ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಕಲ್ಲಿನಿಂದ ಹಾನಿ: ಉದ್ವಿಗ್ನ ವಾತಾವರಣ - Vistara News

ಕರ್ನಾಟಕ

ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಕಲ್ಲಿನಿಂದ ಹಾನಿ: ಉದ್ವಿಗ್ನ ವಾತಾವರಣ

ಪ್ರತಿಮೆ ಬಳಿಯಲ್ಲಿ ಕಲ್ಲುಗಳು ಪತ್ತೆಯಾಗಿದೆ. ಪ್ರತಿಮೆಯ ಕಾಲಿನ ಭಾಗದ ಕೆಲವೆಡೆ ಹಾನಿ ಉಂಟಾಗಿದೆ. ಉದ್ದೇಶಪೂರ್ವಕವಾಗಿ ಹಾನಿ ಮಾಡಲು ಪ್ರಯತ್ನ ಮಾಡಿರುವಂತೆ ಕಾಣುತ್ತಿದೆ.

VISTARANEWS.COM


on

sangolli rayanna
1. ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಆಗಿರುವ ಹಾನಿ. 2. ಪ್ರತಿಮೆ ಬಳಿ ಕಲ್ಲುಗಳು. 3. ನೆರೆದ ಜನರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಜಿಲ್ಲೆಯ ಬೆಂಡಿಗೇರಿ ಗ್ರಾಮದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ.

ಪ್ರತಿಮೆ ಬಳಿಯಲ್ಲಿ ಕಲ್ಲುಗಳು ಪತ್ತೆಯಾಗಿದೆ. ಪ್ರತಿಮೆಯ ಕಾಲಿನ ಭಾಗದ ಕೆಲವೆಡೆ ಹಾನಿ ಉಂಟಾಗಿದೆ. ಉದ್ದೇಶಪೂರ್ವಕವಾಗಿ ಹಾನಿ ಮಾಡಲು ಪ್ರಯತ್ನ ಮಾಡಿರುವಂತೆ ಕಾಣುತ್ತಿದೆ.

ಘಟನೆಯ ವಿಚಾರ ತಿಳಿಯುತ್ತಿರುವಂತೆಯೇ ಸ್ಥಳದಲ್ಲಿ ನೂರಾರು ಜನರು ಜಮಾಯಿಸಲು ಆರಂಭಿಸಿದ್ದಾರೆ. ಈಗಾಗಲೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಹಿರೇಬಾಗೇವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿಕ್ಷಣ

PGCET 2024: ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ; ಶುಲ್ಕ ಪಾವತಿಗೂ ಅವಕಾಶ

PGCET 2024: ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕವನ್ನು ವಿಸ್ತರಣೆ ಮಾಡಲಾಗಿದ್ದು, ಶುಲ್ಕ ಪಾವತಿಸಲು ಜೂನ್ 21ವರೆಗೆ ಅವಕಾಶ ಇರುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

VISTARANEWS.COM


on

By

PGCET 2024
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಎಂಬಿಎ, ಎಂಸಿಎ, ಎಂ.ಟೆಕ್ ಸೇರಿದಂತೆ ಇತರ ಸ್ನಾತಕೋತ್ತರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸುವ ಪಿಜಿಸಿಇಟಿ-24ಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕವನ್ನು ಜೂನ್ 20ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಅವರು ತಿಳಿಸಿದ್ದಾರೆ. ಶುಲ್ಕ ಪಾವತಿಸಲು ಜೂನ್ 21ವರೆಗೆ ಅವಕಾಶ ಇರುತ್ತದೆ.

ಡಿಸಿಇಟಿ-2024 ಪ್ರವೇಶಪತ್ರ ಡೌನ್‌ಲೋಡ್‌ಗೆ ಅವಕಾಶ

ಡಿಸಿಇಟಿ-2024ಕ್ಕೆ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿರುವ ಅರ್ಹ ಅಭ್ಯರ್ಥಿಗಳಿಗೆ ಪ್ರವೇಶಪತ್ರ ಡೌನ್ ಲೋಡ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ಕಲ್ಪಿಸಿದೆ. ಕೆಇಎ ವೆಬ್‌ಸೈಟ್ ಗೆ ಭೇಟಿ ನೀಡಿ ನಿಗದಿತ ಲಿಂಕ್ ಅನ್ನು ಆಯ್ಕೆ ಮಾಡಿ ಅರ್ಜಿ ಸಂಖ್ಯೆ ಮತ್ತು ಅರ್ಜಿದಾರರ ಹೆಸರು (ಮೊದಲ ನಾಲ್ಕು ಅಕ್ಷರಗಳು) ನಮೂದಿಸಿ ಡಿಸಿಇಟಿ-2024 ರ ಪ್ರವೇಶಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ಪ್ರವೇಶಪತ್ರದ ಜೊತೆಯಲ್ಲಿ ಅಭ್ಯರ್ಥಿಗಳಿಗೆ ನೀಡಲಾಗಿರುವ ಸೂಚನೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಹಾಗು ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿರುವ ವಸ್ತ್ರ ಸಂಹಿತೆಯನ್ನು ತಪ್ಪದೆ ಅನುಸರಿಸಲು ಸೂಚಿಸಲಾಗಿದೆ. ಪ್ರವೇಶ ಪತ್ರದಲ್ಲಿ ಮುದ್ರಿಸಿರುವ ಎಲ್ಲಾ ವಿವರಗಳನ್ನು ಪರಿಶೀಲಿಸಿ, ನಿಗದಿತ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಬೇಕೆಂದು ಸ್ಪಷ್ಟಪಡಿಸಲಾಗಿದೆ. ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಮಾತ್ರ ನಡೆಸಲಾಗುವುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: NCERT Textbooks: ರಾಜಕೀಯ ಶಾಸ್ತ್ರದ ಪಠ್ಯದಿಂದ ‘ಬಾಬ್ರಿ ಮಸೀದಿ’ ಅಧ್ಯಾಯ ತೆಗೆದ ಎನ್‌ಸಿಇಆರ್‌ಟಿ!

ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪ್ರಕಟ; ಕಡ್ಡಾಯ, ಹೆಚ್ಚುವರಿ‌ ಟ್ರಾನ್ಸ್‌ಫರ್ ಇಲ್ಲ, ಕೋರಿಕೆ ವರ್ಗ ಮಾತ್ರ

ಬೆಂಗಳೂರು: ರಾಜ್ಯಾದ್ಯಂತ (Teachers Transfer 2024) ಸಾವಿರಾರು ಸರ್ಕಾರಿ ಶಿಕ್ಷಕರು ಭಾರಿ ನಿರೀಕ್ಷೆಯಿಂದ ಕಾಯುತ್ತಿರುವ ವರ್ಗಾವಣೆ ವೇಳಾಪಟ್ಟಿ ಶನಿವಾರ (ಜೂನ್‌ 15) ಪ್ರಕಟಗೊಂಡಿದೆ. ಕಡ್ಡಾಯ ಹಾಗೂ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯನ್ನು ಕೈಬಿಟ್ಟಿರುವ ರಾಜ್ಯ ಸರ್ಕಾರವು (Karnataka Government), ಕೋರಿಕೆಯ ವರ್ಗಾವಣೆ ಪಟ್ಟಿಯನ್ನು ಮಾತ್ರ ಪ್ರಕಟಿಸಿದೆ. ಇದರಿಂದ ಸಾವಿರಾರು ಶಿಕ್ಷಕರು ನಿಟ್ಟುಸಿರು ಬಿಡುವಂತಾಗಿದೆ. ಶೈಕ್ಷಣಿಕ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ ವಲಯವಾರು ವರ್ಗಾವಣೆ ಈ ವರ್ಷ ಕೈಬಿಡುವಂತೆಯೂ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮನವಿ ಮಾಡಿತ್ತು.

ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರನ್ನೂ ಒಳಗೊಂಡಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ ಭಾಗವಾಗಿ ಈ ವೇಳಾಪಟ್ಟಿ ಪ್ರಕಟವಾಗಿದೆ. ಇನ್ನುಮುಂದೆ ವರ್ಗಾವಣೆಗೆ ಸಂಬಂಧಿಸಿ ಕೌನ್ಸೆಲಿಂಗ್‌ ನಡೆಯಲಿದೆ. ವರ್ಗಾವಣೆಗೆ ಅರ್ಜಿ ಇತ್ಯಾದಿ ಪ್ರಕ್ರಿಯೆ ಮಾರ್ಚ್‌ 18ರಿಂದ ಪ್ರಾರಂಭವಾಗಿತ್ತು. ಲೋಕಸಭೆ ಚುನಾವಣೆ ಘೋಷಣೆ ಮತ್ತು ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯು ಈ ಪ್ರಕ್ರಿಯೆಗೆ ತೊಡಕಾಗಿತ್ತು. ಈಗ ಕೊನೆಗೂ ವರ್ಗಾವಣೆ ವೇಳಾಪಟ್ಟಿ ಪ್ರಕಟಗೊಂಡಿದೆ.

ವರ್ಗಾವಣೆಗಳಲ್ಲಿ ಮೂರು ವಿಧ

ಸಾಮಾನ್ಯವಾಗಿ ಶಿಕ್ಷಕರ ವರ್ಗಾವಣೆಯಲ್ಲಿ ಮೂರು ವಿಧಗಳಿವೆ. ಇವುಗಳನ್ನೇ ರಾಜ್ಯ ಸರ್ಕಾರ ಅನುಸರಿಸುತ್ತದೆ. ಸಾಮಾನ್ಯ ವರ್ಗಾವಣೆಯಲ್ಲಿ ಕೋರಿಕೆ ಸಲ್ಲಿಸಿದವರು, ಪರಸ್ಪರ ವರ್ಗಾವಣೆ ಬಯಸಿದವರಿಗೆ ಮಾತ್ರ ವರ್ಗಾವಣೆ ಮಾಡಲಾಗುತ್ತದೆ. ಇನ್ನು, ಒಂದೇ ಶಾಲೆಯಲ್ಲಿ ಸತತ 10 ವರ್ಷ ಕಾರ್ಯನಿರ್ವಹಿಸಿದವರಿಗೆ ಕಡ್ಡಾಯ ವರ್ಗಾವಣೆ ಮಾಡಲಾಗುತ್ತದೆ. ಹಾಗೆಯೇ, ಯಾವುದಾದರೂ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದ್ದು, ಹೆಚ್ಚಿನ ಶಿಕ್ಷಕರು ಇದ್ದರೆ, ಅವರನ್ನು ಹೆಚ್ಚುವರಿ ವರ್ಗಾವಣೆ ವಿಧದಲ್ಲಿ ಟ್ರಾನ್ಸ್‌ಫರ್‌ ಮಾಡಲಾಗುತ್ತದೆ.

ಕಡ್ಡಾಯ ವರ್ಗಾವಣೆ ಮಾಡುವ ವೇಳೆ ಮೂರು ವಲಯಗಳನ್ನು ಗಮನಿಸಲಾಗುತ್ತದೆ. ಎ ವಲಯದಲ್ಲಿ ನಗರಗಳು ಅಥವಾ ಪಟ್ಟಣಗಳು ಇದ್ದರೆ, ಬಿ ವಲಯದಲ್ಲಿ ನಗರದಿಂದ ಮೂರು ಕಿಲೋಮೀಟರ್‌ ದೂರದಲ್ಲಿರುವ ಗ್ರಾಮಗಳು, ಸಿ ವಲಯದಲ್ಲಿ ನಗರದಿಂದ 10 ಕಿಲೋಮೀಟರ್‌ ದೂರದಲ್ಲಿರುವ ಗ್ರಾಮಗಳಿಗೆ ವರ್ಗಾವಣೆ ಮಾಡಲಾಗುತ್ತದೆ. ಎ ವಲಯದಲ್ಲಿ ಅಂದರೆ ಯಾವುದೇ ಒಂದು ನಗರದಲ್ಲಿ 10 ವರ್ಷ ಸತತವಾಗಿ ಕಾರ್ಯನಿರ್ವಹಿಸಿದ ಶಿಕ್ಷಕರನ್ನು ಬಿ ಅಥವಾ ಸಿ ವಲಯಗಳಿಗೆ, ಅಂದರೆ ಹಳ್ಳಿಗಳಿಗೆ ವರ್ಗಾವಣೆ ಮಾಡಲಾಗುತ್ತದೆ. ಹಾಗೆಯೇ, ಸಿ ವಲಯದಲ್ಲಿ ಕೆಲಸ ಮಾಡಿದ ಶಿಕ್ಷಕರನ್ನು ಎ ವಲಯಕ್ಕೂ ವರ್ಗಾವಣೆ ಮಾಡಲಾಗುತ್ತದೆ.

ಶಿಕ್ಷಕರ ಸಂಘದಿಂದ ಅಭಿನಂದನೆ

ವಲಯವಾರು ವರ್ಗಾವಣೆಯನ್ನು ಕೈಬಿಟ್ಟು, ಕೋರಿಕೆಯ ವರ್ಗಾವಣೆಯ ವೇಳಾಪಟ್ಟಿ ಪ್ರಕಟಿಸಿದ ಕಾರಣ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಕೆ.ನಾಗೇಶ್‌ ಅವರು ಸಂಘದ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಸಂಘದ ಪರವಾಗಿ ರಾಜ್ಯಾಧ್ಯಕ್ಷ ಕೆ.ನಾಗೇಶ್‌ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ವರ್ಗಾವಣೆಗೆ ಕಾಯುತ್ತಿರುವ ಶಿಕ್ಷಕರು

ಕೌಟುಂಬಿಕ, ಶೈಕ್ಷಣಿಕ ಇತ್ಯಾದಿ ಕಾರಣಗಳಿಂದ ರಾಜ್ಯಾದ್ಯಂತ ಸಾವಿರಾರು ಶಿಕ್ಷಕರು ವರ್ಗಾವಣೆಯನ್ನು ಎದುರು ನೋಡುತ್ತಿದ್ದಾರೆ. ಪ್ರತಿ ಬಾರಿಯೂ ರಾಜ್ಯ ಸರ್ಕಾರ, ಶೈಕ್ಷಣಿಕ ವರ್ಷ ಆರಂಭಕ್ಕೆ ಮೊದಲೇ ವರ್ಗಾವಣೆ ಪ್ರಕ್ರಿಯೆ ಮುಗಿಸಲಾಗುವುದು ಎಂದು ಹೇಳುತ್ತದೆ. ಆದರೆ ನಾನಾ ಕಾರಣಗಳಿಂದ ಇದು ವಿಳಂಬವಾಗುತ್ತಲೇ ಇತ್ತು. ಈಗಾಗಲೇ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗಿವೆ. ಆದರೆ ಇನ್ನೂ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಗಿದಿಲ್ಲ. ಈ ತಿಂಗಳಲ್ಲಿ ಕೌನ್ಸೆಲಿಂಗ್‌ ಆರಂಭವಾದರೂ ಈ ಪ್ರಕ್ರಿಯೆ ಅಂತಿಮವಾಗಿ ಮುಗಿಯಲು ಕನಿಷ್ಠ ಇನ್ನೆರಡು ತಿಂಗಳು ಬೇಕಾಗಬಹುದು.

ದ್ವಿಭಾಷಾ ನೀತಿಗೂ ಅನುಮತಿ

ಶಿಕ್ಷಕರ ವರ್ಗಾವಣೆ ಜತೆಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ನೀತಿಯ ಜಾರಿಗೂ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಒಂದು ಸಾವಿರ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಮಾಧ್ಯಮ ತರಗತಿಗಳ ಜತೆಗೆ ಆಂಗ್ಲ ಮಾಧ್ಯಮ ತರಗತಿಗಳನ್ನೂ ಪ್ರಾರಂಭಿಸಬೇಕು ಎಂಬುದಾಗಿ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ. ಇದರಿಂದಾಗಿ ರಾಜ್ಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ದ್ವಿಭಾಷಾ ನೀತಿ ಜಾರಿಗೆ ಬರಲಿದೆ.

ರಾಜ್ಯದ ಒಂದು ಸಾವಿರ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿಗೆ ತರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು. ಹಾಗೆಯೇ, ದ್ವಿಭಾಷಾ ನೀತಿ ಅನ್ವಯ ತರಗತಿಗಳನ್ನು ಆರಂಭಿಸುವ ಕುರಿತು ಆಯಾ ಜಿಲ್ಲೆಗಳಲ್ಲಿರುವ ಶಾಲೆಗಳ ಪಟ್ಟಿಯನ್ನೂ ರಾಜ್ಯ ಸರ್ಕಾರವು ಬಿಡುಗಡೆ ಮಾಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Death News: “ಕಾಂಗ್ರೆಸ್‌ ಶವಯಾತ್ರೆ….” ಭಾಷಣ ಮುಗಿಸಿ ಬಿಜೆಪಿ ನಾಯಕ ಭಾನುಪ್ರಕಾಶ್ ಸ್ಥಳದಲ್ಲೇ ನಿಧನ

Death News: ಶಿವಮೊಗ್ಗದ ಗೋಪಿ ಸರ್ಕಲ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌, ಭಾಷಣ ಮುಗಿಸಿದ ಕೂಡಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದರು.

VISTARANEWS.COM


on

death news bhanuprakash petrol diesel price hike
Koo

ಶಿವಮೊಗ್ಗ: ಪೆಟ್ರೋಲ್- ಡಿಸೇಲ್ ಬೆಲೆ ಏರಿಕೆ (Petrol Diesel Price hike) ಪ್ರತಿಭಟಿಸಿ ಬಿಜೆಪಿ (BJP protest) ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗಿಯಾದ ಬಿಜೆಪಿ ನಾಯಕ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್‌ (MB Bhanuprakash) ಅವರು ಭಾಷಣ ಮುಗಿಸಿದ ತಕ್ಷಣವೇ ಹೃದಯಾಘಾತಕ್ಕೊಳಗಾಗಿ (Heart Attack) ಮೃತಪಟ್ಟಿದ್ದಾರೆ (Death News).

ಬಿಜೆಪಿ ಪ್ರತಿಭಟನೆಯಲ್ಲಿ ಅವರು ʼಕಾಂಗ್ರೆಸ್‌ನ ಶವಯಾತ್ರೆ ಮಾಡಬೇಕುʼ ಎಂದು ನೀಡಿದ ಭಾಷಣ ಇದೀಗ ವೈರಲ್‌ (Viral speech) ಆಗುತ್ತಿದೆ. ಶಿವಮೊಗ್ಗದ ಗೋಪಿ ಸರ್ಕಲ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌, ಭಾಷಣ ಮುಗಿಸಿದ ಕೂಡಲೇ ಹೃದಯಾಘಾತಕ್ಕೊಳಗಾಗಿ ಕುಸಿದು ಬಿದ್ದರು. ಕೂಡಲೇ ಅವರನ್ನು ಶಿವಮೊಗ್ಗದ ಮ್ಯಾಕ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಭಾನುಪ್ರಕಾಶ್‌ ಅವರು ಕೊನೆಯುಸಿರು ಎಳೆದರು.

“ಕಾಂಗ್ರೆಸ್ ಶವಯಾತ್ರೆ ಮಾಡಲು ನೀವು ಇಲ್ಲಿಗೆ ಬರಬೇಕು ಎಂದು ಹೇಳಿದರು. ಯಾವಾಗ, ಎಷ್ಟು ಹೊತ್ತಿಗೆ, ಯಾಕೆ ಡಾಕ್ಟರ್ ಬಳಿ ತೋರಿಸಿಲ್ಲವೆ, ಸಂಬಂಧಿಕರಿಗೆ ತಿಳಿಸಿದ್ದೀರಾ ಎಂದು ಕೇಳಿದೆ. ಶವಯಾತ್ರೆಗೆ ಕಾಂಗ್ರೆಸ್ ಪರವಾಗಿ ಸಿದ್ದು, ಡಿಕೆಶಿ ಬರುತ್ತಾರೆ ಎಂದರು. ಸರ್ಕಾರ ಆರಿಸಿ ಬರಲಿಕ್ಕೆ ಬೇಕಾಗಿ ಭರವಸೆ ಕೊಡುವ ಗ್ಯಾರಂಟಿ ನೀಡಿದರು. ಅದನ್ನು ನಾವು ಸ್ವಾಗತಿಸಿದ್ದೇವೆ. ಅದನ್ನು ಮಾಡಬಾರದು ಎಂದಿದ್ದರೆ ನಾವು ಬಡವರ ವಿರೋಧಿಗಳಾಗುತ್ತಿದ್ದೆವು. ನಾವು ಬಡವರ ಪರ, ನಾವೆಲ್ಲ ದೀನ ದಲಿತರ ಪರವಾಗಿಯೆ ಇದ್ದೆವು. ಆದರೆ ಬರೀ ಬಾಯಿಮಾತಿನಲ್ಲಿ ಹೇಳದೆ ನಾವು ಅದನ್ನು ಮಾಡುತ್ತಾ ಬಂದಿದ್ದೇವೆ” ಎಂದು ಭಾನುಪ್ರಕಾಶ್‌ ಭಾಷಣದಲ್ಲಿ ಹೇಳಿದ್ದರು.

“ಕಾಂಗ್ರೆಸ್‌ ಸರಕಾರ ತುಘ್ಲಕ್‌ ಸರಕಾರದಂತಾಗಿದೆ. ಸಾವಿರಾರು ಜನ ಸತ್ತರೂ ಆತ ತಲೆ ಕೆಡಿಸಿಕೊಳ್ಳುತ್ತಿರಲಿಲ್ಲ. ಬೆಲೆ ಏರಿಕೆ, ಹಿಂದೂಗಳ ದಮನ ಆಗುತ್ತಿದ್ದರೂ ಕಾಂಗ್ರೆಸ್‌ ಸರಕಾರ ತಲೆ ಕೆಡಿಸಿಕೊಳ್ಳುತ್ತಿಲ್ಲ. ಇಂಧನ ಬೆಲೆ‌ ಹೆಚ್ಚುತ್ತಾ ಹೋದಂತೆ ಎಲ್ಲ ವಸ್ತುಗಳ ಬೆಲೆ ಹೆಚ್ಚುತ್ತಾ ಹೋಗುತ್ತದೆ. ಸರಕಾರದಲ್ಲಿನ ವ್ಯಕ್ತಿಗಳ ಬೆಲೆ, ಯೋಗ್ಯತೆ ಇಳಿಯುತ್ತದೆ. ನಾವು ಪ್ರತಿಭಟನೆ ಮೂಲಕ ಕಾಂಗ್ರೆಸ್‌ಗೆ ಕೊನೆಯ ಮೊಳೆ ಹೊಡೆಯುವ ಎಚ್ಚರಿಕೆ ನೀಡುತ್ತಿದ್ದೇನೆ. ಇವತ್ತು ನಡೆದಿರುವುದು ಸಾಂಕೇತಿಕ ಪ್ರತಿಭಟನೆ ಮಾತ್ರ. ನಿಮ್ಮ ಭ್ರಷ್ಟ ಆಡಳಿತ ತೊಲಗಿಸುವ ತನಕ ನಾವು ವಿಶ್ರಮಿಸುವುದಿಲ್ಲ” ಎಂದು ಭಾನುಪ್ರಕಾಶ್‌ ಭಾಷಣ ಮುಗಿಸಿದರು.

ತದನಂತರ ಅವರು ಅಸ್ವಸ್ಥರಾದರು. ಕೂಡಲೇ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಭಾನುಪ್ರಕಾಶ್ ಅವರ ಮೃತದೇಹವನ್ನು ಶಿವಮೊಗ್ಗ ತಾಲೂಕಿನ ಮತ್ತೂರು ಗ್ರಾಮದ ಸ್ವಗೃಹಕ್ಕೆ ಕೊಂಡೊಯ್ಯಲಾಗಿದೆ.

ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ಏರಿಸಿದ (Petrol Diesel Price Hike) ರಾಜ್ಯ ಸರಕಾರದ (Karnataka Govt) ಕ್ರಮವನ್ನು ಖಂಡಿಸಿದ ಪ್ರತಿಪಕ್ಷ ಬಿಜೆಪಿ (BJP protest) ಇಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ (Freedom park) ಬಿಜೆಪಿಯ ರಾಜ್ಯ ಪದಾಧಿಕಾರಿಗಳು ಹಾಗೂ ಇತರ ನಾಯಕರು ಪ್ರತಿಭಟಿಸಿ ಭಾಷಣ ಮಾಡಿದರು. ಪ್ರತಿಭಟನೆ ಮಾಡಿ ಸಿಎಂ ಸಿದ್ದರಾಮ‌ಯ್ಯ (CM Siddarmaiah) ಕಚೇರಿಗೆ ಮುತ್ತಿಗೆ ಹಾಕಲು ಹೊರಟ ಆರ್.‌ ಅಶೋಕ್‌ (R Ashok) ಸೇರಿದಂತೆ ಬಿಜೆಪಿ ನಾಯಕರನ್ನು ಪೊಲೀಸರು ಬಂಧಿಸಿದರು.

ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಬಳಿಕ ಎತ್ತಿನಗಾಡಿ ಮೂಲಕ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಗೆ ಮುತ್ತಿಗೆ ಹಾಕಲು ಹೊರಟ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ. ಅಶೋಕ್ ಮತ್ತು ಇತರ ಕಾರ್ಯಕರ್ತರನ್ನು ಪೊಲೀಸರು ತಡೆದರು. ʼʼಪೆಟ್ರೋಲ್ ರೇಟ್‌ ಹೆಚ್ಚಾಗಿದೆ. ಬಸ್‌ವರೆಗೂ ಎತ್ತಿನಗಾಡಿ ಬಿಡಿ” ಎಂದು ಅಶೋಕ್ ಆಗ್ರಹಿಸಿದರು. ಪೊಲೀಸರು ಮತ್ತು ಅಶೋಕ್ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಬಸ್‌ವರೆಗೂ ಎತ್ತಿನ ಗಾಡಿ ಬಿಟ್ಟು ನಂತರ ಅವರನ್ನು ಬಂಧಿಸಿದ ಪೊಲೀಸರು, ಉಪ್ಪಾರಪೇಟೆ ಪೊಲೀಸ್ ಠಾಣೆಗೆ ಕರೆದೊಯ್ದರು.

ವಿಭಿನ್ನ ರೀತಿಯ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ಚಟ್ಟ ಕಟ್ಟಿ ರಾಜ್ಯ ಸರ್ಕಾರದ ಹೆಣದ ಮೆರವಣಿಗೆ ಮಾಡಿದರು. ʼಐದು ಗ್ಯಾರಂಟಿಗಳ ಗೋವಿಂದ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೋವಿಂದʼ ಎಂದು ಚಟ್ಟ ಹಿಡಿದು ಮೆರವಣಿಗೆ ಮಾಡಿದರು.

ಇದನ್ನೂ ಓದಿ: Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

Continue Reading

ಕರ್ನಾಟಕ

Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ

Petrol Diesel Price Hike: ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿ, ರಾಜ್ಯದಲ್ಲಿ ಪೆಟ್ರೊಲ್, ಡೀಸೆಲ್ ದರ ಕಡಿಮೆ‌ ಇದೆ ಎಂದು ಬಡವರ ಮೇಲೆ ಭಾರ ಹಾಕುವುದು ಯಾವ ನ್ಯಾಯ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

VISTARANEWS.COM


on

Petrol Diesel Price Hike
Koo

ಬೆಂಗಳೂರು: ರಾಜ್ಯದ‌ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಕೊಡುವ ನೆಪದಲ್ಲಿ ರಾಜ್ಯದ ಬಡವರ ಮೇಲೆ ತೆರಿಗೆ (Petrol Diesel Price Hike) ಹಾಕಿ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವ ಮೂಲಕ ರಾಜ್ಯದ ಸಾಮಾನ್ಯ ಜನತೆಗೆ ದ್ರೋಹ ಮಾಡುತ್ತಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಎಕ್ಸ್ ಮೂಲಕ ಸರಣಿ ಟ್ವೀಟ್ ಮಾಡಿರುವ ಅವರು, ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದೇ ಪ್ರಗತಿ ಶೂನ್ಯವಾಗಿದೆ. ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದ್ದು, ಇದನ್ನು ಸರಿಪಡಿಸಲು ಹಲವಾರು ವರ್ಷ ಬೇಕು. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ಹೇಳಿದ್ದಾರೆ.

ಸಾಮಾನ್ಯರ ಮೇಲೆ ಹೊರೆ ಹಾಕಿ ಬೇರೆ ರಾಜ್ಯಗಳಿಗೆ ವ್ಯಾಪಾರ ತೊಂದರೆಯಾಗುತ್ತದೆ ಎಂದು ಹೇಳಿ ಪಕ್ಕದ ರಾಜ್ಯಗಳ ಮಿತ್ರ ಪಕ್ಷಗಳ ಹಿತ ಕಾಯುವ ಮೂಲಕ ರಾಜ್ಯದ ಜನತೆಗೆ ದ್ರೋಹ ಮಾಡುತ್ತಿರುವುದು ರಾಜದ್ರೋಹ ಮಾಡಿದಂತೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿ, ರಾಜ್ಯದಲ್ಲಿ ಪೆಟ್ರೊಲ್, ಡೀಸೆಲ್ ದರ ಕಡಿಮೆ‌ ಇದೆ ಎಂದು ಬಡವರ ಮೇಲೆ ಭಾರ ಹಾಕುವುದು ಯಾವ ನ್ಯಾಯ? ದರ ಏರಿಕೆ ಮಾಡಿ ಸಮರ್ಥನೆ ಮಾಡಿಕೊಳ್ಳುತ್ತಿರುವ ಮುಖ್ಯಮಂತ್ರಿಯವರ ಹೇಳಿಕೆ ಜನ ವಿರೋಧಿಯಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ | Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

ಉಚಿತ ಗ್ಯಾರಂಟಿ ಕೊಡುತ್ತಿರುವುದಾಗಿ ಹೇಳಿ ಬಡವರ ಮೇಲೆ ತೆರಿಗೆ ಹಾಕಿ ಅವರಿಂದಲೇ ಹಣ ಸುಲಿದು ಕಾಂಗ್ರೆಸ್ ತನ್ನ ರೊಟ್ಟಿ ಸುಟ್ಟುಕೊಂಡು ರಾಜಕೀಯ ಲಾಭ‌ ಮಾಡಿಕೊಳ್ಳುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ್ದು, ಈ ಕೆಳಗಿನ ಅಂಶಗಳನ್ನು ಪ್ರಸ್ತಾವಿಸಿ ರಾಜ್ಯ ಸರ್ಕಾರವ ವಿರುದ್ಧ ಕಿಡಿಕಾರಿದ್ದಾರೆ.

1) ರಾಜ್ಯದ‌ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಕೊಡುವ ನೆಪದಲ್ಲಿ ರಾಜ್ಯದ ಬಡವರ ಮೇಲೆ ತೆರಿಗೆ ಹಾಕಿ, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡುವ ಮೂಲಕ ರಾಜ್ಯದ ಸಾಮಾನ್ಯ ಜನತೆಗೆ ದ್ರೋಹ ಮಾಡುತ್ತಿದೆ.

2) ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯದೇ ರಾಜ್ಯದ ಪ್ರಗತಿ ಶೂನ್ಯವಾಗಿದೆ.

3) ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿದ್ದು, ಇದನ್ನು ಸರಿಪಡಿಸಲು ಹಲವಾರು ವರ್ಷ ಬೇಕು. ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಹೊಣೆಯಾಗಿದೆ.

4) ಸಾಮಾನ್ಯರ ಮೇಲೆ ಹೊರೆ ಹಾಕಿ ಬೇರೆ ರಾಜ್ಯಗಳಿಗೆ ವ್ಯಾಪಾರ ತೊಂದರೆಯಾಗುತ್ತದೆ ಎಂದು ಹೇಳಿ ಪಕ್ಕದ ರಾಜ್ಯಗಳ ಮಿತ್ರ ಪಕ್ಷಗಳ ಹಿತ ಕಾಯುವ ಮೂಲಕ ರಾಜ್ಯದ ಜನತೆಗೆ ದ್ರೋಹ ಮಾಡುತ್ತಿರುವುದು ರಾಜದ್ರೋಹ ಮಾಡಿದಂತೆ.

5) ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಪೆಟ್ರೊಲ್, ಡಿಸೇಲ್ ದರ ಕಡಿಮೆ‌ ಇದೆ ಎಂದು ಬಡವರ ಮೇಲೆ ಭಾರ ಹಾಕುವುದು ಯಾವ ನ್ಯಾಯ? ದರ ಏರಿಕೆ ಮಾಡಿ ಸಮರ್ಥನೆ ಮಾಡಿಕೊಳ್ಳುತ್ತಿರುವ ಮುಖ್ಯಮಂತ್ರಿಯವರ ಹೇಳಿಕೆ ಜನ ವಿರೋಧಿಯಾಗಿದೆ.

6) ಉಚಿತ ಗ್ಯಾರಂಟಿ ಕೊಡುತ್ತಿರುವುದಾಗಿ ಹೇಳಿ ಬಡವರ ಮೇಲೆ ತೆರಿಗೆ ಹಾಕಿ ಅವರಿಂದಲೇ ಹಣ ಸುಲಿದು ಕಾಂಗ್ರೆಸ್ ತನ್ನ ರೊಟ್ಟಿ ಸುಟ್ಟುಕೊಂಡು ರಾಜಕೀಯ ಲಾಭ‌ ಮಾಡಿಕೊಳ್ಳುವುದು ಯಾವ ನ್ಯಾಯ.

Continue Reading

ಕ್ರೈಂ

Hunters Arrest : ಶಿವಮೊಗ್ಗದಲ್ಲಿ ಕಾಡುಕೋಣಗಳು ಬಲಿ; ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿ ಬೇಟೆಗಾರರು ಸೆರೆ

Hunters Arrest :ರಾಜ್ಯದ ಹಲವೆಡೆ ಬೇಟೆಗಾರರ ಬೆನ್ನತ್ತಿರುವ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಕಾಡು ಹಂದಿ ಹಾಗೂ ಬಾಗಲಕೋಟೆಯಲ್ಲಿ ಕೃಷ್ಣ ಮೃಗ ಬೇಟೆಯಾಡುತ್ತಿದ್ದವರನ್ನು ಬಂಧಿಸಲಾಗಿದೆ. ಇತ್ತ ಶಿವಮೊಗ್ಗದಲ್ಲಿ ಬೇಟೆಗಾರರ ಕೃತ್ಯಕ್ಕೆ ಕಾಡು ಕೋಣಗಳು ಬಲಿಯಾಗಿವೆ.

VISTARANEWS.COM


on

By

Hunters Arrest
Koo

ಶಿವಮೊಗ್ಗ: ಶಿವಮೊಗ್ಗದಲ್ಲಿ ಕಾಡು ಕೋಣಗಳ ಮಾರಣಹೋಮ ಹೋಗಿದೆ. ದುಷ್ಕರ್ಮಿಗಳು (Hunters Arrest) ನಾಲ್ಕೈದು ಕಾಡು ಕೋಣಗಳನ್ನು ಬೇಟೆಯಾಡಿದ್ದಾರೆ. ಶಿವಮೊಗ್ಗದ ಹೊಸನಗರ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಅಕ್ರಮ ಬಂದೂಕು ಬಳಸಿ ಕಾಡುಕೋಣಗಳ ಹತ್ಯೆ (Bison) ಮಾಡಲಾಗಿದೆ. ಕಾಡುಕೋಣಗಳ ಕಳೆಬರ ಪತ್ತೆಯಾಗಿದೆ.

ಸ್ಥಳಕ್ಕೆ ಸಾಗರ ಡಿಎಫ್‌ಓ ಸಂತೋಷ್ ಕೆಂಚಣ್ಣನವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಡುಕೋಣದ ಕಳೇಬರಗಳನ್ನು ಪರೀಕ್ಷೆಗಾಗಿ ಲ್ಯಾಬ್‌ಗೆ ಕಳುಹಿಸಿದ್ದಾರೆ. ಆರೋಪಿಗಳು ಕಾಡುಕೋಣಗಳ ಮಾಂಸಕಾಗಿ ಬೇಟೆಯಾಡಿರುವ ಸಾಧ್ಯತೆ ಇದೆ. ಸದ್ಯ ಅರಣ್ಯಾಧಿಕಾರಿಗಳು ಕಾಡುಕೋಣಗಳ ಹತ್ಯೆ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಕಾಡು ಹಂದಿಗಳ ಬೇಟೆ

ಚಿಕ್ಕಬಳ್ಳಾಪುರದಲ್ಲಿ ಕಾಡು ಹಂದಿಗಳ ಬೇಟೆಯಾಡಿ ಸಾಗಾಟ ಮಾಡುತ್ತಿದ್ದ ಜಾಲವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ. ಬೀಚಗಾನಹಳ್ಳಿ ಮಿಟ್ಟೇಮರಿ ಅರಣ್ಯದಲ್ಲಿ ಕಾಡು ಹಂದಿಗಳ ಬೇಟೆಯಾಡುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ ಮಾಡಿದ್ದಾರೆ.

ದಾಳಿ ವೇಳೆ ಸಿಕ್ಕಿದ ಆರು ಕಾಡು ಹಂದಿಗಳನ್ನು ರಕ್ಷಣೆ ಮಾಡಲಾಗಿದೆ. ದಾಳಿಯಲ್ಲಿ ಇಬ್ಬರು ಸಿಕ್ಕಿ ಬಿದ್ದಿದ್ದು, ನಾಲ್ವರು ಪರಾರಿ ಆಗಿದ್ದಾರೆ. ಒಂದು ಬುಲೇರೋ ವಾಹನ ಸೀಸ್ ಮಾಡಿದ್ದಾರೆ. ಬಾಗೇಪಲ್ಲಿ ಅರಣ್ಯ ವಲಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Hunters Arrest

ಇದನ್ನೂ ಓದಿ: Road Accident : ನಿಂತಿದ್ದ ಟ್ಯಾಂಕರ್‌ ಟ್ಯಾಲಿಗೆ ಬೈಕ್‌ ಡಿಕ್ಕಿ; ಸವಾರ ಸಾವು, ಮತ್ತೋರ್ವ ಗಂಭೀರ

ಕೃಷ್ಣ ಮೃಗ ಬೇಟೆಯಾಡುತ್ತಿದ್ದ 7 ಜನರ ಬಂಧನ

ಬಾಗಲಕೋಟೆಯ ಜಮಖಂಡಿ ಹೊರ ವಲಯದ ಅರಣ್ಯ ಪ್ರದೇಶದಲ್ಲಿ ಕೃಷ್ಣ ಮೃಗ ಬೇಟೆಯಾಡುತ್ತಿದ್ದ 7 ಜನರನ್ನು ಬಂಧಿಸಲಾಗಿದೆ. ರಾಯಭಾಗ ತಾಲೂಕಿನ ಕಡಕಬಾವಿ ಗ್ರಾಮದ ಸಿದ್ದಪ್ಪ ಪಿಡಾಯಿ (23), ಬ್ಯಾಕೋಡ ಗ್ರಾಮದ ಸುರೇಶ್ ಪಕಾಂಡೆ (21), ಚೇತನ್ ಬಿದರಿ (24) , ಕಂಕನವಾಡಿ ಗ್ರಾಮದ ನಿಂಗಪ್ಪ ಪಡತಾರೆ (24) ಹಾಗೂ ದೇವರಪಟ್ಟಿ ಗ್ರಾಮದ ಪ್ರಜ್ವಲ್ ಮೆಳವಂಕಿ (18), ರಬಕವಿ ಬನಹಟ್ಟಿ ತಾಲ್ಲೂಕಿನ ಹಳಿಂಗಳಿ ಗ್ರಾಮದ ಶಬ್ಬಿರ್ ಗುಡ್ಡದಮನಿ (25), ರಮಜಾನ್‌ಸಾಬ್ ಅಲಸ್ (25) ಬಂಧಿತ ಆರೋಪಿಗಳು.

Hunters Arrest

ಬಂಧಿತರಿಂದ 13.5 ಕೆಜಿ ಹಂದಿ ಮಾಂಸ, 4 ಮೊಬೈಲ್, ಕಾರು, ನಾಲ್ಕು ಬೇಟೆ ನಾಯಿಯನ್ನು ವಶಕ್ಕೆ ಪಡೆಯಲಾಗಿದೆ. ಡಿಸಿಎಫ್‌ಸಿ ಶ್ರೀಧರ್ ನೇತೃತ್ವದಲ್ಲಿ ಎಸಿಎಫ್ ರಾಜೇಶ್ವರಿ, ಆರ್‌ಎಫ್‌ಒ ಪವನ್ ಕುರನಿಂಗ ತಂಡ ಕಾರ್ಯಾಚರಣೆ ನಡೆಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Train Accident
EXPLAINER5 mins ago

Train Accident: ‘ಕವಚ’ ಇಲ್ಲದಿರುವುದೇ ಬಂಗಾಳ ರೈಲು ಅಪಘಾತಕ್ಕೆ ಕಾರಣ; ಹಾಗಾದರೆ ಏನಿದು?

Train Accident
ದೇಶ9 mins ago

Train Accident: ಕಾಂಚನಜುಂಗಾ ಎಕ್ಸ್​ಪ್ರೆಸ್ ರೈಲು​ ದುರಂತ; ಮೃತರ ಕುಟುಂಬಗಳಿಗೆ ಪರಿಹಾರ ಧನ ಘೋಷಣೆ

Model Fashion pratibha nataraj
ಫ್ಯಾಷನ್13 mins ago

Model Fashion: ಸೀಸನ್‌ ಗೆ ತಕ್ಕಂತೆ ಫ್ಯಾಷನ್‌ ಬದಲಿಸುವ ಮಿಸೆಸ್‌ ಬೆಂಗಳೂರು ಟೈಟಲ್‌ ವಿಜೇತೆ ಪ್ರತಿಭಾ ನಟರಾಜ್‌

Amy Jackson shares a glimpse of her Paris bachelorette
ಸಿನಿಮಾ25 mins ago

Amy Jackson: ಮದುವೆಗೂ ಮುನ್ನ ತಾಯಿಯಾಗಿದ್ದ ಆ್ಯಮಿ ಜಾಕ್ಸನ್‌ ಮತ್ತೆ ಸಪ್ತಪದಿ ತುಳಿಯಲು ರೆಡಿ!

PGCET 2024
ಶಿಕ್ಷಣ29 mins ago

PGCET 2024: ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ; ಶುಲ್ಕ ಪಾವತಿಗೂ ಅವಕಾಶ

Euro 2024
ಕ್ರೀಡೆ33 mins ago

Euro 2024: ಇಂದು ರೊಮೇನಿಯಾ-ಉಕ್ರೇನ್ ನಡುವೆ ಕಾಲ್ಚೆಂಡಿನ ಕಾದಾಟ; ಯಾರಿಗೆ ಒಲಿಯಲಿದೆ ಗೆಲುವಿನ ಲಕ್​?

death news bhanuprakash petrol diesel price hike
ಪ್ರಮುಖ ಸುದ್ದಿ41 mins ago

Death News: “ಕಾಂಗ್ರೆಸ್‌ ಶವಯಾತ್ರೆ….” ಭಾಷಣ ಮುಗಿಸಿ ಬಿಜೆಪಿ ನಾಯಕ ಭಾನುಪ್ರಕಾಶ್ ಸ್ಥಳದಲ್ಲೇ ನಿಧನ

Petrol Diesel Price Hike
ಕರ್ನಾಟಕ50 mins ago

Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ

Hunters Arrest
ಕ್ರೈಂ1 hour ago

Hunters Arrest : ಶಿವಮೊಗ್ಗದಲ್ಲಿ ಕಾಡುಕೋಣಗಳು ಬಲಿ; ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿ ಬೇಟೆಗಾರರು ಸೆರೆ

Petrol Diesel Price Hike
ಕರ್ನಾಟಕ1 hour ago

Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bakrid 2024
ಬೆಂಗಳೂರು3 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ21 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ22 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

ಟ್ರೆಂಡಿಂಗ್‌