Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ - Vistara News

ಉದ್ಯೋಗ

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

ರಾಜ್ಯದಲ್ಲಿ ಒಟ್ಟಾರೆ 9, 837 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿದ್ದು, ಇದರಲ್ಲಿ 2007 ಹುದ್ದೆಗಳಿ ಖಾಲಿ ಇವೆ (Village Accountant Recruitment) ಎಂದು ಕಂದಾಯ ಸಚಿವ ಆರ್.‌ ಅಶೋಕ್‌ ವಿಧಾನಸಭೆಗೆ ತಿಳಿಸಿದ್ದಾರೆ.

VISTARANEWS.COM


on

Village Accountant Recruitment
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದಲ್ಲಿ ಒಟ್ಟಾರೆ 9, 837 ಗ್ರಾಮ ಲೆಕ್ಕಾಧಿಕಾರಿ (ಗ್ರಾಮ ಅಡಳಿತ ಅಧಿಕಾರಿ) ಹುದ್ದೆಗಳಿದ್ದು, ಇದರಲ್ಲಿ 2007 ಹುದ್ದೆಗಳಿ ಖಾಲಿ ಇವೆ (Village Accountant Recruitment) ಎಂದು ಕಂದಾಯ ಸಚಿವ ಆರ್.‌ ಅಶೋಕ್‌ ವಿಧಾನಸಭೆಗೆ ತಿಳಿಸಿದ್ದಾರೆ.

ಶ್ರವಣಬೆಳಗೊಳದ ಶಾಸಕ ಬಾಲಕೃಷ್ಣ ಸಿ. ಎನ್‌. ಕೇಳಿದ ಪ್ರಶ್ನೆಗೆ ಲಿಖಿತವಾಗಿ ಉತ್ತರ ನೀಡಿರುವ ಅವರು, ಖಾಲಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ತಿಳಿಸಿದ್ದಾರೆ.

ಹುದ್ದೆಗೆ ಪದವೀಧರರನ್ನು ನೇಮಕ ಮಾಡಿಕೊಳ್ಳಬೇಕೆಂಬ ಬೇಡಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಸಚಿವ ಆರ್‌. ಅಶೋಕ್‌, ಸದ್ಯ ಪಿಯುಸಿ ವಿದ್ಯಾರ್ಹತೆಯನ್ನು ಈ ಹುದ್ದೆಗಳಿಗೆ ನಿಗದಿಪಡಿಸಲಾಗಿದೆ. ಪದವಿಯನ್ನು ಅರ್ಹತೆಯನ್ನಾಗಿ ಪರಿಗಣಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಹೇಳಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆ? ಇಲ್ಲಿ ನೋಡಿ!

ಸದ್ಯ ಗ್ರಾಮ ಲೆಕ್ಕಿಗರ ನೇಮಕಾತಿಯನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ನೇತೃತ್ವದ ಆಯ್ಕೆ ಸಮಿತಿ ನೇಮಕ ಮಾಡುತ್ತಿದೆ. ಇದರಲ್ಲಿ ಬದಲಾವಣೆ ತಂದು ರಾಜ್ಯಮಟ್ಟದಲ್ಲಿಯೇ, ಅಂದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ನೇಮಕ ಮಾಡಬೇಕೆಂಬ ಪ್ರಸ್ತಾವನೆ ಸರ್ಕಾರದ ಮುಂದಿದ್ದು, ಇನ್ನೂ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಕಳೆದ ಒಂದು ವರ್ಷದಿಂದಲೂ ಈ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂಬ ಉತ್ತರವನ್ನೇ ಸರ್ಕಾರ ನೀಡುತ್ತಾ ಬಂದಿದೆ.

ಇದನ್ನೂ ಓದಿ : BOI PO Recruitment 2023 : ಬ್ಯಾಂಕ್ ಆಫ್ ಇಂಡಿಯಾದಲ್ಲಿ ಪಿಓ ಹುದ್ದೆ; ಎಂಜಿನಿಯರಿಂಗ್‌ ಪದವೀಧರರಿಗೂ ಅವಕಾಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉದ್ಯೋಗ

Job Alert: ಪೋಸ್ಟ್‌ ಆಫೀಸ್‌ನಲ್ಲಿದೆ ಬರೋಬ್ಬರಿ 98,083 ಹುದ್ದೆ; 10ನೇ ತರಗತಿ ಪಾಸಾದವರೂ ಅರ್ಜಿ ಸಲ್ಲಿಸಬಹುದು

Job Alert: ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಬರೋಬ್ಬರಿ 98,083 ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ ತೇರ್ಗಡೆಯಾದವರೂ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಸದ್ಯ ಅಧಿಕೃತ ಅಧಿಸೂಚನೆ ಬಿಡುಗಡೆಯಾಗಿಲ್ಲ.

VISTARANEWS.COM


on

indian post office
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುತ್ತಿರುವವರಿಗೆ ಗುಡ್‌ನ್ಯೂಸ್‌ ಇಲ್ಲಿದೆ. ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ (Post Office Recruitment 2024). ದೇಶಾದ್ಯಂತ ಬರೋಬ್ಬರಿ 98,083 ಹುದ್ದೆಗಳು ಖಾಲಿ ಇದ್ದು, 10ನೇ ತರಗತಿ ತೇರ್ಗಡೆಯಾದವರೂ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸದ್ಯ ಅಧಿಕೃತ ಅಧಿಸೂಚನೆ ಇನ್ನೂ ಬಿಡುಗಡೆಯಾಗಿಲ್ಲ. ಅದಾದ ಬಳಿಕವಷ್ಟೇ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕದ ಬಗ್ಗೆ ಮಾಹಿತಿ ಲಭಿಸಲಿದೆ. ಪರೀಕ್ಷೆ ಮೂಲಕ ಈ ನೇಮಕಾತಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ (Job Alert).

ಹುದ್ದೆಗಳ ವಿವರ

ಜಿಡಿಎಸ್‌ (Gramin Dak Sevak), ಪೋಸ್ಟ್‌ಮ್ಯಾನ್‌, ಎಂಟಿಎಸ್‌, ಪೋಸ್ಟಲ್‌ ಅಸಿಸ್ಟಂಟ್‌, ಮೇಲ್‌ ಗಾರ್ಡ್‌, ಸೋರ್ಟಿಂಗ್‌ ಅಸಿಸ್ಟಂಟ್‌ ಸೇರಿದಂತೆ ವಿವಿಧ ಹುದ್ದೆಗಳಿವೆ. ಕರ್ನಾಟಕದಲ್ಲಿ ಒಟ್ಟು 5,731 ಹುದ್ದೆಗಳಿವೆ. ರಾಜ್ಯದಲ್ಲಿ ಎಂಟಿಎಸ್‌ – 1,754, ಪೋಸ್ಟ್‌ಮ್ಯಾನ್ – 3,887 ಮತ್ತು ಮೇಲ್ ಗಾರ್ಡ್ – 90 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಅರ್ಜಿ ಶುಲ್ಕ ಮತ್ತು ವಯೋಮಿತಿ

ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್‌ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಬೇಕು. ಮಹಿಳಾ / ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. 18ರಿಂದ 40 ವರ್ಷದೊಳಗಿನ ಆಸಕ್ತರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ- 3 ವರ್ಷ, ಎಸ್‌ಸಿ / ಎಸ್‌ಟಿ – 5 ವರ್ಷ ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಇದೆ.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 3 ಗಂಟೆಗಳ ಈ ಪರೀಕ್ಷೆ 100 ಅಂಕಗಳನ್ನು ಒಳಗೊಂಡಿದೆ. ಗಣಿತ, ರೀಸನಿಂಗ್‌, ಹಿಂದಿ, ಇಂಗ್ಲಿಷ್‌ ವಿಷಯಗಳ ತಲಾ 25 ಅಂಕಗಳ ಪ್ರಶ್ನೆಗಳಿರುತ್ತವೆ. ಅಭ್ಯರ್ಥಿಗಳು ಸ್ಥಳೀಯ ಭಾಷೆಯ ಮೇಲಿನ ಹಿಡಿತ ಹೊಂದಿರುವುದು ಕಡ್ಡಾಯ. ಜತೆಗೆ ಕಂಪ್ಯೂಟರ್‌ ಜ್ಞಾನ ಮತ್ತು ಕಂಪ್ಯೂಟರ್‌ ಕಲಿಕೆಯ ಪ್ರಮಾಣ ಪತ್ರ ಹೊಂದಿರಬೇಕು.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
    ಈಗ ತೆರೆದುಕೊಳ್ಳುವ ಪುಟದ ಬಲಭಾಗದ ಮೇಲೆ ಇರುವ Registration ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ. ಇದಕ್ಕಾಗಿ ನಿಮ್ಮ ಹೆಸರು, ಲಿಂಗ, ಫೋನ್‌ ನಂಬರ್‌, ಡೇಟ್‌ ಆಫ್‌ ಬರ್ತ್‌, ಇಮೇಲ್‌ ವಿಳಾಸ ಇತ್ಯಾದಿ ವಿವರ ನೀಡಬೇಕಾಗುತ್ತದೆ.
  • ಒಟಿಪಿ ನಮೂದಿಸಿದ ಮೇಲೆ ಲಭಿಸುವ ರಿಜಿಸ್ಟ್ರೇಷನ್‌ ನಂಬರ್‌ ಬಳಸಿ ಲಾಗಿನ್‌ ಆಗಿ.
  • ಸರಿಯಾದ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯವಾದ ಡಾಕ್ಯುಮೆಂಟ್‌, ಫೋಟೋ, ಸಹಿಗಳನ್ನು ಸರಿಯಾದ ಗಾತ್ರದಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದೆ ಎನ್ನುವುದನ್ನು ಖಾತ್ರಿಪಡಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ; ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Continue Reading

ಉದ್ಯೋಗ

Job Alert: ಬ್ಯಾಂಕ್‌ ಉದ್ಯೋಗ ಹುಡುಕುವವರಿಗೆ ಗುಡ್‌ನ್ಯೂಸ್‌; ಇಂಡಿಯನ್‌ ಬ್ಯಾಂಕ್‌ನಲ್ಲಿದೆ 146 ಹುದ್ದೆ

Job Alert: ಇಂಡಿಯನ್‌ ಬ್ಯಾಂಕ್‌ ತನ್ನಲ್ಲಿ ಖಾಲಿ ಇರುವ 146 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಏಪ್ರಿಲ್‌ 1ರೊಳಗೆ ಅರ್ಜಿ ಸಲ್ಲಿಸಬೇಕು.

VISTARANEWS.COM


on

indian bank
Koo

ಬೆಂಗಳೂರು: ಬ್ಯಾಂಕ್‌ನಲ್ಲಿ ಉದ್ಯೋಗ ನಿರ್ವಹಿಸಬೇಕು ಎನ್ನುವ ನಿಮ್ಮ ಬಹು ದಿನಗಳ ಕನಸು ನನಸಾಗುವ ದಿನ ಹತ್ತಿರದಲ್ಲೇ ಇದೆ. ಯಾಕೆಂದರೆ ಇಂಡಿಯನ್‌ ಬ್ಯಾಂಕ್‌ (Indian Bank) ತನ್ನಲ್ಲಿ ಖಾಲಿ ಇರುವ 146 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಪದವಿ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು (Indian Bank SO Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್‌ 1 (Job Alert).

ಹುದ್ದೆಗಳ ವಿವರ

ಸ್ಪೆಷಲಿಸ್ಟ್‌ ಆಫೀಸರ್ ಹುದ್ದೆಗಳು ಇದಾಗಿದ್ದು, ಚೀಫ್‌ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌, ಅಸಿಸ್ಟೆಂಟ್‌ ಮ್ಯಾನೇಜರ್‌ ಮತ್ತು ಮ್ಯಾನೇಜರ್‌ ಹುದ್ದೆಗಳನ್ನು ನೇಮಕ ಮಾಡಲಾಗುತ್ತದೆ. ಇಂಡಿಯನ್ ಬ್ಯಾಂಕ್‌ನ ಕ್ರೆಡಿಟ್, ಅಕೌಂಟ್ಸ್‌, ಐಟಿ ವಿಭಾಗ, ಡಿಜಿಟಲ್ ಬ್ಯಾಂಕಿಂಗ್, ರಿಸ್ಕ್ ಮ್ಯಾನೇಜ್‌ಮೆಂಟ್‌, ಪೋರ್ಟ್‌ ಫೊಲಿಯೊ ಮ್ಯಾನೇಜ್‌ಮೆಂಟ್‌, ಡಾಟಾ ಅನಾಲಿಸ್ಟ್‌, ಸೆಕ್ಟಾರ್ ಸ್ಪೆಷಲಿಸ್ಟ್‌- ಇನ್ಫ್ರಾಸ್ಟ್ರಕ್ಚರ್, ಡಾಟಾ ಅನಾಲಿಸ್ಟ್‌, ಸ್ಟ್ಯಾಟಿಸ್ಟಿಷಿಯನ್, ಎಕನಾಮಿಸ್ಟ್‌ ಸೇರಿ ಹಲವು ವಿಭಾಗಗಳಲ್ಲಿ ನೇಮಕಾತಿ ನಡೆಯಲಿದೆ.

ವಿದ್ಯಾರ್ಹತೆ ಮತ್ತು ಅರ್ಜಿ ಶುಲ್ಕ

ಹುದ್ದೆಗಳಿಗೆ ಅನುಗುಣವಾಗಿ ಸಿಎ / ಸಿಡಬ್ಲ್ಯುಎ / ಐಸಿಡಬ್ಲ್ಯುಎ, ಪದವಿ / ಸ್ನಾತಕೋತ್ತರ ಪದವಿ / ಡಿಪ್ಲೋಮಾ ಓದಿದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಶುಲ್ಕವಾಗಿ ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು 1,000 ರೂ., ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ ಅಭ್ಯರ್ಥಿಗಳು 175 ರೂ. ಪಾವತಿಸಬೇಕು. ಅನ್‌ಲೈನ್‌ ಮೂಲಕ ಇದನ್ನು ಪಾವತಿಸಬೇಕಿದ್ದು, ಇದಕ್ಕಾಗಿ ಡೆಬಿಟ್ / ಕ್ರೆಡಿಟ್ ಕಾರ್ಡ್‌ / ನೆಟ್‌ ಬ್ಯಾಂಕಿಂಗ್ / ಇ ಚಲನ್ ವಿಧಾನವನ್ನು ಬಳಸಬಹುದು.

ವಯೋಮಿತಿ

ಅಭ್ಯರ್ಥಿಗಳ ವಯಸ್ಸು ಕನಿಷ್ಠ 20 ವರ್ಷ, ಗರಿಷ್ಠ 40 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಲಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ ಮತ್ತು ಮಸಿಕ ವೇತನ

ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 36,000 ರೂ. 89,890 ರೂ.ವರೆಗೆ ಮಾಸಿಕ ವೇತನ ಸಿಗಲಿದೆ.

Indian Bank SO Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಆಯ್ಕೆ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • Click here for New Registration ಆಯ್ಕೆ ಮೇಲೆ ಕ್ಲಿಕ್‌ ಮಾಡಿ ವೈಯಕ್ತಿಕ ಮಾಹಿತಿ, ಮೊಬೈಲ್‌ ನಂಬರ್‌, ಇಮೇಲ್‌ ವಿಳಾಸ ನಮೂದಿಸಿ ಹೆಸರು ನೋಂದಾಯಿಸಿ.
  • ಈಗ ಲಭಿಸುವ ಪಾಸ್‌ವರ್ಡ್‌ ಮತ್ತು ರಿಜಿಸ್ಟ್ರೇಷನ್‌ ನಂಬರ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿಗಳನ್ನು ತುಂಬಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯವಾದ ಡಾಕ್ಯುಮೆಂಟ್‌, ಫೋಟೊವನ್ನು ಸೂಕ್ತ ಗಾತ್ರದಲ್ಲಿ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: 364 ಭೂ ಮಾಪಕರ ಹುದ್ದೆಗೆ ಇಂದೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ; ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Job Alert: ಬೆಂಗಳೂರು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ನಡೆಸಲು ಅಧಿಸೂಚನೆ ಹೊರಡಿಸಲಾಗಿದೆ. ಆಸಕ್ತರು ಆನ್‌ಲೈನ್‌ ಮೂಲಕ ಮಾರ್ಚ್‌ 26ರಿಂದ ಅರ್ಜಿ ಸಲ್ಲಿಸಬಹುದು. ಕೊನೆಯ ದಿನ ಏಪ್ರಿಲ್‌ 25.

VISTARANEWS.COM


on

health vv
Koo

ಬೆಂಗಳೂರು: ಬೆಂಗಳೂರು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ (Rajiv Gandhi University of Health Sciences) ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್‌ 26ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಕೊನೆಯ ದಿನ ಏಪ್ರಿಲ್‌ 25 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಜೂನಿಯರ್‌ ಪ್ರೋಗ್ರಾಮರ್‌ (ಗ್ರೂಪ್‌ ಬಿ), ಸಹಾಯಕ ಎಂಜಿನಿಯರ್‌ (ಸಿವಿಲ್‌) (ಗ್ರೂಪ್‌ ಬಿ), ಸಹಾಯಕ ಗ್ರಂಥಪಾಲಕ (ಗ್ರೂಪ್‌ ಸಿ), ಸಹಾಯಕ (ಗ್ರೂಪ್‌ ಸಿ) ಮತ್ತು ಕಿರಿಯ ಸಹಾಯಕ (ಗ್ರೂಪ್‌ ಸಿ) ಹುದ್ದೆಗಳಿವೆ. ಬಿ.ಇ. ಮತ್ತು ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಅರ್ಜಿ ಸಲ್ಲಿಸಲು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ವಿನಾಯಿತಿ ಇದೆ. ಅರ್ಜಿ ಶುಲ್ಕವಾಗಿ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಮತ್ತು ಇತರ ಪ್ರವರ್ಗದ ಅಭ್ಯರ್ಥಿಗಳು 750 ರೂ., ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳು 500 ರೂ. ಪಾವತಿಸಬೇಕು.

ಆಯ್ಕೆ ವಿಧಾನ

ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಸ್ಪರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರು, ಮೈಸೂರು, ತುಮಕೂರು, ದಾವಣಗೆರೆ, ದಕ್ಷಿಣ ಕನ್ನಡ, ಶಿವಮೊಗ್ಗ, ಬೆಳಗಾವಿ, ಧಾರವಾಡ ಬಳ್ಳಾರಿ, ಬೀದರ್‌, ಕೊಪ್ಪಳ, ರಾಯಚೂರು ಮತ್ತು ಕಲಬುರ್ಗಿ ಕೇಂದ್ರಗಳಲ್ಲಿ ನಡೆಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಗಮನಿಸಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಪ್ರತಿಯೊಂದು ಪ್ರಶ್ನೆಗೂ 4 ಪರ್ಯಾಯ ಉತ್ತರಗಳಿದ್ದು, ಅಭ್ಯರ್ಥಿಗಳು ಯಾವುದಾದರೂ ಒಂದು ಸರಿ ಉತ್ತರವನ್ನು ಮಾತ್ರ ಆಯ್ಕೆ ಮಾಡಬೇಕು. ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶದಷ್ಟು ಅಂಕಗಳನ್ನು ಕಳೆಯಲಾಗುವುದು. ಹೀಗಾಗಿ ಎಚ್ಚರಿಕೆಯಿಂದ ಉತ್ತರಿಸಬೇಕು. ಪ್ರಶ್ನೆ ಪತ್ರಿಕೆ ಇಂಗ್ಲಿಷ್‌ ಮತ್ತು ಕನ್ನಡದಲ್ಲಿ ಇರಲಿದೆ. ಅಭ್ಯರ್ಥಿಗಳು ಪರೀಕ್ಷೆಯ ಪ್ರವೇಶ ಪತ್ರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಿಂದ ಡೌನ್‌ಲೋಡ್‌ ಮಾಡಬೇಕು. ನೆನಪಿಡಿ, ಪರೀಕ್ಷೆಗೆ ಹಾಜರಾಗಲು ಹಾಲ್‌ ಟಿಕೆಟ್‌ ಜತೆಗೆ ಅಭ್ಯರ್ಥಿಗಳು ಮೂಲ ಗುರುತಿನ ಚೀಟಿ (ಪ್ಯಾನ್‌ ಕಾರ್ಡ್‌ / ಲೈಸನ್ಸ್‌ / ಆಧಾರ್‌ ಕಾರ್ಡ್‌ / ಪಾಸ್‌ಪೋರ್ಟ್‌ / ವೋಟರ್‌ ಐಡಿ / ಸರ್ಕಾರಿ ನೌಕರರ ಐಡಿ) ಪೈಕಿ ಯಾವುದಾದರೂ ಒಂದು ದಾಖಲಾತಿ ಹಾಜರುಪಡಿಸುವುದು ಕಡ್ಡಾಯ ಎಂದು ಪ್ರಕಟಣೆ ತಿಳಿಸಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ವೆಬ್‌ಸೈಟ್‌ ವಿಳಾಸ http://kea.kar.nic.inಗೆ ಭೇಟಿ ನೀಡಿ.

ಹೆಚ್ಚಿನ ಮಾಹಿತಿಗಾಗಿ ಕೇಂದ್ರ ಕಚೇರಿಯ ಮಾಹಿತಿ ಕೇಂದ್ರದ ದೂರವಾಣಿ ಸಂಖ್ಯೆ: 080-23460460ಗೆ ಕಚೇರಿ ಸಮಯದಲ್ಲಿ ಕರೆ ಮಾಡಬಹುದು.

ಇದನ್ನೂ ಓದಿ: Job Alert: 364 ಭೂ ಮಾಪಕರ ಹುದ್ದೆಗೆ ಇಂದೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert : ಇಲ್ಲಿದೆ ಸರ್ಕಾರಿ ನೌಕರಿ ಅವಕಾಶ, ವಿವಿಧ ಇಲಾಖೆಯಲ್ಲಿದೆ 313 ಹುದ್ದೆಗಳು

Job Alert : ಜಲ ಸಂಪನ್ಮೂಲ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ 313 ಸಿ ಗುಂಪಿನ ಹುದ್ದೆಗಳಿಗೆ ಅರ್ಜಿ (Job Alert) ಕರೆದಿದೆ.

VISTARANEWS.COM


on

Government job
Koo

ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗವು ಜಲ ಸಂಪನ್ಮೂಲ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ 313 ಸಿ ಗುಂಪಿನ ಹುದ್ದೆಗಳಿಗೆ ಅರ್ಜಿ (Job Alert) ಕರೆದಿದೆ. ಏಪ್ರಿಲ್​ 29ರಂದು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದ್ದು, ಮೇ ತಿಂಗಳ 28ಕ್ಕೆ ಕೊನೇ ದಿನಾಂಕವಾಗಿದೆ.

ಜಲ ಸಂಪನ್ಮೂಲ ಇಲಾಖೆಯಲ್ಲಿ 216 ಕಿರಿಯ ಇಂಜಿನಿಯ‌ರ್ (ಸಿವಿಲ್‌), ಕಿರಿಯ ಇಂಜಿನಿಯರ್ (ಸಿವಿಲ್) ಜಲ ಸಂಪನ್ಮೂಲ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಾ ನಿರತ ಗ್ರೂಪ್ ಸಿ ಸಿಬ್ಬಂದಿಗಳಿಗೆ 54 ಹುದದೆಗಳು, ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್) 26 ಹುದ್ದೆಗಳು, ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್‌) 26 ಹುದ್ದೆಗಳು, ಜಲ ಸಂಪನ್ಮೂಲ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಾ ನಿರತ ಗ್ರೂಪ್ ಸಿ ಸಿಬ್ಬಂದಿಗಳಿಗೆ 04 ಹುದ್ದೆ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ 13 ಸಹಾಯಕ ಗ್ರಂಥಪಾಲಕ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.

ಅಭ್ಯರ್ಥಿಗಳು ಕೆಪಿಎಸ್​​ಸಿ ವೆಬ್​ಸೈಟ್​ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು Online ಮೂಲಕವೇ ಭರ್ತಿ ಮಾಡಬೇಕು. ಭಾವಚಿತ್ರ.ಸಹಿ. ವಯೋಮಿತಿ, ವಿದ್ಯಾರ್ಹತೆ ಹಾಗೂ ಕೋರಿದ ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ಶುಲ್ಕವನ್ನು ನೆಟ್ ಬ್ಯಾಂಕಿಂಗ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್. UPI ಮೂಲಕ ಸಂದಾಯ ಮಾಡಬಹುದು.

ಇದನ್ನೂ ಓದಿ : Job Alert: 364 ಭೂ ಮಾಪಕರ ಹುದ್ದೆಗೆ ಇಂದೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

ಸಾಮಾನ್ಯ ಅಭ್ಯರ್ಥಿಗೆ 600 ರೂಪಾಯಿ. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 300 ರೂಪಾಯಿ, ಮಾಜಿ ಸೈನಿಕರಿಗೆ 50 ರೂಪಾಯಿ ಹಾಗೂ ಪರಿಶಿಷ್ಟ ಜಾತಿ, ಪಂಗಡ ಹಾಗೂ ಪ್ರವರ್ಗ 1 ಹಾಗೂ ಅಂಗವಿಕಲರಿಗೆ ಶುಲ್ಕ ವಿನಾಯಿತಿಯಿದೆ.

ಕರ್ನಾಟಕ ನಾಗರಿಕ ಸೇವಾ ನಿಯಮಗಳ ಪ್ರಕಾರ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿದೆ. 150 ಅಂಕದ ಪ್ರಶ್ನೆ ಪತ್ರಿಕೆ ಹೊಂದಿರುತ್ತದೆ. ಕನ್ನಡ ಭಾಷೆ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳು ಸ್ಪರ್ಧಾತ್ಮ ಕ ಪರೀಕ್ಷೆ ಮೂಲಕ ಪಾಸಾಗಬೇಕು. ಪರೀಕ್ಷೆ ಅಂಕ ಹಾಗೂ ಮೀಸಲಾತಿ ಆಧಾರದಲ್ಲಿ ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತದೆ.

Continue Reading
Advertisement
meghana foods it raid
ಬೆಂಗಳೂರು9 mins ago

IT Raid: ಬೆಂಗಳೂರಿನಲ್ಲಿ 10 ಕಡೆ ಐಟಿ ದಾಳಿ, ತೆರಿಗೆ ಪಾವತಿಸದ ರೆಸ್ಟೋರೆಂಟ್‌ಗಳ ಪರಿಶೀಲನೆ

Israeli Forces
ದೇಶ10 mins ago

Israel Palestine War: ಗಾಜಾ ಆಸ್ಪತ್ರೆ ಮೇಲೆ ಇಸ್ರೇಲ್‌ ದಾಳಿ; 20 ಸಾವು

RCB Unbox
ಕ್ರೀಡೆ35 mins ago

RCB Unbox Event: ಇಂದಿನ ಆರ್​ಸಿಬಿ ಅನ್​ಬಾಕ್ಸ್​ನಲ್ಲಿ ವಿರಾಟ್​ ಕೊಹ್ಲಿಯೂ ಹಾಜರ್​!

Thalapathy Vijay
ಮಾಲಿವುಡ್37 mins ago

Thalapathy Vijay: 14 ವರ್ಷಗಳ ಬಳಿಕ ಕೇರಳಕ್ಕೆ ಬಂದ ದಳಪತಿ ವಿಜಯ್‌!

anekal self harm
ಕ್ರೈಂ1 hour ago

Self Harm: ಪ್ರೀತಿಸಿದ ಯುವತಿ ಸಿಗಲಿಲ್ಲ, ಕೈ ಕೊಯ್ದು ನೇಣು ಬಿಗಿದುಕೊಂಡ ಯುವಕ

Family Problem High Court
ಕೋರ್ಟ್1 hour ago

Family Problem : ಹೆಂಡತಿಗೆ ಮಂಡೆ ಸರಿ ಇಲ್ಲ, ಅವಳು ಬೇಡ ಎಂದವನಿಗೆ ಹೈಕೋರ್ಟ್‌ ವಿಧಿಸಿತು ದಂಡ!

Benefits of Kasoori Methi
ಆರೋಗ್ಯ1 hour ago

Benefits of Kasoori Methi: ಕಸೂರಿ ಮೇಥಿ ರುಚಿ ಹೆಚ್ಚಿಸಲು ಮಾತ್ರವಲ್ಲ, ಆರೋಗ್ಯ ವೃದ್ಧಿಗೂ ಸೂಕ್ತ

varanasi nandi
ಅಂಕಣ2 hours ago

ನನ್ನ ದೇಶ ನನ್ನ ದನಿ ಅಂಕಣ: ಸತ್ಯಂ ಶಿವಂ ಸುಂದರಂ

Raja Marga human robots
ಸ್ಫೂರ್ತಿ ಕತೆ2 hours ago

Raja Marga Column : ಭಾವನೆಗಳೇ ಇಲ್ಲದ ರೋಬೋಟ್‌ನಂಥ ಮನುಷ್ಯರ ಜತೆ ಬದುಕೋದಾದರೂ ಹೇಗೆ?

Supreme Court
ದೇಶ2 hours ago

CAA: ಸಿಎಎ ವಿರೋಧಿಸಿ ಸಲ್ಲಿಸಿದ 230ಕ್ಕೂ ಅಧಿಕ ಅರ್ಜಿಗಳ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina Bhavishya
ಭವಿಷ್ಯ4 hours ago

Dina Bhavishya : ಈ ರಾಶಿಯವರು ಎಚ್ಚರ ವಹಿಸಿ; ಅಮೂಲ್ಯವಾದ ವಸ್ತುವೊಂದು ಕೈ ತಪ್ಪಬಹುದು

Tejaswi Surya About Hanuman Chalisa Issue
ಬೆಂಗಳೂರು15 hours ago

ಹನುಮಾನ್‌ ಚಾಲೀಸಾ ಕೇಸ್‌; ಆರೋಪಿಗಳು ಅರೆಸ್ಟ್ ಆಗದಿದ್ದರೆ ಪ್ರತಿಭಟನೆ- ತೇಜಸ್ವಿ ಸೂರ್ಯ ಎಚ್ಚರಿಕೆ

read your daily horoscope predictions for march 18 2024
ಭವಿಷ್ಯ1 day ago

Dina Bhavishya : ಈ ದಿನ ನೀವೂ ಮೋಸ ಹೋಗುವುದು ಗ್ಯಾರಂಟಿ; ಬೆನ್ನ ಹಿಂದೆಯೇ ನಡೆಯುತ್ತೆ ಪಿತೂರಿ

Lok Sabha Election 2024 Congress finalises list of 13 seats
Lok Sabha Election 20242 days ago

Lok Sabha Election 2024: ಕಾಂಗ್ರೆಸ್‌ನಲ್ಲಿ 13 ಕ್ಷೇತ್ರಗಳ ಪಟ್ಟಿ ಫೈನಲ್!‌ ಸಂಭಾವ್ಯ ಅಭ್ಯರ್ಥಿಗಳ ಲಿಸ್ಟ್‌ ಇಲ್ಲಿದೆ

dina Bhvishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಅತ್ತೆ ಮನೆಯಿಂದ ಸಿಗಲಿದೆ ಭರಪೂರ ಉಡುಗೊರೆ

Dina Bhavishya
ಭವಿಷ್ಯ3 days ago

Dina Bhavishya : ಇವತ್ತು ಈ ರಾಶಿಯವರು ಮೌನದಿಂದ ಇರುವುದು ಒಳಿತು

Lok Sabha Election 2024 Is Operation JDS Worker Behind DK Brothers Breakfast Meeting
Lok Sabha Election 20244 days ago

Lok Sabha Election 2024: ಡಿಕೆ ಬ್ರದರ್ಸ್‌ ಬ್ರೇಕ್‌ಫಾಸ್ಟ್‌ ಮೀಟಿಂಗ್ ಹಿಂದೆ ‘ಆಪರೇಷನ್‌ ಜೆಡಿಎಸ್‌ ಕಾರ್ಯಕರ್ತ’?

read your daily horoscope predictions for march 15 2024
ಭವಿಷ್ಯ4 days ago

Dina Bhavishya : ಕೆಲವು ರಹಸ್ಯ ವಿಷಯಗಳು ಈ ರಾಶಿಯವರಿಗೆ ಅಚ್ಚರಿ ತರಲಿದೆ

Lok Sabha Election 2024 Yaduveer talks about entering politics and Yaduveer Krishnadatta Chamaraja Wadiyar meets BY Vijayendra
ಕರ್ನಾಟಕ5 days ago

‌Lok Sabha Election 2024: ಮೆಣಸಿನಕಾಯಿಯನ್ನು ಜೀರ್ಣಿಸಿಕೊಳ್ತೇನೆ; ನನ್ನ ಮೇಲೆ ರಾಜಸ್ಥಾನದ ಪ್ರಭಾವ ಇಲ್ಲ: ಯದುವೀರ್

Different Danny Filed Case Against Ravi Varma
ಬೆಂಗಳೂರು5 days ago

Different Danny : ಫೈಟ್‌ ಮಾಸ್ಟರ್ಸ್‌ ಫೈರ್‌ ಫೈಟಿಂಗ್‌; ರವಿವರ್ಮ ವಿರುದ್ಧ ಡಿಫರೆಂಟ್‌ ಡ್ಯಾನಿ ಸಮರ

ಟ್ರೆಂಡಿಂಗ್‌