7 nominations withdrawn in Bellary district 56 candidates are in the fray Karnataka election 2023 updates Karnataka election 2023: ಬಳ್ಳಾರಿಯ 5 ಕ್ಷೇತ್ರದಲ್ಲಿ 7 ನಾಮಪತ್ರ ವಾಪ‌‌ಸ್;‌ ಕಣದಲ್ಲಿ 56 ಅಭ್ಯರ್ಥಿಗಳು - Vistara News

ಕರ್ನಾಟಕ

Karnataka election 2023: ಬಳ್ಳಾರಿಯ 5 ಕ್ಷೇತ್ರದಲ್ಲಿ 7 ನಾಮಪತ್ರ ವಾಪ‌‌ಸ್;‌ ಕಣದಲ್ಲಿ 56 ಅಭ್ಯರ್ಥಿಗಳು

karnataka Election 2023: ಬಳ್ಳಾರಿ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಒಟ್ಟು 5 ಕ್ಷೇತ್ರಗಳಿಂದ ನಾಮಪತ್ರ ಸಲ್ಲಿಸಿದ್ದ 63 ಅಭ್ಯರ್ಥಿಗಳ ಪೈಕಿ 7 ಜನ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲಾಗಿದ್ದು, ಅಂತಿಮವಾಗಿ ಒಟ್ಟು 56 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

VISTARANEWS.COM


on

7 nomination papers withdrawn in Bellary district
ಬಳ್ಳಾರಿ ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಪವನ್‌ ಕುಮಾರ್‌ ಮಾಲಪಾಟಿ ಅವರ ಭಾವಚಿತ್ರ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಳ್ಳಾರಿ: ವಿಧಾನಸಭಾ ಚುನಾವಣೆಗೆ (Karnataka election 2023) ಸಂಬಂಧಿಸಿದಂತೆ ಸಲ್ಲಿಸಿದ್ದ ನಾಮಪತ್ರ ಹಿಂಪಡೆಯಲು (nomination withdrawal) ಕೊನೆಯ ದಿನವಾದ ಸೋಮವಾರ ಜಿಲ್ಲೆಯಲ್ಲಿ ಒಟ್ಟು 7 ನಾಮಪತ್ರಗಳನ್ನು ವಾಪಸ್‌ ಪಡೆಯಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಪವನ್‌ ಕುಮಾರ್‌ ಮಾಲಪಾಟಿ ತಿಳಿಸಿದ್ದಾರೆ.

ಬಳ್ಳಾರಿ (Bellary) ನಗರ 4, ಸಿರುಗುಪ್ಪ 2, ಬಳ್ಳಾರಿ ಗ್ರಾಮೀಣ 1 ನಾಮಪತ್ರ ಹಿಂದಕ್ಕೆ ಪಡೆಯಲಾಗಿದೆ. ಕೆಆರ್‌ಪಿಪಿ ಪಕ್ಷದಿಂದ ಬಳ್ಳಾರಿ (Bellary) ನಗರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಜನಾರ್ದನ ರೆಡ್ಡಿ ಪುತ್ರಿ ಬ್ರಹ್ಮಿಣಿ ರೆಡ್ಡಿ ನಾಮಪತ್ರವನ್ನು ಹಿಂಪಡೆದಿದ್ದಾರೆ. ಕೆಆರ್‌ಪಿಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಲಕ್ಷ್ಮಿ ಅರುಣ ಜತೆ ಬ್ರಹ್ಮಿಣಿ ರೆಡ್ಡಿ ಉಮೇದುವಾರಿಕೆಯನ್ನು ಸಲ್ಲಿಸಿದ್ದರು. ತಾಯಿಯ ನಾಮಪತ್ರ ಕ್ರಮಬದ್ಧವಾದ ಹಿನ್ನೆಲೆಯಲ್ಲಿ ಬ್ರಹ್ಮಿಣಿ ರೆಡ್ಡಿ ನಾಮಪತ್ರವನ್ನು ಹಿಂದಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Karnataka Election: ಗೋಕಾಕ ಕಾಂಗ್ರೆಸ್‌ ಸಮಾವೇಶಕ್ಕೆ ಜನರೇ ಇಲ್ಲ; ಭಯಪಡಬೇಡಿ ಎಂದ ಸವದಿ, ಸಿದ್ದರಾಮಯ್ಯ

ಬಳ್ಳಾರಿ ನಗರ ಬಿಜೆಪಿ ಅಭ್ಯರ್ಥಿ ಜಿ.ಸೋಮಶೇಖರ ರೆಡ್ಡಿ ಅವರ ನಾಮಪತ್ರ ಕ್ರಮಬದ್ಧವಾದ ಹಿನ್ನೆಲೆಯಲ್ಲಿ ಪತ್ನಿ ಜಿ.ವಿಜಯಮ್ಮ ಸಲ್ಲಿಸಿದ್ದ ನಾಮಪತ್ರ ಹಿಂದಕ್ಕೆ ಪಡೆಯಲಾಗಿದೆ. ಬಳ್ಳಾರಿ ನಗರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಗಂಗೀರೆಡ್ಡಿ ಹಾಗೂ ತೋರಣಗಲ್ ಗ್ರಾಮದ ನಾರಾಯಣಸ್ವಾಮಿ ನಾಮಪತ್ರವನ್ನು ಹಿಂಪಡೆದಿದ್ದಾರೆ.

ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ನಾಗೇಂದ್ರ ಅವರ ನಾಮಪತ್ರ ಕ್ರಮಬದ್ಧವಾಗಿರುವುದರಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಇವರ ಸಹೋದರ ಬಿ.ವೆಂಕಟೇಶ್ ಪ್ರಸಾದ್ ಅವರು ಸಲ್ಲಿಸಿದ್ದ ನಾಮಪತ್ರ ಹಿಂದಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: Logistics index : ವಿಶ್ವಬ್ಯಾಂಕ್‌ನ ಲಾಜಿಸ್ಟಿಕ್ಸ್‌ ಇಂಡೆಕ್ಸ್‌ನಲ್ಲಿ 6 ಸ್ಥಾನ ಮೇಲಕ್ಕೇರಿದ ಭಾರತ, ಕಾರಣವೇನು?

ಸಿರುಗುಪ್ಪ ವಿಧಾನಸಭಾ ಕ್ಷೇತ್ರದಿಂದ ಕೆಆರ್‌ಪಿಪಿಯಿಂದ ಸ್ಪರ್ಧಿಸಿರುವ ದರಪ್ಪ ನಾಯಕ ಅವರ ನಾಮಪತ್ರ ಕ್ರಮಬದ್ಧವಾಗಿರುವುದರಿಂದ ಪತ್ನಿ ಎಸ್.ಸಿ. ರಾಧಾ ಸಲ್ಲಿಸಿದ್ದ ನಾಮಪತ್ರವನ್ನು ಹಿಂದಕ್ಕೆ ಪಡೆಯಲಾಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಬಸಮ್ಮ ಹುಣಸೇಮರದ ಅವರು ನಾಮಪತ್ರವನ್ನು ಹಿಂದಕ್ಕೆ ಪಡೆದಿದ್ದಾರೆ.

ಪಕ್ಷೇತರ ಅಭ್ಯರ್ಥಿಗಳು ಸೇರಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ 63 ಜನ ನಾಮಪತ್ರ ಸಲ್ಲಿಸಿದ್ದರು. 7 ಅಭ್ಯರ್ಥಿಗಳು ಉಮೇದುವಾರಿಕೆಯನ್ನು ಹಿಂದಕ್ಕೆ ಪಡೆದಿದ್ದು ಇದೀಗ ಒಟ್ಟು 56 ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿ ಉಳಿದಂತಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Bengaluru Power Cut: ಜೂನ್‌ 20ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ಇರಲ್ಲ

Bengaluru Power Cut: ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಸ್ಕಾಂ ಬೆಂಗಳೂರು ಪೂರ್ವ ಭಾಗದ ವ್ಯಾಪ್ತಿಯಲ್ಲಿ ಜೂನ್‌ 20ರಂದು ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

VISTARANEWS.COM


on

Bengaluru Power Cut
Koo

ಬೆಂಗಳೂರು: ‘66/11ಕೆ.ವಿ ಎಚ್.ಬಿ.ಆರ್’ ಸ್ಟೇಷನ್ ಮತ್ತು 66/11ಕೆವಿ ಆಸ್ಟಿನ್ ಟೌನ್ ಸ್ಟೇಷನ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಸ್ಕಾಂ ಬೆಂಗಳೂರು ಪೂರ್ವ ಭಾಗದ (Bengaluru Power Cut) ವ್ಯಾಪ್ತಿಯಲ್ಲಿ ಜೂನ್‌ 20ರಂದು ವಿದ್ಯುತ್‌ ವ್ಯತ್ಯಯ (Power outage) ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಎಚ್.ಬಿ.ಆರ್’ ಸ್ಟೇಷನ್‌ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

‘66/11ಕೆ.ವಿ ಎಚ್.ಬಿ.ಆರ್’ ಸ್ಟೇಷನ್‌ನಲ್ಲಿ ದುರಸ್ತಿ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ 10:30ರಿಂದ 4 ಗಂಟೆಯವರೆಗೆ ಎಚ್.ಬಿ.ಆರ್. 1ನೇ ಬ್ಲಾಕ್, 2ನೇ ಬ್ಲಾಕ್, ಯಾಸಿನ್‌ನಗರ, ಸುಭಾಶ್ ಲೇಔಟ್, ರಾಮ ದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀಚರ್ಸ್‌ ಕಾಲೋನಿ, ಎಚ್.ಬಿ.ಆರ್. 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ. ಹಳ್ಳಿ ಗ್ರಾಮ, ಸಿ.ಎಂ.ಆರ್.ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ, ರಶದ್‌ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಮತ್ತು ಸುತ್ತಲಿನ ಪ್ರದೇಶ.

ಎಚ್.ಬಿ.ಆರ್. ಲೇಔಟ್ 4ನೇ ಬ್ಲಾಕ್, ಯಾಸಿನ್‌ನಗರ, 5ನೇ ಬ್ಲಾಕ್, ಎಚ್.ಬಿ.ಆರ್. ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ. ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಹೆಚ್.ಕೆ.ಬಿ.ಕೆ ಕಾಲೇಜ್, 4ನೇ ಮತ್ತು 5ನೇ ಹೆಚ್.ಬಿ.ಆರ್. ಲೇಔಟ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್. ಲೇಔಟ್, ಸೆಂಟ್ರಲ್ ಎಕ್ಸೈಸ್, ಕೆ.ಕೆ. ಹಳ್ಳಿ, ಹೆಣ್ಣೂರು ಮುಖ್ಯರಸ್ತೆ, ಎಚ್.ಆರ್.ಬಿ.ಆರ್. 3ನೇ ಬ್ಲಾಕ್, ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರು ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಬೆಥೆಲ್‌ ಸ್ಟ್ರೀಟ್, ಎ.ಕೆ.ಕಾಲೋನಿ, ಎಚ್.ಆರ್.ಬಿ.ಆರ್. 1ನೇ ಬ್ಲಾಕ್, 80 ಅಡಿರಸ್ತೆ, ಸಿ.ಎಂ.ಆರ್. ರಸ್ತೆ, ಕಾರ್ಲೆ, ಹೆಗಡೆನಗರ, ನಾಗೇನಹಳ್ಳಿ, ಪೊಲೀಸ್ ಕ್ವಾರ‍್ಸ್, ಕೆಂಪೇಗೌಡ ಲೇಔಟ್, ಶಬರೀನಗರ, ಕೆ.ಎಂ.ಟಿ. ಲೇಔಟ್, ಭಾರತೀಯ ಸಿಟಿ, ನೂರ್ ನಗರ ಭಾರತ ಮಾತ ಲೇಔಟ್, ಭಾರತ ಮಾತ ಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿ., ಬಿ.ಎಮ್.ಆರ್.ಸಿ.ಎಲ್, ಗಾಂಧಿನಗರ, ಕುಶಾಲನಗರ, ಶಾಂಪುರ ಮೇನ್ ರೋಡ್‌ ಭಾಗದಲ್ಲಿ ವಿದ್ಯುತ್‌ ಕಡಿತವಾಗಲಿದೆ.

ಇದನ್ನೂ ಓದಿ | PGCET 2024: ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ; ಶುಲ್ಕ ಪಾವತಿಗೂ ಅವಕಾಶ

ಆಸ್ಟಿನ್ ಟೌನ್ ಸ್ಟೇಷನ್ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವ ಸ್ಥಳಗಳು

66/11ಕೆವಿ ಆಸ್ಟಿನ್ ಟೌನ್ ಸ್ಟೇಷನ್‌ನಲ್ಲಿ ದುರಸ್ತಿ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿದ ಮಧ್ಯಾಹ್ನ 03 ಗಂಟೆಯವರೆಗೆ ರಿಚ್ಮಂಡ್ ರಸ್ತೆ, ಸಿಲ್ವರ್ ಲೇಕ್ ಅಪಾರ್ಟ್‌ಮೆಂಟ್, ಟ್ರಿನಿಟಿ ಸರ್ಕಲ್, ಎಂಜಿ ರಸ್ತೆ, ವಿಜಯ ಬ್ಯಾಂಕ್, ಬ್ರಿಗೇಡ್ ರಸ್ತೆ, ಕ್ಯಾಸಲ್ ಸ್ಟ್ರೀಟ್, ಟಾಟಾ ಲೇನ್, ಉದಯ ಟಿವಿ, ಐಟಿಸಿ, ಫೋರ್ ಸೀಸನ್ ಅಪಾರ್ಟ್‌ಮೆಂಟ್, ಕೆಎಸ್‌ಆರ್‌ಪಿ, ರಿಚ್‌ಮಂಡ್ ರಸ್ತೆ, ರತ್ನ ಅವೆನ್ಯೂ, ಹೇಯ್ಸ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೇಂಟ್ ಮಾರ್ಕ್ಸ್‌ ರಸ್ತೆ, ಲ್ಯಾವೆಲ್ಲೆ ರಸ್ತೆ, ಬ್ರಿಗೇಡ್ ರಸ್ತೆ, ವಿಟ್ಠಲ್ ಮಲ್ಯ ರಸ್ತೆ, ಫುಡ್ ಸ್ಟ್ರೀಟ್, ಕ್ಯಾಸಲ್ ಸ್ಟ್ರೀಟ್, ಶಾಪರ್ ಸ್ಟಾಪ್, ಮ್ಯಾಗ್ರತ್ ರಸ್ತೆ, ಆಲ್ಬರ್ಟ್‌ ಸ್ಟ್ರೀಟ್, ಕಾನ್ವೆಂಟ್ ರಸ್ತೆ, ರಿಚ್ಮಂಡ್ ಸರ್ಕಲ್, ಎಂಬಸ್ಸಿ ಕಚೇರಿ, ಕಮಿಷನರೇಟ್ ರಸ್ತೆ, ಬ್ರಂಟನ್ ರಸ್ತೆ, ಗರುಡಾ ಮಾಲ್, ಅಶೋಕನಗರ, ಪೀರನ್, ಮಾರ್ಕ್ಹಮ್ ರಸ್ತೆ , ಬೋವೀ ಲೇನ್, ಮ್ಯೂಸಿಯಂ ರಸ್ತೆ, ಮದ್ರಾಸ್ ಬ್ಯಾಂಕ್ ರಸ್ತೆ ಮತ್ತು ಸುತ್ತಮುತ್ತಲಿನ ರಸ್ತೆ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ಸಂಬಂಧಿತ ಯಾವುದೇ ದೂರಿಗಾಗಿ ಗ್ರಾಹಕರು ಬೆಸ್ಕಾಂ ಸಹಾಯವಾಣಿ ಸಂಖ್ಯೆ ‘1912’ ಗೆ ಸಂಪರ್ಕಿಸಬಹುದು ಎಂದು ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

Continue Reading

ಕರ್ನಾಟಕ

Kuwait Fire: ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ ವಿಜಯಕುಮಾರ್ ಕುಟುಂಬಕ್ಕೆ 5 ಲಕ್ಷ ಪರಿಹಾರ ಕೊಟ್ಟ ಸಿಎಂ

Kuwait Fire: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸರಸಂಬ ಗ್ರಾಮದ ವಿಜಯಕುಮಾರ್, ಜೂನ್‌ 12ರಂದು ಕುವೈತ್‌ನಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದರು. ಅವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

VISTARANEWS.COM


on

Kuwait Fire
Koo

ಬೆಂಗಳೂರು: ಕುವೈತ್ ಅಗ್ನಿ ದುರಂತದಲ್ಲಿ (Kuwait Fire) ಮೃತಪಟ್ಟ ಕಲಬುರಗಿ ಮೂಲದ ವಿಜಯಕುಮಾರ್ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ದುಬೈನಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸರಸಂಬ ಗ್ರಾಮದ ವಿಜಯಕುಮಾರ್, ಜೂನ್‌ 12ರಂದು ಕುವೈತ್‌ನ ಮಂಗಾಫ್‌ನಲ್ಲಿ ನಡೆದ ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದರು. ಅನಿವಾಸಿ ಭಾರತೀಯ ಸಮಿತಿ ಮನವಿ ಮೇರೆಗೆ ಮೃತ ವ್ಯಕ್ತಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿದ್ದಾರೆ.

ಈ ಬಗ್ಗೆ ಅನಿವಾಸಿ ಭಾರತೀಯ ಸಮಿತಿ ರಾಜ್ಯ ಘಟಕದ ಅಧ್ಯಕ್ಷೆ ಡಾ.ಆರತಿ ಕೃಷ್ಣ ಮಾಹಿತಿ ನೀಡಿದ್ದಾರೆ. ಪ್ರಪಂಚದಾದ್ಯಂತ ಹಲವು ರಾಷ್ಟ್ರಗಳಿಂದ ಅದರಲ್ಲೂ ಭಾರತೀಯರು ಕೆಲಸವನ್ನರಸಿ ಗಲ್ಫ್‌ ರಾಷ್ಟ್ರಗಳಿಗೆ ತಮ್ಮ ಜೀವನ ಗುಣಮಟ್ಟ ಸುಧಾರಣೆಗಾಗಿ ವಲಸೆ ಹೋಗುವುದು ಸರ್ವೆಸಾಮಾನ್ಯವಾಗಿದೆ. ಕುವೈತ್‌ನ ಮಂಗಾಫ್‌ನ ವಸತಿ ಸಮುಚ್ಚಯವೊಂದರಲ್ಲಿ ಜೂನ್12ರಂದು ಆಕಸ್ಮಿಕವಾಗಿ ನಡೆದ ಅಗ್ನಿ ದುರಂತದಲ್ಲಿ ಸುಮಾರು 45 ಭಾರತೀಯ ಪ್ರಜೆಗಳು ಸಾವನ್ನಪ್ಪಿದ್ದು, ಹಲವರು ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೊಂದು ದುರಾದೃಷ್ಟಕರ ಸಂಗತಿಯಾಗಿದ್ದು, ಘಟನೆಯ ಕುರಿತು ನಮ್ಮೆಲ್ಲರಿಗೂ ವಿಷಾಧವಿದೆ.

ಈ ಅಗ್ನಿ ದುರಂತದಲ್ಲಿ ಪ್ರಾಣ ಕಳಕೊಂಡವರ ಪೈಕಿ ಕೇರಳ ರಾಜ್ಯದವರೇ ಹೆಚ್ಚಿನವರಾಗಿದ್ದು, ನಮ್ಮ ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸರಸಂಬ ಗ್ರಾಮದ 40 ವರ್ಷ ವಯಸ್ಸಿನ ವಿಜಯಕುಮಾರ್ ಸಹ ಒಬ್ಬರಾಗಿದ್ದರು. ಇವರು ವಾಹನ ಚಾಲಕರಾಗಿ ಕುವೈತ್‌ನಲ್ಲಿ ಸುಮಾರು 8 ವರ್ಷಗಳಿಂದ ನೆಲೆಸಿತ್ತು. ಮೃತರ ಅವಲಂಬಿತ ಕುಟುಂಬದಲ್ಲಿ 8 ಸದಸ್ಯರಿದ್ದಾರೆ. ಅವರಿಗೆ ಮೃತ ದೇಹವನ್ನು ಕುವೈತ್‌ನಿಂದ ಭಾರತಕ್ಕೆ ತರುವ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಅನಿವಾಸಿ ಭಾರತೀಯ ಸಮಿತಿಯು, ಭಾರತ ಸರ್ಕಾರದೊಂದಿಗೆ ಹಾಗೂ ಕುವೈತ್‌ನ ರಾಯಭಾರಿ ಕಚೇರಿಯೊಂದಿಗೆ ನಿಕಟ ಸಂಪರ್ಕದಲ್ಲಿತ್ತು. ತದನಂತರ ಮೃತದೇಹವನ್ನು ಕೊಚ್ಚಿಯಿಂದ ಹೈದರಾಬಾದ್ ಮೂಲಕ ಮೃತರ ಸ್ವಗ್ರಾಮಕ್ಕೆ ತಲುಪಿಸುವಲ್ಲಿ ಸರ್ಕಾರದ ಅನೇಕ ಅಧಿಕಾರಿ ಸಿಬ್ಬಂದಿ ಸಹಕರಿಸಿದ್ದಾರೆ. ನಂತರ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಈಗಾಗಲೇ ಕೇರಳ ರಾಜ್ಯ ಸರ್ಕಾರವು ಅಗ್ನಿ ದುರಂತದಲ್ಲಿ ಸತ್ತವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಆರ್ಥಿಕ ಪರಿಹಾರ ಘೋಷಿಸಿದೆ. ಮುಂದುವರಿದು ಅನಿವಾಸಿ ಭಾರತೀಯ ಸಮಿತಿ, ಕರ್ನಾಟಕ ವತಿಯಿಂದ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ರಾಜ್ಯ ಸರ್ಕಾರವು ಮೃತ ವಿಜಯಕುಮಾರ್ ಕುಟುಂಬಕ್ಕೆ ಗರಿಷ್ಠ ಮಟ್ಟದ ಆರ್ಥಿಕ ನೆರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪಾವತಿಸುವಂತೆ ಕೋರಲಾಗಿತ್ತು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಅವಲಂಬಿತ ಕುಟುಂಬದವರಿಗೆ ಐದು ಲಕ್ಷಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೀಡಲು ಅನುಮೋದಿಸಿದ್ದಾರೆ ಎಂದು ಡಾ.ಆರತಿ ಕೃಷ್ಣ ತಿಳಿಸಿದ್ದಾರೆ.

ಇದನ್ನೂ ಓದಿ | Electric shock : ಮೀನು ಹಿಡಿಯಲು ಹೋದಾಗ ವಿದ್ಯುತ್‌ ಪ್ರವಹಿಸಿ ಬಾಲಕರಿಬ್ಬರು ಮೃತ್ಯು; ಕುಟುಂಬಸ್ಥರ ಆಕ್ರಂದನ

Continue Reading

ಮಳೆ

Karnataka Weather : ಗುಡುಗು, ಸಿಡಿಲಿನ ಮಳೆಗೆ ಮನೆಯ ಗೋಡೆ ಕುಸಿತ; ನಾಳೆಗೂ ಇದೆ ಅಲರ್ಟ್‌

Karnataka Weather Forecast : ಗುಡುಗು, ಸಿಡಿಲು ಸಹಿತ ಸುರಿದ ಮಳೆಗೆ (Rain News) ಮನೆಯ ಗೋಡೆ ಕುಸಿದಿದ್ದು, ಕುಟುಂಬಸ್ಥರು ಪವಾಡ ಸದೃಶ್ಯದಂತೆ ಪಾರಾಗಿದ್ದಾರೆ. ರಾಜ್ಯದ ಹಲವೆಡೆ ಮಳೆಯಾಗಿರುವ ವರದಿ ಆಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು/ದೊಡ್ಡಬಳ್ಳಾಪುರ: ಸಿಡಿಲು ಬಡಿದು ಮನೆಯ ಗೋಡೆ ಕುಸಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಮುಕ್ಕಡಿಘಟ್ಟ ಗ್ರಾಮದಲ್ಲಿ (Karnataka Weather Forecast) ನಡೆದಿದೆ. ಸೋಮವಾರ ರಾತ್ರಿ ಗುಡುಗು, ಸಿಡಿಲು ಸಹಿತ ಜಡಿ (Rain News) ಮಳೆಯಾಗಿದೆ.

ಈ ವೇಳೆ ಸಿಡಿಲು ಬಡಿದ ಪರಿಣಾಮ ಗೋಡೆ ಕುಸಿತವಾಗಿದೆ. ಗಂಗರಾಜ್ ಎಂಬುವವರಿಗೆ ಸೇರಿದ ಮನೆ ಹಾನಿಯಾಗಿದೆ. ಮನೆಯ ಕುಟುಂಬಸ್ಥರು ಬೇರೆ ಕೋಣೆಯಲ್ಲಿದ್ದ ಕಾರಣ ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನೂ ಗೋಡೆ ಕುಸಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಜಖಂಗೊಂಡಿವೆ. ದೊಡ್ಡಬಳ್ಳಾಪುರ ಗ್ರಾಮಾಂತರ ‌ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Electric shock : ಮೀನು ಹಿಡಿಯಲು ಹೋದಾಗ ವಿದ್ಯುತ್‌ ಪ್ರವಹಿಸಿ ಬಾಲಕರಿಬ್ಬರು ಮೃತ್ಯು; ಕುಟುಂಬಸ್ಥರ ಆಕ್ರಂದನ

ಚಿಕ್ಕಮಗಳೂರಲ್ಲಿ ಅಬ್ಬರ ಮಳೆ

ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ ಭಾರಿ ಮಳೆಯಾಗಿದ್ದು, 8 ಸೆಂ.ಮೀ ದಾಖಲಾಗಿದೆ. ಧರ್ಮಸ್ಥಳದಲ್ಲಿ 6 ಸೆಂ.ಮೀ, ಕಾರ್ಕಳ , ಕಕ್ಕೇರಿ, ಯಗಟಿಯಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಮಂಗಳೂರು ವಿಮಾನ ನಿಲ್ದಾಣ, ಹೊಸದುರ್ಗ, ಹಾರಂಗಿ, ರಾಯಲ್ಪಾಡು, ಚನ್ನಗಿರಿ, ಕೋಲಾರ, ಎಂಎಂ ಹಿಲ್ಸ್‌ನಲ್ಲಿ 4 ಸೆಂ.ಮೀ ಮಳೆಯಾಗಿದೆ.

ಇನ್ನೂ ಮಣಿ, ಶಿರಾಲಿ, ಬೆಳ್ತಂಗಡಿ, ಕೊಣನೂರಿನಲ್ಲಿ ತಲಾ 3 ಸೆಂ.ಮೀ ಹಾಗೂ ಹೊನ್ನಾವರ, ಪುತ್ತೂರು, ಮಂಗಳೂರು, ತುಮಕೂರು, ಭಾಗಮಂಡಲ, ವಿರಾಜಪೇಟೆ, ಕುಶಾಲನಗರದಲ್ಲಿ ತಲಾ 2 ಸೆಂ.ಮೀನಷ್ಟು ಮಳೆಯಾಗಿದೆ. ಮಂಕಿ, ಪಣಂಬೂರು , ಮೂಲ್ಕಿ, ಉಪ್ಪಿನಂಗಡಿ, ಕುಮಟಾ, ಮಧುಗಿರಿ, ಪರಶುರಾಂಪುರ, ತೊಂಡೇಭಾವಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಕರಾವಳಿ ಭಾಗಕ್ಕೆ ಮಳೆ ಅಲರ್ಟ್‌

ಜೂನ್‌ 19ರಂದು ಕರಾವಳಿ ಭಾಗಕ್ಕೆ ಮಳೆ ಎಚ್ಚರಿಕೆ ನೀಡಲಾಗಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಒಳನಾಡಿನಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಲ್ಲಿ ಕೆಲವೊಮ್ಮೆ ಹಗುರದಿಂದ ಕೂಡಿದ ಮಳೆಯಾಗಲಿದೆ. ಗರಿಷ್ಠ 30 ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ವಿಜಯಪುರ

Electric shock : ಮೀನು ಹಿಡಿಯಲು ಹೋದಾಗ ವಿದ್ಯುತ್‌ ಪ್ರವಹಿಸಿ ಬಾಲಕರಿಬ್ಬರು ಮೃತ್ಯು; ಕುಟುಂಬಸ್ಥರ ಆಕ್ರಂದನ

Electric shock : ಹಳ್ಳದಲ್ಲಿ ಮೀನು ಹಿಡಿಯಲು ಹೋದ ಬಾಲಕರಿಬ್ಬರು ವಿದ್ಯುತ್‌ ಪ್ರವಹಿಸಿ ದುರ್ಮರಣ ಹೊಂದಿದ್ದು, ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

Electric Shock
Koo

ವಿಜಯಪುರ: ಮೀನು ಹಿಡಿಯಲು ಹೋದ ಬಾಲಕರಿಬ್ಬರು ಕರೆಂಟ್‌ ಶಾಕ್‌ನಿಂದ (Electric shock) ಮೃತಪಟ್ಟಿದ್ದಾರೆ. ರೋಹಿತ್ ಅನೀಲ್ ಚವ್ಹಾಣ್ (8), ವಿಜಯ ಪಿಂಟು ಚವ್ಹಾಣ್ (16) ಮೃತ ದುರ್ದೈವಿಗಳು.

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಈ ಇಬ್ಬರು ಬಾಲಕರು ದುರ್ಮರಣ ಹೊಂದಿದ್ದಾರೆ. ವಿಜಯಪುರ ಜಿಲ್ಲೆಯ ದ್ಯಾಬೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ವಿದ್ಯುತ್ ತಂತಿ ಕಟ್ ಆಗಿ ನೀರಿನಲ್ಲಿ ಬಿದ್ದಿತ್ತು. ಇದರ ಅರಿವು ಇರದ ಬಾಲಕರಿಬ್ಬರು ಮೀನು ಹಿಡಿಯಲು ಹೋಗಿದ್ದಾರೆ.

ಈ ವೇಳೆ ಒಮ್ಮೆಲೆ ಇಬ್ಬರು ಮಕ್ಕಳಿಗೆ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರ ಮೃತದೇಹಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಾಲಕರ ಮೃತದೇಹವನ್ನು ತಬ್ಬಿಕೊಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಹೆಸ್ಕಾಂ ಅಧಿಕಾರಿಗಳ ವಿರುದ್ಧ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Kolar news : ಬ್ಲಾಸ್ಟಿಂಗ್‌ ವೇಳೆ ಉರುಳಿ ಬಿದ್ದ ಬಂಡೆಕಲ್ಲು, ಟ್ರ್ಯಾಕ್ಟರ್‌-ಹಿಟಾಚಿ ಅಪ್ಪಚ್ಚಿ; ಮೂವರು ಕಾರ್ಮಿಕರು ನಾಪತ್ತೆ

ಯಾದಗಿರಿಯಲ್ಲಿ ತೆರೆದ ಗುಂಡಿಗೆ ಬಾಲಕ ಬಲಿ

ಯಾದಗಿರಿ: ತೆರೆದ ಗುಂಡಿಯಲ್ಲಿ ಬಿದ್ದು ಬಾಲಕನೊರ್ವ (Drowned in Water) ಮೃತಪಟ್ಟಿದ್ದಾನೆ. ಯಾದಗಿರಿಯ ಗುರುಮಠಕಲ್ ತಾಲೂಕಿನ ಚಂಡರಕಿ ಗ್ರಾಮದಲ್ಲಿ ನಿನ್ನೆ ಸೋಮವಾರ ಸಂಜೆ ಘಟನೆ ನಡೆದಿದೆ. ಮನೋಜಕುಮಾರ (8) ಮೃತ ದುರ್ದೈವಿ.

ಮನೋಜಕುಮಾರ ತೋಟದ ಮನೆಯಲ್ಲಿ ಆಟವಾಡುತ್ತಿದ್ದ. ಆಟವಾಡುವಾಗ ಕಾಲು ಜಾರಿದ್ದು ತೆರೆದ ಗುಂಡಿಯಲ್ಲಿ ಬಿದ್ದಿದ್ದಾನೆ. ಬಿದ್ದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಯಲ್ಲಪ್ಪ ಅವರಿಗೆ ಸೇರಿದ ಜಮೀನಿನಲ್ಲಿ ಈ ದುರ್ಘಟನೆ ನಡೆದಿದೆ. ಗುರುಮಠಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಬಳ್ಳಾರಿಯಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು

ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಸಿರಗೇರಿ ಗ್ರಾಮದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕನೊಬ್ಬ ಮೃತಪಟ್ಟಿದ್ದಾನೆ. ಹತ್ತು ವರ್ಷದ ವಸಂತ್‌ ಮೃತದುರ್ದೈವಿ.

ವಸಂತ್‌ ನೀರು ಕುಡಿಯಲು ಕೃಷಿ ಹೊಂಡಕ್ಕೆ‌ ತೆರಳಿದ್ದ ಈ ವೇಳೆ ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾನೆ. ಹೊಂಡದ ನೀರಿನ ಆಳದಲ್ಲಿ ಸಿಲುಕಿದ್ದ, ಇತ್ತ ಕೂಡಲೇ ಬಾಲಕನ ರಕ್ಷಣೆಗೆ ಗ್ರಾಮಸ್ಥರು ಮುಂದಾಗಿದ್ದರು. ಆದರೆ ಉಸಿರುಗಟ್ಟಿ ಹೊಂಡದ ನೀರಲ್ಲಿ ವಸಂತ ಪ್ರಾಣ ಬಿಟ್ಟಿದ್ದಾನೆ. ಬಳ್ಳಾರಿಯ ಸಿರಗೇರಿ‌ ಪೊಲೀಸ್ ಠಾಣೆಯಲ್ಲಿ‌ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Kannur Bomb Blast
ದೇಶ16 mins ago

Kannur Bomb Blast: ಕೇರಳದಲ್ಲಿ ಬಾಂಬ್‌ ಸ್ಫೋಟಕ್ಕೆ ವೃದ್ಧ ಬಲಿ; ಕಣ್ಣೂರು ಆಗುತ್ತಿದೆಯೇ ಬಾಂಬ್‌ ಕಾರ್ಖಾನೆ?

Bengaluru Power Cut
ಬೆಂಗಳೂರು22 mins ago

Bengaluru Power Cut: ಜೂನ್‌ 20ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ಇರಲ್ಲ

Kids Hair Fashion
ಫ್ಯಾಷನ್34 mins ago

Kids Hair Fashion: ಹೆಣ್ಣುಮಕ್ಕಳ ಸಿಂಗಾರಕ್ಕೆ ಬಂತು ಕ್ಯೂಟ್‌ ಹೇರ್ ಆಕ್ಸೆಸರೀಸ್‌

Kisan Samman Nidhi
ದೇಶ1 hour ago

Kisan Samman Nidhi: 9 ಕೋಟಿ ರೈತರ ಖಾತೆಗಳಿಗೆ 20 ಸಾವಿರ ಕೋಟಿ ರೂ. ಜಮೆ ಮಾಡಿದ ಮೋದಿ; ಹೀಗೆ ಚೆಕ್‌ ಮಾಡಿ

Alka Yagnik
Latest1 hour ago

Alka Yagnik: ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ ಬಾಲಿವುಡ್‌ ಖ್ಯಾತ ಹಿನ್ನೆಲೆ ಗಾಯಕಿ

Eid Celebration
ದೇಶ1 hour ago

Eid Celebration: ಯೋಗಿ ವಾರ್ನಿಂಗ್‌ ಎಫೆಕ್ಟ್‌; ಉ.ಪ್ರದೇಶದ ಯಾವ ರಸ್ತೆಯಲ್ಲೂ ಬಕ್ರೀದ್‌ ನಮಾಜ್‌ ನಡೆಯಲಿಲ್ಲ!

Kuwait Fire
ಕರ್ನಾಟಕ1 hour ago

Kuwait Fire: ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ ವಿಜಯಕುಮಾರ್ ಕುಟುಂಬಕ್ಕೆ 5 ಲಕ್ಷ ಪರಿಹಾರ ಕೊಟ್ಟ ಸಿಎಂ

Karnataka Weather Forecast
ಮಳೆ2 hours ago

Karnataka Weather : ಗುಡುಗು, ಸಿಡಿಲಿನ ಮಳೆಗೆ ಮನೆಯ ಗೋಡೆ ಕುಸಿತ; ನಾಳೆಗೂ ಇದೆ ಅಲರ್ಟ್‌

Narendra Modi
ದೇಶ2 hours ago

Narendra Modi: 3ನೇ ಸಲ ಗೆಲ್ಲಿಸಿದ ವಾರಾಣಸಿ ಜನತೆಗೆ ಧನ್ಯವಾದ ಎಂದ ಮೋದಿ; ಗೆದ್ದ ಬಳಿಕ ಮೊದಲ ಭೇಟಿ!

Electric Shock
ವಿಜಯಪುರ2 hours ago

Electric shock : ಮೀನು ಹಿಡಿಯಲು ಹೋದಾಗ ವಿದ್ಯುತ್‌ ಪ್ರವಹಿಸಿ ಬಾಲಕರಿಬ್ಬರು ಮೃತ್ಯು; ಕುಟುಂಬಸ್ಥರ ಆಕ್ರಂದನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌