Viral News: ಶಾಲೆ ತೊರೆದು 37 ವರ್ಷಗಳ ಬಳಿಕ ಪಿಯುಸಿ ಪರೀಕ್ಷೆ ಬರೆದ ಆಟೋ ಡ್ರೈವರ್‌! Vistara News
Connect with us

ಕರ್ನಾಟಕ

Viral News: ಶಾಲೆ ತೊರೆದು 37 ವರ್ಷಗಳ ಬಳಿಕ ಪಿಯುಸಿ ಪರೀಕ್ಷೆ ಬರೆದ ಆಟೋ ಡ್ರೈವರ್‌!

Viral News: ಬೆಂಗಳೂರಿನಲ್ಲಿ ಶಾಲೆ ಬಿಟ್ಟು ಬರೋಬ್ಬರಿ ನಾಲ್ಕು ದಶಕದ ಬಳಿಕ ಪಿಯುಸಿ ಪರೀಕ್ಷೆ ಬರೆದು ಆಟೋ ಡ್ರೈವರ್‌ ಗಮನ ಸೆಳೆದಿದ್ದಾರೆ.

VISTARANEWS.COM


on

Auto Driver Bhaskar
Koo

ಬೆಂಗಳೂರು: ಇತ್ತೀಚೆಗೆ ಸ್ಮಾರ್ಟ್‌ವಾಚ್‌ನಲ್ಲಿ ಯುಪಿಐ ಕೋಡ್‌ ಮೂಲಕ ಬಾಡಿಗೆ ಹಣ ಸ್ವೀಕರಿಸಿ ಆಟೋ ಚಾಲಕರೊಬ್ಬರು ಗಮನ ಸೆಳೆದಿದ್ದರು. ಇದೀಗ ಮತ್ತೊಬ್ಬ ಆಟೋ ಚಾಲಕ, ಶಾಲೆ ತೊರೆದು ಬರೋಬ್ಬರಿ 37 ವರ್ಷಗಳ ನಂತರ ಪಿಯುಸಿ ಪರೀಕ್ಷೆ ಬರೆದಿರುವುದು ಕಂಡುಬಂದಿದೆ. ಸದ್ಯ ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral News) ಆಗಿದ್ದು, ಆಟೋ ಚಾಲಕನ ಓದುವ ಹಂಬಲದ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಹೌದು, ಬೆಂಗಳೂರಿನ ಆಟೋ ಚಾಲಕ ಭಾಸ್ಕರ್‌ ಎಂಬುವವರು ನಾಲ್ಕು ದಶಕದ ಬಳಿಕ ಪಿಯುಸಿ ಪರೀಕ್ಷೆ ಬರೆದಿದ್ದಾರೆ. ಉನ್ನತ ಶಿಕ್ಷಣ ಪಡೆದು ಒಳ್ಳೆಯ ಉದ್ಯೋಗ ಪಡೆಯಬೇಕು ಎಂಬುವುದು ಎಲ್ಲರ ಕನಸಾಗಿರುತ್ತದೆ. ಅದಕ್ಕಾಗಿ ವಿದ್ಯಾರ್ಥಿಗಳು ಪ್ರಯತ್ನಿಸುತ್ತಾರೆ. ಆದರೆ, ಮದುವೆಯಾದ ಮೇಲೆ ವಿದ್ಯಾಭ್ಯಾಸ ಮುಂದುವರಿಸುವವರ ಸಂಖ್ಯೆ ಬಹಳ ಕಡಿಮೆ. ಇಂತಹುದರಲ್ಲಿ ದೀರ್ಘಕಾಲದ ಬಳಿಕ ಮತ್ತೆ ಉನ್ನತ ಶಿಕ್ಷಣ ಪಡೆಯಲು 50 ವರ್ಷದ ಆಟೋ ಚಾಲಕ ಮುಂದಾಗಿದ್ದಾರೆ.

ಇದನ್ನೂ ಓದಿ | Viral Video: ಯುಪಿಯಲ್ಲಿ ಹುಡುಗಿಯನ್ನು ಚುಡಾಯಿಸಿ, ಆಕೆ ಸಾವಿಗೆ ಕಾರಣರಾದವರ ಕಾಲಿಗೆ ಬಿತ್ತು ಗುಂಡು!

ಆಟೋ ಚಾಲಕ ಭಾಸ್ಕರ್‌ ಆ.26ರಂದು ಪಿಯುಸಿ ಇಂಗ್ಲಿಷ್‌ ಪರೀಕ್ಷೆ ಬರೆದಿದ್ದರು. ಈ ಬಗ್ಗೆ ಆಟೋದಲ್ಲಿ ಪ್ರಯಾಣಿಸಿದ್ದ ನಿಧಿ ಅಗರ್ವಾಲ್‌ ಎಂಬುವವರು ಟ್ವೀಟ್‌ ಮಾಡಿದ್ದಾರೆ. 1985ರಲ್ಲಿ ಎಸ್‌ಎಸ್‌ಎಲ್‌ಸಿ ಮುಗಿಸಿದ್ದ ಆಟೋ ಚಾಲಕ ಭಾಸ್ಕರ್‌ ಅವರು ಇಂದು ಪಿಯುಸಿ ಪರೀಕ್ಷೆ ಬರೆದು ಬಂದಿದ್ದಾರೆ. ಅವರಿಗೆ ಇಬ್ಬರು ಮಕ್ಕಳಿದ್ದು, ಒಬ್ಬರು 3ನೇ ತರಗತಿ, ಮತ್ತೊಬ್ಬರು 6ನೇ ತರಗತಿ. ಅವರ ನಗು ನಿಜವಾಗಿಯೂ ಪ್ರೇರಣದಾಯಕ ಎಂದು ತಿಳಿಸಿದ್ದಾರೆ.

ಆಟೋರಿಕ್ಷಾ ಚಾಲಕನಿಗೆ ವೈಯಕ್ಕ್ತಿಕ ಕಾರಣಗಳಿಂದ ನಾಲ್ಕು ದಶಕದ ಹಿಂದೆ ಶಿಕ್ಷಣ ಪೂರೈಸಲು ಆಗಿರಲಿಲ್ಲ. ಈಗ ಓದುವ ಹಂಬಲ ಬಂದಿದ್ದು, ಪಿಯುಸಿ ಪರೀಕ್ಷೆಯನ್ನೂ ಬರೆದಿದ್ದಾರೆ. ಸದ್ಯ ಪದವಿ ಶಿಕ್ಷಣ ಪಡೆಯುವ ತಯಾರಿಯಲ್ಲೂ ಇದ್ದಾರೆ.

ಇದನ್ನೂ ಓದಿ | Vicky Pedia: ʻನಂದಿನಿʼ ನಾಗವಲ್ಲಿ ಆದಾಗ; ದೆವ್ವಕ್ಕೆ ಸ್ಪಲ್ಪ ರೆಸ್ಪೆಕ್ಟ್‌ ಕೊಡಿ ಅಂದ್ರು ನೆಟ್ಟಿಗರು!

ನಿಧಿ ಅಗರ್ವಾಲ್‌ ಅವರ ಪೋಸ್ಟ್‌ ಅನ್ನು ಹಲವರು ಲೈಕ್‌ ನೀಡಿ ಕಮೆಂಟ್‌ ಮಾಡಿದ್ದಾರೆ. ಆಟೋ ಚಾಲಕನ ಬಗ್ಗೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಮತ್ತೆ ಕೆಲವರು ಉನ್ನತ ಶಿಕ್ಷಣ ಪಡೆಯಲು ಚಾಲಕನಿಗೆ ಹಣಕಾಸು ಸಹಾಯ ಮಾಡುವುದಾಗಿಯೂ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Road Accident : ಆಕ್ಸೆಲ್ ಕಟ್‌ ಆಗಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್‌; 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ

Road Accident : ಬೆಳಗಾವಿಯಲ್ಲಿ ಶಾಲಾ ಮಕ್ಕಳೇ ಅಧಿಕವಾಗಿದ್ದ ಬಸ್‌ ಒಂದು ಆಕ್ಸೆಲ್‌ ಕಟ್‌ ಆಗಿ ಪಲ್ಟಿಯಾಗಿದೆ. ಶಾಲೆಗೆ ಹೊರಟಿದ್ದ 20ಕ್ಕೂ ಅಧಿಕ ಮಕ್ಕಳು ಗಾಯಗೊಂಡಿದ್ದಾರೆ.

VISTARANEWS.COM


on

Edited by

Bus Overturns after axel cut near Belagavi
ಆಕ್ಸೆಲ್‌ ಕಟ್‌ ಆಗಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್‌
Koo

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ಬಸ್‌ ಒಂದು ಆ‌ಕ್ಸೆಲ್‌ ಕಟ್‌ (Bus overturns after Axel cut) ಆಗಿ ಪಲ್ಟಿಯಾದ (Road accident) ಪರಿಣಾಮ 20ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Accident near Ramadurga

ಚಿಕ್ಕೊಪ್ಪ ಗ್ರಾಮದಿಂದ ರಾಮದುರ್ಗಕ್ಕೆ ಹೊರಟಿದ್ದ ಬಸ್ ಇದಾಗಿದ್ದು, ಇದರಲ್ಲಿ 50ಕ್ಕೂ ಅಧಿಕ ಪ್ರಯಾಣಿಕರು ಇದ್ದರು. ರಾಮದುರ್ಗಕ್ಕೆ ಹೋಗುತ್ತಿದ್ದ ಬಸ್ ಚಲಿಸುತ್ತಿದ್ದಾಗಲೇ ಬಸ್‌ನ ಆಕ್ಸೆಲ್‌ ಕಟ್ ಆಗಿದೆ. ಆಕ್ಸೆಲ್‌ ಕಟ್‌ ಆದ ಕೂಡಲೇ ನಿಯಂತ್ರಣ ಕಳೆದುಕೊಂಡ ಬಸ್‌ ಮರಕ್ಕೆ ಡಿಕ್ಕಿ ಹೊಡೆದಿದೆ. ಮರಕ್ಕೆ ಡಿಕ್ಕಿ ಹೊಡೆದ ಬಸ್‌ ಅಲ್ಲೇ ಪಲ್ಟಿಯಾಗಿದೆ.

Ramadurga accident Axel cut scene

ಬೆಳಗ್ಗಿನ ಹೊತ್ತಾಗಿರುವುದರಿಂದ ಬಸ್‌ನಲ್ಲಿ ವಿದ್ಯಾರ್ಥಿಗಳೇ ಹೆಚ್ಚಾಗಿದ್ದರು. ಗ್ರಾಮಸ್ಥರು ಕೂಡಲೇ ಅಂಬ್ಯುಲೆನ್ಸ್‌ಗೆ ಕರೆ ಮಾಡಿ ಗಾಯಾಗಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು. ಹಲವರಿಗೆ ಗಾಯಗಳಾಗಿದ್ದರು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನುವುದು ಸಮಾಧಾನದ ವಿಷಯ. ಕಟಕೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Bangalore rain : ಮನೆ ಮುಂದೆ ವಾಕ್‌ ಮಾಡುತ್ತಿದ್ದಾಗ ಉರುಳಿದ ಮರ; ತಾಯಿ ಮೃತ್ಯು, 5 ವರ್ಷದ ಮಗು ಗಂಭೀರ

ಆಟೋಗೆ ಶಾಲಾ ಬಸ್‌ ಡಿಕ್ಕಿ, ಐವರ ದುರ್ಮರಣ

ಮಂಗಳೂರು: ಶಾಲಾ ಬಸ್ ಹಾಗೂ ಆಟೋ ನಡುವೆ (bus auto accident) ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಪ್ರಯಾಣಿಕರು ದುರ್ಮರಣ ಹೊಂದಿದ ಘಟನೆ (Road Accident) ಕೇರಳ- ಕರ್ನಾಟಕ ಗಡಿಭಾಗದಲ್ಲಿ ನಡೆದಿದೆ.

bus auto accident

ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕ ಸಮೀಪ ಈ ದುರ್ಘಟನೆ ನಿನ್ನೆ ಸಂಜೆ ವೇಳೆ ನಡೆದಿದೆ. ಕಾಸರಗೋಡಿನ ಮೊಗ್ರಾಲ್ ಪುತ್ತೂರು ಎಂಬಲ್ಲಿನ ಆಟೋ ರಿಕ್ಷಾಗೆ ಪೆರ್ಲ ಸಮೀಪದ ಆಂಗ್ಲ ಮಾಧ್ಯಮ ಶಾಲೆಯ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಆಟೋ ಸಂಪೂರ್ಣ ಛಿದ್ರವಾಗಿದ್ದು, ಆಟೋದಲ್ಲಿದ್ದ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಸಾವಿಗೀಡಾಗಿದ್ದಾರೆ. ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಸ್‌ ಪಲ್ಟಿಯಾಗಿ 10 ಜನರಿಗೆ ಗಾಯ

ವಿಜಯನಗರ: ಖಾಸಗಿ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ವಿಜಯನಗರದ MB ಅಯ್ಯನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಗಾಯಗೊಂಡ ಡ್ರೈವರ್ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರಿನಿಂದ ಕಲ್ಬುರ್ಗಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರಗೆ ದಾಖಲು ಮಾಡಲಾಗಿದೆ. ಕಾನಾಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

ಕರ್ನಾಟಕ

Bangalore Bandh : ಪ್ರತಿಭಟನಾಕಾರರ ಬಂಧನಕ್ಕೆ ಎಚ್‌ಡಿಕೆ ಕೆಂಡಾಮಂಡಲ; ಇದು ಸ್ಟಾಲಿನ್‌ನ ಬಾಡಿಗೆ ಸರ್ಕಾರವೇ?

Bangalore Bandh: ಕಾವೇರಿ ನೀರು ಬಿಡುಗಡೆ ವಿರುದ್ಧ ಪ್ರತಿಭಟನೆ ನಡೆಸಿದ ಹೋರಾಟಗಾರರು ಮತ್ತು ನಾಯಕರನ್ನು ಬಂಧಿಸಿದ್ದನ್ನು ಮಾಜಿ ಸಿಎಂ ಕುಮಾರಸ್ವಾಮಿ ಖಂಡಿಸಿದ್ದಾರೆ. ಇದು ಸ್ಟಾಲಿನ್‌ನ ಬಾಡಿಗೆ ಸರ್ಕಾರವೇ ಎಂದು ಕೇಳಿದ್ದಾರೆ.

VISTARANEWS.COM


on

Edited by

HD Kumaraswamy Bandh
ಹೋರಾಟಗಾರರನ್ನು ಬಂಧಿಸಿದ್ದಕ್ಕೆ ಕುಮಾರಸ್ವಾಮಿ ಆಕ್ರೋಶ
Koo

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರುದ್ಧ (Cauvery Water Dispute) ಬೆಂಗಳೂರು ಬಂದ್‌ಗೆ (Bangalore Bandh) ಕರೆ ನೀಡಿದವರು ಮತ್ತು ಬೆಂಬಲ ನೀಡಿದ ಸಂಘಟನೆಗಳ ನಾಯಕರು ಮತ್ತು ಕಾರ್ಯಕರ್ತರನ್ನು ಬಂಧಿಸುತ್ತಿರುವ (Protesters and Leaders deatained) ಸರ್ಕಾರದ ಕ್ರಮದ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ (HD Kumaraswamy) ಕೆಂಡಾಮಂಡಲರಾಗಿದ್ದಾರೆ.

ಮೇಕೆದಾಟು ಪಾದಯಾತ್ರೆ ಮಾಡಿದವರು ಈಗ ಕಾವೇರಿಗಾಗಿ ಬೀದಿಗಿಳಿದು ಹೋರಾಟ ಮಾಡುತ್ತಿರುವುದು ಕಿಡಿಗೇಡಿತನದ ಪರಮಾವಧಿ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಇದು ಕನ್ನಡಿಗರ ಸರ್ಕಾರವೋ, ಸ್ಟಾಲಿನ್‌ನ ಬಾಡಿಗೆ ಸರ್ಕಾರವೋ? ಕಾಂಗ್ರೆಸ್‌ ಡಿಎಂಕೆಯ ಬಿ ಟೀಮಾ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಬೆಂಗಳೂರು_ಬಂದ್‌ ಕಾವೇರಿ_ನಮ್ಮದು ಎಂಬ ಹ್ಯಾಷ್‌ ಟ್ಯಾಗ್‌ನಲ್ಲಿ ಅವರು ಟ್ವೀಟ್‌ ಮಾಡಿದ್ದಾರೆ.

ಕಾಂಗ್ರೆಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಒಂದು ನ್ಯಾಯವೇ

ಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಕರ್ನಾಟಕದ ಕಾಂಗ್ರೆಸ್ ಸರಕಾರದ ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ?- ಎಂದು ಕುಮಾರಸ್ವಾಮಿ ಕೇಳಿದ್ದಾರೆ.

ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ಮಾಡಬಾರದೇ?

ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದಾದರೆ, ನಾಡಿನ ಜೀವನಾಡಿ ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ನಡೆಸಬಾರದೇ? ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗರನ್ನು ಬಂಧಿಸಿರುವುದು ಖಂಡನೀಯ. ಇದೇನು ಕನ್ನಡಿಗರ ಸರಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರಕಾರವೋ? ಇಷ್ಟಕ್ಕೂ ಕನ್ನಡಿಗರು ಮತ ಹಾಕಿದ್ದು ಯಾರಿಗೆ?

ಇದನ್ನೂ ಓದಿ: Bangalore Bandh : ನಾಯಕರ ಪ್ರತಿಷ್ಠೆಯಿಂದ ಬೆಂಗಳೂರಿಗೆ ಡಬಲ್‌ ಬಂದ್‌ ಬಿಸಿ, ಬೇಕಿತ್ತಾ ಎರಡೆರಡು ಬಂದ್‌?

ಹೋರಾಟಗಾರರನ್ನು ಕೂಡಲೇ ಬಿಡುಗಡೆ ಮಾಡಿ ಎಂದ ಎಚ್‌ಡಿಕೆ

ಹೋರಾಟಗಾರರು, ರೈತರನ್ನು ಕೂಡಲೇ ಬಂಧಮುಕ್ತಗೊಳಿಸಬೇಕು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಪಕ್ಷವು ಡಿಎಂಕೆ ಪಕ್ಷದ ಬಿ ಟೀಂ ಆಗಿ ಪರಿವರ್ತನೆ ಆದ ಪರಿಣಾಮವೇ ಈ ಕಾವೇರಿ ಬಿಕ್ಕಟ್ಟು ಎನ್ನುವುದು ಕನ್ನಡಿಗರಿಗೆ ಈಗ ಸ್ಪಷ್ಟವಾಗಿ ಅರ್ಥವಾಗಿದೆ ಎಂದಿದ್ದಾರೆ.

ಇದನ್ನೂ ಓದಿ: Bangalore Bandh : ಮೈಸೂರು ಬ್ಯಾಂಕ್‌ ಸರ್ಕಲ್‌ನಲ್ಲಿ ಪ್ರತಿಭಟನೆ: ಕುರುಬೂರು ಶಾಂತ ಕುಮಾರ್‌ ಪೊಲೀಸ್‌ ವಶಕ್ಕೆ

ರಾತ್ರೋರಾತ್ರಿ 150ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರು ಬಂದ್‌ ಹಿನ್ನೆಲೆಯಲ್ಲಿ ಹಿಂದೆ ಬಂದ್‌ ವೇಳೆ ಗಲಾಟೆಗೆ ಕಾರಣರಾಗಿದ್ದ ಕೆಲವು ನಾಯಕರು ಮತ್ತು ರೌಡಿ ಶೀಟರ್‌ಗಳನ್ನು ಪೊಲೀಸರು ಬಂಧಿಸಿದ್ದರು.

ʻʻಹಳೆ ಪ್ರಕರಣಗಳಲ್ಲಿ ಇನ್ವಾಲ್ ಆಗಿದ್ದ ರೌಡಿಶೀಟರ್‌ಗಳನ್ನು ಕಸ್ಟಡಿಗೆ ತಗೊಂಡಿದ್ದೇವೆ. ನಿನ್ನೆ ರಾತ್ರಿನೇ ಹಳೆ ಕೇಸ್ ಗಳಲ್ಲಿ ಭಾಗಿಯಾಗಿದ್ದ 150 ಜನರನ್ನ ವಶಕ್ಕೆ ಪಡೆದಿದ್ದೇವೆ. ಅದು ಇವತ್ತು ತುಂಬಾನೇ ಹೆಲ್ಪ್ ಆಗಿದೆ. ಬೆಳಗ್ಗೆ 4 ಘಂಟೆಯಿಂದಲೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು. ಒಂದಷ್ಟು ಲೀಡರ್‌ಗಳನ್ನು ವಶಕ್ಕೆ ಪಡೆದಿದ್ದೇವೆ. ಎಲ್ಲಾ ರೀತಿಯ ಭದ್ರತೆ ವಹಿಸಿದ್ದೇವೆʼʼ ಎಂದು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಹೇಳಿದ್ದಾರೆ.

ಜಲಸಂರಕ್ಷಣಾ ಸಮಿತಿಯ ಕುರುಬೂರು ಶಾಂತ ಕುಮಾರ್‌ ಸೇರಿದಂತೆ ಹಲವಾರು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಎಲ್ಲ ನಾಯಕರನ್ನು ಫ್ರೀಡಂ ಪಾರ್ಕ್‌ಗೆ ತಂದು ಬಿಡಲಾಗುತ್ತಿದ್ದು, ಅಲ್ಲಿಂದ ಹೊರಗೆ ಹೋಗಲು ಬಿಡುತ್ತಿಲ್ಲ.

Continue Reading

ತುಮಕೂರು

Road Accident: ಮಧುಗಿರಿಯಲ್ಲಿ ಕಾರಿಗೆ ಲಾರಿ ಡಿಕ್ಕಿ, ಮೂವರ ಸಾವು

ಬೆಂಗಳೂರಿನಿಂದ ಪಾವಗಡ ಕಡೆ ತೆರಳುತ್ತಿದ್ದ ಕಾರಿಗೆ ಪಾವಗಡದಿಂದ ತುಮಕೂರು ಕಡೆ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ (Road Accident). ಡಿಕ್ಕಿಯ ಪರಿಣಾಮ ಕಾರು ನಜ್ಜುಗುಜ್ಜಾಗಿದೆ.

VISTARANEWS.COM


on

Edited by

madhugiri accident
Koo

ತುಮಕೂರು: ಕಾರಿಗೆ ಲಾರಿ ಡಿಕ್ಕಿಯಾದ (lorry car crash) ಪರಿಣಾಮ ಮೂವರು ಪ್ರಯಾಣಿಕರು ಸ್ಥಳದಲ್ಲಿಯೇ ಸಾವಿಗೀಡಾದ ದುರ್ಘಟನೆ (Road Accident) ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ನಡೆದಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆಕಾಶ್ (20), ಹೇಮಂತ್ (28) ಹಾಗೂ ಶಿವಕುಮಾರ್ ಸಾವಿಗೀಡಾದವರು. ಉಜ್ವಲ್ ಕೃಷ್ಣ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.

ಬೆಂಗಳೂರಿನಿಂದ ಪಾವಗಡ ಕಡೆ ತೆರಳುತ್ತಿದ್ದ ಕಾರಿಗೆ ಪಾವಗಡದಿಂದ ತುಮಕೂರು ಕಡೆ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಮೃತರೆಲ್ಲರೂ ಪಾವಗಡ ಮೂಲದವರು ಎಂಬ ಮಾಹಿತಿ ದೊರೆತಿದೆ. ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಆಟೋಗೆ ಶಾಲಾ ಬಸ್‌ ಡಿಕ್ಕಿ, ಐವರ ದುರ್ಮರಣ

ಮಂಗಳೂರು: ಶಾಲಾ ಬಸ್ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಪ್ರಯಾಣಿಕರು ದುರ್ಮರಣ ಹೊಂದಿದ ಘಟನೆ ಕೇರಳ- ಕರ್ನಾಟಕ ಗಡಿಭಾಗದಲ್ಲಿ ನಡೆದಿದೆ.

ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕ ಸಮೀಪ ಈ ದುರ್ಘಟನೆ ನಿನ್ನೆ ಸಂಜೆ ವೇಳೆ ನಡೆದಿದೆ. ಕಾಸರಗೋಡಿನ ಮೊಗ್ರಾಲ್ ಪುತ್ತೂರು ಎಂಬಲ್ಲಿನ ಆಟೋ ರಿಕ್ಷಾಗೆ ಪೆರ್ಲ ಸಮೀಪದ ಆಂಗ್ಲ ಮಾಧ್ಯಮ ಶಾಲೆಯ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಆಟೋ ಸಂಪೂರ್ಣ ಛಿದ್ರವಾಗಿದ್ದು, ಆಟೋದಲ್ಲಿದ್ದ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರು ಸಾವಿಗೀಡಾಗಿದ್ದಾರೆ. ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬಸ್‌ ಪಲ್ಟಿಯಾಗಿ 10 ಜನರಿಗೆ ಗಾಯ

ವಿಜಯನಗರ: ಖಾಸಗಿ ಬಸ್ ಪಲ್ಟಿಯಾಗಿ 10ಕ್ಕೂ ಹೆಚ್ಚು ಜನರಿಗೆ ಗಾಯವಾದ ಘಟನೆ ವಿಜಯನಗರದ MB ಅಯ್ಯನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಗಾಯಗೊಂಡ ಡ್ರೈವರ್ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರಿನಿಂದ ಕಲ್ಬುರ್ಗಿಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರಗೆ ದಾಖಲು ಮಾಡಲಾಗಿದೆ. ಕಾನಾಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Road Accident : ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸವಾರರು ದಾರುಣ ಸಾವು

Continue Reading

ಕರ್ನಾಟಕ

Bangalore Bandh: ತಮಿಳುನಾಡು ಬಸ್‌ಗಳು ಗಡಿ ಭಾಗದಿಂದಲೇ ವಾಪಸ್‌, ಬಾಯ್‌ ಬಾಯ್‌ ಎಂದ ಕಂಡಕ್ಟರ್

Bangalore Bandh: ಬೆಂಗಳೂರು ಬಂದ್‌ ಹಿನ್ನೆಲೆಯಲ್ಲಿ ತಮಿಳುನಾಡಿನಿಂದ ಬರುವ ಬಸ್‌ಗಳು ಗಡಿಭಾಗದಿಂದಲೇ ಮರಳುತ್ತಿವೆ. ಯಾವುದೇ ಸಮಸ್ಯೆ ಬೇಡ ಎಂದು ಮುನ್ನೆಚ್ಚರಿಕೆ ವಹಿಸುತ್ತಿವೆ.

VISTARANEWS.COM


on

Edited by

Bangalore bandh Attibele border
ತಮಿಳುನಾಡು-ಕರ್ನಾಟಕ ಗಡಿಭಾಗವಾದ ಅತ್ತಿಬೆಲೆಯಲ್ಲಿ ಭದ್ರತೆ
Koo

ಆನೇಕಲ್‌ ಬೆಂಗಳೂರು: ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವುದನ್ನು ತಕ್ಷಣವೇ ನಿಲ್ಲಿಸಬೇಕು (Cauvery water Dispute) ಎಂದು ಆಗ್ರಹಿಸಿ ಕರೆ ನೀಡಲಾಗಿರುವ ಬೆಂಗಳೂರು ಬಂದ್‌ಗೆ (Bangalore bandh) ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ನಡುವೆ, ತಮಿಳುನಾಡಿನಿಂದ ಬೆಂಗಳೂರಿಗೆ ಆಗಮಿಸುತ್ತಿರುವ ಬಸ್‌ಗಳು (Tamilnadu-Bangalore bus) ಗಡಿ ಭಾಗದಿಂದಲೇ ಹಿಂದಕ್ಕೆ ಮರಳುತ್ತಿವೆ (Buses returning from border).

ತಮಿಳುನಾಡು-ಕರ್ನಾಟಕ ಗಡಿಭಾಗವಾದ ಅತ್ತಿಬೆಲೆಯಲ್ಲಿ (Attibele Border) ಭಾರಿ ಬಂದೋಬಸ್ತ್‌ ಏರ್ಪಡಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ತಮಿಳುನಾಡು ಕಡೆಯಿಂದ ಬರುತ್ತಿರುವ ಬಸ್‌ಗಳು ಅತ್ತಿ ಬೆಲೆಯ ಗಡಿ ಭಾಗದಿಂದಲೆ ವಾಪಸ್‌ ತೆರಳುತ್ತಿವೆ. ಹೀಗೆ ತಿರುಗಿಸಿಕೊಂಡು ಹೋಗುವಾಗ ತಮಿಳುನಾಡು ಬಸ್ಸಿನ ಕಂಡಕ್ಟರ್‌ ಅವರು ಒಬ್ಬರು ಕರ್ನಾಟಕದವರ ಕಡೆಗೆ ಕೈ ಬೀಸಿ ಬಾಯ್‌ ಬಾಯ್‌ ಎನ್ನುತ್ತಲೇ ಶುಭ ಹಾರೈಸಿದ್ದು ಕಂಡುಬಂತು.

Bangalore bandh attibele border bus conductor wishing
ತಮಿಳುನಾಡಿಗೆ ಟರ್ನ್‌ ತೆಗೆದುಕೊಳ್ಳುತ್ತಿರುವ ಬಸ್‌ ಬಾಯ್‌ ಎನ್ನುತ್ತಿರುವ ಕಂಡಕ್ಟರ್‌

ತಮಿಳುನಾಡಿನಿಂದ ಬರುವ ಬಸ್ ಗಳು ಗಡಿಭಾಗದವರೆಗೆ ಪ್ರಯಾಣಿಕರನ್ನ ಬಿಟ್ಟು ಅಲ್ಲಿಂದ ವಾಪಸ್ ಆದರೆ, ಇತ್ತ ಅತ್ತಿಬೆಲೆಯಿಂದ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಪ್ರಯಾಣಿಕರು ಬೆಂಗಳೂರಿನತ್ತ ಬರುತ್ತಿದ್ದಾರೆ.

ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ಗಳು ಸಹ ಅತ್ತಿಬೆಲೆ ಗಡಿಭಾಗದವರೆಗೆ ಮಾತ್ರ ಸಂಚಾರ ಮಾಡುತ್ತಿವೆ. ಅಲ್ಲಿಂದ ಆಚೆಗೆ ತಮಿಳುನಾಡಿನ ಬಸ್‌ಗಳನ್ನೇ ಆಶ್ರಯಿಸುತ್ತಿದ್ದಾರೆ.

ಇದನ್ನೂ ಓದಿ : Bangalore Bandh : ಬೆಂಗಳೂರಿನ ಈ ಭಾಗದಲ್ಲಿ ಪ್ರತಿಭಟನೆ ಜೋರು, ಆ ಕಡೆ ಹೋಗುವಾಗ ಹುಷಾರು

ಹೇಗೆ ನಡೆಯುತ್ತಿದೆ ಬೆಂಗಳೂರು ಬಂದ್‌?

ಕಾವರಿ ನೀರಿನ ವಿಚಾರದಲ್ಲಿ (Cauvery protest) ಕನ್ನಡಿಗರಿಗೆ ಆಗಿರುವ ಅನ್ಯಾಯ ಹಾಗೂ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ಭುಗಿಲೆದ್ದಿದ್ದು, ಬೆಂಗಳೂರು ಬಂದ್‌ (Bangalore Bandh) ಇಂದು ಮುಂಜಾನೆಯಿಂದ ಆರಂಭವಾಗಿದೆ.

ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಮತ್ತು ಇತರ ಸಂಘಟನೆಗಳು ಇಂದು (ಸೆ.26) ಬೆಂಗಳೂರು ಬಂದ್ (Bangalore Bandh) ಆಚರಿಸುತ್ತಿದೆ. ಈ ಬಂದ್‌ಗೆ 100ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಬಿಜೆಪಿ ಹಾಗೂ ಜೆಡಿಎಸ್‌ ಬಂದ್‌ಗೆ ಬೆಂಬಲ ಸೂಚಿಸಿರುವುದರಿಂದ ಪ್ರತಿಭಟನೆಯ ಕಾವು ಜೋರಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಬೆಂಗಳೂರು ಬಂದ್ ಆಚರಿಸಲಾಗುತ್ತಿದ್ದು, ಸಂಜೆ 6 ಗಂಟೆಯವರೆಗೂ ಬಂದ್ ಮುಂದುವರಿಯಲಿದೆ.

ಮೆಟ್ರೋ ಎಂದಿನಂತೆ ಕಾರ್ಯಾಚರಿಸಿತು. ಮೆಟ್ರೋದ ಎಲ್ಲ ಲೈನ್‌ಗಳೂ ಪೂರ್ಣವಾಗಿ ಕಾರ್ಯಾಚರಿಸಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಪ್ರಯಾಣಿಕರಿದ್ದರು. ಮೆಜೆಸ್ಟಿಕ್ ಬಸ್ ನಿಲ್ದಾಣ ಖಾಲಿ ಖಾಲಿಯಾಗಿತ್ತು. ಬಸ್‌ಗಳು ಎಂದಿನಂತೆ ಸಂಚಾರಕ್ಕೆ ಸಿದ್ಧಚಾಗಿದ್ದರೂ ಜನ ಬೀದಿಗಿಳಿಯಲಿಲ್ಲ. ಸದ್ಯ ಬಸ್‌ಗಳ ಸಂಖ್ಯೆ ಇಳಿಸಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದೇವನಹಳ್ಳಿ ವಿಮಾನ ನಿಲ್ದಾಣ

ಅತ್ತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜನಸಂದಣಿ ತುಂಬಿ ತುಳುಕಿತು. ಮಧ್ಯಾಹ್ನ ಹಾಗೂ ಸಂಜೆ ವಿಮಾನ ಪ್ರಯಾಣದ ಸಮಯ ಹೊಂದಿದ್ದವರು ಕೂಡ, ಬಂದ್‌ ಜೋರಾದರೆ ಎಂಬ ಆತಂಕದಿಂದ ಮುಂಜಾನೆ ಆರು ಗಂಟೆಗೇ ನಿಲ್ದಾಣಕ್ಕೆ ಧಾವಿಸಿ ಬೀಡುಬಿಟ್ಟರು. ಯಾವುದೇ ವಿಮಾನ ಹಾರಾಟ ವ್ಯತ್ಯಯವಾಗಿಲ್ಲ. ಟ್ಯಾಕ್ಸಿ ಹಾಗೂ ಕ್ಯಾಬ್‌ಗಳು ಕಾರ್ಯಾಚರಿಸುತ್ತಿವೆ.

ಜನಜಂಗುಳಿಯಿಂದ ಗಿಜಿಗುಡುತ್ತಿದ್ದ ಕೆಆರ್ ಮಾರ್ಕೆಟ್ ಇಂದು ಬಿಕೋ ಎನ್ನುತ್ತಿದೆ. ವಿರಳ ಸಂಖ್ಯೆಯಲ್ಲಿ ವಾಹನಗಳ ಓಡಾಟ ಇದೆ. ಬೀದಿ ಬದಿ ವ್ಯಾಪಾರಿಗಳಿಗೆ ಬಂದ್ ಬಿಸಿ ತಟ್ಟಿದ್ದು, ಬಹುತೇಕ ಅಂಗಡಿ, ಮುಂಗಟ್ಟುಗಳು ಬಂದ್ ಆಗಿವೆ. ಬೀದಿಬದಿ ಅಂಗಡಿಗಳಲ್ಲಿ ಗ್ರಾಹಕರ ಸಂಖ್ಯೆ ಇಳಿಕೆಯಾಗಿದೆ. ಹೂ, ಸೊಪ್ಪು, ತರಕಾರಿ ವ್ಯಾಪಾರ ಕೂಡ ಡಲ್ ಆಗಿದೆ.

bangalore Bandh kuruburu deatained

ಫ್ರೀಡಂ ಪಾರ್ಕ್‌ನಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ಆಯೋಜನೆಯಾಗಿದ್ದು, ಅವರನ್ನು ಪೊಲೀಸರು ತಡೆದು ನಿಲ್ಲಿಸಿದರು. ಪ್ರತಿಭಟನಾಕಾರರಿಂದ ಅರೆ ಬೆತ್ತಲೆ ಪ್ರತಿಭಟನೆ ನಡೆಯಿತು. ಫ್ರೀಡಂ ಪಾರ್ಕ್‌ಗೆ ಖಾಲಿ ಬಿಂದಿಗೆ ಹಿಡಿದು ಬಂದ ಪ್ರತಿಭಟನಾಕಾರರು ಅರೆ ಬೆತ್ತಲೆಯಾಗಿ ಪ್ರತಿಭಟಿಸಿದರು. ಫ್ರೀಡಂ ಪಾರ್ಕ್ ಸುತ್ತ ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕಾವೇರಿ ಹೋರಾಟ ಒಕ್ಕೂಟದಿಂದ ಟೌನ್ ಹಾಲ್‌ಗೆ ರ್ಯಾಲಿ ಏರ್ಪಡಿಸಲಾಗಿದ್ದು, ಅಲ್ಲಿಯೂ ಪೊಲೀಸ್‌ ಬಂದೋಬಸ್ತ್‌ ಹಾಕಲಾಗಿದೆ. ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿರುವ ಹೋರಾಟಗಾರರು ಬಾಪೂಜಿನಗರ ಮುಖ್ಯದ್ವಾರದ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.

Continue Reading
Advertisement
manipur
ದೇಶ1 min ago

Manipur Horror: ಮೈತಿ ವಿದ್ಯಾರ್ಥಿಗಳಿಬ್ಬರ ಶವಗಳ ಫೋಟೊ ವೈರಲ್;‌ ಮಣಿಪುರ ಮತ್ತೆ ಉದ್ವಿಗ್ನ?

Bus Overturns after axel cut near Belagavi
ಕರ್ನಾಟಕ10 mins ago

Road Accident : ಆಕ್ಸೆಲ್ ಕಟ್‌ ಆಗಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್‌; 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ

Saurashtra Cricket Association Stadium Rajkot
ಕ್ರಿಕೆಟ್23 mins ago

IND vs AUS 3rd ODI: ರಾಜ್​ಕೋಟ್​ನ​ ಪಿಚ್​ ರಿಪೋರ್ಟ್​ ದಾಖಲೆಯೇ ವಿಚಿತ್ರ

HD Kumaraswamy Bandh
ಕರ್ನಾಟಕ33 mins ago

Bangalore Bandh : ಪ್ರತಿಭಟನಾಕಾರರ ಬಂಧನಕ್ಕೆ ಎಚ್‌ಡಿಕೆ ಕೆಂಡಾಮಂಡಲ; ಇದು ಸ್ಟಾಲಿನ್‌ನ ಬಾಡಿಗೆ ಸರ್ಕಾರವೇ?

madhugiri accident
ತುಮಕೂರು43 mins ago

Road Accident: ಮಧುಗಿರಿಯಲ್ಲಿ ಕಾರಿಗೆ ಲಾರಿ ಡಿಕ್ಕಿ, ಮೂವರ ಸಾವು

Bangalore bandh Attibele border
ಕರ್ನಾಟಕ58 mins ago

Bangalore Bandh: ತಮಿಳುನಾಡು ಬಸ್‌ಗಳು ಗಡಿ ಭಾಗದಿಂದಲೇ ವಾಪಸ್‌, ಬಾಯ್‌ ಬಾಯ್‌ ಎಂದ ಕಂಡಕ್ಟರ್

Rahul Dravid’s son
ಕ್ರಿಕೆಟ್1 hour ago

Vinoo Mankad Trophy: ಅಂಡರ್‌ 19 ಕರ್ನಾಟಕ ತಂಡಕ್ಕೆ ದ್ರಾವಿಡ್​ ಪುತ್ರ ಆಯ್ಕೆ

cauvery protest bng vv
ಕರ್ನಾಟಕ1 hour ago

Bangalore Bandh: ಬೆಂಗಳೂರು ಸ್ತಬ್ಧ: ರೈತರ ಅರೆಬೆತ್ತಲೆ ಪ್ರತಿಭಟನೆ, ಬಿಗಿ ಬಂದೋಬಸ್ತ್, ಶಾಲೆಗಳಿಗೆ ರಜೆ, ಬೀದಿಗಿಳಿಯದ ಜನ

Cauvery protest in Bangalore
ಕರ್ನಾಟಕ1 hour ago

Bangalore Bandh : ಬೆಂಗಳೂರಿನ ಈ ಭಾಗದಲ್ಲಿ ಪ್ರತಿಭಟನೆ ಜೋರು, ಆ ಕಡೆ ಹೋಗುವಾಗ ಹುಷಾರು

viral news kannada
ಕ್ರಿಕೆಟ್2 hours ago

Kapil Dev Kidnap: ವಿಶ್ವಕಪ್​ ವಿಜೇತ ನಾಯಕ ಕಪಿಲ್ ದೇವ್​ ಕಿಡ್ನಾಪ್​; ವಿಡಿಯೊ ವೈರಲ್​

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina Bhavishya
ಪ್ರಮುಖ ಸುದ್ದಿ6 hours ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ17 hours ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ19 hours ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ21 hours ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ22 hours ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ2 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

ಟ್ರೆಂಡಿಂಗ್‌