Kannada Rajyotsava: ಭೇಟಿ ನೀಡಲೇಬೇಕಾದ ಕರ್ನಾಟಕದ ಐತಿಹಾಸಿಕ ತಾಣಗಳಿವು - Vistara News

ಕನ್ನಡ ರಾಜ್ಯೋತ್ಸವ

Kannada Rajyotsava: ಭೇಟಿ ನೀಡಲೇಬೇಕಾದ ಕರ್ನಾಟಕದ ಐತಿಹಾಸಿಕ ತಾಣಗಳಿವು

Kannada Rajyotsava: ಪ್ರಕೃತಿದತ್ತವಾದ ಶ್ರೀಮಂತ ರಾಜ್ಯ ಕರ್ನಾಟಕ ಅನೇಕ ಐತಿಹಾಸಿಕ ಪ್ರವಾಸಿ ತಾಣಗಳನ್ನೂ ಹೊಂದಿದೆ. ನೀವು ಭೇಟಿ ನೀಡಲೇಬೇಕಾದ ಅಂತಹ ಇತಿಹಾಸ ಪ್ರಸಿದ್ಧ ತಾಣಗಳ ಪರಿಚಯ ಇಲ್ಲಿದೆ.

VISTARANEWS.COM


on

hampi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ಭೌಗೊಳಿಕವಾಗಿ, ಸಾಂಸ್ಕೃತಿಕವಾಗಿ ವೈವಿಧ್ಯ ಹೊಂದಿರುವ ರಾಜ್ಯ. ಪಶ್ಚಿಮ ಘಟ್ಟಗಳು, ಡೆಕ್ಕನ್ ಪ್ರಸ್ಥಭೂಮಿ, ಕರಾವಳಿ ಹೀಗೆ ವಿವಿಧ ನಿಸರ್ಗದತ್ತ ಪ್ರವಾಸಿ ತಾಣಗಳನ್ನು ಹೊಂದಿದೆ. ನದಿ, ಜಲಪಾತ, ಕಾಫಿ ತೋಟ, ಸರೋವರ, ಬೆಟ್ಟ, ಹಸಿರು ಮುಂತಾದ ಪ್ರಕೃತಿಯ ಕೊಡುಗೆಗಳ ಜತೆಗೆ ಕಲೆ, ವಾಸ್ತು ಶಿಲ್ಪ, ಐತಿಹಾಸಿಕ ಕೋಟೆ, ಸ್ಮಾರಕಗಳಿಂದಲೂ ಪ್ರವಾಸಿಗರ, ಇತಿಹಾಸ ರಚನೆಕಾರರ ಗಮನ ಸೆಳೆಯುತ್ತದೆ. ಕನ್ನಡ ರಾಜ್ಯೋತ್ಸವ (Kannada Rajyotsava) ಹಿನ್ನಲೆಯಲ್ಲಿ ನಮ್ಮ ರಾಜ್ಯದಲ್ಲಿನ ನೋಡಲೇಬೇಕಾದ ಐತಿಹಾಸಿಕ, ಪ್ರವಾಸಿ ತಾಣಗಳ ಪಟ್ಟಿ ಇಲ್ಲಿದೆ (Historical places).

ಹಂಪಿ

ಯುನೆಸ್ಕೋ ಹೆಸರಿಸಿರುವ ಐತಿಹಾಸಿಕ ತಾಣಗಳಲ್ಲಿ ಹಂಪಿಯೂ ಒಂದು. ಸುಮಾರು 500 ಪ್ರಾಚೀನ ದೇವಾಲಯಗಳನ್ನು ಹೊಂದಿರುವ ಈ ನಗರದಲ್ಲಿ ಪುರಾತತ್ತ್ವ ಶಾಸ್ತ್ರದ ಹಲವಾರು ಸ್ಮಾರಕಗಳನ್ನು ನೋಡಬಹುದು. ವಿರೂಪಾಕ್ಷ ದೇವಾಲಯ, ವಿಠಲ ದೇವಾಲಯ ಇಲ್ಲಿವೆ. ಇಲ್ಲಿನ ಹನುಮಾನ್‌ ದೇವಸ್ಥಾನ, ಹೇಮಕೂಟ ಬೆಟ್ಟದ ದೇವಸ್ಥಾನ ಸಂಕೀರ್ಣವನ್ನು ನೀವು ನೋಡಲೇಬೇಕು. ಇಲ್ಲಿ ನಿಮಗೆ ಟ್ರೆಕ್ಕಿಂಗ್‌ ಮಾಡುವುದುಕ್ಕೆ, ಕ್ಯಾಂಪಿಂಗ್‌ ಮಾಡುವುದಕ್ಕೂ ಅವಕಾಶವಿದೆ. ಇಲ್ಲಿನ ಸಂಪೂರ್ಣ ಐತಿಹಾಸಿಕ ತಾಣಗಳನ್ನು ನೋಡಲು ಒಂದು ದಿನ ಸಾಲದಾದ್ದರಿಂದ ಕನಿಷ್ಠ ಎರಡು ದಿನಗಳ ಮಟ್ಟಿಗೆ ಇಲ್ಲಿನ ಟ್ರಿಪ್‌ ಪ್ಲ್ಯಾನ್‌ ಮಾಡಿಕೊಳ್ಳಿ. ಬೇಸಗೆಯಲ್ಲಿ ಇಲ್ಲಿ ಹೆಚ್ಚಾದ ಬಿಸಿಲಿರುತ್ತದೆಯಾದ್ದರಿಂದ ಚಳಿಗಾಲದ ಸಮಯವಾದ ಅಕ್ಟೋಬರ್‌ನಿಂದ ಫೆಬ್ರವರಿಯವರೆಗೆ ಇಲ್ಲಿಗೆ ಭೇಟಿ ನೀಡಲು ಸೂಕ್ತ ಸಮಯ. ಹಂಪಿ ಹೊಸಪೇಟೆಯಿಂದ 13 ಕಿ.ಮೀ. ದೂರದಲ್ಲಿರುವುದರಿಂದ ಹೊಸಪೇಟೆ ರೈಲ್ವೆ ನಿಲ್ದಾಣಕ್ಕೆ ತಲುಪಿ, ಅಲ್ಲಿಂದ ಪ್ರಯಾಣ ಬೆಳೆಸಬಹುದು.

ಮೈಸೂರು

ಕರ್ನಾಟಕದ ಸಾಂಸ್ಕೃತಿಕ ನಗರಿ ಮೈಸೂರು. ಏಳು ಶತಮಾನಗಳ ಕಾಲ ಮೈಸೂರಿನ ರಾಜವಂಶ ಆಡಳಿತ ನಡೆಸಿದ ನಾಡಿದು. ಇದು ಕರ್ನಾಟಕದ ಅತಿ ಪ್ರಸಿದ್ಧ ಪ್ರವಾಸಿ ನಗರವಾಗಿದ್ದು, ಇಲ್ಲಿಗೆ ಪ್ರತಿ ವರ್ಷ 25 ಲಕ್ಷಕ್ಕೂ ಅಧಿಕ ಪ್ರವಾಸಿಗರು ಭೇಟಿ ನೀಡುತ್ತಾರೆ. ಇಲ್ಲಿನ ಲಲಿತ ಮಹಲ್‌, ಜಗಮೋಹನ್‌ ಅರಮನೆ, ಬೃಂದಾವನ ಉದ್ಯಾನವನ ಅತಿ ಹೆಚ್ಚು ಪ್ರವಾಸಿಗರನ್ನು ಸೆಳೆಯುತ್ತದೆ. ಹಾಗೆಯೇ ಇಲ್ಲಿನ ಪ್ರಸಿದ್ಧ ಸಿಹಿಯಾದ ಮೈಸೂರು ಪಾಕ್‌ ಅನ್ನು ಸವಿಯಲು ಪ್ರವಾಸಿಗರು ಮರೆಯುವುದಿಲ್ಲ. ಇಲ್ಲಿನ ಅರಮನೆಯಲ್ಲಿ ನೀವು ರಾಜಮನೆತನದ ಅದ್ಧೂರಿತನವನ್ನು ಕಾಣಬಹುದು. ಪ್ರತಿವರ್ಷ ದಸರಾ ಸಮಯದಲ್ಲಿ ಇಲ್ಲಿ ಅದ್ಧೂರಿಯಾಗಿ ಉತ್ಸವ ನಡೆಸಲಾಗುತ್ತದೆ. ಆನೆ ಮೇಲಿನ ಬಂಗಾರದ ಅಂಬಾರಿಯಲ್ಲಿ ಮೈಸೂರಿನ ಚಾಮುಂಡೇಶ್ವರಿ ದೇವಿಯನ್ನು ಮೆರವಣಿಗೆ ಮಾಡಿಸಲಾಗುತ್ತದೆ.

ಬಿಜಾಪುರ

ವಿಶ್ವಪ್ರಸಿದ್ಧ ಗೋಲ್‌ಗುಂಬಜ್‌ ಇರುವುದು ಬಿಜಾಪುರ(ವಿಜಯಪುರ)ದಲ್ಲಿ. ಇದು ಉತ್ತರ ಕರ್ನಾಟಕದಲ್ಲಿ ಭೇಟಿ ನೀಡಲೇಬೇಕಾದ ಐತಿಹಾಸಿಕ ಸ್ಥಳಳಲ್ಲಿ ಒಂದು. ಇದು ಮೊಹಮ್ಮದ್‌ ಆದಿಲ್‌ ಷಾ ಅವರ ಸಮಾಧಿಯಾಗಿದೆ. ಭಾರತದಲ್ಲಿನ ಅತಿ ದೊಡ್ಡ ಗುಮ್ಮಟ ಈ ಗೋಲ್‌ಗುಂಬಜ್‌ನ ಗುಮ್ಮಟವಾಗಿದೆ. ಗೋಲ್‌ಗುಂಬಜ್‌ ಮಾತ್ರವಲ್ಲದೆ ನಗರದಲ್ಲಿ ಶಿವಗಿರಿ, ಜಾಮಾ ಮಸೀದಿ ಮತ್ತು ಬಾರಾ ಕಮಾನ್‌ನಂತಹ ಹಲವು ಐತಿಹಾಸಿಕ ತಾಣಗಳಿವೆ. ಈ ನಗರದಲ್ಲಿ ನೀವು ಉತ್ತರ ಕರ್ನಾಟಕದ ಜೀವನ ಶೈಲಿಯ ಪರಿಚಯವನ್ನೂ ಮಾಡಿಕೊಳ್ಳಬಹುದು. ಇಲ್ಲಿ ಸ್ಥಳೀಯವಾಗಿ ಅನೇಕ ಹೋಟೆಲ್‌ಗಳು, ರೆಸಾರ್ಟ್‌ಗಳಿವೆ.

ಶಿವಮೊಗ್ಗ

ಶಿವಮೊಗ್ಗ ಅನೇಕ ರಾಜವಂಶಗಳಿಗೆ ಪ್ರಮುಖ ಸ್ಥಾನವಾಗಿದ್ದ ಜಿಲ್ಲೆ. ಇಲ್ಲಿ ವಿಶ್ವ ವಿಖ್ಯಾತ ಜೋಗ ಜಲಪಾತವೂ ಇದೆ. ಇಲ್ಲಿನ ಶಿವಪ್ಪ ನಾಯಕ ಅರಮನೆ, ಇಕ್ಕೇರಿ ದೇಗುಲ ಹಾಗೂ ಇನ್ನೂ ಹಲವು ದೇಗುಲಗಳು ಐತಿಹಾಸಿಕ ಪ್ರಾಮುಖ್ಯತೆ ಹೊಂದಿವೆ. ಸಾಗರ ತಾಲೂಕಿನ ಕೆಳದಿಯ ಶಿವಪ್ಪ ನಾಯಕ ಅರಮನೆಯ ಮುಂಭಾಗದಲ್ಲೇ ಅದರ ವಸ್ತು ಸಂಗ್ರಹಾಲಯವಿದ್ದು, ಅಲ್ಲಿ ನೀವು ಶಿವಪ್ಪ ನಾಯಕನ ಆಡಳಿತದ ಕಾಲದ ಹಲವು ವಸ್ತುಗಳನ್ನು ಕಾಣಬಹುದು. ಇತಿಹಾಸ ಮಾತ್ರವಲ್ಲದೆ ನಿಸರ್ಗ ಸೌಂದರ್ಯದಲ್ಲೂ ಶಿವಮೊಗ್ಗ ಸಂಪತ್‌ ಭರಿತ ಜಿಲ್ಲೆಯಾಗಿದೆ. ಇಲ್ಲಿ ನೀವು ಹಲವಾರು ಪ್ರಕೃತಿ ಸೌಂದರ್ಯವನ್ನು ವೀಕ್ಷಿಸಬಹುದು. ಹಾಗೆಯೇ ಧಾರ್ಮಿಕ ವಿಶೇಷತೆ ಹೊಂದಿರುವ ಸಿಗಂದೂರು, ವರದಳ್ಳಿಯಂತಹ ಹಲವು ಸ್ಥಾನಗಳಿಗೆ ಭೇಟಿ ನೀಡಬಹುದು.

ಬೆಂಗಳೂರು

ಭಾರತದ ಸಿಲಿಕಾನ್‌ ವ್ಯಾಲಿ ಆಗುವುದಕ್ಕೂ ಮೊದಲು ಬೆಂಗಳೂರು ಕರ್ನಾಟಕದ ರಾಜಕೀಯ, ವಾಣಿಜ್ಯ ಮತ್ತು ವ್ಯಾಪಾರದ ಕೇಂದ್ರಬಿಂದು. ಇದು ನೋಡುವುದಕ್ಕೆ ಕಾಂಕ್ರಿಟ್‌ ಕಾಡಿನಂತೆ ಕಾಣುತ್ತದೆಯಾದರೂ ಇಲ್ಲಿ ಕೂಡ ಹಲವು ಐತಿಹಾಸಿಕ ಅರಮನೆಗಳು, ಕೋಟೆಗಳು ಇವೆ. ಇಲ್ಲಿ ಐತಿಹಾಸಿಕ ಉಲ್ಲೇಖವನ್ನು ಹೊಂದಿರುವ ಬೆಂಗಳೂರು ಅರಮನೆ, ಟಿಪ್ಪು ಸುಲ್ತಾನರ ಬೇಸಗೆ ಅರಮನೆ, ನ್ಯಾಷನಲ್‌ ಗ್ಯಾಲರಿ ಆಫ್‌ ಮಾಡರ್ನ್‌ ಆರ್ಟ್‌ ಅನ್ನು ನೋಡಬಹುದು. ಹಾಗೆಯೇ ಈಗಿನ ಸರ್ಕಾರದ ಕೇಂದ್ರಬಿಂದುವಾಗಿರುವ ವಿಧಾನಸೌಧವನ್ನೂ ಕಾಣಬಹುದು. ಜತೆಗೆ ಉದ್ಯಾನನಗರಿಯೂ ಆಗಿರುವುದರಿಂದ ವಿವಿಧ ಉದ್ಯಾನಗಳಿಗೂ ಭೇಟಿ ನೀಡಬಹುದು.

ಬಾದಾಮಿ

ಭಾರತದ ಐತಿಹಾಸಿಕ ಸ್ಥಳಗಳಲ್ಲಿ ಒಂದು ಬಾದಾಮಿ. ಬಾದಾಮಿಯಲ್ಲಿ ಸೊಗಸಾದ ದೇವಾಲಯಗಳು ಮತ್ತು ಐತಿಹಾಸಿಕ ಸ್ಮಾರಕಗಳನ್ನು ನೋಡಬಹುದು. ಇಲ್ಲಿನ ಕಲ್ಲಿನ ದೇವಾಲಯ ಎಂಥವರನ್ನೂ ಸೆಳೆಯುತ್ತದೆ. ಇಲ್ಲಿನ ಕೆಂಪು ಮರಳುಗಲ್ಲಿನ ಬಂಡೆಗಳು, ಬಾದಾಮಿ ಕೋಟೆ, ಅಗಸ್ತ್ಯ ಸರೋವರವನ್ನು ನೀವು ನೋಡಿ ಬಂದು ವರ್ಷಗಳಾದರೂ ಮರೆಯುವುದಿಲ್ಲ. ರಾಕ್‌ ಕ್ಲೈಂಬಿಂಗ್‌ ಮಾಡಬೇಕು ಎನ್ನುವವರು ಇಲ್ಲಿ ಆ ಆಸೆಯನ್ನು ನೆರವೇರಿಸಿಕೊಳ್ಳಬಹುದು. ಇಲ್ಲಿನ ಬಾದಾಮಿ ಗುಹೆ ದೇವಾಲಯ, ಭೂತನಾಥ ದೇವಾಲಯಗಳ ಸಂಕೀರ್ಣ, ಮಲ್ಲಿಕಾರ್ಜುನ ದೇವಾಲಯವನ್ನು ನೋಡಲು ಮರೆಯದಿರಿ.

ಹಳೇಬೀಡು

ಹಾಸನ ಜಿಲ್ಲೆಯಲ್ಲಿರುವ ಹಳೇಬೀಡು ಕರ್ನಾಟಕದ ಅತ್ಯಂತ ಪ್ರಸಿದ್ಧ ಐತಿಹಾಸಿಕ ಸ್ಥಳಗಳಲ್ಲಿ ಒಂದು. ಈ ನಗರವು 12ನೇ ಶತಮಾನದಲ್ಲಿ ಹೊಯ್ಸಳ ಸಾಮ್ರಾಜ್ಯದ ರಾಜಧಾನಿಯಾಗಿತ್ತು. ಇಲ್ಲಿ ನೀವು ಅತ್ಯದ್ಭುತ ವಾಸ್ತುಶಿಲ್ಪ ಹೊಂದಿರುವ ದೇವಸ್ಥಾನಗಳನ್ನು ಕಾಣಬಹುದು. ಹೊಯ್ಸಳೇಶ್ವರ ಮತ್ತು ಕೇದಾರೇಶ್ವರ ದೇವಾಲಯ ಹಳೇಬೀಡಿನ ಅತ್ಯಂತ ಪ್ರಸಿದ್ಧ ದೇಗುಲಗಳಾಗಿವೆ. ಇದಲ್ಲದೆ ಇದಕ್ಕೆ ಕೆಲವು ಕಿ.ಮೀ. ದೂರದಲ್ಲಿ ಬೇಲೂರು ಇದ್ದು, ಅಲ್ಲಿ ಕೂಡ ಹೊಯ್ಸಳರ ವಾಸ್ತುಶಿಲ್ಪದ ಉತ್ತಮ ಉದಾಹರಣೆ ಎನಿಸುವಂತಹ ದೇವಸ್ಥಾನವಿದೆ.

ಶ್ರೀರಂಗಪಟ್ಟಣ

ಶ್ರೀರಂಗಪಟ್ಟಣವು ಮಂಡ್ಯ ಜಿಲ್ಲೆಯಲ್ಲಿ ಕಾವೇರಿ ನದಿಯ ತಟದಲ್ಲಿದೆ. ವಿಶ್ವ ಪ್ರಸಿದ್ಧ ಮೈಸೂರಿನಿಂದ 15 ಕಿ.ಮೀ. ದೂರದಲ್ಲಿ ಈ ಊರಿದೆ. ಶ್ರೀರಂಗಪಟ್ಟಣವು ವಿಜಯನಗರ ಮತ್ತು ಹೊಯ್ಸಳ ಸಾಮ್ರಾಜ್ಯದ ಕೆಲವು ಭವ್ಯವಾದ ವಾಸ್ತುಶಿಲ್ಪದ ಮೇರುಕೃತಿಗಳಿಗೆ ನೆಲೆಯಾಗಿದೆ. ಇಲ್ಲಿರುವ ರಂಗನಾಥಸ್ವಾಮಿ ದೇವಸ್ಥಾನ ಪ್ರತಿ ವರ್ಷ ಲಕ್ಷಾಂತರ ಪ್ರವಾಸಿಗರಿಂದ ತುಂಬಿರುತ್ತದೆ. ಇದು ವೈಷ್ಣವರ ಪ್ರಮುಖ ದೇವಾಲಯವಾಗಿದೆ. ಇಲ್ಲಿ ಸಮೀಪದಲ್ಲಿ ಕೆಲವು ಜಲಪಾತಗಳು, ಉದ್ಯಾನಗಳಿದ್ದು, ನೀವು ಅಲ್ಲಿಗೂ ಕೂಡ ಪ್ರಯಾಣ ಬೆಳೆಸಬಹುದು.

ಐಹೊಳೆ

ಐಹೊಳೆ ಕರ್ನಾಟಕದ ಅತ್ಯಂತ ಪ್ರಸಿದ್ಧ ಐತಿಹಾಸಿಕ ಸ್ಥಳಗಳಲ್ಲಿ ಒಂದು. ಈ ಸ್ಥಳವು ಚಾಲುಕ್ಯ ಸಾಮ್ರಾಜ್ಯದ 100ಕ್ಕೂ ಹೆಚ್ಚು ಕೆತ್ತಿದ ದೇವಾಲಯಗಳನ್ನು ಹೊಂದಿದೆ. ಇದರ ಪ್ರಾಮುಖ್ಯತೆಯಿಂದಾಗಿ ಯುನೆಸ್ಕೋ ಇದನ್ನು ಐತಿಹಾಸಿಕ ತಾಣ ಎಂದು ಗುರುತಿಸಿದೆ. ಇಲ್ಲಿನ ದೇವಾಲಯಗಳನ್ನು ನೋಡಲು ನಿಮಗೆ ಒಂದು ದಿನ ಸಾಲದು. ಬಾಗಲಕೋಟೆ ರೈಲು ನಿಲ್ದಾಣದಿಂದ ಈ ಐಹೊಳೆ ಕೇವಲ 34 ಕಿ.ಮೀ. ದೂರದಲ್ಲಿದೆ. ಹಾಗಾಗಿ ನೀವು ಅರಾಮವಾಗಿ ಇಲ್ಲಿಗೆ ರೈಲು ಮೂಲಕ ಅಥವಾ ಬಸ್ಸಿನ ಮೂಲಕ ಪ್ರಯಾಣ ಮಾಡಬಹುದು.

ದಾಂಡೇಲಿ

ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ದಾಂಡೇಲಿಯು ಐತಿಹಾಸಿಕವಾಗಿಯೂ ಸಾಕಷ್ಟು ಮಹತ್ವ ಹೊಂದಿದೆ. ಇಲ್ಲಿ ಜ್ವಾಲಾಮುಖಿಯಿಂದಾಗಿ ರೂಪುಗೊಂಡ ಹಲವು ಗುಹೆಗಳನ್ನು ನೀವು ಕಾಣಬಹುದು. ಇಲ್ಲಿನ ಕವಾಲಾ ಗುಹೆ ತುಂಬಾ ದೊಡ್ಡದಾದ ಸುರಂಗವನ್ನು ಹೊಂದಿದೆ. ಈ ಗುಹೆಯಲ್ಲಿ 375 ಮೆಟ್ಟಿಲುಗಳಿದ್ದು, ಈ ಗುಹೆಯನ್ನು ನೋಡಲೆಂದೇ ಪ್ರತಿವರ್ಷ ಇಲ್ಲಿಗೆ ಸಾವಿರಾರು ಪ್ರವಾಸಿಗರು ಆಗಮಿಸುತ್ತಾರೆ. ಅದಷ್ಟೇ ಅಲ್ಲದೆ ಕಾಳಿ ನದಿಯ ದಡದಲ್ಲಿರುವ ಈ ಊರು ನಿಸರ್ಗ ರಮಣೀಯತೆ ವಿಚಾರದಲ್ಲೂ ಪ್ರಸಿದ್ಧವಾಗಿದೆ. ಇಲ್ಲಿನ ಕಾಳಿ ನದಿಯಲ್ಲಿ ಹಲವಾರು ರೀತಿಯ ವಾಟರ್‌ ಗೇಮ್ಸ್‌ಗಳನ್ನು ನೀವು ಆಡಬಹುದು. ಹಾಗೆಯೇ ದಾಂಡೇಲಿ ವನ್ಯಜೀವಿ ಅಭಯಾರಣ್ಯಕ್ಕೂ ಭೇಟಿ ನೀಡಬಹುದು. ಇಲ್ಲಿ ಅನೇಕ ರೆಸಾರ್ಟ್‌ಗಳಿದ್ದು, ಅವುಗಳೇ ನಿಮಗೆ ಪ್ಯಾಕೇಜ್‌ ನೀಡಿ ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಅವಕಾಶ ಮಾಡಿಕೊಡುತ್ತವೆ.

ರಾಮನಗರ

ಕರ್ನಾಟಕದ ಮತ್ತೊಂದು ಪ್ರಸಿದ್ಧ ಐತಿಹಾಸಿಕ ಸ್ಥಳವೆಂದರೆ ರಾಮನಗರ. ದೊಡ್ಡ ದೊಡ್ಡ ಕಲ್ಲಿನ ಬೆಟ್ಟಗಳ ನಡುವೆ ಇರುವ ಹಚ್ಚ ಹಸಿರಿನ ನಗರವಿದು. ಬೆಂಗಳೂರಿಗರಿಗೆ ವಾರಾಂತ್ಯದ ಪ್ರವಾಸಕ್ಕೆ ಸೂಕ್ತವಾದ ಸ್ಥಳವಾಗಿದೆ. ಇದು ಗ್ರ್ಯಾನೈಟ್‌ ಬೆಟ್ಟಗಳಿಗೆ ಹೆಸರುವಾಸಿಯಾದ ನಗರ. ರೇಷ್ಮೆ ಉತ್ಪಾದನೆಗೆ ಪ್ರಸಿದ್ಧವಾದ ಈ ನಗರವನ್ನು ಭಾರತದ ರೇಷ್ಮೆ ನಗರ ಎಂದೂ ಕರೆಯಲಾಗುತ್ತದೆ. ಇಲ್ಲಿ ಉತ್ಪಾದನೆಯಾಗುವ ರೇಷ್ಮೆಯನ್ನು ಪ್ರಸಿದ್ಧ ಮೈಸೂರು ಸಿಲ್ಕ್‌ ಸೀರೆಗೆ ಬಳಕೆ ಮಾಡಿಕೊಳ್ಳಲಾಗುತ್ತದೆ.

ಹಾಸನ

ಬೆಂಗಳೂರಿನಿಂದ 187 ಕಿ.ಮೀ. ದೂರದಲ್ಲಿರುವ ಹಾಸನ ಕರ್ನಾಟಕದ ವಾಸ್ತುಶಿಲ್ಪದ ರಾಜಧಾನಿ ಎಂದೇ ಕರೆಸಿಕೊಳ್ಳುತ್ತದೆ. ಇದಕ್ಕೆ ಮುಖ್ಯ ಕಾರಣ ಹಾಸನಾಂಬ ದೇವಿ ದೇವಾಲಯ. ಹಾಸನಾಂಬ ಎಂದರೆ ನಗುತ್ತಿರುವ ತಾಯಿ ಎಂದರ್ಥ. ಹಾಸನಾಂಬ ದೇವಾಲಯ ಮಾತ್ರವಲ್ಲದೆ ಇತಿಹಾಸ ಪ್ರಸಿದ್ಧ ಶೆಟ್ಟಿಹಳ್ಳಿ ಚರ್ಚ್‌ ಹಾಗೂ ಜೈನ ದೇವಾಲಯಗಳನ್ನು ಈ ಜಿಲ್ಲೆಯಲ್ಲಿ ಕಾಣಬಹುದು. ಇಲ್ಲಿರುವ ಗೊರೂರು ಅಣೆಕಟ್ಟು ಕೂಡ ಪ್ರವಾಸಿಗರ ಗಮನ ಸೆಳೆಯುತ್ತದೆ. ಶ್ರವಣಬೆಳಗೊಳ ಕೂಡ ಜಿಲ್ಲೆಯ ಪ್ರಮುಖ ಐತಿಹಾಸಿಕ ತಾಣಗಳಲ್ಲಿ ಒಂದಾಗಿದೆ.

ಬೀದರ್‌

ಬೀದರ್‌ ಜಿಲ್ಲೆಯಾದ್ಯಂತ ಹಲವಾರು ಐತಿಹಾಸಿಕ ತಾಣಗಳಿವೆ. ಈ ನಗರ ಮೋಡಿ ಮಾಡುವ ವಾಸ್ತುಶಿಲ್ಪ, ಆಸಕ್ತಿದಾಯಕ ಇತಿಹಾಸ ಮತ್ತು ಪ್ರಾಚೀನ ಕಲಾಕೃತಿಗಳಿಗೆ ಹೆಸರುವಾಸಿಯಾಗಿದೆ. ಬೀದರ್ ಒಂದು ಕಾಲದಲ್ಲಿ ಚಾಲುಕ್ಯರು, ಅಲ್ಲಾವುದ್ದೀನ್ ಖಿಲ್ಜಿ ಮತ್ತು ಮುಹಮ್ಮದ್ ಬಿನ್ ತುಘಲಕ್ ಅವರಂತಹ ಅನೇಕ ಮಹಾನ್ ಆಡಳಿತಗಾರರ ಅಧಿಕಾರದ ಕೇಂದ್ರವಾಗಿತ್ತು. ಅವರೆಲ್ಲರೂ ಶ್ರೀಮಂತ ವಾಸ್ತುಶಿಲ್ಪದ ಪರಂಪರೆಯೊಂದಿಗೆ ಈ ನಗರಕ್ಕೆ ಶ್ರೇಷ್ಠ ಇತಿಹಾಸ ಮತ್ತು ಪರಂಪರೆಯನ್ನು ಬಿಟ್ಟಿದ್ದಾರೆ. ಇಲ್ಲಿ ಹಲವಾರು ದೇವಾಲಯಗಳು, ಮಸೀದಿಗಳು ಮತ್ತು ಸಮಾಧಿಗಳನ್ನು ನೀವು ನೋಡಬಹುದಾಗಿದೆ.

ತಲಕಾಡು

ಕರ್ನಾಟಕದ ಪ್ರಸಿದ್ಧ ಕಾವೇರಿ ನದಿಯ ದಡದಲ್ಲಿರುವ ಸ್ಥಳ ತಲಕಾಡು. ತಲಕಾಡು ಪಟ್ಟಣವು ಶ್ರೀಮಂತ ಇತಿಹಾಸ ಮತ್ತು ಪರಂಪರೆಯನ್ನು ಹೊಂದಿದೆ. ಇಲ್ಲಿ ಪ್ರಮುಖವಾಗಿ ಶಿವನಿಗೆ ಅರ್ಪಿತವಾದ ವೈದ್ಯನಾಥೇಶ್ವರ ದೇಗುಲವನ್ನು ಕಾಣಬಹುದು. ದೇಶದ ಮೂಲೆಮೂಲೆಗಳಿಂದ ಇಲ್ಲಿಗೆ ಪ್ರವಾಸಿಗರು ಬರುತ್ತಾರೆ. ಇಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ಪಂಚಲಿಂಗ ದರ್ಶನಕ್ಕಾಗಿ ಉತ್ಖನನ ಕಾರ್ಯ ಮಾಡಲಾಗುತ್ತದೆ. ಆ ರೀತಿ ಮಾಡಿದಾಗ ಇಲ್ಲಿ ಮರಳಿನ ಅಡಿಯಲ್ಲಿದ್ದ ಸಾಕಷ್ಟು ದೇವಾಲಯಗಳು ಹೊರಬಂದಿವೆ. ಮೈಸೂರಿನಿಂದ ಇಲ್ಲಿಗೆ 45 ಕಿ.ಮೀ. ದೂರವಾಗುತ್ತದೆ.

ಮೇಲುಕೋಟೆ

ಮೇಲುಕೋಟೆ ದಕ್ಷಿಣ ಭಾರತದಲ್ಲಿ ಐತಿಹಾಸಿಕ ಪ್ರಾಮುಖ್ಯತೆ ಹೊಂದಿರುವ ಸ್ಥಳಗಳಲ್ಲಿ ಒಂದು. ಮಂಡ್ಯ ಜಿಲ್ಲೆಯಲ್ಲಿರುವ ಈ ಸ್ಥಳದಲ್ಲಿ ಅನೇಕ ದೇವಾಲಯಗಳಿವೆ. ಇಲ್ಲಿ ನಡೆಸಲಾಗುವ ವೈರಮುಡಿ ಉತ್ಸವಕ್ಕೆ ರಾಜ್ಯ ಮಾತ್ರವಲ್ಲದೆ ದೇಶದ ಹಲವು ಭಾಗಗಳಿಂದ ಭಕ್ತರು ಆಗಮಿಸುತ್ತಾರೆ. ಇಲ್ಲಿನ ಬೆಟ್ಟದ ತುದಿಯಲ್ಲಿರುವ ಶ್ರೀ ಯೋಗನರಸಿಂಹ ಸ್ವಾಮಿ ದೇವಸ್ಥಾನ ಮತ್ತು ಚೆಲುವನಾರಾಯಣ ಸ್ವಾಮಿ ದೇವಸ್ಥಾನ ಇಲ್ಲಿನ ಪ್ರಮುಖ ಆಕರ್ಷಣೆ.

ಸೋಮನಾಥಪುರ

ಕಾವೇರಿ ನದಿಯ ದಡದಲ್ಲಿ ಸೋಮನಾಥಪುರ ದೇವಾಲಯವನ್ನು ಕಾಣಬಹುದು. ಈ ದೇವಾಲಯ ಹೊಯ್ಸಳರ ಅದ್ಭುತವ ವಾಸ್ತುಶಿಲ್ಪದ ಉದಾಹರಣೆಗಳಲ್ಲಿ ಒಂದಾಗಿದೆ. ಇದನ್ನು ಚೆನ್ನಕೇಶವ ದೇವಾಲಯ ಅಥವಾ ಕೇಶವ ದೇವಾಲಯ ಎಂದೂ ಕರೆಯಲಾಗುತ್ತದೆ. ಹೊಯ್ಸಳ ಸಾಮ್ರಾಜ್ಯದ ರಾಜರು ನಿರ್ಮಿಸಿದ 1,500 ದೇವಾಲಯಗಳಲ್ಲಿ ಈ ದೇವಾಲಯವೂ ಒಂದಾಗಿದೆ. ಯುನೆಸ್ಕೋ ವಿಶ್ವ ಪರಂಪರೆಯ ತಾಣವಾಗಿ ನಾಮನಿರ್ದೇಶನಗೊಂಡಿರುವ ಈ ಸ್ಥಳವು ಕರ್ನಾಟಕದ ಪ್ರಸಿದ್ಧ ಸ್ಮಾರಕಗಳಲ್ಲಿ ಪ್ರಮುಖವಾದುದು.

ಮಿರ್ಜಾನ್‌ ಕೋಟೆ

ಅಘನಾಶಿನಿ ನದಿ ದಡದಲ್ಲಿ ಮಿರ್ಜಾನ್‌ ಕೋಟೆಯಿದೆ. ಕುಮಟಾ ಪಟ್ಟಣದಿಂದ 11 ಕಿ.ಮೀ. ದೂರದಲ್ಲಿರುವ ಈ ಸ್ಥಳ 4.1 ಹೆಕ್ಟೇರ್‌ ಪ್ರದೇಶದಲ್ಲಿ ಹಬ್ಬಿಕೊಂಡಿದೆ. ರಾಜಮನೆತನಗಳ ಇತಿಹಾಸ ಹೊಂದಿರುವ ಈ ಕೋಟೆ 16 ಮತ್ತು 17ನೇ ಶತಮಾನದಲ್ಲಿ ನಡೆದ ಯುದ್ಧಗಳಿಗೆ ಸಾಕ್ಷಿಯಾಗಿದೆ. ಹುಲ್ಲಿನಿಂದ ಆವರಿಸಿಕೊಂಡಿರುವ ಈ ಕೋಟೆ ನೋಡುವುದಕ್ಕೆ ಭವ್ಯವಾಗಿ ಕಾಣುತ್ತದೆ.

ಮಡಿಕೇರಿ ಕೋಟೆ

ಕೊಡಗು ಭಾಗದಲ್ಲಿ ಐತಿಹಾಸಿಕ ಪ್ರಾಮುಖ್ಯತೆ ಹೊಂದಿರುವ ಸ್ಥಳಗಳಲ್ಲಿ ಒಂದು ಮಡಿಕೇರಿ ಕೋಟೆ. ಇದು ಮಡಿಕೇರಿ ಪಟ್ಟಣದಲ್ಲಿಯೇ ಇದೆ. 17ನೇ ಶತಮಾನದಲ್ಲಿ ರಾಜ ಮುದ್ದುರಾಜ ಈ ಕೋಟೆಯನ್ನು ನಿರ್ಮಿಸಿದರು. ಈ ಕೋಟೆಯನ್ನು ಕರ್ನಾಟಕದ ಪ್ರಮುಖ ಐತಿಹಾಸಿಕ ಸ್ಮಾರಕಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ನೀವು ಇದನ್ನು ನೋಡಲೆಂದು ಕೊಡಗಿಗೆ ತೆರಳಿದರೆ ಅಲ್ಲಿ ನಿಮಗೆ ರಾಜಾ ಸೀಟ್‌, ಓಂಕಾರೇಶ್ವರ ದೇವಸ್ಥಾನ ಸೇರಿ ಅನೇಕ ಪ್ರಸಿದ್ಧ ಪ್ರವಾಸಿ ತಾಣಗಳಿಗೂ ಭೇಟಿ ನೀಡಬಹುದು. ಮಳೆಗಾಲದ ಸಮಯದಲ್ಲಿ ಕೊಡಗು ಹಚ್ಚ ಹಸುರಿನಿಂದ ಕಂಗೊಳಿಸುತ್ತಿರುತ್ತದೆಯಾದ್ದರಿಂದ ನಿಮ್ಮ ಮನಸ್ಸಿಗೂ ಉಲ್ಲಾಸವಾಗುತ್ತದೆ.

ಶೃಂಗೇರಿ

ಚಿಕ್ಕಮಗಳೂರು ಜಿಲ್ಲೆಯ ಸಣ್ಣ ಗುಡ್ಡಗಾಡು ಪಟ್ಟಣ ಶೃಂಗೇರಿ. ಇಲ್ಲಿನ ದೇವಾಲಯವನ್ನು 9ನೇ ಶತಮಾನದಲ್ಲಿ ಆದಿ ಶಂಕರರು ನಿರ್ಮಿಸಿದರು. ಅವರು ಅದನ್ನು ಒಂದು ಯಾತ್ರಾ ಕೇಂದ್ರವಾಗಿ ಸ್ಥಾಪಿಸಿದರು. ದಾಖಲೆಗಳ ಪ್ರಕಾರ, ಆದಿ ಶಂಕರಾಚಾರ್ಯರು 12 ವರ್ಷಗಳ ಕಾಲ ಇಲ್ಲಿಯೇ ಇದ್ದು, ತಮ್ಮ ಶಿಷ್ಯರಿಗೆ ಬೋಧಿಸಿದರು ಎಂದು ಹೇಳಲಾಗುತ್ತದೆ. ಇಲ್ಲಿಂದ ನೀವು ಹತ್ತಿರದಲ್ಲೇ ಇರುವ ಹೊರನಾಡು ದೇವಸ್ಥಾನ, ಬೇರೆ ಬೇರೆ ಧಾರ್ಮಿಕ ಸ್ಥಳಗಳಿಗೂ ಭೇಟಿ ನೀಡಬಹುದಾಗಿದೆ.

ಪಟ್ಟದಕಲ್

ದಕ್ಷಿಣ ಭಾರತದ ಹಿಂದೂ ಮತ್ತು ಜೈನ ದೇವಾಲಯಗಳ ನಿಧಿ ಎಂದು ಪಟ್ಟದಕಲ್ಲನ್ನು ಕರೆಯಲಾಗುತ್ತದೆ. ಇದನ್ನು ಯುನೆಸ್ಕೋ ಪರಂಪರೆಯ ತಾಣವೆಂದು ಹೆಸರಿಸಲಾಗಿದೆ. ಮಲಪ್ರಭಾ ನದಿಯ ದಡದಲ್ಲಿರುವ ಈ ಸ್ಥಳವು 4ನೇ ಶತಮಾನದಷ್ಟು ಹಿಂದಿನ ಪರಂಪರೆಯನ್ನು ಹೊಂದಿದೆ. ಶಿವನಿಗೆ ಸಮರ್ಪಿತವಾಗಿರುವ ಈ ದೇವಾಲಯವು ಉತ್ತರ ಮತ್ತು ದಕ್ಷಿಣ ಭಾರತದ ವಾಸ್ತುಶಿಲ್ಪದ ಸುಂದರ ಮಿಶ್ರಣವನ್ನು ಒಳಗೊಂಡಿದೆ.

ಕಾರ್ಕಳ

ಇದು ಐತಿಹಾಸಿಕ ಪ್ರಾಮುಖ್ಯತೆಗೆ ಹೆಸರುವಾಸಿಯಾದ ಉಡುಪಿ ಜಿಲ್ಲೆಯಲ್ಲಿರುವ ಸ್ಥಳವಾಗಿದೆ. ಪುರಾತನ ದೇವಾಲಯಗಳು ಮತ್ತು ಜೈನ ಬಸದಿಗಳಿಗೆ ಹೆಸರುವಾಸಿಯಾಗಿರುವ ಈ ಸ್ಥಳಕ್ಕೆ ಹೆಸರು ಇಲ್ಲಿ ಅಪಾರ ಪ್ರಮಾಣದಲ್ಲಿರುವ ಕಪ್ಪು ಗ್ರಾನೈಟ್‌ನಿಂದಾಗಿ ಬಂದಿದೆ. ಕರ್ನಾಟಕದ ಪ್ರಸಿದ್ಧ ಐತಿಹಾಸಿಕ ಸ್ಥಳಗಳಲ್ಲಿ ಒಂದಾದ ಇದು ಯುನೆಸ್ಕೋದಿಂದ ವಿಶ್ವ ಪರಂಪರೆಯ ತಾಣವಾಗಿ ನಾಮನಿರ್ದೇಶನಗೊಂಡಿದೆ.

ಇದನ್ನೂ ಓದಿ: Kannada Rajyotsava: ಚೆಲುವ ಕನ್ನಡನಾಡು ಉದಯವಾಗಿದ್ದು ಹೀಗೆ…

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Kannada Pride: ಇನ್ನು ಕನ್ನಡದಲ್ಲೇ ಸಿಆರ್‌ಪಿಎಫ್, ಬಿಎಸ್‌ಎಫ್, ಸಿಐಎಸ್‌ಎಫ್ ಕಾನ್ಸ್‌ಟೇಬಲ್ ಎಕ್ಸಾಮ್!

Kannada Pride: ಕೇಂದ್ರ ಸಶಸ್ತ್ರ ಮೀಸಲು ಪಡೆಗಳ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ 13 ಪ್ರಾದೇಿಕ ಭಾಷೆಗಳಲ್ಲಿ ನಡೆಸಲು ಕೇಂದ್ರ ಗೃಹ ಇಲಾಖೆಯು ಕಳೆದ ವರ್ಷವೇ ನಿರ್ಧರಿಸಿತ್ತು.

VISTARANEWS.COM


on

Karnataka Candidate can write CRPF, BSF, CIS Constable Exam in Kannada, Kannada Pride
Koo

ನವದೆಹಲಿ: ಸಿಆರ್‌ಪಿಎಫ್(CRPF), ಬಿಎಸ್‌ಎಫ್ (BSF) ಮತ್ತು ಸಿಐಎಸ್ಎಫ್‌ನಂಥ (CISF) ಅರೆ ಸೇನಾ ಪಡೆಗಳ ಕಾನ್ಸ್‌ಟೇಬ್ ನೇಮಕಾತಿ ಪರೀಕ್ಷೆಯನ್ನು (Constable Exam) ಇಂಗ್ಲಿಷ್ ಮತ್ತು ಹಿಂದಿ ಮಾತ್ರವಲ್ಲದೇ, ಕನ್ನಡವೂ (Kannada Pride) ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯವು ಭಾನುವಾರ ಹೇಳಿದೆ.

ದೇಶಾದ್ಯಂತ 128 ನಗರಗಳಲ್ಲಿ ನಡೆಯಲಿರುವ ಪರೀಕ್ಷೆಯಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳು ಎಕ್ಸಾಮ್ ಬರೆಯಲಿದ್ದಾರೆ. ಈ ಪರೀಕ್ಷೆಗಳನ್ನು ಕನ್ನಡವೂ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ನಡೆಯಲು ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಸಚಿವಾಲಯವು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಾದೇಶಿಕ ಭಾಷೆಗಳಿಗೆ ಉತ್ತೇಜನ ಮತ್ತು ಕೇಂದ್ರ ಸಶಸ್ತ್ರ ಮೀಸಲು ಪಡೆಯಲ್ಲಿ ಸ್ಥಳೀಯ ಯುವಕರು ಪಾಲ್ಗೊಳ್ಳುವುದನ್ನು ಹೆಚ್ಚಿುವುದಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದ್ದಾರೆ ಎಂದು ಸಚಿವಾಲಯದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹಿಂದಿ ಮತ್ತು ಇಂಗ್ಲಿಷ್ ಮಾತ್ರವಲ್ಲದೇ, ಅಸ್ಸಾಮಿ, ಬೆಂಗಾಲಿ, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಉರ್ದು, ಪಂಜಾಬಿ, ಮಣಿಪುರಿ ಮತ್ತು ಕೊಂಕಣಿ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸ್ಟಾಫ್ ಸೆಲಕ್ಷನ್ ಕಮಿಷನ್(SSC) ಈ ಕಾನ್‌ಸ್ಟೇಬಲ್(ಸಾಮಾನ್ಯ ಕರ್ತವ್ಯ) ಪರೀಕ್ಷೆಯನ್ನು ಕೈಗೊಳ್ಳುತ್ತಿದೆ. ಈ ಮೂಲಕ ಕೇಂದ್ರ ಸಶಸ್ತ್ರ ಪಡೆಗಳಿಗೆ ಲಕ್ಷಾಂತರ ಯುವಕರನ್ನು ಆಕರ್ಷಿಸಲಾಗುತ್ತಿದೆ. ಪರೀಕ್ಷೆಗಳನ್ನು ಸ್ಥಳೀಯ ಭಾಷೆಗಳಲ್ಲಿ ನಡೆಸಲು ಎಸ್ಎಸ್‌ಸಿ ಮತ್ತು ಕೇಂದ್ರ ಗೃಹ ಸಚಿವಾಲಯವು ತಿಳಿವಳಿಕಾ ಒಪ್ಪಂದಕ್ಕೆ ಸಹಿ ಹಾಕಿವೆ.

ಈ ಸುದ್ದಿಯನ್ನೂ ಓದಿ: ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ; ಕನ್ನಡ ಸೇರಿ 15 ಭಾಷೆಗಳಲ್ಲಿ ನೇಮಕಾತಿ ಪರೀಕ್ಷೆ, ಯಾವ ಹುದ್ದೆಗೆ ಅನ್ವಯ?

Continue Reading

ಕನ್ನಡ ರಾಜ್ಯೋತ್ಸವ

Kannada Koota Luxembourg: ಲಕ್ಸಂಬರ್ಗ್ ಕನ್ನಡ ಕೂಟದಿಂದ ಅದ್ಧೂರಿ ಕನ್ನಡೋತ್ಸವ-2023

Kannada Koota Luxembourg: ಯುರೋಪ್ ಖಂಡದ ಚಿಕ್ಕ ದೇಶದಲ್ಲಿ ಲಕ್ಸಂಬರ್ಗ್ ಕನ್ನಡ ಕೂಟ, ಕರುನಾಡು ಸಂಸ್ಕೃತಿಯ ಅನಾವರಣ ಮಾಡಿದೆ.

VISTARANEWS.COM


on

Kannada Koota Luxembourg
Koo

ಲಕ್ಸಂಬರ್ಗ್: ಕನ್ನಡದ ಕಂಪನ್ನು ಪಸರಿಸುವ ಮತ್ತು ಕನ್ನಡದ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿರುವ ಕನ್ನಡ ಕೂಟ ಲಕ್ಸಂಬರ್ಗ್ (ಕೆಕೆಎಲ್) (Kannada Koota Luxembourg) ಅದ್ಧೂರಿಯಾಗಿ `ಕನ್ನಡೋತ್ಸವ -2023’ ನಡೆಸುವ ಮೂಲಕ ಯುರೋಪ್ ಖಂಡದ ಚಿಕ್ಕ ದೇಶದಲ್ಲಿ ಕರುನಾಡು ಸಂಸ್ಕೃತಿಯ ಅನಾವರಣ ಮಾಡಿದೆ.

ಲಕ್ಸಂಬರ್ಗ್‌ನ ಬೆಗ್ಗೆನ್ ಸಾಂಸ್ಕೃತಿಕ ಕೇಂದ್ರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಲ್ಲಿ ನೆಲೆಸಿರುವ ಕನ್ನಡಿಗರೆಲ್ಲರೂ ಪಾಲ್ಗೊಂಡು ಕನ್ನಡದ ಕೀರ್ತಿ ಪತಾಕೆಯನ್ನು ಹಾರಿಸಿದರು. ಈ ಮೂಲಕ ಕನ್ನಡಿಗರೆಲ್ಲರೂ ಒಂದೆಡೆ ಸೇರಿ ಕನ್ನಡ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು.

ಬೆಂಗಳೂರು ನಗರ ಜಿಲ್ಲೆಯಷ್ಟು ದೊಡ್ಡದಿರುವ ಲಕ್ಸಂಬರ್ಗ್‌ನಲ್ಲಿ ಸುಮಾರು 6 ಲಕ್ಷ ಜನಸಂಖ್ಯೆ ಇದೆ. ಚಿಕ್ಕದಾದರೂ ಇಲ್ಲಿ ವೈವಿಧ್ಯಮಯ ಸಂಸ್ಕೃತಿ ಶ್ರೀಮಂತವಾಗಿದೆ. ಈ ಬಹುಸಾಂಸ್ಕೃತಿಕ ಪ್ರದೇಶದಲ್ಲಿ ಭಾರತೀಯರು ಅದರಲ್ಲೂ ವಿಶೇಷವಾಗಿ ಕನ್ನಡಿಗರು ಗಮನಾರ್ಹವಾದ ರೀತಿಯಲ್ಲಿ ತಮ್ಮ ಭಾಷೆ ಮತ್ತು ಸಂಸ್ಕೃತಿಯನ್ನು ಪಸರಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ಇಲ್ಲಿ 100ಕ್ಕೂ ಹೆಚ್ಚು ಕನ್ನಡಿಗ ಕುಟುಂಬಗಳು ವಾಸ ಮಾಡುತ್ತಿದ್ದು, 2022ರ ಅಂತ್ಯದಲ್ಲಿ ಆರಂಭವಾದ ಕನ್ನಡ ಕೂಟ ಲಕ್ಸಂಬರ್ಗ್ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು, ಕಾರ್ಯಾಗಾರಗಳು ಹಾಗೂ ಹಬ್ಬಗಳ ಮೂಲಕ ಕನ್ನಡಿಗರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಿದೆ.

ಇದನ್ನೂ ಓದಿ | ದಶಮುಖ ಅಂಕಣ: ನಿದ್ದೆಗೊಮ್ಮೆ ನಿತ್ಯ ಮರಣ, ಎದ್ದ ಸಲ ನವೀನ ಜನನ!

ಕೆಕೆಎಲ್ ಕನ್ನಡೋತ್ಸವ 2023 ಎರಡನೇ ಕರ್ನಾಟಕ ರಾಜ್ಯೋತ್ಸವವನ್ನು ಆಯೋಜಿಸಿದ್ದು, ಇದರಲ್ಲಿ 120ಕ್ಕೂ ಹೆಚ್ಚು ಕನ್ನಡದ ಮನಸುಗಳು ಪಾಲ್ಗೊಂಡಿದ್ದವು. ಇದರ ವಿಶೇಷವೆಂದರೆ ದೊಡ್ಡ ಮಟ್ಟದಲ್ಲಿ ಭಾರತೀಯರು ಮತ್ತು ಕೆಲವು ಯೂರೋಪಿಯನ್ನರೂ ಪಾಲ್ಗೊಂಡಿದ್ದರು. ಕನ್ನಡದ ಶ್ರೀಮಂತ ಪರಂಪರೆಯನ್ನು ಬಿಂಬಿಸುವ ಹಾಗೂ ಸಾಂಸ್ಕೃತಿಕ ಸಂಪ್ರದಾಯವನ್ನು ಬಿಂಬಿಸುವ ರೀತಿಯಲ್ಲಿ ಹಚ್ಚೇವು ಕನ್ನಡದ ದೀಪ ಹಾಡಿನೊಂದಿಗೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು ಮತ್ತು ನಾಡಗೀತೆಯನ್ನು ಹಾಡಲಾಯಿತು.

ಕನ್ನಡಿಗ ಸಮುದಾಯಕ್ಕೆ ತಮ್ಮದೇ ಆದ ಕೊಡುಗೆ ನೀಡುತ್ತಾ ಬಂದಿರುವ ವನಜಾಕ್ಷಿ ಜಗದೀಶ್ ಮತ್ತು ಡಾ.ಪುನೀತ್ ಜುಬ್ಬ ಹೊನ್ನಯ್ಯ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಶರಣ್ಯ ಮತ್ತು ಪ್ರಮೋದ್ ಈಶ್ವರ್ ಅವರು ಈ ಕಾರ್ಯಕ್ರಮದ ನಿರೂಪಣೆ ಮಾಡಿದರು.

ಶಾಸ್ತ್ರೀಯ ಸಂಗೀತ, ಸಿನಿಮಾ ಹಾಡುಗಳ ಗಾಯನ, ನೃತ್ಯ ಮತ್ತು ಆರ್ಕೆಸ್ಟ್ರಾ ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಆಯೋಜಿಸಲಾಗಿತ್ತು. ವಿಶೇಷವೆಂದರೆ ಈ ಕಾರ್ಯಕ್ರಮಗಳ ಅರ್ಧದಷ್ಟು ಕಾರ್ಯಕ್ರಮಗಳನ್ನು ಮಕ್ಕಳೇ ನಡೆಸಿಕೊಟ್ಟರು. ಈ ಮೂಲಕ ಮಕ್ಕಳು ಕನ್ನಡದ ಸಂಸ್ಕೃತಿಯನ್ನು ಬಿಂಬಿಸಿದರು. ಇದೇ ವೇಳೆ, ಆದರ್ಶ ದಂಪತಿ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು. ಈ ಪೈಕಿ 5 ಅತ್ಯುತ್ತಮ ಜೋಡಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯೆಂದರೆ ಕನ್ನಡಿಗರಾದ ಅಚಲ್ ಮೂರ್ತಿ ಮತ್ತು ಲಕ್ಸಂಬರ್ಗ್ ಮೂಲದ ಬ್ಯಾಂಡ್ `ಅಹ್ಮದ್ ರಾದ್ವಾನ್ & ಲೆಸ್ ಹಿರೋಂಡೆಲ್ಸ್’ ನ ಕಲಾವಿದರು ತಮ್ಮ ಕಲೆಯನ್ನು ಪ್ರದರ್ಶನ ಮಾಡಿ ಎಲ್ಲರ ಗಮನ ಸೆಳೆದರು. ಅಲ್ಲದೇ, ಇಲ್ಲಿ ಆಯೋಜಿಸಲಾಗಿದ್ದ ವಿವಿಧ ಖಾದ್ಯಗಳ ಪ್ರದರ್ಶನ ತಿಂಡಿ ಪ್ರಿಯರಿಗೆ ಆಹ್ಲಾದವನ್ನು ಉಂಟು ಮಾಡಿತು.

ಕೆಕೆಎಲ್ ಅಧ್ಯಕ್ಷರಾದ ಭವಾನಿ ಶಂಕರ್ ಅವರು ಈ ಕಾರ್ಯಕ್ರಮದ ಯಶಸ್ಸಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
“ಲಕ್ಸಂಬರ್ಗ್ ಮತ್ತು ಕರ್ನಾಟಕದ ಕನ್ನಡಿಗರ ನಡುವಿನ ಬಾಂಧವ್ಯ ಬಲವರ್ಧನೆಗೆ ಈ ಕಾರ್ಯಕ್ರಮ ನಾಂದಿ ಹಾಡಿದೆ. ಈ ಕನ್ನಡೋತ್ಸವ 2023 ಕೇವಲ ನಮ್ಮ ನಡುವಿನ ಪ್ರತಿಭೆಗಳನ್ನು ಹೊರ ಜಗತ್ತಿಗೆ ಅನಾವರಣ ಮಾಡಲಷ್ಟೇ ಕಾರಣವಾಗಿಲ್ಲ. ಇದರೊಂದಿಗೆ ಒಗ್ಗಟ್ಟು ಮತ್ತು ಪ್ರೀತಿ ವಿಶ್ವಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಹಕಾರಿಯಾಗಿದೆ. ನಮ್ಮ ಶ್ರೀಮಂತ ಸಂಸ್ಕೃತಿಯನ್ನು ಹೊರ ಜಗತ್ತಿಗೆ ತೋರಿಸುವಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿದೆ’’ ಎಂದರು.

ಸಂಧ್ಯಾ ಸುರೇಶ್, ಪುನೀತಾ ರೆಡ್ಡಿ, ಕಾರ್ತೀಕ್ ರಾಮಮೂರ್ತಿ, ನರಸಿಂಹ ಹೆಬ್ಬಾರ್, ಮಂಜುನಾಥ್ ಪ್ರಸಾದ್, ನಿರಂಜನ್ ವಿಶ್ವಮೂರ್ತಿ, ಹಿತೇಶ್ ಚಿಡ್ಗಲ್, ಪ್ರಶಾಂತ್ ಅಳವಂಡಿ, ರಮೇಶ್ ಪಾಂಡುರಂಗ ಸೇರಿದಂತೆ ಇನ್ನಿತರ ಆಡಳಿತ ಮಂಡಳಿ ಸದಸ್ಯರು ನೇತೃತ್ವದಲ್ಲಿ ಹಾಗೂ ಸ್ವಯಂಸೇವಕರ ಶ್ರಮದ ಫಲವಾಗಿ ಈ ಕಾರ್ಯಕ್ರಮದಲ್ಲಿ ಯಶಸ್ವಿಯಾಗಿ ನಡೆಯಲು ಕಾರಣವಾಗಿದೆ.

ಇದನ್ನೂ ಓದಿ | Cultural Events : ಡಿ.13-14ರಂದು ನೃತ್ಯ ವೈಭವದ ತ್ಯಾಗರಾಜ ಹೃತ್ಸದನ

ಈ ಕನ್ನಡೋತ್ಸವ 2023 ಕನ್ನಡದ ಸಮುದಾಯದ ಒಗ್ಗಟ್ಟನ್ನು ಪ್ರದರ್ಶಿಸುವುದರೊಂದಿಗೆ ಕನ್ನಡೇತರರು ಮತ್ತು ಸ್ಥಳೀಯ ನಾಗರಿಕರೊಂದಿಗೆ ಸಂಬಂಧ ಬೆಳೆಸುವುದು ಮತ್ತು ಸಂಸ್ಕೃತಿ ವಿನಿಮಯಕ್ಕೆ ಒಂದು ಉತ್ತಮವಾದ ವೇದಿಕೆಯನ್ನು ಒದಗಿಸಿಕೊಟ್ಟಿತು.

Continue Reading

ಕನ್ನಡ ರಾಜ್ಯೋತ್ಸವ

RK Balachandra: ʼಕರ್ನಾಟಕ ಸಾಧಕ ರತ್ನʼ ಪ್ರಶಸ್ತಿಗೆ ಕುಶಾಲನಗರದ ಆರ್.ಕೆ. ಬಾಲಚಂದ್ರ ಆಯ್ಕೆ

R. K. Balachandra: ಬಳ್ಳಾರಿಯ ಸ್ಮಿಯಾಕ ಚಾರಿಟಬಲ್ ಟ್ರಸ್ಟ್‌ನಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ʼಕರ್ನಾಟಕ ಸಾಧಕ ರತ್ನʼ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ.

VISTARANEWS.COM


on

RK Balachandra
Koo

ಮಡಿಕೇರಿ: 68ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬಳ್ಳಾರಿಯ ಸ್ಮಿಯಾಕ ಚಾರಿಟಬಲ್ ಟ್ರಸ್ಟ್‌ನಿಂದ ನೀಡುವ ʼಕರ್ನಾಟಕ ಸಾಧಕ ರತ್ನʼ ರಾಜ್ಯೋತ್ಸವ ಪ್ರಶಸ್ತಿಗೆ ಕೊಡಗು ಜಿಲ್ಲೆಯ ಕುಶಾಲನಗರದ ಆರ್.ಕೆ. ಬಾಲಚಂದ್ರ (RK Balachandra) ಅವರು ಆಯ್ಕೆಯಾಗಿದ್ದಾರೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬಹುಮುಖ್ಯವಾಗಿ ಅನ್ಯ ರಾಜ್ಯದ ಕನ್ನಡೇತರರಿಗೆ ಕನ್ನಡ ಕಲಿಸುವಿಕೆ ಹಾಗೂ ರಾಜ್ಯಾದಂತ ಉಚಿತವಾಗಿ ಬ್ಯಾಂಕಿಂಗ್ ಹಾಗೂ ಇತರೆ ಸ್ಪರ್ಧಾತ್ಮಗಳ ಪರೀಕ್ಷೆ ತರಬೇತಿಯ ಸೇವೆಯನ್ನು ಗುರುತಿಸಿ ಶಿಕ್ಷಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ ಇವರಿಗೆ ʼಕರ್ನಾಟಕ ಸಾಧಕ ರತ್ನʼ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಇದನ್ನೂ ಓದಿ | ವಿಸ್ತಾರ ಸಂಪಾದಕೀಯ: ರಾಮಾಯಣ, ಮಹಾಭಾರತ ಕಲಿಕೆ ಶಿಫಾರಸು ಸ್ವಾಗತಾರ್ಹ

ಕನ್ನಡ ರಾಜ್ಯೋತ್ಸವದ ಅಂಗವಾಗಿ ನವೆಂಬರ್‌ 26ರಂದು ಹಮ್ಮಿಕೊಂಡಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆರ್.ಕೆ. ಬಾಲಚಂದ್ರ ಸೇರಿ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕನ್ನಡ ರಾಜ್ಯೋತ್ಸವ

Karnataka Sambhrama 50: ಹೋರಾಟ, ತ್ಯಾಗ-ಬಲಿದಾನದಿಂದ ಕನ್ನಡ ನಾಡು ಉದಯ: ಸಿದ್ದರಾಮಯ್ಯ

Karnataka Sambhrama 50: ಗದಗದಲ್ಲಿ ಆಯೋಜಿಸಿದ್ದ ʼಕರ್ನಾಟಕ ಸಂಭ್ರಮ-50ʼ ರಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.

VISTARANEWS.COM


on

CM Siddaramaiah
Koo

ಗದಗ: ಹೋರಾಟ, ತ್ಯಾಗ-ಬಲಿದಾನಗಳಿಂದ ಕನ್ನಡ ನಾಡು (Karnataka Sambhrama 50) ಉದಯವಾಗಿದೆ. ಈ ನಾಡಲ್ಲಿ ಕನ್ನಡತ್ವ ಮತ್ತಷ್ಟು ಆಳವಾಗಿ ಬೇರೂರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದಲ್ಲಿ ಆಯೋಜಿಸಿದ್ದ ʼಕರ್ನಾಟಕ ಸಂಭ್ರಮ-50ʼ ಅದ್ಧೂರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ನಾಮಕರಣ ಆಗಲು ಶ್ರಮಿಸಿ ಹೋರಾಡಿದ ಕೆ.ಎಚ್. ಪಾಟೀಲ್ ಮತ್ತು ಎಲ್ಲಾ ಹೋರಾಟದ ಸಂಗತಿಗಳನ್ನು ಇಂದು ನಾನು ಸ್ಮರಿಸುತ್ತೇನೆ. ಅವತ್ತು ಕೆ.ಎಚ್.ಪಾಟೀಲ್, ಇಂದು ಎಚ್.ಕೆ.ಪಾಟೀಲ್, ಅವತ್ತು ದೇವರಾಜ ಅರಸು ಕುಳಿತಿದ್ದ ಮುಖ್ಯಮಂತ್ರಿ ಕುರ್ಚಿಯಲ್ಲಿ ಇವತ್ತು ನಾನು ಕುಳಿತಿದ್ದೇನೆ. ಇದೇನು ಕಾಕತಾಳೀಯ ಅಲ್ಲ ಎಂದರು.

ಇಂಗ್ಲಿಷ್‌ನಲ್ಲಿ ಶೇಕ್ಸ್ ಪಿಯರ್ ಸಾಹಿತ್ಯ ರಚಿಸುವುದಕ್ಕೂ 500 ವರ್ಷಗಳ ಮೊದಲೇ ಕನ್ನಡದಲ್ಲಿ ವಿಶ್ವ ಮಟ್ಟದ ಅತ್ಯುನ್ನತ ಸಾಹಿತ್ಯ ರಚನೆಯಾಗಿತ್ತು. ಪಂಪನಿಂದ ಹಿಡಿದು ವಚನಕಾರರನ್ನೂ ಸೇರಿಸಿ ಹಲವರು ಅತ್ಯುನ್ನತ ಸಾಹಿತ್ಯ ರಚಿಸಿದ್ದರು ಎಂದು ಕನ್ನಡ ಭಾಷಾ ಹಿರಿಮೆಯನ್ನು ಉದಾಹರಿಸಿದರು.

ಇದನ್ನೂ ಓದಿ | Karnataka Drought : 324 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಕನ್ನಡ ಕಲಿಯದೆಯೂ ಕರ್ನಾಟಕದಲ್ಲಿ ವ್ಯವಹರಿಸಬಹುದು ಎನ್ನುವ ವಾತಾವರಣ ಬದಲಾಗಬೇಕು. ಕನ್ನಡದ ಸಂಸ್ಕೃತಿ ಜತೆಗೆ ನಮ್ಮೆಲ್ಲರಲ್ಲಿ ಕನ್ನಡತನ ಬೇರೂರಬೇಕು. ಆಗ ಮಾತ್ರ ಕನ್ನಡದ ವಾತಾವರಣ ಇಡಿ ನಾಡಿನಲ್ಲಿ ಪಸರಿಸುತ್ತದೆ ಎಂದರು.

CM Siddaramaiah talks in Karnataka sambhrama at Gadag

ಕನ್ನಡ ಸಂಸ್ಕೃತಿ ಎಂದಾಗ ಬಸವಾದಿ ಶರಣರ ಕಾಯಕ ಸಂಸ್ಕೃತಿಯೂ ಸೇರಿದೆ. ಬಸವಣ್ಣನವರ ಆಶಯದಂತೆ ವರ್ಗರಹಿತ, ಜಾತಿರಹಿತ ಸಮಾಜದ ನಿರ್ಮಾಣ ಮತ್ತು ಅಭಿವೃದ್ಧಿ ನಮ್ಮ ಗುರಿಯಾಗಿದೆ. ಆ ಕಾರಣಕ್ಕೇ ಸರ್ವ ಜಾತಿ-ಧರ್ಮದವರ ಬದುಕನ್ನು ಎತ್ತರಿಸುವ ಗ್ಯಾರಂಟಿ ಕಾರ್ಯಕ್ರಮಗಳನ್ನು ನಾವು ನೀಡಿದ್ದೇವೆ ಎಂದರು.

ಈ ಹಿಂದೆ ಕೆ.ಎಚ್.ಪಾಟೀಲರು ಇಡೀ ಜಿಲ್ಲೆಗೆ ಕುಡಿಯುವ ನೀರು ಕೊಟ್ಟರು. ಅವರ ಪುತ್ರ ಎಚ್.ಕೆ.ಪಾಟೀಲರೂ ಇಡೀ ರಾಜ್ಯಕ್ಕೆ ಉತ್ತಮ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಹೀಗಾಗಿ ನಾಮಪತ್ರ ಸಲ್ಲಿಸಿದರೆ ಸಾಕು, ನೀವೆಲ್ಲಾ ಎಚ್.ಕೆ.ಪಾಟೀಲರನ್ನು ಗೆಲ್ಲಿಸಬೇಕು. ಇಡೀ ರಾಜ್ಯಕ್ಕೆ ಅಷ್ಟೊಂದು ಕೆಲಸ ಮಾಡಿರುವ ಎಚ್.ಕೆ.ಪಾಟೀಲರು ಮತ ಕೇಳಬಾರದು. ನೀವೆಲ್ಲಾ ಅವರನ್ನೂ ಹಾಗೇ ಗೆಲ್ಲಿಸಬೇಕು ಎಂದು ಕರೆ ನೀಡಿದರು.

ಅವಳಿ ನಗರಕ್ಕೆ 61 ಕೋಟಿ ಕೊಟ್ಟಿದ್ದೇವೆ

ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ವ್ಯವಸ್ಥೆಯನ್ನು ಇನ್ನಷ್ಟು ಸಮರ್ಪಕಗೊಳಿಸಲು ಈಗಾಗಲೇ 61 ಕೋಟಿ ರೂ. ನೀಡಿದ್ದೇವೆ. ಅಗತ್ಯಬಿದ್ದರೆ ಮತ್ತಷ್ಟು ಹಣ ಕೊಡಲು ನಮ್ಮ ಸರ್ಕಾರ ಸಿದ್ದವಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರಚಾಸೋದ್ಯಮ ಇಲಾಖೆ ಮತ್ತು ಗದಗ ಜಿಲ್ಲಾಡಳಿತ ಜಂಟಿಯಾಗಿ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರವಾಸೋದ್ಯಮ ಸಚಿವರೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಎಚ್.ಕೆ.ಪಾಟೀಲ್ ಅವರು ವಹಿಸಿದ್ದರು.

ಇದನ್ನೂ ಓದಿ | Cauvery Dispute : ರಾಜ್ಯಕ್ಕೆ ಮತ್ತೆ ಕಾವೇರಿ ಜಲಾಘಾತ; ಇನ್ನು 20 ದಿನ ನಿರಂತರ ನೀರು ಹರಿಸಲು ಪ್ರಾಧಿಕಾರ ಸೂಚನೆ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಚಿವರಾದ ಕೆ.ಎಚ್.ಮುನಿಯಪ್ಪ, ಶಿವರಾಜ ತಂಗಡಗಿ, ಲಕ್ಷ್ಮೀ ಹೆಬ್ಬಾಳ್ಕರ್, ಬೈರತಿ ಸುರೇಶ್, ಮಂಕಾಳ ವೈದ್ಯ, ಶರಣ ಪ್ರಕಾಶ್ ಪಾಟೀಲ್, ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಸೇರಿ ಹಲವಾರು ಶಾಸಕರು, ಇಲಾಖಾ ಕಾರ್ಯದರ್ಶಿಗಳು-ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading
Advertisement
T20 World Cup
ಪ್ರಮುಖ ಸುದ್ದಿ7 mins ago

T20 World Cup : ಒಮನ್ ವಿರುದ್ಧ 8 ವಿಕೆಟ್​ ಜಯ ಗಳಿಸಿ ವಿಶ್ವ ದಾಖಲೆ ಬರೆದ ಇಂಗ್ಲೆಂಡ್​

Junk Food Side Effects
ಆರೋಗ್ಯ20 mins ago

Junk Food Side Effects: ಗೇಮಿಂಗ್‌ ದಾಸರಾದ ಮಕ್ಕಳು ಜಂಕ್‌ ಫುಡ್‌ ವ್ಯಸನಿಗಳಾಗುವ ಸಂಭವ ಹೆಚ್ಚು!

Narendra Modi
ಪ್ರಮುಖ ಸುದ್ದಿ31 mins ago

Narendra Modi: ಜಿ-7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿಯ ಅಪುಲಿಯಾಗೆ ತಲುಪಿದ ಪ್ರಧಾನಿ ಮೋದಿ

karnataka weather Forecast
ಮಳೆ50 mins ago

Karnataka Weather : ಬೆಂಗಳೂರಲ್ಲಿ ಮುಂದುವರಿಯಲಿದೆ ಭರ್ಜರಿ ಮಳೆ; ಈ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Amith Shah
ಪ್ರಮುಖ ಸುದ್ದಿ58 mins ago

Amit Shah: ತಮಿಳಿಸೈಗೆ ಅಮಿತ್ ಶಾ ಬೈಗುಳದ ವಿಡಿಯೋ; ವಿವಾದಕ್ಕೆ ತೆರೆ ಎಳೆದ ತಮಿಳುನಾಡು ಬಿಜೆಪಿ ನಾಯಕಿ

Leg Cramps At Night
ಆರೋಗ್ಯ1 hour ago

Leg Cramps At Night: ರಾತ್ರಿ ಮಲಗಿದಾಗ ಕಾಡುವ ಕಾಲುನೋವಿಗೆ ಇದೆ ಪರಿಹಾರ!

Dina Bhavishya
ಭವಿಷ್ಯ2 hours ago

Dina Bhavishya: ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ

Jammu Kashmir
ದೇಶ7 hours ago

Jammu Kashmir: ಕಾಶ್ಮೀರದಲ್ಲಿ ಮತ್ತೊಂದು ದುರಂತ; ಸೇನಾ ವಾಹನ ಕಣಿವೆಗೆ ಬಿದ್ದು ಯೋಧ ಸಾವು, ನಾಲ್ವರಿಗೆ ಗಾಯ

Forest department agrees to give 500 acres for yEttina hole project work says DCM DK Shivakumar
ಕರ್ನಾಟಕ7 hours ago

DK Shivakumar: ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ

Maharaj
ಸಿನಿಮಾ8 hours ago

Maharaj: ಹಿಂದುಗಳಿಗೆ ಅವಮಾನ; ಆಮೀರ್‌ ಖಾನ್‌ ಪುತ್ರನ ‘ಮಹಾರಾಜ್’‌ ಸಿನಿಮಾ ಬಿಡುಗಡೆಗೆ ಕೋರ್ಟ್‌ ತಡೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌