Skeletons Found: ರೆಡ್ಡಿ ಸಂಪ್ರದಾಯದಂತೆ 5 ಅಸ್ಥಿ ಪಂಜರಗಳ ಅಂತ್ಯ ಸಂಸ್ಕಾರ - Vistara News

ಕರ್ನಾಟಕ

Skeletons Found: ರೆಡ್ಡಿ ಸಂಪ್ರದಾಯದಂತೆ 5 ಅಸ್ಥಿ ಪಂಜರಗಳ ಅಂತ್ಯ ಸಂಸ್ಕಾರ

Skeletons Found: ಸುಡುವ ಬದಲು ಹೂಳಲು ಪೊಲೀಸರು ಸೂಚಿಸಿದ ಹಿನ್ನೆಲೆಯಲ್ಲಿ 5 ಅಸ್ಥಿ ಪಂಜರಗಳನ್ನು ಚಿತ್ರದುರ್ಗದ ರುದ್ರ ಭೂಮಿಯಲ್ಲಿ ಹೂಳಲಾಗಿದೆ.

VISTARANEWS.COM


on

Skeletons Found
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ನಗರದ ಜಗನ್ನಾಥ್ ರೆಡ್ಡಿ ಕುಟುಂಬದ 5 ಅಸ್ಥಿ ಪಂಜರಗಳ (Skeletons Found) ಅಂತ್ಯ ಸಂಸ್ಕಾರವನ್ನು ಶನಿವಾರ ನೆರವೇರಿಸಲಾಯಿತು. ನಗರದ ಗೋಕಟ್ಟೆ ಬಳಿಯ ರುದ್ರ ಭೂಮಿಯಲ್ಲಿ ಸಂಬಂಧಿಕರ ಸಮ್ಮುಖದಲ್ಲಿ ರೆಡ್ಡಿ ಸಂಪ್ರದಾಯದಂತೆ ಅಂತ್ಯ ಕ್ರಿಯೆ ನಡೆಯಿತು.

ಸುಡುವ ಬದಲು ಹೂಳಲು ಪೊಲೀಸರು ಸೂಚಿಸಿದ ಹಿನ್ನೆಲೆಯಲ್ಲಿ ಅಸ್ಥಿ ಪಂಜರಗಳನ್ನು ಹೂಳಲಾಗಿದೆ. ಜೆಸಿಬಿ ಮೂಲಕ ಗುಂಡಿ ತೆಗೆಸಿ ಅಂತ್ಯ ಸಂಸ್ಕಾರ ಮಾಡಿ, ಆಯಾ ಸಮಾಧಿಗಳ ಮೇಲೆ 5 ಬೋರ್ಡ್ ನೆಡಲಾಗಿದೆ.

ಏನಿದು ಪ್ರಕರಣ?

ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್ ಬಳಿಯಿರುವ ದೊಡ್ಡ ಸಿದ್ದವ್ವನ ಹಳ್ಳಿಯ ನಿವಾಸಿ ಜಗನ್ನಾಥ್ ರೆಡ್ಡಿ ಎಂಬವರ ಇಡೀ ಕುಟುಂಬದವರ ಅಸ್ಥಿಪಂಜರಗಳು ಪತ್ತೆಯಾಗಿದ್ದವು. ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿತ್ತು. ಜಗನ್ನಾಥ್ ರೆಡ್ಡಿ, ಪತ್ನಿ ಪ್ರೇಮ, ಮಕ್ಕಳಾದ ತ್ರಿವೇಣಿ, ನರೇಂದ್ರ ರೆಡ್ಡಿ, ಕೃಷ್ಣ ರೆಡ್ಡಿ ಅವರ ಮೃತದೇಹದ ಅಸ್ಥಿಪಂಜರಗಳು ಪತ್ತೆ ಆಗಿತ್ತು.

ಇದನ್ನೂ ಓದಿ | Mysterious Death: 41 ಕೋಟಿಯ ಬಂಗಲೆಯಲ್ಲಿ ದಂಪತಿ, ಮಗಳ ನಿಗೂಢ ಸಾವು

ಜಗನ್ನಾಥ್ ರೆಡ್ಡಿ ಲೋಕೋಪಯೋಗಿ ಇಲಾಖೆಯಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕುಟುಂಬದಲ್ಲಿ ಕೆಲವೊಂದು ಸಮಸ್ಯೆಗಳಿಂದ ಬಾರಿ ಮನನೊಂದು ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದರು.

ಇನ್ನು ಮನೆಯಲ್ಲಿ ಸಿಕ್ಕ 2019ರ ಕ್ಯಾಲೆಂಡರ್ ಪ್ರಕಾರ ಜಗನ್ನಾಥ್ ರೆಡ್ಡಿ ಕುಟುಂಬದವರು ಮೃತಪಟ್ಟು 5 ವರ್ಷಗಳು ಆಗಿರಬಹುದು ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು, ವಿಧಿ ವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ, ಬೆರಳಚ್ಚು ತಜ್ಞರು ಭೇಟಿ ನೀಡಿದ್ದು, ಅಸ್ತಿ ಪಂಜರಗಳನ್ನು ನಗರದ ಬಸವೇಶ್ವರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಿಗೂಢ ಸಾವಿಗೆ ಕಾರಣ ಹುಡುಕಲು ಪೊಲೀಸರು ಮುಂದಾಗಿದ್ದರು.

ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಪುನಃ ಬೆಂಗಳೂರು ಮತ್ತು ದಾವಣಗೆರೆ ಎಫ್‌ಎಸ್‌ಎಲ್‌ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ | ಅಸ್ಥಿಪಂಜರ ಪತ್ತೆ ಕೇಸ್‌; 50 ಎಕರೆ ಜಮೀನಿಗಾಗಿ ಚಿತ್ರಹಿಂಸೆ ಕೊಟ್ಟರಾ! ಡೆತ್‌ನೋಟ್‌ನಲ್ಲಿ ಏನಿದೆ?

50 ಎಕರೆ ಜಮೀನಿಗಾಗಿ ಚಿತ್ರಹಿಂಸೆ ಕೊಟ್ಟರಾ! ಡೆತ್‌ನೋಟ್‌ನಲ್ಲಿ ಏನಿದೆ?

ಒಂದೇ ಕುಟುಂಬದ ಐವರ ನಿಗೂಢ ಸಾವಿನ ಪ್ರಕರಣವು ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಪತ್ತೆಯಾಗಿರುವ ಅಸ್ಥಿಪಂಜರಗಳು ಪೊಲೀಸರ ನಿದ್ದೆಗೆಡಿಸಿದ್ದು, ಸದ್ಯ ಪಾಳು ಬಿದ್ದ ಮನೆಯಲ್ಲಿ ಡೆತ್‌ನೋಟ್‌ವೊಂದು ಸಿಕ್ಕಿದೆ.

ಜಗನ್ನಾಥ್ ರೆಡ್ಡಿ ಕುಟುಂಬಸ್ಥರ ಡೆತ್‌ನೋಟ್‌ ಸಿಕ್ಕಿದ್ದು, ಇಬ್ಬರು ವ್ಯಕ್ತಿಗಳ ಹೆಸರು ಉಲ್ಲೇಖವಾಗಿದೆ. ಜಮೀನು ವಿಚಾರಕ್ಕೆ ಚಿತ್ರಹಿಂಸೆ ಕೊಟ್ಟಿದಾರೆ ಎನ್ನಲಾಗಿದೆ. ಅವರಿಬ್ಬರ ಹಿಂಸೆ ತಾಳಲಾರದೇ ಐವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ದೊಡ್ದಸಿದ್ದವ್ವನ ಹಳ್ಳಿ ಮೂಲದ ಒಬ್ಬ ವ್ಯಕ್ತಿ ಹಾಗೂ ಚಿತ್ರದುರ್ಗ ಮೂಲದ ಮತ್ತೊಬ್ಬ ವ್ಯಕ್ತಿ ಜಮೀನು ವಿಚಾರಕ್ಕಾಗಿ ಚಿತ್ರಹಿಂಸೆ ಕೊಡುತ್ತಿದ್ದರು. ಸದ್ಯ ಜಮೀನು ವಿಚಾರವು ನ್ಯಾಯಾಲಯದಲ್ಲಿದೆ. ಡೆತ್‌ನೋಟ್‌ನಲ್ಲಿ ಇಬ್ಬರ ಹೆಸರು ಉಲ್ಲೇಖವಾಗಿರುವುದರಿಂದ ಅವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Karnataka Legislative Council: ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಐದಲ್ಲ 4 ಕ್ಷೇತ್ರ; ಜೆಡಿಎಸ್‌ಗೆ 2 ಕ್ಷೇತ್ರ ಬಿಟ್ಟುಕೊಡಲು ತೀರ್ಮಾನ?

Karnataka Legislative Council: ಬಿಜೆಪಿಯಿಂದ ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಅಮರನಾಥ ಪಾಟೀಲ್, ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಡಾ. ಧನಂಜಯ ಸರ್ಜಿ, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಅ. ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ವೈ.ಎ. ನಾರಾಯಣಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಇ.ಸಿ. ನಿಂಗರಾಜು ಹೆಸರುಗಳನ್ನು ಪ್ರಕಟಿಸಲಾಗಿದೆ. ನೈಋತ್ಯ ಶಿಕ್ಷಕರ ಕ್ಷೇತ್ರವು ಜೆಡಿಎಸ್ ಪಾಲಾಗಿದ್ದು, ಎಸ್.ಎಲ್ ಭೋಜೆಗೌಡ ಕಣಕ್ಕೆ ಇಳಿದಿದ್ದಾರೆ. ಆದರೆ, ಈಗ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ತೀರ್ಮಾನಕ್ಕೆ ಬರಲಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅಂತಿಮ ನಿರ್ಧಾರ ಹೊರಬರಬೇಕಿದೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

VISTARANEWS.COM


on

six seats of Karnataka Legislative Council Elections to be held on June 3
Koo

ಬೆಂಗಳೂರು: ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣದಿಂದಾಗಿ ಬಿಜೆಪಿ – ಜೆಡಿಎಸ್‌ ಮೈತ್ರಿ ಮುಗಿದೇ ಹೋಯಿತು ಎಂದೇ ಹೇಳಲಾಗುತ್ತಿತ್ತು. ಆದರೆ, ಮುಂಬರುವ ವಿಧಾನ ಪರಿಷತ್‌ ಚುನಾವಣೆಯಲ್ಲಿ (Karnataka Legislative Council Election) ಮೈತ್ರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ತೀರ್ಮಾನ ಮಾಡಿದ್ದು, ಆರು ಕ್ಷೇತ್ರಗಳ ಪೈಕಿ 5 ಕ್ಷೇತ್ರವನ್ನು ತಾನಿಟ್ಟುಕೊಂಡು ಇನ್ನೊಂದನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿತ್ತು. ಆದರೆ, ಈಗ ಈ ಸೀಟು ಹಂಚಿಕೆಯಲ್ಲಿಯೂ ಬದಲಾವಣೆ ಮಾತುಗಳು ಕೇಳಿಬಂದಿದ್ದು, ದಕ್ಷಿಣ ಶಿಕ್ಷಕರ‌ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾವಣೆ ಮಾಡುವ ತೀರ್ಮಾನಕ್ಕೆ ಬಿಜೆಪಿ ಬಂದಿದೆ ಎನ್ನಲಾಗಿದೆ.

ಹೀಗಾಗಿ ಕರ್ನಾಟಕ ವಿಧಾನ ಪರಿಷತ್‌ ಚುನಾವಣೆಯಲ್ಲೂ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು, ಆರು ಕ್ಷೇತ್ರಗಳ ಪೈಕಿ ಈ ಮೊದಲು ಐದು ಕ್ಷೇತ್ರಗಳನ್ನು ಬಿಜೆಪಿ (BJP) ಇಟ್ಟುಕೊಂಡರೆ, ಒಂದು ಕ್ಷೇತ್ರವನ್ನು ಜೆಡಿಎಸ್‌ಗೆ (JDS Karnataka) ಬಿಟ್ಟುಕೊಟ್ಟಿತ್ತು. ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದ ಉಭಯ ಪಕ್ಷಗಳು ವಿಧಾನ ಪರಿಷತ್‌ ಚುನಾವಣೆಯಲ್ಲೂ ಜಂಟಿ ಹೋರಾಟ ನಡೆಸಲಿದೆ. ಜೂನ್‌ 3ರಂದು ಮೇಲ್ಮನೆಗೆ ಚುನಾವಣೆ ನಡೆಯಲಿದೆ. ಈಗ 4+2 ಮೈತ್ರಿ ಸೂತ್ರಕ್ಕೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ ಎಂದು ತಿಳಿದುಬಂದಿದೆ.

ಬಿಜೆಪಿಯಿಂದ ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಅಮರನಾಥ ಪಾಟೀಲ್, ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಡಾ. ಧನಂಜಯ ಸರ್ಜಿ, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಅ. ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ವೈ.ಎ. ನಾರಾಯಣಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಇ.ಸಿ. ನಿಂಗರಾಜು ಹೆಸರುಗಳನ್ನು ಪ್ರಕಟಿಸಲಾಗಿದೆ. ನೈಋತ್ಯ ಶಿಕ್ಷಕರ ಕ್ಷೇತ್ರವು ಜೆಡಿಎಸ್ ಪಾಲಾಗಿದ್ದು, ಎಸ್.ಎಲ್ ಭೋಜೆಗೌಡ ಕಣಕ್ಕೆ ಇಳಿದಿದ್ದಾರೆ. ಆದರೆ, ಈಗ ದಕ್ಷಿಣ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ತೀರ್ಮಾನಕ್ಕೆ ಬರಲಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಅಂತಿಮ ನಿರ್ಧಾರ ಹೊರಬರಬೇಕಿದೆ. ಮೇ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ಬಿಜೆಪಿಗೆ ನಾಲ್ಕು ಕ್ಷೇತ್ರ ಎಂದಿದ್ದ ಬಿಎಸ್‌ವೈ; ಆ ಮಾತೇ ನಿಜವಾಯ್ತು

ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಕುರಿತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದರು. ಬಿಜೆಪಿ ನಾಲ್ಕು ಹಾಗೂ ಜೆಡಿಎಸ್‌ ಎರಡು ಕ್ಷೇತ್ರದಲ್ಲಿ ಸ್ಪರ್ಧೆ ಎಂದಿದ್ದರು. ಮೈಸೂರಿನಲ್ಲಿ ಮಾತನಾಡಿದ್ದ ಅವರು, “ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಹಾಗೂ ಜೆಡಿಎಸ್‌ ನಡುವಿನ ಹೊಂದಾಣಿಕೆಯ ಮೈತ್ರಿಗೆ ಧಕ್ಕೆ ಬರುವುದಿಲ್ಲ. ಮುಂದೆಯೂ ಎರಡೂ ಪಕ್ಷಗಳ ನಡುವಿನ ಮೈತ್ರಿ ಮುಂದುವರಿಯುತ್ತದೆ. ವಿಧಾನ ಪರಿಷತ್‌ ಚುನಾವಣೆಯಲ್ಲೂ ಮೈತ್ರಿ ಇರುತ್ತದೆ. ಪರಿಷತ್‌ನ 6 ಸ್ಥಾನಗಳ ಪೈಕಿ ಜೆಡಿಎಸ್‌ಗೆ 2 ಹಾಗೂ ನಾವು 4 ಸ್ಥಾನಗಳಿಗೆ ಸ್ಪರ್ಧಿಸುತ್ತೇವೆ. ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನ ಆಗಿಲ್ಲ” ಎಂದಿದ್ದರು.

ಇದಾದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸಭೆಯೂ ನಡೆದಿತ್ತು. ವಿಧಾನ ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ನಾಯಕರ ಜತೆ ವಿಜಯೇಂದ್ರ ಚರ್ಚೆ ಮಾಡಿದ್ದರು. ಆದರೆ, ಬಿಜೆಪಿ ಹೈಕಮಾಂಡ್‌ ಐವರು ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಆದರೆ, ಈಗ ಇಲ್ಲಿ ಕೊಂಚ ಬದಲಾವಣೆಗೆ ಬಿಜೆಪಿ ಹೈಕಮಾಂಡ್‌ ಮುಂದಾಗಿದೆ ಎನ್ನಲಾಗಿದೆ. ಒಂದು ವೇಳೆ ಬದಲಾವಣೆಯಾದರೆ, ಬಿ.ಎಸ್.‌ ಯಡಿಯೂರಪ್ಪ ಅವರ ಮಾತು ನಿಜವಾದಂತೆ ಆಗುತ್ತದೆ.

ಇದನ್ನೂ ಓದಿ: HD Revanna: 3 ದಿನದಿಂದ ಕುಟುಂಬಸ್ಥರನ್ನು ಭೇಟಿಯಾಗದೆ ಜೈಲಲ್ಲಿ ರೇವಣ್ಣ ಪರದಾಟ; ಪತ್ರಿಕೆಯೇ ಸಂಗಾತಿ!

ದಕ್ಷಿಣ ಶಿಕ್ಷಕರ‌ ಕ್ಷೇತ್ರದ ಅಭ್ಯರ್ಥಿ ಬದಲಾವಣೆ?

ದಕ್ಷಿಣ ಶಿಕ್ಷಕರ‌ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾವಣೆ ಮಾಡಲು ಚಿಂತನೆ ನಡೆಸಲಾಗಿದೆ. ಈಗಾಗಲೇ ಇ.ಸಿ ನಿಂಗರಾಜು ಅವರ ಹೆಸರನ್ನು ಬಿಜೆಪಿ ಘೋಷಣೆ ಮಾಡಿತ್ತು. ಆದರೆ, ಈ ನಿರ್ಧಾರದಿಂದ ಬಿಜೆಪಿ ಹಿಂದೆ ಸರಿಯುತ್ತಿದ್ದು, ಜೆಡಿಎಸ್‌ಗೆ ಬಿಟ್ಟು‌ ಕೊಡುವ ಸಾಧ್ಯತೆ ಹೆಚ್ಚಿದೆ. ಗೆಲ್ಲುವ ಮಾನದಂಡದ ಆಧಾರದ ಮೇಲೆ ಜೆಡಿಎಸ್‌‌ಗೆ ಬಿಟ್ಟು ಕೊಡಲು ನಿರ್ಧಾರ ಮಾಡಲಾಗಿದೆ ಎನ್ನಲಾಗಿದೆ.

Continue Reading

ತುಮಕೂರು

POSCO Case : ತುಮಕೂರಿನಲ್ಲಿ ಪೈಶಾಚಿಕ ಕೃತ್ಯ; ತಂದೆಯಿಂದಲೇ ಮಗಳ ಮಾನಭಂಗ!

Physical Abuse : ಮಗಳ ಮೇಲೆ ಕಣ್ಣಾಕಿದ ಕಾಮುಕ ತಂದೆಯೊಬ್ಬ ಅತ್ಯಾಚಾರವೆಸಗಿ ಪರಾರಿ ಆಗಿದ್ದಾನೆ. ತುಮಕೂರಿನಲ್ಲಿ ಇಂತಹದೊಂದು ಪೈಶಾಚಿಕ ಕೃತ್ಯ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ‌ದುಷ್ಟ ಪತಿ ವಿರುದ್ಧ ಪತ್ನಿಯೇ ದೂರು
(POSCO Case) ನೀಡಿದ್ದಾರೆ.

VISTARANEWS.COM


on

By

POSCO Case in Tumkur
ಸಾಂದರ್ಭಿಕ ಚಿತ್ರ
Koo

ತುಮಕೂರು: ತುಮಕೂರಿನಲ್ಲಿ ಪಾಪಿ ತಂದೆಯೊಬ್ಬ ಮಗಳ ಮೇಲೆ ಪೈಶಾಚಿಕ ಕೃತ್ಯ (Physical Abuse) ನಡೆಸಿದ್ದಾನೆ. ಮಗಳ‌ ಮೇಲೆಯೇ ಎರಗಿದ ದುಷ್ಟ ಅತ್ಯಾಚಾರ ನಡೆಸಿದ್ದಾನೆ. ಲೈಂಗಿಕ ಕಿರುಕುಳ (POSCO Case) ನೀಡಿರುವ ಪ್ರಕರಣವು ತಡವಾಗಿ ಬೆಳಕಿಗೆ ಬಂದಿದೆ.

13 ವರ್ಷದ ಅಪ್ರಾಪ್ತೆ ಮಗಳ ಮೇಲೆ ಅತ್ಯಾಚಾರ ನಡೆಸಿ ಕಾಮುಕ ತಂದೆ ಪರಾರಿಯಾಗಿದ್ದಾನೆ. ಈ ಹಿಂದೆಯೂ ಒಮ್ಮೆ ಮಗಳ‌ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ಬಾಲಕಿ ತಾಯಿ ಕೂಲಿ ಕೆಲಸಕ್ಕೆಂದು ಹೋದಾಗ ಮಗಳು ಒಬ್ಬಳೇ ಇದ್ದಾಗ ಅತ್ಯಾಚಾರ ಎಸಗಿದ್ದಾನೆ.

ಸದ್ಯ ಘಟನೆ ಸಂಬಂಧ ಬಾಲಕಿ ತಾಯಿಯೇ ತಿಪಟೂರು ನಗರ ಠಾಣೆಗೆ ದೂರು ನೀಡಿದ್ದಾರೆ. ಸಂತ್ರಸ್ತೆ ತಾಯಿಯ ದೂರಿನನ್ವಯ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಾಪತ್ತೆಯಾಗಿರುವ ಆರೋಪಿ ತಂದೆಯ ಪತ್ತೆಗಾಗಿ ತಿಪಟೂರು ‌ನಗರ ಪೊಲೀಸರು ಕಾರ್ಯಚರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: SSLC Student Death : ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ 4 ಸಬ್ಜೆಕ್ಟ್‌ ಫೇಲ್‌; ವಿದ್ಯಾರ್ಥಿನಿ ಸೂಸೈಡ್‌

ಮಹಿಳೆಯ ಕುತ್ತಿಗೆಗೆ ಬೆಲ್ಟ್‌ನಿಂದ ಬಿಗಿದು, ರಸ್ತೆ ಬದಿಯೇ ಅತ್ಯಾಚಾರ ಎಸಗಿದ ದುಷ್ಟ; ಭೀಕರ ವಿಡಿಯೊ ಇಲ್ಲಿದೆ

ವಾಷಿಂಗ್ಟನ್‌: ಅಮೆರಿಕದ ನ್ಯೂಯಾರ್ಕ್‌ ಸಿಟಿಯಲ್ಲಿ (New York City) ದುಷ್ಟನೊಬ್ಬ ಮಹಿಳೆಯ ಕುತ್ತಿಗೆಗೆ ಬೆಲ್ಟ್‌ ಬಿಗಿದು, ಆಕೆಯನ್ನು ದರದರನೆ ಎಳೆದುಕೊಂಡು ಹೋಗಿ, ರಸ್ತೆಯ ಬದಿಯೇ ಅತ್ಯಾಚಾರ ಎಸಗಿದ್ದಾನೆ. ಮಹಿಳೆಯ ಮೇಲೆ ಮೃಗೀಯವಾಗಿ ದೌರ್ಜನ್ಯ ಎಸಗುವ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ (Viral Video) ಆಗಿದ್ದು, ಜನರಿಂದ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ.

ನ್ಯೂಯಾರ್ಕ್‌ ಸಿಟಿಯ ಸೌತ್‌ ಬ್ರಾಂಕ್ಸ್‌ನ ಈಸ್ಟ್‌ 152ನೇ ಸ್ಟ್ರೀಟ್‌ನಲ್ಲಿ ಮೇ 1ರಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಮನೆಗೆ ನಡೆದುಕೊಂಡು ಹೋಗುವಾಗ ದುರುಳನು ಕೃತ್ಯ ಎಸಗಿದ್ದಾನೆ. ಸುಮಾರು 45 ವರ್ಷದ ಮಹಿಳೆಯು ನಡೆದುಕೊಂಡು ಹೋಗುವಾಗ ಮುಸುಕುಧಾರಿ ವ್ಯಕ್ತಿಯು ಆಕೆಯ ಕುತ್ತಿಗೆಗೆ ಬೆಲ್ಟ್‌ನಿಂದ ಬಿಗಿದಿದ್ದಾನೆ. ರಸ್ತೆ ಬದಿ ನಿಂತಿದ್ದ ಎರಡು ಕಾರುಗಳ ಮಧ್ಯದ ಜಾಗದವರೆಗೆ ಆಕೆಯನ್ನು ಎಳೆದುಕೊಂಡು ಹೋಗಿದ್ದಾನೆ. ಅಲ್ಲಿ, ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಮಹಿಳೆಯ ಕುತ್ತಿಗೆಗೆ ಹಿಂದಿನಿಂದ ಬೆಲ್ಟ್‌ ಮೂಲಕ ಬಿಗಿಯುವ, ಆಕೆಯನ್ನು ಎಳೆಯುವ, ಆಕೆಯನ್ನು ಪ್ರಜ್ಞೆತಪ್ಪಿಸಿದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಾರಿನ ಮಧ್ಯೆಯೇ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ. ಮಹಿಳೆಯನ್ನು ಪ್ರಜ್ಞೆ ತಪ್ಪಿಸಿದ ಬಳಿಕ ಅತ್ಯಾಚಾರ ಎಸಗಿದ ದುಷ್ಟನು, ಆಕೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ ಎಂದು ತಿಳಿದುಬಂದಿದೆ.

ಪ್ರಜ್ಞೆ ತಪ್ಪಿಸಿ, ಅತ್ಯಾಚಾರ ಎಸಗಿದ ಬಳಿಕ ದುಷ್ಟನು ಮಹಿಳೆಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ರಸ್ತೆ ಬದಿ ಬಿದ್ದಿದ್ದ ಮಹಿಳೆಯನ್ನು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ, ಮಹಿಳೆಯು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ತಿಂಗಳಷ್ಟೇ ಮ್ಯಾನ್ಹಟನ್‌ನಲ್ಲಿ ಯುವತಿಯೊಬ್ಬರಿಗೆ ದುಷ್ಟನೊಬ್ಬ ರಾತ್ರಿ ಲೈಂಗಿಕ ಕಿರುಕುಳ ನೀಡಿದ್ದ. ಇದಾದ ಬಳಿಕವೂ ದುಷ್ಕರ್ಮಿಯ ಸುಳಿವು ಪೊಲೀಸರಿಗೆ ಸಿಕ್ಕಿರಲಿಲ್ಲ. ಹಾಗಾಗಿ, ಅಮೆರಿಕದಲ್ಲಿ ಹೆಣ್ಣುಮಕ್ಕಳ ಸುರಕ್ಷತೆ ಕುರಿತು ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿನ್ನದ ದರ

Gold Rate Today: ಭಾರಿ ಏರಿಕೆ ಬಳಿಕ ಇಂದು ಚಿನ್ನದ ಬೆಲೆ ಯಥಾಸ್ಥಿತಿ; ಇಷ್ಟಿದೆ ದರ

Gold Rate Today: ಚಿನ್ನದ ಬೆಲೆಯು ಯಥಾಸ್ಥಿತಿಯಾಗಿರುವ ಕಾರಣ ವಾರಾಂತ್ಯದಲ್ಲಿ ಬಂಗಾರ ಖರೀದಿಸುವವರ ಸಂಖ್ಯೆ ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿ ಭಾನುವಾರ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 6,725 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಬೆಲೆಯು 7,336 ರೂ. ಇದೆ.

VISTARANEWS.COM


on

Mamitha Baiju
Koo

ಬೆಂಗಳೂರು: ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಬೆಂಗಳೂರು (Bengaluru) ಸೇರಿ ಕರ್ನಾಟಕದಾದ್ಯಂತ (Karnataka) ಭಾರಿ ಏರಿಕೆ ಕಂಡು, ಬಳಿಕ ಇಳಿಕೆಯಾಗಿದ್ದ ಚಿನ್ನದ ಬೆಲೆಯಲ್ಲಿ (Gold Rate Today) ಭಾನುವಾರ (ಮೇ 11) ಯಾವುದೇ ಬದಲಾವಣೆಯಾಗಿಲ್ಲ. ಚಿನ್ನದ ಬೆಲೆಯು ಯಥಾಸ್ಥಿತಿಯಾಗಿರುವ ಕಾರಣ ವಾರಾಂತ್ಯದಲ್ಲಿ ಬಂಗಾರ ಖರೀದಿಸುವವರ ಸಂಖ್ಯೆ ಜಾಸ್ತಿಯಾಗಿದೆ. ಬೆಂಗಳೂರಿನಲ್ಲಿ ಭಾನುವಾರ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ 6,725 ರೂ. ಇದ್ದರೆ, 24 ಕ್ಯಾರಟ್‌ನ ಒಂದು ಗ್ರಾಂ ಬೆಲೆಯು 7,336 ರೂ. ಇದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) 87.10 ರೂ., ಎಂಟು ಗ್ರಾಂ 696.80 ರೂ. ಮತ್ತು 10 ಗ್ರಾಂ 871 ರೂ. ಇದೆ. 100 ಗ್ರಾಂಗೆ ಗ್ರಾಹಕರು 8,710 ರೂ. ಮತ್ತು 1 ಕಿಲೋಗ್ರಾಂಗೆ 87,100 ರೂ. ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,40073,510
ಮುಂಬಯಿ67,25073,360
ಬೆಂಗಳೂರು67,25073,360
ಚೆನ್ನೈ67,50072,640

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

Akshaya Tritiya 2024

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Akshaya Tritiya 2024: ಅಕ್ಷಯ ತೃತೀಯ ಅಂದರೆ ಚಿನ್ನ ಖರೀದಿಯೊಂದೇ ಅಲ್ಲ! ಹೀಗೆ ಮಾಡಿಯೂ ಸಮೃದ್ಧಿ ಹೊಂದಬಹುದು!

Continue Reading

ಚಿತ್ರದುರ್ಗ

SSLC Student Death : ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ 4 ಸಬ್ಜೆಕ್ಟ್‌ ಫೇಲ್‌; ವಿದ್ಯಾರ್ಥಿನಿ ಸೂಸೈಡ್‌

SSLC Student Death : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ (SSLC Exam) ನಾಲ್ಕು ಸಬ್ಜೆಕ್ಟ್‌ನಲ್ಲಿ ಫೇಲ್‌ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ (SSLC result) ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

By

SSLC Student Death Exam fail
ಸಾಂದರ್ಭಿಕ ಚಿತ್ರ
Koo

ಚಿತ್ರದುರ್ಗ: ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ (SSLC Result 2024) ಬಂದ ಬಳಿಕ ಫೇಲ್ (SSLC exam fail) ಆದ ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆ (Student self harming) ಮಾಡಿಕೊಳ್ಳುತ್ತಿರುವ ಮುಂದುವರಿದೆ. ಫೇಲ್‌ ಆಗಿದ್ದಕ್ಕೆ ಮನನೊಂದುಕೊಂಡು ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ (SSLC Student Death) ಮಾಡಿಕೊಂಡಿದ್ದಾಳೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಕೊಬ್ಬರಿಪೇಟೆ ಗ್ರಾಮದಲ್ಲಿ ಘಟನೆ ನಡೆದಿದೆ.

16 ವರ್ಷದ ಧನುಶ್ರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಧನುಶ್ರೀ ನೇಣಿಗೆ ಶರಣಾಗಿದ್ದಾಳೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಾಲ್ಕು ವಿಷಯಗಳಲ್ಲಿ ಫೇಲ್ ಆಗಿದ್ದಳು. ಇತ್ತ ಮಗಳು ಫೇಲ್ ಆಗಿದ್ದರು ಪೋಷಕರು ಆತ್ಮಸ್ಥೈರ್ಯ ತುಂಬಿದ್ದರು.

sslc student death
ಮೃತ ಧನುಶ್ರೀ

ಆದರೂ ಮನನೊಂದ ವಿದ್ಯಾರ್ಥಿನಿ ಧನುಶ್ರೀ ನೇಣಿಗೆ ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ಹೊಸದುರ್ಗ ಪೊಲೀಸರು ಆಗಮಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Engineering Student : ಎಕ್ಸಾಂನಲ್ಲಿ ಫೇಲ್‌; ಕೆರೆಗೆ ಹಾರಿ ಆರ್‌ವಿ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಘಟನೆ-1 ಚಿಕ್ಕಬಳ್ಳಾಪುರದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಚಿಕ್ಕಬಳ್ಳಾಪುರದ (chikkaballapur news) ಗಂಗರೇಕಾಲುವೆ ಗ್ರಾಮದ ಜಿ.ಎನ್ ವೈಷ್ಣವಿ (15) ಎಂಬಾಕೆಯು ಎಸ್‌ಎಸ್‌ಎಲ್‌ಸಿಯಲ್ಲಿ ಫೇಲ್‌ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ವೈಷ್ಣವಿ ಮಂಚನಬೆಲೆ ಗ್ರಾಮದ ಬಿಜಿಎಸ್ ಶಾಲೆಯಲ್ಲಿ ಎಸ್ಎಸ್ಎಲ್‌ಸಿ ಓದುತ್ತಿದ್ದಳು. ಎಸ್ಎಸ್ಎಲ್‌ಸಿ ಫಲಿತಾಂಶ ನೋಡಿ ತಾನು ಫೇಲ್ ಆಗಿದ್ದಕ್ಕೆ ನೊಂದುಕೊಂಡಿದ್ದಳು. ನಂತರ ಮನೆಯಲ್ಲೇ ಯಾರೂ ಇಲ್ಲದಾಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಳು.

ಘಟನೆ -2 ಹೊಲಕ್ಕೆ ತೆರಳಿ ಮರಕ್ಕೆ ನೇಣಿಗೆ ಶರಣಾದ

ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ಫೇಲ್‌ ಆದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿಖಿಲ್ (16) ನೇಣಿಗೆ ಶರಣಾದ ವಿದ್ಯಾರ್ಥಿ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ನಿಖಿಲ್, ಫಲಿತಾಂಶ ನೋಡಿ 3 ವಿಷಯದಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ಹೊಲಕ್ಕೆ ತೆರಳಿ ಮರವೊಂದಕ್ಕೆ ನೇಣಿಗೆ ಶರಣಾಗಿದ್ದಾನೆ. ಈ ಕುರಿತು ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ- 3 ಪಾಸಾದರೂ ನೇಣು ಹಾಕಿಕೊಂಡು ವಿದ್ಯಾರ್ಥಿನಿ

ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ. ಪರೀಕ್ಷೆಯಲ್ಲಿ ಪಾಸ್ ಆಗಿದ್ದರೂ ಫೇಲ್ ಎಂದು ತಿಳಿದು ನೇಣಿಗೆ ಶರಣಾದ್ದಾಳೆ. ಅಮೃತ (16) ನೇಣಿಗೆ ಶರಣಾದ ವಿದ್ಯಾರ್ಥಿನಿ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅಮೃತ ನಗರಕೆರೆ ಗ್ರಾಮದ ಸರ್ಕಾರಿ ಅನುದಾನಿತ ಪೂರ್ಣಿಮಾ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ಅಮೃತ ಶೇ.57 ಅಂಕ ಪಡೆದು ತೇರ್ಗಡೆ ಹೊಂದಿದ್ದಳು. ಆದರೆ ಪರೀಕ್ಷೆಯಲ್ಲಿ ಫೇಲ್‌ ಆಗಿಬಿಟ್ಟೆ ಎಂದು ತಿಳಿದು ಮನೆಯಲ್ಲಿ ಯಾರು ಇಲ್ಲದಾಗ ನೇಣಿಗೆ ಶರಣಾಗಿದ್ದಾಳೆ.

ಘಟನೆ-4 ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

ಬೆಳಗಾವಿ: ಎಸ್ಎಸ್ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತಿರ್ಣಗೊಂಡ ವಿದ್ಯಾರ್ಥಿನಿಯೋರ್ವಳು ಮನನೊಂದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ಜರುಗಿದೆ. ಸೃಷ್ಟಿ ಕಲ್ಲಪ್ಪ ಚೌವ್ಹಾಣ್ (16) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಯಾಗಿದ್ದಾಳೆ. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಪೋಷಕರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ. ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಘಟನೆ- 5 ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಫೇಲ್‌ ಆದ ಬಾಲಕ ನಾಪತ್ತೆ!

ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC Student) ಬರೆದಿದ್ದ ಬಾಲಕನೊರ್ವ ನಾಪತ್ತೆಯಾಗಿದ್ದಾನೆ. ಎಸ್ಎಸ್ಎಲ್‌ಸಿ ಪರೀಕ್ಷೆಯ (SSLC Student Missing) ಫಲಿತಾಂಶ ಬರುವ ಮುನ್ನವೇ (Missing Case) ಕಾಣೆಯಾಗಿದ್ದಾನೆ. ಕೊಪ್ಪಳ ತಾಲೂಕಿನ ಹಲಗೇರಿ ಗ್ರಾಮದ ಬಾಲಕ ಜಗದೀಶ್‌ ಎಂಬಾತ ಮೇ 7 ರಂದು ಮನೆಯಿಂದ ಹೊರ ಹೋದವನು ವಾಪಸ್‌ ಬಂದಿಲ್ಲ. ರಾತ್ರಿಯಾದರೂ ಬಾರದೆ ಇದ್ದಾಗ ಪೋಷಕರು ಸುತ್ತಮುತ್ತ ಹುಡುಕಾಟ ನಡೆಸಿದ್ದಾರೆ. ಇನ್ನೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್ ಆಗಿರುವ ಬಾಲಕ ಫಲಿತಾಂಶಕ್ಕೂ ಮುನ್ನವೇ ನಾಪತ್ತೆಯಾಗಿದ್ದಾನೆ. ಇತ್ತ ಬಾಲಕನನ್ನು ಯಾರಾದರೂ ಅಪಹರಿಸಿರಬಹುದು ಎಂದು ಪಾಲಕರು ಶಂಕಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
six seats of Karnataka Legislative Council Elections to be held on June 3
ರಾಜಕೀಯ17 mins ago

Karnataka Legislative Council: ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಐದಲ್ಲ 4 ಕ್ಷೇತ್ರ; ಜೆಡಿಎಸ್‌ಗೆ 2 ಕ್ಷೇತ್ರ ಬಿಟ್ಟುಕೊಡಲು ತೀರ್ಮಾನ?

IPL 2024
ಕ್ರಿಕೆಟ್18 mins ago

IPL 2024: ಬೆಂಗಳೂರಲ್ಲಿಂದು ಆರ್‌ಸಿಬಿ, ಡೆಲ್ಲಿ ನಿರ್ಣಾಯಕ ಪಂದ್ಯ; ಮಳೆ ಅಡ್ಡಿ ಆಗತ್ತಾ ? ಇಲ್ಲಿದೆ ರಿಪೋರ್ಟ್

Shekhar Suman Says Sex Workers Keep Society
ಬಾಲಿವುಡ್25 mins ago

Shekhar Suman: ಲೈಂಗಿಕ ಕಾರ್ಯಕರ್ತರು, ವೇಶ್ಯೆಯರ ನಡುವೆ ವ್ಯತ್ಯಾಸಗಳಿವೆ ಎಂದ ʻಹೀರಾಮಂಡಿʼನಟ!

Tirupathi Temple
ದೇಶ26 mins ago

Tirupati Temple: ತಿರುಪತಿಯ ಆಗಸ್ಟ್ ತಿಂಗಳ ಟಿಕೆಟ್ ವೇಳಾಪಟ್ಟಿ ಬಿಡುಗಡೆ: ಹೀಗೆ ಬುಕ್‌ ಮಾಡಿ

POSCO Case in Tumkur
ತುಮಕೂರು46 mins ago

POSCO Case : ತುಮಕೂರಿನಲ್ಲಿ ಪೈಶಾಚಿಕ ಕೃತ್ಯ; ತಂದೆಯಿಂದಲೇ ಮಗಳ ಮಾನಭಂಗ!

Mamitha Baiju
ಚಿನ್ನದ ದರ1 hour ago

Gold Rate Today: ಭಾರಿ ಏರಿಕೆ ಬಳಿಕ ಇಂದು ಚಿನ್ನದ ಬೆಲೆ ಯಥಾಸ್ಥಿತಿ; ಇಷ್ಟಿದೆ ದರ

Pakistan Occupied Kashmir
ವಿದೇಶ1 hour ago

Pakistan Occupied Kashmir: ಪಾಕ್‌ ದಿವಾಳಿ, ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಹಿಂಸೆಯ ಹಾವಳಿ; ನಾಗರಿಕ ದಂಗೆ ಶುರು?

SSLC Student Death Exam fail
ಚಿತ್ರದುರ್ಗ1 hour ago

SSLC Student Death : ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ 4 ಸಬ್ಜೆಕ್ಟ್‌ ಫೇಲ್‌; ವಿದ್ಯಾರ್ಥಿನಿ ಸೂಸೈಡ್‌

Richa Chadha drank alcohol to perform Sanjay Leela Bhansali’s Heeramandi
ಸಿನಿಮಾ1 hour ago

Richa Chadha: ಖ್ಯಾತ ನಿರ್ದೇಶಕ ಸೆಟ್‌ನಲ್ಲಿ ಮದ್ಯ ಸೇವಿಸಿ ಫಜೀತಿಗೆ ಒಳಗಾದ ರಿಚಾ ಚಡ್ಡಾ!

Elon Musk
ತಂತ್ರಜ್ಞಾನ1 hour ago

Elon Musk: ದೇಶದಲ್ಲಿ 1.8 ಲಕ್ಷ ಎಕ್ಸ್‌ ಖಾತೆಗಳು ಬಂದ್‌; ಕಾರಣವೇನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು21 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ3 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ3 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ3 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

ಟ್ರೆಂಡಿಂಗ್‌