Site icon Vistara News

Book Release: ಮಾ.25ರಂದು ಕಲಬುರಗಿಯಲ್ಲಿ ಏಕಕಾಲಕ್ಕೆ 115 ಪುಸ್ತಕಗಳ ಲೋಕಾರ್ಪಣೆ

#image_title

ಕಲಬುರಗಿ: ಶ್ರೀ ಸಿದ್ಧಲಿಂಗೇಶ್ವರ ಬುಕ್‌ ಡಿಪೋ ಮತ್ತು ಪ್ರಕಾಶನ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಹಾಗೂ ಶ್ರೀ ಬಸವ ಪ್ರಕಾಶನದ 46ನೇ ವಾರ್ಷಿಕೋತ್ಸವ ಹಾಗೂ 115 ಪುಸ್ತಕಗಳ ಲೋಕಾರ್ಪಣೆ ಸಂಭ್ರಮವನ್ನು (Book Release) ಮಾರ್ಚ್‌ 25ರಂದು ಬೆಳಗ್ಗೆ 10.30ಕ್ಕೆ ನಗರದ ಸೂಪರ್‌ ಮಾರ್ಕೆಟ್‌ನ ಚೇಂಬರ್‌ ಆಫ್‌ ಕಾಮರ್ಸ್‌ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಬಡಬಾಳ ತೇರಿನಮಠದ ಶ್ರೀ ಷ.ಬ್ರ.ಡಾ.ಚನ್ನಮಲ್ಲ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಲಿದ್ದು, ಕಡಗಂಚಿ-ಕಲಬುರಗಿಯ ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಧಾರವಾಡದ ಹಿರಿಯ ಸಾಹಿತಿ ಪ್ರೊ. ಮಲ್ಲಿಕಾರ್ಜುನ ಹಿರೇಮಠ 115 ಪುಸ್ತಕಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಇದನ್ನೂ ಓದಿ | Vice Chancellor: ರಾಜ್ಯದ 7 ನೂತನ ವಿವಿಗಳಿಗೆ ಕುಲಪತಿಗಳ ನೇಮಕ: ಸಚಿವ ಅಶ್ವತ್ಥನಾರಾಯಣ ಮಾಹಿತಿ

ಕಲಬುರಗಿ ದಕ್ಷಿಣ ಶಾಸಕ, ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಸಿ. ಪಾಟೀಲ ರೇವೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ, ಗುಲ್ಬರ್ಗಾ ವಿಶ್ವವಿದ್ಯಾಲಯದ ಕಲಸಚಿವ ಬಿ. ಶರಣಪ್ಪ ಭಾಗವಹಿಸಲಿದ್ದಾರೆ. ಶ್ರೀ ಸಿದ್ಧಲಿಂಗೇಶ್ವರ ಬುಕ್‌ ಡಿಪೋ ಮತ್ತು ಪ್ರಕಾಶನ ಸಂಸ್ಥಾಪಕ ಬಸವರಾಜ ಜಿ.ಕೊನೇಕ ಉಪಸ್ಥಿತರಿರಲಿದ್ದಾರೆ.

Exit mobile version