Meta Layoffs Is Facebook's popularity falling in India too?! A company's gateway to the eliteMeta Layoffs : ಭಾರತದಲ್ಲೂ ಫೇಸ್‌ಬುಕ್‌ ಜನಪ್ರಿಯತೆ ಕುಸಿಯುತ್ತಿದೆಯೇ?! ಪ್ರಮುಖರಿಗೆ ಕಂಪನಿಯ ಗೇಟ್‌ಪಾಸ್
Connect with us

ಉದ್ಯೋಗ

Meta Layoffs : ಭಾರತದಲ್ಲೂ ಫೇಸ್‌ಬುಕ್‌ ಜನಪ್ರಿಯತೆ ಕುಸಿಯುತ್ತಿದೆಯೇ?! ಪ್ರಮುಖರಿಗೆ ಕಂಪನಿಯ ಗೇಟ್‌ಪಾಸ್

Meta Layoffs ಫೇಸ್‌ಬುಕ್‌ ಜನಪ್ರಿಯತೆ ಅಮೆರಿಕದ ಬಳಿಕ ಇದಿಗ ಭಾರತದಲ್ಲೂ ಕುಸಿಯುತ್ತಿದೆಯೇ ಎಂಬ ಆತಂಕದ ನಡುವೆ ಹಿರಿಯ ಉದ್ಯೋಗಿಗಳನ್ನು ಫೇಸ್‌ಬುಕ್‌ ಇಂಡಿಯಾ ವಜಾಗೊಳಿಸಿದೆ.

VISTARANEWS.COM


on

Meta Layoffs Is Facebooks popularity falling in India too A companys gateway to the elite
Koo

ನವ ದೆಹಲಿ: ಸಾಮಾಜಿಕ ಜಾಲತಾಣ ದಿಗ್ಗಜ ಫೇಸ್‌ಬುಕ್‌ ಸೃಷ್ಟಿಯಾಗಿದ್ದು ಅಮೆರಿಕದಲ್ಲಾದರೂ, ಅದಕ್ಕೆ ಅತಿ ದೊಡ್ಡ ಮಾರುಕಟ್ಟೆ ಇರುವುದು ಭಾರತದಲ್ಲಿ. ಆದರೆ ಇದೀಗ ( Meta Layoffs) ಭಾರತದಲ್ಲೂ ಫೇಸ್‌ಬುಕ್‌ ಜನಪ್ರಿಯತೆ ಕುಸಿಯುತ್ತಿದೆಯೇ ಎಂಬ ಪ್ರಶ್ನೆ ಉಂಟಾಗಿದೆ. ಇದಕ್ಕೆ ಕಾರಣ ಫೇಸ್‌ಬುಕ್‌ ಇಂಡಿಯಾದ ಪ್ರಮುಖರು (Facebook India) ಇದೀಗ ತಮ್ಮ ಉದ್ಯೋಗವನ್ನೇ ಕಳೆದುಕೊಂಡಿರುವುದು.

ಫೇಸ್‌ಬುಕ್‌ ಇಂಡಿಯಾದ ಮಾರುಕಟ್ಟೆ ವಿಭಾಗದ ನಿರ್ದೇಶಕ ಅವಿನಾಶ್‌ ಪಂತ್‌, ಮಾಧ್ಯಮ ಪಾಲುದಾರರಾದ ಸಾಕೇತ್‌ ಜಾ ಸೌರಭ್‌ ಅವರು ಉದ್ಯೋಗ ಕಳೆದುಕೊಂಡಿದ್ದಾರೆ. ಮಾರ್ಕೆಟಿಂಗ್‌, ಸೈಟ್‌ ಸೆಕ್ಯುರಿಟಿ, ಎಂಟರ್‌ ಪ್ರೈಸ್‌ ಎಂಜಿನಿಯರಿಂಗ್‌, ಪ್ರೋಗ್ರಾಮ್‌ ಮ್ಯಾನೇಜ್‌ಮೆಂಟ್‌, ಕಂಟೆಂಟ್‌ ಸ್ಟ್ರಾಟಜಿ, ಕಾರ್ಪೊರೇಟ್‌ ಕಮ್ಯುನಿಕೇಶನ್‌ ವಿಭಾಗದಲ್ಲಿ ಉದ್ಯೋಗ ಕಡಿತ ಆಗಿದೆ.

ಫೇಸ್‌ಬುಕ್‌ನ ಮಾತೃಸಂಸ್ಥೆ ಮೆಟಾ 2023ರ ಆದಿಯಲ್ಲಿಯೇ 11,000 ಉದ್ಯೋಗಿಗಳನ್ನು ವಜಾಗೊಳಿಸಿತ್ತು. ಇದೀಗ ಎರಡನೇ ಸುತ್ತಿನ ಹುದ್ದೆಕಡಿತ ಶುರುವಾಗಿದೆ. ಕಂಪನಿ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ಗೆ ಫೋಕಸ್‌ ನೀಡುತ್ತಿದೆ.

ಇದನ್ನೂ ಓದಿ : Meta layoffs : ಫೇಸ್‌ಬುಕ್‌ ಮಾತೃಸಂಸ್ಥೆ ಮೆಟಾದಲ್ಲಿ ಮುಂದಿನವಾರ ಮತ್ತೆ 6,000 ಉದ್ಯೋಗ ಕಡಿತ

ಫೇಸ್‌ಬುಕ್‌ನ ಮಾತೃಸಂಸ್ಥೆ ಮೆಟಾ ಎರಡನೇ ಸುತ್ತಿನಲ್ಲಿ 10,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ. ಒಟ್ಟು ಮೂರು ಹಂತಗಳಲ್ಲಿ ದೀರ್ಘಕಾಲ ಇದು ನಡೆಯುವ ನಿರೀಕ್ಷೆ ಇದೆ. ಕಂಪನಿಯ ವಹಿವಾಟಿನ ಸ್ವರೂಪವನ್ನೇ ಬದಲಾಯಿಸಲಾಗುತ್ತಿದೆ. ಹೀಗಾಗಿ ಉದ್ಯೋಗ ಕಡಿತ ಅನಿವಾರ್ಯವಾಗಿದೆ ಎಂದು ಸಿಇಒ ಜುಕರ್‌ ಬರ್ಗ್‌ ಹೇಳಿದ್ದರು.

2022ರಲ್ಲಿ ನಡೆಸಿದ ಅಧ್ಯಯನದ ಪ್ರಕಾರ ಫೇಸ್‌ಬುಕ್‌ನ ಬೆಳವಣಿಗೆ ಇಳಿಕೆಯಾಗಿತ್ತು. ಸಕ್ರಿಯ ಬಳಕೆದಾರರ ಸಂಖ್ಯೆ ಇಳಿದಿತ್ತು. ಅಮೆರಿಕದಲ್ಲಿ ಫೇಸ್‌ಬುಕ್‌ ಬಳಕೆದಾರರ ಸಂಖ್ಯೆ ಗಣನೀಯ ತಗ್ಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ

ಉದ್ಯೋಗ

UPSC Prelims 2023: ನಾಳೆ ಯುಪಿಎಸ್‌ಸಿ ಪ್ರಿಲಿಮ್ಸ್‌; ಈ ಬಾರಿಯೂ ಕನ್ನಡದಲ್ಲಿ ನಡೆಯೋಲ್ಲ ಪರೀಕ್ಷೆ

ನಾಗರಿಕ ಸೇವಾ ಹುದ್ದೆಗಳ ನೇಮಕಕ್ಕಾಗಿ ಕೇಂದ್ರ ಲೋಕಸೇವಾ ಆಯೋಗವು ಭಾನುವಾರ ಪೂರ್ವಭಾವಿ ಪರೀಕ್ಷೆ (UPSC Prelims 2023) ನಡೆಸಲಿದೆ. ಈ ಪರೀಕ್ಷೆ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Edited by

upsc prelims 2023 IAS prelims 2023
Koo

ಬೆಂಗಳೂರು: ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್‌ಸಿ) ಭಾರತೀಯ ನಾಗರಿಕ ಸೇವಾ ಅಧಿಕಾರಿ (ಐಎಎಸ್‌) ಮತ್ತು ಭಾರತೀಯ ಅರಣ್ಯ ಸೇವಾ ಅಧಿಕಾರಿ (ಐಎಫ್‌ಎಸ್‌) ಹುದ್ದೆಗಳ ನೇಮಕಕ್ಕೆ ಮೇ 28ರ ಭಾನುವಾರದಂದು ಪೂರ್ವಭಾವಿ ಪರೀಕ್ಷೆ (UPSC Prelims 2023) ನಡೆಸಲಿದೆ.

ರಾಜ್ಯದಲ್ಲಿ ಬೆಂಗಳೂರು, ಧಾರವಾಡ ಮತ್ತು ಮೈಸೂರಿನಲ್ಲಿ ಪೂರ್ವಭಾವಿ ಪರೀಕ್ಷೆ ನಡೆಯಲಿದ್ದು ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪೂರ್ವ ಭಾವಿ ಪರೀಕ್ಷೆಯನ್ನು ಕನ್ನಡದಲ್ಲಿಯೂ ನಡೆಸಬೇಕೆಂಬ ಬೇಡಿಕೆಗೆ ಯುಪಿಎಸ್‌ಸಿಯು ಈ ಬಾರಿಯೂ ಮನ್ನಣೆ ನೀಡಿಲ್ಲ. ಹೀಗಾಗಿ ಅಭ್ಯರ್ಥಿಗಳು ಇಂಗ್ಲಿಷ್‌ ಅಥವಾ ಹಿಂದಿಯಲ್ಲಿ ಮಾತ್ರ ಪರೀಕ್ಷೆ ಬರೆಯಬಹುದಾಗಿದೆ. ʻʻದೇಶದ ಪ್ರತಿಷ್ಠಿತ ಪರೀಕ್ಷೆ ಎಂದು ಹೆಸರು ಮಾಡಿರುವ ಈ ಪರೀಕ್ಷೆಯ ಪೂರ್ವಭಾವಿ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸಿದರೆ ಮಾತ್ರ ರಾಜ್ಯದ ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆʼʼ ಎಂದು ಕನ್ನಡ ಪರ ಹೋರಾಟಗಾರ ಗಿರೀಶ್‌ ಮತ್ತೇರ ಒತ್ತಾಯಿಸಿದ್ದಾರೆ.

ಈಗಾಗಲೇ ಪ್ರವೇಶ ಪತ್ರವನ್ನು ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದ್ದು, ಅಭ್ಯರ್ಥಿಗಳು ಇದನ್ನು ಡೌನ್‌ಲೋಡ್‌ ಮಾಡಿ, ಪ್ರಿಂಟ್‌ ತೆಗೆದುಕೊಂಡು ಪರೀಕ್ಷೆಗೆ ಹಾಜರಾಗಬೇಕೆಂದು ಸೂಚಿಸಲಾಗಿದೆ. ಎರಡು ಶಿಫ್ಟ್‌ಗಳಲ್ಲಿ ಪರೀಕ್ಷೆ ನಡೆಯಲಿದ್ದು, ಬೆಳಗ್ಗೆ 9:30 ರಿಂದ 11:30ರ ವರೆಗೆ ಒಂದು ಶಿಫ್ಟ್‌ನ ಪರೀಕ್ಷೆ ನಡೆದರೆ ಮತ್ತೊಂದು ಶಿಫ್ಟ್‌ನ ಪರೀಕ್ಷೆಯು ಮಧ್ಯಾಹ್ನ 2:30 ರಿಂದ 4:30ರ ವರೆಗೆ ನಡೆಯಲಿದೆ. ಈ ಪರೀಕ್ಷೆಯು ಆಫ್‌ಲೈನ್‌ನಲ್ಲಿ ನಡೆಸಲಾಗುತ್ತದೆ.

ಪ್ರವೇಶ ಪತ್ರದೊಂದಿಗೆ ಫೋಟೊ ಇರುವ ಗುರುತಿನ ಚೀಟಿ ತರುವುದು ಕಡ್ಡಾಯ ಎಂದು ಯುಪಿಎಸ್‌ಸಿ ತಿಳಿಸಿದೆ. ಪರೀಕ್ಷೆ ಆರಂಭವಾಗುವುದಕ್ಕಿಂತಲೂ ಹತ್ತು ನಿಮಿಷ ಮೊದಲ ಪರೀಕ್ಷಾ ಕೇಂದ್ರದ ಬಾಗಿಲನ್ನು ಮುಚ್ಚಲಾಗುತ್ತದೆ. ಹೀಗಾಗಿ ಅಭ್ಯರ್ಥಿಗಳು ಸಾಕಷ್ಟು ಮೊದಲೇ ಪರೀಕ್ಷಾ ಕೇಂದ್ರಕ್ಕೆ ಆಗಮಿಸಬೇಕೆಂದು ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದ ಬಾಗಿಲು ಮುಚ್ಚಿದ ನಂತರ ಯಾವುದೇ ಅಭ್ಯರ್ಥಿಗೆ ಪರೀಕ್ಷಾ ಕೇಂದ್ರ ಪ್ರವೇಶಿಸಲು ಅವಕಾಶ ನೀಡಲಾಗುವುದಿಲ್ಲ ಎಂದು ಎಚ್ಚರಿಸಲಾಗಿದೆ. ಪ್ರವೇಶ ಕೇಂದ್ರ ಮಾಹಿತಿಯನ್ನು ಪ್ರವೇಶ ಪತ್ರದಲ್ಲಿ ಒದಗಿಸಲಾಗಿರುತ್ತದೆ.

ಇದನ್ನೂ ಓದಿ : IAS prelims 2022: ಕೊನೆಯ ಕ್ಷಣದ ಸಿದ್ಧತೆ ಹೇಗಿರಬೇಕು, ಏನೇನು ಓದಬೇಕು ಗೊತ್ತೇ?

ಪರೀಕ್ಷೆಯಲ್ಲಿ ಅನುಸರಿಸಬೇಕಾಗಿರುವ ನಿಯಮಗಳನ್ನು ಪ್ರವೇಶ ಪತ್ರದಲ್ಲಿ ಒದಗಿಸಲಾಗುತ್ತದೆ. ಇದನ್ನು ಅಭ್ಯರ್ಥಿಗಳು ಓದಿಕೊಂಡೇ ಪರೀಕ್ಷೆಗೆ ಹಾಜರಾಗಬೇಕಿರುತ್ತದೆ. ಪರೀಕ್ಷೆಯಲ್ಲಿ ಸರಿ ಉತ್ತರವನ್ನು ಗುರುತಿಸಲು ಕೇವಲ ಬ್ಲಾಕ್‌ ಬಾಲ್‌ ಪಾಯಿಂಟ್‌ ಪೆನ್‌ ಅನ್ನು ಮಾತ್ರ ಬಳಸುವಂತೆ ಆಯೋಗ ಕೋರಿದೆ.

ಮೊದಲಿಗೆ ಪೂರ್ವಭಾವಿ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ, ನೇಮಕ ಮಾಡಿಕೊಳ್ಳಲಾಗುತ್ತದೆ.

ಪ್ರವೇಶ ಪತ್ರ ಪಡೆಯಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ಈ ಬಾರಿ ಒಟ್ಟು 1,105 ಐಎಎಸ್‌ ಮತ್ತು 150 ಐಎಫಎಸ್‌ ಹುದ್ದೆಗಳಿಗೆ ನೇಮಕ ನಡೆಯಲಿದೆ. ಕಳೆದ ಕೆಲವು ವರ್ಷಗಳಿಗೆ ಹೋಲಿಸಿದಲ್ಲಿ ಈ ಬಾರಿ ಅತಿ ಹೆಚ್ಚು ಐಎಎಸ್‌ ಹುದ್ದೆಗಳಿಗೆ ನೇಮಕ ನಡೆಯುತ್ತಿದೆ. ಕಳೆದ ವರ್ಷ ಮೊದಲಿಗೆ ಕಡಿಮೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದರೂ ನಂತರ 1,011 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗಿತ್ತು. 2016 ರಲ್ಲಿ 1079 ಹುದ್ದೆಗಳಿಗೆ ನೇಮಕ ನಡೆದಿತ್ತು. 2017 ರಲ್ಲಿ 980, 2018 ರಲ್ಲಿ 782, 2019 ರಲ್ಲಿ 896 ಮತ್ತು 2020 ರಲ್ಲಿ 796 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗಿತ್ತು. 2021 ರಲ್ಲಿ ಕೇವಲ 712 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗಿತ್ತು. ಈ ಬಾರಿಯ ಹುದ್ದೆಗಳ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಗಳಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ : UPSC Prelims 2023: ಮೇ 28ರಂದು ಬೆಂಗಳೂರಿನಲ್ಲಿ ಬೆಳಗ್ಗೆ 6ರಿಂದಲೇ ಮೆಟ್ರೋ ಸಂಚಾರ ಆರಂಭ

ಸಹಾಯವಾಣಿ ಸಂಖ್ಯೆ: 011-23385271 / 011-23381125 / 011-23098543
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ : https://www.upsc.gov.in/

ಇದನ್ನೂ ಓದಿ: UPSC Preparation : ವೃತ್ತಿಪರರು ಯುಪಿಎಸ್‌‌ಸಿ ಪರೀಕ್ಷೆಯಲ್ಲಿ ಸಕ್ಸೆಸ್ ಆಗಬೇಕಿದ್ದರೆ ಏನು ಮಾಡಬೇಕು?

Continue Reading

ಉದ್ಯೋಗ

ISRO Recruitment 2023 : ಇಸ್ರೊದಲ್ಲಿ ವಿಜ್ಞಾನಿಯಾಗಬೇಕೇ? ಈಗ ಒದಗಿ ಬಂದಿದೆ ಅವಕಾಶ!

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ) 303 ಸೈಂಟಿಸ್ಟ್‌/ಎಂಜಿನಿಯರ್‌-ಎಸ್‌ಸಿ ನೇಮಕಕ್ಕೆ (ISRO Recruitment 2023) ಅಧಿಸೂಚನೆ ಹೊರಡಿಸಿದ್ದು ಈ ನೇಮಕದ ಮಾಹಿತಿ ಇಲ್ಲಿದೆ.

VISTARANEWS.COM


on

Edited by

ISRO Recruitment 2023 ISRO Recruitment 2023 for Scientist Engineer SC
Koo

ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಒಂದಲ್ಲಾ ಒಂದು ರೀತಿಯ ಸಾಧನೆ ಮಾಡುತ್ತಿರುವ ನಮ್ಮ ದೇಶದ ಹೆಮ್ಮೆಯ ʻಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆʼ (ಇಸ್ರೊ) 303 ಸೈಂಟಿಸ್ಟ್‌/ಎಂಜಿನಿಯರ್‌-ಎಸ್‌ಸಿ ನೇಮಕಕ್ಕೆ (ISRO Recruitment 2023) ಅಧಿಸೂಚನೆ ಹೊರಡಿಸಿದೆ.

ಮುಖ್ಯವಾಗಿ ಉಪಗ್ರಹಗಳ ನಿರ್ಮಾಣ, ಉಪಗ್ರಹಗಳ ಉಡಾವಣೆ, ಬಾಹ್ಯಾಕಾಶದಲ್ಲಿ ಸಂಶೋಧನಾ ಚಟುವಟಿಕೆಗಳನ್ನು ನಡೆಸುತ್ತಿರುವ ಇಸ್ರೊ, ಗ್ರೂಪ್‌ ʻಎʼಗೆ ಸೇರಿದ ಈ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು, ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಎಲೆಕ್ಟ್ರಾನಿಕ್ಸ್‌, ಮೆಕ್ಯಾನಿಕಲ್‌ ಮತ್ತು ಕಂಪ್ಯೂಟರ್‌ ಸೈನ್ಸ್‌ನಲ್ಲಿ ಬಿಇ/ಬಿಟೆಕ್‌ ಮಾಡಿರುವ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಯಾವೆಲ್ಲಾ ಹುದ್ದೆಗಳಿಗೆ ನೇಮಕ?

1. ಸೈಂಟಿಸ್ಟ್‌/ಎಂಜಿನಿರ್‌-ಎಸ್‌ಸಿ (ಎಲೆಕ್ಟ್ರಾನಿಕ್ಸ್‌) – 90 ಹುದ್ದೆ
ವಿದ್ಯಾರ್ಹತೆ: ಎಲೆಕ್ಟ್ರಾನಿಕ್ಸ್‌ & ಕಮ್ಯುನಿಕೇಷನ್‌ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್‌ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿಯಲ್ಲಿ ಕನಿಷ್ಠ ಶೇ. 65 ರಷ್ಟು ಅಂಕ ಪಡೆದಿರಬೇಕಾದದು ಕಡ್ಡಾಯ.

2. ಸೈಂಟಿಸ್ಟ್‌/ ಎಂಜಿನಿಯರ್‌ ʻಎಸ್‌ಸಿʼ (ಮೆಕ್ಯಾನಿಕಲ್‌)- 160 ಹುದ್ದೆ
ವಿದ್ಯಾರ್ಹತೆ: ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್‌ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿಯಲ್ಲಿ ಕನಿಷ್ಠ ಶೇ. 65 ರಷ್ಟು ಅಂಕ ಪಡೆದಿರಬೇಕಾದದು ಕಡ್ಡಾಯ.

3. ಸೈಂಟಿಸ್ಟ್‌/ ಎಂಜಿನಿಯರ್ ʻಎಸ್‌ಸಿʼ (ಕಂಪ್ಯೂಟರ್‌ ಸೈನ್ಸ್‌)- 47 ಹುದ್ದೆ
ವಿದ್ಯಾರ್ಹತೆ: ಕಂಪ್ಯೂಟರ್‌ ಸೈನ್ಸ್‌ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್‌ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿಯಲ್ಲಿ ಕನಿಷ್ಠ ಶೇ. 65 ರಷ್ಟು ಅಂಕ ಪಡೆದಿರಬೇಕಾದದು ಕಡ್ಡಾಯ.

4. ಸೈಂಟಿಸ್ಟ್‌/ ಎಂಜಿನಿಯರ್‌ ʻಎಸ್‌ಸಿʼ (ಎಲೆಕ್ಟ್ರಾನಿಕ್ಸ್‌)- 2 ಹುದ್ದೆ (Autonomous Body)
ವಿದ್ಯಾರ್ಹತೆ: ಎಲೆಕ್ಟ್ರಾನಿಕ್ಸ್‌ & ಕಮ್ಯುನಿಕೇಷನ್‌ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್‌ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿಯಲ್ಲಿ ಕನಿಷ್ಠ ಶೇ. 65 ರಷ್ಟು ಅಂಕ ಪಡೆದಿರಬೇಕಾದದು ಕಡ್ಡಾಯ.

5. ಸೈಂಟಿಸ್ಟ್‌/ ಎಂಜಿನಿಯರ್ ʻಎಸ್‌ಸಿʼ (ಕಂಪ್ಯೂಟರ್‌ ಸೈನ್ಸ್‌)- 01 ಹುದ್ದೆ (Autonomous Body)
ವಿದ್ಯಾರ್ಹತೆ: ಕಂಪ್ಯೂಟರ್‌ ಸೈನ್ಸ್‌ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್‌ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿಯಲ್ಲಿ ಕನಿಷ್ಠ ಶೇ. 65 ರಷ್ಟು ಅಂಕ ಪಡೆದಿರಬೇಕಾದದು ಕಡ್ಡಾಯ.

ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14-06-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 16-06-2023
ಮಾಹಿತಿ ಪಡೆಯಲು ಇ-ಮೇಲ್‌ ವಿಳಾಸ: [email protected]
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ: www.isro.gov.in

ಅರ್ಜಿ ಸಲ್ಲಿಸಲು ಇಲ್ಲಿ (Click Here) ಕ್ಲಿಕ್‌ ಮಾಡಿ.

ವಯೋಮಿತಿ ಎಷ್ಟು?

ಈ ಎಲ್ಲ ಹುದ್ದೆಗಳಿಗೂ ಗರಿಷ್ಠ ವಯೋಮಿತಿ 28 ವರ್ಷ. ವಯೋಮಿತಿಯನ್ನು ದಿನಾಂಕ 14-06-2023ಕಕ್ಕೆ ಲೆಕ್ಕ ಹಾಕಲಾಗುತ್ತದೆ.

ನೇಮಕಾತಿಯ ಸಂಪೂರ್ಣ ಮಾಹಿತಿಗೆ ಅಧಿಸೂಚನೆ (Click Here) ನೋಡಿ.

ಅರ್ಜಿ ಶುಲ್ಕ ಎಷ್ಟು?

ಅಭ್ಯರ್ಥಿಗಳು 250 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಆನ್‌ಲೈನ್‌ನಲ್ಲಿಯೇ ಶುಲ್ಕ ಪಾವತಿಗೆ ಅವಕಾಶ ನೀಡಲಾಗಿದ್ದು, ಒಂದು ವೇಳೆ ಆನ್‌ಲೈನ್‌ನಲ್ಲಿ ಸಾಧ್ಯವಾಗದಿದ್ದರೆ ಎಸ್‌ಬಿಐ ಶಾಖೆಗಳ ಮೂಲಕವೂ ಅರ್ಜಿ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿರುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ಅಭ್ಯರ್ಥಿಗಳು ಈ ಮೇಲಿನ ಯಾವುದಾದರೂ ಒಂದು ಅಥವಾ ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಾಗ ಪ್ರತ್ಯೇಕವಾಗಿ ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ. ಆದರೆ ಒಂದೇ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿರುತ್ತದೆ.

ನೇಮಕ ಹೇಗೆ?

ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಯಾವುದೇ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಬಹುದಾಗಿದೆ. ಅರ್ಜಿ ಸಲ್ಲಿಸುವಾಗಲೇ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬೇಕಿರುತ್ತದೆ. ಪರೀಕ್ಷೆಯ ಕುರಿತು ಅಭ್ಯರ್ಥಿಯ ಇ-ಮೇಲ್‌ ವಿಳಾಸಕ್ಕೆ ಮಾಹಿತಿ ನೀಡಲಾಗುತ್ತದೆ.

ಅಬ್ಜೆಕ್ಟೀವ್‌ ಮಾದರಿಯಲ್ಲಿ ಲಿಖಿತ ಪರೀಕ್ಷೆಯು ನಡೆಯಲಿದ್ದು, ಪ್ರಶ್ನೆ ಪತ್ರಿಕೆಯು ಎರಡು ಭಾಗಗಳನ್ನು ಒಳಗೊಂಡಿರಲಿದೆ. 120 ನಿಮಿಷ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದಲ್ಲಿ 1:5 ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕ ನಡೆಯಲಿದೆ.

ಇದನ್ನೂ ಓದಿ: IDBI Recruitment 2023 : ಐಡಿಬಿಐ ಬ್ಯಾಂಕ್‌ನಲ್ಲಿ 1,036 ಎಕ್ಸಿಕ್ಯೂಟಿವ್‌ ಹುದ್ದೆ; ಪದವೀಧರರಿಂದ ಅರ್ಜಿ ಆಹ್ವಾನ

Continue Reading

ಉದ್ಯೋಗ

UPSC Prelims 2023: ಮೇ 28ರಂದು ಬೆಂಗಳೂರಿನಲ್ಲಿ ಬೆಳಗ್ಗೆ 6ರಿಂದಲೇ ಮೆಟ್ರೋ ಸಂಚಾರ ಆರಂಭ

UPSC Prelims 2023: ಮೇ 28ರಂದು ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅನುಕೂಲವಾಗಲು ನಮ್ಮ ಮೆಟ್ರೋ ರೈಲು ಸೇವೆ ಬೆಳಗ್ಗೆ 6ರಿಂದಲೇ ಆರಂಭಿಸಲು ಬಿಎಂಆರ್‌ಸಿಎಲ್‌ ನಿರ್ಧರಿಸಿದೆ.

VISTARANEWS.COM


on

Edited by

Namma Metro trains in Bangalore
Koo

ಬೆಂಗಳೂರು: ಕೇಂದ್ರ ಲೋಕಾ ಸೇವಾ ಆಯೋಗದ (ಯುಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆ ಮೇ 28ರಂದು ನಡೆಯಲಿದೆ. ಹೀಗಾಗಿ ಪರೀಕ್ಷೆಗೆ (UPSC Prelims 2023) ಹಾಜರಾಗುವ ಅಭ್ಯರ್ಥಿಗಳಿಗೆ ಅನುಕೂಲವಾಗಲು ಭಾನುವಾರ ಬೆಳಗ್ಗೆ 6 ಗಂಟೆಯಿಂದಲೇ ನಗರದಲ್ಲಿ ಮೆಟ್ರೋ ರೈಲು ಸೇವೆ ಆರಂಭಿಸಲಾಗುತ್ತದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ತಿಳಿಸಿದೆ.

ನಗರದ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ರೇಷ್ಮೆ ಸಂಸ್ಥೆ, ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ) ಮೆಟ್ರೋ ನಿಲ್ದಾಣಗಳಲ್ಲಿ ಬೆಳಗ್ಗೆ 7 ಗಂಟೆಗೆ ಬದಲಾಗಿ 6 ಗಂಟೆಗೆ ರೈಲು ಸೇವೆ ಆರಂಭವಾಗಲಿದೆ. ಇದನ್ನು ಪೂರ್ಣ ಪುಮಾಣದಲ್ಲಿ ಉಪಯೋಗಿಸಿಕೊಳ್ಳಬೇಕೆಂದು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಮನವಿ ಮಾಡಿದೆ.

ಇದನ್ನೂ ಓದಿ | Jobs News : ಕೇಂದ್ರ ಸರ್ಕಾರದ ಉದ್ಯೋಗ ಬೇಕೇ? ಯುಪಿಎಸ್‌ಸಿ, ಎಸ್‌ಎಸ್‌ಸಿಯ ಈ ವೇಳಾಪಟ್ಟಿ ನೋಡಿ!

Continue Reading

ಉದ್ಯೋಗ

IDBI Recruitment 2023 : ಐಡಿಬಿಐ ಬ್ಯಾಂಕ್‌ನಲ್ಲಿ 1,036 ಎಕ್ಸಿಕ್ಯೂಟಿವ್‌ ಹುದ್ದೆ; ಪದವೀಧರರಿಂದ ಅರ್ಜಿ ಆಹ್ವಾನ

ದೇಶದ ಪ್ರಮುಖ ಅಭಿವೃದ್ಧಿ ಬ್ಯಾಂಕುಗಳಲ್ಲಿ ಒಂದಾದ ಐಡಿಬಿಐ ಬ್ಯಾಂಕ್‌ ಎಕ್ಸಿಕ್ಯೂಟಿವ್‌ ಹುದ್ದೆಗಳ ನೇಮಕಕ್ಕೆ ಆನ್‌ಲೈನ್‌ನಲ್ಲಿ (IDBI Recruitment 2023) ಅರ್ಜಿ ಆಹ್ವಾನಿಸಿದೆ. ಈ ನೇಮಕದ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

Edited by

IDBI Recruitment 2023 Executive recruitment notification released details in kannada
Koo

ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಮತ್ತು ಭಾರತ ಸರ್ಕಾರದ ಒಡೆತನಕ್ಕೆ ಸೇರಿದ, ದೇಶದ ಪ್ರಮುಖ ಅಭಿವೃದ್ಧಿಗೆ ಮೀಸಲಾದ ವಿತ್ತೀಯ ಸಂಸ್ಥೆಗಳಲ್ಲಿ (ಬ್ಯಾಂಕ್‌ಗಳಲ್ಲಿ) ಒಂದಾದ ಐಡಿಬಿಐ ಬ್ಯಾಂಕ್‌ ಗುತ್ತಿಗೆ ಆಧಾರದ ಮೇಲೆ ಎಕ್ಸಿಕ್ಯೂಟಿವ್‌ಗಳ ನೇಮಕಕ್ಕೆ (IDBI Recruitment 2023) ಅಧಿಸೂಚನೆ ಹೊರಡಿಸಿದೆ. ಒಟ್ಟು 1,036 ಎಕ್ಸಿಕ್ಯೂಟಿವ್‌ ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜೂನ್‌ 07 ಕೊನೆಯ ದಿನವಾಗಿರುತ್ತದೆ.

ಈ 1,036 ಹುದ್ದೆಗಳಲ್ಲಿ ಎಸ್‌ಸಿ ಅಭ್ಯರ್ಥಿಗಳಿಗೆ 160, ಎಸ್‌ಟಿ ಅಭ್ಯರ್ಥಿಗಳಿಗೆ 67 ಒಬಿಸಿ ಅಭ್ಯರ್ಥಿಗಳಿಗೆ 255, ಇಡಬ್ಲ್ಯುಎಸ್‌ ಅಭ್ಯರ್ಥಿಗಳಿಗೆ 103 ಹುದ್ದೆಗಳನ್ನು ಹಾಗೂ ಉಳಿದ 451 ಹುದ್ದೆಗಳನ್ನು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅರ್ಜಿ ಶುಲ್ಕ ನಿಗದಿಪಡಿಸಲಾಗಿಲ್ಲ.

ಅರ್ಜಿ ಸಲ್ಲಿಸಲು ಇಲ್ಲಿ (Click Here) ಕ್ಲಿಕ್‌ ಮಾಡಿ

ವಿದ್ಯಾರ್ಹತೆ ಏನು?

ಯಾವುದೇ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಡಿಪ್ಲೊಮಾ ಮಾಡಿದವರನ್ನು ಈ ಹುದ್ದೆಗಳಿಗೆ ಪರಿಗಣಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಅಭ್ಯರ್ಥಿಗಳು ಕಂಪ್ಯೂಟರ್‌ನಲ್ಲಿ ಕಾರ್ಯನಿರ್ವಹಿಸುವ ಜ್ಞಾನ ಹೊಂದಿರಬೇಕಾದದು ಕಡ್ಡಾಯ.

ವಯೋಮಿತಿ ಎಷ್ಟು?

ಅಭ್ಯರ್ಥಿಯ ಕನಿಷ್ಠ ವಯಸ್ಸು 20 ವರ್ಷ. ಗರಿಷ್ಠ ವಯೋಮಿತಿ 25 ವರ್ಷ. ವಯೋಮಿತಿಯನ್ನು ಮೇ 1, 2023ಕಕ್ಕೆ ಲೆಕ್ಕಹಾಕಲಾಗುತ್ತದೆ. ಎಸ್‌ಸಿ, ಎಸ್‌ಟಿ, ಓಬಿಸಿ, ಮಾಜಿ ಸೈನಿಕ, ವಿಕಲಚೇತನ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದ ಪ್ರಕಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿರುತ್ತದೆ.

ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07-06-2023
ಆನ್‌ಲೈನ್‌ನ ಪರೀಕ್ಷೆಯ ದಿನಾಂಕ : ಜುಲೈ 2, 2023
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ: https://www.idbibank.in

ವೇತನ ಎಷ್ಟಿರುತ್ತದೆ?

ಐಡಿಬಿಐ ಬ್ಯಾಂಕ್‌ನಲ್ಲಿನ ಎಕ್ಸಿಕ್ಯೂಟಿವ್‌ ಹುದ್ದೆಗಳನ್ನು ಮೂರು ವರ್ಷಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಮೊದಲ ವರ್ಷ ಮಾಸಿಕ ರೂ.29,000 ವೇತನ ನೀಡಲಾಗುತ್ತದೆ. ಎರಡನೇ ವರ್ಷ ಮಾಸಿಕ 31,000ರೂ. ವೇತನ ನೀಡಿದರೆ ಮೂರನೇ ವರ್ಷ ಮಾಸಿ ರೂ.34,000 ವೇತನ ನೀಡಲಾಗುತ್ತದೆ.

ಮೂರು ವರ್ಷ ಪೂರ್ಣಗೊಳಿಸಿದವರು ಗ್ರೇಡ್‌ ʻಎʼಯ ಅಸಿಸ್ಟೆಂಟ್‌ ಮ್ಯಾನೇಜರ್‌ ಹುದ್ದೆಗಳ ನೇಮಕಕ್ಕೆ ನಡೆಸಲಾಗುವ ನೇಮಕ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ. ಈ ಹುದ್ದೆಯ ಮಾಸಿಕ ಬೇಸಿಕ್‌ ವೇತನವು 36,000ಸಾವಿರ ರೂ.ಗಳಾಗಿರುತ್ತವೆ. ವೇತನ ಶ್ರೇಣಿ ಇಂತಿದೆ: 36,000-1,490(7)-46,430-1,740(2)–49,910–1,990(7)-63,840(17years)

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ನೇಮಕ ಹೇಗೆ?

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ಆನ್‌ಲೈನ್‌ ಟೆಸ್ಟ್‌ (OT) ನಡೆಸಲಾಗುತ್ತದೆ. ಜುಲೈನಲ್ಲಿ ಈ ಪರೀಕ್ಷೆ ನಡೆಯಲಿದೆ. ಇಂಗ್ಲಿಷ್‌ ಮತ್ತು ಹಿಂದಿಯಲ್ಲಿ ಮಾತ್ರ ಈ ಪರೀಕ್ಷೆ ನಡೆಸಲಾಗುತ್ತಿದ್ದು, ಋಣಾತ್ಮಕ ಮೌಲ್ಯಮಾಪನವಿರುತ್ತದೆ. ಅಂದರೆ ತಪ್ಪು ಉತ್ತರಗಳಿಗೆ 0.25 ಅಂಕಗಳನ್ನು ಕಳೆಯಲಾಗುತ್ತದೆ.

ಒಟ್ಟು 200 ಅಂಕಗಳಿಗೆ ಪರೀಕ್ಷೆ ನಡೆಯಲಿದ್ದು, 200 ಪ್ರಶ್ನೆಗಳನ್ನು ಕೇಳಲಾಗಿರುತ್ತದೆ. ಪರೀಕ್ಷೆ ಬರೆಯಲು 2 ಗಂಟೆ ಕಾಲಾವಕಾಶ ನೀಡಲಾಗುತ್ತದೆ. ಪರೀಕ್ಷೆಯು ನಾಲ್ಕು ವಿಷಯಗಳನ್ನು ಒಳಗೊಂಡಿದ್ದು (1.Logical Reasoning, Data Analysis & Interpretation, 2. English Language, 3.Quantitative Aptitude, 4. General/Economy/ Banking Awareness/ Computer/IT), ಪ್ರತಿ ವಿಷಯದಲ್ಲಿಯೂ ಅಭ್ಯರ್ಥಿಯು ಅರ್ಹತಾ ಅಂಕ ಪಡೆದಿರಬೇಕಾಗುತ್ತದೆ.

ಆಲ್‌ಲೈನ್‌ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ನಡೆಸಿ, ವೈದ್ಯಕೀಯ ಪರೀಕ್ಷೆಗೊಳಪಡಿಸಿ ನೇಮಕ ಮಾಡಿಕೊಳ್ಳಲಾಗುತ್ತದೆ.

ನೇಮಕಾತಿಯ ಸಂಪೂರ್ಣ ಮಾಹಿತಿಗೆ ಅಧಿಸೂಚನೆ (Click Here) ನೋಡಿ

ರಾಜ್ಯದಲ್ಲಿ ಎಲ್ಲೆಲ್ಲಿ ಪರೀಕ್ಷೆ?

ಎಕ್ಸಿಕ್ಯೂಟಿವ್‌ ಹುದ್ದೆಗಾಗಿ ನಡೆಸಲಾಗುವ ಆನ್‌ಲೈನ್‌ ಟೆಸ್ಟ್‌ ಅನ್ನು ರಾಜ್ಯದ ಬೆಂಗಳೂರು, ಬೆಳಗಾವಿ ಬೀದರ್‌, ದಾವಣಗೆರೆ, ಧಾರವಾಡ, ಕಲಬುರಗಿ, ಹಾಸನ, ಹುಬ್ಬಳ್ಳಿ, ಮಂಡ್ಯ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ನಡೆಸಲಾಗುತ್ತದೆ.

ಇದನ್ನೂ ಓದಿ: Teacher Recruitment 2023 : 33 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಒಪ್ಪಿಗೆ; ಎಲ್ಲ ಜಿಲ್ಲೆಗಳಲ್ಲಿಯೂ ಖಾಲಿ ಇವೆ ಹುದ್ದೆ

Continue Reading
Advertisement
french open novak djokovic
ಕ್ರೀಡೆ21 mins ago

French Open 2023: ಇಂದಿನಿಂದ ಫ್ರೆಂಚ್‌ ಓಪನ್‌; ನಡಾಲ್‌ ದಾಖಲೆ ಮುರಿಯುವ ವಿಶ್ವಾಸದಲ್ಲಿ ಜೋಕೊ

Shah Rukh Khan And Akshay kumar Voice Over to New parliament building Video
ದೇಶ26 mins ago

ಪ್ರಧಾನಿ ಮೋದಿ ಮನವಿಗೆ ಸ್ಪಂದನೆ; ಸಂಸತ್​ ಭವನದ ವಿಡಿಯೊಕ್ಕೆ ಧ್ವನಿ ಕೊಟ್ಟ ಶಾರುಖ್​ ಖಾನ್​, ಅಕ್ಷಯ್​ ಕುಮಾರ್​

naresh and pavitra lokesh Live in Relationship
South Cinema37 mins ago

Telugu star Naresh: ಮಕ್ಕಳು ಮಾಡಿಕೊಳ್ಳುವ ಆಲೋಚನೆ ಬಗ್ಗೆ ನರೇಶ್‌, ಪವಿತ್ರಾ ಲೋಕೇಶ್‌ ಹೇಳಿದ್ದೇನು?

IIFA 2023 Winners Hrithik Roshan and anil Kapoor
South Cinema39 mins ago

IIFA 2023 Winners Full List: ಹೃತಿಕ್ ರೋಷನ್, ಆಲಿಯಾ ಭಟ್‌ಗೆ ಅತ್ಯುತ್ತಮ ನಟ, ನಟಿ ಪ್ರಶಸ್ತಿ; ವಿಜೇತರ ಪಟ್ಟಿ ಇಲ್ಲಿದೆ!

new Parliament building and coffin box
ದೇಶ43 mins ago

New Parliament Building: ಹೊಸ ಸಂಸತ್ ಭವನವನ್ನು ಶವಪೆಟ್ಟಿಗೆಗೆ ಹೋಲಿಸಿದ ಲಾಲು ಪ್ರಸಾದ್ ಯಾದವರ ಆರ್‌ಜೆಡಿ ಪಕ್ಷ!

ipl records gill
ಕ್ರಿಕೆಟ್57 mins ago

IPL 2023: ಕೊಹ್ಲಿ ದಾಖಲೆ ಮುರಿಯುವರೇ ಶುಭಮನ್​ ಗಿಲ್​?

aditya ranjan ias
ಅಂಕಣ1 hour ago

ರಾಜ ಮಾರ್ಗ ಅಂಕಣ: ಆಧುನಿಕ ಅಂಗನವಾಡಿಗಳ ನಿರ್ಮಾಪಕ ಆದಿತ್ಯರಂಜನ್ IAS

New Parliament building inauguration Live Video Here
ದೇಶ1 hour ago

New Parliament Building: ನೂತನ ಸಂಸತ್​ ಭವನದ ಉದ್ಘಾಟನೆ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ

Tokyo Olympics Champion Risako Kawai
ಕ್ರೀಡೆ2 hours ago

Wrestlers Protest: ಕುಸ್ತಿಪಟುಗಳ ಪ್ರತಿಭಟನೆಗೆ ಬೆಂಬಲ ಸೂಚಿಸಿದ ವಿಶ್ವ ಚಾಂಪಿಯನ್‌ ಕವಾಯ್

RTI Activist Harish Halli Died
ಕರ್ನಾಟಕ2 hours ago

ದಾವಣಗೆರೆಯಲ್ಲಿ ಪೊಲೀಸ್ ವಾಹನದಿಂದ ಜಿಗಿದು ಮೃತಪಟ್ಟ ಆರ್​ಟಿಐ ಕಾರ್ಯಕರ್ತ

7th Pay Commission
ನೌಕರರ ಕಾರ್ನರ್7 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ4 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ4 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ3 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್3 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ5 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ7 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Teacher Transfer
ನೌಕರರ ಕಾರ್ನರ್7 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

smartphone
ವಾಣಿಜ್ಯ2 months ago

Mobile export : ಭಾರತದಿಂದ 2022-23ರಲ್ಲಿ 85,000 ಕೋಟಿ ರೂ. ಮೊಬೈಲ್‌ ಫೋನ್‌ ರಫ್ತು

Land Surveyor Recruitment
ಉದ್ಯೋಗ4 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

New Parliament building inauguration Live Video Here
ದೇಶ1 hour ago

New Parliament Building: ನೂತನ ಸಂಸತ್​ ಭವನದ ಉದ್ಘಾಟನೆ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ

horoscope today
ಪ್ರಮುಖ ಸುದ್ದಿ7 hours ago

Horoscope Today : ವಾರದ ರಜೆಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

Laxmi Hebbalkar oath taking as a minister
ಕರ್ನಾಟಕ18 hours ago

Laxmi Hebbalkar: ಸಚಿವೆಯಾಗುವುದರ ಜತೆಗೆ ಅಜ್ಜಿಯೂ ಆದ ಲಕ್ಷ್ಮಿ ಹೆಬ್ಬಾಳ್ಕರ್‌; ಒಂದೇ ದಿನ 2 ಸಿಹಿ ಸುದ್ದಿ!

HD Kumaraswamy in JDS Meeting
ಕರ್ನಾಟಕ2 days ago

H.D. Kumaraswamy: ಜೆಡಿಎಸ್‌ ವಿಸರ್ಜನೆ ಹೇಳಿಕೆಗೆ ಬದ್ಧ ಎಂದ ಎಚ್‌.ಡಿ. ಕುಮಾರಸ್ವಾಮಿ!

induction stoves
ಕರ್ನಾಟಕ2 days ago

Congress Guarantee: ಬಿಪಿಎಲ್ ಕಾರ್ಡ್‌ಗೆ ಮುಗಿಬಿದ್ದ ಜನ; ಇಂಡಕ್ಷನ್‌ ಸ್ಟವ್‌ಗೆ ಹೆಚ್ಚಿದ ಬೇಡಿಕೆ

Viral Video, Teacher and Principal are quarrel in front of School children
ದೇಶ2 days ago

Viral Video: ಶಾಲಾ ಮಕ್ಕಳ ಎದುರೇ ಹೊಡೆದಾಡಿಕೊಂಡ ಪ್ರಿನ್ಸಿಪಾಲ್, ಟೀಚರ್! ಇಲ್ಲಿದೆ ನೋಡಿ ವಿಡಿಯೋ

Horoscope Today
ಪ್ರಮುಖ ಸುದ್ದಿ2 days ago

Horoscope Today : ಮಕರ ರಾಶಿಯವರಿಗೆ ಕೌಟುಂಬಿಕವಾಗಿ ಶುಭ ಫಲ; ಇಂದಿನ ಭವಿಷ್ಯ ಇಲ್ಲಿದೆ

HD Kumaraswamy said he will take up the issue of congress guarantee
ಕರ್ನಾಟಕ3 days ago

Congress Guarantee: ನಾವು ಕಡುಬು ತಿನ್ನೋಕ ರಾಜಕಾರಣ ಮಾಡ್ತಿರೋದು?: ಎಚ್‌.ಡಿ. ಕುಮಾರಸ್ವಾಮಿ ಆಕ್ರೋಶ

Beware if the Congress Guarantee card is conditioned and Pratap Simha says he will fight from June 1
ಕರ್ನಾಟಕ3 days ago

Congress Guarantee: ಗ್ಯಾರಂಟಿ ಕಾರ್ಡ್‌ಗೆ ಕಂಡೀಷನ್ ಹಾಕಿದ್ರೆ ಹುಷಾರ್‌; ಜೂನ್‌ 1ರಿಂದ ಹೋರಾಟವೆಂದ ಪ್ರತಾಪ್‌ ಸಿಂಹ

Electricity bill man hit bescom staff
ಕರ್ನಾಟಕ4 days ago

Electricity Bill: ಕರೆಂಟ್‌ ಬಿಲ್‌ ಕಿರಿಕ್‌; ಬಾಕಿ ಬಿಲ್‌ ಕಟ್ಟು ಎಂದಿದ್ದಕ್ಕೆ ಚಪ್ಪಲಿಯಿಂದಲೇ ಹೊಡೆದವ ಅರೆಸ್ಟ್‌

ಟ್ರೆಂಡಿಂಗ್‌

error: Content is protected !!