SBI PO Recruitment 2022 | 1,673 ಪ್ರೊಬೇಷನರಿ ಆಫೀಸರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ - Vistara News

ಉದ್ಯೋಗ

SBI PO Recruitment 2022 | 1,673 ಪ್ರೊಬೇಷನರಿ ಆಫೀಸರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) 1,673 ಪ್ರೊಬೇಷನರಿ ಆಫೀಸರ್‌ ಹುದ್ದೆಗಳಿಗೆ ನೇಮಕ (SBI PO Recruitment 2022) ಮಾಡಿಕೊಳ್ಳುತ್ತಿದ್ದು, ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕದ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

SBI PO Recruitment 2022
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೇಶದ ಅತಿದೊಡ್ಡ ರಾಷ್ಟ್ರೀಕೃತ ಬ್ಯಾಂಕ್‌ ಆದ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಪ್ರೊಬೇಷನರಿ ಆಫೀಸರ್‌ (PO) ಹುದ್ದೆಗಳ ನೇಮಕಕ್ಕೆ (SBI PO Recruitment 2022) ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅರ್ಜಿ ಸಲ್ಲಿಸಲು ಅಕ್ಟೋಬರ್‌ 12 ಕೊನೆಯ ದಿನವಾಗಿರುತ್ತದೆ. ಆನ್‌ಲೈನ್‌ನಲ್ಲಿಯೇ ಅರ್ಜಿ ಶುಲ್ಕವನ್ನೂ ಪಾವತಿಸಬಹುದಾಗಿರುತ್ತದೆ.

ಈ ಬಾರಿ ಒಟ್ಟು 1,673 ಹುದ್ದೆಗಳಿಗೆ ನೇಮಕ ನಡೆಯಲಿದ್ದು, ಈ ಹುದ್ದೆಗಳಲ್ಲಿ ಎಸ್‌ಸಿ ಅಭ್ಯರ್ಥಿಗಳಿಗೆ 270, ಎಸ್‌ಟಿ ಅಭ್ಯರ್ಥಿಗಳಿಗೆ 131, ಒಬಿಸಿ ಅಭ್ಯರ್ಥಿಗಳಿಗೆ 464 ಹಾಗೂ ಇಡಬ್ಲ್ಯುಎಸ್‌ ಅಭ್ಯರ್ಥಿಗಳಿಗೆ 160 ಹುದ್ದೆಗಳನ್ನು ಮೀಸಲಿಡಲಾಗಿದೆ. ಉಳಿದ 648 ಹುದ್ದೆಗಳು ಸಾಮಾನ್ಯ ಅಭ್ಯರ್ಥಿಗಳಿಗೆ ದೊರೆಯಲಿವೆ.

ನೇಮಕಾತಿಯ ವೇಳಾಪಟ್ಟಿ ಇಂತಿದೆ;

SBI PO Recruitment 2022

ಅರ್ಹತೆಗಳೇನು?
ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಪದವಿಯ ಅಂತಿಮ ವರ್ಷದಲ್ಲಿ ಓದುತ್ತಿರುವ ಅಭ್ಯರ್ಥಿಗಳೂ ಅರ್ಜಿ ಸಲ್ಲಿಸಬಹುದಾಗಿದ್ದು, ಅವರು 31-12-2022ರ ಒಳಗೆ ಪದವಿ ಪಡೆದಿರುವ ದಾಖಲೆಯನ್ನು ಸಂದರ್ಶನದ ಸಂದರ್ಭದಲ್ಲಿ ಹಾಜರು ಪಡಿಸಬೇಕಿರುತ್ತದೆ.

ವಯೋಮಿತಿ: 21 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ವಯೋಮಿತಿಯನ್ನು ದಿನಾಂಕ 01-04-2022 ಕ್ಕೆ ಲೆಕ್ಕ ಹಾಕಲಾಗುತ್ತದೆ. ಗರಿಷ್ಠ ವಯೋಮಿತಿಯಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ನೀಡಲಾಗಿರುತ್ತದೆ.

ಅರ್ಜಿ ಸಲ್ಲಿಸಲು ಲಿಂಕ್‌ : https://ibpsonline.ibps.in/sbiposep22/

ಕನ್ನಡದಲ್ಲಿ ನಡೆಯಲ್ಲ ಪರೀಕ್ಷೆ
ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಜೂನಿಯರ್‌ ಅಸೋಸಿಯೇಟ್ಸ್‌ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ (ಪ್ರಿಲಿಮ್ಸ್‌) ಮತ್ತು ಮುಖ್ಯ ಪರೀಕ್ಷೆ (ಮೇನ್‌)ಯನ್ನು ನಡೆಸಿ ನೇಮಕ ಮಾಡಿಕೊಳ್ಳುವಾಗ ಕನ್ನಡ ಭಾಷೆಯಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ನೀಡುತ್ತದೆ. ಆದರೆ ಪ್ರೊಬೇಷನರಿ ಆಫೀಸರ್‌ ಹುದ್ದೆಗಳಿಗೆ ನಡೆಸಲಾಗುವ ಪೂರ್ವಭಾವಿ ಪರೀಕ್ಷೆ (ಪ್ರಿಲಿಮ್ಸ್‌) ಮತ್ತು ಮುಖ್ಯ ಪರೀಕ್ಷೆ (ಮೇನ್‌)ಯನ್ನು ಕನ್ನಡದಲ್ಲಿ ನಡೆಸಲಾಗುವುದಿಲ್ಲ. ಅಲ್ಲದೆ ರಾಜ್ಯದಲ್ಲಿನ ಹುದ್ದೆಗಳ ಸಂಖ್ಯೆಯನ್ನೂ ಪ್ರಕಟಿಸಿರುವುದಿಲ್ಲ.
ರಾಜ್ಯದ ಬೆಳಗಾವಿ, ಬೆಂಗಳೂರು, ಬೀದರ್‌, ದಾವಣಗೆರೆ, ಧಾರವಾಡ, ಕಲಬುರಗಿ, ಹಾಸನ, ಹುಬಳ್ಳಿ, ಮಂಡ್ಯ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ಪರೀಕ್ಷಾ ಕೇಂದ್ರ ಇರಲಿದೆ. ಮುಖ್ಯ ಪರೀಕ್ಷೆಯನ್ನು ಬೆಂಗಳೂರಿನಲ್ಲಿ ಮಾತ್ರ ನಡೆಸಲಾಗುತ್ತದೆ.

ಅರ್ಜಿ ಶುಲ್ಕ ಎಷ್ಟು?: ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯುಎಸ್‌ ಅಭ್ಯರ್ಥಿಗಳಿಗೆ 750 ರೂ.ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಆನ್‌ಲೈನ್‌ನಲ್ಲಿಯೇ ಶುಲ್ಕ ಪಾವತಿಸಬಹುದಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿರುತ್ತದೆ.

ವೇತನ ಶ್ರೇಣಿ: ಬೇಸಿಕ್‌ ವೇತನ 41,960 ರೂ. ಗಳಾಗಿದ್ದು, ವೇತನ ಶ್ರೇಣಿ ಇಂತಿದೆ: ರೂ.36,000-14,90/7-46,430-1,740/2-49,910-1,990/7-63,840. ಇದಲ್ಲದೆ, ಡಿಎ/ಎಚ್‌ಆರ್‌ಎ, ಮೆಡಿಕಲ್‌ ಇನ್ನಿತರ ಭತ್ಯೆಗಳೂ ಇರುತ್ತವೆ.

ಹೆಚ್ಚಿನ ಮಾಹಿತಿಗೆ ವೆಬ್‌ ಸೈಟ್‌: https://sbi.co.in/web/careers/current-openings

ನೇಮಕ ಹೇಗೆ?
ಮೂರು ಹಂತದ ನೇಮಕ ಪ್ರಕ್ರಿಯೆ ಮೂಲಕ ಈ ಹುದ್ದೆಗಳಿಗೆ ನೇಮಕ ನಡೆಯಲಿದೆ. ಮೊದಲಿಗೆ ಪೂರ್ವಭಾವಿ ಪರೀಕ್ಷೆ ನಡೆಸಲಾಗುತ್ತದೆ, ಇದರಲ್ಲಿ ಅರ್ಹತೆ ಪಡೆದವರಿಗೆ ಮೂಖ್ಯ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಮೂರನೇ ಹಂತದಲ್ಲಿ ನಡೆಯಲಿರುವ ಗುಂಪು ಚರ್ಚೆ ಮತ್ತು ಸಂದರ್ಶನಕ್ಕೆ ಅಭ್ಯರ್ಥಿಗಳನ್ನು ಆಹ್ವಾನಿಸಲಾಗುತ್ತದೆ. ಮುಖ್ಯ ಪರೀಕ್ಷೆ ಮತ್ತು ಗುಂಪು ಚರ್ಚೆ ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಇದನ್ನೂ ಓದಿ | SBI Recruitment 2022 | ಎಸ್‌ಬಿಐನಿಂದ 5,008 ಜೂನಿಯರ್‌ ಅಸೋಸಿಯೇಟ್ಸ್‌ ಹುದ್ದೆಗಳಿಗೆ ನೇಮಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ 54 ಹುದ್ದೆ; ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

Job Alert: ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 54 ಸ್ಥಾನಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಕೊನೆಯ ದಿನ ನಾಳೆ (ಮೇ 24). ಬಿಸಿಎ, ಬಿ.ಎಸ್‌ಸಿ, ಬಿ.ಇ. ಅಥವಾ ಬಿ.ಟೆಕ್‌, ಎಂಸಿಎ ಪದವಿ ಪಡೆದವರು ಈ ಸುವರ್ಣಾವಕಾಶ ಬಳಸಿಕೊಳ್ಳಿ.

VISTARANEWS.COM


on

Job Alert
Koo

ಬೆಂಗಳೂರು: ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ (India Post Payments Bank) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IPPB Recruitment 2024). ಇನ್ಫರ್ಮೇಷನ್‌ ಟೆಕ್ನಾಲಜಿ ಎಕ್ಸಿಕ್ಯೂಟಿವ್‌ ಹುದ್ದೆ ಇದಾಗಿದ್ದು, ಒಟ್ಟು 54 ಸ್ಥಾನಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಉದ್ಯೋಗದ ಸ್ಥಳ: ಚೆನ್ನೈ, ಮುಂಬೈ, ದೆಹಲಿ. ಬಿಸಿಎ, ಬಿಎಸ್‌ಸಿ ಓದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ನಾಳೆಯೇ (ಮೇ 24) ಕೊನೆಯ ದಿನ (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಕ್ಸಿಕ್ಯೂಟಿವ್‌ (ಅಸೋಸಿಯೇಟ್‌ ಕನ್ಸಲ್‍ಟೆಂಟ್‍) (Executive (Associate Consultant)- 28, ಎಕ್ಸಿಕ್ಯೂಟಿವ್‌ (ಕನ್ಸಲ್‍ಟೆಂಟ್‍) (Executive (Consultant) – 21 ಮತ್ತು ಎಕ್ಸಿಕ್ಯೂಟಿವ್‌ (ಸೀನಿಯರ್ ಕನ್ಸಲ್‍ಟೆಂಟ್‍)‌ (Executive (Senior Consultant) – 5 ಹುದ್ದೆಗಳಿವೆ. IPPB official notification ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಬಿಸಿಎ, ಬಿ.ಎಸ್‌ಸಿ, ಬಿ.ಇ. ಅಥವಾ ಬಿ.ಟೆಕ್‌, ಎಂಸಿಎ ಪದವಿ ಪಡೆದಿರಬೇಕು. ಜತೆಗೆ 1ರಿಂದ 6 ವರ್ಷದವರೆಗೆ ಅನುಭವ ಹೊಂದಿರುವುದು ಕಡ್ಡಾಯ.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅಭ್ಯರ್ಥಿಗಳ ಕನಿಷ್ಠ ವಯಸ್ಸು 22 ವರ್ಷ ಮತ್ತು ಗರಿಷ್ಠ ವಯಸ್ಸು 45 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ. ಅರ್ಜಿ ಶುಲ್ಕವಾಗಿ ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ ಅಭ್ಯರ್ಥಿಗಳು 150 ರೂ. ಮತ್ತು ಉಳಿದೆಲ್ಲ ವರ್ಗಗಳ ಅಭ್ಯರ್ಥಿಗಳು 750 ರೂ. ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ವಿಧಾನ ಬಳಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಆನ್‌ಲೈನ್‌ ಪರೀಕ್ಷೆ, ಗ್ರೂಪ್‌ ಡಿಸ್ಕಷನ್‌ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಗುತ್ತಿಗೆ ಆಧಾರದಲ್ಲಿ ಈ ನೇಮಕಾತಿ ನಡೆಯಲಿದ್ದು, ಆಯ್ಕೆಯಾದವರಿಗೆ 10,00,000 ರೂ.-25,00,000 ರೂ. ವಾರ್ಷಿಕ ವೇತನ ದೊರೆಯಲಿದೆ.

IPPB Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಮೊದಲು ನಿಮ್ಮ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ತೆರೆದುಕೊಳ್ಳುವ IPPB Online Application Form ಅನ್ನು ಸರಿಯಾದ ಮಾಹಿತಿ ನೀಡಿ ಭರ್ತಿ ಮಾಡಿ.
  • ಅಗತ್ಯವಾದ ಡಾಕ್ಯುಮೆಂಟ್‌, ಫೋಟೊ, ಸಹಿ ಇತ್ಯಾದಿಯನ್ನು ಸರಿಯಾದ ಗಾತ್ರದಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ನೀಡಿದ ಮಾಹಿತಿಯನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಾಗಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಹೆಚ್ಚಿನ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Continue Reading

ಶಿಕ್ಷಣ

UPSC: ಐಇಎಸ್‌ / ಐಎಸ್‌ಎಸ್‌ಇ 2024 ಪರೀಕ್ಷೆಯ ದಿನಾಂಕ ಪ್ರಕಟ: ಇಲ್ಲಿದೆ ವೇಳಾಪಟ್ಟಿ

UPSC: ಕೇಂದ್ರ ಲೋಕ ಸೇವಾ ಆಯೋಗವು 2024ನೇ ಸಾಲಿನ ಇಂಡಿಯನ್ ಎಕನಾಮಿಕ್ ಸರ್ವಿಸ್ ಮತ್ತು ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್ ಎಕ್ಸಾಮಿನೇಷನ್ನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಯುಪಿಎಸ್‌ಸಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಟೈಮ್‌ ಟೇಬಲ್‌ ಪ್ರಕಟಿಸಿದ್ದು, ಈ ಬಗ್ಗೆ ವಿವರ ಇಲ್ಲಿದೆ.

VISTARANEWS.COM


on

UPSC
Koo

ನವದೆಹಲಿ: ಕೇಂದ್ರ ಲೋಕ ಸೇವಾ ಆಯೋಗ (UPSC)ವು 2024ನೇ ಸಾಲಿನ ಇಂಡಿಯನ್ ಎಕನಾಮಿಕ್ ಸರ್ವಿಸ್ (Indian Economic Service-IES) / ಇಂಡಿಯನ್ ಸ್ಟ್ಯಾಟಿಸ್ಟಿಕಲ್ ಸರ್ವಿಸ್ ಎಕ್ಸಾಮಿನೇಷನ್ (Indian Statistical Service Examination-ISSE)ನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಯುಪಿಎಸ್‌ಸಿ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಟೈಮ್‌ ಟೇಬಲ್‌ ಪ್ರಕಟಿಸಿದ್ದು, ಈ ಬಗ್ಗೆ ವಿವರ ಇಲ್ಲಿದೆ.

ಯಾವಾಗ, ಯಾವ ಪರೀಕ್ಷೆ?

ಯುಪಿಎಸ್‌ಸಿ ಐಇಎಸ್ / ಐಎಸ್ಎಸ್ಇ 2024 ಪರೀಕ್ಷೆಗಳು ಜೂನ್ 21ರಂದು ಆರಂಭವಾಗಲಿದ್ದು, 22, 23ರಂದು ನಡೆಯಲಿದೆ. ಈ ಪರೀಕ್ಷೆ ಸಾಮಾನ್ಯ ಇಂಗ್ಲಿಷ್, ಸಾಮಾನ್ಯ ಅಧ್ಯಯನ, ಸಾಮಾನ್ಯ ಅರ್ಥಶಾಸ್ತ್ರ, ಸಂಖ್ಯಾಶಾಸ್ತ್ರ ಮತ್ತು ಭಾರತೀಯ ಅರ್ಥಶಾಸ್ತ್ರ ಸೇರಿದಂತೆ ವಿವಿಧ ವಿಷಯಗಳಲ್ಲಿ ನಡೆಯಲಿದೆ. ಆರ್ಥಿಕ ಮತ್ತು ಸಂಖ್ಯಾಶಾಸ್ತ್ರೀಯ ಕ್ಷೇತ್ರಗಳಲ್ಲಿ ವೃತ್ತಿ ಜೀವನದ ನಡೆಸಲು ಬಯಸುವವರು ಈ ಪ್ರತಿಷ್ಠಿತ ಪರೀಕ್ಷೆಯ ವೇಳಾಪಟ್ಟಿಯನ್ನು ಎಚ್ಚರಿಕೆಯಿಂದ ಗಮನಿಸುವಂತೆ ಪ್ರಕಟಣೆ ತಿಳಿಸಿದೆ. ಪ್ರಶ್ನೆ ಪತ್ರಿಕೆ ವಸ್ತುನಿಷ್ಠ ಪ್ರಶ್ನೆಗಳು ಮತ್ತು ವಿವರಣಾತ್ಮಕ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.

ಜೂನ್‌ 21ರಂದು ಬೆಳಿಗ್ಗೆ 9 ಗಂಟೆಗೆ ಸಾಮಾನ್ಯ ಇಂಗ್ಲಿಷ್‌ ಮತ್ತು ಅಪರಾಹ್ನ 2.30ಕ್ಕೆ ಸಾಮಾನ್ಯ ಅಧ್ಯಯನ ಪರೀಕ್ಷೆ ನಡೆಯಲಿದೆ. ಜೂನ್‌ 22ರಂದು ಬೆಳಿಗ್ಗೆ 9 ಗಂಟೆಗೆ ಸಾಮಾನ್ಯ ಅರ್ಥಶಾಸ್ತ್ರ-I, ಸ್ಟ್ಯಾಟಿಸ್ಟಿಕ್ಸ್‌-I ಮತ್ತು ಅಪರಾಹ್ನ 2.30ರಿಂದ ಸಾಮಾನ್ಯ ಅರ್ಥಶಾಸ್ತ್ರ-II ಹಾಗೂ ಸ್ಟ್ಯಾಟಿಸ್ಟಿಕ್ಸ್‌-II ಎಕ್ಸಾಂ ಆಯೋಜಿಸಲಾಗಿದೆ. ಇನ್ನು ಜೂನ್‌ 23ರಂದು ಬೆಳಿಗ್ಗೆ 9 ಗಂಟೆಯಿಂದ ಸಾಮಾನ್ಯ ಅರ್ಥಶಾಸ್ತ್ರ-III ಮತ್ತು ಸ್ಟ್ಯಾಟಿಸ್ಟಿಕ್ಸ್‌-III ಹಾಗೂ ಅಪರಾಹ್ನ 2.30ರಿಂದ ಭಾರತೀಯ ಅರ್ಥಶಾಸ್ತ್ರ ಹಾಗೂ ಸ್ಟ್ಯಾಟಿಸ್ಟಿಕ್ಸ್‌-IV ಪರೀಕ್ಷೆ ನಡೆಯಲಿದೆ.

ವೇಳಾಪಟ್ಟಿ ವೀಕ್ಷಿಸಲು ಹೀಗೆ ಮಾಡಿ

  • ಯುಪಿಎಸ್‌ಸಿಯ ಅಧಿಕೃತ ವೆಬ್‌ಸೈಟ್‌ https://upsc.gov.in/ಗೆ ಭೇಟಿ ನೀಡಿ.
  • ಬಲಭಾಗದಲ್ಲಿ ಕಾಣಿಸುವ What’s New ಆಯ್ಕೆಯ ಕೆಳಗೆ ಕಂಡು ಬರುವ Examination Time Table: Indian Economic Service – Indian Statistical Service Examination, 2024 ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಈಗ ತೆರೆದುಕೊಳ್ಳುವ ಪುಟದಲ್ಲಿನ Document ಆಪ್ಶನ್‌ ಆಯ್ಕೆ ಮಾಡಿದರೆ ವೇಳಾಪಟ್ಟಿ ತೆರೆದುಕೊಳ್ಳುತ್ತದೆ.

Indian Economic Service – Indian Statistical Service Examinationನ ಟೈಮ್‌ ಟೇಬಲ್‌ ನೇರವಾಗಿ ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ.

ಹಾಲ್‌ ಟಿಕೆಟ್‌ ಯಾವಾಗ?

ಈ ಪರೀಕ್ಷೆಗೆ 2024ರ ಏಪ್ರಿಲ್ 10ರಿಂದ 30ರವರೆಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಲಿಖಿತ ಪರೀಕ್ಷೆಯು ಗರಿಷ್ಠ 1,000 ಅಂಕಗಳನ್ನು ಹೊಂದಿದೆ. ಪ್ರವೇಶ ಪತ್ರ (Hall Ticket)ವನ್ನು ಪರೀಕ್ಷೆಯ ಏಳು ದಿನಗಳ ಮೊದಲು ಬಿಡುಗಡೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಬಹುದು. ಈ ಪರೀಕ್ಷೆಯ ಮೂಲಕ ಆಯ್ಕೆಯಾದ ಅಧಿಕಾರಿಗಳನ್ನು ಆರ್ಥಿಕ ನೀತಿಗಳನ್ನು ರೂಪಿಸುವಲ್ಲಿ ಹಾಗೂ ಕಾರ್ಯಗತಗೊಳಿಸುವಲ್ಲಿ ಮತ್ತು ಸರ್ಕಾರದ ನಿರ್ಧಾರ ತೆಗೆದುಕೊಳ್ಳಲು ಸಹಾಯ ಮಾಡಲು ನೇಮಿಸಲಾಗುತ್ತದೆ.

ಇದನ್ನೂ ಓದಿ: UPSC EXAM-2023: ಯುಪಿಎಸ್‌ಸಿ ಟಾಪರ್ ವಾಸಿಸುತ್ತಿದ್ದುದು ಮನೆಯಲ್ಲಲ್ಲ, ಈ ಜೋಪಡಿಯಲ್ಲಿ!

Continue Reading

ಉದ್ಯೋಗ

Job Alert: ಟಿಸಿಎಸ್‌ನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

Job Alert: ದೇಶದ ಐಟಿ ವಲಯದ ಅತಿದೊಡ್ಡ ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ತನ್ನಲ್ಲಿ ಖಾಲಿ ಇರುವ ಸಾವಿರಾರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರು, ಚೆನ್ನೈ, ಹೈದರಾಬಾದ್, ಎನ್‌ಸಿಆರ್‌, ಪುಣೆ, ಅಹಮದಾಬಾದ್, ಮುಂಬೈ, ಕೋಲ್ಕತ್ತಾ ಮುಂತಾದೆಡೆಗೆ ನೇಮಕಾತಿ ನಡೆಯಲಿದೆ. ವಿವಿಧ ಹುದ್ದೆಗಳಿಗೆ ಸಂಬಂಧಿಸಿ ಅರ್ಜಿ ಸಲ್ಲಿಸಲು ಜುಲೈವರೆಗೂ ಅವಕಾಶ ನೀಡಲಾಗಿದೆ.

VISTARANEWS.COM


on

Job Alert
Koo

ಬೆಂಗಳೂರು: ಒಂದೊಳ್ಳೆ ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಾದರೆ ನಿಮಗೊಂದು ಗುಡ್‌ನ್ಯೂಸ್‌. ದೇಶದ ಐಟಿ ವಲಯದ ಅತಿದೊಡ್ಡ ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ತನ್ನಲ್ಲಿ ಖಾಲಿ ಇರುವ ಸಾವಿರಾರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. 1 ವರ್ಷದ ಕಾರ್ಯಾನುಭ ಇದ್ದವರೂ ಅರ್ಜಿ ಸಲ್ಲಿಸಬಹುದು (Tcs Recruitment 2024). ಬೆಂಗಳೂರು ಸೇರಿದಂತೆ ದೇಶಾದ್ಯಂತ ವಿವಿಧ ಹುದ್ದೆಗಳು ಖಾಲಿ ಇದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ವಿವಿಧ ಹುದ್ದೆಗಳಿಗೆ ಸಂಬಂಧಿಸಿ ಅರ್ಜಿ ಸಲ್ಲಿಸಲು ಜುಲೈವರೆಗೂ ಅವಕಾಶ ನೀಡಲಾಗಿದೆ (Job Alert).

ಹುದ್ದೆಗಳ ವಿವರ

ವೈರ್‌ಲೈನ್‌ – ವೈರ್‌ಲೆಸ್ ನೆಟ್‌ವರ್ಕ್‌ ಸೆಕ್ಯೂರಿಟಿ, ಆಪರೇಷನ್ ಎನೇಬಲ್ಮೆಂಟ್ -ಹ್ಯೂಮನ್ ರಿಸೋರ್ಸ್, ಇಪಿ ಡ್ರೈವ್
ಆಪರೇಷನ್‌ ಸ್ಪೆಷಲಿಸ್ಟ್‌, ಎಂಎಫ್‌ಜಿ ಇಯು ಡ್ರೈವ್, ಎನ್‌ಜಿಎಂ ಎಪಿಎಸಿ ಬಿಎಫ್‌ಎಸ್‌, ಕಸ್ಟಮರ್ ಸರ್ವೀಸ್, ಆ್ಯಕ್ಟಿವ್ ಡೈರೆಕ್ಟರಿ ಡೈರೆಕ್ಟರಿ, ಎಸ್‌ಸಿಸಿಎಂ, ವಿಂಡೋಸ್ ಅಡ್ಮಿನ್, ಜಾವ ಡೆವಲಪರ್, ಪಬ್ಲಿಕ್ ಕ್ಲೌಡ್ ಎಡಬ್ಲ್ಯೂಎಸ್ ಅಡ್ಮಿನ್, ಬ್ಯಾಕಪ್ ಅಡ್ಮಿನ್, ಸ್ಟೋರೇಜ್ ಅಡ್ಮಿನ್, DevOps Admin, ಮಿಡಲ್‌ವೇರ್ ಅಡ್ಮಿನ್, ಓಪೆನ್‌ಶಿಫ್ಟ್‌ ಅಡ್ಮಿನ್, ನೆಟ್‌ವರ್ಕ್ ಅಡ್ಮಿನ್, ಡಾಟಾಬೇಸ್ ಅಡ್ಮಿನ್, ಇಎಲ್‌ಕೆ ಅಡ್ಮಿನ್, ಸೆಕ್ಯೂರಿಟಿ ಎಸ್‌ಎಂಇ, ಟೀಮ್‌ ಸೆಂಟರ್, ಲಿನಕ್ಸ್‌ ಅಡ್ಮಿನ್,
ಮೆಕ್ಯಾನಿಕಲ್ ಡಿಸೈನ್, ಸರ್ವೀಸ್‌ನೌ ಡೆವಲಪರ್, ಓಪೆನ್‌ಸ್ಟಾಕ್‌ ಅಡ್ಮಿನ್, ನೆಟ್‌ವರ್ಕ್‌ ಟೆಸ್ಕಿಂಗ್ ಆ್ಯಂಡ್‌ ಆಟೋಮೇಷನ್, ಪ್ರೋಗ್ರೆಸ್ ಡಾಟಾಬೇಸ್ ಅಡ್ಮಿನಿಸ್ಟ್ರೇಟರ್, ಜಾವ ಫುಲ್‌ಸ್ಟಾಕ್ ಡೆವಲಪರ್ ಮುಂತಾಹ ಹುದ್ದೆಗಳು ಖಾಲಿ ಇವೆ.

ಗಮನಿಸಿ, ಒಂದೊಂದು ಹುದ್ದೆಗೂ ಅರ್ಜಿ ಸಲ್ಲಿಸಲು ಬೇರೆ ಬೇರೆ ದಿನಾಂಕ ಮತ್ತು ಕಾರ್ಯಾನುಭವ ನಿಗದಿ ಪಡಿಸಲಾಗಿದೆ. ಬೆಂಗಳೂರು, ಚೆನ್ನೈ, ಹೈದರಾಬಾದ್, ಎನ್‌ಸಿಆರ್‌, ಪುಣೆ, ಅಹಮದಾಬಾದ್, ಮುಂಬೈ, ಕೋಲ್ಕತ್ತಾ ಮುಂತಾದೆಡೆಗೆ ನೇಮಕಾತಿ ನಡೆಯಲಿದೆ.

ಹೆಚ್ಚಿನ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನೀವು ಹುಡುಕುತ್ತಿರುವ ಆಸಕ್ತ ಹುದ್ದೆ ಸಿಕ್ಕಲ್ಲಿ ಅದರ ಮೇಲೆ ಕ್ಲಿಕ್ ಮಾಡಿ.
  • ನಂತರ ಈ ಹುದ್ದೆಯ ಕುರಿತು ಅರ್ಹತೆ, ರೋಲ್ ಕರ್ತವ್ಯ, ಅನುಭವ, ಇತರ ವಿವರಗಳು ಇರುತ್ತವೆ. ಓದಿಕೊಳ್ಳಿ.
  • ನಂತರ ‘Apply’ ಆಯ್ಕೆಯನ್ನು ಕ್ಲಿಕ್ ಮಾಡಿ.
  • ಇಮೇಲ್‌ ವಿಳಾಸ, ಪಾಸ್‌ವರ್ಡ್‌ ಮೂಲಕ ಸೈನ್‌ ಇನ್ ಆಗಿ, ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Job alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

Continue Reading

ಉದ್ಯೋಗ

Job Alert: ಗಮನಿಸಿ: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಮೇ 24 ಕೊನೆಯ ದಿನ

Job Alert: ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ (KPSC) ಗ್ರೂಪ್‌ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸುಮಾರು 277 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಮೇ 24 ಕೊನೆಯ ದಿನ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 35 ವರ್ಷ. ಅರ್ಜಿ ಶುಲ್ಕವಾಗಿ ಸಾಮಾನ್ಯ ಅಭ್ಯರ್ಥಿಗಳು 300 ರೂ., ಇತರ ಹಿಂದುಳಿದ ಅಭ್ಯರ್ಥಿಗಳು 150 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕಾಗಿಲ್ಲ.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಗುಡ್‌ನ್ಯೂಸ್‌. ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ (KPSC) ಗ್ರೂಪ್‌ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ(KPSC Group B (RPC) Recruitment 2024). ಸುಮಾರು 277 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಮೇ 24 ಕೊನೆಯ ದಿನ (Job Alert).

ಬಿ.ಟೆಕ್‌ ವಿದ್ಯಾರ್ಹತೆಯುಳ್ಳವರಿಗೂ ಅವಕಾಶ

ಈ ಹಿಂದಿನ ಅಧಿಸೂಚನೆಯಲ್ಲಿನ ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್) (ವಿಭಾಗ 1) – 90 ಮತ್ತು ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್) (ವಿಭಾಗ-1) – 10 ಹುದ್ದೆಗಳಿಗೆ ಇಲಾಖೆಯ ಪ್ರಸ್ತಾವನೆಯಂತೆ ನಿಗದಿಪಡಿಸಲಾಗಿದ್ದ ವಿದ್ಯಾರ್ಹತೆಯ ಕೋರ್ಸ್‌ಗಳಲ್ಲಿ ಕೇವಲ ಬಿಇ ಪದವಿಗಳನ್ನು ಮಾತ್ರ ಈ ಹಿಂದೆ ಪರಿಗಣಿಸಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪ್ರಸ್ತುತ ಸರ್ಕಾರ ಈ ಹುದ್ದೆಗಳಿಗೆ ಬಿ.ಟೆಕ್ ಪದವಿಯನ್ನು ಸಹ ಪರಿಗಣಿಸಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಉಳಿದಂತೆ ಹಿಂದಿನ ಅಧಿಸೂಚನೆಯ ಷರತ್ತು ಅನ್ವಯ.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸಹಾಯಕ ಎಂಜಿನಿಯರ್‌ (ಸಿವಿಲ್‌) (ವಿಭಾಗ 1)- 92 ಹುದ್ದೆ, ವಿದ್ಯಾರ್ಹತೆ: ಬಿ.ಇ / ಬಿ.ಟೆಕ್‌ (ಸಿವಿಲ್‌ ಎಂಜಿನಿಯರಿಂಗ್‌)
ಸಹಾಯಕ ಎಂಜಿನಿಯರ್‌ (ಸಿವಿಲ್‌) (ವಿಭಾಗ 1)-90 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್‌)
ಭೂ ದಾಖಲೆಗಳ ಸಹಾಯಕ ನಿರ್ದೇಶಕರು-24 ಹುದ್ದೆ, ವಿದ್ಯಾರ್ಹತೆ: ಪದವಿ (ಸಿವಿಲ್‌ ಎಂಜಿನಿಯರಿಂಗ್‌)
ಪತ್ರಾಂಕಿತ ವ್ಯವಸ್ಥಾಪಕರು / ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು-21 ಹುದ್ದೆ, ವಿದ್ಯಾರ್ಹತೆ: ಪದವಿ
ಸಹಾಯಕ ನಿರ್ದೇಶಕರು – 20 ಹುದ್ದೆ, ವಿದ್ಯಾರ್ಹತೆ: ಬಿ.ಇ / ಬಿ.ಟೆಕ್‌ (ಎಂಜಿನಿಯರಿಂಗ್‌) ಅಥವಾ ಎಂಬಿಎ
ಸಹಾಯಕ ಎಂಜಿನಿಯರ್‌ (ಮೆಕ್ಯಾನಿಕಲ್‌) (ವಿಭಾಗ-1) – 10 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್‌)
ಕಾರ್ಖಾನೆಗಳ ಸಹಾಯಕ ನಿರ್ದೇಶಕರು – 7 ಹುದ್ದೆ, ವಿದ್ಯಾರ್ಹತೆ: ಪದವಿ (ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್‌)
ಬಾಯ್ಲರುಗಳ ಸಹಾಯಕ ನಿರ್ದೇಶಕರು – 3 ಹುದ್ದೆ, ವಿದ್ಯಾರ್ಹತೆ: (ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್‌)
ಭೂ ವಿಜ್ಞಾನಿ – 10 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ (ಜಿಯೋಲಜಿ / ಅಪ್ಲೈಡ್‌ ಜಿಯಾಲಜಿ.

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ಅಭ್ಯರ್ಥಿಗಳು 300 ರೂ., ಇತರ ಹಿಂದುಳಿದ ಅಭ್ಯರ್ಥಿಗಳು 150 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕಾಗಿಲ್ಲ.

ಪರಿಷ್ಕೃತ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Continue Reading
Advertisement
Narendra Modi
ದೇಶ4 hours ago

PM Modi: 400 ಸೀಟು, 400 ಸೀಟು ಎಂದು ಪ್ರತಿಪಕ್ಷಗಳನ್ನು ಮಂಗ್ಯಾ ಮಾಡಿದ ಮೋದಿ; ಅವರ ಮಾತಲ್ಲೇ ಕೇಳಿ!

Rajakaluve
ಸಂಪಾದಕೀಯ5 hours ago

ವಿಸ್ತಾರ ಸಂಪಾದಕೀಯ: ಮುಂಗಾರಿಗೆ ಮುನ್ನವೇ ರಾಜಕಾಲುವೆ ಒತ್ತುವರಿ ತೆರವಾಗಲಿ

IPL 2024
ಪ್ರಮುಖ ಸುದ್ದಿ5 hours ago

IPL 2024 : ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ ಎಂದ ಮಾಜಿ ಕ್ರಿಕೆಟಿಗ

DCM D K Shivakumar instructed to test drinking water everywhere including Bengaluru
ಕರ್ನಾಟಕ5 hours ago

Bengaluru News: ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್

Naxals
ದೇಶ5 hours ago

Naxals: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಎನ್‌ಕೌಂಟರ್

IPL 2024
ಪ್ರಮುಖ ಸುದ್ದಿ6 hours ago

IPL 2024 : ಐಪಿಎಲ್​ನಲ್ಲಿ ಕಳಪೆ ದಾಖಲೆಯೊಂದನ್ನು ಸೃಷ್ಟಿಸಿ ನಿರ್ಗಮಿಸಿದ ಆರ್​ಸಿಬಿ

arecanut price
ಕರ್ನಾಟಕ6 hours ago

Arecanut Price: ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

Self Harming Husband commits suicide for taking his wife home
ಕರ್ನಾಟಕ6 hours ago

Self Harming: ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ!

WhatsApp AI
ತಂತ್ರಜ್ಞಾನ6 hours ago

WhatsApp AI: WhatsAppಗೂ ಬಂತು ಎಐ; ನಿಮ್ಮ ಪ್ರೊಫೈಲ್‌ ಫೋಟೊ ಇನ್ನು AI ಜನರೇಟೆಡ್!‌

T20 world cup 2024
ಕ್ರೀಡೆ7 hours ago

T20 World Cup 2024 : ಭಾರತ ತಂಡ ವಿಶ್ವ ಕಪ್​ ಗೆಲ್ಲುವುದಿಲ್ಲ; ಇಂಗ್ಲೆಂಡ್​ ಮಾಜಿ ಆಟಗಾರನ ಭವಿಷ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ23 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌