ಬಾರ್‌ನಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ: ಸಿಸಿಟಿವಿಯಲ್ಲಿ ಸೆರೆ - Vistara News

ಕರ್ನಾಟಕ

ಬಾರ್‌ನಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ: ಸಿಸಿಟಿವಿಯಲ್ಲಿ ಸೆರೆ

ದಯಾನಂದ್‌ ವೆಹಿಕಲ್‌ ಲೋನ್‌ ಸೆಟಲ್‌ ಮೆಂಟ್‌ ಮಾಡಿಕೊಂಡು ಊಟ ಮಾಡುತ್ತಿದ್ದ ವೇಳೆ ಗುರು, ಬಿಂದಾಸ್‌ , ಚಂದ್ರ ಸೇರಿದಂತೆ ಐದಾರು ಯುವಕರ ಗುಂಪು ಏಕಾಏಕಿ ದಾಳಿ ನಡೆಸಿದೆ.

VISTARANEWS.COM


on

ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಹಳೇ ವೈಷಮ್ಯ ಹಿನ್ನಲೆಯಲ್ಲಿ ಹಾಡುಹಗಲೇ ಬಾರ್‌ನಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಆದ ಘಟನೆ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕು ಬನ್ನೂರಿನಲ್ಲಿ ನಡೆದಿದೆ. ಹಲ್ಲೆ ನಡೆದ ಕೃತ್ಯವು ಸಿಸಿಟಿವಿ ಯಲ್ಲಿ ಸೆರೆಯಾಗಿದೆ.

ದಯಾನಂದ ( 29 ) ಹಲ್ಲೆಗೊಳಗಾದ ವ್ಯಕ್ತಿ. ಹಲ್ಲೆ ನಡೆಸಿದ ಆರೋಪಿಗಳಾದ ಗುರು, ಬಿಂದಾಸ್‌, ಚಂದ್ರು ಪರಾರಿಯಾಗಿದ್ದಾರೆ. ಬನ್ನೂರಿನ ಬಾರ್‌ ಆಂಡ್‌ ರೆಸ್ಟೋರೆಂಟ್‌ನಲ್ಲಿ ದಯಾನಂದ್‌ ವೆಹಿಕಲ್‌ ಲೋನ್‌ ಸೆಟಲ್‌ ಮೆಂಟ್‌ ಮಾಡಿಕೊಂಡು ಊಟ ಮಾಡುತ್ತಿದ್ದ ವೇಳೆ ಗುರು, ಬಿಂದಾಸ್‌ , ಚಂದ್ರ ಸೇರಿದಂತೆ ಐದಾರು ಯುವಕರ ಗುಂಪು ಏಕಾಏಕಿ ದಾಳಿ ನಡೆಸಿದೆ. ದಯಾನಂದ್‌ ಮೇಲೆ ಲಾಂಗ್‌ ಮತ್ತು ಬಿಯರ್‌ ಬಾಟಲ್‌ಗಳಿಂದ ಮನಸೋ ಇಚ್ಚೆ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಇದೀಗ ತೀರ್ವವಾಗಿ ಗಾಯಗೊಂಡ ದಯಾನಂದ್‌ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬನ್ನೂರು ಪಟ್ಟಣದ ನಿವಾಸಿಗಳಾದ ಆರೋಪಿಗಳಿಗೂ ಹಾಗೂ ದಯಾನಂದ್‌ ನಡುವೆ ಹಳೇ ದ್ವೇಷ ಇತ್ತು. ಈ ಹಿನ್ನಲೆಯಲ್ಲಿ ದಯಾನಂದ್‌ ಬನ್ನೂರು ತೊರೆದು ಮೈಸೂರಿನಲ್ಲಿ ನೆಲೆಸಿದ್ದರು. 6 ತಿಂಗಳ ಹಿಂದೆ ಮತ್ತೆ ಬನ್ನೂರಿಗೆ ವಾಪಾಸ್ಸು ಆಗಿದ್ದರು. ಬಾರ್‌ ನಲ್ಲಿ ದಯಾನಂದ್‌ ಇರುವ ಮಾಹಿತಿಯನ್ನು ತಿಳಿದ ತಂಡ ದಾಳಿ ನಡೆಸಿದೆ. ಈ ಕುರಿತು ಬನ್ನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Lok Sabha Election 2024 : ತುಮಕೂರಲ್ಲಿ ಕುದುರೆ ಏರಿ ಬಂದು ಮತದಾನ ಮಾಡಿದ ಡಾಕ್ಟರ್‌

Lok Sabha Election 2024: ಮತದಾನವನ್ನು ಹಬ್ಬದಂತೆ ಆಚರಿಸಲಾಗುತ್ತಿದ್ದು, ತುಮಕೂರಿನಲ್ಲಿ ವೈದ್ಯರೊಬ್ಬರು ವಿಭಿನ್ನವಾಗಿ ಕುದುರೆ ಏರಿ ಬಂದು ಮತದಾನವನ್ನು ಮಾಡಿದ್ದಾರೆ. ಮಂಡ್ಯದಲ್ಲಿ ಲಂಡನ್‌ನಿಂದ ಬಂದ ಮಹಿಳೆಯೊಬ್ಬರು ಹಕ್ಕು ಚಲಾಯಿಸಿದರು. ಚಿಕ್ಕಮಗಳೂರಲ್ಲಿ 80ರ ವೃದ್ಧೆಯೊಬ್ಬರು ಒಂದು ಗಂಟೆ ಮುಂಚೆಯೇ ಮತಗಟ್ಟೆಗೆ ಬಂದಿದ್ದರು.

VISTARANEWS.COM


on

By

Lok Sabha Election 2024
Koo

ತುಮಕೂರು/ಮಂಡ್ಯ: ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಮತದಾನ ಬಿರುಸಿನಿಂದ ಜರುಗುತ್ತಿದ್ದು, ಭಿನ್ನ-ವಿಭಿನ್ನವಾಗಿ ಮತಗಟ್ಟೆಗೆ ಎಂಟ್ರಿ ಕೊಟ್ಟು ಮತದಾರರು ಹಕ್ಕು ಚಲಾಯಿಸುತ್ತಿದ್ದಾರೆ. ತುಮಕೂರು ಜಿಲ್ಲೆ ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಕುದುರೆ ಏರಿ ಬಂದು ವೈದ್ಯ ಡಾ.ಶ್ರೀಧರ್ ಮತದಾನ ಮಾಡಿದ್ದಾರೆ.

ಡಾ.ಶ್ರೀಧರ್ ಕುದುರೆ ಏರಿ ಬಂದು ಇತರೆ ಮತದಾರರ ಗಮನ ಸೆಳೆದರು. ಸತ್ಯಕುಮಾರ್ ಫೌಂಡೇಶನ್ ಮೂಲಕ ಸಮಾಜ ಸೇವೆ ಮಾಡುತ್ತಿರುವ ಡಾ.ಶ್ರೀಧರ್ ಇದೇ ವೇಳೆ ಮತದಾನ ಮಾಡಲು ಬಂದಿದ್ದ ಮತದಾರರಿಗೆ ಉಚಿತ ಸಮೋಸ ಹಾಗೂ ಟೀ ವಿತರಣೆ ಮಾಡಿದರು. ಆಸ್ಪತ್ರೆ, ಉಚಿತ ದಾಸೋಹ ಸೇರಿದಂತೆ ಹಲವಾರು ಸೇವೆ ಒದಗಿಸುತ್ತಿದ್ದಾರೆ.

ಮತಗಟ್ಟೆಗೆ ಮುಂಚಿತವಾಗಿ ಬಂದ ಅಜ್ಜಿ

ಚಿಕ್ಕಮಗಳೂರು ನಗರದ ಬಸವನಹಳ್ಳಿಯಲ್ಲಿ 80ರ ವೃದ್ಧೆಯೊಬ್ಬರು ಒಂದು ಗಂಟೆ ಮುಂಚೆಯೇ ಮತದಾನ ಮಾಡಲು ಮತಗಟ್ಟೆ ಬಳಿ ಕಾದು ಕುಳಿತಿದ್ದರು. ಸೊಪ್ಪಿನ ವ್ಯಾಪಾರಿ ಆಗಿರುವ ವೃದ್ಧೆ ಕನ್ನಮ್ಮರ ಮತದಾನ ಮಾಡುವ ಹುಮ್ಮಸ್ಸು ಕಂಡು ಅಧಿಕಾರಿಗಳು ಸಂತಸಗೊಂಡರು. ಏಕಾಂಗಿಯಾಗಿ ಬಂದು ಮತದಾನ ಮಾಡಿ ಯುವಕರಿಗೆ ಮಾದರಿಯಾದರು.

Lok Sabha Election 2024

ವೋಟ್‌ ಮಾಡಲು ಒಂದೂವರೆ ಲಕ್ಷ ರೂ. ಖರ್ಚು

ವೋಟ್ ಮಾಡಲು ಲಂಡನ್‌ನಿಂದ ಮಂಡ್ಯಕ್ಕೆ ಮಹಿಳೆಯೊಬ್ಬರು ಬಂದಿದ್ದರು. ಮಂಡ್ಯದ ಕಾಳೇನಹಳ್ಳಿ ಗ್ರಾಮದ ಸೋನಿಕಾ ಎಂಬಾಕೆ ಲಂಡನ್‌ನಿಂದ ಬಂದು ಕಾಳೇನ ಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಇದೇ ವೇಳೆ ಮಾತಾನಾಡಿದ ಸೋನಿಕಾ ಎಲ್ಲೆಡೆ ಬರ ಇದೆ ನಮ್ಮ ರಾಜ್ಯಕ್ಕೆ ದೇಶಕ್ಕೆ ಒಳ್ಳೆಯದಾಗಬೇಕು. ಮೋದಿ ನಾಯಕತ್ವದಲ್ಲಿ ದೇಶ ಮುನ್ನಡೆಯುತ್ತಿದೆ ಹಾಗಾಗಿ ಕುಮಾರಸ್ವಾಮಿ ಅವರಿಗೆ ಮತ ಚಲಾಯಿಸಿದ್ದೀನಿ. ನೀವು ಮತದಾನ ಮಾಡಿ, ಮತ ಚಲಾಯಿಸುವುದಕ್ಕಾಗಿಯೇ ಒಂದೂವರೆ ಲಕ್ಷ ರೂ. ಖರ್ಚು ಮಾಡಿಕೊಂಡು ಬಂದಿರುವುದಾಗಿ ಹೇಳಿದರು.

ಇದನ್ನೂ ಓದಿ: Lok Sabha Election 2024 : ಬೋಟ್‌ನಲ್ಲಿ ಬಂದು ವೋಟ್‌ ಮಾಡಿದ 150ಕ್ಕೂ ಮತದಾರರು

ದುಬೈ, ಫಿಲಿಫೈನ್ಸ್‌ನಿಂದ ಬಂದು ಹಕ್ಕು ಚಲಾಯಿಸಿದ ಮತದಾರರು

ಕೋಲಾರ/ಮಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ (Lok Sabha Election 2024) ಬಿರುಸಿನ ಮತದಾನ ನಡೆಯುತ್ತಿದ್ದು, ದುಬೈನಿಂದ ಬಂದು ಕೋಲಾರದ ನಿವಾಸಿಯೊಬ್ಬರು ಮತದಾನ ಮಾಡಿದ್ದಾರೆ. ಕೋಲಾರ ನಿವಾಸಿ ಅಬ್ದುಲ್ ಸುಬಾನ್ ಎಂಬುವವರು ಬ್ಯುಸಿನೆಸ್‌ಗೆಂದು ದುಬೈಗೆ ತೆರಳಿದ್ದರು. ಆದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಹಕ್ಕು ಚಲಾಯಿಸಲೆಂದು ದುಬೈನಿಂದ ಬಂದಿದ್ದರು. ಕೋಲಾರದ ಸರ್ಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 117ರಲ್ಲಿ ಮತದಾನ ಮಾಡಿದರು.

ಇತ್ತ ಮಂಗಳೂರಿನ ಉಳಾಯಿಬೆಟ್ಟುವಿನ ಜೀವಿತ ಎಂಬುವವರು ದುಬೈನಿಂದ ಬಂದು ಮತದಾನ ಮಾಡಿದ್ದರು. ನಮ್ಮ ಮತ ನಮ್ಮ ಹಕ್ಕು ಎನ್ನುವ ದೃಷ್ಟಿಯಿಂದ ಮತದಾನ ಮಾಡಲು ಬಂದಿದ್ದಾಗಿ ಜೀವಿತ ತಿಳಿಸಿದರು.

ಚಿತ್ರದುರ್ಗದ ಶಿಕ್ಷಕರ ಕಾಲೋನಿ ನಗರದ ನಿವಾಸಿಯಾಗಿರುವ ಲಿಖಿತ ಅವರು ಫಿಲಿಫೈನ್ಸ್‌ನಿಂದ ಬಂದು ಮತದಾನ ಮಾಡಿದರು. ಫಿಲಿಫೈನ್ಸ್‌ನಲ್ಲಿ ಎಂಬಿಬಿಎಸ್‌ (MBBS) ಓದುತ್ತಿರುವ ಲಿಖಿತ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಮಾಡಲು ಬಂದಿದ್ದರು. ಚಿತ್ರದುರ್ಗದ ಜೋಗಿ ಮಟ್ಟಿ ರಸ್ತೆಯಲ್ಲಿರುವ ಮತಗಟ್ಟೆ ಸಂಖ್ಯೆ 230ರಲ್ಲಿ ಮತದಾನ ಮಾಡಿದರು. ಪ್ರತಿ ಬಾರಿ ತಪ್ಪದೆ ಬಂದು ಮತದಾನ ಮಾಡುತ್ತಿರುವುದಾಗಿ ಲಿಖಿತ ತಿಳಿಸಿದರು.

ಇದನ್ನೂ ಓದಿ: Lok Sabha Election 2024: ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಓಡೋಡಿ ಹೋದ ವರ; ವೋಟ್‌ ಹಾಕಿ ನಿರಾಳ

ಉಡುಪಿಯಿಂದ ತುಮಕೂರಿಗೆ ಬಂದು ಮತ ಹಾಕಿದ ನ್ಯಾಯಾಧೀಶ

ನ್ಯಾಯಾಧೀಶ ಜೀತು ಆರ್.ಎಸ್ ಅವರು ಉಡುಪಿಯಿಂದ ತುಮಕೂರಿಗೆ ಬಂದು ಮತ ಹಾಕಿದರು. ತುಮಕೂರು ಗ್ರಾಮಾಂತರದ ಕೆ.ಪಾಲಸಂದ್ರದಲ್ಲಿರುವ ಮತಗಟ್ಟೆ ಸಂಖ್ಯೆ 114ರಲ್ಲಿ ಹಕ್ಕು ಚಲಾಯಿಸಿದರು. ನಂತರ ಮಾತನಾಡಿದ ಅವರು ಎಲ್ಲರೂ ಮತದಾನ ಮಾಡುವಂತೆ ಮನವಿ ಮಾಡಿದರು. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡಲು ಸಾಕಷ್ಟು ಜನ ಮಹಾನ್ ಪುರುಷರು ಹೋರಾಡಿದ್ದಾರೆ. ಮತದಾನ ಮಾಡುವ ಮೂಲಕ ನಮಗೆ ಸಿಕ್ಕಿರುವ ಸ್ವಾತಂತ್ರ್ಯವನ್ನ ಸಂಭ್ರಮಿಸಬೇಕು. ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಇಂತಹ ಪ್ರಾತಃಸ್ಮರಣೀಯರನ್ನು ಗೌರವಿಸಬೇಕು ಎಂದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Rahul Dravid: ಸಾಮಾನ್ಯರಂತೆ ಕ್ಯೂನಲ್ಲಿ ನಿಂತು ಮತದಾನ ಮಾಡಿದ ರಾಹುಲ್‌ ದ್ರಾವಿಡ್;‌ ವಿಡಿಯೊ ಇಲ್ಲಿದೆ

Rahul Dravid: Lok Sabha Election: ಮೊದಲ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳಲ್ಲಿ ಶಾಂತಿಯುತವಾಗಿ ಮತದಾನ ನಡೆಯುತ್ತಿದೆ. ಬಿಸಿಲನ್ನೂ ಲೆಕ್ಕಿಸದೆ ಜನ ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಸೆಲೆಬ್ರಿಟಿಗಳು ಕೂಡ ಮತದಾನಕ್ಕೆ ಸಾಥ್‌ ನೀಡುತ್ತಿರುವುದು ಪ್ರಮುಖ ಸಂಗತಿಯಾಗಿದೆ. ಅದರಲ್ಲೂ, ರಾಹುಲ್‌ ದ್ರಾವಿಡ್‌ ಅವರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿರುವ ವಿಡಿಯೊ ಭಾರಿ ವೈರಲ್‌ ಅಗಿದೆ.

VISTARANEWS.COM


on

Rahul Dravid
Koo

ಬೆಂಗಳೂರು: ಭಾರತೀಯ ಕ್ರಿಕೆಟ್‌ ತಂಡದ ಮುಖ್ಯ ತರಬೇತುದಾರ, ಮಾಜಿ ಕ್ರಿಕೆಟಿಗ, ವಾಲ್‌ ಎಂದೇ ಖ್ಯಾತಿಯಾದ ರಾಹುಲ್‌ ದ್ರಾವಿಡ್‌ (Rahul Dravid) ಅವರು ಬೆಂಗಳೂರಿನಲ್ಲಿ (Bengaluru) ಮತದಾನ ಮಾಡಿದ್ದಾರೆ. ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ಹಿನ್ನೆಲೆಯಲ್ಲಿ ರಾಹುಲ್‌ ಅವರು ಮಲ್ಲೇಶ್ವರಂ ಮತಗಟ್ಟೆಯಲ್ಲಿ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. ಹಾಗೆಯೇ, ಜನರಿಂದ ಭಾರಿ ಮೆಚ್ಚುಗೆಯೂ ವ್ಯಕ್ತವಾಗಿದೆ.

ಚುನಾವಣೆ ಆಯೋಗದ ಮಾಹಿತಿ ಪ್ರಕಾರ, ಮಧ್ಯಾಹ್ನ 3 ಗಂಟೆ ವೇಳಗೆ ಶೇ.50.93ರಷ್ಟು ಮತದಾನ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.58.76ರಷ್ಟು ಮತದಾನ ದಾಖಲಾಗಿದ್ದು, ಇದೇ ಜಿಲ್ಲೆಯಲ್ಲಿ ಹೆಚ್ಚು ಮತದಾನ ದಾಖಲಾಗಿದೆ. ಬೆಂಗಳೂರು ಕೇಂದ್ರದಲ್ಲಿ ಶೇ.40.10ರಷ್ಟು ಮತದಾನ ನಡೆದಿದ್ದು, ಅತಿ ಕಡಿಮೆ ಮತದಾನ ದಾಖಲಾದ ಜಿಲ್ಲೆ ಎನಿಸಿದೆ. ಉಡುಪಿ-ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರಿನಲ್ಲೂ ಹೆಚ್ಚಿನ ಜನ ಮತದಾನ ಮಾಡಿದ್ದಾರೆ.

ಹಸಿಮಣೆ ಏರುವ ಮೊದಲು ಮತದಾನ ಮಾಡಿದ ವರ

ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕಿನ ಸಂತೇಮರಳ್ಳಿಯಲ್ಲಿ ವರನೊಬ್ಬ ಮತಗಟ್ಟೆಗೆ ಓಡೋಡಿ ಬಂದು ಮತ ಚಲಾಯಿಸಿದ್ದಾರೆ. ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಮತಕೇಂದ್ರಕ್ಕೆ ಓಡೋಡಿ ಹೋದ ವರ ವೋಟ್‌ ಹಾಕಿ ನಿರಾಳರಾದರು. ವರ ಚೇತನ್ ಎಂಬುವವರು ಮತಗಟ್ಟೆ ಸಂಖ್ಯೆ 60ರಲ್ಲಿ ಮತದಾನ ಮಾಡಿ ತಮ್ಮ ಹಕ್ಕು ಚಲಾಯಿಸಿ ಇತರರಿಗೂ ಮಾದರಿ ಆದರು. ಚೇತನ್‌ ಅವರು ದೀಪಿಕಾ ಎಂಬುವರ ಜತೆಗೆ ವಿವಾಹವಾಗುತ್ತಿದ್ದು, ತಮ್ಮ ಮುಹೂರ್ತದ ವಸ್ತ್ರದಲ್ಲೇ ಬಂದು ವೋಟ್‌ ಹಾಕಿದ್ದಾರೆ.

ಚಿಕ್ಕಮಗಳೂರಿನ ಶೃಂಗೇರಿ ತಾಲೂಕಿನ ಕೊತ್ತುಗೋಡು ಸರ್ಕಾರಿ ಶಾಲೆಯ ಮತಗಟ್ಟೆಯಲ್ಲಿ ಮುಹೂರ್ತಕ್ಕೂ ಮುನ್ನ ನವ ವಧುವೊಬ್ಬರು ಮತದಾನ ಮಾಡಿ ಗಮನ ಸೆಳೆದಿದ್ದಾರೆ. ರೇಷ್ಮೆ ಸೀರೆ ಉಟ್ಟಿದ್ದ ಮದುವಣಗಿತ್ತಿ ಸಂಪೂರ್ಣ ರೆಡಿಯಾಗಿ ಬಂದು ಮತ ಚಲಾಯಿಸಿ ಮದುವೆ ಮಂಟಪಕ್ಕೆ ಹೋಗಿದ್ದಾರೆ. ಬಳಿಕ ಹಸೆಮಣೆ ಏರಿದ್ದಾರೆ. ಈ ಮೂಲಕ ತಮ್ಮ ಹಕ್ಕನ್ನು ಚಲಾವಣೆ ಮಾಡಿದ್ದಾರೆ. ಕುಂದೂರಿನ ತಳವಾರದ ಸೌಮ್ಯಾ ಅವರು ಮೂಡಿಗೆರೆಯ ಕಲ್ಯಾಣ ಮಂಟಪಕ್ಕೆ ತೆರಳುವ ವೇಳೆ ಕುಟುಂಬ ಸಮೇತ ಮತಗಟ್ಟೆಗೆ ಬಂದು ಮತದಾನ ಮಾಡಿದ್ದಾರೆ.

ಇದನ್ನೂ ಓದಿ: Gold Rate Today: ಮತದಾನದ ದಿನ ಬಂಗಾರದ ದರ ತೇಜಿ, ಬೆಂಗಳೂರಿನಲ್ಲಿ 24K ಚಿನ್ನಕ್ಕೆ ₹440 ಏರಿಕೆ

Continue Reading

Lok Sabha Election 2024

Lok Sabha Election 2024: ಚಾಮರಾಜನಗರದಲ್ಲಿ ಮತ ಯಂತ್ರ ಪೀಸ್‌ ಪೀಸ್‌; ಮತಗಟ್ಟೆ ಧ್ವಂಸ, ಲಾಠಿ ಚಾರ್ಜ್‌!

Lok Sabha Election 2024: ಕನಿಷ್ಠ ಮೂಲಭೂತ ಸೌಕರ್ಯವನ್ನೂ ನೀಡಲಾಗಿಲ್ಲ. ಕುಡಿಯುವ ನೀರು, ರಸ್ತೆ, ವಿದ್ಯುತ್, ಆರೋಗ್ಯ, ಶಿಕ್ಷಣ ಎಲ್ಲವೂ ಇಲ್ಲಿ ಮರೀಚಿಕೆಯಾಗಿದೆ. ಕೆಲವು ದಿನಗಳ ಹಿಂದೆಯೇ ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಆದರೂ, ಯಾವೊಂದು ಭರವಸೆ ಸಿಗದೇ ಇರುವ ಹಿನ್ನೆಲೆಯಲ್ಲಿ ಮತದಾನವನ್ನು ಬಹಿಷ್ಕಾರ ಮಾಡುತ್ತಿರುವುದಾಗಿ ಗ್ರಾಮಸ್ಥರು ಹೇಳಿದ್ದಾರೆ. ಇನ್ನು ಇಂಡಿಗನತ್ತ ಗ್ರಾಮಸ್ಥರು ಮತಗಟ್ಟೆಯನ್ನು ಪುಡಿ ಪುಡಿ ಮಾಡಿದ್ದಾರೆ.

VISTARANEWS.COM


on

Lok Sabha Election 2024 Villagers vandalise polling booth in Chamarajanagar
Koo

ಚಾಮರಾಜನಗರ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ನಡೆಯುತ್ತಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದರೆ, ಚಾಮರಾಜನಗರ ಲೋಕಸಭಾ ಕ್ಷೇತ್ರದ (Chamarajanagar Lok Sabha constituency) ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕರಿಸಲಾಗಿದೆ. ಇದೇ ವೇಳೆ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯನ್ನೇ ಧ್ವಂಸ ಮಾಡಲಾಗಿದೆ.

ಎಷ್ಟೇ ಬಾರಿ ಮನವಿ ಮಾಡಿದರೂ ಈ ಗ್ರಾಮಗಳಲ್ಲಿ ಮೂಲ ಸೌಕರ್ಯವನ್ನು ಕಲ್ಪಿಸಲಾಗಿಲ್ಲ. ಚುನಾವಣೆ ಬಂದಾಗ ಮಾತ್ರ ಈ ರಾಜಕಾರಣಿಗಳಿಗೆ ನಮ್ಮ ನೆನಪಾಗುತ್ತದೆ. ಅದಾದ ಬಳಿಕ ನಮ್ಮನ್ನು ಕೇಳುವವರೇ ಇಲ್ಲ ಎಂದು ಆರೋಪಿಸಿ ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳ ಗ್ರಾಮಸ್ಥರು ಮತದಾನವನ್ನು ಬಹಿಷ್ಕಾರ ಮಾಡಿದ್ದಾರೆ.

Lok Sabha Election 2024 Villagers vandalise polling booth in Chamarajanagar

85 ಮಂದಿಯಲ್ಲಿ ಮತ ಚಲಾಯಿಸಿದ್ದು ಇಬ್ಬರೇ!

ಇಂಡಿಗನತ್ತ, ತೇಕಣೆ, ಮೆಂದಾರೆ ಹಾಗೂ ತುಳಸಿಕೆರೆ ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕಾರ ಮಾಡಲಾಗಿದೆ. ಪಡಸಲನತ್ತ ಗ್ರಾಮದಲ್ಲಿ 85 ಮತದಾರರ ಪೈಕಿ ಕೇವಲ ಇಬ್ಬರು ಮತದಾನ ಮಾಡಿದ್ದಾರೆ. ಉಳಿದಂತೆ ಮತಗಟ್ಟೆಗಳತ್ತ ಯಾರೊಬ್ಬರೂ ಸುಳಿದಿಲ್ಲ.

Lok Sabha Election 2024 Villagers vandalise polling booth in Chamarajanagar

ನೀರು, ರಸ್ತೆ, ವಿದ್ಯುತ್‌ ಏನೂ ಇಲ್ಲ!

ಕನಿಷ್ಠ ಮೂಲಭೂತ ಸೌಕರ್ಯವನ್ನೂ ನೀಡಲಾಗಿಲ್ಲ. ಕುಡಿಯುವ ನೀರು, ರಸ್ತೆ, ವಿದ್ಯುತ್, ಆರೋಗ್ಯ, ಶಿಕ್ಷಣ ಎಲ್ಲವೂ ಇಲ್ಲಿ ಮರೀಚಿಕೆಯಾಗಿದೆ. ಕೆಲವು ದಿನಗಳ ಹಿಂದೆಯೇ ಮತದಾನ ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಆದರೂ, ಯಾವೊಂದು ಭರವಸೆ ಸಿಗದೇ ಇರುವ ಹಿನ್ನೆಲೆಯಲ್ಲಿ ಮತದಾನವನ್ನು ಬಹಿಷ್ಕಾರ ಮಾಡುತ್ತಿರುವುದಾಗಿ ಗ್ರಾಮಸ್ಥರು ಹೇಳಿದ್ದಾರೆ.

ಮತಯಂತ್ರ ಧ್ವಂಸ ಮಾಡಿದ ಗ್ರಾಮಸ್ಥರು

ಇನ್ನು ಇಂಡಿಗನತ್ತ ಗ್ರಾಮದಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಮತಗಟ್ಟೆಯನ್ನು ಧ್ವಂಸ ಮಾಡಿದ್ದಾರೆ. ಮತದಾನದಿಂದ ದೂರ ಉಳಿದ ಗ್ರಾಮಸ್ಥರಿಂದ ಈ ಕೃತ್ಯ ನಡೆದಿದೆ. ಈ ವೇಳೆ ಗ್ರಾಮಸ್ಥರ ಮನವೊಲಿಕೆಗೆ ತೆರಳಿದ್ದ ಅಧಿಕಾರಿಗಳ ಮೇಲೆಯೂ ಹಲ್ಲೆ ನಡೆಸಲಾಗಿದೆ. ಆಕ್ರೋಶಗೊಂಡ ಹಲವರು ಇವಿಎಂ, ಮೇಜು ಕುರ್ಚಿ ಮತಗಟ್ಟೆ ಸಾಮಗ್ರಿಗಳನ್ನು ಧ್ವಂಸ ಮಾಡಿದ್ದಾರೆ.

ಲಾಠಿ ಚಾರ್ಚ್‌; ಹಲವರಿಗೆ ಗಾಯ

ಸ್ಥಳದಲ್ಲಿ ಜನರನ್ನು ಚದುರಿಸಲು ಪೊಲೀಸರಿಂದ ಲಾಠಿ ಚಾರ್ಜ್ ನಡೆಸಲಾಗಿದೆ. ಇದೇ ವೇಳೆ ತಿರುಗಿಬಿದ್ದ ಜನರು ಸಹ ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತವರಣ ನಿರ್ಮಾಣವಾಗಿದೆ. ಸಾರ್ವಜನಿಕರು ಸೇರಿ ಅಧಿಕಾರಿಗಳಿಗೂ ಗಾಯಗಳಾಗಿವೆ. ಪುರುಷರು, ಮಹಿಳೆಯರು ಎನ್ನದೆ ಪೊಲೀಸರು ಲಾಠಿ ಚಾರ್ಚ್ ಮಾಡಿದ್ದಾರೆ.

ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಶುಕ್ರವಾರ (ಏಪ್ರಿಲ್‌ 26) ಮೊದಲ ಹಂತದ ಮತದಾನ (First phase of polling) ನಡೆಯುತ್ತಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ. ಬೆಂಗಳೂರಿನಲ್ಲಿ ವೃದ್ಧೆಯೊಬ್ಬರು ಆಸ್ಪತ್ರೆಗೆ ದಾಖಲಾಗಿದ್ದರೂ, ಆಕ್ಸಿಜನ್‌ ಸಮೇತ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ್ದಾರೆ. ಇನ್ನು ಮೈಸೂರಿನ ಹುಣಸೂರಿನಲ್ಲಿ ವೃದ್ಧೆಯೊಬ್ಬರು ಮತ ಚಲಾಯಿಸಿ ಮೃತಪಟ್ಟಿದ್ದಾರೆ.

ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ (Bangalore South Lok Sabha constituency) ಜಯನಗರದಲ್ಲಿ ವೃದ್ಧೆಯೊಬ್ಬರು ಆಕ್ಸಿಜನ್‌ ಸಹಾಯದಿಂದಲೇ ಮತಗಟ್ಟೆಗೆ ಬಂದು ಹಕ್ಕು ಚಲಾವಣೆ ಮಾಡಿದ್ದಾರೆ. 78 ವರ್ಷದ ಕಲಾವತಿ ಎಂಬುವವರೇ ಆಕ್ಸಿಜನ್ ಸಮೇತ ಹಕ್ಕು ಚಲಾಯಿಸಿದ ವೃದ್ಧೆಯಾಗಿದ್ದಾರೆ. ಕಲಾವತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರನ್ನು ಏಪ್ರಿಲ್‌ 23ರಂದು ಜಯನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಕ್ರವಾರ ಅವರನ್ನು ಆಂಬ್ಯುಲೆನ್ಸ್‌ ಮೂಲಕ ವೈದ್ಯಕೀಯ ಸಿಬ್ಬಂದಿ ಜತೆ ಕರೆತರಲಾಗಿದ್ದು, ಮತ ಚಲಾವಣೆಗೆ ಅವಕಾಶ ಕಲ್ಪಿಸಲಾಗಿತ್ತು. ಕೊನೆಗೂ ಅವರು ತಮ್ಮ ಹಕ್ಕು ಚಲಾವಣೆ ಮಾಡಿದ್ದಾರೆ.

ವೋಟು ಹಾಕಿ ಬಂದು ವೃದ್ಧೆ ನಿಧನ

ಮೈಸೂರು: ಮೈಸೂರು ಲೋಕಸಭಾ ಕ್ಷೇತ್ರದ (Mysore Lok Sabha constituency) ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ವೃದ್ಧೆಯೊಬ್ಬರು ತಿಪ್ಪೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 172ರಲ್ಲಿ ಮತ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಹೊರ ಬರುತ್ತಿದ್ದಂತೆ ಅವರು ಕುಸಿದು ಮೃತಪಟ್ಟಿದ್ದಾರೆ.

Lok Sabha Election 2024 Woman casts her vote with the help of oxygen elderly woman dies after casting her vote

ಹುಣಸೂರು ತಾಲೂಕಿನ ತಿಪ್ಪೂರು ಗ್ರಾಮದ ಪುಟ್ಟಮ್ಮ (90) ಮೃತರು. ಇವರು ಪ್ರತಿ ಚುನಾವಣೆಯಂತೆ ಈ ಬಾರಿಯೂ ತಮ್ಮ ಹಕ್ಕನ್ನು ತಪ್ಪದೇ ಚಲಾವಣೆ ಮಾಡಿದ್ದಾರೆ. ಮತ ಹಾಕಿ ಅದೇ ಖುಷಿಯಲ್ಲಿ ವಾಪಸಾಗುತ್ತಿದ್ದಾಗ ದಿಢೀರ್‌ ಕುಸಿದುಬಿದ್ದಿದ್ದು, ಅಲ್ಲಿಯೇ ಮೃತಪಟ್ಟಿದ್ದಾರೆ.

ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ (First phase of polling) ಪ್ರಕ್ರಿಯೆಗೆ ಚಾಲನೆ ಸಿಕ್ಕಿದ್ದು, ಜೆ.ಪಿ.ನಗರ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮತ ಚಲಾಯಿಸಲು ಬಂದ ಮಹಿಳೆಯೊಬ್ಬರಿಗೆ ಹೃದಯ ಸ್ತಂಭನ (cardiac arrest) ಆಗಿದೆ. ಬಳಿಕ ಅಲ್ಲಿಯೇ ಮತ ಚಲಾಯಿಸಲು ಬಂದಿದ್ದರಿಂದ ಅವರ ಜೀವ ಉಳಿದಿದೆ.

ಜೆ.ಪಿ. ನಗರದ 8ನೇ ಹಂತದ ಜಂಬೂ ಸವಾರಿ ದಿನ್ನೆಯಲ್ಲಿ ಮಹಿಳೆಯೊಬ್ಬರು ಮತದಾನ ಮಾಡಲು ಬಂದಿದ್ದಾರೆ. ಅವರು ಆಯಾಸವಾಗಿದೆ ಎಂದು ಮತಗಟ್ಟೆಯಲ್ಲಿ ಇಟ್ಟಿದ್ದ ನೀರು ಕುಡಿಯಲು ಹೋಗಿದ್ದಾರೆ. ಅದೇ ವೇಳೆಗೆ ಅವರು ಕುಸಿದು ಬಿದ್ದಿದ್ದಾರೆ. ಅದೇ ಸಮಯದಲ್ಲಿ ಅಲ್ಲಿಗೆ ಬಂದಿದ್ದ ಬೊಮ್ಮಸಂದ್ರದ ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್ ಅವರು ರಕ್ಷಣೆಗೆ ದಾವಿಸಿದ್ದಾರೆ.

ನಾಡಿಮಿಡಿತವನ್ನು ಪರಿಶೀಲಿಸಿದ ಡಾ. ಗಣೇಶ್ ಶ್ರೀನಿವಾಸ ಪ್ರಸಾದ್, ಪಲ್ಸ್‌ ರೇಟ್‌ ಕಡಿಮೆಯಾಗುತ್ತಿರುವುದನ್ನು ಗಮನಿಸಿದ್ದಾರೆ. ಆ ಸಮಯದಲ್ಲಿ ದೇಹ ಕೂಡ ಯಾವುದೇ ಸ್ಪಂದನೆಯನ್ನು ಮಾಡುತ್ತಿರಲಿಲ್ಲ. ಹೀಗಾಗಿ ಕೂಡಲೇ ಸಿಪಿಆರ್‌ ಮಾಡಿದ್ದು, ಪರಿಸ್ಥಿತಿಯು ಕೊಂಚ ಮಟ್ಟಿಗೆ ಸುಧಾರಿಸುವಂತೆ ಮಾಡಿದ್ದಾರೆ. ಚುನಾವಣಾ ಕರ್ತವ್ಯದಲ್ಲಿದ್ದವರು ಧಾವಿಸಿ ಜ್ಯೂಸ್ ನೀಡಿದ್ದಾರೆ. ಕೂಡಲೇ ಆಂಬ್ಯುಲೆನ್ಸ್‌ಗೆ ಕರೆ ಮಾಡಲಾಗಿದೆ. ಐದು ನಿಮಿಷದೊಳಗೆ ಮತಗಟ್ಟೆ ಬಳಿ ಆಂಬ್ಯುಲೆನ್ಸ್ ಬಂದಿದ್ದು, ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Continue Reading

ಕರ್ನಾಟಕ

Lok Sabha Election 2024: ಫಲಿತಾಂಶ ಬರುವ ಮುಂಚೆಯೇ ಗೆದ್ರಾ ಎಚ್‌.ಡಿ. ಕುಮಾರಸ್ವಾಮಿ?; ಚುನಾವಣೆ ಬಗ್ಗೆ ಹೇಳಿದ್ದೇನು?

Lok Sabha Election 2024: ಫಲಿತಾಂಶ ಬರುವ ಮುಂಚೆಯೇ ಮಂಡ್ಯ ಕ್ಷೇತ್ರದಲ್ಲಿ ಗೆಲುವು ತಮ್ಮದೇ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Lok Sabha Election 2024
Koo

ಮಂಡ್ಯ : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ (Lok Sabha Election 2024) ಶುಕ್ರವಾರ ಮತದಾನ ನಡೆದಿದ್ದು, ಇನ್ನುಳಿದ 14 ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮೇ 7ರಂದು ಮತದಾನ ನಡೆಯಲಿದೆ. ನಂತರ ಜೂನ್‌ 4ರಂದು ಫಲಿತಾಂಶ ಹೊರ ಬೀಳಲಿದೆ. ಈ ನಡುವೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು, ಮಂಡ್ಯ ಕ್ಷೇತ್ರದಲ್ಲಿ ಗೆಲುವು ತಮ್ಮದೇ ಎಂದು ವಿಶ್ವಾಸದಿಂದ ಹೇಳಿರುವುದು ಕಂಡುಬಂದಿದೆ.

ಜಿಲ್ಲೆಯ ಹೊನ್ನಲಗೆರೆ ಗ್ರಾಮದಲ್ಲಿ ಮಾತನಾಡಿರುವ ಎಚ್‌.ಡಿ. ಕುಮಾರಸ್ವಾಮಿ ಅವರು, ನನ್ನ ಪರವಾಗಿ ಮಂಡ್ಯ ಜಿಲ್ಲೆಯ ಎಲ್ಲಾ ಜನ ಚುನಾವಣೆ ನಡೆಸಿದ್ದಾರೆ. ಈ ಜಯ ನನ್ನದಲ್ಲಾ ಇದು ಎಲ್ಲರ ಜಯ. ಜಿಲ್ಲೆಯ ಎಲ್ಲಾ ಪಕ್ಷದಲ್ಲಿರುವ ನನ್ನ ಅಭಿಮಾನಿಗಳ ಜಯ. ಪಕ್ಷ ಭೇದ ಮರೆತು ಎಲ್ಲರೂ ನನ್ನ ಪರ ಕೆಲಸ ಮಾಡಿದ್ದಾರೆ, ರಾಜ್ಯದಲ್ಲೇ ಅತ್ಯಂತ ಹೆಚ್ಚು ಬಹುಮತಗಳಿಂದ ಗೆಲ್ಲಲಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಎಂದು ಹೇಳುವ ಮೂಲಕ ಫಲಿತಾಂಶ ಬರುವ ಮುಂಚೆಯೇ ತಮ್ಮದೇ ಗೆಲುವು ಎಂದು ಹೇಳಿದ್ದಾರೆ.

ಸುಮಲತಾ ಸಪೋರ್ಟ್ ಮಾಡಿಲ್ಲ ಎಂದ ಎಚ್‌ಡಿಡಿ; ದೇವೇಗೌಡರು ಯಾಕೆ ಹಾಗೆ ಹೇಳಿದರೋ ಗೊತ್ತಿಲ್ಲ ಎಂದ ಎಚ್‌ಡಿಕೆ

ಮಂಡ್ಯದಲ್ಲಿ ಕುಮಾರಸ್ವಾಮಿಗೆ ಸುಮಲತಾ ಸಪೋರ್ಟ್ ಮಾಡಿಲ್ಲ ಎಂಬ ದೇವೇಗೌಡರ ಹೇಳಿಕೆಗೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿ, ದೇವೇಗೌಡರು ಆ ರೀತಿ ಯಾಕೆ ಹೇಳಿದ್ದಾರೆ ಅಂತ ನನಗೆ ಗೊತ್ತಿಲ್ಲ. ಸುಮಲತಾ ಅವ್ರ ಪ್ರಶ್ನೆ ಇಲ್ಲಿ ಬರಲ್ಲ. ದೇವೇಗೌಡರು ಯಾಕೆ ಹಾಗೆ ಹೇಳಿದ್ದಾರೆ ಗೊತ್ತಿಲ್ಲ. ದೇವೇಗೌಡರಿಗೆ ಮಾಹಿತಿ ಕೊರತೆ ಆಗಿರಬೇಕು ಅನಿಸುತ್ತದೆ. ಪಕ್ಷ ಭೇದ ಮರೆತು ಕಾಂಗ್ರೆಸ್, ಬಿಜೆಪಿಯವರು ನನ್ನ ಪರವಾಗಿ ಕೆಲಸ ಮಾಡಿದ್ದಾರೆ. ಯಾರು ವಿರೋಧ ಮಾಡಿಲ್ಲ ಎಲ್ಲರೂ ನನಗೆ ಸಹಾಯ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

ಕುಮಾರಸ್ವಾಮಿ ಪರ ಪ್ರಚಾರಕ್ಕೆ ಯಾರೂ ನನ್ನ ಕರೆಯಲಿಲ್ಲ ಎಂಬ ಸುಮಲತಾ ಹೇಳಿಕೆಗೆ ಪ್ರತಿಕ್ರಿಯಿಸಿ, ನಾನು ಅವರ ಮನೆ ಬಾಗಿಲಿಗೆ ಹೋಗಿ ಸಹಕಾರ ಕೇಳಿದ್ದೇನೆ, ಇದಕ್ಕಿಂತ ಇನ್ನೇನು ಮಾಡಬೇಕು. ಅಂಬರೀಶ್ ಅಭಿಮಾನಿಗಳು ಸಹ ನನಗೆ ಸಹಾಯ ಮಾಡಿದ್ದಾರೆ. ನಾನು ಮೈಸೂರಿನ ಮೋದಿ ಕಾರ್ಯಕ್ರಮದಲ್ಲೂ ಕೂಡ ಸುಮಲತಾ ಅವರನ್ನು 2 ದಿನ ಪ್ರಚಾರಕ್ಕೆ ಬರುವಂತೆ ಕೋರಿದ್ದೆ. ಗೊಂದಲದ ಪ್ರಚಾರ ಮಾಡೋದು ಬೇಡ.
ಬೆಂಗಳೂರಿನಿಂದ ಬಂದು ಸುಮಲತಾ ನನಗೆ ಓಟ್ ಮಾಡಿದ್ದಾರೆ. ಪಕ್ಷ ಭೇದ ಮರೆತು ಕೆಲಸ ಮಾಡಿದ್ದಾರೆ ರಾಜ್ಯದಲ್ಲೆ ಅತ್ಯಂತ ಹೆಚ್ಚು ಬಹುಮತಗಳಿಂದ ಗೆಲ್ಲಲಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕನಕಪುರದಲ್ಲಿ 505 ರೂ, ಮಲೆ ಮಹದೇಶ್ವರದ ಲಾಡು, ಗ್ಯಾರಂಟಿ ಕಾರ್ಡ್ ಹಂಚಿಕೆ; ಎಚ್‌ಡಿಕೆ ಗಂಭೀರ ಆರೋಪ

Lok Sabha Election 2024 DK brothers distribute Rs 505 in Bengaluru Rural constituency HD Kumaraswamy allegations

ಬೆಂಗಳೂರು: ಈ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಬೆಂಗಳೂರು ಗ್ರಾಮಾಂತರ ಕ್ಷೇತ್ರದ (Bangalore Rural Constituency) ಕನಕಪುರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರವಾಗಿ 505 ರೂ, ಮಲೆ ಮಹದೇಶ್ವರದ ಲಾಡು, ಗ್ಯಾರಂಟಿ ಕಾರ್ಡ್ ಹಂಚಿಕೆ ಮಾಡಲಾಗುತ್ತಿದೆ. ಈ ಬಗ್ಗೆ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರೂ ಕಣ್ಣು ಮುಚ್ಚಿ ಕುಳಿತಿದ್ದು, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಗಂಭೀರ ಆರೋಪ ಮಾಡಿದ್ದಾರೆ.

ಕೇತಗಾನಹಳ್ಳಿಯಲ್ಲಿ ಕುಟುಂಬ ಸಮೇತ ಬಂದು ಮತಚಲಾಯಿಸಿದ ಎಚ್.ಡಿ. ಕುಮಾರಸ್ವಾಮಿ ಮಾಧ್ಯಮದವರೊಂದಿಗೆ ಮಾತನಾಡಿ, ನನಗೆ ಇರುವ ಮಾಹಿತಿ ಪ್ರಕಾರ 14 ಕ್ಷೇತ್ರದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಒಳ್ಳೆಯ ರೀತಿ ಮತದಾನ ನಡೆಯುತ್ತಿದೆ. ಆದರೆ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಒಂದು ಕಪ್ಪು ಚುಕ್ಕೆ ರೀತಿ ಪ್ರಕ್ರಿಯೆಗಳು ನಡೆಯುತ್ತಿವೆ. ನಿನ್ನೆ ಸಹ ಕನಕಪುರದಲ್ಲೂ ಧೈರ್ಯದಿಂದ ಎದರಿಸುವ ವಾತಾವರಣ ನಿರ್ಮಾಣವಾಗಿದೆ. ಆದರೆ, ಕನಕಪುರದ ಸೊರಕಾಯಿ ದೊಡ್ಡಿ ಸೇರಿದಂತೆ ಹಲವು ಕಡೆ ಕಾಂಗ್ರೆಸ್ ತನ್ನ ಹಳೇ ಚಾಳಿಯನ್ನು ಮುಂದುವರಿಸಿದೆ‌. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ, ಮಾಗಡಿ, ಕುಣಿಗಲ್ ಸೇರಿದಂತೆ ಹಲವು ಭಾಗದಲ್ಲಿ ಬೆಳಗಿನ ಜಾವ ಐದು ಗಂಟೆಗೆ ಮನೆ ಮನೆಗೆ ಹೋಗಿ ಗ್ಯಾರಂಟಿ ಕಾರ್ಡ್ ಕೊಟ್ಟು 4 ರಿಂದ 5 ಸಾವಿರ ರೂಪಾಯಿಯ ಕೂಪನ್ ಕೊಟ್ಟಿದ್ದಾರೆ. ಈ ಹಿಂದೆ ಕುಕ್ಕರ್ ಎಲ್ಲ ಕೊಟ್ಟಿದ್ದಾರೆ. ಈಗ ಕಾರ್ಡ್ ಮತ್ತು ಕೂಪನ್ ಕೊಟ್ಟಿದ್ದಾರೆ. ಈಗ ಎಲ್ಲ ಕಡೆ ಇದನ್ನು ಶುರು ಮಾಡಿದ್ದಾರೆ. ಹಾಲಿ ಶಾಸಕರ ಫೋಟೋ ಹಾಕಿ 10 ಸಾವಿರದ ರೂಪಾಯಿಯ ಕೂಪನ್ ಕೊಡುತ್ತಿದ್ದಾರೆ. ಕ್ಯೂ ಆರ್ ಕೋಡ್ ಕೊಡುವ ಚಾಳಿಯನ್ನು ಶುರು ಮಾಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಆರೋಪ ಮಾಡಿದರು.

ಚುನಾವಣಾ ಆಯೋಗದ ವಿರುದ್ಧ ಎಚ್‌ಡಿಕೆ ಗರಂ

ಚುನಾವಣಾ ಆಯೋಗವು ಈ ರೀತಿ ಚುನಾವಣೆಯನ್ನು ನಡೆಸುವ ಬದಲು ನೇರವಾಗಿ ಹಣ ಕೊಡುವ ವ್ಯವಸ್ಥೆಯನ್ನು ಜಾರಿಗೆ ತರಬಹುದು. ಆಯಾಯ ಅಭ್ಯರ್ಥಿಗಳು ತಮ್ಮ ಶಕ್ತಿ ಅನುಸಾರ ಹಣ ನೀಡುತ್ತಾರೆ. ದೇಶದಲ್ಲಿ ಈ ರೀತಿಯ ವ್ಯವಸ್ಥೆಯನ್ನು ತಂದರೆ ಒಳ್ಳೆಯದು ಎಂದು ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು.

ಇದನ್ನು ಚುನಾವಣಾ ಅಂತ ಕರೆಯುತ್ತಾರಾ? ಪ್ರಜಾಪ್ರಭುತ್ವದ ಹಬ್ಬ ಎಂದು ಹೇಳಲಾಗುತ್ತದೆಯೇ? ದುಡ್ಡು ಇರುವವರಿಗೆ, ಲೂಟಿ ಮಾಡುವವರಿಗೆ ಮಾತ್ರ ಇದು ಹಬ್ಬ. ಜನಸಾಮಾನ್ಯರಿಗೆ ಅಲ್ಲ. ಈ ರೀತಿಯಾಗಿ ಮತ ಪಡೆಯೋದು ಅಂದರೆ ಹೇಗೆ? ಮಹಾನಭಾವರು ಬುದ್ಧಿ ಹೇಳಿದ್ದೇ ಹೇಳಿದ್ದು ಎಂದು ಡಿ.ಕೆ. ಸಹೋದರರ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: Lok Sabha Election 2024: ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

ಮತಗಟ್ಟೆ ಮುಂದೆ ಡಿಕೆ ಶಿವಕುಮಾರ್‌ ರಿಯಾಕ್ಷನ್;‌ ಇಲ್ಲಿದೆ ವಿಡಿಯೊ

ಜ್ಯೋತಿಷಿ ಹೇಳಿದಂತೆ ಹಣ ಹಂಚಿಕೆ

ಕನಕಪುರದಲ್ಲಿ ಜ್ಯೋತಿಷಿ ಹೇಳಿದಂತೆ ಹಣ ಹಂಚಿದ್ದಾರೆ. ಯಾರೋ ಶಾಸ್ತ್ರದವರು ಹೇಳಿದ್ದಾರೆ ಎಂದು 505 ರೂಪಾಯಿ, ಮಲೆ ಮಹದೇಶ್ವರ ದೇವರ ಲಾಡು ಮತ್ತು ಗ್ಯಾರಂಟಿ ಕಾರ್ಡ್‌ಗಳನ್ನು ರಾತ್ರಿಯಲ್ಲ ಹಂಚಿದ್ದಾರೆ. ಈ ಬಗ್ಗೆ ನಮ್ಮ ಡಿಸಿ ಮತ್ತು ಚುನಾವಣಾ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮುಕ್ತವಾದ ಚುನಾವಣೆ ನಡೆಯುತ್ತಿಲ್ಲ. ಇವತ್ತು ಸೋಲಿನ ಭೀತಿಯಿಂದ ಕುತಂತ್ರದ ರಾಜಕಾರಣ ಮಾಡುತ್ತಿದ್ದಾರೆ. ಚುನಾವಣಾ ಅಕ್ರಮಗಳ ಮೂಲಕ ಗೆಲ್ಲುತ್ತೇವೆ ಎಂದು ಹೋಗುತ್ತಿದ್ದಾರೆ. ಅಕ್ರಮ ಮಾಡಿದರೂ ಜನತೆ ಬಲಿಯಾಗಿದೆ ನ್ಯಾಯಯುತವಾಗಿ ಮತದಾನ ಮಾಡಿ ಎಂದು ಮನವಿ ಮಾಡುತ್ತೇನೆ. ಚುನಾವಣಾ ಆಯೋಗ ಬಾಗಿಲು ಹಾಕಿಕೊಳ್ಳೋದು ಒಳ್ಳೆಯದು. ಚುನಾವಣಾ ಆಯೋಗ ತನ್ನ ವ್ಯವಸ್ಥೆಯನ್ನು ಬದಲಾವಣೆ ಮಾಡಿಕೊಳ್ಳಬೇಕು ಎಂದು ಎಚ್.ಡಿ. ಕುಮಾರಸ್ವಾಮಿ ಕಿವಿಮಾತು ಹೇಳಿದರು.

Continue Reading
Advertisement
Lok Sabha Election 2024
Lok Sabha Election 202431 seconds ago

Lok Sabha Election 2024 : ತುಮಕೂರಲ್ಲಿ ಕುದುರೆ ಏರಿ ಬಂದು ಮತದಾನ ಮಾಡಿದ ಡಾಕ್ಟರ್‌

Rahul Dravid
ಕರ್ನಾಟಕ42 seconds ago

Rahul Dravid: ಸಾಮಾನ್ಯರಂತೆ ಕ್ಯೂನಲ್ಲಿ ನಿಂತು ಮತದಾನ ಮಾಡಿದ ರಾಹುಲ್‌ ದ್ರಾವಿಡ್;‌ ವಿಡಿಯೊ ಇಲ್ಲಿದೆ

Raj B Shetty entry in duniya Vijay Movie
ಸ್ಯಾಂಡಲ್ ವುಡ್1 min ago

Raj B Shetty: ದುನಿಯಾ ವಿಜಯ್‌ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರಂತೆ ರಾಜ್ ಬಿ ಶೆಟ್ಟಿ!

ದೇಶ2 mins ago

Congress Manifesto: ಕಾಂಗ್ರೆಸ್‌ ಪ್ರಣಾಳಿಕೆ ; ಮನಮೋಹನ್‌ ಸಿಂಗ್‌ ಹಳೆಯ ವಿಡಿಯೋ ಶೇರ್‌ ಮಾಡಿದ ಬಿಜೆಪಿ

Virat Kohli
ಕ್ರೀಡೆ3 mins ago

Virat Kohli : ಕೊಹ್ಲಿಯ ನಿಧಾನಗತಿಯ ಬ್ಯಾಟಿಂಗ್​ ಬಗ್ಗೆ ಬೇಸರ ವ್ಯಕ್ತಪಡಿಸಿದ ಗವಾಸ್ಕರ್; ಏನಂದ್ರು ಅವರು?

Lok Sabha Election 2024 Villagers vandalise polling booth in Chamarajanagar
Lok Sabha Election 20248 mins ago

Lok Sabha Election 2024: ಚಾಮರಾಜನಗರದಲ್ಲಿ ಮತ ಯಂತ್ರ ಪೀಸ್‌ ಪೀಸ್‌; ಮತಗಟ್ಟೆ ಧ್ವಂಸ, ಲಾಠಿ ಚಾರ್ಜ್‌!

Lok Sabha Election 2024
ಕರ್ನಾಟಕ11 mins ago

Lok Sabha Election 2024: ಫಲಿತಾಂಶ ಬರುವ ಮುಂಚೆಯೇ ಗೆದ್ರಾ ಎಚ್‌.ಡಿ. ಕುಮಾರಸ್ವಾಮಿ?; ಚುನಾವಣೆ ಬಗ್ಗೆ ಹೇಳಿದ್ದೇನು?

lok sabha election 2024
Lok Sabha Election 202442 mins ago

Lok Sabha Election 2024 : ಬೋಟ್‌ನಲ್ಲಿ ಬಂದು ವೋಟ್‌ ಮಾಡಿದ 150ಕ್ಕೂ ಮತದಾರರು

Congress election camapaign meeting in haliyala
ರಾಜಕೀಯ1 hour ago

Lok Sabha Election 2024: ಬಿಜೆಪಿಯವರಿಂದ ಹಿಂದೂ ಧರ್ಮಕ್ಕೆ ಅಪಾಯ ಎಂದ ಅಂಜಲಿ ನಿಂಬಾಳ್ಕರ್

Modi in Karnataka PM Modi to address rally in Bengaluru Here live video
ಪ್ರಮುಖ ಸುದ್ದಿ1 hour ago

PM Narendra Modi: “ಇವಿಎಂ ಅಪಪ್ರಚಾರ ಮಾಡುವವರಿಗೆ ಕಪಾಳಮೋಕ್ಷ…” ಸುಪ್ರೀಂ ಕೋರ್ಟ್‌ ತೀರ್ಪಿಗೆ ಪ್ರಧಾನಿ ಸ್ವಾಗತ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ4 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20245 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20245 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ11 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ24 hours ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ24 hours ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ1 day ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20241 day ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

ಟ್ರೆಂಡಿಂಗ್‌