Karnataka Election: ರಾಮನಗರದಲ್ಲಿ ಜನಕ್ಕೆ ಹಂಚಲು ಇರಿಸಿದ್ದ 2,900 ಕುಕ್ಕರ್‌ ವಶಕ್ಕೆ, ಅವುಗಳ ಮೇಲಿನ ಫೋಟೊ ಯಾರದ್ದು? - Vistara News

ಕರ್ನಾಟಕ

Karnataka Election: ರಾಮನಗರದಲ್ಲಿ ಜನಕ್ಕೆ ಹಂಚಲು ಇರಿಸಿದ್ದ 2,900 ಕುಕ್ಕರ್‌ ವಶಕ್ಕೆ, ಅವುಗಳ ಮೇಲಿನ ಫೋಟೊ ಯಾರದ್ದು?

Karnataka Election: ರಾಮನಗರದ ಕರಿಕಲ್‌ ದೊಡ್ಡಿ ಗ್ರಾಮದ ಬಳಿ ಇರುವ ಕುಕ್ಕರ್‌ ಕಾರ್ಖಾನೆ ಮೇಲೆ ತಹಸೀಲ್ದಾರ್‌ ನೇತೃತ್ವದಲ್ಲಿ ದಾಳಿ ನಡೆಸಿ, ಸಾವಿರಾರು ಕುಕ್ಕರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

VISTARANEWS.COM


on

2900 cookers that were kept for distribution to voters were seized
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಮನಗರ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ (Karnataka Election) ದಿನಗಣನೆ ಆರಂಭವಾಗಿದ್ದು, ಈಗಾಗಲೇ ಟಿಕೆಟ್‌ ಆಕಾಂಕ್ಷಿಗಳು, ಶಾಸಕರು ಜನರಿಗೆ ಹತ್ತಾರು ಆಮಿಷ, ಭರವಸೆ, ಉಡುಗೊರೆಗಳನ್ನು ನೀಡುವ ಮೂಲಕ, ಜಾತ್ರೆ, ಪಂದ್ಯಾವಳಿಗಳಿಗಳನ್ನು ಆಯೋಜಿಸುವ ಮೂಲಕ ಮನವೊಲಿಸಲು ಯತ್ನಿಸುತ್ತಿದ್ದಾರೆ. ಅದರಲ್ಲೂ, ಹೆಣ್ಣುಮಕ್ಕಳಿಗೆ ಕುಕ್ಕರ್‌ಗಳನ್ನು ನೀಡಿ, ಅವರ ಮತ ಸೆಳೆಯುವ ತಂತ್ರಗಾರಿಕೆ ಜಾಸ್ತಿಯಾಗುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ ರಾಮನಗರದಲ್ಲಿ ಮತದಾರರಿಗೆ ವಿತರಿಸಲು ಇರಿಸಿದ್ದ 2,900 ಕುಕ್ಕರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ರಾಮನಗರದ ಕರಿಕಲ್‌ ದೊಡ್ಡಿ ಗ್ರಾಮದ ಬಳಿ ಇರುವ ಹಿರಾ ಪನ್ನಾ ಅಪ್ಲೈಯನ್ಸಸ್‌ ಕುಕ್ಕರ್‌ ಕಾರ್ಖಾನೆ ಮೇಲೆ ತಹಸೀಲ್ದಾರ್‌ ತೇಜಸ್ವಿನಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಮತದಾರರಿಗೆ ವಿತರಿಸಲು ಇರಿಸಿದ್ದ 2,900 ಕುಕ್ಕರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಳ್ಳಲಾದ ಕುಕ್ಕರ್‌ಗಳು.

ಇವು ವಿಶ್ವಾಸ್‌ ವೈದ್ಯ ಎಂಬುವರಿಗೆ ಸೇರಿದ ಕುಕ್ಕರ್‌ಗಳಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಸವದತ್ತಿ-ಯಲ್ಲಮ್ಮ ಮತಕ್ಷೇತ್ರದ ಜನರಿಗೆ ಹಂಚಲು ಕುಕ್ಕರ್‌ಗಳನ್ನು ತಯಾರಿಸಲಾಗಿದ್ದು, ಅವುಗಳ ಮೇಲೆ ಅಭ್ಯರ್ಥಿಯ ಫೋಟೊಗಳು ಇವೆ. ಬಿಡದಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ: Karnataka Election: ಸೀರೆ, ಕುಕ್ಕರ್‌ ಆಯ್ತು ಈಗ ಛತ್ರಿ ಹಿಡಿದ ಮುಖಂಡರು; ರಾಜಾಜಿನಗರದಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಮತ ಗಾಳ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕೊಡಗು

Wild Animals Attack: ನಿಟ್ಟೂರು ಗ್ರಾಮದಲ್ಲಿ ಹುಲಿ ದಾಳಿಗೆ ವ್ಯಕ್ತಿ ಬಲಿ; ಕನಕಗಿರಿಯಲ್ಲಿ ಕರಡಿ ದಾಳಿಗೆ ವೃದ್ಧ ಸಾವು

Wild Animals Attack: ಕಾಡು ಪ್ರಾಣಿಗಳ ದಾಳಿಯು ಜನರನ್ನು ಚಿಂತೆಗೆ ದೂಡಿದ್ದು, ಹಗಲಿರುಳು ಆತಂಕದಲ್ಲೇ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೊಡಗಿನಲ್ಲಿ ಹುಲಿ ದಾಳಿಗೆ ವ್ಯಕ್ತಿಯೋರ್ವ ಬಲಿಯಾಗಿದ್ದು, ಕೊಪ್ಪಳದಲ್ಲಿ ಕರಡಿ ದಾಳಿಯಿಂದ ವೃದ್ಧನೊಬ್ಬ ಸಾವನ್ನಪ್ಪಿದ್ದಾನೆ.

VISTARANEWS.COM


on

Man death in tiger attack in Nittur village
Koo

ಕೊಡಗು: ಹುಲಿ ದಾಳಿಗೆ (Wild Animals Attack) ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಿಟ್ಟೂರು ಗ್ರಾಮದ ರಾಜಪುರ ರಸ್ತೆ ಸಮೀಪ ಗುರುವಾರ ಸಂಜೆ ಈ ಘಟನೆ ನಡೆದಿದೆ.

ಅಸ್ಸಾಂ ಮೂಲದ ಮೊಹಿಸೂರು ರೆಹಮಾನ್ (51) ಹುಲಿ ದಾಳಿಗೆ ಬಲಿಯಾದ ವ್ಯಕ್ತಿ. ಹಸುವಿನ ಮೇಲೆ ದಾಳಿ ಮಾಡಲು ಬಂದಂತಹ ಹುಲಿ, ಅಲ್ಲೇ ಇದ್ದ ಅಸ್ಸಾಂ ಮೂಲದ ಕಾರ್ಮಿಕ ಮೊಹಿಸೂರು ರೆಹಮಾನ್ ಮೇಲೆ ಎಗರಿ ಬಲಿ ತೆಗೆದುಕೊಂಡಿದೆ.

ಇದನ್ನೂ ಓದಿ: DRDO Test: ದೇಶೀಯ ತಂತ್ರಜ್ಞಾನದ ಕ್ರೂಸ್‌ ಕ್ಷಿಪಣಿಯ ಯಶಸ್ವಿ ಪರೀಕ್ಷೆ

ಘಟನೆಯ ಕುರಿತು ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕೂಡಲೇ ಹುಲಿಯನ್ನು ಸೆರೆಹಿಡಿಯುವಂತೆ ಒತ್ತಾಯಿಸಿದ್ದಾರೆ. ಈ ಹುಲಿ ದಾಳಿಯಿಂದ ದಕ್ಷಿಣ ಕೊಡಗಿನ ಜನತೆ ಭಯ ಭೀತರಾಗಿದ್ದು, ಒಬ್ಬೋಬ್ಬರೆ ಓಡಾಡಲು ಹಾಗೂ ಕಾಫಿ ತೋಟದಲ್ಲಿ ಕೆಲಸ ಮಾಡಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ. ಪೊನ್ನಂಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕನಕಗಿರಿಯಲ್ಲಿ ಕರಡಿ ದಾಳಿಗೆ ವೃದ್ಧ ಬಲಿ

ಕರಡಿ ದಾಳಿಯಿಂದ ತೀವ್ರ ಗಾಯಗೊಂಡಿದ್ದ ವೃದ್ಧನೋರ್ವ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ರಾಂಪುರ ಗ್ರಾಮದಲ್ಲಿ ಗುರುವಾರ ನಡೆದಿದೆ.

ಕರಡಿ ದಾಳಿ ಹಿನ್ನಲೆ ಘಟನಾ ಸ್ಥಳಕ್ಕೆ ಆಗಮಿಸಿದ್ದ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಸ್ಥಳೀಯರು ತೀವ್ರ ತರಾಟೆಗೆ ತೆಗೆದುಕೊಂಡರು.

ಚೆನ್ನಪ್ಪ (74) ಮೃತಪಟ್ಟ ವೃದ್ಧ. ರಾಂಪುರ ಗ್ರಾಮದ ಹೊರವಲಯದ ಕೆರೆ ಬಳಿ ಇರುವ ಆಂಜನೇಯ ದೇವಸ್ಥಾನದ ಬಳಿ ದುರ್ಘಟನೆ ನಡೆದಿದೆ.

ಘಟನೆಯ ಹಿನ್ನೆಲೆ

ದೇವಸ್ಥಾನದಲ್ಲಿದ್ದ ಕರಡಿಯನ್ನು ಗಮನಿಸಿದ್ದ ಗ್ರಾಮಸ್ಥರು ಅದನ್ನು ಕೂಡಿಹಾಕಿದ್ದರು. ಆದರೆ ಅಲ್ಲಿಂದ ತಪ್ಪಿಸಿಕೊಂಡು ಹೊರ ಬಂದ ಕರಡಿಯು ವೃದ್ಧ ಚೆನ್ನಪ್ಪನ ಮೇಲೆ ದಾಳಿ ನಡೆಸಿದ್ದು, ತೀವ್ರ ಗಾಯಗೊಂಡಿದ್ದ ವೃದ್ಧನನ್ನು ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವೃದ್ಧ ಚೆನ್ನಪ್ಪ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: CET 2024 exam: ದಾಖಲೆ ಸಂಖ್ಯೆಯಲ್ಲಿ ಸಿಇಟಿ ಬರೆದ ವಿದ್ಯಾರ್ಥಿಗಳು; ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ

ಘಟನೆಯ ಹಿನ್ನಲೆಯಲ್ಲಿ ಸ್ಥಳಕ್ಕೆ ಆಗಮಿಸಿದ್ದ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಸ್ಥಳೀಯರು ತೀವ್ರ ತರಾಟೆಗೆ ತೆಗೆದುಕೊಂಡರು. ಕರಡಿಯನ್ನು ಸೆರೆ ಹಿಡಿಯಲು ಬೇಕಾದ ಬೋನು ಮತ್ತು ಇತರೆ ಪರಿಕರಗಳನ್ನು ತರದೇ ಹಾಗೆ ಬರೀಗೈಯ್ಯಲ್ಲಿ ಬಂದಿದ್ದ ಅಧಿಕಾರಿ, ಸಿಬ್ಬಂದಿಯನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡು, ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಕರಡಿ ಉಪಟಳವನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಕನಕಗಿರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

Continue Reading

ಯಾದಗಿರಿ

Yadgiri News: ಸುರಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ರಾಜುಗೌಡ ನಾಮಪತ್ರ ಸಲ್ಲಿಕೆ

Yadgiri News: ಸುರಪುರ ಶಾಸಕರಾಗಿದ್ದ ರಾಜಾವೆಂಕಟಪ್ಪ ನಾಯಕ ಅವರು ಅಕಾಲಿಕ ನಿಧನರಾದ ಹಿನ್ನಲೆ ಅವರ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಮೇ 7 ರಂದು ಮತದಾನ ನಡೆಯಲಿದೆ. ಬಿಜೆಪಿ ಅಭ್ಯರ್ಥಿ ರಾಜುಗೌಡ ಗುರುವಾರ ನಾಮಪತ್ರ ಸಲ್ಲಿಸಿದರು.

VISTARANEWS.COM


on

Surapura Assembly Constituency By election BJP candidate Raju Gowda filed nomination
Koo

ಯಾದಗಿರಿ: ಲೋಕಸಭಾ ಚುನಾವಣೆ ಜತೆ ಸುರಪುರ ವಿಧಾನಸಭೆ ಕ್ಷೇತ್ರದ (Surapura Assembly Constituency) ಉಪಚುನಾವಣೆ ನಡೆಯುತ್ತಿದ್ದು, ಚುನಾವಣೆ ಹಿನ್ನಲೆ ಬಿಜೆಪಿ ಅಭ್ಯರ್ಥಿ ರಾಜುಗೌಡ ಗುರುವಾರ ರೋಡ್ ಶೋ ನಡೆಸಿ ನಾಮಪತ್ರ (Yadgiri News) ಸಲ್ಲಿಸಿದರು.

ಸುರಪುರ ಶಾಸಕರಾಗಿದ್ದ ರಾಜಾವೆಂಕಟಪ್ಪ ನಾಯಕ ಅವರು ಅಕಾಲಿಕ ನಿಧನರಾದ ಹಿನ್ನಲೆ ಅವರ ತೆರವಾದ ಸ್ಥಾನಕ್ಕೆ ಸುರಪುರ ಕ್ಷೇತ್ರದ ಉಪಚುನಾವಣೆಯು ನಡೆಯುತ್ತಿದ್ದು, ಮೇ 7 ರಂದು ಮತದಾನ ನಡೆಯಲಿದೆ.

ನಾಮಪತ್ರ ಸಲ್ಲಿಸುವ ಮುನ್ನ ರಾಜುಗೌಡ ಅವರು ಬೆಳಿಗ್ಗೆ ಸುರಪುರ ನಗರದಲ್ಲಿರುವ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನ ಹಾಗೂ ಬನಶಂಕರಿ ದೇವಾಲಯಕ್ಕೆ ಕುಟುಂಬಸ್ಥರ ಜತೆ ತೆರಳಿ ಗೆಲುವಿಗಾಗಿ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಇದನ್ನೂ ಓದಿ: Infosys Q4 Result: ಇನ್ಫೋಸಿಸ್‌ಗೆ 7,969 ಕೋಟಿ ರೂ. ನಿವ್ವಳ ಲಾಭ; 28 ರೂ.ಗಳ ಡಿವಿಡೆಂಡ್‌ ಘೋಷಣೆ

ನಂತರ ಗಾಂಧಿ ವೃತ್ತದ ಸಮೀಪದ ನಗರಸಭೆ ಕಚೇರಿಯಿಂದ ತಹಸೀಲ್ದಾರ್‌ ಕಚೇರಿವರಗೆ ಬಿಜೆಪಿ ಅಭ್ಯರ್ಥಿ ರಾಜುಗೌಡ, ಬೃಹತ್ ರೋಡ್ ಶೋ ನಡೆಸಿದರು.

ಬಳಿಕ ತಹಸೀಲ್ದಾರ್‌ ಕಚೇರಿಗೆ ತೆರಳಿ ಬಿಜೆಪಿ ಅಭ್ಯರ್ಥಿ ರಾಜುಗೌಡ ನಾಮಪತ್ರ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ನನ್ನ ಅಧಿಕಾರಾವಧಿಯಲ್ಲಿ ಸಾಕಷ್ಟು ನೀರಾವರಿ ಯೋಜನೆ ಹಾಗೂ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದೇನೆ‌. ಸುರಪುರ ನಗರಕ್ಕೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿದ್ದೇನೆ. ನಾರಾಯಣಪುರ ಜಲಾಶಯದಿಂದ ಕಾಲುವೆ ಮೂಲಕ ರೈತರ ಜಮೀನಿಗೆ ಎರಡು ಅವಧಿ ನೀರು ಪೂರೈಕೆ ಮಾಡಿದ್ದೇನೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನೆಯು ಯಾವುದೇ ಪರಿಣಾಮ ಬೀರಲ್ಲ‌.ಈಗ ಜಲಾಶಯದಲ್ಲಿ ನೀರು ಇದ್ದರೂ ರೈತರ ಜಮೀನಿಗೆ ನೀರು ಬಿಡುತ್ತಿಲ್ಲ‌. ಸರ್ಕಾರದ ಗ್ಯಾರಂಟಿ ಯೋಜನೆಗಳು ಕಣ್ಣು ಒರೆಸುವ ತಂತ್ರವಾಗಿದೆ ಎಂದು ಆರೋಪಿಸಿದ ಅವರು, ಸುರಪುರ ಕ್ಷೇತ್ರದಲ್ಲಿ ಜನರು ಬೆಂಬಲ ನೀಡುತ್ತಿದ್ದು ಜನರ ಶ್ರೀರಕ್ಷೆಯಿಂದ ಗೆಲ್ಲುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: Money Guide: ತುರ್ತು ಚಿಕಿತ್ಸೆಗೆ ಪಿಎಫ್​ನಿಂದ 1 ಲಕ್ಷ ರೂ. ಪಡೆಯಬಹುದು; ಹೇಗೆ ಗೊತ್ತಾ?

ಈ ಸಂದರ್ಭದಲ್ಲಿ ಎಂಎಲ್‌ಸಿ ಹೇಮಲತಾ ನಾಯಕ, ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ, ಉದ್ಯಮಿ ದಯಾನಂದ, ರಾಜಾ ಹಣಮಪ್ಪ ತಾತಾ, ಎಚ್.ಸಿ. ಪಾಟೀಲ, ಬಸವರಾಜ ಸ್ಥಾವರಮಠ ಸೇರಿದಂತೆ ಅನೇಕರು ಇದ್ದರು.

Continue Reading

Lok Sabha Election 2024

Lok Sabha Election 2024: ಮಾಜಿ‌ ಸಚಿವ ಮಾಲೀಕಯ್ಯ ಗುತ್ತೇದಾರ್ ಬಿಜೆಪಿಗೆ ಗುಡ್‌ ಬೈ; ನಾಳೆ ಕಾಂಗ್ರೆಸ್‌ ಸೇರ್ಪಡೆ

Lok Sabha Election 2024: ನಿತಿನ್‌ ಬಿಜೆಪಿ ಸೇರ್ಪಡೆ ಸಂಬಂಧ ಮಾಲೀಕಯ್ಯ ಗುತ್ತೇದಾರ್‌ ಅವರು ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು. 2018ರ ಚುನಾವಣೆಯಲ್ಲಿ ನಾನು ಬಿಜೆಪಿಯಿಂದ ಗೆಲ್ಲಬೇಕಿತ್ತು. ನಿತಿನ್‌ ಮತ್ತು ಕೆಲವು ಬಿಜೆಪಿ ಮುಖಂಡರು ನನಗೆ ಮೋಸ ಮಾಡಿದರು. 2023ರಲ್ಲಿ ನಿತಿನ್‌ ಸ್ವತಂತ್ರವಾಗಿ ಸ್ಪರ್ಧೆ ಮಾಡಿ ನನ್ನನ್ನು ಸೋಲಿಸಿದ್ದಾನೆ. ಈಗ ಆತನಿಂದ ಕೋಟಿ ಕೋಟಿ ಹಣ ಪಡೆದು ಅವನನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಮಾಲೀಕಯ್ಯ ಗುತ್ತೇದಾರ್‌ ಗಂಭೀರ ಆರೋಪ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಕಾಂಗ್ರೆಸ್‌ ಸೇರ್ಪಡೆಯಾಗುತ್ತಿದ್ದಾರೆ.

VISTARANEWS.COM


on

Lok Sabha Election 2024 Malikayya Guttedar Joining Congress April 19
Koo

ಕಲಬುರಗಿ: ಲೋಕಸಭೆ ಚುನಾವಣೆ (Lok Sabha Election 2024) ಹೊತ್ತಿನಲ್ಲೇ ಕಲಬುರಗಿಯಲ್ಲಿ ಬಿಜೆಪಿಗೆ ಮತ್ತೊಂದು ಶಾಕ್‌ ಎದುರಾಗಿದೆ. ಮಾಜಿ‌ ಸಚಿವ ಮಾಲೀಕಯ್ಯ ಗುತ್ತೇದಾರ್ (Malikayya Guttedar) ಘರ್ ವಾಪ್ಸಿಗೆ ಸಿದ್ಧತೆ ನಡೆಸಿದ್ದಾರೆ. ಅವರು ಶುಕ್ರವಾರ (ಏಪ್ರಿಲ್‌ 18) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ (KPCC Office) ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಂದ ಅಫಜಲಪುರ ಶಾಸಕ ಎಂ.ವೈ. ಪಾಟೀಲ್‌ಗೆ ದೂರವಾಣಿ ಕರೆ ಹೋಗಿದೆ. ಅಲ್ಲಿ ಮಾಲೀಕಯ್ಯ ಗುತ್ತೇದಾರ್‌ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಅವರ ಒಪ್ಪಿಗೆಯನ್ನೂ ಪಡೆದುಕೊಳ್ಳಲಾಗಿದೆ. ಹೀಗಾಗಿ ಅವರ ಪಕ್ಷ ಸೇರ್ಪಡೆಗೆ ಯಾವುದೇ ವಿರೋಧ ಎದುರಾಗಿಲ್ಲ ಎನ್ನಲಾಗಿದೆ.

ಏಕೆ ಈ ನಿರ್ಧಾರ?

ಸಹೋದರ ನಿತಿನ್ ಗುತ್ತೇದಾರ್ ಹಾಗೂ ಮಾಲೀಕಯ್ಯ ಗುತ್ತೇದಾರ್ ನಡುವಿನ ಸಂಬಂಧ ಮೊದಲಿನಿಂದಲೂ ಎಣ್ಣೆ ಶೀಗೇಕಾಯಿ ಆಗಿತ್ತು. ಒಬ್ಬರು ಒಂದು ಪಕ್ಷದಲ್ಲಿದ್ದರೆ ಮತ್ತೊಬ್ಬರು ಆ ಪಕ್ಷವನ್ನು ತೊರೆಯುತ್ತಾರೆ. 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಾಲೀಕಯ್ಯ ಗುತ್ತೇದಾರ್‌ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದರು. ಆಗ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ನಿತಿನ್‌ ಗುತ್ತೇದಾರ್‌ ಪಕ್ಷೇತರವಾಗಿ ಸ್ಪರ್ಧೆ ಮಾಡಿದ್ದರು. ಇದರಿಂದ ಮಾಲೀಕಯ್ಯ ಗುತ್ತೇದಾರ್‌ ಸೋಲು ಕಾಣಬೇಕಾಯಿತು. ಈಗ ಈಚೆಗೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿತಿನ್‌ ಗುತ್ತೇದಾರ್‌ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಇದು ಮಾಲೀಕಯ್ಯ ಅವರ ಕಣ್ಣನ್ನು ಕೆಂಪಗಾಗಿಸಿತ್ತು.

ಬಹಿರಂಗ ಅಸಮಾಧಾನ

ನಿತಿನ್‌ ಬಿಜೆಪಿ ಸೇರ್ಪಡೆ ಸಂಬಂಧ ಮಾಲೀಕಯ್ಯ ಗುತ್ತೇದಾರ್‌ ಅವರು ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದರು. 2018ರ ಚುನಾವಣೆಯಲ್ಲಿ ನಾನು ಬಿಜೆಪಿಯಿಂದ ಗೆಲ್ಲಬೇಕಿತ್ತು. ನಿತಿನ್‌ ಮತ್ತು ಕೆಲವು ಬಿಜೆಪಿ ಮುಖಂಡರು ನನಗೆ ಮೋಸ ಮಾಡಿದರು. 2023ರಲ್ಲಿ ನಿತಿನ್‌ ಸ್ವತಂತ್ರವಾಗಿ ಸ್ಪರ್ಧೆ ಮಾಡಿ ನನ್ನನ್ನು ಸೋಲಿಸಿದ್ದಾನೆ. ಈಗ ಆತನಿಂದ ಕೋಟಿ ಕೋಟಿ ಹಣ ಪಡೆದು ಅವನನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಮಾಲೀಕಯ್ಯ ಗುತ್ತೇದಾರ್‌ ಗಂಭೀರ ಆರೋಪ ಮಾಡಿದ್ದರು.

ಇದನ್ನೂ ಓದಿ: Lok Sabha Election 2024: ಈ ಬಾರಿ ಕೇಂದ್ರದಲ್ಲೂ ಬಿಜೆಪಿ ಅಧಿಕಾರಕ್ಕೆ ಬರೋದಿಲ್ಲ: ಸಿಎಂ ಸಿದ್ದರಾಮಯ್ಯ ಭವಿಷ್ಯ

ಕಾಂಗ್ರೆಸ್‌ ಸೇರ್ಪಡೆಗೆ ಮುಹೂರ್ತ ಫಿಕ್ಸ್‌

ಈಗ ಲೋಕಸಭಾ ಚುನಾವಣೆ ನಡೆಯುತ್ತಿದೆ. ಮಾಲಿಕಯ್ಯ ಗುತ್ತೇದಾರ್ ಈ ಹಿಂದೆ ಸಚಿವರೂ ಸಹ ಆಗಿದ್ದವರು. ಅಲ್ಲದೆ, ಜಿಲ್ಲೆಯಲ್ಲಿ ಅವರದ್ದೇ ಆದ ಪ್ರಭಾವವೂ ಇದೆ. ಈಗ ಅವರ ವಿರೋಧಿ ನಿತಿನ್‌ ಗುತ್ತೇದಾರ್‌ ಬಿಜೆಪಿಗೆ ಸೇರ್ಪಡೆಯಾಗಿರುವುದರಿಂದ ಅವರನ್ನು ಸೆಳೆದರೆ ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಲಿದೆ ಎಂಬ ಲೆಕ್ಕಾಚಾರವನ್ನು ಹಾಕಿಕೊಳ್ಳಲಾಗಿತ್ತು. ಅದಕ್ಕೆ ಸರಿಯಾಗಿ ಮಾಲೀಕಯ್ಯ ಸಹ ಕಾಂಗ್ರೆಸ್‌ ಕದವನ್ನು ತಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪಕ್ಷ ಸೇರ್ಪಡೆಗೆ ಒಪ್ಪಿಗೆ ಸೂಚಿಸಿದ್ದಾರೆ. ಅಲ್ಲದೆ, ಆ ಭಾಗದ ಶಾಸಕ ಎಂ.ವೈ. ಪಾಟೀಲ್‌ ಅವರ ಒಪ್ಪಿಗೆಯನ್ನೂ ಪಡೆದುಕೊಂಡಿದ್ದಾರೆ. ಈಗ ಮಾಲೀಕಯ್ಯ ಅವರ ಸೇರ್ಪಡೆ ಕಾಂಗ್ರೆಸ್‌ಗೆ ಯಾವ ರೀತಿಯಾಗಿ ಲಾಭ ತಂದುಕೊಡಲಿದೆ ಎಂಬ ಲೆಕ್ಕಾಚಾರಗಳು ರಾಜಕೀಯ ಪಡೆಸಾಲೆಗಳಲ್ಲಿ ನಡೆಯುತ್ತಿವೆ.

Continue Reading

ಶಿಕ್ಷಣ

CET 2024 exam: ದಾಖಲೆ ಸಂಖ್ಯೆಯಲ್ಲಿ ಸಿಇಟಿ ಬರೆದ ವಿದ್ಯಾರ್ಥಿಗಳು; ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ

CET 2024 Exam: ಎಂಜಿನಿಯರಿಂಗ್‌, ಕೃಷಿ ವಿಜ್ಞಾನ, ವೆಟರಿನರಿ ಸೇರಿದಂತೆ ಹಲವು ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ಇಂದಿನಿಂದ ಸಿಇಟಿ ಪರೀಕ್ಷೆ ಆರಂಭವಾಗಿದೆ. ಇಂದು ಜೀವಶಾಸ್ತ್ರ, ಗಣಿತ ವಿಷಯಕ್ಕೆ ಪರೀಕ್ಷೆ ನಡೆದಿದ್ದು, ಈ ವರ್ಷ 3,49,637 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಇಷ್ಟು ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದಾರೆ. ಆದರೆ, ಔಟ್‌ ಆಫ್‌ ಸಿಲಬಸ್‌ ಕೇಳಲಾಗಿದೆ. ಹೀಗಾಗಿ ಮತ್ತೆ ಪರೀಕ್ಷೆ ನಡೆಸಬೇಕು ಎಂದು ವಿದ್ಯಾರ್ಥಿಗಳು ಹಾಗೂ ಪೋಷಕರು ಆಗ್ರಹಿಸಿದ್ದಾರೆ.

VISTARANEWS.COM


on

Record number of students wrote CET 2024 exam Outrage over out of syllabus question
Koo

ಬೆಂಗಳೂರು: ರಾಜ್ಯಾದ್ಯಂತ ಸಿಇಟಿ-2024 ಪರೀಕ್ಷೆ (CET 2024 exam) ಆರಂಭವಾಗಿದೆ. ಈ ವರ್ಷ ದಾಖಲೆಯ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಶುಕ್ರವಾರ (ಏಪ್ರಿಲ್‌ 19) ಸಿಇಟಿ ಎರಡನೇ ದಿನದ ಪರೀಕ್ಷೆ ನಡೆಯಲಿದ್ದು, ಕೆಇಎ ಬೋರ್ಡ್‌ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಂಡಿದೆ‌. ಆದರೂ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೇಳಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಗುರುವಾರ (ಏಪ್ರಿಲ್‌ 18) ಗಣಿತ ಹಾಗೂ ಜೀವಶಾಸ್ತ್ರ ವಿಷಯಗಳ ಪರೀಕ್ಷೆ ನಡೆದಿದೆ. ಗಣಿತ ಪ್ರಶ್ನೆ ಪತ್ರಿಕೆಯಲ್ಲಿ 18 ಪ್ರಶ್ನೆಗಳನ್ನು ಔಟ್ ಆಫ್ ಸಿಲಬಸ್ ಕೇಳಲಾಗಿದೆ ಎಂದು ವಿದ್ಯಾರ್ಥಿಗಳು ಆರೋಪ ಮಾಡಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ವಿರುದ್ಧ ವಿದ್ಯಾರ್ಥಿಗಳು ಮತ್ತು ಪೋಷಕರು ತೀವ್ರ ಅಸಮಾಧಾನವನ್ನು ಹೊರ ಹಾಕಿದ್ದಾರೆ.

ಡಿಲಿಟ್ ಮಾಡಲಾದ ಸಿಲಬಸ್‌ನಲ್ಲಿದ್ದ ಅಂಶಗಳನ್ನು ಕೇಳಲಾಗಿದೆ. ಗಣಿತ ಪತ್ರಿಕೆಯ 60 ಪ್ರಶ್ನೆಗಳಲ್ಲಿ 18 ಔಟ್ ಆಫ್ ಸಿಲಬಸ್ ಇದ್ದು, ಇನ್ನು 12 ಅತಿ ಕಠಿಣ ಪ್ರಶ್ನೆಗಳಾಗಿವೆ. ಇನ್ನು ಜೀವಶಾಸ್ತ್ರ ಪ್ರಶ್ನೆಪತ್ರಿಕೆಯಲ್ಲೂ 12 ಪ್ರಶ್ನೆಗಳು ಔಟ್ ಆಫ್ ಸಿಲಬಸ್ ಎಂದು ಆರೋಪ ಮಾಡಿದ್ದಾರೆ. ಹೀಗಾಗಿ ಪರೀಕ್ಷೆ ಮತ್ತೆ ನಡೆಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಒತ್ತಾಯ ಮಾಡಲಾಗಿದೆ.

ಇನ್ನು ಕಳೆದ ವರ್ಷಕ್ಕಿಂತ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಬಾರಿ ಸಿಇಟಿ ಪರೀಕ್ಷೆಯನ್ನು ಬರೆದಿದ್ದಾರೆ. ಈ ಹಿಂದೆ ಯಾವತ್ತೂ ಇಷ್ಟು ಪ್ರಮಾಣದಲ್ಲಿ ವಿದ್ಯಾರ್ಥಿಗಳು ನೋಂದಣಿ ಮಾಡಿರಲಿಲ್ಲ. ರಾಜ್ಯದಲ್ಲಿ 737 ಪರೀಕ್ಷಾ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನಲ್ಲಿ 167 ಕೇಂದ್ರಗಳಲ್ಲಿ ಮೊದಲ ದಿನದ ಪರೀಕ್ಷೆಯನ್ನು ನಡೆಸಲಾಗಿದೆ. ಬೆಳಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ, ಮಧ್ಯಾಹ್ನ 2.30ರಿಂದ 3.50 ರವರೆಗೆ ಗಣಿತ ಪರೀಕ್ಷೆಯನ್ನು ನಡೆಸಲಾಗಿದೆ.

ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಭೇಟಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ಮಲ್ಲೇಶ್ವರಂ ಪಿಯು ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶುಕ್ರವಾರ ನಡೆಯುವ ಪರೀಕ್ಷೆಗೂ ಬಿಗಿ ಭದ್ರತೆ ಇರಲಿದೆ ಎಂದು ಹೇಳಿದ್ದಾರೆ.

ಸಿಇಟಿಗೆ ಹೆಚ್ಚು ಅಂಕಗಳ ಪಟ್ಟಿ ಪರಿಗಣನೆ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಗುಡ್‌ನ್ಯೂಸ್‌ ನೀಡಿದೆ. ದ್ವಿತೀಯ ಪಿಯುಸಿಯ ಮೂರು ಪರೀಕ್ಷೆಗಳನ್ನು ಬರೆಯುವ ವಿದ್ಯಾರ್ಥಿಗಳು ಯಾವುದರಲ್ಲಿ ಹೆಚ್ಚು ಅಂಕ ಪಡೆದಿರುತ್ತಾರೋ ಅದನ್ನೇ ಸಿಇಟಿ (CET 2024)ಗೆ ಪರಿಗಣಿಸಲು ಕೆಇಎ ಸಮ್ಮತಿ ಸೂಚಿಸಿದೆ. ಇದರಿಂದ ನೂರಾರು ವಿದ್ಯಾರ್ಥಿಗಳು ನಿರಾಳವಾಗಿದ್ದಾರೆ. ಎಂಜಿನಿಯರ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಕೆಇಎ ಪ್ರತಿವರ್ಷ ಸಿಇಟಿ ನಡೆಸುತ್ತದೆ.

ಸಿಇಟಿ ಜತೆಗೆ ದ್ವಿತೀಯ ಪಿಯುಸಿಯಲ್ಲಿ ಗಳಿಸಿದ ಅಂಕವನ್ನೂ ರ‍್ಯಾಂಕಿಂಗ್​ಗೆ ಪರಿಗಣಿಸಲಾಗುತ್ತದೆ. ಇದುವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲಾದರೆ ಪೂರಕ ಪರೀಕ್ಷೆ ಬರೆದು ತೇರ್ಗಡೆಯಾಗಬೇಕಿತ್ತು. ಮುಖ್ಯ ಪರೀಕ್ಷೆ ಮತ್ತು ಪೂರಕ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಕ್ರೂಡೀಕರಿಸಿ ಅಂಕಪಟ್ಟಿ ನೀಡಲಾಗುತ್ತಿತ್ತು.

ನಿಯಮದಲ್ಲಿ ಬದಲಾವಣೆ

ಈ ಬಾರಿ ಈ ನಿಯಮದಲ್ಲಿ ಕೊಂಚ ಬದಲಾವಣೆ ತರಲಾಗಿದೆ. ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಮೂರು ಪರೀಕ್ಷೆಗಳನ್ನು ಪರಿಚಯಿಸಲಾಗಿದೆ. ಒಂದು ವೇಳೆ ಕಡಿಮೆ ಅಂಕ ಬಂದಿದ್ದರೆ ಅದನ್ನು ಉತ್ತಮಪಡಿಸಿಕೊಳ್ಳಲು ವಿದ್ಯಾರ್ಥಿಗಳು ಇನ್ನು ಉಳಿದ ಎರಡು ಪರೀಕ್ಷೆಗಳನ್ನೂ ಬರೆಯಬಹುದು. ಹೆಚ್ಚು ಅಂಕ ಬಂದಿರುವುದನ್ನೇ ಪರಿಗಣಿಸಿ ಅಂತಿಮ ಅಂಕಪಟ್ಟಿ ನೀಡಲಾಗುತ್ತದೆ.

ಇದೀಗ ಆ ಹೆಚ್ಚುವರಿ ಅಂಕವನ್ನೇ ಸಿಇಟಿ ರ‍್ಯಾಂಕಿಂಗ್‌ಗೂ ಪರಿಣಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ. ಈ ಬಗ್ಗೆ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್‌.ರಮ್ಯಾ ಮಾತನಾಡಿ, ʼʼಹೆಚ್ಚು ಅಂಕ ಬಂದಿರುವ ಅಂತಿಮ ಅಂಕ ಪಟ್ಟಿಯನ್ನು ಸಿಇಟಿ ಅಂಕಗಳ ಜತೆ ರ‍್ಯಾಂಕಿಂಗ್‌ ಪಟ್ಟಿ ಸಿದ್ಧಪಡಿಸಲು ಪರೀಕ್ಷಾ ಪ್ರಾಧಿಕಾರ ಪರಿಗಣಿಸಲಿದೆʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Murder Case: ಬೆಂಗಳೂರಲ್ಲಿ ಜೋಡಿ ಕೊಲೆ: ಅನೈತಿಕ ಸಂಬಂಧ ಸಾಕು ಎಂದವಳ ಕೊಂದ; ತಲೆ ಒಡೆದು ಸಾಯಿಸಿದ ಹುಡುಗಿ ಅಮ್ಮ!

ಪಿಯುಸಿ ಪರೀಕ್ಷೆ 2

ದ್ವಿತೀಯ ಪಿಯುಸಿ ಪರೀಕ್ಷೆ 2 ಬರೆಯಲು ಇಚ್ಛಿಸುವವರು ಏಪ್ರಿಲ್ 10ರಿಂದ 16 ರವರೆಗೆ ಅರ್ಜಿ ಸಲ್ಲಿಸಬಹುದು. ಕಾಲೇಜಿನಲ್ಲಿ ಪ್ರಾಂಶುಪಾಲರ ಸಹಾಯದೊಂದಿಗೆ ಅಥವಾ ವೆಬ್‌ಸೈಟ್‌ನಲ್ಲಿ ನೇರವಾಗಿ ಪರೀಕ್ಷೆ 2ಕ್ಕೆ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಇದು ದಂಡ ರಹಿತ ಅವಕಾಶವಾಗಿದೆ. ಇನ್ನು ಇದರ ನಂತರ ದಂಡ ಸಹಿತವಾಗಿ ಏಪ್ರಿಲ್‌ 17 ಮತ್ತು 18ಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ದ್ವಿತೀಯ ಪಿಯು ಪರೀಕ್ಷೆ 2 ಬರೆಯಲು ಇಚ್ಛಿಸುವವರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದರೆ ಅದರ ಫಲಿತಾಂಶಕ್ಕಾಗಿ ಕಾಯಬೇಕಿಲ್ಲ. ಕೂಡಲೇ ಅರ್ಜಿ ಸಲ್ಲಿಸಲು ಅವಕಾಶ ಇದೆ. ಪರೀಕ್ಷೆ 2 ಅನ್ನು ಬರೆಯುವವರಿಗೆ ಒಂದು ವಿಷಯಕ್ಕೆ 140 ರೂಪಾಯಿ ಶುಲ್ಕವನ್ನು ನಿಗದಿ ಮಾಡಿದ್ದರೆ, ಎರಡು ವಿಷಯಕ್ಕೆ 270 ರೂ., ಮೂರು ಅಥವಾ ಹೆಚ್ಚಿನ ವಿಷಯಕ್ಕೆ 400 ರೂಪಾಯಿ ಶುಲ್ಕವನ್ನು ವಿಧಿಸಲಾಗಿದೆ.

ನಾಳೆ ಯಾವ ಪರೀಕ್ಷೆ?

ಸಿಇಟಿ 2024ರ ಪರೀಕ್ಷೆಗಳು ಏಪ್ರಿಲ್‌ 18ರಿಂದ ಆರಂಭವಾಗಿದ್ದು, ಏಪ್ರಿಲ್ 19ರವರೆಗೆ ನಡೆಯಲಿದೆ. ಏಪ್ರಿಲ್ 19ರ ಬೆಳಿಗ್ಗೆ 10.30ರಿಂದ ಭೌತಶಾಸ್ತ್ರ , ಮಧ್ಯಾಹ್ನ ರಸಾಯನ ಶಾಸ್ತ್ರ, ಏಪ್ರಿಲ್ 20 – ಹೊರನಾಡು ಮತ್ತು ಗಡಿನಾಡ ಕನ್ನಡಿಗರಿಗೆ ಭಾಷಾ ಪರೀಕ್ಷೆಯನ್ನು ಆಯೋಜಿಸಲಾಗಿದೆ.

Continue Reading
Advertisement
Indian Railways
ದೇಶ20 mins ago

Indian Railways: ಹಿರಿಯ ನಾಗರಿಕ ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ಲೋವರ್ ಬರ್ತ್ ಕಾಯ್ದಿರಿಸುವಿಕೆಗೆ ಹೊಸ ನಿಯಮ

Man death in tiger attack in Nittur village
ಕೊಡಗು30 mins ago

Wild Animals Attack: ನಿಟ್ಟೂರು ಗ್ರಾಮದಲ್ಲಿ ಹುಲಿ ದಾಳಿಗೆ ವ್ಯಕ್ತಿ ಬಲಿ; ಕನಕಗಿರಿಯಲ್ಲಿ ಕರಡಿ ದಾಳಿಗೆ ವೃದ್ಧ ಸಾವು

Surapura Assembly Constituency By election BJP candidate Raju Gowda filed nomination
ಯಾದಗಿರಿ34 mins ago

Yadgiri News: ಸುರಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ರಾಜುಗೌಡ ನಾಮಪತ್ರ ಸಲ್ಲಿಕೆ

Preity Zinta
ಕ್ರೀಡೆ42 mins ago

Preity Zinta : ರೋಹಿತ್​ ಶರ್ಮಾಗಾಗಿ ಪ್ರಾಣ ಪಣಕ್ಕಿಡಲು ಸಿದ್ಧ; ಪ್ರೀತಿ ಜಿಂಟಾ ಹೇಳಿಕೆ ಸಿಕ್ಕಾಪಟ್ಟೆ ವೈರಲ್​

Lok Sabha Election 2024 Malikayya Guttedar Joining Congress April 19
Lok Sabha Election 202456 mins ago

Lok Sabha Election 2024: ಮಾಜಿ‌ ಸಚಿವ ಮಾಲೀಕಯ್ಯ ಗುತ್ತೇದಾರ್ ಬಿಜೆಪಿಗೆ ಗುಡ್‌ ಬೈ; ನಾಳೆ ಕಾಂಗ್ರೆಸ್‌ ಸೇರ್ಪಡೆ

Lok Sabah Election
ಪ್ರಮುಖ ಸುದ್ದಿ1 hour ago

Lok Sabah Election : ತಮಿಳುನಾಡಿನಲ್ಲಿ ಕತ್ತೆಗಳ ಮೂಲಕ ಹಳ್ಳಿಗಳಿಗೆ ಇವಿಎಂ ತಲುಪಿಸಿದ ಅಧಿಕಾರಿಗಳು!

DRDO
ತಂತ್ರಜ್ಞಾನ1 hour ago

DRDO Test: ದೇಶೀಯ ತಂತ್ರಜ್ಞಾನದ ಕ್ರೂಸ್‌ ಕ್ಷಿಪಣಿಯ ಯಶಸ್ವಿ ಪರೀಕ್ಷೆ

Iran Israel war
ಪ್ರಮುಖ ಸುದ್ದಿ1 hour ago

Israel Iran War : ಇಸ್ರೇಲ್​ ಮೇಲಿನ ದಾಳಿಗೆ ಪ್ರತಿಕಾರ; ಅಮೆರಿಕ, ಬ್ರಿಟನ್ ನಿಂದ ಇರಾನ್​​ಗೆ ಭಾರಿ ನಿರ್ಬಂಧ

Record number of students wrote CET 2024 exam Outrage over out of syllabus question
ಶಿಕ್ಷಣ2 hours ago

CET 2024 exam: ದಾಖಲೆ ಸಂಖ್ಯೆಯಲ್ಲಿ ಸಿಇಟಿ ಬರೆದ ವಿದ್ಯಾರ್ಥಿಗಳು; ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ

IPL 2024
ಕ್ರೀಡೆ2 hours ago

IPL 2024 : ಮದುವೆ ಆಮಂತ್ರಣಕ್ಕೆ ಸಿಎಸ್​ಕೆ ಥೀಮ್​, ಯುವ ಜೋಡಿಯ ಅಭಿಮಾನಕ್ಕೆ ಮೆಚ್ಚುಗೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ2 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ3 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ5 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ6 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ7 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ1 week ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌