Site icon Vistara News

ಕಾರು-ಲಾರಿ ಡಿಕ್ಕಿಯಾಗಿ ಮೂವರ ದುರ್ಮರಣ; ನೀರಿನಲ್ಲಿ ವಾಹನ ಮುಳುಗಿ ಒಬ್ಬ ಸಾವು

Road Accident

#image_title

ಧಾರವಾಡ: ಇಲ್ಲಿನ ಬೈಪಾಸ್​ನಲ್ಲಿ ಲಾರಿ ಮತ್ತು ಕಾರಿನ ನಡುವೆ ಅಪಘಾತವಾಗಿ (Road Accident) ಮೂವರು ಮೃತಪಟ್ಟಿದ್ದಾರೆ. ಇಬ್ಬರು ಸ್ಥಳದಲ್ಲೇ ಮೃತರಾಗಿದ್ದರು. ತೀವ್ರವಾಗಿ ಗಾಯಗೊಂಡ ಇನ್ನೊಬ್ಬನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಬಿಂದುಗೌಡ (35), ಬಾಪುಗೌಡ (36) ಸ್ಥಳದಲ್ಲೇ ದುರ್ಮರಣಕ್ಕೀಡಾದವರು. ಇನ್ನೊಬ್ಬರ ಹೆಸರು ಗೊತ್ತಾಗಿಲ್ಲ.

ರಾಷ್ಟ್ರೀಯ ಹೆದ್ದಾರಿ 4ರ ಹಳಿಯಾಳ ಸೇತುವೆ ಬಳಿ ಇಂದು ಮುಂಜಾನೆ ಘಟನೆ ನಡೆದಿದೆ. ಕಾರು ಹುಬ್ಬಳ್ಳಿಯಿಂದ ಬೆಳಗಾವಿ ಕಡೆಗೆ ಹೋಗುತ್ತಿತ್ತು. ಕಾರಿನಲ್ಲಿದ್ದ ಮೂವರೂ ಮೃತಪಟ್ಟಿದ್ದಾರೆ. ಈ ಅಪಘಾತದ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಇದನ್ನೂ ಓದಿ: Ballari News: ಮೈಸೂರು ರಸ್ತೆ ಅಪಘಾತ; ಮೃತರ ಕುಟುಂಬಗಳಿಗೆ ಚೆಕ್ ವಿತರಿಸಿದ ಸಚಿವ ನಾಗೇಂದ್ರ

ಹೊಳೆಗೆ ಬಿದ್ದ ಕಾರು, ಒಬ್ಬ ಸಾವು

ಮಂಗಳೂರಲ್ಲಿ ಕಾರು ಹೊಳೆಗೆ ಉರುಳಿ ಬಿದ್ದು ಒಬ್ಬಾತ ಮೃತಪಟ್ಟಿದ್ದು, ಇನ್ನೊಬ್ಬನಿಗೆ ಗಂಭೀರವಾಗಿ ಗಾಯವಾಗಿದೆ. ನೆಲ್ಯಾಡಿ ಬಳಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆ ಎಂಬಲ್ಲಿ ಈ ಘಟನೆ ನಡೆದಿದೆ. ಮೃತ ವ್ಯಕ್ತಿ ಹೊಸೂರು ನಿವಾಸಿ ಎನ್ನಲಾಗಿದೆ. ಗಾಯಗೊಂಡವನನ್ನು ನೆಲ್ಯಾಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Exit mobile version