SSC CHSL 2022 | ದ್ವಿತೀಯ ಪಿಯುಸಿ ಓದಿದವರಿಗೆ ಕೇಂದ್ರ ಸರ್ಕಾರಿ ಜಾಬ್‌ - Vistara News

ಉದ್ಯೋಗ

SSC CHSL 2022 | ದ್ವಿತೀಯ ಪಿಯುಸಿ ಓದಿದವರಿಗೆ ಕೇಂದ್ರ ಸರ್ಕಾರಿ ಜಾಬ್‌

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿನ 4,500 ಹುದ್ದೆಗಳ ನೇಮಕಕ್ಕೆ ಪರೀಕ್ಷೆ (SSC CHSL 2022) ನಡೆಸುತ್ತಿದ್ದೆ. ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

VISTARANEWS.COM


on

SSC CHSL 2022 central government jobs
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗವು (ಎಸ್‌ಎಸ್‌ಸಿ) ಬಹುನಿರೀಕ್ಷಿತ ಕಂಬೈನ್ಡ್‌ ಹೈಯರ್‌ ಸೆಕೆಂಡರಿ ಲೆವೆಲ್‌ (ಸಿಎಚ್‌ಎಸ್‌ಎಲ್‌) (10+2) ಪರೀಕ್ಷೆಗೆ (SSC CHSL 2022 ) ಅರ್ಜಿ ಆಹ್ವಾನಿಸಿದೆ. ಈ ಪರೀಕ್ಷೆ ಮೂಲಕ ಕೇಂದ್ರದ ವಿವಿಧ ಇಲಾಖೆ, ಸಚಿವಾಲಯಗಳಲ್ಲಿ ಖಾಲಿ ಇರುವ, ಗ್ರೂಪ್‌ “ಸಿʼʼಯ ಲೋವರ್‌ ಡಿವಿಷನ್‌ ಕ್ಲರ್ಕ್‌, ಜೂನಿಯರ್‌ ಸೆಕ್ರೆಟೇರಿಯಟ್‌ ಅಸಿಸ್ಟೆಂಟ್‌, ಡೇಟಾ ಎಂಟ್ರಿ ಆಪರೇಟರ್‌ ಹುದ್ದೆಗಳಿಗೆ ಈ ಪರೀಕ್ಷೆ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ.

ಈ ಪರೀಕ್ಷೆಯನ್ನು ” Combined Higher Secondary (10+2) Level Examination, 2022ʼʼ ಎಂದು ಕರೆಯಲಾಗತ್ತದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು 04-01-2023 (ರಾತ್ರಿ 11:00 ಗಂಟೆಯವರೆಗೆ) ಕೊನೆಯ ದಿನವಾಗಿರುತ್ತದೆ. ಅರ್ಜಿ ಶುಲ್ಕ ಪಾವತಿಸಲು 05-01-2023 ಕೊನೆಯ ದಿನವೆಂದು ಪ್ರಕಟಿಸಲಾಗಿದೆ.

ನೇಮಕಾತಿಯ ವೇಳಾಪಟ್ಟಿ

SSC CHSL 2022

ಸದ್ಯ ಒಟ್ಟಾರೆ 4,500 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ. ಈ ಹುದ್ದೆಗಳ ಸಂಖ್ಯೆಯು ಹೆಚ್ಚಾಗುವ ನಿರೀಕ್ಷೆ ಇದ್ದು, ಈ ಬಗ್ಗೆ ಎಸ್‌ಎಸ್‌ಸಿಯ ವೆಬ್‌ಸೈಟ್‌ನಲ್ಲಿ (https://ssc.nic.in/Portal/TentativeVacancy) ಮುಂದೆ ಮಾಹಿತಿ ನೀಡಲಾಗುವುದು ಎಂದು ಪ್ರಕಟಿಸಲಾಗಿದೆ.

ವಿದ್ಯಾರ್ಹತೆ ಏನು?
ದ್ವಿತೀಯ ಪಿಯುಸಿಯಲ್ಲಿ ಅಥವಾ 12ನೇ ತರಗತಿಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ದಾಖಲೆ ಪರಿಶೀಲನೆಯ ಸಂದರ್ಭದಲ್ಲಿ 04-01-2023 ಗೂ ಮುನ್ನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದಕ್ಕೆ ದಾಖಲೆಗಳನ್ನು ಹಾಜರು ಪಡಿಸಬೇಕಿರುತ್ತದೆ.

ವಯೋಮಿತಿ ಎಷ್ಟು?
18-27 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಂದರೆ ಅಭ್ಯರ್ಥಿಗಳು 02-01-1995ರ ನಂತರ 01-01-2004ಕ್ಕಿಂತ ಮೊದಲು ಜನಿಸಿರಬೇಕು. ವಯೋಮಿತಿಯಲ್ಲಿ ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ಇರುತ್ತದೆ.

ಅರ್ಜಿ ಶುಲ್ಕ ಎಷ್ಟು ಕಟ್ಟಬೇಕು?
ಸಾಮಾನ್ಯ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಮಹಿಳಾ ಮತ್ತು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿರುತ್ತದೆ. ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಬಹುದಾಗಿರುತ್ತದೆ. ಆನ್‌ಲೈನ್‌ನಲ್ಲಿ ಸಾಧ್ಯವಾಗದೇ ಇರುವವರು ಎಸ್‌ಬಿಐ ಬ್ಯಾಂಕ್‌ನಲ್ಲಿ ಚಲನ್‌ ಮೂಲಕ ಪಾವತಿಸಲು ಅವಕಾಶ ನೀಡಲಾಗಿದೆ.

ನೇಮಕ ಹೇಗೆ?
ಮೊದಲಿಗೆ ಕಂಪ್ಯೂಟರ್‌ ಆಧಾರಿತ ಎರಡು ಹಂತದ ಪರೀಕ್ಷೆ (Tier-I, Tier-II) ನಡೆಸಲಾಗುತ್ತದೆ. Tier-Iರ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮಾತ್ರ Tier-II ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. Tier-II ಪರೀಕ್ಷೆಯ ಎಲ್ಲ ವಿಭಾಗಗಳಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಸ್ಕಿಲ್‌ ಟೆಸ್ಟ್‌ ನಡೆಸಲಾಗುತ್ತದೆ. ನಂತರ ದಾಖಲೆ ಪರಿಶೀಲನೆ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ. ಪರೀಕ್ಷೆಗಳು ಹೇಗಿರುತ್ತವೆ, ಯಾವೆಲ್ಲಾ ವಿಷಯಗಳನ್ನು ಒಳಗೊಂಡಿರುತ್ತದೆ ಎಂಬ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸಲು ವೆಬ್‌ಸೈಟ್‌ ವಿಳಾಸ : https://ssc.nic.in/Portal/Apply

ರಾಜ್ಯದಲ್ಲಿ ಎಲ್ಲೆಲ್ಲಿ ಪರೀಕ್ಷೆ ನಡೆಯುತ್ತದೆ?
ರಾಜ್ಯದ ಒಟ್ಟು ಎಂಟು ಜಿಲ್ಲಾ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಸಲಾಗುತ್ತೆ. ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿ ಪರೀಕ್ಷಾ ಕೇಂದ್ರ ಇರಲಿದೆ.

ವೇತನ ಎಷ್ಟಿರುತ್ತದೆ?
ಲೋವರ್‌ ಡಿವಿಷನ್‌ ಕ್ಲರ್ಕ್‌, ಜೂನಿಯರ್‌ ಸೆಕ್ರೆಟೇರಿಯಟ್‌ ಅಸಿಸ್ಟೆಂಟ್‌ : Pay Level-2 (Rs.19,900-63,200)
ಡೇಟಾ ಎಂಟ್ರಿ ಆಪರೇಟರ್‌ (ಡಿಇಒ): Pay Level-4(Rs. 25,500-81,100) and Level-5(Rs.
29,200-92,300)
ಡೇಟಾ ಎಂಟ್ರಿ ಆಪರೇಟರ್‌ ಗ್ರೇಡ್‌ “ಎ”: Pay Level-4(Rs. 25,500-81,100).

ನೇಮಕದ ಕುರಿತ ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌: https://ssc.nic.in/
ಬೆಂಗಳೂರು ಎಸ್‌ಎಸ್‌ಸಿ ಸಹಾಯವಾಣಿ ಸಂಖ್ಯೆ: 080-25502520, 09483862020

ಇದನ್ನೂ ಓದಿ | KPSC Recruitment 2022 | ಕೆಪಿಎಸ್‌ಸಿಯಿಂದ ವಿವಿಧ 23 ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಟಿಸಿಎಸ್‌ನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

Job Alert: ದೇಶದ ಐಟಿ ವಲಯದ ಅತಿದೊಡ್ಡ ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ತನ್ನಲ್ಲಿ ಖಾಲಿ ಇರುವ ಸಾವಿರಾರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಬೆಂಗಳೂರು, ಚೆನ್ನೈ, ಹೈದರಾಬಾದ್, ಎನ್‌ಸಿಆರ್‌, ಪುಣೆ, ಅಹಮದಾಬಾದ್, ಮುಂಬೈ, ಕೋಲ್ಕತ್ತಾ ಮುಂತಾದೆಡೆಗೆ ನೇಮಕಾತಿ ನಡೆಯಲಿದೆ. ವಿವಿಧ ಹುದ್ದೆಗಳಿಗೆ ಸಂಬಂಧಿಸಿ ಅರ್ಜಿ ಸಲ್ಲಿಸಲು ಜುಲೈವರೆಗೂ ಅವಕಾಶ ನೀಡಲಾಗಿದೆ.

VISTARANEWS.COM


on

Job Alert
Koo

ಬೆಂಗಳೂರು: ಒಂದೊಳ್ಳೆ ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಾದರೆ ನಿಮಗೊಂದು ಗುಡ್‌ನ್ಯೂಸ್‌. ದೇಶದ ಐಟಿ ವಲಯದ ಅತಿದೊಡ್ಡ ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ತನ್ನಲ್ಲಿ ಖಾಲಿ ಇರುವ ಸಾವಿರಾರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. 1 ವರ್ಷದ ಕಾರ್ಯಾನುಭ ಇದ್ದವರೂ ಅರ್ಜಿ ಸಲ್ಲಿಸಬಹುದು (Tcs Recruitment 2024). ಬೆಂಗಳೂರು ಸೇರಿದಂತೆ ದೇಶಾದ್ಯಂತ ವಿವಿಧ ಹುದ್ದೆಗಳು ಖಾಲಿ ಇದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ವಿವಿಧ ಹುದ್ದೆಗಳಿಗೆ ಸಂಬಂಧಿಸಿ ಅರ್ಜಿ ಸಲ್ಲಿಸಲು ಜುಲೈವರೆಗೂ ಅವಕಾಶ ನೀಡಲಾಗಿದೆ (Job Alert).

ಹುದ್ದೆಗಳ ವಿವರ

ವೈರ್‌ಲೈನ್‌ – ವೈರ್‌ಲೆಸ್ ನೆಟ್‌ವರ್ಕ್‌ ಸೆಕ್ಯೂರಿಟಿ, ಆಪರೇಷನ್ ಎನೇಬಲ್ಮೆಂಟ್ -ಹ್ಯೂಮನ್ ರಿಸೋರ್ಸ್, ಇಪಿ ಡ್ರೈವ್
ಆಪರೇಷನ್‌ ಸ್ಪೆಷಲಿಸ್ಟ್‌, ಎಂಎಫ್‌ಜಿ ಇಯು ಡ್ರೈವ್, ಎನ್‌ಜಿಎಂ ಎಪಿಎಸಿ ಬಿಎಫ್‌ಎಸ್‌, ಕಸ್ಟಮರ್ ಸರ್ವೀಸ್, ಆ್ಯಕ್ಟಿವ್ ಡೈರೆಕ್ಟರಿ ಡೈರೆಕ್ಟರಿ, ಎಸ್‌ಸಿಸಿಎಂ, ವಿಂಡೋಸ್ ಅಡ್ಮಿನ್, ಜಾವ ಡೆವಲಪರ್, ಪಬ್ಲಿಕ್ ಕ್ಲೌಡ್ ಎಡಬ್ಲ್ಯೂಎಸ್ ಅಡ್ಮಿನ್, ಬ್ಯಾಕಪ್ ಅಡ್ಮಿನ್, ಸ್ಟೋರೇಜ್ ಅಡ್ಮಿನ್, DevOps Admin, ಮಿಡಲ್‌ವೇರ್ ಅಡ್ಮಿನ್, ಓಪೆನ್‌ಶಿಫ್ಟ್‌ ಅಡ್ಮಿನ್, ನೆಟ್‌ವರ್ಕ್ ಅಡ್ಮಿನ್, ಡಾಟಾಬೇಸ್ ಅಡ್ಮಿನ್, ಇಎಲ್‌ಕೆ ಅಡ್ಮಿನ್, ಸೆಕ್ಯೂರಿಟಿ ಎಸ್‌ಎಂಇ, ಟೀಮ್‌ ಸೆಂಟರ್, ಲಿನಕ್ಸ್‌ ಅಡ್ಮಿನ್,
ಮೆಕ್ಯಾನಿಕಲ್ ಡಿಸೈನ್, ಸರ್ವೀಸ್‌ನೌ ಡೆವಲಪರ್, ಓಪೆನ್‌ಸ್ಟಾಕ್‌ ಅಡ್ಮಿನ್, ನೆಟ್‌ವರ್ಕ್‌ ಟೆಸ್ಕಿಂಗ್ ಆ್ಯಂಡ್‌ ಆಟೋಮೇಷನ್, ಪ್ರೋಗ್ರೆಸ್ ಡಾಟಾಬೇಸ್ ಅಡ್ಮಿನಿಸ್ಟ್ರೇಟರ್, ಜಾವ ಫುಲ್‌ಸ್ಟಾಕ್ ಡೆವಲಪರ್ ಮುಂತಾಹ ಹುದ್ದೆಗಳು ಖಾಲಿ ಇವೆ.

ಗಮನಿಸಿ, ಒಂದೊಂದು ಹುದ್ದೆಗೂ ಅರ್ಜಿ ಸಲ್ಲಿಸಲು ಬೇರೆ ಬೇರೆ ದಿನಾಂಕ ಮತ್ತು ಕಾರ್ಯಾನುಭವ ನಿಗದಿ ಪಡಿಸಲಾಗಿದೆ. ಬೆಂಗಳೂರು, ಚೆನ್ನೈ, ಹೈದರಾಬಾದ್, ಎನ್‌ಸಿಆರ್‌, ಪುಣೆ, ಅಹಮದಾಬಾದ್, ಮುಂಬೈ, ಕೋಲ್ಕತ್ತಾ ಮುಂತಾದೆಡೆಗೆ ನೇಮಕಾತಿ ನಡೆಯಲಿದೆ.

ಹೆಚ್ಚಿನ ವಿವರಗಳಿಗೆ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನೀವು ಹುಡುಕುತ್ತಿರುವ ಆಸಕ್ತ ಹುದ್ದೆ ಸಿಕ್ಕಲ್ಲಿ ಅದರ ಮೇಲೆ ಕ್ಲಿಕ್ ಮಾಡಿ.
  • ನಂತರ ಈ ಹುದ್ದೆಯ ಕುರಿತು ಅರ್ಹತೆ, ರೋಲ್ ಕರ್ತವ್ಯ, ಅನುಭವ, ಇತರ ವಿವರಗಳು ಇರುತ್ತವೆ. ಓದಿಕೊಳ್ಳಿ.
  • ನಂತರ ‘Apply’ ಆಯ್ಕೆಯನ್ನು ಕ್ಲಿಕ್ ಮಾಡಿ.
  • ಇಮೇಲ್‌ ವಿಳಾಸ, ಪಾಸ್‌ವರ್ಡ್‌ ಮೂಲಕ ಸೈನ್‌ ಇನ್ ಆಗಿ, ಅರ್ಜಿ ಸಲ್ಲಿಸಿ.

ಇದನ್ನೂ ಓದಿ: Job alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅಪ್ಲೈ ಮಾಡಿ

Continue Reading

ಉದ್ಯೋಗ

Job Alert: ಗಮನಿಸಿ: 277 ಗ್ರೂಪ್‌ ಬಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಮೇ 24 ಕೊನೆಯ ದಿನ

Job Alert: ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ (KPSC) ಗ್ರೂಪ್‌ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸುಮಾರು 277 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಮೇ 24 ಕೊನೆಯ ದಿನ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 35 ವರ್ಷ. ಅರ್ಜಿ ಶುಲ್ಕವಾಗಿ ಸಾಮಾನ್ಯ ಅಭ್ಯರ್ಥಿಗಳು 300 ರೂ., ಇತರ ಹಿಂದುಳಿದ ಅಭ್ಯರ್ಥಿಗಳು 150 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕಾಗಿಲ್ಲ.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಗುಡ್‌ನ್ಯೂಸ್‌. ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ (KPSC) ಗ್ರೂಪ್‌ ಬಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ(KPSC Group B (RPC) Recruitment 2024). ಸುಮಾರು 277 ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಮೇ 24 ಕೊನೆಯ ದಿನ (Job Alert).

ಬಿ.ಟೆಕ್‌ ವಿದ್ಯಾರ್ಹತೆಯುಳ್ಳವರಿಗೂ ಅವಕಾಶ

ಈ ಹಿಂದಿನ ಅಧಿಸೂಚನೆಯಲ್ಲಿನ ಜಲ ಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ (ಸಿವಿಲ್) (ವಿಭಾಗ 1) – 90 ಮತ್ತು ಸಹಾಯಕ ಇಂಜಿನಿಯರ್ (ಮೆಕ್ಯಾನಿಕಲ್) (ವಿಭಾಗ-1) – 10 ಹುದ್ದೆಗಳಿಗೆ ಇಲಾಖೆಯ ಪ್ರಸ್ತಾವನೆಯಂತೆ ನಿಗದಿಪಡಿಸಲಾಗಿದ್ದ ವಿದ್ಯಾರ್ಹತೆಯ ಕೋರ್ಸ್‌ಗಳಲ್ಲಿ ಕೇವಲ ಬಿಇ ಪದವಿಗಳನ್ನು ಮಾತ್ರ ಈ ಹಿಂದೆ ಪರಿಗಣಿಸಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪ್ರಸ್ತುತ ಸರ್ಕಾರ ಈ ಹುದ್ದೆಗಳಿಗೆ ಬಿ.ಟೆಕ್ ಪದವಿಯನ್ನು ಸಹ ಪರಿಗಣಿಸಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ. ಉಳಿದಂತೆ ಹಿಂದಿನ ಅಧಿಸೂಚನೆಯ ಷರತ್ತು ಅನ್ವಯ.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸಹಾಯಕ ಎಂಜಿನಿಯರ್‌ (ಸಿವಿಲ್‌) (ವಿಭಾಗ 1)- 92 ಹುದ್ದೆ, ವಿದ್ಯಾರ್ಹತೆ: ಬಿ.ಇ / ಬಿ.ಟೆಕ್‌ (ಸಿವಿಲ್‌ ಎಂಜಿನಿಯರಿಂಗ್‌)
ಸಹಾಯಕ ಎಂಜಿನಿಯರ್‌ (ಸಿವಿಲ್‌) (ವಿಭಾಗ 1)-90 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್‌)
ಭೂ ದಾಖಲೆಗಳ ಸಹಾಯಕ ನಿರ್ದೇಶಕರು-24 ಹುದ್ದೆ, ವಿದ್ಯಾರ್ಹತೆ: ಪದವಿ (ಸಿವಿಲ್‌ ಎಂಜಿನಿಯರಿಂಗ್‌)
ಪತ್ರಾಂಕಿತ ವ್ಯವಸ್ಥಾಪಕರು / ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು-21 ಹುದ್ದೆ, ವಿದ್ಯಾರ್ಹತೆ: ಪದವಿ
ಸಹಾಯಕ ನಿರ್ದೇಶಕರು – 20 ಹುದ್ದೆ, ವಿದ್ಯಾರ್ಹತೆ: ಬಿ.ಇ / ಬಿ.ಟೆಕ್‌ (ಎಂಜಿನಿಯರಿಂಗ್‌) ಅಥವಾ ಎಂಬಿಎ
ಸಹಾಯಕ ಎಂಜಿನಿಯರ್‌ (ಮೆಕ್ಯಾನಿಕಲ್‌) (ವಿಭಾಗ-1) – 10 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಪದವಿ (ಎಂಜಿನಿಯರಿಂಗ್‌)
ಕಾರ್ಖಾನೆಗಳ ಸಹಾಯಕ ನಿರ್ದೇಶಕರು – 7 ಹುದ್ದೆ, ವಿದ್ಯಾರ್ಹತೆ: ಪದವಿ (ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್‌)
ಬಾಯ್ಲರುಗಳ ಸಹಾಯಕ ನಿರ್ದೇಶಕರು – 3 ಹುದ್ದೆ, ವಿದ್ಯಾರ್ಹತೆ: (ಸಂಬಂಧಿತ ವಿಷಯದಲ್ಲಿ ಎಂಜಿನಿಯರಿಂಗ್‌)
ಭೂ ವಿಜ್ಞಾನಿ – 10 ಹುದ್ದೆ, ವಿದ್ಯಾರ್ಹತೆ: ಸ್ನಾತಕೋತ್ತರ ಪದವಿ (ಜಿಯೋಲಜಿ / ಅಪ್ಲೈಡ್‌ ಜಿಯಾಲಜಿ.

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ, ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ಅಭ್ಯರ್ಥಿಗಳು 300 ರೂ., ಇತರ ಹಿಂದುಳಿದ ಅಭ್ಯರ್ಥಿಗಳು 150 ರೂ. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು ಶುಲ್ಕ ಪಾವತಿಸಬೇಕಾಗಿಲ್ಲ.

ಪರಿಷ್ಕೃತ ಪ್ರಕಟಣೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Continue Reading

ಉದ್ಯೋಗ

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ಇಂದು ಕೊನೆ ದಿನ

Job Alert: ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆ ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಇಂದು (ಮೇ 20). ಸಂಜೆ 5 ಗಂಟೆಯೊಳಗೆ ಅಪ್ಲೈ ಮಾಡಿ. ದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 70,000-1,00,000 ರೂ. ಮಾಸಿಕ ವೇತನ ದೊರೆಯಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆ ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಲಿಮಿಟೆಡ್‌ (Neyveli Lignite Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (NLC Recruitment 2024). ಸುಮಾರು 36 ಎಕ್ಸಿಕ್ಯೂಟಿವ್‌ ಹುದ್ದೆಗಳಿದ್ದು, ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಇಂದು (ಮೇ 20) (Job Alert). ಗಮನಿಸಿ ಸಂಜೆ 5 ಗಂಟೆಯೊಳಗೆ ನಿಮ್ಮ ಅರ್ಜಿ ಸಲ್ಲಿಕೆಯಾಗಬೇಕು.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಕ್ಸಿಕ್ಯೂಟಿವ್‌-ಆಪರೇಷನ್‌: 24 ಮತ್ತು ಎಕ್ಸಿಕ್ಯೂಟಿವ್‌-ಮೈಂಟೆನೆನ್ಸ್‌: 12 ಹುದ್ದೆಗಳಿವೆ.
ಎಕ್ಸಿಕ್ಯೂಟಿವ್‌-ಆಪರೇಷನ್‌ ಹುದ್ದೆಗೆ ಕೆಮಿಕಲ್/ ಸಿ&ಐ/ ಇ&ಐ/ ಇಸಿಇ/ ಎಲೆಕ್ಟ್ರಿಕಲ್/ ಇಇಇ/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ಎಕ್ಸಿಕ್ಯೂಟಿವ್‌-ಮೈಂಟೆನೆನ್ಸ್‌ ಹುದ್ದೆಗೆ ಸಿವಿಲ್/ ಕೆಮಿಕಲ್/ ಸಿ&ಐ/ ಇ&ಐ/ ಇಸಿಇ/ ಎಲೆಕ್ಟ್ರಿಕಲ್/ ಇಇಇ/ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಅರ್ಹರು.

ವಯೋಮಿತಿ ಮತ್ತು ಅರ್ಜಿ ಶುಲ್ಕ

Neyveli Lignite Corporation Limited recruitment ಅಧಿಸೂಚನೆ ಪ್ರಕಾರ ಗರಿಷ್ಠ ವಯೋಮಿತಿ 63 ವರ್ಷ. ಅರ್ಜಿ ಶುಲ್ಕವಾಗಿ ಮಾಜಿ ಯೋಧರು / ಎಸ್‌ಸಿ / ಎಸ್‌ಟಿ ವರ್ಗಕ್ಕೆ ಸೇರಿದವರು 354 ರೂ. ಮತ್ತು ಸಾಮಾನ್ಯ / ಇಡಬ್ಲ್ಯುಎಸ್‌ / ಒಬಿಸಿ ವಿಭಾಗದವರು 854 ರೂ. ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ಪಾವತಿ ಮಾರ್ಗ ಅನುಸರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 70,000-1,00,000 ರೂ. ಮಾಸಿಕ ವೇತನ ದೊರೆಯಲಿದೆ. ಒಂದು ವರ್ಷದ ಅವಧಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಹೆಸರು ನೊಂದಾಯಿಸಿ.
  • NLC Executive Apply Online ಆಯ್ಕೆ ಕ್ಲಿಕ್‌ ಮಾಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಫೋಟೊಗಳನ್ನು ಸೂಚಿಸಿದ ಗಾತ್ರದಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಎಲ್ಲ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ. ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಅಪ್‌ಲೋಡ್‌ ಮಾಡಬೇಕಾದ ದಾಖಲೆಗಳು

  • ಫೋಟೊ ಹೈ ಕ್ವಾಲಿಟಿಯಲ್ಲಿದ್ದು, 2023ರ ಅಕ್ಟೋಬರ್‌ 1ರ ಬಳಿಕ ತೆಗೆದಿರಬೇಕು.
  • ಅತ್ಯುತ್ತಮ ಕ್ಲಾಲಿಟಿಯ ಅಭ್ಯರ್ಥಿಯ ಸಹಿಯ ಫೋಟೊ.
  • ಹುಟ್ಟಿದ ದಿನಾಂಕವನ್ನು ಖಾತರಿಪಡಿಸುವ ದಾಖಲೆ.
  • ಎಸ್ಸೆಸ್ಸೆಲ್ಸಿ / ಶೈಕ್ಷಣಿಕ ಪ್ರಮಾಣ ಪತ್ರ.
  • ಆಧಾರ್‌ ಕಾರ್ಡ್‌ನ ಪ್ರತಿ.
  • ಜಾತಿ ಸರ್ಟಿಫಿಕೆಟ್‌.
  • ಮಾಜಿ ಯೋಧರಾಗಿದ್ದರೆ ಅದರ ದಾಖಲೆ.
  • ಫೋಟೊ ಮತ್ತು ಸಹಿಯ ಫೋಟೊ JPEG ಫಾರ್ಮಾಟ್‌ನಲ್ಲಿರಬೇಕು.
  • ದಾಖಲೆಗಳು, ಡಾಕ್ಯುಮೆಂಟ್‌ JPEG ಅಥವಾ PDF ಫಾರ್ಮಾಟ್‌ನಲ್ಲಿರುವುದು ಕಡ್ಡಾಯ.

ಇದನ್ನೂ ಓದಿ: Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ದ್ವಿತೀಯು ಪಿಯು ಪಾಸಾದವರೂ ಅಪ್ಲೈ ಮಾಡಿ

Continue Reading

ಉದ್ಯೋಗ

Job Alert: ನೈವೇಲಿ ಲಿಗ್ನೈಟ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ

Job Alert: ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆ ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನಾಳೆ (ಮೇ 20). ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 70,000-1,00,000 ರೂ. ಮಾಸಿಕ ವೇತನ ದೊರೆಯಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಭಾರತ ಸರ್ಕಾರದ ಕಲ್ಲಿದ್ದಲು ಸಚಿವಾಲಯದ ಆಡಳಿತಾತ್ಮಕ ನಿಯಂತ್ರಣದಲ್ಲಿರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆ ನೈವೇಲಿ ಲಿಗ್ನೈಟ್ ಕಾರ್ಪೋರೇಷನ್ ಲಿಮಿಟೆಡ್‌ (Neyveli Lignite Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (NLC Recruitment 2024). ಸುಮಾರು 36 ಎಕ್ಸಿಕ್ಯೂಟಿವ್‌ ಹುದ್ದೆಗಳಿದ್ದು, ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನಾಳೆ (ಮೇ 20) (Job Alert). ಗಮನಿಸಿ ಸಂಜೆ 5 ಗಂಟೆಯೊಳಗೆ ನಿಮ್ಮ ಅರ್ಜಿ ಸಲ್ಲಿಕೆಯಾಗಬೇಕು.

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಕ್ಸಿಕ್ಯೂಟಿವ್‌-ಆಪರೇಷನ್‌: 24 ಮತ್ತು ಎಕ್ಸಿಕ್ಯೂಟಿವ್‌-ಮೈಂಟೆನೆನ್ಸ್‌: 12 ಹುದ್ದೆಗಳಿವೆ.
ಎಕ್ಸಿಕ್ಯೂಟಿವ್‌-ಆಪರೇಷನ್‌ ಹುದ್ದೆಗೆ ಕೆಮಿಕಲ್/ ಸಿ&ಐ/ ಇ&ಐ/ ಇಸಿಇ/ ಎಲೆಕ್ಟ್ರಿಕಲ್/ ಇಇಇ/ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ಎಕ್ಸಿಕ್ಯೂಟಿವ್‌-ಮೈಂಟೆನೆನ್ಸ್‌ ಹುದ್ದೆಗೆ ಸಿವಿಲ್/ ಕೆಮಿಕಲ್/ ಸಿ&ಐ/ ಇ&ಐ/ ಇಸಿಇ/ ಎಲೆಕ್ಟ್ರಿಕಲ್/ ಇಇಇ/ ಮೆಕ್ಯಾನಿಕಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದವರು ಅರ್ಹರು.

ವಯೋಮಿತಿ ಮತ್ತು ಅರ್ಜಿ ಶುಲ್ಕ

Neyveli Lignite Corporation Limited recruitment ಅಧಿಸೂಚನೆ ಪ್ರಕಾರ ಗರಿಷ್ಠ ವಯೋಮಿತಿ 63 ವರ್ಷ. ಅರ್ಜಿ ಶುಲ್ಕವಾಗಿ ಮಾಜಿ ಯೋಧರು / ಎಸ್‌ಸಿ / ಎಸ್‌ಟಿ ವರ್ಗಕ್ಕೆ ಸೇರಿದವರು 354 ರೂ. ಮತ್ತು ಸಾಮಾನ್ಯ / ಇಡಬ್ಲ್ಯುಎಸ್‌ / ಒಬಿಸಿ ವಿಭಾಗದವರು 854 ರೂ. ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ಪಾವತಿ ಮಾರ್ಗ ಅನುಸರಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 70,000-1,00,000 ರೂ. ಮಾಸಿಕ ವೇತನ ದೊರೆಯಲಿದೆ. ಒಂದು ವರ್ಷದ ಅವಧಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಹೆಸರು ನೊಂದಾಯಿಸಿ.
  • NLC Executive Apply Online ಆಯ್ಕೆ ಕ್ಲಿಕ್‌ ಮಾಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಫೋಟೊಗಳನ್ನು ಸೂಚಿಸಿದ ಗಾತ್ರದಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಎಲ್ಲ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಸರಿಯಾಗಿದ್ದರೆ ಅರ್ಜಿ ಸಲ್ಲಿಸಿ. ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಅಪ್‌ಲೋಡ್‌ ಮಾಡಬೇಕಾದ ದಾಖಲೆಗಳು

  • ಫೋಟೊ ಹೈ ಕ್ವಾಲಿಟಿಯಲ್ಲಿದ್ದು, 2023ರ ಅಕ್ಟೋಬರ್‌ 1ರ ಬಳಿಕ ತೆಗೆದಿರಬೇಕು.
  • ಅತ್ಯುತ್ತಮ ಕ್ಲಾಲಿಟಿಯ ಅಭ್ಯರ್ಥಿಯ ಸಹಿಯ ಫೋಟೊ.
  • ಹುಟ್ಟಿದ ದಿನಾಂಕವನ್ನು ಖಾತರಿಪಡಿಸುವ ದಾಖಲೆ.
  • ಎಸ್ಸೆಸ್ಸೆಲ್ಸಿ / ಶೈಕ್ಷಣಿಕ ಪ್ರಮಾಣ ಪತ್ರ.
  • ಆಧಾರ್‌ ಕಾರ್ಡ್‌ನ ಪ್ರತಿ.
  • ಜಾತಿ ಸರ್ಟಿಫಿಕೆಟ್‌.
  • ಮಾಜಿ ಯೋಧರಾಗಿದ್ದರೆ ಅದರ ದಾಖಲೆ.
  • ಫೋಟೊ ಮತ್ತು ಸಹಿಯ ಫೋಟೊ JPEG ಫಾರ್ಮಾಟ್‌ನಲ್ಲಿರಬೇಕು.
  • ದಾಖಲೆಗಳು, ಡಾಕ್ಯುಮೆಂಟ್‌ JPEG ಅಥವಾ PDF ಫಾರ್ಮಾಟ್‌ನಲ್ಲಿರುವುದು ಕಡ್ಡಾಯ.
Continue Reading
Advertisement
Drone Prathap Helping People To Get Eye Surgery on Birthday
ಸಿನಿಮಾ7 mins ago

Drone Prathap: ಡಿಫರೆಂಟ್‌ ಆಗಿ ಬರ್ತ್‌ಡೇ ಸೆಲೆಬ್ರೇಷನ್‌ಗೆ ಡ್ರೋನ್ ಪ್ರತಾಪ್ ಪ್ಲ್ಯಾನ್‌: ವೋಟ್‌ ಹಾಕಿದ್ದು ಸಾರ್ಥಕ ಅಂದ್ರು ಫ್ಯಾನ್ಸ್‌!

Job Alert
ಉದ್ಯೋಗ29 mins ago

Job Alert: ಟಿಸಿಎಸ್‌ನಲ್ಲಿದೆ ಭರ್ಜರಿ ಉದ್ಯೋಗಾವಕಾಶ; ಇಂದೇ ಅರ್ಜಿ ಸಲ್ಲಿಸಿ

Hampi Monument falls
ಪ್ರಮುಖ ಸುದ್ದಿ41 mins ago

Hampi Monument: ಹಂಪಿಯಲ್ಲಿ ಭಾರಿ ಮಳೆಗೆ ಕುಸಿದು ಬಿದ್ದ ವಿಜಯನಗರ ಅರಸರ ಕಾಲದ ಕಲ್ಲು ಮಂಟಪ

Lok Sabha Election 2024
ದೇಶ1 hour ago

Lok Sabha Election 2024: ವಿವಿಪ್ಯಾಟ್‌ ಯಂತ್ರವನ್ನೇ ನೆಲಕ್ಕೆಸೆದು ಪುಡಿ ಪುಡಿ ಮಾಡಿದ ಶಾಸಕ; ವಿಡಿಯೋ ವೈರಲ್‌

rajamarga column mangalore flight crash 1
ಅಂಕಣ1 hour ago

ರಾಜಮಾರ್ಗ ಅಂಕಣ: ಅಳಿಸಲಾಗದ ನೋವು ಬಿಟ್ಟು ಹೋದ ಮಂಗಳೂರು ವಿಮಾನ ದುರಂತ!

food poisoning savadatthi
ಬೆಳಗಾವಿ2 hours ago

Food Poisoning: ಜಾತ್ರೆಯಲ್ಲಿ ಪ್ರಸಾದ ಸೇವಿಸಿ 46 ಜನ ಅಸ್ವಸ್ಥ, ಐವರು ಗಂಭೀರ

nanna desha nanna dani column ambedkar jinnah
ಅಂಕಣ2 hours ago

ನನ್ನ ದೇಶ ನನ್ನ ದನಿ ಅಂಕಣ: ಅಂಬೇಡ್ಕರ್, ಮುಸ್ಲಿಂ ಲೀಗ್ ಒತ್ತಾಯಿಸಿದರೂ ಜನಸಂಖ್ಯಾ ವಿನಿಮಯ ಆಗಲಿಲ್ಲ!

Health Tips Kannada
ಆರೋಗ್ಯ2 hours ago

Health Tips Kannada: ಸನ್‌ಸ್ಕ್ರೀನ್‌ ಕುರಿತು ನಿಮಗೆಷ್ಟು ಗೊತ್ತು?

Karnataka Weather Forecast
ಮಳೆ2 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Sweat Problem
ಆರೋಗ್ಯ3 hours ago

Sweat Problem: ದುರ್ಗಂಧದ ಬೆವರಿನ ಸಮಸ್ಯೆಗೆ ಇಲ್ಲಿವೆ ನೈಸರ್ಗಿಕ ಪರಿಹಾರಗಳು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ15 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು20 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು21 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌