Site icon Vistara News

ಬರ್ತ್‌ಡೇ ಸೆಲಬ್ರೇಷನ್‌ ವೇಳೆ ಆಕ್ಸಿಡೆಂಟ್: ಗಾಂಜಾ ಮತ್ತಿನಲ್ಲಿ ಯುವಕನ ಬರ್ಬರ ಹತ್ಯೆ

ಬೆಂಗಳೂರು: ಜೆ.ಜೆ.ನಗರದ ವಿನಾಯಕ ನಗರದಲ್ಲಿ ದುಷ್ಕರ್ಮಿಗಳು ಗಾಂಜಾ ಮತ್ತಿನಲ್ಲಿ ೨೨ ವರ್ಷದ ಯುವಕನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಕಾಟನ್‌ಪೇಟೆ ನಿವಾಸಿ ಚಂದ್ರು (22) ಕೊಲೆಯಾದ ಮೃತ ದುರ್ದೈವಿ. ನಿನ್ನೆ ತಡರಾತ್ರಿ ಸ್ನೇಹಿತನ ಬರ್ತ್‌ಡೇ ಪಾರ್ಟಿಗೆ ಎಂದು ಚಂದ್ರು ಹೊರಗೆ ಹೋಗಿದ್ದ. ಈ ವೇಳೆ ಹೋಟೆಲ್‌ಗೆ ಹೋಗುತ್ತಿದ್ದ ಸಂದರ್ಭದಲ್ಲಿ ಚಂದ್ರು ಬೈಕ್‌ ಎದುರಿಗೆ ಬರುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಸಿಟ್ಟಿಗೆದ್ದ ದುಷ್ಕರ್ಮಿಗಳು ಚಂದ್ರುಗೆ ಚೂರಿಯಿಂದ ಇರಿದಿದ್ದಾರೆ. ಬಳಿಕ ಲಾಂಗು, ಮಚ್ಚುಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

https://vistaranews.com/wp-content/uploads/2022/04/WhatsApp-Video-2022-04-05-at-10.30.22-AM.mp4

ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಕೂಡಲೇ ಚಂದ್ರು ಸ್ಥಳದಲ್ಲೇ ಕುಸಿದು ಬಿದಿದ್ದಾನೆ. ದುಷ್ಕರ್ಮಿಗಳು ಚಾಕು, ಲಾಂಗು, ಮಚ್ಚುಗಳಿಂದ ಹಲ್ಲೆ ಮಾಡುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

https://vistaranews.com/wp-content/uploads/2022/04/WhatsApp-Video-2022-04-05-at-11.40.06-AM.mp4

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಜೆ.ಜೆ.ನಗರ ಪೊಲೀಸರು ಕೆಲವರನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ದುಷ್ಕರ್ಮಿಗಳು ಗಾಂಜಾ ಮತ್ತಿನಲ್ಲಿ ಈ ದುಷ್ಕೃತ್ಯ ಎಸಗಿರುವುದು ಪೊಲೀಸ್‌ ಪ್ರಾಥಮಿಕ ತನಿಖೆಯಲ್ಲಿ ತಿಳಿದಿದೆ.

Exit mobile version