SBI recruitment 2023: ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ - Vistara News

ಉದ್ಯೋಗ

SBI recruitment 2023: ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಪಡೆಯಲು ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗೆ ನೀಡಲಾದ ಮಾಹಿತಿ ಆಧರಿಸಿ ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ (SBI) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ಶಿಪ್ (apprenticeship in SBI) (ಉದ್ಯೋಗ ತರಬೇತಿ) ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

VISTARANEWS.COM


on

sbi jobs
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆರ್. ಕೆ ಬಾಲಚಂದ್ರ, ಅಂಕಣಕಾರರು, ಬ್ಯಾಂಕಿಂಗ್ ಮತ್ತು ವ್ಯಕ್ತಿತ್ವ ವಿಕಸನ ತರಬೇತುದಾರರು ಹಾಗೂ ವೃತ್ತಿ ಮಾರ್ಗದರ್ಶಕರು, ಮಡಿಕೇರಿ

ದೇಶದ ಪ್ರತಿಷ್ಠಿತ ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ (SBI) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಅಪ್ರೆಂಟಿಸ್ ಶಿಪ್ (apprenticeship in SBI) (ಉದ್ಯೋಗ ತರಬೇತಿ) ಹುದ್ದೆಗಳಿಗೆ ಅಪ್ರೆಂಟಿಸ್ ಕಾಯಿದೆ 1961 ಅಡಿಯಲ್ಲಿ ಅಪ್ರೆಂಟಿಸ್‌ಗಳಾಗಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು (SBI recruitment 2023) ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಒಂದು ರಾಜ್ಯದಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು. ಈ ಯೋಜನೆಯಡಿಯಲ್ಲಿ ಅಭ್ಯರ್ಥಿಗಳು ಒಮ್ಮೆ ಮಾತ್ರ ಪರೀಕ್ಷೆಗೆ ಹಾಜರಾಗಬಹುದು. ಇದು ಒಂದು ವರ್ಷದ ಉದ್ಯೋಗ ತರಬೇತಿಯಾಗಿದೆ. ಈ ಹಿನ್ನೆಲೆಯಲ್ಲಿ, ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಪಡೆಯಲು ಆಸಕ್ತಿ ಇರುವ ಅಭ್ಯರ್ಥಿಗಳು ಕೆಳಗೆ ನೀಡಲಾದ ಮಾಹಿತಿ ಆಧರಿಸಿ ಅರ್ಜಿ ಸಲ್ಲಿಸಬಹುದು.

ಕೇಂದ್ರಾಡಳಿತ ಪ್ರದೇಶಗಳ ಸಹಿತ ಅನೇಕ ರಾಜ್ಯಗಳಲ್ಲಿ ಅಪ್ರೆಂಟಿಸ್ ಶಿಪ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು. ಒಟ್ಟು ಹುದ್ದೆಗಳ ಸಂಖ್ಯೆ 6160. ಈ ಪೈಕಿ ಕರ್ನಾಟಕದಲ್ಲಿ 175 ಹುದ್ದೆಗಳಿದ್ದು 71 ಸಾಮಾನ್ಯ ವಿಭಾಗ, ಎಸ್ಸಿ 28, ಎಸ್ಟಿ 12, ಒಬಿಸಿ 47 ಹಾಗೂ ಆರ್ಥಿಕವಾಗಿ ಹಿಂದುಳಿದವರಿಗಾಗಿ 17 ಹುದ್ದೆಗಳನ್ನು ಮೀಸಲಿರಿಸಲಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆ?

ಜಿಲ್ಲಾವಾರು ಹುದ್ದೆಗಳ ಸಂಖ್ಯೆ ಹೀಗಿದೆ:

ಬಾಗಲಕೋಟ-6, ಬಳ್ಳಾರಿ-9, ಬೆಳಗಾವಿ-8, ಬೆಂಗಳೂರು ಗ್ರಾಮಾಂತರ-2, ಬೆಂಗಳೂರು Urban-3,ಬೀದರ್-8, ಚಾಮರಾಜ ನಗರ-7, ಚಿಕ್ಕಮಗಳೂರು-4, ಚಿಕ್ಕಬಳ್ಳಾಪುರ-5, ಚಿತ್ರದುರ್ಗ-3, ದಕ್ಷಿಣ ಕನ್ನಡ-6, ದಾವಣಗೆರೆ-6, ಧಾರವಾಡ-3,ಗದಗ-3 ,ಹಾಸನ-8, ಹಾವೇರಿ-4 ,ಕಲ್ಬುರ್ಗಿ-8, ಕೊಡಗು-1,ಕೋಲಾರ-4, ಕೊಪ್ಪಳ-6, ಮಂಡ್ಯ-10,ಮೈಸೂರು-8,ರಾಯಚೂರು-8, ರಾಮನಗರ-4,ಶಿವಮೊಗ್ಗ-6, ತುಮಕೂರು-18,ಉಡುಪಿ-3,ಉತ್ತರಕನ್ನಡ-5,ವಿಜಯಪುರ-4,ಯಾದಗಿರಿ-5

ಅರ್ಜಿ ಸಲ್ಲಿಕೆಯ ವಿಧಾನ

ಎಸ್‌ಬಿಐನ ಅಧಿಕೃತ ವೆಬ್ಸೈಟ್ www.bank.sbi/web/careers ಲಾಗಿನ್ ಮಾಡಿಕೊಂಡು ಆನ್ಲೈನ್‌ನಲ್ಲಿಯೆ ಸೂಕ್ತ ಮಾಹಿತಿಗಳನ್ನ ಭರ್ತಿ ಮಾಡಬೇಕು ಹಾಗೂ ದಾಖಲೆಗಳ ಪ್ರತಿಗಳನ್ನು ಲಗತ್ತಿಸಬೇಕು. ಲಿಖಿತ ಧೃಢೀಕರಣ ಅಪ್‌ಲೋಡ್‌ ಮಾಡಿ ಶುಲ್ಕ ಪಾವತಿಸಬೇಕು.

ಶೈಕ್ಷಣಿಕ ಅರ್ಹತೆ ಏನಿರಬೇಕು?

ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಅಂದರೆ ಕಲೆ, ವಾಣಿಜ್ಯ ವಿಜ್ಞಾನ ಅಥವಾ ಇನ್ನಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.

ವಯೋಮಿತಿ

01.08.2023ಕ್ಕೆ, 20 ವರ್ಷಕ್ಕಿಂತ ಕಡಿಮೆ ಇರಬಾರದು. ಮತ್ತು 28 ವರ್ಷಗಳಿಗಿಂತ ಹೆಚ್ಚಿರಬಾರದು. ಅಂದರೆ 20 ವರ್ಷದಿಂದ 28 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಭ್ಯರ್ಥಿಯು 02.08.1995 ಕ್ಕಿಂತ ಮೊದಲು ಮತ್ತು 01.08.2023 ಕ್ಕಿಂತ ನಂತರ ಹುಟ್ಟಿರಬಾರದು( ಎರಡೂ ದಿನಾಂಕಗಳು ಒಳಗೊಂಡಂತೆ) ಸರಕಾರದ ನಿಯಮದಂತೆ ಎಸ್ಸಿ/ ಎಸ್ಟಿ ಅಭ್ಯರ್ಥಿಗಳಿಗೆ/ ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ/ ಮತ್ತು ವಿಕಲಚೇತನರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕವೆಷ್ಟು?

ಸಾಮಾನ್ಯ, ಒಬಿಸಿ ಮತ್ತು ಆರ್ಥಿಕ ದುರ್ಬಲ ವರ್ಗದ ಅಭ್ಯರ್ಥಿಗಳಿಗೆ 300 ರೂ. ಹಾಗೂ ಎಸ್‌ಸಿ/ ಎಸ್‌ಟಿ /ವಿಶೇಷ ಚೇತನ ಅಭ್ಯರ್ಥಿಗಳಿಗೆ ಸಂಪೂರ್ಣ ವಿನಾಯಿತಿ ನೀಡಲಾಗಿದೆ.

ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳೆಲ್ಲಿ?

ರಾಜ್ಯದಲ್ಲಿ 9 ಪರೀಕ್ಷಾ ಕೇಂದ್ರಗಳಿವೆ: ಬೆಂಗಳೂರು, ಬೆಳಗಾವಿ, ಕಲಬುರಗಿ ಹುಬ್ಬಳ್ಳಿ-ಧಾರವಾಡ, ಮಂಗಳೂರು, ಮೈಸೂರು, ಶಿವಮೊಗ್ಗ ಹಾಗೂ ಉಡುಪಿ

ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 21, 2023
ಆನ್‌ಲೈನ್‌ನಲ್ಲಿ ಪರೀಕ್ಷೆ ನಡೆಯುವ ದಿನಾಂಕ: ಅಕ್ಟೋಬರ್/ನವೆಂಬರ್, 2023.

ಕನ್ನಡದಲ್ಲಿ ಪರೀಕ್ಷೆ

ಕರ್ನಾಟಕದ ಅಭ್ಯರ್ಥಿಗಳು ಹಿಂದಿ ಅಥವಾ ಇಂಗ್ಲಿಷ್ ಜೊತೆಗೆ ಕನ್ನಡ ಭಾಷೆಯಲ್ಲೂ ಪರೀಕ್ಷೆ ಬರೆಯುವ ಅವಕಾಶವನ್ನು ಎಸ್‌ಬಿಐ ನೀಡಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ಭಾಷೆ ನಮೂದಿಸಬೇಕು. (ಪರೀಕ್ಷಾ ಸಂದರ್ಭದಲ್ಲಿ ಬದಲಾವಣೆಗೆ ಅವಕಾಶವಿಲ್ಲ ಎಂಬುದನ್ನ ಮರೆಯದಿರಿ.)

ನೆನಪಿಡಿ:

ಲಿಖಿತ ದೃಢೀಕರಣ:

ಕೈಬರಹದ ಘೋಷಣೆಯ ಪಠ್ಯ ಈ ರೀತಿಯಲ್ಲಿ ಬರೆದು ಅಪ್ಲೋಡ್ ಮಾಡಬೇಕು: ” (ಅಭ್ಯರ್ಥಿಯ ಹೆಸರು), ಈ ಮೂಲಕ ಅರ್ಜಿಯಲ್ಲಿ ಸಲ್ಲಿಸಿದ ಎಲ್ಲಾ ಮಾಹಿತಿಯು ಸರಿಯಾಗಿದೆ. ನಿಜ ಮತ್ತು ಮಾನ್ಯವಾಗಿದೆ ಎಂದು ಘೋಷಿಸುತ್ತೇನೆ. ಅಗತ್ಯವಿದ್ದಾಗ ನಾನು ಪೂರಕ ದಾಖಲೆಗಳನ್ನು ಪ್ರಸ್ತುತಪಡಿಸುತ್ತೇನೆ.”

ಮೇಲೆ ತಿಳಿಸಿದ ಕೈಯಲ್ಲಿ ಬರೆದ ಲಿಖಿತ ಘೋಷಣೆಯು ಅಭ್ಯರ್ಥಿಯ ಕೈ ಬರಹದಲ್ಲಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಇರಬೇಕು ಮತ್ತು ಕ್ಯಾಪಿಟಲ್ ಲೆಟರ್‌ನಲ್ಲಿ ಇರಬಾರದು. ಇದನ್ನು ಬೇರೆಯವರು ಅಥವಾ ಬೇರೆ ಯಾವುದೇ ಭಾಷೆಯಲ್ಲಿ ಬರೆದಿದ್ದರೆ, ಅರ್ಜಿಯನ್ನು ಅಮಾನ್ಯವೆಂದು ಪರಿಗಣಿಸಲಾಗುತ್ತದೆ. ಕ್ಯಾಪಿಟಲ್ ಲೆಟರಗಳಲ್ಲಿ ಹಾಕಿದ ಸಹಿಯನ್ನು ಸ್ವೀಕರಿಸಲಾಗುವುದಿಲ್ಲ. ಎಡ ಹೆಬ್ಬೆರಳಿನ ಗುರುತು ಸರಿಯಾಗಿ ಸ್ಕ್ಯಾನ್ ಮಾಡಬೇಕು ಮತ್ತು ಮಸುಕಾಗಿರಬಾರದು.

ಅಪ್ರೆಂಟಿಸ್ ಶಿಪ್‌ನಲ್ಲಿ ಆಯ್ಕೆಯಾದರೆ ಲಾಭವೇನು?

ಅಪ್ರೆಂಟಿಸ್‌ಗಳಾಗಿ ನೇಮಕಗೊಂಡರೆ ಅದು ಬ್ಯಾಂಕ್‌ನಲ್ಲಿ ಉದ್ಯೋಗ ನೀಡಿದೆ ಎಂದರ್ಥವಲ್ಲ. ಭವಿಷ್ಯದಲ್ಲಿ ಬ್ಯಾಂಕ್‌ನಲ್ಲಿ ಉದ್ಯೋಗ ಪಡೆಯಲು ಇದು ಸಹಾಯವಾಗುತ್ತದೆ.

ಕಾಲಕಾಲಕ್ಕೆ ತಿದ್ದುಪಡಿ ಮಾಡಿದಂತೆ ಬ್ಯಾಂಕಿನ ನೇಮಕಾತಿ ನೀತಿಯ ಪ್ರಕಾರ ಜೂನಿಯರ್ ಅಸೋಸಿಯೇಟ್‌ಗಳ ನೇಮಕಾತಿಯಲ್ಲಿ ಅಪ್ರೆಂಟಿಸ್‌ಗಳಿಗೆ weightage /ಕೆಲ ಸಡಿಲಿಕೆಯನ್ನು ನೀಡಲಾಗುತ್ತದೆ. ಅಪ್ರೆಂಟಿಸ್‌ಶಿಪ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಮತ್ತು ಅಭ್ಯರ್ಥಿಯ ಸಂಪೂರ್ಣ ತರಬೇತಿ ಅವಧಿಯಲ್ಲಿ ತೃಪ್ತಿದಾಯಕ ನಡವಳಿಕೆಗೆ ಒಳಪಟ್ಟಿರುವ ಅಪ್ರೆಂಟಿಸ್‌ಗಳಿಗೆ ಜೂನಿಯರ್ ಅಸೋಸಿಯೇಟ್‌ಗಳ ನೇಮಕಾತಿಯಲ್ಲಿ ಸಡಿಲಿಕೆಯನ್ನು ನೀಡಲಾಗುವುದು. ಅಪ್ರೆಂಟಿಸ್‌ಶಿಪ್ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಕೌಶಲ್ಯ ಮೌಲ್ಯಮಾಪನ ಪರೀಕ್ಷೆ (ಟ್ರೇಡ್ ಪರೀಕ್ಷೆ) ಮತ್ತು ಜಂಟಿ ರಾಷ್ಟ್ರೀಯತೆಯ ಅಪ್ರೆಂಟಿಸ್ ಶಿಪ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. SBI-NSDC/ BFSI-SSC ಜಂಟಿಯಾಗಿ ನೀಡಿದ ಅಪ್ರೆಂಟಿಸ್‌ ಶಿಪ್ ಪ್ರಮಾಣಪತ್ರ ಅಗತ್ಯ.

ತರಬೇತಿಯ ಅವಧಿ

ಒಂದು ವರ್ಷ ತರಬೇತಿಯ ಅವಧಿಯಲ್ಲಿ ಅಭ್ಯರ್ಥಿಗಳಿಗೆ ತಿಂಗಳಿಗೆ 15,000 ರೂ. ಸ್ಟೈಪೆಂಡ್ ನೀಡಲಾಗುತ್ತದೆ. ಇದರ ಹೊರತಾಗಿ ಯಾವುದೇ ಭತ್ಯೆಯನ್ನು ನೀಡಲಾಗುವುದಿಲ್ಲ.

ಇದನ್ನೂ ಓದಿ: SBI PO Recruitment 2023: 2000 ಪ್ರೊಬೇಷನರಿ ಹುದ್ದೆ ನೇಮಕಕ್ಕೆ ಎಸ್‌ಬಿಐ ಅರ್ಜಿ ಆಹ್ವಾನ, ಸೆ.27 ಅಪ್ಲೈಗೆ ಕೊನೆ ದಿನ

ಭಾಷಾವಾರು ನೇಮಕಾತಿ

ರಾಜ್ಯದ ಸೀಟುಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಓದುವುದು, ಬರೆಯುವುದು, ಮಾತನಾಡುವುದು ಮತ್ತು ಅರ್ಥಮಾಡಿಕೊಳ್ಳುವುದರಲ್ಲಿ ಪ್ರವೀಣರಾಗಿರಬೇಕು. ಕನ್ನಡ ಸ್ಥಳೀಯ ಜ್ಞಾನದ ಪರೀಕ್ಷೆ ಆಯ್ಕೆ ಪ್ರಕ್ರಿಯೆಯ ಭಾಗವಾಗಿ ನಡೆಸಲಾಗುವುದು. ಆನ್ಲೈನ್ ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ನಂತರ ಇದನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆಯಲು ವಿಫಲರಾದ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗುವುದಿಲ್ಲ. 10ನೇ ಅಥವಾ 12ನೇ ತರಗತಿಯ ಮಾರ್ಕ್ ಶೀಟ್/ಪ್ರಮಾಣ ಪತ್ರದಲ್ಲಿ ಅಭ್ಯರ್ಥಿಗಳು ನಿರ್ದಿಷ್ಟ ಪಡಿಸಿದ ಸ್ಥಳೀಯ ಭಾಷೆಯನ್ನು ಅಧ್ಯಯನ ಮಾಡಿದ್ದರೆ ಭಾಷೆಯ ಪರೀಕ್ಷೆಗೆ ಒಳಗಾಗುವ ಅಗತ್ಯವಿಲ್ಲ ಈ ಕಾರಣದಿಂದ. ಅಭ್ಯರ್ಥಿಗಳನ್ನು ಸ್ಥಳೀಯ ಭಾಷೆಯ ನಿರರ್ಗಳತೆ ಆಧಾರದಲ್ಲಿ ಕೂಡ ನೇಮಕಾತಿ ನಡೆಸಲಾಗುತ್ತಿದೆ ಎಂದು ಎಸ್ಬಿಐ ತಿಳಿಸಿದೆ.

ಆಯ್ಕೆ ಹೇಗಿರಲಿದೆ?

ಆನ್ಲೈನ್‌ನಲ್ಲಿ ಲಿಖಿತ ಪರೀಕ್ಷೆ ಮತ್ತು ಸ್ಥಳೀಯ ಭಾಷಾ ಪರೀಕ್ಷೆ ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯುತ್ತದೆ. ಆನ್ಲೈನ್ ಪರೀಕ್ಷೆಯಲ್ಲಿ ಜನರಲ್ /ಫೈನಾನ್ಶಿಯಲ್ ಅವೇರ್ನೆಸ್, ಜನರಲ್ ಇಂಗ್ಲಿಷ್, ಕ್ವಾಂಟಿಟೇಟಿವ್ ಅಪ್ಟಿಟ್ಯೂಡ್ ಹಾಗೂ ರೀಸನಿಂಗ್ ಎಬಿಲಿಟಿ ಮತ್ತು ಕಂಪ್ಯೂಟರ್ ಅಪ್ಟಿಟ್ಯೂಡ್ ವಿಷಯಗಳಿಗೆ ತಲಾ 25 ಅಂಕಗಳಂತೆ 25 ಪ್ರಶ್ನೆಗಳನ್ನು ನೀಡಲಾಗುತ್ತದೆ. ಇದನ್ನು ಬರೆಯಲು ಪ್ರತಿ ಪತ್ರಿಕೆಗೆ 15 ನಿಮಿಷಗಳಂತೆ ಒಟ್ಟಾರೆ 1 ಗಂಟೆಯ ಅವಧಿ ನೀಡಲಾಗುತ್ತದೆ. ಇಂಗ್ಲಿಷ್‌ನಲ್ಲಿ ಪ್ರಶ್ನೆ ಇರುತ್ತದೆ. ಅಭ್ಯರ್ಥಿಗಳು ಕನ್ನಡ, ಇಂಗ್ಲಿಷ್ ಅಥವಾ ಹಿಂದಿ ಯಾವುದೇ ಮಾಧ್ಯಮದಲ್ಲಿ ಪರೀಕ್ಷೆ ಬರೆಯಬಹುದಾಗಿದೆ. ಆಬ್ಜೆಕ್ಟಿವ್ ಮಾದರಿಯಲ್ಲಿ ಪರೀಕ್ಷೆ ನಡೆಯಲಿದ್ದು ತಪ್ಪು ಉತ್ತರಕ್ಕೆ ¼ ರಷ್ಟು ಋಣಾತ್ಮಕ ಮೌಲ್ಯ ಮಾಪನದಂತೆ ಅಂಕದ ಕಡಿತ ಕೂಡ ಇರಲಿದೆ.

ಗಮನಿಸಿ

  • ಒಮ್ಮೆ ಆಯ್ಕೆ ಮಾಡಿದ ಬಳಿಕ ಪರೀಕ್ಷಾ ಕೇಂದ್ರ ಬದಲಾಯಿಸಲು ಅವಕಾಶವಿಲ್ಲ.
  • ಸ್ವಂತ ಖರ್ಚಿನಲ್ಲಿಯೇ ಅಭ್ಯರ್ಥಿಗಳು ನೇಮಕ ಪ್ರಕ್ರಿಯೆಗಳಿಗೆ ಹಾಜರಾಗಬೇಕು.
  • ಪರೀಕ್ಷೆಯಲ್ಲಿ ತೇರ್ಗಡೆಯಾದ ಬಳಿಕ ವೈದ್ಯಕೀಯ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು ಕಡ್ಡಾಯ.
  • ಅಂತಿಮವಾಗಿ ದಾಖಲಾತಿ ಪರಿಶೀಲನೆ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ವೆಬ್ ವಿಳಾಸ sbi.co.in.

ಇದನ್ನೂ ಓದಿ: SBI recruitment 2023: ಎಸ್‌ಬಿಐಯಲ್ಲಿ 107 ಹುದ್ದೆಗಳಿಗೆ ಅರ್ಜಿ ಆಹ್ವಾನ; ಯಾರು ಸಲ್ಲಿಸಬಹುದು, ಅಂತಿಮ ದಿನಾಂಕ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Toyota: ಟೊಯೊಟಾ ಕೌಶಲ್ಯ ಕೋರ್ಸ್‌ಗೆ ಅರ್ಜಿ ಆಹ್ವಾನ; ಗ್ರಾಮೀಣ ಯುವಕರೇ ಈ ಅವಕಾಶ ಬಳಸಿಕೊಳ್ಳಿ

Toyota: ಗ್ರಾಮೀಣ ಯುವಕರನ್ನು ವಿಶ್ವದರ್ಜೆಯ ಸ್ಪರ್ಧಾತ್ಮಕ ತಂತ್ರಜ್ಞರನ್ನಾಗಿ ಪರಿವರ್ತಿಸುವ ಉದ್ದೇಶದಿಂದ ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ತನ್ನ ಟಿಟಿಟಿಐ ರೆಗ್ಯುಲರ್ ಪ್ರೋಗ್ರಾಂ ಮತ್ತು ಟೊಯೊಟಾ ಕೌಶಲ್ಯ ಕಾರ್ಯಕ್ರಮಗಳಿಗೆ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನಿದ್ದು, ಟಿಟಿಟಿಐ ರೆಗ್ಯುಲರ್ ಪ್ರೋಗ್ರಾಂ ಮೂರು ವರ್ಷಗಳ ವಸತಿ ಕೋರ್ಸ್ ಮೂಲಕ ಸಮಗ್ರ ತರಬೇತಿಯನ್ನು ನೀಡುತ್ತದೆ. ಇನ್ನು ಟೊಯೊಟಾ ಕೌಶಲ್ಯ ಕೋರ್ಸ್ ಉದ್ಯೋಗ ತರಬೇತಿಯೊಂದಿಗೆ ಉದ್ಯಮ ಸಮೃದ್ಧ ಪಠ್ಯಕ್ರಮದೊಂದಿಗೆ “ಕಲಿಯಿರಿ ಮತ್ತು ಸಂಪಾದಿಸಿ” ಪರಿಕಲ್ಪನೆಯಾಗಿದ್ದು, ಸಮಗ್ರ ಎರಡು ವರ್ಷಗಳ ವಸತಿ ಕೋರ್ಸ್ ಆಗಿದೆ.

VISTARANEWS.COM


on

Application Invited for TTTI and Toyota Skill Courses from Toyota Technical Training Institute
Koo

ಬೆಂಗಳೂರು: ಗ್ರಾಮೀಣ ಯುವಕರನ್ನು ವಿಶ್ವದರ್ಜೆಯ ಸ್ಪರ್ಧಾತ್ಮಕ ತಂತ್ರಜ್ಞರನ್ನಾಗಿ ಪರಿವರ್ತಿಸುವ ಉದ್ದೇಶದಿಂದ ಟೊಯೊಟಾ ತಾಂತ್ರಿಕ ತರಬೇತಿ ಸಂಸ್ಥೆ (ಟಿಟಿಟಿಐ) ವತಿಯಿಂದ ಟಿಟಿಟಿಐ ರೆಗ್ಯುಲರ್ ಪ್ರೋಗ್ರಾಂ ಮತ್ತು ಟೊಯೊಟಾ (Toyota) ಕೌಶಲ್ಯ ಕಾರ್ಯಕ್ರಮಗಳಿಗೆ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನಿದೆ.

ಕರ್ನಾಟಕದ ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯಿಂದ ಬಂದಿರುವ ಶೈಕ್ಷಣಿಕ ಆಸಕ್ತಿಯನ್ನು ಹೊಂದಿರುವ ವಿದ್ಯಾರ್ಥಿಗಳಿಗೆ ಉಚಿತ ತರಬೇತಿಯನ್ನು ನೀಡಲಾಗುತ್ತಿದ್ದು, ಇದರಿಂದ ಗ್ರಾಮೀಣ ವಿದ್ಯಾರ್ಥಿಗಳು ನುರಿತ ತಂತ್ರಜ್ಞರಾಗಿ ವೃತ್ತಿಜೀವನವನ್ನು ಮುಂದುವರಿಸಲು ಸಶಕ್ತರಾಗಲಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಮೇ 19ರಂದು ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ

ಟಿಟಿಟಿಐ ರೆಗ್ಯುಲರ್ ಪ್ರೋಗ್ರಾಂ ಮೂರು ವರ್ಷಗಳ ವಸತಿ ಕೋರ್ಸ್ ಮೂಲಕ ಸಮಗ್ರ ತರಬೇತಿಯನ್ನು ನೀಡುತ್ತದೆ. ಇತ್ತೀಚೆಗೆ ಪರಿಚಯಿಸಲಾದ ಟೊಯೊಟಾ ಕೌಶಲ್ಯ ಕಾರ್ಯಕ್ರಮದ ಜತೆಗೆ ಕೌಶಲ್ಯ, ಜ್ಞಾನ ಮತ್ತು ನಡವಳಿಕೆ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಿದೆ, ಇದು ಉತ್ಪಾದನಾ ಉದ್ಯಮಕ್ಕೆ ನಿರ್ಣಾಯಕವಾದ ಕೌಶಲ್ಯಗಳೊಂದಿಗೆ ಯುವಕರನ್ನು ಸಜ್ಜುಗೊಳಿಸಲು ವಿನ್ಯಾಸಗೊಳಿಸಲಾದ ಸಮಗ್ರ ಎರಡು ವರ್ಷಗಳ ವಸತಿ ಕೋರ್ಸ್ ಆಗಿದೆ. ಆ ಮೂಲಕ ಅವರ ಉದ್ಯೋಗಾರ್ಹತೆಯನ್ನು ಹೆಚ್ಚಿಸುತ್ತದೆ. ‘ಕಲಿಯಿರಿ ಮತ್ತು ಸಂಪಾದಿಸಿ’ ಮಾದರಿಯ ಮೂಲಕ ಭಾಗವಹಿಸುವವರು ಆನ್-ದಿ-ಜಾಬ್ ಟ್ರೈನಿಂಗ್ (ಒಜೆಟಿ) ಜತೆಗೆ ಸೈದ್ಧಾಂತಿಕ ಕಲಿಕೆಯಲ್ಲಿ ವಿದ್ಯಾರ್ಥಿಗಳು ತೊಡಗುತ್ತಾರೆ.

ಮಾಸ್ಟರ್ ತರಬೇತುದಾರರಾಗಿ ಸೇವೆ ಸಲ್ಲಿಸುತ್ತಿರುವ ಅನುಭವಿ ಮೇಲ್ವಿಚಾರಕರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುವವರು ಉದ್ಯಮದ ಮಾನದಂಡಗಳಿಗೆ ಅನುಗುಣವಾಗಿ ಉನ್ನತ ಶ್ರೇಣಿಯ ಬೋಧನೆಯಿಂದ ಪ್ರಯೋಜನ ಪಡೆಯುತ್ತಾರೆ. ಇದು ಉತ್ತಮ ಗುಣಮಟ್ಟದ ತರಬೇತಿಯನ್ನು ಪಡೆಯುವುದನ್ನು ಖಚಿತಪಡಿಸುತ್ತದೆ. ಕೈಗಾರಿಕಾ ಮಾನದಂಡಗಳಿಗೆ ಅನುಗುಣವಾಗಿ ಪರಿಣಿತಿಯನ್ನು ಬೆಳೆಸುತ್ತದೆ. ಹೆಚ್ಚುವರಿಯಾಗಿ ಈ ಕಾರ್ಯಕ್ರಮವು ಸಮಗ್ರ ಅಭಿವೃದ್ಧಿಗೆ ಒತ್ತು ನೀಡುತ್ತದೆ. ತರಬೇತಿ ಪಡೆಯುವವರಿಗೆ ಸುಧಾರಿತ ಕೌಶಲ್ಯ ಮತ್ತು ಜ್ಞಾನ ಸಂಪಾದನೆಯೊಂದಿಗೆ ಕಠಿಣ ದೈಹಿಕ ಮತ್ತು ಮಾನಸಿಕ ಸಮತೋಲನವನ್ನು ಪಡೆಯಲಿದ್ದಾರೆ.

ಈ ಬಗ್ಗೆ ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಹಣಕಾಸು ಮತ್ತು ಆಡಳಿತದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಜಿ.ಶಂಕರ ಮಾತನಾಡಿ, “2024 ನೇ ಸಾಲಿಗೆ ಟೊಯೋಟಾ ತಾಂತ್ರಿಕ ತರಬೇತಿ ಸಂಸ್ಥೆಗೆ (ಟಿಟಿಟಿಐ) ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ನಮ್ಮ ಟಿಟಿಟಿಐ ರೆಗ್ಯುಲರ್ ಪ್ರೋಗ್ರಾಂ ಮತ್ತು ಟೊಯೊಟಾ ಕೌಶಲ್ಯ ಕಾರ್ಯಕ್ರಮದ ಮೂಲಕ ನಾವು ವಿದ್ಯಾರ್ಥಿಗಳ ಜ್ಞಾನ, ಕೌಶಲ್ಯ ಮತ್ತು ಮನೋಭಾವವನ್ನು ಅಭಿವೃದ್ಧಿಪಡಿಸುವತ್ತ ಗಮನ ಹರಿಸುತ್ತೇವೆ. ವಿದ್ಯಾರ್ಥಿಗಳನ್ನು 360 ಡಿಗ್ರಿ ದೃಷ್ಟಿಕೋನದಿಂದ ಅಭಿವೃದ್ಧಿ ಪಡಿಸುತ್ತೇವೆ. ಇದರ ಪರಿಣಾಮವಾಗಿ ನಮ್ಮ ಪದವೀಧರರು ಭಾರತದಲ್ಲಿ ಮತ್ತು ಜಪಾನ್ ಮತ್ತು ಮಧ್ಯಪ್ರಾಚ್ಯ ದೇಶಗಳು ಸೇರಿದಂತೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. 2007 ರಲ್ಲಿ ಪ್ರಾರಂಭವಾದಾಗಿನಿಂದ ಟಿಟಿಟಿಐ 900ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯಶಸ್ವಿಯಾಗಿ ಪದವಿ ಪಡೆದಿದ್ದಾರೆ.

ಇದನ್ನೂ ಓದಿ: Bhatkal News: ಭಟ್ಕಳದ ಕಡವಿನಕಟ್ಟೆ ಹೊಳೆಯಲ್ಲಿ ಮುಳುಗಿ ಇಬ್ಬರ ಸಾವು

ಟಿಟಿಟಿಐ ಪದವೀಧರರು ರಾಷ್ಟ್ರೀಯ ಕೌಶಲ್ಯ ಸ್ಪರ್ಧೆ ಮತ್ತು ವಿಶ್ವ ಕೌಶಲ್ಯ ಸ್ಪರ್ಧೆಯಂತಹ ಪ್ರತಿಷ್ಠಿತ ಸ್ಪರ್ಧೆಗಳಲ್ಲಿ ಪ್ರಶಂಸನೀಯ ಸಾಧನೆಗಳನ್ನು ಮಾಡಿದ್ದಾರೆ. ಆ ಮೂಲಕ ರಾಷ್ಟ್ರಕ್ಕೆ ಹೆಮ್ಮೆ ತಂದಿದ್ದಾರೆ ಎಂದು ನಾವು ಹೆಮ್ಮೆಪಡುತ್ತೇವೆ. “ಸ್ಕಿಲ್ ಇಂಡಿಯಾ” ಮಿಷನ್‌ಗೆ ಕೊಡುಗೆ ನೀಡಲು ನಾವು ಹೆಮ್ಮೆಪಡುತ್ತೇವೆ. ಮುಂದಿನ ಪೀಳಿಗೆಯ ನುರಿತ ವೃತ್ತಿಪರರನ್ನು ಟೊಯೊಟಾ ಕುಟುಂಬಕ್ಕೆ ಸ್ವಾಗತಿಸಲು ಎದುರು ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಟಿಟಿಟಿಐ ಇತ್ತೀಚೆಗೆ ತನ್ನ ದಾಖಲಾತಿ ಸಮಾರ್ಥ್ಯವನ್ನು 600 ರಿಂದ 1200 ಕ್ಕೆ ದ್ವಿಗುಣಗೊಳಿಸಿದೆ. ಇದರಲ್ಲಿ 600 ಮಹಿಳಾ ವಿದ್ಯಾರ್ಥಿಗಳು ಸೇರಿದ್ದಾರೆ. ಅದರ ವಿಸ್ತರಣೆಯ ಪ್ರಮುಖ ಅಂಶವಾಗಿ ಲಿಂಗ ವೈವಿಧ್ಯತೆಯನ್ನು (ಲಿಂಗ ಸಮಾನತೆ) ಹೆಚ್ಚಿಸುವತ್ತ ದೃಢವಾದ ಗಮನ ಹರಿಸಲಾಗಿದೆ.

ಕೌಶಲ್ಯವನ್ನು ಉತ್ತೇಜಿಸಲು, ಟಿಟಿಟಿಐ ಜಪಾನ್ ಇಂಡಿಯಾ ಇನ್ಸ್ಟಿಟ್ಯೂಟ್ ಫಾರ್ ಮ್ಯಾನುಫ್ಯಾಕ್ಚರಿಂಗ್ (ಜಿಐಎಂ) ಕೌಶಲ್ಯ ವರ್ಗಾವಣೆ ಉತ್ತೇಜನ ಕಾರ್ಯಕ್ರಮದ ಅಡಿಯಲ್ಲಿ ಸಂಸ್ಥೆಗಳಲ್ಲಿ ಒಂದಾಗಿದೆ. ಇದು ಜಪಾನೀಸ್ ಶೈಲಿಯ ಉತ್ಪಾದನಾ ಕೌಶಲ್ಯಗಳು ಮತ್ತು ಅಭ್ಯಾಸಗಳನ್ನು ಬೆಳೆಸುವ ಗುರಿಯನ್ನು ಹೊಂದಿದೆ. ಆ ಮೂಲಕ ಭಾರತ ಸರ್ಕಾರದ ‘ಸ್ಕಿಲ್ ಇಂಡಿಯಾ’ ಮಿಷನ್‌ಗೆ ಕೊಡುಗೆ ನೀಡುತ್ತದೆ ಎಂದು ತಿಳಿಸಿದ್ದಾರೆ.

ಟಿಟಿಟಿಐ ರೆಗ್ಯುಲರ್ ಕೋರ್ಸ್

ಈ ಕೋರ್ಸ್‌ ಕೌಶಲ್ಯ, ಜ್ಞಾನ ಮತ್ತು ನಡವಳಿಕೆ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸಿದ ಸಮಗ್ರ ತರಬೇತಿ ವಿಧಾನವಾಗಿದೆ.

ಕೋರ್ಸ್‌ ಅವಧಿ: 3 ವರ್ಷಗಳು, ಕೋರ್ಸ್‌ಗೆ ಸೇರಲು ವಿದ್ಯಾರ್ಹತೆ: ಎಸ್ಎಸ್ಎಲ್ಸಿ ಪಾಸ್‌ ಒಟ್ಟಾರೆ ಶೇ.50 ಅಂಕ, ಗಣಿತ ಮತ್ತು ವಿಜ್ಞಾನ ತಲಾ ಶೇ.45 ರಷ್ಟು ಅಂಕ ಪಡೆದಿರಬೇಕು. ವಯಸ್ಸಿನ ಅರ್ಹತೆ: 16-17 ವರ್ಷದವರಾಗಿರಬೇಕು. ಕೋರ್ಸ್‌ ಟ್ರೇಡ್ಸ್: ಆಟೋಮೋಟಿವ್ ವೆಲ್ಡ್, ಆಟೋಮೋಟಿವ್ ಪೇಂಟ್, ಆಟೋಮೋಟಿವ್ ಅಸೆಂಬ್ಲಿ, ಮೆಕಾಟ್ರಾನಿಕ್ಸ್ ಆಗಿವೆ.

ಈ ಮೂರು ವರ್ಷದ ಕೋರ್ಸ್‌ಗೆ ಸೇರುವವರಿಗೆ ನ್ಯಾಷನಲ್ ಅಪ್ರೆಂಟಿಸ್ ಸರ್ಟಿಫಿಕೇಟ್‌ ಸಿಗಲಿದೆ. ಟೊಯೋಟಾ, ಜಿಮ್ (ಜಪಾನ್-ಇಂಡಿಯಾ ಇನ್ಸ್ಟಿಟ್ಯೂಟ್ ಫಾರ್ ಮ್ಯಾನುಫ್ಯಾಕ್ಚರಿಂಗ್) ಎಎಸ್‌ಡಿಸಿ (ಆಟೋಮೋಟಿವ್ ಸ್ಕಿಲ್ ಡೆವಲಪ್ಮೆಂಟ್ ಕೌನ್ಸಿಲ್) ಪ್ರಮಾಣಪತ್ರ ದೊರೆಯಲಿದೆ.

ಟೊಯೊಟಾ ಕೌಶಲ್ಯ ಕೋರ್ಸ್

ಉದ್ಯೋಗ ತರಬೇತಿಯೊಂದಿಗೆ ಉದ್ಯಮ ಸಮೃದ್ಧ ಪಠ್ಯಕ್ರಮದೊಂದಿಗೆ “ಕಲಿಯಿರಿ ಮತ್ತು ಸಂಪಾದಿಸಿ” ಪರಿಕಲ್ಪನೆಯಾಗಿದೆ. ಕೋರ್ಸ್‌ನ ಅವಧಿ: 2 ವರ್ಷಗಳು, ಕೋರ್ಸ್‌ಗೆ ಸೇರಲು ವಿದ್ಯಾರ್ಹತೆ: ಎಸ್ಎಸ್ಎಲ್ ಸಿ ತೇರ್ಗಡೆಯಾಗಿರಬೇಕು. ವಯಸ್ಸಿನ ಅರ್ಹತೆ: 18 ರಿಂದ 24 ವರ್ಷದವರಾಗಿರಬೇಕು. ಇ-ಎನ್‌ಟಿಸಿ (ಐಟಿಐಗೆ ಸಮಾನವಾದ ರಾಷ್ಟ್ರೀಯ ವ್ಯಾಪಾರ ಪ್ರಮಾಣಪತ್ರ), ಟೊಯೊಟಾ, ಜಿಮ್ (ಜಪಾನ್-ಇಂಡಿಯಾ ಇನ್ಸ್ಟಿಟ್ಯೂಟ್ ಫಾರ್ ಮ್ಯಾನುಫ್ಯಾಕ್ಚರಿಂಗ್) ಪ್ರಮಾಣ ಪತ್ರ ದೊರೆಯಲಿದೆ.

ಇದನ್ನೂ ಓದಿ: Dubbing Premier League : ಶನಿವಾರದಿಂದ 3ನೇ ಆವೃತ್ತಿಯ ಡಬ್ಬಿಂಗ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ

ಮೇ 26ರಂದು ಹುಬ್ಬಳ್ಳಿ, ತುಮಕೂರು, ಹಾಸನ ಹಾಗೂ ಮೇ 25 ರಂದು ಬಿಡದಿಯಲ್ಲಿ ಹಾಗೂ ಮೇ 24 ರಂದು ಶಿವಮೊಗ್ಗದಲ್ಲಿ ಪರೀಕ್ಷೆ ನಡೆಯಲಿವೆ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಟೊಯೊಟಾ ಇಂಡಿಯಾ ಟಿಟಿಟಿಐ (toyotabharat.com), ಮೊಬೈಲ್: 8050673677, 9591999667, ಲ್ಯಾಂಡ್‌ಲೈನ್- 080 66292546 ಗೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯ ಒಳಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಉದ್ಯೋಗ

Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Job Alert: ಭಾರತದ ಪ್ರಮುಖ ಖಾಸಗಿ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬಂಧನ್‌ ಬ್ಯಾಂಕ್‌ ದೇಶಾದ್ಯಂತ ಖಾಲಿ ಇರುವ 31 ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 12ನೇ ತರಗತಿ ತೇರ್ಗಡೆ ಹೊಂದಿದವರು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಮೇ 31 ಕೊನೆಯ ದಿನ. ಅಭ್ಯರ್ಥಿಗಳು ಕಂಪ್ಯೂಟರ್‌ ಜ್ಞಾನ ಹೊಂದಿರುವುದು ಕಡ್ಡಾಯ.

VISTARANEWS.COM


on

Job Alert
Koo

ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬಂಧನ್‌ ಬ್ಯಾಂಕ್‌ (Bandhan Bank) ದೇಶಾದ್ಯಂತ ಖಾಲಿ ಇರುವ 31 ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ (Bandhan Bank Assistant Notification 2024). 12ನೇ ತರಗತಿ ತೇರ್ಗಡೆ ಹೊಂದಿದವರು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಮೇ 31 ಕೊನೆಯ ದಿನ (Job Alert).

ವಿದ್ಯಾರ್ಹತೆ ಮತ್ತು ವಯೋಮಿತಿ

ದ್ವಿತೀಯ ಪಿಯುಸಿ ಪಾಸಾದವರು, ಪದವಿ ಪಡೆದವರು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿದರವರು ಅರ್ಜಿ ಸಲ್ಲಿಬಹುದು. ಅಭ್ಯರ್ಥಿಗಳು ಕಂಪ್ಯೂಟರ್‌ ಜ್ಞಾನ ಹೊಂದಿರುವುದು ಕಡ್ಡಾಯ. ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಅಂದರೆ ಅಭ್ಯರ್ಥಿಗಳು 1994ರ ಏಪ್ರಿಲ್‌ 3 ಮತ್ತು 2006ರ ಏಪ್ರಿಲ್‌ 3ರೊಳಗೆ ಜನಿಸಿರಬೇಕು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ ಮತ್ತು ಅರ್ಜಿ ಶುಲ್ಕ

ಸಂದರ್ಶನ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆನ್‌ಲೈನ್‌ ಮೂಲಕ ಸಂದರ್ಶನ ನಡೆಯಲಿದೆ. ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

ಕಾರ್ಯ ವೈಖರಿ

ಆಯ್ಕೆಯಾಗುವ ಉದ್ಯೋಗಿಗಳು ಗ್ರಾಹಕರ ಖಾತೆಗಳನ್ನು ನಿರ್ವಹಿಸುವುದು, ಹಣ ವರ್ಗಾವಣೆಗಳು ಮತ್ತು ಠೇವಣಿಗಳನ್ನು ಪ್ರಕ್ರಿಯೆ ನಡೆಸುವುದು, ಡ್ರಾಫ್ಟ್‌ ಮತ್ತು ಚೆಕ್‌ ನೀಡುವುದು, ಲಾಕರ್‌ಗಳ ನಿರ್ವಹಣೆ, ಗ್ರಾಹಕರ ಪ್ರಶ್ನೆಗಳಿಗೆ ಉತ್ತರ ನೀಡುವುದು ಮತ್ತು ಸಮಸ್ಯೆಗಳನ್ನು ಪರಿಹರಿಸುವುದು, ಬ್ಯಾಂಕಿನ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸುವುದು, ಕ್ಯಾಶ್ ನಿರ್ವಹಣೆ ಮುಂತಾದ ಜವಾಬ್ದಾರಿ ನಿರ್ವಹಿಸಬೇಕಾಗುತ್ತದೆ. ಉದ್ಯೋಗದ ಸ್ಥಳ: ಭಾರತಾದ್ಯಂತ.

ಬ್ಯಾಂಕ್‌ ಬಗ್ಗೆ

ಕೋಲ್ಕತ್ತಾದಲ್ಲಿ ಕೇಂದ್ರ ಕಚೇರಿ ಹೊಂದಿರುವ ಬಂಧನ್‌ ಬ್ಯಾಂಕ್‌ ದೇಶದ 34 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶಾಖೆಗಳನ್ನು ಹೊಂದಿದೆ. ಬ್ಯಾಂಕ್‌ಗೆ ಸುಮಾರು 2.51 ಕೋಟಿ ಗ್ರಾಹಕರಿದ್ದಾರೆ.

Bandhan Bankನ ಸಹಾಯಕ ಹುದ್ದೆಗಳ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಮೊದಲು ನಿಮ್ಮ ಹೆಸರು ನೋಂದಾಯಿಸಿ.
  • ಈಗ ಕಂಡುಬರುವ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಸಹಿ, ಫೋಟೊ ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಹೆಚ್ಚಿನ ವಿವರಗಳಿಗೆ ಎಚ್‌ಆರ್‌ ವಿಭಾಗದ ಫೋನ್‌ ನಂಬರ್‌: 7501496783 ಅಥವಾ ಇಮೇಲ್‌ hrraj.bankingofficial@gmail.com ಅನ್ನು ಸಂಪರ್ಕಿಸಿ.

ಇದನ್ನೂ ಓದಿ: Job Alert: ಗಮನಿಸಿ; ಬಿಎಂಟಿಸಿಯ 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 18 ಕೊನೆಯ ದಿನ

Continue Reading

ಉದ್ಯೋಗ

Job Alert: ಗುಡ್‌ನ್ಯೂಸ್‌: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಿದ ಕೆಪಿಎಸ್‌ಸಿ; ಇಲ್ಲಿದೆ ಹೊಸ ವೇಳಾಪಟ್ಟಿ

Job Alert: ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿ ಅಧಿಸೂಚನೆ ಹೊರಡಿಸಿದೆ. ಈ ಹಿಂದೆ 277 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮೇ 14 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಮೇ 24ರವರೆಗೆ ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 35 ವರ್ಷ. ಈ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಗುಡ್‌ನ್ಯೂಸ್‌. ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ (KPSC) ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಿ ಅಧಿಸೂಚನೆ ಹೊರಡಿಸಿದೆ (KPSC Group B (RPC) Recruitment 2024). ಈ ಹಿಂದೆ 277 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಮೇ 14 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ಮೇ 24ರವರೆಗೆ ಅವಕಾಶ ನೀಡಲಾಗಿದೆ (Job Alert).

ಬಿ.ಟೆಕ್‌ ವಿದ್ಯಾರ್ಹತೆಯುಳ್ಳವರಿಗೂ ಅವಕಾಶ

ಈ ಹಿಂದಿನ ಅಧಿಸೂಚನೆಯಲ್ಲಿನ ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್) (ವಿಭಾಗ 1) – 90 ಮತ್ತು ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್) (ವಿಭಾಗ-1) – 10 ಹುದ್ದೆಗಳಿಗೆ ಇಲಾಖೆಯ ಪ್ರಸ್ತಾವನೆಯಂತೆ ನಿಗದಿಪಡಿಸಲಾಗಿದ್ದ ವಿದ್ಯಾರ್ಹತೆಯ ಕೋರ್ಸ್‌ಗಳಲ್ಲಿ ಕೇವಲ ಬಿಇ ಪದವಿಗಳನ್ನು ಮಾತ್ರ ಈ ಹಿಂದೆ ಪರಿಗಣಿಸಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪ್ರಸ್ತುತ ಸರ್ಕಾರ ಈ ಹುದ್ದೆಗಳಿಗೆ ಬಿ.ಟೆಕ್ ಪದವಿಯನ್ನು ಸಹ ಪರಿಗಣಿಸಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಉಳಿದಂತೆ ಹಿಂದಿನ ಅಧಿಸೂಚನೆಯ ಷರತ್ತು ಅನ್ವಯ.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸಹಾಯಕ ಎಂಜಿನಿಯರ್‌ (ಸಿವಿಲ್‌) (ವಿಭಾಗ 1)- 92 ಹುದ್ದೆ, ವಿದ್ಯಾರ್ಹತೆ: ಬಿ.ಇ / ಬಿ.ಟೆಕ್‌ (ಸಿವಿಲ್‌ ಎಂಜಿನಿಯರಿಂಗ್‌)
ಸಹಾಯಕ ಎಂಜಿನಿಯರ್‌ (ಸಿವಿಲ್‌) (ವಿಭಾಗ 1)-90 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್‌)
ಭೂ ದಾಖಲೆಗಳ ಸಹಾಯಕ ನಿರ್ದೇಶಕರು-24 ಹುದ್ದೆ, ವಿದ್ಯಾರ್ಹತೆ: ಪದವಿ (ಸಿವಿಲ್‌ ಎಂಜಿನಿಯರಿಂಗ್‌)
ಪತ್ರಾಂಕಿತ ವ್ಯವಸ್ಥಾಪಕರು / ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು-21 ಹುದ್ದೆ, ವಿದ್ಯಾರ್ಹತೆ: ಪದವಿ
ಸಹಾಯಕ ನಿರ್ದೇಶಕರು – 20 ಹುದ್ದೆ, ವಿದ್ಯಾರ್ಹತೆ: ಬಿ.ಇ / ಬಿ.ಟೆಕ್‌ (ಎಂಜಿನಿಯರಿಂಗ್‌) ಅಥವಾ ಎಂಬಿಎ
ಸಹಾಯಕ ಎಂಜಿನಿಯರ್‌ (ಮೆಕ್ಯಾನಿಕಲ್‌) (ವಿಭಾಗ-1) – 10 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್‌)
ಕಾರ್ಖಾನೆಗಳ ಸಹಾಯಕ ನಿರ್ದೇಶಕರು – 7 ಹುದ್ದೆ, ವಿದ್ಯಾರ್ಹತೆ: ಪದವಿ (ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್‌)
ಬಾಯ್ಲರುಗಳ ಸಹಾಯಕ ನಿರ್ದೇಶಕರು – 3 ಹುದ್ದೆ, ವಿದ್ಯಾರ್ಹತೆ: (ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್‌)
ಭೂ ವಿಜ್ಞಾನಿ – 10 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ (ಜಿಯೋಲಜಿ / ಅಪ್ಲೈಡ್‌ ಜಿಯಾಲಜಿ.

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ಅಭ್ಯರ್ಥಿಗಳು 300 ರೂ., ಇತರ ಹಿಂದುಳಿದ ಅಭ್ಯರ್ಥಿಗಳು 150 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕಾಗಿಲ್ಲ.

ಪರಿಷ್ಕೃತ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಎಚ್ಎ‌ಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Continue Reading

ಉದ್ಯೋಗ

Job Alert: ಐಐಎಂಬಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

Job Alert: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್- ಸೈಬರ್ ​​ಸೆಕ್ಯುರಿಟಿ & ಕಾಂಪ್ಲಿಯೆನ್ಸ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನಾಳೆ (ಮೇ 16) ಕೊನೆಯ ದಿನ. ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಮಂಡಳಿಯಿಂದ ಇನ್ಫಾರ್ಮೇಶನ್ ಟೆಕ್ನಾಲಜಿ, ಕಂಪ್ಯೂಟರ್ ಸೈನ್ಸ್​​ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು (Indian Institute of Management Bengaluru) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ (IIMB Recruitment 2024). ಅನೇಕ ಮ್ಯಾನೇಜರ್- ಸೈಬರ್ ​​ಸೆಕ್ಯುರಿಟಿ & ಕಾಂಪ್ಲಿಯೆನ್ಸ್​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ನಾಳೆ (ಮೇ 16) ಕೊನೆಯ ದಿನ (Job alert).

ವಿದ್ಯಾರ್ಹತೆ

ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಮಂಡಳಿಯಿಂದ ಇನ್ಫಾರ್ಮೇಶನ್ ಟೆಕ್ನಾಲಜಿ, ಕಂಪ್ಯೂಟರ್ ಸೈನ್ಸ್​​ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ಅಲ್ಲದೆ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯಗಳನ್ನು ಹೊಂದಿರಬೇಕು. ಸೈಬರ್ ಸೆಕ್ಯುರಿಟಿ ಮ್ಯಾನೇಜ್‌ಮೆಂಟ್‌ ಕ್ಷೇತ್ರದಲ್ಲಿ 8 ವರ್ಷಗಳ ಅನುಭವ ಹೊಂದಿರುವುದು ಕಡ್ಡಾಯ. ಸೈಬರ್ ಸೆಕ್ಯುರಿಟಿ ಕಾರ್ಯಕ್ರಮಗಳನ್ನು ಅಭಿವೃದ್ಧಿಪಡಿಸುವ ಮತ್ತು ಕಾರ್ಯಗತಗೊಳಿಸುವ ಅನುಭವ ಇರಬೇಕು.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 13,20,000 ರೂ. – 14,50,000 ರೂ. ವಾರ್ಷಿಕ ವೇತನ ದೊರೆಯಲಿದೆ.

IIMB Recruitment 2024 ಅಧಿಚೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಇಮೇಲ್‌ ಐಡಿ, ಫೋನ್‌ ನಂಬರ್‌ ನೀಡಿ ಹೆಸರು ನೋಂದಾಯಿಸಿ.
  • ಸರಿಯಾದ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ ಮತ್ತು ಫೋಟೊ ಅಪ್‌ಲೋಡ್‌ ಮಾಡಿ.
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಎಲ್ಲ ಮಾಹಿತಿ ಸರಿಯಾಗಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಗಮನಿಸಿ, ಅಪೂರ್ಣ ಅರ್ಜಿಯನ್ನು ರಿಜೆಕ್ಟ್‌ ಆಗಲಿದೆ. ಹೀಗಾಗಿ ಸರಿಯಾಗಿ ಮಾಹಿತಿ ನೀಡಿ ಅಪ್ಲಿಕೇಷನ್‌ ಭರ್ತಿ ಮಾಡಿ.

ಇದನ್ನೂ ಓದಿ: Job Alert: ಎಚ್ಎ‌ಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Continue Reading
Advertisement
drowned 4 death in kolhapur
ಕ್ರೈಂ23 mins ago

Drowned: ಬಟ್ಟೆ ತೊಳೆಯಲು ಹೋಗಿ ನಾಲ್ವರು ಜಲ ಸಮಾಧಿ

Virat kohli
ಪ್ರಮುಖ ಸುದ್ದಿ29 mins ago

Virat kohli : ಆರ್​ಸಿಬಿ ಆಟಗಾರರಿಗೆ ಬ್ಯಾಟಿಂಗ್ ಅಭ್ಯಾಸ ನಡೆಸಲು ನೆರವಾದ ಕೊಹ್ಲಿ; ಇಲ್ಲಿದೆ ವಿಡಿಯೊ

Crime News
ಕ್ರೈಂ39 mins ago

Crime News: ಪತ್ನಿಯನ್ನು ಕೊಂದು ಶವದ ಫೋಟೊ ಸಂಬಂಧಿಕರಿಗೆ ಕಳುಹಿಸಿ ನೇಣಿಗೆ ಶರಣಾದ ಪತಿ; ಅನಾಥವಾಯ್ತು ಹೆಣ್ಣು ಮಗು

RCB vs CSK
ಕ್ರೀಡೆ44 mins ago

RCB vs CSK: ವಾಹನ ಸವಾರರೇ ಗಮನಿಸಿ, ಇಂದು ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

sarjapura boy murder case
ಕ್ರೈಂ1 hour ago

Murder Case: ಬಾಲಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್‌, ಮೊಬೈಲ್‌ ಗೀಳಿಗಾಗಿ ಅಣ್ಣನೇ ಕೊಂದ

Skin Care Tips
ಆರೋಗ್ಯ2 hours ago

Skin Care Tips: ಬಿಸಿಲಿನಿಂದ ಚರ್ಮ ಕಪ್ಪಾಗಿದೆಯಾ? ಇಲ್ಲಿದೆ ಸರಳ ಮನೆಮದ್ದು

karnataka Weather Forecast
ಮಳೆ2 hours ago

Karnataka Weather : ಈ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ

Food Tips Kannada
ಆರೋಗ್ಯ3 hours ago

Food Tips Kannada: ಶಕ್ತಿವರ್ಧಕಗಳಲ್ಲ, ನಿಮ್ಮ ಶಕ್ತಿಯನ್ನೇ ಬಸಿದು ತೆಗೆಯುವ ಆಹಾರಗಳಿವು!

World Aids Vaccine Day
ದೇಶ4 hours ago

World Aids Vaccine Day: ಇಂದು ವಿಶ್ವ ಏಡ್ಸ್ ಲಸಿಕೆ ದಿನ; ಈ ದಿನದ ಹಿನ್ನೆಲೆ ಏನು?

Dina Bhavishya
ಭವಿಷ್ಯ4 hours ago

Dina Bhavishya : ಈ ರಾಶಿಯವರ ಬೆನ್ನ ಹಿಂದೆ ನಡೆಯುತ್ತೆ ಪಿತೂರಿ..ಎಚ್ಚರವಾಗಿರಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ12 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌