪರೀಕ್ಷೆ ನಡೆಸಲಾಗುವುದು ಎಂದು ತಾತ್ಕಾಲಿಕ ದಿನಾಂಕ ನೀಡಿದ್ದಾರೆ. 2022ರ ಸೆಪ್ಟೆಂಬರ್‌ ಹಾಗೂ ಅಕ್ಟೋಬರ್‌ನಲ್ಲಿ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು.

ಸಾವಿರಾರು ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ನೇಮಕ ಪ್ರಕ್ರಿಯೆಗಾಗಿ ಕಾಯುತ್ತಿದ್ದಾರೆ. ಈ ಕುರಿತು ಟ್ವಿಟ್ಟರ್‌ನಲ್ಲಿ ಅಭ್ಯರ್ಥಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಪೊಲೀಸ್‌ ಮಹಾ ನಿರ್ದೇಶಕ ಪ್ರವೀಣ್‌ ಸೂದ್‌, ಈ ಮಾಹಿತಿ ಹಂಚಿಕೊಂಡಿದ್ದಾರೆ. ಪೊಲೀಸ್‌ ಕಾನ್ಸ್‌ಟೇಬಲ್‌ ನೇಮಕ ಪ್ರಕ್ರಿಯೆಯಲ್ಲಿ ಮೊದಲಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು 1:5 ರ ಅನುಪಾತದಲ್ಲಿ ದೇಹದಾರ್ಢ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಗೆ ಆಹ್ವಾನಿಸಲಾಗುತ್ತದೆ. ಈ ಎರಡೂ ಪರೀಕ್ಷೆ ನಡೆದ ನಂತರ ವೈದ್ಯಕೀಯ ಪರೀಕ್ಷೆ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಆದರೆ ಅಧಿಸೂಚನೆ ಪ್ರಕಟವಾಗಿ ಆರು ತಿಂಗಳು ಕಳೆದರೂ ಮೊದಲಿಗೆ ನಡೆಯಬೇಕಾಗಿದ್ದ ಲಿಖಿತ ನಡೆಸಲಾಗಿರಲಿಲ್ಲ. ಈ ಬಗ್ಗೆ ಸ್ಪಷ್ಟ ಮಾಹಿತಿಯನ್ನೂ ಇಲಾಖೆ ನೀಡುತ್ತಿರಲಿಲ್ಲ. ಹೀಗಾಗಿ ಅಭ್ಯರ್ಥಿಗಳು ನಿರಾಸೆ ಅನುಭವಿಸುತ್ತಿದ್ದರು.

ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿದ್ದರಿಂದ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೇ ಈ ಹಗರಣದಲ್ಲಿ ಭಾಗಿಯಾಗಿದ್ದರಿಂದ ಪೊಲೀಸ್‌ ಇಲಾಖೆಯ ನೇಮಕ ಪ್ರಕ್ರಿಯೆಯ ಮೇಲೆ ಕಾರ್ಮೋಡ ಕವಿದಿದೆ. ಹೀಗಾಗಿ ಪೊಲೀಸ್‌ ಇಲಾಖೆ ಸೇರಬೇಕೆಂದು ಕನಸು ಹೊತ್ತಿದ್ದ ರಾಜ್ಯದ ಲಕ್ಷಾಂತರ ಅಭ್ಯರ್ಥಿಗಳು ಈಗ ದಿಕ್ಕುಕಾಣದಂತಾಗಿದ್ದಾರೆ.

ಲಿಖಿತ ಪರೀಕ್ಷೆಯಲ್ಲಿಯೂ ಅಕ್ರಮ ನಡೆದಿದ್ದರಿಂದ 545 ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ಈಗಾಗಲೇ ಪ್ರಕಟಿಸಿದೆ. ಆದರೆ ಇದರ ದಿನಾಂಕವನ್ನೂ ಇದುವರೆಗೆ ಪ್ರಕಟಿಸಲಾಗಿಲ್ಲ. ಈಗಾಗಲೇ ಪರೀಕ್ಷೆ ಬರೆದು, ನೇಮಕ ಪ್ರಕ್ರಿಯೆಯಲ್ಲಿ ಅಂತಿಮ ಹಂತಕ್ಕೆ ಬಂದಿದ್ದ ಅಭ್ಯರ್ಥಿಗಳು ಕೂಡ ಈ ಪರೀಕ್ಷೆಗಾಗಿ ಕಾಯುತ್ತಲೇ ಇದ್ದಾರೆ.

ಈ ನಡುವೆ ಕರ್ನಾಟಕ ಲೋಕ ಸೇವಾ ಆಯೋಗವು ಈಗಾಗಲೇ ಈ ವರ್ಷ ನಡೆಸಲಿರುವ ವಿವಿಧ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಕಟಿಸಿದೆ. ಇದರ ಪ್ರಕಾರ ಜುಲೈ 1 ಮತ್ತು 2 ರಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಸಹಾಯಕ ಕಾರ್ಯಪಾಲಕ ಅಭಿಯಂತರರ ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗುತ್ತದೆ. ಹೀಗಾಗಿ ಪೊಲೀಸ್‌ ಮಹಾನಿರ್ದೇಶಕರು ತಿಳಿಸಿದಂತೆ ಜುಲೈ 2 ರಂದು ಪರೀಕ್ಷೆ ನಡೆಸಲು ಸಾಧ್ಯವಾಗದು ಎಂದು ಅಭ್ಯರ್ಥಿಗಳು ತಿಳಿಸಿದ್ದಾರೆ.

ಒಟ್ಟಾರೆಯಾಗಿ ಪೊಲೀಸ್‌ ನೇಮಕಕ್ಕೆ ಜುಲೈನಲ್ಲಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಇಲಾಖೆಯ ಮುಖ್ಯಸ್ಥರು ಪ್ರಕಟಿಸಿರುವುದು ಅಭ್ಯರ್ಥಿಗಳಲ್ಲಿ ಹೊಸ ಭರವಸೆ ಮೂಡಿಸಿದೆ.

ಇದನ್ನೂ ಓದಿ : BMRCL Recruitment 2023 : ನಮ್ಮ ಮೆಟ್ರೋದಲ್ಲಿ 236 ಹುದ್ದೆಗಳಿಗೆ ನೇಮಕ; ಬಿಇ, ಡಿಪ್ಲೊಮಾ, ಐಟಿಐ ಮಾಡಿದವರಿಗೆ ಅವಕಾಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: 247 ಪಿಡಿಒ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ; ಇಲ್ಲಿದೆ ಡೈರಕ್ಟ್‌ ಲಿಂಕ್‌

Job Alert: ಕರ್ನಾಟಕ ಲೋಕಸೇವಾ ಆಯೋಗ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್‌ ಸಿ ವೃಂದದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ಭರ್ತಿಗೆ ಡೈರಕ್ಟ್‌ ಲಿಂಕ್‌ ಬಿಡುಗಡೆ ಮಾಡಿದೆ. ಒಟ್ಟು 247 ಹುದ್ದೆಗಳಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮೇ 15.

VISTARANEWS.COM


on

Job Alert
Koo

ಬೆಂಗಳೂರು: ಉದ್ಯೋಗ ಹುಡುಕುತ್ತಿರುವವರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ಕರ್ನಾಟಕ ಲೋಕಸೇವಾ ಆಯೋಗ (KPSC) ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್‌ ಸಿ ವೃಂದದ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗಳ ಭರ್ತಿಗೆ ಈ ಹಿಂದೆಯೇ ಅಧಿಸೂಚನೆ ಬಿಡುಗಡೆ ಮಾಡಿತ್ತು (Panchayat Development Officer Recruitment 2024).‌ ಉಳಿಕೆ ಮೂಲ ವೃಂದ ಹಾಗೂ ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ ಒಟ್ಟು 247 ಹುದ್ದೆಗಳಿವೆ. ಹೀಗಾಗಿ ಎರಡು ವೃಂದಗಳಿಗೆ ಪ್ರತ್ಯೇಕ ಅಧಿಸೂಚನೆ ಬಿಡುಗಡೆ ಮಾಡಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ಲಿಂಕ್‌ ಅನ್ನೂ ಬಿಡುಗಡೆ ಮಾಡಲಾಗಿದೆ. ಆಸಕ್ತರು ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ 15 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಉಳಿಕೆ ಮೂಲ ವೃಂದದಲ್ಲಿ 150 ಮತ್ತು ಹೈದರಾಬಾದ್‌ ಕರ್ನಾಟಕ ವೃಂದದಲ್ಲಿ 97 ಹುದ್ದೆಗಳಿವೆ. ಅಭ್ಯರ್ಥಿಗಳು ಭಾರತದ ಕಾನೂನಿನ್ವಯ ಸ್ಥಾಪಿತವಾದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ. ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ವಿನಾಯಿತಿ ಇದೆ. ಅರ್ಜಿ ಶುಲ್ಕವಾಗಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು 600 ರೂ., ಇತರ ಹಿಂದುಳಿದ ಎಲ್ಲ ವರ್ಗದ ಅಭ್ಯರ್ಥಿಗಳು 300 ರೂ., ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಇನ್ನು ಅರ್ಜಿ ಶುಲ್ಕ ಸಲ್ಲಿಸುವವರು ಆನ್‌ಲೈನ್‌ ಮೂಲಕ ಪಾವತಿಸಬೇಕು. ಇದಕ್ಕಾಗಿ ನೆಟ್‌ ಬ್ಯಾಂಕಿಂಗ್‌, ಡೆಬಿಡ್‌, ಕ್ರೆಡಿಟ್‌ ಕಾರ್ಡ್‌ ಅಥವಾ ಯುಪಿಐ ವಿಧಾನವನ್ನು ಬಳಬಹುದು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 37,900 ರೂ. – 70,850 ರೂ. ಮಾಸಿಕ ವೇತನವಿದೆ.

ಸ್ಪರ್ಧಾತ್ಮಕ ಪರೀಕ್ಷೆಯ ವಿಧಾನ

ಎರಡು ಪತ್ರಿಕೆಗಳ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಪತ್ರಿಕೆ-1ರಲ್ಲಿ ಸಾಮಾನ್ಯ ಜ್ಞಾನ, ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್ ಕುರಿತ ವಸ್ತುನಿಷ್ಠ ಬಹು ಆಯ್ಕೆ ಪ್ರಶ್ನೆಗಳು ಇರುತ್ತವೆ. ಪತ್ರಿಕೆ-2ರಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ವಿಷಯಕ್ಕೆ ಸಂಬಂಧಿಸಿದ 100 ಪ್ರಶ್ನೆಗಳು ಇರುತ್ತವೆ. ಇದು ಕೂಡ ವಸ್ತುನಿಷ್ಠ ಬಹು ಆಯ್ಕೆ ಪ್ರಶ್ನೆಗಳಾಗಿರುತ್ತವೆ. ತಪ್ಪು ಉತ್ತರಕ್ಕೆ ನೆಗೆಟಿವ್‌ ಅಂಕಗಳಿದ್ದು ಗಮನಿಸಿ ಉತ್ತರಿಸುವುದು ಮುಖ್ಯ. ಪ್ರಶ್ನೆ ಪತ್ರಿಕೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿರುತ್ತದೆ. ಪರೀಕ್ಷೆಗಳನ್ನು ಆಯೋಗ ನಿಗದಿಪಡಿಸಿದ ಯಾವುದೇ ಕೇಂದ್ರದಲ್ಲಿ ನಡೆಸಲಾಗುವುದು.

ಪಿಡಿಒ ಉಳಿಕೆ ಮೂಲವೃಂದದ ನೇಮಕಾತಿಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.
ಪಿಡಿಒ ಉಳಿಕೆ ಹೈದರಾಬಾದ್‌ ಕರ್ನಾಟಕ ನೇಮಕಾತಿಯ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಬಳಿಕ ತೆರೆದುಕೊಳ್ಳುವ ಪುಟದ ಕೆಳಭಾಗದಲ್ಲಿರುವ Apply Online for various notifications ಆಯ್ಕೆಯನ್ನು ಕ್ಲಿಕ್‌ ಮಾಡಿ. ಬಳಿಕ Panchayat Development Officer ಆಪ್ಶನ್‌ ಸೆಲೆಕ್ಟ್‌ ಮಾಡಿ. ಹೆಸರು ನೋಂದಾಯಿಸಿದ ಬಳಿಕ ಅರ್ಜಿ ಭರ್ತಿ ಮಾಡಿ.

ಹೆಚ್ಚಿನ ವಿವರಗಳಿಗೆ: 080-30574957 / 30574901 ನಂಬರ್‌ ಸಂಪರ್ಕಿಸಿ.

ಇದನ್ನೂ ಓದಿ: Job Alert: ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಗುಡ್‌ನ್ಯೂಸ್‌; ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸ್ ಹುದ್ದೆಯ ಸಂದರ್ಶನಕ್ಕೆ ನೇರ ಹಾಜರಾಗಿ

Continue Reading

ಉದ್ಯೋಗ

Job Alert: ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನಲ್ಲಿದೆ 4,660 ಹುದ್ದೆ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ಉದ್ಯೋಗಕ್ಕಾಗಿ ಹುಡುಕಾಟ ನಡೆಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ರೈಲ್ವೆ ನೇಮಕಾತಿ ಮಂಡಳಿ 4,660 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮೇ 14. ಕಾನ್‌ಸ್ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳು ಇದಾಗಿದೆ. ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದವರು ಕಾನ್‌ಸ್ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಇನ್ನು ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದಿರಬೇಕು.

VISTARANEWS.COM


on

Job Alert
Koo

ಬೆಂಗಳೂರು: ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದೀರಾ? ಇಲ್ಲಿದೆ ಭರಪೂರ ಅವಕಾಶ. ಭಾರತೀಯ ರೈಲ್ವೆ ಇಲಾಖೆಯಲ್ಲಿ ಭಾರೀ ಉದ್ಯೋಗಾವಕಾಶಗಳಿವೆ. ರೈಲ್ವೆ ನೇಮಕಾತಿ ಮಂಡಳಿ (Railway Recruitment Board) ಈ ನೇಮಕಾತಿ ನಡೆಸುತ್ತಿದೆ (RPF Recruitment 2024). ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ (Railway Protection Force)ನಲ್ಲಿ ಬರೋಬ್ಬರಿ 4,660 ಹುದ್ದೆಗಳಿವೆ. ಕಾನ್‌ಸ್ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳು ಇದಾಗಿದ್ದು, ಎಸ್ಸೆಸ್ಸೆಲ್ಸಿ ತೆರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 14 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕಾನ್‌ಸ್ಟೇಬಲ್‌ – 4,208, ಸಬ್‌ ಇನ್ಸ್‌ಪೆಕ್ಟರ್‌ – 452 ಹುದ್ದೆಗಳಿವೆ. ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದವರು ಕಾನ್‌ಸ್ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಇನ್ನು ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದಿರಬೇಕು.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಕಾನ್‌ಸ್ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ, ಗರಿಷ್ಠ ವಯಸ್ಸು 25 ವರ್ಷ. ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 28 ವರ್ಷ. ಅರ್ಜಿ ಶುಲ್ಕವಾಗಿ ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳು 500 ರೂ. ಮತ್ತು ಎಸ್‌ಸಿ, ಎಸ್‌ಟಿ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳು 250 ರೂ. ಪಾವತಿಸಬೇಕು.

ವೇತನ ಮತ್ತು ಆಯ್ಕೆ ವಿಧಾನ

ಕಾನ್ಸ್‌ಟೇಬಲ್‌ ಹುದ್ದೆಗಳಿಗೆ 21,700 ರೂ. ಮತ್ತು ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ 35,400 ರೂ. ಮಾಸಿಕ ವೇತನ ಲಭ್ಯ. ಕಂಪ್ಯೂಟರ್‌ ಆಧಾರಿತ ಪರೀಕ್ಷೆ (CBT), ದೈಹಿಕ ಸಾಮರ್ಥ್ಯ ಪರೀಕ್ಷೆ (PET, PMT), ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಆಯ್ಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನಿಮ್ಮ ಹೆಸರು, ವೈಯಕ್ತಿಕ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಈಗ ರಿಜಿಸ್ಟ್ರೇಷನ್‌ ಐಡಿ ಮತ್ತು ಪಾಸವರ್ಡ್‌ ದೊರೆಯುತ್ತದೆ. ಅದನ್ನು ಬಳಿಸಿ ಲಾಗಿನ್‌ ಆಗಿ.
  • ಈಗ ಕಂಡು ಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ. ವೈಯಕ್ತಿಕ, ಶೈಕ್ಷಣಿಕ ಮಾಹಿತಿ ನೀಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕವನ್ನು ಪಾವತಿಸಿ.
  • ಭರ್ತಿ ಮಾಡಿದ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಗಮನಿಸಿ

ಲಿಖಿತ ಪರೀಕ್ಷೆಯಲ್ಲಿ ನೆಗೆಟಿವ್‌ ಅಂಕಗಳಿದ್ದು, ಎಚ್ಚರಿಕೆಯಿಂದ ಉತ್ತರ ಬರೆಯಬೇಕು ಎಂದು ಪ್ರಕಟಣೆ ತಿಳಿಸಿದೆ. ಲಿಖಿತ ಪರೀಕ್ಷೆಯ ಅವಧಿ 90 ನಿಮಿಷದ ಅವಧಿಯದ್ದಾಗಿದ್ದು, ಪ್ರಶ್ನೆಗಳು ಬಹು ಆಯ್ಕೆಯ ಉತ್ತರವನ್ನು ಒಳಗೊಂಡಿದೆ. ಕಾನ್‌ಸ್ಟೇಬಲ್‌ ಹುದ್ದೆಯ ಪರೀಕ್ಷೆ ಎಸ್ಸೆಸ್ಸೆಲ್ಸಿ ಹಂತದ ಪ್ರಶ್ನೆಗಳನ್ನು ಒಳಗೊಂಡಿದ್ದು, ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಯ ಪರೀಕ್ಷೆ ಪದವಿ ಹಂತದ ಪ್ರಶ್ನೆಗಳನ್ನು ಒಳಗೊಂಡಿದೆ.

ಇದನ್ನೂ ಓದಿ: Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ

Continue Reading

ಉದ್ಯೋಗ

Job Alert: ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿದೆ ಗುಡ್‌ನ್ಯೂಸ್‌; ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸ್ ಹುದ್ದೆಯ ಸಂದರ್ಶನಕ್ಕೆ ನೇರ ಹಾಜರಾಗಿ

Job Alert: ಏರ್‌ ಇಂಡಿಯಾ ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸ್ ಲಿಮಿಟೆಡ್‌ ಖಾಲಿ ಇರುವ 422 ಹುದ್ದೆಗಳನ್ನು ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಹ್ಯಾಂಡಿ ಮ್ಯಾನ್‌, ಹ್ಯಾಂಡಿ ವುಮೆನ್, ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್ ಹುದ್ದೆ ಇದಾಗಿದ್ದು, ಎಸ್ಸೆಸ್ಸೆಲ್ಸಿ ಪಾಸಾದವರು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಉದ್ಯೋಗ ಸ್ಥಳ: ಚೆನ್ನೈ. ಮೇ 2 ಮತ್ತು ಮೇ 4ರಂದು ಆಸಕ್ತರು ಸಂದರ್ಶನಕ್ಕೆ ಹಾಜರಾಗಬಹುದು.

VISTARANEWS.COM


on

Job Alert
Koo

ನವದೆಹಲಿ: ಉತ್ತಮ ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಏರ್‌ ಇಂಡಿಯಾ ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸ್ ಲಿಮಿಟೆಡ್‌ (Air India Air Transport Services Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಹ್ಯಾಂಡಿ ಮ್ಯಾನ್‌, ಹ್ಯಾಂಡಿ ವುಮೆನ್, ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್ ಸೇರಿ 422 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ (AIATSL Recruitment 2024) ಎಂದು ಪ್ರಕಟಣೆ ತಿಳಿಸಿದೆ. ಉದ್ಯೋಗದ ಸ್ಥಳ: ಚೆನ್ನೈ ಇಂಟರ್‌ ನ್ಯಾಷನಲ್‌ ಏರ್‌ಪೋರ್ಟ್‌. ಆಸಕ್ತರು ಅರ್ಜಿ ಸಲ್ಲಿಸಬೇಕಾಗಿಲ್ಲ, ಪರೀಕ್ಷೆ ಬರೆಯಬೇಕಾಗಿಲ್ಲ. ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್: 130, ಹ್ಯಾಂಡಿ ಮ್ಯಾನ್ / ಹ್ಯಾಂಡಿ ವುಮೆನ್: 292 ಹುದ್ದೆಗಳಿವೆ. ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್ಸೆಸ್ಸೆಲ್ಸಿ ಪಾಸ್ ಜತೆಗೆ, ಹೆವಿ ಮೋಟಾರ್ ವೆಹಿಕಲ್ ಚಾಲನ ಪರವಾನಗಿ ಹೊಂದಿರಬೇಕು. ಹ್ಯಾಂಡಿ ಮ್ಯಾನ್ / ಹ್ಯಾಂಡಿ ವುಮೆನ್ ಹುದ್ದೆಗೆ ಬೇಕಾದ ಅರ್ಹತೆ ಎಂದರೆ ಎಸ್ಸೆಸ್ಸೆಲ್ಸಿ ಪಾಸ್ ಜತೆಗೆ ಇಂಗ್ಲಿಷ್ ಭಾಷೆ ಓದಲು, ಬರೆಯಲು ಬರಬೇಕು. ಸ್ಥಳೀಯ ಭಾಷೆ ಮತ್ತು ಹಿಂದಿ ಮಾತನಾಡಲು ಗೊತ್ತಿರಬೇಕು.

ವಯೋಮಿತಿ ಮತ್ತು ಆಯ್ಕೆ ವಿಧಾನ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವರಿಷ್ಠ ವಯೋಮಿತಿ 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಆಸಕ್ತರು ನೇರ ಸಂದರ್ಶನಕ್ಕೆ ಈ ಕೆಳಗಿನ ವಿಳಾಸಕ್ಕೆ ಹಾಜರಾಗಬೇಕು.

Office of the HRD Department,
AI Unity Complex, Pallavaram Cantonment, Chennai – 600 043.
Land Mark: Near Taj Catering.

ದಿನಾಂಕ: ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್: ಮೇ 2 (ಬೆಳಿಗ್ಗೆ 9-12).

ಹ್ಯಾಂಡಿ ಮ್ಯಾನ್ / ಹ್ಯಾಂಡಿ ವುಮೆನ್: ಮೇ 4 (ಬೆಳಿಗ್ಗೆ 9-12).

ಆಯ್ಕೆಯಾದವರನ್ನು 3 ವರ್ಷಗಳ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಾಗುತ್ತದೆ. ಬಳಿಕ ಅವರ ಕಾರ್ಯ ಕ್ಷಮತೆಯ ಆಧಾರದಲ್ಲಿ ಉದ್ಯೋಗದ ಅವಧಿಯನ್ನು ಮುಂದುವರಿಸಲಾಗುತ್ತದೆ. ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್ ಹುದ್ದೆಗೆ ಆಯ್ಕೆಯಾಗುವವರು ಟ್ರ್ಯಾಕ್ಟರ್, ಬಸ್ ಮತ್ತು ಗ್ರೌಂಡ್ ಸರ್ವಿಸ್ ಉಪಕರಣಗಳಂತಹ ಭಾರೀ ವಾಹನಗಳನ್ನು ಚಲಾಯಿಸಬೇಕಾಗುತ್ತದೆ. ಹ್ಯಾಂಡಿ ಮ್ಯಾನ್ / ಹ್ಯಾಂಡಿ ವುಮೆನ್ ಹುದ್ದೆಗೆ ಆಯ್ಕೆಯಾಗುವವರು ವಿಮಾನ ನಿಲ್ದಾಣದಲ್ಲಿ ಬ್ಯಾಗೇಜ್ / ಸರಕು ಲೋಡ್ ಮಾಡುವುದು ಮತ್ತು ಕ್ಯಾಬಿನ್‌ನಿಂದ ಅನ್‌ಲೋಡ್‌ ಮಾಡುವುದು, ವಿಮಾನವನ್ನು ಸ್ವಚ್ಛಗೊಳಿಸುವುದು, ಕಾರ್ಯಾಗಾರದಲ್ಲಿ ತಂತ್ರಜ್ಞರಿಗೆ ನೆರವಾಗುವುದು, ವ್ಹೀಲ್ ಚೇರ್ ಶುಚಿಗೊಳಿಸುವುದು ಮುಂತಾದ ಕಾರ್ಯಗಳು ನಿರ್ವಹಿಸಬೇಕಾಗುತ್ತದೆ.

ಸಂದರ್ಶನಕ್ಕೆ ಹಾಜರಾಗುವುದು ಹೇಗೆ?

ಅರ್ಹತಾ ಮಾನದಂಡಗಳನ್ನು ಪೂರೈಸುವ ಅರ್ಜಿದಾರರು ಅಧಿಸೂಚನೆಯೊಂದಿಗೆ ನೀಡಲಾದ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿದ ಅಗತ್ಯ ಪ್ರಮಾಣ ಪತ್ರಗಳು / ಪ್ರಮಾಣಪತ್ರಗಳ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಜತೆಗೆ ಸಾಮಾನ್ಯ, ಒಬಿಸಿ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂಪಾಯಿಯನ್ನು “AI AIRPORT SERVICES LIMITEDʼʼ ಈ ಹೆಸರಿಗೆ ಡಿಮ್ಯಾಂಡ್‌ ಡ್ರಾಫ್ಟ್‌ ಮಾಡಬೇಕು. ಡಿಮ್ಯಾಂಡ್‌ ಡ್ರಾಫ್ಟ್‌ ಹಿಂಭಾಗದಲ್ಲಿ ನಿಮ್ಮ ಪೂರ್ತಿ ಹೆಸರು, ಮೊಬೈಲ್‌ ನಂಬರ್‌ ಬರೆಯುವುದನ್ನು ಮರೆಯಬೇಡಿ. ಗಮನಿಸಿ, ಮಾಜಿ ಯೋಧರು, ಎಸ್‌ಸಿ / ಎಸ್‌ಟಿ ವಿಭಾಗದವರಿಗೆ ಅರ್ಜಿ ಶುಲ್ಕವಿಲ್ಲ.

ವೇತನ

ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್: 24,960 ರೂ., ಹ್ಯಾಂಡಿಮ್ಯಾನ್ / ಹ್ಯಾಂಡಿ ವುಮೆನ್: 22,530 ರೂ. ಮಾಸಿಕ ವೇತನ ಲಭ್ಯ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 10ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ

Continue Reading

ಶಿಕ್ಷಣ

UPSC Result 2024: 12 ಪ್ರಯತ್ನದ ಹೊರತಾಗಿಯೂ ಸಿಗದ ಯಶಸ್ಸು; ಯುಪಿಎಸ್‌ಸಿ ಆಕಾಂಕ್ಷಿಯ ಪೋಸ್ಟ್‌ ವೈರಲ್‌

UPSC Result 2024: ಬಹು ನಿರೀಕ್ಷಿತ ಕೇಂದ್ರ ಲೋಕ ಸೇವಾ ಆಯೋಗದ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಉತ್ತರ ಪ್ರದೇಶದ ಆದಿತ್ಯ ಶ್ರೀವಾಸ್ತವ್‌ ಮೊದಲ ಸ್ಥಾನ ಪಡೆದಿದ್ದಾರೆ. ಓ ಮಧ್ಯೆ ತಮ್ಮ 12ನೇ ಪ್ರಯತ್ನದ ಹೊರತಾಗಿಯೂ ಆಯ್ಕೆಯಾಗದ ಕುನಾಲ್ ಆರ್. ವಿರುಲ್ಕರ್ ಎನ್ನುವವರು ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ ನೋವನ್ನು ತೋಡಿಕೊಂಡಿದ್ದಾರೆ. ಸದ್ಯ ಈ ಪೋಸ್ಟ್‌ ವೈರಲ್‌ ಆಗಿದೆ.

VISTARANEWS.COM


on

UPSC Result 2024
Koo

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC) ನಡೆಸಿದ ನಾಗರಿಕ ಸೇವೆಗಳ ಪರೀಕ್ಷೆಯ (UPSC Results 2023) ಫಲಿತಾಂಶ ಪ್ರಕಟವಾಗಿದ್ದು, ಉತ್ತರ ಪ್ರದೇಶದ ಆದಿತ್ಯ ಶ್ರೀವಾಸ್ತವ್‌ (Aditya Srivastava) ಅವರು ದೇಶದಲ್ಲೇ ಮೊದಲ ರ‍್ಯಾಂಕ್‌ ಗಳಿಸಿದ್ದಾರೆ. ಆ ಮೂಲಕ ಅಪರೂಪದ ಸಾಧನೆ ಮಾಡಿದ್ದಾರೆ. ಇನ್ನು ಅನಿಮೇಶ್ ಪ್ರಧಾನ್ ಮತ್ತು ಡೊನೂರು ಅನನ್ಯಾ ರೆಡ್ಡಿ ಕ್ರಮವಾಗಿ ಎರಡು ಮತ್ತು ಮೂರನೇ ರ‍್ಯಾಂಕ್‌ ಪಡೆದಿದ್ದಾರೆ. ಈ ಮಧ್ಯೆ ಯುಪಿಎಸ್‌ಸಿ ಆಕಾಂಕ್ಷಿ ಕುನಾಲ್ ಆರ್. ವಿರುಲ್ಕರ್ (Kunal R Virulkar) ಎನ್ನುವವರು ತಮ್ಮ 12ನೇ ಪ್ರಯತ್ನದಲ್ಲಿಯೂ ಆಯ್ಕೆಯಾಗದ ವಿಚಾರವನ್ನು ತಿಳಿಸಿದ್ದಾರೆ. ತಮ್ಮ ಹೋರಾಟವನ್ನು ಅವರು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ವೈರಲ್‌ ಆಗಿದೆ (Viral News).

“12 ಪ್ರಯತ್ನಗಳು, 7 ಮುಖ್ಯ ಪರೀಕ್ಷೆ, 5 ಸಂದರ್ಶನ. ಆದರೂ ಆಯ್ಕೆಯಾಗಲಿಲ್ಲ” ಎಂದು ಬರೆದುಕೊಂಡಿರುವ ವಿರುಲ್ಕರ್ ದೆಹಲಿಯ ಯುಪಿಎಸ್‌ಸಿ ಪ್ರಧಾನ ಕಚೇರಿಯ ಹೊರಗೆ ನಿಂತುಕೊಂಡಿರುವ ತಮ್ಮ ಚಿತ್ರವನ್ನು ಪೋಸ್ಟ್‌ ಮಾಡಿದ್ದಾರೆ.

ಪೋಸ್ಟ್‌ ವೈರಲ್‌

ಸದ್ಯ ವಿರುಲ್ಕರ್ ಅವರ ಪೋಸ್ಟ್‌ ಅನ್ನು 5 ಲಕ್ಷಕ್ಕಿಂತ ಅದಿಕ ಮಂದಿ ವೀಕ್ಷಿಸಿದ್ದಾರೆ. ನೂರಾರು ಮಂದಿ ಪ್ರತಿಕ್ರಿಯಿಸಿ ಸಾಂತ್ವನ ಹೇಳಿದ್ದಾರೆ. ಹಲವು ಮಂದಿ ಇತರರ ಉದಾಹರಣೆ ನೀಡಿ ಸಮಾಧಾನ ಪಡಿಸಿದರೆ, ಇನ್ನು ಕೆಲವರು ಸ್ಫೂರ್ತಿದಾಯಕ ಕಥೆ ಹೇಳಿದ್ದಾರೆ. ಐಎಎಸ್ ಅಧಿಕಾರಿ ಅವನೀಶ್ ಶರಣ್ ಕಮೆಂಟ್‌ ಮಾಡಿ, ʼʼನಿಮ್ಮ ಬೆಂಬಲಕ್ಕೆ ನಾವೆಲ್ಲ ಇದ್ದೇವೆ. ನಿಮ್ಮ ಬಗ್ಗೆ ಹೆಮ್ಮೆ ಪಡುತ್ತೇವೆ. ಒಂದಲ್ಲ ಒಂದು ದಿನ ನಿಮ್ಮ ಪ್ರಯತ್ನದಲ್ಲಿ ಜಯ ಗಳಿಸುತ್ತೀರಿʼʼ ಎಂದು ಹೇಳಿದ್ದಾರೆ. “ಚಿಂತಿಸಬೇಡಿ. ಪ್ರಯತ್ನಿಸುತ್ತಲೇ ಇರಿ. ಮುಂದೊಂದು ದಿನ ನೀವು ನಿಮ್ಮ ಪ್ರಯತ್ನದಲ್ಲಿ ಯಶಸ್ವಿಯಾಗುತ್ತೀರಿ” ಎಂದು ಮತ್ತೊಬ್ಬರು ಹೇಳಿದ್ದಾರೆ. “ಇದು ನಿಮ್ಮ ಪ್ರಯತ್ನವನ್ನು, ಕಠಿಣ ಪ್ರರಿಶ್ರಮವನ್ನು ಎತ್ತಿ ಹಿಡಿಯುತ್ತದೆ. ನಿಮ್ಮ ವೃತ್ತಿ ಜೀವನಕ್ಕೆ ಶುಭ ಹಾರೈಕೆಗಳು” ಎಂದು ಇನ್ನೊಬ್ಬರು ತಿಳಿಸಿದ್ದಾರೆ. ಒಟ್ಟಿನಲ್ಲಿ ಬಹುತೇಕರು ವಿರುಲ್ಕರ್ ಅವರ ಬೆಂಬಲಕ್ಕೆ ಧಾವಿಸಿದ್ದಾರೆ.

ಏತನ್ಮಧ್ಯೆ ಒಟ್ಟು 1,016 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಮತ್ತು ಅವರನ್ನು ವಿವಿಧ ಕೇಂದ್ರ ಸರ್ಕಾರಿ ಸೇವೆಗಳಿಗೆ ಶಿಫಾರಸು ಮಾಡಲಾಗಿದೆ ಎಂದು ಯುಪಿಎಸ್‌ಸಿ ತಿಳಿಸಿದೆ. ಆದಾಗ್ಯೂ, ಶಿಫಾರಸು ಮಾಡಲಾದ 355 ಅಭ್ಯರ್ಥಿಗಳ ಉಮೇದುವಾರಿಕೆ ಹೆಚ್ಚಿನ ಪರಿಶೀಲನೆಗೆ ಬಾಕಿ ಉಳಿದಿದೆ. ಪ್ರತಿಷ್ಠಿತ ಪರೀಕ್ಷೆಯನ್ನು 2023ರ ಸೆಪ್ಟೆಂಬರ್ 15ರಿಂದ ಸೆಪ್ಟೆಂಬರ್ 24ರವರೆಗೆ ಎರಡು ಪಾಳಿಗಳಲ್ಲಿ ನಡೆಸಲಾಗಿತ್ತು. ಅಭ್ಯರ್ಥಿಗಳು ತಮ್ಮ ಪರೀಕ್ಷೆಗಳು/ನೇಮಕಾತಿಗಳ ಕುರಿತು ಯಾವುದೇ ಮಾಹಿತಿ/ಸ್ಪಷ್ಟೀಕರಣವನ್ನು ಕೆಲಸದ ದಿನಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಖುದ್ದಾಗಿ ಭೇಟಿ ನೀಡಿ ಪಡೆಯಬಹುದು ಅಥವಾ ದೂರವಾಣಿ ಸಂಖ್ಯೆ 23385271/23381125/23098543ಕ್ಕೆ ಕರೆ ಮಾಡಬಹುದು.

ಇದನ್ನೂ ಓದಿ: UPSC Results 2023: ಎಂಎನ್‌ಸಿ ಕೆಲಸ ಬಿಟ್ಟ ಆದಿತ್ಯಗೆ ಯುಪಿಎಸ್‌ಸಿ ಫಸ್ಟ್‌ ರ‍್ಯಾಂಕ್;‌ ಯಾರಿವರು?

ಫಲಿತಾಂಶವನ್ನು ಹೀಗೆ ಪರಿಶೀಲಿಸಿ

  • ನಿಮ್ಮ ಬ್ರೌಸರ್‌ನಲ್ಲಿ upsc.gov.in ತೆರೆಯಿರಿ
  • What’s New ಸೆಕ್ಷನ್‌ನ ಅಡಿಯಲ್ಲಿ ‘UPSC Civil Services Examination 2023 Final Results’ ಎಂಬುದರ ಮೇಲೆ ಕ್ಲಿಕ್ ಮಾಡಿ.
  • ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ಹೆಸರನ್ನು ಪಿಡಿಎಫ್ ಮೂಲಕ ನೀಡಲಾಗಿದೆ. ಅದನ್ನು ಕ್ಲಿಕ್‌ ಮಾಡಿ.
Continue Reading
Advertisement
ಶಿವಮೊಗ್ಗ2 mins ago

Book Release: ರಾಮನೇನು ದೇವನೇ? ಪುಸ್ತಕ ಲೋಕಾರ್ಪಣೆ ಮಾಡಿದ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿ

Wipro Q4 Results
ವಾಣಿಜ್ಯ5 mins ago

Wipro Q4 Results: ಐಟಿ ದೈತ್ಯ ವಿಪ್ರೋದ ನಿವ್ವಳ ಲಾಭದಲ್ಲಿ ಶೇ. 8ರಷ್ಟು ಕುಸಿತ

Fraud Case in Bengaluru
ಬೆಂಗಳೂರು21 mins ago

Fraud Case : ಉದ್ಯಮಿಗೆ ಚಮತ್ಕಾರಿ ಚೆಂಬು ಕೊಟ್ಟವರು ಅರೆಸ್ಟ್‌; 22 ಬ್ಯಾಂಕ್‌ಗಳಿಗೆ ಟೋಪಿ ಹಾಕಿದ ಫ್ಯಾಮಿಲಿ ಲಾಕ್‌

Jackfruit benefits
ಆರೋಗ್ಯ21 mins ago

Jackfruit Benefits: ಈ ಬೇಸಿಗೆಯಲ್ಲಿ ಹಲಸಿನಹಣ್ಣನ್ನು ಯಾಕೆ ತಿನ್ನಲೇಬೇಕು ಗೊತ್ತೆ? ಇಲ್ಲಿವೆ 10 ಕಾರಣಗಳು!

Narayana Murthy
ಪ್ರಮುಖ ಸುದ್ದಿ23 mins ago

Narayana Murthy : 4.2 ಕೋಟಿ ರೂಪಾಯಿ ಡಿವಿಡೆಂಡ್​ ಜೇಬಿಗಿಳಿಸಿದ ನಾರಾಯಣ ಮೂರ್ತಿಯ 5 ತಿಂಗಳ ಮೊಮ್ಮಗ!

Neha Murder case Congress creates jihadi Karnataka R Ashok
ರಾಜಕೀಯ24 mins ago

Neha Murder Case: ಕಾಂಗ್ರೆಸ್‌ನಿಂದ ಜಿಹಾದಿ ಕರ್ನಾಟಕ ಸೃಷ್ಟಿ, ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಆರ್. ಅಶೋಕ್‌ ಗುಡುಗು

Group Clash
ಕರ್ನಾಟಕ33 mins ago

Group Clash: ರಾಮ ನವಮಿಯಂದು ಎರಡು ಕೋಮಿನ ಯುವಕರ ನಡುವೆ ಘರ್ಷಣೆ; ಇಬ್ಬರಿಗೆ ಚಾಕು ಇರಿತ

IPL 2024
ಕ್ರಿಕೆಟ್34 mins ago

IPL 2024: ಅಭ್ಯಾಸದ ವೇಳೆ ರಾಹುಲ್​ಗೆ ಪತ್ನಿಯಿಂದ ಸಾಥ್​; ವಿಡಿಯೊ ವೈರಲ್​

Rain in Karnataka
ಮಳೆ49 mins ago

Weather Report: ಬೆಂಗಳೂರಿನ ಜನ ಮಳೆಗಾಗಿ ಮೇವರೆಗೆ ಕಾಯಬೇಕು!

Tumkur Lok Sabha constituency BJP candidate Somanna election campaign in various places of Koratagare
ತುಮಕೂರು54 mins ago

Lok Sabha Election 2024: ಕೇಂದ್ರಿಯ ವಿದ್ಯಾಲಯ ಸ್ಥಾಪನೆಗೆ ನನ್ನನ್ನು ಬೆಂಬಲಿಸಿ: ವಿ. ಸೋಮಣ್ಣ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ2 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ12 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌