Kannada Rajyotsava : ರಾಜ್ಯೋತ್ಸವ ದಿನ ಹಾಡಬೇಕಾದ 5 ಹಾಡುಗಳು ಇಲ್ಲಿವೆ; ಸಾಹಿತ್ಯ ಸಂಗೀತ ಸಹಿತ! - Vistara News

ಕನ್ನಡ ರಾಜ್ಯೋತ್ಸವ

Kannada Rajyotsava : ರಾಜ್ಯೋತ್ಸವ ದಿನ ಹಾಡಬೇಕಾದ 5 ಹಾಡುಗಳು ಇಲ್ಲಿವೆ; ಸಾಹಿತ್ಯ ಸಂಗೀತ ಸಹಿತ!

Kannada Rajyotsava : ಕನ್ನಡ ರಾಜ್ಯೋತ್ಸವ ದಿನದಂದು ಹಾಡಬೇಕಾದ ಐದು ಹಾಡುಗಳು ಇಲ್ಲಿವೆ. ಅದರ ಸಾಹಿತ್ಯ ಮತ್ತು ಸಂಗೀತವೂ ಇದೆ. ಹಾಡಿ, ಕುಣಿದಾಡಿ.

VISTARANEWS.COM


on

Kannada Rajyotsava Songs
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಾಳೆ ನವೆಂಬರ್‌ 1. ಕನ್ನಡ ರಾಜ್ಯೋತ್ಸವ (Kannada Rajyotsava). ನಾಡಿನೆಲ್ಲೆಡೆ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಕರೆ ನೀಡಿರುವ ರಾಜ್ಯ ಸರ್ಕಾರ (State Government) ಅಧಿಕೃತ ಕಾರ್ಯಕ್ರಮಗಳಲ್ಲಿ ಐದು ಕನ್ನಡ ಗೀತೆಗಳ ಗಾಯನವನ್ನು (Five Kannada Songs) ಕಡ್ಡಾಯಗೊಳಿಸಿದೆ. ಹಾಗಿದ್ದರೆ ಆ ಹಾಡುಗಳು ಯಾವುವು ಎಂದು ಇಲ್ಲಿ ನೋಡೋಣ.

ಈ ಬಾರಿ ಕರ್ನಾಟಕ ಸಂಭ್ರಮ 50ನೇ ವರ್ಷಾಚರಣೆ (Kannada Sambhrama 50) ನಡೆಯುತ್ತಿದೆ. ಮೈಸೂರು ರಾಜ್ಯವು ಕರ್ನಾಟಕ ಎಂದು ಮರುನಾಮಕರಣಗೊಂಡು ಈ ವರ್ಷದ ನವೆಂಬರ್‌ 1ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ. ಈ ಶುಭ ಸಂದರ್ಭದಲ್ಲಿ ಐದು ಕನ್ನಡಗೀತೆಗಳನ್ನು ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸಬೇಕು ಎನ್ನುವುದು ರಾಜ್ಯ ಸರ್ಕಾರದ ಮನವಿ.

‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕ ಅರಿವು ಮೂಡಿಸುವ ಯೋಜನೆ ಹಮ್ಮಿಕೊಳ್ಳುವಂತೆ ರಾಜ್ಯ ಸರ್ಕಾರ ಸೂಚಿಸಿದೆ.

ನ.1ರಂದು ರಾಜ್ಯದೆಲ್ಲೆಡೆ ಆಚರಿಸುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಸಂಭ್ರಮ 50 ಅಭಿಯಾನದ ಅಂಗವಾಗಿ ಆಯ್ಕೆ ಮಾಡಿರುವ ನಾಡಿನ ಹೆಸರಾಂತ ಕವಿಗಳ 5 ಕನ್ನಡ ಗೀತೆಗಳನ್ನು ಹಾಡುವ ಮೂಲಕ ಸಮಸ್ತ ಕನ್ನಡಿಗರು ಕನ್ನಡಾಂಬೆಗೆ ನುಡಿ ನಮನ (ಗೀತೆ ಗಾಯನ) ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

ಹಾಡಬೇಕಾಗಿರುವ ಹಾಡುಗಳು ಇವು

1. ಹುಯಿಲಗೋಳ ನಾರಾಯಣ ರಾಯರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು
2. ಕುವೆಂಪು ವಿರಚಿತ ಎಲ್ಲಾದರೂ ಇರು ಎಂತಾದರು ಇರು
3. ದ. ರಾ. ಬೇಂದ್ರೆ ಅವರ ಒಂದೇ ಒಂದೇ ಕರ್ನಾಟಕ ಒಂದೇ
4. ಸಿದ್ದಯ್ಯ ಪುರಾಣಿಕ ಅವರ ಹೊತ್ತಿತೋ ಹೊತ್ತಿತು ಕನ್ನಡ ದೀಪ
5. ಚನ್ನವೀರ ಕಣವಿ ಅವರ ಹೆಸರಾಯಿತು ಕರ್ನಾಟಕ

ಹಾಡುಗಳ ಪೂರ್ಣ ಸಾಹಿತ್ಯ ಇಲ್ಲಿದೆ

1.ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು

ಸಾಹಿತ್ಯ: ಹುಯಿಲಗೋಳ ನಾರಾಯಣರಾಯರು

Huyilagola Narayana rayaru
ಹುಯಿಲಗೋಳ ನಾರಾಯಣ ರಾಯರು

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು
ಬದುಕು ಬಲುಹಿನ ನಿಧಿಯು ಸದಭಿಮಾನದ ಗೂಡು || ಪ ||

ರಾಜನ್ಯರಿಪು ಪರಶುರಾಮನಮ್ಮನ ನಾಡು
ಆ ಜಲಧಿಯನೆ ಜಿಗಿದ ಹನುಮನುದಿಸಿದ ನಾಡು
ಓಜೆಯಿಂ ಮೆರೆದರಸುಗಳ ಸಾಹಸದ ಸೂಡು
ತೇಜವನು ನಮಗೀವ ವೀರವೃಂದದ ಬೀಡು || 1 ||

ಲೆಕ್ಕಿಗ ಮಿತಾಕ್ಷರರು ಬೆಳೆದು ಮೆರೆದಿಹ ನಾಡು
ಜಕ್ಕಣನ ಶಿಲ್ಪಿ ಕಲೆಯಚ್ಚರಿಯ ಕರುಗೋಡು
ಚೊಕ್ಕಮತಗಳ ಸಾರಿದವರಿಗಿದು ನೆಲೆವೀಡು
ಬೊಕ್ಕಸದ ಕಣಜವೈ ವಿದ್ವತ್ತೆಗಳ ಕಾಡು || 2 ||

ಪಾವನೆಯರಾ ಕೃಷ್ಣೆ ಭೀಮೆಯರ ತಾಯ್ನಾಡು
ಕಾವೇರಿ ಗೋದೆಯರು ಮೈದೊಳೆವ ನಲುನಾಡು
ಅವಗಂ ಸ್ಪೂರ್ತಿಸುವ ಕಬ್ಬಿಗರ ನಡೆಮಾಡು
ಕಾವ ಗದುಗಿನ ವೀರನಾರಾಯಣನ ಬೀಡು|| 3 ||

2. ಎಲ್ಲಾದರೂ ಇರು ಎಂತಾದರು ಇರು

ರಚನೆ: ಕುವೆಂಪು

Kuvempu kannada sahitya

ಎಲ್ಲಾದರು ಇರು; ಎಂತಾದರು ಇರು;
ಎಂದೆಂದಿಗು ನೀ ಕನ್ನಡವಾಗಿರು.
ಕನ್ನಡ ಗೋವಿನ ಓ ಮುದ್ದಿನ ಕರು,
ಕನ್ನಡತನವೊಂದಿದ್ದರೆ ನೀನಮ್ಮಗೆ ಕಲ್ಪತರು!

ನೀ ಮೆಟ್ಟುವ ನೆಲ – ಅದೆ ಕರ್ನಾಟಕ;
ನೀನೇರುವ ಮಲೆ – ಸಹ್ಯಾದ್ರಿ.
ನೀ ಮುಟ್ಟುವ ಮರ – ಶ್ರೀಗಂಧದ ಮರ;
ನೀ ಕುಡಿಯುವ ನೀರ್ – ಕಾವೇರಿ.

ಪಂಪನನೋದುವ ನಿನ್ನಾ ನಾಲಗೆ
ಕನ್ನಡವೇ ಸತ್ಯ.
ಕುಮಾರವ್ಯಾಸನನಾಲಿಪ ಕಿವಿಯದು
ಕನ್ನಡವೇ ನಿತ್ಯ.
ಹರಿಹರ ರಾಘವರಿಗೆ ಎರಗುವ ಮನ,
ಹಾಳಾಗಿಹ ಹಂಪೆಗೆ ಕೊರಗುವ ಮನ,
ಪೆಂಪಿನ ಬನವಾಸಿಗೆ ಕರಗುವ ಮನ;
ಬೆಳ್ಗೊಳ ಬೇಲೂರ್ಗಳ ನೆನೆಯುವ ಮನ,
ಜೋಗದ ಜಲಪಾತದಿ ಧುಮುಕುವ ಮನ
ಮಲೆನಾಡಿಗೆ ಹೊಂಪುಳಿವೋಗುವ ಮನ;
ಎಲ್ಲಿದ್ದರೆ ಏನ್? ಎಂತಿದ್ದರೆ ಏನ್?
ಎಂದೆಂದಿಗು ತಾನ್-
ಕನ್ನಡವೇ ಸತ್ಯ!
ಕನ್ನಡವೇ ನಿತ್ಯ!

ಕಾಜಾಣಕೆ ಗಿಳಿ ಕೋಗಿಲೆಯಿಂಪಿಗೆ,
ಮಲ್ಲಿಗೆ ಸಂಪಿಗೆ ಕೇದಗೆ ಸೊಂಪಿಗೆ,
ಮಾವಿನ ಹೊಂಗೆಯ ತಳಿರಿನ ತಂಪಿಗೆ,
ರಸರೋಮಾಂಚನಗೊಳುವಾತನ ಮನ
ಎಲ್ಲಿದ್ದರೆ ಏನ್? ಎಂತಿದ್ದರೆ ಏನ್?
ಎಂದೆಂದಿಗು ತಾನ್-
ಕನ್ನಡವೇ ಸತ್ಯ!
ಕನ್ನಡವೇ ನಿತ್ಯ!
ಅನ್ಯವನೆಲದೆ ಮಿಥ್ಯಾ!

3. ಒಂದೇ ಒಂದೇ ಒಂದೇ ಕರ್ನಾಟಕ ಒಂದೇ

ಕವಿ: ದತ್ತಾತ್ರೇಯ ರಾಮಚಂದ್ರ ಬೇಂದ್ರೆ(ಅಂಬಿಕಾತನಯ ದತ್ತ)

Dattatreya Ramachandra Bendre Kannada kavi

ಒಂದೇ ಒಂದೇ ಒಂದೇ ಕರ್ನಾಟಕ ಒಂದೇ
ಹಿಂದೆ ಮುಂದೆ ಎಂದೆ ಕರ್ನಾಟಕ ಒಂದೇ

ಹಿಂದೆ ಮುಂದೆ ಎಂದೆ ಕರ್ನಾಟಕ ಒಂದೇ
ಜಗದೇಳಿಗೆಯಾಗುವುದಿದೆ ಕರ್ನಾಟಕದಿಂದೆ
ಇಲ್ಲಿಯ ಜನ ಮನ ಭಾಷೆಯು ಕನ್ನಡವದು ಒಂದೇ
ಒಂದೇ ಜಗವು ಮನವು ಕನ್ನಡಿಗರು ಎಂದೆ
ಕುಲವೊಂದೇ ಛಲವೊಂದೇ ನೀತಿಯ ನೆಲೆಯೊಂದೇ
ಹೀಗೆನ್ನದ ಹೆರವರು ಅವರಿದ್ದರು ಒಂದೆ ಇರದಿದ್ದರು ಒಂದೆ
ಕನ್ನಡವೆಂದು ಒಪ್ಪದು ಕರ್ನಾಟಕ ನಿಂದೆ

ಕನ್ನಡ ಮಾತೇ ಮಾತೆಯು ಕರ್ನಾಟಕ ಒಂದೇ
ಅದು ದೈವತ ಅದು ಜೀವಿತ ಒಪ್ಪಿಹೆವದು ಎಂದೆ
ನಮ್ಮದು ನಿಮ್ಮದು ಅವರದು ಈ ಆಸ್ತಿ ಪಾಸ್ತಿ
ನಾಡಿನ ತಾಯಿಗೆ ಸೇರಿದೆ ಬೇರೆಯ ಮನೆ ನಾಸ್ತಿ
ಕನ್ನಡ ಕಾಯಕದಲ್ಲಿಲ್ಲವು ಕಮ್ಮೀ ಜಾಸ್ತಿ
ಇದನೊಪ್ಪದ ಹೆರವರು ಅವರಿದ್ದರು ಒಂದೆ ಇರದಿದ್ದರು ಒಂದೇ
ಕರ್ನಾಟಕ ಹಿತ ಹಿಡಿತವು ಕನ್ನಡ ಕುಲದಿಂದೆ

ಕನ್ನಡವು ಭಾರತವು ಜಗವೆಲ್ಲವು ಒಂದೇ
ತುಂಬಿದೆ ಕನ್ನಡ ಕುಲವನ್ನು ಒಪ್ಪುವ ಕುಲದಿಂದೇ
ಇಂತರಿಯದ ಹೆರವರು ಅವರಿದ್ದರು ಒಂದೆ ಇರದಿದ್ದರು ಒಂದೇ
ಉಚ್ಛರಿಸಿರಿ ಮಾತೆಗೆ ಜಯ ಜಯ ಜಯವೆಂದೇ

4. ಹೊತ್ತಿತೋ ಹೊತ್ತಿತು ಕನ್ನಡದ ದೀಪ

ಸಾಹಿತ್ಯ: ಡಾ.ಸಿದ್ದಯ್ಯ ಪುರಾಣಿಕ

Siddaiah puranik

ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಮುಗಿಯಿತೋ ಮುಗಿಯಿತು ಶತಮಾನಗಳ ಶಾಪ..
ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಹೊತ್ತಿತೋ.. ಹೊತ್ತಿತು…ಕನ್ನಡದ ದೀಪ

ಕಣ್ಣು ಕುಕ್ಕಿಸುವಂತೆ ದೇದೀಪ್ಯಮಾನ
ಹರ್ಷ ಉಕ್ಕಿಸುವಂತೆ ಶೋಭಾಯಮಾನ..
ಕನ್ನಡದ ಮನೆಯಾಗೇ ಜ್ಯೋತಿರ್ನಿಧಾನ
ಕನ್ನಡದ ಪ್ರಾಣ.. ಕನ್ನಡದ ಮಾನ ..
ಹೊತ್ತಿತೋ ಹೊತ್ತಿತು ಕನ್ನಡದ ದೀಪ

ಉರಿವವರು ಬೇಕಿನ್ನು ಇದರೆಣ್ಣೆಯಾಗಿ
ಸುಡುವವರು ಬೇಕಿನ್ನು ನಿಡುಬತ್ತಿಯಾಗಿ..
ಧರಿಸುವವರು ಬೇಕಿನ್ನು ಸಿರಿಹಣತೆಯಾಗಿ
ನಮ್ಮೀ ಉಸಿರಾಗಿ ಧರ್ಮಕ್ಕೆ ಬಾಗಿ..
ಹೊತ್ತಿತೋ ಹೊತ್ತಿತು ಕನ್ನಡದ ದೀಪ

ಚಿರಕಾಲ ಬೆಳಗಲಿ ಕನ್ನಡದ ದೀಪ
ಜನಕೆಲ್ಲ ಬೆಳಕಾಗಿ ಪುಣ್ಯ ಪ್ರದೀಪ..
ಭಾರತಕೆ ಬಲವಾಗಿ ಭವ್ಯ ಪ್ರದೀಪ
ಕಳೆಯುತ್ತ ತಾಪ , ಬೆಳೆಸುತ್ತ ಸೈಪ..
ಹೊತ್ತಿತೋ ಹೊತ್ತಿತು ಕನ್ನಡದ ದೀಪ

ಹೊತ್ತಿತೋ ಹೊತ್ತಿತು ಕನ್ನಡದ ದೀಪ
ಮುಗಿಯಿತೋ ಮುಗಿಯಿತು ಶತಮಾನಗಳ ಶಾಪ
ಹೊತ್ತಿತೋ.. ಹೊತ್ತಿತು.. ಕನ್ನಡದ ದೀಪ

5. ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ

ಕವಿ : ಚನ್ನವೀರ ಕಣವಿ

Channaveera Kanavi

ಹೆಸರಾಯಿತು ಕರ್ನಾಟಕ
ಉಸಿರಾಗಲಿ ಕನ್ನಡ
ಹಸಿಗೋಡೆಯ ಹರಳಿನಂತೆ
ಹುಸಿಹೋಗದ ಕನ್ನಡ

ಹೊಸೆದ ಹಾಗೆ ಹುರಿಗೊಳ್ಳುವ
ಗುರಿ ತಾಗುವ ಕನ್ನಡ;
ಕುರಿತೋದದ ಪರಿಣತಮತಿ –
ಅರಿತವರಿಗೆ ಹೂಗೊಂಡ

ಪಡುಗಡಲಿನ ತೆರೆಗಳಂತೆ
ಹೆಡೆ ಬಿಚ್ಚುತ ಮೊರೆಯುವ
ಸಹ್ಯಾದ್ರಿಯ ಶಿಖರದಂತೆ
ಬಾನೆತ್ತರ ಕರೆಯುವ

ಗುಡಿ – ಗೋಪುರ ಹೊಂಗಳಸಕೆ
ಚೆಂಬೆಳಕಿನ ಕನ್ನಡ;
ನಮ್ಮೆಲ್ಲರ ಮೈಮನಸಿನ
ಹೊಂಗನಸಿನ ಕನ್ನಡ

ತ್ರಿಪದಿಯಿಂದ ಸಾಸಿರಪದಿ
ಸ್ವಚ್ಛಂದದ ಉಲ್ಲಾಸ
ಭಾವಗೀತೆ, ಮಹಾಕಾವ್ಯ –
ವೀರ – ವಿನಯ ಸಮರಸ

ಹಳ್ಳಿ – ಊರು, ನಗರ – ಜಿಲ್ಲೆ
ಮೊಗದ ಹೊಗರು ಕನ್ನಡಿ;
ಎಲ್ಲ ದಿಸೆಗು ಚೆಲ್ಲುವರಿದ
ಚೈತನ್ಯದ ದಾಂಗುಡಿ

ಇದನ್ನೂ ಓದಿ: Karnataka Rajyotsava: ಭೇಟಿ ನೀಡಲೇಬೇಕಾದ ಕರ್ನಾಟಕದ ಐತಿಹಾಸಿಕ ತಾಣಗಳಿವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada Pride: ಇನ್ನು ಕನ್ನಡದಲ್ಲೇ ಸಿಆರ್‌ಪಿಎಫ್, ಬಿಎಸ್‌ಎಫ್, ಸಿಐಎಸ್‌ಎಫ್ ಕಾನ್ಸ್‌ಟೇಬಲ್ ಎಕ್ಸಾಮ್!

Kannada Pride: ಕೇಂದ್ರ ಸಶಸ್ತ್ರ ಮೀಸಲು ಪಡೆಗಳ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ 13 ಪ್ರಾದೇಿಕ ಭಾಷೆಗಳಲ್ಲಿ ನಡೆಸಲು ಕೇಂದ್ರ ಗೃಹ ಇಲಾಖೆಯು ಕಳೆದ ವರ್ಷವೇ ನಿರ್ಧರಿಸಿತ್ತು.

VISTARANEWS.COM


on

Karnataka Candidate can write CRPF, BSF, CIS Constable Exam in Kannada, Kannada Pride
Koo

ನವದೆಹಲಿ: ಸಿಆರ್‌ಪಿಎಫ್(CRPF), ಬಿಎಸ್‌ಎಫ್ (BSF) ಮತ್ತು ಸಿಐಎಸ್ಎಫ್‌ನಂಥ (CISF) ಅರೆ ಸೇನಾ ಪಡೆಗಳ ಕಾನ್ಸ್‌ಟೇಬ್ ನೇಮಕಾತಿ ಪರೀಕ್ಷೆಯನ್ನು (Constable Exam) ಇಂಗ್ಲಿಷ್ ಮತ್ತು ಹಿಂದಿ ಮಾತ್ರವಲ್ಲದೇ, ಕನ್ನಡವೂ (Kannada Pride) ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯವು ಭಾನುವಾರ ಹೇಳಿದೆ.

ದೇಶಾದ್ಯಂತ 128 ನಗರಗಳಲ್ಲಿ ನಡೆಯಲಿರುವ ಪರೀಕ್ಷೆಯಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳು ಎಕ್ಸಾಮ್ ಬರೆಯಲಿದ್ದಾರೆ. ಈ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ನಡೆಯಲು ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಸಚಿವಾಲಯವು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಾದೇಶಿಕ ಭಾಷೆಗಳಿಗೆ ಉತ್ತೇಜನ ಮತ್ತು ಕೇಂದ್ರ ಸಶಸ್ತ್ರ ಮೀಸಲು ಪಡೆಯಲ್ಲಿ ಸ್ಥಳೀಯ ಯುವಕರು ಪಾಲ್ಗೊಳ್ಳುವುದನ್ನು ಹೆಚ್ಚಿುವುದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಿಂದಿ ಮತ್ತು ಇಂಗ್ಲಿಷ್ ಮಾತ್ರವಲ್ಲದೇ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸ್ಟಾಫ್ ಸೆಲಕ್ಷನ್ ಕಮಿಷನ್(SSC) ಈ ಕಾನ್‌ಸ್ಟೇಬಲ್(ಸಾಮಾನ್ಯ ಕರ್ತವ್ಯ) ಪರೀಕ್ಷೆಯನ್ನು ಕೈಗೊಳ್ಳುತ್ತಿದೆ. ಈ ಮೂಲಕ ಕೇಂದ್ರ ಸಶಸ್ತ್ರ ಪಡೆಗಳಿಗೆ ಲಕ್ಷಾಂತರ ಯುವಕರನ್ನು ಆಕರ್ಷಿಸಲಾಗುತ್ತಿದೆ. ಪರೀಕ್ಷೆಗಳನ್ನು ಸ್ಥಳೀಯ ಭಾಷೆಗಳಲ್ಲಿ ನಡೆಸಲು ಎಸ್ಎಸ್‌ಸಿ ಮತ್ತು ಕೇಂದ್ರ ಗೃಹ ಸಚಿವಾಲಯವು ತಿಳಿವಳಿಕಾ ಒಪ್ಪಂದಕ್ಕೆ ಸಹಿ ಹಾಕಿವೆ.

ಈ ಸುದ್ದಿಯನ್ನೂ ಓದಿ: ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ; ಕನ್ನಡ ಸೇರಿ 15 ಭಾಷೆಗಳಲ್ಲಿ ನೇಮಕಾತಿ ಪರೀಕ್ಷೆ, ಯಾವ ಹುದ್ದೆಗೆ ಅನ್ವಯ?

Continue Reading

ಕನ್ನಡ ರಾಜ್ಯೋತ್ಸವ

Kannada Koota Luxembourg: ಲಕ್ಸಂಬರ್ಗ್ ಕನ್ನಡ ಕೂಟದಿಂದ ಅದ್ಧೂರಿ ಕನ್ನಡೋತ್ಸವ-2023

Kannada Koota Luxembourg: ಯುರೋಪ್ ಖಂಡದ ಚಿಕ್ಕ ದೇಶದಲ್ಲಿ ಲಕ್ಸಂಬರ್ಗ್ ಕನ್ನಡ ಕೂಟ, ಕರುನಾಡು ಸಂಸ್ಕೃತಿಯ ಅನಾವರಣ ಮಾಡಿದೆ.

VISTARANEWS.COM


on

Kannada Koota Luxembourg
Koo

ಲಕ್ಸಂಬರ್ಗ್: ಕನ್ನಡದ ಕಂಪನ್ನು ಪಸರಿಸುವ ಮತ್ತು ಕನ್ನಡದ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿರುವ ಕನ್ನಡ ಕೂಟ ಲಕ್ಸಂಬರ್ಗ್ (ಕೆಕೆಎಲ್) (Kannada Koota Luxembourg) ಅದ್ಧೂರಿಯಾಗಿ `ಕನ್ನಡೋತ್ಸವ -2023’ ನಡೆಸುವ ಮೂಲಕ ಯುರೋಪ್ ಖಂಡದ ಚಿಕ್ಕ ದೇಶದಲ್ಲಿ ಕರುನಾಡು ಸಂಸ್ಕೃತಿಯ ಅನಾವರಣ ಮಾಡಿದೆ.

ಲಕ್ಸಂಬರ್ಗ್‌ನ ಬೆಗ್ಗೆನ್ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಲ್ಲಿ ನೆಲೆಸಿರುವ ಕನ್ನಡಿಗರೆಲ್ಲರೂ ಪಾಲ್ಗೊಂಡು ಕನ್ನಡದ ಕೀರ್ತಿ ಪತಾಕೆಯನ್ನು ಹಾರಿಸಿದರು. ಈ ಮೂಲಕ ಕನ್ನಡಿಗರೆಲ್ಲರೂ ಒಂದೆಡೆ ಸೇರಿ ಕನ್ನಡ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು.

ಬೆಂಗಳೂರು ನಗರ ಜಿಲ್ಲೆಯಷ್ಟು ದೊಡ್ಡದಿರುವ ಲಕ್ಸಂಬರ್ಗ್‌ನಲ್ಲಿ ಸುಮಾರು 6 ಲಕ್ಷ ಜನಸಂಖ್ಯೆ ಇದೆ. ಚಿಕ್ಕದಾದರೂ ಇಲ್ಲಿ ವೈವಿಧ್ಯಮಯ ಸಂಸ್ಕೃತಿ ಶ್ರೀಮಂತವಾಗಿದೆ. ಈ ಬಹುಸಾಂಸ್ಕೃತಿಕ ಪ್ರದೇಶದಲ್ಲಿ ಭಾರತೀಯರು ಅದರಲ್ಲೂ ವಿಶೇಷವಾಗಿ ಕನ್ನಡಿಗರು ಗಮನಾರ್ಹವಾದ ರೀತಿಯಲ್ಲಿ ತಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಪಸರಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಇಲ್ಲಿ 100ಕ್ಕೂ ಹೆಚ್ಚು ಕನ್ನಡಿಗ ಕುಟುಂಬಗಳು ವಾಸ ಮಾಡುತ್ತಿದ್ದು, 2022ರ ಅಂತ್ಯದಲ್ಲಿ ಆರಂಭವಾದ ಕನ್ನಡ ಕೂಟ ಲಕ್ಸಂಬರ್ಗ್ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು, ಕಾರ್ಯಾಗಾರಗಳು ಹಾಗೂ ಹಬ್ಬಗಳ ಮೂಲಕ ಕನ್ನಡಿಗರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದೆ.

ಇದನ್ನೂ ಓದಿ | ದಶಮುಖ ಅಂಕಣ: ನಿದ್ದೆಗೊಮ್ಮೆ ನಿತ್ಯ ಮರಣ, ಎದ್ದ ಸಲ ನವೀನ ಜನನ!

ಕೆಕೆಎಲ್ ಕನ್ನಡೋತ್ಸವ 2023 ಎರಡನೇ ಕರ್ನಾಟಕ ರಾಜ್ಯೋತ್ಸವವನ್ನು ಆಯೋಜಿಸಿದ್ದು, ಇದರಲ್ಲಿ 120ಕ್ಕೂ ಹೆಚ್ಚು ಕನ್ನಡದ ಮನಸುಗಳು ಪಾಲ್ಗೊಂಡಿದ್ದವು. ಇದರ ವಿಶೇಷವೆಂದರೆ ದೊಡ್ಡ ಮಟ್ಟದಲ್ಲಿ ಭಾರತೀಯರು ಮತ್ತು ಕೆಲವು ಯೂರೋಪಿಯನ್ನರೂ ಪಾಲ್ಗೊಂಡಿದ್ದರು. ಕನ್ನಡದ ಶ್ರೀಮಂತ ಪರಂಪರೆಯನ್ನು ಬಿಂಬಿಸುವ ಹಾಗೂ ಸಾಂಸ್ಕೃತಿಕ ಸಂಪ್ರದಾಯವನ್ನು ಬಿಂಬಿಸುವ ರೀತಿಯಲ್ಲಿ ಹಚ್ಚೇವು ಕನ್ನಡದ ದೀಪ ಹಾಡಿನೊಂದಿಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ಮತ್ತು ನಾಡಗೀತೆಯನ್ನು ಹಾಡಲಾಯಿತು.

ಕನ್ನಡಿಗ ಸಮುದಾಯಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿರುವ ವನಜಾಕ್ಷಿ ಜಗದೀಶ್ ಮತ್ತು ಡಾ.ಪುನೀತ್ ಜುಬ್ಬ ಹೊನ್ನಯ್ಯ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಶರಣ್ಯ ಮತ್ತು ಪ್ರಮೋದ್ ಈಶ್ವರ್ ಅವರು ಈ ಕಾರ್ಯಕ್ರಮದ ನಿರೂಪಣೆ ಮಾಡಿದರು.

ಶಾಸ್ತ್ರೀಯ ಸಂಗೀತ, ಸಿನಿಮಾ ಹಾಡುಗಳ ಗಾಯನ, ನೃತ್ಯ ಮತ್ತು ಆರ್ಕೆಸ್ಟ್ರಾ ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಆಯೋಜಿಸಲಾಗಿತ್ತು. ವಿಶೇಷವೆಂದರೆ ಈ ಕಾರ್ಯಕ್ರಮಗಳ ಅರ್ಧದಷ್ಟು ಕಾರ್ಯಕ್ರಮಗಳನ್ನು ಮಕ್ಕಳೇ ನಡೆಸಿಕೊಟ್ಟರು. ಈ ಮೂಲಕ ಮಕ್ಕಳು ಕನ್ನಡದ ಸಂಸ್ಕೃತಿಯನ್ನು ಬಿಂಬಿಸಿದರು. ಇದೇ ವೇಳೆ, ಆದರ್ಶ ದಂಪತಿ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು. ಈ ಪೈಕಿ 5 ಅತ್ಯುತ್ತಮ ಜೋಡಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯೆಂದರೆ ಕನ್ನಡಿಗರಾದ ಅಚಲ್ ಮೂರ್ತಿ ಮತ್ತು ಲಕ್ಸಂಬರ್ಗ್ ಮೂಲದ ಬ್ಯಾಂಡ್ `ಅಹ್ಮದ್ ರಾದ್ವಾನ್ & ಲೆಸ್ ಹಿರೋಂಡೆಲ್ಸ್’ ನ ಕಲಾವಿದರು ತಮ್ಮ ಕಲೆಯನ್ನು ಪ್ರದರ್ಶನ ಮಾಡಿ ಎಲ್ಲರ ಗಮನ ಸೆಳೆದರು. ಅಲ್ಲದೇ, ಇಲ್ಲಿ ಆಯೋಜಿಸಲಾಗಿದ್ದ ವಿವಿಧ ಖಾದ್ಯಗಳ ಪ್ರದರ್ಶನ ತಿಂಡಿ ಪ್ರಿಯರಿಗೆ ಆಹ್ಲಾದವನ್ನು ಉಂಟು ಮಾಡಿತು.

ಕೆಕೆಎಲ್ ಅಧ್ಯಕ್ಷರಾದ ಭವಾನಿ ಶಂಕರ್ ಅವರು ಈ ಕಾರ್ಯಕ್ರಮದ ಯಶಸ್ಸಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
“ಲಕ್ಸಂಬರ್ಗ್ ಮತ್ತು ಕರ್ನಾಟಕದ ಕನ್ನಡಿಗರ ನಡುವಿನ ಬಾಂಧವ್ಯ ಬಲವರ್ಧನೆಗೆ ಈ ಕಾರ್ಯಕ್ರಮ ನಾಂದಿ ಹಾಡಿದೆ. ಈ ಕನ್ನಡೋತ್ಸವ 2023 ಕೇವಲ ನಮ್ಮ ನಡುವಿನ ಪ್ರತಿಭೆಗಳನ್ನು ಹೊರ ಜಗತ್ತಿಗೆ ಅನಾವರಣ ಮಾಡಲಷ್ಟೇ ಕಾರಣವಾಗಿಲ್ಲ. ಇದರೊಂದಿಗೆ ಒಗ್ಗಟ್ಟು ಮತ್ತು ಪ್ರೀತಿ ವಿಶ್ವಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಹಕಾರಿಯಾಗಿದೆ. ನಮ್ಮ ಶ್ರೀಮಂತ ಸಂಸ್ಕೃತಿಯನ್ನು ಹೊರ ಜಗತ್ತಿಗೆ ತೋರಿಸುವಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿದೆ’’ ಎಂದರು.

ಸಂಧ್ಯಾ ಸುರೇಶ್, ಪುನೀತಾ ರೆಡ್ಡಿ, ಕಾರ್ತೀಕ್ ರಾಮಮೂರ್ತಿ, ನರಸಿಂಹ ಹೆಬ್ಬಾರ್, ಮಂಜುನಾಥ್ ಪ್ರಸಾದ್, ನಿರಂಜನ್ ವಿಶ್ವಮೂರ್ತಿ, ಹಿತೇಶ್ ಚಿಡ್ಗಲ್, ಪ್ರಶಾಂತ್ ಅಳವಂಡಿ, ರಮೇಶ್ ಪಾಂಡುರಂಗ ಸೇರಿದಂತೆ ಇನ್ನಿತರ ಆಡಳಿತ ಮಂಡಳಿ ಸದಸ್ಯರು ನೇತೃತ್ವದಲ್ಲಿ ಹಾಗೂ ಸ್ವಯಂಸೇವಕರ ಶ್ರಮದ ಫಲವಾಗಿ ಈ ಕಾರ್ಯಕ್ರಮದಲ್ಲಿ ಯಶಸ್ವಿಯಾಗಿ ನಡೆಯಲು ಕಾರಣವಾಗಿದೆ.

ಇದನ್ನೂ ಓದಿ | Cultural Events : ಡಿ.13-14ರಂದು ನೃತ್ಯ ವೈಭವದ ತ್ಯಾಗರಾಜ ಹೃತ್ಸದನ

ಈ ಕನ್ನಡೋತ್ಸವ 2023 ಕನ್ನಡದ ಸಮುದಾಯದ ಒಗ್ಗಟ್ಟನ್ನು ಪ್ರದರ್ಶಿಸುವುದರೊಂದಿಗೆ ಕನ್ನಡೇತರರು ಮತ್ತು ಸ್ಥಳೀಯ ನಾಗರಿಕರೊಂದಿಗೆ ಸಂಬಂಧ ಬೆಳೆಸುವುದು ಮತ್ತು ಸಂಸ್ಕೃತಿ ವಿನಿಮಯಕ್ಕೆ ಒಂದು ಉತ್ತಮವಾದ ವೇದಿಕೆಯನ್ನು ಒದಗಿಸಿಕೊಟ್ಟಿತು.

Continue Reading

ಕನ್ನಡ ರಾಜ್ಯೋತ್ಸವ

RK Balachandra: ʼಕರ್ನಾಟಕ ಸಾಧಕ ರತ್ನʼ ಪ್ರಶಸ್ತಿಗೆ ಕುಶಾಲನಗರದ ಆರ್.ಕೆ. ಬಾಲಚಂದ್ರ ಆಯ್ಕೆ

R. K. Balachandra: ಬಳ್ಳಾರಿಯ ಸ್ಮಿಯಾಕ ಚಾರಿಟಬಲ್ ಟ್ರಸ್ಟ್‌ನಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ʼಕರ್ನಾಟಕ ಸಾಧಕ ರತ್ನʼ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ.

VISTARANEWS.COM


on

RK Balachandra
Koo

ಮಡಿಕೇರಿ: 68ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬಳ್ಳಾರಿಯ ಸ್ಮಿಯಾಕ ಚಾರಿಟಬಲ್ ಟ್ರಸ್ಟ್‌ನಿಂದ ನೀಡುವ ʼಕರ್ನಾಟಕ ಸಾಧಕ ರತ್ನʼ ರಾಜ್ಯೋತ್ಸವ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಕುಶಾಲನಗರದ ಆರ್.ಕೆ. ಬಾಲಚಂದ್ರ (RK Balachandra) ಅವರು ಆಯ್ಕೆಯಾಗಿದ್ದಾರೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬಹುಮುಖ್ಯವಾಗಿ ಅನ್ಯ ರಾಜ್ಯದ ಕನ್ನಡೇತರರಿಗೆ ಕನ್ನಡ ಕಲಿಸುವಿಕೆ ಹಾಗೂ ರಾಜ್ಯಾದಂತ ಉಚಿತವಾಗಿ ಬ್ಯಾಂಕಿಂಗ್ ಹಾಗೂ ಇತರೆ ಸ್ಪರ್ಧಾತ್ಮಗಳ ಪರೀಕ್ಷೆ ತರಬೇತಿಯ ಸೇವೆಯನ್ನು ಗುರುತಿಸಿ ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ ಇವರಿಗೆ ʼಕರ್ನಾಟಕ ಸಾಧಕ ರತ್ನʼ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ರಾಮಾಯಣ, ಮಹಾಭಾರತ ಕಲಿಕೆ ಶಿಫಾರಸು ಸ್ವಾಗತಾರ್ಹ

ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್‌ 26ರಂದು ಹಮ್ಮಿಕೊಂಡಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆರ್.ಕೆ. ಬಾಲಚಂದ್ರ ಸೇರಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕನ್ನಡ ರಾಜ್ಯೋತ್ಸವ

Karnataka Sambhrama 50: ಹೋರಾಟ, ತ್ಯಾಗ-ಬಲಿದಾನದಿಂದ ಕನ್ನಡ ನಾಡು ಉದಯ: ಸಿದ್ದರಾಮಯ್ಯ

Karnataka Sambhrama 50: ಗದಗದಲ್ಲಿ ಆಯೋಜಿಸಿದ್ದ ʼಕರ್ನಾಟಕ ಸಂಭ್ರಮ-50ʼ ರಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.

VISTARANEWS.COM


on

CM Siddaramaiah
Koo

ಗದಗ: ಹೋರಾಟ, ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು (Karnataka Sambhrama 50) ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಆಯೋಜಿಸಿದ್ದ ʼಕರ್ನಾಟಕ ಸಂಭ್ರಮ-50ʼ ಅದ್ಧೂರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ನಾಮಕರಣ ಆಗಲು ಶ್ರಮಿಸಿ ಹೋರಾಡಿದ ಕೆ.ಎಚ್. ಪಾಟೀಲ್ ಮತ್ತು ಎಲ್ಲಾ ಹೋರಾಟದ ಸಂಗತಿಗಳನ್ನು ಇಂದು ನಾನು ಸ್ಮರಿಸುತ್ತೇನೆ. ಅವತ್ತು ಕೆ.ಎಚ್.ಪಾಟೀಲ್, ಇಂದು ಎಚ್.ಕೆ.ಪಾಟೀಲ್, ಅವತ್ತು ದೇವರಾಜ ಅರಸು ಕುಳಿತಿದ್ದ ಮುಖ್ಯಮಂತ್ರಿ ಕುರ್ಚಿಯಲ್ಲಿ ಇವತ್ತು ನಾನು ಕುಳಿತಿದ್ದೇನೆ. ಇದೇನು ಕಾಕತಾಳೀಯ ಅಲ್ಲ ಎಂದರು.

ಇಂಗ್ಲಿಷ್‌ನಲ್ಲಿ ಶೇಕ್ಸ್ ಪಿಯರ್ ಸಾಹಿತ್ಯ ರಚಿಸುವುದಕ್ಕೂ 500 ವರ್ಷಗಳ ಮೊದಲೇ ಕನ್ನಡದಲ್ಲಿ ವಿಶ್ವ ಮಟ್ಟದ ಅತ್ಯುನ್ನತ ಸಾಹಿತ್ಯ ರಚನೆಯಾಗಿತ್ತು. ಪಂಪನಿಂದ ಹಿಡಿದು ವಚನಕಾರರನ್ನೂ ಸೇರಿಸಿ ಹಲವರು ಅತ್ಯುನ್ನತ ಸಾಹಿತ್ಯ ರಚಿಸಿದ್ದರು ಎಂದು ಕನ್ನಡ ಭಾಷಾ ಹಿರಿಮೆಯನ್ನು ಉದಾಹರಿಸಿದರು.

ಇದನ್ನೂ ಓದಿ | Karnataka Drought : 324 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಕನ್ನಡ ಕಲಿಯದೆಯೂ ಕರ್ನಾಟಕದಲ್ಲಿ ವ್ಯವಹರಿಸಬಹುದು ಎನ್ನುವ ವಾತಾವರಣ ಬದಲಾಗಬೇಕು. ಕನ್ನಡದ ಸಂಸ್ಕೃತಿ ಜತೆಗೆ ನಮ್ಮೆಲ್ಲರಲ್ಲಿ ಕನ್ನಡತನ ಬೇರೂರಬೇಕು. ಆಗ ಮಾತ್ರ ಕನ್ನಡದ ವಾತಾವರಣ ಇಡಿ ನಾಡಿನಲ್ಲಿ ಪಸರಿಸುತ್ತದೆ ಎಂದರು.

CM Siddaramaiah talks in Karnataka sambhrama at Gadag

ಕನ್ನಡ ಸಂಸ್ಕೃತಿ ಎಂದಾಗ ಬಸವಾದಿ ಶರಣರ ಕಾಯಕ ಸಂಸ್ಕೃತಿಯೂ ಸೇರಿದೆ. ಬಸವಣ್ಣನವರ ಆಶಯದಂತೆ ವರ್ಗರಹಿತ, ಜಾತಿರಹಿತ ಸಮಾಜದ ನಿರ್ಮಾಣ ಮತ್ತು ಅಭಿವೃದ್ಧಿ ನಮ್ಮ ಗುರಿಯಾಗಿದೆ. ಆ ಕಾರಣಕ್ಕೇ ಸರ್ವ ಜಾತಿ-ಧರ್ಮದವರ ಬದುಕನ್ನು ಎತ್ತರಿಸುವ ಗ್ಯಾರಂಟಿ ಕಾರ್ಯಕ್ರಮಗಳನ್ನು ನಾವು ನೀಡಿದ್ದೇವೆ ಎಂದರು.

ಈ ಹಿಂದೆ ಕೆ.ಎಚ್.ಪಾಟೀಲರು ಇಡೀ ಜಿಲ್ಲೆಗೆ ಕುಡಿಯುವ ನೀರು ಕೊಟ್ಟರು. ಅವರ ಪುತ್ರ ಎಚ್.ಕೆ.ಪಾಟೀಲರೂ ಇಡೀ ರಾಜ್ಯಕ್ಕೆ ಉತ್ತಮ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಹೀಗಾಗಿ ನಾಮಪತ್ರ ಸಲ್ಲಿಸಿದರೆ ಸಾಕು, ನೀವೆಲ್ಲಾ ಎಚ್.ಕೆ.ಪಾಟೀಲರನ್ನು ಗೆಲ್ಲಿಸಬೇಕು. ಇಡೀ ರಾಜ್ಯಕ್ಕೆ ಅಷ್ಟೊಂದು ಕೆಲಸ ಮಾಡಿರುವ ಎಚ್.ಕೆ.ಪಾಟೀಲರು ಮತ ಕೇಳಬಾರದು. ನೀವೆಲ್ಲಾ ಅವರನ್ನೂ ಹಾಗೇ ಗೆಲ್ಲಿಸಬೇಕು ಎಂದು ಕರೆ ನೀಡಿದರು.

ಅವಳಿ ನಗರಕ್ಕೆ 61 ಕೋಟಿ ಕೊಟ್ಟಿದ್ದೇವೆ

ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸಲು ಈಗಾಗಲೇ 61 ಕೋಟಿ ರೂ. ನೀಡಿದ್ದೇವೆ. ಅಗತ್ಯಬಿದ್ದರೆ ಮತ್ತಷ್ಟು ಹಣ ಕೊಡಲು ನಮ್ಮ ಸರ್ಕಾರ ಸಿದ್ದವಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರಚಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾಡಳಿತ ಜಂಟಿಯಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರವಾಸೋದ್ಯಮ ಸಚಿವರೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಎಚ್.ಕೆ.ಪಾಟೀಲ್ ಅವರು ವಹಿಸಿದ್ದರು.

ಇದನ್ನೂ ಓದಿ | Cauvery Dispute : ರಾಜ್ಯಕ್ಕೆ ಮತ್ತೆ ಕಾವೇರಿ ಜಲಾಘಾತ; ಇನ್ನು 20 ದಿನ ನಿರಂತರ ನೀರು ಹರಿಸಲು ಪ್ರಾಧಿಕಾರ ಸೂಚನೆ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಚಿವರಾದ ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್, ಮಂಕಾಳ ವೈದ್ಯ, ಶರಣ ಪ್ರಕಾಶ್ ಪಾಟೀಲ್, ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಸೇರಿ ಹಲವಾರು ಶಾಸಕರು, ಇಲಾಖಾ ಕಾರ್ಯದರ್ಶಿಗಳು-ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading
Advertisement
Rishab shetty family visit Hariharpur Narasimhaswamy
ಸ್ಯಾಂಡಲ್ ವುಡ್15 mins ago

Rishab shetty: ಹರಿಹರಪುರ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಕುಟುಂಬದ ಭೇಟಿ: ನರಸಿಂಹಸ್ವಾಮಿಯ ದರ್ಶನ ಪಡೆದ ಡಿವೈನ್‌ ಸ್ಟಾರ್‌!

nisha cp yogeshwara
ವೈರಲ್ ನ್ಯೂಸ್20 mins ago

CP Yogeshwara: “ಹೊಡೀತಾರೆ, ಭಿಕ್ಷೆ ಬೇಡು ಅನ್ತಾರೆ….ʼʼ ಯೋಗೇಶ್ವರ್‌ ವಿರುದ್ಧ ಕಣ್ಣೀರು ಹಾಕುತ್ತಾ ರೆಬೆಲ್‌ ಆದ ಮಗಳು

Nandini Milk No incentives for milk producers Ashok slams govt for sponsoring foreign cricket team
ರಾಜಕೀಯ25 mins ago

Nandini Milk: ಹಾಲು ಉತ್ಪಾದಿಸಿದ ರೈತರಿಗಿಲ್ಲ ಹಣ; ವಿದೇಶಿ ಕ್ರಿಕೆಟ್‌ ಟೀಂಗೆ ಪ್ರಾಯೋಜಕತ್ವ: ಸರ್ಕಾರದ ವಿರುದ್ಧ ಅಶೋಕ್‌ ಗರಂ

Viral video
ವೈರಲ್ ನ್ಯೂಸ್36 mins ago

Viral Video:‌ ಅಬ್ಬಾ..ಇದೆಂಥಾ ಹುಚ್ಚಾಟ; ಸ್ವಲ್ಪ ಮಿಸ್‌ ಆದ್ರೂ ಸಾವು ಗ್ಯಾರಂಟಿ-ಶಾಕಿಂಗ್‌ ವಿಡಿಯೋ ವೈರಲ್

AR Rahman says his mother thought his Oscar statuettes were made of gold
ಬಾಲಿವುಡ್40 mins ago

AR Rahman: ಪ್ರಶಸ್ತಿಗಳೆಲ್ಲ ಚಿನ್ನವೆಂದು ಭಾವಿಸಿ ಎಆರ್ ರೆಹಮಾನ್ ತಾಯಿ ಮಾಡಿದ್ದೇನು?

Phone tapping case Let Ashok file a complaint to Home Minister DK Shivakumar hits back at phone tapping allegations
ರಾಜಕೀಯ49 mins ago

Phone tapping: ಗೃಹ ಸಚಿವರಿಗೆ ಅಶೋಕ್‌ ರೈಟಿಂಗ್‌ನಲ್ಲಿ ಕಂಪ್ಲೇಂಟ್‌ ಕೊಡಲಿ; ಫೋನ್‌ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

Cannes 2024 Chidananda S Naik bows in Cannes with Kannada folk tale
ಸಿನಿಮಾ59 mins ago

Cannes 2024: ಕಾನ್‌ ಫಿಲ್ಮ್ಸ್‌ ಫೆಸ್ಟಿವಲ್‌ನಲ್ಲಿ ಕನ್ನಡದ ಕಿರು ಚಿತ್ರ ಪ್ರದರ್ಶನ

Turbulence
ವಿದೇಶ1 hour ago

Singapore Airlines: ಟರ್ಬುಲೆನ್ಸ್‌ಗೆ ತುತ್ತಾದ ವಿಮಾನ: ಇಲ್ಲಿದೆ ನೋಡಿ ಭೀಕರತೆಯನ್ನು ಸಾರುವ ಫೋಟೊಗಳು

MDH, Everest Spices
ದೇಶ2 hours ago

MDH, Everest Spices: ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳಲ್ಲಿ ಮಾರಕ ರಾಸಾಯನಿಕ ಇಲ್ಲ; FSSAI ವರದಿಯಲ್ಲಿ ಬಯಲು

drink and drive RTO check
ಬೆಂಗಳೂರು2 hours ago

Drink and Drive: ಕುಡಿದು ವಾಹನ ಓಡಿಸಿದರೆ ಎರಡೆರಡು ಕಡೆ ಸಿಕ್ಕಿಹಾಕಿಕೊಳ್ತೀರಿ ಹುಷಾರ್!‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ7 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ19 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 day ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 day ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌