Viral News : ಯುಪಿಎಸ್‌ಸಿ ಪರೀಕ್ಷೆ ಬರೆಯುವವರಿಗಾಗಿ ಸ್ಫೂರ್ತಿದಾಯಕ ಪೋಸ್ಟ್‌; ವೈರಲ್‌ ಆಯ್ತು ಫೋಟೋ - Vistara News

ಉದ್ಯೋಗ

Viral News : ಯುಪಿಎಸ್‌ಸಿ ಪರೀಕ್ಷೆ ಬರೆಯುವವರಿಗಾಗಿ ಸ್ಫೂರ್ತಿದಾಯಕ ಪೋಸ್ಟ್‌; ವೈರಲ್‌ ಆಯ್ತು ಫೋಟೋ

ಐಎಎಸ್‌ ಅಧಿಕಾರಿಯೊಬ್ಬರು ತಮಗೆ ಐಎಎಸ್‌ ಪರೀಕ್ಷೆಯ ಸಂದರ್ಶನಕ್ಕೆಂದು ಬಂದಿದ್ದ ಪತ್ರದ ಫೋಟೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಅದು ವೈರಲ್‌ (Viral News) ಆಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಯುಪಿಎಸ್‌ಸಿಯ ಸಿವಿಲ್‌ ಸರ್ವೀಸ್‌ ಪರೀಕ್ಷೆಗಳು ದೇಶದಲ್ಲಿನ ಅತ್ಯಂತ ಕಠಿಣ ಪರೀಕ್ಷೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಭಾರತೀಯ ಆಡಳಿತ ಸೇವೆ (IAS), ಭಾರತೀಯ ವಿದೇಶಾಂಗ ಸೇವೆ (IFS), ಭಾರತೀಯ ಪೊಲೀಸ್ ಸೇವೆ (IPS), ಮತ್ತು IRS ನಂತಹ ಇತರ ಕೇಂದ್ರೀಯ ಸಂಬಂಧಿತ ಸೇವೆಗಳಲ್ಲಿ ನಾಗರಿಕ ಸೇವೆಗಳ ಆಡಳಿತಾತ್ಮಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲು ಆಯೋಗವು ನಾಗರಿಕ ಸೇವೆಗಳ ಪರೀಕ್ಷೆಯನ್ನು ನಡೆಸಲಾಗುತ್ತದೆ(Viral News).

ಇದನ್ನೂ ಓದಿ: Viral News: ಜಗತ್ತಿನ ಅತ್ಯಂತ ಕಡಿಮೆ ಸಮಯದ ವಿಮಾನ ಪ್ರಯಾಣವಿದು; ಇಷ್ಟೇ ಪ್ರಯಾಣಕ್ಕೆ ಅಷ್ಟೊಂದು ಶುಲ್ಕವೇಕೆ?
ಹಲವು ಹಂತಗಳಲ್ಲಿ ನಡೆಯುವ ಈ ಪರೀಕ್ಷೆಯ ಪ್ರಿಲಿಮ್ಸ್‌ಗೆ ಈಗ ನೋಂದಣಿ ಆರಂಭವಾಗಿದೆ. ಹಲವು ವರ್ಷಗಳಿಂದ ಈ ಪರೀಕ್ಷೆಗಾಗಿ ತಯಾರಿ ಮಾಡಿಕೊಂಡಿರುವ ಅಭ್ಯರ್ಥಿಗಳು ಸದ್ಯ ಒತ್ತಡದಲ್ಲಿರುವುದಂತೂ ಸುಳ್ಳಲ್ಲ. ಈ ಸಂದರ್ಭದಲ್ಲಿ ಅಭ್ಯರ್ಥಿಗಳ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಐಎಎಸ್‌ ಅಧಿಕಾರಿಯೊಬ್ಬರು ಸ್ಫೂರ್ತಿದಾಯಕ ಪೋಸ್ಟ್‌ ಒಂದನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.


2009ನೇ ಬ್ಯಾಚಿನ ಐಎಎಸ್‌ ಅಧಿಕಾರಿಯಾಗಿರುವ ಅವನೀಶ್‌ ಶರಣ್‌ ಅವರು ತಮಗೆ ಸಿವಿಲ್‌ ಸರ್ವೀಸ್‌ ಪರೀಕ್ಷೆಯ ಸಂದರ್ಶನಕ್ಕೆ ಬಂದಿದ್ದ ಪತ್ರದ ಫೋಟೋವನ್ನೂ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಅವರಿಗೆ 2009ರ ಏಪ್ರಿಲ್‌ 13ರಂದು ಸಂದರ್ಶನ ನಡೆಸಲಾಗಿದೆ.

ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಸಾವಿರಾರು ಮಂದಿ ಫೋಟೋಗೆ ಲೈಕ್‌ ಒತ್ತಿದ್ದು, ಶೇರ್‌ ಮಾಡಿಕೊಂಡಿದ್ದಾರೆ. “ಇದು ಅದೆಷ್ಟೋ ಜನರ ಕನಸು” ಎಂದು ಅನೇಕರು ಕಾಮೆಂಟ್‌ ಮಾಡಿದ್ದಾರೆ. “ಈ ಕನಸನ್ನು ನಾವೂ ಬೆನ್ನು ಹತ್ತಿದ್ದೇವೆ” ಎಂದು ಅನೇಕ ಅಭ್ಯರ್ಥಿಗಳು ಹೇಳಿದ್ದಾರೆ. ಹಾಗೆಯೇ ಕೆಲವರು ಈ ಫೋಟೋದಿಂದಾಗಿ ಉತ್ಸಾಹ ಹೆಚ್ಚಾಗಿದ್ದಾಗಿಯೂ ಹೇಳಿಕೊಂಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 4ರೊಳಗೆ ಅಪ್ಲೈ ಮಾಡಿ

Job Alert: ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿಯ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕಂದಾಯ ಇಲಾಖೆ ಗುಡ್‌ ನ್ಯೂಸ್‌ ನೀಡಿದೆ. ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೂಲಕ ಅಧಿಸೂಚನೆ ಹೊರಡಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಮೇ 4. ದ್ವಿತೀಯ ಪಿಯುಸಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿಯ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕಂದಾಯ ಇಲಾಖೆ (Revenue Department) ಗುಡ್‌ ನ್ಯೂಸ್‌ ನೀಡಿದೆ. ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ (Village Administrative Officer) ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಅಧಿಸೂಚನೆ ಹೊರಡಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಮೇ 4 (Job Alert).

ವಿದ್ಯಾರ್ಹತೆ

  • ದ್ವಿತೀಯ ಪಿಯುಸಿ ಅಥವಾ ತತ್ಸಮಾನ (ಆದೇಶ ಸಂಖ್ಯೆ: ಇಡಿ 09 ಟಿವಿಇ 2019, ದಿನಾಂಕ 06.08.2021 ಮತ್ತು ಆದೇಶ ಸಂಖ್ಯೆ ಇಡಿ 33 ಟಿವಿಇ 2021 ದಿನಾಂಕ 30.09.2021ಗಳನ್ನು ಮತ್ತು ಉಳಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆ ಸಂಖ್ಯೆ ಸಿಆಸುಇ 81 ಸೇವನೆ 2017 ದಿನಾಂಕ 27.02.2018ರ ಅನ್ವಯ ಈ ಕೆಳಕಂಡ ವಿದ್ಯಾರ್ಹತೆಗಳನ್ನು ತತ್ಸಮಾನವೆಂದು ಆದೇಶಿದೆ.)
  • ಸಿಬಿಎಸ್‌ಸಿ ಮತ್ತು ಐಸಿಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ.
  • ಇತರ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 12 ಪರೀಕ್ಷೆ.
  • ನ್ಯಾಷನಲ್ ಇನ್ಸಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (ಎನ್.ಐ.ಒ.ಎಸ್) ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್/ ಎಚ್.ಎಸ್.ಸಿ.
  • ಮೂರು ವರ್ಷಗಳ ಡಿಪ್ಲೋಮಾ ಅಥವಾ ಎರಡು ವರ್ಷಗಳ ಐಟಿಐ ಕೋರ್ಸ್ ಅಥವಾ ಎರಡು ವರ್ಷಗಳ ವೃತ್ತಿ ಶಿಕ್ಷಣ ಡಿಪ್ಲೋಮಾ (ಜೆ.ಒ.ಸಿ/ಜೆ.ಒ.ಡಿ.ಸಿ/ಜೆ.ಎಲ್.ಡಿ.ಸಿ)

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಪ್ರವರ್ಗ 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 750 ರೂ. ಪಾವತಿಸಬೇಕು. ಪರಿಶಿಷ್ಟ ಜಾತಿ / ಪಂಗಡ, ಪ್ರವರ್ಗ -1, ಮಾಜಿ ಸೈನಿಕರು ಮತ್ತು ವಿಶೇಷ ಚೇತನ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ.

ಆಯ್ಕೆ ಹೇಗೆ?

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭರ್ತಿ ಮಾಡಲಿದೆ. ಕರ್ನಾಟಕ ಪರೀಕ್ಷಾ ಪ್ರಾದಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಪರೀಕ್ಷೆಯನ್ನು ಆಫ್‌ಲೈನ್‌-ಒಎಂಆರ್‌ ಮಾದರಿಯಲ್ಲಿ ನಡೆಸಲಾಗುತ್ತದೆ. ಪರೀಕ್ಷೆಗೆ 200 ಅಂಕಗಳನ್ನು ಒಳಗೊಂಡ 2 ಪತ್ರಿಕೆ ಇರುತ್ತದೆ. ಜತೆಗೆ ಕನ್ನಡ ಭಾಷಾ ಪರೀಕ್ಷೆ ಕಡ್ಡಾಯವಾಗಿದ್ದು, ಇದರಲ್ಲಿ ಕನಿಷ್ಠ 50 ಅಂಕ ಗಳಿಸಬೇಕು. ಪರೀಕ್ಷೆಗಳನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಹಿಂದೆ ದ್ವಿತೀಯ ಪಿಯುಸಿ ಅಥವಾ 12ನೇ ತರಗತಿ ಅಂಕಗಳ ಆಧಾರದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಮೆರಿಟ್‌ ಆಧಾರದಲ್ಲಿ ಹುದ್ದೆಗಳಿಗೆ ಆಯ್ಕೆ ನಡೆಯುತ್ತಿತ್ತು. ಆದರೆ ಈ ಸಲದಿಂದ ಆಯ್ಕೆ ವಿಧಾನವನ್ನು ಬದಲಾಯಿಸಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆ ಬಳಿಕ ಅಭ್ಯರ್ಥಿಗಳ ರ‍್ಯಾಂಕಿಂಗ್‌ ಪಟ್ಟಿ ಬಿಡುಗಡೆಯಾಗಲಿದೆ. ನಂತರ ಜಿಲ್ಲಾವಾರು ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದವರನ್ನು ಕೌನ್ಸೆಲಿಂಗ್‌ ಮೂಲಕ ಸ್ಥಳ ನಿಯೋಜನೆಗೊಳಿಸಲಾಗುತ್ತದೆ. ನಿಗದಿತ ಮೀಸಲಾತಿಯಂತೆ ಹುದ್ದೆಗಳನ್ನು ಗುರುತಿಸಿ, ಆ ಪ್ರಕಾರ ಹುದ್ದೆ ಭರ್ತಿಯಾಗಲಿವೆ. 

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 080-23460460.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನು ಗಮನಿಸಿ

  • ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು.
  • ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಒಟ್ಟು ಅಂಕಗಳ ಪೈಕಿ ಕನಿಷ್ಠ ಶೇ. 35ರಷ್ಟು ಅಂಕ ಗಳಿಸುವುದು ಕಡ್ಡಾಯ.
  • ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶದಷ್ಟು ಅಂಕ ಕಳೆಯಲಾಗುತ್ತದೆ. ಹೀಗಾಗಿ ಉತ್ತರ ಬರೆಯುವಾಗ ಎಚ್ಚರಿಕೆ ವಹಿಸಿ.
  • ಪ್ರಶ್ನೆಪತ್ರಿಕೆ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿರುತ್ತದೆ.
  • ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮುನ್ನ ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದನ್ನು ಖಚಿತಪಡಿಸಿಕೊಳ್ಳಬೇಕು. ಈ ಅರ್ಜಿ ಫಾರಂನ ಒಂದು ಪ್ರತಿಯ ಪ್ರಿಂಟ್‌ ಔಟ್‌ ಮತ್ತು ಶುಲ್ಕ ಪಾವತಿಯ ಚಲನ್‌ ಅನ್ನು ತಮ್ಮ ಬಳಿ ಇರಿಸಿಕೊಳ್ಳಬೇಕು.

ಇದನ್ನೂ ಓದಿ: Job Alert: ಉದ್ಯೋಗ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಬಿಬಿಎಂಪಿಯಿಂದ ಬರೋಬ್ಬರಿ 11,307 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Continue Reading

Latest

Tata Consultancy Services: ಮನೆಯಿಂದಲೇ ಕೆಲಸ ಮಾಡುವವರಿಗೆ ಬೋನಸ್‌, ಟಿವಿಪಿ ಕಟ್‌ ಮಾಡಿದ ಟಿಸಿಎಸ್!

Tata Consultancy Services: ವರ್ಕ್ ಫ್ರಮ್ ಹೋಮ್ ಕಡಿತಗೊಳಿಸಿರುವ ಟಿಸಿಎಸ್ ಕಚೇರಿಯಲ್ಲಿ ಕೆಲಸ ಮಾಡುವುದನ್ನು ಕಡ್ಡಾಯಗೊಳಿಸಿದೆ. ಅಲ್ಲದೇ ಕಚೇರಿ ಹಾಜರಾತಿ ಕಡಿಮೆಯಾದರೆ ಅಂತವರಿಗೆ ಬೋನಸ್ ಕಡಿತಗೊಳಿಸುವುದಾಗಿ ಹೇಳಿದೆ.

VISTARANEWS.COM


on

By

Tata Consultancy Services
Koo

ಹೊಸದಿಲ್ಲಿ: ಮೂರು ತಿಂಗಳಲ್ಲಿ ಕಚೇರಿಯಲ್ಲಿ ಉದ್ಯೋಗಿಗಳ ಹಾಜರಾತಿ (attendance in office) ಶೇ. 60ಕ್ಕಿಂತ ಕಡಿಮೆ ಇರಬಾರದು. ಒಂದು ವೇಳೆ ಶೇ. 60ಕ್ಕಿಂತ ಯಾವುದೇ ಉದ್ಯೋಗಿಯ ಹಾಜರಾತಿ ಕಡಿಮೆಯಾದರೆ ಅಂಥವರು ಬೋನಸ್ ಗೆ (quarterly bonus) ಅರ್ಹರಾಗಿರುವುದಿಲ್ಲ ಎಂದು ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (Tata Consultancy Services) ತಿಳಿಸಿದೆ.

ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ತನ್ನ ಉದ್ಯೋಗಿಗಳಿಗೆ ಕಚೇರಿಯಲ್ಲಿನ ಹಾಜರಾತಿಯೊಂದಿಗೆ ತ್ರೈಮಾಸಿಕ ವೇರಿಯಬಲ್ ಪಾವತಿಯನ್ನು ಲಿಂಕ್ ಮಾಡಿದೆ. ಈ ಹೊಸ ನೀತಿಯ ಅಡಿಯಲ್ಲಿ ಶೇ. 60ಕ್ಕಿಂತ ಕಡಿಮೆ ಕಚೇರಿಯ ಹಾಜರಾತಿ ಹೊಂದಿರುವ ಉದ್ಯೋಗಿಗಳು ಬೋನಸ್‌ಗೆ ಅರ್ಹರಾಗಿರುವುದಿಲ್ಲ. ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಅವರು ಪೂರ್ಣ ತ್ರೈಮಾಸಿಕ ವೇರಿಯಬಲ್ ವೇತನವನ್ನು ಪಡೆಯಲು ಉದ್ಯೋಗಿಗಳಿಂದ ಕಚೇರಿಯಲ್ಲಿ ಕನಿಷ್ಠ ಶೇ. 85ರಷ್ಟು ಹಾಜರಾತಿಯನ್ನು ನಿರೀಕ್ಷಿಸುತ್ತಿದೆ ಎಂದು ತಿಳಿಸಿದೆ.

ಇತ್ತೀಚಿನ ಅಪ್‌ಡೇಟ್‌ ಗಳ ಪ್ರಕಾರ, ಐಟಿ ಸೇವೆಗಳ ದೈತ್ಯ ಕಂಪನಿಗಳು ಉದ್ಯೋಗಿಗಳನ್ನು ವಾರದಲ್ಲಿ ಐದು ದಿನ ಕಚೇರಿಯಿಂದ ಕೆಲಸ ಮಾಡಲು ಕಡ್ಡಾಯಗೊಳಿಸಿದೆ. ಈ ಆದೇಶ ಬಂದ ಕೆಲವು ತಿಂಗಳುಗಳ ಅನಂತರ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ತನ್ನ ಉದ್ಯೋಗಿಗಳಿಗೆ ಅವರ ಕಚೇರಿಯಲ್ಲಿ ಹಾಜರಾತಿಯೊಂದಿಗೆ ತ್ರೈಮಾಸಿಕ ವೇರಿಯಬಲ್ ಪೇ ಔಟ್ ಅನ್ನು ಲಿಂಕ್ ಮಾಡಿದೆ.

ಇದನ್ನೂ ಓದಿ: Job News: ಆಪಲ್ ನಿಂದ ಭಾರತದಲ್ಲಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ!

ಈ ಬದಲಾವಣೆಗಳನ್ನು ಉದ್ಯೋಗಿಗಳಿಗೆ ತಿಳಿಸಲು ಆಂತರಿಕ ಮಾನವ ಸಂಪನ್ಮೂಲ ಪೋರ್ಟಲ್‌ನಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ತನ್ನ ನೀತಿಯನ್ನು ಇತ್ತೀಚೆಗೆ ನವೀಕರಿಸಿದೆ ಎಂದು ಮೂಲಗಳು ತಿಳಿಸಿವೆ.

ಕಂಪೆನಿಯ ಪೂರ್ಣ ತ್ರೈಮಾಸಿಕ ವೇರಿಯಬಲ್ ವೇತನವನ್ನು ಪಡೆಯಲು ಕಚೇರಿಯಲ್ಲಿ ಕನಿಷ್ಠ ಶೇ. 85ರಷ್ಟು ಉದ್ಯೋಗಿಗಳ ಹಾಜರಾತಿಯನ್ನು ನಿರೀಕ್ಷಿಸುತ್ತಿದೆ. ಅಲ್ಲದೆ, ಇದನ್ನು ನಿರಂತರವಾಗಿ ಅನುಸರಿಸದಿರುವುದು ಶಿಸ್ತು ಕ್ರಮಗಳನ್ನು ತೆಗೆದುಕೊಳ್ಳುವುದಕ್ಕೆ ಕಾರಣವಾಗಬಹುದು ಎನ್ನಲಾಗಿದೆ.


ಹೆಚ್ಚು ಹಾಜರಾತಿಗೆ ಪ್ರೋತ್ಸಾಹ

ಕಚೇರಿ ಹಾಜರಾತಿಯಿಂದ ಶೇ. 75- 85ರಷ್ಟು ಕೆಲಸ ಮಾಡುವ ನೌಕರರು ತಮ್ಮ ವೇರಿಯಬಲ್ ವೇತನದ ಶೇ. 75ರಷ್ಟನ್ನು ಪಡೆಯುತ್ತಾರೆ ಮತ್ತು ಶೇ. 60- 75 ರಷ್ಟು ಹಾಜರಾತಿ ಹೊಂದಿರುವವರು ತಮ್ಮ ವೇರಿಯಬಲ್ ವೇತನದ ಶೇ. 50ರಷ್ಟನ್ನು ಮಾತ್ರ ಪಡೆಯುತ್ತಾರೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ನ ಸಿಇಒ ಮತ್ತು ಎಂಡಿ ಕೆ. ಕೃತಿವಾಸನ್ ಅವರು ಮಾರ್ಚ್ 31ಕ್ಕೆ ಕೊನೆಗೊಂಡ ನಾಲ್ಕನೇ ತ್ರೈಮಾಸಿಕದಲ್ಲಿ ಹೆಚ್ಚಿನ ಉದ್ಯೋಗಿಗಳು ಕೆಲಸದ ಸ್ಥಳಕ್ಕೆ ಮರಳಿದ್ದಾರೆ. ಕೆಲಸ ಹಂಚಿಕೆಯ ಅನುಭವಗಳನ್ನು ಸೃಷ್ಟಿಸಿದ್ದಾರೆ. ಹೆಚ್ಚಿನ ಕಲಿಕೆ, ಸಹಯೋಗ ಮತ್ತು ಬೆಳವಣಿಗೆಯನ್ನು ಮಾಡಿದ್ದಾರೆ. ಕಂಪೆನಿಯಲ್ಲಿ ಸೌಹಾರ್ದತೆ ಹೆಚ್ಚಾಗಿದೆ . ನಾವು ವೇಗವನ್ನು ಹೆಚ್ಚಿಸಿದಾಗ ನಾವು ಒಟ್ಟಿಗೆ ಅನೇಕ ಹೊಸ ಅವಕಾಶಗಳನ್ನು ತೆರೆಯುತ್ತೇವೆ ಎಂಬುದರಲ್ಲಿ ನನಗೆ ಸಂದೇಹವಿಲ್ಲ ಎಂದು ಹೇಳಿದ್ದರು.

ಫೆಬ್ರವರಿಯಲ್ಲಿ ಆದೇಶ

ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಈ ಹಿಂದೆ ಹೈಬ್ರಿಡ್ ವರ್ಕ್ ಮಾಡೆಲ್ ಪೋಸ್ಟ್ ಸಾಂಕ್ರಾಮಿಕ ರೋಗವನ್ನು ಅನುಸರಿಸುತ್ತಿತ್ತು, ಇದು 2023ರ ಅಕ್ಟೋಬರ್ 1ರಿಂದ ಕೊನೆಗೊಂಡಿತು. ಉದ್ಯೋಗಿಗಳನ್ನು ವಾರದಲ್ಲಿ ಐದು ದಿನ ಕಚೇರಿಯಿಂದ ಕೆಲಸ ಮಾಡಲು ಕೇಳುತ್ತಿದೆ. ಫೆಬ್ರವರಿಯಲ್ಲಿ, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ನೌಕರರಿಗೆ ಇಮೇಲ್ ಕಳುಹಿಸಿದ್ದು, ಅವರ ವೇರಿಯಬಲ್ ವೇತನವನ್ನು ಶೀಘ್ರದಲ್ಲೇ ಅವರ ಕಚೇರಿ ಸೈಟ್‌ನಲ್ಲಿ ಅವರ ಹಾಜರಾತಿಗೆ ಲಿಂಕ್ ಮಾಡಲಾಗುತ್ತದೆ ಎಂದು ತಿಳಿಸಿತು.

Continue Reading

ಉದ್ಯೋಗ

Job Alert: ಎನ್‌ಬಿಸಿಸಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

Job Alert: ಒಂದೊಳ್ಳೆ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ನ್ಯಾಷನಲ್ ಬಿಲ್ಡಿಂಗ್ಸ್ ಕನ್​​ಸ್ಟ್ರಕ್ಷನ್​​ ಕಾರ್ಪೊರೇಷನ್ ಲಿಮಿಟೆಡ್‌ ತನ್ನಲ್ಲಿ ಖಾಲಿ ಇರುವ ವಿವಿಧ 92 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಪದವಿ, ಡಿಪ್ಲೋಮಾ ಓದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 7.

VISTARANEWS.COM


on

Job Alert
Koo

ನವದೆಹಲಿ: ಒಂದೊಳ್ಳೆ ಉದ್ಯೋಗ ಹೊಂದಬೇಕು ಎಂದು ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ನ್ಯಾಷನಲ್ ಬಿಲ್ಡಿಂಗ್ಸ್ ಕನ್​​ಸ್ಟ್ರಕ್ಷನ್​​ ಕಾರ್ಪೊರೇಷನ್ ಲಿಮಿಟೆಡ್‌ (National Buildings Construction Corporation Limited) ಸಂಸ್ಥೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (NBCC Recruitment 2024). ಜನರಲ್‌ ಮ್ಯಾನೇಜರ್‌, ಸೀನಿಯರ್‌ ಪ್ರಾಜೆಕ್ಟ್‌ ಎಕ್ಸಿಕ್ಯೂಟಿವ್‌ ಸೇರಿ 92 ಹುದ್ದೆಗಳಿವೆ. ಪದವಿ, ಡಿಪ್ಲೋಮಾ ಓದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 7 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಜನರಲ್ ಮ್ಯಾನೇಜರ್ – 3 ಹುದ್ದೆ, ವಿದ್ಯಾರ್ಹತೆ: ಬಿಇ/ ಬಿ.ಟೆಕ್‌ ಇನ್ ಸಿವಿಲ್ / ಇಇಇ / ಮೆಕ್ಯಾನಿಕಲ್
ಹೆಚ್ಚುವರಿ ಜನರಲ್ ಮ್ಯಾನೇಜರ್ – 1 ಹುದ್ದೆ, ವಿದ್ಯಾರ್ಹತೆ: ಸಿಎ, ಐಸಿಡಬ್ಲ್ಯುಎ, ಪದವಿ, ಎಂಬಿಎ, ಪಿಜಿಡಿಎಂ
ಡೆಪ್ಯುಟಿ ಜನರಲ್ ಮ್ಯಾನೇಜರ್ – 1 ಹುದ್ದೆ, ವಿದ್ಯಾರ್ಹತೆ: ಪದವಿ, ಸಿವಿಲ್‌ನಲ್ಲಿ ಬಿಇ/ ಬಿ.ಟೆಕ್‌
ಮ್ಯಾನೇಜರ್ – 2 ಹುದ್ದೆ, ವಿದ್ಯಾರ್ಹತೆ: ಪದವಿ
ಪ್ರಾಜೆಕ್ಟ್ ಮ್ಯಾನೇಜರ್ – 3 ಹುದ್ದೆ, ವಿದ್ಯಾರ್ಹತೆ: ಬಿಇ/ ಬಿ.ಟೆಕ್‌ ಇನ್ ಸಿವಿಲ್/ ಇಇಇ/ ಮೆಕ್ಯಾನಿಕಲ್
ಡೆಪ್ಯುಟಿ ಮ್ಯಾನೇಜರ್ – 6 ಹುದ್ದೆ, ವಿದ್ಯಾರ್ಹತೆ: ಎಂಬಿಎ, ಎಂಎಸ್‌ಡಬ್ಲ್ಯು, ಸ್ನಾತಕೋತ್ತರ ಪದವಿ
ಡೆಪ್ಯುಟಿ ಪ್ರಾಜೆಕ್ಟ್ ಮ್ಯಾನೇಜರ್ – 2 ಹುದ್ದೆ, ವಿದ್ಯಾರ್ಹತೆ: ಬಿಇ/ ಬಿ.ಟೆಕ್‌ ಇನ್ ಸಿವಿಲ್/ ಇಇಇ/ ಮೆಕ್ಯಾನಿಕಲ್
ಸೀನಿಯರ್ ಪ್ರಾಜೆಕ್ಟ್ ಎಕ್ಸಿಕ್ಯೂಟಿವ್ – 30 ಹುದ್ದೆ, ವಿದ್ಯಾರ್ಹತೆ: ಬಿಇ/ ಬಿ.ಟೆಕ್‌ ಇನ್ ಸಿವಿಲ್
ಮ್ಯಾನೇಜ್‌ಮೆಂಟ್‌ ಟ್ರೈನಿ – 4 ಹುದ್ದೆ, ವಿದ್ಯಾರ್ಹತೆ: ಎಲ್‌ಎಲ್‌ಬಿ
ಕಿರಿಯ ಎಂಜಿನಿಯರ್ – 40 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ

ವಯೋಮಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 49 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಲಭ್ಯ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ, ಎಸ್‌ಟಿ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 1,000 ರೂ. ಪಾವತಿಸಬೇಕು. ಇದನ್ನು ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ. ಕಂಪ್ಯೂಟರ್‌ ಬೇಸ್ಡ್‌ ಟೆಸ್ಟ್‌ (CBT), ಡಾಕ್ಯುಮೆಂಟ್‌ ಪರಿಶೀಲನೆ, ಸಂದರ್ಶನ ಮುಂತಾದ ವಿಧಾನಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
  • ನಿಮ್ಮ ಫೋನ್‌ ನಂಬರ್‌, ಇ-ಮೇಲ್‌ ಐಡಿ ಮುಂತಾದ ಮಾಹಿತಿ ನೀಡುವ ಮೂಲಕ ಹೆಸರು ನೋಂದಾಯಿಸಿ.
  • ನಿಮ್ಮ ಫೋನ್‌ ನಂಬರ್‌ / ಇ-ಮೇಲ್‌ಗೆ ಕೋಡ್‌ ರವಾನೆಯಾಗುತ್ತದೆ.
  • ಇದನ್ನು ಬಳಿಸಿ ಅಪ್ಲಿಕೇಷನ್‌ ಫಾರಂ ಓಪನ್‌ ಮಾಡಿ.
  • ವೈಯಕ್ತಿಕ ಮಾಹಿತಿ, ಶೈಕ್ಷಣಿಕ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಪಾಸ್‌ಪೋರ್ಟ್‌ ಫೋಟೊ, ಸಹಿಯನ್ನು ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಉದ್ಯೋಗ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಬಿಬಿಎಂಪಿಯಿಂದ ಬರೋಬ್ಬರಿ 11,307 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Continue Reading

ಉದ್ಯೋಗ

Job News: ಆಪಲ್ ನಿಂದ ಭಾರತದಲ್ಲಿ 5 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ!

Hiring to Apple: ವಿಶ್ವದ ಅತಿ ದೊಡ್ಡ ಐಫೋನ್ ತಯಾರಿಕಾ ಸಂಸ್ಥೆ ಭಾರತದಲ್ಲಿ ತನ್ನ ಮಾರಾಟವನ್ನು ಹೆಚ್ಚಿಸಲು ಯೋಜನೆ ರೂಪಿಸಿದ್ದು, ಇದಕ್ಕಾಗಿ ಮುಂದಿನ ಮೂರು ವರ್ಷಗಳಲ್ಲಿ ಹೆಚ್ಚಿನ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳುವ ಸಾಧ್ಯತೆ ಇದೆ. ಯುವ ಉದ್ಯೋಗಾಕಾಂಕ್ಷಿಗಳಿಗೆ ಶುಭ ಸುದ್ದಿ ಇಲ್ಲಿದೆ.

VISTARANEWS.COM


on

By

Hiring to Apple
Koo

ನವದೆಹಲಿ: ವಿಶ್ವದ ಅತಿದೊಡ್ಡ ಐಫೋನ್ (iphone) ತಯಾರಕ(Job News) ಆಪಲ್ ಕಂಪನಿ (apple compeny) ಮುಂದಿನ ಮೂರು ವರ್ಷಗಳಲ್ಲಿ ಭಾರತದಲ್ಲಿ (india) 5,00,000 ಕ್ಕೂ ಹೆಚ್ಚು ಮಂದಿಗೆ ಉದ್ಯೋಗ (job) ನೀಡುವ ನಿರೀಕ್ಷೆಯಿದೆ. ಪ್ರಸ್ತುತ ಆಪಲ್‌ (Hiring to Apple) ಮಾರಾಟಗಾರರು ಮತ್ತು ಪೂರೈಕೆದಾರರಾಗಿ ಭಾರತದಲ್ಲಿ 1,50,000 ಮಂದಿಯನ್ನು ನೇಮಿಸಿಕೊಂಡಿದೆ.

ಕೋವಿಡ್ -19 (covid-19) ಸಾಂಕ್ರಾಮಿಕದ ಬಳಿಕ ಐಫೋನ್ ಮತ್ತು ಇತರ ಗ್ಯಾಜೆಟ್‌ಗಳ ಉತ್ಪಾದನೆಯ ಮೇಲೆ ತೀವ್ರ ಪರಿಣಾಮ ಬೀರಿದೆ. ಭಾರಿ ತೊಂದರೆಗಳನ್ನು ಎದುರಿಸಿದ ಬಳಿಕ ಆಪಲ್ ಈಗ ಚೀನಾದಿಂದ (china) ತನ್ನ ಉತ್ಪಾದನಾ ನೆಲೆಯನ್ನು ಬೇರೆಬೇರೆ ಕಡೆಗಳಲ್ಲಿ ಸ್ಥಾಪಿಸಲು ಪ್ರಯತ್ನಿಸುತ್ತಿದೆ. ಇದರ ಭಾಗವಾಗಿ ಆಪಲ್ ಭಾರತದಲ್ಲಿ ಅತಿ ದೊಡ್ಡ ಘಟಕವನ್ನು ಸ್ಥಾಪಿಸುವ ಗುರಿ ಹೊಂದಿದೆ.

ಭಾರತದಲ್ಲಿ ಶಾಶ್ವತ ಘಟಕ ಸ್ಥಾಪನೆಗೆ ಐಫೋನ್ ತಯಾರಕ ಕಂಪೆನಿ ಆಪಲ್ ಮುಂದಾಗಿದ್ದು, ಇದಕ್ಕಾಗಿ ವೇಗವಾಗಿ ಕಾರ್ಯಾಚರಣೆ ನಡೆಸುತ್ತಿದೆ. ಮೂಲಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ ಇದಕ್ಕೆ ಪೂರಕವಾಗಿ ಭಾರತದಲ್ಲಿ ಹೆಚ್ಚಿನ ಉದ್ಯೋಗಿಗಳ ನೇಮಕಕ್ಕೆ ಮುಂದಾಗಿದೆ. ಕಂಪೆನಿಯು ತನ್ನ ಸಿಬ್ಬಂದಿಗೆ ವಸತಿ ಯೋಜನೆಗಳನ್ನು ಮಾಡುತ್ತಿದೆ ಮತ್ತು ಹೆಚ್ಚು ಹೆಚ್ಚು ನೇಮಕ ಮಾಡುವತ್ತ ಗಮನ ಹರಿಸುತ್ತಿದೆ.

ಇದನ್ನೂ ಓದಿ: Job News: ಕೆಪಿಎಸ್‌ಸಿಯ 1 ಹುದ್ದೆಗೆ ಸರಾಸರಿ 508 ಅರ್ಜಿ ಸಲ್ಲಿಕೆ; ಒಟ್ಟು 1.95 ಲಕ್ಷ ಅಭ್ಯರ್ಥಿಗಳಿಂದ ಅಪ್ಲಿಕೇಷನ್‌

5 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ

ಆಪಲ್‌ನ ಅತಿದೊಡ್ಡ ಉದ್ಯೋಗ ಉತ್ಪಾದಕವೆಂದರೆ ಟಾಟಾ ಎಲೆಕ್ಟ್ರಾನಿಕ್ಸ್. ಅದಕ್ಕಾಗಿ ಎರಡು ಸ್ಥಾವರಗಳನ್ನು ಸ್ಥಾಪಿಸುತ್ತಿದ್ದು, ಮುಂದಿನ ಮುಂದಿನ ಮೂರು ವರ್ಷಗಳಲ್ಲಿ ಆಪಲ್ ತನ್ನ ಮಾರಾಟಗಾರರ ಮೂಲಕ ಭಾರತದಲ್ಲಿ 5,00,000ಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡುವ ಸಾಧ್ಯತೆ ಇದೆ ಎಂದು ಸುದ್ದಿ ಸಂಸ್ಥೆ ಪಿಟಿಐ ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ಆಪಲ್ ಭಾರತದಲ್ಲಿ ನೇಮಕಾತಿಯನ್ನು ವೇಗಗೊಳಿಸುತ್ತಿದೆ. ಅಂದಾಜಿನ ಪ್ರಕಾರ ಅದರ ಮಾರಾಟಗಾರರು ಮತ್ತು ಘಟಕಗಳ ಪೂರೈಕೆದಾರರ ಮೂಲಕ ಮುಂದಿನ ಮೂರು ವರ್ಷಗಳಲ್ಲಿ ಐದು ಲಕ್ಷ ಜನರಿಗೆ ಉದ್ಯೋಗ ನೀಡಲಿದೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉತ್ಪಾದನೆ ಹೆಚ್ಚಿಸಲು ಕ್ರಮ

ಭಾರತದಲ್ಲಿ ಆಪಲ್ ತನ್ನ ಉತ್ಪಾದನೆಯನ್ನು ಸುಮಾರು 5 ಪಟ್ಟು ಹೆಚ್ಚಿಸಲು ಬಯಸುತ್ತಿದೆ. ಮುಂದಿನ 4- 5 ವರ್ಷಗಳ ಯೋಜನೆಗೆ 40 ಶತಕೋಟಿ ಡಾಲರ್‌ ಅಂದರೆ ಸುಮಾರು 3.32 ಲಕ್ಷ ಕೋಟಿ ವಿನಿಯೋಗಿಸಲು ಸಜ್ಜಾಗಿದೆ.
ಮೂಲಸೌಕರ್ಯ ಮತ್ತು ಉದ್ಯೋಗಿಗಳಿಗಾಗಿ ಹೆಚ್ಚು ಖರ್ಚು ಮಾಡಲು ಮುಂದಾಗಿರುವ ಆಪಲ್ ಪ್ರತಿಸ್ಪರ್ಧಿಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದೆ.

ಅಗ್ರಸ್ಥಾನದಲ್ಲಿ ಸ್ಯಾಮ್‌ಸಂಗ್

ಮಾರುಕಟ್ಟೆ ಸಂಶೋಧನಾ ಸಂಸ್ಥೆ ಕೌಂಟರ್‌ಪಾಯಿಂಟ್ ರಿಸರ್ಚ್ ಆಪಲ್ ಹೇಳುವಂತೆ ಮೊದಲ ಬಾರಿಗೆ 2023 ರಲ್ಲಿ ಭಾರತದ ಮಾರುಕಟ್ಟೆಯನ್ನು ಅತ್ಯಧಿಕ ಆದಾಯದೊಂದಿಗೆ ಮುನ್ನಡೆಸಿದೆ. ಆದರೂ ಸ್ಯಾಮ್‌ಸಂಗ್ ಮಾರಾಟದ ವಿಷಯದಲ್ಲಿ ಇನ್ನೂ ಅಗ್ರಸ್ಥಾನದಲ್ಲಿದೆ. ಆಪಲ್ 10 ಮಿಲಿಯನ್ ಯೂನಿಟ್ ಮಾರ್ಕ್ ಅನ್ನು ಸಾಧಿಸಿದೆ.

ಐಫೋನ್ ರಫ್ತು ಏರಿಕೆ

ಭಾರತದಿಂದ ಆಪಲ್‌ನ ಐಫೋನ್ ರಫ್ತು 2022- 23 ರಲ್ಲಿ 6.27 ಶತಕೋಟಿ ಡಾಲರ್ ನಿಂದ 2023- 24 ರಲ್ಲಿ 12.1 ಶತಕೋಟಿ ಡಾಲರ್ ಗೆ ಏರಿದೆ. ಇದು ಸುಮಾರು 100 ಪ್ರತಿಶತದಷ್ಟು ದೊಡ್ಡ ಜಿಗಿತವಾಗಿತ್ತು ಎಂದು ಟ್ರೇಡ್ ಇಂಟೆಲಿಜೆನ್ಸ್ ಪ್ಲಾಟ್‌ಫಾರ್ಮ್ ದಿ ಟ್ರೇಡ್ ವಿಷನ್ ಅಂಕಿಅಂಶಗಳು ತಿಳಿಸಿದೆ.

Continue Reading
Advertisement
pm narendra modi jp morgan jamie dimon
ಪ್ರಮುಖ ಸುದ್ದಿ15 mins ago

PM Narendra Modi: “ಅಮೆರಿಕಕ್ಕೆ ಮೋದಿಯಂಥ ನಾಯಕ ಬೇಕು” ಜೆಪಿ ಮೋರ್ಗನ್‌ ಸಂಸ್ಥೆ ಸಿಇಒ ಜೇಮಿ ಶ್ಲಾಘನೆ

IPL 2024 Points Table
ಕ್ರೀಡೆ29 mins ago

IPL 2024 Points Table: ಚೆನ್ನೈಗೆ ಹೀನಾಯವಾಗಿ ಸೋಲುಣಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಲಕ್ನೋ

Noida Scrap Mafia
ವಿದೇಶ45 mins ago

Noida Scrap Mafia: ಥೈಲ್ಯಾಂಡ್‌ನಲ್ಲಿ ಪೊಲೀಸ್‌ ಬಲೆಗೆ ಬಿದ್ದ ಗ್ಯಾಂಗ್‌ಸ್ಟರ್‌ ರವಿ ಕಾನಾ

ಬೆಂಗಳೂರು ಗ್ರಾಮಾಂತರ48 mins ago

Lok Sabha Election 2024: ಬೆಂಗಳೂರು ಗ್ರಾಮಾಂತರಕ್ಕೆ ಡಬಲ್ ಸೆಕ್ಯೂರಿಟಿ; 28 ಲೋಕಸಭಾ ಕ್ಷೇತ್ರದ ಮತದಾರರು ಎಷ್ಟು?

shree Saibaba jatra mahotsav and Mass marriage programme
ಯಾದಗಿರಿ51 mins ago

Yadgiri News: ಸಾಮಾಜಿಕ ಕಾರ್ಯಗಳಿಂದ ಆತ್ಮತೃಪ್ತಿ: ಶಾಂತವೀರ ಸ್ವಾಮೀಜಿ

Vijayanagara News Sri Kolashanteswara Swamy Rathotsava in arasikere
ವಿಜಯನಗರ52 mins ago

Vijayanagara News: ವಿಜೃಂಭಣೆಯಿಂದ ಜರುಗಿದ ಶ್ರೀ ಕೋಲಶಾಂತೇಶ್ವರ ಸ್ವಾಮಿ ರಥೋತ್ಸವ

Harshika Poonacha bhuvan ponnanna met pralhad joshi
ಸಿನಿಮಾ54 mins ago

Harshika Poonacha: ಹಲ್ಲೆ ಪ್ರಕರಣ; ನ್ಯಾಯ ಕೋರಿ ಪ್ರಲ್ಹಾದ ಜೋಶಿ ಭೇಟಿಯಾದ ಹರ್ಷಿಕಾ ಪೂಣಚ್ಚ ದಂಪತಿ

IED Blast
Lok Sabha Election 20242 hours ago

IED Blast: ಎರಡನೇ ಹಂತದ ಮತದಾನಕ್ಕೆ ದಿನಗಣನೆ; ಮಣಿಪುರದ ಸೇತುವೆ ಮೇಲೆ ಐಇಡಿ ಸ್ಫೋಟ

Modi in Karnataka from April 28 and 29 BJP plan for second phase ready
Lok Sabha Election 20242 hours ago

Modi in Karnataka: ಏಪ್ರಿಲ್‌ 28 – 29ಕ್ಕೆ ಕರ್ನಾಟಕಕ್ಕೆ ಮೋದಿ; 2ನೇ ಹಂತಕ್ಕೆ ಬಿಜೆಪಿ ಪ್ಲ್ಯಾನ್‌ ರೆಡಿ!

female doctors
ಪ್ರಮುಖ ಸುದ್ದಿ2 hours ago

Female Doctors: ವೈದ್ಯೆಯರಿಂದ ಚಿಕಿತ್ಸೆ ಪಡೆದ ರೋಗಿಗಳು ಬದುಕುಳಿಯುವ ಸಾಧ್ಯತೆ ಹೆಚ್ಚಂತೆ! ಅಧ್ಯಯನ ವರದಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ10 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ2 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ3 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌