ಉದ್ಯೋಗ
Toyota Kaushalya 2023: ಟೊಯೊಟಾ ಕೌಶಲ್ಯ ಕಾರ್ಯಕ್ರಮದಲ್ಲಿ ಯುವತಿಯರಿಗೆ ಅವಕಾಶ; ತರಬೇತಿಗೆ ಅರ್ಜಿ ಆಹ್ವಾನ
Toyota Kaushalya 2023: ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) 2023ನೇ ಸಾಲಿನ ʼಟೊಯೊಟಾ ಕೌಶಲ್ಯ ಕಾರ್ಯಕ್ರಮʼದಲ್ಲಿ ಆಟೋಮೊಬೈಲ್ ಸಂಬಂಧಿತ ವಿವಿಧ ಕೋರ್ಸ್ಗಳಿಗೆ ಯುವತಿಯರಿಂದ ಅರ್ಜಿ ಆಹ್ವಾನಿಸಿದೆ.
ಬೆಂಗಳೂರು/ರಾಮನಗರ: ‘ಸ್ಕಿಲ್ ಇಂಡಿಯಾʼ ಅಭಿಯಾನವನ್ನು ನಿರಂತರವಾಗಿ ಬೆಂಬಲಿಸುತ್ತಿರುವ ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ), 2023ನೇ ಸಾಲಿನ ʼಟೊಯೊಟಾ ಕೌಶಲ್ಯ ಕಾರ್ಯಕ್ರಮʼದಲ್ಲಿ (Toyota Kaushalya 2023) ಯುವತಿಯರ ಪ್ರವೇಶಕ್ಕೆ ಅವಕಾಶ ನೀಡಿದೆ. ವಿಶ್ವದರ್ಜೆಯ ತಾಂತ್ರಿಕ ತರಬೇತಿ ನೀಡಿ ಯುವತಿಯರನ್ನು ಸಬಲೀಕರಣಗೊಳಿಸುವುದು ಕಾರ್ಯಕ್ರಮದ ಉದ್ದೇಶವಾಗಿದ್ದು, ಆಸಕ್ತರು ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ತರಬೇತಿ ಮಹಾನಿರ್ದೇಶಕರ (ಡಿಜಿಟಿ) ಸಹಯೋಗದೊಂದಿಗೆ ಈ ಕಾರ್ಯಕ್ರಮವು ಕರ್ನಾಟಕದ ಯುವ, ಸೌಲಭ್ಯ ವಂಚಿತ ಮಹಿಳೆಯರಿಗೆ ಆಟೋಮೋಟಿವ್ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಲು ಅನನ್ಯ ಅವಕಾಶವನ್ನು ನೀಡುತ್ತದೆ. ಇದಕ್ಕೂ ಮೊದಲು ಜೂನ್ 23ರಂದು ಯುವಕರನ್ನು ತರಬೇತಿಗೆ ಆಹ್ವಾನಿಸಲಾಗಿತ್ತು. ಪ್ರಸ್ತುತ ಈ ಕಾರ್ಯಕ್ರಮವು ಇಲ್ಲಿಯವರೆಗೆ ಶೇ.8ರಷ್ಟು ಯುವತಿಯರಿಗೆ ಅವಕಾಶ ಕಲ್ಪಿಸಿದೆ. 2025ರ ಅಂತ್ಯದ ವೇಳೆಗೆ ಶೇ. 30 ಯುವತಿಯರಿಗೆ ಪ್ರವೇಶ ನೀಡುವ ಗುರಿಯನ್ನು ಹೊಂದಿದೆ.
ಇದನ್ನೂ ಓದಿ | SBI recruitment 2023: ಭಾರತೀಯ ಸ್ಟೇಟ್ ಬ್ಯಾಂಕ್ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಯುವತಿಯರಿಗೆ ವಿಶ್ವದರ್ಜೆಯ ತಾಂತ್ರಿಕ ತರಬೇತಿ ಒದಗಿಸುವ ಮತ್ತು ಉತ್ತಮ ತಂತ್ರಜ್ಞರಾಗಲು ಅಗತ್ಯವಾದ ಕೌಶಲ್ಯ, ಜ್ಞಾನದೊಂದಿಗೆ ಅವರನ್ನು ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿರುವ ಈ ಕಾರ್ಯಕ್ರಮದಲ್ಲಿ ಆಟೋಮೋಟಿವ್ ವೆಲ್ಡ್ ತಂತ್ರಜ್ಞ, ಆಟೋಮೋಟಿವ್ ಪೇಂಟ್ ತಂತ್ರಜ್ಞ, ಆಟೋಮೋಟಿವ್ ಅಸೆಂಬ್ಲಿ ತಂತ್ರಜ್ಞ ಮತ್ತು ಮೆಕಾಟ್ರಾನಿಕ್ಸ್ ತಂತ್ರಜ್ಞಾನದಲ್ಲಿ ವಿಶೇಷ ಕೋರ್ಸ್ಗಳಿವೆ.
ಅರ್ಹತಾ ಮಾನದಂಡ
- 18-22 ವರ್ಷ ವಯಸ್ಸಿನ ಯುವತಿಯರು
- ಕನಿಷ್ಠ ಶೈಕ್ಷಣಿಕ ಅರ್ಹತೆ: 10ನೇ ತರಗತಿ ತೇರ್ಗಡೆ / 12ನೇ ತರಗತಿ ಉತ್ತೀರ್ಣ ಅಥವಾ ಅನುತ್ತೀರ್ಣ.
- ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಭಾಷೆಯಲ್ಲಿ ಪ್ರಾವೀಣ್ಯತೆ
- ಕರ್ನಾಟಕದಲ್ಲಿ ವಾಸವಿರಬೇಕು.
- ಆಯ್ಕೆಯಾದ ಸ್ಪರ್ಧಿಗಳು ತರಗತಿ ಮತ್ತು ಕೆಲಸದ ಅಭಿವೃದ್ಧಿ ಎರಡನ್ನೂ ಒಳಗೊಂಡಿರುವ ಸಮಗ್ರ ತರಬೇತಿ ಕಾರ್ಯಕ್ರಮದ ಪ್ರಯೋಜನ ಪಡೆಯುತ್ತಾರೆ.
- ಈ ಕಾರ್ಯಕ್ರಮವು 2.5 ತಿಂಗಳ ತರಗತಿಯ ತರಬೇತಿಯನ್ನು ಒಳಗೊಂಡಿದೆ ಮತ್ತು ನಂತರ 21.5 ತಿಂಗಳ ಶಾಪ್ ಫ್ಲೋರ್ ಪ್ರಾಯೋಗಿಕ ತರಬೇತಿಯನ್ನು ಹೊಂದಿದೆ. ಹೆಚ್ಚುವರಿಯಾಗಿ, ಆಸಕ್ತರಿಗೆ ಒಂದು ವರ್ಷದ ಅಪ್ರೆಂಟಿಸ್ಶಿಪ್ ಅವಕಾಶ ಲಭ್ಯವಿದೆ.
ಟೊಯೊಟಾ ಕೌಶಲ್ಯ ಕಾರ್ಯಕ್ರಮದ ಮುಖ್ಯಾಂಶಗಳು
- ಮೊದಲ ವರ್ಷ ರೂ.14,505 ಮತ್ತು ಎರಡನೇ ವರ್ಷ ರೂ.15,560 ಸ್ಟೈಫಂಡ್.
- ಇಎಸ್ಐ, ಸಮವಸ್ತ್ರ, ಕ್ಯಾಂಟೀನ್ ಮತ್ತು ಪಿಎಫ್ ಸೌಲಭ್ಯ.
- 24X7 ಭದ್ರತೆಯೊಂದಿಗೆ ಅತ್ಯಾಧುನಿಕ ಹಾಸ್ಟೆಲ್ ಸೌಲಭ್ಯ
- ಇನ್ ಡೋರ್ ಮತ್ತು ಔಟ್ ಡೋರ್ ಗೇಮ್ಸ್, ಕಂಪ್ಯೂಟರ್ ಕೊಠಡಿ, ಫಿಟ್ ನೆಸ್ ಕೇಂದ್ರ, ಗ್ರಂಥಾಲಯ, ಕ್ಲಿನಿಕ್ ಮತ್ತು ಕ್ಯಾಂಟೀನ್ ಸೌಲಭ್ಯ.
- ಕೋರ್ಸ್ ಪೂರ್ಣಗೊಳಿಸುವ ಪ್ರಮಾಣಪತ್ರ, ರಾಷ್ಟ್ರೀಯ ತರಬೇತಿ ಪ್ರಮಾಣಪತ್ರ, ಮತ್ತು ಕೌಶಲ್ಯ ಅಭಿವೃದ್ಧಿ ಪ್ರಮಾಣಪತ್ರ (ಎಎಸ್ಡಿಸಿ)
- ಆಯ್ಕೆ ಪ್ರಕ್ರಿಯೆಯು ನೋಂದಣಿ, ಮುಖಾಮುಖಿ ಸಂದರ್ಶನ, ವೈದ್ಯಕೀಯ ಪರೀಕ್ಷೆಗಳು, ಹಿನ್ನೆಲೆ ಪರಿಶೀಲನೆ, ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಗೆ ಕುಟುಂಬ ಭೇಟಿ ಮತ್ತು ಕಾರ್ಯಕ್ರಮಕ್ಕೆ ಸೇರುವುದನ್ನು ಒಳಗೊಂಡಿರುತ್ತದೆ.
ಟೊಯೊಟಾ ಕೌಶಲ್ಯ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು, ನೋಂದಣಿ ಲಿಂಕ್ಗೆ ಭೇಟಿ ನೀಡಿ
ಟಿಕೆಎಂನ ಹಿರಿಯ ಉಪಾಧ್ಯಕ್ಷ ಮತ್ತು ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ಜಿ.ಶಂಕರ್ ಅವರು ಮಾತನಾಡಿ, “ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಲ್ಲಿ ಕೌಶಲ್ಯ ಹೆಚ್ಚಿಸಲು ಮತ್ತು ಆಟೊಮೊಬೈಲ್ ಕ್ಷೇತ್ರದಲ್ಲಿ ಲಿಂಗ ಸಮಾನತೆಯನ್ನು ಉತ್ತೇಜಿಸುವಲ್ಲಿ ಟಿಟಿಟಿಐ ಒಂದು ದಶಕದಿಂದ ನಿರ್ಣಾಯಕ ಪಾತ್ರ ವಹಿಸಿದೆ. ವಿಶ್ವದರ್ಜೆಯ ತಂತ್ರಜ್ಞರನ್ನು ಸೃಷ್ಟಿಸುವ ಮೂಲಕ, ಸಂಸ್ಥೆಯು ಸುತ್ತಮುತ್ತಲಿನ ಸಮುದಾಯಗಳ ಮೇಲೆ ಪರಿಣಾಮ ಬೀರುವುದಲ್ಲದೆ, ‘ಸ್ಕಿಲ್ ಇಂಡಿಯಾ’ ಎಂಬ ವಿಶಾಲ ರಾಷ್ಟ್ರೀಯ ಕಾರ್ಯಕ್ರಮಕ್ಕೆ ಕೊಡುಗೆ ನೀಡಿದೆ. ಇಲ್ಲಿಯವರೆಗೆ ಸುಮಾರು 1000 ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಆಟೋಮೊಬೈಲ್ ಉದ್ಯಮದ ಬೆಳವಣಿಗೆಗೆ ಅಗತ್ಯವಾದ ಅಂತಾರಾಷ್ಟ್ರೀಯ ಮಾನದಂಡಗಳ ಜ್ಞಾನವನ್ನು ಪಡೆದಿದ್ದಾರೆ. ಅವರ ಯಶಸ್ಸು ವ್ಯಕ್ತಿಗಳನ್ನು ಸಬಲೀಕರಣಗೊಳಿಸುವ ಮತ್ತು ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಉತ್ಕೃಷ್ಟತೆಯನ್ನು ಬೆಳೆಸುವ ಸಂಸ್ಥೆಯ ಸಮರ್ಪಣೆ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.
ಟೊಯೊಟಾ ಕೌಶಲ್ಯ ಕಾರ್ಯಕ್ರಮವು ಯುವತಿಯರ ಪ್ರವೇಶವು ಲಿಂಗ ಸಮಾನತೆಯನ್ನು ಸಾಧಿಸುವ ನಿಟ್ಟಿನಲ್ಲಿ ಒಂದು ಹೆಜ್ಜೆಯಾಗಿದೆ. ಅತ್ಯುತ್ತಮ ಆಟೋಮೊಬೈಲ್ ತರಬೇತಿಯನ್ನು ನೀಡುವ ಮೂಲಕ ಮತ್ತು ಭವಿಷ್ಯಕ್ಕಾಗಿ ಮೌಲ್ಯವನ್ನು ನಿರ್ಮಿಸುವ ಮೂಲಕ ಯುವ ಸಮುದಾಯವನ್ನು ಬೆಳೆಸಲು ಪ್ರಯತ್ನಿಸುತ್ತಿರುವ ಸಮಯದಲ್ಲಿ ನೂತನ ಕಾರ್ಯಕ್ರಮ ಹೊರಹೊಮ್ಮಿದೆ ಎಂದು ಹೇಳಿದ್ದಾರೆ.
ಉದ್ಯೋಗ ಸಾಮರ್ಥ್ಯ ಹೆಚ್ಚಿಸಲು ಅನನ್ಯ ಅವಕಾಶ
ಟಿಟಿಟಿಐ ಅಡಿಯಲ್ಲಿ ಅಭಿವೃದ್ಧಿಪಡಿಸಲಾದ ಟೊಯೊಟಾ ಕೌಶಲ್ಯ ಕಾರ್ಯಕ್ರಮವು ಎರಡು ವರ್ಷಗಳ ಉಚಿತ ವಸತಿ ಕೋರ್ಸ್ ಅನ್ನು ನೀಡುತ್ತದೆ. ಇದು ಯುವ ಸಮುದಾಯಕ್ಕೆ ಉತ್ಪಾದನಾ ಉದ್ಯಮ ಸಂಬಂಧಿತ ಕೌಶಲ್ಯಗಳನ್ನು ಪಡೆಯಲು ಮತ್ತು ಅವರ ಉದ್ಯೋಗ ಸಾಮರ್ಥ್ಯವನ್ನು ಹೆಚ್ಚಿಸಲು ಅನನ್ಯ ಅವಕಾಶವನ್ನು ಒದಗಿಸುತ್ತದೆ. ಈ ಕಾರ್ಯಕ್ರಮವು ಸೈದ್ಧಾಂತಿಕ ಕಲಿಕೆಯನ್ನು ಆನ್-ದಿ-ಜಾಬ್ ತರಬೇತಿ (ಒಜೆಟಿ) ಯೊಂದಿಗೆ ಸಂಯೋಜಿಸುವ ‘ಕಲಿಯಿರಿ ಮತ್ತು ಸಂಪಾದಿಸಿ’ ವಿಧಾನವನ್ನು ಅನುಸರಿಸುತ್ತದೆ.
ತಮ್ಮ ತರಬೇತಿಯ ಸಮಯದಲ್ಲಿ ಈ ಮಹತ್ವಾಕಾಂಕ್ಷಿ ವಿದ್ಯಾರ್ಥಿಗಳು ಆಯಾ ಕ್ಷೇತ್ರಗಳಲ್ಲಿ ಮಾಸ್ಟರ್ ತರಬೇತುದಾರರಾಗಿರುವ ಅನುಭವಿ ಮೇಲ್ವಿಚಾರಕರಿಂದ ಮಾರ್ಗದರ್ಶನ ಪಡೆಯುವ ಭಾಗ್ಯವನ್ನು ಹೊಂದಿದ್ದು, ಗುಣಮಟ್ಟದ ತರಬೇತಿಯನ್ನು ಪಡೆಯುತ್ತಾರೆ. ಕೈಗಾರಿಕಾ ಸಂಸ್ಕೃತಿ ಮತ್ತು ಮಾನದಂಡಗಳಿಗೆ ಅನುಗುಣವಾಗಿ ಪರಿಣತಿಯನ್ನು ಅಭಿವೃದ್ಧಿಪಡಿಸುತ್ತಾರೆ. ಪ್ರಶಿಕ್ಷಣಾರ್ಥಿಗಳಿಗೆ ಉನ್ನತ ಕೌಶಲ್ಯ, ಆಳವಾದ ಜ್ಞಾನ ಮತ್ತು ಆರೋಗ್ಯಕರ ದೇಹ ಮತ್ತು ಮನಸ್ಸಿನ ತರಬೇತಿಯನ್ನು ಸಹ ನೀಡಲಾಗುವುದು.
ಅತ್ಯುತ್ತಮ ಉದ್ಯೋಗಾವಕಾಶ
ಇದಲ್ಲದೆ, ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ಕರ್ನಾಟಕದ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಶೈಕ್ಷಣಿಕವಾಗಿ ಆಧಾರಿತ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುವಲ್ಲಿ ಮುಂಚೂಣಿಯಲ್ಲಿದೆ. ಅವರನ್ನು ನುರಿತ ತಂತ್ರಜ್ಞರಾಗಿ ಬೆಳೆಸುವತ್ತ ಗಮನ ಹರಿಸಿದೆ. ಟಿಟಿಟಿಐನ ಪದವೀಧರರು ನಿರಂತರವಾಗಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ಪಡೆಯುತ್ತಿದ್ದು, ಕರ್ನಾಟಕ, ಭಾರತ ಮತ್ತು ವಿದೇಶಗಳಲ್ಲಿ ಅತ್ಯುತ್ತಮ ಉದ್ಯೋಗಾವಕಾಶಗಳಿಗೆ ಪ್ರವೇಶ ಪಡೆಯುತ್ತಿದ್ದಾರೆ.
ಇದನ್ನೂ ಓದಿ | Job News : ಅರಣ್ಯ ಇಲಾಖೆಯಲ್ಲಿ 310 ವೀಕ್ಷಕ ಹುದ್ದೆ ಭರ್ತಿ; ಅರ್ಜಿ ಸಲ್ಲಿಕೆ ಹೇಗೆ, ಕೊನೇ ದಿನಾಂಕ ಎಂದು?
ಕೌಶಲ್ಯ ಅಭಿವೃದ್ಧಿ ಕ್ಷೇತ್ರದಲ್ಲಿ ಟಿಟಿಟಿಐನ ಪ್ರಯತ್ನಗಳನ್ನು ಜಪಾನ್ ಇಂಡಿಯಾ ಇನ್ಸ್ಟಿಟ್ಯೂಟ್ ಫಾರ್ ಮ್ಯಾನುಫ್ಯಾಕ್ಚರಿಂಗ್ (ಜೆ.ಐ.ಎಂ) ನಂತಹ ಸಂಸ್ಥೆಗಳು ಗುರುತಿಸಿವೆ. ಇದು ಮೇಕ್ ಇನ್ ಇಂಡಿಯಾ ಮತ್ತು ಸ್ಕಿಲ್ ಇಂಡಿಯಾ ಮಿಷನ್ ಕಾರ್ಯಕ್ರಮಕ್ಕೆ ತನ್ನ ಬದ್ಧತೆಯನ್ನು ಬಲಪಡಿಸುತ್ತದೆ. ತನ್ನ ಅಸ್ತಿತ್ವದ ಅವಧಿಯಲ್ಲಿ ಟಿಟಿಟಿಐ ಹೆಮ್ಮೆಯಿಂದ 950ಕ್ಕೂ ಹೆಚ್ಚು ಪದವೀಧರರು ತಮ್ಮ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಅವರಲ್ಲಿ ಹಲವರು ರಾಷ್ಟ್ರೀಯ ಕೌಶಲ್ಯ ಸ್ಪರ್ಧೆ ಮತ್ತು ವಿಶ್ವ ಕೌಶಲ್ಯ ಸ್ಪರ್ಧೆಯಂತಹ ಗೌರವಾನ್ವಿತ ಸ್ಪರ್ಧೆಗಳಲ್ಲಿ ಗಮನಾರ್ಹ ಸಾಧನೆಗಳನ್ನು ಮಾಡಿದ್ದಾರೆ. ಆ ಮೂಲಕ ರಾಷ್ಟ್ರೀಯ ಹೆಮ್ಮೆಯ ಪ್ರಜ್ಞೆಯನ್ನು ಮೂಡಿಸಿದ್ದಾರೆ.
ಉದ್ಯೋಗ
Great Learning Survey: ಭಾರತದ ಐಟಿಯೇತರ ಕ್ಷೇತ್ರದಲ್ಲಿ ಡೇಟಾ ಸೈನ್ಸ್, ಅನಾಲಿಟಿಕ್ಸ್ ಉದ್ಯೋಗ ಹೆಚ್ಚಳ!
Great Learning Survey: ಕಳೆದ ವರ್ಷಕ್ಕೆ ಹೋಲಿಸಿದರೆ ಸ್ವದೇಶೀ ಐಟಿಯೇತರ ಸಂಸ್ಥೆಗಳಲ್ಲಿ ಅನಾಲಿಟಿಕ್ಸ್ ಮತ್ತು ಡೇಟಾ ಸೈನ್ಸ್ ಉದ್ಯೋಗಾವಕಾಶ ಶೇಕಡಾ 20 ರಷ್ಟು ಹೆಚ್ಚಾಗಿದೆ.
ಬೆಂಗಳೂರು, ಕರ್ನಾಟಕ: ವೃತ್ತಿಪರ ಮತ್ತು ಉನ್ನತ ಶಿಕ್ಷಣ ವಿಭಾಗದಲ್ಲಿ ಪ್ರಮುಖ ಜಾಗತಿಕ ಮುಂದಾಳಾದ ಗ್ರೇಟ್ ಲರ್ನಿಂಗ್(Great Learning), ಭಾರತದಲ್ಲಿ ಅನಾಲಿಟಿಕ್ಸ್ (analytics) ಮತ್ತು ಡೇಟಾ ಸೈನ್ಸ್ (Data Science) ಉದ್ಯೋಗಗಳು 2023ರ ವರದಿಯನ್ನು ಪ್ರಕಟಿಸಿದೆ. ಡೇಟಾ-ಚಾಲಿತ ನಿರ್ಧಾರಗಳು ಸಂಸ್ಥೆಗಳಿಗೆ ಯಾವಾಗಲೂ ಪ್ರಮುಖವಾಗಿದ್ದರೂ, ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್ ನಲ್ಲಿರುವ ಒಟ್ಟಾರೆ ಉದ್ಯೋಗಗಳ ಸಂಖ್ಯೆ ಕಳೆದ 12 ತಿಂಗಳುಗಳಲ್ಲಿ ಕುಸಿತವನ್ನು ದಾಖಲಿಸಿದೆ. ಚಾಲ್ತಿಯಲ್ಲಿರುವ ಜಾಗತಿಕ ಸ್ಥೂಲ ಆರ್ಥಿಕ ಅನಿಶ್ಚಿತತೆಯನ್ನು ಒಳಗೊಂಡಂತೆ ಅಂಶಗಳ ಸಂಯೋಜನೆಯು, ವಿಶೇಷವಾಗಿ ಐಟಿ ಉದ್ಯಮದಲ್ಲಿ ಈ ಪಾತ್ರಗಳ ಮೇಲೆ ಪ್ರಭಾವ ಬೀರುತ್ತಿದೆ. ಈ ವಲಯದಲ್ಲಿ ಬದಲಾಗುತ್ತಿರುವ ಉದ್ಯೋಗಗಳ ಅವಕಾಶದ ಕುರಿತು ವರದಿಯು ದೃಷ್ಟಿಕೋನವನ್ನು ನೀಡುತ್ತದೆ ಮತ್ತು ಲಭ್ಯವಿರುವ ಅವಕಾಶಗಳನ್ನು ಉತ್ತಮವಾಗಿ ಬಳಸಿಕೊಳ್ಳಲು ವೃತ್ತಿಪರರಿಗೆ ಸಹಾಯ ಮಾಡುತ್ತದೆ. ಹಾಗಾಗಿ, ಕಳೆದ ವರ್ಷಕ್ಕೆ ಹೋಲಿಸಿದರೆ ಸ್ವದೇಶೀ ಐಟಿಯೇತರ ಸಂಸ್ಥೆಗಳಲ್ಲಿ ಅನಾಲಿಟಿಕ್ಸ್ ಮತ್ತು ಡೇಟಾ ಸೈನ್ಸ್ ಉದ್ಯೋಗಾವಕಾಶ ಶೇಕಡಾ 20 ರಷ್ಟು ಹೆಚ್ಚಾಗಿದೆ
.
ಈ ವರದಿಯನ್ನು ವಿವಿಧ ಉದ್ಯೋಗ ಸೈಟ್ ಗಳಿಂದ ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್ ಗೆ ಸಂಬಂಧಿಸಿದ ಡೇಟಾವನ್ನು ಒಗ್ಗೂಡಿಸುವ ಎಐಎಂ ರಿಸರ್ಚ್ ನಿಂದ ಅಭಿವೃದ್ಧಿಪಡಿಸಲಾಗಿದೆ. 2023 ರಲ್ಲಿ ಬಿ ಎಫ್ ಎಸ್ ಐ ವಲಯ ಅತ್ಯಧಿಕ ಡೇಟಾ ಅನಾಲಿಟಿಕ್ಸ್ ಉದ್ಯೋಗದ ಪಾಲಿನ ಕುರಿತು ವರದಿ ಮಾಡಿದೆ
2023ರಲ್ಲಿ ಬಿ ಎಫ್ ಎಸ್ ಐ ವಲಯ ಭಾರತದ ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್ ಉದ್ಯೋಗಗಳ ಏಕೈಕ-ಅತಿದೊಡ್ಡ ಪಾಲನ್ನು ಎಂದರೆ ಒಟ್ಟಾರೆಯಾಗಿ 1/3 ರಷ್ಟು ಉದ್ಯೋಗಗಳಿಗೆ ಸಾಕ್ಷಿಯಾಯಿತು. ಅಪಾಯ ನಿರ್ವಹಣೆ, ವಂಚನೆ ಪತ್ತೆ ಮತ್ತು ಗ್ರಾಹಕ ಸೇವೆಯಂತಹ ಕಾರ್ಯಾಚರಣೆಗಳನ್ನು ಹೆಚ್ಚಿಸಲು ಎಐ/ಎಂಎಲ್ ಮತ್ತು ದೊಡ್ಡ ಡೇಟಾ ಅನಾಲಿಟಿಕ್ಸ್ ನಂತಹ ಹೊಸ ತಂತ್ರಜ್ಞಾನಗಳ ಬಳಕೆಯಿಂದ ಈ ಬೆಳವಣಿಗೆ ದಾಖಲಿಸಲಾಗಿದೆ.
ಪ್ರತಿಯೊಂದು ಕಾರ್ಯದಲ್ಲಿ ಡೇಟಾ ಸೈನ್ಸ್ ಬಳಸುವುದರಿಂದ, ಹಣಕಾಸು ಸಂಸ್ಥೆಗಳು ಉತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳಲು ಹೆಚ್ಚಿನ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಪ್ರಾರಂಭಿಸುತ್ತಿವೆ.
ಐಟಿ ಉದ್ಯೋಗಗಳ ಪಾಲು ಗಮನಾರ್ಹ ಇಳಿಕೆ
ಒಟ್ಟಾರೆ ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್ ಉದ್ಯೋಗಗಳಲ್ಲಿ ಐಟಿ ವಲಯದ ಉದ್ಯೋಗಗಳ ಪಾಲು ಕಳೆದ ವರ್ಷದಿಂದ ಗಮನಾರ್ಹ ಇಳಿಕೆ ಕಂಡಿದೆ. ವಿಶೇಷವಾಗಿ ಹೆಚ್ಚಿನ ಸಂಖ್ಯೆಯ ಐಟಿ ವಲಯದ ಕ್ಲಯಂಟ್ ಗಳಿರುವ ಯು ಎಸ್ ಎ ಮತ್ತು ಯುರೋಪ್ನಲ್ಲಿ, ಇದು ಜಾಗತಿಕ ಹಿಂಜರಿತದ ಪ್ರವೃತ್ತಿಗಳಿಗೆ ಕಾರಣವೆಂದು ಹೇಳಬಹುದು. ಹಾಗೆಯೇ, 2022 ಕ್ಕೆ ಹೋಲಿಸಿದರೆ ವಿದ್ಯುತ್ ಮತ್ತು ಗೃಹಬಳಕೆಯಲ್ಲಿನ ಉದ್ಯೋಗಗಳು ಒಟ್ಟಾರೆಯಾಗಿ ಶೇಕಡಾವಾರು ಕಡಿಮೆಯಾಗಿದೆ, ಆದರೆ ರೀಟೇಲ್ ಮತ್ತು ಸಿಪಿಜಿ ಹಾಗೂ ಫಾರ್ಮಾ ಮತ್ತು ಆರೋಗ್ಯ ಸೇವೆಗಳಲ್ಲಿ ಈ ವರ್ಷ ಏರಿಕೆಯಾಗಿದೆ.
ಎಂ ಎನ್ ಸಿ ಐಟಿ ಮತ್ತು ಕೆಪಿಓ ಗಳು ಈ ವರ್ಷದ ಉದ್ಯೋಗಗಳಲ್ಲಿ ಇನ್ನೂ ಹೆಚ್ಚಿನ ಪಾಲನ್ನು ಹೊಂದಿವೆ; 2022 ಕ್ಕೆ ಹೋಲಿಸಿದರೆ ದೇಶೀಯ ಐಟಿಯೇತರ ಸಂಸ್ಥೆಗಳು ಉದ್ಯೋಗಾವಕಾಶಗಳಲ್ಲಿ ಹೆಚ್ಚಿನ ಜಿಗಿತ ವರದಿ ಮಾಡಿದೆ
2023ರಲ್ಲಿ ಭಾರತದಲ್ಲಿ ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್ ಉದ್ಯೋಗಗಳಿಗೆ ಗರಿಷ್ಠ ಅವಕಾಶಗಳು ಎಂ ಎನ್ ಸಿ ಐಟಿ ಮತ್ತು ಕೆಪಿಓ ಗಳಲ್ಲಿವೆ, ಏಕೆಂದರೆ ಈ ಸಂಸ್ಥೆಗಳು ಸಾಮಾನ್ಯವಾಗಿ ದೊಡ್ಡ ಗ್ರಾಹಕರೊಂದಿಗೆ ಕೆಲಸ ಮಾಡುವುದರಿಂದ, ದೊಡ್ಡ ಪ್ರಮಾಣದ ಡೇಟಾ ನಿರ್ವಹಿಸುತ್ತವೆ. ಆದರೂ, ಮುಖ್ಯವಾಗಿ ಪಾಶ್ಚಿಮಾತ್ಯ ಜಗತ್ತಿನಲ್ಲಿ ಆರ್ಥಿಕ ಹಿಂಜರಿತದ ಕಠಿಣ ಆರ್ಥಿಕ ಸನ್ನಿವೇಶಗಳು ವಲಯದ ಮೇಲೆ ಪರಿಣಾಮ ಬೀರುವುದರಿಂದ ಡೇಟಾ ಉದ್ಯೋಗಗಳ ಪಾಲು ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದೆ. ಎಂ ಎನ್ ಸಿ ಐಟಿ ಮತ್ತು ಕೆಪಿಓ ಗಳಲ್ಲಿ ಡೇಟಾ ಮತ್ತು ಅನಾಲಿಟಿಕ್ಸ್ ಉದ್ಯೋಗಾವಕಾಶಗಳು ಹಿಂದಿನ ವರ್ಷ 2022 ಕ್ಕೆ ಹೋಲಿಸಿದರೆ ಶೇಕಡಾ 21 ಅಂಕಗಳಷ್ಟು (ಪಿಪಿ) ಕಡಿಮೆಯಾಗಿದೆ, ದೇಶೀಯ ಐಟಿ ಯೇತರ ಸಂಸ್ಥೆಗಳು ಮತ್ತು ದೇಶೀಯ ಐಟಿ ಮತ್ತು ಕೆಪಿಓ ಸಂಸ್ಥೆಗಳು ಕ್ರಮವಾಗಿ 20 ಪಿಪಿ ಮತ್ತು 8 ಪಿಪಿ ಯಷ್ಟು ಹೆಚ್ಚಾಗಿದೆ.
ಹಿರಿಯ ವೃತ್ತಿಪರರಿಗೆ ಉದ್ಯೋಗ ಕುಸಿತ
ಮಧ್ಯಮ ಹಂತದ ವೃತ್ತಿಪರರಿಗೆ ಲಭ್ಯವಿರುವ ಉದ್ಯೋಗಗಳು ಬೆಳೆಯುತ್ತಿರುವಾಗ, ಹಿರಿಯ ಹಂತದ ವೃತ್ತಿಪರರಿಗೆ ಮುಕ್ತ ಉದ್ಯೋಗಗಳಲ್ಲಿ ಕುಸಿತ ವರದಿಯಾಗಿದೆ. ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್ ಉದ್ಯೋಗಗಳ ಸಂಖ್ಯೆಯನ್ನು ಪ್ರಾಥಮಿಕವಾಗಿ 2–5 ವರ್ಷಗಳು ಮತ್ತು 5–7 ವರ್ಷಗಳ ಅನುಭವದ ಆವರಣದಲ್ಲಿ ವೃತ್ತಿಪರರತ್ತ ಕೇಂದ್ರೀಕರಿಸಲಾಗಿದೆ. ಈ ಎರಡು ಮಾಜಿ ಕೆಲಸದ ವರ್ಗಗಳು ಐತಿಹಾಸಿಕವಾಗಿ ಮೆಚ್ಚಿನದ್ದಾಗಿದೆ, ಏಕೆಂದರೆ ಅವುಗಳ ಹೊಂದಾಣಿಕೆ ಮತ್ತು ಹೆಚ್ಚು ಹಿರಿಯ ವಯಸ್ಸಿನ ಗುಂಪುಗಳಿಗೆ ಹೋಲಿಸಿದರೆ ಸಂಸ್ಥೆಗಳಿಗೆ ಕಡಿಮೆ ವೆಚ್ಚ ಉಂಟಾಗುತ್ತದೆ. ಇದಲ್ಲದೇ, ಈ ಆವರಣದಲ್ಲಿ ಬರುವ ವೃತ್ತಿಪರರು ಸಂಬಂಧಿತ ಕೌಶಲ್ಯ ಮತ್ತು ಪ್ರಾಯೋಗಿಕ ಅನುಭವವನ್ನು ಹೊಂದಿದ್ದಾರೆ, ಅವರಿಗೆ ಫ್ರೆಶರ್ಗಳ ಮೇಲೆ ಒಂದು ಹಂತ ಹೆಚ್ಚು ನೀಡುತ್ತದೆ. 2022 ರಲ್ಲಿ, 2–5 ವರ್ಷಗಳು ಮತ್ತು 5–7 ವರ್ಷಗಳ ಮಾಜಿ-ಕೆಲಸದ ಆವರಣಕ್ಕೆ ಉದ್ಯೋಗಗಳ ಪಾಲು ಒಂದೇ ಆಗಿತ್ತು. ಅಂದಿನಿಂದ ಎರಡೂ ಗುಂಪುಗಳಲ್ಲಿ ಸ್ಥಾನಗಳಲ್ಲಿ ಹೆಚ್ಚಳ ಕಂಡುಬಂದಿದೆ, 2-5 ವರ್ಷಗಳ ಅನುಭವದ ಆವರಣವು ಆರ್ಥಿಕ ಹಿಂಜರಿತದ ನಡುವೆ ವೆಚ್ಚ ಕಡಿತದ ಕ್ರಮಗಳ ಪರಿಣಾಮವಾಗಿ ಉದ್ಯೋಗಾವಕಾಶದಲ್ಲಿ ಹೆಚ್ಚಿನ ಏರಿಕೆ (13 ಪಿಪಿ) ದಾಖಲಿಸಿದೆ.
ಹೆಚ್ಚುತ್ತಿರುವ ಸಂಸ್ಥೆಗಳ ಆದ್ಯತೆ
ಹೆಚ್ಚು ಅನುಭವೀ ವ್ಯಕ್ತಿಗಳಿಗೆ (7+ ವರ್ಷಗಳು) ಅವಕಾಶಗಳು ಕಡಿಮೆಯಾಗಿದೆ-ಕಠಿಣ ಸ್ಥೂಲ ಆರ್ಥಿಕ ಪರಿಸ್ಥಿತಿಗಳು ಮತ್ತು ಹೊಸದಾಗಿ, ದುಬಾರಿ ನೇಮಕ ಮಾಡುವ ಬದಲು ಆಂತರಿಕವಾಗಿ ತಮ್ಮ ಉದ್ಯೋಗಿಗಳನ್ನು ಹೆಚ್ಚಿಸಲು ಸಂಸ್ಥೆಗಳು ಆದ್ಯತೆ ನೀಡಿವೆ.
ಅನಾಲಿಟಿಕ್ಸ್ ಮತ್ತು ಡೇಟಾ ಸೈನ್ಸ್ ತಜ್ಞರಿಗೆ 6-10 ಎಲ್ ಪಿ ಎ ವೇತನ ಶ್ರೇಣಿಯಲ್ಲಿ ಹೆಚ್ಚು ಸ್ಥಾನಗಳು ಲಭ್ಯವಿದೆ
6–10 ಎಲ್ ಪಿ ಎ ಮತ್ತು 10–15 ಎಲ್ ಪಿ ಎ ನಡುವಿನ ಆದಾಯ ವ್ಯಾಪ್ತಿಯಲ್ಲಿರುವ ಮುಕ್ತ ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್ ಉದ್ಯೋಗಗಳು 2023 ರಲ್ಲಿ ಎಲ್ಲಾ ಡೇಟಾ ಸಂಬಂಧಿತ ಉದ್ಯೋಗಗಳಲ್ಲಿ 60% ವರೆಗೆ ಇರುತ್ತವೆ. ಈ ಅಂಕಿಅಂಶವು 2-5 ಮತ್ತು 5-7 ವರ್ಷಗಳ ಅನುಭವ ಹೊಂದಿರುವವರಿಗೆ ಹೆಚ್ಚುತ್ತಿರುವ ಉದ್ಯೋಗಗಳ ಸಂಖ್ಯೆಗೆ ಅನುಗುಣವಾಗಿದೆ. ಈ ವರ್ಷ ಫ್ರೆಶರ್ಗಳು ಮತ್ತು ಹೆಚ್ಚು ಅನುಭವಿ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಸಂಸ್ಥೆಗಳು ಉತ್ಸುಕರಾಗಿಲ್ಲ ಎನ್ನುವ ಅಂಶವನ್ನು ಮಾಹಿತಿಯು ಪುನರುಚ್ಚರಿಸುತ್ತದೆ.
ದೇಶದ ಟೆಕ್ ರಾಜಧಾನಿಯಾಗಿರುವ ಬೆಂಗಳೂರು 2022 ರಿಂದ ಸ್ವಲ್ಪ ಕುಸಿತದ ಹೊರತಾಗಿಯೂ ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್ ಉದ್ಯೋಗಗಳಲ್ಲಿ ಅತಿದೊಡ್ಡ ಪಾಲನ್ನು ಹೊಂದಿದೆ. ದೆಹಲಿ ಎನ್ ಸಿ ಆರ್, ಹೈದರಾಬಾದ್ ಮತ್ತು ಚೆನ್ನೈನಂತಹ ಇತರ ಸ್ಥಳಗಳು ಇತರೆ ಪ್ರತಿಭಾ ಕೇಂದ್ರಗಳತ್ತ ವಲಸೆ ಹೋಗುವುದರಿಂದ ತಮ್ಮ ಪಾಲನ್ನು ಹೆಚ್ಚಿಸಿವೆ. ಬೆಂಗಳೂರು ನಿಧಾನವಾಗಿ ಸಂತೃಪ್ತ ಬಿಂದುವನ್ನು ತಲುಪುತ್ತಿದೆ. ನಿರ್ದಿಷ್ಟವಾಗಿ ಹೇಳುವುದಾದರೆ, ಚೆನ್ನೈನ ಆಟೋಮೋಟಿವ್ ಮತ್ತು ಉತ್ಪಾದನಾ ವಲಯಗಳು ಮತ್ತು ಹೈದರಾಬಾದ್ನ ಪ್ರವರ್ಧಮಾನಕ್ಕೆ ಬರುತ್ತಿರುವ ಔಷಧೀಯ ಮತ್ತು ಜೈವಿಕ ತಂತ್ರಜ್ಞಾನ ಉದ್ಯಮ ವಲಯಗಳು ಡೇಟಾ ಚಾಲಿತ ವಿಧಾನಗಳನ್ನು ಅಳವಡಿಸಿಕೊಂಡಿರುವುದರಿಂದ, ಹೆಚ್ಚುವರಿಯಾಗಿ ಡೇಟಾ ಸೈನ್ಸ್ ವೃತ್ತಿಪರರಿಗೆ ಹೆಚ್ಚಿನ ಬೇಡಿಕೆಯನ್ನು ಸೃಷ್ಟಿಸುತ್ತಿವೆ.
ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್
ಎಂಬಿಎ ಪದವಿ ಹೆಚ್ಚುತ್ತಿರುವ ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್ ಉದ್ಯೋಗಗಳಿಗೆ ಪೂರ್ವ ಅಗತ್ಯತೆಯಾಗಿದೆ, ಇದು ಕ್ಷೇತ್ರದ ಬಲವಾದ ವ್ಯಾಪಾರ ಏಕೀಕರಣವನ್ನು ಎತ್ತಿ ತೋರಿಸುತ್ತದೆ.
ಕಠಿಣ ಆರ್ಥಿಕ ಪರಿಸ್ಥಿತಿಗಳಿಂದಾಗಿ ಕೈಗಾರಿಕೆಗಳಾದ್ಯಂತ ಫ್ರೆಶರ್ಗಳ ನೇಮಕಾತಿಯಲ್ಲಿನ ಕುಸಿತದಿಂದ ಇಂಜಿನಿಯರಿಂಗ್ ಪದವಿ ಪಡೆದವರಿಗೆ ಡೇಟಾ ಸೈನ್ಸ್ ವಲಯದಲ್ಲಿ ಖಾಲಿ ಹುದ್ದೆಗಳಲ್ಲಿ ಇಳಿಕೆ ಕಂಡುಬಂದಿದೆ. ಫ್ರೆಶರ್ಗಳನ್ನು ನೇಮಿಸಿಕೊಳ್ಳುವುದು ಅತ್ಯಧಿಕ ವೆಚ್ಚದ ವ್ಯವಹಾರವಾಗಿದೆ ಏಕೆಂದರೆ ಸಂಸ್ಥೆಗಳು ಅವರನ್ನು ಯೋಜನೆಗಳಲ್ಲಿ ನಿಯೋಜಿಸುವ ಮೊದಲು ತರಬೇತಿ ನೀಡಬೇಕಾಗುತ್ತದೆ. ಆದರೂ, ಈ ವರ್ಷ ಎಂಬಿಎ ಪದವೀಧರರಿಗೆ ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್ ಉದ್ಯೋಗಗಳು ಹೆಚ್ಚಿವೆ ಏಕೆಂದರೆ ಸಂಸ್ಥೆಗಳು ಅಸ್ತಿತ್ವದಲ್ಲಿರುವ ತಂಡಗಳನ್ನು ನಿರ್ವಹಿಸಲು ಕೇವಲ ಡೇಟಾ ಸೈನ್ಸ್ ಕೌಶಲ್ಯಗಳನ್ನು ಮಾತ್ರವಲ್ಲದೇ ವ್ಯವಸ್ಥಾಪಕ ಕೌಶಲ್ಯಗಳನ್ನು ಹೊಂದಿರುವ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಹೆಚ್ಚು ಆಸಕ್ತಿ ವಹಿಸುತ್ತಿವೆ.
ಈ ಸುದ್ದಯನ್ನೂ ಓದಿ: Jio Institute: ಎಐ, ಡೇಟಾ ಸೈನ್ಸ್ನಲ್ಲಿ ಬೋಧಕರಿಗೆ ಕಾರ್ಯಕ್ರಮ; ಜಿಯೋ ಸಂಸ್ಥೆ ಜತೆ ಕೈಜೋಡಿಸಿದ ಎಐಸಿಟಿಇ
ಗ್ರೇಟ್ ಲರ್ನಿಂಗ್ನ ಸಹ-ಸಂಸ್ಥಾಪಕ ಹರಿ ಕೃಷ್ಣನ್ ನಾಯರ್ ಹೀಗೆ ಹೇಳಿದ್ದಾರೆ, “ಭಾರತವು ಜಾಗತಿಕವಾಗಿ ವ್ಯಾಪಾರ ಕಾರ್ಯಾಚರಣೆಗಳನ್ನು ಬೆಂಬಲಿಸುವ ಬೃಹತ್ ಡಿಜಿಟಲ್ ರೂಪಾಂತರದ ಮಧ್ಯದಲ್ಲಿದೆ ಮತ್ತು ಹೆಚ್ಚು ಪರಿಣಾಮಕಾರಿ ವ್ಯಾಪಾರ ಕಾರ್ಯಾಚರಣೆಗಳನ್ನು ಸಾಧಿಸಲು ಡೇಟಾ-ಚಾಲಿತ ನಿರ್ಧಾರಗಳನ್ನು ಅಳವಡಿಸಿಕೊಳ್ಳುವತ್ತ ಪ್ರಮುಖವಾಗಿ ಮುನ್ನಡೆದಿದೆ. ಈ ವರ್ಷದ ವರದಿಯು ಕೆಲವು ಅಚ್ಚರಿಗಳನ್ನು ಹುಟ್ಟುಹಾಕಿದೆ-ಆದರೆ ಒಮ್ಮೆ ಆರ್ಥಿಕತೆ ಮರುಕಳಿಸಿದರೆ, ಭಾರತದಲ್ಲಿ ಡೇಟಾ ಸೈನ್ಸ್ ಮತ್ತು ಅನಾಲಿಟಿಕ್ಸ್ ಉದ್ಯೋಗಗಳು ಮತ್ತಷ್ಟು ಬೆಳೆಯುತ್ತವೆಶಾಗೂ ಹೆಚ್ಚು ವಿಶಿಷ್ಟವಾದ ಉದ್ಯೋಗ ಪ್ರೊಫೈಲ್ಗಳನ್ನು ತೆರೆಯುತ್ತವೆ ಎಂದು ನಾವು ನಿರೀಕ್ಷಿಸಬಹುದು. ‘ಭಾರತದಲ್ಲಿ ಅನಾಲಿಟಿಕ್ಸ್ ಮತ್ತು ಡೇಟಾ ಸೈನ್ಸ್ ಉದ್ಯೋಗಗಳು 2023’ ವರದಿಯು ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳಿಗೆ ದೇಶದಲ್ಲಿ ಚಾಲ್ತಿಯಲ್ಲಿರುವ ಉದ್ಯೋಗ ಪ್ರವೃತ್ತಿಗಳ ಬಗ್ಗೆ ಆಳವಾದ ನೋಟವನ್ನು ನೀಡುವ ಮೂಲಕ ತಮ್ಮ ವೃತ್ತಿ ಗುರಿಗಳನ್ನು ಅನುಸರಿಸಲು ಮಾರ್ಗದರ್ಶನ ನೀಡುತ್ತದೆ ಎಂದು ನಾವು ಭಾವಿಸುತ್ತೇವೆ.
ಉದ್ಯೋಗ
KSRTC Staff : ಹಬ್ಬದ ದಿನ ಕೆಲಸ ಮಾಡಿದ್ರೆ ಡಬಲ್ ಧಮಾಕಾ; ಕೆಎಸ್ಆರ್ಟಿಸಿ ಸಿಬ್ಬಂದಿಗೆ ಗುಡ್ ನ್ಯೂಸ್
Double Wages : ಇನ್ನು ಮುಂದೆ ರಾಷ್ಟ್ರೀಯ ರಜಾ ದಿನ ಹಾಗೂ ಹಬ್ಬದ ರಜಾ ದಿನಗಳಂದು ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ (KSRTC Staff) ಹೆಚ್ಚುವರಿ ವೇತನ ಪಾವತಿ ಮಾಡಲಾಗುತ್ತದೆ. ಈ ಸಂಬಂಧ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಆದೇಶ ಹೊರಡಿಸಿದೆ.
ಬೆಂಗಳೂರು: ಕೋವಿಡ್ ಸೋಂಕು, ಚಾಲಕರ ಸಾಲು ಸಾಲು ಮುಷ್ಕರದಿಂದ ನಷ್ಟವನ್ನು ಅನುಭವಿಸಿದ್ದ ಕೆಎಸ್ಆರ್ಟಿಸಿ ನಿಗಮವು (KSRTC Staff) ತನ್ನ ಸಿಬ್ಬಂದಿಗೆ ಗುಡ್ ನ್ಯೂಸ್ವೊಂದನ್ನು ನೀಡಿದೆ. ರಾಷ್ಟ್ರೀಯ ರಜಾ ದಿನ ಹಾಗೂ ಹಬ್ಬದ ರಜಾ ದಿನಗಳಂದು ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಈ ಹಿಂದಿನಂತೆ ಹೆಚ್ಚುವರಿ ವೇತನ (Double Wages) ಪಾವತಿಸಲು ಮುಂದಾಗಿದೆ.
ಪ್ರಸ್ತುತ ‘ಶಕ್ತಿ ಯೋಜನೆʼಯಿಂದಾಗಿ ಪ್ರಯಾಣಿಕರ ದಟ್ಟಣೆ ಅಧಿಕವಾಗಿದೆ. ಹೀಗಾಗಿ ವಾಹನಗಳ ಸುಗಮ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಕಳೆದ ಜುಲೈ (2023) ರಿಂದಲೇ ಜಾರಿಗೆ ಬರುವಂತೆ ಆದೇಶಿಸಲಾಗಿದೆ. ರಾಷ್ಟ್ರೀಯ ರಜಾ ದಿನ ಮತ್ತು ನೌಕರರು ಆಯ್ಕೆ ಮಾಡಿಕೊಂಡ ಹಬ್ಬದ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ದಿನಗಳಿಗೆ ಕೋವಿಡ್ 19 ಪೂರ್ವದಲ್ಲಿದ್ದಂತೆ ಹೆಚ್ಚುವರಿ ವೇತನವನ್ನು (Double Wages) ಪಾವತಿಸುವಂತೆ ಆದೇಶ ಹೊರಡಿಸಿದೆ.
ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ನಿಗಮದ ಸಾರಿಗೆ ಆದಾಯ ಹಾಗೂ ಇತರೇ ಆದಾಯವು ಕುಂಠಿತವಾಗಿತ್ತು. ಈ ಹಿನ್ನೆಲೆಯಲ್ಲಿ ಸವೇತನ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ನೌಕರರಿಗೆ ಹೆಚ್ಚುವರಿ ವೇತನವನ್ನು ಕಡಿತ ಮಾಡಲಾಗಿತ್ತು. ಸವೇತನದ ಬದಲಾಗಿ ಪರಿಹಾರ ರಜೆ ನೀಡಲು ನಿರ್ದೇಶನಗಳನ್ನು ನೀಡಲಾಗಿತ್ತು. ಆ ಬಳಿಕ ಜನದಟ್ಟಣೆ ಹೆಚ್ಚಿರುವ ಪೀಕ್ ಸೀಜನ್ಗಳಲ್ಲಿ ವಾಹನಗಳ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಡಿಸೆಂಬರ್-2022 ರಿಂದ ಜೂನ್-2023 ರ ವರೆಗೆ ಮಾತ್ರ ಸವೇತನ ರಜೆ ಸೌಲಭ್ಯವನ್ನು ವಿಸ್ತರಿಸಲಾಗಿತ್ತು.
ಸದ್ಯ ಮೊದಲಿನಂತೆ ರಜೆ ಬದಲಾಗಿ ಸವೇತನ ನೀಡಲು ಕೆಎಸ್ಆರ್ಟಿಸಿ ಮುಂದಾಗಿದೆ. ಜತೆಗೆ ಆಯಾ ಡಿಪೋ ಮ್ಯಾನರೇಜರ್ಗಳು ಅವಶ್ಯಕತೆಗೆ ಅನುಗುಣವಾಗಿ ಮಾತ್ರ ಸಿಬ್ಬಂದಿಯನ್ನು ಕರ್ತವ್ಯದ ಮೇಲೆ ನಿಯೋಜಿಸುವಂತೆ ಸೂಚನೆ ನೀಡಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಉದ್ಯೋಗ
IT Job: ಆಸ್ಟ್ರೇಲಿಯಾ ಮೂಲದ ಕಂಪನಿಯಲ್ಲಿ 82 ಲಕ್ಷ ವೇತನ ಪ್ಯಾಕೇಜ್ ಉದ್ಯೋಗ ಪಡೆದ ‘ಐಐಐಟಿ’ ವಿದ್ಯಾರ್ಥಿನಿ
IT Job: ಸಾಮನ್ಯವಾಗಿ ಐಐಟಿ, ಎನ್ಐಟಿ ಮತ್ತು ಐಐಎಂಗಳಿಂದ ಹೊರ ಬರುವ ವಿದ್ಯಾರ್ಥಿಗಳು ದಾಖಲೆಯ ವೇತನಕ್ಕೆ ಉದ್ಯೋಗ ಪಡೆಯುತ್ತಾರೆ. ಆದರೆ, ಐಐಐಟಿಯ ವಿದ್ಯಾರ್ಥಿನಿಯೊಬ್ಬರು ಈಗ ಹೊಸ ದಾಖಲೆಯನ್ನು ಮಾಡಿದ್ದಾರೆ.
ಬೆಂಗಳೂರು: ಅಲಹಾಬಾದ್ನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ(IIIT) ಸಂಸ್ಥೆಯ ವಿದ್ಯಾರ್ಥಿನಿ ಯುಕ್ತಾ ಗೋಪಾಲನಿ (Yukta Gopalani) ಅವರು ಅಟ್ಲಾಷಿಯನ್ ಸಾಫ್ಟ್ವೇರ್ ಕಂಪನಿಯಲ್ಲಿ (Atlassian – Software Company) ವಾರ್ಷಿಕ 82.5 ಲಕ್ಷ ರೂ. ವೇತನ ಪಡೆಯುವ ಮೂಲಕ ದಾಖಲೆ ಬರೆದಿದ್ದಾರೆ. ಸಾಮಾನ್ಯವಾಗಿ ಐಐಟಿ(IIT), ಐಐಎಂ(IIM) ಮತ್ತು ಎನ್ಐಟಿಯಂಥ(NIT) ಸಂಸ್ಥೆಗಳಲ್ಲಿ ಓದಿರುವ ವಿದ್ಯಾರ್ಥಿಗಳು ಗರಿಷ್ಠ ಮೊತ್ತದ ವೇತನವನ್ನು ಪಡೆಯುವುದನ್ನು ಕೇಳಿದ್ದೇವೆ. ಆದರೆ, ಐಐಐಟಿಯ ವಿದ್ಯಾರ್ಥಿಯೊಬ್ಬರು ದಾಖಲೆಯ ವೇತನಕ್ಕೆ ಉದ್ಯೋಗ ಪಡೆದಿರುವುದು ದಾಖಲೆಗೆ ಕಾರಣವಾಗಿದೆ. ಒಂದು ವರ್ಷದ ಹಿಂದೆ ಉದ್ಯೋಗ ಪಡೆದಿದ್ದರೂ, ಆ ಸುದ್ದಿ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ(IT Job).
ಯುಕ್ತಾ ಗೋಪಾಲನಿ ಅವರು ಅಲಹಾಬಾದ್ನ ಐಐಐಟಿ ಸಂಸ್ಥೆಯಲ್ಲಿ ಐಟಿಯಲ್ಲಿ ಬಿಟೆಕ್ ಮಾಡಿದ್ದಾರೆ ಮತ್ತು ಪ್ರಸ್ತುತ ಕರ್ನಾಟಕದ ಬೆಂಗಳೂರಿನ ಅಟ್ಲಾಸಿಯನ್ ಕಚೇರಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರು ಜುಲೈ 2023 ರಲ್ಲಿ ಕಂಪನಿಗೆ ಸೇರಿದ್ದಾರೆ. “ಎಲ್ಲರಿಗೂ ನಮಸ್ಕಾರ, ನಾನು ಅಟ್ಲಾಸಿಯನ್ ಸಾಫ್ಟ್ವೇರ್ ಎಂಜಿನಿಯರ್ ಆಗಿ ಸೇರಿಕೊಂಡಿದ್ದೇನೆ ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ಇಲ್ಲಿ ಎಕ್ಸ್ಪ್ಲೋರ್ ಮಾಡಲು ಮತ್ತು ಇನ್ನಷ್ಟು ತಿಳಿದುಕೊಳ್ಳಲು ಎದುರುನೋಡುತ್ತಿದ್ದೇನೆ ” ಯುಕ್ತಾ ಗೋಪಾಲನಿ ಅವರ ತಮ್ಮ ಲಿಂಕ್ಡ್ಇನ್ ಪುಟದಲ್ಲಿ ಬರೆದುಕೊಂಡಿದ್ದಾರೆ.
ಈ ಮಧ್ಯೆ, ಇಂಟರ್ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ ನಯಾ ರಾಯ್ಪುರ್ನ (IIIT-NR) ಬಿಟೆಕ್ ವಿದ್ಯಾರ್ಥಿನಿ ರಾಶಿ ಬಗ್ಗಾ ಅವರು ಕೆಲವು ವಾರಗಳ ಹಿಂದೆ ವಾರ್ಷಿಕ 85 ಲಕ್ಷ ರೂಪಾಯಿಗಳ ಉದ್ಯೋಗ ಪ್ಯಾಕೇಜ್ ಅನ್ನು ಪಡೆದುಕೊಂಡು ಸುದ್ದಿಯಲ್ಲಿದ್ದರು. ರಾಶಿ ಬಗ್ಗಾ ಅವರ ವಾರ್ಷಿಕ ವೇತನವು ದಾಖಲೆಯಾಗಿದೆ. ಯಾಕೆಂದರೆ, ಅವರು 2023 ರಲ್ಲಿ IIIT-NR ಯಾವುದೇ ವಿದ್ಯಾರ್ಥಿಗೆ ನೀಡಲಾದ ಅತ್ಯಧಿಕ ಪ್ಯಾಕೇಜ್ ಅನ್ನು ಸ್ವೀಕರಿಸಿದ್ದಾರೆ ಎಂದು ಹೇಳಬಹುದು.
ಈ ಸುದ್ದಿಯನ್ನೂ ಓದಿ: ಹೆಚ್ಚು ವೇತನದ ಉದ್ಯೋಗಕ್ಕೆ ರಿಸೈನ್ ಮಾಡಿ, ವೇಟರ್- ಕ್ಲೀನರ್ ಆಗುತ್ತಿದ್ದಾರೆ ಯುವತಿಯರು!; ಯಾಕೆ ಹೀಗೆ?
ತಿಂಗಳ ಹಿಂದೆ 21 ವರ್ಷದ ರಿತಿ ಕುಮಾರಿ ಅವರು ತಮಗೆ ಸರಿ ಎನಿಸಿದ ಕಂಪನಿಯಲ್ಲಿ ಕೆಲಸ ಪಡೆದುಕೊಳ್ಳುವುದಕ್ಕಾಗಿ ಸುಮಾರು 13 ಕಂಪನಿಗಳ ಇಂಟರ್ನಶಿಪ್ ಉದ್ಯೋಗವನ್ನು ನಿರಾಕರಿಸಿದ್ದರು. ಇದರಲ್ಲಿ ಟಿಸಿಎಸ್, ಇನ್ಫೋಸಿಸ್ ಹಾಗೂ ವಿಪ್ರೋಗಳಂತ ದೈತ್ಯ ತಂತ್ರಜ್ಞಾನ ಕಂಪನಿಗಳು ಸೇರಿದ್ದವು. ಯಾವುದೇ ಟೆಕ್ಕಿಗೆ ಟಿಸಿಎಸ್, ಇನ್ಫೋಸಿಸ್ ಮತ್ತು ವಿಪ್ರೋಗಳಲ್ಲಿ ಕೆಲಸ ಮಾಡುವುದು ಕನಸಾಗಿರುತ್ತದೆ. ಆದರೆ, ರಿತಿ ಆ ಕಂಪನಿಗಳ ಉದ್ಯೋಗವನ್ನು ನಿರಾಕರಿಸಿದ್ದಳು. ಅಂತಿಮವಾಗಿ ಆಕೆ, ಬೆಂಗಳೂರಿನಲ್ಲಿ ವಾಲ್ಮಾರ್ಟ್ನಲ್ಲಿ ಉದ್ಯೋಗಕ್ಕೆ ಸೇರಿದ್ದಳು. ಇತರ ಕಂಪನಿಗಳಿಗೆ ಹೋಲಿಸಿದರೆ, ಸಂಬಳ ಕಡಿಮೆ ಇದ್ದರೂ ತನ್ನ ತೃಪ್ತಿಗಾಗಿ ತನಗಿಷ್ಟವಾದ ಕಂಪನಿ ಉದ್ಯೋಗಪಡೆದುಕೊಂಡು ಸುದ್ದಿಯಾಗಿದ್ದಳು.
ಉದ್ಯೋಗ
Job News : ಅರಣ್ಯ ಇಲಾಖೆಯಲ್ಲಿ 310 ವೀಕ್ಷಕ ಹುದ್ದೆ ಭರ್ತಿ; ಅರ್ಜಿ ಸಲ್ಲಿಕೆ ಹೇಗೆ, ಕೊನೇ ದಿನಾಂಕ ಎಂದು?
ಬೆಂಗಳೂರು, ಬಳ್ಳಾಗರಿ, ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಧಾರವಾಡ, ಹಾಸನ, ಕೆನರಾ, ಕಲಬುರ್ಗಿ, ಕೊಡಗು, ಮಂಗಳೂರು, ಮಸೂರು, ಶಿವಮೊಗ್ಗ ವೃತ್ತಗಳಲ್ಲಿ ಹುದ್ದೆಗಳು ನೇಮಕ (Job News) ನಡೆಯಲಿದೆ.
ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 310 ಅರಣ್ಯ ವೀಕ್ಷಕರ ಹುದ್ದೆಯನ್ನು ಭರ್ತಿ (Job News) ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸೆಪ್ಟೆಂಬರ್ 19ರಂದು ಈ ಕುರಿತು ಅಧಿಸೂಚನೆ ಹೊರಡಲಿದ್ದು, ಕರ್ನಾಟಕದ ನಾನಾ ವೃತ್ತಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿದೆ. ಬೆಂಗಳೂರು, ಬಳ್ಳಾರಿ, ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಧಾರವಾಡ, ಹಾಸನ, ಕೆನರಾ, ಕಲಬುರ್ಗಿ, ಕೊಡಗು, ಮಂಗಳೂರು, ಮೈಸೂರು, ಶಿವಮೊಗ್ಗ ವೃತ್ತಗಳಲ್ಲಿ ಹುದ್ದೆಗಳು ನೇಮಕವಾಗಲಿವೆ.
ಸಂಬಂಧಿತ ವೃತ್ತಗಳ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮೂಲಕ ಸೆಪ್ಟೆಂಬರ್ 19ರಂದು ಅಧಿಸೂಚನೆ ಹೊರಡಲಿದೆ. ಸೆಪ್ಟೆಂಬರ್ 27ರಿಂದ ಅರ್ಜಿ ಸಲ್ಲಿಕೆ ಅರಂಭವಾಗಲಿದ್ದು, ಅಕ್ಟೋಬರ್ 26 ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕವಾಗಿದೆ. ಹುದ್ದೆಯ ವಯಸ್ಸಿನ ಮಿತಿ ಹಾಗೂ ಶೈಕ್ಷಣಿಕ ಅರ್ಹತೆಗಳ ಕುರಿತು ಇನ್ನೂ ಮಾಹಿತಿ ಬಹಿರಂಗವಾಗಿಲ್ಲ. ಸೆಪ್ಟೆಂಬರ್ 21ರಂದು ಈ ಕುರಿತು ರಾಜ್ಯಪತ್ರದ ಈ ಗೆಜೆಟ್ ಅಧಿಸೂಚನೆ ಹೊರಡಲಿದೆ ಅಂದು ಸಂಪೂರ್ಣ ಮಾಹಿತಿ ಆಕಾಂಕ್ಷಿಗಳಿಗೆ ಲಭ್ಯವಾಗಲಿದೆ.
ಅರ್ಜಿ ಸಲ್ಲಿಕೆ ಸೇರಿದಂತೆ ಎಲ್ಲ ಪ್ರಕ್ರಿಯೆಗಳು ಆನ್ಲೈನ್ ನಡೆಯಲಿವೆ ಎಂಬುದು ಕರಡು ಅಧಿಸೂಚನೆಯ ಮೂಲಕ ಗೊತ್ತಾಗಿದೆ.
ಬೆಂಗಳೂರು ವೃತ್ತ 33
ಬೆಂಗಳೂರು ನಗರ ವಿಭಾಗ 5 ಹುದ್ದೆ, ಬೆಂಗಳೂರು ಗ್ರಾಮಾಂತರ ವಿಭಾಗದಲ್ಲಿ 5 ಹುದ್ದೆ, ರಾಮನಗರ ವಿಭಾಗದಲ್ಲಿ 5 ಹುದ್ದೆ, ಕೋಲಾರ ವಿಭಾಗದಲ್ಲಿ 5 ಹುದ್ದೆ, ,ಚಿಕ್ಕಬಳ್ಳಾಪುರ ವಿಭಾಗದಲ್ಲಿ 5 ಹುದ್ದೆ ಹಾಗೂ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ 8 ಹುದ್ದೆಗಳಿವೆ.
ಬೆಳಗಾವಿ ವೃತ್ತದಲ್ಲಿ 20 ಹುದ್ದೆ
ಘಟಪ್ರಭ ವಿಭಾಗದಲ್ಲಿ 6 ಹುದ್ದೆ, ಬಾಗಲಕೋಟೆ ವಿಭಾಗದಲ್ಲಿ 7 ಹುದ್ದೆ, ವಿಜಯಪುರ ವಿಭಾಗದಲ್ಲಿ 1 ಹುದ್ದೆಗಳು ಖಾಲಿ ಇವೆ
ಬಳ್ಳಾರಿ ವೃತ್ತದಲ್ಲಿ 20 ಹುದ್ದೆಗಳು
ಬಳ್ಳಾರಿ ವಿಭಾಗದಲ್ಲಿ 4 ಹುದ್ದೆಗಳು, ವಿಜಯನಗರ ವಿಭಾಗದಲ್ಲಿ 6 ಹುದ್ದೆಗಳು, ಚಿತ್ರದುರ್ಗ ವಿಭಾಗದಲ್ಲಿ 4 ಹುದ್ದೆಗಳು, ದಾವಣಗೆರೆ ವಿಭಾಗದಲ್ಲಿ 4 ಹುದ್ದೆಳು ಹಾಗೂ ಕೂಪ್ಪಳ ವಿಭಾಗದಲ್ಲಿ 2 ಹುದ್ದೆಗಳು ಭರ್ತಿಯಾಗಲಿವೆ.
ಚಾಮರಾಜನಗರ ವೃತ್ತದಲ್ಲಿ 32 ಹುದ್ದೆಗಳು
ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶ ಚಾಮರಾಜನಗರ ವಿಭಾಗದಲ್ಲಿ 6 ಹುದ್ದೆಗಳು, ಮಲೆ, ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ 10 ಹುದ್ದೆಗಳು, ಕಾವೇರಿ ವನ್ಯ ಜೀವಿ ವಿಭಾಗದಲ್ಲಿ 6 ಹುದ್ದೆಗಳು, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ 10 ಹುದ್ದೆಗಳು ಭರ್ತಿಯಾಗಲಿವೆ.
ಇದನ್ನೂ ಓದಿ : SBI recruitment 2023: ಭಾರತೀಯ ಸ್ಟೇಟ್ ಬ್ಯಾಂಕ್ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಚಿಕ್ಕಮಗಳೂರು ವೃತ್ತದಲ್ಲಿ 25 ಹುದ್ದೆಗಳು
ಚಿಕ್ಕಮಗಳೂರು ವಿಭಾಗದಲ್ಲಿ 1 ಹುದ್ದೆ, ಕೊಪ್ಪ, ವಿಭಾಗದಲ್ಲಿ 10 ಹುದ್ದೆ, ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ 14 ಹುದ್ದೆಗಲು ಭರ್ತಿಯಾಗಲಿವೆ.
ಧಾರವಾಡ ವೃತ್ತದಲ್ಲಿ 7 ಹುದ್ದೆಗಳು
ಧಾರವಾಡ ವಿಭಾಗದಲ್ಲಿ 2 ಹುದ್ದೆಗಳು, ಗದಗ ವಿಭಾಗದಲ್ಲಿ 2 ಹುದ್ದೆಗಳು ಹಾಗೂ ಹಾವೇರಿ ವಿಭಾಗದಲ್ಲಿ 4 ಹುದ್ದೆಗಳಿವೆ.
ಹಾಸನ ವೃತ್ತದಲ್ಲಿ 20 ಹುದ್ದೆಗಳು
ಹಾಸನ ವಿಭಾಗದಲ್ಲಿ 8 ಹುದ್ದೆಗಳು, ತುಮಕೂರು ವಿಭಾಗದಲ್ಲಿ 12 ಹುದ್ದೆಗಳಿವೆ.
ಕೆನರಾ ವೃತ್ತದಲ್ಲಿ 32 ಹುದ್ದೆಗಳು
ಕಾರವಾರ ವಿಭಾಗದಲ್ಲಿ 4 ಹುದ್ದೆಗಳು, ಹಳಿಯಾಳ ವಿಭಾಗದಲ್ಲಿ 3 ಹುದ್ದೆಗಳು, ಯಲ್ಲಾಪುರ ವಿಭಾಗದಲ್ಲಿ 5 ಹುದ್ದೆಗಳು, ಶಿರಸಿ ವಿಭಾಗದಲ್ಲಿ 1 ಹುದ್ದೆ, ಹೊನ್ನಾವರ ವಿಭಾಗದಲ್ಲಿ 5 ಹುದ್ದೆ, ಕಾಳಿ ಹುಲಿ ಸಂರಕ್ಷಿತ ಪ್ರದೇಶ, ದಾಂಡಲಿಯಲ್ಲಿ 14 ಹುದ್ದೆಗಳಿವೆ.
ಇದನ್ನೂ ಓದಿ :
ಕೊಡಗು ವೃತ್ತದಲ್ಲಿ 16 ಹುದ್ದೆಗಳು
ಮಡಿಕೇರಿ ವಿಭಾಗದಲ್ಲಿ 1 ಹುದ್ದೆಗಳು, ವಿರಾಜಪೇಟೆ ವಿಭಾಗದಲ್ಲಿ 5 ಹುದ್ದೆಗಳು, ಮಡಿಕೇರಿ ವನ್ಯಜೀವಿ ವಿಭಾಗದಲ್ಲಿ 6 ಹುದ್ದೆಗಳು.
ಕಲಬುರ್ಗಿ ವೃತ್ತದಲ್ಲಿ 24 ಹುದ್ದೆಗಳು
ಯಾದಗಿರಿ ವಿಭಾಗದಲ್ಲಿ 7 ಹುದ್ದೆಗಳು, ರಾಯಚೂರು ವಿಭಾಗದಲ್ಲಿ 4 ಹುದ್ದೆಗಳಿವೆ.
ಮಂಗಳೂರು ವೃತ್ತದಲ್ಲಿ 20 ಹುದ್ದೆಗಳು
ಮಂಗಳೂರು ವಿಭಾಗದಲ್ಲಿ 5 ಹುದ್ದೆಗಳು, ಕುಂದಾಪುರ ವಿಭಾಗದಲ್ಲಿ 5 ಹುದ್ದೆಗಳು, ಕುದುರೆಮುಖ ವನ್ಯಜೀವಿ ವಿಭಾಗದಲ್ಲಿ 10 ಹುದ್ದೆಗಳು.
ಮೈಸೂರು ವೃತ್ತದಲ್ಲಿ 12 ಹುದ್ದೆಗಳು
ಮೈಸೂರು ವಿಭಾಗದಲ್ಲಿ 5 ಹುದ್ದೆಗಳು, ಹುಣಸೂರು ವಿಭಾಗದಲ್ಲಿ 4 ಹುದ್ದೆಗಳು, ಮಂಡ್ಯ, ವಿಭಾಗದಲ್ಲಿ 5 ಹುದ್ದೆಗಳು, ಮೈಸೂರು ವನ್ಯಜೀವಿ ವಿಭಾಗದಲ್ಲಿ 6 ಹುದ್ದೆಗಳು, ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನದಲ್ಲಿ 12 ಹುದ್ದೆಗಳಿವೆ.
ಶಿವಮೊಗ್ಗ ವೃತ್ತದಲ್ಲಿ 30 ಹುದ್ದೆಗಳು
ಶಿವಮೊಗ್ಗ
ಶಿವಮೊಗ್ಗ, ವಿಭಾಗದಲ್ಲಿ 8 ಹುದ್ದೆಗಳು, ಭದ್ರಾವತಿ ವಿಭಾಗದಲ್ಲಿ 8 ಹುದ್ದೆಗಳು, ಸಾಗರ ವಿಭಾಗದಲ್ಲಿ 8 ಹುದ್ದೆಗಳು, ಶಿವಮೊಗ್ಗ ವನ್ಯಜೀವಿ ವಿಭಾಗದಲ್ಲಿ 8 ಹುದ್ದೆಗಳಿವೆ.
-
ಕರ್ನಾಟಕ23 hours ago
Heart Attack: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡಿಜೆ ಸದ್ದಿಗೆ ಹಾರಿಹೋಯ್ತು ಯುವಕನ ಪ್ರಾಣ!
-
ಸುವಚನ17 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಕರ್ನಾಟಕ9 hours ago
Suspicious death : ಮನೆಯಲ್ಲಿ ನೇತಾಡುತ್ತಿತ್ತು ಹೆಂಡ್ತಿ ಶವ; ಚಿತೆಯ ಫೋಟೊ ಹಾಕಿದ ಗಂಡ!
-
ದೇಶ13 hours ago
Kamal Haasan: ಸನಾತನ ಧರ್ಮದ ವಿಷಯದಲ್ಲಿ ‘ಮಗು’ ಉದಯನಿಧಿ ಮೇಲೆ ದಾಳಿ ಎಂದ ಕಮಲ್ ಹಾಸನ್
-
ಅಂಕಣ16 hours ago
ವಿಸ್ತಾರ ಅಂಕಣ: ಮಣ್ಣು ಬರೀ ಮಣ್ಣಲ್ಲ, ಅದು ನಮ್ಮ ಭಾವಕೋಶ, ನಾವು ಮಣ್ಣಿನ ಮಕ್ಕಳು!
-
ದೇಶ22 hours ago
‘ದ್ವೇಷದ ಸಂತೆಯಲ್ಲಿ ಪ್ರೀತಿಯ ಅಂಗಡಿ’! ಡ್ಯಾನಿಶ್ ಅಲಿಯನ್ನು ಭೇಟಿಯಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
-
ವೈರಲ್ ನ್ಯೂಸ್3 hours ago
Viral Video : ಅಬ್ಬಾ ಏನು ಧೈರ್ಯ; ವೇಗವಾಗಿ ಚಲಿಸುತ್ತಿದ್ದ ಟ್ರಕ್ನ ಚಕ್ರದ ಪಕ್ಕದಲ್ಲಿಯೇ ಗಡದ್ದಾಗಿ ನಿದ್ದೆ ಹೊಡೆದ !
-
South Cinema5 hours ago
Silk Smitha: ಸಿಲ್ಕ್ ಸ್ಮಿತಾ ಶವದ ಮೇಲೆ ಅತ್ಯಾಚಾರ ; ನಟಿಯ ಪುಣ್ಯತಿಥಿಯಂದು ಅಚ್ಚರಿಯ ಸತ್ಯ ಹೊರಬಿತ್ತು!