Site icon Vistara News

ನೇಕಾರರ, ಮೀನುಗಾರರ ಮಕ್ಕಳಿಗೂ ರೈತ ವಿದ್ಯಾನಿಧಿ ವಿಸ್ತರಣೆ : CM ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ

ಉಡುಪಿ: ನೇಕಾರರ ಹಾಗೂ ಮೀನುಗಾರರ ಮಕ್ಕಳಿಗೂ ರೈತ ವಿದ್ಯಾನಿಧಿ(Raita Vidyanidhi) ಯೋಜನೆಯನ್ನು ಈ ವರ್ಷ ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ತಿಳಿಸಿದರು.

ಶ್ರೀ ಕ್ಷೇತ್ರ ಉಚ್ಚಿಲ ಇವರ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಬೊಮ್ಮಾಯಿ ಅವರು, ಮೀನುಗಾರಿಕೆಯನ್ನು ಲಾಭದಾಯಕವನ್ನಾಗಿಸಲು ನಾನು ಮುಂದಾಗಿದ್ದೇವೆ. ಕೇಂದ್ರ ಸರ್ಕಾರದ ಯೋಜನೆಯೊಂದಿಗೆ ಸಂಯೋಜಿಸಿ 100 ಆಳ ಸಮುದ್ರ ಮೀನುಗರಿಕಾ ದೋಣಿಗಳನ್ನು ಒದಗಿಸಲಾಗುವುದು. ರಾಜೀವ್ ಗಾಂದಿ ವಸತಿ ಯೋಜನೆಯಡಿ ಮೀನುಗಾರರಿಗೆ 5000 ಮನೆಗಳನ್ನು ನಿರ್ಮಿಸಲಾಗುವುದು. ಮೀನುಗಾರರ 8 ಬಂದರುಗಳಲ್ಲಿ ಹೂಳು ತೆಗೆಯಲಾಗುವುದು. ಪ್ರತಿ ಗ್ರಾಮಪಂಚಾಯತಿ ಕೆರೆಗಳಲ್ಲಿ ಮೀನುಗಾರರಿಗೆ ಕೆರೆಗಳನ್ನು ಮೀಸಲಿಟ್ಟು, ಮೀನಿನ ಕೃಷಿಗೆ ಪ್ರೋತ್ಸಾಹ ನೀಡಲಾಗುವುದು ಎಂದರು.

ಹೆಚ್ಚಿನ ಓದಿಗಾಗಿ: ಕೊಲೆ ಕೇಸ್‌ ಹಿಂಪಡೆದಾಗ ಕರ್ತವ್ಯಪ್ರಜ್ಞೆ ಎಲ್ಲಿತ್ತು?: HDK, ಸಿದ್ದುಗೆ ಬೊಮ್ಮಾಯಿ ತಿರುಗೇಟು

ಮಹಿಳಾ ಸಬಲೀಕರಣ

ಸ್ತ್ರೀಶಕ್ತಿ ಸಂಘಗಳ ಸಾಲಗಳ ಮರುಪಾವತಿ 95% ಇದೆ. ಇದು ಮಹಿಳೆಯರ ಪರಿಶ್ರಮ ಹಾಗೂ ಪ್ರಮಾಣಿಕತೆಯನ್ನು ತೋರಿಸುತ್ತದೆ. ರಾಜ್ಯದ ಆರ್ಥಿಕತೆಯಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ₹500 ಕೋಟಿ ವೆಚ್ಚದಲ್ಲಿ ಆ್ಯಂಕರ್ ಬ್ಯಾಂಕ್ ಜೋಡಿಸಿ ಸ್ತ್ರೀ ಶಕ್ತಿ ಸಂಘಗಳಿಗೆ ₹1.5 ಲಕ್ಷ ಸಾಲ ಸೌಲಭ್ಯ ನೀಡಲಾಗುವುದು. ಇದರಿಂದ ಸುಮಾರು 4 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದೆ. ಕೇವಲ ಜೀವನೋಪಾಯಕ್ಕಾಗಿ ಅಲ್ಲ, ಆರ್ಥಿಕ ಅಭಿವೃದ್ಧಿ ಸಾಧಿಸುವ ಮೂಲಕ ಮಹಿಳಾ ಸಬಲೀಕರಣದ ಧ್ಯೇಯವನ್ನು ಸರ್ಕಾರ ಹೊಂದಿದೆ ಎಂದು ಬೊಮ್ಮಾಯಿ ಹೇಳಿದರು.

ಮೀನುಗಾರರಿಗೆ 10 ತಿಂಗಳ ಡೀಸೆಲ್ ಸಬ್ಸಿಡಿ

ರಾಜ್ಯದಲ್ಲಿ 100 ಡಾ. ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ನಿಲಯಗಳನ್ನು ನಿರ್ಮಿಸಲಾಗುವುದು ಎಂದ ಸಿಎಂ ಬೊಮ್ಮಾಯಿ, ಆಯ್ದ ಜಿಲ್ಲೆಗಳಲ್ಲಿ 1,000 ಹಾಸ್ಟೆಲ್‍ಗಳ ಕ್ಲಸ್ಟರ್ ನಿರ್ಮಿಸಲಾಗುವುದು. ಮೊಗವೀರ ಸಮುದಾಯದ ಮಕ್ಕಳಿಗೆ ವಸತಿ ನಿಲಯ ಸೌಲಭ್ಯವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪೂರೈಸಲಾಗುವುದು. ಮೀನುಗಾರರಿಗೆ 10 ತಿಂಗಳಿಗೆ ಬೇಕಾಗುವ ಡೀಸೆಲ್ ವೆಚ್ಚವನ್ನು ಸಂಪೂರ್ಣವಾಗಿ ಸಬ್ಸಿಡಿ ನೀಡಲಾಗುವುದು. ಮೊಗವೀರರ ಮಹಾಸಂಘ ಕೋರಿರುವಂತೆ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ₹5 ಕೋಟಿ ಮುಜರಾಯಿ ಇಲಾಖೆ ಮೂಲಕ ನೀಡಲಾಗುವುದು ಎಂದು ಹೇಳಿದರು.

Exit mobile version