Karnataka Budget Session 2024: ಬೆಂಗಳೂರಲ್ಲಿ 6,000 ಕೋಟಿ ರೂ. ತೆರಿಗೆ ಸಂಗ್ರಹ ಟಾರ್ಗೆಟ್‌! ನಗರಾಭಿವೃದ್ಧಿಗೆ ಏನ್‌ ಮಾಡ್ತಾರೆ? - Vistara News

ಕರ್ನಾಟಕ ಬಜೆಟ್ 2024

Karnataka Budget Session 2024: ಬೆಂಗಳೂರಲ್ಲಿ 6,000 ಕೋಟಿ ರೂ. ತೆರಿಗೆ ಸಂಗ್ರಹ ಟಾರ್ಗೆಟ್‌! ನಗರಾಭಿವೃದ್ಧಿಗೆ ಏನ್‌ ಮಾಡ್ತಾರೆ?

Karnataka Budget Session 2024: ಪ್ರಸಕ್ತ ಸಾಲಿನಲ್ಲಿ ಸಂಪನ್ಮೂಲಗಳ ಹೆಚ್ಚಳ, ಸಂಚಾರ ದಟ್ಟಣೆ ನಿವಾರಣೆ, ಗುಣಮಟ್ಟದ ರಸ್ತೆಗಳ ನಿರ್ಮಾಣ, ಶುದ್ಧ ಕುಡಿಯುವ ನೀರು ಪೂರೈಕೆ, ಉತ್ತಮ ಸಾರ್ವಜನಿಕ ಸಾರಿಗೆ ಮತ್ತು ಸ್ವಚ್ಛ-ಸುಂದರ ಬೆಂಗಳೂರು ನಿರ್ಮಾಣದ ಕುರಿತು ಹೆಚ್ಚಿನ ಗಮನ ಹರಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

Karnataka Budget Session 2024 Rs 6000 crore to be spent in Bengaluru Tax collection target
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ತಮ್ಮ 15ನೇ ಬಜೆಟ್‌ (Karnataka Budget Session 2024) ಅನ್ನು ಮಂಡಿಸಿದ್ದು, ನಗರಾಭಿವೃದ್ಧಿ ಯೋಜನೆಗೆ (Urban Development Plan) ಹಲವು ರೀತಿಯ ಒತ್ತನ್ನು ನೀಡಿದ್ದಾರೆ. ಇದೇ ವೇಳೆ ತೆರಿಗೆ ಸಂಗ್ರಹಕ್ಕೂ ಒತ್ತು ನೀಡಲಾಗಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ (BBMP limits) 2024-25ರಲ್ಲಿ ತೆರಿಗೆ ಸಂಗ್ರಹ (Tax collection) ವ್ಯವಸ್ಥೆಯಲ್ಲಿ ಸೋರಿಕೆ ತಡೆಗಟ್ಟುವ ಮೂಲಕ 6,000 ಕೋಟಿ ರೂ.ಗಳಷ್ಟು ತೆರಿಗೆ ಸಂಗ್ರಹದ ಗುರಿಯನ್ನು ಇಟ್ಟುಕೊಂಡಿದ್ದಾರೆ. ಈ ಮೂಲಕ ನಗರಾಭಿವೃದ್ಧಿಯನ್ನು ಹೇಗೆ ಮಾಡಲಾಗುವುದು ಎಂಬ ಬಗ್ಗೆಯೂ ಸಿಎಂ ವಿವರಣೆ ನೀಡಿದ್ದಾರೆ.

Karnataka Budget Session 2024 Rs 6000 crore to be spent in Bengaluru Tax collection target

ಬಜೆಟ್‌ ಮಂಡನೆ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬೆಂಗಳೂರು ನಗರವನ್ನು ವಿಶ್ವದರ್ಜೆಯ ನಗರವಾಗಿ ಅಭಿವೃದ್ಧಿಪಡಿಸಲು ನಾವು ಬ್ರಾಂಡ್‌ ಬೆಂಗಳೂರು ಪರಿಕಲ್ಪನೆಯನ್ನು ರೂಪಿಸಿ ಜಾರಿಗೊಳಿಸುತ್ತಿದ್ದೇವೆ. ಜನರ ಬದುಕಿನ ಗುಣಮಟ್ಟ ಸುಧಾರಣೆಗಾಗಿ ಹಾಗೂ ಹೂಡಿಕೆದಾರರನ್ನು ಆಕರ್ಷಿಸಲು ವಿವಿಧ ವಲಯಗಳಲ್ಲಿ ಗಣನೀಯ ಸುಧಾರಣೆಗಳನ್ನು ತರಲು ಹಲವಾರು ದಿಟ್ಟ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಪ್ರಸಕ್ತ ಸಾಲಿನಲ್ಲಿ ಸಂಪನ್ಮೂಲಗಳ ಹೆಚ್ಚಳ, ಸಂಚಾರ ದಟ್ಟಣೆ ನಿವಾರಣೆ, ಗುಣಮಟ್ಟದ ರಸ್ತೆಗಳ ನಿರ್ಮಾಣ, ಶುದ್ಧ ಕುಡಿಯುವ ನೀರು ಪೂರೈಕೆ, ಉತ್ತಮ ಸಾರ್ವಜನಿಕ ಸಾರಿಗೆ ಮತ್ತು ಸ್ವಚ್ಛ-ಸುಂದರ ಬೆಂಗಳೂರು ನಿರ್ಮಾಣದ ಕುರಿತು ಹೆಚ್ಚಿನ ಗಮನ ಹರಿಸುತ್ತೇವೆ ಎಂದು ಹೇಳಿದರು.

Karnataka Budget Session 2024 Rs 6000 crore to be spent in Bengaluru Tax collection target

ಬಿ.ಬಿ.ಎಂ.ಪಿಯಲ್ಲಿ ತೆರಿಗೆ ಮತ್ತು ತೆರಿಗೆಯೇತರ ಸಂಪನ್ಮೂಲಗಳನ್ನು ಕ್ರೋಢೀಕರಿಸಲು ಸರ್ಕಾರವು ಹಲವು ಉಪಕ್ರಮಗಳನ್ನು ಕೈಗೊಳ್ಳಲಿದೆ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ, ಯಾವ ರೀತಿ ಮಾಡಲಾಗುವುದು ಎಂಬ ಅಂಶವನ್ನು ತೆರೆದಿಟ್ಟಿದ್ದಾರೆ.

• 2023-24ನೇ ಸಾಲಿನಲ್ಲಿ 4,300 ಕೋಟಿ ರೂ. ತೆರಿಗೆ ಸಂಗ್ರಹ ಮಾಡುವ ಮುಖಾಂತರ ದಾಖಲೆಯ ತೆರಿಗೆ ಸಂಗ್ರಹ ಮಾಡುವತ್ತ ಮುನ್ನಡೆದಿದೆ. ಇದು 2022-23ನೇ ಸಾಲಿಗಿಂತ 1,000 ಕೋಟಿ ರೂ. ಗಳಷ್ಟು ಹೆಚ್ಚಾಗಿದೆ. 2024-25ರಲ್ಲಿ ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸೋರಿಕೆ ತಡೆಗಟ್ಟುವ ಮೂಲಕ 6,000 ಕೋಟಿ ರೂ.ಗಳಷ್ಟು ತೆರಿಗೆ ಸಂಗ್ರಹದ ನಿರೀಕ್ಷೆ ಇದೆ.
• ಪ್ರಸಕ್ತ ಸಾಲಿನಿಂದ ಪರಿಷ್ಕೃತ ಜಾಹೀರಾತು ನೀತಿ ಮತ್ತು Premium FAR ನೀತಿಯನ್ನು ಜಾರಿಗೆ ತರುವ ಮೂಲಕ ಹೆಚ್ಚುವರಿಯಾಗಿ 2,000 ಕೋಟಿ ರೂ.ಗಳಷ್ಟು ತೆರಿಗೆಯೇತರ ಸಂಪನ್ಮೂಲ ಸಂಗ್ರಹಿಸುವ ಗುರಿ ಹೊಂದಲಾಗಿದೆ.
• ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 20 ಲಕ್ಷ ಆಸ್ತಿಗಳ ಆಸ್ತಿ ತೆರಿಗೆ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ 2024-25ನೇ ಸಾಲಿನಿಂದ ಮಾಲೀಕರಿಗೆ ಡಿಜಿಟಲ್‌ ಇ-ಖಾತಾ ಮತ್ತು ಆಸ್ತಿ ತೆರಿಗೆ ಪಾವತಿ ವಿವರಗಳನ್ನು ದೊರಕಿಸಲಾಗುವುದು.

Karnataka Budget Session 2024 Rs 6000 crore to be spent in Bengaluru Tax collection target

ಟ್ರಾಫಿಕ್‌ ಸಮಸ್ಯೆ ನಿವಾರಣೆಗೆ ಕ್ರಮ

ಮೇಲೆ ವಿವರಿಸಿರುವಂತೆ ಸಂಗ್ರಹವಾಗುವ ಹೆಚ್ಚುವರಿ ಸಂಪನ್ಮೂಲಗಳಿಂದ ಆದ್ಯತೆಯ ಮೇಲೆ ಬೆಂಗಳೂರಿನ ಸಂಚಾರ ದಟ್ಟಣೆಯ ಸಮಸ್ಯೆಯನ್ನು ನಿವಾರಿಸಲು ಸರ್ಕಾರವು ವಿವಿಧ ಯೋಜನೆಗಳನ್ನು ಕೈಗೆತ್ತಿಕೊಳ್ಳಲಿದೆ.
• ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಗರದ ಪ್ರಮುಖ ರಸ್ತೆಗಳಲ್ಲಿ 147 ಕಿ.ಮೀ ಉದ್ದದ ವೈಟ್‌ ಟಾಪಿಂಗ್‌ ಕಾಮಗಾರಿಗಳನ್ನು 1,700 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಮಂಜೂರಾತಿ ನೀಡಲಾಗಿದೆ. ಈ ಕಾಮಗಾರಿಗಳನ್ನು ಡಿಸೆಂಬರ್‌ 2025 ರೊಳಗೆ ಪೂರ್ಣಗೊಳಿಸಲಾಗುವುದು.
• ಭೂಮಿಯ ಅಲಭ್ಯತೆ ಮತ್ತು ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ತೊಡಕುಗಳ ಕಾರಣ ಅಸ್ತಿತ್ವದಲ್ಲಿರುವ ರಸ್ತೆಗಳ ವಿಸ್ತರಣೆಯು ಅತ್ಯಂತ ಕಷ್ಟಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸುರಂಗ ಮಾರ್ಗ (Tunnel) ನಿರ್ಮಿಸುವ ಮೂಲಕ ನಗರದಲ್ಲಿ ಸಂಚಾರ ದಟ್ಟಣೆಯನ್ನು ಬಗೆಹರಿಸಲು ನಿರ್ಧರಿಸಿದೆ. ಈ ವರ್ಷ ಸಂಚಾರ ದಟ್ಟಣೆ ಅತ್ಯಂತ ತೀವ್ರವಾಗಿರುವ ಹೆಬ್ಬಾಳ ಜಂಕ್ಷನ್‌ನಲ್ಲಿ ಪ್ರಾಯೋಗಿಕವಾಗಿ ಟನೆಲ್‌ ಅನ್ನು ನಿರ್ಮಿಸಲಾಗುವುದು.
• ನಾಲಾ ಬಫರ್‌ ವಲಯದೊಳಗೆ ನಾಲಾ ಬಫರ್‌ ಅನ್ನು ಬಳಸಿಕೊಂಡು ಸರ್ವಋತು ರಸ್ತೆಗಳನ್ನು ನಿರ್ಮಿಸುವ
ಹೊಸ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
• ಈ ಯೋಜನೆಯಡಿ ಈಗಾಗಲೇ 200 ಕೋಟಿ ರೂ. ಅಂದಾಜು ವೆಚ್ಚದಲ್ಲಿ 100 ಕಿ.ಮೀ. ಉದ್ದದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಹೆಚ್ಚುವರಿಯಾಗಿ 100 ಕಿ.ಮೀ. ಉದ್ದದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು.

ಬೆಂಗಳೂರು ಟ್ರಾಫಿಕ್‌ ಸಮಸ್ಯೆಗೆ ಪರಿಹಾರ

• ಸುಗಮ ಸಂಚಾರ-ಬ್ರಾಂಡ್‌ ಬೆಂಗಳೂರು ಯೋಜನೆಯಡಿ ಅಂತಾರಾಷ್ಟ್ರೀಯ ಮಟ್ಟದ ತಜ್ಞ ಸಂಸ್ಥೆಯನ್ನು ನೇಮಿಸಿಕೊಳ್ಳಲಾಗಿದೆ. ಈ ಸಂಸ್ಥೆಯು ನೀಡುವ ವರದಿಯನ್ನು ಆಧರಿಸಿ, ಬೆಂಗಳೂರಿನ ಸಂಚಾರ ದಟ್ಟಣೆಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು.
• ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದರ ಜತೆಗೆ ಬೆಂಗಳೂರಿನ ಆರ್ಥಿಕ ಚಟುವಟಿಕೆಯನ್ನು ದೊಡ್ಡ ಪ್ರಮಾಣದಲ್ಲಿ ವೃದ್ಧಿಸಲು ಸಹಕಾರಿಯಾಗುವಂತೆ ಪೆರಿಫೆರಲ್‌ ರಿಂಗ್‌ ರೋಡ್‌ ಅನ್ನು ಬೆಂಗಳೂರು ಬಿಸಿನೆಸ್ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯಲ್ಲಿ ಪರಿಚಯಿಸಲು ಉದ್ದೇಶಿಸಲಾಗಿದೆ.
• ಈ ಯೋಜನೆಯಡಿ 73 ಕಿ.ಮೀ. ಉದ್ದದ ರಸ್ತೆಯನ್ನು 27,000 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ನಿರ್ಮಾಣ ಮಾಡಲು ಆರ್‌ಇಪಿ (RFP) ಕರೆಯಲಾಗಿದೆ. ಈ ಯೋಜನೆಯನ್ನು ಇದೇ ಸಾಲಿನಲ್ಲಿ ಪ್ರಾರಂಭ ಮಾಡಲು ಉದ್ದೇಶಿಸಿದೆ.
• ಬೆಂಗಳೂರು ನಗರದಲ್ಲಿ 250 ಮೀಟರ್‌ ಎತ್ತರದ ಸ್ಕೈ-ಡೆಕ್‌ (Sky-Deck) ನಿರ್ಮಾಣಕ್ಕಾಗಿ ನೂತನ ಪರಿಕಲ್ಪನೆ ಒದಗಿಸುವಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದ ವಾಸ್ತುವಿನ್ಯಾಸಗಾರರನ್ನು ಆಹ್ವಾನಿಸಿದೆ. ಇದರಿಂದ ನಗರದ ಒಳಗೆ ಆಕರ್ಷಕವಾದ ಪ್ರವಾಸಿ ತಾಣವನ್ನು ಸೃಜಿಸಿದಂತಾಗುತ್ತದೆ.

ನಗರಾಭಿವೃದ್ಧಿ ಇಲಾಖೆಯ ಅಂಗಸಂಸ್ಥೆಗಳಿಗೆ ಸೋಲಾರ್‌ ಪಾರ್ಕ್‌

• ನಗರಾಭಿವೃದ್ಧಿ ಇಲಾಖೆಯ ಅಂಗಸಂಸ್ಥೆಗಳಾದ ಬಿಬಿಎಂಪಿ, ಬಿಎಂಆರ್‌ಸಿಎಲ್‌, ಬಿಡಬ್ಲ್ಯುಎಸ್‌ಎಸ್‌ಬಿ, ಬಿಡಿಎ (BBMP, BMRCL, BWSSB, BDA) ಗಳ ವ್ಯಾಪ್ತಿಯಲ್ಲಿ ಪ್ರತಿ ತಿಂಗಳು ವಿದ್ಯುತ್‌ ಶುಲ್ಕ ಪಾವತಿಯ ಆರ್ಥಿಕ ಹೊರೆ ಕಡಿಮೆಗೊಳಿಸಲು ಸೋಲಾರ್‌ ಪಾರ್ಕ್‌ ಅನ್ನು Captive/Group Captive ಮೂಲಕ ಸ್ಥಾಪಿಸಲಾಗುವುದು.

ಮೆಟ್ರೋ ಮತ್ತು ರೈಲು ಯೋಜನೆ

• ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ ಸೇವೆಯೊಂದಿಗೆ ಮೆಟ್ರೋ ರೈಲು ಹಾಗೂ ಸಬ್‌-ಅರ್ಬನ್‌ ರೈಲು ಯೋಜನೆಗಳು ಜನರ ಸುಗಮ ಸಂಚಾರದ ದೃಷ್ಟಿಯಿಂದ ಕ್ರಾಂತಿಕಾರಿ ಬದಲಾವಣೆ ತರಲಿವೆ.
• ಈ ಬಹುವಿಧ ಸಾರಿಗೆ ವ್ಯವಸ್ಥೆಗಳನ್ನು ಒಗ್ಗೂಡಿಸಿ, ಪರಸ್ಪರ ಸಮನ್ವಯದಿಂದ ಕಾರ್ಯಾಚರಣೆ ಮಾಡುವ ಮೂಲಕ ಜನರು ಹೆಚ್ಚು ಹೆಚ್ಚಾಗಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಅವಲಂಬಿಸಲು ಪ್ರೇರೇಪಿಸುವುದು ನಮ್ಮ ಆದ್ಯತೆಯಾಗಿದೆ. ಇದರಿಂದ ಸಂಚಾರ ದಟ್ಟಣೆ ಹಾಗೂ ಪರಿಸರ ಮಾಲಿನ್ಯಗಳ ನಿಯಂತ್ರಣ ಸಾಧ್ಯವಾಗುವುದಲ್ಲದೆ, ಬದುಕು ಇನ್ನಷ್ಟು ಸುಗಮವಾಗಲಿದೆ.
• ದೇಶದ ಅತ್ಯುತ್ತಮ ಮೆಟ್ರೋ ಸೇವೆಗಳಲ್ಲಿ ಮುಂಚೂಣಿಯಲ್ಲಿರುವ ನಮ್ಮ ಮೆಟ್ರೋ ರೈಲು ಯೋಜನೆಯು ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯ ಜೀವನಾಡಿಯಾಗಿದೆ. 8 ಲಕ್ಷಕ್ಕೂ ಹೆಚ್ಚಿನ ಜನರು
ಪ್ರತಿನಿತ್ಯ ಮೆಟ್ರೋ ಸೇವೆಯನ್ನು ಬಳಸುತ್ತಿದ್ದಾರೆ. ಪ್ರಸ್ತುತ ಕಾರ್ಯಾಚರಣೆಯಲ್ಲಿರುವ 74 ಕಿ.ಮೀ. ಮಾರ್ಗದೊಂದಿಗೆ 2025ರ ಮಾರ್ಚ್‌ ವೇಳೆಗೆ ಹೆಚ್ಚುವರಿಯಾಗಿ 44 ಕಿ.ಮೀ. ಮಾರ್ಗ ಸೇರ್ಪಡೆಯಾಗಲಿದೆ.
• ಮೆಟ್ರೋ ಯೋಜನೆ ಹಂತ-2 ಮತ್ತು 2ಎ ಯೋಜನೆಯಡಿ ಹೊರವರ್ತುಲ ರಸ್ತೆ- ವಿಮಾನ ನಿಲ್ದಾಣ ಮಾರ್ಗವು 2026ರ ಜೂನ್‌ ವೇಳೆಗೆ ಪೂರ್ಣಗೊಳ್ಳಲಿದೆ. ಪ್ರಸಕ್ತ ಸಾಲಿನಲ್ಲಿ ಮೆಟ್ರೋ ಸೇವೆಯ ಇತಿಹಾಸದಲ್ಲಿಯೇ ಪ್ರಥಮ ಬಾರಿ ಕಾರ್ಯಾಚರಣೆಯು ಲಾಭದಾಯಕವಾಗಿ (Operational Profit) ಪರಿಣಮಿಸಿರುವುದು ಹೆಮ್ಮೆಯ ಸಂಕೇತವಾಗಿದೆ.
• ನಮ್ಮ ಮೆಟ್ರೋ ಹಂತ-3 ರಡಿ ಅಂದಾಜು 15,611 ಕೋಟಿ ರೂ. ವೆಚ್ಚದ ಯೋಜನೆಗೆ ರಾಜ್ಯ ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕೇಂದ್ರ ಸರ್ಕಾರದ ಅನುಮೋದನೆಯ ನಿರೀಕ್ಷೆಯಲ್ಲಿದೆ.
• ನಮ್ಮ ಮೆಟ್ರೋ ಹಂತ-3ಎ ರಡಿಯಲ್ಲಿ ಸರ್ಜಾಪುರದಿಂದ ಅಗರ, ಕೋರಮಂಗಲ ಡೈರಿ ವೃತ್ತ, ಮೇಖ್ರಿ ವೃತ್ತ ಮೂಲಕ ಹೆಬ್ಬಾಳವನ್ನು ಸಂಪರ್ಕಿಸುವ ಮಾರ್ಗ ನಿರ್ಮಾಣ ಕುರಿತು ಡಿ.ಪಿ.ಆರ್. ಕರಡು ಸಿದ್ಧಪಡಿಸಲಾಗಿದ್ದು, ಕೇಂದ್ರ ಸರ್ಕಾರದ ಅನುಮೋದನೆಗೆ ಸಲ್ಲಿಸಲಾಗುವುದು.
• ಮಂದಗತಿಯಲ್ಲಿ ಸಾಗುತ್ತಿದ್ದ ಬೆಂಗಳೂರು ಉಪನಗರ ರೈಲು ಯೋಜನೆಯನ್ನು ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಚುರುಕುಗೊಳಿಸಿ, ಬೈಯ್ಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ ವರೆಗಿನ ಕಾರಿಡಾರ್‌-2ರ ಸಿವಿಲ್‌ ಕಾಮಗಾರಿಗಳನ್ನು ವೇಗವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಕಾರಿಡಾರ್‌-4 ರ ಹೀಲಲಿಗೆಯಿಂದ ರಾಜಾನುಕುಂಟೆ ವರೆಗಿನ 46.2 ಕಿ.ಮೀ. ಉದ್ದದ ಮಾರ್ಗ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ. Rolling Stock ಮತ್ತು ಅದರ ಕಾರ್ಯಾಚರಣೆ ಮತ್ತು ನಿರ್ವಹಣೆಗೆ RFP ಆಹ್ವಾನ ಮಾಡಲಾಗಿದೆ. European Investment Bank ಮತ್ತು ಜರ್ಮನಿಯ KFW ಬ್ಯಾಂಕುಗಳ ಜೊತೆಗೆ ಆರ್ಥಿಕ ನೆರವಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆಯ ಅಗತ್ಯತೆಯ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದು ಹೆಚ್ಚಿನ ಅನುದಾನ ನೀಡುವಂತೆ ಒತ್ತಾಯಿಸಲಾಗುವುದು ಮತ್ತು ಕೇಂದ್ರ ಸರ್ಕಾರ ನೀಡುವ ಅನುದಾನಕ್ಕೆ ಎದುರಾಗಿ ರಾಜ್ಯ ಸರ್ಕಾರದ ಪಾಲಿನ ಅನುದಾನವನ್ನು ಒದಗಿಸಲಾಗುವುದು.
• ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪ್ರತಿದಿನ ಸರಾಸರಿ 42 ಲಕ್ಷ ಜನರಿಗೆ ಸೇವೆಯನ್ನು ಒದಗಿಸುತ್ತಿದ್ದು, ದೇಶದಲ್ಲಿಯೇ ಅತ್ಯುತ್ತಮ ನಗರ ಸಾರಿಗೆ ವ್ಯವಸ್ಥೆಗಳಲ್ಲಿ ಒಂದಾಗಿದೆ. ಮುಂದಿನ ದಿನಗಳಲ್ಲಿ 1,334 ಹೊಸ ಎಲೆಕ್ಟ್ರಿಕ್‌ ಬಸ್‌ಗಳು ಮತ್ತು 820 ಬಿಎಸ್-6 ಡೀಸೆಲ್‌ ಬಸ್ಸುಗಳನ್ನು ಬಿ.ಎಂ.ಟಿ.ಸಿ.ಗೆ ಸೇರ್ಪಡೆಗೊಳಿಸಲಾಗುವುದು.
• ಪ್ರಯಾಣಿಕರ ಹಿತದೃಷ್ಟಿಯಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಮಹಿಳಾ ಸುರಕ್ಷತೆಯನ್ನು ಒಳಗೊಂಡ Vehicle Tracking ಹೊಂದಿರುವ ಮೊಬೈಲ್‌ ಆ್ಯಪ್‌ ಅನ್ನು ಅನುಷ್ಠಾನಗೊಳಿಸಲಾಗುತ್ತಿದೆ.
• ಜಪಾನ್‌ ಸರ್ಕಾರದ ಸಹಯೋಗದೊಂದಿಗೆ ಬೆಂಗಳೂರು ನಗರದಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು Area Traffic Signal Control System ಅನ್ನು ನಗರದ ಪ್ರಮುಖ 28 ಜಂಕ್ಷನ್‌ಗಳಲ್ಲಿ ಅಳವಡಿಸುವ ಮೂಲಕ ಟ್ರಾಫಿಕ್‌ ಸಿಗ್ನಲ್‌ನಲ್ಲಿ ವಾಹನಗಳ ಸಂದಣಿಯನ್ನು ಶೇ.30ರಷ್ಟು ಹಾಗೂ ಸರಾಸರಿ ವಿಳಂಬವನ್ನು ಶೇ.13ರಷ್ಟು ಕಡಿಮೆಗೊಳಿಸಲಾಗುವುದು.

ನಗರದ ಅಭಿವೃದ್ಧಿಯ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳ ಜತೆಯಲ್ಲಿ ನಾಗರಿಕರ ಬದುಕಿನ ಗುಣಮಟ್ಟ ಸುಧಾರಣೆಗೂ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದ್ದು, ಉತ್ತಮ ಪರಿಸರ, 24×7 ಕುಡಿಯುವ ನೀರಿನ ಪೂರೈಕೆ ಮತ್ತು ಸ್ವಚ್ಛತೆಯ ನಿರ್ವಹಣೆಗೆ ಒತ್ತು ನೀಡಲಾಗುವುದು.

ಕುಡಿಯುವ ನೀರು, ಸ್ವಚ್ಛತೆಗೆ ಸರ್ಕಾರ ಕೈಗೊಳ್ಳಲಿರುವ ಕ್ರಮಗಳಿವು

• ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 5,550 ಕೋಟಿ ರೂ. ಅಂದಾಜು ವೆಚ್ಚದಲ್ಲಿ 775 ಎಂ.ಎಲ್.ಡಿ ಸಾಮರ್ಥ್ಯದ ಕಾವೇರಿ ಹಂತ-5 ಯೋಜನೆಯನ್ನು ಮೇ 2024ರಲ್ಲಿ ಕಾರ್ಯಾರಂಭಗೊಳಿಸುವ ಮೂಲಕ 12 ಲಕ್ಷ ಜನರಿಗೆ ಪ್ರತಿದಿನ 110 ಲೀಟರ್‌ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗುವುದು.
• ಕಾವೇರಿ ಹಂತ-5 ರಡಿಯಲ್ಲಿ ಒಳಚರಂಡಿ ಕಾಮಗಾರಿಗಳನ್ನು ಡಿಸೆಂಬರ್‌ 2024 ರಲ್ಲಿ ಪೂರ್ಣಗೊಳಿಸಲಾಗುವುದು. ಇದರಿಂದ 228 ಕಿ.ಮೀ ವ್ಯಾಪ್ತಿಯಲ್ಲಿ ಒಳಚರಂಡಿ ಕೊಳವೆಯನ್ನು ಅಳವಡಿಸಲಾಗುವುದು ಮತ್ತು 13 ಎಸ್.ಟಿ.ಪಿ ಘಟಕಗಳಿಂದ 100 ಎಂ.ಎಲ್.ಡಿ ರಷ್ಟು ಒಳಚರಂಡಿ ನೀರನ್ನು ಸಂಸ್ಕರಿಸುವ ಸಾಮರ್ಥ್ಯವನ್ನು ಸೃಜಿಸಲಾಗುವುದು.
• 07 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು (ಎಸ್.ಟಿ.ಪಿ) 441 ಕೋಟಿ ರೂ.ಗಳ ಮೊತ್ತದಲ್ಲಿ ಉನ್ನತೀಕರಿಸಲಾಗುವುದು. ಇದರಿಂದ 268 ಎಂ.ಎಲ್.ಡಿ ತ್ಯಾಜ್ಯ ನೀರನ್ನು ಪ್ರತಿನಿತ್ಯ ಸಂಸ್ಕರಿಸಿ ಮರುಬಳಕೆ ಮಾಡಲು ಅನುಕೂಲವಾಗಲಿದೆ.
• ಬಿ.ಬಿ.ಎಂ.ಪಿ ವ್ಯಾಪ್ತಿಗೆ ಸೇರ್ಪಡೆಯಾದ 110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸುವ ಯೋಜನೆಯ ಎರಡನೇ ಹಂತವನ್ನು 200 ಕೋಟಿ ರೂ.ಗಳ ಮೊತ್ತದಲ್ಲಿ ಪ್ರಾರಂಭಿಸಲಾಗುವುದು.
• ಮನೆಗಳಿಂದ ತ್ಯಾಜ್ಯ ಸಂಸ್ಕರಣಾ ಘಟಕಗಳವರೆಗೂ ತ್ಯಾಜ್ಯಗಳ ವಿಲೇವಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಬೆಂಗಳೂರು ನಗರ ಜಿಲ್ಲೆಯನ್ನು ನಾಲ್ಕು ವಲಯಗಳನ್ನಾಗಿ ವಿಂಗಡಿಸಿ, ಪ್ರತಿಯೊಂದು ವಲಯಕ್ಕೂ ನುರಿತ ಸಂಸ್ಥೆಯನ್ನು ಪಾರದರ್ಶಕವಾಗಿ ನೇಮಿಸಲಾಗುವುದು. ನಗರದ ಹೊರವಲಯದ ನಾಲ್ಕು ಕಡೆಗಳಲ್ಲಿ
50 ರಿಂದ 100 ಎಕರೆ ಜಮೀನನ್ನು ಗುರುತಿಸಿ ಮುಂದಿನ 30 ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟು ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ಅವಕಾಶ ಕಲ್ಪಿಸಲಾಗುವುದು.
• ಬಿಬಿಎಂಪಿಯ ಅರಣ್ಯ, ಕೆರೆ ಮತ್ತು ತೋಟಗಾರಿಕಾ ವಿಭಾಗವನ್ನು ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ನಿರ್ವಹಣಾ ವಿಭಾಗ ಎಂದು ಮರುನಾಮಕರಣ ಮಾಡಿ, ಕಾರ್ಯವ್ಯಾಪ್ತಿಯನ್ನು ವಿಸ್ತರಿಸಲಾಗಿದೆ. ನಗರದಲ್ಲಿ ವಾತಾವರಣದ ಸ್ವಚ್ಛತೆಗಾಗಿ ಮರಗಳ ಗಣತಿ, ಕೆರೆ ಮತ್ತು ಉದ್ಯಾನವನಗಳ ತಂತ್ರಾಂಶ ಆಧಾರಿತ ಮೇಲ್ವಿಚಾರಣೆ ಹಾಗೂ ಕೆರೆ ಮತ್ತು ಉದ್ಯಾನಗಳ ಅಭಿವೃದ್ಧಿಯಲ್ಲಿ ಸಾರ್ವಜನಿಕ ಸಹಭಾಗಿತ್ವವನ್ನು ಹೆಚ್ಚಿಸಲು ಪ್ರತ್ಯೇಕ ನೀತಿಯನ್ನು ಜಾರಿಗೊಳಿಸಲಾಗುವುದು.
• ಬಿಬಿಎಂಪಿ ಸಹಯೋಗದೊಂದಿಗೆ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಸರ್ವಜ್ಞ ಉದ್ಯಾನವನವನ್ನು ಅಭಿವೃದ್ಧಿಪಡಿಸಲಾಗುವುದು.

ಇದನ್ನೂ ಓದಿ: Karnataka Budget 2024: ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಮೇಲ್ದರ್ಜೆಗೆ, ಕಾಲೇಜುಗಳಿಗೆ 400 ಕೋಟಿ ಅನುದಾನ

• ಬೆಂಗಳೂರು ಹಾಗೂ 10 ಮಹಾನಗರ ಪಾಲಿಕೆಗಳಲ್ಲಿ ವಾಣಿಜ್ಯ ಮತ್ತು ವ್ಯಾಪಾರದ ದೃಷ್ಠಿಯಿಂದ ರಾತ್ರಿಯ ವೇಳೆ ವ್ಯಾಪಾರ-ವಹಿವಾಟಿನ ಮೇಲಿನ ನಿರ್ಬಂಧವನ್ನು ಬೆಳಗಿನ ಜಾವ ಒಂದು ಗಂಟೆಯವರೆಗೆ (1:೦೦ am) ವಿಸ್ತರಿಸಲಾಗುವುದು” ಎಂದು ಸಿಎಂ ಸಿದ್ದರಾಮಯ್ಯ ವಿವರಣೆ ನೀಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Budget 2024: ದಿಕ್ಕು-ದೆಸೆ ಇಲ್ಲದ ಸಾಲದ ಹೊರೆಯ ಬಜೆಟ್: ಸಚಿವ ಪ್ರಲ್ಹಾದ್‌ ಜೋಶಿ

Karnataka Budget 2024: ರಾಜ್ಯ ಬಜೆಟ್‌ ಸಿಎಂ ಸಿದ್ದರಾಮಯ್ಯ ಅವರ ರಾಜಕೀಯ ಭಾಷಣದಂತೆ ಇತ್ತು ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಟೀಕಿಸಿದ್ದಾರೆ.

VISTARANEWS.COM


on

Union Minister Pralhad Joshi reacts to state budget
Koo

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ಯಾವುದೇ ದಿಕ್ಕು-ದಿಸೆ ಇಲ್ಲದ ಒಂದು ದಾಖಲೆ ಪಟ್ಟಿಯಂತಿದೆ. 3.71 ಲಕ್ಷ ಕೋಟಿ ಬೃಹತ್ ಗಾತ್ರದ ಹೆಗ್ಗಳಿಕೆ ಬಿಟ್ಟರೆ, ಇದು ರಾಜ್ಯದ ಜನರ ಕಲ್ಯಾಣ ಮತ್ತು ಆರ್ಥಿಕ ಪ್ರಗತಿಗೆ ಪೂರಕವಾಗಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

ರಾಜ್ಯ ಬಜೆಟ್‌ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಈ ಬಜೆಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭಾಷಣದಂತೆ ಇತ್ತು. ಗ್ಯಾರಂಟಿಗಳಿಗೆ ವರ್ಷವಿಡೀ ಹೇಗೆ ಹಣ ಕ್ರೋಡೀಕರಣ ಎಂಬ ಅಂಶವಿದೆಯೇ ಹೊರತು ಮುಂದಿನ ವರ್ಷಗಳಲ್ಲಿ ರಾಜ್ಯವನ್ನು ಆರ್ಥಿಕ ಸಶಕ್ತಗೊಳಿಸಲು ಯಾವುದೇ ಯೋಜನೆಗಳ ಪ್ರಸ್ತಾಪವೇ ಇಲ್ಲ ಎಂದು ಹೇಳಿದ್ದಾರೆ.

ಹಿಂದಿನ ಸರ್ಕಾರದ ಪ್ರಸ್ತಾವನೆಗಳೇ ಈ ಬಜೆಟ್‌ನಲ್ಲಿವೆ ಅಷ್ಟೇ. ನೀರಾವರಿ ಯೋಜನೆಗಳಿಗೆ ಯಾವುದೇ ಹಣಕಾಸು ಪ್ರಸ್ತಾಪವಿಲ್ಲ. ಕೇಂದ್ರ ಸರ್ಕಾರದ ಅನುಮತಿ ನೇಪಹೇಳಿ ಜಾರಿಕೊಳ್ಳುವ ವ್ಯರ್ಥ ಪ್ರಯತ್ನವೇ ಸಿಎಂ ಸಿದ್ದರಾಮಯ್ಯ ಅವರ ಕಸರತ್ತು ಆಗಿದೆ ಎಂದು ಸಚಿವರು ಆರೋಪಿಸಿದ್ದಾರೆ.‌

ಇದನ್ನೂ ಓದಿ | Karnataka Budget 2024 : ಬಜೆಟ್‌ ಬಹಿಷ್ಕಾರ ಇತಿಹಾಸದಲ್ಲೇ ಮೊದಲಲ್ಲ! 2021ರಲ್ಲೇ ಸಿದ್ದು ಇತಿಹಾಸ ಸೃಷ್ಟಿಸಿದ್ದರು!

ಸಾಲದ ಹೊರೆಯ ಬಜೆಟ್

ಕಳೆದ ವರ್ಷಕ್ಕೆ ಹೋಲಿಸಿದರೆ ರೆವೆನ್ಯೂ ವೆಚ್ಚ 1 ಲಕ್ಷ ಕೋಟಿಗೂ ಮೀರಿದೆ. ತೆರಿಗೆದಾರರ ಮೇಲೆ ಅನಗತ್ಯ ಹೊರೆ ಹೇರಲಾಗಿದೆ. ಅಲ್ಲದೇ, ಕಳೆದ ಸರ್ಕಾರಕ್ಕಿಂತ ಶೇ.22ರಷ್ಟು ಸಾಲದ ಹೊರೆ ಇದರಲ್ಲಿದೆ. 1,05,246 ಕೋಟಿಗೂ ಅಧಿಕ ಸಾಲ ಈ ಬಜೆಟ್ ಒಳಗೊಂಡಿದೆ. ಹಾಗಾಗಿ ಇದೊಂದು ಸಾಲದ ಹೊರೆಯ ಬಜೆಟ್ ಆಗಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ.

Continue Reading

ಕರ್ನಾಟಕ

Karnataka Budget 2024: ಸಾಲ ಶೂಲದ ಹರಿಕಾರ ಸಾಲರಾಮಯ್ಯ; ರಾಜ್ಯ ಬಜೆಟ್‌ ಬಗ್ಗೆ ಬಿಜೆಪಿ ಟೀಕೆ

Karnataka Budget 2024: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ 1,93,246 ಕೋಟಿ ರೂ. ಸಾಲ‌ ಮಾಡಿದೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ 28 ಸಾವಿರ ರೂ. ಸಾಲ ಹೇರಿದ್ದಾರೆ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.

VISTARANEWS.COM


on

Karnataka Budget 2024 new 1
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ ಬಗ್ಗೆ ಸಾರ್ವಜನಿಕರು ಮತ್ತು ರಾಜಕೀಯ ನಾಯಕರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಇನ್ನು ಬಜೆಟ್‌ ಬಗ್ಗೆ ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿ, ಸಾಲ ಶೂಲದ ಹರಿಕಾರ ಸಾಲರಾಮಯ್ಯ, ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥ ಶಾಸ್ತ್ರಜ್ಞ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ ಎಂದು ಆಕ್ರೋಶ ಹೊರಹಾಕಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ, ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ 1,93,246 ಕೋಟಿ ರೂ. ಸಾಲ‌ ಮಾಡಿದ್ದಾರೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ 28 ಸಾವಿರ ರೂ. ಸಾಲ ಹೇರಿದ್ದಾರೆ. ಸಾಲರಾಮಯ್ಯನವರು ಒಂದು ಸಮುದಾಯದ ತುಷ್ಟೀಕರಣಕ್ಕಾಗಿ ಲಕ್ಷಾಂತರ ಕೋಟಿ ಸಾಲ ಮಾಡಿ ಕನ್ನಡಿಗರನ್ನು ಸಂಪೂರ್ಣವಾಗಿ ಮುಳುಗಿಸಿದ್ದಾರೆ. ಸಾಲದ ಸುಳಿಗೆ ಕರುನಾಡು ಸಿಲುಕಿದೆ. ಕರ್ನಾಟಕ ಅಭಿವೃದ್ಧಿಯಲ್ಲಿ 20 ವರ್ಷ ಹಿಂದಕ್ಕೆ ಬಿದ್ದಿದೆ. ಆರ್ಥಿಕತೆ ಹಳ್ಳ ಹಿಡಿದಿದೆ ಎಂದು ಕಿಡಿಕಾರಿದೆ.

ಇದನ್ನೂ ಓದಿ | Karnataka Budget Session 2024: ಬಿಜೆಪಿಯವರ ತಲೆಯಲ್ಲಿ ಏನೂ ಇಲ್ಲ; ಬಡವರ ಕೊಳ್ಳುವ ಶಕ್ತಿ ಹೆಚ್ಚಿಸುವ ಬಜೆಟ್‌ ಎಂದ ಸಿದ್ದರಾಮಯ್ಯ

ನಯಾಪೈಸೆ ಪ್ರಯೋಜನ ಇಲ್ಲದ ಬಜೆಟ್‌, ಉತ್ತರಕ್ಕೆ ಒಂದು ರೂ. ಕೂಡಾ ಇಲ್ಲ; ಬಿ.ವೈ ವಿಜಯೇಂದ್ರ

Karnataka-Budget-2024-BY-Vijayendra

ಬೆಂಗಳೂರು: ಮುಖ್ಯಮಂತ್ರಿಗಳು ಮತ್ತು ರಾಜ್ಯದ ಹಣಕಾಸು ಸಚಿವರಾದ ಸಿದ್ದರಾಮಯ್ಯನವರು (CM Siddaramaiah) ಇಂದು ಮಂಡಿಸಿದ ರಾಜ್ಯ ಬಜೆಟ್‌ (Karnataka Budget 2024) ಬಜೆಟ್ ರೈತವಿರೋಧಿ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಶೂನ್ಯ ಪ್ರಗತಿಯ ಬಜೆಟ್ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ವಿಶ್ಲೇಷಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ರಾಜ್ಯವನ್ನು 20 ವರ್ಷಗಳಷ್ಟು ಹಿಂದಕ್ಕೆ ತೆಗೆದುಕೊಂಡು ಹೋಗುವ ಬಜೆಟ್ ಇದು ಎಂದು ಟೀಕಿಸಿದರು.

ಯುವಕರಿಗೆ ಯಾವುದೇ ಒಂದು ಕಾರ್ಯಕ್ರಮಗಳನ್ನು, ಯೋಜನೆಗಳನ್ನು ಘೋಷಣೆ ಮಾಡಿಲ್ಲ. ತಮ್ಮ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಮತ್ತು ತಮ್ಮ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳಲು ಇವತ್ತು ಸನ್ಮಾನ್ಯ ಸಿದ್ದರಾಮಯ್ಯನವರು ತಮ್ಮ ಸಮಯ ವ್ಯರ್ಥ ಮಾಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Karnataka Budget 2024 : ಸಿದ್ದು ಬಜೆಟ್‌ನ ಘೋಷಣೆಗಳ ಸಂಪೂರ್ಣ ಪಟ್ಟಿ; ಇದನ್ನು ಓದಿದ್ರೆ ಸಾಕು!

ಈ ಬಜೆಟ್‍ನ ಪಾವಿತ್ರ್ಯತೆಯನ್ನು ಹಾಳು ಮಾಡಿದ್ದಾರೆ ಎಂದು ಆಕ್ಷೇಪಿಸಿದ ಅವರು, ಮೊನ್ನೆ ದೆಹಲಿ ಚಲೋ ಮಾಡಿದ್ದರು. ದೆಹಲಿಯಲ್ಲಿ ರಾಜ್ಯ ಸರಕಾರದ ಗೌರವವನ್ನು ಹರಾಜು ಹಾಕುವ ಕೆಲಸ ಆಗಿತ್ತು. ಇವತ್ತು ಕೂಡ ಮುಖ್ಯಮಂತ್ರಿಗಳು ತಮ್ಮ ಬಜೆಟ್‍ನಲ್ಲಿ ಕೇಂದ್ರ ಸರಕಾರವನ್ನು ದೂರುವ ಕೆಲಸ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ರೂಪಾಯಿ ಇಲ್ಲ..

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಒಂದು ರೂಪಾಯಿಯನ್ನೂ ಕೊಡದ ಬಜೆಟ್ ಇದಾಗಿದೆ. ಸಂಕಷ್ಟದಲ್ಲಿರುವ ರೈತರು ಬಜೆಟ್ ಮೂಲಕ ಪರಿಹಾರದ ನಿರೀಕ್ಷೆಯಲ್ಲಿದ್ದರು. ಇದರಡಿ ಮಹಿಳೆಯರಿಗೂ ಅನುಕೂಲ ಆಗುವುದಿಲ್ಲ. ಇವರು ತಮ್ಮ ಪ್ರಣಾಳಿಕೆಯಲ್ಲಿ ನೇಕಾರರ ಬಗ್ಗೆ ಮಾತನಾಡಿದ್ದರು. ನೇಕಾರರ ಪರವಾಗಿ ಯಾವುದೇ ಒಂದು ಯೋಜನೆಯನ್ನು ಘೋಷಣೆ ಮಾಡಿಲ್ಲ. ಯೋಜನೆ ಘೋಷಿಸುವುದು ಇರಲಿ; ಆ ನೇಕಾರರ ಹೆಸರನ್ನೂ ಉಲ್ಲೇಖಿಸಿಲ್ಲ ಎಂದು ವಿಜಯೇಂದ್ರ ಅವರು ಟೀಕಿಸಿದರು.

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳವಿಲ್ಲ!

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳದ ಭರವಸೆ ನೀಡಿದ್ದರು. ಅದರ ಬಗ್ಗೆಯೂ ಉಲ್ಲೇಖ ಮಾಡಿಲ್ಲ. ‘ನುಡಿದಂತೆ ನಡೆದ ಸರಕಾರ’ ಎಂದು ಕೊಚ್ಚಿಕೊಳ್ಳುತ್ತಾರೆ. ‘ನುಡಿದಂತೆ ನಡೆದ ಸರಕಾರ’ ಎಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದು, ರಾಜ್ಯದ ರೈತರು, ಬಡವರು, ದೀನದಲಿತರು, ನೇಕಾರರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿ ಎಲ್ಲ ವರ್ಗಕ್ಕೂ ನಿರಾಸೆ ಮೂಡಿಸಿದ ಬಜೆಟ್ ಇದು ಎಂದು ತಿಳಿಸಿದರು.

ಕೃಷಿ ಬೆಳೆ ಸಾಲ ಮನ್ನಾದ ಉಲ್ಲೇಖವೇ ಇಲ್ಲ

ಬರಗಾಲದ ಸಂದರ್ಭದಲ್ಲೂ ಕೃಷಿ ಮತ್ತು ಬೆಳೆ ಸಾಲದ ಮನ್ನಾ ಕುರಿತು ಉಲ್ಲೇಖ ಮಾಡಿಲ್ಲ. ಸರಕಾರಿ ನೌಕರರ ಮೂಗಿಗೆ ತುಪ್ಪ ಹಚ್ಚುವ ಕೆಲಸವನ್ನು ಇವರು ಮಾಡಿದ್ದಾರೆ. ಬರಗಾಲದ ಸಂದರ್ಭದಲ್ಲಿ ಯಾವುದೇ ರೀತಿಯ ಅನುಕೂಲ ಆಗದ ಬಜೆಟ್, ನಿಶ್ಚಿತವಾಗಿ ಇದು ಕರಾಳ ದಿನ ಎಂದರೂ ತಪ್ಪಾಗಲಾರದು ಎಂದು ನುಡಿದರು.

ಇದನ್ನೂ ಓದಿ | Karnataka Budget 2024: ರಾಜ್ಯ ಬಜೆಟ್‌ನಲ್ಲಿ ಯಾವ ಜಿಲ್ಲೆಗೆ ಏನು ಸಿಕ್ಕಿದೆ?; ಇಲ್ಲಿದೆ ಮಾಹಿತಿ

ಸಿದ್ದರಾಮಯ್ಯ ಅವರಿಂದ ಇಂಥ ಬಜೆಟ್‌ ನಿರೀಕ್ಷೆ ಮಾಡಿರಲಿಲ್ಲ

15ನೇ ಬಜೆಟ್ ಮಂಡಿಸುತ್ತಿರುವ ಒಬ್ಬ ಅನುಭವಿ ಮುಖ್ಯಮಂತ್ರಿ ಈ ರೀತಿ ಬಜೆಟ್ ಮಂಡಿಸಬಹುದೆಂದು ಯಾರೂ ನಿರೀಕ್ಷೆ ಮಾಡಿರಲಿಲ್ಲ. ನಿಜವಾಗಲೂ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಒಂದು ದುರಂತವೇ ಸರಿ ಎಂದ ಅವರು, ರೈತರನ್ನೂ ಕಡೆಗಣಿಸಿದ್ದಾರೆ; ಮಹಿಳೆಯರನ್ನೂ ಕಡೆಗಣಿಸಿದ್ದಾರೆ; ನೇಕಾರರನ್ನೂ ಕಡೆಗಣಿಸಿದ್ದಾರೆ, ಯುವಕರನ್ನೂ ಕಡೆಗಣಿಸಿದ್ದಾರೆ; ಉತ್ತರ ಕರ್ನಾಟಕದ ಅಭಿವೃದ್ಧಿಯನ್ನೂ ಕಡೆಗಣಿಸಿದ ಸರಕಾರ ಬಹುಶಃ ರಾಜ್ಯದ ಜನರ ಪಾಲಿಗೆ ಬದುಕಿದ್ದೂ ಸತ್ತಂತೆ ಎಂದು ಹೇಳಿದರು.

Continue Reading

ಕರ್ನಾಟಕ ಬಜೆಟ್ 2024

Karnataka Budget 2024 : ಸಾಲ ಮಾಡಿ ತುಪ್ಪ ತಂದ ಸಿದ್ದರಾಮಯ್ಯ: ಗ್ಯಾರಂಟಿಗೆ ಮೋಸವಿಲ್ಲ!

Karnataka Budget 2024 : ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ ಸರ್ವಸ್ಪರ್ಶಿ. ಆದರೆ, ಅದು ಯಾವುದನ್ನೂ ತಟ್ಟಿದಂತಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಸಾಕಷ್ಟು ಹಣವನ್ನು ಇಟ್ಟಿರುವ ಸಿದ್ದರಾಮಯ್ಯ ತಮ್ಮ ಬಜೆಟ್‌ ಗಾಗಿ ಒಂದು ಲಕ್ಷಕ್ಕಿಂತಲೂ ಹೆಚ್ಚು ಹಣವನ್ನು ಸಾಲದ ಮೂಲಕ ಹೊಂದಾಣಿಕೆ ಮಾಡಬೇಕಾಗಿದೆ.

VISTARANEWS.COM


on

Karnataka Budget 2024 Siddaramaiah
Koo

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಸಾಲ ಮಾಡಿ ತುಪ್ಪ ತಂದಿದ್ದಾರೆ. ರಾಜ್ಯದ ಜನತೆಗೆ ಅದನ್ನು ಹಿತವಾಗಿ ಹಂಚಿದ್ದಾರೆ. ಹೊಸತೇನೂ ಇಲ್ಲವಾದರೂ ಹೊತ್ತಿನ ಊಟಕ್ಕೆ ಸಾಕಾಗುವಂತೆ ಬಡಿಸಿದ್ದಾರೆ. ಕಾಂಗ್ರೆಸ್‌ ಸರ್ಕಾರದ ಭಾರಿ ಜನಪ್ರಿಯ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಅಡಚಣೆ ಆಗದಂತೆ ತಾಳಮೇಳ ಕಾಯ್ದುಕೊಂಡಿದ್ದಾರೆ: ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2024-25ನೇ ಸಾಲಿನ ಬಜೆಟ್‌ನ (Karnataka Budget 2024) ಸಿಂಪಲ್‌ ವಿಮರ್ಶೆ.

ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಮಂಡಿಸಿದ ಮೊದಲ ಪೂರ್ಣ ಪ್ರಮಾಣದ ಬಜೆಟ್‌ ಇದಾಗಿದೆ. 2023ರ ಜುಲೈ 7ರಂದು ಮಂಡಿಸಿದ ಬಜೆಟ್‌ ಕೇವಲ ಎಂಟು ತಿಂಗಳಿಗೆ ಸೀಮಿತವಾಗಿತ್ತು. ಶುಕ್ರವಾರ ವಿಧಾನಸಭೆಯಲ್ಲಿ ಅವರು ಸುಮಾರು ಮೂರು ಗಂಟೆ 14 ನಿಮಿಷಗಳ ಸುದೀರ್ಘ ಕಾಲ ಬಜೆಟ್‌ ಮಂಡನೆ ಮಾಡಿದ್ದು, ಅದರಲ್ಲಿ ಎಲ್ಲ ಪ್ರಮುಖ ಕ್ಷೇತ್ರಗಳಿಗೆ ಬಿಡಿ ಬಿಡಿಯಾಗಿ ಅನುದಾನಗಳನ್ನು ಪ್ರಕಟಿಸಿದ್ದಾರೆ.

2024-25ನೇ ಸಾಲಿನ ಕರ್ನಾಟಕ ರಾಜ್ಯ ‌ ಆಯವ್ಯಯದ (Karnataka Budget 2024) ಒಟ್ಟು ಗಾತ್ರವು (Budget layout) 3,71,383 ಕೋಟಿ ರೂ. ಅಂದರೆ 2023-24ನೇ ಸಾಲಿಗಿಂತ 44 ಸಾವಿರ ಕೋಟಿ ರೂ. ಹೆಚ್ಚು. ಇಷ್ಟು ದೊಡ್ಡ ಗಾತ್ರದ ಬಜೆಟ್‌ ಮಂಡನೆಗಾಗಿ ಸಿದ್ದರಾಮಯ್ಯ ಅವರು 1,05,246 ಕೋಟಿ ರೂ. ಸಾಲ ಮಾಡಬೇಕಾಗಿದೆ (Loan Responsibility). ಹಾಗಂತ ಇದು ವಿತ್ತೀಯ ಶಿಸ್ತಿನ ಒಳಗೇ ಇರುವ ಪ್ರಮಾಣವಾಗಿರುವುದರಿಂದ ರಾಜ್ಯಕ್ಕೆ ಆರ್ಥಿಕ ಅಪಾಯವೇನೂ ಎದುರಾಗುವ ಸ್ಥಿತಿಯಲ್ಲಿ ಇಲ್ಲ. ಆದರೆ, ಈ ಬಜೆಟ್‌ನ ಅಂತ್ಯದಲ್ಲಿ ರಾಜ್ಯಕ್ಕೆ ಒಟ್ಟು 6.65 ಲಕ್ಷ ಕೋಟಿ ರೂ. ಸಾಲದ ಹೊರೆ ಎದುರಾಗಿದೆ. ಅಂದರೆ ಪ್ರತಿಯೊಬ್ಬ ನಾಗರಿಕನ ತಲೆಯ ಮೇಲೆ ತಲಾ ಒಂದು ಲಕ್ಷ ರೂ ಸಾಲದ ಹೊರೆ ಇದೆ.

ಏನಿಲ್ಲ ಏನಿಲ್ಲ ಎಂದ ಬಿಜೆಪಿ ಬಹಿಷ್ಕಾರ ನಡುವೆಯೇ ಬಜೆಟ್‌ ಮಂಡನೆ

ಈ ಬಾರಿಯ ಬಜೆಟ್‌ ಮಂಡನೆಗೆ ಪ್ರತಿಪಕ್ಷವಾದ ಬಿಜೆಪಿ ಶಾಸಕರು ʻಏನಿಲ್ಲ ಏನಿಲ್ಲʼ ಎಂಬ ಜನಪ್ರಿಯ ಹಾಡನ್ನು ಬಳಸಿಕೊಂಡು ಪ್ಲೇಕಾರ್ಡ್‌ಗಳನ್ನು ಹಿಡಿದುಕೊಂಡು ಬಂದಿದ್ದರು. ಬಜೆಟ್‌ ಮಂಡನೆಯ ಮೇಲೆ ಇವುಗಳನ್ನು ಪ್ರದರ್ಶಿಸಿ ಕಾಂಗ್ರೆಸ್‌ ಸರ್ಕಾರದ ಬಜೆಟ್‌ನಲ್ಲಿ ಏನೇನೂ ಇಲ್ಲ ಎಂದು ಹೇಳಿ ಸಭಾತ್ಯಾಗ ಮಾಡಿದರು. ಬಳಿಕ ಆಡಳಿತ ಪಕ್ಷದ ಸದಸ್ಯರ ಉಪಸ್ಥಿತಿಯಲ್ಲಿ ಸಿದ್ದರಾಮಯ್ಯ ಸುದೀರ್ಘ ಬಜೆಟ್‌ ಮಂಡಿಸಿದರು.

ಇದನ್ನೂ ಓದಿ: Karnataka Budget Session 2024: ಬಿಜೆಪಿಯಿಂದ ಬಜೆಟ್‌ ಬಾಯ್ಕಾಟ್‌; ಇತಿಹಾಸದಲ್ಲೇ ಮೊದಲು ಎಂದ ಸಿದ್ದರಾಮಯ್ಯ

2024-25ನೇ ಸಾಲಿನಲ್ಲಿ ಒಟ್ಟು 2,90,531 ಕೋಟಿ ರೂ.ಗಳ ರಾಜಸ್ವ ವೆಚ್ಚ, 55,877 ಕೋಟಿ ರೂ.ಗಳ ಬಂಡವಾಳ ವೆಚ್ಚ ಹಾಗೂ ಸಾಲದ ಮರುಪಾವತಿ 24,974 ಕೋಟಿ ರೂ.ಗಳ ವೆಚ್ಚವನ್ನು ಒಳಗೊಂಡು, ಒಟ್ಟು ವೆಚ್ಚವು 3,71,383 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ. ಎಲ್ಲ ವಿತ್ತೀಯ ಮೂಲಗಳಿಂದು ಬರುವ ಒಟ್ಟು ಆದಾಯವು 2.66 ಲಕ್ಷ ಕೋಟಿ ಆಗುವುದರಿಂದ ಉಳಿದ ಮೊತ್ತವನ್ನು ಸಾಲವಾಗಿ ತರಬೇಕಾಗಿದೆ.

ಗ್ಯಾರಂಟಿ ಯೋಜನೆಗಳಿಗೆ 52,009 ಕೋಟಿ ರೂ. ಅನುದಾನ

ಒಟ್ಟಾರೆಯಾಗಿ ಐದೂ ಗ್ಯಾರಂಟಿಗಳಿಗೆ ಸೇರಿ 52,009 ಕೋಟಿ ರೂಪಾಯಿಯನ್ನು ಮೀಸಲಿಟ್ಟಿರುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಐದೂ ಗ್ಯಾರಂಟಿ ಯೋಜನೆಯಲ್ಲಿ ಸಿಂಹಪಾಲು ಗೃಹ ಲಕ್ಷ್ಮಿ ಯೋಜನೆಗೆ (28,608 ಕೋಟಿ ರೂ) ಖರ್ಚಾಗುತ್ತಿದ್ದರೆ, ಅತಿ ಕಡಿಮೆ ಅನುದಾನ (650 ಕೋಟಿ ರೂ.) ಯುವ ನಿಧಿಗೆ ಮೀಸಲಿಡಲಾಗಿದೆ.

Karnataka Budget Session 2024 Rs 52009 crore earmarked for 5 guarantee scheme

ಯಾವ ಗ್ಯಾರಂಟಿಗೆ ಎಷ್ಟು?

  1. ಗೃಹ ಜ್ಯೋತಿ: 9,657 ಕೋಟಿ ರೂ.
    ಅನ್ನ ಭಾಗ್ಯ: 8,079 ಕೋಟಿ ರೂ.
    ಶಕ್ತಿ: 5,015 ಕೋಟಿ ರೂ.
    ಯುವನಿಧಿ: 650 ಕೋಟಿ ರೂ.
    ಗೃಹ ಲಕ್ಷ್ಮಿ :28,608 ಕೋಟಿ ರೂ.
    ಒಟ್ಟು: 52,009 ಕೋಟಿ ರೂ.

ವಿವಿಧ ಇಲಾಖೆಗಳಿಗೆ ಅನುದಾನ ಹಂಚಿಕೆ ಹೇಗಿದೆ?

Karnataka Budget 2024 Yavudakke Estu

ಶಿಕ್ಷಣ- 44422 ಕೋಟಿ ರೂ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ- 34406 ಕೋಟಿ ರೂ.
ಇಂಧನ- 23159 ಕೋಟಿ ರೂ.
ಗ್ರಾಮೀಣಾಭಿವೃದ್ಧಿ- 21160 ಕೋಟಿ ರೂ.
ಒಳಾಡಳಿತ ಸಾರಿಗೆ- 19777 ಕೋಟಿ ರೂ.
ನೀರಾವರಿ- 19179 ಕೋಟಿ ರೂ.
ನಗರಾಭಿವೃದ್ಧಿ – 18155 ಕೋಟಿ ರೂ.
ಕಂದಾಯ- 16170 ಕೋಟಿ ರೂ.
ಆರೋಗ್ಯ – 15145 ಕೋಟಿ ರೂ.
ಸಮಾಜ ಕಲ್ಯಾಣ- 13334 ಕೋಟಿ ರೂ.
ಲೋಕೋಪಯೋಗಿ- 10424 ಕೋಟಿ ರೂ.
ಆಹಾರ ಮತ್ತು ನಾಗರಿಕ ಪೂರೈಕೆ- 9963 ಕೋಟಿ ರೂ.
ಕೃಷಿ ತೋಟಗಾರಿಕೆ- 6688 ಕೋಟಿ ರೂ.
ಪಶುಸಂಗೋಪನೆ- 3307 ಕೋಟಿ ರೂ.
ಇತರೆ- 124593 ಕೋಟಿ ರೂಪಾಯಿ

ಬಜೆಟ್‌ ಆರ್ಥಿಕ ನೋಟ ಹೀಗಿದೆ: ಯಾವುದಕ್ಕೆ ಎಷ್ಟು?

  • ಆಯವ್ಯಯ ಗಾತ್ರ (ಸಂಚಿತ ನಿಧಿ): 3,71,383 ಕೋಟಿ ರೂ.
  • ಒಟ್ಟು ಸ್ವೀಕೃತಿ: 3,68,674 ಕೋಟಿ ರೂ
  • ರಾಜಸ್ವ ಸ್ವೀಕೃತಿ: 2,63,178 ಕೋಟಿ
  • ಸಾರ್ವಜನಿಕ ಋಣ: 1,05,246 ಕೋಟ ರೂ. ಸೇರಿದಂತೆ ಬಂಡವಾಳ ಸ್ವೀಕೃತಿ 38 ಕೋಟಿ ರೂ.
  • ಒಟ್ಟು ವೆಚ್ಚ: 3,71,383 ಕೋಟಿ ರೂ.
  • ರಾಜಸ್ವ ವೆಚ್ಚ: 2,90,531 ಕೋಟ ರೂ.
  • ಬಂಡವಾಳ ವೆಚ್ಚ: 55,877 ಕೋಟ ರೂ.
  • ಸಾಲ ಮರುಪಾವತಿ: 24,794 ಕೋಟಿ ರೂ.
  • ಎಸ್‌.ಸಿ.ಎಸ್‌.ಪಿ. ಹಾಗೂ ಟಿ.ಎಸ್‌.ಪಿ. ಅಡಿಯಲ್ಲಿ ಆಯವ್ಯಯದಲ್ಲಿ ಒದಗಿಸಿದ ಅನುದಾನ 39,121 ಕೋಟಿ ರೂ.
  • ಎಸ್‌.ಸಿ.ಎಸ್‌.ಪಿ. ಅಡಿ 27,674 ಕೋಟಿ ರೂ. ಹಾಗೂ ಟಿ.ಎಸ್‌.ಪಿ. ಅಡಿ 11,447 ಕೋಟಿ ರೂ.

ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಪ್ರಕಟಿಸಿದ ಪ್ರಮುಖ ಕೊಡುಗೆಗಳ ಪಟ್ಟಿ ಇಲ್ಲಿದೆ

  1. ವಿವಿಧ ರೈತಪರ ಯೋಜನೆ ಒಗ್ಗೂಡಿಸಿ ಸಮಗ್ರ ಕೃಷಿ ಉತ್ತೇಜಿಸುವ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ
  • ಕೃಷಿ ಮತ್ತು ಪೂರಕ ಚಟುವಟಿಕೆಗಳ ನೀತಿ, ಯೋಜನೆಗಳ ಸಂಯೋಜನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ.
  • ತೋಟಗಾರಿಕೆ ಕುರಿತು ತಾಂತ್ರಿಕ ಸಲಹೆ, ಮಾರುಕಟ್ಟೆ ಸಂಪರ್ಕ, ಬೇಸಾಯ ಪರಿಕರಗಳು ಮತ್ತು ಉತ್ಪನ್ನಗಳನ್ನು ಒಂದೇ ಸೂರಿನಡಿ ಒದಗಿಸಲು ಆಯ್ದ ಜಿಲ್ಲೆಗಳಲ್ಲಿ ಕಿಸಾನ್‌ ಮಾಲ್‌ ಸ್ಥಾಪನೆ.
  • ಮಧ್ಯಮಾವಧಿ ಮತ್ತು ದೀರ್ಫಾವಧಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಹಿನ್ನೆಲೆಯಲ್ಲಿ ಡಿಸಿಸಿ ಮತ್ತು ಪಿಕಾರ್ಡ್‌ ಬ್ಯಾಂಕುಗಳಿಗೆ 450 ಕೋಟಿ ರೂ. ಅನುದಾನ. ಟಿ.ಎ.ಪಿ.ಸಿ.ಎಂ.ಎಸ್‌.ಗಳಿಗೆ ಗೋದಾಮು ನಿರ್ಮಾಣಕ್ಕೆ ಶೇ. 6ರ ಬಡ್ಡಿ ಸಹಾಯಧನ
  • ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಸುಮಾರು 75,000 ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸುವ ಗುರಿ. ಘೋಷಣೆಯಂತೆ 5300 ಕೋಟಿ ರೂ. ಬಿಡುಗಡೆಗೆ ಕೇಂದ್ರಕ್ಕೆ ಒತ್ತಾಯ.
  • 2000 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ದ್ವಿಭಾಷಾ ಮಾಧ್ಯಮ ಶಾಲೆಗಳಾಗಿ ಪರಿವರ್ತನೆ
  • ಏಳು ಜಿಲ್ಲೆಗಳಲ್ಲಿ 187 ಕೋಟ ರೂ. ವೆಚ್ಚದಲ್ಲಿ ಕ್ರಿಟಿಕಲ್‌ ಕೇರ್‌ ಬ್ಲಾಕ್‌ ಕಟ್ಟಡ ನಿರ್ಮಾಣ
  • ಅ೦ಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಮೇಲ್ವಿಚಾರಕಿಯರಿಗೆ 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್‌ ಘೋನ್‌ ಒದಗಿಸಲು ಕ್ರಮ.
  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿ೦ದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕಾಗಿ ಒಟ್ಟು 2,710 ಕೋಟಿ ರೂ. ಅನುದಾನ.
  • ಪರಿಶಿಷ್ಟ ಜಾತಿಯ 5,000 ಯುವಕ/ಯುವತಿಯರಿಗೆ ಡ್ರೋನ್‌ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ.
  • ಹಿಂದುಳಿದ ವರ್ಗಗಳ 150 ಮೆಟ್ರಿಕ್‌ ನಂತರದ ಹೊಸ ವಸತಿನಿಲಯಗಳ ಪ್ರಾರಂಭ; 174 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 200 ಕೋಟ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ಕ್ರಮ.
  • 50 ಸಂಖ್ಯಾಬಲವುಳ್ಳ 50 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, 100 ಸಂಖ್ಯಾಬಲವುಳ್ಳ 100 ಮೆಟ್ರಿಕ್‌ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳು, 100 ಹೊಸ ಮೌಲಾನಾ ಆಜಾದ್‌ ಶಾಲೆಗಳ ಪ್ರಾರಂಭ ಹಾಗೂ 25 ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣ ಪ್ರಾರಂಭ.
  • ವಸತಿ: 2024-25 ರಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿ
  • ಬೆಂಗಳೂರಿನಲ್ಲಿ ಸುಸಜ್ಜಿತವಾದ ಅಂತಾರಾಷ್ಟೀಯ ಮಟ್ಟದ ವಾಣಿಜ್ಯ ಪುಷ್ಪ ಮಾರುಕಟ್ಟೆ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆ.
  • ಬೆ೦ಗಳೂರು ಗ್ರಾಮಾ೦ತರ ಜಿಲ್ಲೆಯ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಹಾಗೂ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ.
  • ಯಾವುದೇ ಆದಾಯವಿಲ್ಲದ 34,165 “ಸಿ’ ವರ್ಗದ ಐತಿಹಾಸಿಕ ದೇವಾಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ Vision Group ರಚನೆ.
  • 29,523 “ಸಿ’ ವರ್ಗದ ದೇವಾಲಯಗಳ ಅರ್ಚಕರ ಬ್ಯಾಂಕ್‌ ಖಾತೆಗೆ ತಸ್ತಿಕ್‌ ಮೊತ್ತ ಜಮೆ ಮಾಡಲು ಕ್ರಮ.
  • ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ IML ಹಾಗೂ ಬಿಯರ್‌ ಸ್ಲಾಬ್‌ಗಳ ಪರಿಷ್ಕರಣೆ.
  • ಇದನ್ನೂ ಓದಿ: Karnataka Budget 2024 : ಸಿದ್ದು ಬಜೆಟ್‌ನ ಘೋಷಣೆಗಳ ಸಂಪೂರ್ಣ ಪಟ್ಟಿ; ಇದನ್ನು ಓದಿದ್ರೆ ಸಾಕು!
Continue Reading

ಕರ್ನಾಟಕ ಬಜೆಟ್ 2024

Karnataka Budget 2024 : ಬಜೆಟ್‌ ಬಹಿಷ್ಕಾರ ಇತಿಹಾಸದಲ್ಲೇ ಮೊದಲಲ್ಲ! 2021ರಲ್ಲೇ ಸಿದ್ದು ಇತಿಹಾಸ ಸೃಷ್ಟಿಸಿದ್ದರು!

Karanataka Budget 2024: ಬಜೆಟ್‌ ಬಹಿಷ್ಕಾರ ಇತಿಹಾಸದಲ್ಲೇ ಮೊದಲು ಎಂಬ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಬಿಜೆಪಿ ಗೇಲಿ ಮಾಡಿದೆ. ಸಿದ್ದರಾಮಯ್ಯ ಅವರೇ 2021ರಲ್ಲಿ ಬಜೆಟ್‌ ಬಹಿಷ್ಕರಿಸಿದ್ದರು ಎಂದು ನೆನಪಿಸಿದೆ.

VISTARANEWS.COM


on

Karnataka Budget 2024 Walkout
2021ರಲ್ಲಿ ಸಿದ್ದರಾ‌ಮಯ್ಯ ನೇತೃತ್ವದಲ್ಲಿ ನಡೆದ ಬಜೆಟ್‌ ಬಹಿಷ್ಕಾರದ ಚಿತ್ರ.
Koo

ಬೆಂಗಳೂರು: ರಾಜ್ಯ ವಿಧಾನ ಮಂಡಲದಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು ಮಂಡಿಸಿದ 2024-25ನೇ ಸಾಲಿನ ಬಜೆಟ್‌ನ್ನು (Karnataka Budget 2024) ಪ್ರತಿಪಕ್ಷ ಬಿಜೆಪಿ ಬಹಿಷ್ಕರಿಸಿದೆ. ಸಿದ್ದರಾಮಯ್ಯ ಅವರು ಭಾಷಣ ಆರಂಭ ಮಾಡುತ್ತಲೇ ʻಏನಿಲ್ಲ.. ಏನಿಲ್ಲ.. ಬಜೆಟ್‌ನಲ್ಲಿ ಏನಿಲ್ಲʼ ಎಂದು ಗೇಲಿ ಮಾಡುತ್ತಾ ಬಿಜೆಪಿ ಶಾಸಕರು ಹೊರನಡೆದಿದ್ದರು. ಈ ರೀತಿ ಬಜೆಟ್‌ ಮಂಡನೆಯನ್ನೇ ಬಹಿಷ್ಕರಿಸಿರುವುದು ಇತಿಹಾಸದಲ್ಲೇ ಮೊದಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಕ್ಷಗಳ ಮೇಲೆ ಹರಿಹಾಯ್ದಿದ್ದರು. ಆದರೆ, ಇದು ಇತಿಹಾಸದಲ್ಲಿ ಮೊದಲೇನಲ್ಲ. ಈ ಹಿಂದೆ ಸಿದ್ದರಾಮಯ್ಯನವರೇ ಬಜೆಟ್‌ ಬಹಿಷ್ಕಾರದ ಮೂಲಕ ಇತಿಹಾಸ ಬರೆದಿದ್ದರು ಎಂದು ಬಿಜೆಪಿ (Karnataka BJP) ಹೇಳಿದೆ.

Karnataka Budget 2024 BJP Walkout
ಬಜೆಟ್‌ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು

ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಆರ್‌. ಅಶೋಕ್‌ (R Ashok) ಅವರು ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಒಂದು ಪೋಸ್ಟ್‌ ಹಾಕಿ, 2021ರ ಬಜೆಟನ್ನು ಆಗ ಪ್ರತಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬಹಿಷ್ಕಾರ ಹಾಕಿದ್ದನ್ನು ನೆನಪಿಸಿಕೊಂಡಿದ್ದಾರೆ.

ಬಿಎಸ್‌ವೈ ಬಜೆಟ್‌ನಿಂದ ವಾಕೌಟ್‌ ಮಾಡಿದ್ದ ಸಿದ್ದರಾಮಯ್ಯ

ʻʻಬಜೆಟ್ ಭಾಷಣ ಬಹಿಷ್ಕಾರ ಮಾಡಿದ ಘಟನೆ ನಾನು ಇತಿಹಾಸದಲ್ಲೇ ನೋಡಿಲ್ಲ, ಇದು ಸಂವಿಧಾನಕ್ಕೆ ಮಾಡಿದ ಅಪಮಾನ ಅಂತ ಬುರುಡೆ ಬಿಡುವ ಮೊದಲ ತಮ್ಮ ಹಾಗೂ ತಮ್ಮ ಕಾಂಗ್ರೆಸ್‌ ಕ್ಷದ ಇತಿಹಾಸ ಒಮ್ಮೆ ತೆಗೆದು ನೋಡಿ ಸಿಎಂ ಸಿದ್ದರಾಮಯ್ಯ ಅವರೇ. 2021ರಲ್ಲಿ ಅಂದಿನ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರ ಬಜೆಟ್ ಭಾಷಣವನ್ನು ಬಹಿಷ್ಕಾರ ಮಾಡಿ ಸದನದಿಂದ ವಾಕ್ ಔಟ್ ಮಾಡುವ ಮೂಲಕ ಸನ್ಮಾನ್ಯ ಯಡಿಯೂರಪ್ಪನವರಂತಹ ಮುತ್ಸದ್ದಿ , ಹಿರಿಯ ಜನ ನಾಯಕರಿಗೆ ಅವಮಾನ ಮಾಡುವಾಗ ತಮ್ಮ ಈ ಉಪದೇಶ ತಮಗೆ ನೆನಪಿರಲಿಲ್ಲವೆ? ತಾವು ಮಹಾ ಸಾಚಾ ಎನ್ನುವಂತೆ ಮಾಧ್ಯಮಗಳ ಮುಂದೆ ನಾಟಕ ಆಡುವುದರಿಂದ ಏನೂ ಪ್ರಯೋಜನವಿಲ್ಲ. ತಮ್ಮ ಆಷಾಢಭೂತಿತನ, ಎರಡು ನಾಲಿಗೆ ಬಗ್ಗೆ ಎಲ್ಲರಿಗೂ ತಿಳಿದಿದೆʼʼ ಎಂದು ಆರ್‌. ಆಶೋಕ್‌ ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

2021ರಲ್ಲಿ ಬಿಎಸ್‌ ಯಡಿಯೂರಪ್ಪ ಅವರು ಬಜೆಟ್‌ ಮಂಡನೆ ಮಾಡಿದಾಗ ಸಿದ್ದರಾಮಯ್ಯ ಅವರು ಈ ಸರ್ಕಾರಕ್ಕೆ ನೈತಿಕ ಮೌಲ್ಯಗಳಿಲ್ಲ. ಹೀಗಾಗಿ ಬಜೆಟ್‌ ಮಂಡನೆಗೆ ಅರ್ಹತೆ ಇಲ್ಲ ಎಂದು ಹೇಳಿ ಭಾಷಣದ ಆರಂಭದಲ್ಲೇ ಸಭಾತ್ಯಾಗ ಮಾಡಿದ್ದಕ್ಕೆ ಸಂಬಂಧಿಸಿ ಅಂದು ಪ್ರಕಟವಾಗಿದ್ದ ಮಾಧ್ಯಮಗಳ ವರದಿಗಳು ಮತ್ತು ವಾಹಿನಿಗಳ ವರದಿಗಳನ್ನು ಟ್ಯಾಗ್‌ ಮಾಡಿದ್ದಾರೆ.

ಇದನ್ನೂ ಓದಿ : Karnataka Budget Session 2024: ಬಿಜೆಪಿಯಿಂದ ಬಜೆಟ್‌ ಬಾಯ್ಕಾಟ್‌; ಇತಿಹಾಸದಲ್ಲೇ ಮೊದಲು ಎಂದ ಸಿದ್ದರಾಮಯ್ಯ

ಬಿಜೆಪಿ ಸಭಾತ್ಯಾಗದ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಬಿಜೆಪಿಗೆ ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ: ಬಿಜೆಪಿಯವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ವಿಧಾನಸಭೆಯಲ್ಲಿ ಬಜೆಟ್ ಮಂಡಿಸುವಾಗ ವಾಕ್ ಔಟ್ ಮಾಡಿದ ನಿದರ್ಶನ ಇಲ್ಲ. ಬಜೆಟ್ ಓದಲು ಪ್ರಾರಂಭ ಮಾಡಿದ ಕೂಡಲೇ ಸುನೀಲ್ ಕುಮಾರ್ ಅವರು ಏನಿಲ್ಲ ಏನಿಲ್ಲ ಎಂದು ಘೋಷಣೆ ಕೂಗುತ್ತಿದ್ದರು. ಬಿಜೆಪಿಗೆ ಸಂಸದೀಯ, ಪ್ರಜಾಪ್ರಭುತ್ವ ಹಾಗೂ ಸಂವಿಧಾನಾತ್ಮಕ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ. ಅವರ ತಲೆ ತುಂಬ ರಾಜಕೀಯ ಮಂಜು ತುಂಬಿದೆ. ಕಾಮಾಲೆ ರೋಗಿಗಳಿಗೆ ಕಂಡಿದ್ದೆಲ್ಲ ಹಳದಿಯಂತೆ ಆಗಿದೆ. ರಾಜಕೀಯ ಹೇಳಿಕೆ ಬೇಡ ಎನ್ನುವುದಿಲ್ಲ. ಆದರೆ ಟೀಕೆಗಳು ಆರೋಗ್ಯಕರವಾಗಿರಬೇಕು. ಟೀಕೆ ಮಾಡುವ ಸಲುವಾಗಿಯೇ ಟೀಕೆ ಮಾಡುತ್ತಾರೆ. ಪ್ಲೇಕಾರ್ಡ್ ಹಿಡಿದಿದ್ದರು. ಬಜೆಟ್ ಕೇಳಬಾರದು ಎಂದು ಯೋಚಿಸಿಕೊಂಡೇ ಬಂದಿದ್ದರು. ನಾನು ವಸ್ತುಸ್ಥಿತಿಯನ್ನು ಹೇಳಿದರೆ ಅವರಿಗೆ ಅದು ನುಂಗಲಾರದ ತುತ್ತು. ಸತ್ಯ ಹೇಳಿದರೆ ತಡೆದುಕೊಳ್ಳಲು ಆಗುವುದಿಲ್ಲ ಎಂದು ಸಿದ್ದರಾಮಯ್ಯ ಅವರು‌ ಆಕ್ಷೇಪಿಸಿದ್ದರು.

Continue Reading
Advertisement
Brij Bhushan
Latest5 mins ago

Brij Bhushan : ಡಬ್ಲ್ಯುಎಫ್​ಐ ಮಾಜಿ ಅಧ್ಯಕ್ಷ ಬ್ರಿಜ್​ ಭೂಷಣ್ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಲು ಕೋರ್ಟ್​ ಆದೇಶ

Dates Benefits
ಆರೋಗ್ಯ7 mins ago

Dates Benefits: ಲೈಂಗಿಕ ಶಕ್ತಿ ಹೆಚ್ಚಿಸಿಕೊಳ್ಳಬೇಕೆ? ದಿನಕ್ಕೊಂದು ಖರ್ಜೂರ ತಿಂದರೆ ಸಾಕು!

Sanatan Sanstha
ದೇಶ16 mins ago

Sanatan Sanstha: ದಾಭೋಲ್ಕರ್‌ ಹತ್ಯೆ ಪ್ರಕರಣದಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು: ಚೇತನ್ ರಾಜಹಂಸ

Prajwal Revanna Case Revanna bail plea to be heard on Monday What is SIT argument
ಕ್ರೈಂ24 mins ago

Prajwal Revanna Case: ಸೋಮವಾರ ರೇವಣ್ಣ ಜಾಮೀನು ಅರ್ಜಿ ವಿಚಾರಣೆ: SIT ವಾದ ಏನು? ವಕೀಲ ನಾಗೇಶ್‌ ಕೌಂಟರ್‌ ಏನು?

US Officer
ವಿದೇಶ29 mins ago

ಮನೆಗೆ ನುಗ್ಗಿ ತಮ್ಮದೇ ದೇಶದ ಕಪ್ಪುವರ್ಣೀಯ ಸೇನಾಧಿಕಾರಿಯನ್ನು ಕೊಂದ ಅಮೆರಿಕ ಪೊಲೀಸರು; Video ಇದೆ

Absence Video Case registered against Prajwal for sharing and uploading obscene video in Kudremukh
ಕರ್ನಾಟಕ44 mins ago

Absence Video: ಅಶ್ಲೀಲ ವಿಡಿಯೋ ಶೇರ್‌, ಅಪ್ಲೋಡ್‌ ಮಾಡುತ್ತಿದ್ದ ಪ್ರಜ್ವಲ್‌ ಮೇಲೆ ಕುದುರೆಮುಖದಲ್ಲಿ ಕೇಸ್‌ ದಾಖಲು!

MS Dhoni
ಪ್ರಮುಖ ಸುದ್ದಿ46 mins ago

MS Dhoni : ಧೋನಿಯ ಗಾಯದ ಗುಮಾನಿಗೆ ಸ್ಪಷ್ಟತೆ ನೀಡಿದ ಕೋಚ್ ಫ್ಲೆಮಿಂಗ್​

Road Accident
ಕ್ರೈಂ51 mins ago

Road Accident : ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಸಾವು; ಕರೆಂಟ್‌ ವೈರ್‌ ತಾಗಿ ವ್ಯಕ್ತಿ ಮೃತ್ಯು

IPL 2024
ಪ್ರಮುಖ ಸುದ್ದಿ1 hour ago

IPL 2024 : ಸುನಿಲ್ ಗವಾಸ್ಕರ್ ಮತ್ತು ಹರ್ಷ ಭೋಗ್ಲೆ ವಿರುದ್ಧ ವಿರಾಟ್ ಕೊಹ್ಲಿ ವಾಗ್ದಾಳಿ

KEA
ಕರ್ನಾಟಕ1 hour ago

UGCET 2024: ಯುಜಿಸಿಇಟಿ ಅರ್ಜಿ ತಿದ್ದುಪಡಿಗೆ ಅಂತಿಮ ಅವಕಾಶ ನೀಡಿದ ಕೆಇಎ; ಕೊನೆಯ ದಿನಾಂಕ ಯಾವಾಗ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ4 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ6 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ7 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ13 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ20 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ22 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ22 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌