Assembly Session : 5 ವಿಧೇಯಕ ಪಾಸ್;‌ ಬಿಲ್‌ ಹರಿದು ಸ್ಪೀಕರ್‌ ಮುಖಕ್ಕೆಸೆದ ಬಿಜೆಪಿ-ಜೆಡಿಎಸ್! Vistara News

ಕರ್ನಾಟಕ

Assembly Session : 5 ವಿಧೇಯಕ ಪಾಸ್;‌ ಬಿಲ್‌ ಹರಿದು ಸ್ಪೀಕರ್‌ ಮುಖಕ್ಕೆಸೆದ ಬಿಜೆಪಿ-ಜೆಡಿಎಸ್!

Assembly Session : ವಿಪಕ್ಷಗಳ ಗದ್ದಲದ ನಡುವೆಯೂ ಐದು ತಿದ್ದುಪಡಿ ವಿಧೇಯಕಗಳಿಗೆ ಸದನದಲ್ಲಿ ಅಂಗೀಕಾರ ನೀಡಲಾಗಿದೆ. ಇದರಿಂದ ಬಿಜೆಪಿ ಹಾಗೂ ಜೆಡಿಎಸ್‌ ಕೆಂಡಾಮಂಡಲವಾಗಿದೆ. ವಿಪಕ್ಷಗಳ ಗದ್ದಲದ ನಡುವೆಯೂ ಅಂಗೀಕಾರ ನಡೆಸಿ ಚರ್ಚೆಗೆ ಸ್ಪೀಕರ್‌ (Vidhanasbha Speaker) ಅವಕಾಶ ನೀಡಿದ್ದರಿಂದ ಆಕ್ರೋಶಗೊಂಡ ಬಿಜೆಪಿ ಸದಸ್ಯರು, ವಿಧೇಯಕ ಪ್ರತಿಯನ್ನು (Copy of the Bill) ಹರಿದು ವಿಧಾನಸಭಾಧ್ಯಕ್ಷರ ಮುಖದ ಮೇಲೆ ಎಸೆದಿದ್ದಾರೆ.

VISTARANEWS.COM


on

BJP and JDS tore the bill and threw it in the speaker face
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಧಾನಮಂಡಲ ಅಧಿವೇಶನದಲ್ಲಿ (Assembly Session) ಬುಧವಾರ (ಜುಲೈ 19) ತೀವ್ರ ಗದ್ದಲ ಏರ್ಪಟ್ಟಿದೆ. ಐದು ತಿದ್ದುಪಡಿ ವಿಧೇಯಕಗಳನ್ನು ಸದನದಲ್ಲಿ ಅಂಗೀಕಾರ ಮಾಡಲಾಗಿದ್ದು, ಬಿಜೆಪಿ ಹಾಗೂ ಜೆಡಿಎಸ್‌ ಕೆಂಡಾಮಂಡಲವಾಗಿದೆ. ವಿಪಕ್ಷಗಳ ಗದ್ದಲದ ನಡುವೆಯೂ ಅಂಗೀಕಾರ ನಡೆಸಿ ಚರ್ಚೆಗೆ ಸ್ಪೀಕರ್‌ (Vidhanasbha Speaker) ಅವಕಾಶ ನೀಡಿದ್ದರಿಂದ ಆಕ್ರೋಶಗೊಂಡ ಬಿಜೆಪಿ ಸದಸ್ಯರು, ವಿಧೇಯಕ ಪ್ರತಿಯನ್ನು (Copy of the Bill) ಹರಿದು ವಿಧಾನಸಭಾಧ್ಯಕ್ಷರ ಮುಖದ ಮೇಲೆ ಎಸೆದಿದ್ದಾರೆ. ಇದೀಗ ಮತ್ತೊಂದು ಸುತ್ತಿನ ರಾಜಕೀಯ ಕೆಸರೆರಚಾಟಕ್ಕೆ ನಾಂದಿಯಾಗಿದೆ.

ವಿಧಾನ ಸಭೆಯಲ್ಲಿ ಸಚಿವ ಕೃಷ್ಣಬೈರೇಗೌಡ ಅವರು ಐದು ವಿಧೇಯಕಗಳನ್ನು ಮಂಡಿಸಿದರು. ಕೂಡಲೇ ಐದು ತಿದ್ದುಪಡಿ ವಿಧೇಯಕಗಳಿಗೆ ಒಪ್ಪಿಗೆ ನೀಡಲಾಯಿತು. ವಿಪಕ್ಷಗಳ ಗದ್ದಲದ ನಡುವೆಯೂ ಅಂಗೀಕಾರ ದೊರೆಯಿತು.

ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ, ಹಾಲು ಉತ್ಪಾದಕರಿಗೆ, ನೌಕರರಿಗೆ ಸೇವಾ ಭದ್ರತೆ ಒದಗಿಸುವ ವಿಧೇಯಕ, ಭೂ ಸುಧಾರಣೆ ತಿದ್ದುಪಡಿ ವಿಧೇಯಕ, ಕರ್ನಾಟಕ ಸಿವಿಲ್ ಪ್ರಕ್ರಿಯೆ ಸಂಹಿತೆ 2023 ವಿಧೇಯಕ ಹಾಗೂ ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣೆ ವಿಧೇಯಕಗಳಿಗೆ ಅಂಗೀಕಾರ ದೊರೆತಿದೆ.

BJP and JDS tore the bill and threw it in the speaker face  Assembly Session

ವಿಧೇಯಕಗಳ ಪ್ರತಿ ಹರಿದು ಬಿಸಾಡಿದ ಪ್ರತಿಪಕ್ಷಗಳು!

ಇದರಿಂದ ಪ್ರತಿಪಕ್ಷಗಳು ತೀವ್ರ ಆಕ್ರೋಶಗೊಂಡಿದ್ದು, ಧರಣಿ ತೀವ್ರಗೊಳಿಸಿವೆ. ಅಲ್ಲದೆ, ಪ್ರತಿಪಕ್ಷಗಳ ಸದಸ್ಯರು ವಿಧೇಯಕಗಳ ಪ್ರತಿಗಳನ್ನು ಹರಿದು ಬಿಸಾಡಿದ್ದಾರೆ. ಸ್ಪೀಕರ್ ಪೀಠದತ್ತ ಹರಿದ ಹಾಳೆಗಳನ್ನು ಬಿಜೆಪಿ, ಜೆಡಿಎಸ್ ಸದಸ್ಯರು ಎಸೆದಿದ್ದಾರೆ. ಈ ವೇಳೆ ಊಟಕ್ಕೆ ಬಿಡುವಂತೆ ಒತ್ತಾಯಿಸಿದ್ದಾರೆ. ಆದರೆ, ಊಟಕ್ಕೂ ಬಿಡದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಧರಣಿ ನಿರತ ಬಿಜೆಪಿ ಹಾಗೂ ಸದಸ್ಯರು, ಸ್ಪೀಕರ್ ಪೀಠದ ಬಳಿ ಜಮಾಯಿಸಿ ಹರಿದ ಹಾಳೆಯನ್ನು ಎಸೆದಿದ್ದಾರೆ.

BJP and JDS tore the bill and threw it in the speaker face Assembly Session

ಸ್ಪೀಕರ್ ಪೀಠದಲ್ಲಿ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರು ಕುಳಿತಿದ್ದರು. ಅವರ ಮುಖದ ಮೇಲೆಯೇ ಹರಿದ ಹಾಳೆಯನ್ನು ಬಿಜೆಪಿ, ಜೆಡಿಎಸ್‌ ಸದಸ್ಯರು ಎಸೆದಿದ್ದಾರೆ. ಈ ವೇಳೆ ಸ್ಪೀಕರ್ ರಕ್ಷಣೆಗೆ ಮಾರ್ಷಲ್‌ಗಳು ಬಂದಿದ್ದಾರೆ. ಬಿಜೆಪಿ-ಜೆಡಿಎಸ್‌ ಸದಸ್ಯರ ಗದ್ದಲ ಹೆಚ್ಚಾದ ಕಾರಣ ಕೊನೆಗೂ ಸದನವನ್ನು ಮುಂದೂಡಲಾಯಿತು.

ಕಾಂಗ್ರೆಸ್‌ ಆಕ್ಷೇಪ – ಸ್ಪೀಕರ್‌ ವಿರುದ್ಧ ನಿಲುವಳಿಗೆ ಮುಂದಾದ ಬಿಜೆಪಿ

ವಿಧೇಯಕದ ಪ್ರತಿಯನ್ನು ಸ್ಪೀಕರ್‌ ಮೇಲೆ ಎಸೆದ ಬಿಜೆಪಿ – ಜೆಡಿಎಸ್‌ ಸದಸ್ಯರ ವರ್ತನೆ ಬಗ್ಗೆ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದಲಿತ ಡೆಪ್ಯುಟಿ ಸ್ಪೀಕರ್‌ಗೆ ಬಿಜೆಪಿಯವರು ಅಪಮಾನ ಮಾಡಿದ್ದಾರೆ ಎಂದು ಸಚಿವ ಕೃಷ್ಣಬೈರೇಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಇದೇ ವೇಳೆ ಸ್ಪೀಕರ್ ನಿರ್ಧಾರವನ್ನು ಖಂಡಿಸಿದ ಪ್ರತಿಪಕ್ಷಗಳು, ವಿಧಾನಸಭಾಧ್ಯಕ್ಷರ ವಿರುದ್ಧ ನಿಲುವಳಿ ಸೂಚನೆ ಮಂಡಿಸಲು ನಿರ್ಧಾರವನ್ನು ಮಾಡಿವೆ.

BJP and JDS tore the bill and threw it in the speaker face Assembly Session

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಆರ್. ಅಶೋಕ್ ನೇತೃತ್ವದಲ್ಲಿ ವಿಧಾನಸೌಧ ಲಾಂಜ್‌ನಲ್ಲಿ ಮಾತುಕತೆ ನಡೆಸಲಾಯಿತು. ಅಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲು ತೀರ್ಮಾನ ಮಾಡಲಾಯಿತು.

ಚರ್ಚೆ ಇಲ್ಲದೆ ವಿಧೇಯಕ ಪಾಸ್‌

ಕೃಷಿಯೇತರ ಚಟುವಟಿಕೆಗೆ ರೈತ ತನ್ನ ಭೂಮಿ ಬಳಸಿಕೊಳ್ಳಲು ಸ್ವಯಂ ಘೋಷಣೆ ಅಧಿಕಾರ ಕೊಡುವ ಭೂ ಸುಧಾರಣೆ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ನೀಡಲಾಯಿತು. ಕರ್ನಾಟಕ ಸಿವಿಲ್ ಪ್ರಕ್ರಿಯೆ ಸಂಹಿತೆ 2023 ವಿಧೇಯಕ, ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣೆ ವಿಧೇಯಕಗಳು ಸೇರಿ ಐದು ವಿಧೇಯಕಗಳನ್ನು ಚರ್ಚೆ ಇಲ್ಲದೇ ಪಾಸ್ ಮಾಡಲಾಯಿತು. ಈ ವೇಳೆ ಊಟದ ಸಮಯ ಆಗಿದೆ ಬಿಡಿ ಎಂದು ಪ್ರತಿಪಕ್ಷ ಸದಸ್ಯರು ಸ್ಪೀಕರ್‌ಗೆ ಕೋರಿದ್ದಾರೆ. ಆದರೆ, ವಿಧಾನಸಭಾಧ್ಯಕ್ಷರು, ಊಟಕ್ಕೆ ಬಿಡಲ್ಲ ಚರ್ಚೆ ಮುಂದುವರಿಯಲಿ ಎಂದು ಹೇಳಿದರು. ಇದು ಗಲಾಟೆ ತೀವ್ರಗೊಳ್ಳಲು ಕಾರಣವಾಯಿತು.

ವಿಡಿಯೊ ಮಾಡಿಕೊಂಡ ಡಿ.ಕೆ. ಶಿವಕುಮಾರ್

ಸದನದಲ್ಲಿ ವಿಧೇಯಕ ಪತ್ರವನ್ನು ಹರಿದು ಹಾಕಿ ಸ್ಪೀಕರ್‌ ಕಡೆ ಎಸೆದಿದ್ದನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ತಮ್ಮ ಮೊಬೈಲ್‌ನಲ್ಲಿ ವಿಡಿಯೊ ಮಾಡಿಕೊಂಡರು.

ನೋಂದಣಿ ಕರ್ನಾಟಕ ತಿದ್ದುಪಡಿ ವಿಧೇಯಕವೂ ಪಾಸ್‌

ನೋಂದಣಿ ಕರ್ನಾಟಕ ತಿದ್ದುಪಡಿ ವಿಧೇಯಕವೂ ಪಾಸ್ ಆಗಿದೆ. ಶಾಸಕರಿಗೆ ನೀಡಿದ ನಿವೇಶನವನ್ನು ಅಕ್ರಮವಾಗಿ ನೋಂದಣಿ ಮಾಡಲಾಗಿದೆ. ಇದರಲ್ಲಿ ಸಬ್ ರಿಜಿಸ್ಟ್ರಾರ್‌ ಶಾಮಿಲಾಗಿದ್ದಾರೆ. ನಕಲಿ ನೋಂದಣಿ ರಾಜ್ಯದಲ್ಲಿ ಹೆಚ್ಚಾಗಿದೆ. ಬೇರೆಯವರ ಆಸ್ತಿಯನ್ನು ಇವರು ನಮ್ಮದೇ ಅಂತ ರಿಜಿಸ್ಟರ್ ಮಾಡಿದ್ದಾರೆ. ಶಾಸಕರಾದ ನರೇಂದ್ರ ಸ್ವಾಮಿ, ಅಭಯ್ ಪಾಟೀಲ್, ಮಾಜಿ ಶಾಸಕ ಗೂಳಿಹಟ್ಟಿ ಶೇಖರ್‌ಗೆ ನೀಡಿದ್ದ ಸೈಟ್‌ಗಳನ್ನು ಅವರಿಗೆ ಗೊತ್ತಿಲ್ಲದೆ ಬೇರೆಯವರಿಗೆ ಮಾರಾಟ ಮಾಡಲಾಗಿದೆ. ಇಂತಹ ನೊಂದಣಿ ರದ್ದು ಮಾಡುವ ಅಧಿಕಾರವನ್ನು ಜಿಲ್ಲಾ ನೋಂದಣಿ ಅಧಿಕಾರಿಗೆ ನೀಡುವ ವಿಧೇಯಕ ಇದಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Belagavi Winter Session: ಚಳಿಗಾಲದ ಅಧಿವೇಶನಕ್ಕೆ ಶಾಸಕರ ಕೊರತೆ; ತೆಲಂಗಾಣದಲ್ಲಿ ಡಿಕೆಶಿ, ಜಮೀರ್‌!

Belagavi Winter Session : ಮೊದಲ ದಿನದ ಅಧಿವೇಶನಕ್ಕೆ ಹಲವಾರು ಸಚಿವರು ಹಾಗೂ ಶಾಸಕರು ಗೈರಾಗಿದ್ದಾರೆ. ಇದರಿಂದ ಸದನ ನಡೆಸುವುದು ಹೇಗೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

VISTARANEWS.COM


on

Shortage of MLAs for Belagavi Winter Session
Koo

ಬೆಳಗಾವಿ: ಈ ಬಾರಿಯ ವಿಧಾನ ಮಂಡಲ ಅಧಿವೇಶನದ (Belagavi Winter Session) ಬಗ್ಗೆ ಭಾರಿ ನಿರೀಕ್ಷೆ ಹಾಗೂ ಕುತೂಹಲವನ್ನು ಇಟ್ಟುಕೊಳ್ಳಲಾಗಿದೆ. ಮೊದಲನೆಯದಾಗಿ ಉತ್ತರ ಕರ್ನಾಟಕ (Uttara Karnataka) ಭಾಗದ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಸಾಕಷ್ಟು ಒತ್ತಾಯಗಳು ಕೇಳಿಬಂದಿವೆ. ಆದರೆ, ಈ ನಡುವೆ ಪ್ರಮುಖವಾಗಿ ಕೆಲವು ಸಚಿವರು ಹಾಗೂ ಶಾಸಕರೇ ಗೈರಾಗಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ (Deputy CM DK Shivakumar) ಹಾಗೂ ಸಚಿವ ಜಮೀರ್‌ ಅಹಮದ್‌ ಖಾನ್‌ (Zameer Ahmed Khan) ತೆಲಂಗಾಣದಲ್ಲಿದ್ದಾರೆ. ಹೀಗಾಗಿ ಈ ಚಳಿಗಾಲದ ಮೊದಲ ಅಧಿವೇಶನಕ್ಕೆ ಶಾಸಕರ ಕೊರತೆ ಕಾಡುತ್ತಿದೆ.

ಆಡಳಿತ ಪಕ್ಷದಿಂದ -80, ಬಿಜೆಪಿಯಿಂದ 45, ಜೆಡಿಎಸ್‌ನಿಂದ 10 ಸದಸ್ಯರು ಹಾಜರಾಗಿದ್ದಾರೆ. ವಿಪಕ್ಷ ಸ್ಥಾನ ಆಸನದಲ್ಲಿ ವಿಪಕ್ಷ ನಾಯಕ ಆರ್. ಅಶೋಕ್ ಕುಳಿತಕೊಂಡಿದ್ದಾರೆ. ಅದೇ ಸಾಲಿನಲ್ಲಿ ಬಿಜೆಪಿ ಅತೃಪ್ತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹ ಕುಳಿತುಕೊಂಡಿದ್ದಾರೆ.

ಇದನ್ನೂ ಓದಿ: Belagavi Winter Session: ಬರ ವೈಫಲ್ಯ ಬಗ್ಗೆ ವಿಪಕ್ಷಗಳಿಂದ ಮೊದಲ ದಿನವೇ ನಿಲುವಳಿ ನೋಟಿಸ್‌!

ಸದನದಲ್ಲಿ ಸಿಎಂ ಸಿದ್ದರಾಮಯ್ಯ, ಕಾನೂನು ಸಚಿವ ಎಚ್.ಕೆ. ಪಾಟೀಲ್, ಗೃಹ ಸಚಿವ ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ, ಕೆ.ಎನ್. ರಾಜಣ್ಣ, ಲಕ್ಷ್ಮಿ ಹೆಬ್ಬಾಳ್ಕರ್ ಸೇರಿ ಹಲವರು‌ ಭಾಗಿಯಾಗಿದ್ದಾರೆ. ಆದರೆ, ತೆಲಂಗಾಣದಲ್ಲಿ ಸರ್ಕಾರ ರಚಿಸುವ ಬ್ಯುಸಿಯಲ್ಲಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಜಮೀರ್ ಅಜಮದ್ ಖಾನ್‌ ಸದನಕ್ಕೆ ಗೈರಾಗಿದ್ದಾರೆ.

ಆರು ಸಚಿವರಿಂದ ಗೈರು ಪತ್ರ; ಹೊರಟ್ಟಿ ಅಸಮಾಧಾನ

ಮೊದಲ ದಿನದ ಸದನಕ್ಕೆ ಬರಲು ಆಗುತ್ತಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಆರು ಮಂದಿ ಸಚಿವರು ಪತ್ರ ಬರೆದಿದ್ದಾರೆ. ಇದಕ್ಕೆ ಬಸವರಾಜ ಹೊರಟ್ಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸದನಕ್ಕೆ ಬರಲು ಆಗುವುದಿಲ್ಲ ಎಂದು ಆರು ಸಚಿವರು ಪತ್ರ ಕೊಟ್ಟಿದ್ದಾರೆ. ಹೀಗಾದರೆ ಸದನ ನಡೆಸುವುದು ಹೇಗೆ? ಎಂದು ಪ್ರಶ್ನೆ ಮಾಡಿದರು. ಅಲ್ಲದೆ, ಸಭಾನಾಯಕ ಬೋಸರಾಜು ಮೇಲೆ ಸಭಾಪತಿ ಹೊರಟ್ಟಿ ಸಿಟ್ಟಾಗಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಪರಿಷತ್‌ ಸಭಾನಾಯಕ ಬೋಸರಾಜು, ಎಲ್ಲರೂ ಬರುತ್ತಿದ್ದಾರೆ. ಆನ್ ದಿ ವೇ ಎಂದು ಸಮಜಾಯಿಷಿ ಕೊಟ್ಟರು. ಅದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಬಸವರಾಜ ಹೊರಟ್ಟಿ, ಸದನ ಹನ್ನೊಂದು ಗಂಟೆಗೆ ಎಂದು ಸಮಯ ನಿಗದಿ ಆಗಿದೆ. ಆದರೂ ಇನ್ನೂ ಬರುತ್ತಿದ್ದಾರೆ ಎಂದರೆ ಏನರ್ಥ ಎಂದು ಪ್ರಶ್ನೆ ಮಾಡಿದರು. ಮುಂದೆ ಈ ರೀತಿ ಆದರೆ ನಾನು ಒಪ್ಪಲ್ಲ ಎಂದು ಖಡಕ್‌ ಸೂಚನೆ ಕೊಟ್ಟರು.

ತೆಲಂಗಾಣದಲ್ಲಿ ಸಭೆ ಮಾಡುತ್ತಿರುವ ಡಿ.ಕೆ. ಶಿವಕುಮಾರ್‌

ಪಂಚರಾಜ್ಯಗಳ ಚುನಾವಣೆ ಮುಗಿದು ತೆಲಂಗಾಣದಲ್ಲಿ ಕಾಂಗ್ರೆಸ್‌ ಬಹುಮತದೊಂದಿಗೆ ಅಧಿಕಾರವನ್ನು ಹಿಡಿದಿದೆ. ಈ ಹಿನ್ನೆಲೆಯಲ್ಲಿ ಅಲ್ಲಿ ಅಧಿಕೃತವಾಗಿ ಸಿಎಂ ಅಭ್ಯರ್ಥಿಯನ್ನು ಆಯ್ಕೆ ಸಂಬಂಧ ಕರ್ನಾಟಕ ಡಿಸಿಎಂ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿದೆ. ಹೈದ್ರಾಬಾದ್‌ನಲ್ಲಿ ತೆಲಂಗಾಣ ಕಾಂಗ್ರೆಸ್‌ ಶಾಸಕಾಂಗ ಸಭೆ ನಡೆಯುತ್ತಲಿದ್ದು, ಬಹುತೇಕ ಇಂದೇ ಸಿಎಂ ಯಾರು ಎಂದು ಘೋಷಣೆ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ: Belagavi Winter Session: 1 ಗಂಟೆ ಸದನ ತಡ; ಉತ್ತರ ಕರ್ನಾಟಕಕ್ಕೆ ಮಾಡಿದ ಅಪಮಾನವೆಂದ ರಾಯರೆಡ್ಡಿ, ಯತ್ನಾಳ್!

ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ , ನೂತನ ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಇಲ್ಲಿ ಅಧಿಕೃತವಾಗಿ ಸಿಎಂ ಅಭ್ಯರ್ಥಿ ಆಯ್ಕೆ ಮಾಡಿದ ಬಳಿಕ ಸರ್ಕಾರ ರಚನೆಗೆ ರಾಜ್ಯಪಾಲರಲ್ಲಿ ಹಕ್ಕು ಮಂಡನೆ ಮಾಡಲಾಗುವುದು. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ಡಿ.ಕೆ. ಶಿವಕುಮಾರ್‌ ಹಾಗೂ ಜಮೀರ್‌ ಅಹಮದ್‌ ಖಾನ್‌ ತೆಲಂಗಾಣದಲ್ಲಿ ಮೊಕ್ಕಾಂ ಹೂಡಿದ್ದಾರೆ.

Continue Reading

ಕರ್ನಾಟಕ

Viral News : ಚಾಲಕರ ನಡುವೆ ಕಿರಿಕ್‌;‌ ಇನೋವಾ ಕಾರನ್ನೇ ಇನ್ನೊಬ್ಬನ ಮೇಲೆ ಹರಿಸಲು ಯತ್ನಿಸಿದ ಡ್ರೈವರ್‌

Viral News : ಬೆಂಗಳೂರಿನ ಹೆಬ್ಬಾಳ ಫ್ಲೈ ಓವರ್‌ನಲ್ಲಿ ಕಾರು ಚಾಲಕನೊಬ್ಬ ಇನ್ನೊಬ್ಬ ಚಾಲಕನ ಮೇಲೆಯೇ ಕಾರು ಹಾಯಿಸಲು ಯತ್ನಿಸಿದ ಘಟನೆ ನಡೆದಿದೆ.

VISTARANEWS.COM


on

Drivers fight in Bangalore
Koo

ಬೆಂಗಳೂರು: ಈಗ ಸಣ್ಣ ಪುಟ್ಟ ಕಾರಣಕ್ಕಾಗಿ ಜಗಳಕ್ಕೆ ಇಳಿಯುವುದು, ಒಮ್ಮಿಂದೊಮ್ಮೆಗೇ ಮೈಮೇಲೆ ಬೀಳುವುದು, ದಾಳಿ ಮಾಡುವ ಘಟನೆಗಳು ಹೆಚ್ಚುತ್ತಿವೆ. ಅದರಲ್ಲೂ ಬೆಂಗಳೂರಿನ ಟ್ರಾಫಿಕ್‌ನಲ್ಲಿ (Bangalore Traffic) ಮನುಷ್ಯ ಕೆಲವೊಮ್ಮೆ ಪ್ರಾಣಿಗಳಿಗಿಂತಲೂ ಕಡೆಯಾಗಿ ವರ್ತಿಸುವುದು ಕಾಣುತ್ತಿದೆ. ಇಲ್ಲಿ ಚಾಲಕರಿಬ್ಬರು ಯಾವುದೋ ಕಾರಣಕ್ಕೆ ಜಗಳವಾಡಿಕೊಂಡಿದ್ದಾರೆ (Fight between drivers). ಆಗ ಸಿಟ್ಟಿಗೆದ್ದ ಒಬ್ಬ ಇನ್ನೊಬ್ಬನ ಮೇಲೆ ಕಾರನ್ನು ಹರಿಸುವ ರೀತಿಯಲ್ಲಿ ತಳ್ಳಿಕೊಂಡು ಹೋಗಿದ್ದಾನೆ. ಸ್ವಲ್ಪ ಹೆಚ್ಚು ಕಡಿಮೆ ಆಗಿದ್ದರೂ ಪ್ರಾಣವೇ ಹೋಗಬಹುದಾದ ರೀತಿಯಲ್ಲಿ ಕ್ರೌರ್ಯವನ್ನು ಮೆರೆದ ಚಾಲಕನನ್ನು ಪೊಲೀಸರು ಹುಡುಕುತ್ತಿದ್ದಾರೆ (viral News).

ಈ ಘಟನೆ ನಡೆದಿರುವುದು ಬೆಂಗಳೂರಿನ ಹೆಬ್ಬಾಳ ಫ್ಲೈ ಓವರ್ (Hebbala Fly over) ಮೇಲೆ. ಕಳೆದ ನವೆಂಬರ್‌ 29ರಂದು ಬೆಳಗ್ಗೆ 8.30ರಿಂದ 9 ಗಂಟೆಯ ನಡುವೆ ಘಟನೆ ನಡೆದಿದೆ. ಇಬ್ಬರು ಚಾಲಕರ ನಡುವೆ ಯಾವುದೇ ಕಾರಣಕ್ಕೆ ಕಿರಿಕ್ ಉಂಟಾಗಿದೆ. ಆಗ ಒಬ್ಬ ಚಾಲಕನನ್ನು ಇನ್ನೊಬ್ಬ ಚಾಲಕ ಬಾನೆಟ್ ಮೂಲಕ ತಳ್ಳಿಕೊಂಡೇ ಹೋಗಿದ್ದಾನೆ.

Drivers fight in Bangalore

ಇನೋವಾ ಚಾಲಕ ಹಾಗೂ ಇಟಿಯಾಸ್ ಚಾಲಕನ ನಡುವೆ ಫ್ಲೈ ಓವರ್ ಮೇಲೆ ಕಿರಿಕ್ ಉಂಟಾಗಿದೆ. ಆಗ ಇಟಿಯಾಸ್‌ ಚಾಲಕ ತನ್ನ ಕಾರಿನಿಂದ ಇಳಿದು ಇನೋವಾ ಡ್ರೈವರ್‌ ನನ್ನು ಪ್ರಶ್ನೆ ಮಾಡಿದ್ದಾನೆ. ಆಗ ಇನ್ನೊವಾ ಚಾಲಕ ಇದನ್ನು ಕೇರ್‌ ಮಾಡದೆ ಮುಂದೆ ಹೋಗಲು ನೋಡಿದ್ದಾನೆ. ಆತ ಇಟಿಯಾಸ್‌ ಚಾಲಕ ಕಾರಿಗೆ ಅಡ್ಡವಾಗಿ ನಿಂತಿದ್ದಾನೆ.

ಇದನ್ನು ಗಮನಿಸಿದ ಇನೊವಾ ಚಾಲಕ ಆತ ಎದುರು ನಿಂತಿದ್ದನ್ನು ಗಮನಿಸಿಯೂ ಕಾರನ್ನು ಮೂವ್‌ ಮಾಡಿದ್ದಾನೆ. ಎದುರು ಅಡ್ಡಲಾಗಿ ನಿಂತವನನ್ನು ತಳ್ಳಿಕೊಂಡೇ ಕಾರು ಮುಂದಕ್ಕೆ ಹೋಗಿದೆ. ತುಂಬ ದೂರದವರೆಗೆ ಈ ಜಗಳ ಮುಂದುವರಿದಿದೆ. ಕೆಎ 05 ಎಎಲ್ 7999 ಇನೊವಾ ಕಾರಿನ ಚಾಲಕನೇ ಈ ರೀತಿಯಾಗಿ ಅತಿರೇಕದ ವರ್ತನೆ ಮೆರೆದಿರುವುದು.

ಇದನ್ನೂ ಓದಿ: Murder Case : ಸರಿಯಾಗಿ ನೋಡಿಕೊಳ್ತಿಲ್ಲ ಎಂದು ಪತ್ನಿಯನ್ನೇ ಕೊಂದ ಮಧುಮೇಹ ರೋಗಿ!

ಈ ಎಲ್ಲ ಘಟನೆಗಳು ಮತ್ತೊಂದು ಕಾರಿನ ಡ್ಯಾಷ್‌ ಬೋರ್ಡ್‌ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಇವುಗಳನ್ನು ವ್ಯಕ್ತಿಯೊಬ್ಬರು ಎಕ್ಸ್‌ ನಲ್ಲಿ ಶೇರ್‌ ಮಾಡಿದ್ದಾರೆ. ಗಲಾಟೆಯಲ್ಲಿ ಪಾಲ್ಗೊಂಡ ಎರಡೂ ಕಾರುಗಳು ಹಳದಿ ಬೋರ್ಡ್‌ನ ಕಾರುಗಳಾಗಿದ್ದು, ವಾಹನದಲ್ಲಿ ಪ್ರಯಾಣಿಕರು ಕೂಡಾ ಇದ್ದರು. ಆದರೆ, ಇಬ್ಬರೂ ಚಾಲಕರು ಜಗಳಕ್ಕೆ ಇಳಿದು ಹಠ ಸಾಧಿಸಲು ಮುಂದಾಗಿದ್ದಾರೆ.

ಇದೀಗ ಪೊಲೀಸರು ಇಬ್ಬರೂ ಚಾಲಕರನ್ನು ಪತ್ತೆ ಹಚ್ಚಲು ಯತ್ನಿಸುತ್ತಿದ್ದಾರೆ. ವಾಹನದ ನಂಬರ್‌ ಸಿಕ್ಕಿರುವುದರಿಂದ ಮಾಲಕನನ್ನು ಪತ್ತೆ ಹಚ್ಚುವುದು ಕಷ್ಟದ ಕೆಲಸವೇನಲ್ಲ.

ಬೆಂಗಳೂರಿನಲ್ಲಿ ಸಣ್ಣ ಪುಟ್ಟ ಕಾರಣಗಳಿಗಾಗಿ ಈ ರೀತಿ ಅತಿರೇಕದಿಂದ ವರ್ತಿಸುವ ಘಟನೆಗಳು ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿವೆ. ಇತ್ತೀಚೆಗೆ ಸಣ್ಣ ಜಗಳವೊಂದರ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಸುಮಾರು ಒಂದು ಕಿ.ಮೀ. ದೂರದವರೆಗೆ ಕಾರಿನ ಬಾನೆಟ್‌ ಮೇಲೆ ಕುಳಿತಿದ್ದಾಗಲೇ ವಾಹನ ಚಲಾಯಿಸಿದ ಘಟನೆ ನಡೆದಿತ್ತು.

ಅದಕ್ಕಿಂತ ಮೊದಲು ಯಾವುದೋ ಕಾರಣಕ್ಕೆ ಸಂಶಯ ಬಂದು ಬೈಕನ್ನು ತಡೆದು ನಿಲ್ಲಿಸಲು ಯತ್ನಿಸಿ, ಎಳೆದು ನಿಲ್ಲಿಸಿದ ವ್ಯಕ್ತಿಯೊಬ್ಬರನ್ನು ಆ ಕಳ್ಳ ಸುಮಾರು ಒಂದು ಕಿಲೋಮೀಟರ್‌ ದೂರಕ್ಕೆ ರಸ್ತೆಯಲ್ಲಿ ದರದರನೆ ಎಳೆದುಕೊಂಡ ಹೋದ ಘಟನೆಯೂ ನಡೆದಿತು.

Continue Reading

ಕರ್ನಾಟಕ

Belagavi Winter Session: 1 ಗಂಟೆ ಸದನ ತಡ; ಉತ್ತರ ಕರ್ನಾಟಕಕ್ಕೆ ಮಾಡಿದ ಅಪಮಾನವೆಂದ ರಾಯರೆಡ್ಡಿ, ಯತ್ನಾಳ್!

Belagavi Winter Session : ಈ ಬಾರಿ ಅಧಿವೇಶನ ಇರುವುದೇ 10 ದಿನವಾಗಿದೆ. ಅದರಲ್ಲೂ ಹೀಗೆ ಗಂಟೆಗಟ್ಟಲೆ ವಿಳಂಬವಾದರೆ ಹೇಗೆ ಎಂದು ಕೇಳಿದ್ದಾರೆ. ಇದು ಉತ್ತರ ಕರ್ನಾಟಕಕ್ಕೆ ಮಾಡಿದ ಅಪಮಾನ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

VISTARANEWS.COM


on

Belagavi Winter Session House delayed by 1 hour
Koo

ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ (ಡಿ. 4) ವಿಧಾನ ಮಂಡಲ ಅಧಿವೇಶನ (Belagavi Winter Session) ಆರಂಭವಾಗಿದೆ. ಆದರೆ, ಒಂದು ಗಂಟೆ ವಿಳಂಬವಾಗಿ ಆರಂಭವಾಗಿರುವುದಕ್ಕೆ ಹಿರಿಯ ಸದಸ್ಯರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಈ ಬಾರಿ ಅಧಿವೇಶನ ಇರುವುದೇ 10 ದಿನವಾಗಿದೆ. ಅದರಲ್ಲೂ ಹೀಗೆ ಗಂಟೆಗಟ್ಟಲೆ ವಿಳಂಬವಾದರೆ ಹೇಗೆ ಎಂದು ಕೇಳಿದ್ದಾರೆ. ಇದು ಉತ್ತರ ಕರ್ನಾಟಕಕ್ಕೆ (Uttara Karnataka) ಮಾಡಿದ ಅಪಮಾನ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ವಿಧಾನ ಮಂಡಲ ಅಧಿವೇಶನವನ್ನು ಒಂದು ಗಂಟೆ ವಿಳಂಬವಾಗಿ ಪ್ರಾರಂಭ ಮಾಡಲಾಗಿದೆ. ಸಿಎಂ ಆದಿಯಾಗಿ ಕೆಲವರು ಬರುವುದು ವಿಳಂಬವಾಗಿದೆ. ಅಲ್ಲದೆ, ಇನ್ನೂ ಹಲವಾರು ಮಂದಿ ಗೈರಾಗಿದ್ದಾರೆ. 11 ಗಂಟೆಗೆ ಆರಂಭವಾಗಬೇಕಿದ್ದ ಸದನ 1 ಗಂಟೆ ವಿಳಂಬವಾಗಿರುವುದರ ಬಗ್ಗೆ ಮೊದಲು ಶಾಸಕ ಸುರೇಶ್ ಕುಮಾರ್ (MLA Suresh Kumar) ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಸದನ ಹೀಗೆ ಒಂದು ಗಂಟೆ ವಿಳಂಬವಾದರೆ ಹೇಗೆ” ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಶಾಸಕ ಸುರೇಶ್‌ ಕುಮಾರ್ ಮಾತಿಗೆ ಧ್ವನಿಗೂಡಿಸಿದ ಶಾಸಕ ಬಸವರಾಜ್ ರಾಯರೆಡ್ಡಿ (Basavaraj Rayareddy), ಹೌದು. ಯಾವ ಕಾರಣಕ್ಕೆ ವಿಳಂಬ ಮಾಡಲಾಗಿದೆಯೋ ಗೊತ್ತಿಲ್ಲ. ಆದರೆ, ಇದರಿಂದ ಉತ್ತರ ಕರ್ನಾಟಕಕ್ಕೆ ಅಪಮಾನ ಆಗಲಿದೆ. ಯಾರು ಬರಲಿ ಬಿಡಲಿ ಸರಿಯಾದ ಸಮಯಕ್ಕೆ ಅಧಿವೇಶನ ಆರಂಭಿಸಿ ಎಂದು ಆಗ್ರಹಿಸಿದರು.

ಬಸವರಾಜ ರಾಯರೆಡ್ಡಿ ಮಾತು ಮುಗಿಸುತ್ತಿದ್ದಂತೆ ಎದ್ದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basana Gowda Patil Yatnal), ಆ ಮಾತಿಗೆ ಸಹಮತ ವ್ಯಕ್ತಪಡಿಸಿದರು. ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಬಾರದು. ಈ ಭಾಗಕ್ಕೆ ಅತಿ ಹೆಚ್ಚು ಚರ್ಚೆಗೆ ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು.

ಅಗಲಿದ ಗಣ್ಯರಿಗೆ ಸಂತಾಪ

ವಿಧಾನಸಭೆ ಮಾಜಿ ಸಭಾಧ್ಯಕ್ಷ ಡಿ.ಬಿ. ಚಂದ್ರೇಗೌಡ, ಮಾಜಿ ಸಚಿವ ರಂಗದೇವರಾಯಲು, ಮಾಜಿ ಶಾಸಕ ವೆಂಕಟೇಶಪ್ಪ, ಮಾಜಿ ಶಾಸಕ ಶ್ರೀಕಾಂತ್ ಶೆಟ್ಟಪ್ಪ ಭೀಮಣ್ಣನವರ್, ಮಾಜಿ ಶಾಸಕ, ವಿಲಾಸ್ ಬಾಬು ಅಲಮೇಲ್ಕರ್, ಮಾಜಿ ರಾಜ್ಯಪಾಲ ಬಿ.ಬಿ ಆಚಾರ್ಯ ಅವರಿಗೆ ಇದೇ ವೇಳೆ ವಿಧಾನಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಅಲ್ಲದೆ, ಕರ್ನಾಟಕದ ಎಂ.ವಿ ಪ್ರಾಂಜಲ್ ಸೇರಿದಂತೆ ಹುತಾತ್ಮ ಐದು ಯೋಧರಿಗೆ ಸಂತಾಪ ಸಲ್ಲಿಸಲಾಯಿತು.

ಇದನ್ನೂ ಓದಿ: Belagavi Winter Session: ಬರ ವೈಫಲ್ಯ ಬಗ್ಗೆ ವಿಪಕ್ಷಗಳಿಂದ ಮೊದಲ ದಿನವೇ ನಿಲುವಳಿ ನೋಟಿಸ್‌!

ವಿಧಾನ ಪರಿಷತ್ ಸಂತಾಪ ಸೂಚನೆ

ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ, ಸಹಕಾರ ಕ್ಷೇತ್ರದ ಭೀಷ್ಮ ಎಂದು ಪ್ರಖ್ಯಾತಿ ಪಡೆದ ಬಿ.ಎಸ್. ವಿಶ್ವನಾಥ್, ಹಿರಿಯ ವಿಜ್ಞಾನಿಗಳಾದ ಪ್ರೊ ಎಂ.ಆರ್ ಸತ್ಯನಾರಾಯಣ್, ಡಾ.ವಿ.ಎಸ್ ಅರುಣಾಚಲಂ, ಹಿರಿಯ ಗಣಿತ ಪಂಡಿತ ಡಾ. ಕಲ್ಯಂಪುಡಿ ರಾಧಾಕೃಷ್ಣರಾವ್, ಹಿರಿಯ ಕೃಷಿ ವಿಜ್ಞಾನಿ ಡಾ.ಎಂ.ಎಸ್. ಸ್ವಾಮಿನಾಥನ್, ಚಲನಚಿತ್ರ ನಟಿ ಮಮತಾ ಗುಡೂರು, ಹಿರಿಯ ಲೇಖಕಿ ಡಾ. ಕಮಲಾ ಹೆಮ್ಮಿಗೆ, ಹಿರಿಯ ಪತ್ರಕರ್ತ ಜಿ.ಎನ್ ರಂಗನಾಥ್ ರಾವ್ ಅವರಿಗೆ ವಿಧಾನ ಪರಿಷತ್ ಕಲಾಪದಲ್ಲಿ ಸಂತಾಪ ಸೂಚಿಸಲಾಯಿತು.

Continue Reading

ಕ್ರೈಂ

Murder Case : ಸರಿಯಾಗಿ ನೋಡಿಕೊಳ್ತಿಲ್ಲ ಎಂದು ಪತ್ನಿಯನ್ನೇ ಕೊಂದ ಮಧುಮೇಹ ರೋಗಿ!

Murder Case : ಬಳ್ಳಾರಿಯ ಸಿರುಗುಪ್ಪದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಮಧು ಮೇಹ ರೋಗಿಯಾಗಿರುವ ತನ್ನನ್ನು ಆಕೆ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎನ್ನುವುದು ಅವನ ಸಿಟ್ಟು.

VISTARANEWS.COM


on

Murder Case Ballary
Koo

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸಿರುಗುಪ್ಪದ ಬಲಕುಂದಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ (Man Hacks his wife to death). ಆತ ಕೊಲೆ ಮಾಡಿರುವುದು (Murder case) ಅತ್ಯಂತ ಕ್ಷುಲ್ಲಕ ಕಾರಣಕ್ಕೆ. ಹೆಂಡತಿ ತನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎನ್ನುವುದು ಅವನು ಕೊಟ್ಟಿರುವ ಕಾರಣ.

ಸಿರುಗುಪ್ಪದ ಬಲಕುಂದಿ ಗ್ರಾಮದ ನಿವಾಸಿಯಾಗಿರುವ ರಸೂಲ್ ಸಾಬ್ ಎಂಬಾತನೇ ಕೊಲೆ ಮಾಡಿರುವ ಆರೋಪಿ. ಆತ ತನ್ನ ಪತ್ನಿ ಮೈಬುನಾ ಬಿ. (35)ಯನ್ನು ಕೊಲೆ ಮಾಡಿದ್ದಾನೆ. ಸೋಮವಾರ ಆತ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ ಆತ ಪೊಲೀಸರಿಗೆ ಶರಣಾಗಿದ್ದಾನೆ.

ರಸೂಲ್‌ ಸಾಬ್‌ ಮಧುಮೇಹ ರೋಗಿ. ಡಯಾಲಿಸಿಸ್‌ ಮಾಡಿಸಿಕೊಳ್ಳುತ್ತಿದ್ದಾನೆ. ಪತ್ನಿ ನನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎನ್ನುವ ಸಿಟ್ಟಿನಲ್ಲಿ ಆತ ಕೊಲೆ ಮಾಡಿದ್ದಾನೆ. ಮೈಮುನಾ ಮಲಗಿದ್ದ ವೇಳೆ ಹೋಗಿ ಕೊಡಲಿಯಿಂದ ಕೊಚ್ಚಿದ್ದಾನೆ.

ನನಗೆ ಮಧುಮೇಹ ಇದೆ, ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದೇನೆ. ನಾನು ಬೇಗ ಸಾಯ್ತೇನೆ,
ನನಗಿಂತ ಮೊದಲು ಪತ್ನಿ ಸಾಯಬೇಕು ಅಂತಾ ಕೊಲೆ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ಆದರೆ, ಆತ ಹೆಂಡತಿ ತನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂಬ ಕಾರಣಕ್ಕೆ ಕೊಲೆ ಮಾಡಿದ್ದಾನೆ ಎಂದೇ ಹೇಳಲಾಗಿದೆ. ಘಟನಾ ಸ್ಥಳಕ್ಕೆ ತೆಕ್ಕಲಕೋಟೆ ಪೊಲೀಸರು ಭೇಟಿ ನೀಡಿದ್ದಾರೆ. ತೆಕ್ಕಲಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನೇಣು ಬಿಗಿದು ಗ್ರಾ.ಪಂ ಪ್ರಭಾರಿ ಪಿಡಿಓ ಆತ್ಮಹತ್ಯೆ

ಶಿರಸಿ: ಉ.ಕ ಜಿಲ್ಲೆ ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದಲ್ಲಿ ಪ್ರಭಾರ ಪಿಡಿಒ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮಲಿಂಗ ಶಿವಲಿಂಗಪ್ಪ ಕಳಸಗೇರಿ(39) ಎಂಬಾತ ನೇಣಿಗೆ ಶರಣಾದ ವ್ಯಕ್ತಿ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹೊನ್ನತ್ತಿ ಪ್ರಭಾರಿ ಪಿಡಿಓ ಆಗಿದ್ದ ರಾಮಲಿಂಗ ಶಿವಲಿಂಗಪ್ಪ ಅವರು ಭಾನುವಾರ ರಜೆ ಕಾರಣ ತನ್ನ ಮನೆಗೆ ಬಂದಿದ್ದರು. ಅಲ್ಲೇ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾರೆ. ಇವರು ಸಾಲ ಭಾದೆಯಿಂದ ಮನನೊಂದು ಆತ್ಮಹತ್ಯೆ ಶರಣಾದ ಶಂಕೆ ಇದೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading
Advertisement
Narendra Modi And Share Market
ದೇಶ6 seconds ago

ಬಿಜೆಪಿ ಜಯಭೇರಿ ಬೆನ್ನಲ್ಲೇ ನಿಫ್ಟಿ, ಸೆನ್ಸೆಕ್ಸ್‌ ನೆಗೆತ, ಸುಧಾರಿಸಿದ ರೂಪಾಯಿ ಮೌಲ್ಯ!

Shortage of MLAs for Belagavi Winter Session
ಕರ್ನಾಟಕ9 mins ago

Belagavi Winter Session: ಚಳಿಗಾಲದ ಅಧಿವೇಶನಕ್ಕೆ ಶಾಸಕರ ಕೊರತೆ; ತೆಲಂಗಾಣದಲ್ಲಿ ಡಿಕೆಶಿ, ಜಮೀರ್‌!

Drivers fight in Bangalore
ಕರ್ನಾಟಕ22 mins ago

Viral News : ಚಾಲಕರ ನಡುವೆ ಕಿರಿಕ್‌;‌ ಇನೋವಾ ಕಾರನ್ನೇ ಇನ್ನೊಬ್ಬನ ಮೇಲೆ ಹರಿಸಲು ಯತ್ನಿಸಿದ ಡ್ರೈವರ್‌

Belagavi Winter Session House delayed by 1 hour
ಕರ್ನಾಟಕ42 mins ago

Belagavi Winter Session: 1 ಗಂಟೆ ಸದನ ತಡ; ಉತ್ತರ ಕರ್ನಾಟಕಕ್ಕೆ ಮಾಡಿದ ಅಪಮಾನವೆಂದ ರಾಯರೆಡ್ಡಿ, ಯತ್ನಾಳ್!

Aircraft Crash
ದೇಶ55 mins ago

Aircraft Crash: ತೆಲಂಗಾಣದಲ್ಲಿ ವಾಯುಪಡೆ ವಿಮಾನ ಪತನ, ಇಬ್ಬರು ಪೈಲಟ್‌ಗಳ ಸಾವು

Tukali Santosh Imitate Sangeetha Sringeri
ಬಿಗ್ ಬಾಸ್55 mins ago

BBK SEASON 10: ʻಎಲ್ಲೇ ಹೋದ್ರೂ ಗುಂಡಿ ತೋಡೇ ಬರೋದು; ಸಂಗೀತಾಳ ಅನುಕರಣೆ ಮಾಡಿದ ತುಕಾಲಿ!

Murder Case Ballary
ಕ್ರೈಂ1 hour ago

Murder Case : ಸರಿಯಾಗಿ ನೋಡಿಕೊಳ್ತಿಲ್ಲ ಎಂದು ಪತ್ನಿಯನ್ನೇ ಕೊಂದ ಮಧುಮೇಹ ರೋಗಿ!

karnataka live news kannada today december 4
Live News1 hour ago

Karnataka Live News : 1 ಗಂಟೆ ಸದನ ತಡ; ಉತ್ತರ ಕರ್ನಾಟಕಕ್ಕೆ ಮಾಡಿದ ಅಪಮಾನವೆಂದ ರಾಯರೆಡ್ಡಿ, ಯತ್ನಾಳ್!

snehith sangeetha namratha bbk 10
ಬಿಗ್ ಬಾಸ್1 hour ago

BBK SEASON 10: ಸಂಗೀತಾ ಜಾಗದಲ್ಲಿ ನಮ್ರತಾ ಇದ್ದಿದ್ದರೆ ʻಪನೀರ್‌ʼ ಕಥೆ ಏನಾಗ್ತಿತ್ತು? ಸ್ನೇಹಿತ್‌ಗೆ ಚಿವುಟಿದ ಸುದೀಪ್‌!

Belagavi Winter Session
ಕರ್ನಾಟಕ2 hours ago

Belagavi Winter Session: ಬರ ವೈಫಲ್ಯ ಬಗ್ಗೆ ವಿಪಕ್ಷಗಳಿಂದ ಮೊದಲ ದಿನವೇ ನಿಲುವಳಿ ನೋಟಿಸ್‌!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

ead your daily horoscope predictions for december 4th 2023
ಪ್ರಮುಖ ಸುದ್ದಿ8 hours ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ1 day ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ1 day ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ2 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ3 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

Tigre Found in Mysuru again Beware of this village
ಕರ್ನಾಟಕ3 days ago

Operation Tiger : ಮೈಸೂರಲ್ಲಿ ಮತ್ತೆ ಹುಲಿ ಕಾಟ; ಈ ಗ್ರಾಮದವರು ಹುಷಾರು!

Infosys Narayana Murthy and Congress Guarantee
ಕರ್ನಾಟಕ4 days ago

Congress Guarantee : ಯಾವುದನ್ನೂ ಪುಕ್ಕಟೆ ಕೊಡಬೇಡಿ; ‘ಗ್ಯಾರಂಟಿ’ಗೆ ನಾರಾಯಣ ಮೂರ್ತಿ ಆಕ್ಷೇಪ!

Justice for Ajay Protests against NIMHANS Hospital
ಆರೋಗ್ಯ4 days ago

Child Death : ಜಸ್ಟಿಸ್ ಫಾರ್ ಅಜಯ್; ಶುರುವಾಯ್ತು ನಿಮ್ಹಾನ್ಸ್‌ ವಿರುದ್ಧ ಪ್ರತಿಭಟನೆ

Dina Bhavishya
ಪ್ರಮುಖ ಸುದ್ದಿ5 days ago

Dina Bhavishya : ಯಾರಾದರೂ ಕಾಳಜಿ ತೋರಿದರೆ ಈ ರಾಶಿಯವರು ನೆಗ್ಲೆಕ್ಟ್‌ ಮಾಡ್ಬೇಡಿ!

ಟ್ರೆಂಡಿಂಗ್‌