SBI SO Recruitment 2023: ಎಸ್‌ಬಿಐಯಲ್ಲಿದೆ 439 ಹುದ್ದೆ; ಅರ್ಜಿ ಸಲ್ಲಿಕೆಗೆ ಇಂದೇ ಕೊನೆಯ ದಿನ Vistara News

ಉದ್ಯೋಗ

SBI SO Recruitment 2023: ಎಸ್‌ಬಿಐಯಲ್ಲಿದೆ 439 ಹುದ್ದೆ; ಅರ್ಜಿ ಸಲ್ಲಿಕೆಗೆ ಇಂದೇ ಕೊನೆಯ ದಿನ

SBI SO Recruitment 2023: ಎಸ್‌ಬಿಐ (SBI) 439 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಕ್ಟೋಬರ್‌ 6, 2023ರ ಒಳಗೆ ಅರ್ಜಿ ಸಲ್ಲಿಸಬಹುದು.

VISTARANEWS.COM


on

sbi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಉದ್ಯೋಗ ಹುಡುಕುವವರಿಗೆ ಎಸ್‌ಬಿಐ(SBI)ಉತ್ತಮ ಅವಕಾಶ ಒದಗಿಸುತ್ತಿದೆ. 439 ವಿಶೇಷ ಅಧಿಕಾರಿಗಳನ್ನು(SCO) ಆಯ್ಕೆ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಇರುವ ಶಾಖೆಗಳಿಗೆ ನೇಮಕಾತಿ ನಡೆಯಲಿದೆ ಎಂದು ನೋಟಿಫಿಕೇಷನ್‌ನಲ್ಲಿ ತಿಳಿಸಲಾಗಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಇಂದು (ಅಕ್ಟೋಬರ್‌ 21, 2023).

ವಿದ್ಯಾರ್ಹತೆ

ನೋಟಿಫಿಕೇಷನ್‌ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಂಪ್ಯೂಟರ್‌ ಸೈನ್ಸ್‌, ಇನ್ಫಾರ್ಮೇಶನ್‌ ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್‌ ಅಥವಾ ಸಾಫ್ಟ್‌ವೇರ್‌ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು. ಅಲ್ಲದೆ ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಥವಾ ಸರ್ಕಾರಿ ನಿಯಂತ್ರಕ ಸಂಸ್ಥೆಗಳಿಂದ ಅನುಮೋದಿಸಲ್ಪಟ್ಟ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಇದೇ ಕ್ಷೇತ್ರಗಳಲ್ಲಿ ಸ್ನಾತಕೋತ್ತರ ಪದವಿ (MCA ಅಥವಾ M. Tech/M.Sc.) ಹೊಂದಿದವರೂ ಅರ್ಹರು.

ಅರ್ಜಿ ಶುಲ್ಕ

ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್‌ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಪಾವತಿಸಬೇಕು. ಎಸ್ಸಿ, ಎಸ್ಟಿ ಮತ್ತು ಪಿಡಬ್ಲ್ಯೂಡಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳ ಶುಲ್ಕವನ್ನು ಮನ್ನಾ ಮಾಡಲಾಗಿದೆ. ಸಾಮಾನ್ಯ ಅಭ್ಯರ್ಥಿಗಳ ಶುಲ್ಕವನ್ನು ಮರುಪಾವತಿಸಲಾಗುವುದಿಲ್ಲ.

ಆಯ್ಕೆ ವಿಧಾನ

ವಿವಿಧ ಹಂತಗಳ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಮೊದಲು ಅರು ಸಲ್ಲಿಸಿದವರ ಶಾರ್ಟ್‌ ಲಿಸ್ಟ್‌ ಮಾಡಲಾಗುತ್ತದೆ. ಬಳಿಕ ಆಯ್ದ ಹುದ್ದೆಗಳಿಗೆ ಪರೀಕ್ಷೆ ನಡೆಯುತ್ತದೆ. ಅದರಲ್ಲಿ ಆಯ್ಕೆಯಾದವರ ಸಂದರ್ಶನ ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಜನರಲ್‌ ಆಪ್ಟಿಟ್ಯೂಡ್‌(General Aptitude) ಮತ್ತು ಪ್ರೊಫೆಷನಲ್‌ ನಾಲೆಡ್ಜ್‌ (Professional Knowledge) ಎನ್ನುವ ಎರಡು ಹಂತಗಳಿರುತ್ತವೆ.

ಇದನ್ನೂ ಓದಿ: Job Alert: ಸರ್ಕಾರಿ ಉದ್ಯೋಗ ಹುಡುಕುತ್ತಿದ್ದೀರಾ? ಇಲ್ಲಿವೆ ಭರಪೂರ ಅವಕಾಶಗಳು

ವಯೋಮಿತಿ

ಅಸಿಸ್ಟೆಂಟ್‌ ಮ್ಯಾನೇಜರ್- 32 ವರ್ಷ
ಅಸಿಸ್ಟೆಂಟ್‌ ಜನರಲ್ ಮ್ಯಾನೇಜರ್- 45 ವರ್ಷ
ಮ್ಯಾನೇಜರ್- 38 ವರ್ಷ
ಡೆಪ್ಯುಟಿ ಮ್ಯಾನೇಜರ್- 35 ವರ್ಷ
ಚೀಫ್‌ ಮ್ಯಾನೇಜರ್- 42 ವರ್ಷ
ಪ್ರೊಜೆಕ್ಟ್ ಮ್ಯಾನೇಜರ್- 35 ವರ್ಷ
ಸೀನಿಯರ್‌ ಪ್ರೊಜೆಕ್ಟ್ ಮ್ಯಾನೇಜರ್ 38 ವರ್ಷ

ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಅರ್ಜಿ ಸಲ್ಲಿಸುವ ವಿಧಾನ

  • ಮೊದಲು ಅಧಿಕೃತ ವೆಬ್‌ಸೈಟ್ SBI sbi.co.in. ಕ್ಲಿಕ್‌ ಮಾಡಿ
  • ನೋಂದಣಿ ಮಾಡಿಕೊಳ್ಳಿ
  • ನೋಂದಣಿಯಾದ ಬಳಿಕ ಲಾಗಿನ್‌ ಪೇಜ್‌ಗೆ ಹೋಗಿ
  • ರುಜುವಾತುಗಳನ್ನು ನಮೂದಿಸಿ
  • ಲಾಗಿನ್‌ ಬಟನ್‌ ಕ್ಲಿಕ್‌ ಮಾಡಿ
  • ಪ್ರಾಥಮಿಕ ಮಾಹಿತಿಗಳಾದ ಹೆಸರು, ಜನ್ಮ ದಿನಾಂಕ, ವಿಳಾಸ, ಶೈಕ್ಷಣಿಕ ಅರ್ಹತೆ, ಪ್ರಸ್ತುತದ ಉದ್ಯೋಗ ಮುಂತಾದ ಮಾಹಿತಿ ಒದಗಿಸಿ
  • ಮಾಹಿತಿಯನ್ನು ಸೇವ್‌ ಮಾಡಿ Validate and Next ಬಟನ್‌ ಕ್ಲಿಕ್‌ ಮಾಡಿ
  • ನಿಮ್ಮ ಫೋಟೊ ಮತ್ತು ಸಹಿಯನ್ನು ಅಪ್‌ಲೋಡ್‌ ಮಾಡಿ
  • ಅಗತ್ಯವಾದ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ
  • ಆನ್‌ಲೈನ್‌ ಮೂಲಕ ಶುಲ್ಕ ಪಾವತಿಸಿ (ನೆಟ್‌ ಬ್ಯಾಂಕಿಂಗ್‌, ಕ್ರೆಡಿಟ್‌ ಕಾರ್ಡ್‌, ಡೆಬಿಟ್‌ ಕಾರ್ಡ್‌, ಯುಪಿಐ ಮೂಲಕ ಪಾವತಿಸುವ ಅವಕಾಶವಿದೆ.)
  • Submit ಬಟನ್‌ ಮೇಲೆ ಕ್ಲಿಕ್‌ ಮಾಡಿ
  • ಕೊನೆಯದಾಗಿ ಭವಿಷ್ಯದ ಅಗತ್ಯಗಳಿಗಾಗಿ ಅರ್ಜಿಯ ಪ್ರಿಂಟ್‌ ಔಟ್‌ ತೆಗೆದಿಡಿ

ಇನ್ನಷ್ಟು ಉದ್ಯೋಗದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉದ್ಯೋಗ

Job news: ಖರಗ್ಪುರ ಐಐಟಿ ಕ್ಯಾಂಪಸ್‌ನಲ್ಲಿ 6 ವಿದ್ಯಾರ್ಥಿಗಳಿಗೆ ಸಿಕ್ತು ಕೋಟಿ ರೂ. ಸಂಬಳದ ಆಫರ್‌!

Job news: 2023ರ ಪ್ಲೇಸ್‌ಮೆಂಟ್‌ ಅಧಿವೇಶನದ ಮೊದಲ ದಿನದಂದು ಖರಗ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ ದಾಖಲೆ ಬರೆದಿದೆ. ಪ್ರಿ-ಪ್ಲೇಸ್‌ಮೆಂಟ್‌ ಆಫರ್‌ಗಳು ಸೇರಿದಂತೆ 700ಕ್ಕೂ ಹೆಚ್ಚು ಉದ್ಯೋಗಾವಕಾಶ ಪಡೆದುಕೊಂಡಿದೆ.

VISTARANEWS.COM


on

iit
Koo

ಲಕ್ನೋ: 2023ರ ಪ್ಲೇಸ್‌ಮೆಂಟ್‌ ಅಧಿವೇಶನದ ಮೊದಲ ದಿನದಂದು ಖರಗ್ಪುರದ ಇಂಡಿಯನ್ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ (Indian Institute of Technology-IIT) ದಾಖಲೆ ಬರೆದಿದೆ. ಪ್ರಿ-ಪ್ಲೇಸ್‌ಮೆಂಟ್‌ ಆಫರ್‌ಗಳು (PPOs) ಸೇರಿದಂತೆ 700ಕ್ಕೂ ಹೆಚ್ಚು ಉದ್ಯೋಗಾವಕಾಶ ಪಡೆದುಕೊಂಡಿದೆ ಎಂದು ಸಂಸ್ಥೆ ತಿಳಿಸಿದೆ. 19ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಆಫರ್‌ಗಳನ್ನು ವಿದ್ಯಾರ್ಥಿಗಳು ಸ್ವೀಕರಿಸಿದ್ದಾರೆ. ಆ ಪೈಕಿ ಆರು ವಿದ್ಯಾರ್ಥಿಗಳಿಗೆ ಮೊದಲ ದಿನದಂದು 1 ಕೋಟಿ ರೂ.ಗಿಂತ ಹೆಚ್ಚಿನ ಪ್ಯಾಕೇಜ್‌ ಲಭಿಸಿದೆ ಎಂದು ಮೂಲಗಳು ತಿಳಿಸಿವೆ (Job news).

61ಕ್ಕೂ ಹೆಚ್ಚು ಕಂಪನಿಗಳು ಭಾಗಿ

“61ಕ್ಕೂ ಹೆಚ್ಚು ಕಂಪನಿಗಳು ನಮ್ಮ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಕೊಡುಗೆಗಳನ್ನು ನೀಡಿವೆ. ಮುಖ್ಯವಾಗಿ ಸಾಫ್ಟ್‌ವೇರ್‌, ಅನಾಲಿಟಿಕ್ಸ್, ಫೈನಾನ್ಸ್-ಬ್ಯಾಂಕಿಂಗ್, ಕನ್ಸಲ್ಟಿಂಗ್ ಮತ್ತು ಕೋರ್ ಎಂಜಿನಿಯರಿಂಗ್ ವಿಭಾಗಗಳಲ್ಲಿ ಉದ್ಯೋಗ ಲಭಿಸಿದೆ. ಆ್ಯಪಲ್, ಆರ್ಥರ್ ಡಿ ಲಿಟಲ್, ಡಾ ವಿನ್ಸಿ, ಕ್ಯಾಪಿಟಲ್ ಒನ್, ಡಿಇ ಶಾ, ಎಕ್ಸ್ಎಲ್ ಸರ್ವೀಸಸ್, ಗ್ಲೀನ್, ಗೂಗಲ್, ಗ್ರಾವಿಟನ್, ಮೈಕ್ರೋಸಾಫ್ಟ್, ಮೆಕಿನ್ಸೆ, ಕ್ವಾಂಟ್ಬಾಕ್ಸ್, ಡಾಟಾ ಬ್ರಿಕ್ಸ್, ಸ್ಕ್ವೇರ್ ಪಾಯಿಂಟ್, ಟಿಎಸ್ಎಂ, ಪಾಲೊ ಆಲ್ಟೊ ಮತ್ತಿತರ ಕ್ಷೇತ್ರಗಳ ಕಂಪೆನಿಗಳು ಆಫರ್‌ ನೀಡಿವೆ. ಹೈಬ್ರಿಡ್ ಮೋಡ್‌ ವಿಧಾನದಲ್ಲಿ ಸಂಸ್ಥೆಗಳು ಸಂದರ್ಶನಗಳನ್ನು ನಡೆಸುತ್ತಿವೆʼʼ ಎಂದು ಸಂಸ್ಥೆ ತಿಳಿಸಿದೆ.

ವೃತ್ತಿ ಅಭಿವೃದ್ಧಿ ಕೇಂದ್ರ(ಸಿಡಿಸಿ)ದ ಅಧ್ಯಕ್ಷ ಪ್ರೊಫೆಸರ್ ರಾಜೀಬ್ ಮೈಟಿ ಮಾತನಾಡಿ, “ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯ ಮತ್ತು ಸಾಧನೆಗಳನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುವುದಕ್ಕೆ ಆದ್ಯತೆ ನೀಡುತ್ತಿದ್ದೇವೆ. ಲಭಿಸುವ ಅವಕಾಶಗಳ ಸದುಪಯೋಗಪಡಿಸಿಕೊಳ್ಳಲು ವಿದ್ಯಾರ್ಥಿಗಳನ್ನು ತಯಾರು ಮಾಡಲಾಗುತ್ತದೆʼʼ ಎಂದು ಹೇಳಿದ್ದಾರೆ.

ಸಿಡಿಸಿ ಈ ವರ್ಷ ಮೊದಲ ಬಾರಿಗೆ “ಅಕಾಡೆಮಿಯಾ ಇಂಡಸ್ಟ್ರಿ ಕಾನ್‌ಕ್ಲೇವ್‌ (Academia Industry Conclave (AIC) 2023” ಅನ್ನು ಆಯೋಜಿಸಿ ವಿದ್ಯಾರ್ಥಿಗಳು ಮತ್ತು ಕಂಪನಿ ನಡುವಿನ ಅಂತರವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ.

ಖರಗ್ಪುರ ಐಐಟಿ ನಿರ್ದೇಶಕ ಪ್ರೊಫೆಸರ್ ವಿ.ಕೆ.ತಿವಾರಿ ಮಾತನಾಡಿ, “ಹೆಚ್ಚಿನ ಪ್ರಮುಖ ಕಂಪನಿಗಳು ಆಗಸ್ಟ್‌ನಲ್ಲಿ ಇಂಟರ್ನ್‌ಶಿಪ್‌ಗಾಗಿ ಕ್ಯಾಂಪಸ್‌ಗೆ ಭೇಟಿ ನೀಡಿದ್ದವು. 2023-24ರ ಪದವಿ ಬ್ಯಾಚ್‌ನ ವಿದ್ಯಾರ್ಥಿಗಳು ಈ ಪ್ಲೇಸ್‌ಮೆಂಟ್‌ ಡ್ರೈವ್ ಬಗ್ಗೆ ಹೆಚ್ಚಿನ ಉತ್ಸಾಹ ತೋರಿದ್ದಾರೆ. ಜತೆಗೆ ಕಂಪೆನಿಗಳು ಈ ಸಂಸ್ಥೆಯ ಪ್ರತಿಭೆಯನ್ನು ಬಳಸಿಕೊಳ್ಳಲು ಮುಂದಾಗಿರುವುದು ಉತ್ತಮ ಬೆಳವಣಿಗೆʼʼ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

“ಜಾಗತಿಕ ಆರ್ಥಿಕ ಹಿಂಜರಿತದ ಪರಿಣಾಮ ನೇಮಕಾತಿ ಪ್ರತಿಕ್ರಿಯೆ ಮೇಲೆ ಪ್ರಭಾವ ಬೀರಿದೆ. ಅದಾಗ್ಯೂ ನಮ್ಮಲ್ಲಿನ ವಿದ್ಯಾರ್ಥಿಗಳು ಮೊದಲ ದಿನವೇ 700ಕ್ಕೂ ಹೆಚ್ಚು ಉದ್ಯೋಗಾವಕಾಶ ಪಡೆದುಕೊಂಡಿದ್ದಾರೆ. ಅದರಲ್ಲೂ ಆರು ವಿದ್ಯಾರ್ಥಿಗಳಿಗೆ 1 ಕೋಟಿ ರೂ.ಗಿಂತ ಹೆಚ್ಚಿನ ಪ್ಯಾಕೇಜ್‌ ಲಭಿಸಿದೆ. 19ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಆಫರ್‌ಗಳನ್ನು ವಿದ್ಯಾರ್ಥಿಗಳು ಸ್ವೀಕರಿಸಿದ್ದಾರೆʼʼ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Job Alert: ದ್ವಿತೀಯ ಪಿಯುಸಿ ಪಾಸಾದವರಿಗೆ ಗೋಲ್ಡನ್‌ ಚಾನ್ಸ್‌; 540 ಫಾರೆಸ್ಟ್‌ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

ದೇಶಾದ್ಯಂತದ ಐಐಟಿಗಳು ತಮ್ಮ ಪ್ಲೇಸ್‌ಮೆಂಟ್‌ ಡ್ರೈವ್ ಅನ್ನು ಈಗಾಗಲೇ ಪ್ರಾರಂಭಿಸಿವೆ. ದೆಹಲಿ ಐಐಟಿಯ ಸುಮಾರು 480 ವಿದ್ಯಾರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ಲಭಿಸಿದೆ. ಗುವಾಹಟಿ ಐಐಟಿ ತನ್ನ ಪ್ಲೇಸ್‌ಮೆಂಟ್‌ ಡ್ರೈವ್‌ನ ಮೊದಲ ದಿನದಂದು 59 ಕಂಪನಿಗಳಿಂದ 164 ಆಫರ್‌ಗಳನ್ನು ಸ್ವೀಕರಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಮೆಂಟ್ ಮೂಲಕ ತಿಳಿಸಿ

Continue Reading

ಉದ್ಯೋಗ

Teachers Recruitment : ಪ್ರಾಥಮಿಕ ಶಾಲೆಯಲ್ಲಿ 2120 ದೈಹಿಕ ಶಿಕ್ಷಕರ ಹುದ್ದೆ ಭರ್ತಿಗೆ ತೀರ್ಮಾನ

Teachers Recruitment : ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಪ್ರಸ್ತುತ ಖಾಲಿ ಇರುವ ಪೈಕಿ 2120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿದ್ದು, ಆ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

VISTARANEWS.COM


on

Physical Education Teacher
Koo

ಬೆಂಗಳೂರು: ಸತತ 15 ವರ್ಷದಿಂದ ನೇಮಕಾತಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರಿಗೆ (Recruitment of Physical Education Teachers) ಈ ಸರ್ಕಾರದ ಅವಧಿಯಲ್ಲಿ ಗುಡ್‌ ನ್ಯೂಸ್‌ ಸಿಗಲಿದೆಯೇ? ಹೌದು ಎನ್ನುತ್ತದೆ ಶಿಕ್ಷಣ ಸಚಿವರ ಉತ್ತರ! ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಪ್ರಸ್ತುತ ಖಾಲಿ ಇರುವ ಪೈಕಿ 2120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು (Teachers Recruitment) ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿದ್ದು, ಆ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Education Minister Madhu Bangarappa) ಹೇಳಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಪದವೀಧರ ಕ್ಷೇತ್ರದ ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಅವರು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಕೇಳಲಾದ ಚುಕ್ಕೆ ಗುರುತಿನ ಪ್ರಶ್ನೆಗೆ ಶಿಕ್ಷಣ ಸಚಿವರು ಈ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: Karnataka Live News : ಪಿಎಸ್‌ಐ ಪರೀಕ್ಷೆ ಮುಂದೂಡಿಕೆ; ಜ. 23ಕ್ಕೆ ಎಕ್ಸಾಂ ಎಂದ ಗೃಹ ಸಚಿವ ಪರಮೇಶ್ವರ್‌

ರಾಜ್ಯದಲ್ಲಿ ಸುಮಾರು 17 ವರ್ಷಗಳಿಂದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕಾತಿ ಮಾಡಿಲ್ಲ ಎಂದು ದೈಹಿಕ ಶಿಕ್ಷಣ ಶಿಕ್ಷಕರ ಸಂಘಟನೆಯವರು ಆರೋಪ ಮಾಡುತ್ತಿದ್ದಾರೆ. ಇದು ನಿಜವೇ ಎಂದು ಎಸ್‌.ವಿ. ಸಂಕನೂರ ಪ್ರಶ್ನೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ದ ಸರ್ಕಾರಿ ಪ್ರಾಥಮಿಕ ಶಾಲೆಗೆ ಸಂಬಂಧಿಸಿದಂತೆ 2008ನೇ ಸಾಲಿನಲ್ಲಿ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಪ್ರೌಢಶಾಲಾ ವಿಭಾಗಕ್ಕೆ ಸಂಬಂಧಿಸಿದಂತೆ 2014-15ನೇ ಸಾಲಿಗೆ 148 ಹುದ್ದೆಗಳಿಗೆ ನೇಮಿಸಿಕೊಳ್ಳಲಾಗಿದೆ ಎಂದು ಉತ್ತರಿಸಿದ್ದಾರೆ.

ರಾಜ್ಯದಲ್ಲಿ ಒಟ್ಟು 41913 ಪ್ರಾಥಮಿಕ ಶಾಲೆಗಳಿದ್ದು, ಅವುಗಳಲ್ಲಿ ಮಂಜೂರಾದ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು 6772 ಆಗಿದೆ. ಆದರೆ, ಕಾರ್ಯನಿರತ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳು 4127 ಆಗಿದೆ. ಹೀಗಾಗಿ ಇದರಲ್ಲಿ 2120 ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಸಂಬಂಧ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿದ್ದು, ಆ ಇಲಾಖೆಯ ಸಮಾಲೋಚನೆಯಲ್ಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಪ್ರೌಢಶಾಲೆಯಲ್ಲಿ ನೇಮಕಕ್ಕೆ ಸಚಿವರು ಹೇಳಿದ್ದೇನು?

ಇನ್ನು ಪ್ರೌಢಶಾಲಾ ವಿಭಾಗಕ್ಕೆ ಸಂಬಂಧಪಟ್ಟಂತೆ ರಾಜ್ಯದಲ್ಲಿ 4844 ಸರ್ಕಾರಿ ಪ್ರೌಢ ಶಾಲೆಗಳು ಇವೆ. ಇದರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಮಂಜೂರಾದ ಹುದ್ದೆ 5210 ಆಗಿದೆ. ರಾಜ್ಯ ಸರ್ಕಾರಿ ಪ್ರೌಢಶಾಲೆಗಳಲ್ಲಿರುವ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್‌ 1 ಶಿಕ್ಷಕರ ಕಾರ್ಯನಿರತ ಹುದ್ದೆಗಳ ಸಂಖ್ಯೆ 3589 ಆಗಿದೆ.

ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ವಿವಿಧ ವೃಂದದ ದೈಹಿಕ ಶಿಕ್ಷಣ ಶಿಕ್ಷಕರ 200 ಹುದ್ದೆಗಳು ಸೇರಿ ಒಟ್ಟು 2500 ಶಿಕ್ಷಕರುಗಳ ಹುದ್ದೆಗಳನ್ನು 15000 ಪದವೀಧರ ಪ್ರಾಥಮಿಕ ಶಾಲಾ ನೇಮಕಾತಿಯಲ್ಲಿ ಭರ್ತಿಯಾಗದೇ ಖಾಲಿ ಉಳಿದ ಹುದ್ದೆಗಳಿಗೆ ಹೊಂದಾಣಿಕೆ ಮಾಡಿಕೊಳ್ಳುವ ಷರತ್ತಿಗೆ ಒಳಪಟ್ಟು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರವು ಅನುಮತಿ ನೀಡಿರುತ್ತದೆ.

ಆದರೆ, ಸದರಿ 15000 ಹುದ್ದೆಗಳಲ್ಲಿ ಪ್ರೌಢಶಾಲಾ ಶಿಕ್ಷಕರುಗಳ ನೇಮಕಾತಿಗೆ 1648 ಹುದ್ದೆಗಳು ಮಾತ್ರ ಉಳಿದಿರುವ ಪ್ರಯುಕ್ತ ಪ್ರಸ್ತುತ ಸಾಲಿನಲ್ಲಿ 200 ದೈಹಿಕ ಶಿಕ್ಷಕರ ಹುದ್ದೆಯು ಸೇರಿದ್ದು ಒಟ್ಟು 2500 ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡುವ ಪ್ರಸ್ತಾವನೆಯ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ನಿವೃತ್ತಿಯಿಂದ ತೆರವಾಗಿರುವ ದೈಹಿಕ ಶಿಕ್ಷಣ ಉಪನ್ಯಾಸಕರನ್ನು ಮಾಡಿಕೊಳ್ಳದಂತೆ ನೇಮಕಾತಿ ಆರ್ಥಿಕ ಇಲಾಖೆಯಿಂದ ಟಿಪ್ಪಣಿ ರೂಪದಲ್ಲಿ ಆದೇಶ ಬಂದಿದೆಯೇ? ಹಾಗಿದ್ದಲ್ಲಿ, ಈ ಕುರಿತು ಸರ್ಕಾರ ಕೈಗೊಂಡ ಕ್ರಮವೇನು? ಎಂದು ಪರಿಷತ್‌ ಸದಸ್ಯ ಎಸ್‌.ವಿ. ಸಂಕನೂರ ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ: Belagavi Winter Session: ಸದನದಲ್ಲಿ ಮುಟ್ಟಿನ ಶುಚಿತ್ವ ಚರ್ಚೆ; ಜನವರಿಯಿಂದ ಶಾಲೆಗಳಿಗೆ ನ್ಯಾಪ್‌ಕಿನ್‌

ಇಲ್ಲಿ ಪಿಡಿಎಫ್‌ ಪ್ರತಿಯನ್ನು ಲಗತ್ತಿಸಿದ್ದು, ಡೌನ್‌ಲೋಡ್‌ ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಪಡೆದುಕೊಳ್ಳಬಹುದು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ದೈಹಿಕ ಶಿಕ್ಷಣ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳದಂತೆ ಆರ್ಥಿಕ ಇಲಾಖೆಯು ಯಾವುದೇ ನಿರ್ಬಂಧವನ್ನು ವಿಧಿಸಿರುವುದಿಲ್ಲ. ಆದರೆ, ಆರ್ಥಿಕ ಇಲಾಖೆಯು ದಿನಾಂಕ:14/06/2023ರಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರ ಹುದ್ದೆಗೆ ಪ್ರಸ್ತುತ ಇರುವ 120 ವಿದ್ಯಾರ್ಥಿಗಳ ಕಾರ್ಯಭಾರದ ಮಾನದಂಡವನ್ನು 500 ವಿದ್ಯಾರ್ಥಿಗಳಿಗೆ ಹೆಚ್ಚಿಸಲು ನಿರ್ಣಯಿಸುವಂತೆ ಆರ್ಥಿಕ ಇಲಾಖೆಯು ಸಲಹೆ ನೀಡಿದ್ದು, ಈ ಬಗ್ಗೆ ಸರ್ಕಾರದಲ್ಲಿ ಪರಿಶೀಲನೆಯಲ್ಲಿರುತ್ತದೆ ಎಂದು ಹೇಳಿದ್ದಾರೆ.

Continue Reading

ಉದ್ಯೋಗ

Job alert: ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್ ವೈರಾಲಜಿಯಲ್ಲಿ 80 ಹುದ್ದೆ; ಡಿಪ್ಲೋಮಾ ಓದಿದವರು ಅರ್ಜಿ ಸಲ್ಲಿಸಿ

Job alert: ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್ ವೈರಾಲಜಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಗೆ ಡಿಸೆಂಬರ್‌ 10 ಕೊನೆಯ ದಿನ.

VISTARANEWS.COM


on

pune
Koo

ಬೆಂಗಳೂರು: ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್ ವೈರಾಲಜಿ (National Institute of Virology-NIV) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸುಮಾರು 80 ಹುದ್ದೆಗಳು ಖಾಲಿ ಇದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಟೆಕ್ನಿಕಲ್ ಅಸಿಸ್ಟೆಂಟ್ ಮತ್ತು ಟೆಕ್ನಿಶಿಯನ್ ಹುದ್ದೆಗಳು ಇವಾಗಿದ್ದು, ತಾತ್ಕಾಲಿಕ ಆಧಾರದ ಮೇಲೆ ಭರ್ತಿ ಮಾಡಲಾಗುವುದು ಎಂದು ಅಧಿಸೂಚನೆ ತಿಳಿಸಿದೆ. ಅರ್ಜಿ ಸಲ್ಲಿಕೆಗೆ ಡಿಸೆಂಬರ್‌ 10 ಕೊನೆಯ ದಿನ (Job alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಟೆಕ್ನಿಕಲ್‌ ಅಸಿಸ್ಟೆಂಟ್‌ (ಗ್ರೂಪ್‌ ಬಿ)- 49 ಹುದ್ದೆಗಳು ಖಾಲಿ ಇದ್ದು, ಡಿಪ್ಲೋಮಾ (ಎಂಜಿನಿಯರಿಂಗ್‌)/ಪದವಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಟೆಕ್ನೀಶಿಯನ್‌ (ಗ್ರೂಪ್‌ ಸಿ)-31 ಹುದ್ದೆಗಳಿದ್ದು, 12ನೇ ತರಗತಿ/ಡಿಪ್ಲೋಮಾ (ಎಂಜಿನಿಯರಿಂಗ್‌) ಓದಿದವರು ಅರ್ಜಿ ಸಲ್ಲಿಸಬಹುದು. ಟೆಕ್ನಿಕಲ್‌ ಅಸಿಸ್ಟೆಂಟ್‌ ಹುದ್ದೆಗೆ ಅರ್ಜಿ ಸಲ್ಲಿಸುವವರ ಗರಿಷ್ಠ ವಯೋಮಿತಿ 30 ವರ್ಷ ಮತ್ತು ಟೆಕ್ನೀಶಿಯನ್‌ ಹುದ್ದೆಗೆ ಗರಿಷ್ಠ ವಯೋಮಿತಿ 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ/ಎಸ್‌ಟಿ 5 ವರ್ಷ, ಒಬಿಸಿ 3 ವರ್ಷ, ಪಿಡಬ್ಲ್ಯುಬಿಡಿ 10 ವರ್ಷ, ಪಿಡಬ್ಲ್ಯುಬಿಡಿ + ಒಬಿಸಿ 13 ವರ್ಷ, ಪಿಡಬ್ಲ್ಯುಬಿಡಿ + ಎಸ್‌ಸಿ/ಎಸ್‌ಟಿ 15 ವರ್ಷಗಳ ಸಡಿಲಿಕೆ ಇದೆ.

ಅರ್ಜಿ ಶುಲ್ಕ

ಎಸ್‌ಸಿ/ಎಸ್‌ಟಿ/ವಿಶೇಷ ಚೇತನರು/ಎಲ್ಲ ವರ್ಗದ ಮಹಿಳೆಯರಿಗೆ ಶುಲ್ಕವಿಲ್ಲ. ಜನರಲ್‌/ಒಬಿಸಿ/ಇಡಬ್ಲ್ಯುಎಸ್‌ ಅಭ್ಯರ್ಥಿಗಳು 300 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕವೇ ಪಾವತಿಸಬೇಕು. ಇದಕ್ಕಾಗಿ ಡೆಬಿಟ್‌, ಕ್ರೆಡಿಟ್‌ ಕಾರ್ಡ್‌, ನೆಟ್‌ ಬ್ಯಾಂಕಿಂಗ್‌ ಬಳಸಬಹುದು.

ಆಯ್ಕೆ ವಿಧಾನ

ಆನ್‌ಲೈನ್‌ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಡಿಸೆಂಬರ್‌ 16 ಮತ್ತು 17ರಂದು ಪರೀಕ್ಷೆ ನಡೆಯಲಿದೆ. ಗಮನಿಸಿ ಪ್ರಶ್ನೆ ಪತ್ರಿಕೆ ಇಂಗ್ಲಿಷ್‌ ಮತ್ತು ಹಿಂದಿಯಲ್ಲಿ ಮಾತ್ರ ಲಭ್ಯ. ತಪ್ಪಾದ ಉತ್ತರಕ್ಕೆ ನೆಗೆಟಿವ್‌ ಅಂಕಗಳಿದ್ದು ಎಚ್ಚರಿಕೆಯಿಂದ ಉತ್ತರ ಬರೆಯಬೇಕು ಎಂದು ಪ್ರಕಟಣೆ ತಿಳಿಸಿದೆ. ಆಯ್ಕೆಯಾದವರಿಗೆ 35,400 ರೂ.-1,12,400 ರೂ. (ಟೆಕ್ನಿಕಲ್‌ ಅಸಿಸ್ಟೆಂಟ್‌ ), 19,900 ರೂ.-63,200 ರೂ. (ಟೆಕ್ನಿಶಿಯನ್) ಮಾಸಿಕ ವೇತನ ಸಿಗಲಿದೆ.

ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸುವ ಮುನ್ನ ನಿಮ್ಮ ವೆಬ್‌ ಕ್ಯಾಮ್‌ ಆನ್‌ ಮಾಡಿಡಿ.
  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
  • ಸೂಕ್ತ ಇಮೇಲ್‌ ಐಡಿ, ಫೋನ್‌ ನಂಬರ್‌ ನಮೂದಿಸಿ
  • ನೋಂದಣಿಯಾದ ಬಳಿಕ ಇಮೇಲ್‌/ಮೊಬೈಲ್‌ ನಂಬರ್‌ಗೆ ಯೂಸರ್‌ ನೇಮ್‌/ಅಪ್ಲಿಕೇಷನ್‌ ನಂಬರ್‌ ಬರಲಿದೆ
  • ಬಳಿಕ ಅಪ್ಲಿಕೇಷನ್‌ ಭರ್ತಿ ಮಾಡಿ. ಗಮನಿಸಿ ಒಮ್ಮೆ ನಮೂದಿಸಿದ ವಿವರಗಳನ್ನು ಎಡಿಟ್‌ ಮಾಡುವ ಆಯ್ಕೆಗಳಿಲ್ಲ. ಹೀಗಾಗಿ ಎಚ್ಚರಿಕೆಯಿಂದ ಅಪ್ಲಿಕೇಷನ್‌ ತುಂಬಿ
  • ಅಗತ್ಯವಾದ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ
  • ಅರ್ಜಿ ಶುಲ್ಕ ಪಾವತಿಸಿ
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ, ಸಂಶಯ ನಿವಾರಣೆಗೆ ಅಧಿಕೃತ ವೆಬ್‌ಸೈಟ್‌ https://niv.icmr.org.in/ಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಪದವೀಧರರಿಗೆ ಗುಡ್‌ನ್ಯೂಸ್‌; ಗೃಹ ಸಚಿವಾಲಯದ 995 ಹುದ್ದೆಗಳಿಗೆ ಅರ್ಜಿ ಆಹ್ವಾನ

Continue Reading

ಉದ್ಯೋಗ

Government employee : ಸರ್ಕಾರಿ ನೌಕರರ ದಶಕಗಳ ಬೇಡಿಕೆ ಈಡೇರಿಕೆ; ಆಸ್ತಿ ಖರೀದಿ ಮತ್ತಷ್ಟು ಸರಳ!

Government employee : ಈಗ ಸರ್ಕಾರಿ ಉದ್ಯೋಗಿಗಳು ಚರ/ ಸ್ಥಿರ ಆಸ್ತಿ ಖರೀದಿಗೆ ಮುಂಚೆ ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯಬೇಕಿದೆ. ಈಗ ಈ ನಿಯಮವನ್ನು ಸಡಿಲಿಸಲು ಮುಂದಾಗಿದ್ದು, ಕಾಲಮಿತಿಯಲ್ಲಿ ಸಂಬಂಧಿಸಿದ ಪ್ರಾಧಿಕಾರಕ್ಕೆ ವರದಿ ಮಾಡುವಂತೆ ನಿಯಮ ತರಲು ಮುಂದಾಗಲಾಗಿದೆ.

VISTARANEWS.COM


on

Property Purchase by Government Employee
Koo

ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರಿ ನೌಕರಿಯಲ್ಲಿರುವವರು (Government Job) ಆಸ್ತಿ ಖರೀದಿ (Property Purchase) ಮಾಡಲು ಹರಸಾಹಸವನ್ನೇ ಪಡಬೇಕಿತ್ತು. ಆದರೆ, ರಾಜ್ಯ ಸರ್ಕಾರ ಈ ಸಮಸ್ಯೆಯನ್ನು ನಿವಾರಿಸಲು ಮುಂದಾಗಿದ್ದು, ಶೀಘ್ರದಲ್ಲಿಯೇ ಸರ್ಕಾರಿ ನೌಕರರ (Government employee) ಆಸ್ತಿ ಖರೀದಿ ಪ್ರಕ್ರಿಯೆಯನ್ನು ಸರಳೀಕರಿಸುವತ್ತ ಹೆಜ್ಜೆಯನ್ನಿಟ್ಟಿದೆ. ಈ ನಿಟ್ಟಿನಲ್ಲಿ ಆದೇಶ ಹೊರಬಿದ್ದಲ್ಲಿ ನೌಕರರ ದಶಕಗಳ ಬೇಡಿಕೆ ಈಡೇರಿದಂತೆ ಆಗಲಿದೆ.

ರಾಜ್ಯ ಮಟ್ಟದ ಜಂಟಿ ಸಮಾಲೋಚನಾ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ. ಹೀಗಾಗಿ ಸರ್ಕಾರಿ ನೌಕರರಿಗೆ ಆಸ್ತಿ ಖರೀದಿ ವಿಚಾರದಲ್ಲಿ ಇದ್ದ ತೊಡಕು ಶೀಘ್ರವೇ ಪರಿಹಾರವಾಗಲಿದೆ.

ನಿಯಮ ಸಡಿಲಿಕೆಗೆ ತೀರ್ಮಾನ

ಸರ್ಕಾರಿ ನೌಕರರು ತಮ್ಮ ಸೇವಾವಧಿಯಲ್ಲಿ ಚರ/ ಸ್ಥಿರ ಆಸ್ತಿ ಖರೀದಿ ಮಾಡುವ ಪೂರ್ವದಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯಬೇಕು ಎಂಬ ನಿಯಮವು ಈಗಾಗಲೇ ಚಾಲ್ತಿಯಲ್ಲಿದೆ. ಈಗ ಈ ನಿಯಮವನ್ನು ಸಡಿಲಿಸಲು ತೀರ್ಮಾನ ಮಾಡಲಾಗಿದೆ. ಇದರ ಅನುಸಾರ ಕಾಲಮಿತಿಯಲ್ಲಿ ಸಂಬಂಧಿಸಿದ ಪ್ರಾಧಿಕಾರಕ್ಕೆ ವರದಿ ಮಾಡುವಂತೆ ಸರಳೀಕೃತ ನಿಯಮದಲ್ಲಿ ಬದಲಾವಣೆ ತರಲಾಗುತ್ತಿದೆ. ಈ ರೀತಿಯಾದರೆ ಸರ್ಕಾರಿ ನೌಕರರು ಸಂಬಂಧಿಸಿದ ಪ್ರಾಧಿಕಾರಕ್ಕೆ ವರದಿ ನೀಡಬೇಕಾಗುತ್ತದೆ.

ಆಸ್ತಿ ಮತ್ತು ಹೊಣೆಗಾರಿಕೆಗಳ ವಿವರ ಪಟ್ಟಿ

ಸರ್ಕಾರಿ ನೌಕರರ ಆಸ್ತಿ ಮತ್ತು ಹೊಣೆಗಾರಿಕೆಗಳ ವಿವರ ಪಟ್ಟಿಯನ್ನು ನಿಗದಿತ ಸಮಯಕ್ಕೆ ಸಲ್ಲಿಸಬೇಕು. ಈ ಬಗ್ಗೆ ಈಗಾಗಲೇ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಗಳು, 1996ರ ನಿಯಮಗಳು, ಪರಿಷ್ಕೃತವಾಗಿ ಕರ್ನಾಟಕ ರಾಜ್ಯ ನಾಗರಿಕ ನಾಗರಿಕ ಸೇವಾ (ನಡತೆ) ನಿಯಮಗಳು, 2021 ದಿನಾಂಕ 07/01/2021ರಿಂದ ಜಾರಿಗೆ ಬಂದಿವೆ. ಸದರಿ ನಿಯಮಗಳ ನಿಯಮ 24ರಲ್ಲಿ ಸರ್ಕಾರಿ ನೌಕರರು ಚರ/ ಸ್ಥಿರ ಆಸ್ತಿ ಖರೀದಿ/ ವಿಲೇ ಮಾಡುವುದಕ್ಕೆ ಸಂಬಂಧಿಸಿದಂತೆ ಉಪಬಂಧಗಳನ್ನು ಕಲ್ಪಿಸಲಾಗಿದೆ.

ನೇಮಕಾತಿಗೆ ಮೊದಲು ಸ್ಥಿರ – ಚರಾಸ್ತಿ ವಿವರ ನೀಡಬೇಕು

ಯಾವುದೇ ಸರ್ಕಾರಿ ನೌಕರಿಗೆ ನೇಮಕವಾದಾಗ ಆರಂಭದಲ್ಲಿಯೇ ಅವರು ತಮ್ಮ ಹೆಸರಿನಲ್ಲಿ ಇಲ್ಲವೇ ಕುಟುಂಬ ಸದಸ್ಯರ ಹೆಸರಿನಲ್ಲಾಗಲಿ ಅಥವಾ ತಮಗೆ ಸಂಬಂಧಪಟ್ಟ ಇತರ ವ್ಯಕ್ತಿಯ ಹೆಸರಿನಲ್ಲಿ ಪಿತ್ರಾರ್ಜಿತವಾಗಿ ಬಂದ ಸ್ವಯಂ ಅರ್ಜಿಸಿದ ಅಥವಾ ಗುತ್ತಿಗೆ ಅಥವಾ ಅಡಮಾನದ ಮೇಲೆ ಹೊಂದಿರುವ ಸ್ಥಿರಾಸ್ತಿಯ ಸಂಪೂರ್ಣ ವಿವರಗಳನ್ನು ನೀಡಬೇಕು. ಈ ವಿವರಗಳನ್ನು ನಿಗದಿತ ನಮೂನೆಯಲ್ಲಿ ಪೂರಕ ದಾಖಲೆಗಳೊಂದಿಗೆ ನೇಮಕವಾದ ಮೂರು ತಿಂಗಳೊಳಗೆ ಸಲ್ಲಿಸಬೇಕು.

ವರ್ಷವೂ ನೀಡಬೇಕು ದಾಖಲೆ

ಇದರ ಹೊರತಾಗಿಯೂ ಸರ್ಕಾರಿ ನೌಕರರು ಪ್ರತಿ ವರ್ಷ ಡಿಸೆಂಬರ್ 31ಕ್ಕೆ ತಮ್ಮ ಹಾಗೂ ಕುಟುಂಬದ ಎಲ್ಲ ಸದಸ್ಯರ ಆಸ್ತಿ ವಿವರ ಮತ್ತು ಹೊಣೆಗಾರಿಕೆಗಳ ವಾರ್ಷಿಕ ವಿವರ ಪಟ್ಟಿಯನ್ನು ನೀಡಬೇಕು. ಜತೆಗೆ ನಿಯಮ 24 ರಲ್ಲಿನ ಉಪಬಂಧಗಳಂತೆ ಪ್ರತಿಯೊಬ್ಬ ಸರ್ಕಾರಿ ನೌಕರರು ಚರ ಮತ್ತು ಸ್ಥಿರಾಸ್ತಿಗೆ ಸಂಬಂಧಿಸಿದಂತೆ ನಿಯಮಗಳಲ್ಲಿ ತಿಳಿಸಿರುವ ಸಂದರ್ಭಗಳಲ್ಲಿ ಅನುಮತಿ ಪಡೆಯುವುದು ಹಾಗೂ ವರದಿ ನೀಡುವುದು ಕಡ್ಡಾಯವಾಗಿದೆ. ಒಂದು ವೇಳೆ ಇದರಲ್ಲಿ ವಿಫಲರಾದರೆ, ನಡತೆ ನಿಯಮಗಳಿಗೆ ವ್ಯತಿರಿಕ್ತ ನಡವಳಿಕೆ ಪ್ರದರ್ಶಿಸಿದ ಕಾರಣ ನೀಡಿ ಅಂಥವರ ವಿರುದ್ಧ ಶಿಸ್ತು ಕ್ರಮ ಜರುಗಿಸಬಹುದಾಗಿದೆ.

ಇದನ್ನೂ ಓದಿ: Panic button : ಇಂದಿನಿಂದ ವಾಹನಗಳಿಗೆ ಪ್ಯಾನಿಕ್ ಬಟನ್ ಕಡ್ಡಾಯ; ಅಳವಡಿಸಲು ಆಗುವ ಖರ್ಚೆಷ್ಟು?

ಸಭೆಯ ಇತರ ಪ್ರಮುಖ ನಿರ್ಧಾರಗಳು

  • ಎಲ್ಲ ಇಲಾಖೆಗಳಲ್ಲಿ ಪ್ರತಿ ವರ್ಷ ಮೊದಲ ತಿಂಗಳಿಲ್ಲಿ ಜ್ಯೇಷ್ಠತಾ ಪಟ್ಟಿಯನ್ನು ತಯಾರಿಸಿ ಪ್ರತಿ ಆರು ತಿಂಗಳಿಗೊಮ್ಮೆ ಮುಂಬಡ್ತಿ ಕೋಟಾದಡಿ ಹುದ್ದೆಗಳನ್ನು ಗುರುತಿಸಿ ಪದೋನ್ನತಿ ನೀಡುವುದು.
  • ಲೋಕ ಅದಾಲತ್ ಮಾದರಿಯಲ್ಲಿ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ಕಾಲಮಿತಿಯಲ್ಲಿ ನೌಕರರ ಇಲಾಖಾ ವಿಚಾರಣೆಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ನಿರ್ಧರಿಸಲಾಗಿದೆ.
  • ಸರ್ಕಾರಿ ನೌಕರರು ಪಾಸ್‌ಪೋರ್ಟ್‌ಗಳ ನಿರಾಕ್ಷೇಪಣಾ ಪ್ರಮಾಣ ಪತ್ರವನ್ನು ಸಂಬಂಧಿಸಿದ ಕಛೇರಿಯ ಮುಖ್ಯಸ್ಥರಿಂದ ಪಡೆಯುವ ಅವಕಾಶವನ್ನು ಜಾರಿಗೆ ತರುವುದು.
  • ಜಿಪಿಎಫ್ ಉಳಿತಾಯ ಖಾತೆಗಳಿಂದ ಮುಂಗಡ/ ಭಾಗಶಃ ವಾಪಸಾತಿ ಪಡೆಯುವ ಸಂದರ್ಭದಲ್ಲಿ ಇದ್ದ ಕಠಿಣ ನಿಯಮವನ್ನು ಸರಳೀಕರಣಗೊಳಿಸುವುದು.
Continue Reading
Advertisement
Chetan Sakariya
ಕ್ರಿಕೆಟ್1 min ago

Chetan Sakariya : ಹರಾಜಿಗೆ ಮೊದಲೇ ಎಂಗೇಜ್ಮೆಂಟ್​ ಮಾಡಿಕೊಂಡ ಐಪಿಎಲ್​ನ ಸ್ಟಾರ್​ ಬೌಲರ್​

loan new
ಮನಿ-ಗೈಡ್2 mins ago

Money Guide: ಆನ್‌ಲೈನ್‌ ಸಾಲದ ವಂಚನೆಯ ಕೂಪಕ್ಕೆ ಬೀಳದಿರಲು ಏನು ಮಾಡಬೇಕು?

R Ashok
ಕರ್ನಾಟಕ4 mins ago

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

lusty old man and a woman
ಕರ್ನಾಟಕ13 mins ago

Fraud Case : ಚಂದದ ಹುಡುಗಿ ಅಂತ ಆಸೆಪಟ್ಟು ರೂಮಿಗೆ ಹೋದರೆ ಅಲ್ಲಿ ಕಂಡಿದ್ದೇ ಬೇರೆ!

beer shop
ಕರ್ನಾಟಕ18 mins ago

Excise Revenue: ಸರ್ಕಾರಕ್ಕೆ ಗ್ಯಾರಂಟಿ ಕಿಕ್‌ ಕೊಟ್ಟ ಬಿಯರ್; 22,500 ಕೋಟಿ ಆದಾಯ

Byjus
ಕ್ರಿಕೆಟ್25 mins ago

BCCI : ಬಿಸಿಸಿಐಗೆ ದೊಡ್ಡ ಮೊತ್ತ ಬಾಕಿ, ಬೈಜೂಸ್​ಗೆ ಮತ್ತೊಂದು ಸಂಕಷ್ಟ

Political Journey of to be chief minister telangana, Revanth Reddy
ದೇಶ46 mins ago

ರೇವಂತ್ ರೆಡ್ಡಿ ಅಂದು ಎಬಿವಿಪಿ ನಾಯಕ; ಇಂದು ಕಾಂಗ್ರೆಸ್‌ನಿಂದ ತೆಲಂಗಾಣ ಸಿಎಂ!

iit
ಉದ್ಯೋಗ51 mins ago

Job news: ಖರಗ್ಪುರ ಐಐಟಿ ಕ್ಯಾಂಪಸ್‌ನಲ್ಲಿ 6 ವಿದ್ಯಾರ್ಥಿಗಳಿಗೆ ಸಿಕ್ತು ಕೋಟಿ ರೂ. ಸಂಬಳದ ಆಫರ್‌!

Uttara Kannada News Cleanliness movement programme in Vajralli
ಉತ್ತರ ಕನ್ನಡ57 mins ago

Uttara Kannada News: ವಜ್ರಳ್ಳಿಯಲ್ಲಿ ಸ್ವಚ್ಛತಾ ಆಂದೋಲನ

Ashta Lakshmi Puja programme inauguration at Gunderi village
ಚಿತ್ರದುರ್ಗ58 mins ago

Chitradurga News: ಗುಂಡೇರಿ ಗ್ರಾಮದಲ್ಲಿ ಅಷ್ಟಲಕ್ಷ್ಮಿ ಪೂಜೆ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ15 hours ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ2 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ3 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ3 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ4 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ4 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ5 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ5 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

ಟ್ರೆಂಡಿಂಗ್‌