BJP JDS Alliance: ಬಿಜೆಪಿ ಜೆಡಿಎಸ್‌ ಮೈತ್ರಿಯಲ್ಲಿ 24+4 ಫಾರ್ಮುಲಾ? ಆ 4 ಕ್ಷೇತ್ರ ಯಾವುದು? - Vistara News

ಕರ್ನಾಟಕ

BJP JDS Alliance: ಬಿಜೆಪಿ ಜೆಡಿಎಸ್‌ ಮೈತ್ರಿಯಲ್ಲಿ 24+4 ಫಾರ್ಮುಲಾ? ಆ 4 ಕ್ಷೇತ್ರ ಯಾವುದು?

BJP JDS Alliance: ಈಗಾಗಲೇ ರಾಜ್ಯ ಬಿಜೆಪಿ ನಾಯಕರ ಅಭಿಪ್ರಾಯವನ್ನು ಬಿಜೆಪಿ ವರಿಷ್ಠರು ಪಡೆದುಕೊಂಡಿದ್ದಾರೆ. ಇಂದು ಇಲ್ಲವೇ ನಾಳೆ ಎಚ್‌‌.ಡಿ. ಕುಮಾರಸ್ವಾಮಿ ಜತೆ ಫೈನಲ್‌ ಮಾತುಕತೆ ನಡೆಯಲಿದೆ. ಮೂರು ಸೀಟ್‌ ಅನ್ನು ಬಿಟ್ಟುಕೊಡುವ ಬಗ್ಗೆ ಬಿಜೆಪಿ ವರಿಷ್ಠರು ಒಲವು ತೋರಿದ್ದಾರೆ. ಆದರೆ, ಇನ್ನೊಂದು ಸ್ಥಾನವನ್ನು ಹೆಚ್ಚು ಕೊಟ್ಟರೆ ಅದು ಬೋನಸ್‌ ಎಂದು ರಾಜ್ಯ ಬಿಜೆಪಿ ಹೇಳುತ್ತಿದೆ.

VISTARANEWS.COM


on

PM Narendra Modi and HD Kumaraswamy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲೋಕಸಭಾ ಚುನಾವಣೆ (Lok Sabha Election 2024) ಸನ್ನಿಹಿತವಾಗುತ್ತಿದೆ. ಈ ಸಂದರ್ಭದಲ್ಲಿ ಬಿಜೆಪಿ – ಜೆಡಿಎಸ್‌ ಮೈತ್ರಿ (BJP JDS Alliance) ಮಾತುಕತೆಯು ಮಹತ್ವದ ಘಟ್ಟವನ್ನು ತಲುಪಿದೆ. ಈಗಾಗಲೇ ಎನ್‌ಡಿಎ ಮೈತ್ರಿಕೂಟವನ್ನು (NDA alliance) ಸೇರಿರುವ ಜೆಡಿಎಸ್‌ಗೆ ಈಗ ಸೀಟು ಹಂಚಿಕೆ ಸವಾಲು ಎದುರಾಗಿದೆ. ಆದರೆ, 25+3 ಫಾರ್ಮುಲವಾ? ಇಲ್ಲವೇ 24+4 ಫಾರ್ಮುಲಾವೇ? ಎಂಬುದೇ ಈಗ ಕುತೂಹಲವನ್ನು ಹುಟ್ಟುಹಾಕಿದೆ. ಈ ಬಗ್ಗೆ ಇಂದು (ಗುರುವಾರ) ಸಂಜೆಯೊಳಗೆ ದೆಹಲಿಯಲ್ಲಿ ಅಂತಿಮ ಆಗಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ (BJP national president JP Nadda) ಹಾಗೂ ಗೃಹ ಸಚಿವ ಅಮಿತ್‌ ಶಾ ಜತೆ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಸಭೆ ನಡೆಸಲಿದ್ದು, ಸೀಟು ಹಂಚಿಕೆ ಬಹುತೇಕ ಫೈನಲ್‌ ಆಗಲಿದೆ.

ಈ ಸಂಬಂಧ ಈಗಾಗಲೇ ರಾಜ್ಯ ಬಿಜೆಪಿ ನಾಯಕರ ಅಭಿಪ್ರಾಯವನ್ನು ಬಿಜೆಪಿ ವರಿಷ್ಠರು ಪಡೆದುಕೊಂಡಿದ್ದಾರೆ. ಇಂದು ಇಲ್ಲವೇ ನಾಳೆ ಎಚ್‌‌.ಡಿ. ಕುಮಾರಸ್ವಾಮಿ ಜತೆ ಫೈನಲ್‌ ಮಾತುಕತೆ ನಡೆಯಲಿದೆ. ಮೂರು ಸೀಟ್‌ ಅನ್ನು ಬಿಟ್ಟುಕೊಡುವ ಬಗ್ಗೆ ಬಿಜೆಪಿ ವರಿಷ್ಠರು ಒಲವು ತೋರಿದ್ದಾರೆ. ಆದರೆ, ಇನ್ನೊಂದು ಸ್ಥಾನವನ್ನು ಹೆಚ್ಚು ಕೊಟ್ಟರೆ ಅದು ಬೋನಸ್‌ ಎಂದು ರಾಜ್ಯ ಬಿಜೆಪಿ ಹೇಳುತ್ತಿದೆ.

ಬಿಟ್ಟು ಕೊಡುವ 4 ಕ್ಷೇತ್ರ ಯಾವುವು?

ಮಂಡ್ಯ, ಹಾಸನ, ತುಮಕೂರು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟು ಕೊಡುವ ಸಾಧ್ಯತೆ ಇದೆ. ಈ ಮೂಲಕ ನಮಗೆ ಗೆಲುವು ಮುಖ್ಯ ಎಂಬ ಸಂದೇಶವನ್ನು ಬಿಜೆಪಿ ವರಿಷ್ಠರು ರವಾನೆ ಮಾಡಲಿದ್ದಾರೆ. ಆದರೆ, 25+3 ಫಾರ್ಮುಲಾಗೆ ಬೆಸ್ಟ್‌ ಎಂದು ರಾಜ್ಯ ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಹೀಗಾಗಿ ಕೊನೆಯ ಕ್ಷಣದಲ್ಲಿ ಆಗುವ ಬದಲಾವಣೆ ಮೇಲೆ ಬಿಟ್ಟುಕೊಡುವುದು ಮೂರು ಸ್ಥಾನವೋ ಇಲ್ಲವೇ ನಾಲ್ಕು ಸ್ಥಾನವೋ ಎಂಬುದು ತಿಳಿಯಲಿದೆ.

ಸೆಪ್ಟೆಂಬರ್‌ ತಿಂಗಳಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್‌ ಶಾ ಅವರ ಜತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಮಾತುಕತೆ ನಡೆಸಿದ್ದರು. ಗ್ಯಾರಂಟಿ ಮೂಲಕ ಓಡುತ್ತಿರುವ ಕಾಂಗ್ರೆಸ್‌‌ ಅನ್ನು ಲೋಕಸಭಾ ಚುನಾವಣೆಯಲ್ಲಿ ಕಟ್ಟಿ ಹಾಕಲು ಎಚ್‌ಡಿಕೆ ಮೈತ್ರಿಗೆ ಒಪ್ಪಿಕೊಂಡಿದ್ದರು. ಈಗ ಈ ನಾಯಕರ ಜತೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಹಿತ ಸೇರಿಕೊಳ್ಳಲಿದ್ದು, ಸೀಟು ಹಂಚಿಕೆ ಸಭೆಯಲ್ಲಿ ವರಿಷ್ಠರು ತಮ್ಮ ತೀರ್ಮಾನವನ್ನು ಪ್ರಕಟಿಸಲಿದ್ದಾರೆ.

5 ಕ್ಷೇತ್ರ ಬಿಟ್ಟುಕೊಡಲು ಜೆಡಿಎಸ್‌ ಮನವಿ

ಈ ನಡುವೆ 5 ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಜೆಡಿಎಸ್‌ ನಾಯಕರು ಮನವಿ ಮಾಡಿದ್ದಾರೆ. ಜೆಡಿಎಸ್‌ ಸಂಘಟನೆ ಚುರುಕು ಇರುವ ಕಡೆ ಸೀಟ್‌ ಕೊಡವಂತೆ ಒತ್ತಾಯ ಮಾಡಿದ್ದಾರೆ. ಮಂಡ್ಯ, ಹಾಸನ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಗಿಂತಲೂ ಜೆಡಿಎಸ್‌ ಸಂಘಟನೆಯಲ್ಲಿ ಚುರುಕಾಗಿದೆ. ಹೀಗಾಗಿ ಈ ಆರೂ ಕ್ಷೇತ್ರಗಳನ್ನು ನಮಗೆ ಕೊಡಿ, ಉಳಿಕೆ 22 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಹಾಕಿ ಎಂಬ ವಾದವನ್ನು ಮುಂದಿಟ್ಟಿದ್ದಾರೆ.

ವರಿಷ್ಠರಿಗೆ ಮಾಜಿ ಸಿಎಂ ಬಿಎಸ್‌ವೈ ಕೊಟ್ಟ ಸಲಹೆಯೇನು?

ಎಚ್.ಡಿ. ಕುಮಾರಸ್ವಾಮಿ ಜತೆ ಮಾತುಕತೆ ಬಳಿಕ ಬಿ.ಎಸ್.‌ ಯಡಿಯೂರಪ್ಪ ಅವರನ್ನು ಕರೆಸಿಕೊಂಡಿದ್ದ ವರಿಷ್ಠರು, ಜೆಡಿಎಸ್‌ಗೆ ಸೀಟ್‌ ಬಿಟ್ಟುಕೊಡುವ ಬಗ್ಗೆ ಮಾಹಿತಿಯನ್ನು ಪಡೆದಿದ್ದರು. ಅವರು ಯಾವ ಕ್ಷೇತ್ರದಲ್ಲಿ ಗೆಲ್ಲಬಹುದು ಎಂದು ಮಾಹಿತಿ ಪಡೆದಿದ್ದರು. ಅದಕ್ಕೆ ಬಿಎಸ್‌ವೈ, ಮಂಡ್ಯ, ಹಾಸನ, ಬೆಂಗಳೂರು ಗ್ರಾಮಾಂತರವನ್ನು ಕೊಡಿ ಎಂದು ಹೇಳಿ ಬಂದಿದ್ದರು ಎನ್ನಲಾಗಿದೆ. ಅಂತಿಮವಾಗಿ ಎಷ್ಟು ಸ್ಥಾನ ಸಿಗಲಿದೆ ಎಂಬುದು ಇಂದು (ಗುರುವಾರ) ಸಂಜೆ ಇಲ್ಲವೇ ನಾಳೆ (ಗುರುವಾರ) ಬೆಳಗ್ಗೆ ನಿರ್ಣಯವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: BJP JDS Alliance: ಮೈತ್ರಿ ಸೀಟು ಹಂಚಿಕೆ; ದೇವೇಗೌಡರಿಗೆ ಮೋದಿ ಹೇಳಿದ್ದೇನು?

ಬೆಳಗಾವಿ ಅಧಿವೇಶನದಲ್ಲಿ ಸಹ ಈ ಬಾರಿ ಮೈತ್ರಿ ಪಾಲಿಟಿಕ್ಸ್‌‌ ವರ್ಕೌಟ್‌ ಆಗಿದೆ. ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್‌ ಜಂಟಿಯಾಗಿ ಹೋರಾಟ ಮಾಡಿತ್ತು. ಪ್ರತಿಪಕ್ಷ ನಾಯಕ ಆರ್‌‌. ಅಶೋಕ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಎಚ್‌.ಡಿ.ಕ. ಕುಮಾರಸ್ವಾಮಿ ಸಾಥ್‌ ಕೊಟ್ಟಿದ್ದರು. ಬರ ಮತ್ತು ಉತ್ತರ ಕರ್ನಾಟಕ ಅಭಿವೃದ್ಧಿ ತಾರತಮ್ಯ ವಿಚಾರದಲ್ಲಿಯೂ ಎಚ್‌ಡಿಕೆ ಜತೆಯಾಗಿದ್ದರು. ಇನ್ನು ಮುಂದೆ ಲೋಕಸಭೆ ಚುನಾವಣೆಯಲ್ಲಿ ಜಂಟಿ ಪ್ರವಾಸವನ್ನು ಹಮ್ಮಿಕೊಳ್ಳಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ದಕ್ಷಿಣ ಒಳನಾಡಲ್ಲಿ ಮಳೆ ಸೈಲೆಂಟ್‌; ಕರಾವಳಿ, ಉತ್ತರ ಒಳನಾಡಿನಲ್ಲಿ ಸಿಕ್ಕಾಪಟ್ಟೆ ವೈಲೆಂಟ್

Karnataka Weather Forecast : ದಕ್ಷಿಣ ಒಳನಾಡಿನ ಕೆಲವಡೆ ಮಳೆಯು ಹಿಂದೆ ಸರಿದಿದ್ದು, ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ವೈಲೆಂಟ್‌ ಆಗಿರಲಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಕೆಲವಡೆ ಗುಡುಗು ಸಹಿತ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಹಗುರವಾದ ಮಳೆಯಾಗುವ (Rain News) ಸಾಧ್ಯತೆ ಇದ್ದು, ವಿವಿಧೆಡೆ ಗುಡುಗು ಸಹಿತ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಕೋಲಾರ, ರಾಮನಗರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿಗೆ ಯಾವುದೇ ಮಳೆ ಮುನ್ಸೂಚನೆ ಇಲ್ಲ ಬದಲಿಗೆ ಒಣ ಹವೆ ಇರುವ ಸಾಧ್ಯತೆ ಇದೆ.

ಈ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Egg Benefits: ನೀವು ಮೊಟ್ಟೆ ಪ್ರಿಯರೆ? ಹಾಗಾದರೆ ಎಷ್ಟು ಮೊಟ್ಟೆ ತಿನ್ನಬಹುದು ಎಂಬುದೂ ಅರಿವಿರಲಿ!

ದಕ್ಷಿಣ ಭಾರತದ ಈ 6 ಸ್ಥಳಗಳಲ್ಲಿ ಮಳೆಗಾಲದಲ್ಲಿ ಚಾರಣ ಮಾಡಲೇಬೇಕು!

ಚಾರಣ ಪ್ರಿಯರಿಗೆ ಮಳೆಗಾಲ ಹತ್ತಿರ ಬರುತ್ತಿದ್ದಂತೆ ಸುಗ್ಗಿ. ಒಂದೆರಡು ಮಳೆ ಬರುತ್ತಿದ್ದಂತೆ ಚಿಗುರುವ ಬೆಟ್ಟಗಳು ಹಸಿರಾಗಿ ನಳನಳಿಸಲು ಆರಂಭಿಸುತ್ತವೆ. ಹಸಿರ ಸ್ವರ್ಗದಲ್ಲಿ ನಡೆಯುತ್ತಾ ನೆಲಕ್ಕೆ ಮುತ್ತಿಕ್ಕುವ ಮಂಜಿನ ಹನಿಗಳು, ಮೋಡಗಳ ಜೊತೆ ಹೆಜ್ಜೆ ಹಾಕುತ್ತಾ ಸಾಗುವುದು ಪ್ರಕೃತಿ ಪ್ರಿಯರಿಗೆ ದೈವಿಕ ಅನುಭೂತಿ ನೀಡುವ ಕ್ಷಣಗಳಲ್ಲಿ ಒಂದು. ಅದಕ್ಕಾಗಿಯೇ, ಮಳೆಗಾಲ ಹತ್ತಿರ ಬರುತ್ತಿದ್ದಂತೆ ಈ ಚಾರಣಿಗರೆಲ್ಲ ತಮ್ಮ ಅನುಕೂಲಕ್ಕೆ ತಕ್ಕಂತೆ ಯೋಜನೆ ರೂಪಿಸಿಕೊಂಡು ಒಂದಲ್ಲ ಒಂದು ಚಾರಣಕ್ಕೆ ತಯಾರಾಗುತ್ತಾರೆ. ಹಿಮಾಲಯದ ಚಾರಣ ಕನಸಾದರೂ, ಹತ್ತಿರದಲ್ಲೇ ಸಿಗುವ ಕಡಿಮೆ ಅವಧಿಯಲ್ಲಿ ಮಾಡಿ ಬರಬಹುದಾದ ಚಾರಣಗಳು ಇಂತಹ ಸಂದರ್ಭ ನೆಮ್ಮದಿಯ ಅನುಭವ ನೀಡುತ್ತವೆ. ಬನ್ನಿ, ದಕ್ಷಿಣ ಭಾರತದಲ್ಲಿ ಮಳೆಗಾಲ ಸಮೀಪಿಸುತ್ತಿದ್ದಂತೆ ಮಾಡಬಹುದಾದ ಚಾರಣಗಳು (South Indian monsoon destinations) ಇಲ್ಲಿವೆ.

Meesapulimala trek, Kerala

ಮೀಸಪುಲಿಮಲ ಚಾರಣ, ಕೇರಳ

ಕೇರಳದ ಇಡುಕ್ಕಿ ಜಿಲ್ಲೆಯಲ್ಲಿರುವ ಈ ಚಾರಣ ಅತ್ಯಂತ ಸುಂದರ ಚಾರಣಗಳಲ್ಲಿ ಒಂದು. ದಕ್ಷಿಣ ಭಾರತದಲ್ಲಿ ರೋಡೋಡೆಂಡ್ರಾನ್‌ ಅರಳಿರುವುದನ್ನು ನೋಡಬೇಕಾದರೆ ಈ ಚಾರಣ ಮಾಡಬೇಕು. ಅಣ್ಣಾಮಲೈ ಹಾಗೂ ಪಳನಿ ಪರ್ವತ ಪ್ರದೇಶಗಳ ನಡುವೆ ಇರುವ ಈ ಪ್ರದೇಶದಲ್ಲಿ ಮೋಡಗಳನ್ನು ನೀವು ಮುಟ್ಟಬಹುದು. ಅತ್ಯಂತ ಚಂದದ ಹುಲ್ಲುಗಾವಲ ಮಧ್ಯದಲ್ಲಿ ಮಾಡುವ ಈ ಚಾರಣ ಸುಮಾರು ೧೮ ಕಿಮೀಗಳ ಅತ್ಯಂತ ಸುಮಧುರ ಅನುಭವ ನೀಡಬಹುದಾದದ್ದೇ ಆಗಿದೆ.

kudremukh

ಕುದುರೆಮುಖ ಚಾರಣ

ಕುದುರೇಮುಖ ಬೆಟ್ಟಗಳ ಚಾರಣಕ್ಕೆ ಇಂಥದ್ದೇ ಎಂಬ ಸಮಯ ಇಲ್ಲದಿದ್ದರೂ ಮಳೆಗಾಲ ಅತ್ಯಂತ ಸೂಕ್ತ. ಮಳೆಗಾಲದಲ್ಲಿ ಈ ಬೆಟ್ಟದ ಸಾಲುಗಳು ಈಗಷ್ಟೇ ಮಿಂದೆದ್ದು ಹಸಿರು ಸೀರೆಯುಟ್ಟ ನವತರುಣಿಯಂತೆ ಶೋಭಿಸುತ್ತದೆ. ಸುಮಾರು ೨೦ ಕಿಮೀ ಅಂತರದ ಈ ಚಾರಣ ಶೋಲಾ ಕಾಡುಗಳ ಮದ್ಯದಿಂದ ಹಾದುಹೋಗಬೇಕಾಗುತ್ತದೆ. ಮಂಜು ಕವಿದ, ಮೋಡಗಳು ದಿನವಿಡೀ ಬೆಟ್ಟ ಚುಂಬಿಸುವ ಈ ಚಾರಣದ ಹಾದಿಯೇ ಒಂದು ಸುಮಧುರ ಅನುಭೂತಿ. ಚಾಋಣ ಪ್ರಿಯರಾರೂ ಈ ಚಾರಣವನ್ನು ಮಿಸ್‌ ಮಾಡಲು ಬಯಸುವುದಿಲ್ಲ.

Nagalapuram trek, Andhra Pradesh

ನಾಗಲಾಪುರಂ ಚಾರಣ, ಆಂಧ್ರಪ್ರದೇಶ

ಚಿತ್ತೂರು ಜಿಲ್ಲೆಯಲ್ಲಿರುವ ನಾಗಲಾಪುರಂ ಅತ್ಯಂತ ಸುಂದರ ತಾಣ. ಈ ಜಾಗ ಜಲಪಾತಗಳದದ್ದೇ ಕಾರುಬಾರು. ಚಾರಣದುದ್ದಕ್ಕೂ ಸಿಗುವ ಬಗೆಬಗೆಯ ಜಲಪಾತಗಳು ಚಾರಣಿಗರ ಮನೋಲ್ಲಾಸ ಹೆಚ್ಚಿಸುತ್ತದೆ. ದಣಿವು ಆರಿಸುತ್ತದೆ. 12 ಕಿಮೀ ದೂರದ ಈ ಚಾರಣ ಮಳೆಗಾಲದಲ್ಲಷ್ಟೇ ಅತ್ಯಂತ ಸೊಗಸಾದ ಅನುಭವ ನೀಡುತ್ತದೆ.

Kodachadri trek

ಕೊಡಚಾದ್ರಿ ಚಾರಣ

ಚಾರಣದ ಹುಚ್ಚು ಹತ್ತಿಸಿಕೊಂಡ ಮಂದಿ ಆರಂಭದ ದಿನಗಳಲ್ಲಿ ಮಾಡಬಹುದಾದ, ಮತ್ತಷ್ಟು ಚಾರಣದ ಹುಚ್ಚನ್ನು ಹತ್ತಿಸಿಕೊಳ್ಳಬಹುದಾದ ಎಲ್ಲ ಲಕ್ಷಣಗಳ್ನೂ ಹೊಂದಿದ ತಾಣ. ಮಳೆಗಾಲದಲ್ಲಿ ಈ ಜಾಗದ ಸೌಂದರ್ಯ ಸವಿಯಲು ಎರಡು ಕಣ್ಣು ಸಾಲದು. ಕೊಲ್ಲೂರಿನ ಮೂಕಾಂಬಿಕಾ ಸನ್ನಿಧಿಯಿಂದ ಮಾಡಬಹುದಾದ ಈ ಚಾರಣ ಮೂಕಾಂಬಿಕಾ ರಕ್ಷಿತಾರಣ್ಯದ ಒಳಗೆಯೇ ಇದೆ. ಆದಿ ಶಂಕರರು ಧ್ಯಾನ ಮಾಡಿದ ಸ್ಥಳದವರೆಗೆ ಚಾರಣ ಮಾಡಿ ಧ್ಯಾನವನ್ನೂ ಮಾಡಿ, ಮೋಡಗಳನ್ನು ಬೊಗಸೆ ತುಂಬಾ ಹಿಡಿದು ಮರಳಬಹುದು.

Chembara Peak Trek, Wayanad

ಚೆಂಬಾರ ಪೀಕ್‌ ಚಾರಣ, ವಯನಾಡು

ವಯನಾಡಿನ ಚೆಂಬಾರ ಪೀಕ್‌ ಚಾರಣ ಕೂಡಾ ಮಳೆಗಾಲದ ಅದ್ಭುತಗಳಲ್ಲಿ ಒಂದು. ದಟ್ಟಾರಣ್ಯದ ಮಧ್ಯದಲ್ಲಿರುವ ಈ ಚಾರಣಕ್ಕೆ ಅರಣ್ಯಾಧಿಕಾರಿಗಳ ಅನುಮತಿ ಬೇಕು. ಸರಳವಾದ, ಆದರೆ ಮನಮೋಹಕ ದೃಶ್ಯಗಳನ್ನು ಅನುಭವಗಳನ್ನು ಕಣ್ತುಂಬಿಕೊಳ್ಳಬಹುದಾದ ನಾಲ್ಕೈದು ಗಂಟೆಗಳಲ್ಲಿ ಮುಗಿಸಬಹುದಾದ ಚಾರಣವಿದು. ಆರಂಭಿಕ ಚಾರಣಿಗರಿಗೆ ಬೆಸ್ಟ್‌.

Ombattu gudda trek

ಒಂಭತ್ತು ಗುಡ್ಡ ಚಾರಣ

ಏಳೆಂಟು ಗಂಟೆಗಳ ಈ ಚಾರಣ ಸ್ವಲ್ಪ ಸವಾಲೇ ಆದರೂ, ಅತ್ಯಂತ ಸುಂದರ ಚಾರಣಗಳಲ್ಲಿ ಒಂದು. ಹಾಸನ ಹಾಗೂ ಚಿಕ್ಕಮಗಳೂರಿನ ಸರಹದ್ದಿನಲ್ಲಿ ಬರುವ ಈ ಸ್ಥಳದಲ್ಲಿ ಬಗೆಬಗೆಯ ಸಸ್ಯವೈವಿಧ್ಯವನ್ನೂ ಕಣ್ತುಂಬಿಕೊಳ್ಳಬಹುದು. ರೋಮಾಂಚಕ ಹಾಗೂ ನಿಗೂಢವಾದ ಅನುಭವಗಳನ್ನು ನೀಡಬಲ್ಲ ಈ ಚಾರಣದಲ್ಲಿ ಈ ಅನುಭವಗಳನ್ನು ಪಡೆಯಲು ಮಳೆಗಾಲದಲ್ಲೇ ಚಾರಣ ಮಾಡಬೇಕು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Pralhad Joshi: ನೇಹಾ, ಅಂಜಲಿ ಹತ್ಯೆ ಪ್ರಕರಣದಲ್ಲಿ ಕೈಗೊಳ್ಳದ ಕ್ರಮ ಚನ್ನಗಿರಿ ಪ್ರಕರಣದಲ್ಲಿ ಏಕೆ ಎಂದ ಪ್ರಲ್ಹಾದ್‌ ಜೋಶಿ

Pralhad Joshi: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ, ಅಂಜಲಿ ಕೊಲೆ ಪ್ರಕರಣದಲ್ಲಿ ಕೈಗೊಳ್ಳದ ತ್ವರಿತ ಕ್ರಮವನ್ನು ಸಿಎಂ ಸಿದ್ದರಾಮಯ್ಯ ಚನ್ನಗಿರಿ ಪ್ರಕರಣದಲ್ಲಿ ಏಕೆ? ಕೈಗೊಂಡರು ಎಂದು ಪ್ರಶ್ನಿಸಿದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದಾರೆ. ಇದರಿಂದ ಅರಾಜಕತೆ ನಿರ್ಮಾಣವಾಗುತ್ತಿದೆ ಎಚ್ಚರವಿರಲಿ ಎಂದು ಅವರು ತಿಳಿಸಿದ್ದಾರೆ.

VISTARANEWS.COM


on

Union Minister Pralhad Joshi latest statement about channagiri case
Koo

ಹುಬ್ಬಳ್ಳಿ: ಚನ್ನಗಿರಿ ಪ್ರಕರಣದಲ್ಲಿ ಡಿವೈಎಸ್ಪಿ, ಸಿಪಿಐ ಅಮಾನತ್ತು ಮಾಡಿ ಪೊಲೀಸರ ನೈತಿಕ ಬಲ ಕುಗ್ಗಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಕಿಡಿ ಕಾರಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಈ ಧೋರಣೆ ನೋಡಿದರೆ ಪೊಲೀಸರು ಠಾಣೆ ಬಿಟ್ಟು ಓಡಿ ಹೋಗಬೇಕು ಎಂಬಂತಿದೆ ಎಂದು ಖಂಡಿಸಿದರು.

ಇದನ್ನೂ ಓದಿ: Pralhad Joshi: ಸಿಎಂ ಪತ್ರ ಬರೆದು ರಾಜಕಾರಣ ಮಾಡಿದರೆ ಪ್ರಜ್ವಲ್ ಪಾಸ್‌ಪೋರ್ಟ್ ರದ್ದಾಗಲ್ಲ: ಪ್ರಲ್ಹಾದ್‌ ಜೋಶಿ

ಮುಸ್ಲಿಂರಷ್ಟೇ ಅಲ್ಲ, ಯಾರೇ ಆದರೂ ಸರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿ, ವಾಹನ ಜಖಂಗೊಳಿಸಿ ಗಲಭೆ ಎಬ್ಬಿಸುವುದು ಖಂಡನೀಯ. ಆದರೆ, ಈ ಪ್ರಕರಣದಲ್ಲಿ ಸಿಎಂ ಪೊಲೀಸರ ಮೇಲೆ ಕ್ರಮ ಕೈಗೊಂಡಿದ್ದಾರೆ ಎಂದು ಜೋಶಿ ಆಕ್ಷೇಪಿಸಿದರು.

ಅಪರಾಧ ಹಿನ್ನೆಲೆಯಲ್ಲಿ ಪೊಲೀಸರು ವ್ಯಕ್ತಿಯನ್ನು ಕರೆತಂದು ವಿಚಾರಣೆ ನಡೆಸಿದ್ದಾರೆ. ಆ ವೇಳೆ ಆತನಿಗೆ ಆರೋಗ್ಯ ಸಮಸ್ಯೆಯಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಸಿಎಂ ಆದೇಶದಂತೆ ಡಿವೈಎಸ್‌ಪಿ ಮತ್ತು ಸಿಪಿಐ ಅಮಾನತ್ತು ಪಡಿಸುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: Selco India: ಬೆಂಗಳೂರಿನಲ್ಲಿ ಮೇ 27ರಂದು ಅಂತಾರಾಷ್ಟ್ರೀಯ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ

ನೇಹಾ, ಅಂಜಲಿ ಹತ್ಯೆ ಪ್ರಕರಣದಲ್ಲಿ ಇಲ್ಲದ ತ್ವರಿತ ಕ್ರಮ ಚನ್ನಗಿರಿಯಲ್ಲೇಕೆ?

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ, ಅಂಜಲಿ ಕೊಲೆ ಪ್ರಕರಣದಲ್ಲಿ ಕೈಗೊಳ್ಳದ ತ್ವರಿತ ಕ್ರಮವನ್ನು ಸಿಎಂ ಸಿದ್ದರಾಮಯ್ಯ ಚನ್ನಗಿರಿ ಪ್ರಕರಣದಲ್ಲಿ ಏಕೆ? ಕೈಗೊಂಡರು ಎಂದು ಪ್ರಶ್ನಿಸಿದ ಸಚಿವರು, ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದಾರೆ. ಇದರಿಂದ ಅರಾಜಕತೆ ನಿರ್ಮಾಣವಾಗುತ್ತಿದೆ ಎಚ್ಚರವಿರಲಿ ಎಂದು ಜೋಶಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

Continue Reading

ಉತ್ತರ ಕನ್ನಡ

Uttara Kannada News: ಭಾರತದ ಭವಿಷ್ಯ ಸಣ್ಣ ಸಣ್ಣ ಊರುಗಳಲ್ಲಿದೆ: ಹರಿಪ್ರಕಾಶ್‌ ಕೋಣೆಮನೆ

Uttara Kannada News: ಯಲ್ಲಾಪುರ ಪಟ್ಟಣದ ಗಾಂಧಿ ಕುಟೀರದಲ್ಲಿ ರಂಗಸಹ್ಯಾದ್ರಿ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಶನಿವಾರ ಸಂಜೆ ಜರುಗಿತು.

VISTARANEWS.COM


on

childrens summer camp closing ceremony at yallapur
Koo

ಯಲ್ಲಾಪುರ: ಭಾರತದ ಭವಿಷ್ಯ ಸಣ್ಣ ಸಣ್ಣ ಊರುಗಳಲ್ಲಿದೆ. ಪಟ್ಟಣದ ಸವಲತ್ತುಗಳನ್ನು ನಾವು ಇಲ್ಲಿನ ಮಕ್ಕಳಿಗೆ ನೀಡಿದಾಗ ಮಾತ್ರ ಉತ್ತಮ ಭವಿಷ್ಯ ನಿರ್ಮಿಸಲು ಸಾಧ್ಯ ಎಂದು ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ್‌ ಕೋಣೆಮನೆ (Uttara Kannada News) ಅಭಿಪ್ರಾಯಪಟ್ಟರು.

ಪಟ್ಟಣದ ಗಾಂಧಿ ಕುಟೀರದಲ್ಲಿ ಶನಿವಾರ ಸಂಜೆ ರಂಗಸಹ್ಯಾದ್ರಿ ಬಳಗದ ವತಿಯಿಂದ ಹಮ್ಮಿಕೊಂಡ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಸಕ್ತಿ, ಸಮರ್ಪಣೆ ಹಾಗೂ ಬದ್ಧತೆ ಇಲ್ಲವೆಂದರೆ 17 ವರ್ಷಗಳಿಂದ ಸತತವಾಗಿ ಬೇಸಿಗೆ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿಕೊಂಡು ಬರಲು ಸಾಧ್ಯವಾಗುತ್ತಿರಲಿಲ್ಲ. ಶಿಬಿರವನ್ನು ನಡೆಸುವುದು ಸವಾಲಿನ ಕೆಲಸ. ಮಕ್ಕಳು ಜೀವನದಲ್ಲಿ ಯಾವ ಉದ್ಯೋಗವನ್ನು ಆರಿಸುತ್ತಾರೆ ಎಂಬುದು ಮುಖ್ಯವಲ್ಲ. ಬದಲಾಗಿ ಕುಟುಂಬದ ಸಂಸ್ಕೃತಿ-ಸಂಸ್ಕಾರವನ್ನು ಉಳಿಸುವ, ಮನೆತನದ ಹಾಗೂ ಊರಿನ ಹೆಸರನ್ನು ಉಳಿಸುವ ಉತ್ತಮ ಪ್ರಜೆಯಾಗಬೇಕು. ಅಂತಹ ಅಭಿವ್ಯಕ್ತಿ ಕಲೆಗಳನ್ನು ಬೆಳೆಸುವ ಚಟುವಟಿಕೆಗಳು ನಮ್ಮ ವ್ಯಕ್ತಿತ್ವವನ್ನು ಅರಳಿಸುತ್ತವೆ. ಆ ಕೆಲಸವನ್ನು ಇಂತಹ ಶಿಬಿರಗಳು ಮಾಡುತ್ತಿವೆ ಎಂದರು.

ಇದನ್ನೂ ಓದಿ: Selco India: ಬೆಂಗಳೂರಿನಲ್ಲಿ ಮೇ 27ರಂದು ಅಂತಾರಾಷ್ಟ್ರೀಯ ಸೂರ್ಯಮಿತ್ರ ವಾರ್ಷಿಕ ಪ್ರಶಸ್ತಿ ಪ್ರದಾನ

ಮಕ್ಕಳಿಗೆ ತಿಳಿವಳಿಕೆ ಬರುವ ಮುನ್ನ ಕೇಳಿದ್ದನ್ನೆಲ್ಲ ಕೊಡಿಸುವ ಮೊದಲು ಹಲವು ಬಾರಿ ಪಾಲಕರು ಯೋಚಿಸಬೇಕು. ಮೊಬೈಲ್ ಬಳಕೆಯಿಂದ ಮನುಷ್ಯ ದೈಹಿಕವಾಗಿ ಹಾಗೂ ಮಾನಸಿಕವಾಗಿ ಅಬಲನಾಗುತ್ತಾನೆ. ತಂತ್ರಜ್ಞಾನ ನಮ್ಮೆಲ್ಲ ಪ್ರತಿಭೆಗಳನ್ನು ಹೊಸಕಿ ಹಾಕುತ್ತಿದೆ. ಭಾರತದ ಭವಿಷ್ಯ ಇಂತಹ ಸಣ್ಣ ಸಣ್ಣ ಊರುಗಳಲ್ಲಿವೆ. ಪಟ್ಟಣದ ಸವಲತ್ತುಗಳನ್ನು ನಾವು ಇಲ್ಲಿನ ಮಕ್ಕಳಿಗೆ ನೀಡಿದಾಗ ಉತ್ತಮ ಭವಿಷ್ಯವನ್ನು ನಿರ್ಮಿಸಲು ಸಾಧ್ಯ. ಯಾವುದೇ ಕೆಲಸ ಮಾಡಲು ಧೈರ್ಯ ಹೊಂದಿದವರು ಜೀವನದಲ್ಲಿ ಬೆಳೆಯುತ್ತಾರೆ. ಜೀವನ ಕೌಶಲ್ಯಗಳನ್ನು ಮಕ್ಕಳಿಗೆ ಕಲಿಸುವ ಅವಶ್ಯಕತೆ ಇದೆ ಎಂದು ಪ್ರತಿಪಾದಿಸಿದರು.

ಈ ಸಂದರ್ಭದಲಿ ಪತ್ರಕರ್ತರಾದ ಟಿ. ಶಂಕರ್ ಭಟ್, ನಾಗರಾಜ ಮದ್ಗುಣಿ, ಪ್ರಮುಖರಾದ ವೆಂಕಟ್ರಮಣ ಭಟ್ ಸಹಸ್ರಳ್ಳಿ ಉಪಸ್ಥಿತರಿದ್ದರು. ರಂಗ ಸಹ್ಯಾದ್ರಿಯ ಅಧ್ಯಕ್ಷ ಡಿ.ಎನ್. ಗಾಂವ್ಕರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಬ್ರಾಯ ಭಟ್ ಆನೆಜಡ್ಡಿ ಕಾರ್ಯಕ್ರಮ ನಿರ್ವಹಿಸಿದರು. ಸುಮಂಗಲಾ ಜೋಶಿ ವಂದಿಸಿದರು.

ಇದನ್ನೂ ಓದಿ: Uttara Kannada News: ಕಾರವಾರ ನಗರಸಭೆ ತೆರಿಗೆ ಸಂಗ್ರಹಕ್ಕೆ ವೇಗ: ಡಿಸಿ

ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಶಿಬಿರಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ನಂತರ ಮಕ್ಕಳಿಂದ ವಿವಿಧ ರೀತಿಯ ಮನರಂಜನಾ ಕಾರ್ಯಕ್ರಮಗಳು ಜರುಗಿದವು.

Continue Reading

ಕರ್ನಾಟಕ

Siddaramaiah: ನೀವು 2 ಸಾವಿರ ಕೊಟ್ಟಿದ್ದಕ್ಕೆ ದೇವರ ದರ್ಶನ; ಧರ್ಮಸ್ಥಳದಲ್ಲಿ ಸಿದ್ದರಾಮಯ್ಯಗೆ ಸ್ತ್ರೀಯರ ಮೆಚ್ಚುಗೆ

Siddaramaiah: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಆಗಮನ ಹಿನ್ನೆಲೆಯಲ್ಲಿ ದೇವಸ್ಥಾನ ಪ್ರವೇಶಕ್ಕೆ ಭಕ್ತರಿಗೆ ಅರ್ಧ ಗಂಟೆಯಿಂದ ನಿರ್ಬಂಧವನ್ನು ವಿಧಿಸಲಾಗಿತ್ತು. ಮೊದಲೇ ಸಾಲುಗಟ್ಟಿ ನಿಂತಿದ್ದ ಭಕ್ತರಿಗೆ ಮತ್ತೆ ಕಾಯುವುದು ಶಿಕ್ಷೆಯಾಗಿ ಪರಿಣಮಿಸಿತು. ಸಿಎಂ, ಡಿಸಿಎಂ ಬರಲು ಸಾಕಷ್ಟು ಸಮಯ ಇದ್ದರೂ ಅವಧಿಗೆ ಮುನ್ನವೇ ಭಕ್ತರನ್ನು ತಡೆಯಲಾಗಿತ್ತು. ಕಾದು ಕಾದು ಸುಸ್ತಾಗಿದ್ದ ಭಕ್ತರ ಸಿಟ್ಟು ನೆತ್ತಿಗೇರಿತ್ತು. ರಾಜಕಾರಣಿಗಳ ಕಾರಣದಿಂದಾಗಿ ದೇವರ ದರ್ಶನಕ್ಕೂ ಇಷ್ಟು ಕಾಯಬೇಕಲ್ಲ ಎಂದು ಹಿಡಿಶಾಪ ಹಾಕಿದ್ದು ಕೂಡ ಕಂಡುಬಂತು.

VISTARANEWS.COM


on

Siddaramaiah
Koo

ಮಂಗಳೂರು: ಲೋಕಸಭೆ ಚುನಾವಣೆ ಪ್ರಚಾರದ ಭರಾಟೆ ಮುಗಿದು, ತುಸು ನಿರಾಳರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ (DK Shivakumar) ಅವರು ಶನಿವಾರ (ಮೇ 25) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ (Dharmasthala) ತೆರಳಿ, ದೇವರ ಆಶೀರ್ವಾದ ಪಡೆದರು. ಅಲ್ಲದೆ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನೂ ಭೇಟಿಯಾದರು. ಇದೇ ವೇಳೆ, ಗೃಹಲಕ್ಷ್ಮೀ ಯೋಜನೆ ಅಡಿಯಲ್ಲಿ ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ನೀಡುವ ತೀರ್ಮಾನದ ಕುರಿತು ಸಿದ್ದರಾಮಯ್ಯ ಅವರಿಗೆ ಹಲವು ಹೆಣ್ಣುಮಕ್ಕಳು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಕುರಿತು ಸಿದ್ದರಾಮಯ್ಯ ಅವರೇ ಪೋಸ್ಟ್‌ ಮಾಡಿದ್ದಾರೆ.

ಧರ್ಮಸ್ಥಳ ಭೇಟಿ, ಮಹಿಳೆಯರ ಮೆಚ್ಚುಗೆ ಕುರಿತು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ಅವರು ಫೋಟೊಗಳ ಸಮೇತ ಪೋಸ್ಟ್‌ ಮಾಡಿದ್ದಾರೆ. “ಇಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ತೆರಳುವ ಸಂದರ್ಭದಲ್ಲಿ ಕೆಲವು ಮಹಿಳೆಯರು ನಗುಮೊಗದಲ್ಲಿ ನನ್ನ ಬಳಿ ಬಂದು ಗೃಹಲಕ್ಷ್ಮೀ ಯೋಜನೆಯ 2,000 ರೂಪಾಯಿಯಿಂದ ನಾವು ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದೇವೆ, ನೀವು ಶಕ್ತಿ ಯೋಜನೆ ಜಾರಿ ಮಾಡಿದ್ದರಿಂದ ಇಂದು ನಾವು ದೂರದ ಊರಿನಿಂದ ದೇವರ ದರ್ಶನಕ್ಕೆ ಬರಲು ಅನುಕೂಲ ಆಗಿದೆ, ನಿಮಗೆ ಮಂಜುನಾಥ ಸ್ವಾಮಿ ದೀರ್ಘ ಆಯಸ್ಸು, ಆರೋಗ್ಯ ನೀಡಲಿ, ಬಡವರಿಗೆ ಇನ್ನಷ್ಟು ಅನುಕೂಲ ಆಗುವಂತಹ ಕಾರ್ಯಕ್ರಮಗಳು ನಿಮ್ಮಿಂದ ಜಾರಿಯಾಗಲಿ ಎಂದು ಆಶೀರ್ವದಿಸಿದರು. ಈ ದಿನ ದೇವರ ದರ್ಶನ ಭಾಗ್ಯದ ಜೊತೆಗೆ ಹತ್ತಾರು ತಾಯಂದಿರ ಆಶೀರ್ವಾದ ಪಡೆದ ಧನ್ಯತಾಭಾವ ನನ್ನದು” ಎಂಬುದಾಗಿ ಅವರು ಪೋಸ್ಟ್‌ ಮಾಡಿದ್ದಾರೆ.

ಸಿಎಂಗೆ ಪೂರ್ಣಕುಂಭ ಸ್ವಾಗತ

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುತ್ತಿದ್ದಂತೆ ಅವರಿಗೆ ಧರ್ಮಸ್ಥಳದ ಕ್ಷೇತ್ರದ ವತಿಯಿಂದ ಪೂರ್ಣಕುಂಭ ಸ್ವಾಗತವನ್ನು ಮಾಡಲಾಯಿತು. ಧರ್ಮಸ್ಥಳದ ಪ್ರವೇಶ ದ್ವಾರದಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಭವ್ಯ ಸ್ವಾಗತ ಸಿಕ್ಕಿತು. ವಾದ್ಯ ಘೋಷಗಳೊಂದಿಗೆ ಬರಮಾಡಿಕೊಳ್ಳಲಾಯಿತು. ಕ್ಷೇತ್ರದ ಪರವಾಗಿ ಧರ್ಮಸ್ಥಳ ಧರ್ಮದರ್ಶಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಹೆಗ್ಗಡೆ ಸ್ವಾಗತಿಸಿದರು.

ವಿಶೇಷ ಪೂಜೆ, ಡಾ. ವೀರೇಂದ್ರ ಹೆಗ್ಗಡೆ ಭೇಟಿ

ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶ್ರೀಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದುಕೊಂಡರು. ಬಳಿಕ ಕೆಲ ಹೊತ್ತು ಚರ್ಚೆ ನಡೆಸಿದರು.

ಧರ್ಮಸ್ಥಳ ಭೇಟಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, “ಸರ್ಕಾರದ ಶಕ್ತಿ ಯೋಜನೆಯಿಂದ ರಾಜ್ಯದ ಮೂಲೆ ಮೂಲೆಯಿಂದ ಹೆಚ್ಚಿನ ಭಕ್ತರು ಧರ್ಮಸ್ಥಳಕ್ಕೆ ಆಗಮಿಸಿ ಮಂಜುನಾಥನ ದರ್ಶನ ಪಡೆಯುತ್ತಿದ್ದಾರೆ ಎಂದು ಧರ್ಮದರ್ಶಿ ವೀರೇಂದ್ರ ಹೆಗ್ಗಡೆಯವರು ಸಂತೋಷ ಹಂಚಿಕೊಂಡರು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. “ನಾನು ಹಾಗೂ ಮುಖ್ಯಮಂತ್ರಿಗಳು ಮಂಜುನಾಥನ, ಅಣ್ಣಪ್ಪ ಸ್ವಾಮಿ ಹಾಗೂ ಅಮ್ಮನವರ ದರ್ಶನ ಮಾಡಿದ್ದೇವೆ. ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗಿದ್ದು, ಉತ್ತಮ ಮಳೆ, ಬೆಳೆಯಾಗಿ ರಾಜ್ಯದ ಜನರು ಶಾಂತಿ, ನೆಮ್ಮದಿಯಿಂದ ಇರಲಿ ಎಂದು ಪ್ರಾರ್ಥಿಸಿದ್ದೇವೆ” ಎಂದು ತಿಳಿಸಿದರು.

ಇದನ್ನೂ ಓದಿ: CM Siddaramaiah: ಸಿದ್ದು, ಡಿಕೆಶಿ ಧರ್ಮಸ್ಥಳ ದೇವಸ್ಥಾನಕ್ಕೆ ಎಂಟ್ರಿ ಕೊಡುತ್ತಿದ್ದಂತೆ ಜೈಶ್ರೀರಾಮ್‌, ಮೋದಿ ಕೀ ಜೈ ಘೋಷಣೆ!

Continue Reading
Advertisement
Karnataka weather Forecast
ಮಳೆ14 mins ago

Karnataka Weather : ದಕ್ಷಿಣ ಒಳನಾಡಲ್ಲಿ ಮಳೆ ಸೈಲೆಂಟ್‌; ಕರಾವಳಿ, ಉತ್ತರ ಒಳನಾಡಿನಲ್ಲಿ ಸಿಕ್ಕಾಪಟ್ಟೆ ವೈಲೆಂಟ್

Protein Powder
ಆರೋಗ್ಯ44 mins ago

Protein Powder: ಫಿಟ್‌ನೆಸ್‌ಗಾಗಿ ಪ್ರೊಟೀನ್‌ ಪುಡಿಗಳ ಸೇವನೆ ಮಾಡುತ್ತೀರಾ? ಹಾಗಿದ್ದರೆ ಎಚ್ಚರ!

Dina Bhavishya
ಭವಿಷ್ಯ2 hours ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು

Fire Accident
ಸಂಪಾದಕೀಯ7 hours ago

ವಿಸ್ತಾರ ಸಂಪಾದಕೀಯ: ಗುಜರಾತ್ ಬೆಂಕಿ ದುರಂತ ನಮಗೆ ಎಚ್ಚರಿಕೆಯ ಪಾಠವಾಗಲಿ

election commission
ಪ್ರಮುಖ ಸುದ್ದಿ7 hours ago

Election Commission : ಶೀಘ್ರದಲ್ಲೇ ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ; ಚುನಾವಣಾ ಆಯೋಗ

Fire Accident
ಪ್ರಮುಖ ಸುದ್ದಿ7 hours ago

Fire Accident: 9 ಮಕ್ಕಳು ಸೇರಿ 27 ಜನರ ಸಾವಿಗೆ ಕಾರಣವಾದ ಗೇಮಿಂಗ್‌ ಜೋನ್‌ಗೆ NOCಯೇ ಇರ್ಲಿಲ್ಲ!

Virat kohli
ಪ್ರಮುಖ ಸುದ್ದಿ7 hours ago

Virat kohli : ಕೊಹ್ಲಿ ಹೆಸರು ಕೂಗಿ ಪಾಕಿಸ್ತಾನ ಬೌಲರ್​​ನನ್ನು ಲೇವಡಿ ಮಾಡಿದ ಅಭಿಮಾನಿಗಳು; ಇಲ್ಲಿದೆ ವಿಡಿಯೊ

Union Minister Pralhad Joshi latest statement about channagiri case
ಕರ್ನಾಟಕ7 hours ago

Pralhad Joshi: ನೇಹಾ, ಅಂಜಲಿ ಹತ್ಯೆ ಪ್ರಕರಣದಲ್ಲಿ ಕೈಗೊಳ್ಳದ ಕ್ರಮ ಚನ್ನಗಿರಿ ಪ್ರಕರಣದಲ್ಲಿ ಏಕೆ ಎಂದ ಪ್ರಲ್ಹಾದ್‌ ಜೋಶಿ

childrens summer camp closing ceremony at yallapur
ಉತ್ತರ ಕನ್ನಡ8 hours ago

Uttara Kannada News: ಭಾರತದ ಭವಿಷ್ಯ ಸಣ್ಣ ಸಣ್ಣ ಊರುಗಳಲ್ಲಿದೆ: ಹರಿಪ್ರಕಾಶ್‌ ಕೋಣೆಮನೆ

Hardik Pandya
ಪ್ರಮುಖ ಸುದ್ದಿ8 hours ago

Hardik Pandya : ಮೊದಲ ಲವ್​ ಬ್ರೇಕ್​ಅಪ್​ ಮಾಡಿಕೊಂಡಿದ್ದ ಪಾಂಡ್ಯ; ಇಲ್ಲಿದೆ ಆರಂಭದ ಪ್ರೇಮ ಕಹಾನಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ14 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌