ಜೀವನ ಪ್ರಮಾಣ ಪತ್ರ ಇನ್ನೂ ಸಲ್ಲಿಸಿಲ್ಲವೇ? ನಾಳೆಯೇ ಕೊನೇ ದಿನ! ಇಲ್ದಿದ್ರೆ ಸಿಗಲ್ಲ ಪೆನ್ಶನ್ - Vistara News

ಉದ್ಯೋಗ

ಜೀವನ ಪ್ರಮಾಣ ಪತ್ರ ಇನ್ನೂ ಸಲ್ಲಿಸಿಲ್ಲವೇ? ನಾಳೆಯೇ ಕೊನೇ ದಿನ! ಇಲ್ದಿದ್ರೆ ಸಿಗಲ್ಲ ಪೆನ್ಶನ್

ನಿವೃತ್ತ ಸರ್ಕಾರಿ ನೌಕರರು ಪಿಂಚಣಿ ಪಡೆಯಲು ಕಡ್ಡಾಯವಾಗಿ ಜೀವನ ಪ್ರಮಾಣ ಪತ್ರ ಸಲ್ಲಿಸಬೇಕು. ಇದಕ್ಕೆ ನವೆಂಬರ್‌ 30 ಕೊನೆಯ ದಿನವಾಗಿದ್ದು, ಗಡುವಿನೊಳಗೆ ಸಲ್ಲಿಸದಿದ್ದರೆ ಪಿಂಚಣಿ ಸ್ಥಗಿತವಾಗಲಿದೆ.

VISTARANEWS.COM


on

life certificate
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಿ ಉದ್ಯೋಗದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಪಿಂಚಣಿ ಪಡೆಯುತ್ತಿರುವ ಪಿಂಚಣಿದಾರರು ಜೀವನ ಪ್ರಮಾಣಪತ್ರ (Jeevan Pramaan Patra) ಸಲ್ಲಿಸಲು ನವೆಂಬರ್‌ 30 ಕೊನೆಯ ದಿನವಾಗಿದೆ. ಒಂದು ವೇಳೆ ಗಡುವಿನೊಳಗೆ ಲೈಫ್‌ ಸರ್ಟಿಫಿಕೇಟ್ ( Life Certificate) ಸಲ್ಲಿಸದಿದ್ದರೆ ಪಿಂಚಣಿ ಸ್ಥಗಿತವಾಗಲಿದೆ.

ಪಿಂಚಣಿ ಪಡೆಯುತ್ತಿರುವ ಪ್ರತಿಯೊಬ್ಬರೂ ಪ್ರತಿ ವರ್ಷ ತಾವು ಜೀವಂತ ಇರುವ ಬಗ್ಗೆ ‘ಲೈಫ್‌ ಸರ್ಟಿಫೀಕೇಟ್’ ಅನ್ನು ಬ್ಯಾಂಕ್‌ ಅಥವಾ ಅಂಚೆ ಕಚೇರಿಗೆ ಸಲ್ಲಿಸಬೇಕು. ನವೆಂಬರ್ 30ರೊಳಗೆ ಪಿಂಚಣಿದಾರರು ಜೀವನ ಪ್ರಮಾಣ ಪತ್ರ ಸಲ್ಲಿಕೆ ಮಾಡದಿದ್ದರೆ ಪಿಂಚಣಿ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ. ಜತೆಗೆ ಮುಂಬರುವ ತಿಂಗಳ ಪಿಂಚಣಿ ಬರುವುದಿಲ್ಲ. ಬಳಿಕ, ಪ್ರಮಾಣ ಪತ್ರ ನೀಡಿ ಖಾತೆಯನ್ನು ಮತ್ತೆ ಸಕ್ರಿಯಗೊಳಿಸಿಸಬೇಕು. ನಂತರ ಮುಂಬರುವ ಪಿಂಚಣಿಯಲ್ಲಿ ಹಳೆಯ ಬಾಕಿ ಸೇರಿಸಿ ಪಿಂಚಣಿ ಹಣ ಖಾತೆಗೆ ಜಮೆ ಆಗುತ್ತದೆ.

ಇದನ್ನೂ ಓದಿ | SSC Recruitment 2023 : ಅರೆಸೇನಾಪಡೆಗಳ 75 ಸಾವಿರವಲ್ಲ 26 ಸಾವಿರ ಹುದ್ದೆಗಳಿಗೆ ನೇಮಕ; ಕನ್ನಡದಲ್ಲಿಯೂ ನಡೆಯುತ್ತೆ ಪರೀಕ್ಷೆ!

ಏನಿದು ಜೀವನ ಪ್ರಮಾಣಪತ್ರ?

ಪಿಂಚಣಿ ಪಡೆಯುವವರು ಮೃತಪಟ್ಟ ಬಳಿಕವೂ ಅವರ ಖಾತೆಗೆ ಪಿಂಚಣಿ ಹಣ ಜಮೆಯಾಗುತ್ತಿತ್ತು. ಹಾಗಾಗಿ, ಇದನ್ನು ತಪ್ಪಿಸಲು ಫಲಾನುಭವಿಗಳು ಪ್ರತಿ ವರ್ಷ ತಾವು ಬದುಕಿರುವ ಬಗ್ಗೆ ಒಂದು ಪ್ರಮಾಣಪತ್ರ ಸಲ್ಲಿಕೆ ಮಾಡುವುದು ಕಡ್ಡಾಯ ಮಾಡಲಾಗಿದೆ. ಈ ಪ್ರಮಾಣ ಪತ್ರವನ್ನು ಪಿಂಚಣಿದಾರರು ಪೆನ್ಷನ್ ಡಿಸ್ಬರ್ಸಿಂಗ್ ಏಜೆನ್ಸಿ (ಪಿಡಿಎ) ಅಥವಾ ಪಿಂಚಣಿ ವಿತರಿಸುವ ಸಂಸ್ಥೆಗಳಲ್ಲಿ (ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್‌) ತೆರಳಿ ಲೈಫ್ ಸರ್ಟಿಫಿಕೇಟ್ ಸಲ್ಲಿಸಬೇಕು. ಡಿಜಿಟಲ್ ಜೀವನ ಪ್ರಮಾಣಪತ್ರ ಯೋಜನೆಯನ್ನು ಕೇಂದ್ರ ಸರ್ಕಾರ 2014ರಲ್ಲಿ ಜಾರಿ ಮಾಡಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

Job alert: ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 54 ಸ್ಥಾನಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಕೊನೆಯ ದಿನ ಮೇ 24. ಬಿಸಿಎ, ಬಿ.ಎಸ್‌ಸಿ, ಬಿ.ಇ. ಅಥವಾ ಬಿ.ಟೆಕ್‌, ಎಂಸಿಎ ಪದವಿ ಪಡೆದವರು ಈ ಸುವರ್ಣಾವಕಾಶ ಬಳಸಿಕೊಳ್ಳಿ.

VISTARANEWS.COM


on

Job Alert
Koo

ಬೆಂಗಳೂರು: ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ (India Post Payments Bank) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IPPB Recruitment 2024). ಇನ್ಫರ್ಮೇಷನ್‌ ಟೆಕ್ನಾಲಜಿ ಎಕ್ಸಿಕ್ಯೂಟಿವ್‌ ಹುದ್ದೆ ಇದಾಗಿದ್ದು, ಒಟ್ಟು 54 ಸ್ಥಾನಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಉದ್ಯೋಗದ ಸ್ಥಳ: ಚೆನ್ನೈ, ಮುಂಬೈ, ದೆಹಲಿ. ಬಿಸಿಎ, ಬಿಎಸ್‌ಸಿ ಓದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 24 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಕ್ಸಿಕ್ಯೂಟಿವ್‌ (ಅಸೋಸಿಯೇಟ್‌ ಕನ್ಸಲ್‍ಟೆಂಟ್‍) (Executive (Associate Consultant)- 28, ಎಕ್ಸಿಕ್ಯೂಟಿವ್‌ (ಕನ್ಸಲ್‍ಟೆಂಟ್‍) (Executive (Consultant) – 21 ಮತ್ತು ಎಕ್ಸಿಕ್ಯೂಟಿವ್‌ (ಸೀನಿಯರ್ ಕನ್ಸಲ್‍ಟೆಂಟ್‍)‌ (Executive (Senior Consultant) – 5 ಹುದ್ದೆಗಳಿವೆ. IPPB official notification ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಬಿಸಿಎ, ಬಿ.ಎಸ್‌ಸಿ, ಬಿ.ಇ. ಅಥವಾ ಬಿ.ಟೆಕ್‌, ಎಂಸಿಎ ಪದವಿ ಪಡೆದಿರಬೇಕು. ಜತೆಗೆ 1ರಿಂದ 6 ವರ್ಷದವರೆಗೆ ಅನುಭವ ಹೊಂದಿರುವುದು ಕಡ್ಡಾಯ.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅಭ್ಯರ್ಥಿಗಳ ಕನಿಷ್ಠ ವಯಸ್ಸು 22 ವರ್ಷ ಮತ್ತು ಗರಿಷ್ಠ ವಯಸ್ಸು 45 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ. ಅರ್ಜಿ ಶುಲ್ಕವಾಗಿ ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳು 150 ರೂ. ಮತ್ತು ಉಳಿದೆಲ್ಲ ವರ್ಗಗಳ ಅಭ್ಯರ್ಥಿಗಳು 750 ರೂ. ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ವಿಧಾನ ಬಳಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಆನ್‌ಲೈನ್‌ ಪರೀಕ್ಷೆ, ಗ್ರೂಪ್‌ ಡಿಸ್ಕಷನ್‌ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಗುತ್ತಿಗೆ ಆಧಾರದಲ್ಲಿ ಈ ನೇಮಕಾತಿ ನಡೆಯಲಿದ್ದು, ಆಯ್ಕೆಯಾದವರಿಗೆ 10,00,000 ರೂ.-25,00,000 ರೂ. ವಾರ್ಷಿಕ ವೇತನ ದೊರೆಯಲಿದೆ.

IPPB Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಮೊದಲು ನಿಮ್ಮ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ತೆರೆದುಕೊಳ್ಳುವ IPPB Online Application Form ಅನ್ನು ಸರಿಯಾದ ಮಾಹಿತಿ ನೀಡಿ ಭರ್ತಿ ಮಾಡಿ.
  • ಅಗತ್ಯವಾದ ಡಾಕ್ಯುಮೆಂಟ್‌, ಫೋಟೊ, ಸಹಿ ಇತ್ಯಾದಿಯನ್ನು ಸರಿಯಾದ ಗಾತ್ರದಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ನೀಡಿದ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಕೆಪಿಎಸ್‌ಸಿ; ಇಲ್ಲಿದೆ ಹೊಸ ವೇಳಾಪಟ್ಟಿ

Continue Reading

ಕರ್ನಾಟಕ

Toyota: ಟೊಯೊಟಾ ಕೌಶಲ್ಯ ಕೋರ್ಸ್‌ಗೆ ಅರ್ಜಿ ಆಹ್ವಾನ; ಗ್ರಾಮೀಣ ಯುವಕರೇ ಈ ಅವಕಾಶ ಬಳಸಿಕೊಳ್ಳಿ

Toyota: ಗ್ರಾಮೀಣ ಯುವಕರನ್ನು ವಿಶ್ವದರ್ಜೆಯ ಸ್ಪರ್ಧಾತ್ಮಕ ತಂತ್ರಜ್ಞರನ್ನಾಗಿ ಪರಿವರ್ತಿಸುವ ಉದ್ದೇಶದಿಂದ ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ತನ್ನ ಟಿಟಿಟಿಐ ರೆಗ್ಯುಲರ್ ಪ್ರೋಗ್ರಾಂ ಮತ್ತು ಟೊಯೊಟಾ ಕೌಶಲ್ಯ ಕಾರ್ಯಕ್ರಮಗಳಿಗೆ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನಿದ್ದು, ಟಿಟಿಟಿಐ ರೆಗ್ಯುಲರ್ ಪ್ರೋಗ್ರಾಂ ಮೂರು ವರ್ಷಗಳ ವಸತಿ ಕೋರ್ಸ್ ಮೂಲಕ ಸಮಗ್ರ ತರಬೇತಿಯನ್ನು ನೀಡುತ್ತದೆ. ಇನ್ನು ಟೊಯೊಟಾ ಕೌಶಲ್ಯ ಕೋರ್ಸ್ ಉದ್ಯೋಗ ತರಬೇತಿಯೊಂದಿಗೆ ಉದ್ಯಮ ಸಮೃದ್ಧ ಪಠ್ಯಕ್ರಮದೊಂದಿಗೆ “ಕಲಿಯಿರಿ ಮತ್ತು ಸಂಪಾದಿಸಿ” ಪರಿಕಲ್ಪನೆಯಾಗಿದ್ದು, ಸಮಗ್ರ ಎರಡು ವರ್ಷಗಳ ವಸತಿ ಕೋರ್ಸ್ ಆಗಿದೆ.

VISTARANEWS.COM


on

Application Invited for TTTI and Toyota Skill Courses from Toyota Technical Training Institute
Koo

ಬೆಂಗಳೂರು: ಗ್ರಾಮೀಣ ಯುವಕರನ್ನು ವಿಶ್ವದರ್ಜೆಯ ಸ್ಪರ್ಧಾತ್ಮಕ ತಂತ್ರಜ್ಞರನ್ನಾಗಿ ಪರಿವರ್ತಿಸುವ ಉದ್ದೇಶದಿಂದ ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ವತಿಯಿಂದ ಟಿಟಿಟಿಐ ರೆಗ್ಯುಲರ್ ಪ್ರೋಗ್ರಾಂ ಮತ್ತು ಟೊಯೊಟಾ (Toyota) ಕೌಶಲ್ಯ ಕಾರ್ಯಕ್ರಮಗಳಿಗೆ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನಿದೆ.

ಕರ್ನಾಟಕದ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯಿಂದ ಬಂದಿರುವ ಶೈಕ್ಷಣಿಕ ಆಸಕ್ತಿಯನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಉಚಿತ ತರಬೇತಿಯನ್ನು ನೀಡಲಾಗುತ್ತಿದ್ದು, ಇದರಿಂದ ಗ್ರಾಮೀಣ ವಿದ್ಯಾರ್ಥಿಗಳು ನುರಿತ ತಂತ್ರಜ್ಞರಾಗಿ ವೃತ್ತಿಜೀವನವನ್ನು ಮುಂದುವರಿಸಲು ಸಶಕ್ತರಾಗಲಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಮೇ 19ರಂದು ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ

ಟಿಟಿಟಿಐ ರೆಗ್ಯುಲರ್ ಪ್ರೋಗ್ರಾಂ ಮೂರು ವರ್ಷಗಳ ವಸತಿ ಕೋರ್ಸ್ ಮೂಲಕ ಸಮಗ್ರ ತರಬೇತಿಯನ್ನು ನೀಡುತ್ತದೆ. ಇತ್ತೀಚೆಗೆ ಪರಿಚಯಿಸಲಾದ ಟೊಯೊಟಾ ಕೌಶಲ್ಯ ಕಾರ್ಯಕ್ರಮದ ಜತೆಗೆ ಕೌಶಲ್ಯ, ಜ್ಞಾನ ಮತ್ತು ನಡವಳಿಕೆ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಿದೆ, ಇದು ಉತ್ಪಾದನಾ ಉದ್ಯಮಕ್ಕೆ ನಿರ್ಣಾಯಕವಾದ ಕೌಶಲ್ಯಗಳೊಂದಿಗೆ ಯುವಕರನ್ನು ಸಜ್ಜುಗೊಳಿಸಲು ವಿನ್ಯಾಸಗೊಳಿಸಲಾದ ಸಮಗ್ರ ಎರಡು ವರ್ಷಗಳ ವಸತಿ ಕೋರ್ಸ್ ಆಗಿದೆ. ಆ ಮೂಲಕ ಅವರ ಉದ್ಯೋಗಾರ್ಹತೆಯನ್ನು ಹೆಚ್ಚಿಸುತ್ತದೆ. ‘ಕಲಿಯಿರಿ ಮತ್ತು ಸಂಪಾದಿಸಿ’ ಮಾದರಿಯ ಮೂಲಕ ಭಾಗವಹಿಸುವವರು ಆನ್-ದಿ-ಜಾಬ್ ಟ್ರೈನಿಂಗ್ (ಒಜೆಟಿ) ಜತೆಗೆ ಸೈದ್ಧಾಂತಿಕ ಕಲಿಕೆಯಲ್ಲಿ ವಿದ್ಯಾರ್ಥಿಗಳು ತೊಡಗುತ್ತಾರೆ.

ಮಾಸ್ಟರ್ ತರಬೇತುದಾರರಾಗಿ ಸೇವೆ ಸಲ್ಲಿಸುತ್ತಿರುವ ಅನುಭವಿ ಮೇಲ್ವಿಚಾರಕರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುವವರು ಉದ್ಯಮದ ಮಾನದಂಡಗಳಿಗೆ ಅನುಗುಣವಾಗಿ ಉನ್ನತ ಶ್ರೇಣಿಯ ಬೋಧನೆಯಿಂದ ಪ್ರಯೋಜನ ಪಡೆಯುತ್ತಾರೆ. ಇದು ಉತ್ತಮ ಗುಣಮಟ್ಟದ ತರಬೇತಿಯನ್ನು ಪಡೆಯುವುದನ್ನು ಖಚಿತಪಡಿಸುತ್ತದೆ. ಕೈಗಾರಿಕಾ ಮಾನದಂಡಗಳಿಗೆ ಅನುಗುಣವಾಗಿ ಪರಿಣಿತಿಯನ್ನು ಬೆಳೆಸುತ್ತದೆ. ಹೆಚ್ಚುವರಿಯಾಗಿ ಈ ಕಾರ್ಯಕ್ರಮವು ಸಮಗ್ರ ಅಭಿವೃದ್ಧಿಗೆ ಒತ್ತು ನೀಡುತ್ತದೆ. ತರಬೇತಿ ಪಡೆಯುವವರಿಗೆ ಸುಧಾರಿತ ಕೌಶಲ್ಯ ಮತ್ತು ಜ್ಞಾನ ಸಂಪಾದನೆಯೊಂದಿಗೆ ಕಠಿಣ ದೈಹಿಕ ಮತ್ತು ಮಾನಸಿಕ ಸಮತೋಲನವನ್ನು ಪಡೆಯಲಿದ್ದಾರೆ.

ಈ ಬಗ್ಗೆ ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಹಣಕಾಸು ಮತ್ತು ಆಡಳಿತದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಜಿ.ಶಂಕರ ಮಾತನಾಡಿ, “2024 ನೇ ಸಾಲಿಗೆ ಟೊಯೋಟಾ ತಾಂತ್ರಿಕ ತರಬೇತಿ ಸಂಸ್ಥೆಗೆ (ಟಿಟಿಟಿಐ) ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ನಮ್ಮ ಟಿಟಿಟಿಐ ರೆಗ್ಯುಲರ್ ಪ್ರೋಗ್ರಾಂ ಮತ್ತು ಟೊಯೊಟಾ ಕೌಶಲ್ಯ ಕಾರ್ಯಕ್ರಮದ ಮೂಲಕ ನಾವು ವಿದ್ಯಾರ್ಥಿಗಳ ಜ್ಞಾನ, ಕೌಶಲ್ಯ ಮತ್ತು ಮನೋಭಾವವನ್ನು ಅಭಿವೃದ್ಧಿಪಡಿಸುವತ್ತ ಗಮನ ಹರಿಸುತ್ತೇವೆ. ವಿದ್ಯಾರ್ಥಿಗಳನ್ನು 360 ಡಿಗ್ರಿ ದೃಷ್ಟಿಕೋನದಿಂದ ಅಭಿವೃದ್ಧಿ ಪಡಿಸುತ್ತೇವೆ. ಇದರ ಪರಿಣಾಮವಾಗಿ ನಮ್ಮ ಪದವೀಧರರು ಭಾರತದಲ್ಲಿ ಮತ್ತು ಜಪಾನ್ ಮತ್ತು ಮಧ್ಯಪ್ರಾಚ್ಯ ದೇಶಗಳು ಸೇರಿದಂತೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. 2007 ರಲ್ಲಿ ಪ್ರಾರಂಭವಾದಾಗಿನಿಂದ ಟಿಟಿಟಿಐ 900ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯಶಸ್ವಿಯಾಗಿ ಪದವಿ ಪಡೆದಿದ್ದಾರೆ.

ಇದನ್ನೂ ಓದಿ: Bhatkal News: ಭಟ್ಕಳದ ಕಡವಿನಕಟ್ಟೆ ಹೊಳೆಯಲ್ಲಿ ಮುಳುಗಿ ಇಬ್ಬರ ಸಾವು

ಟಿಟಿಟಿಐ ಪದವೀಧರರು ರಾಷ್ಟ್ರೀಯ ಕೌಶಲ್ಯ ಸ್ಪರ್ಧೆ ಮತ್ತು ವಿಶ್ವ ಕೌಶಲ್ಯ ಸ್ಪರ್ಧೆಯಂತಹ ಪ್ರತಿಷ್ಠಿತ ಸ್ಪರ್ಧೆಗಳಲ್ಲಿ ಪ್ರಶಂಸನೀಯ ಸಾಧನೆಗಳನ್ನು ಮಾಡಿದ್ದಾರೆ. ಆ ಮೂಲಕ ರಾಷ್ಟ್ರಕ್ಕೆ ಹೆಮ್ಮೆ ತಂದಿದ್ದಾರೆ ಎಂದು ನಾವು ಹೆಮ್ಮೆಪಡುತ್ತೇವೆ. “ಸ್ಕಿಲ್ ಇಂಡಿಯಾ” ಮಿಷನ್‌ಗೆ ಕೊಡುಗೆ ನೀಡಲು ನಾವು ಹೆಮ್ಮೆಪಡುತ್ತೇವೆ. ಮುಂದಿನ ಪೀಳಿಗೆಯ ನುರಿತ ವೃತ್ತಿಪರರನ್ನು ಟೊಯೊಟಾ ಕುಟುಂಬಕ್ಕೆ ಸ್ವಾಗತಿಸಲು ಎದುರು ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಟಿಟಿಟಿಐ ಇತ್ತೀಚೆಗೆ ತನ್ನ ದಾಖಲಾತಿ ಸಮಾರ್ಥ್ಯವನ್ನು 600 ರಿಂದ 1200 ಕ್ಕೆ ದ್ವಿಗುಣಗೊಳಿಸಿದೆ. ಇದರಲ್ಲಿ 600 ಮಹಿಳಾ ವಿದ್ಯಾರ್ಥಿಗಳು ಸೇರಿದ್ದಾರೆ. ಅದರ ವಿಸ್ತರಣೆಯ ಪ್ರಮುಖ ಅಂಶವಾಗಿ ಲಿಂಗ ವೈವಿಧ್ಯತೆಯನ್ನು (ಲಿಂಗ ಸಮಾನತೆ) ಹೆಚ್ಚಿಸುವತ್ತ ದೃಢವಾದ ಗಮನ ಹರಿಸಲಾಗಿದೆ.

ಕೌಶಲ್ಯವನ್ನು ಉತ್ತೇಜಿಸಲು, ಟಿಟಿಟಿಐ ಜಪಾನ್ ಇಂಡಿಯಾ ಇನ್ಸ್ಟಿಟ್ಯೂಟ್ ಫಾರ್ ಮ್ಯಾನುಫ್ಯಾಕ್ಚರಿಂಗ್ (ಜಿಐಎಂ) ಕೌಶಲ್ಯ ವರ್ಗಾವಣೆ ಉತ್ತೇಜನ ಕಾರ್ಯಕ್ರಮದ ಅಡಿಯಲ್ಲಿ ಸಂಸ್ಥೆಗಳಲ್ಲಿ ಒಂದಾಗಿದೆ. ಇದು ಜಪಾನೀಸ್ ಶೈಲಿಯ ಉತ್ಪಾದನಾ ಕೌಶಲ್ಯಗಳು ಮತ್ತು ಅಭ್ಯಾಸಗಳನ್ನು ಬೆಳೆಸುವ ಗುರಿಯನ್ನು ಹೊಂದಿದೆ. ಆ ಮೂಲಕ ಭಾರತ ಸರ್ಕಾರದ ‘ಸ್ಕಿಲ್ ಇಂಡಿಯಾ’ ಮಿಷನ್‌ಗೆ ಕೊಡುಗೆ ನೀಡುತ್ತದೆ ಎಂದು ತಿಳಿಸಿದ್ದಾರೆ.

ಟಿಟಿಟಿಐ ರೆಗ್ಯುಲರ್ ಕೋರ್ಸ್

ಈ ಕೋರ್ಸ್‌ ಕೌಶಲ್ಯ, ಜ್ಞಾನ ಮತ್ತು ನಡವಳಿಕೆ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಿದ ಸಮಗ್ರ ತರಬೇತಿ ವಿಧಾನವಾಗಿದೆ.

ಕೋರ್ಸ್‌ ಅವಧಿ: 3 ವರ್ಷಗಳು, ಕೋರ್ಸ್‌ಗೆ ಸೇರಲು ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಪಾಸ್‌ ಒಟ್ಟಾರೆ ಶೇ.50 ಅಂಕ, ಗಣಿತ ಮತ್ತು ವಿಜ್ಞಾನ ತಲಾ ಶೇ.45 ರಷ್ಟು ಅಂಕ ಪಡೆದಿರಬೇಕು. ವಯಸ್ಸಿನ ಅರ್ಹತೆ: 16-17 ವರ್ಷದವರಾಗಿರಬೇಕು. ಕೋರ್ಸ್‌ ಟ್ರೇಡ್ಸ್: ಆಟೋಮೋಟಿವ್ ವೆಲ್ಡ್, ಆಟೋಮೋಟಿವ್ ಪೇಂಟ್, ಆಟೋಮೋಟಿವ್ ಅಸೆಂಬ್ಲಿ, ಮೆಕಾಟ್ರಾನಿಕ್ಸ್ ಆಗಿವೆ.

ಈ ಮೂರು ವರ್ಷದ ಕೋರ್ಸ್‌ಗೆ ಸೇರುವವರಿಗೆ ನ್ಯಾಷನಲ್ ಅಪ್ರೆಂಟಿಸ್ ಸರ್ಟಿಫಿಕೇಟ್‌ ಸಿಗಲಿದೆ. ಟೊಯೋಟಾ, ಜಿಮ್ (ಜಪಾನ್-ಇಂಡಿಯಾ ಇನ್ಸ್ಟಿಟ್ಯೂಟ್ ಫಾರ್ ಮ್ಯಾನುಫ್ಯಾಕ್ಚರಿಂಗ್) ಎಎಸ್‌ಡಿಸಿ (ಆಟೋಮೋಟಿವ್ ಸ್ಕಿಲ್ ಡೆವಲಪ್ಮೆಂಟ್ ಕೌನ್ಸಿಲ್) ಪ್ರಮಾಣಪತ್ರ ದೊರೆಯಲಿದೆ.

ಟೊಯೊಟಾ ಕೌಶಲ್ಯ ಕೋರ್ಸ್

ಉದ್ಯೋಗ ತರಬೇತಿಯೊಂದಿಗೆ ಉದ್ಯಮ ಸಮೃದ್ಧ ಪಠ್ಯಕ್ರಮದೊಂದಿಗೆ “ಕಲಿಯಿರಿ ಮತ್ತು ಸಂಪಾದಿಸಿ” ಪರಿಕಲ್ಪನೆಯಾಗಿದೆ. ಕೋರ್ಸ್‌ನ ಅವಧಿ: 2 ವರ್ಷಗಳು, ಕೋರ್ಸ್‌ಗೆ ಸೇರಲು ವಿದ್ಯಾರ್ಹತೆ: ಎಸ್ಎಸ್ಎಲ್ ಸಿ ತೇರ್ಗಡೆಯಾಗಿರಬೇಕು. ವಯಸ್ಸಿನ ಅರ್ಹತೆ: 18 ರಿಂದ 24 ವರ್ಷದವರಾಗಿರಬೇಕು. ಇ-ಎನ್‌ಟಿಸಿ (ಐಟಿಐಗೆ ಸಮಾನವಾದ ರಾಷ್ಟ್ರೀಯ ವ್ಯಾಪಾರ ಪ್ರಮಾಣಪತ್ರ), ಟೊಯೊಟಾ, ಜಿಮ್ (ಜಪಾನ್-ಇಂಡಿಯಾ ಇನ್ಸ್ಟಿಟ್ಯೂಟ್ ಫಾರ್ ಮ್ಯಾನುಫ್ಯಾಕ್ಚರಿಂಗ್) ಪ್ರಮಾಣ ಪತ್ರ ದೊರೆಯಲಿದೆ.

ಇದನ್ನೂ ಓದಿ: Dubbing Premier League : ಶನಿವಾರದಿಂದ 3ನೇ ಆವೃತ್ತಿಯ ಡಬ್ಬಿಂಗ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ

ಮೇ 26ರಂದು ಹುಬ್ಬಳ್ಳಿ, ತುಮಕೂರು, ಹಾಸನ ಹಾಗೂ ಮೇ 25 ರಂದು ಬಿಡದಿಯಲ್ಲಿ ಹಾಗೂ ಮೇ 24 ರಂದು ಶಿವಮೊಗ್ಗದಲ್ಲಿ ಪರೀಕ್ಷೆ ನಡೆಯಲಿವೆ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಟೊಯೊಟಾ ಇಂಡಿಯಾ ಟಿಟಿಟಿಐ (toyotabharat.com), ಮೊಬೈಲ್: 8050673677, 9591999667, ಲ್ಯಾಂಡ್‌ಲೈನ್- 080 66292546 ಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯ ಒಳಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಉದ್ಯೋಗ

Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Job Alert: ಭಾರತದ ಪ್ರಮುಖ ಖಾಸಗಿ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬಂಧನ್‌ ಬ್ಯಾಂಕ್‌ ದೇಶಾದ್ಯಂತ ಖಾಲಿ ಇರುವ 31 ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 12ನೇ ತರಗತಿ ತೇರ್ಗಡೆ ಹೊಂದಿದವರು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಮೇ 31 ಕೊನೆಯ ದಿನ. ಅಭ್ಯರ್ಥಿಗಳು ಕಂಪ್ಯೂಟರ್‌ ಜ್ಞಾನ ಹೊಂದಿರುವುದು ಕಡ್ಡಾಯ.

VISTARANEWS.COM


on

Job Alert
Koo

ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬಂಧನ್‌ ಬ್ಯಾಂಕ್‌ (Bandhan Bank) ದೇಶಾದ್ಯಂತ ಖಾಲಿ ಇರುವ 31 ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ (Bandhan Bank Assistant Notification 2024). 12ನೇ ತರಗತಿ ತೇರ್ಗಡೆ ಹೊಂದಿದವರು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಮೇ 31 ಕೊನೆಯ ದಿನ (Job Alert).

ವಿದ್ಯಾರ್ಹತೆ ಮತ್ತು ವಯೋಮಿತಿ

ದ್ವಿತೀಯ ಪಿಯುಸಿ ಪಾಸಾದವರು, ಪದವಿ ಪಡೆದವರು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿದರವರು ಅರ್ಜಿ ಸಲ್ಲಿಬಹುದು. ಅಭ್ಯರ್ಥಿಗಳು ಕಂಪ್ಯೂಟರ್‌ ಜ್ಞಾನ ಹೊಂದಿರುವುದು ಕಡ್ಡಾಯ. ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಅಂದರೆ ಅಭ್ಯರ್ಥಿಗಳು 1994ರ ಏಪ್ರಿಲ್‌ 3 ಮತ್ತು 2006ರ ಏಪ್ರಿಲ್‌ 3ರೊಳಗೆ ಜನಿಸಿರಬೇಕು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ ಮತ್ತು ಅರ್ಜಿ ಶುಲ್ಕ

ಸಂದರ್ಶನ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆನ್‌ಲೈನ್‌ ಮೂಲಕ ಸಂದರ್ಶನ ನಡೆಯಲಿದೆ. ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

ಕಾರ್ಯ ವೈಖರಿ

ಆಯ್ಕೆಯಾಗುವ ಉದ್ಯೋಗಿಗಳು ಗ್ರಾಹಕರ ಖಾತೆಗಳನ್ನು ನಿರ್ವಹಿಸುವುದು, ಹಣ ವರ್ಗಾವಣೆಗಳು ಮತ್ತು ಠೇವಣಿಗಳನ್ನು ಪ್ರಕ್ರಿಯೆ ನಡೆಸುವುದು, ಡ್ರಾಫ್ಟ್‌ ಮತ್ತು ಚೆಕ್‌ ನೀಡುವುದು, ಲಾಕರ್‌ಗಳ ನಿರ್ವಹಣೆ, ಗ್ರಾಹಕರ ಪ್ರಶ್ನೆಗಳಿಗೆ ಉತ್ತರ ನೀಡುವುದು ಮತ್ತು ಸಮಸ್ಯೆಗಳನ್ನು ಪರಿಹರಿಸುವುದು, ಬ್ಯಾಂಕಿನ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸುವುದು, ಕ್ಯಾಶ್ ನಿರ್ವಹಣೆ ಮುಂತಾದ ಜವಾಬ್ದಾರಿ ನಿರ್ವಹಿಸಬೇಕಾಗುತ್ತದೆ. ಉದ್ಯೋಗದ ಸ್ಥಳ: ಭಾರತಾದ್ಯಂತ.

ಬ್ಯಾಂಕ್‌ ಬಗ್ಗೆ

ಕೋಲ್ಕತ್ತಾದಲ್ಲಿ ಕೇಂದ್ರ ಕಚೇರಿ ಹೊಂದಿರುವ ಬಂಧನ್‌ ಬ್ಯಾಂಕ್‌ ದೇಶದ 34 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶಾಖೆಗಳನ್ನು ಹೊಂದಿದೆ. ಬ್ಯಾಂಕ್‌ಗೆ ಸುಮಾರು 2.51 ಕೋಟಿ ಗ್ರಾಹಕರಿದ್ದಾರೆ.

Bandhan Bankನ ಸಹಾಯಕ ಹುದ್ದೆಗಳ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಮೊದಲು ನಿಮ್ಮ ಹೆಸರು ನೋಂದಾಯಿಸಿ.
  • ಈಗ ಕಂಡುಬರುವ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಸಹಿ, ಫೋಟೊ ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಹೆಚ್ಚಿನ ವಿವರಗಳಿಗೆ ಎಚ್‌ಆರ್‌ ವಿಭಾಗದ ಫೋನ್‌ ನಂಬರ್‌: 7501496783 ಅಥವಾ ಇಮೇಲ್‌ hrraj.bankingofficial@gmail.com ಅನ್ನು ಸಂಪರ್ಕಿಸಿ.

ಇದನ್ನೂ ಓದಿ: Job Alert: ಗಮನಿಸಿ; ಬಿಎಂಟಿಸಿಯ 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 18 ಕೊನೆಯ ದಿನ

Continue Reading

ಉದ್ಯೋಗ

Job Alert: ಗುಡ್‌ನ್ಯೂಸ್‌: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಕೆಪಿಎಸ್‌ಸಿ; ಇಲ್ಲಿದೆ ಹೊಸ ವೇಳಾಪಟ್ಟಿ

Job Alert: ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿ ಅಧಿಸೂಚನೆ ಹೊರಡಿಸಿದೆ. ಈ ಹಿಂದೆ 277 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮೇ 14 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಮೇ 24ರವರೆಗೆ ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 35 ವರ್ಷ. ಈ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಗುಡ್‌ನ್ಯೂಸ್‌. ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ (KPSC) ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿ ಅಧಿಸೂಚನೆ ಹೊರಡಿಸಿದೆ (KPSC Group B (RPC) Recruitment 2024). ಈ ಹಿಂದೆ 277 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮೇ 14 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಮೇ 24ರವರೆಗೆ ಅವಕಾಶ ನೀಡಲಾಗಿದೆ (Job Alert).

ಬಿ.ಟೆಕ್‌ ವಿದ್ಯಾರ್ಹತೆಯುಳ್ಳವರಿಗೂ ಅವಕಾಶ

ಈ ಹಿಂದಿನ ಅಧಿಸೂಚನೆಯಲ್ಲಿನ ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್) (ವಿಭಾಗ 1) – 90 ಮತ್ತು ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್) (ವಿಭಾಗ-1) – 10 ಹುದ್ದೆಗಳಿಗೆ ಇಲಾಖೆಯ ಪ್ರಸ್ತಾವನೆಯಂತೆ ನಿಗದಿಪಡಿಸಲಾಗಿದ್ದ ವಿದ್ಯಾರ್ಹತೆಯ ಕೋರ್ಸ್‌ಗಳಲ್ಲಿ ಕೇವಲ ಬಿಇ ಪದವಿಗಳನ್ನು ಮಾತ್ರ ಈ ಹಿಂದೆ ಪರಿಗಣಿಸಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪ್ರಸ್ತುತ ಸರ್ಕಾರ ಈ ಹುದ್ದೆಗಳಿಗೆ ಬಿ.ಟೆಕ್ ಪದವಿಯನ್ನು ಸಹ ಪರಿಗಣಿಸಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಉಳಿದಂತೆ ಹಿಂದಿನ ಅಧಿಸೂಚನೆಯ ಷರತ್ತು ಅನ್ವಯ.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸಹಾಯಕ ಎಂಜಿನಿಯರ್‌ (ಸಿವಿಲ್‌) (ವಿಭಾಗ 1)- 92 ಹುದ್ದೆ, ವಿದ್ಯಾರ್ಹತೆ: ಬಿ.ಇ / ಬಿ.ಟೆಕ್‌ (ಸಿವಿಲ್‌ ಎಂಜಿನಿಯರಿಂಗ್‌)
ಸಹಾಯಕ ಎಂಜಿನಿಯರ್‌ (ಸಿವಿಲ್‌) (ವಿಭಾಗ 1)-90 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್‌)
ಭೂ ದಾಖಲೆಗಳ ಸಹಾಯಕ ನಿರ್ದೇಶಕರು-24 ಹುದ್ದೆ, ವಿದ್ಯಾರ್ಹತೆ: ಪದವಿ (ಸಿವಿಲ್‌ ಎಂಜಿನಿಯರಿಂಗ್‌)
ಪತ್ರಾಂಕಿತ ವ್ಯವಸ್ಥಾಪಕರು / ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು-21 ಹುದ್ದೆ, ವಿದ್ಯಾರ್ಹತೆ: ಪದವಿ
ಸಹಾಯಕ ನಿರ್ದೇಶಕರು – 20 ಹುದ್ದೆ, ವಿದ್ಯಾರ್ಹತೆ: ಬಿ.ಇ / ಬಿ.ಟೆಕ್‌ (ಎಂಜಿನಿಯರಿಂಗ್‌) ಅಥವಾ ಎಂಬಿಎ
ಸಹಾಯಕ ಎಂಜಿನಿಯರ್‌ (ಮೆಕ್ಯಾನಿಕಲ್‌) (ವಿಭಾಗ-1) – 10 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್‌)
ಕಾರ್ಖಾನೆಗಳ ಸಹಾಯಕ ನಿರ್ದೇಶಕರು – 7 ಹುದ್ದೆ, ವಿದ್ಯಾರ್ಹತೆ: ಪದವಿ (ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್‌)
ಬಾಯ್ಲರುಗಳ ಸಹಾಯಕ ನಿರ್ದೇಶಕರು – 3 ಹುದ್ದೆ, ವಿದ್ಯಾರ್ಹತೆ: (ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್‌)
ಭೂ ವಿಜ್ಞಾನಿ – 10 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ (ಜಿಯೋಲಜಿ / ಅಪ್ಲೈಡ್‌ ಜಿಯಾಲಜಿ.

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ಅಭ್ಯರ್ಥಿಗಳು 300 ರೂ., ಇತರ ಹಿಂದುಳಿದ ಅಭ್ಯರ್ಥಿಗಳು 150 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕಾಗಿಲ್ಲ.

ಪರಿಷ್ಕೃತ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಎಚ್ಎ‌ಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Continue Reading
Advertisement
SSLC 2024 Exam 2
ಪ್ರಮುಖ ಸುದ್ದಿ6 mins ago

SSLC 2024 Exam 2: ಜೂ. 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ-2; ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ

Two killed after being hit by the wheel of a chariot while performing at Veerabhadreswara fair
ಕರ್ನಾಟಕ15 mins ago

Veerabhadreswara Fair: ವೀರಭದ್ರೇಶ್ವರ ಜಾತ್ರೆಯಲ್ಲಿ ಉತ್ತತ್ತಿ ಆಯುವಾಗ ರಥದ ಚಕ್ರದಡಿ‌ ಸಿಲುಕಿ ಇಬ್ಬರ ಸಾವು

Voter Turnout
ದೇಶ29 mins ago

Voter Turnout: 4ನೇ ಹಂತದಲ್ಲಿ ಹೆಚ್ಚಿದ ಮತದಾನ; ಪುರುಷರಿಗಿಂತ ಸ್ತ್ರೀಯರಿಂದಲೇ ಹೆಚ್ಚು ಮತ ಚಲಾವಣೆ; ಹೀಗಿದೆ ಆಯೋಗದ ಮಾಹಿತಿ

Uttara Kannada News Take precautionary measures to prevent the spread of infectious diseases in the district says DC Gangubai manakar
ಉತ್ತರ ಕನ್ನಡ33 mins ago

Uttara Kannada News: ಸಾಂಕ್ರಾಮಿಕ ರೋಗಗಳು ಹರಡದಂತೆ ಎಚ್ಚರ ವಹಿಸಿ: ಡಿಸಿ ಮಾನಕರ್‌

BJP State President B Y Vijayendra latest statement in bengaluru
ಕರ್ನಾಟಕ35 mins ago

BY Vijayendra: ವಿಧಾನಪರಿಷತ್ ವಿವಿಧ ಕ್ಷೇತ್ರಗಳ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ; ಬಿ.ವೈ.ವಿಜಯೇಂದ್ರ

Shed houses electric poles damaged due to heavy rain and wind in Karatagi
ಕೊಪ್ಪಳ38 mins ago

Heavy Rain: ಕಾರಟಗಿಯಲ್ಲಿ ಭಾರೀ ಮಳೆ ಗಾಳಿಗೆ ಅಪಾರ ಹಾನಿ; ಸಚಿವ ಶಿವರಾಜ ತಂಗಡಗಿ ಪರಿಶೀಲನೆ

cylinder explosion in Kunigal 6 people seriously injured, Kunigal MLA Dr Ranganath visit victoria Hospital in bengaluru
ತುಮಕೂರು40 mins ago

Cylinder Blast: ಗ್ಯಾಸ್‌ ಸಿಲಿಂಡರ್ ಸ್ಫೋಟ; ಮನೆಯ ಮೂವರಲ್ಲದೆ, ಪಕ್ಕದ ಮನೆಯ ಮೂವರಿಗೂ ಗಂಭೀರ ಗಾಯ

RCB vs CSK
ಕ್ರೀಡೆ51 mins ago

RCB vs CSK: ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ಚೆನ್ನೈ ಸೂಪರ್​ ಕಿಂಗ್ಸ್​

Prajwal Revanna Case
ಪ್ರಮುಖ ಸುದ್ದಿ1 hour ago

Prajwal Revanna Case: ಪ್ರಜ್ವಲ್ ರೇವಣ್ಣಗೆ ಸಂಕಷ್ಟ; ಅರೆಸ್ಟ್ ವಾರಂಟ್ ನೀಡಿದ ಕೋರ್ಟ್‌

Virat Kohli
ಕ್ರೀಡೆ1 hour ago

Virat Kohli: ಚೆನ್ನೈ ವಿರುದ್ಧದ ಪಂದ್ಯಕ್ಕೂ ಮುನ್ನ ಐಪಿಎಲ್​ ನಿಯಮದ ಬಗ್ಗೆ ಅಸಮಾಧಾನ ಹೊರಹಾಕಿದ ಕೊಹ್ಲಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ23 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌