PDO Recruitment 2023 government decided to recruit pdo through kpscPDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ Vistara News

ಉದ್ಯೋಗ

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಪಿಡಿಒ ಸೇರಿದಂತೆ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ (PDO Recruitment 2023) ನೇಮಕಾತಿಯನ್ನು ಸದ್ಯವೇ ನಡೆಯಲಿದೆ. ಈ ಬಾರಿ ನೇಮಕ ಪ್ರಕ್ರಿಯೆಯನ್ನು ಕೆಪಿಎಸ್‌ಸಿ ನಡೆಸಲಿದೆ.

VISTARANEWS.COM


on

kpsc recruitment 2023 pdo recruitment 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ನೇಮಕಾತಿ (PDO Recruitment 2023) ಪ್ರಕಟಣೆಯ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿನ (ಪಂಚಾಯತಿ ಅಭಿವೃದ್ಧಿ ಅಧಿಕಾರಿ (PDO), ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್‌-I, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್‌-II, ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್‌-I, ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್‌-II ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳ ನೇಮಕಕ್ಕೆ ಸದ್ಯವೇ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಅಧಿಸೂಚನೆ ಹೊರಡಿಸಲಿದೆ.

ಈ ಹಿಂದೆ ಪಿಡಿಒ ಮತ್ತು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ನೇಮಕ ನಡೆಯುತ್ತಿತ್ತು. ಈ ಹಿಂದೆ ʻವಿಸ್ತಾರ ನ್ಯೂಸ್‌ʼ ವರದಿ ಮಾಡಿದಂತೆಯೇ ಕೆಪಿಎಸ್‌ಸಿ ಮೂಲಕ ಈ ಬಾರಿ ನೇಮಕ ನಡೆಯಲಿದ್ದು, ಈ ಸಂಬಂಧ ಸರ್ಕಾರ ಜು.15 ರಂದು ಆದೇಶ ಹೊರಡಿಸಿದೆ. ಈ ಹಿಂದೆಲ್ಲಾ ಪಿಡಿಒ ಹುದ್ದೆಗಳಿಗೆ ಜಿಲ್ಲಾ ಮಟ್ಟದಲ್ಲಿ ನೇಮಕಾತಿ ನಡೆಯುತ್ತಿತ್ತು. ಇನ್ನು ಮುಂದೆ ರಾಜ್ಯಮಟ್ಟದಲ್ಲಿ ನೇಮಕಾತಿ ನಡೆಯಲಿದೆ. ಅಲ್ಲದೆ ಹುದ್ದೆಗಳ ಸಂಖ್ಯೆಯೂ ಈ ಹಿಂದೆ ಪ್ರಕಟಿಸಿದ್ದಕ್ಕಿಂತ ಅಂದರೆ 150 ಕ್ಕೆ ಬದಲಾಗಿ 350 ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ ನಡೆಯುವುದು ಖಚಿತ ಪಟ್ಟಿದೆ. ಆದರೆ ಎಷ್ಟು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಹುದ್ದೆಗಳಿಗೆ ನೇಮಕ ನಡೆಯಲಿದೆ ಎಂಬುದು ಖಚಿತ ಪಟ್ಟಿಲ್ಲ.

pdo recruitment order
ಕೆಪಿಎಸ್‌ಸಿ ಮೂಲಕ ನೇಮಕಕ್ಕೆ ಸರ್ಕಾರದ ಆದೇಶ

ನೇರ ನೇಮಕಾತಿ ಕೋಟಾದಲ್ಲಿ ಪ್ರಸ್ತುತ 385 ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳು ಖಾಲಿ ಇದ್ದು, ಈ ಪೈಕಿ 150 ಹುದ್ದೆಗಳಿಗೆ ನೇರ ನೇಮಕಾತಿ (PDO Recruitment 2023) ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ (Rural Development and Panchayath Raj Department-RDPR) ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ವಿಧಾನಸಭೆಯಲ್ಲಿ ಇತ್ತೀಚೆಗಷ್ಟೇ ತಿಳಿಸಿದ್ದರು. ಇದರಂತೆಯೇ ಈ ನೇಮಕ ಪ್ರಕ್ರಿಯೆ ನಡೆಯುತ್ತಿದೆ.

ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್‌ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಲಿಖಿತವಾಗಿ ಉತ್ತರ ನೀಡಿರುವ ಅವರು, ಒಟ್ಟಾರೆ 6,021 ಪಿಡಿಒ ಹುದ್ದೆಗಳು ಮಂಜೂರಾಗಿದ್ದು, 5,361 ಹುದ್ದೆಗಳು ಭರ್ತಿಯಾಗಿವೆ. 660 ಹುದ್ದೆಗಳು ಖಾಲಿ ಒವೆ. ಇವುಗಳನ್ನು ಬಡ್ತಿ ಮತ್ತು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ನೇರ ನೇಮಕಾತಿ ಮೂಲಕ 385 ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದ್ದು, ಇವುಗಳಲ್ಲಿ ಈಗ 150 ಹುದ್ದೆಗಳ ನೇಮಕ ಪ್ರಕ್ರಿಯೆ ಮಾತ್ರ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದರು. ಆದರೆ ಅಭ್ಯರ್ಥಿಗಳ ಒತ್ತಡಕ್ಕೆ ಮಣಿದ ಸಚಿವರು ಖಾಲಿ ಇರುವ ಎಲ್ಲ ಹುದ್ದೆಗಳಿಗೂ ನೇಮಕ ಪ್ರಕ್ರಿಯೆ ನಡೆಸಲು ಇಲಾಖೆಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಸರ್ಕಾರದ ಆದೇಶದಂತೆ ಈ ಕೂಡಲೇ ನೇಮಕಾತಿ ಪ್ರಸ್ತಾವನೆಯನ್ನು ಕೆಪಿಎಸ್‌ಸಿಗೆ ಸಲ್ಲಿಸಲಿದ್ದು, ಕೆಪಿಎಸ್‌ಸಿಯು ಸದ್ಯವೇ ಅಧಿಸೂಚನೆ ಹೊರಡಿಸಲಿದೆ. ಹುದ್ದೆಗಳ ಮೀಸಲು ವರ್ಗೀಕರಣವನ್ನು ಅಂತಿಮಗೊಳಿಸಲಾಗುತ್ತಿದ್ದು, ಆದಷ್ಟು ಬೇಗ ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ವಿಸ್ತಾರ ನ್ಯೂಸ್‌ಗೆ ಮಾಹಿತಿ ನೀಡಿದ್ದಾರೆ.

ಯಾವ್ಯಾವ ಜಿಲ್ಲೆಯಲ್ಲಿ ಎಷ್ಟು ನೇರ ನೇಮಕಾತಿಯ ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿಯ ವಿಧಾನಸಭೆಯಲ್ಲಿ ಸಚಿವರು ನೀಡಿದ್ದರು. ಈ ಪ್ರಕಾರ ಬೆಂಗಳೂರು ಗ್ರಾಮಾಂತರದಲ್ಲಿ -10, ಬೆಂಗಳೂರು ನಗರದಲ್ಲಿ -03, ಚಿಕ್ಕಬಳ್ಳಾಪುರ- 04, ಚಿತ್ರದುರ್ಗ-0, ದಾವಣಗೆರೆ-04, ಕೋಲಾರ-08, ರಾಮನಗರ-04, ಶಿವಮೊಗ್ಗ-28, ತುಮಕೂರು-28, ಬಾಗಲಕೋಟೆ-3, ಬೆಳಗಾವಿ-31, ಧಾರವಾಡ-0, ಗದಗ-09, ಹಾವೇರಿ-07, ಉತ್ತರ ಕನ್ನಡ-09, ವಿಜಯಪುರ-1, ಚಿಕ್ಕಮಗಳೂರು-28, ಉಡುಪಿ-12, ದಕ್ಷಿಣ ಕನ್ನಡ-21, ಕೊಡಗು-09, ಮಂಡ್ಯ-04, ಹಾಸನ-16, ಮೈಸೂರು-07, ಚಾಮರಾಜನಗರ-04, ರಾಯಚೂರು-24, ಬೀದರ್‌-21, ಬಳ್ಳಾರಿ-05, ಯಾದಗಿರಿ-10, ಕಲಬುರಗಿ-37, ಕೊಪ್ಪಳ-9, ವಿಜಯನಗರ-35 ನೇರ ನೇಮಕಾತಿ ಹುದ್ದೆಗಳು ಸದ್ಯ ಖಾಲಿ ಇವೆ.

PDO Recruitment 2023

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಪಿಡಿಒ ನೇಮಕಕ್ಕೆ ಸಿದ್ಧತೆ ನಡೆಸಿದೆ ಎಂದು ʻವಿಸ್ತಾರ ನ್ಯೂಸ್‌ʼ ಜೂನ್‌ 17 ರಂದೇ ವರದಿ ಮಾಡಿತ್ತು. ಪಿಡಿಒ ಹುದ್ದೆಗಳು ಖಾಲಿ ಇರುವುದರಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ ಎಂದು ಶಾಸಕರು ದೂರುತ್ತಿರುವುದರಿಂದ ಸರ್ಕಾರ ಆದಷ್ಟು ಬೇಗ ಈ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಿದೆ.

ವಿಧಾನಸಭೆಯಲ್ಲಿ ಶಾಸಕ ಬಸನಗೌಡ ದದ್ದಲ್‌ ಅವರ ಇನ್ನೊಂದು ಪ್ರಶ್ನೆಗೆ ಉತ್ತರಿಸಿರುವ ಸಚಿವ ಪ್ರಿಯಾಂಕ್‌ ಖರ್ಗೆ, ರಾಜ್ಯದಲ್ಲಿ 604 ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್‌-I ಹುದ್ದೆ ಖಾಲಿ ಇದ್ದು, ಇದರಲ್ಲಿ 530 ಹುದ್ದೆಗಳು ನೇರ ನೇಮಕಾತಿಯ ಹುದ್ದೆಗಳಾಗಿವೆ. 719 ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್‌-II ಹುದ್ದೆ ಖಾಲಿ ಇದ್ದು, ಇದರಲ್ಲಿ 412 ಹುದ್ದೆಗಳು ನೇರ ನೇಮಕಾತಿಯ ಹುದ್ದೆಗಳಾಗಿವೆ. 345 ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳು ಖಾಲಿ ಇದ್ದು, ಇವುಗಳಲ್ಲಿ 82 ಹುದ್ದೆಗಳು ನೇರ ನೇಮಕಾತಿಯ ಹುದ್ದೆಗಳಾಗಿವೆ ಎಂದು ತಿಳಿಸಿದ್ದಾರೆ. ಪಿಡಿಒ ಹುದ್ದೆಗಳ ಜತೆಗೆ ಈ ಹುದ್ದೆಗಳಿಗೂ ನೇಮಕ ನಡೆಯಲಿದೆ.

ಯಾರಿಗೆಲ್ಲಾ ಅವಕಾಶ?

ಅಂಗೀಕೃತಗೊಂಡ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಶಿಕ್ಷಣ ಪಡೆದಿರುವ ಅಭ್ಯರ್ಥಿಗಳು ಪಿಡಿಒ ಮತ್ತು ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್‌-I) ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್‌-II) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಓದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ 35 ವರ್ಷ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ವೇತನ ಎಷ್ಟಿರುತ್ತದೆ?

ಗ್ರಾಮ ಪಂಚಾಯಾತ್‌ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಯ ವೇತನ ಶ್ರೇಣಿ: ರೂ. 37,900-70,850
ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್‌-I) ಹುದ್ದೆಯ ವೇತನ ಶ್ರೇಣಿ: ರೂ. 27,650-52,650
ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್‌-II) ಹುದ್ದೆಯ ವೇತನ ಶ್ರೇಣಿ: ರೂ. 21,400-42,000
ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಯ ವೇತನ ಶ್ರೇಣಿ: ರೂ. 21,400-42,000

ನೇಮಕ ಹೇಗೆ?

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿಗಳಿಸಿದ ಶೇಕಡಾವಾರು ಅಂಕಗಳ ಆಧಾರದಲ್ಲಿ ನೇಮಕಮಾಡಿಕೊಳ್ಳಲಾಗುತ್ತದೆ. ಈ ಯಾವ ಹುದ್ದೆಗಳಿಗೂ ಸಂದರ್ಶನ ನಡೆಸಲಾಗುವುದಿಲ್ಲ.

ಈ ಹಿಂದೆ ಪಿಡಿಒ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವಾಗ ನಡೆಸಲಾಗುತ್ತಿದ್ದ ಸ್ಪರ್ಧಾತ್ಮಕ ಪರೀಕ್ಷೆಯು ಎರಡು ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿರುತ್ತಿತ್ತು. ಪ್ರಶ್ನೆ ಪತ್ರಿಕೆ-1 ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದ್ದಾಗಿರುತ್ತಿತ್ತು. ಇದರಲ್ಲಿ ಒಟ್ಟು ನೂರು ಪ್ರಶ್ನೆಗಳಿರಲಿದ್ದು, 200 ಅಂಕಗಳಿಗೆ ಈ ಪರೀಕ್ಷೆ ನಡೆಯುತ್ತಿತ್ತು. ಮತ್ತೊಂದು ಪತ್ರಿಕೆ-2 ಸಹ ನೂರು ಪ್ರಶ್ನೆಗಳಿರಲಿದ್ದು, 200 ಅಂಕಗಳಿಗೆ ನಡೆಯುತ್ತಿತ್ತು.

ಇದನ್ನೂ ಓದಿ : KEA Recruitment 2023 : ನಿಗಮ ಮಂಡಳಿಗಳಲ್ಲಿನ 670 ಹುದ್ದೆಗಳಿಗೆ ನೇಮಕ; ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

2016 ರಲ್ಲಿ ನೇಮಕ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿತ್ತು. ಆದರೆ ಈ ಬಾರಿ ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ಈ ನೇಮಕ ಪ್ರಕ್ರಿಯೆ ನಡೆಸುತ್ತಿರುವುದರಿಂದ ಆಯೋಗವು ಗ್ರೂಪ್‌ “ಸಿʼʼ ಹುದ್ದೆಗಳ ನೇಮಕಕ್ಕೆ ನಡೆಸುವ ರೀತಿಯಲ್ಲಿಯೇ ಈ ಹುದ್ದೆಗಳಿಗೂ ಪರೀಕ್ಷೆ ನಡೆಸಲಿದೆ. ಗ್ರೂಪ್‌ ಸಿ ಹುದ್ದೆಗಳಿಗೆ 200 ಅಂಕಗಳಿಗೆ ಬದಲಾಗಿ ನೂರು ಅಂಕಗಳಿಗೆ ಪರೀಕ್ಷೆ ನಡೆಯುತ್ತದೆ.

ಈ ನೇಮಕ ಪ್ರಕ್ರಿಯೆಯ ಸಂಪೂರ್ಣ ಮಾಹಿತಿಯನ್ನು ʻವಿಸ್ತಾರ ನ್ಯೂಸ್‌ʼ ಒದಗಿಸಲಿದ್ದು, ಆಸಕ್ತರು ಆಗಾಗ ಈ ವೆಬ್‌ಸೈಟ್‌ಗೆ ಭೇಟಿ ನೀಡಿ, ಮಾಹಿತಿ ಪಡೆದುಕೊಳ್ಳಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job alert: ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್ ವೈರಾಲಜಿಯಲ್ಲಿ 80 ಹುದ್ದೆ; ಡಿಪ್ಲೋಮಾ ಓದಿದವರು ಅರ್ಜಿ ಸಲ್ಲಿಸಿ

Job alert: ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್ ವೈರಾಲಜಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಡಿಸೆಂಬರ್‌ 10 ಕೊನೆಯ ದಿನ.

VISTARANEWS.COM


on

pune
Koo

ಬೆಂಗಳೂರು: ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್ ವೈರಾಲಜಿ (National Institute of Virology-NIV) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸುಮಾರು 80 ಹುದ್ದೆಗಳು ಖಾಲಿ ಇದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಟೆಕ್ನಿಕಲ್ ಅಸಿಸ್ಟೆಂಟ್ ಮತ್ತು ಟೆಕ್ನಿಶಿಯನ್ ಹುದ್ದೆಗಳು ಇವಾಗಿದ್ದು, ತಾತ್ಕಾಲಿಕ ಆಧಾರದ ಮೇಲೆ ಭರ್ತಿ ಮಾಡಲಾಗುವುದು ಎಂದು ಅಧಿಸೂಚನೆ ತಿಳಿಸಿದೆ. ಅರ್ಜಿ ಸಲ್ಲಿಕೆಗೆ ಡಿಸೆಂಬರ್‌ 10 ಕೊನೆಯ ದಿನ (Job alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಟೆಕ್ನಿಕಲ್‌ ಅಸಿಸ್ಟೆಂಟ್‌ (ಗ್ರೂಪ್‌ ಬಿ)- 49 ಹುದ್ದೆಗಳು ಖಾಲಿ ಇದ್ದು, ಡಿಪ್ಲೋಮಾ (ಎಂಜಿನಿಯರಿಂಗ್‌)/ಪದವಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಟೆಕ್ನೀಶಿಯನ್‌ (ಗ್ರೂಪ್‌ ಸಿ)-31 ಹುದ್ದೆಗಳಿದ್ದು, 12ನೇ ತರಗತಿ/ಡಿಪ್ಲೋಮಾ (ಎಂಜಿನಿಯರಿಂಗ್‌) ಓದಿದವರು ಅರ್ಜಿ ಸಲ್ಲಿಸಬಹುದು. ಟೆಕ್ನಿಕಲ್‌ ಅಸಿಸ್ಟೆಂಟ್‌ ಹುದ್ದೆಗೆ ಅರ್ಜಿ ಸಲ್ಲಿಸುವವರ ಗರಿಷ್ಠ ವಯೋಮಿತಿ 30 ವರ್ಷ ಮತ್ತು ಟೆಕ್ನೀಶಿಯನ್‌ ಹುದ್ದೆಗೆ ಗರಿಷ್ಠ ವಯೋಮಿತಿ 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ/ಎಸ್‌ಟಿ 5 ವರ್ಷ, ಒಬಿಸಿ 3 ವರ್ಷ, ಪಿಡಬ್ಲ್ಯುಬಿಡಿ 10 ವರ್ಷ, ಪಿಡಬ್ಲ್ಯುಬಿಡಿ + ಒಬಿಸಿ 13 ವರ್ಷ, ಪಿಡಬ್ಲ್ಯುಬಿಡಿ + ಎಸ್‌ಸಿ/ಎಸ್‌ಟಿ 15 ವರ್ಷಗಳ ಸಡಿಲಿಕೆ ಇದೆ.

ಅರ್ಜಿ ಶುಲ್ಕ

ಎಸ್‌ಸಿ/ಎಸ್‌ಟಿ/ವಿಶೇಷ ಚೇತನರು/ಎಲ್ಲ ವರ್ಗದ ಮಹಿಳೆಯರಿಗೆ ಶುಲ್ಕವಿಲ್ಲ. ಜನರಲ್‌/ಒಬಿಸಿ/ಇಡಬ್ಲ್ಯುಎಸ್‌ ಅಭ್ಯರ್ಥಿಗಳು 300 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕವೇ ಪಾವತಿಸಬೇಕು. ಇದಕ್ಕಾಗಿ ಡೆಬಿಟ್‌, ಕ್ರೆಡಿಟ್‌ ಕಾರ್ಡ್‌, ನೆಟ್‌ ಬ್ಯಾಂಕಿಂಗ್‌ ಬಳಸಬಹುದು.

ಆಯ್ಕೆ ವಿಧಾನ

ಆನ್‌ಲೈನ್‌ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಡಿಸೆಂಬರ್‌ 16 ಮತ್ತು 17ರಂದು ಪರೀಕ್ಷೆ ನಡೆಯಲಿದೆ. ಗಮನಿಸಿ ಪ್ರಶ್ನೆ ಪತ್ರಿಕೆ ಇಂಗ್ಲಿಷ್‌ ಮತ್ತು ಹಿಂದಿಯಲ್ಲಿ ಮಾತ್ರ ಲಭ್ಯ. ತಪ್ಪಾದ ಉತ್ತರಕ್ಕೆ ನೆಗೆಟಿವ್‌ ಅಂಕಗಳಿದ್ದು ಎಚ್ಚರಿಕೆಯಿಂದ ಉತ್ತರ ಬರೆಯಬೇಕು ಎಂದು ಪ್ರಕಟಣೆ ತಿಳಿಸಿದೆ. ಆಯ್ಕೆಯಾದವರಿಗೆ 35,400 ರೂ.-1,12,400 ರೂ. (ಟೆಕ್ನಿಕಲ್‌ ಅಸಿಸ್ಟೆಂಟ್‌ ), 19,900 ರೂ.-63,200 ರೂ. (ಟೆಕ್ನಿಶಿಯನ್) ಮಾಸಿಕ ವೇತನ ಸಿಗಲಿದೆ.

ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸುವ ಮುನ್ನ ನಿಮ್ಮ ವೆಬ್‌ ಕ್ಯಾಮ್‌ ಆನ್‌ ಮಾಡಿಡಿ.
  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
  • ಸೂಕ್ತ ಇಮೇಲ್‌ ಐಡಿ, ಫೋನ್‌ ನಂಬರ್‌ ನಮೂದಿಸಿ
  • ನೋಂದಣಿಯಾದ ಬಳಿಕ ಇಮೇಲ್‌/ಮೊಬೈಲ್‌ ನಂಬರ್‌ಗೆ ಯೂಸರ್‌ ನೇಮ್‌/ಅಪ್ಲಿಕೇಷನ್‌ ನಂಬರ್‌ ಬರಲಿದೆ
  • ಬಳಿಕ ಅಪ್ಲಿಕೇಷನ್‌ ಭರ್ತಿ ಮಾಡಿ. ಗಮನಿಸಿ ಒಮ್ಮೆ ನಮೂದಿಸಿದ ವಿವರಗಳನ್ನು ಎಡಿಟ್‌ ಮಾಡುವ ಆಯ್ಕೆಗಳಿಲ್ಲ. ಹೀಗಾಗಿ ಎಚ್ಚರಿಕೆಯಿಂದ ಅಪ್ಲಿಕೇಷನ್‌ ತುಂಬಿ
  • ಅಗತ್ಯವಾದ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ
  • ಅರ್ಜಿ ಶುಲ್ಕ ಪಾವತಿಸಿ
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ, ಸಂಶಯ ನಿವಾರಣೆಗೆ ಅಧಿಕೃತ ವೆಬ್‌ಸೈಟ್‌ https://niv.icmr.org.in/ಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಪದವೀಧರರಿಗೆ ಗುಡ್‌ನ್ಯೂಸ್‌; ಗೃಹ ಸಚಿವಾಲಯದ 995 ಹುದ್ದೆಗಳಿಗೆ ಅರ್ಜಿ ಆಹ್ವಾನ

Continue Reading

ಉದ್ಯೋಗ

Government employee : ಸರ್ಕಾರಿ ನೌಕರರ ದಶಕಗಳ ಬೇಡಿಕೆ ಈಡೇರಿಕೆ; ಆಸ್ತಿ ಖರೀದಿ ಮತ್ತಷ್ಟು ಸರಳ!

Government employee : ಈಗ ಸರ್ಕಾರಿ ಉದ್ಯೋಗಿಗಳು ಚರ/ ಸ್ಥಿರ ಆಸ್ತಿ ಖರೀದಿಗೆ ಮುಂಚೆ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯಬೇಕಿದೆ. ಈಗ ಈ ನಿಯಮವನ್ನು ಸಡಿಲಿಸಲು ಮುಂದಾಗಿದ್ದು, ಕಾಲಮಿತಿಯಲ್ಲಿ ಸಂಬಂಧಿಸಿದ ಪ್ರಾಧಿಕಾರಕ್ಕೆ ವರದಿ ಮಾಡುವಂತೆ ನಿಯಮ ತರಲು ಮುಂದಾಗಲಾಗಿದೆ.

VISTARANEWS.COM


on

Property Purchase by Government Employee
Koo

ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರಿ ನೌಕರಿಯಲ್ಲಿರುವವರು (Government Job) ಆಸ್ತಿ ಖರೀದಿ (Property Purchase) ಮಾಡಲು ಹರಸಾಹಸವನ್ನೇ ಪಡಬೇಕಿತ್ತು. ಆದರೆ, ರಾಜ್ಯ ಸರ್ಕಾರ ಈ ಸಮಸ್ಯೆಯನ್ನು ನಿವಾರಿಸಲು ಮುಂದಾಗಿದ್ದು, ಶೀಘ್ರದಲ್ಲಿಯೇ ಸರ್ಕಾರಿ ನೌಕರರ (Government employee) ಆಸ್ತಿ ಖರೀದಿ ಪ್ರಕ್ರಿಯೆಯನ್ನು ಸರಳೀಕರಿಸುವತ್ತ ಹೆಜ್ಜೆಯನ್ನಿಟ್ಟಿದೆ. ಈ ನಿಟ್ಟಿನಲ್ಲಿ ಆದೇಶ ಹೊರಬಿದ್ದಲ್ಲಿ ನೌಕರರ ದಶಕಗಳ ಬೇಡಿಕೆ ಈಡೇರಿದಂತೆ ಆಗಲಿದೆ.

ರಾಜ್ಯ ಮಟ್ಟದ ಜಂಟಿ ಸಮಾಲೋಚನಾ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಹೀಗಾಗಿ ಸರ್ಕಾರಿ ನೌಕರರಿಗೆ ಆಸ್ತಿ ಖರೀದಿ ವಿಚಾರದಲ್ಲಿ ಇದ್ದ ತೊಡಕು ಶೀಘ್ರವೇ ಪರಿಹಾರವಾಗಲಿದೆ.

ನಿಯಮ ಸಡಿಲಿಕೆಗೆ ತೀರ್ಮಾನ

ಸರ್ಕಾರಿ ನೌಕರರು ತಮ್ಮ ಸೇವಾವಧಿಯಲ್ಲಿ ಚರ/ ಸ್ಥಿರ ಆಸ್ತಿ ಖರೀದಿ ಮಾಡುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯಬೇಕು ಎಂಬ ನಿಯಮವು ಈಗಾಗಲೇ ಚಾಲ್ತಿಯಲ್ಲಿದೆ. ಈಗ ಈ ನಿಯಮವನ್ನು ಸಡಿಲಿಸಲು ತೀರ್ಮಾನ ಮಾಡಲಾಗಿದೆ. ಇದರ ಅನುಸಾರ ಕಾಲಮಿತಿಯಲ್ಲಿ ಸಂಬಂಧಿಸಿದ ಪ್ರಾಧಿಕಾರಕ್ಕೆ ವರದಿ ಮಾಡುವಂತೆ ಸರಳೀಕೃತ ನಿಯಮದಲ್ಲಿ ಬದಲಾವಣೆ ತರಲಾಗುತ್ತಿದೆ. ಈ ರೀತಿಯಾದರೆ ಸರ್ಕಾರಿ ನೌಕರರು ಸಂಬಂಧಿಸಿದ ಪ್ರಾಧಿಕಾರಕ್ಕೆ ವರದಿ ನೀಡಬೇಕಾಗುತ್ತದೆ.

ಆಸ್ತಿ ಮತ್ತು ಹೊಣೆಗಾರಿಕೆಗಳ ವಿವರ ಪಟ್ಟಿ

ಸರ್ಕಾರಿ ನೌಕರರ ಆಸ್ತಿ ಮತ್ತು ಹೊಣೆಗಾರಿಕೆಗಳ ವಿವರ ಪಟ್ಟಿಯನ್ನು ನಿಗದಿತ ಸಮಯಕ್ಕೆ ಸಲ್ಲಿಸಬೇಕು. ಈ ಬಗ್ಗೆ ಈಗಾಗಲೇ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು, 1996ರ ನಿಯಮಗಳು, ಪರಿಷ್ಕೃತವಾಗಿ ಕರ್ನಾಟಕ ರಾಜ್ಯ ನಾಗರಿಕ ನಾಗರಿಕ ಸೇವಾ (ನಡತೆ) ನಿಯಮಗಳು, 2021 ದಿನಾಂಕ 07/01/2021ರಿಂದ ಜಾರಿಗೆ ಬಂದಿವೆ. ಸದರಿ ನಿಯಮಗಳ ನಿಯಮ 24ರಲ್ಲಿ ಸರ್ಕಾರಿ ನೌಕರರು ಚರ/ ಸ್ಥಿರ ಆಸ್ತಿ ಖರೀದಿ/ ವಿಲೇ ಮಾಡುವುದಕ್ಕೆ ಸಂಬಂಧಿಸಿದಂತೆ ಉಪಬಂಧಗಳನ್ನು ಕಲ್ಪಿಸಲಾಗಿದೆ.

ನೇಮಕಾತಿಗೆ ಮೊದಲು ಸ್ಥಿರ – ಚರಾಸ್ತಿ ವಿವರ ನೀಡಬೇಕು

ಯಾವುದೇ ಸರ್ಕಾರಿ ನೌಕರಿಗೆ ನೇಮಕವಾದಾಗ ಆರಂಭದಲ್ಲಿಯೇ ಅವರು ತಮ್ಮ ಹೆಸರಿನಲ್ಲಿ ಇಲ್ಲವೇ ಕುಟುಂಬ ಸದಸ್ಯರ ಹೆಸರಿನಲ್ಲಾಗಲಿ ಅಥವಾ ತಮಗೆ ಸಂಬಂಧಪಟ್ಟ ಇತರ ವ್ಯಕ್ತಿಯ ಹೆಸರಿನಲ್ಲಿ ಪಿತ್ರಾರ್ಜಿತವಾಗಿ ಬಂದ ಸ್ವಯಂ ಅರ್ಜಿಸಿದ ಅಥವಾ ಗುತ್ತಿಗೆ ಅಥವಾ ಅಡಮಾನದ ಮೇಲೆ ಹೊಂದಿರುವ ಸ್ಥಿರಾಸ್ತಿಯ ಸಂಪೂರ್ಣ ವಿವರಗಳನ್ನು ನೀಡಬೇಕು. ಈ ವಿವರಗಳನ್ನು ನಿಗದಿತ ನಮೂನೆಯಲ್ಲಿ ಪೂರಕ ದಾಖಲೆಗಳೊಂದಿಗೆ ನೇಮಕವಾದ ಮೂರು ತಿಂಗಳೊಳಗೆ ಸಲ್ಲಿಸಬೇಕು.

ವರ್ಷವೂ ನೀಡಬೇಕು ದಾಖಲೆ

ಇದರ ಹೊರತಾಗಿಯೂ ಸರ್ಕಾರಿ ನೌಕರರು ಪ್ರತಿ ವರ್ಷ ಡಿಸೆಂಬರ್ 31ಕ್ಕೆ ತಮ್ಮ ಹಾಗೂ ಕುಟುಂಬದ ಎಲ್ಲ ಸದಸ್ಯರ ಆಸ್ತಿ ವಿವರ ಮತ್ತು ಹೊಣೆಗಾರಿಕೆಗಳ ವಾರ್ಷಿಕ ವಿವರ ಪಟ್ಟಿಯನ್ನು ನೀಡಬೇಕು. ಜತೆಗೆ ನಿಯಮ 24 ರಲ್ಲಿನ ಉಪಬಂಧಗಳಂತೆ ಪ್ರತಿಯೊಬ್ಬ ಸರ್ಕಾರಿ ನೌಕರರು ಚರ ಮತ್ತು ಸ್ಥಿರಾಸ್ತಿಗೆ ಸಂಬಂಧಿಸಿದಂತೆ ನಿಯಮಗಳಲ್ಲಿ ತಿಳಿಸಿರುವ ಸಂದರ್ಭಗಳಲ್ಲಿ ಅನುಮತಿ ಪಡೆಯುವುದು ಹಾಗೂ ವರದಿ ನೀಡುವುದು ಕಡ್ಡಾಯವಾಗಿದೆ. ಒಂದು ವೇಳೆ ಇದರಲ್ಲಿ ವಿಫಲರಾದರೆ, ನಡತೆ ನಿಯಮಗಳಿಗೆ ವ್ಯತಿರಿಕ್ತ ನಡವಳಿಕೆ ಪ್ರದರ್ಶಿಸಿದ ಕಾರಣ ನೀಡಿ ಅಂಥವರ ವಿರುದ್ಧ ಶಿಸ್ತು ಕ್ರಮ ಜರುಗಿಸಬಹುದಾಗಿದೆ.

ಇದನ್ನೂ ಓದಿ: Panic button : ಇಂದಿನಿಂದ ವಾಹನಗಳಿಗೆ ಪ್ಯಾನಿಕ್ ಬಟನ್ ಕಡ್ಡಾಯ; ಅಳವಡಿಸಲು ಆಗುವ ಖರ್ಚೆಷ್ಟು?

ಸಭೆಯ ಇತರ ಪ್ರಮುಖ ನಿರ್ಧಾರಗಳು

  • ಎಲ್ಲ ಇಲಾಖೆಗಳಲ್ಲಿ ಪ್ರತಿ ವರ್ಷ ಮೊದಲ ತಿಂಗಳಿಲ್ಲಿ ಜ್ಯೇಷ್ಠತಾ ಪಟ್ಟಿಯನ್ನು ತಯಾರಿಸಿ ಪ್ರತಿ ಆರು ತಿಂಗಳಿಗೊಮ್ಮೆ ಮುಂಬಡ್ತಿ ಕೋಟಾದಡಿ ಹುದ್ದೆಗಳನ್ನು ಗುರುತಿಸಿ ಪದೋನ್ನತಿ ನೀಡುವುದು.
  • ಲೋಕ ಅದಾಲತ್ ಮಾದರಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ಕಾಲಮಿತಿಯಲ್ಲಿ ನೌಕರರ ಇಲಾಖಾ ವಿಚಾರಣೆಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ನಿರ್ಧರಿಸಲಾಗಿದೆ.
  • ಸರ್ಕಾರಿ ನೌಕರರು ಪಾಸ್‌ಪೋರ್ಟ್‌ಗಳ ನಿರಾಕ್ಷೇಪಣಾ ಪ್ರಮಾಣ ಪತ್ರವನ್ನು ಸಂಬಂಧಿಸಿದ ಕಛೇರಿಯ ಮುಖ್ಯಸ್ಥರಿಂದ ಪಡೆಯುವ ಅವಕಾಶವನ್ನು ಜಾರಿಗೆ ತರುವುದು.
  • ಜಿಪಿಎಫ್ ಉಳಿತಾಯ ಖಾತೆಗಳಿಂದ ಮುಂಗಡ/ ಭಾಗಶಃ ವಾಪಸಾತಿ ಪಡೆಯುವ ಸಂದರ್ಭದಲ್ಲಿ ಇದ್ದ ಕಠಿಣ ನಿಯಮವನ್ನು ಸರಳೀಕರಣಗೊಳಿಸುವುದು.
Continue Reading

ಉದ್ಯೋಗ

PLI Scheme: ನಿರುದ್ಯೋಗಿಗಳಿಗೆ ಗುಡ್‌ನ್ಯೂಸ್‌; ಮೊಬೈಲ್ ಉತ್ಪಾದನಾ ಉದ್ಯಮದಲ್ಲಿ 5 ಲಕ್ಷ ಉದ್ಯೋಗ ಸೃಷ್ಟಿ

PLI Scheme: ಪ್ರೊಡಕ್ಷನ್‌ ಲಿಂಕ್ಡ್‌ ಇನ್‌ಸೆಂಟಿವ್‌ (Production-linked incentive) ಯೋಜನೆಯು (PLI Scheme) ಮೊಬೈಲ್ ಫೋನ್ ಉತ್ಪಾದನಾ ಉದ್ಯಮದಲ್ಲಿ 5,00,000 ಉದ್ಯೋಗಗಳ ಸೃಷ್ಟಿಗೆ ಕಾರಣವಾಗಲಿದೆ ಎಂದು ಕೇಂದ್ರ ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

VISTARANEWS.COM


on

ashwin
Koo

ನೋಯ್ಡಾ: ಪ್ರೊಡಕ್ಷನ್‌ ಲಿಂಕ್ಡ್‌ ಇನ್‌ಸೆಂಟಿವ್‌ (Production-linked incentive) ಯೋಜನೆಯು (PLI Scheme) ಮೊಬೈಲ್ ಫೋನ್ ಉತ್ಪಾದನಾ ಉದ್ಯಮದಲ್ಲಿ 5,00,000 ಉದ್ಯೋಗಗಳ ಸೃಷ್ಟಿಗೆ ಕಾರಣವಾಗಲಿದೆ ಎಂದು ಕೇಂದ್ರ ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ (Union communications, electronics, and information technology minister Ashwini Vaishnaw) ಭರವಸೆ ವ್ಯಕ್ತಪಡಿಸಿದ್ದಾರೆ. ಉತ್ಪಾದನಾ ವಲಯವನ್ನು ಉತ್ತೇಜಿಸುವ ಮತ್ತು ಆಮದನ್ನು ಕಡಿಮೆ ಮಾಡುವ ಗುರಿಯನ್ನು ಭಾರತ ಸರ್ಕಾರದ ಪ್ರೊಡಕ್ಷನ್ ಲಿಂಕ್ಡ್ ಇನ್ಸೆಂಟಿವ್ ಯೋಜನೆ ಹೊಂದಿದೆ.

ನೋಯ್ಡಾದ ಡಿಕ್ಸನ್ ಟೆಕ್ನಾಲಜೀಸ್ (Dixon Technologies’) ಉತ್ಪಾದನಾ ಘಟಕಕ್ಕೆ ಭೇಟಿ ನೀಡಿದ ಅವರು, ʼʼಭಾರತದಲ್ಲಿ ಬಳಸಲಾಗುವ ಮೊಬೈಲ್ ಫೋನ್‌ಗಳ ಪೈಕಿ ಶೇ. 99.2ರಷ್ಟು ಇಲ್ಲೇ ತಯಾರಾಗಿವೆʼʼ ಎಂದು ಹೇಳಿದ್ದಾರೆ. ಡಿಕ್ಸನ್ ಟೆಕ್ನಾಲಜೀಸ್‌ನ ಅಂಗಸಂಸ್ಥೆ ಪ್ಯಾಡ್ಜೆಟ್ ಎಲೆಕ್ಟ್ರಾನಿಕ್ಸ್ ಶಿಯೋಮಿಗಾಗಿ ಸ್ಮಾರ್ಟ್‌ಫೋನ್‌ ಮತ್ತು ಇತರ ಸಂಬಂಧಿತ ಉತ್ಪನ್ನಗಳನ್ನು ತಯಾರಿಸಲಿದೆ. ನೋಯ್ಡಾದ 2.7 ಲಕ್ಷ ಚದರ ಅಡಿ ಉತ್ಪಾದನಾ ಸ್ಥಳದಲ್ಲಿ 256 ಕೋಟಿ ರೂ. ವೆಚ್ಚದಲ್ಲಿ ಈ ಘಟಕ ಕಾರ್ಯ ನಿರ್ವಹಿಸಲಿದೆ. ಇಲ್ಲಿ ವಾರ್ಷಿಕವಾಗಿ 2,5,000,000 ಮೊಬೈಲ್‌ ಫೋನ್‌ ಉತ್ಪಾದನೆಯಾಗಲಿದೆ.

ಮುಂದಿನ 10-12 ತಿಂಗಳಲ್ಲಿ ಈ ಘಟಕ ಸಂಪೂರ್ಣವಾಗಿ ಕಾರ್ಯನಿರ್ವಹಿಸಿದ ನಂತರ ಕಂಪನಿಯು ವಾರ್ಷಿಕ 5,0,000,000 ಯುನಿಟ್ ಉತ್ಪಾದನಾ ಸಾಮರ್ಥ್ಯದ ಮತ್ತೊಂದು ಘಟಕ ಸ್ಥಾಪಿಸಲಿದೆ ಎಂದು ಎಂದು ಡಿಕ್ಸನ್ ಕಾರ್ಯನಿರ್ವಾಹಕ ಅಧ್ಯಕ್ಷ ಸುನಿಲ್ ವಚಾನಿ ಹೇಳಿದ್ದಾರೆ. “ಅಲ್ಲಿ ನಾವು ಕಂಪ್ಯೂಟರ್ ಹಾರ್ಡ್‌ವೇರ್‌ನಂತಹ ಇತರ ಉತ್ಪನ್ನಗಳನ್ನು ತಯಾರಿಸಲಿದ್ದೇವೆʼʼ ಎಂದು ಅವರು ತಿಳಿಸಿದ್ದಾರೆ.

ಕಂಪ್ಯೂಟರ್ ಹಾರ್ಡ್‌ವೇರ್‌ ತಯಾರಿಸಲು ಮತ್ತು ಜೋಡಿಸಲು ಅನುಮತಿ ನೀಡುವಂತೆ ಪ್ಯಾಡ್ಜೆಟ್ ಸಲ್ಲಿಸಿದ್ದ ಅರ್ಜಿಯನ್ನು ಕಳೆದ ತಿಂಗಳು ಪಿಎಲ್ಐ 2.0 ಅಡಿಯಲ್ಲಿ ಅನುಮೋದಿಸಲಾಗಿತ್ತು. ಇದು ಚೀನಾದ ಕಂಪ್ಯೂಟರ್ ದೈತ್ಯ ಲೆನೊವೊಗೆ ಬಿಡಿಭಾಗಗಳನ್ನು ತಯಾರಿಸಿ ಕೊಡಲಿದೆ.

ʼʼಮೊಬೈಲ್ ಬಿಡಿಭಾಗಗಳ ಉತ್ಪಾದನೆಯಲ್ಲಿ ದೇಶೀಯ ಮೌಲ್ಯವರ್ಧನೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆʼʼ ಎಂದು ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. “ಇದೀಗ 12 ಬಿಲಿಯನ್ ಯುಎಸ್ ಡಾಲರ್ ಮೌಲ್ಯದ ಸರಕುಗಳನ್ನು ರಫ್ತು ಮಾಡಲಾಗುತ್ತಿದೆ. ಇದು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. 2022ರಲ್ಲಿ ಇದರ ಮೌಲ್ಯ 11.1 ಬಿಲಿಯನ್ ಅಮೆರಿಕನ್ ಡಾಲರ್ ಆಗಿತ್ತುʼʼ ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿ: ಸಿಬಿಎಸ್‌ಇ 10, 12 ತರಗತಿ ಪರೀಕ್ಷೆಗೆ ಡಿವಿಷನ್, ಡಿಸ್ಟಿಂಕ್ಷನ್ ಘೋಷಣೆ ಇಲ್ಲ!

ಸೈಬರ್‌ ಕ್ರೈಮ್‌ ವಿರುದ್ಧ ಕ್ರಮ

ಇದೇ ವೇಳೆ ಸೈಬರ್‌ ಕ್ರೈಮ್‌ ಬಗ್ಗೆ ಮಾತನಾಡಿದ ಸಚಿವರು, ʼʼಸೈಬರ್‌ ಕ್ರೈಮ್‌ಗೆ ಸಂಬಂಧಿಸಿದಂತೆ ಇತ್ತೀಚೆಗೆ 350ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ. ನಾವು ಆರ್‌ಬಿಐ (ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ) ಜತೆಗೆ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ. ಹೀಗಾಗಿ ಸೈಬರ್ ಅಪರಾಧಗಳ ಸಂಖ್ಯೆ ಕುಸಿದಿದೆ. ಮುಂದಿನ ಕೆಲವು ತಿಂಗಳಲ್ಲಿ ಇನ್ನೂ ಗಣನೀಯವಾಗಿ ಕಡಿಮೆಯಾಗಲಿವೆʼʼ ಎಂದು ಅಶ್ವಿನಿ ವೈಷ್ಣವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಡಿಜಿಟಲ್ ಗುಪ್ತಚರ ಪ್ಲಾಟ್‌ಫಾರ್ಮ್‌ ಮೂಲಕ ವರದಿಯಾದ ಸೈಬರ್ ಅಪರಾಧ ಮತ್ತು ಹಣಕಾಸು ವಂಚನೆಗಳಲ್ಲಿ ಭಾಗಿಯಾಗಿರುವ ಏಳು ಮಿಲಿಯನ್ (70,00000) ಮೊಬೈಲ್ ಸಂಪರ್ಕಗಳನ್ನು ಕಡಿತಗೊಳಿಸಲಾಗಿದೆ ಎಂದು ಹಣಕಾಸು ಸಚಿವಾಲಯ ಇತ್ತೀಚೆಗೆ ತಿಳಿಸಿತ್ತು

Continue Reading

ಉದ್ಯೋಗ

Job Alert: ದ್ವಿತೀಯ ಪಿಯುಸಿ ಪಾಸಾದವರಿಗೆ ಗೋಲ್ಡನ್‌ ಚಾನ್ಸ್‌; 540 ಫಾರೆಸ್ಟ್‌ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

Job Alert: ದ್ವಿತೀಯ ಪಿಯುಸಿ ಪಾಸಾದವರಿಗೆ ಗುಡ್‌ನ್ಯೂಸ್‌. ಖಾಲಿ ಇರುವ ಸುಮಾರು 540 ಫಾರೆಸ್ಟ್‌ ಗಾರ್ಡ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್‌ 30ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.

VISTARANEWS.COM


on

forest guard
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಉತ್ತಮ ಅವಕಾಶವನ್ನು ಕರ್ನಾಟಕ ಅರಣ್ಯ ಇಲಾಖೆ (Karnataka Forest Department-KFD) ಒದಗಿಸುತ್ತಿದೆ. ಖಾಲಿ ಇರುವ ಸುಮಾರು 540 ಫಾರೆಸ್ಟ್‌ ಗಾರ್ಡ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (KFD Recruitment 2023). ಆಸಕ್ತರು ಡಿಸೆಂಬರ್‌ 30ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. 12ನೇ ತರಗತಿ ಅಥವಾ ದ್ವಿತೀಯ ಪಿಯುಸಿ ತೇರ್ಗಡೆಯಾದವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು (Job Alert).

ಹುದ್ದೆಗಳ ವಿವರ

ವಿವಿಧ ವೃತ್ತಗಳು ಮತ್ತು ಅಲ್ಲಿ ಖಾಲಿ ಇರುವ ಹುದ್ದೆಗಳ ಸಂಖ್ಯೆಯ ವಿವರ ಇಲ್ಲಿದೆ. ಬೆಂಗಳೂರು-49, ಬೆಳಗಾವಿ-12, ಬಳ್ಳಾರಿ-29, ಚಾಮರಾಜನಗರ-83, ಚಿಕ್ಕಮಗಳೂರು-52, ಧಾರವಾಡ-5, ಹಾಸನ-18, ಕಲಬುರ್ಗಿ-58, ಕೆನರಾ-33, ಕೊಡಗು-26, ಮಂಗಳೂರು-62, ಮೈಸೂರು-47, ಶಿವಮೊಗ್ಗ-66 ಹುದ್ದೆಗಳಿವೆ.

ವಯೋಮಿತಿ

ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 30, 2023ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು ಮತ್ತು ಗರಿಷ್ಠ 35 ವರ್ಷ ಮೀರಿರಬಾರದು. ಮೀಸಲಾತಿಗೆ ಅನುಗುಣವಾಗಿ ಸಡಿಲಿಕೆ ಲಭ್ಯ. 2ಎ, 2ಬಿ, 3ಎ, 3ಬಿ, ಒಬಿಸಿ ಅಭ್ಯರ್ಥಿಗಳಿಗೆ 2 ವರ್ಷ ಮತ್ತು ಎಸ್‌ಸಿ/ಎಸ್‌ಟಿ/ಪ್ರವರ್ಗ-1 ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ಇದೆ.

ಅರ್ಜಿ ಶುಲ್ಕ ಮತ್ತು ಮಾಸಿಕ ವೇತನ

ಸಾಮಾನ್ಯ ಅಭ್ಯರ್ಥಿಗಳು 200 ರೂ. ಮತ್ತು ಎಸ್‌ಸಿ/ಎಸ್‌ಟಿ/ಪ್ರವರ್ಗ-1 ಅಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಲಿಖಿತ ಪರೀಕ್ಷೆ, ಸಂದರ್ಶನ ಮತ್ತು ಮೆಡಿಕಲ್ ಫಿಟ್​​ನೆಸ್​ ಟೆಸ್ಟ್​ ಮೂಲಕ ಆಯ್ಕೆ ನಡೆಯಲಿದೆ. ಲಿಖಿತ ಪರೀಕ್ಷೆ ಆಪ್ಟಿಟ್ಯೂಡ್‌ ಮಾದರಿಯದ್ದಾಗಿದ್ದು, 100 ಅಂಕಗಳನ್ನು ಹೊಂದಿದೆ. ಗಣಿತದ 40 ಅಂಕದ ಪ್ರಶ್ನೆ ಮತ್ತು ಸಾಮಾನ್ಯ ಜ್ಞಾನದ 60 ಅಂಕಗಳ ಪ್ರಶ್ನೆಗಳನ್ನು ಇದು ಒಳಗೊಂಡಿದೆ. ಪ್ರಶ್ನೆ ಪತ್ರಿಕೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿರುತ್ತದೆ. ತಪ್ಪು ಉತ್ತರಕ್ಕೆ ನೆಗೆಟಿವ್‌ ಅಂಕವಿದ್ದು, ಎಚ್ಚರಿಕೆಯಿಂದ ಉತ್ತರ ಬರೆಯಬೇಕು ಎಂದು ಪ್ರಕಟಣೆ ತಿಳಿಸಿದೆ. ಆಯ್ಕೆಯಾದವರಿಗೆ ಮಾಸಿಕ ವೇತನ 18,600 ರೂ.-32,600 ರೂ. ನೀಡಲಾಗುತ್ತದೆ. ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿ ಶುಲ್ಕ ಪಾವತಿಸಬೇಕು. ಇದನ್ನು ಹೊರತುಪಡಿಸಿ ನೇರವಾಗಿ/ಕೊರಿಯರ್‌/ನೋಂದಾಯಿತ ಅಂಚೆ/ಸಾಧಾರಣ ಅಂಚೆ/ಇಮೇಲ್ ಇತ್ಯಾದಿ ವಿಧಾನಗಳ ಮೂಲಕ ಅರ್ಜಿ ಶುಲ್ಕ ಪಾವತಿಸುವಂತಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓಇ: Job Alert: ಉದ್ಯೋಗ ಹುಡುಕುತ್ತಿರುವವರಿಗೆ ಗುಡ್‌ನ್ಯೂಸ್‌; ಸಿಐಎಸ್‌ಎಫ್‌ನಲ್ಲಿದೆ 11,025 ಹುದ್ದೆ

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
  • ಆಗ ತೆರೆದುಕೊಳ್ಳುವ ಮುಖಪುಟದಲ್ಲಿನ ನೇಮಕಾತಿ ಎನ್ನುವ ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಸೂಚನೆಗಳನ್ನು ಸರಿಯಾಗಿ ಓದಿ ಅರ್ಜಿಯನ್ನು ಭರ್ತಿ ಮಾಡಿ.
  • ಗಮನಿಸಿ; ಅಭ್ಯರ್ಥಿಗಳು ಸ್ವಂತ ಆಧಾರ್‌ ಕಾರ್ಡ್‌ ನಂಬರ್‌ ಮಾತ್ರ ಒದಗಿಸಬೇಕು. ಬೇರೆಯವರ ಆಧಾರ್‌ ನಂಬರ್‌ ಒದಗಿಸಿರುವುದು ಕಂಡುಬಂದರೆ ಅಂತಹವರ ಅರ್ಜಿ ತಿರಸ್ಕೃತಗೊಳ್ಳಲಿದೆ.
  • ಅಗತ್ಯವಾದ ಡಾಕ್ಯಮೆಂಟ್‌ ಅಪ್‌ಲೋಡ್‌ ಮಾಡಿ
  • ಅರ್ಜಿ ಶುಲ್ಕ ಪಾವತಿಸಿ
  • ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದನ್ನು ಖಚಿತಪಡಿಸಿ ಅರ್ಜಿ ಸಲ್ಲಿಸಿ
  • ಭರ್ತಿ ಮಾಡಿದ ಆನ್‌ಲೈನ್‌ ಅರ್ಜಿಯ ಪ್ರಿಂಟ್‌ ಔಟ್‌ ತೆಗೆದಿಡಿ

ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ https://aranya.gov.inಗೆ ಭೇಟಿ ನೀಡಿ.

Continue Reading
Advertisement
Rajastan Elections: 10 reasons for BJP Win
ದೇಶ3 mins ago

Rajastan Elections 2023 : ರಾಜಸ್ಥಾನದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ; ದಿಗ್ವಿಜಯಕ್ಕೆ 10 ಕಾರಣ

raman singh bhupesh baghel
ದೇಶ4 mins ago

Election Result 2023: ಛತ್ತೀಸ್‌ಗಢದಲ್ಲಿ ಸುಳ್ಳಾದ ಎಕ್ಸಿಟ್‌ ಪೋಲ್‌, ಗೆಲುವಿನತ್ತ ಬಿಜೆಪಿ ದಾಪುಗಾಲು

Ration card not cancelled and Vidhanasoudha
ಕರ್ನಾಟಕ16 mins ago

Ration Card : ಆರು ತಿಂಗಳಿಂದ ರೇಷನ್‌ ಪಡೆದಿಲ್ಲವೇ? ನಿಮ್ಮ ಕಾರ್ಡ್‌ ರದ್ದಾಗುವ ಭಯ ಬೇಡ! ಆದರೆ..?

Sachin Tendulkar says he is super impressed by Vicky Kaushal
ಕ್ರಿಕೆಟ್25 mins ago

Sachin Tendulkar: ವಿಕ್ಕಿ ಕೌಶಲ್‌ ಸಿನಿಮಾ ಕಂಡು ʻಸೂಪರ್ ಇಂಪ್ರೆಸ್ಡ್ʼ ಆದ ಸಚಿನ್ ತೆಂಡೂಲ್ಕರ್‌!

Crime Sense Murder Case
ಕರ್ನಾಟಕ51 mins ago

Murder Case : ವ್ಯಕ್ತಿಯ ತಲೆ ಸೀಳಿ ಮೋರಿಗೆ ಶವ ಎಸೆದ ಹಂತಕರು!

election five states
ದೇಶ56 mins ago

Election Results 2023: ಲೋಕಸಭೆ 65 ಸ್ಥಾನಗಳ ಮೇಲೆ ಇದೀಗ ಬಿಜೆಪಿ ಹಿಡಿತ! ಮೋದಿ ಹಾದಿ ಸುಲಭ!

Police call off protest FIR against lawyer who slapped police
ಕರ್ನಾಟಕ1 hour ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Shivraj Singh Chouhan
ದೇಶ1 hour ago

Ladli Behna: ಚೌಹಾಣ್‌ ‘ಗ್ಯಾರಂಟಿ’ಗೆ ಜೈ ಎಂದ ಮಧ್ಯಪ್ರದೇಶ ಜನ;‌ ಏನಿದು ಲಾಡ್ಲಿ ಬೆಹ್ನಾ?

Bobby Deol cries after paparazzi praise him as Animal
ಬಾಲಿವುಡ್1 hour ago

Bobby Deol: ʻಅನಿಮಲ್‌ʼ ಸಕ್ಸೆಸ್‌ ಹೊಗಳಿಕೆಗೆ ಕಣ್ಣೀರಿಟ್ಟ ನಟ ಬಾಬಿ ಡಿಯೋಲ್

R Ashok
ಕರ್ನಾಟಕ1 hour ago

Election Results 2023 : ತೆಲಂಗಾಣ ಶಾಸಕರನ್ನು ರೆಸಾರ್ಟ್‌ಗೆ ಕರೆತಂದು ಸೇವೆ ಮಾಡಿದ್ರೆ ಉಗ್ರ ಪ್ರತಿಭಟನೆ; ಆರ್.‌ ಅಶೋಕ್

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ1 month ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Police call off protest FIR against lawyer who slapped police
ಕರ್ನಾಟಕ1 hour ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ8 hours ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ20 hours ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ2 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ2 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ3 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ3 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಈ ರಾಶಿಯವರಿಗೆ ಬೇಸರ ತರಲಿದೆ ಸಂಗಾತಿಯ ಕಹಿ ಮಾತು

ಟ್ರೆಂಡಿಂಗ್‌