Murder Case: ಕೋಲಾರದಲ್ಲಿ ಮತ್ತೆ ಹರಿದ ನೆತ್ತರು; 17 ವರ್ಷದ ಬಾಲಕನ ಭೀಕರ ಕೊಲೆ - Vistara News

ಕರ್ನಾಟಕ

Murder Case: ಕೋಲಾರದಲ್ಲಿ ಮತ್ತೆ ಹರಿದ ನೆತ್ತರು; 17 ವರ್ಷದ ಬಾಲಕನ ಭೀಕರ ಕೊಲೆ

Murder Case: ಕೋಲಾರದ ಪೇಟೆಚಾಮನಹಳ್ಳಿ ಬಡಾವಣೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ 17 ವರ್ಷದ ಬಾಲಕನ ಬರ್ಬರ ಹತ್ಯೆ ಮಾಡಲಾಗಿದೆ.

VISTARANEWS.COM


on

Karthik Singh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೋಲಾರ: ಶ್ರೀನಿವಾಸಪುರದ ಕಾಂಗ್ರೆಸ್ ಮುಖಂಡ ಶ್ರೀನಿವಾಸ್‌ ಹತ್ಯೆ ಪ್ರಕರಣದ ಬೆನ್ನಲ್ಲೇ ಜಿಲ್ಲೆಯಲ್ಲಿ ಮತ್ತೊಮ್ಮೆ ನೆತ್ತರು ಹರಿದಿದೆ. ನಗರದ ಪೇಟೆಚಾಮನಹಳ್ಳಿ ಬಡಾವಣೆಯ ಸರ್ಕಾರಿ ಶಾಲೆಯ ಆವರಣದಲ್ಲೇ 17 ವರ್ಷದ ಬಾಲಕನ ಬರ್ಬರ ಹತ್ಯೆ (Murder Case) ಮಾಡಿರುವುದು ಕಂಡುಬಂದಿದೆ.

ಕಾರ್ತಿಕ್ ಸಿಂಗ್ (17) ಕೊಲೆಯಾದ ಬಾಲಕ. ಪ್ರಥಮ‌ ಪಿಯುಸಿ ಓದುತ್ತಿದ್ದ ಬಾಲಕನನ್ನು ಯುವಕರ ಗುಂಪು ಕೊಲೆ‌‌ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತ ಬಾಲಕನ ಮೈಮೇಲೆ ಲಾಂಗು ಮಚ್ಚುಗಳಿಂದ ಹಲ್ಲೆ ನಡೆಸಿರುವುದು ಕಂಡುಬಂದಿದೆ. ಕೋಲಾರ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | Uttara Kannada News: ಯಲ್ಲಾಪುರ; ಐವರು ಅಂತಾರಾಜ್ಯ ಅರಣ್ಯಗಳ್ಳರ ಬಂಧನ

ಟ್ಯಾಂಕರ್ ಹರಿದು ಯುವಕ ದಾರುಣ ಸಾವು

ಉಡುಪಿ: ಟ್ಯಾಂಕರ್ ಹರಿದು ಯುವಕ ದಾರುಣವಾಗಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿ 66ರ ಕಂಚಿನಡ್ಕ ಗ್ರಾಮದ ಬಳಿ ನಡೆದಿದೆ. ಬಸ್‌ಗೆ ಡಿಕ್ಕಿ ಹೊಡೆದು ಬೈಕ್‌ನಿಂದ ಯುವಕ ಕೆಳಗೆ ಬಿದ್ದಾಗ ಟ್ಯಾಂಕರ್‌ ಹರಿದು ದುರ್ಘಟನೆ (Road Accident) ನಡೆದಿದೆ.

ಕಂಚಿನಡ್ಕ‌ ನಿವಾಸಿ ಪ್ರಜ್ವಲ್ ಮೃತ ದುರ್ದೈವಿ. ಮಂಗಳೂರು ಕಡೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ನಿಂತಿದ್ದ ಬಸ್‌ಗೆ ಹಿಂಬದಿಯಿಂದ ಪ್ರಜ್ವಲ್ ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ರಸ್ತೆಗೆ ಬಿದ್ದಾಗ, ತಲೆಯ ಮೇಲೆ ಟ್ಯಾಂಕರ್ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಮ್ಮೆ ಪುನೀತ್‌ ಕೆರೆಹಳ್ಳಿ ಬಂಧನ

puneeth kerehalli

ಬೆಂಗಳೂರು: ಜಾತಿ ನಿಂದನೆ ಆರೋಪದಲ್ಲಿ ಹಿಂದು ಕಾರ್ಯಕರ್ತ, ರಾಷ್ಟ್ರ ರಕ್ಷಣಾ ಪಡೆ ಅಧ್ಯಕ್ಷ ಪುನೀತ್ ಕೆರೆಹಳ್ಳಿಯನ್ನು (Puneet Kerehalli) ಪೊಲೀಸರು ಬಂಧಿಸಿದ್ದಾರೆ. ಗೂಂಡಾ ಕಾಯ್ದೆಯಡಿ ಬಂಧನವಾಗಿದ್ದ ಪುನೀತ್ ಕೆರೆಹಳ್ಳಿಯನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿತ್ತು. ಇದೀಗ ಮತ್ತೊಂದು ಪ್ರಕರಣದಲ್ಲಿ ಜೈಲು ಸೇರಿದ್ದಾರೆ.

ಜಾತಿ ನಿಂದನೆ ಮಾಡಿರುವ ಪುನೀತ್‌ ಕೆರೆಹಳ್ಳಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಭೈರಪ್ಪ‌ ಹರೀಶ್ ಎಂಬುವರು ನೀಡಿದ ದೂರಿನ ಮೇರೆಗೆ ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ, ಅವಾಚ್ಯ ಶಬ್ದಗಳ ಬಳಕೆ ಮಾಡಿದ ಆರೋಪದಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಹೀಗಾಗಿ ನ್ಯಾಯಾಲಯದ ಮುಂದೆ ಶನಿವಾರ ಪುನೀತ್‌ ಕೆರೆಹಳ್ಳಿಯನ್ನು ಸಂಪಿಗೆಹಳ್ಳಿ ಪೊಲೀಸರು ಹಾಜರುಪಡಿಸಲಿದ್ದಾರೆ.

ಇದನ್ನೂ ಓದಿ | Cyber Crime : ಸೈಬರ್‌ ಕ್ರೈಂನಡಿ ಬಂಧನದಿಂದ ಮಾಳವಿಕಾ ಅವಿನಾಶ್ ಪಾರು; ಕೆಜಿಎಫ್‌ನಲ್ಲಿ ನಟಿಸಿದ್ದೇ ವರವಾಯ್ತು!

ಗೂಂಡಾ ಕಾಯ್ದೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಹಳ್ಳಿ ಪರಪ್ಪನ ಅಗ್ರಹಾರ ಜೈಲಿನಿಂದ ಇತ್ತೀಚೆಗೆ ಬಿಡುಗಡೆಯಾಗಿದ್ದರು. ಮೊಹಮ್ಮದ್‌ ಇದ್ರೀಸ್ ಪಾಷಾ ಕೊಲೆ ಪ್ರಕರಣ ಸೇರಿ ವಿವಿಧ ಠಾಣೆಗಳಲ್ಲಿ 11 ಪ್ರಕರಣಗಳಿದ್ದ ಹಿನ್ನೆಲೆಯಲ್ಲಿ ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಪೊಲೀಸರು ಬಂಧಿಸಿದ್ದರು. ಆದರೆ, ತನ್ನ ಬಂಧನ ಪ್ರಶ್ನಿಸಿ ಪುನೀತ್‌ ಕೆರೆಹಳ್ಳಿ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದರು. ಇದರ ವಿಚಾರಣೆಗಾಗಿ ಸರ್ಕಾರವು ಸಲಹಾ ಸಮಿತಿ ರಚಿಸಿತ್ತು. ವಿಚಾರಣೆ ನಡೆಸಿದ್ದ ಸಮಿತಿ, ಆರೋಪಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ಅಭಿಪ್ರಾಯಪಟ್ಟಿತ್ತು. ಹೀಗಾಗಿ ಅವರನ್ನು ಬಿಡುಗಡೆ ಮಾಡಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024: ಆರ್​ಸಿಬಿ ಪಂದ್ಯದ ವೇಳೆ ಕಳಪೆ ಆಹಾರ ವಿತರಣೆ: ಕೆಎಸ್​ಸಿಎ ವಿರುದ್ಧ ಎಫ್ಐಆರ್

IPL 2024: ಆರೋಗ್ಯ ಹದಗೆಡಲು ಸ್ಟೇಡಿಯಂನ ಕ್ಯಾಂಟಿನ್​ನಲ್ಲಿ ನೀಡಿದ ಆಹಾರವೇ ಕಾರಣ ಎಂದು ಚೈತನ್ಯ ಕೆಎಸ್​ಸಿಎ ಆಡಳಿತ ಮಂಡಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಅನ್ವಯ ಕೆಎಸ್​ಸಿಎ ವಿರುದ್ಧ ಎಫ್ಐಆರ್ ದಾಖಲಾಗಿದೆ

VISTARANEWS.COM


on

IPL 2024
Koo

ಬೆಂಗಳೂರು: 17ನೇ ಆವೃತ್ತಿಯ ಐಪಿಎಲ್​ನಲ್ಲಿ(IPL 2024) ಡೆಲ್ಲಿ ಮತ್ತು ಆರ್​ಸಿಬಿ(DC vs RCB) ನಡುವೆ ಮೇ 12ರಂದು ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ(M.Chinnaswamy Stadium) ನಡೆದಿದ್ದ ಪಂದ್ಯದ ವೇಳೆ ಪ್ರೇಕ್ಷಕರಿಗೆ ಕಳಪೆ ಆಹಾರ ನೀಡಿದ ಆರೋಪದಡಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ(Karnataka State Cricket Association) ಆಡಳಿತ ಮಂಡಳಿ (KSCA) ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮೇ 12ರಂದು ಐಪಿಎಲ್ ವೀಕ್ಷಣೆ ಬಂದಿದ್ದ 23 ವರ್ಷದ ಚೈತನ್ಯ ಕತಾರ್ ಏರ್ ವೇಸ್ ಫ್ಯಾನ್ಸ್ ಟರೇಸ್ ಸ್ಟ್ಯಾಂಡಿನ ಕ್ಯಾಂಟಿನ್ ನಿಂದ ಊಟ ಸೇವಿಸಿದ್ದ ನಂತರ ಕೆಲವೇ ನಿಮಿಷಗಳಲ್ಲಿ ಆತನಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ತಾನು ಕುಳಿತುಕೊಂಡಿದ್ದ ಜಾಗದಲ್ಲಿಯೇ ಚೈತನ್ಯ ಕುಸಿದುಬಿದ್ದಿದ್ದಾನೆ. ತಕ್ಷಣ ಸ್ಟೇಡಿಯಂ ಸಿಬ್ಬಂದಿ ನೆರವಿನಿಂದ ಆತನಿಗೆ ಆ್ಯಂಬುಲೆನ್ಸ್ ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು‌. ಬಳಿಕ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದಾಗ ಚೈತನ್ಯರನ್ನು ಪರೀಕ್ಷಿಸಿದ ವೈದ್ಯರು ಫುಡ್ ಪಾಯಿಸನ್ ಆಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ IPL 2024: ಲಕ್ನೋಗೆ ಸೋಲು; ಪ್ಲೇ ಆಫ್​ ಪ್ರವೇಶಿಸಿದ ರಾಜಸ್ಥಾನ್​ ರಾಯಲ್ಸ್​

ಈ ಸಂಬಂಧ ತಮ್ಮ ಆರೋಗ್ಯ ಹದಗೆಡಲು ಕ್ಯಾಂಟಿನ್​ನಲ್ಲಿ ನೀಡಿದ ಆಹಾರವೇ ಕಾರಣ ಎಂದು ಚೈತನ್ಯ ಕೆಎಸ್​ಸಿಎ ಆಡಳಿತ ಮಂಡಳಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಅನ್ವಯ ಕೆಎಸ್​ಸಿಎ ವಿರುದ್ಧ ಎಫ್ಐಆರ್ ದಾಖಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯದ ವೇಳೆ ಕಳಪೆ ಆಹಾರ ನೀಡುತ್ತಿರುವ ಆರೋಪ ಕೇಳಿಬರುತ್ತಿರುವುದು ಇದೇ ಮೊದಲೇನಲ್ಲ. ಹಲವು ಬಾರಿ ಇಲ್ಲಿ ಪಂದ್ಯ ವೀಕ್ಷಣೆಗೆ ಬಂದಿದ್ದ ಪ್ರೇಕ್ಷಕರು ಇಲ್ಲಿನ ಆಹಾರ ವಿತರಣೆಯ ಕುರಿತು ಸಾಮಾಜಿಕ ಜಾಲತಾಣದಲ್ಲಿ ಗಂಭೀರ ಆರೋಪ ಮಾಡಿದ್ದರು. ಇನ್ನಾದರೂ ಕೆಎಸ್​ಸಿಎ ಈ ಬಗ್ಗೆ ಎಚ್ಚೆತ್ತುಕೊಂಡು ಉತ್ತಮ ಆಹಾರ ನೀಡುವ ಕೆಲಸವನ್ನು ಮಾಡಬೇಕಿದೆ. ಡೆಲ್ಲಿ ವಿರುದ್ಧದ ಈ ಪಂದ್ಯವನ್ನು ಆರ್​ಸಿಬಿ 47 ರನ್​ ಅಂತರದಿಂದ ಗೆದ್ದು ಬೀಗಿತ್ತು.

ಚಿನ್ನಸ್ವಾಮಿ ಸ್ಟೇಡಿಯಂನ ಎಲ್ಲ ನೀರಿನ ಮೂಲದ ವಿವರ ಕೇಳಿದ ಎನ್‌ಜಿಟಿ!


ಬೆಂಗಳೂರಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದ್ದ ವೇಳೆಯೂ(bangalore water crisis) ಚಿನ್ನಸ್ವಾಮಿ(m chinnaswamy) ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) 17ನೇ ಆವೃತ್ತಿಯ ಐಪಿಎಲ್(IPL 2024) ಟೂರ್ನಿಯ​ ಪಂದ್ಯಾವಳಿಗಳನ್ನು ನಡೆಸಿತ್ತು. ಇದಕ್ಕೆ ಸಾರ್ವಜನಿಕ ವಲಯದಿಂದ ಭಾರೀ ವಿರೋಧ ಕೂಡ ವ್ಯಕ್ತವಾಗಿತ್ತು. 3 ವಾರಗಳ ಹಿಂದೆ ನೀರಿನ ಬಳಕೆ ಕುರಿತು ರಾಷ್ಟ್ರೀಯ ಹಸಿರು ಪ್ರಾಧಿಕಾರ(ಎನ್‌ಜಿಟಿ) ವರದಿ ಕೇಳಿತ್ತು. ಪಂದ್ಯಗಳಿಗೆ ಬಳಸಿರುವ ನೀರಿನ ಮೂಲ ಹಾಗೂ ಕ್ರೀಡಾಂಗಣದಲ್ಲಿರುವ 400 ಅಡಿ ಆಳದ ನಾಲ್ಕು ಕೊಳವೆ ಬಾವಿಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿದೆ. ಎನ್‌ಜಿಟಿ ಮುಖ್ಯಸ್ಥ ನ್ಯಾ. ಪ್ರಕಾಶ್ ಶ್ರೀವಾಸ್ತವ ಅವರಿದ್ದ ಪೀಠವು, ಕ್ರೀಡಾಂಗಣದಲ್ಲಿ ಬಳಕೆಯಾಗುತ್ತಿರುವ ನೀರಿನ ಎಲ್ಲಾ ಮೂಲ, ಕ್ರೀಡಾಂಗಣದಲ್ಲಿರುವ ಬೋರ್‌ವೆಲ್‌, ಒಳಚರಂಡಿ ಸಂಸ್ಕರಣಾ ಘಟಕದ ಬಳಕೆ ಬಗ್ಗೆ 4 ವಾರಗಳಲ್ಲಿ ಉತ್ತರಿಸುವಂತೆ ಸೂಚಿಸಿದೆ. ಮುಂದಿನ ವಿಚಾರಣೆಯನ್ನು ಆಗಸ್ಟ್​ 13ಕ್ಕೆ ನಿಗದಿಪಡಿಸಿದೆ.

Continue Reading

ರಾಜಕೀಯ

Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

Prajwal Revanna Case: ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ (ಟ್ವಿಟರ್‌) ಖಾತೆಗೆ ಬ್ಲ್ಯೂ ಟಿಕ್‌ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಈಗಾಗಲೇ ತರಲಾಗಿದೆ. ಈಗ ಹಣ ಪಾವತಿ ಮಾಡಿಲ್ಲವೆಂದಾದರೆ ಅಥವಾ ಆ ಖಾತೆ ಬಗ್ಗೆ ದೂರುಗಳು ಬಂದರೆ ಬ್ಲ್ಯೂಟಿಕ್‌ ಅನ್ನು ವಾಪಸ್‌ ಪಡೆಯುವ ಅಧಿಕಾರವನ್ನು ಎಕ್ಸ್‌ ಹೊಂದಿದೆ. ಹೀಗಾಗಿ ಇಲ್ಲಿ ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಏನಾಗಿದೆ? ಯಾವ ಕಾರಣಕ್ಕೆ ಅವರ ಖಾತೆಯಿಂದ ಬ್ಲ್ಯೂ ಟಿಕ್‌ಗೆ ಗೇಟ್‌ಪಾಸ್‌ ಸಿಕ್ಕಿದೆ ಎಂಬುದು ಸದ್ಯದ ಕುತೂಹಲವಾಗಿದೆ.

VISTARANEWS.COM


on

Prajwal Revanna Case Prajwal Revanna loses X recognition in Obscene Video case
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್‌ ಮೀಡಿಯಾ ಎಕ್ಸ್‌ ಮಹತ್ವದ ತೀರ್ಮಾನವನ್ನು ತೆಗೆದುಕೊಂಡಿದೆ. ವೇರಿಫೈಡ್‌ ಅಕೌಂಟ್‌ ಸ್ಟೇಟಸ್‌ನಿಂದ ಪ್ರಜ್ವಲ್‌ ಹೊರಬಿದ್ದಿದ್ದಾರೆ. ಅವರಿಗಿದ್ದ ಬ್ಲ್ಯೂ ಟಿಕ್‌ ಮಾನ್ಯತೆ ಈಗ ಅಮಾನ್ಯಗೊಂಡಿದೆ.

ಸೋಷಿಯಲ್‌ ಮೀಡಿಯಾ ಎಕ್ಸ್‌ ಈ ಮೊದಲು ಟ್ವಿಟರ್‌ ಆಗಿತ್ತು. ಆಗಿನಿಂದಲೂ ಅಫೀಶಿಯಲ್‌ ಖಾತೆದಾರರಿಗೆ ಬ್ಲ್ಯೂ ಟಿಕ್‌ ಅನ್ನು ನೀಡಲಾಗುತ್ತಿತ್ತು. ಅದಕ್ಕೆ ಕೆಲವೊಂದಿಷ್ಟು ಪ್ರಕ್ರಿಯೆಗಳು ಇದ್ದವು. ಈ ಕಾರಣಕ್ಕೆ ಗಣ್ಯರು, ರಾಜಕಾರಣಿಗಳು, ಸಿನಿಮಾ ತಾರೆಯರು ಸೇರಿದಂತೆ ಹಲವರು ಈ ಬ್ಲ್ಯೂಟಿಕ್‌ ಅನ್ನು ಪಡೆದುಕೊಳ್ಳುತ್ತಿದ್ದರು. ಆದರೆ, ಎಲಾನ್‌ ಮಸ್ಕ್‌ ಟ್ವಿಟರ್‌ ಅನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ನಂತರ ಹಲವು ಬದಲಾವಣೆಯನ್ನು ತಂದರು. ಬ್ಲ್ಯೂ ಟಿಕ್‌ ಬೇಕೆಂದರೆ ಹಣ ಪಾವತಿ ಮಾಡಬೇಕು ಎಂಬ ನಿಯಮವನ್ನು ಸಹ ತರಲಾಗಿದೆ. ಈಗ ಹಣ ಪಾವತಿ ಮಾಡಿಲ್ಲವೆಂದಾದರೆ ಅಥವಾ ಆ ಖಾತೆ ಬಗ್ಗೆ ದೂರುಗಳು ಬಂದರೆ ಬ್ಲ್ಯೂಟಿಕ್‌ ಅನ್ನು ವಾಪಸ್‌ ಪಡೆಯುವ ಅಧಿಕಾರವನ್ನು ಎಕ್ಸ್‌ ಹೊಂದಿದೆ. ಹೀಗಾಗಿ ಇಲ್ಲಿ ಪ್ರಜ್ವಲ್‌ ರೇವಣ್ಣ ಕೇಸ್‌ನಲ್ಲಿ ಏನಾಗಿದೆ ಎಂಬುದು ಸದ್ಯದ ಕುತೂಹಲವಾಗಿದೆ.

ಬ್ಲ್ಯೂ ಟಿಕ್‌ ಬೇಕೆಂದರೆ ದುಡ್ಡೆಷ್ಟು?

ಗ್ರಾಹಕರು ದುಡ್ಡು ಕೊಟ್ಟು ಈ ಬ್ಲ್ಯೂ ಟಿಕ್ ಮಾರ್ಕ್ ಖರೀದಿಸಬಹುದು. ಮೆಟಾ ವೆರಿಫೈಡ್ ಸಬ್ಸ್‌ಕ್ರಿಪ್ಷನ್ ಆಧಾರಿತ ಸೇವೆಯ ಅನ್ವಯ ಬಳಕೆದಾರರು ತಿಂಗಳಿಗೆ 699 ರೂ. ಪಾವತಿಸಿದರೆ ಬ್ಲೂ ಟಿಕ್ ದೊರೆಯಲಿದೆ. ಇದು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ ಎರಡಕ್ಕೂ ಅನ್ವಯವಾಗಲಿದೆ. ಆದರೆ, ಈಗ ಪ್ರಜ್ವಲ್‌ ಕೇಸ್‌ನಲ್ಲಿ ಯಾವ ಕಾರಣಕ್ಕೆ ಬ್ಲ್ಯೂಟಿಕ್‌ ಅನ್ನು ತೆಗೆಯಲಾಗಿದೆ ಎಂದು ಈವರೆಗೂ ಎಕ್ಸ್‌ ಸ್ಪಷ್ಟನೆ ನೀಡಿಲ್ಲ.

ವಿದೇಶಕ್ಕೆ ಹೋದ ಬಳಿಕ ಕೊನೆಯದಾಗಿ ಟ್ವೀಟ್‌ ಮಾಡಿದ್ದ ಪ್ರಜ್ವಲ್‌

ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

ಪ್ರಜ್ವಲ್‌ ರೇವಣ್ಣ ದೇಶಬಿಟ್ಟು 19 ದಿನ ಕಳೆದಿದರೂ ಸುಳಿವಿಲ್ಲ. ಈಗಿನ ಪ್ರಕಾರ, ಸದ್ಯಕ್ಕೆ ಪ್ರಜ್ವಲ್ ವಾಪಸಾಗುವುದು ಅನುಮಾನ ಎನ್ನಲಾಗಿದೆ. ಹಾಗಾಗಿ ಎಸ್‌ಐಟಿ ಅಧಿಕಾರಿಗಳ ಮುಂದಿನ ನಡೆ ಏನು? ಬೇರೆ ದೇಶಕ್ಕೆ ಹೋಗಿ ಅವರನ್ನು ಬಂಧಿಸಿ ಕರೆತರಲು ಸಾಧ್ಯವಿದೆಯೇ? ಅದು ಸಾಧ್ಯವಿಲ್ಲವಾದರೆ ಬೇರೆ ಯಾವ ಮಾರ್ಗವಿದೆ? ಅಥವಾ ಪ್ರಜ್ವಲ್‌ ಬರುವವರೆಗೂ ಕಾಯುತ್ತಾ ಕೂರಬೇಕಾ ಎಂಬಿತ್ಯಾದಿ ಪ್ರಶ್ನೆಗಳು ಎದುರಾಗಿವೆ.

ಈಗಿನ ಮಾಹಿತಿ ಪ್ರಕಾರ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ನೋಡುವುದಾದರೆ ಸದ್ಯ ಎಸ್‌ಐಟಿ ತಂಡದವರು ಬೇರೆ ದೇಶಕ್ಕೆ ತೆರಳಿ ಪ್ರಜ್ವಲ್‌ ಅವರನ್ನು ಕರೆತರಲು ಸಾಧ್ಯವಿಲ್ಲ. ಇನ್ನು ಪ್ರಜ್ವಲ್‌ ಇಲ್ಲಿಂದ ಜರ್ಮನಿಗೆ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ಹೋಗಿದ್ದಾರಾದರೂ ಅವರು ಜರ್ಮನಿಯಲ್ಲಿಯೇ ಇದ್ದಾರಾ? ಅಥವಾ ಅಲ್ಲಿಂದ ಬೇರೆ ದೇಶಕ್ಕೇನಾದರೂ ಹೋಗಿದ್ದಾರಾ ಎಂಬುದೂ ಖಾತ್ರಿಯಾಗಿಲ್ಲ. ಆದರೆ, ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಂತೆ ಫ್ಲೈಟ್‌ ಟಿಕೆಟ್‌ ಅನ್ನು ಮಾತ್ರ ಬುಕ್‌ ಮಾಡುತ್ತಾ ಕುಳಿತಿದ್ದಾರೆ. ಕೊನೇ ಕ್ಷಣದಲ್ಲಿ ಫ್ಲೈಟ್‌ ಹತ್ತದೆ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಅದು ಬಿಟ್ಟರೆ ಇತ್ತ ಸುಳಿಯುವ ಯಾವುದೇ ಲಕ್ಷಣಗಳು ಸದ್ಯಕ್ಕಂತೂ ಗೋಚರಿಸುತ್ತಿಲ್ಲ.

ಹೀಗಾಗಿ ಮೊದಲು ಪ್ರಜ್ವಲ್ ಯಾವ ದೇಶದಲ್ಲಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಕಲೆ ಹಾಕಬೇಕು. ಇಲ್ಲದೆ ಹೋದರೆ ಈಗಾಗಲೇ ಜಾರಿ ಮಾಡಲಾಗಿರುವ ಬ್ಲೂ ಕಾರ್ನರ್ ನೋಟಿಸ್‌ನಿಂದಾಗಿ ಯಾವ ದೇಶದಿಂದಾದರೂ ಮಾಹಿತಿ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಹೀಗಾಗಿ ಇಂಟರ್ ಪೋಲ್ ಅಧಿಕಾರಿಗಳಿಂದ ಮಾಹಿತಿ ಬರುವವರೆಗೂ ಕಾಯಲೇಬೇಕು.

ಇದನ್ನೂ ಓದಿ: Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

ಪ್ರಜ್ವಲ್‌ ಇರುವ ದೇಶ ಗೊತ್ತಾದರೆ ಎಸ್‌ಐಟಿ ಅರೆಸ್ಟ್‌ ಮಾಡಬಹುದಾ?

ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿಯೇ ಅಥವಾ ಇನ್ಯಾವುದೋ ದೇಶದಲ್ಲಿ ಅಡಗಿದ್ದಾರೆ ಎಂಬುದು ಗೊತ್ತಾದರೆ ಎಸ್‌ಐಟಿ ಹೋಗಿ ಅರೆಸ್ಟ್‌ ಮಾಡಬಹುದಾ ಎಂದು ಕೇಳಿದರೆ, ಅದು ಸಾಧ್ಯವಿಲ್ಲ ಎಂಬ ಉತ್ತರ ಸಿಗಲಿದೆ. ಹಾಗಾಗಿ ಅವರು ಯಾವ ದೇಶದಲ್ಲಿ ಅಡಗಿದ್ದಾರೆಂಬ ಮಾಹಿತಿ ಸಿಕ್ಕರೆ ಇಂಟರ್ ಪೋಲ್ ಮುಖಾಂತರ ಹಸ್ತಾಂತರ ಮಾಡಿಕೊಳ್ಳಬಹುದು. ಅದು ಕೂಡ ಆ ದೇಶ ಹಾಗೂ ನಮ್ಮ ದೇಶದ ನಡುವೆ ಹಸ್ತಾಂತರ ಒಪ್ಪಂದ (Extradition Treaty) ಇರಬೇಕು. ಆಗ ಅಲ್ಲಿನ ಸರ್ಕಾರಕ್ಕೆ ಮಾಹಿತಿ ನೀಡಿ ಹಸ್ತಾಂತರ ಮಾಡಿಕೊಳ್ಳಬಹುದು. ಅದೂ ಆಗದೇ ಹೋದರೆ, ಅವರು ಎಲ್ಲಿದ್ದಾರೆಂದು ತಿಳಿದುಕೊಂಡು ಸುಮ್ಮನೆ ಕೂರಬಹುದೇ ಹೊರತು ಬೇರೇನೂ ಮಾಡುವುದಕ್ಕೆ ಆಗುವುದಿಲ್ಲ. ಆಗ ಪ್ರಜ್ವಲ್ ತಾನಾಗಿಯೇ ಬರುವವರೆಗೂ ಕಾಯಲೇಬೇಕು.

Continue Reading

ಕರ್ನಾಟಕ

Karnataka Weather: ಇಂದು, ನಾಳೆ ಗುಡುಗು, ಮಿಂಚು ಸಹಿತ ಭಾರಿ ಮಳೆ; ಉತ್ತರ ಒಳನಾಡಿನಲ್ಲಿ ಆರೆಂಜ್ ಅಲರ್ಟ್

Karnataka Weather: ಮೇ 19 ರವರೆಗೆ ರಾಜ್ಯದಾದ್ಯಂತ ಗುಡುಗು, ಮಿಂಚು, ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

VISTARANEWS.COM


on

Karnataka Weather
ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಬುಧವಾರ ಸುರಿದ ಭಾರಿ ಮಳೆಯಿಂದ ಬಸ್ ನಿಲ್ದಾಣ ಸಂಪೂರ್ಣ ಜಲಾವೃತವಾಗಿದೆ.
Koo

ಬೆಂಗಳೂರು: ಮೇ 15 ಮತ್ತು 16 ರಂದು ರಾಜ್ಯದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು, ಜೋರಾದ ಗಾಳಿಯೊಂದಿಗೆ ಭಾರೀ ಮಳೆಯಾಗುವ (Karnataka Weather) ಸಾಧ್ಯತೆ ಇದ್ದು, ಈ ಭಾಗದಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ 50-60 ಕಿ.ಮೀ ವೇಗದ ಬಿರುಗಾಳಿಯೊಂದಿಗೆ 64.5ರಿಂದ 115.5 ಮಿ.ಮೀ ಮಳೆ (Rain News) ಸುರಿಯುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಮೇ 16ರಂದು ಕಲಬುರ್ಗಿ, ವಿಜಯಪುರ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ (50-60 kmph) ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಜೋರಾದ ಗಾಳಿಯೊಂದಿಗೆ (40-50 kmph) ಭಾರೀ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಮಳೆಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಬಾಗಲಕೋಟೆ, ಬೀದ‌ರ್, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (50-60 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗುಡುಗು ಸಹಿತ ಗಾಳಿ (40-50 kmph) ಬೀಸುವ ಸಂಭವವಿದೆ.

ಮೇ 22ರವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದ್ದು, ಮುಂದಿನ 5 ದಿನಗಳಲ್ಲಿ ರಾಜ್ಯದ ಮೇಲೆ 2-4 ಡಿಗ್ರಿ ಸೆ. ಇಳಿಕೆ ಕಾಣುವ ಸಾಧ್ಯತೆ ಇಲ್ಲ.

ಇದನ್ನೂ ಓದಿ | Karnataka Weather : ಮೇ 18ರವರೆಗೆ ಮಳೆ ಅಬ್ಬರ; 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ, ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°C ಮತ್ತು 23°C ಇರುವ ಸಾಧ್ಯತೆ ಇದೆ.

Continue Reading

ಕ್ರೈಂ

Prajwal Revanna Case: ವಿದೇಶದಿಂದ ಬಾರದ ಪ್ರಜ್ವಲ್‌; ಜರ್ಮನಿಗೆ ಹೋಗುತ್ತಾ ಎಸ್‌ಐಟಿ ಟೀಂ? ಮುಂದಿನ ಆಯ್ಕೆ ಏನು?

Prajwal Revanna Case: ಪ್ರಜ್ವಲ್‌ ಇಲ್ಲಿಂದ ಜರ್ಮನಿಗೆ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ಹೋಗಿದ್ದಾರಾದರೂ ಅವರು ಜರ್ಮನಿಯಲ್ಲಿಯೇ ಇದ್ದಾರಾ? ಅಥವಾ ಅಲ್ಲಿಂದ ಬೇರೆ ದೇಶಕ್ಕೇನಾದರೂ ಹೋಗಿದ್ದಾರಾ ಎಂಬುದೂ ಖಾತ್ರಿಯಾಗಿಲ್ಲ. ಆದರೆ, ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಂತೆ ಫ್ಲೈಟ್‌ ಟಿಕೆಟ್‌ ಅನ್ನು ಮಾತ್ರ ಬುಕ್‌ ಮಾಡುತ್ತಾ ಕುಳಿತಿದ್ದಾರೆ. ಕೊನೇ ಕ್ಷಣದಲ್ಲಿ ಫ್ಲೈಟ್‌ ಹತ್ತದೆ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಅದು ಬಿಟ್ಟರೆ ಇತ್ತ ಸುಳಿಯುವ ಯಾವುದೇ ಲಕ್ಷಣಗಳು ಸದ್ಯಕ್ಕಂತೂ ಗೋಚರಿಸುತ್ತಿಲ್ಲ. ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿಯೇ ಅಥವಾ ಇನ್ಯಾವುದೋ ದೇಶದಲ್ಲಿ ಅಡಗಿದ್ದಾರೆ ಎಂಬುದು ಗೊತ್ತಾದರೆ ಎಸ್‌ಐಟಿ ಹೋಗಿ ಅರೆಸ್ಟ್‌ ಮಾಡಬಹುದಾ? ಏನು ಮಾಡಬಹುದು ಎಂಬ ಬಗ್ಗೆ ವಿವರ ಇಲ್ಲಿದೆ.

VISTARANEWS.COM


on

Prajwal Revanna Case Will SIT team go abroad for arrest Prajwal
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ (Absence video) ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೆ ಕೇಸ್‌ ಜಟಿಲವಾಗುತ್ತಲೇ ಇದೆ. ಒಂದು ಕಡೆ ಎಸ್‌ಐಟಿ ತನಿಖೆ ಬಗ್ಗೆ ವಿಪಕ್ಷಗಳ ಅಸಮಾಧಾನ ಹಾಗೂ ಆರೋಪ. ಇನ್ನೊಂದು ಕಡೆ ಪ್ರಜ್ವಲ್‌ ರೇವಣ್ಣ ದೇಶಬಿಟ್ಟು 19 ದಿನ ಕಳೆದಿದರೂ ಸುಳಿವಿಲ್ಲ. ಈಗಿನ ಪ್ರಕಾರ, ಸದ್ಯಕ್ಕೆ ಪ್ರಜ್ವಲ್ ವಾಪಸಾಗುವುದು ಅನುಮಾನ ಎನ್ನಲಾಗಿದೆ. ಹಾಗಾಗಿ ಎಸ್‌ಐಟಿ ಅಧಿಕಾರಿಗಳ ಮುಂದಿನ ನಡೆ ಏನು? ಬೇರೆ ದೇಶಕ್ಕೆ ಹೋಗಿ ಅವರನ್ನು ಬಂಧಿಸಿ ಕರೆತರಲು ಸಾಧ್ಯವಿದೆಯೇ? ಅದು ಸಾಧ್ಯವಿಲ್ಲವಾದರೆ ಬೇರೆ ಯಾವ ಮಾರ್ಗವಿದೆ? ಅಥವಾ ಪ್ರಜ್ವಲ್‌ ಬರುವವರೆಗೂ ಕಾಯುತ್ತಾ ಕೂರಬೇಕಾ ಎಂಬಿತ್ಯಾದಿ ಪ್ರಶ್ನೆಗಳು ಎದುರಾಗಿವೆ.

ಈಗಿನ ಮಾಹಿತಿ ಪ್ರಕಾರ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರ ಹೇಳಿಕೆಯನ್ನು ಗಮನದಲ್ಲಿಟ್ಟುಕೊಂಡು ನೋಡುವುದಾದರೆ ಸದ್ಯ ಎಸ್‌ಐಟಿ ತಂಡದವರು ಬೇರೆ ದೇಶಕ್ಕೆ ತೆರಳಿ ಪ್ರಜ್ವಲ್‌ ಅವರನ್ನು ಕರೆತರಲು ಸಾಧ್ಯವಿಲ್ಲ. ಇನ್ನು ಪ್ರಜ್ವಲ್‌ ಇಲ್ಲಿಂದ ಜರ್ಮನಿಗೆ ಫ್ಲೈಟ್‌ ಟಿಕೆಟ್‌ ಬುಕ್‌ ಮಾಡಿ ಹೋಗಿದ್ದಾರಾದರೂ ಅವರು ಜರ್ಮನಿಯಲ್ಲಿಯೇ ಇದ್ದಾರಾ? ಅಥವಾ ಅಲ್ಲಿಂದ ಬೇರೆ ದೇಶಕ್ಕೇನಾದರೂ ಹೋಗಿದ್ದಾರಾ ಎಂಬುದೂ ಖಾತ್ರಿಯಾಗಿಲ್ಲ. ಆದರೆ, ಅವರು ಜರ್ಮನಿಯಿಂದ ಬೆಂಗಳೂರಿಗೆ ಬರುವಂತೆ ಫ್ಲೈಟ್‌ ಟಿಕೆಟ್‌ ಅನ್ನು ಮಾತ್ರ ಬುಕ್‌ ಮಾಡುತ್ತಾ ಕುಳಿತಿದ್ದಾರೆ. ಕೊನೇ ಕ್ಷಣದಲ್ಲಿ ಫ್ಲೈಟ್‌ ಹತ್ತದೆ ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದಾರೆ. ಅದು ಬಿಟ್ಟರೆ ಇತ್ತ ಸುಳಿಯುವ ಯಾವುದೇ ಲಕ್ಷಣಗಳು ಸದ್ಯಕ್ಕಂತೂ ಗೋಚರಿಸುತ್ತಿಲ್ಲ.

ಹೀಗಾಗಿ ಮೊದಲು ಪ್ರಜ್ವಲ್ ಯಾವ ದೇಶದಲ್ಲಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಕಲೆ ಹಾಕಬೇಕು. ಇಲ್ಲದೆ ಹೋದರೆ ಈಗಾಗಲೇ ಜಾರಿ ಮಾಡಲಾಗಿರುವ ಬ್ಲೂ ಕಾರ್ನರ್ ನೋಟಿಸ್‌ನಿಂದಾಗಿ ಯಾವ ದೇಶದಿಂದಾದರೂ ಮಾಹಿತಿ ಬರುತ್ತದೆಯೇ ಎಂಬುದನ್ನು ಕಾದು ನೋಡಬೇಕು. ಹೀಗಾಗಿ ಇಂಟರ್ ಪೋಲ್ ಅಧಿಕಾರಿಗಳಿಂದ ಮಾಹಿತಿ ಬರುವವರೆಗೂ ಕಾಯಲೇಬೇಕು.

ಇದನ್ನೂ ಓದಿ: Prajwal Revanna Case: ಜರ್ಮನಿಯಿಂದ ವಿಮಾನ ಹತ್ತಲೇ ಇಲ್ಲ ಪ್ರಜ್ವಲ್‌; ಎಸ್‌ಐಟಿಗೆ ಚಳ್ಳೆಹಣ್ಣು ತಿನ್ನಿಸಿದ ಸಂಸದ!

ಪ್ರಜ್ವಲ್‌ ಇರುವ ದೇಶ ಗೊತ್ತಾದರೆ ಎಸ್‌ಐಟಿ ಅರೆಸ್ಟ್‌ ಮಾಡಬಹುದಾ?

ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರು ಜರ್ಮನಿಯಲ್ಲಿಯೇ ಅಥವಾ ಇನ್ಯಾವುದೋ ದೇಶದಲ್ಲಿ ಅಡಗಿದ್ದಾರೆ ಎಂಬುದು ಗೊತ್ತಾದರೆ ಎಸ್‌ಐಟಿ ಹೋಗಿ ಅರೆಸ್ಟ್‌ ಮಾಡಬಹುದಾ ಎಂದು ಕೇಳಿದರೆ, ಅದು ಸಾಧ್ಯವಿಲ್ಲ ಎಂಬ ಉತ್ತರ ಸಿಗಲಿದೆ. ಹಾಗಾಗಿ ಅವರು ಯಾವ ದೇಶದಲ್ಲಿ ಅಡಗಿದ್ದಾರೆಂಬ ಮಾಹಿತಿ ಸಿಕ್ಕರೆ ಇಂಟರ್ ಪೋಲ್ ಮುಖಾಂತರ ಹಸ್ತಾಂತರ ಮಾಡಿಕೊಳ್ಳಬಹುದು. ಅದು ಕೂಡ ಆ ದೇಶ ಹಾಗೂ ನಮ್ಮ ದೇಶದ ನಡುವೆ ಹಸ್ತಾಂತರ ಒಪ್ಪಂದ (Extradition Treaty) ಇರಬೇಕು. ಆಗ ಅಲ್ಲಿನ ಸರ್ಕಾರಕ್ಕೆ ಮಾಹಿತಿ ನೀಡಿ ಹಸ್ತಾಂತರ ಮಾಡಿಕೊಳ್ಳಬಹುದು. ಅದೂ ಆಗದೇ ಹೋದರೆ, ಅವರು ಎಲ್ಲಿದ್ದಾರೆಂದು ತಿಳಿದುಕೊಂಡು ಸುಮ್ಮನೆ ಕೂರಬಹುದೇ ಹೊರತು ಬೇರೇನೂ ಮಾಡುವುದಕ್ಕೆ ಆಗುವುದಿಲ್ಲ. ಆಗ ಪ್ರಜ್ವಲ್ ತಾನಾಗಿಯೇ ಬರುವವರೆಗೂ ಕಾಯಲೇಬೇಕು.

Continue Reading
Advertisement
Tips For Healthy Skin
ಆರೋಗ್ಯ7 mins ago

Tips For Healthy Skin: ಈ ಐದು ಸಲಹೆಗಳನ್ನು ಪಾಲಿಸಿ, ಮೊಡವೆಗಳಿಂದ ಪಾರಾಗಿ!

Driving Tips
ಕ್ರೈಂ13 mins ago

Driving Tips: ವಾಹನ ಚಾಲನೆ ಮಾಡುತ್ತಿರುವಾಗ ಪ್ರಾಣಿಗಳಿಂದಾಗುವ ಅಪಘಾತ ತಪ್ಪಿಸಿಕೊಳ್ಳುವುದು ಹೇಗೆ?

Online scams
Latest20 mins ago

Online scams: ಹೆರಿಗೆ ರಜೆಯಲ್ಲಿದ್ದಾಗ ದುಡ್ಡು ಸಂಪಾದಿಸಲು ಹೋಗಿ 54 ಲಕ್ಷ ರೂ. ಕಳೆದುಕೊಂಡಳು!

Alamgir Alam
ದೇಶ33 mins ago

Alamgir Alam: ಮನೆಗೆಲಸದವನ ಮನೆಯಲ್ಲಿ 35 ಕೋಟಿ ರೂ. ಪತ್ತೆ; ಜಾರ್ಖಂಡ್‌ ಸಚಿವ ಆಲಂ ಬಂಧನ

IPL 2024
ಕ್ರೀಡೆ44 mins ago

IPL 2024: ಆರ್​ಸಿಬಿ ಪಂದ್ಯದ ವೇಳೆ ಕಳಪೆ ಆಹಾರ ವಿತರಣೆ: ಕೆಎಸ್​ಸಿಎ ವಿರುದ್ಧ ಎಫ್ಐಆರ್

Prajwal Revanna Case Prajwal Revanna loses X recognition in Obscene Video case
ರಾಜಕೀಯ45 mins ago

Prajwal Revanna Case: ಸೆಕ್ಸ್‌ ಕೇಸಲ್ಲಿ ಎಕ್ಸ್‌ ಮಾನ್ಯತೆ ಕಳೆದುಕೊಂಡ ಪ್ರಜ್ವಲ್‌ ರೇವಣ್ಣ!

SBI Rates
ವಾಣಿಜ್ಯ1 hour ago

SBI Rates: ಎಸ್‌ಬಿಐನಲ್ಲಿ ಎಫ್‌ಡಿ ಇಟ್ಟವರಿಗೆ ಬಂಪರ್‌ ನ್ಯೂಸ್;‌ ಭಾರಿ ಬಡ್ಡಿದರ ಹೆಚ್ಚಿಸಿದ ಬ್ಯಾಂಕ್!

EPF Withdrawal Rule
ಮನಿ ಗೈಡ್2 hours ago

EPF Withdraw Rule: ಪಿಎಫ್‌ ಮುಂಗಡ ಹಣ ಪಡೆಯುವುದು ಈಗ ಮತ್ತಷ್ಟು ಸುಲಭ; ಹೊಸ ಬದಲಾವಣೆಯ ಸಂಪೂರ್ಣ ಮಾಹಿತಿ

IND vs AUS Test
ಕ್ರೀಡೆ2 hours ago

IND vs AUS Test: ಈ ಬಾರಿಯ ಬಾರ್ಡರ್– ಗಾವಸ್ಕರ್ ಟೆಸ್ಟ್​ ಸರಣಿಯಲ್ಲಿ ಭಾರತೀಯರಿಗೆ ಸಿಗಲಿದೆ ವಿಶೇಷ ಆಸನ ವ್ಯವಸ್ಥೆ

Karnataka Weather
ಕರ್ನಾಟಕ2 hours ago

Karnataka Weather: ಇಂದು, ನಾಳೆ ಗುಡುಗು, ಮಿಂಚು ಸಹಿತ ಭಾರಿ ಮಳೆ; ಉತ್ತರ ಒಳನಾಡಿನಲ್ಲಿ ಆರೆಂಜ್ ಅಲರ್ಟ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case
ಕರ್ನಾಟಕ13 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ15 hours ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ1 day ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20241 day ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20241 day ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ1 day ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು1 day ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ2 days ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ2 days ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ2 days ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

ಟ್ರೆಂಡಿಂಗ್‌