Karnataka Budget 2024 : ಬಜೆಟ್‌ ಬಹಿಷ್ಕಾರ ಇತಿಹಾಸದಲ್ಲೇ ಮೊದಲಲ್ಲ! 2021ರಲ್ಲೇ ಸಿದ್ದು ಇತಿಹಾಸ ಸೃಷ್ಟಿಸಿದ್ದರು! - Vistara News

ಕರ್ನಾಟಕ ಬಜೆಟ್ 2024

Karnataka Budget 2024 : ಬಜೆಟ್‌ ಬಹಿಷ್ಕಾರ ಇತಿಹಾಸದಲ್ಲೇ ಮೊದಲಲ್ಲ! 2021ರಲ್ಲೇ ಸಿದ್ದು ಇತಿಹಾಸ ಸೃಷ್ಟಿಸಿದ್ದರು!

Karanataka Budget 2024: ಬಜೆಟ್‌ ಬಹಿಷ್ಕಾರ ಇತಿಹಾಸದಲ್ಲೇ ಮೊದಲು ಎಂಬ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಬಿಜೆಪಿ ಗೇಲಿ ಮಾಡಿದೆ. ಸಿದ್ದರಾಮಯ್ಯ ಅವರೇ 2021ರಲ್ಲಿ ಬಜೆಟ್‌ ಬಹಿಷ್ಕರಿಸಿದ್ದರು ಎಂದು ನೆನಪಿಸಿದೆ.

VISTARANEWS.COM


on

Karnataka Budget 2024 Walkout
2021ರಲ್ಲಿ ಸಿದ್ದರಾ‌ಮಯ್ಯ ನೇತೃತ್ವದಲ್ಲಿ ನಡೆದ ಬಜೆಟ್‌ ಬಹಿಷ್ಕಾರದ ಚಿತ್ರ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ವಿಧಾನ ಮಂಡಲದಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಮಂಡಿಸಿದ 2024-25ನೇ ಸಾಲಿನ ಬಜೆಟ್‌ನ್ನು (Karnataka Budget 2024) ಪ್ರತಿಪಕ್ಷ ಬಿಜೆಪಿ ಬಹಿಷ್ಕರಿಸಿದೆ. ಸಿದ್ದರಾಮಯ್ಯ ಅವರು ಭಾಷಣ ಆರಂಭ ಮಾಡುತ್ತಲೇ ʻಏನಿಲ್ಲ.. ಏನಿಲ್ಲ.. ಬಜೆಟ್‌ನಲ್ಲಿ ಏನಿಲ್ಲʼ ಎಂದು ಗೇಲಿ ಮಾಡುತ್ತಾ ಬಿಜೆಪಿ ಶಾಸಕರು ಹೊರನಡೆದಿದ್ದರು. ಈ ರೀತಿ ಬಜೆಟ್‌ ಮಂಡನೆಯನ್ನೇ ಬಹಿಷ್ಕರಿಸಿರುವುದು ಇತಿಹಾಸದಲ್ಲೇ ಮೊದಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಕ್ಷಗಳ ಮೇಲೆ ಹರಿಹಾಯ್ದಿದ್ದರು. ಆದರೆ, ಇದು ಇತಿಹಾಸದಲ್ಲಿ ಮೊದಲೇನಲ್ಲ. ಈ ಹಿಂದೆ ಸಿದ್ದರಾಮಯ್ಯನವರೇ ಬಜೆಟ್‌ ಬಹಿಷ್ಕಾರದ ಮೂಲಕ ಇತಿಹಾಸ ಬರೆದಿದ್ದರು ಎಂದು ಬಿಜೆಪಿ (Karnataka BJP) ಹೇಳಿದೆ.

Karnataka Budget 2024 BJP Walkout
ಬಜೆಟ್‌ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಆರ್‌. ಅಶೋಕ್‌ (R Ashok) ಅವರು ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಒಂದು ಪೋಸ್ಟ್‌ ಹಾಕಿ, 2021ರ ಬಜೆಟನ್ನು ಆಗ ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬಹಿಷ್ಕಾರ ಹಾಕಿದ್ದನ್ನು ನೆನಪಿಸಿಕೊಂಡಿದ್ದಾರೆ.

ಬಿಎಸ್‌ವೈ ಬಜೆಟ್‌ನಿಂದ ವಾಕೌಟ್‌ ಮಾಡಿದ್ದ ಸಿದ್ದರಾಮಯ್ಯ

ʻʻಬಜೆಟ್ ಭಾಷಣ ಬಹಿಷ್ಕಾರ ಮಾಡಿದ ಘಟನೆ ನಾನು ಇತಿಹಾಸದಲ್ಲೇ ನೋಡಿಲ್ಲ, ಇದು ಸಂವಿಧಾನಕ್ಕೆ ಮಾಡಿದ ಅಪಮಾನ ಅಂತ ಬುರುಡೆ ಬಿಡುವ ಮೊದಲ ತಮ್ಮ ಹಾಗೂ ತಮ್ಮ ಕಾಂಗ್ರೆಸ್‌ ಕ್ಷದ ಇತಿಹಾಸ ಒಮ್ಮೆ ತೆಗೆದು ನೋಡಿ ಸಿಎಂ ಸಿದ್ದರಾಮಯ್ಯ ಅವರೇ. 2021ರಲ್ಲಿ ಅಂದಿನ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಬಜೆಟ್ ಭಾಷಣವನ್ನು ಬಹಿಷ್ಕಾರ ಮಾಡಿ ಸದನದಿಂದ ವಾಕ್ ಔಟ್ ಮಾಡುವ ಮೂಲಕ ಸನ್ಮಾನ್ಯ ಯಡಿಯೂರಪ್ಪನವರಂತಹ ಮುತ್ಸದ್ದಿ , ಹಿರಿಯ ಜನ ನಾಯಕರಿಗೆ ಅವಮಾನ ಮಾಡುವಾಗ ತಮ್ಮ ಈ ಉಪದೇಶ ತಮಗೆ ನೆನಪಿರಲಿಲ್ಲವೆ? ತಾವು ಮಹಾ ಸಾಚಾ ಎನ್ನುವಂತೆ ಮಾಧ್ಯಮಗಳ ಮುಂದೆ ನಾಟಕ ಆಡುವುದರಿಂದ ಏನೂ ಪ್ರಯೋಜನವಿಲ್ಲ. ತಮ್ಮ ಆಷಾಢಭೂತಿತನ, ಎರಡು ನಾಲಿಗೆ ಬಗ್ಗೆ ಎಲ್ಲರಿಗೂ ತಿಳಿದಿದೆʼʼ ಎಂದು ಆರ್‌. ಆಶೋಕ್‌ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

2021ರಲ್ಲಿ ಬಿಎಸ್‌ ಯಡಿಯೂರಪ್ಪ ಅವರು ಬಜೆಟ್‌ ಮಂಡನೆ ಮಾಡಿದಾಗ ಸಿದ್ದರಾಮಯ್ಯ ಅವರು ಈ ಸರ್ಕಾರಕ್ಕೆ ನೈತಿಕ ಮೌಲ್ಯಗಳಿಲ್ಲ. ಹೀಗಾಗಿ ಬಜೆಟ್‌ ಮಂಡನೆಗೆ ಅರ್ಹತೆ ಇಲ್ಲ ಎಂದು ಹೇಳಿ ಭಾಷಣದ ಆರಂಭದಲ್ಲೇ ಸಭಾತ್ಯಾಗ ಮಾಡಿದ್ದಕ್ಕೆ ಸಂಬಂಧಿಸಿ ಅಂದು ಪ್ರಕಟವಾಗಿದ್ದ ಮಾಧ್ಯಮಗಳ ವರದಿಗಳು ಮತ್ತು ವಾಹಿನಿಗಳ ವರದಿಗಳನ್ನು ಟ್ಯಾಗ್‌ ಮಾಡಿದ್ದಾರೆ.

ಇದನ್ನೂ ಓದಿ : Karnataka Budget Session 2024: ಬಿಜೆಪಿಯಿಂದ ಬಜೆಟ್‌ ಬಾಯ್ಕಾಟ್‌; ಇತಿಹಾಸದಲ್ಲೇ ಮೊದಲು ಎಂದ ಸಿದ್ದರಾಮಯ್ಯ

ಬಿಜೆಪಿ ಸಭಾತ್ಯಾಗದ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಬಿಜೆಪಿಗೆ ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ: ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ವಿಧಾನಸಭೆಯಲ್ಲಿ ಬಜೆಟ್ ಮಂಡಿಸುವಾಗ ವಾಕ್ ಔಟ್ ಮಾಡಿದ ನಿದರ್ಶನ ಇಲ್ಲ. ಬಜೆಟ್ ಓದಲು ಪ್ರಾರಂಭ ಮಾಡಿದ ಕೂಡಲೇ ಸುನೀಲ್ ಕುಮಾರ್ ಅವರು ಏನಿಲ್ಲ ಏನಿಲ್ಲ ಎಂದು ಘೋಷಣೆ ಕೂಗುತ್ತಿದ್ದರು. ಬಿಜೆಪಿಗೆ ಸಂಸದೀಯ, ಪ್ರಜಾಪ್ರಭುತ್ವ ಹಾಗೂ ಸಂವಿಧಾನಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ. ಅವರ ತಲೆ ತುಂಬ ರಾಜಕೀಯ ಮಂಜು ತುಂಬಿದೆ. ಕಾಮಾಲೆ ರೋಗಿಗಳಿಗೆ ಕಂಡಿದ್ದೆಲ್ಲ ಹಳದಿಯಂತೆ ಆಗಿದೆ. ರಾಜಕೀಯ ಹೇಳಿಕೆ ಬೇಡ ಎನ್ನುವುದಿಲ್ಲ. ಆದರೆ ಟೀಕೆಗಳು ಆರೋಗ್ಯಕರವಾಗಿರಬೇಕು. ಟೀಕೆ ಮಾಡುವ ಸಲುವಾಗಿಯೇ ಟೀಕೆ ಮಾಡುತ್ತಾರೆ. ಪ್ಲೇಕಾರ್ಡ್ ಹಿಡಿದಿದ್ದರು. ಬಜೆಟ್ ಕೇಳಬಾರದು ಎಂದು ಯೋಚಿಸಿಕೊಂಡೇ ಬಂದಿದ್ದರು. ನಾನು ವಸ್ತುಸ್ಥಿತಿಯನ್ನು ಹೇಳಿದರೆ ಅವರಿಗೆ ಅದು ನುಂಗಲಾರದ ತುತ್ತು. ಸತ್ಯ ಹೇಳಿದರೆ ತಡೆದುಕೊಳ್ಳಲು ಆಗುವುದಿಲ್ಲ ಎಂದು ಸಿದ್ದರಾಮಯ್ಯ ಅವರು‌ ಆಕ್ಷೇಪಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Budget 2024: ದಿಕ್ಕು-ದೆಸೆ ಇಲ್ಲದ ಸಾಲದ ಹೊರೆಯ ಬಜೆಟ್: ಸಚಿವ ಪ್ರಲ್ಹಾದ್‌ ಜೋಶಿ

Karnataka Budget 2024: ರಾಜ್ಯ ಬಜೆಟ್‌ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಭಾಷಣದಂತೆ ಇತ್ತು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಟೀಕಿಸಿದ್ದಾರೆ.

VISTARANEWS.COM


on

Union Minister Pralhad Joshi reacts to state budget
Koo

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ಯಾವುದೇ ದಿಕ್ಕು-ದಿಸೆ ಇಲ್ಲದ ಒಂದು ದಾಖಲೆ ಪಟ್ಟಿಯಂತಿದೆ. 3.71 ಲಕ್ಷ ಕೋಟಿ ಬೃಹತ್ ಗಾತ್ರದ ಹೆಗ್ಗಳಿಕೆ ಬಿಟ್ಟರೆ, ಇದು ರಾಜ್ಯದ ಜನರ ಕಲ್ಯಾಣ ಮತ್ತು ಆರ್ಥಿಕ ಪ್ರಗತಿಗೆ ಪೂರಕವಾಗಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

ರಾಜ್ಯ ಬಜೆಟ್‌ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಈ ಬಜೆಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭಾಷಣದಂತೆ ಇತ್ತು. ಗ್ಯಾರಂಟಿಗಳಿಗೆ ವರ್ಷವಿಡೀ ಹೇಗೆ ಹಣ ಕ್ರೋಡೀಕರಣ ಎಂಬ ಅಂಶವಿದೆಯೇ ಹೊರತು ಮುಂದಿನ ವರ್ಷಗಳಲ್ಲಿ ರಾಜ್ಯವನ್ನು ಆರ್ಥಿಕ ಸಶಕ್ತಗೊಳಿಸಲು ಯಾವುದೇ ಯೋಜನೆಗಳ ಪ್ರಸ್ತಾಪವೇ ಇಲ್ಲ ಎಂದು ಹೇಳಿದ್ದಾರೆ.

ಹಿಂದಿನ ಸರ್ಕಾರದ ಪ್ರಸ್ತಾವನೆಗಳೇ ಈ ಬಜೆಟ್‌ನಲ್ಲಿವೆ ಅಷ್ಟೇ. ನೀರಾವರಿ ಯೋಜನೆಗಳಿಗೆ ಯಾವುದೇ ಹಣಕಾಸು ಪ್ರಸ್ತಾಪವಿಲ್ಲ. ಕೇಂದ್ರ ಸರ್ಕಾರದ ಅನುಮತಿ ನೇಪಹೇಳಿ ಜಾರಿಕೊಳ್ಳುವ ವ್ಯರ್ಥ ಪ್ರಯತ್ನವೇ ಸಿಎಂ ಸಿದ್ದರಾಮಯ್ಯ ಅವರ ಕಸರತ್ತು ಆಗಿದೆ ಎಂದು ಸಚಿವರು ಆರೋಪಿಸಿದ್ದಾರೆ.‌

ಇದನ್ನೂ ಓದಿ | Karnataka Budget 2024 : ಬಜೆಟ್‌ ಬಹಿಷ್ಕಾರ ಇತಿಹಾಸದಲ್ಲೇ ಮೊದಲಲ್ಲ! 2021ರಲ್ಲೇ ಸಿದ್ದು ಇತಿಹಾಸ ಸೃಷ್ಟಿಸಿದ್ದರು!

ಸಾಲದ ಹೊರೆಯ ಬಜೆಟ್

ಕಳೆದ ವರ್ಷಕ್ಕೆ ಹೋಲಿಸಿದರೆ ರೆವೆನ್ಯೂ ವೆಚ್ಚ 1 ಲಕ್ಷ ಕೋಟಿಗೂ ಮೀರಿದೆ. ತೆರಿಗೆದಾರರ ಮೇಲೆ ಅನಗತ್ಯ ಹೊರೆ ಹೇರಲಾಗಿದೆ. ಅಲ್ಲದೇ, ಕಳೆದ ಸರ್ಕಾರಕ್ಕಿಂತ ಶೇ.22ರಷ್ಟು ಸಾಲದ ಹೊರೆ ಇದರಲ್ಲಿದೆ. 1,05,246 ಕೋಟಿಗೂ ಅಧಿಕ ಸಾಲ ಈ ಬಜೆಟ್ ಒಳಗೊಂಡಿದೆ. ಹಾಗಾಗಿ ಇದೊಂದು ಸಾಲದ ಹೊರೆಯ ಬಜೆಟ್ ಆಗಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

Continue Reading

ಕರ್ನಾಟಕ

Karnataka Budget 2024: ಸಾಲ ಶೂಲದ ಹರಿಕಾರ ಸಾಲರಾಮಯ್ಯ; ರಾಜ್ಯ ಬಜೆಟ್‌ ಬಗ್ಗೆ ಬಿಜೆಪಿ ಟೀಕೆ

Karnataka Budget 2024: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ 1,93,246 ಕೋಟಿ ರೂ. ಸಾಲ‌ ಮಾಡಿದೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ 28 ಸಾವಿರ ರೂ. ಸಾಲ ಹೇರಿದ್ದಾರೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.

VISTARANEWS.COM


on

Karnataka Budget 2024 new 1
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ ಬಗ್ಗೆ ಸಾರ್ವಜನಿಕರು ಮತ್ತು ರಾಜಕೀಯ ನಾಯಕರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಇನ್ನು ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿ, ಸಾಲ ಶೂಲದ ಹರಿಕಾರ ಸಾಲರಾಮಯ್ಯ, ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥ ಶಾಸ್ತ್ರಜ್ಞ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ, ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ 1,93,246 ಕೋಟಿ ರೂ. ಸಾಲ‌ ಮಾಡಿದ್ದಾರೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ 28 ಸಾವಿರ ರೂ. ಸಾಲ ಹೇರಿದ್ದಾರೆ. ಸಾಲರಾಮಯ್ಯನವರು ಒಂದು ಸಮುದಾಯದ ತುಷ್ಟೀಕರಣಕ್ಕಾಗಿ ಲಕ್ಷಾಂತರ ಕೋಟಿ ಸಾಲ ಮಾಡಿ ಕನ್ನಡಿಗರನ್ನು ಸಂಪೂರ್ಣವಾಗಿ ಮುಳುಗಿಸಿದ್ದಾರೆ. ಸಾಲದ ಸುಳಿಗೆ ಕರುನಾಡು ಸಿಲುಕಿದೆ. ಕರ್ನಾಟಕ ಅಭಿವೃದ್ಧಿಯಲ್ಲಿ 20 ವರ್ಷ ಹಿಂದಕ್ಕೆ ಬಿದ್ದಿದೆ. ಆರ್ಥಿಕತೆ ಹಳ್ಳ ಹಿಡಿದಿದೆ ಎಂದು ಕಿಡಿಕಾರಿದೆ.

ಇದನ್ನೂ ಓದಿ | Karnataka Budget Session 2024: ಬಿಜೆಪಿಯವರ ತಲೆಯಲ್ಲಿ ಏನೂ ಇಲ್ಲ; ಬಡವರ ಕೊಳ್ಳುವ ಶಕ್ತಿ ಹೆಚ್ಚಿಸುವ ಬಜೆಟ್‌ ಎಂದ ಸಿದ್ದರಾಮಯ್ಯ

ನಯಾಪೈಸೆ ಪ್ರಯೋಜನ ಇಲ್ಲದ ಬಜೆಟ್‌, ಉತ್ತರಕ್ಕೆ ಒಂದು ರೂ. ಕೂಡಾ ಇಲ್ಲ; ಬಿ.ವೈ ವಿಜಯೇಂದ್ರ

Karnataka-Budget-2024-BY-Vijayendra

ಬೆಂಗಳೂರು: ಮುಖ್ಯಮಂತ್ರಿಗಳು ಮತ್ತು ರಾಜ್ಯದ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು (CM Siddaramaiah) ಇಂದು ಮಂಡಿಸಿದ ರಾಜ್ಯ ಬಜೆಟ್‌ (Karnataka Budget 2024) ಬಜೆಟ್ ರೈತವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಶೂನ್ಯ ಪ್ರಗತಿಯ ಬಜೆಟ್ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ವಿಶ್ಲೇಷಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗುವ ಬಜೆಟ್ ಇದು ಎಂದು ಟೀಕಿಸಿದರು.

ಯುವಕರಿಗೆ ಯಾವುದೇ ಒಂದು ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಘೋಷಣೆ ಮಾಡಿಲ್ಲ. ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮತ್ತು ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳಲು ಇವತ್ತು ಸನ್ಮಾನ್ಯ ಸಿದ್ದರಾಮಯ್ಯನವರು ತಮ್ಮ ಸಮಯ ವ್ಯರ್ಥ ಮಾಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Karnataka Budget 2024 : ಸಿದ್ದು ಬಜೆಟ್‌ನ ಘೋಷಣೆಗಳ ಸಂಪೂರ್ಣ ಪಟ್ಟಿ; ಇದನ್ನು ಓದಿದ್ರೆ ಸಾಕು!

ಈ ಬಜೆಟ್‍ನ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ ಎಂದು ಆಕ್ಷೇಪಿಸಿದ ಅವರು, ಮೊನ್ನೆ ದೆಹಲಿ ಚಲೋ ಮಾಡಿದ್ದರು. ದೆಹಲಿಯಲ್ಲಿ ರಾಜ್ಯ ಸರಕಾರದ ಗೌರವವನ್ನು ಹರಾಜು ಹಾಕುವ ಕೆಲಸ ಆಗಿತ್ತು. ಇವತ್ತು ಕೂಡ ಮುಖ್ಯಮಂತ್ರಿಗಳು ತಮ್ಮ ಬಜೆಟ್‍ನಲ್ಲಿ ಕೇಂದ್ರ ಸರಕಾರವನ್ನು ದೂರುವ ಕೆಲಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ರೂಪಾಯಿ ಇಲ್ಲ..

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ರೂಪಾಯಿಯನ್ನೂ ಕೊಡದ ಬಜೆಟ್ ಇದಾಗಿದೆ. ಸಂಕಷ್ಟದಲ್ಲಿರುವ ರೈತರು ಬಜೆಟ್ ಮೂಲಕ ಪರಿಹಾರದ ನಿರೀಕ್ಷೆಯಲ್ಲಿದ್ದರು. ಇದರಡಿ ಮಹಿಳೆಯರಿಗೂ ಅನುಕೂಲ ಆಗುವುದಿಲ್ಲ. ಇವರು ತಮ್ಮ ಪ್ರಣಾಳಿಕೆಯಲ್ಲಿ ನೇಕಾರರ ಬಗ್ಗೆ ಮಾತನಾಡಿದ್ದರು. ನೇಕಾರರ ಪರವಾಗಿ ಯಾವುದೇ ಒಂದು ಯೋಜನೆಯನ್ನು ಘೋಷಣೆ ಮಾಡಿಲ್ಲ. ಯೋಜನೆ ಘೋಷಿಸುವುದು ಇರಲಿ; ಆ ನೇಕಾರರ ಹೆಸರನ್ನೂ ಉಲ್ಲೇಖಿಸಿಲ್ಲ ಎಂದು ವಿಜಯೇಂದ್ರ ಅವರು ಟೀಕಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳವಿಲ್ಲ!

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳದ ಭರವಸೆ ನೀಡಿದ್ದರು. ಅದರ ಬಗ್ಗೆಯೂ ಉಲ್ಲೇಖ ಮಾಡಿಲ್ಲ. ‘ನುಡಿದಂತೆ ನಡೆದ ಸರಕಾರ’ ಎಂದು ಕೊಚ್ಚಿಕೊಳ್ಳುತ್ತಾರೆ. ‘ನುಡಿದಂತೆ ನಡೆದ ಸರಕಾರ’ ಎಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದು, ರಾಜ್ಯದ ರೈತರು, ಬಡವರು, ದೀನದಲಿತರು, ನೇಕಾರರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿ ಎಲ್ಲ ವರ್ಗಕ್ಕೂ ನಿರಾಸೆ ಮೂಡಿಸಿದ ಬಜೆಟ್ ಇದು ಎಂದು ತಿಳಿಸಿದರು.

ಕೃಷಿ ಬೆಳೆ ಸಾಲ ಮನ್ನಾದ ಉಲ್ಲೇಖವೇ ಇಲ್ಲ

ಬರಗಾಲದ ಸಂದರ್ಭದಲ್ಲೂ ಕೃಷಿ ಮತ್ತು ಬೆಳೆ ಸಾಲದ ಮನ್ನಾ ಕುರಿತು ಉಲ್ಲೇಖ ಮಾಡಿಲ್ಲ. ಸರಕಾರಿ ನೌಕರರ ಮೂಗಿಗೆ ತುಪ್ಪ ಹಚ್ಚುವ ಕೆಲಸವನ್ನು ಇವರು ಮಾಡಿದ್ದಾರೆ. ಬರಗಾಲದ ಸಂದರ್ಭದಲ್ಲಿ ಯಾವುದೇ ರೀತಿಯ ಅನುಕೂಲ ಆಗದ ಬಜೆಟ್, ನಿಶ್ಚಿತವಾಗಿ ಇದು ಕರಾಳ ದಿನ ಎಂದರೂ ತಪ್ಪಾಗಲಾರದು ಎಂದು ನುಡಿದರು.

ಇದನ್ನೂ ಓದಿ | Karnataka Budget 2024: ರಾಜ್ಯ ಬಜೆಟ್‌ನಲ್ಲಿ ಯಾವ ಜಿಲ್ಲೆಗೆ ಏನು ಸಿಕ್ಕಿದೆ?; ಇಲ್ಲಿದೆ ಮಾಹಿತಿ

ಸಿದ್ದರಾಮಯ್ಯ ಅವರಿಂದ ಇಂಥ ಬಜೆಟ್‌ ನಿರೀಕ್ಷೆ ಮಾಡಿರಲಿಲ್ಲ

15ನೇ ಬಜೆಟ್ ಮಂಡಿಸುತ್ತಿರುವ ಒಬ್ಬ ಅನುಭವಿ ಮುಖ್ಯಮಂತ್ರಿ ಈ ರೀತಿ ಬಜೆಟ್ ಮಂಡಿಸಬಹುದೆಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ನಿಜವಾಗಲೂ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಒಂದು ದುರಂತವೇ ಸರಿ ಎಂದ ಅವರು, ರೈತರನ್ನೂ ಕಡೆಗಣಿಸಿದ್ದಾರೆ; ಮಹಿಳೆಯರನ್ನೂ ಕಡೆಗಣಿಸಿದ್ದಾರೆ; ನೇಕಾರರನ್ನೂ ಕಡೆಗಣಿಸಿದ್ದಾರೆ, ಯುವಕರನ್ನೂ ಕಡೆಗಣಿಸಿದ್ದಾರೆ; ಉತ್ತರ ಕರ್ನಾಟಕದ ಅಭಿವೃದ್ಧಿಯನ್ನೂ ಕಡೆಗಣಿಸಿದ ಸರಕಾರ ಬಹುಶಃ ರಾಜ್ಯದ ಜನರ ಪಾಲಿಗೆ ಬದುಕಿದ್ದೂ ಸತ್ತಂತೆ ಎಂದು ಹೇಳಿದರು.

Continue Reading

ಕರ್ನಾಟಕ ಬಜೆಟ್ 2024

Karnataka Budget 2024 : ಸಾಲ ಮಾಡಿ ತುಪ್ಪ ತಂದ ಸಿದ್ದರಾಮಯ್ಯ: ಗ್ಯಾರಂಟಿಗೆ ಮೋಸವಿಲ್ಲ!

Karnataka Budget 2024 : ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ ಸರ್ವಸ್ಪರ್ಶಿ. ಆದರೆ, ಅದು ಯಾವುದನ್ನೂ ತಟ್ಟಿದಂತಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಸಾಕಷ್ಟು ಹಣವನ್ನು ಇಟ್ಟಿರುವ ಸಿದ್ದರಾಮಯ್ಯ ತಮ್ಮ ಬಜೆಟ್‌ ಗಾಗಿ ಒಂದು ಲಕ್ಷಕ್ಕಿಂತಲೂ ಹೆಚ್ಚು ಹಣವನ್ನು ಸಾಲದ ಮೂಲಕ ಹೊಂದಾಣಿಕೆ ಮಾಡಬೇಕಾಗಿದೆ.

VISTARANEWS.COM


on

Karnataka Budget 2024 Siddaramaiah
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಸಾಲ ಮಾಡಿ ತುಪ್ಪ ತಂದಿದ್ದಾರೆ. ರಾಜ್ಯದ ಜನತೆಗೆ ಅದನ್ನು ಹಿತವಾಗಿ ಹಂಚಿದ್ದಾರೆ. ಹೊಸತೇನೂ ಇಲ್ಲವಾದರೂ ಹೊತ್ತಿನ ಊಟಕ್ಕೆ ಸಾಕಾಗುವಂತೆ ಬಡಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಭಾರಿ ಜನಪ್ರಿಯ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಅಡಚಣೆ ಆಗದಂತೆ ತಾಳಮೇಳ ಕಾಯ್ದುಕೊಂಡಿದ್ದಾರೆ: ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2024-25ನೇ ಸಾಲಿನ ಬಜೆಟ್‌ನ (Karnataka Budget 2024) ಸಿಂಪಲ್‌ ವಿಮರ್ಶೆ.

ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಮಂಡಿಸಿದ ಮೊದಲ ಪೂರ್ಣ ಪ್ರಮಾಣದ ಬಜೆಟ್‌ ಇದಾಗಿದೆ. 2023ರ ಜುಲೈ 7ರಂದು ಮಂಡಿಸಿದ ಬಜೆಟ್‌ ಕೇವಲ ಎಂಟು ತಿಂಗಳಿಗೆ ಸೀಮಿತವಾಗಿತ್ತು. ಶುಕ್ರವಾರ ವಿಧಾನಸಭೆಯಲ್ಲಿ ಅವರು ಸುಮಾರು ಮೂರು ಗಂಟೆ 14 ನಿಮಿಷಗಳ ಸುದೀರ್ಘ ಕಾಲ ಬಜೆಟ್‌ ಮಂಡನೆ ಮಾಡಿದ್ದು, ಅದರಲ್ಲಿ ಎಲ್ಲ ಪ್ರಮುಖ ಕ್ಷೇತ್ರಗಳಿಗೆ ಬಿಡಿ ಬಿಡಿಯಾಗಿ ಅನುದಾನಗಳನ್ನು ಪ್ರಕಟಿಸಿದ್ದಾರೆ.

2024-25ನೇ ಸಾಲಿನ ಕರ್ನಾಟಕ ರಾಜ್ಯ ‌ ಆಯವ್ಯಯದ (Karnataka Budget 2024) ಒಟ್ಟು ಗಾತ್ರವು (Budget layout) 3,71,383 ಕೋಟಿ ರೂ. ಅಂದರೆ 2023-24ನೇ ಸಾಲಿಗಿಂತ 44 ಸಾವಿರ ಕೋಟಿ ರೂ. ಹೆಚ್ಚು. ಇಷ್ಟು ದೊಡ್ಡ ಗಾತ್ರದ ಬಜೆಟ್‌ ಮಂಡನೆಗಾಗಿ ಸಿದ್ದರಾಮಯ್ಯ ಅವರು 1,05,246 ಕೋಟಿ ರೂ. ಸಾಲ ಮಾಡಬೇಕಾಗಿದೆ (Loan Responsibility). ಹಾಗಂತ ಇದು ವಿತ್ತೀಯ ಶಿಸ್ತಿನ ಒಳಗೇ ಇರುವ ಪ್ರಮಾಣವಾಗಿರುವುದರಿಂದ ರಾಜ್ಯಕ್ಕೆ ಆರ್ಥಿಕ ಅಪಾಯವೇನೂ ಎದುರಾಗುವ ಸ್ಥಿತಿಯಲ್ಲಿ ಇಲ್ಲ. ಆದರೆ, ಈ ಬಜೆಟ್‌ನ ಅಂತ್ಯದಲ್ಲಿ ರಾಜ್ಯಕ್ಕೆ ಒಟ್ಟು 6.65 ಲಕ್ಷ ಕೋಟಿ ರೂ. ಸಾಲದ ಹೊರೆ ಎದುರಾಗಿದೆ. ಅಂದರೆ ಪ್ರತಿಯೊಬ್ಬ ನಾಗರಿಕನ ತಲೆಯ ಮೇಲೆ ತಲಾ ಒಂದು ಲಕ್ಷ ರೂ ಸಾಲದ ಹೊರೆ ಇದೆ.

ಏನಿಲ್ಲ ಏನಿಲ್ಲ ಎಂದ ಬಿಜೆಪಿ ಬಹಿಷ್ಕಾರ ನಡುವೆಯೇ ಬಜೆಟ್‌ ಮಂಡನೆ

ಈ ಬಾರಿಯ ಬಜೆಟ್‌ ಮಂಡನೆಗೆ ಪ್ರತಿಪಕ್ಷವಾದ ಬಿಜೆಪಿ ಶಾಸಕರು ʻಏನಿಲ್ಲ ಏನಿಲ್ಲʼ ಎಂಬ ಜನಪ್ರಿಯ ಹಾಡನ್ನು ಬಳಸಿಕೊಂಡು ಪ್ಲೇಕಾರ್ಡ್‌ಗಳನ್ನು ಹಿಡಿದುಕೊಂಡು ಬಂದಿದ್ದರು. ಬಜೆಟ್‌ ಮಂಡನೆಯ ಮೇಲೆ ಇವುಗಳನ್ನು ಪ್ರದರ್ಶಿಸಿ ಕಾಂಗ್ರೆಸ್‌ ಸರ್ಕಾರದ ಬಜೆಟ್‌ನಲ್ಲಿ ಏನೇನೂ ಇಲ್ಲ ಎಂದು ಹೇಳಿ ಸಭಾತ್ಯಾಗ ಮಾಡಿದರು. ಬಳಿಕ ಆಡಳಿತ ಪಕ್ಷದ ಸದಸ್ಯರ ಉಪಸ್ಥಿತಿಯಲ್ಲಿ ಸಿದ್ದರಾಮಯ್ಯ ಸುದೀರ್ಘ ಬಜೆಟ್‌ ಮಂಡಿಸಿದರು.

ಇದನ್ನೂ ಓದಿ: Karnataka Budget Session 2024: ಬಿಜೆಪಿಯಿಂದ ಬಜೆಟ್‌ ಬಾಯ್ಕಾಟ್‌; ಇತಿಹಾಸದಲ್ಲೇ ಮೊದಲು ಎಂದ ಸಿದ್ದರಾಮಯ್ಯ

2024-25ನೇ ಸಾಲಿನಲ್ಲಿ ಒಟ್ಟು 2,90,531 ಕೋಟಿ ರೂ.ಗಳ ರಾಜಸ್ವ ವೆಚ್ಚ, 55,877 ಕೋಟಿ ರೂ.ಗಳ ಬಂಡವಾಳ ವೆಚ್ಚ ಹಾಗೂ ಸಾಲದ ಮರುಪಾವತಿ 24,974 ಕೋಟಿ ರೂ.ಗಳ ವೆಚ್ಚವನ್ನು ಒಳಗೊಂಡು, ಒಟ್ಟು ವೆಚ್ಚವು 3,71,383 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ. ಎಲ್ಲ ವಿತ್ತೀಯ ಮೂಲಗಳಿಂದು ಬರುವ ಒಟ್ಟು ಆದಾಯವು 2.66 ಲಕ್ಷ ಕೋಟಿ ಆಗುವುದರಿಂದ ಉಳಿದ ಮೊತ್ತವನ್ನು ಸಾಲವಾಗಿ ತರಬೇಕಾಗಿದೆ.

ಗ್ಯಾರಂಟಿ ಯೋಜನೆಗಳಿಗೆ 52,009 ಕೋಟಿ ರೂ. ಅನುದಾನ

ಒಟ್ಟಾರೆಯಾಗಿ ಐದೂ ಗ್ಯಾರಂಟಿಗಳಿಗೆ ಸೇರಿ 52,009 ಕೋಟಿ ರೂಪಾಯಿಯನ್ನು ಮೀಸಲಿಟ್ಟಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಐದೂ ಗ್ಯಾರಂಟಿ ಯೋಜನೆಯಲ್ಲಿ ಸಿಂಹಪಾಲು ಗೃಹ ಲಕ್ಷ್ಮಿ ಯೋಜನೆಗೆ (28,608 ಕೋಟಿ ರೂ) ಖರ್ಚಾಗುತ್ತಿದ್ದರೆ, ಅತಿ ಕಡಿಮೆ ಅನುದಾನ (650 ಕೋಟಿ ರೂ.) ಯುವ ನಿಧಿಗೆ ಮೀಸಲಿಡಲಾಗಿದೆ.

Karnataka Budget Session 2024 Rs 52009 crore earmarked for 5 guarantee scheme

ಯಾವ ಗ್ಯಾರಂಟಿಗೆ ಎಷ್ಟು?

  1. ಗೃಹ ಜ್ಯೋತಿ: 9,657 ಕೋಟಿ ರೂ.
    ಅನ್ನ ಭಾಗ್ಯ: 8,079 ಕೋಟಿ ರೂ.
    ಶಕ್ತಿ: 5,015 ಕೋಟಿ ರೂ.
    ಯುವನಿಧಿ: 650 ಕೋಟಿ ರೂ.
    ಗೃಹ ಲಕ್ಷ್ಮಿ :28,608 ಕೋಟಿ ರೂ.
    ಒಟ್ಟು: 52,009 ಕೋಟಿ ರೂ.

ವಿವಿಧ ಇಲಾಖೆಗಳಿಗೆ ಅನುದಾನ ಹಂಚಿಕೆ ಹೇಗಿದೆ?

Karnataka Budget 2024 Yavudakke Estu

ಶಿಕ್ಷಣ- 44422 ಕೋಟಿ ರೂ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ- 34406 ಕೋಟಿ ರೂ.
ಇಂಧನ- 23159 ಕೋಟಿ ರೂ.
ಗ್ರಾಮೀಣಾಭಿವೃದ್ಧಿ- 21160 ಕೋಟಿ ರೂ.
ಒಳಾಡಳಿತ ಸಾರಿಗೆ- 19777 ಕೋಟಿ ರೂ.
ನೀರಾವರಿ- 19179 ಕೋಟಿ ರೂ.
ನಗರಾಭಿವೃದ್ಧಿ – 18155 ಕೋಟಿ ರೂ.
ಕಂದಾಯ- 16170 ಕೋಟಿ ರೂ.
ಆರೋಗ್ಯ – 15145 ಕೋಟಿ ರೂ.
ಸಮಾಜ ಕಲ್ಯಾಣ- 13334 ಕೋಟಿ ರೂ.
ಲೋಕೋಪಯೋಗಿ- 10424 ಕೋಟಿ ರೂ.
ಆಹಾರ ಮತ್ತು ನಾಗರಿಕ ಪೂರೈಕೆ- 9963 ಕೋಟಿ ರೂ.
ಕೃಷಿ ತೋಟಗಾರಿಕೆ- 6688 ಕೋಟಿ ರೂ.
ಪಶುಸಂಗೋಪನೆ- 3307 ಕೋಟಿ ರೂ.
ಇತರೆ- 124593 ಕೋಟಿ ರೂಪಾಯಿ

ಬಜೆಟ್‌ ಆರ್ಥಿಕ ನೋಟ ಹೀಗಿದೆ: ಯಾವುದಕ್ಕೆ ಎಷ್ಟು?

  • ಆಯವ್ಯಯ ಗಾತ್ರ (ಸಂಚಿತ ನಿಧಿ): 3,71,383 ಕೋಟಿ ರೂ.
  • ಒಟ್ಟು ಸ್ವೀಕೃತಿ: 3,68,674 ಕೋಟಿ ರೂ
  • ರಾಜಸ್ವ ಸ್ವೀಕೃತಿ: 2,63,178 ಕೋಟಿ
  • ಸಾರ್ವಜನಿಕ ಋಣ: 1,05,246 ಕೋಟ ರೂ. ಸೇರಿದಂತೆ ಬಂಡವಾಳ ಸ್ವೀಕೃತಿ 38 ಕೋಟಿ ರೂ.
  • ಒಟ್ಟು ವೆಚ್ಚ: 3,71,383 ಕೋಟಿ ರೂ.
  • ರಾಜಸ್ವ ವೆಚ್ಚ: 2,90,531 ಕೋಟ ರೂ.
  • ಬಂಡವಾಳ ವೆಚ್ಚ: 55,877 ಕೋಟ ರೂ.
  • ಸಾಲ ಮರುಪಾವತಿ: 24,794 ಕೋಟಿ ರೂ.
  • ಎಸ್‌.ಸಿ.ಎಸ್‌.ಪಿ. ಹಾಗೂ ಟಿ.ಎಸ್‌.ಪಿ. ಅಡಿಯಲ್ಲಿ ಆಯವ್ಯಯದಲ್ಲಿ ಒದಗಿಸಿದ ಅನುದಾನ 39,121 ಕೋಟಿ ರೂ.
  • ಎಸ್‌.ಸಿ.ಎಸ್‌.ಪಿ. ಅಡಿ 27,674 ಕೋಟಿ ರೂ. ಹಾಗೂ ಟಿ.ಎಸ್‌.ಪಿ. ಅಡಿ 11,447 ಕೋಟಿ ರೂ.

ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಪ್ರಕಟಿಸಿದ ಪ್ರಮುಖ ಕೊಡುಗೆಗಳ ಪಟ್ಟಿ ಇಲ್ಲಿದೆ

  1. ವಿವಿಧ ರೈತಪರ ಯೋಜನೆ ಒಗ್ಗೂಡಿಸಿ ಸಮಗ್ರ ಕೃಷಿ ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ
  • ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ, ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ.
  • ತೋಟಗಾರಿಕೆ ಕುರಿತು ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ, ಬೇಸಾಯ ಪರಿಕರಗಳು ಮತ್ತು ಉತ್ಪನ್ನಗಳನ್ನು ಒಂದೇ ಸೂರಿನಡಿ ಒದಗಿಸಲು ಆಯ್ದ ಜಿಲ್ಲೆಗಳಲ್ಲಿ ಕಿಸಾನ್‌ ಮಾಲ್‌ ಸ್ಥಾಪನೆ.
  • ಮಧ್ಯಮಾವಧಿ ಮತ್ತು ದೀರ್ಫಾವಧಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಹಿನ್ನೆಲೆಯಲ್ಲಿ ಡಿಸಿಸಿ ಮತ್ತು ಪಿಕಾರ್ಡ್‌ ಬ್ಯಾಂಕುಗಳಿಗೆ 450 ಕೋಟಿ ರೂ. ಅನುದಾನ. ಟಿ.ಎ.ಪಿ.ಸಿ.ಎಂ.ಎಸ್‌.ಗಳಿಗೆ ಗೋದಾಮು ನಿರ್ಮಾಣಕ್ಕೆ ಶೇ. 6ರ ಬಡ್ಡಿ ಸಹಾಯಧನ
  • ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಸುಮಾರು 75,000 ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸುವ ಗುರಿ. ಘೋಷಣೆಯಂತೆ 5300 ಕೋಟಿ ರೂ. ಬಿಡುಗಡೆಗೆ ಕೇಂದ್ರಕ್ಕೆ ಒತ್ತಾಯ.
  • 2000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆ
  • ಏಳು ಜಿಲ್ಲೆಗಳಲ್ಲಿ 187 ಕೋಟ ರೂ. ವೆಚ್ಚದಲ್ಲಿ ಕ್ರಿಟಿಕಲ್‌ ಕೇರ್‌ ಬ್ಲಾಕ್‌ ಕಟ್ಟಡ ನಿರ್ಮಾಣ
  • ಅ೦ಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್‌ ಘೋನ್‌ ಒದಗಿಸಲು ಕ್ರಮ.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿ೦ದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರೂ. ಅನುದಾನ.
  • ಪರಿಶಿಷ್ಟ ಜಾತಿಯ 5,000 ಯುವಕ/ಯುವತಿಯರಿಗೆ ಡ್ರೋನ್‌ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ.
  • ಹಿಂದುಳಿದ ವರ್ಗಗಳ 150 ಮೆಟ್ರಿಕ್‌ ನಂತರದ ಹೊಸ ವಸತಿನಿಲಯಗಳ ಪ್ರಾರಂಭ; 174 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 200 ಕೋಟ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಕ್ರಮ.
  • 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, 100 ಸಂಖ್ಯಾಬಲವುಳ್ಳ 100 ಮೆಟ್ರಿಕ್‌ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳು, 100 ಹೊಸ ಮೌಲಾನಾ ಆಜಾದ್‌ ಶಾಲೆಗಳ ಪ್ರಾರಂಭ ಹಾಗೂ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣ ಪ್ರಾರಂಭ.
  • ವಸತಿ: 2024-25 ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ
  • ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ.
  • ಬೆ೦ಗಳೂರು ಗ್ರಾಮಾ೦ತರ ಜಿಲ್ಲೆಯ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಹಾಗೂ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ.
  • ಯಾವುದೇ ಆದಾಯವಿಲ್ಲದ 34,165 “ಸಿ’ ವರ್ಗದ ಐತಿಹಾಸಿಕ ದೇವಾಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ Vision Group ರಚನೆ.
  • 29,523 “ಸಿ’ ವರ್ಗದ ದೇವಾಲಯಗಳ ಅರ್ಚಕರ ಬ್ಯಾಂಕ್‌ ಖಾತೆಗೆ ತಸ್ತಿಕ್‌ ಮೊತ್ತ ಜಮೆ ಮಾಡಲು ಕ್ರಮ.
  • ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ IML ಹಾಗೂ ಬಿಯರ್‌ ಸ್ಲಾಬ್‌ಗಳ ಪರಿಷ್ಕರಣೆ.
  • ಇದನ್ನೂ ಓದಿ: Karnataka Budget 2024 : ಸಿದ್ದು ಬಜೆಟ್‌ನ ಘೋಷಣೆಗಳ ಸಂಪೂರ್ಣ ಪಟ್ಟಿ; ಇದನ್ನು ಓದಿದ್ರೆ ಸಾಕು!
Continue Reading

ಕರ್ನಾಟಕ ಬಜೆಟ್ 2024

Karnataka Budget Session 2024: ಆಸ್ತಿ ತೆರಿಗೆ ವಸೂಲಿ 3ಡಿ ಡ್ರೋನ್‌ ಐಡಿಯಾ! ಮಹಿಳಾ ಸ್ವಸಹಾಯ ಗುಂಪಿಗೂ ಕೆಲಸ

Karnataka Budget Session 2024: ಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಗಟ್ಟಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದನ್ನು ಇನ್ನಷ್ಟು ಸರಳೀಕರಣಗೊಳಿಸಲು, ಕಾವೇರಿ ಮತ್ತು ಇ-ಆಸ್ತಿ ತಂತ್ರಾಂಶಗಳ ಸಂಯೋಜನೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

Karnataka Budget Session 2024 3D drone idea to collect property tax Work for women self help groups
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ 15ನೇ ಬಜೆಟ್‌ (Karnataka Budget Session 2024) ಅನ್ನು ಮಂಡಿಸಿದ್ದಾರೆ. ಈ ವೇಳೆ ಗ್ಯಾರಂಟಿ ಯೋಜನೆಗೆ ಅನುದಾನದ ಹೊಂದಾಣಿಕೆಗೆ ಪ್ರಯತ್ನ ಪಟ್ಟಿರುವುದು ಎದ್ದು ಕಾಣುತ್ತದೆ. ತೆರಿಗೆ ಸಂಗ್ರಹದ ಮೇಲೆ ಕಣ್ಣಿಟ್ಟಿರುವ ಸಿಎಂ ಸಿದ್ದರಾಮಯ್ಯ, ಎಲ್ಲಿ ಸಾಧ್ಯವಿದೆಯೋ ಆ ಎಲ್ಲ ಕಡೆಗಳಿಂದ ತೆರಿಗೆಯನ್ನು ಸಂಗ್ರಹಿಸುವ ಗುರಿಯನ್ನು ಹಾಕಿಕೊಂಡಿದ್ದಾರೆ. ಈಗ ಆಸ್ತಿ ತೆರಿಗೆ ಮತ್ತು ಇನ್ನಿತರೆ ಶುಲ್ಕಗಳನ್ನು ಪರಿಣಾಮಕಾರಿಯಾಗಿ ವಸೂಲಿ ಮಾಡಲು ಹಾಗೂ ತೆರಿಗೆ ಸೋರಿಕೆಯನ್ನು ತಡೆಗಟ್ಟಲು ಮುಂದಾಗಿದ್ದು, 3ಡಿ ಡ್ರೋನ್‌ ತಂತ್ರಜ್ಞಾನ ಬಳಕೆಗೆ ಮುಂದಾಗಲಾಗಿದೆ. ಅಲ್ಲದೆ, ತೆರಿಗೆ ಹಣ ವಸೂಲಿಗೆ ಮಹಿಳಾ ಸ್ವ-ಸಹಾಯ ಗುಂಪುಗಳ ಸೇವೆಯನ್ನು ಬಳಸಿಕೊಳ್ಳಲೂ ತೀರ್ಮಾನ ಮಾಡಲಾಗಿದೆ.

ಬಜೆಟ್‌ ಭಾಷಣದ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಗಟ್ಟಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದನ್ನು ಇನ್ನಷ್ಟು ಸರಳೀಕರಣಗೊಳಿಸಲು, ಕಾವೇರಿ ಮತ್ತು ಇ-ಆಸ್ತಿ ತಂತ್ರಾಂಶಗಳ ಸಂಯೋಜನೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಲಾಗುವುದು. ಆಸ್ತಿ ತೆರಿಗೆ ಮತ್ತು ಇನ್ನಿತರೆ ಶುಲ್ಕಗಳನ್ನು ಪರಿಣಾಮಕಾರಿಯಾಗಿ ವಸೂಲಿ ಮಾಡಲು ಹಾಗೂ ತೆರಿಗೆ ಸೋರಿಕೆಯನ್ನು ತಡೆಗಟ್ಟಲು 3ಡಿ ಡ್ರೋನ್‌ ತಂತ್ರಜ್ಞಾನವನ್ನು ಬಳಸಿಕೊಂಡು ಸ್ವತ್ತುಗಳ ಮ್ಯಾಪಿಂಗ್‌ ಮತ್ತು ಮರು ಮೌಲ್ಯಮಾಪನವನ್ನು ಕೈಗೊಳ್ಳಲಾಗುವುದು. ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕವನ್ನು ಸಮರ್ಪಕವಾಗಿ ವಸೂಲು ಮಾಡಲು, ಸ್ಥಳೀಯ ಮಹಿಳಾ ಸ್ವ-ಸಹಾಯ ಗುಂಪುಗಳ ಸೇವೆಯನ್ನು ಪಡೆಯಲಾಗುವುದು ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಹೇಳಿದ ಇತರೆ ಕಾರ್ಯಕ್ರಮಗಳಿವು

  • ನೇರಪಾವತಿಯಡಿ ಕೆಲಸ ನಿರ್ವಹಿಸುತ್ತಿರುವ 24,005 ಪೌರಕಾರ್ಮಿಕರನ್ನು ಈಗಾಗಲೇ ಕಾಯಂಗೊಳಿಸಲು ಸರ್ಕಾರದಿಂದ ಅನುಮೋದನೆ ನೀಡಲಾಗಿದೆ. ನೇರಪಾವತಿಯಡಿಯಲ್ಲಿ ಬಾಕಿ ಉಳಿದಿರುವ ಪೌರಕಾರ್ಮಿಕರಿಗೂ ಹಂತ ಹಂತವಾಗಿ ಕಾಯಂಗೊಳಿಸಲು ಕ್ರಮವಹಿಸಲಾಗುವುದು.
  • ಸಮರ್ಪಕ ಹಾಗೂ ಯೋಜಿತ ನಗರೀಕರಣಕ್ಕಾಗಿ ಒಂದು ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಎಲ್ಲ ಸ್ಥಳೀಯ ಯೋಜನಾ ಪ್ರಾಧಿಕಾರಗಳನ್ನು ನಗರಾಭಿವೃದ್ಧಿ ಪ್ರಾಧಿಕಾರಗಳನ್ನಾಗಿ ಉನ್ನತೀಕರಿಸಲು ಕ್ರಮ ಕೈಗೊಳ್ಳಲಾಗುವುದು.
  • ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಡೆಯುವ ಸಭೆಗಳ ಕಾರ್ಯಕಲಾಪಗಳನ್ನು ನೇರ ಪ್ರಸಾರ ಮಾಡಲಾಗುವುದು.
  • ಮೈಸೂರಿನ ಪ್ರಖ್ಯಾತ ಲ್ಯಾನ್ಸ್‌ಡೌನ್‌ ಕಟ್ಟಡ ಮತ್ತು ದೇವರಾಜ ಮಾರುಕಟ್ಟೆಯನ್ನು ಪಾರಂಪರಿಕ ಶೈಲಿಯಲ್ಲಿಯೇ ಅಭಿವೃದ್ಧಿಪಡಿಸಲು ಕ್ರಮವಹಿಸಲಾಗುವುದು.

ಬೆಂಗಳೂರಿಗೆ ಪರ್ಯಾಯವಾಗಿ ರಾಜ್ಯದಲ್ಲಿ ಸುಸ್ಥಿರವಾದ ಮೂಲಸೌಕರ್ಯಗಳನ್ನು ಒಳಗೊಂಡ ಮತ್ತು ಉದ್ಯೋಗಾವಕಾಶಗಳನ್ನು ಸೃಜಿಸುವಂತೆ ಆಕರ್ಷಕ ನಗರಗಳನ್ನು ಅಭಿವೃದ್ಧಿಪಡಿಸುವ ಮೂಲಕ ಬೆಂಗಳೂರಿನ ಮೇಲಿನ ಒತ್ತಡವನ್ನು ತಗ್ಗಿಸಲು ಸರ್ಕಾರವು ವಿವಿಧ ಯೋಜನೆಗಳನ್ನು ರೂಪಿಸಲಿದೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ, ಹೇಗೆ ಮಾಡಲಾಗುವುದು ಎಂಬುದನ್ನೂ ವಿವರಿಸಿದ್ದಾರೆ.

• ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ 2.0 ಅಡಿ ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ 2,000 ಕೋಟಿ ರೂ. ಗಳನ್ನು ಒದಗಿಸಲಾಗುವುದು.
• ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕೆ.ಜಿ.ಎಫ್‌, ತುಮಕೂರಿನ ವಸಂತನರಸಾಪುರ ಮತ್ತು ಬಳ್ಳಾರಿ ನಗರಗಳ ಸಮೀಪದಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್‌ಗಳನ್ನು ಅಭಿವೃದ್ಧಿಪಡಿಸಲಾಗುವುದು.
• ಬೆಂಗಳೂರಿನ ಹೊರವಲಯದಲ್ಲಿರುವ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್‌ಶಿಪ್‌ಗಳನ್ನಾಗಿ (Satellite Townships) ಅಭಿವೃದ್ಧಿಪಡಿಸಲಾಗುವುದು.
• ಬೆಂಗಳೂರಿನ BIEC ನಿಂದ ತುಮಕೂರುವರೆಗೆ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿವರೆಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಮೆಟ್ರೋ ರೈಲು ಯೋಜನೆಗಳನ್ನು ಪ್ರಾರಂಭಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು.
• ರಾಜ್ಯದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜನದಟ್ಟಣೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ರಿಂಗ್‌ ರಸ್ತೆಯ ಮೇಲೆ ಒತ್ತಡ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು ನಗರಕ್ಕೆ ಪೆರಿಫೆರಲ್‌ ರಿಂಗ್‌ ರಸ್ತೆಯನ್ನು ಪಿಪಿಪಿ ಅಥವಾ ಟೌನ್‌ ಪ್ಲಾನಿಂಗ್‌ ಮಾದರಿಯಲ್ಲಿ ನಿರ್ಮಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು.
• ನಗರ ಪ್ರದೇಶದ ಎಲ್ಲಾ ಮನೆಗಳಿಗೆ ಕುಡಿಯುವ ನೀರನ್ನು ಒದಗಿಸಲು ಅಮೃತ್ 2.0 ಕೇಂದ್ರ ಪುರಸ್ಕೃತ ಯೋಜನೆಯಡಿ ಅನುಷ್ಠಾನಗೊಳಿಸಲಾಗುತ್ತಿದ್ದು, ಇದರಲ್ಲಿ ರಾಜ್ಯದ ಪಾಲು 4,615 ಕೋಟಿ ರೂ. ಗಳಾಗಿದೆ. ಕಳೆದ ವರ್ಷ ಈ ಉದ್ದೇಶಕ್ಕಾಗಿ ನಾವು 320 ಕೋಟಿ ರೂ. ಅನುದಾನ ಒದಗಿಸಿದ್ದು, ಈ ವರ್ಷ 200 ಕೋಟಿ ರೂ. ಒದಗಿಸಿ, 7.5 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕದ ಮೂಲಕ ಕುಡಿಯುವ ನೀರನ್ನು ಒದಗಿಸುವ ಗುರಿ ಹೊಂದಿದ್ದೇವೆ.
• ಕೇಂದ್ರ ಪುರಸ್ಕೃತ ಸ್ವಚ್ಛ ಭಾರತ್ ಮಿಷನ್ 2.0 ಅಡಿಯಲ್ಲಿ ದ್ರವ ಹಾಗೂ ಘನ ತ್ಯಾಜ್ಯ ಸಂಸ್ಕರಣೆಗೆ ಕೇಂದ್ರ ಸರ್ಕಾರದ ಪಾಲು 2,185 ಕೋಟಿ ರೂ.ಗಳನ್ನು ಒಳಗೊಂಡಂತೆ 5,072 ಕೋಟಿ ರೂ ವೆಚ್ಚ ಮಾಡಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ನಮ್ಮ ಜಲ ಮೂಲಗಳನ್ನು ಮಲಿನಗೊಳಿಸುವ ದ್ರವ ತ್ಯಾಜ್ಯಗಳ ಸಂಸ್ಕರಣೆ, ಲೆಗೆಸಿ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಆದ್ಯತೆ ನೀಡುವ ಮೂಲಕ ನಗರಗಳಲ್ಲಿ ಸ್ವಚ್ಛ ವಾತಾವರಣ ನಿರ್ಮಾಣ ಮಾಡಲು ಒತ್ತು ನೀಡಲಾಗುವುದು.

ಇದನ್ನೂ ಓದಿ: Karnataka Budget Session 2024: ಬಿಜೆಪಿಯವರ ತಲೆಯಲ್ಲಿ ಏನೂ ಇಲ್ಲ; ಬಡವರ ಕೊಳ್ಳುವ ಶಕ್ತಿ ಹೆಚ್ಚಿಸುವ ಬಜೆಟ್‌ ಎಂದ ಸಿದ್ದರಾಮಯ್ಯ

• ಸ್ಥಳೀಯ ಸಂಸ್ಥೆ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಜಂಟಿ ಸಹಭಾಗಿತ್ವದ ಯೋಜನೆಯಾದ ಅಮೃತ್‌ 2.0 ಅಡಿಯಲ್ಲಿ 539 ಕೋಟಿ ರೂ. ಮೊತ್ತದಲ್ಲಿ ಕೆರೆ ಹಾಗೂ ಜಲಮೂಲಗಳ ಪುನಶ್ಚೇತನ ಮತ್ತು ಉದ್ಯಾನವನಗಳ ಅಭಿವೃದ್ಧಿ ಕಾಮಗಾರಿಗಳನ್ನು ಆಯ್ದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Continue Reading
Advertisement
Vande Bharat Metro
ದೇಶ4 mins ago

Vande Bharat Metro: ಮೊದಲ ವಂದೇ ಭಾರತ್‌ ಮೆಟ್ರೋ ಸಂಚಾರಕ್ಕೆ ಸಿದ್ಧ; ಇಲ್ಲಿದೆ ವಿಡಿಯೊ

Hindu Marriage
ದೇಶ12 mins ago

Hindu Marriage: ವಿಧಿಬದ್ಧವಾಗಿ ನಡೆಯದ ಮದುವೆಗೆ ಮಾನ್ಯತೆ ಇಲ್ಲ: ಸುಪ್ರೀಂಕೋರ್ಟ್‌

pm Narendra Modi
ಪ್ರಮುಖ ಸುದ್ದಿ33 mins ago

PM Narendra Modi: ಉಗ್ರರನ್ನು ಅವರ ತಾಯ್ನೆಲದಲ್ಲೇ ಕೊಲ್ಲುತ್ತೇವೆ: ಗುಡುಗಿದ ಪಿಎಂ ನರೇಂದ್ರ ಮೋದಿ

karnataka Weather Forecast
ಮಳೆ1 hour ago

Karnataka Weather : ಇಂದು ಮೂರು ಹೊತ್ತು ಒಂದೊಂದು ವಾತಾವರಣ

Vastu Tips
ಲೈಫ್‌ಸ್ಟೈಲ್1 hour ago

Vastu Tips: ಮನೆ ಹೊರಗಿನ ಉದ್ಯಾನದಲ್ಲಿ ವಾಸ್ತು ಪಾಲಿಸಿ; ಮನೆಯೊಳಗಿನ ನೆಮ್ಮದಿ ವೃದ್ಧಿಸಿ

SMART Missile
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಕ್ಷಿಪಣಿ ಬಲದಿಂದ ನಮ್ಮ ನೌಕಾಪಡೆ ‘ಸ್ಮಾರ್ಟ್‌’ ಜತೆಗೆ ಇನ್ನಷ್ಟು ಬಲಿಷ್ಠ

Aloe Vera face mask
ಆರೋಗ್ಯ2 hours ago

Aloe Vera Benefits: ಬೇಸಿಗೆಯಲ್ಲಿ ಚರ್ಮವನ್ನು ತಂಪಾಗಿಸಲು ಲೋಳೆಸರದ ಮಾಸ್ಕ್‌ ಬಳಸಿ

Dina Bhavishya
ಭವಿಷ್ಯ3 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

Benefits of Tender Coconut
ಆರೋಗ್ಯ3 hours ago

Benefits of Tender Coconut: ಎಳನೀರು ಹೀರುವುದರಿಂದ ದೇಹಕ್ಕೆ ಏನೇನು ಲಾಭ ಗೊತ್ತೇ?

Bhajanotsava
ಬೆಂಗಳೂರು6 hours ago

Bhajanotsava: ಓಂಕಾರ ಆಶ್ರಮದಲ್ಲಿ ನಿರಂತರ ಭಜನೋತ್ಸವ ಸಂಪನ್ನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌