Kyasanur Forest Disease: ಕರ್ನಾಟಕದಲ್ಲಿ ಕೆಎಫ್‌ಡಿಗೆ 6 ಬಲಿ! ಕಾಯಿಲೆ ಲಕ್ಷಣಗಳೇನು? ಪಾರಾಗುವುದು ಹೇಗೆ? - Vistara News

ಕರ್ನಾಟಕ

Kyasanur Forest Disease: ಕರ್ನಾಟಕದಲ್ಲಿ ಕೆಎಫ್‌ಡಿಗೆ 6 ಬಲಿ! ಕಾಯಿಲೆ ಲಕ್ಷಣಗಳೇನು? ಪಾರಾಗುವುದು ಹೇಗೆ?

Kyasanur Forest Disease: ಉತ್ತರ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 47 ಜನರಲ್ಲಿ ಕೆಎಫ್‌ಡಿ ಸೋಂಕು ಪತ್ತೆಯಾಗಿದೆ. ಅದರಲ್ಲೂ ಸಿದ್ದಾಪುರ ತಾಲೂಕಿನಲ್ಲಿ ಮಂಗನ ಕಾಯಿಲೆ ಸೋಂಕು ಪ್ರಕರಣಗಳು ಹೆಚ್ಚಾಗಿವೆ. ಶಿರಸಿಯಲ್ಲಿ ಮಂಗನ ಕಾಯಿಲೆಗೆ ವೃದ್ಧರೊಬ್ಬರು ಬಲಿಯಾಗಿದ್ದಾರೆ. ಶಿರಸಿ ತಾಲೂಕಿನಲ್ಲಿ ಇದೇ ಮೊದಲ ಪ್ರಕರಣವಾಗಿದೆ. ಅಲ್ಲದೆ, ಮಲೆನಾಡು ಭಾಗದಲ್ಲಿ ಸೋಂಕು ಹೆಚ್ಚಾಗುತ್ತಿದ್ದು, ಇದರ ಲಕ್ಷಣಗಳೇನು? ಪಾರಾಗುವುದು ಹೇಗೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

6 killed in Kyasanur Forest Disease in Karnataka symptoms of disease and precautions
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಉತ್ತರ ಕನ್ನಡ, ಶಿವಮೊಗ್ಗ ಸೇರಿ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಮಂಗನ ಕಾಯಿಲೆ (Kyasanur Forest Disease) ವಿಪರೀತವಾಗಿ ಕಾಡುತ್ತಿದೆ. ಈಗಾಗಲೇ ಚಿಕ್ಕಮಗಳೂರಲ್ಲಿ 2 ಹಾಗೂ ಶಿವಮೊಗ್ಗದಲ್ಲಿ ಒಬ್ಬರು ಕೆಎಫ್‌ಡಿಗೆ ಬಲಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟು ಆತಂಕ ಸೃಷ್ಟಿಯಾಗಿತ್ತು. ಈಗ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮತ್ತೊಬ್ಬರು ಬಲಿಯಾಗಿದ್ದು, ಕರ್ನಾಟಕದಲ್ಲಿ ಬಲಿಯಾದರವ ಸಂಖ್ಯೆ 6ಕ್ಕೇರಿದೆ. ಇದು ಜನರನ್ನು ಆತಂಕಕ್ಕೊಳಪಡಿಸಿದ್ದು, ರಾಜ್ಯ ಸರ್ಕಾರದಿಂದ ತುರ್ತು ಕ್ರಮ ಕೈಗೊಳ್ಳುವಂತೆ ಆಗ್ರಹಗಳು ಕೇಳಿಬರುತ್ತಿವೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 47 ಜನರಲ್ಲಿ ಕೆಎಫ್‌ಡಿ ಸೋಂಕು ಪತ್ತೆಯಾಗಿದೆ. ಅದರಲ್ಲೂ ಸಿದ್ದಾಪುರ ತಾಲೂಕಿನಲ್ಲಿ ಮಂಗನ ಕಾಯಿಲೆ ಸೋಂಕು ಪ್ರಕರಣಗಳು ಹೆಚ್ಚಾಗಿವೆ. ಶಿರಸಿಯಲ್ಲಿ ಮಂಗನ ಕಾಯಿಲೆಗೆ ವೃದ್ಧರೊಬ್ಬರು ಬಲಿಯಾಗಿದ್ದಾರೆ. ಶಿರಸಿ ತಾಲೂಕಿನಲ್ಲಿ ಇದೇ ಮೊದಲ ಪ್ರಕರಣವಾಗಿದೆ.

ಶಿರಸಿ ತಾಲೂಕಿನ ಹತ್ತರಗಿ ಸಮೀಪದ ನವಿಲಗಾರ ಗ್ರಾಮದ ರಾಮಚಂದ್ರ ಗೌಡ (68) ಸೋಂಕಿಗೆ ಬಲಿಯಾದವರು. ಇವರಿಗೆ ಉಡುಪಿಯ ಮಣಿಪಾಲ್​ ಆಸ್ಪತ್ರೆಯಲ್ಲಿ ಕೆಲವು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಹಿಂದೆ ಸಿದ್ದಾಪುರ ತಾಲೂಕಿನ ಭಾಗದಲ್ಲಿ ಇಬ್ಬರು ಮಂಗನ ಕಾಯಿಲೆಗೆ ಬಲಿಯಾಗಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಶಿರಸಿ ತಾಲೂಕು ವೈದ್ಯರ ಹಾಗೂ ಸಹಾಯಕರ ತಂಡ ಸ್ಥಳಗಳಿಗೆ ಭೇಟಿ ನೀಡಿ ಕಾಯಿಲೆಯ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ.

ಮಂಗನ ಕಾಯಿಲೆ ಲಕ್ಷಣಗಳೇನು? ಇದರಿಂದ ಪಾರಾಗುವುದು ಹೇಗೆ?

ಮಂಗನ ಕಾಯಿಲೆ ಎಂದೇ ಕರೆಯಲಾಗುವ ಕ್ಯಾಸನೂರ್‌ ಫಾರೆಸ್ಟ್‌ ಡಿಸೀಜ್‌ ಅಥವಾ ಕೆಎಫ್‌ಡಿ ಪ್ರಸರಣ (Kyasanur Forest Disease) ರಾಜ್ಯದಲ್ಲಿ ಹೆಚ್ಚುತ್ತಿದ್ದು, ಇಬ್ಬರು ಈಗಾಗಲೇ ಇದಕ್ಕೆ ಬಲಿಯಾಗಿದ್ದಾರೆ. ಹಲವಾರು ದಶಕಗಳಿಂದ ಪ್ರತಿ ವರ್ಷ ಈ ಸಮಯದಲ್ಲಿ ಮಲೆನಾಡಿನ ಸೀಮೆಗಳಲ್ಲಿ ಕಾಟ ಕೊಡುತ್ತಿರುವ ಈ ಕಾಯಿಲೆಯ ಬಗೆಗೆ ಒಂದಿಷ್ಟು ವಿವರಗಳು ಇಲ್ಲಿವೆ.

ಶಿವಮೊಗ್ಗ ಜಿಲ್ಲೆಯ ಕ್ಯಾಸನೂರಿನ ಕಾಡಿನಲ್ಲಿ, ಫ್ಲಾವಿವಿರಿಡೆ ಜಾತಿಗೆ ಸೇರಿದ ವೈರಸ್‌ನಿಂದ ಮೃತಪಟ್ಟ ಮಂಗವನ್ನು 1957ರಲ್ಲಿ ಮೊದಲಿಗೆ ಗುರುತಿಸಲಾಗಿತ್ತು. ಆನಂತರದಿಂದ ಪ್ರತಿ ವರ್ಷವೂ ನೂರಾರು ಜನರಿಗೆ ಈ ವೈರಸ್‌ನಿಂದ ಮಂಗನ ಕಾಯಿಲೆ ತಗುಲುತ್ತಿದ್ದು, ಸೋಂಕಿತ ಮಂಗಗಳಿಗೆ ಕಚ್ಚುವ ಉಣ್ಣಿ ಅಥವಾ ಉಣುಗುಗಳು ಮಾನವರಿಗೆ ಕಚ್ಚಿದಾಗ ಈ ವೈರಸ್‌ ಪ್ರಸರಣಗೊಳ್ಳುತ್ತದೆ. ಸಾಮಾನ್ಯವಾಗಿ ನವೆಂಬರ್‌ ನಂತರ ಎಪ್ರಿಲ್‌ವರೆಗಿನ ಅವಧಿಯಲ್ಲಿ ಈ ರೋಗ ಹೆಚ್ಚುತ್ತಿದೆ.

Immunity Against Diseases

ರೋಗ ಲಕ್ಷಣಗಳೇನು?

ಉಣುಗು ಕಚ್ಚಿದ 3-8 ದಿನಗಳಲ್ಲಿ ರೋಗ ಲಕ್ಷಣಗಳು ಪ್ರಕಟವಾಗುತ್ತವೆ. ಮೊದಲಿಗೆ ತೀವ್ರ ಜ್ವರ, ಚಳಿ ನಡುಕ, ತಲೆ ನೋವು, ವಿಪರೀತ ಆಯಾಸ ಕಾಣುತ್ತದೆ. ನಂತರ ವಾಂತಿ, ಭೇದಿ, ಮೈ-ಕೈ ನೋವು, ಜಠರ ಹಾಗೂ ಕರುಳಿನಲ್ಲಿ ತೊಂದರೆಗಳು, ಮೂಗು- ಒಸಡುಗಳಲ್ಲಿ ರಕ್ತಸ್ರಾವವೂ ಕಾಣಬಹುದು. ಸಾಮಾನ್ಯವಾಗಿ ಎರಡು ವಾರಗಳಲ್ಲಿ ಶೇ. 80ರಷ್ಟು ಸೋಂಕಿತರು ಚೇತರಿಸಿಕೊಳ್ಳುತ್ತಾರೆ. ಒಂದೊಮ್ಮೆ ಮೂರನೇ ವಾರಕ್ಕೂ ರೋಗ ಲಕ್ಷಣಗಳು ಮುಂದುವರಿದು, ಎರಡನೇ ಹಂತ ತಲುಪಿದರೆ ಸಮಸ್ಯೆ ಉಲ್ಭಣಿಸಬಹುದು. ಆಗ ನರಸಂಬಂಧಿ ಸಮಸ್ಯೆಗಳು, ದೃಷ್ಟಿಯ ತೊಂದರೆ, ಮಾನಸಿಕ ಸಮಸ್ಯೆಗಳು, ರಕ್ತಸ್ರಾವ ಮುಂತಾದವು ಕಂಡುಬಂದು, ರೋಗಿ ಚೇತರಿಸಿಕೊಳ್ಳುವುದು ನಿಧಾನವಾಗಬಹುದು. ಶೇ. 3-10ರಷ್ಟು ಪ್ರಕರಣಗಳಲ್ಲಿ ಮಾತ್ರವೇ ಸಾವು ಸಂಭವಿಸುತ್ತಿದೆ.

ಚಿಕಿತ್ಸೆ ಇದೆಯೇ?

ಈ ಕಾಯಿಲೆಗೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲ. ರೋಗಿಯ ರೋಗ ಲಕ್ಷಣಗಳನ್ನು ಆಧರಿಸಿ, ಅದಕ್ಕೆ ಚಿಕಿತ್ಸೆ ನೀಡಲಾಗುತ್ತದೆ. ಪೀಡಿತ ಪ್ರದೇಶಗಳಲ್ಲಿ ರೋಗ ಲಕ್ಷಣಗಳು ಕಂಡು ಬಂದರೆ ತಕ್ಷಣವೇ ಆಸ್ಪತ್ರೆಗೆ ದಾಖಲಾಗಬೇಕು. ಎಲಿಸಾ ಪರೀಕ್ಷೆ ಮತ್ತು ಆರ್‌ಟಿಪಿಸಿಆರ್‌ ಪರೀಕ್ಷೆಗಳ ಮೂಲಕ ಸೋಂಕನ್ನು ದೃಢಪಡಿಸಲಾಗುತ್ತದೆ. ಪೌಷ್ಟಿಕ ಆಹಾರ ಸೇವಿಸಿ, ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾಗದಂತೆ ಜಾಗ್ರತೆ ವಹಿಸಬೇಕು. ಈ ಸಂದರ್ಭದಲ್ಲಿ ವೈದ್ಯರೊಂದಿಗೆ ಸಮಾಲೋಚನೆಯಲ್ಲಿ ಇರಬೇಕಾದ್ದು ಅಗತ್ಯ. ರೋಗ ಒಂದೊಮ್ಮೆ ಎರಡನೇ ಹಂತ ಪ್ರವೇಶಿಸಿ, ರಕ್ತಸ್ರಾವ ಹೆಚ್ಚಾದರೆ, ರಕ್ತಪೂರೈಕೆಯೂ ಅನಿವಾರ್ಯವಾಗಬಹುದು. ಆರೋಗ್ಯದಲ್ಲಿ ಹಲವು ರೀತಿಯಲ್ಲಿ ಏರುಪೇರು ಕಾಣಬಹುದು. ಹಾಗಾಗಿ ರೋಗ ಲಕ್ಷಣಗಳು ಗೋಚರಿಸುತ್ತಿದ್ದಂತೆ ತ್ವರಿತವಾಗಿ ಆಸ್ಪತ್ರೆಗೆ ಧಾವಿಸಬೇಕು.

ಎಲ್ಲೆಲ್ಲಿ ಈ ರೋಗವಿದೆ?

ಪ್ರತಿ ವರ್ಷ ಸಾಮಾನ್ಯವಾಗಿ 400-500 ಪ್ರಕರಣಗಳವರೆಗೂ ಮಂಗನ ಕಾಯಿಲೆ ವರದಿಯಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಸಾಗರ, ತೀರ್ಥಹಳ್ಳಿ, ಹೊಸನಗರ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಜೊಯಿಡಾ, ದಕ್ಷಿಣ ಕನ್ನಡದ ಪುತ್ತೂರು, ಬೆಳ್ತಂಗಡಿ ಮುಂತಾದೆಡೆ ಈ ರೋಗ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿದೆ. ಕೆಲವು ವರ್ಷಗಳಲ್ಲಿ ಪೀಡಿತ ಸ್ಥಳಗಳ ಪಟ್ಟಿಯಲ್ಲೂ ವ್ಯತ್ಯಾಸ ಆಗಬಹುದು.

Infectious Disease

ತಡೆಯಲು ಸಾಧ್ಯವೇ?

ಕೆಲವೊಂದು ವಿಷಯಗಳ ಬಗ್ಗೆ ನಿಗಾ ವಹಿಸುವುದರಿಂದ ರೋಗ ಪ್ರಸರಣವನ್ನು ಮೊಟಕು ಮಾಡುವುದು ಸಾಧ್ಯವಿದೆ. ಮೊದಲಿಗೆ, ಉಣ್ಣಿಗಳ (ಉಣುಗು) ಕಡಿತಕ್ಕೆ ತುತ್ತಾಗದಂತೆ ಎಚ್ಚರ ವಹಿಸುವುದು ಅಗತ್ಯ. ಅರಣ್ಯಕ್ಕೆ ಹೋಗುವಾಗ ಆದಷ್ಟೂ ಮೈ ಪೂರ ಮುಚ್ಚುಕೊಳ್ಳುವಂತೆ ವಸ್ತ್ರ ಧರಿಸಿ, ಕೈಗೆ ಗ್ಲಾಸ್‌, ಕಾಲಿಗೆ ಬೂಟು ಅಗತ್ಯ. ಜತೆಗೆ, ಕೀಟಾಣುಗಳನ್ನು ಓಡಿಸುವಂಥ ಡಿಎಂಪಿ ತೈಲದಂಥವನ್ನು ಲೇಪಿಸಿಕೊಳ್ಳಬೇಕು. ಅರಣ್ಯದಿಂದ ಹಿಂತಿರುಗಿದ ಮೇಲೆ ವಸ್ತ್ರಗಳನ್ನು ಬಿಸಿ ನೀರಲ್ಲಿ, ಆ್ಯಂಟಿಸೆಪ್ಟಿಕ್‌ ಲಿಕ್ವಿಡ್‌ ಜತೆಗೆ ನೆನೆಸಿ ತೊಳೆಯಬೇಕು. ಮೈಗೆಲ್ಲ ಚೆನ್ನಾಗಿ ಸೋಪು ಹಚ್ಚಿ, ಬಿಸಿ ನೀರಲ್ಲಿ ಸ್ನಾನ ಮಾಡಬೇಕು.

ಇದನ್ನೂ ಓದಿ: Banana Benefits For Pregnant Women: ಗರ್ಭಿಣಿಯರು ಬಾಳೆಹಣ್ಣನ್ನು ತಿನ್ನಲೇಬೇಕು, ಏಕೆಂದರೆ…

ಮನೆಯ ಸುತ್ತಮುತ್ತಲಿನಲ್ಲಿ ಮಂಗ ಸತ್ತಿದ್ದರೆ ಅದನ್ನು ಆರೋಗ್ಯ ಇಲಾಖೆಗೆ ತ್ವರಿತವಾಗಿ ವರದಿ ಮಾಡಬೇಕು. ಸತ್ತ ಮಂಗದ ದೇಹವನ್ನು ಎಂದಿಗೂ ಮುಟ್ಟಬಾರದು. ಮಂಗನ ಕಾಯಿಲೆ ಸೋಂಕು ಇದೆ ಎಂದು ಗೊತ್ತಿರುವಂತಹ ಕಾಡು ಪ್ರದೇಶಗಳಿಗೆ ಹೋಗದಿದ್ದರೆ ಇನ್ನೂ ಒಳ್ಳೆಯದು. ಅಂತಹ ಪ್ರದೇಶಗಳ ಕಾಡಿನಿಂದ ಸೊಪ್ಪನ್ನು ತಂದು ಜಾನುವಾರು ಕೊಟ್ಟಿಗೆಗೆ ಹಾಕಬಾರದು. ಸಾಕು ಪ್ರಾಣಿಗಳಲ್ಲಿ ನೆಲೆಸುವ ಉಣುಗಿನಂಥ ಜೀವಿಗಳನ್ನು ನಿಯಂತ್ರಿಸಬೇಕು. ಈ ರೋಗಾಣು ಮಾನವರಿಂದ ಮಾನವರಿಗೆ ನೇರವಾಗಿ ಪ್ರಸರಣಗೊಂಡ ಉದಾಹರಣೆಗಳಿಲ್ಲ. ಆದರೆ ಒಬ್ಬರಿಗೆ ಕಚ್ಚಿದ ಉಣ್ಣಿಗಳು ಇನ್ನೊಬ್ಬರಿಗೆ ಕಚ್ಚಬಾರದೆಂದಿಲ್ಲ. ಮನೆಯಲ್ಲಿ ಬೆಕ್ಕು-ನಾಯಿಗಳಿದ್ದರೆ ಅವುಗಳ ಮುಖಾಂತರವೂ ಇನ್ನೊಬ್ಬರಿಗೆ ಹರಡಲು ಸಾಧ್ಯವಿದೆ. ಮುನ್ನೆಚ್ಚರಿಕೆ ಮಾತ್ರವೇ ಕಾಪಾಡಬಲ್ಲದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

K. Annamalai: ವಿಜಯಪುರ ನಗರದ ಮೀನಾಕ್ಷಿ ಚೌಕನಲ್ಲಿ ಆಯೋಜಿಸಿದ್ದ ಯುವ ಸಮಾವೇಶದಲ್ಲಿ ಅಣ್ಣಾಮಲೈ ಅವರು ಮಾತನಾಡಿದ್ದರು. 7 ಬಾರಿ ಸತತಯಾಗಿ ಗೆಲ್ಲುವುದು ಸುಲಭವಲ್ಲ. 70 ವರ್ಷ ವಯಸ್ಸಿನ ರಮೇಶ ಜಿಗಜಿಣಗಿ ಅವರು ಗೆದ್ದೇ ಗೆಲ್ಲುತ್ತಾರೆ. ವಿಜಯಪುರ ಕ್ಷೇತ್ರದ ಜನರ ಪ್ರೀತಿ ಜಿಗಜಿಣಗಿಯವರ ಮೇಲಿದೆ ಎಂದು ಅಣ್ಣಾಮಲೈ ಹೇಳಿದರು. ಈ ವೇಳೆ ರಮೇಶ ಜಿಗಜಿಣಗಿ ಆನಂದಬಾಷ್ಪ ಸುರಿಸಿದರು.

VISTARANEWS.COM


on

K. Annamalai
Koo

ವಿಜಯಪುರ: ಲೋಕ ಸಭಾ ಕ್ಷೇತದ ವಿಜಯಪುರ ಅಭ್ಯರ್ಥಿ ರಮೇಶ್​ ಜಿಗಜಿಣಗಿ ಪರ ಗುರುವಾರ ಮಾಜಿ ಐಎಎಸ್​ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ (K. Annamalai) ಅವರು ಮತಯಾಚನೆ ಮಾಡಿದರು. ಈ ವೇಳೆ ಅಣ್ಣಾಮಲೈ ರಮೇಶ್​ ಅವರ ಸಾಧನೆಗಳನ್ನು ಹೊಗಳಿದರು. ತಮ್ಮನ್ನು ಹೊಗಳುತ್ತಿದ್ದಂತೆ ಭಾವುಕರಾದ ಜಿಗಜಿಣಗಿ ಅವರು ಕಣ್ಣೀರು ಹಾಕಿದ ಪ್ರಸಂಗವೂ ನಡೆಯಿತು.

ವಿಜಯಪುರ ನಗರದ ಮೀನಾಕ್ಷಿ ಚೌಕನಲ್ಲಿ ಆಯೋಜಿಸಿದ್ದ ಯುವ ಸಮಾವೇಶದಲ್ಲಿ ಅಣ್ಣಾಮಲೈ ಅವರು ಮಾತನಾಡಿದರು. 7 ಬಾರಿ ಸತತಯಾಗಿ ಗೆಲ್ಲುವುದು ಸುಲಭವಲ್ಲ. 70 ವರ್ಷ ವಯಸ್ಸಿನ ರಮೇಶ ಜಿಗಜಿಣಗಿ ಅವರು ಗೆದ್ದೇ ಗೆಲ್ಲುತ್ತಾರೆ. ವಿಜಯಪುರ ಕ್ಷೇತ್ರದ ಜನರ ಪ್ರೀತಿ ಜಿಗಜಿಣಗಿಯವರ ಮೇಲಿದೆ ಎಂದು ಅಣ್ಣಾಮಲೈ ಹೇಳಿದರು. ಈ ವೇಳೆ ರಮೇಶ ಜಿಗಜಿಣಗಿ ಆನಂದಬಾಷ್ಪ ಸುರಿಸಿದರು.

ನಾವು ದೊಡ್ಡ ಸಂಖ್ಯೆಯಲ್ಲಿ ‌ನಾವು ಸೇರಿದ್ದೇವೆ. ಯುವಕರ ಬದುಕು ದೇಶದಲ್ಲಿ ಹೇಗೆ ಇರಬೇಕೆಂದು ಹೇಳಲು ಸೇರಿದ್ದೇವೆ. 26 ನೇ ವಯಸ್ಸಿನಲ್ಲಿ ಜಿಗಜಿಣಗಿ ಸಚಿವರಾಗಿದ್ದರು. 2014 ಮೇ 30ರಂದು ‌ನಾವು ಹೊಸ ರಾಜಕೀಯ ಅಧ್ಯಾಯ ಬರೆದೆವು. ಮೋದಿ ಅವರು ಪ್ರಧಾನಮಂತ್ರಿ ಆಗಬೇಕೆಂದು ಬಯಸಿದೆವು. ಪಿಎಂ‌ ಜಾಗದಲ್ಲಿ ಮೋದಿ ಅವರನ್ನು ಕೂರಿಸಿದೆವು. ಆ ವೇಳೆ 11 ಕೋಟಿ‌ಜನರಿಗೆ ಶೌಚಾಲಯ ಇರಲಿಲ್ಲ, 42 ಕೋಟಿ ಜನರಿಗೆ ಬ್ಯಾಂಕ್ ಅಕೌಂಟ್ ಇರಲಿಲ್ಲ. ಆದರೆ ಮೋದಿ ಬಂದ ಬಳಿಕ ಎಲ್ಲವೂ ಸಿಕ್ಕಿದೆ ಎಂದು ಅಣ್ಣಾಮಲೈ ಅವರು ಹೇಳಿದರು.

ಇದನ್ನೂ ಓದಿ: Lok Sabha Election 2024: ಮಹಾರಾಷ್ಟ್ರ ಸಿಎಂ ಕರೆಸಿ ಕನ್ನಡಿಗರಿಗೆ ಅವಮಾನ ಮಾಡಿದ ಜೋಶಿ: ಸಂತೋಷ್‌ ಲಾಡ್‌

ಕಾಂಗ್ರೆಸ್ ನವರು ಪ್ರತಿ ಚುನಾವಣೆಯಲ್ಲೂ ಬಡತನ ನಿರ್ಮೂಲನೆ ಮಾಡುತ್ತೇವೆಂದು ಭಾಷಣ ಮಾಡಿಕೊಂಡು ಬಂದಿದ್ದಾರೆ. ಆದರೆ ಬಡತನ ನಿರ್ಮೂಲನೆ ಮಾಡಲಿಲ್ಲ. ಈಗಲೂ ಅದೇ ಮಾತನಾಡುತ್ತಿದ್ದಾರೆ. ವಾಜಪೇಯಿ‌ 13 ದಿನ, 13 ತಿಂಗಳು ಹಾಗೂ ಐದು ವರ್ಷ ಸರ್ಕಾರ ಮಾಡಿದ್ದರು. ಮೋದಿ ಅವರಿಗೆ 10 ವರ್ಷ ಅಧಿಕಾರ ಸಿಕ್ಕಿದೆ. ಕಾಂಗ್ರೆಸ್ ಈಗಲೂ ಅದೇ ಬಡತನದ ಕುರಿತು ಮಾತನಾಡುತ್ತಿದೆ ಎಂದು ಅಣ್ಣಾಮಲೈ ಅವರು ಲೇವಡಿ ಮಾಡಿದರು.

ಒಂದು ವೋಟ್ ನಿಂದ ಏನಾಗುತ್ತದೆ ಎಂದು ಉದಾಸೀನ ಮಾಡಬೇಡಿ. ರಾಜಕೀಯ ವ್ಯವಸ್ಥೆ ಬಗ್ಗೆ ನಿರ್ಧರಿಸಲು ಮೋದಿಗೆ ವೋಟ್ ಮಾಡಿ. ರಮೇಶ ಜಿಗಜಿಣಗಿ ಮತ್ತೇ ಸಂಸದರಾಗಬೇಕು ಎಂದು ಹೇಳಿದರು

197 ದೇಶಗಳಲ್ಲಿ ಭಾರತ ಮುಂಚೂಣಿಯಲ್ಲಿದೆ. ಮೋದಿ ಇಂತ ವ್ಯವಸ್ಥೆ ಮಾಡಿದ್ದಾರೆ. ದೇಶ ಮೊದಲು ಎಂಬುದು ಮೋದಿ‌ಯವರ ಸಿದ್ಧಾಂತ. ತಮಿಳುನಾಡಿನಲ್ಲಿ ಒಂದು‌ ಪಕ್ಷವಿದೆ. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಬೆಂಬಲ ನೀಡಿದವರು ಅವರು. ತಮಗೆ ಬೇಕಾದ ಖಾತೆಗಳನ್ನು ಪಡೆದುಕೊಂಡರು. ತಮಿಳುನಾಡಿನಲ್ಲಿ ಏಳು ಕೇಂದ್ರ ಸಚಿವರಾಗಿದ್ದರು. 2 ಜಿ ಸ್ಪೆಕ್ಟ್ರಮ್ ಹಗರಣ ಮಾಡಿದರು ಎಂದು ಇಂಡಿಯಾ ಬ್ಲಾಕ್​ ಬಗ್ಗೆ ದೂರಿದರು.

ಜೂನ್ 4 ರ ಬಳಿಕ 70 ವರ್ಷದ ಮೇಲಿನವರಿಗೆ 5 ಲಕ್ಷ ರೂಪಾಯಿ ಆರೋಗ್ಯ ವಿಮೆ ಕೊಡೊದಾಗಿ ಮೋದಿ ಹೇಳಿದ್ದಾರೆ. ಮೋದಿ ಮನೆಯಿಲ್ಲದವರಿಗರ ಮನೆ ನಿರ್ಮಾಣ ಮಾಡಿ ಕೊಟ್ಟಿದ್ದಾರೆ. 295 ಭರವಸೆಗಳಲ್ಲಿ ಎಲ್ಲ ಭರವಸೆ ಈಡೇರಿಸಿದ್ದೇವೆ ಎಂದು ಅವರು ಹೇಳಿದರು.

ಈ ಚುನಾವಣೆಯಲ್ಲಿ ಶೇಕಡಾ 51 ಮತ ಬಿಜೆಪಿಗೆ ಬೀಳಬೇಕು. ಮೇಡ್ ಇನ್ ಇಂಡಿಯಾದಲ್ಲಿ ಚಂದ್ರನ ದಕ್ಷಿಣ ಕಕ್ಷೆಯಲ್ಲಿ ಇಳಿದಿದ್ದೇವೆ. 14 ದೇಶಗಳಿಗೆ‌ ನಾನಾ ಸರಕು ರಪ್ತು ಮಾಡುತ್ತಿದ್ದೇವೆ. ಕೊರೊನಾ‌ ಕಾಲದಲ್ಲಿ ಅಮೆರಿಕಾಗೂ ಮುನ್ನ ಲಸಿಕೆ ಕಂಡು‌ ಹಿಡಿದೇವು. 10 ವರ್ಷ ಕಾಲ ಭ್ರಷ್ಟಾಚಾರ ರಹಿತ ಆಡಳಿತ ಮಾಡಿದ್ದೇವೆ ಎಂದು ಅಣ್ಣಾಮಲೈ ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

AC Blast : ಕಲ್ಯಾಣ್​ ಜ್ಯುವೆಲರಿಯಲ್ಲಿ ಭಾರಿ ಅವಘಡ; ಏರ್​ ಕಂಡೀಷನರ್​ ಬ್ಲಾಸ್ಟ್​ ಆಗಿ ಮೂವರಿಗೆ ಗಾಯ

AC Blast: ಜ್ಯುವೆಲ್ಲರಿಯಲ್ಲಿರುವ ಎಸಿ ವ್ಯವಸ್ಥೆಗೆ ಗ್ಯಾಸ್ ಮರುಪೂರಣ ಮಾಡಲು ಹೋದಾಗ ಘಟನೆ ಸಂಭವಿಸಿದೆ. ಈ ವೇಳೆ ಶಾರ್ಟ್​ ಸರ್ಕೀಟ್​ ಉಂಟಾಗಿದ್ದು ಏಕಾಏಕಿ ಬ್ಲಾಸ್ಟ್ ಎಸಿ ಬ್ಲಾಸ್ಟ್​ ಆಗಿ ಕಿಟಕಿ ಗಾಜುಗಳು ಎಲ್ಲೆಡೆ ಸಿಡಿದು ಬಿದ್ದಿವೆ. ಈ ಕೆಲಸಕ್ಕಾಗಿ ಬಂದಿದ್ದ ಮೂವರು ಕಾರ್ಮಿಕರಿಗೆ ಗಾಯವಾಗಿದೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭಿರವಾಗಿ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

AC Blast
Koo

ಬಳ್ಳಾರಿ: ಶಾರ್ಟ್ ಸರ್ಕ್ಯೂಟ್​ನಿಂದಾಗಿ ಏರ್​ ಕಂಡೀಷನರ್​ ಯಂತ್ರ (AC Blast) ಸ್ಫೋಟಗೊಂಡು ಮೂವರು ಗಾಯಗೊಂಡ ಘಟನೆ ನಡಿದೆ. ಬಳ್ಳಾರಿಯ ಕಲ್ಯಾಣ್ ಜುವೆಲರ್ಸ್ ನಲ್ಲಿ ಘಟನೆ ನಡೆದಿದೆ. ಬಳ್ಳಾರಿಯ ತೇರು ಬೀದಿಯ ರಸ್ತೆಯಲ್ಲಿ ಇರುವ ಕಲ್ಯಾಣ ಜ್ಯುವೆಲರ್ಸ್​ನಲ್ಲಿ ಶಾ್ಟ್​ ಸರ್ಕೀಟ್​ನಿಂದಾಗಿ ಎಸಿ ಸ್ಫೋಟಗೊಂಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜ್ಯುವೆಲ್ಲರಿಯಲ್ಲಿರುವ ಎಸಿ ವ್ಯವಸ್ಥೆಗೆ ಗ್ಯಾಸ್ ಮರುಪೂರಣ ಮಾಡಲು ಹೋದಾಗ ಘಟನೆ ಸಂಭವಿಸಿದೆ. ಈ ವೇಳೆ ಶಾರ್ಟ್​ ಸರ್ಕೀಟ್​ ಉಂಟಾಗಿದ್ದು ಏಕಾಏಕಿ ಬ್ಲಾಸ್ಟ್ ಎಸಿ ಬ್ಲಾಸ್ಟ್​ ಆಗಿ ಕಿಟಕಿ ಗಾಜುಗಳು ಎಲ್ಲೆಡೆ ಸಿಡಿದು ಬಿದ್ದಿವೆ. ಈ ಕೆಲಸಕ್ಕಾಗಿ ಬಂದಿದ್ದ ಮೂವರು ಕಾರ್ಮಿಕರಿಗೆ ಗಾಯವಾಗಿದೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭಿರವಾಗಿ ಎಂದು ಮೂಲಗಳು ತಿಳಿಸಿವೆ.

ಗಾಯಗಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಎಸಿ ಬ್ಲಾಸ್ಟ್ ಆದ ಹಿನ್ನೆಲೆಯಲ್ಲಿ ಶಾಪ್ ನಲ್ಲಿ ದಟ್ಟ ಹೊಗೆ ಆವರಿಸಿತ್ತು.

ಪೊಲೀಸ್‌ ಸ್ಟೇಷನ್‌ನಲ್ಲೇ ಇನ್‌ಸ್ಪೆಕ್ಟರ್‌ ಕಪಾಳಕ್ಕೆ ಹೊಡೆದ ಮಹಿಳೆ

ಬೆಂಗಳೂರು: ಪೊಲೀಸ್ ಠಾಣಾ ಆವರಣದಲ್ಲೇ ಮಹಿಳೆಯೊಬ್ಬಳು ಇನ್‌ಸ್ಪೆಕ್ಟರ್‌ಗೆ ಕಪಾಳಮೋಕ್ಷ (Assault Case) ಮಾಡಿದ್ದಾಳೆ. ಸೈಟು ವಿಚಾರಕ್ಕೆ (Site Dispute) ಎರಡು ಗುಂಪುಗಳ ಮಧ್ಯೆ ಮನಸ್ತಾಪ ಉಂಟಾಗಿತ್ತು. ಹೀಗಾಗಿ ಜ್ಞಾನಭಾರತಿ ಠಾಣೆಗೆ ಬಂದಿದ್ದರು. ಈ ವೇಳೆ ಎರಡು ಗುಂಪುಗಳ ಸದಸ್ಯರು ಮಾತಿಗೆ ಮಾತು ಬೆಳೆಸಿ ಕಿತ್ತಾಡಲು ಮುಂದಾಗಿದ್ದರು. ಹೀಗಾಗಿ ಮಧ್ಯಪ್ರವೇಶಿಸಿ ಗಲಾಟೆ ಮಾಡದಂತೆ ಎಚ್ಚರಿಸಲು ಹೋದ ಇನ್‌ಸ್ಪೆಕ್ಟರ್‌ಗೆ ಮಹಿಳೆಯೊಬ್ಬಳು ಕಪಾಳಕ್ಕೆ ಹೊಡೆದಿದ್ದಾಳೆ.

ಇದನ್ನೂ ಓದಿ: Murder Case : ನಡುರಸ್ತೆಯಲ್ಲೆ ಪತ್ನಿಗೆ ಚಾಕು ಇರಿದು ಕೊಂದ ಪತಿ

ನಿನ್ನೆ ಬುಧವಾರ ಸಂಜೆ ಜ್ಞಾನಭಾರತಿ ಠಾಣೆ ಇನ್‌ಸ್ಪೆಕ್ಟರ್‌ ರವಿ ಅವರಿಗೆ ಫೌಜೀಯಾ ಎಂಬಾಕೆ ಹಲ್ಲೆ ನಡೆಸಿದ್ದಾಳೆ. ಫೌಜೀಯಾ ಹಾಗೂ ಇನ್ನೊಂದು ಗುಂಪು ಸೈಟು ವಿಚಾರಕ್ಕೆ ಜ್ಞಾನಭಾರತಿ ಠಾಣೆ ಮೆಟ್ಟಿಲೇರಿದ್ದರು. ಈ ವೇಳೆ ಠಾಣೆ ಆವರಣದಲ್ಲಿ ಎರಡು ಗುಂಪುಗಳು ಏರು ಧ್ವನಿಯಲ್ಲಿ ಕೂಗಾಡುತ್ತಾ ಮಾತನಾಡುತ್ತಿದ್ದರು.

ಕರ್ತವ್ಯದಲ್ಲಿದ್ದ ಇನ್‌ಸ್ಪೆಕ್ಟರ್‌ ರವಿ ಎರಡು ಗುಂಪುಗಳಿಗೆ ಗಲಾಟೆ ಮಾಡದಂತೆ ವಾರ್ನಿಂಗ್‌ ಮಾಡಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಫೌಜೀಯ ಏಕಾಏಕಿ ಇನ್‌ಸ್ಪೆಕ್ಟರ್‌ ರವಿ ಅವರ ಕಪಾಳಕ್ಕೆ ಹೊಡೆದಿದ್ದಾಳೆ. ಮಾನವ ಹಕ್ಕುಗಳ ಸಂಘಟನೆಯಲ್ಲಿರುವ ಫೌಜೀಯಾ ಹಾಗೂ ಮತ್ತಿಬ್ಬರು ಮಹಿಳೆಯರ ಮೇಲೆ ಎಫ್‌ಐಆರ್ ದಾಖಲಾಗಿದೆ. ರಾತ್ರಿಯೇ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಪೊಲೀಸರು ಒಪ್ಪಿಸಿದ್ದಾರೆ. ಸದ್ಯ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

Continue Reading

ಬಳ್ಳಾರಿ

Dr Vinayaka Prasanna: ಡಾ.ವಿನಾಯಕ ಪ್ರಸನ್ನ ವಿಧಿವಶ

Dr Vinayaka Prasanna: ಬಳ್ಳಾರಿಯ ವಿಮ್ಸ್‌ನ ವಿಧಿ ವಿಜ್ಞಾನ ವೈದ್ಯಶಾಸ್ತ್ರ ವಿಭಾಗದ ಪ್ರೊ. ಡಾ.ವಿನಾಯಕ ಪ್ರಸನ್ನ(50) ಅವರು ಅನಾರೋಗ್ಯದಿಂದ ಬೆಂಗಳೂರಿ‌ನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ.

VISTARANEWS.COM


on

Dr Vinayaka Prasanna passed away
Koo

ಬಳ್ಳಾರಿ: ಬಳ್ಳಾರಿಯ ವಿಮ್ಸ್‌ನ ವಿಧಿ ವಿಜ್ಞಾನ ವೈದ್ಯಶಾಸ್ತ್ರ ವಿಭಾಗದ ಪ್ರೊ. ಡಾ.ವಿನಾಯಕ ಪ್ರಸನ್ನ (50) (Dr Vinayaka Prasanna) ಅವರು ಅನಾರೋಗ್ಯದಿಂದ ಬೆಂಗಳೂರಿ‌ನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಮೃತರು ತಾಯಿ ಶಕುಂತಲ, ಪತ್ನಿ ಡಾ‌. ವನಜ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿ ಅಪಾರ ಬಂಧು-ಬಳಗ ಮತ್ತು ಸ್ನೇಹಿತರನ್ನು ಅಗಲಿದ್ದಾರೆ.

ಮೃತರ ಪಾರ್ಥಿವ ಶರೀರವನ್ನು ಗುರುವಾರ ಸಂಜೆ 7 ಗಂಟೆಗೆ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಯಿತು. ಬಳಿಕ ನಗರದ ಸಿರುಗುಪ್ಪ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ಅಂತ್ಯಕ್ರಿಯೆಯು ಶುಕ್ರವಾರ ಬೆಳಿಗ್ಗೆ ಬಳ್ಳಾರಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರೊ. ಡಾ.ವಿನಾಯಕ ಪ್ರಸನ್ನ ಅವರ ನಿಧನಕ್ಕೆ ವಿಮ್ಸ್ ವೈದ್ಯರು, ಭಾರತೀಯ ವೈದ್ಯಕೀಯ ಸಂಘ ಹಾಗೂ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.

Continue Reading

ಶಿವಮೊಗ್ಗ

Shivamogga News: ವಿಜೃಂಭಣೆಯ ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ರಥೋತ್ಸವ

Shivamogga News: ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು.

VISTARANEWS.COM


on

Sri Siddhivinayaka Swami SrimanMaharathotsava in Ripponpet
Koo

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು. ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀ ಆಭಿನವ ಚನ್ನಬಸವ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿ, ಈ ವರ್ಷ ನಾಡಿಗೆ ಸಮೃದ್ಧ ಮಳೆ-ಬೆಳೆಯಾಗಿ ರೈತರ ಬದುಕು ಹಸನಾಗಲೆಂದು ಮತ್ತು ಜಗತ್ತಿನಲ್ಲೆಡೆ ಶಾಂತಿ, ನೆಮ್ಮದಿಯನ್ನು ಕರುಣಿಸುವಂತಾಗಲಿ ಎಂದು ಸಿದ್ಧಿವಿನಾಯಕ ದೇವರಲ್ಲಿ ಶ್ರೀಗಳು ಪ್ರಾರ್ಥಿಸಿದರು.

ಇದನ್ನೂ ಓದಿ: IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

ಮನ್ಮಹಾರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಶಿವಮೊಗ್ಗದ ವಸಂತ ಭಟ್ ಮತ್ತು ಚಂದ್ರಶೇಖರ ಭಟ್ ಹಾಗೂ ಗುರುರಾಜ ಭಟ್ ಅವರ ನೇತೃತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತಾಧಿಗಳು ಶ್ರದ್ಧಾ ಭಕ್ತಿಯಿಂದ ರಥವನ್ನು ಎಳೆದು ಇಷ್ಠಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಭಕ್ತರಿಗೆ ಉಚಿತವಾಗಿ ಕಬ್ಬಿನ ಹಾಲು ಮತ್ತು ಐಸ್‌ಕ್ರೀಮ್, ಕುಡಿಯುವ ನೀರಿನ ವ್ಯವಸ್ಥೆಯನ್ನು ವಿವಿಧ ಸಂಘಟನೆಗಳಿಂದ ಆಯೋಜಿಸಲಾಗಿತ್ತು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ

ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಈಶ್ವರಶಟ್ಟಿ, ಎನ್. ಸತೀಶ್, ಗಣೇಶ್ ಎನ್. ಕಾಮತ್, ಎಂ.ಡಿ. ಇಂದ್ರಮ್ಮ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ತುಳೋಜಿರಾವ್, ಸ್ವಾಮಿ ದೊಡ್ಡಿನಕೊಪ್ಪ, ವೈ.ಜೆ. ಕೃಷ್ಣ, ಉಮೇಶ್ ಆರ್., ಮಂಜನಾಯ್ಕ್, ಎಂ.ಬಿ. ಮಂಜುನಾಥ, ಎಂ. ಸುರೇಶ್‌ ಸಿಂಗ್, ಸುಧೀರ್ ಪಿ., ರವೀಂದ್ರ ಕೆರೆಹಳ್ಳಿ, ನಾಗರತ್ನ ದೇವರಾಜ್, ಎಸ್.ಎನ್. ಬಾಲಚಂದ್ರ, ಕುಸುಮಾ ಬಾಲಚಂದ್ರ, ಪದ್ಮಾ ಸುರೇಶ್, ನಿವೃತ್ತ ಶಿಕ್ಷಕ ರಾಧಾಕೃಷ್ಣ, ಜಯಲಕ್ಷ್ಮಿ ಮೋಹನ್ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.

Continue Reading
Advertisement
Amit Shah
ದೇಶ11 seconds ago

Amit Shah: ಮತದಾನ ಕುಸಿತದಿಂದ ಬಿಜೆಪಿಗೆ ನಷ್ಟ? ಅಮಿತ್ ಶಾ ಹೇಳೋದೇನು?

K. Annamalai
ಪ್ರಮುಖ ಸುದ್ದಿ22 mins ago

K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

Mumbai
ದೇಶ27 mins ago

ಆಸ್ಪತ್ರೆಯಲ್ಲಿ ಟಾರ್ಚ್‌ ಬಳಸಿ ಹೆರಿಗೆ; ತಾಯಿ, ಮಗು ಸಾವು; 3 ಈಡಿಯಟ್ಸ್‌ ಸಿನಿಮಾ ದೃಶ್ಯ ಇಲ್ಲಿ ದುರಂತ!

AC Blast
ಪ್ರಮುಖ ಸುದ್ದಿ1 hour ago

AC Blast : ಕಲ್ಯಾಣ್​ ಜ್ಯುವೆಲರಿಯಲ್ಲಿ ಭಾರಿ ಅವಘಡ; ಏರ್​ ಕಂಡೀಷನರ್​ ಬ್ಲಾಸ್ಟ್​ ಆಗಿ ಮೂವರಿಗೆ ಗಾಯ

Tax Returns
ಪ್ರಮುಖ ಸುದ್ದಿ2 hours ago

Tax Returns: ಪಾಕ್‌ ಜನರಿಗೆ ಬೆಲೆಯೇರಿಕೆ ಬೆನ್ನಲ್ಲೇ ತೆರಿಗೆ ಹೊರೆ; ಸರ್ಕಾರ ಯಾವ ಮಟ್ಟಕ್ಕೆ ಇಳಿದಿದೆ ನೋಡಿ!

Dr Vinayaka Prasanna passed away
ಬಳ್ಳಾರಿ2 hours ago

Dr Vinayaka Prasanna: ಡಾ.ವಿನಾಯಕ ಪ್ರಸನ್ನ ವಿಧಿವಶ

Sri Siddhivinayaka Swami SrimanMaharathotsava in Ripponpet
ಶಿವಮೊಗ್ಗ2 hours ago

Shivamogga News: ವಿಜೃಂಭಣೆಯ ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ರಥೋತ್ಸವ

Minister Santosh Lad latest statement in Dharwad
ಕರ್ನಾಟಕ2 hours ago

Lok Sabha Election 2024: ಮಹಾರಾಷ್ಟ್ರ ಸಿಎಂ ಕರೆಸಿ ಕನ್ನಡಿಗರಿಗೆ ಅವಮಾನ ಮಾಡಿದ ಜೋಶಿ: ಸಂತೋಷ್‌ ಲಾಡ್‌

Voting Awareness for Passengers at Hosapete Railway Station
ವಿಜಯನಗರ2 hours ago

Lok Sabha Election 2024: ಹೊಸಪೇಟೆ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮತದಾನ ಜಾಗೃತಿ

BJP workers meeting in Banavasi
ರಾಜಕೀಯ2 hours ago

Lok Sabha Election 2024: ಕೇಂದ್ರದ ಸಾಧನೆಗಳನ್ನು ಮನೆ ಮನೆಗೂ ಪರಿಚಯಿಸಿ: ವಿ. ಸುನೀಲ್ ಕುಮಾರ್

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ18 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

ಟ್ರೆಂಡಿಂಗ್‌